<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Halasri swamy arrest &#8211; Peepal Media</title>
	<atom:link href="https://peepalmedia.com/tag/halasri-swamy-arrest/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 19 Sep 2023 11:36:42 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Halasri swamy arrest &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಬೆಂಗಳೂರು ತಲುಪಿದ ಹಾಲಶ್ರೀ : ದಿಗಿಲು ಬಿದ್ದಿರುವ ಕಾಣದ ಕೈಗಳು</title>
		<link>https://peepalmedia.com/halashree-reached-bengaluru-unseen-hands-in-horror/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 19 Sep 2023 11:35:52 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ccb]]></category>
		<category><![CDATA[chakravarthisulibele]]></category>
		<category><![CDATA[Halasri swamy arrest]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=28081</guid>

					<description><![CDATA[ಬೆಂಗಳೂರು : ಬಿಜೆಪಿ ವಿಧಾನಸಭಾ ಟಿಕೆಟ್ ನ ಕೋಟಿ ಕೋಟಿ ವಂಚನೆ ಪ್ರಕರಣ ದಾಖಲಾಗಿ 11 ದಿನಗಳ ನಂತರ ಕಳ್ಳಸ್ವಾಮಿ ಎಂದೇ ಕುಖ್ಯಾತಿ ಪಡೆದ ಹಾಲಶ್ರೀ ಬಂಧನವಾಗಿದೆ. ಸಿಸಿಬಿ ಪೊಲೀಸರಿಂದ ಒಡಿಶಾದಲ್ಲಿ ತಲೆಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮಿಯನ್ನು ಸಿಸಿಬಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತಂದಿರುವ ಸಿಸಿಬಿ ಪೊಲೀಸರು ಗುಟ್ಟಾಗಿ ಹಾಲಶ್ರೀಯನ್ನು ಕರೆದೊಯ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿಮಾನ ನಿಲ್ದಾಣದಿಂದ ನೇರವಾಗಿ ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಕರಣದ ಅಡಿಯಲ್ಲಿ ಹೆಚ್ಚಿನ [&#8230;]]]></description>
										<content:encoded><![CDATA[
<p><strong>ಬೆಂಗಳೂರು :</strong> ಬಿಜೆಪಿ ವಿಧಾನಸಭಾ ಟಿಕೆಟ್ ನ ಕೋಟಿ ಕೋಟಿ ವಂಚನೆ ಪ್ರಕರಣ ದಾಖಲಾಗಿ 11 ದಿನಗಳ ನಂತರ ಕಳ್ಳಸ್ವಾಮಿ ಎಂದೇ ಕುಖ್ಯಾತಿ ಪಡೆದ ಹಾಲಶ್ರೀ ಬಂಧನವಾಗಿದೆ. ಸಿಸಿಬಿ ಪೊಲೀಸರಿಂದ ಒಡಿಶಾದಲ್ಲಿ ತಲೆಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮಿಯನ್ನು ಸಿಸಿಬಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ.</p>



<p>ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತಂದಿರುವ ಸಿಸಿಬಿ ಪೊಲೀಸರು ಗುಟ್ಟಾಗಿ ಹಾಲಶ್ರೀಯನ್ನು ಕರೆದೊಯ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿಮಾನ ನಿಲ್ದಾಣದಿಂದ ನೇರವಾಗಿ ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.</p>



<p>ಪ್ರಕರಣದ ಅಡಿಯಲ್ಲಿ ಹೆಚ್ಚಿನ ತನಿಖೆ ಕಾರಣಕ್ಕೆ ಸಿಸಿಬಿ ಅಧಿಕಾರಿಗಳಿಗೆ ಕೋರ್ಟ್ ನ ಅನುಮತಿ ಬೇಕಿದ್ದು, ಕಾನೂನು ಪ್ರಕಾರವೇ ಎಲ್ಲಾ ಪ್ರಕ್ರಿಯೆ ಮುಂದುವರಿಸಲಿದ್ದಾರೆ. ಹಾಗಾಗಿ ವಿಮಾನ ನಿಲ್ದಾಣದ ನಿರ್ಗಮನ ಗೇಟ್ ನಿಂದಲೇ ರಹಸ್ಯ ಸ್ಥಳಕ್ಕೆ ಹಾಲಶ್ರೀ ಸ್ವಾಮಿಯನ್ನು ಶಿಫ್ಟ್ ಮಾಡುವ ಬಗ್ಗೆ ಮಾಹಿತಿ ಲಭ್ಯವಾಗಿದೆ.</p>



<p>ಒಡಿಶಾದಲ್ಲಿ ಪೊಲೀಸರಿಗೇ ವಂಚಿಸಿ ಪರಾರಿಯಾಗಲು ಹೊರಟಿದ್ದ ಹಾಲಶ್ರೀ ಸ್ವಾಮಿಯನ್ನು ಗುಪ್ತವಾಗಿ ರಹಸ್ಯ ಸ್ಥಳಕ್ಕೆ ಕರೆದೊಯ್ಯಬೇಕು. ಸ್ವಲ್ಪ ಹೆಚ್ಚು ಕಡಿಮೆ ಆದರೂ ಆತ ತಪ್ಪಿಸಿಕೊಳ್ಳಲು ಸಾಧ್ಯತೆ ಇದೆ ಅಥವಾ ಕಾನೂನಿನ ಅಡಿಯಲ್ಲೇ ಆತ ನುಣುಚಿಕೊಳ್ಳಬಹುದು. ಹಾಗಾಗಿ ತನಿಖೆ ಚುರುಕುಗೊಳ್ಳಲು ಈ ಗೌಪ್ಯತೆ ಅಗತ್ಯ ಎಂದು ಸಿಸಿಬಿ ಮೂಲಗಳಿಂದ ತಿಳಿದು ಬಂದಿದೆ.</p>



<p>ಹಾಲಶ್ರೀ ಬಂಧನದಿಂದ ಈಗ ಬಿಜೆಪಿ ಪಕ್ಷದ ಒಳಗೆ ಟಿಕೆಟ್ ಲಾಭಿಯಲ್ಲಿ ಭಾಗಿಯಾಗಿದ್ದವರಿಗೆ, ಭಾಷಣದ ಮೂಲಕ ಎಲ್ಲರನ್ನೂ ಯಾಮಾರಿಸಿ ಸಾಚಾತನ ಪ್ರದರ್ಶನ ಮಾಡಿದವರಿಗೆ ಈಗ ದಿಗಿಲು ಹುಟ್ಟಿದಂತಾಗಿದೆ. ಸಧ್ಯಕ್ಕೆ ಹಾಲಶ್ರೀ ಜೊತೆಗೆ ಭಾಗಿ ಆಗಿರಬಹುದಾದ ಪ್ರಮುಖ ವ್ಯಕ್ತಿಗಳ ಚಲನವಲನಗಳ ಬಗ್ಗೆಯೂ ಸಿಸಿಬಿ ಪೊಲೀಸರು ಕಣ್ಣಿಟ್ಟಿದ್ದಾರೆ.</p>
]]></content:encoded>
					
		
		
			</item>
		<item>
		<title>ಹಾಲಶ್ರೀ ಬಂಧನ ; ಸಿಸಿಬಿಗೆ ಚಳ್ಳೆಹಣ್ಣು ತಿನ್ನಿಸಲು ಸ್ವಾಮಿ ಹೂಡಿದ ಕಳ್ಳಾಟದ ಸಂಪೂರ್ಣ ಮಾಹಿತಿ ನೋಡಿ</title>
		<link>https://peepalmedia.com/see-full-details-of-swamis-smuggling/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 19 Sep 2023 08:24:27 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bjp dirty politics]]></category>
		<category><![CDATA[chaitra kundapura]]></category>
		<category><![CDATA[Halasri swamy arrest]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=28065</guid>

					<description><![CDATA[&#8220;ಸ್ವಾಮೀಜಿಗಳು ಅರೆಸ್ಟ್ ಆಗಲಿ ಇನ್ನೂ ಹಲವಷ್ಟು ಜನರ ಬಂಡವಾಳ ಹೊರಬರಲಿದೆ&#8221; ಎಂದು ಕೋಟಿ ಕೋಟಿ ವಂಚನೆಯ ಎ1 ಆರೋಪಿ ಚೈತ್ರ ಕುಂದಾಪುರ ಹೇಳಿ ಮೂರೇ ದಿನಗಳಲ್ಲಿ ಕಳ್ಳಸ್ವಾಮಿ ಎಂದೇ ಕುಖ್ಯಾತಿ ಪಡೆದಿರುವ ಅಭಿನವ ಹಾಲಶ್ರೀ ಬಂಧನವಾಗಿದೆ. ಒಡಿಶಾದ ಕಟಕ್ ನಲ್ಲಿ ಸಿನಿಮೀಯ ಶೈಲಿಯಲ್ಲಿ ಸಿಸಿಬಿ ಪೊಲೀಸರು ಹಾಲಶ್ರೀ ಸ್ವಾಮಿಯನ್ನು ಬಂಧಿಸಿದ್ದಾರೆ. ಪ್ರಕರಣದ ದಾಖಲಾದ ದಿನದಿಂದಲೇ ನಾಪತ್ತೆಯಾಗಿದ್ದ ಕಳ್ಳಸ್ವಾಮಿ ಹೈದರಾಬಾದ್ ಗೆ ಹೋದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಅಲ್ಲಿಂದ ತನಿಖೆ ಹಾಲಶ್ರೀ ಬೇಟೆಗೆ ಮುಂದಾಗಿದ್ದ ಸಿಸಿಬಿ ಪೊಲೀಸರು ಹಾಲಶ್ರೀ [&#8230;]]]></description>
										<content:encoded><![CDATA[
<p>&#8220;ಸ್ವಾಮೀಜಿಗಳು ಅರೆಸ್ಟ್ ಆಗಲಿ ಇನ್ನೂ ಹಲವಷ್ಟು ಜನರ ಬಂಡವಾಳ ಹೊರಬರಲಿದೆ&#8221; ಎಂದು ಕೋಟಿ ಕೋಟಿ ವಂಚನೆಯ ಎ1 ಆರೋಪಿ ಚೈತ್ರ ಕುಂದಾಪುರ ಹೇಳಿ ಮೂರೇ ದಿನಗಳಲ್ಲಿ ಕಳ್ಳಸ್ವಾಮಿ ಎಂದೇ ಕುಖ್ಯಾತಿ ಪಡೆದಿರುವ ಅಭಿನವ ಹಾಲಶ್ರೀ ಬಂಧನವಾಗಿದೆ. ಒಡಿಶಾದ ಕಟಕ್ ನಲ್ಲಿ ಸಿನಿಮೀಯ ಶೈಲಿಯಲ್ಲಿ ಸಿಸಿಬಿ ಪೊಲೀಸರು ಹಾಲಶ್ರೀ ಸ್ವಾಮಿಯನ್ನು ಬಂಧಿಸಿದ್ದಾರೆ.</p>



<p>ಪ್ರಕರಣದ ದಾಖಲಾದ ದಿನದಿಂದಲೇ ನಾಪತ್ತೆಯಾಗಿದ್ದ ಕಳ್ಳಸ್ವಾಮಿ ಹೈದರಾಬಾದ್ ಗೆ ಹೋದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಅಲ್ಲಿಂದ ತನಿಖೆ ಹಾಲಶ್ರೀ ಬೇಟೆಗೆ ಮುಂದಾಗಿದ್ದ ಸಿಸಿಬಿ ಪೊಲೀಸರು ಹಾಲಶ್ರೀ ಕಾರು ಚಾಲಕನನ್ನು ತಂದು ವಿಚಾರಣೆಗೆ ಒಳಪಡಿಸಿದ್ದರು. ಆತನ ಬಳಿ ಹೆಚ್ಚು ಮಾಹಿತಿ ಸಿಗಲಿಲ್ಲವಾದರೂ ಅವನ ಮೇಲೂ ನಿಗಾ ಇಡಲಾಗಿತ್ತು‌. ಹೀಗಾಗಿ ಆತನಿಗೆ ಬರುವ ಫೋನ್‌ಗೆ ಕರೆಗಳ ಆಧಾರಿಸಿ ಸ್ವಾಮಿಯನ್ನು ಟ್ರಾಕ್ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.</p>



<p>ಸಧ್ಯ ಸಿಸಿಬಿ ಬಂಧನದಲ್ಲಿ ಇರುವ ಹಾಲಶ್ರೀ ಬಂಧನದ ಪ್ರಕ್ರಿಯೆ ಕೂಡಾ ಅಷ್ಟೆ ರೋಚಕವಾಗಿದೆ. ಬಹುಶಃ ಚೈತ್ರ ಕುಂದಾಪುರ ಹೇಳಿಕೆಯಂತೆ ಸ್ವಾಮಿ ಬಂಧನದ ನಂತರ ಹಲವರ ಬಂಡವಾಳ ಬಯಲಿಗೆ ಬರಲು ಹಾಲಶ್ರೀ ಬಂಧನವೇ ಒಂದು ದೊಡ್ಡ ಘಟ್ಟವಾಗಿರುವ ಕಾರಣ ಈ ಕಳ್ಳಸ್ವಾಮಿ ತಪ್ಪಿಸಿಕೊಳ್ಳಲು ನಾನಾ ಪ್ರಯತ್ನ ಹೂಡಿದ್ದಾರೆ.</p>



<p>ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಕುಖ್ಯಾತ ಕಳ್ಳಸ್ವಾಮಿ ವೇಷ ಬದಲಿಸುವ ಕಳ್ಳಾಟ ನಡೆಸಿದ್ದಾರೆ. ಮೊದಲಿಗೆ ಕಾವಿ ಹಾಕಿಕೊಂಡು ಸ್ವಾಮಿಯ ವೇಷದಲ್ಲಿದ್ದ ಹಾಲಶ್ರೀ ನಂತರ ಕಾವಿ ತಗೆದು ಟೀ ಶರ್ಟ್ ಧರಿಸಿ ಮಾಮೂಲಿ ಜನರಂತೆ ನಾಟಕವಾಡಿದ್ದಾರೆ.</p>



<p>ಈ ನಡುವೆ ಹೊಸ ಮೊಬೈಲ್ ಖರೀದಿ ಮಾಡಿದ್ದ ಹಾಲಶ್ರೀ, ಪ್ರತಿಯೊಂದು ಕರೆಗೂ ಸಿಮ್ ಚೇಂಜ್ ಮಾಡಿದ್ದಾರೆ. ಆದರೆ ಪ್ರತಿಯೊಂದು ಹೊಸ ಸಿಮ್ ಕರೆಯೂ ಕರ್ನಾಟಕಕ್ಕೇ ಬಂದ ಹಿನ್ನೆಲೆಯಲ್ಲಿ ಪೊಲೀಸರು ಮಾಹಿತಿ ತಿಳಿದು ಕರೆ ಬಂದ ಲೊಕೇಶನ್ ಟ್ರೇಸ್ ಮಾಡಿದ್ದಾರೆ. ಹಾಲಶ್ರೀ ಕರೆ ಮಾಡಿದ ಲೊಕೇಶನ್ ಟ್ರೇಸ್ ಮೂಲಕ ಕಳ್ಳಸ್ವಾಮಿಗೆ ಸಿಸಿಬಿ ಖೆಡ್ಡಾ ತೋಡಿ ಬಂಧಿಸಿದ್ದಾರೆ.</p>



<p>ಈ ನಡುವೆ, ಪೊಲೀಸರ ಕಣ್ತಪ್ಪಿಸಲು ಹಾಲಶ್ರೀ ನಂಬರ್ ಪ್ಲೇಟ್ ಬದಲಿಸಿದ ಕಾರನ್ನು ಉಪಯೋಗಿಸಿದ್ದರು ಎನ್ನಲಾಗಿದೆ. ಒಟ್ಟಾರೆ ಕೇಸ್ ದಾಖಲಾಗಿ 11 ದಿನಗಳ ನಂತರ ಕಳ್ಳಸ್ವಾಮಿಯ ಬಂಧನವಾಗಿದೆ.</p>



<p>ಬಂಧನದ ನಂತರ ಬಿಜೆಪಿ ಪಕ್ಷದ ಪ್ರಮುಖ ನಾಯಕರು ಮತ್ತು ಬಿಜೆಪಿ ಹಿನ್ನೆಲೆಯಲ್ಲಿ ಗುರುತಿಸಿಕೊಂಡಿರುವ ಹಲವು ಪ್ರಮುಖ ವ್ಯಕ್ತಿಗಳ ಬಂಡವಾಳ ಹೊರಬರಲಿದೆ ಎಂದೇ ಅಂದಾಜಿಸಲಾಗಿದೆ. ಅದರಲ್ಲೂ ಬಿಜೆಪಿ ಪಕ್ಷದ ಬಾಡಿಗೆ ಭಾಷಣಕಾರನೊಬ್ಬನ ಮೇಲೆ ಹಲವು ಗುಮಾನಿ ಇದ್ದು ಆತನೇ ಇವೆಲ್ಲದರ ಮಾಸ್ಟರ್ ಮೈಂಡ್ ಎಂದೂ ಹೇಳಲಾಗುತ್ತಿದೆ.</p>



<p>ಸಧ್ಯಕ್ಕೆ ಬಂಧನವಾದ ಹಾಲಶ್ರೀಯನ್ನು ಇಂದು ಮಧ್ಯರಾತ್ರಿ ವೇಳೆಗೆ ಬೆಂಗಳೂರಿಗೆ ಸಿಸಿಬಿ ಪೊಲೀಸರು ಕರೆತರಲಿದ್ದಾರೆ. ಒಡಿಶಾದಲ್ಲಿ ಬಂಧಿತರಾಗಿರುವ ಅಭಿವನ ಹಾಲಶ್ರೀಯನ್ನು ಈಗ ಅಲ್ಲಿನ ಪೊಲೀಸ್‌ ಠಾಣೆಗೆ ಹಾಜರುಪಡಿಸಿ ಬಳಿಕ ವಿಮಾನದ ಮೂಲಕ ಸಂಜೆ ವೇಳೆಗೆ ಬೆಂಗಳೂರಿಗೆ ಕರೆ ತರುವ ಸಾಧ್ಯತೆ ಇದೆ.</p>
]]></content:encoded>
					
		
		
			</item>
	</channel>
</rss>
