<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Hampi Kannada University &#8211; Peepal Media</title>
	<atom:link href="https://peepalmedia.com/tag/hampi-kannada-university/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 07 Dec 2022 14:02:01 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Hampi Kannada University &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಹೋರಾಟಕ್ಕೆ ಮಣಿದ ಹಂಪಿ ವಿವಿ ಆಡಳಿತಾಂಗ; ಮುಷ್ಕರ ತಾತ್ಕಾಲಿಕ ನಿಲುಗಡೆ</title>
		<link>https://peepalmedia.com/hampi-university-administration-surrendered-to-the-struggle-temporary-stoppage-of-strike/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 07 Dec 2022 14:02:00 +0000</pubDate>
				<category><![CDATA[ರಾಜ್ಯ]]></category>
		<category><![CDATA[ವಿಜಯನಗರ]]></category>
		<category><![CDATA[Hampi Kannada University]]></category>
		<category><![CDATA[hosapete]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=17872</guid>

					<description><![CDATA[ಹೊಸಪೇಟೆ: ಕಳೆದ ಮೂರು ದಿನಗಳಿಂದ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ನಡೆಸುತ್ತಿದ್ದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ವಿವಿ ಆಡಳಿತಾಂಗ ಮಣಿದಿದ್ದು ವಿದ್ಯಾರ್ಥಿಗಳ ಬೇಡಿಕೆ ಆಂಶಿಕವಾಗಿ ಈಡೇರಿದೆ. ಈ ಕುರಿತು ʼಪೀಪಲ್‌ ಮೀಡಿಯಾʼದೊಂದಿಗೆ ಮಾತನಾಡಿದ ಸಂಶೋಧನಾ ವಿದ್ಯಾರ್ಥಿ ಪಂಪಾಪತಿಯವರು, ʼಇಂದು ಹೋರಾಟನಿರತ ವಿದ್ಯಾರ್ಥಿಗಳ ಬಳಿ ಧಾವಿಸಿದ ಪೊಲೀಸ್‌ ವರಿಷ್ಠಾಧಿಕಾರಿ ಹರಿಬಾಬು ವಿದ್ಯಾರ್ಥಿಗಳ ಅಹವಾಲು ಕೇಳಿಸಿಕೊಂಡ ಬಳಿಕ ವಿವಿಯ ಉಪಕುಲಪತಿ ಸ.ಚಿ.ರಮೇಶ್‌ ಮತ್ತು ಕುಲಸಚಿವರೊಂದಿಗೆ ಚರ್ಚೆ ನಡೆಸಿದ ಬಳಿಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕಳೆದ [&#8230;]]]></description>
										<content:encoded><![CDATA[
<p><strong>ಹೊಸಪೇಟೆ: </strong>ಕಳೆದ ಮೂರು ದಿನಗಳಿಂದ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ನಡೆಸುತ್ತಿದ್ದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ವಿವಿ ಆಡಳಿತಾಂಗ ಮಣಿದಿದ್ದು ವಿದ್ಯಾರ್ಥಿಗಳ ಬೇಡಿಕೆ ಆಂಶಿಕವಾಗಿ ಈಡೇರಿದೆ.</p>



<p>ಈ ಕುರಿತು ʼ<strong>ಪೀಪಲ್‌ ಮೀಡಿಯಾ</strong><strong>ʼ</strong>ದೊಂದಿಗೆ ಮಾತನಾಡಿದ ಸಂಶೋಧನಾ ವಿದ್ಯಾರ್ಥಿ ಪಂಪಾಪತಿಯವರು, ʼಇಂದು ಹೋರಾಟನಿರತ ವಿದ್ಯಾರ್ಥಿಗಳ ಬಳಿ ಧಾವಿಸಿದ ಪೊಲೀಸ್‌ ವರಿಷ್ಠಾಧಿಕಾರಿ ಹರಿಬಾಬು ವಿದ್ಯಾರ್ಥಿಗಳ ಅಹವಾಲು ಕೇಳಿಸಿಕೊಂಡ ಬಳಿಕ ವಿವಿಯ ಉಪಕುಲಪತಿ ಸ.ಚಿ.ರಮೇಶ್‌ ಮತ್ತು ಕುಲಸಚಿವರೊಂದಿಗೆ ಚರ್ಚೆ ನಡೆಸಿದ ಬಳಿಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕಳೆದ 47 ತಿಂಗಳಿಂದ ಕೊಡದೇ ಬಾಕಿ ಉಳಿಸಿದ್ದ ಶಿಷ್ಯವೇತನವನ್ನು ನೀಡಲು ಒಪ್ಪಿಗೆ ನೀಡಿದ್ದಾರೆ. ನಂತರದಲ್ಲಿ 2017ನೇ ಸಾಲಿನ ವಿದ್ಯಾರ್ಥಿಗಳಿಗೆ ಬಾಕಿ ಇದ್ದ 26 ತಿಂಗಳ ವೇತನವನ್ನು ಅವರ ಖಾತೆಗೆ ಜಮಾ ಮಾಡಿಲಾಗಿದೆಯಲ್ಲದೆ 2018ರ ಸಾಲಿನ ವಿದ್ಯಾಥಿಗಳ 47 ತಿಂಗಳ ಬಾಕಿಯಲ್ಲಿ 40 ತಿಂಗಳ ವೇತನವನ್ನು ನೀಡಿದ್ದು ಮಿಕ್ಕ 2 ತಿಂಗಳ ಶಿಷ್ಯವೇತನವನ್ನು ಆದಷ್ಟು ಬೇಗ ಜಮಾ ಮಾಡುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೋರಾಟನಿರತ ವಿದ್ಯಾರ್ಥಿಗಳು ತಮ್ಮ ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ನಿಲುಗಡೆ ಮಾಡಿದ್ದಾರೆʼ ಎಂದು &nbsp;ತಿಳಿಸಿದ್ದಾರೆ.</p>



<p><a href="https://peepalmedia.com/from-today-kannada-v-v-ahoratri-sit-in-by-students-appeal-to-the-police-for-protection/" data-type="URL" data-id="https://peepalmedia.com/from-today-kannada-v-v-ahoratri-sit-in-by-students-appeal-to-the-police-for-protection/">ಇ<em>ದನ್ನೂ ಓದಿ: ಇಂದಿನಿಂದ ಹಂಪಿ ಕನ್ನಡ ವಿ.ವಿ. ವಿದ್ಯಾರ್ಥಿಗಳ ಅಹೋರಾತ್ರಿ ಧರಣಿ : ರಕ್ಷಣೆ ಕೋರಿ ಪೊಲೀಸರಿಗೆ ಮನವಿ</em></a></p>



<p>ಹಂಪಿ ಕನ್ನಡ ವಿವಿ ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ, ಭಾನುವಾರದಿಂದ ಅಹೋರಾತ್ರಿ ಧರಣಿ ನಡೆಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ಫೆಲೋಶಿಪ್ ನೀಡುವಂತೆ ವಿವಿ ಆಡಳಿತಾಂಗಕ್ಕೆ ಮನವಿಗಳನ್ನು ಸಲ್ಲಿಸುತ್ತಾ ಬಂದಿದ್ದು, ಅಗತ್ಯವಿದ್ದಾಗ ಪ್ರತಿಭಟನೆ, ಧರಣಿ ಮಾಡುತ್ತಾ ಬಂದಿದ್ದರು ಕೂಡ, ವಿದ್ಯಾರ್ಥಿಗಳ ಅಳಲನ್ನು ಕೇಳಿಯೂ ಇಲ್ಲಿನ ಕುಲಪತಿಗಳು ಕಣ್ಣು ಮುಚ್ಚಿ ಕುಳಿತಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.</p>



<p><em><a href="https://peepalmedia.com/hampi-vv-students-health-deteriorated-during-ahoratri-dharani-hospitalization/" data-type="URL" data-id="https://peepalmedia.com/hampi-vv-students-health-deteriorated-during-ahoratri-dharani-hospitalization/">ಇದನ್ನೂ ಓದಿ: ಹಂಪಿ ವಿವಿ- ಅಹೋರಾತ್ರಿ ಧರಣಿಯ ವೇಳೆ ವಿದ್ಯಾರ್ಥಿಯ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು</a></em></p>



<p>ಈ ಕಾರಣ ಅಲ್ಲಿನ ST/SC ಸಂಶೋಧನ ವಿದ್ಯಾರ್ಥಿಗಳು ಬಾಕಿ ಉಳಿದಿರುವ 47 ತಿಂಗಳ ಶಿಷ್ಯವೇತನವನ್ನು ಕೂಡಲೇ ತಮ್ಮ ಖಾತೆಗೆ ಜಮಾ ಮಾಡಬೇಕು, ಇಲ್ಲವಾದರೆ &nbsp;ಹಣ ನೀಡುವವರೆಗು ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಪಟ್ಟು ಹಿಡಿದು ಕುಳಿತಿದ್ದರು.</p>
]]></content:encoded>
					
		
		
			</item>
		<item>
		<title>ಹಂಪಿ ವಿವಿ- ಅಹೋರಾತ್ರಿ ಧರಣಿಯ ವೇಳೆ ವಿದ್ಯಾರ್ಥಿಯ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು</title>
		<link>https://peepalmedia.com/hampi-vv-students-health-deteriorated-during-ahoratri-dharani-hospitalization/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 06 Dec 2022 08:29:37 +0000</pubDate>
				<category><![CDATA[ರಾಜ್ಯ]]></category>
		<category><![CDATA[ವಿಜಯನಗರ]]></category>
		<category><![CDATA[Ahoratri Dharani]]></category>
		<category><![CDATA[Hampi Kannada University]]></category>
		<category><![CDATA[hosapete]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[vijaya nagara]]></category>
		<guid isPermaLink="false">https://peepalmedia.com/?p=17705</guid>

					<description><![CDATA[ಹೊಸಪೇಟೆ: ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತಿದ್ದು, ಧರಣಿಯ ವೇಳೆ ವಿದ್ಯಾರ್ಥಿಯೊಬ್ಬರಿಗೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಮದ್ಯರಾತ್ರಿ ನಡೆದಿದೆ. ಹಂಪಿ ವಿಶ್ವಾವಿದ್ಯಾಯದ ಸಂಶೋಧನಾ ವಿದ್ಯಾರ್ಥಿಗಳು ಹಲವಾರು ತಿಂಗಳುಗಳಿಂದ ಬಾಕಿ ಇರುವ ಸಹಾಯಧನವನ್ನು ನೀಡುವಂತೆ ಒತ್ತಾಯಿಸಿ ಭಾನುವಾರದಿಂದ ಅಹೋರಾತ್ರಿ ಧರಣಿ ಕೈಗೊಂಡಿದ್ದು, ಹೀಗಾಗಿ ಸೋಮವಾರ ರಾತ್ರಿ ಚಳಿಗೆ ಎರಿಸ್ವಾಮಿ ಎಂಬ ಸಂಶೋಧನ ವಿಧ್ಯಾರ್ಥಿಗೆ ಎದೆನೋವು ಕಾಣಿಸಿಕೊಂಡಿದ್ದು, [&#8230;]]]></description>
										<content:encoded><![CDATA[
<p><strong>ಹೊಸಪೇಟೆ:</strong> ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತಿದ್ದು, ಧರಣಿಯ ವೇಳೆ ವಿದ್ಯಾರ್ಥಿಯೊಬ್ಬರಿಗೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಮದ್ಯರಾತ್ರಿ ನಡೆದಿದೆ.</p>



<p>ಹಂಪಿ ವಿಶ್ವಾವಿದ್ಯಾಯದ ಸಂಶೋಧನಾ ವಿದ್ಯಾರ್ಥಿಗಳು ಹಲವಾರು ತಿಂಗಳುಗಳಿಂದ ಬಾಕಿ ಇರುವ ಸಹಾಯಧನವನ್ನು ನೀಡುವಂತೆ ಒತ್ತಾಯಿಸಿ ಭಾನುವಾರದಿಂದ ಅಹೋರಾತ್ರಿ ಧರಣಿ ಕೈಗೊಂಡಿದ್ದು, ಹೀಗಾಗಿ ಸೋಮವಾರ ರಾತ್ರಿ ಚಳಿಗೆ ಎರಿಸ್ವಾಮಿ ಎಂಬ ಸಂಶೋಧನ ವಿಧ್ಯಾರ್ಥಿಗೆ ಎದೆನೋವು ಕಾಣಿಸಿಕೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಳಲಿಸಲಾಗಿದೆ ಎಂದು ಅಲ್ಲಿನ ವಿದ್ಯಾರ್ಥಿಗಳು ತಿಳಿಸಿದ್ದಾರೆ.</p>



<p>ಮೂರನೇ ದಿನದ ಧರಣಿ ಕುರಿತು <strong>ʼ</strong><strong>ಪೀಪಲ್‌ ಮೀಡಿಯಾ</strong><strong>ʼ</strong>ದೊಂದಿಗೆ ಮಾತನಾಡಿದ ಸಂಶೋಧನಾ ವಿದ್ಯಾರ್ಥಿ&nbsp; ದೇವೇಂದ್ರರವರು, ಎಸ್‌ಸಿ/ಎಸ್‌ಟಿ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ ಹಮ್ಮಿಕೊಂಡು ಇಂದಿಗೆ ಮೂರನೇ ದಿನಕ್ಕೆ ಕಾಲಿಟ್ಟಿದ್ದೇವೆ. ಧರಣಿಗೆ ಕೂತಿದ್ದ ಸಂಶೋಧನ ವಿದ್ಯಾರ್ಥಿ ಎರಿಸ್ವಾಮಿ ಎಂಬಾತನಿಗೆ ಸೋಮವಾರ ರಾತ್ರಿ ಚಳಿ ಇರುವ ಕಾರಣ ಎದೆ ನೋವು ಕಾಣಿಸಿಕೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಚರ್ಚೆ ನಡೆಸಿ, ಮಾಧ್ಯಮ ಮಿತ್ರರನ್ನು ಭೇಟಿ ಮಾಡಿ ಸಹಾಯ ಕೋರಲಾಯಿತು. ಹೀಗಾಗಿ ಮಾಧ್ಯಮ ಮಿತ್ರರು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿಮಾಡಿದಾಗ, ಅವರು ವಿದ್ಯಾರ್ಥಿಗಳ ಸಹಾಯಧನವು ಕಾಮಗಾರಿಗೆ ಬಂದಿದೆ ಎನ್ನುವ ಮಾಹಿತಿ ನೀಡಿದರು ಎಂದು ತಿಳಿಸಿದ್ದಾರೆ. ಇದಕ್ಕೆ ಸಂಬಂಧ ಪಟ್ಟಂತೆ ಹಾಗೂ ಸರ್ಕಾರವು ಆದೇಶ ಪತ್ರದಲ್ಲಿ ತಿಳಿಸಿರುವಂತೆ. 11,89 ಕೋಟಿ ಹಣ ಬಿಡುಗಡೆಯಾಗಿರುವ ಹಣ ಮತ್ತು 3,42 ಕೋಟಿ ಹಾಗೂ 1,17 ಕೋಟಿ ರೂ. ಲ್ಯಾಪ್‌ಟಾಪ್‌, ಶಿಷ್ಯವೇತನ, ಎಲ್ಲವನ್ನು ಸೇರಿ ಒಟ್ಟು 15 ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಆದರೂ ಕೂಡ ಕುಲಪತಿಗಳು ವಿದ್ಯಾರ್ಥಿಗಳ ಮನವಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>



<p>ಮುಂದುವರೆದು ಮಾತನಾಡಿದ ಅವರು 21 ನವೆಂಬರ್‌ 2022 ರಂದು ಮುಖ್ಯಮಂತ್ರಿಗಳ ಆದೇಶದಂತೆ, ಸರ್ಕಾರ ಬಿಡುಗಡೆ ಮಾಡಿರುವ 11,89 ಕೋಟಿ ರೂ. ಹಣವನ್ನು ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ಕೊಡಿ ಎಂದು ತಿಳಿಸಿದ್ದರೂ ಕೂಡ, ಕುಲಪತಿಗಳು ಆ ಹಣವನ್ನು ವಿಶ್ವವಿದ್ಯಾಲಯದ ಕಾಮಗಾರಿಗೆ ಬಲಸಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಯ ಸಂಶೋಧನಾ ವಿದ್ಯಾರ್ಥಿಯೊಬ್ಬರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದಾಗ, ಬಸವರಾಜ ಬೊಮ್ಮಾಯಿಯವರು ʼನಾನು ಯಾವ ಆದೇಶವನ್ನು ಹಿಂಪಡೆದಿಲ್ಲ ಆ ಹಣವನ್ನು ಶಿಷ್ಯವೇತನಕ್ಕೆ ನೀಡಿರುವುದಾಗಿ &nbsp;ತಿಳಿಸಿದ್ದೇನೆʼ ಎಂದು ಹೇಳಿದ್ದಾರೆ. ಆದರೆ ಇಲ್ಲಿನ ಕುಲಪತಿಗಳು ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ಕೊಡುವ ಯಾವುದೇ ಗಟ್ಟಿ ನಿರ್ಧಾರವನ್ನು ಕೈಗೊಳ್ಳತ್ತಿಲ್ಲ ಹಾಗೂ ಹಣ ನೀಡುವ ಭರವಸೆಯನ್ನು ಸಹ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>



<p>ಇಲ್ಲಿನ ಸಂಶೋಧನಾ ವಿದ್ಯಾರ್ಥಿಗಳು ನಾಲ್ಕು ವರ್ಷಗಳಿಂದ, ವಿಶ್ವವಿದ್ಯಾಲಯಕ್ಕೆ ಯಾವುದೇ, ಹಾನಿ, ಗೌರವ ಕಡೆಸುವಂತಹ ಕೆಲಸಗಳನ್ನು ಮಾಡದೆ, ಶಾಂತಿಯುತವಾಗಿ ಮನವಿ, ಪ್ರತಿಭಟನೆ ಮಾಡಿದರೂ ಯಾವುದೇ ಸ್ಪಂದನೆ ದೊರತಿಲ್ಲ. ಹೀಗಾಗಿ ಈ ಬಾರಿ ಇದಕ್ಕೆ ಒಂದು ಪರಿಹಾರ ನೀಡುವವರೆಗೂ ಮೌನವಾಗಿಯೇ ಪ್ರತಿಭಟನೆ ಮುಂದುವರೆಸುತ್ತೇವೆ ಎಂದರು.</p>



<p>ಧರಣಿ ಕೈಗೊಂಡಬಳಿಕ , ವಿಶ್ವವಿದ್ಯಾಲಯದ ಕುಲಪತಿಗಳಾದ ಸ.ಚಿ.ರಮೇಶ್‌ ರವರು ಏನು ಪತ್ರಿಕ್ರಿಯೆ ನೀಡಿದರು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕುಲಪತಿಗಳಿಂದ ಇನ್ನೂ ಯಾವುದೇ ರೀತಿಯ ಸ್ಪಂದನೆ ನೀಡುತ್ತಿಲ್ಲ ಎಂದು ತಿಳಿಸಿದರು. &nbsp;&nbsp;</p>
]]></content:encoded>
					
		
		
			</item>
		<item>
		<title>‘SC/ST ವಿದ್ಯಾರ್ಥಿಗಳಿಗೆ ಫೆಲೋಶಿಪ್‌ ನೀಡದ ಕನ್ನಡ ವಿವಿ ಉಪಕುಲಪತಿ ತಾರತಮ್ಯ ಮಾಡುತ್ತಿದ್ದಾರೆ’: ವಿ ಎಸ್‌ ಉಗ್ರಪ್ಪ ಆಕ್ರೋಶ</title>
		<link>https://peepalmedia.com/vice-chancellor-of-kannada-university-not-giving-sc-st-fellowship-is-discriminating-vs-ugrappa-outraged/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 06 Dec 2022 03:01:21 +0000</pubDate>
				<category><![CDATA[ರಾಜ್ಯ]]></category>
		<category><![CDATA[ವಿಜಯನಗರ]]></category>
		<category><![CDATA[Hampi Kannada University]]></category>
		<category><![CDATA[Hampi Kannada University Vice Chancellor S. Chi. Ramesh]]></category>
		<category><![CDATA[hosapete]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sc/st students]]></category>
		<category><![CDATA[v s ugrappa]]></category>
		<category><![CDATA[vijaya nagara]]></category>
		<guid isPermaLink="false">https://peepalmedia.com/?p=17639</guid>

					<description><![CDATA[ಹೊಸಪೇಟೆ: ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ ನೀಡದೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹಂಪಿ ಕನ್ನಡ ವಿವಿ ಉಪಕುಲಪತಿ ಸ.ಚಿ.ರಮೇಶ್ ವಿರುದ್ಧ ಮಾಜಿ ಲೋಕಸಭಾ ಸದಸ್ಯರಾದ ವಿ.ಎಸ್‌. ಉಗ್ರಪ್ಪನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಧರಣಿಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ, ವಿದ್ಯಾರ್ಥಿಗಳು ಎರಡನೇ ದಿನ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ [&#8230;]]]></description>
										<content:encoded><![CDATA[
<p><strong>ಹೊಸಪೇಟೆ:</strong> ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ ನೀಡದೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹಂಪಿ ಕನ್ನಡ ವಿವಿ ಉಪಕುಲಪತಿ ಸ.ಚಿ.ರಮೇಶ್ ವಿರುದ್ಧ ಮಾಜಿ ಲೋಕಸಭಾ ಸದಸ್ಯರಾದ ವಿ.ಎಸ್‌. ಉಗ್ರಪ್ಪನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<p>ವಿದ್ಯಾರ್ಥಿಗಳ ಧರಣಿಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ, ವಿದ್ಯಾರ್ಥಿಗಳು ಎರಡನೇ ದಿನ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ ವಿವಿ ಆಡಳಿತಾಂಗಕ್ಕೆ ಅನೇಕ ಬಾರಿ ಮನವಿಗಳನ್ನು ಸಲ್ಲಿಸಿ, ವಿದ್ಯಾರ್ಥಿಗಳು ಪ್ರತಿಭಟನೆ, ಧರಣಿ ನಡೆಸಿದರು ಕೂಡ, ಈ ಬಗ್ಗೆ ಸರ್ಕಾರವಾಗಲಿ, ಕುಲಪತಿಗಳಾಗಲಿ ಕ್ರಮ ತೆಗೆದುಕೊಳ್ಳದಿರುವುದು ವಿದ್ಯಾರ್ಥಿಗಳಿಗಲ್ಲದೆ, ಇಡೀ ಕರ್ನಾಟಕಕ್ಕೆ ಆಗುತ್ತಿರುವ ಅಪಮಾನ ಎಂದು ಕಿಡಿಕಾರಿದರು.</p>


<div class="wp-block-image">
<figure class="aligncenter size-large is-resized"><img fetchpriority="high" decoding="async" src="https://peepalmedia.com/wp-content/uploads/2022/12/ugrappa-2-1024x462.jpg" alt="" class="wp-image-17643" width="416" height="188" srcset="https://peepalmedia.com/wp-content/uploads/2022/12/ugrappa-2-1024x462.jpg 1024w, https://peepalmedia.com/wp-content/uploads/2022/12/ugrappa-2-300x135.jpg 300w, https://peepalmedia.com/wp-content/uploads/2022/12/ugrappa-2-768x346.jpg 768w, https://peepalmedia.com/wp-content/uploads/2022/12/ugrappa-2-150x68.jpg 150w, https://peepalmedia.com/wp-content/uploads/2022/12/ugrappa-2-696x314.jpg 696w, https://peepalmedia.com/wp-content/uploads/2022/12/ugrappa-2-1068x481.jpg 1068w, https://peepalmedia.com/wp-content/uploads/2022/12/ugrappa-2.jpg 1280w" sizes="(max-width: 416px) 100vw, 416px" /><figcaption class="wp-element-caption"><strong>ಧರಣಿ ಬೆಂಬಲಿಸಿ ಉಗ್ರಪ್ಪನವರು ಮಾತನಾಡುತ್ತಿರುವ ದೃಶ್ಯ</strong></figcaption></figure></div>


<p>‘ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವಂತದ್ದು ಬಿಕ್ಷೆ ಅಲ್ಲ. ಏಕೆಂದರೆ ಅದು ಯಾರಪ್ಪನ ಸ್ವತ್ತು ಅಲ್ಲ. ಇದು ನಮ್ಮೇಲ್ಲರ ಹಕ್ಕು ಎಂದ ಅವರು, ಸಂವಿಧಾನದ ವಿಧಿ 17ರ ಪ್ರಕಾರ ಯಾವುದೇ ರೀತಿಯಲ್ಲಿ, ಜನರಿಗೆ, ವಿದ್ಯಾರ್ಥಿಗಳಿಗೆ, ತಾರತಮ್ಯ ನಡೆದರೆ, ಕಾನೂನು ಅದನ್ನು ಗಂಭೀರವಾಗಿ ಪರಗಣಿಸುತ್ತದೆ. ಹೀಗಾಗಿ ತಾರತಮ್ಯ ನಡೆದಲ್ಲಿ, ಆ ಕುರಿತು ಪ್ರಕರಣ ದಾಖಲಿಸಬಹುದು’ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.</p>



<p>ಮುಂದುವರೆದು ಮಾತನಾಡಿದ ಅವರು, ‘ಇಲ್ಲಿ ಯಾರಿಗೆ ಪ್ರೋತ್ಸಾಹ ಧನ ಕೊಟ್ಟಿದ್ದಾರೆಯೋ ಅದು ಒಳ್ಳೆಯದೇ, ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ಆದರೆ ಇವರು ಇಂದಿನ ದಿನಮಾನಗಳಲ್ಲಿ 24% ಮತ್ತು 7% ವ್ಯಕ್ತಿಗಳು 17% ಇರುವಂತಹ ಎಸ್‌ಟಿ, ಎಸ್‌ಸಿಯವರಿಗೆ ತಾರತಮ್ಯ ಮಾಡುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>



<p>‘ನಾನು ಒಬ್ಬ ವಕೀಲನಾಗಿ ಹೇಳಲು ಬಯಸುವುದಾದರೆ, ಈ ವಿಶ್ವವಿದ್ಯಾಲಯದ ಅಧಿಕಾರಿಗಳು ಮತ್ತು ಎಸ್‌ಟಿ/ಎಸ್‌ಸಿ ಅನ್ನುವ ಕಾರಣದಿಂದ ತಾರತಮ್ಯ, ಅಥವಾ ಅಸ್ಪೃಶ್ಯತೆಯನ್ನು ಆಚರಣೆ ಮಾಡುತ್ತಿದ್ದರೆ, ನಾನು ಒಬ್ಬ ವಕೀಲನಾಗಿ ಹೇಳಲು ಬಯಸುತ್ತೇನೆ ಎಂದ ಅವರು, ಈ ಭಾಗದ ಪೊಲೀಸ್‌ ಅಧಿಕಾರಿಗಳು ಜೀವಂತವಾಗಿ ಇದ್ದರೆ, ಇಲ್ಲಿ ತಾರತಮ್ಯ ಮತ್ತು ಅಸ್ಪೃಶ್ಯತೆಯನ್ನು ನಡೆಸಿದಂತಹ ಎಲ್ಲಾ ಅಧಿಕಾರಿಗಳ ಮೇಲೆ ಕೂಡಲೇ ಕೇಸನ್ನು ದಾಖಲು ಮಾಡಿಕೊಳ್ಳಬೇಕಿತ್ತು. ಕ್ರಿಮಿನಲ್ ಪ್ರೊಸೀಜರ್ ಕೋಡ್ ಪ್ರಕಾರ, ಸೋಮೋಟೋ ಕೇಸ್‌ ದಾಖಲಿಸಬಹುದಿತ್ತು’ ಎಂದರು.</p>



<p>‘ವಿದ್ಯಾರ್ಥಿಗಳ ಹೋರಾಟ ಸಂವಿಧಾನ ಬದ್ದವಾಗಿದೆ ಈ ಧರಣಿ ಮುಂದುವರಿಯಲಿ ಇಲ್ಲಿನ ಕೆಟ್ಟ ವ್ಯವಸ್ಥೆಗೆ ನೀವೆಲ್ಲ ಬುದ್ದಿ ಕಲಿಸುವವರಾಗಬೇಕು. ಇವರೆಲ್ಲ ಕನ್ನಡ ವಿಶ್ವವಿದ್ಯಾಲಯದ ಗಣತೆಯನ್ನು ಹಾಳು ಮಾಡುತಿದ್ದಾರೆ ಎಂದು ಸ್ಥಳದಲ್ಲಿದ್ದ ಉಪಕುಲಸಚಿವರಾದ ಎ.ವೆಂಕಟೇಶ್ ಅವರನ್ನು ವಿದ್ಯಾರ್ಥಿಗಳು ವಿವರ ಕೇಳಿದರು ಅವರು ಯಾವುದೇ ಮಾಹಿತಿಯನ್ನು ಸರಿಯಾಗಿ ಕೊಡಲಿಲ್ಲ. ಅದಕ್ಕೆ ಅವರು ನೀವು ಮಕ್ಕಳಿಗೆ ನ್ಯಾಯ ಕೊಡಲಾರರು. ಅಧಿಕಾರ ಎನ್ನುವುದು ಎನ್ನುವುದು ಶಾಶ್ವತ ಅಲ್ಲ ಮಾನವೀಯತೆ ಮುಖ್ಯ ಎಂದು’ ಹೇಳಿದರು.<br>‘ಹೀಗಾಗಿ ಇವರು ಯಾವ ಯಾವ ಮೂಲದಿಂದ ಭ್ರಷ್ಟಾಚಾರ ಮಾಡಬಹುದೆಂದು ಯೋಚಿಸಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಸ.ಚಿ.ರಮೇಶ್ ಅವರು, ಆದಷ್ಟು ಬೇಗ ವಿದ್ಯಾರ್ಥಿಗಳಿಗೆ ಬಾಕಿ ಇರುವ 47 ತಿಂಗಳ ಫೆಲೋಶಿಪ್ ದೊರಕಿಸಿಕೊಡಬೇಕು’ ಎಂದು ಆಗ್ರಹಿಸಿದರು.</p>



<p>‘ನಾನು ಇಲ್ಲಿ ರಾಜಕಾರಣ ಮಾಡಲ್ಲ. ಆದರೆ ಇಂದಿನ ಸರ್ಕಾರ ಹಣ ಬಿಡುಗಡೆ ಮಾಡಿದ್ದು ಅಭಿನಂದನಿಯ ಆದರೆ ಇವರು ಹಣವನು ಕೂಡಲೆ ಕೊಡದಿದ್ದರೆ ಇವರುಗಳನ್ನು ಹೇಗೆ ನೀರಿಳಿಸಬೇಕು ನಮಗೆ ಚನ್ನಾಗಿ ಗೊತ್ತಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿಯವರಿಗೆ ಎಚ್ಚರಿಕೆ ನೀಡಿದರು.</p>
]]></content:encoded>
					
		
		
			</item>
		<item>
		<title>ಇಂದಿನಿಂದ ಹಂಪಿ ಕನ್ನಡ ವಿ.ವಿ. ವಿದ್ಯಾರ್ಥಿಗಳ ಅಹೋರಾತ್ರಿ ಧರಣಿ : ರಕ್ಷಣೆ ಕೋರಿ ಪೊಲೀಸರಿಗೆ ಮನವಿ</title>
		<link>https://peepalmedia.com/from-today-kannada-v-v-ahoratri-sit-in-by-students-appeal-to-the-police-for-protection/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 04 Dec 2022 05:37:38 +0000</pubDate>
				<category><![CDATA[ರಾಜ್ಯ]]></category>
		<category><![CDATA[ವಿಜಯನಗರ]]></category>
		<category><![CDATA[Fellowship]]></category>
		<category><![CDATA[Hampi Kannada University]]></category>
		<category><![CDATA[hosapete]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Scheduled caste]]></category>
		<category><![CDATA[sect]]></category>
		<category><![CDATA[vijaya nagara]]></category>
		<guid isPermaLink="false">https://peepalmedia.com/?p=17440</guid>

					<description><![CDATA[ಹೊಸಪೇಟೆ: ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾನುವಾರದಿಂದ ಅಹೋರಾತ್ರಿ ಧರಣಿ ನಡೆಸಲಿದ್ದು, ತಮಗೆ ರಕ್ಷಣೆ ಒದಗಿಸಿಬೇಕೆಂದು ಕಮಲಾಪುರ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳು ಮನವಿ ಪತ್ರದಲ್ಲಿ ತಿಳಿಸಿರುವ ಮಾಹಿತಿ ಪ್ರಕಾರ, ಕಳೆದ ನಾಲ್ಕು ವರ್ಷಗಳಿಂದ ಫೆಲೋಶಿಪ್ ನೀಡುವಂತೆ ವಿವಿ ಆಡಳಿತಾಂಗಕ್ಕೆ ಮನವಿಗಳನ್ನು ಸಲ್ಲಿಸುತ್ತಾ ಬಂದಿದ್ದು, ಅಗತ್ಯವಿದ್ದಾಗ ಪ್ರತಿಭಟನೆ, ಧರಣಿ ಮಾಡುತ್ತಾ ಬಂದಿದ್ದೇವೆ. ಅದಾಗ್ಯೂ ಏಪ್ರಿಲ್‌ತಿಂಗಳಲ್ಲಿ ಮುಖ್ಯಮಂತ್ರಿಗಳು ವಿವಿಯಲ್ಲಿ [&#8230;]]]></description>
										<content:encoded><![CDATA[
<p><strong>ಹೊಸಪೇಟೆ</strong>: ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾನುವಾರದಿಂದ ಅಹೋರಾತ್ರಿ ಧರಣಿ ನಡೆಸಲಿದ್ದು,  ತಮಗೆ ರಕ್ಷಣೆ ಒದಗಿಸಿಬೇಕೆಂದು ಕಮಲಾಪುರ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.</p>



<p> ವಿದ್ಯಾರ್ಥಿಗಳು ಮನವಿ ಪತ್ರದಲ್ಲಿ ತಿಳಿಸಿರುವ ಮಾಹಿತಿ ಪ್ರಕಾರ, ಕಳೆದ ನಾಲ್ಕು ವರ್ಷಗಳಿಂದ ಫೆಲೋಶಿಪ್ ನೀಡುವಂತೆ ವಿವಿ ಆಡಳಿತಾಂಗಕ್ಕೆ ಮನವಿಗಳನ್ನು ಸಲ್ಲಿಸುತ್ತಾ ಬಂದಿದ್ದು, ಅಗತ್ಯವಿದ್ದಾಗ ಪ್ರತಿಭಟನೆ, ಧರಣಿ ಮಾಡುತ್ತಾ ಬಂದಿದ್ದೇವೆ. ಅದಾಗ್ಯೂ ಏಪ್ರಿಲ್‌ತಿಂಗಳಲ್ಲಿ ಮುಖ್ಯಮಂತ್ರಿಗಳು ವಿವಿಯಲ್ಲಿ ವಿವಿಧ ಕಾಮಗಾರಿ, ಕಟ್ಟಡಗಳ ಉದ್ಘಾಟನೆಗೆ ಬಂದಿದ್ದ ಸಮಯದಲ್ಲಿ ನಾಲ್ಕು ವರ್ಷಗಳಿಂದ ಬಾಕಿ ಇರುವ ಫೆಲೋಶಿಪ್ ನೀಡುವಂತೆ ಮನವಿ ಮಾಡಲಾಗಿತ್ತು. ಅಲ್ಲದೆ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಫೆಲೋಶಿಪ್‌ಗೆ ಅಗತ್ಯವಿರುವ ಅನುದಾನವನ್ನು ತಮ್ಮ ವಿವೇಚನಾ ನಿಧಿಯಿಂದ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದರು ಎಂದು ವಿದ್ಯಾರ್ಥಿಗಳು ಮನವಿಯಲ್ಲಿ ತಿಳಿಸಿದ್ದಾರೆ.</p>



<p>ನ.11ರಂದು ಸರ್ಕಾರ 7 1189.61 ಲಕ್ಷ ವಿವಿಯ ಪರಿಶಿಷ್ಟ ಜಾತಿ, ಪಂಗಡಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಬಾಕಿ ಇರುವ ಮಾಸಿಕ ಆರ್ಥಿಕ ನೆರವು ನೀಡಬೇಕೆಂದು ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆಯ ಆದೇಶ ನೀಡಿದೆ.ಆದರೆ ಕುಲಪತಿಗಳು ಹಾಗೂ ಕುಲಸಚಿವರು ಕಳೆದ ನಾಲೈದು ದಿನಗಳಿಂದ ಭೇಟಿ ಮಾಡಿ ಸರ್ಕಾರ ನೀಡಿರುವ ಅನುದಾನ ಕೂಡಲೇ ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಬೇಕೆಂದು ಮನವಿ ಮಾಡುತ್ತಾ ಬಂದಿದ್ದೇವೆ. ಆದರೆ ಮನವಿಗೆ ಸ್ಪಂದಿಸದೆ ಬಂದಿರುವ ಹಣವನ್ನು ನಿಮಗೆ ಕೊಡುವುದಿಲ್ಲ ಎಂದು ಹೇಳುತ್ತಿದ್ದಾರೆಂದು ವಿದ್ಯಾರ್ಥಿಗಳು ದೂರಿದ್ದಾರೆ.</p>



<p>ಮನವಿಗೆ ಸ್ಪಂದಿಸಿದ ಕಾರಣ, ಸಂಶೋಧನಾ ವಿದ್ಯಾರ್ಥಿಗಳ ಖಾತೆಗೆ ಹಣ ಬಿಡುಗಡೆಯಾಗುವವರೆಗೆ ಭಾನುವಾರ ಬೆಳಿಗ್ಗೆ 10ಗಂಟೆಯಿಂದ ಆಹೋರಾತ್ರಿ ಧರಣಿ ನಡೆಸುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ.</p>


<div class="wp-block-image">
<figure class="aligncenter size-large is-resized"><img decoding="async" src="https://peepalmedia.com/wp-content/uploads/2022/12/ಹಂಪಿ-722x1024.jpg" alt="" class="wp-image-17445" width="258" height="358"/><figcaption class="wp-element-caption"><strong>ಹಂಪಿ ವಿವಿ ವಿದ್ಯಾರ್ಥಿಗಳು ರಕ್ಷಣೆ ಕೋರಿ ಸಲ್ಲಿಸಿರುವ ಮನವಿ ಪತ್ರ</strong></figcaption></figure></div>]]></content:encoded>
					
		
		
			</item>
	</channel>
</rss>
