<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>hasan &#8211; Peepal Media</title>
	<atom:link href="https://peepalmedia.com/tag/hasan-2/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 29 Jul 2025 08:23:03 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>hasan &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಸಕಲೇಶಪುರ: ನಿರಂತರ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿ ಕುಂಠಿತ</title>
		<link>https://peepalmedia.com/sakleshpur-work-on-national-highway-75-has-been-delayed-due-to-continuous-rains/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 29 Jul 2025 08:19:21 +0000</pubDate>
				<category><![CDATA[ರಾಜ್ಯ]]></category>
		<category><![CDATA[ಹಾಸನ]]></category>
		<category><![CDATA[bengaluru]]></category>
		<category><![CDATA[hasan]]></category>
		<category><![CDATA[karnataka]]></category>
		<category><![CDATA[sakaleshapura]]></category>
		<category><![CDATA[shreyas patel]]></category>
		<guid isPermaLink="false">https://peepalmedia.com/?p=63299</guid>

					<description><![CDATA[ಸಕಲೇಶಪುರ: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿಯ ವೇಗ ಕುಂಠಿತಗೊಂಡಿದೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ರಸ್ತೆ ಕಾಮಗಾರಿಯನ್ನು ವೀಕ್ಷಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಾಮಗಾರಿಯನ್ನು ಜುಲೈ ಅಂತ್ಯದಲ್ಲಿ ಪೂರ್ಣಗೊಳಿಸುವ ನಿರೀಕ್ಷೆಯಿತ್ತು. ಆದರೆ ಈ ಬಾರಿ ಮುಂಗಾರು ನಿರೀಕ್ಷಿತ ಸಮಯಕ್ಕಿಂತ ಒಂದು ತಿಂಗಳು ಮೊದಲೇ ಆರಂಭವಾದ ಕಾರಣ ಹಾಗೂ ಹಲವು ಕಡೆ ಗುಡ್ಡ ಕುಸಿತದಿಂದ ಕಾಮಗಾರಿಗೆ ಅಡ್ಡಿಯಾಗಿದ್ದು, ಕೆಲಸದಲ್ಲಿ ವಿಳಂಬ ಉಂಟಾಗಿದೆ ಎಂದು ಹೇಳಿದರು. ರಾಷ್ಟ್ರೀಯ ಹೆದ್ದಾರಿ [&#8230;]]]></description>
										<content:encoded><![CDATA[
<p><strong>ಸಕಲೇಶಪುರ: </strong>ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿಯ ವೇಗ ಕುಂಠಿತಗೊಂಡಿದೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದ್ದಾರೆ.</p>



<p>ರಾಷ್ಟ್ರೀಯ ಹೆದ್ದಾರಿ 75ರ ರಸ್ತೆ ಕಾಮಗಾರಿಯನ್ನು ವೀಕ್ಷಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಾಮಗಾರಿಯನ್ನು ಜುಲೈ ಅಂತ್ಯದಲ್ಲಿ ಪೂರ್ಣಗೊಳಿಸುವ ನಿರೀಕ್ಷೆಯಿತ್ತು. ಆದರೆ ಈ ಬಾರಿ ಮುಂಗಾರು ನಿರೀಕ್ಷಿತ ಸಮಯಕ್ಕಿಂತ ಒಂದು ತಿಂಗಳು ಮೊದಲೇ ಆರಂಭವಾದ ಕಾರಣ ಹಾಗೂ ಹಲವು ಕಡೆ ಗುಡ್ಡ ಕುಸಿತದಿಂದ ಕಾಮಗಾರಿಗೆ ಅಡ್ಡಿಯಾಗಿದ್ದು, ಕೆಲಸದಲ್ಲಿ ವಿಳಂಬ ಉಂಟಾಗಿದೆ ಎಂದು ಹೇಳಿದರು.</p>



<p>ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಗುತ್ತಿಗೆದಾರರು ಯಾವುದೇ ಅಡಚಣೆ ಇಲ್ಲದೆ, ದಿನರಾತ್ರಿ ಶ್ರಮಿಸುತ್ತಿದ್ದಾರೆ. ಕುಸಿಯುತ್ತಿರುವ ಗುಡ್ಡ ಪ್ರದೇಶಗಳಲ್ಲಿ ಸುಮಾರು ₹40 ಕೋಟಿ ವೆಚ್ಚದ ತಡೆಗೋಡೆ ಕಾಮಗಾರಿಗೆ ಈಗಾಗಲೇ ಟೆಂಡರ್ ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ಕಾರ್ಯಾರಂಭವಾಗಲಿದೆ. ಇದರಿಂದ ಶಾಶ್ವತ ಪರಿಹಾರ ಸಿಗುವ ಸಾಧ್ಯತೆ ಇದೆ ಎಂದರು.</p>



<p>&#8220;ಈ ರಸ್ತೆಯ ವಿಳಂಬದಿಂದ ಮಂಗಳೂರು ಬಂದರಿನ ಶೇಕಡಾ 50ರಷ್ಟು ವಾಣಿಜ್ಯ ಚಟುವಟಿಕೆಗಳು ಅಸ್ತಿತ್ವ ಕಳೆದುಕೊಳ್ಳುತ್ತಿವೆ. ರಾಜ್ಯದ ಪ್ರಮುಖ ವಸ್ತುಗಳು ಈಗ ಚೆನ್ನೈ ಮತ್ತು ಇತರ ಬಂದರುಗಳ ಮೂಲಕ ಸಾಗಾಟವಾಗುತ್ತಿದೆ. ಇದರಿಂದ ರಾಜ್ಯ ಬೊಕ್ಕಸಕ್ಕೂ ನಷ್ಟವಾಗುತ್ತಿದೆ. ಬಂದರು ನಗರಿಯ ಸಂಪರ್ಕದ ಈ ರಸ್ತೆ ಸ್ಥಗಿತಗೊಂಡರೆ, ಹೀಗಾಗಿ ಈ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ರಾಜ್ಯ ಸರ್ಕಾರದೊಂದಿಗೆ ಸಂಪರ್ಕ ಸಾಧಿಸಿ, ಮಧ್ಯವರ್ತಿ ಪಾತ್ರವಹಿಸಲು ನಾನು ಸಿದ್ಧನಿದ್ದೇನೆ,&#8221; ಎಂದು ಹೇಳಿದರು.</p>



<p>ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಯೋಜನಾ ಅಧಿಕಾರಿ ಸೈಯದ್ ಅಮಾನುಲ್ಲಾ, ವ್ಯವಸ್ಥಾಪಕ ವಿಪಿನ್ ಶರ್ಮಾ, ಡಿ ವೈ ಎಸ್ ಪಿ ಪ್ರಮೋದ್ ಕುಮಾರ್, ತಹಶೀಲ್ದಾರ್ ಮೋಹನ್, ಕಾಂಗ್ರೆಸ್ ಮುಖಂಡರಾದ ಸೈಯದ್ ಮುಫೀಸ್, ಬೈಕೆರೆ ದೇವರಾಜ್, ಉದಯ್ ಹೆಚ್.ಎಚ್. ಕಲ್ಗನೆ ಪ್ರಶಾಂತ್, ಕಲ್ಗನೆ ಗಿರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಜಾತಿ ದೌರ್ಜನ್ಯ &#8211; ಅಸ್ಪೃಶ್ಯತೆ ಆಚರಣೆ: ತಿಂಗಳಾದರೂ ತಪ್ಪಿತಸ್ಥರ ಮೇಲೆ ಕ್ರಮ ಇಲ್ಲ</title>
		<link>https://peepalmedia.com/caste-atrocities-untouchability-celebrations-month-no-action-taken-against-guilty/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 22 Apr 2025 10:14:23 +0000</pubDate>
				<category><![CDATA[ಅಪರಾಧ]]></category>
		<category><![CDATA[Atrocity]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[caste]]></category>
		<category><![CDATA[castism]]></category>
		<category><![CDATA[halli mysore]]></category>
		<category><![CDATA[hasan]]></category>
		<category><![CDATA[karnataka]]></category>
		<category><![CDATA[SC-ST]]></category>
		<category><![CDATA[untouchability]]></category>
		<guid isPermaLink="false">https://peepalmedia.com/?p=57657</guid>

					<description><![CDATA[ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರಿನಲ್ಲಿ ಇರುವ ತಮ್ಮ ವಿಶ್ವ ವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಜಾತಿ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮವನ್ನು ತಗೆದುಕೊಳ್ಳಲಾಗಿಲ್ಲ. ಇಲ್ಲಿ ಕಳೆದ 4 ವರ್ಷಗಳಿಂದ ಪರಿಚಾರಕರಾಗಿ (ಅಟೆಂಡರ್) ಕೆಲಸ ಮಾಡುತ್ತಿರುವ ಪರಿಶಿಷ್ಟ ಜಾತಿ(ಎಸ್.ಸಿ) ಸಮುದಾಯಕ್ಕೆ ಸೇರಿದ ಪರಮೇಶ್ ಜಿ.ಕೆ ಎಂಬುವವರು ಮೇಲೆ ಇಬ್ಬರು ಅತಿಥಿ ಉಪನ್ಯಾಸಕರು ಅಸ್ಪೃಶ್ಯತೆಯ ದೌರ್ಜನ್ಯವನ್ನು ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಇವರ ಮೇಲೆ ಅದೇ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಕವಿತಾ ಬಿ.ಡಿ ಮತ್ತು ಡಾ. ಚಂದ್ರಶೇಖರ್ ಎಚ್.ಆರ್ [&#8230;]]]></description>
										<content:encoded><![CDATA[
<pre class="wp-block-code"><code><strong>* ಜಾತಿ ದೌರ್ಜನ್ಯ ಮತ್ತು ಅಸ್ಪೃಶ್ಯತೆ ಆಚರಣೆ ಪ್ರಕರಣ ಕುರಿತು ತಿಂಗಳಾದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಇಲ್ಲ
* ಕಾಲೇಜಿಗೆ ಡಿಎಚ್ಎಸ್ ನಿಯೋಗ ಬೇಟಿ ನೀಡಿ ಕ್ರಮಕ್ಕೆ ಒತ್ತಾಯ</strong></code></pre>



<p>ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರಿನಲ್ಲಿ ಇರುವ ತಮ್ಮ ವಿಶ್ವ ವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಜಾತಿ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮವನ್ನು ತಗೆದುಕೊಳ್ಳಲಾಗಿಲ್ಲ. ಇಲ್ಲಿ ಕಳೆದ 4 ವರ್ಷಗಳಿಂದ ಪರಿಚಾರಕರಾಗಿ (ಅಟೆಂಡರ್) ಕೆಲಸ ಮಾಡುತ್ತಿರುವ ಪರಿಶಿಷ್ಟ ಜಾತಿ(ಎಸ್.ಸಿ) ಸಮುದಾಯಕ್ಕೆ ಸೇರಿದ ಪರಮೇಶ್ ಜಿ.ಕೆ ಎಂಬುವವರು ಮೇಲೆ ಇಬ್ಬರು ಅತಿಥಿ ಉಪನ್ಯಾಸಕರು ಅಸ್ಪೃಶ್ಯತೆಯ ದೌರ್ಜನ್ಯವನ್ನು ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. <br><br>ಇವರ ಮೇಲೆ ಅದೇ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಕವಿತಾ ಬಿ.ಡಿ ಮತ್ತು ಡಾ. ಚಂದ್ರಶೇಖರ್ ಎಚ್.ಆರ್ ಎಂಬುವವರು ಹಲವು ತಿಂಗಳುಗಳಿಂದ ಪರಮೇಶ್ ರವರು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಕಾಲೇಜಿನಲ್ಲಿ ಮಧ್ಯಾಹ್ನದ ಊಟದ ಸಂದರ್ಭಗಳಲ್ಲಿ &#8220;ಕೀಳು ಜಾತಿಯವನು ಹೇಗೆ ನಮ್ಮ ಜೊತೆಯಲ್ಲೇ ಒಟ್ಟಿಗೆ ಊಟ ಮಾಡುತ್ತಾನೆ,&#8221; ಎಂದು ಹಲವು ನೆಪಗಳನ್ನೊಡ್ಡಿ ಪರಮೇಶ್ ಊಟ ಮಾಡುವುದನ್ನು ತಪ್ಪಿಸಿರುತ್ತಾರೆ ಎಂಬ ಆರೋಪ ಮಾಡಲಾಗಿದೆ. <br><br>ಜೊತೆಗೆ ಕುರ್ಚಿ ಮೇಲೆ ಕೂರುವುದನ್ನು ಸಹಿಸದಿರುವುದು, ನಾಯಿಗೆ ನಿಂದಿಸುವ ನೆಪದಲ್ಲಿ ಮಾರ್ಮಿಕವಾಗಿ ಬಯ್ಯುವುದು ಸೇರಿದಂತೆ, ನಾವು ಒಬ್ಬ ಎಸ್.ಸಿ (ಪರಿಶಿಷ್ಟ ಜಾತಿ) ಯವನ ಜೊತೆ ಕೂರಬೇಕಾ ಎಂದು ಸಾರ್ವಜನಿಕವಾಗಿ ಅವರಿವರ ನೆಪದಲ್ಲಿ ನಿಂದಿಸಿ, ಜಾತಿಯತೆ ಅಸ್ಪೃಶ್ಯತೆ ಆಚರಣೆ ಮಾಡುತ್ತಿದ್ದುದು ತಿಳಿದು ಬಂದಿದೆ.<br><br>ಕವಿತ ಮತ್ತು ಚಂದ್ರಶೇಖರ್ ರವರುಗಳು ಮಾರ್ಚ್‌ 20, 2025 ರಂದು ಪರಮೇಶ್ ರವರ ಮಾನಕ್ಕೆ ಕುಂದುಂಟಾಗುಂತೆ ಮತ್ತೊರ್ವರ‌ ಸಮ್ಮುಖದಲ್ಲಿ ಜಾತಿಯ ಹೆಸರು ಹಿಡಿದು ಅಪಮಾನಿಸಿ ಮಾತನಾಡಿದ್ದಾರೆ.<br><br>ಈ ಬಗ್ಗೆ ಕವಿತ ಬಿ.ಡಿ ರವರು &#8220;ನೀನು ಪ್ರಾಂಶುಪಾಲರು ಅಥವಾ ಪೊಲೀಸ್ ಗೆ ದೂರು ನೀಡಲು ಮುಂದಾದರೆ, ನಾನು ಹೇಗಿದ್ದರೂ ಹೆಂಗಸು ಬೇರೆ ಕೇಸನ್ನೇ ಕೊಡುತ್ತೇನೆಂದು ಮತ್ತು ನಿನ್ನನ್ನು ಇಲ್ಲಿ ಇರುಲು ಬಿಡುವುದಿಲ್ಲ. ಬೇರೆ ಕಡೆಗೆ ವರ್ಗಾವಣೆ ಮಾಡಿಸುತ್ತೇನೆಂದು ಬೆದರಿಕೆ ಹಾಕುವುದರ ಜೊತೆಗೆ ನೀನು ನಮ್ಮಂಥವರೊಂದಿಗೆ ಕೆಲಸ ಅರ್ಹನಲ್ಲ, ಎಲ್ಲಾದರೂ ಹೋಗಿ ಸಾಯಿರಿ,&#8221; ಎಂದು ತಮ್ಮ ಜಾತಿ ಹೆಸರನ್ನು ಕೀಳಾಗಿ ಬಳಸಿ ಅಪಮಾನಿಸಿ ತೊಂದರೆ ಕೊಟ್ಟಿದ್ದಾರೆ ಎಂದು ಪರಮೇಶ್ ಅವರು ಆರೋಪಿಸಿದ್ದಾರೆ.<br><br>ಈ ಘಟನೆಯಿಂದ ನೊಂದ ಪರಮೇಶ್ ರವರು ಕವಿತ.ಬಿ.ಡಿ ಮತ್ತು ಡಾ.ಚಂದ್ರಶೇಖರ್ ಎಚ್. ಆರ್. ಎಂಬುವವರ ಮೇಲೆ ಮಾರ್ಚ್‌ 20, 2025 ರಂದು ಹಳ್ಳಿ‌ಮೈಸೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಎಫ್ಐಆರ್ ಮಾಡಲಾಗಿರುತ್ತದೆ. ಘಟನೆ ಇಷ್ಟು ದಿನವಾದರೂ ವಿ.ವಿ ಕೇಂದ್ರದಿಂದ ತಪ್ಪಿತಸ್ಥರ ಮೇಲೆ‌ ಯಾವುದೇ ಕ್ರಮ ಕೈಗೊಳ್ಳದಿರುವುದು ಅತ್ಯಂತ ನಿರ್ಲಕ್ಷ್ಯತನವಾಗಿರುತ್ತದೆ.</p>



<p>ನಂತರ ಶಾಸಕ‌ ಎ. ಮಂಜು ರವರು ಕಾಲೇಜಿಗೆ ಬೇಟಿ ನೀಡಿ, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವ ಬದಲು ಜಾತಿ ನಿಂದನೆಗೆ ಒಳಗಾಗಿ ನೊಂದಿರುವ ತಮ್ಮ  ದಬ್ಬಾಳಿಕೆಯ ಮಾತುಗಳನ್ನಾಡಿ, ಬೆದರಿಕೆ ಒಡ್ಡಿದ್ದಾರೆ ಎಂದು ಪರಮೇಶ್ ಆರೋಪಿಸಿದ್ದಾರೆ.</p>



<p>ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಾಠ ಹೇಳುವ ಉಪನ್ಯಾಸಕರೇ ಈ ರೀತಿಯಲ್ಲಿ ಅನಾಗರೀಕವಾಗಿ ಅಸ್ಪೃಶ್ಯತೆ, ಜಾತಿ ತಾರತಮ್ಯ ಮಾಡಿರುವುದು ಅತ್ಯಂತ ದುರಂತದ ಸಂಗತಿ ಮತ್ತು ನಾಗರೀಕ ಸಮಾಜ ತಲೆ ತಗ್ಗಿಸುವಂತಹದ್ದಾಗಿರುತ್ತದೆ. ಈ ಘಟನೆಯನ್ನು ದಲಿತ ಹಕ್ಕುಗಳ ಸಮಿತಿ- ಕರ್ನಾಟಕ (ಡಿಎಚ್ಎಸ್) ತೀವ್ರವಾಗಿ ಖಂಡಿಸಿದೆ.</p>


<div class="wp-block-image">
<figure class="aligncenter size-full is-resized"><img fetchpriority="high" decoding="async" width="839" height="466" src="https://peepalmedia.com/wp-content/uploads/2025/04/Screenshot-2025-04-22-153615.png" alt="" class="wp-image-57663" style="width:475px;height:auto" srcset="https://peepalmedia.com/wp-content/uploads/2025/04/Screenshot-2025-04-22-153615.png 839w, https://peepalmedia.com/wp-content/uploads/2025/04/Screenshot-2025-04-22-153615-300x167.png 300w, https://peepalmedia.com/wp-content/uploads/2025/04/Screenshot-2025-04-22-153615-768x427.png 768w, https://peepalmedia.com/wp-content/uploads/2025/04/Screenshot-2025-04-22-153615-150x83.png 150w, https://peepalmedia.com/wp-content/uploads/2025/04/Screenshot-2025-04-22-153615-696x387.png 696w" sizes="(max-width: 839px) 100vw, 839px" /><figcaption class="wp-element-caption"><strong>ಡಿಎಚ್‌ಎಸ್ ಜಿಲ್ಲಾ ಸಂಚಾಲಕ ಪೃಥ್ವಿ ಎಂ.ಜಿ</strong></figcaption></figure></div>


<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಾಸನ ವಿಶ್ವವಿದ್ಯಾನಿಲಯದ ಉಪ ಕುಲಪತಿ ಮತ್ತು ಕುಸಚಿವರಿಗೆ ಜಾತಿ ದೌರ್ಜನ್ಯ ಮತ್ತು ಅಸ್ಪೃಶ್ಯತೆ ಆಚರಿಸಿರುವ ಕವಿತ ಬಿ.ಡಿ. ಮತ್ತು ಡಾ. ಚಂದ್ರಶೇಖರ್ ಎಚ್. ಆರ್. ಎಂಬುವವರ ಮೇಲೆ ಸೂಕ್ತ ಕ್ರಮ‌ ಜರುಗಿಸಿ, ನೊಂದ ಪರಮೇಶ್ ರವರಿಗೆ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಿ ಡಿಎಚ್ಎಸ್ ಹಾಸನ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಗಿದೆ.</p>



<p>ಇಂದು, ಎಪ್ರಿಲ್‌ 22 ರಂದು ಡಿಎಚ್‌ಎಸ್ಜಿಲ್ಲಾ ಸಂಚಾಲಕ, ಎಂ.ಜಿ ಪೃಥ್ವಿ ಹಾಗೂ ಜಿಲ್ಲಾ ಸಮಿತಿ ಸದಸ್ಯ ರಮೇಶ್ ಹಳ್ಳಿ ಮೈಸೂರಿನ ಪದವಿ ಕಾಲೇಜಿಗೆ ಬೇಟಿ ನೀಡಿ, ಪ್ರಾಂಶುಪಾಲರನ್ನು ಬೇಟಿ ಮಾಡಿದ್ದಾರೆ. ಜಾತಿ ದೌರ್ಜನ್ಯ ಮತ್ತು ಅಸ್ಪೃಶ್ಯತೆ ಆಚರಿಸಿರುವವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಮತ್ತು ಜಾತಿ ದೌರ್ಜನ್ಯ ಕೊಳಗಾದ ಪರಮೇಶ ರವರಿಗೆ ನ್ಯಾಯ ದೊರಕಿಸದಿದ್ದರೆ ಮುಂದಿನ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಡಿಎಚ್‌ಎಸ್ ಜಿಲ್ಲಾ ಸಂಚಾಲಕ ಪೃಥ್ವಿ ಎಂ.ಜಿ ತಿಳಿಸಿದ್ದಾರೆ.</p>



<p></p>
]]></content:encoded>
					
		
		
			</item>
		<item>
		<title>ಧರ್ಮದರ್ಮಗಳ ಬಡಿದಾಟ, ವೈಮನಸ್ಸುಗಳ ಸ್ಥಿತಿ ಮೊದಲು ನಿಲ್ಲಲಿ: ಬಾನಮ್ ಲೋಕೇಶ್</title>
		<link>https://peepalmedia.com/let-the-clashes-of-religions-and-animosity-stop-first-banam-lokesh/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 13 Jan 2025 11:23:23 +0000</pubDate>
				<category><![CDATA[ರಾಜ್ಯ]]></category>
		<category><![CDATA[ಹಾಸನ]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[hasan]]></category>
		<category><![CDATA[kannada]]></category>
		<category><![CDATA[karnataka]]></category>
		<guid isPermaLink="false">https://peepalmedia.com/?p=52233</guid>

					<description><![CDATA[ಹಾಸನ: ಜಾಗತೀಕ ಕಾಲದಲ್ಲಿ ಬಹಳಷ್ಟು ದೇಶಗಳಲ್ಲಿ ಮಾನವ ಹಕ್ಕುಗಳಿಗೆ ಚ್ಯುತಿ ಬರುವುದನ್ನು ನೋಡುತ್ತಿದ್ದೇವೆ. ಧರ್ಮದರ್ಮಗಳ ಬಡಿದಾಟ, ವೈಮನಸ್ಸುಗಳ ಸ್ಥಿತಿ ಉದ್ಭವ ಆಗುತ್ತಿದ್ದು, ಇದು ನಿಲ್ಲಬೇಕಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಾನಮ್ ಲೋಕೇಶ್ ತಿಳಿಸಿದರು. ನಗರದ ಸಂಗಮೇಶ್ವರ ಬಡಾವಣೆ, ಜವೇನಹಳ್ಳಿ ಕೆರೆ ಬಳಿ ಇರುವ ಹಿರಿಯ ನಾಗರೀಕರ ಸಭಾಂಗಣದಲ್ಲಿ ಕರ್ನಾಟಕ ಮಾನವ ಹಕ್ಕುಗಳ ಜನಸೇವಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಸಮಿತಿಯ ನೂತನ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ಹಾಗೂ [&#8230;]]]></description>
										<content:encoded><![CDATA[
<p><strong>ಹಾಸನ: </strong>ಜಾಗತೀಕ ಕಾಲದಲ್ಲಿ ಬಹಳಷ್ಟು ದೇಶಗಳಲ್ಲಿ ಮಾನವ ಹಕ್ಕುಗಳಿಗೆ ಚ್ಯುತಿ ಬರುವುದನ್ನು ನೋಡುತ್ತಿದ್ದೇವೆ. ಧರ್ಮದರ್ಮಗಳ ಬಡಿದಾಟ, ವೈಮನಸ್ಸುಗಳ ಸ್ಥಿತಿ ಉದ್ಭವ ಆಗುತ್ತಿದ್ದು, ಇದು ನಿಲ್ಲಬೇಕಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಾನಮ್ ಲೋಕೇಶ್ ತಿಳಿಸಿದರು.</p>



<p>ನಗರದ ಸಂಗಮೇಶ್ವರ ಬಡಾವಣೆ, ಜವೇನಹಳ್ಳಿ ಕೆರೆ ಬಳಿ ಇರುವ ಹಿರಿಯ ನಾಗರೀಕರ ಸಭಾಂಗಣದಲ್ಲಿ ಕರ್ನಾಟಕ ಮಾನವ ಹಕ್ಕುಗಳ ಜನಸೇವಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಸಮಿತಿಯ ನೂತನ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದಲ್ಲಿ ಜೀವನ ಮಾಡುವುದಕ್ಕೆ ಪ್ರಮುಖವಾದುದ್ದು ಎಂದರೇ ವ್ಯಕ್ತಿಯ ಹಕ್ಕು ಮತ್ತು ಕರ್ತವ್ಯಗಳು. ನಾವು ಎಲ್ಲಾರು ಕೂಡ ಮಾನವರೇ ಪ್ರಪಂಚದಲ್ಲಿ ಇರುವ ಬುದ್ದಿ ಜೀವಿಗಳೆ ಎನ್ನಿಸಿಕೊಂಡಿರುವವರು ಕೂಡ ಮಾನವರೇ ಆದರೇ ಅವರ ಹಕ್ಕುಗಳ ಉಳಿಸಿಕೊಳ್ಳಲು ಕೂಡ ಹೋರಾಟ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದರೇ ಆಲೋಚನೆ ಮಾಡಬೇಕಾಗಿದೆ ಮಾನವನ ಸ್ಥಿತಿ ಎಲ್ಲಿಗೆ ಹೋಗಿದೆ ಎಂದು ಬೇಸರವ್ಯಕ್ತಪಡಿಸಿದರು. ೧೯೪೮ನೇ ಸಾಲಿನಲ್ಲಿ ಇದೊಂದು ಮಾನವ ಹಕ್ಕಗಳ ಆಯೋಗ ಸ್ಥಾಪನೆ ಆಗಿದ ನಂತರ ಹಲವಾರು ಸಂಘ ಸಂಸ್ಥೆಗಳು ಮಾನವ ಹಕ್ಕುಗಳ ವಿಚಾರವಾಗಿ ಮಾನವನಿಗಿರುವ ಹಕ್ಕುಗಳಿಗಾಗಿ ಹುಟ್ಟಿಕೊಂಡಿದೆ. ಹಾಸನದಲ್ಲೂ ಕೂಡ ಮಾನವ ಹಕ್ಕುಗಳ ಜನಸೇವಾ ಸಮಿತಿ ಜನ್ಮತಾಳಿದೆ. ಏನಾದನರೂ ಸಮಸ್ಯೆ ಇದ್ದರೇ ನಮ್ಮ ಸಂಸ್ಥೆಗಳ ಪದಾಧಿಕಾರಿಗಳಿಗೆ ತಿಳಿಸಿದರೇ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದರು. ಜಾಗತೀಕ ಕಾಲದಲ್ಲಿ ಬಹಳಷ್ಟು ದೇಶಗಳಲ್ಲಿ ಮಾನವ ಹಕ್ಕುಗಳಿಗೆ ಚ್ಯುತಿ ಬರುವುದನ್ನು ನೋಡುತ್ತಿದ್ದೇವೆ. ಧರ್ಮದರ್ಮಗಳ ಬಡಿದಾಟ, ವೈಮನಸ್ಸುಗಳ ಸ್ಥಿತಿ ಉದ್ಭವ ಆಗುತ್ತಿದ್ದು, ಇದು ನಿಲ್ಲಬೇಕಾಗಿದೆ. ಮಾನವ ಅಂದರೇ ಲಿಂಗತಾರತಮ್ಯ ಹೋರಾಟ ಬರಬಾರದು. ಇಡೀ ಮನುಕುಲದಲ್ಲಿ ಇರುವುದು ಮಾನವರೆಲ್ಲರು ಒಂದೆ. ಅದೆ ಮಾನವ ಧರ್ಮ ಎಂದು ಕಿವಿಮಾತು ಹೇಳಿದರು. ಯಾರು ಮಾನವ ಧರ್ಮ ಪಾಲನೆ ಮಾಡುತ್ತಾರೆ, ಯಾರು ಮಾನವೀಯ ಗುಣಗಳನ್ನು ಮತ್ತು ಮೌಲ್ಯಗಳನ್ನು ಬೆಳೆಸಿಕೊಂಡಿರುತ್ತಾರೆ ಅವರೆಲ್ಲರೂ ಕೂಡ ನಿಜ ಮಾನವರು ಎಂದು ಸಲಹೆ ನೀಡಿದರು. ಮಾನವ ಮಾನವಾಗಿರು ಮನುಕುಲ ತೊರೆಯದಿರು. ತೊರೆದರೇ ಮಾನವರಲ್ಲ. ದಾನವಗುಣ ಬೆಳೆಸಿ ಮಾನವ ಗುಣ ಅಳವಡಿಸಿಕೊಳ್ಳಿ ಎಂದು ಹೇಳಿದರು.</p>



<p>ರಾಜ್ಯ ರೈತ ಹಾಗೂ ಹಸಿರು ಜನಜಾಗೃತಿ ಸಂಘಟನೆ ರಾಜ್ಯಾಧ್ಯಕ್ಷೆ ಸಿ.ಎಂ. ನಾಗರತ್ನ ಮಾತನಾಡಿ, ಮಾನವ ಹಕ್ಕುಗಳನ್ನು ನಾವು ಎಂದು ಸಹಿಸುವುದಿಲ್ಲ. ಇವತ್ತು ನಡೆಯುತ್ತಿರುವುದೇ ಭ್ರಷ್ಠಾಚಾರ. ಇನ್ನು ಹೆಣ್ಣು ಮಕ್ಕಳಿಗೆ ಸೇಫ್ಟಿಯೇ ಇಲ್ಲ. ಯಾವಾಗ ನಡುರಾತ್ರಿಯಲ್ಲಿ ಹೆಣ್ಣು ಮಗಳು ಓಡಾಡುತ್ತಾಳೋ ಅವತ್ತು ದೇಶಕ್ಕೆ ಸ್ವಾತಂತ್ರ್ಯ. ನಮ್ಮನ್ನೆಲ್ಲಾ ಕಾಯುತ್ತಿರುವುದು ಆರಕ್ಷಕರು. ಕೆಲ ದಿನಗಳ ಹಿಂದೆ ಹೆಣ್ಣು ಮಗಳು ಪೊಲೀಸ್ ಠಾಣೆಗೆ ದೂರು ಕೊಡಲು ಬಂದರೇ ಅತ್ಯಚಾರದ ಪ್ರಕರಣ ನಡೆದಿದೆ. ರಕ್ಷಣೆ ಕೊಡುವವರೇ ಭಕ್ಷಕರಾದರೇ ಹೇಗೆ ನಮ್ಮ ದೇಶ ಉದ್ದಾರವಾಗುತ್ತದೆ ಎಂದು ತುಮಕೂರಿನಲ್ಲಿ ಪೊಲೀಸ್ ಅಧಿಕಾರಿಯಿಂದ ನಡೆದ ದೌರ್ಜನ್ಯದ ಬಗ್ಗೆ ಆಕ್ರೋಶವ್ಯಕ್ತಪಡಿಸಿದರು. ಚಿಕ್ಕ ಮಕ್ಕಳ ಮೇಲೆ ಉಪಾಧ್ಯಯರೇ ಅತ್ಯಾಚಾರ ಮಾಡುತ್ತಾರೆ. ಅಕ್ಕಪಕ್ಕದ ಮನೆಯವರು ಚಿಕ್ಕ ಮಕ್ಕಳ ಮೇಲೆ ಅತ್ಯಚಾರ ಎಸಗುತ್ತಿರುವುದು ನಮ್ಮ ದೇಶದ ದೊಡ್ಡ ದುರಂತ ಎಂದು ಬೇಸರವ್ಯಕ್ತಪಡಿಸಿದರು. ಅತ್ಯಚಾರ ಮಾಡಿದವನ ಕಡೆಗೂ ರಾಜಕೀಯ ಸಹಕಾರ ಕೊಡುತ್ತದೆ, ಸತ್ತವನಿಗೂ ರಾಜಕೀಯ ಸಹಕಾರ ಕೊಡುತ್ತದೆ. ಎಲ್ಲಿ ಅತ್ಯಚಾರಿಯನ್ನು ಕಂಡಲ್ಲಿ ಗುಂಡು ಎಂದು ಕಾನೂನು ತರುವವರಿಗೂ ಈ ಒಂದು ಭ್ರಷ್ಠಾಚಾರ ಮತ್ತು ಹೆಣ್ಣು ಮಕ್ಕಳ ಮೇಲಿನ ಅತ್ಯಚಾರ ನಿಲ್ಲುವುದಿಲ್ಲ ಎಂದರು. ದೇಶ ಕಾಯುವ ಸೈನಿಕ ಎಷ್ಟು ಮುಖ್ಯವೋ ಎಲ್ಲಾರ ಹೊಟ್ಟೆ ತುಂಬಿಸುವ ರೈತನು ಕೂಡ ಅಷ್ಟೆ ಮುಖ್ಯ ಎಂದು ಹೇಳಿದರು.</p>



<p>ಕಾರ್ಯಕ್ರಮದಲ್ಲಿ ಕರ್ನಾಟಕ ಮಾನವ ಹಕ್ಕುಗಳ ಜನಸೇವಾ ಸಮಿತಿ ಗೌರವಾಧ್ಯಕ್ಷ ಎ.ಎಸ್. ಸುರೇಶ್, ಜಿಲ್ಲಾಧ್ಯಕ್ಷ ರಘುಗೌಡ, ವಕೀಲರಾದ ಯೋಗೀಶ್, ಸಿ.ಎಸ್. ರವಿಕಿರಣ್, ಜಿಲ್ಲಾಧ್ಯಕ್ಷೆ ಹೆಚ್.ಎಸ್. ಪ್ರತಿಮಾ ಇತರರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಸ್ವಾಮಿ ವಿವೇಕಾನಂದರು ಯುವ ಜನರಿಗೆ ಸ್ಪೂರ್ತಿಯ ಸಂಕೇತ: ಹೆಚ್.ಪಿ. ಸ್ವರೂಪ್</title>
		<link>https://peepalmedia.com/swami-vivekananda-is-a-symbol-of-inspiration-for-young-people-h-p-swarup/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 13 Jan 2025 11:20:27 +0000</pubDate>
				<category><![CDATA[Uncategorized]]></category>
		<category><![CDATA[ರಾಜ್ಯ]]></category>
		<category><![CDATA[ಹಾಸನ]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[hasan]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Vivekananda]]></category>
		<guid isPermaLink="false">https://peepalmedia.com/?p=52229</guid>

					<description><![CDATA[ಹಾಸನ: ಭಾರತ ದೇಶದ ಶಕ್ತಿ ಏನೆಂಬುದನ್ನು ಇಡೀ ವಿಶ್ವಕ್ಕೆ ತಿಳಿಸಿಕೊಟ್ಟ ಕೀರ್ತಿ ಸ್ವಾಮಿ ವಿವೇಕಾನಂದರವರಿಗೆ ಸಲ್ಲುತ್ತದೆ. ಜೊತೆಗೆ ವಿವೇಕಾನಂದರು ಯುವ ಜನರಿಗೆ ಸ್ಪೂರ್ತಿಯ ಸಂಕೇತ ಎಂದು ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ಕರೆ ನೀಡಿದರು. ನಗರದ ತಣ್ಣೀರುಹಳ್ಳ ಬಳಿ ಇರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ಎಸ್.ಡಿ.ಎಂ. ಕಾಲೇಜು ಅವರ ಸಂಯುಕ್ತಾಶ್ರಯದಲ್ಲಿ ಭಾನುವಾರ ಬೆಳಿಗ್ಗೆ [&#8230;]]]></description>
										<content:encoded><![CDATA[
<p><strong>ಹಾಸನ:</strong> ಭಾರತ ದೇಶದ ಶಕ್ತಿ ಏನೆಂಬುದನ್ನು ಇಡೀ ವಿಶ್ವಕ್ಕೆ ತಿಳಿಸಿಕೊಟ್ಟ ಕೀರ್ತಿ ಸ್ವಾಮಿ ವಿವೇಕಾನಂದರವರಿಗೆ ಸಲ್ಲುತ್ತದೆ. ಜೊತೆಗೆ ವಿವೇಕಾನಂದರು ಯುವ ಜನರಿಗೆ ಸ್ಪೂರ್ತಿಯ ಸಂಕೇತ ಎಂದು ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ಕರೆ ನೀಡಿದರು.</p>



<p>ನಗರದ ತಣ್ಣೀರುಹಳ್ಳ ಬಳಿ ಇರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ಎಸ್.ಡಿ.ಎಂ. ಕಾಲೇಜು ಅವರ ಸಂಯುಕ್ತಾಶ್ರಯದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ರಾಷ್ಟ್ರೀಯ ಯುವ ಸಪ್ತಾಹ &#8211; ೨೦೨೫ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಯುವಕರು ಹೆಚ್ಚೆಚ್ಚು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಪುಸ್ತವನ್ನು ಆತ್ಮೀಯ ಸ್ನೇಹಿತನಾಗಿ ಮಾಡಿಕೊಳ್ಳಬೇಕು. ಪ್ರಸ್ತೂತದಲ್ಲಿ ಟಿವಿ ನೋಡಿದರೇ ನಿದ್ದೆ ಬರುವುದಿಲ್ಲ. ಆದರೇ ಪುಸ್ತಕ ನೋಡಿದರೇ ನಿದ್ದೆ ಬರುತ್ತದೆ. ವಿವೇಕಾನಂದರ ಪುಸ್ತಕ ಓದುವಾಗ ಇನ್ನಷ್ಟು ಓದ ಬೇಕೆನ್ನುವ ಆಸಕ್ತಿ ನನಗೂ ಕೂಡ ಬಂದಿದೆ. ಪ್ರಪಂಚದಲ್ಲಿಯೇ ಸ್ವಾಮಿ ವಿವೇಕಾನಂದರು ವಿದ್ವಾಂಶರು. ಲೋಕ ಸಂಚಾರಿ ಎಂದರೇ ತಪ್ಪಾಗಲಾರದು. ರಾಮಕೃಷ್ಣ ಪರಮವಂಶರ ಪ್ರೇರಣೆಯಿಂದ, ಒಡನಾಟದಿಂದ ಅವರು ಕೂಡ ಆಧ್ಯಾತ್ಮಿಕವಾಗಿ ಚಿಂತಕರಾಗಿದ್ದಾರೆ. ಅಮೇರಿಕಾದ ಚಿಕಾಗೋಕ್ಕೆ ಹೋಗಿ ಅಲ್ಲಿಂದ ರೈಲಿನಲ್ಲಿ ಹೋದ ಬಗೆ ಘಟನೆ ಹೇಳಿದರು. ಲಂಡನ್ ನಲ್ಲಿಯೂ ಕೂಡ ಒಂದು ಪುತ್ಥಳಿಯನ್ನು ಅನಾವರಣ ಮಾಡಿದ್ದು, ವಿವೇಕಾನಂದರ ಮೌಲ್ಯಗಳನ್ನು ನಾವುಗಳು ಪಾಲಿಸಬೇಕು ಎಂದು ಕಿವಿಮಾತು ಹೇಳಿದರು.</p>



<p>ನಗರಸಭೆ ಅಧ್ಯಕ್ಷ ಎಂ. ಚಂದ್ರಶೇಖರ್ ಮಾತನಾಡಿ, ಸ್ವಾಮಿ ವಿವೇಕಾನಂದರು ಬಿಟ್ಟು ಹೋಗಿರುವ ಸಮಯ ಪಾಲನೆ, ಅವರ ಆದರ್ಶ, ಪ್ರೀತಿ ವಿಶ್ವಾಸ, ತತ್ವ ಸಿದ್ಧಾಂತ ಹಾಗೂ ಯಾವ ರೀತಿ ಬದುಕಬೇಕು ಎನ್ನುವ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯದ ಮೂಲಕ ಬದುಕು ರೂಪಿಸಿಕೊಳ್ಳಿ ಎಂದು ಕರೆ ನೀಡಿದರು.</p>



<p>ಶ್ರೀ ಧರ್ಮಸ್ಥಳ ಆಯುರ್ವೇದ ಮಹಾವಿದ್ಯಾಲಯದ ನಿರ್ದೇಶಕ ಡಾ|| ಪ್ರಸನ್ನ ಎನ್. ರಾವ್ ಮತ್ತು ಕಾಲೇಜು ಪ್ರಾಂಶುಪಾಲರಾದ ಶೈಲಜಾ ಪ್ರಸನ್ನ ಮಾತನಾಡಿ, ವಿಶ್ವಕ್ಕೆ ಶಾಂತಿ ಸಂದೇಶ ಕೊಟಟ್ವರು. ಆದ್ಯಾತ್ಮಿಕ ಚಿಂತನೆ ಹೊಂದಿದವರ ಜನ್ಮ ದಿನಾಚರಣೆ ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ. ವಿವೇಕಾನಂದರ ಮಾತಿನಂತೆ ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಮಾತುಗಳನ್ನು ಇಂದಿಗೂ ಕೂಡ ಜೀವಂತವಾಗಿದ್ದು, ಸರ್ವರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅದೇ ರೀತಿ ಜೀವನದಲ್ಲಿ ಗುರಿ ಇರಬೇಕು, ಪ್ರತಿನಿತ್ಯ ನನ್ನ ಕರ್ತವ್ಯ ಏನು, ಅದಕ್ಕೆ ಪೂರಕವಾಗಿ ನಾನು ಏನು ಮಾಡಿದ್ದೇನೆ. ನನ್ನ ಗುರಿಗಾಗಿ ನಾನು ಎಷ್ಟು ಶ್ರಮ ವಹಿಸುತ್ತೇವೆ ಎಂಬುದು ಬಹು ಮುಖ್ಯವಾಗಿರುತ್ತದೆ ಎಂದರು.</p>



<p>ಜಿಲ್ಲಾ ಯುವ ಸಬಲೀಕರಣ ಇಲಾಖೆ ಅಧಿಕಾರಿ ಸಿ.ಕೆ. ಹರೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿವೇಕಾನಂದವರು. ೧೮೯೩ ರಲ್ಲಿ ಚಿಕಾಗೊದಲ್ಲಿ ಮಾಡಿದ ಭಾಷಣ ಒಂದು ಇತಿಹಾಸ, ಜಗತ್ತಿಗೆ ಭ್ರಾತೃತ್ವದ ಮಹತ್ವವನ್ನು ತಿಳಿಸಿದರು. ಯುವ ಜನಾಂಗದ ಶಕ್ತಿಯ ಬಗ್ಗೆ ಪ್ರೇರಣಾ ಪೂರ್ವಕ ಅರಿವನ್ನು ಮೂಡಿಸಿದ್ದಾರೆ. ಸ್ವಾಮಿ ವಿವೇಕಾನಂದರ ಕರೆಯಂತೆ ಸತತ ಪರಿಶ್ರಮದಿಂದ ಗುರಿ ತಮ್ಮ ಮುಟ್ಟುವ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು ಎಂದರು. ಭಾರತ ದೇಶದ ಶಕ್ತಿ ಏನೆಂಬುದನ್ನು ಇಡೀ ವಿಶ್ವಕ್ಕೆ ತಿಳಿಸಿಕೊಟ್ಟ ಕೀರ್ತಿ ಸ್ವಾಮಿ ವಿವೇಕಾನಂದ ಅವರಿಗೆ ಸಲ್ಲುತ್ತದೆ ಎಂದರು. ಸ್ವಾಮಿ ವಿವೇಕಾನಂದರು ಯುವ ಜನರಿಗೆ ಸ್ಪೂರ್ತಿಯ ಸಂಕೇತ ಎಂದು ಹೇಳಿದರು.</p>



<p>ಕಾರ್ಯಕ್ರಮಕ್ಕೆ ಮೊದಲು ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಆವರಣದ ಮುಖ್ಯಧ್ವಾರದಲ್ಲಿ ಬೆಳ್ಳಿ ಸಾರೋಟಿನಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರವಿಟ್ಟು ನಡೆದ ಮೆರವಣಿಗೆಯಲ್ಲಿ ವಿವಿಧ ಕಲಾತಂಡದೊಡನೆ ಕರೆತರಲಾಯಿತು. ಇದೆ ವೇಳೆ ಸ್ವಾಮಿ ವಿವೇಕಾನಂದರ ಕುರಿತು ಚಿತ್ರಕಲಾ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಕಲಾವಿದರಾದ ಕೆ.ಎನ್. ಶಂಕರಪ್ಪ, ಹೆಚ್.ಎಸ್. ಮಂಜುನಾಥ್ ಇತರರು ಬಿಡಿಸಿದ ವಿವೇಕಾನಂದರ ಚಿತ್ರಕ್ಕೆ ಗಣ್ಯರು ಬಣ್ಣ ತುಂಬಿ ಚಾಲನೆ ನೀಡಿದರು.</p>



<p>ಇದೆ ಸಂದರ್ಭದಲ್ಲಿ ಉತ್ತರ ಪ್ರದೇಶದ ಸತ್ಯನಾರಾಯಣ ಸಿಂಗ್, ಎಸ್.ಡಿ.ಎಂ. ಕಾಲೇಜು ಪ್ರಾಂಶುಪಾಲರಾದ ಶೈಲಜಾ ಪ್ರಸನ್ನ ಇತರರು ಉಪಸ್ಥಿತರಿದ್ದರು. ಗುರುಬಸವರಾಜು ಕಾರ್ಯಕ್ರಮ ನಿರೂಪಿಸಿದರು.</p>
]]></content:encoded>
					
		
		
			</item>
		<item>
		<title>ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು</title>
		<link>https://peepalmedia.com/kidnapping-victim-case-bhavani-revanna-granted-anticipatory-bail/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 18 Jun 2024 07:09:26 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[bengalure]]></category>
		<category><![CDATA[bhavani revanna]]></category>
		<category><![CDATA[devegowada]]></category>
		<category><![CDATA[hasan]]></category>
		<category><![CDATA[hdd]]></category>
		<category><![CDATA[HDK]]></category>
		<category><![CDATA[hdrevanna]]></category>
		<category><![CDATA[jws]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[prajwalrevanna]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=40909</guid>

					<description><![CDATA[ಬೆಂಗಳೂರು: ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಮಹಿಳೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿರುವ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಈ ಆದೇಶವನ್ನು ಪ್ರಕಟಿಸಿದೆ. ‘ಮಹಿಳೆಯರ ರಕ್ಷಣೆ ವಿಚಾರದಲ್ಲಿ ಅವರನ್ನು ಅನಗತ್ಯವಾಗಿ ವಶಕ್ಕೆ ಪಡೆಯುವ ಅಗತ್ಯವಿಲ್ಲ. ಆದಾಗ್ಯೂ ಅವರನ್ನು ತನಿಖೆಗಾಗಿ ಮೈಸೂರು ಮತ್ತು ಹಾಸನ ಹಾಗೂ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಮಹಿಳೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿರುವ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ</p>



<p>‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಈ ಆದೇಶವನ್ನು ಪ್ರಕಟಿಸಿದೆ. </p>



<p>‘ಮಹಿಳೆಯರ ರಕ್ಷಣೆ ವಿಚಾರದಲ್ಲಿ ಅವರನ್ನು ಅನಗತ್ಯವಾಗಿ ವಶಕ್ಕೆ ಪಡೆಯುವ ಅಗತ್ಯವಿಲ್ಲ. ಆದಾಗ್ಯೂ ಅವರನ್ನು ತನಿಖೆಗಾಗಿ ಮೈಸೂರು ಮತ್ತು ಹಾಸನ ಹಾಗೂ ಅಗತ್ಯವಿದ್ದ ಕಡೆ ಕರೆದುಕೊಂಡು ಹೋಗಬಹುದಾಗಿದೆ. ಈಗಾಗಲೇ ಅರ್ಜಿದಾರರು ತನಿಖೆಗೆ ಸಹಕಾರ ನೀಡಿದ್ದಾರೆ. ಅವರಿಗೆ ತನಿಖೆಯ ವೇಳೆ 85 ಪ್ರಶ್ನೆಗಳನ್ನು ಕೇಳಲಾಗಿದೆ. ಅವರು ಎಲ್ಲವಕ್ಕೂ ಉತ್ತರಿಸಿದ್ದಾರೆ. ಪೊಲೀಸರು ಕೇಳಿದ ರೀತಿಯಲ್ಲೇ ಉತ್ತರಿಸಬೇಕು ಎಂದು ಹೇಳಲಾಗುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.</p>



<p><strong>ಮಾದ್ಯಮಗಳಿಗೆ ಬುದ್ಧಿ ಹೇಳಿದ ಕೋರ್ಟ್‌: </strong>ಸಾಮಾನ್ಯ ಜನರು ಮಾಧ್ಯಮಗಳನ್ನು ಗಮನಿಸಿ ಚರ್ಚೆ ನಡೆಸುತ್ತಾರೆ. ಆದರೆ, ಈ ಬಗ್ಗೆ ಯಾರೂ ನಿರ್ಧಾರ ಮಾಡುವುದಕ್ಕೆ ಸಾಧ್ಯವಿಲ್ಲ ಪತ್ರಿಕೆಗಳನ್ನು ನೋಡಿ ನಾವು ಆದೇಶ ನೀಡಲಾಗದು. ನಾಗರಿಕ ಸಮಾಜ ಸ್ವಲ್ಪ ಸಂಯಮ ಪ್ರದರ್ಶನ ಮಾಡಬೇಕು’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>



<p>‘ಸ್ತ್ರೀಯರು ಈ ರೀತಿಯ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಅಂಶಗಳಿರುವಾಗ ವಾರ್ತಾ ಪತ್ರಿಕೆಗಳು, ಎಲೆಕ್ಟ್ರಾನಿಕ್ ಮಾಧ್ಯಮಗಳು ಸಂಯಮದಿಂದ ಇರಬೇಕಾಗುತ್ತದೆ. ಈಗಲೇ ಅಪರಾಧಿ ಎಂದರೆ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆಯಾಗಲಿದೆ. ಮಾಧ್ಯಮಗಳ ವಿಚಾರಣೆ ಪರಿಗಣಿಸಲಾಗದು’ ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ನ್ಯಾಯಪೀಠ ಉಲ್ಲೇಖಿಸಿದೆ.</p>



<p>ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.</p>



<p>ಪ್ರಕರಣದ ಮೊದಲ ಆರೋಪಿ ಎಚ್‌.ಡಿ.ರೇವಣ್ಣ ಬಂಧನಕ್ಕೊಳಗಾಗಿದ್ದರು. ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದಲ್ಲಿ ಭವಾನಿ ಅವರ ಹೆಸರೂ ಕೇಳಿ ಬಂದ ಕಾರಣ ಭವಾನಿ ನಿರೀಕ್ಷಣಾ ಜಾಮೀನು ಕೋರಿದ್ದರು. ಅವರನ್ನು ಬಂಧಿಸದಂತೆ ಹೈಕೋರ್ಟ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಪೀಠ ಮಧ್ಯಂತರ ಜಾಮೀನು ನೀಡಿತ್ತು. ತನಿಖಾಧಿಕಾರಿ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಇದೇ 7ರಂದು ಸೂಚಿಸಿತ್ತು.</p>
]]></content:encoded>
					
		
		
			</item>
		<item>
		<title>ಹೈಕೋರ್ಟ್ ಕೇಸ್‌ಗಳ ಬಗ್ಗೆ ಅಸಡ್ಡೆ ಏಕೆ? ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಚಿವ ಕೃಷ್ಣ ಬೈರೇಗೌಡ</title>
		<link>https://peepalmedia.com/why-ignoring-high-court-cases-krishna-bhairegowda/</link>
		
		<dc:creator><![CDATA[Charan Aivarnad]]></dc:creator>
		<pubDate>Sat, 18 Nov 2023 08:21:01 +0000</pubDate>
				<category><![CDATA[ಹಾಸನ]]></category>
		<category><![CDATA[Bangalore]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[breaking news]]></category>
		<category><![CDATA[congress]]></category>
		<category><![CDATA[congress government]]></category>
		<category><![CDATA[hasan]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[karnataka bjp]]></category>
		<category><![CDATA[krishna bhairegowda]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[revenue department]]></category>
		<category><![CDATA[state politics]]></category>
		<category><![CDATA[trending news]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=32558</guid>

					<description><![CDATA[ಹಾಸನ: ಹಾಸನ‌ ಜಿಲ್ಲೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ 1272 ಪ್ರಕರಣಗಳಿವೆ. ಈ ಪೈಕಿ ಶೇ.70 ರಷ್ಟು ಪ್ರಕರಣಗಳಲ್ಲಿ ತೆಗೆದುಕೊಂಡಿರು ಕ್ರಮ ಶೂನ್ಯ. ಅಲ್ಲದೆ, ನ್ಯಾಯಾಲಯದಲ್ಲಿ ವಕಾಲತ್ತನ್ನೂ ಸಹ ಸಲ್ಲಿಸುವ ಕೆಲಸವನ್ನು ನಮ್ಮ ಅಧಿಕಾರಿಗಳು ಮಾಡಿಲ್ಲ ಎಂದು ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು. ಹಾಸನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, &#8220;ಹಾಸನ ಜಿಲ್ಲೆಯಿಂದ ಅಧಿಕ ಸಂಖ್ಯೆಯ ಪ್ರಕರಣಗಳು ಹೈಕೋರ್ಟ್ ನಲ್ಲಿವೆ. ಆದರೆ, ತಹಶಿಲ್ದಾರರು ಹಾಗೂ ಎಸಿಗಳು ಈ ಬಗ್ಗೆ ಯಾವುದೇ [&#8230;]]]></description>
										<content:encoded><![CDATA[
<p><strong>ಹಾಸನ: </strong>ಹಾಸನ‌ ಜಿಲ್ಲೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ 1272 ಪ್ರಕರಣಗಳಿವೆ. ಈ ಪೈಕಿ ಶೇ.70 ರಷ್ಟು ಪ್ರಕರಣಗಳಲ್ಲಿ ತೆಗೆದುಕೊಂಡಿರು ಕ್ರಮ ಶೂನ್ಯ. ಅಲ್ಲದೆ, ನ್ಯಾಯಾಲಯದಲ್ಲಿ ವಕಾಲತ್ತನ್ನೂ ಸಹ ಸಲ್ಲಿಸುವ ಕೆಲಸವನ್ನು ನಮ್ಮ ಅಧಿಕಾರಿಗಳು ಮಾಡಿಲ್ಲ ಎಂದು ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.</p>



<p>ಹಾಸನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, &#8220;ಹಾಸನ ಜಿಲ್ಲೆಯಿಂದ ಅಧಿಕ ಸಂಖ್ಯೆಯ ಪ್ರಕರಣಗಳು ಹೈಕೋರ್ಟ್ ನಲ್ಲಿವೆ. ಆದರೆ, ತಹಶಿಲ್ದಾರರು ಹಾಗೂ ಎಸಿಗಳು ಈ ಬಗ್ಗೆ ಯಾವುದೇ ಕ್ರಮ ಜರುಗಿಸಿಲ್ಲ.‌ಪರಿಣಾ‌ಮ ಹೈಕೋರ್ಟ್ ಕಂದಾಯ ಇಲಾಖೆಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ ಎಂದು ಸಚಿವರು ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗೆ ಅಸಮಾಧಾನ ಹೊರಹಾಕಿದರು.</p>



<p>ಅಲ್ಲದೆ, ಈ ಬಗ್ಗೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ ಸಚಿವರು, &#8220;ನೀವು ಮಾಡುವ ಕೆಲಸಕ್ಕೆ ಸರ್ಕಾರದ ಜಮೀನು ಖಾಸಗಿಯವರ ಪಾಲಾಗಲು ನಾವು ಸಹಿ ಹಾಕಬೇಕ? ಎಂದು ಕಿಡಿಕಾರಿದರು. ಮುಂದುವರೆದು, ತಹಶಿಲ್ದಾರರು ಈಗಲಾದರೂ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು, ಹೈಕೋರ್ಟ್ ನಲ್ಲಿರುವ ಎಲ್ಲಾ ಪ್ರಕರಣಗಳಲ್ಲೂ ವಕಾಲತ್ತು ಸಲ್ಲಿಸಬೇಕು, ಮೂರು ತಿಂಗಳಲ್ಲಿ ಪ್ರಗತಿ ಕಾಣದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದರು.</p>
]]></content:encoded>
					
		
		
			</item>
		<item>
		<title>ಸೋಲಾರ್‌ ಬೇಲಿ ಮುರಿದು ಕಾಫಿ ತೋಟಕ್ಕೆ ನುಗ್ಗಿದ ಕಾಡಾನೆ ತಣ್ಣೀರ್!‌</title>
		<link>https://peepalmedia.com/elephant-breaks-solar-fence-to-find-its-way-in-viral-video-of-hasan/</link>
		
		<dc:creator><![CDATA[Charan Aivarnad]]></dc:creator>
		<pubDate>Fri, 15 Sep 2023 13:34:46 +0000</pubDate>
				<category><![CDATA[ಹಾಸನ]]></category>
		<category><![CDATA[bengalure]]></category>
		<category><![CDATA[coffee estate]]></category>
		<category><![CDATA[Elephant]]></category>
		<category><![CDATA[forest]]></category>
		<category><![CDATA[forest department]]></category>
		<category><![CDATA[hasan]]></category>
		<category><![CDATA[kannada]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[wild animals]]></category>
		<category><![CDATA[Wild Elephant]]></category>
		<category><![CDATA[writing]]></category>
		<guid isPermaLink="false">https://peepalmedia.com/?p=27904</guid>

					<description><![CDATA[&#160;ಹಾಸನ,ಸಪ್ಟೆಂಬರ್.‌15 : ಹಾಸನ ಸೇರಿದಂತೆ ಮಲೆನಾಡಿನ ಪ್ರದೇಶಗಳಲ್ಲಿ ಕಾಡನೆಗಳ ಹಾವಳಿ ಹೆಚ್ಚಾಗಿದ್ದು ಅನೇಕ ಪ್ರಮಾಣದ ಬೆಳೆ ಹಾನಿ ಮಾತ್ರವಲ್ಲ ಸಾವು ನೋವು ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ ಹಳೇಬಾಗೆಯ ದಿವಾನ್‌ ಎಸ್ಟೇಟ್‌ನಲ್ಲಿ ಕಾಡಾನೆಯೊಂದು ಸೋಲಾರ್‌ ಬೇಲಿಯನ್ನು ಮುರಿದು ಕಾಫಿ ತೋಟಕ್ಕೆ ನುಗ್ಗಲು ಪ್ರಯತ್ನಿಸುತ್ತಿರುವ ವಿಡಿಯೋವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಆರು ತಿಂಗಳಿಂದ ನಾಪತ್ತೆಯಾಗಿದ್ದ ತಣ್ಣೀರ್‌ ಎಂಬ ಕಾಡಾನೆ ಕೊಡಗು ಭಾಗದಿಂದ ಸಕಲೇಶಪುರ ಬಂದಿದೆ. ಅಲ್ಲದೇ, ದಿವಾನ್‌ ಎಸ್ಟೇಟ್‌ನ ಕಾಫಿ ತೋಟದ ಬೇಲಿಗಳನ್ನು ಚಾಣಾಕ್ಷತನದಿಂದ ಮುರಿದು ತೋಟಕ್ಕೆ ನುಗ್ಗಿದೆ. ವಿಡಿಯೋ [&#8230;]]]></description>
										<content:encoded><![CDATA[
<p>&nbsp;ಹಾಸನ,ಸಪ್ಟೆಂಬರ್.‌15 : ಹಾಸನ ಸೇರಿದಂತೆ ಮಲೆನಾಡಿನ ಪ್ರದೇಶಗಳಲ್ಲಿ ಕಾಡನೆಗಳ ಹಾವಳಿ ಹೆಚ್ಚಾಗಿದ್ದು ಅನೇಕ ಪ್ರಮಾಣದ ಬೆಳೆ ಹಾನಿ ಮಾತ್ರವಲ್ಲ ಸಾವು ನೋವು ಸಂಭವಿಸಿದೆ.</p>



<p>ಸಕಲೇಶಪುರ ತಾಲ್ಲೂಕಿನ ಹಳೇಬಾಗೆಯ ದಿವಾನ್‌ ಎಸ್ಟೇಟ್‌ನಲ್ಲಿ ಕಾಡಾನೆಯೊಂದು ಸೋಲಾರ್‌ ಬೇಲಿಯನ್ನು ಮುರಿದು ಕಾಫಿ ತೋಟಕ್ಕೆ ನುಗ್ಗಲು ಪ್ರಯತ್ನಿಸುತ್ತಿರುವ <a href="https://www.instagram.com/reel/CxNiicwPPHk/?utm_source=ig_web_copy_link&amp;igshid=MzRlODBiNWFlZA==">ವಿಡಿಯೋವನ್ನು</a> ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.</p>



<p>ಆರು ತಿಂಗಳಿಂದ ನಾಪತ್ತೆಯಾಗಿದ್ದ ತಣ್ಣೀರ್‌ ಎಂಬ ಕಾಡಾನೆ ಕೊಡಗು ಭಾಗದಿಂದ ಸಕಲೇಶಪುರ ಬಂದಿದೆ. ಅಲ್ಲದೇ, ದಿವಾನ್‌ ಎಸ್ಟೇಟ್‌ನ ಕಾಫಿ ತೋಟದ ಬೇಲಿಗಳನ್ನು ಚಾಣಾಕ್ಷತನದಿಂದ ಮುರಿದು ತೋಟಕ್ಕೆ ನುಗ್ಗಿದೆ.</p>



<p>ವಿಡಿಯೋ ನೋಡಿ: <a href="https://www.instagram.com/reel/CxNiicwPPHk/?utm_source=ig_web_copy_link&amp;igshid=MzRlODBiNWFlZA==">https://www.instagram.com/reel/CxNiicwPPHk/?utm_source=ig_web_copy_link&amp;igshid=MzRlODBiNWFlZA==</a><br></p>
]]></content:encoded>
					
		
		
			</item>
	</channel>
</rss>
