<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Hasana &#8211; Peepal Media</title>
	<atom:link href="https://peepalmedia.com/tag/hasana/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 09 Dec 2024 13:38:13 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Hasana &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಈ ರೀತಿ ಹತ್ತು ಸಮಾವೇಶ ಮಾಡಿದ್ರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ: ಕಾಂಗ್ರೇಸ್‌ಗೆ ರೇವಣ್ಣ ತಿರುಗೇಟು</title>
		<link>https://peepalmedia.com/even-if-you-hold-tens-conventions-like-this-i-wont-be-bothered-revanna/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 09 Dec 2024 13:35:47 +0000</pubDate>
				<category><![CDATA[ರಾಜಕೀಯ]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[Hasana]]></category>
		<category><![CDATA[HD Devegowda]]></category>
		<category><![CDATA[hd kumaraswami]]></category>
		<category><![CDATA[HD Revanna]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<guid isPermaLink="false">https://peepalmedia.com/?p=50469</guid>

					<description><![CDATA[ಹಾಸನ: ಈತರ ಹತ್ತು ಸಮಾವೇಶ ಮಾಡಿ ಹೇಳಿಕೆ ನೀಡಿದರೂ ಏನು ಆಗಲ್ಲ. ನಾನು ತಲೆ ಕೆಡಿಸಿಕೊಳ್ಳಲ್ಲ. ಕೇಳಿದ ಸಾಕ್ಷಿಗುಡ್ಡೆ ಬಗ್ಗೆ ಪ್ರಸ್ತಾಪಿಸಿದಲ್ಲದೇ ಈಗ ಕಾಂಗ್ರೆಸ್ ಪಕ್ಷ ಇಲ್ಲಾ. ಇರೋದು ನಕಲಿ ಕಾಂಗ್ರೆಸ್ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿರುಗೇಟು ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೇವಣ್ಣ, &#8220;ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ 28 ಸಾವಿರ ಕೋಟಿ ಸಾಲಾಮನ್ನಾ ಮಾಡಿದ್ರು. ಯಾವ ಆಂದೋಲನ ಇದು? ಈಗ ಜನರು ಸಂಕಷ್ಟದಲ್ಲಿ ಇದಾಗೆ ಒಮ್ಮೆ ರೈತರ ಸಾಲಾ [&#8230;]]]></description>
										<content:encoded><![CDATA[
<pre class="wp-block-code"><code><strong>ಈ ರೀತಿ ಹತ್ತು ಸಮಾವೇಶ ಮಾಡಿದ್ರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ಈಗ ಇರುವುದು ನಕಲಿ ಕಾಂಗ್ರೆಸ್ ಎಂದು ಕಾಂಗ್ರೇಸ್‌ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಹೆಚ್.ಡಿ. ರೇವಣ್ಣ</strong></code></pre>



<p><strong>ಹಾಸನ: </strong>ಈತರ ಹತ್ತು ಸಮಾವೇಶ ಮಾಡಿ ಹೇಳಿಕೆ ನೀಡಿದರೂ ಏನು ಆಗಲ್ಲ. ನಾನು ತಲೆ ಕೆಡಿಸಿಕೊಳ್ಳಲ್ಲ. ಕೇಳಿದ ಸಾಕ್ಷಿಗುಡ್ಡೆ ಬಗ್ಗೆ ಪ್ರಸ್ತಾಪಿಸಿದಲ್ಲದೇ ಈಗ ಕಾಂಗ್ರೆಸ್ ಪಕ್ಷ ಇಲ್ಲಾ. ಇರೋದು ನಕಲಿ ಕಾಂಗ್ರೆಸ್ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿರುಗೇಟು ನೀಡಿದರು.</p>



<p>ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೇವಣ್ಣ, &#8220;ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ 28 ಸಾವಿರ ಕೋಟಿ ಸಾಲಾಮನ್ನಾ ಮಾಡಿದ್ರು. ಯಾವ ಆಂದೋಲನ ಇದು? ಈಗ ಜನರು ಸಂಕಷ್ಟದಲ್ಲಿ ಇದಾಗೆ ಒಮ್ಮೆ ರೈತರ ಸಾಲಾ ಮನ್ನಾ ಮಾಡಲಿ! ಐದು ಗ್ಯಾರಂಟಿ ಕೊಟ್ಟಿದಾರೆ ಇನ್ನೊಂದು ಗ್ಯಾರಂಟಿ ಕೊಡಿ. ಹಾಸನದಲ್ಲಿ ಆರು ಜಿಲ್ಲೆ ಜನ ಕರೆತಂದು ಸಮಾವೇಶ ಮಾಡಿದ್ದಾರೆ. ಜಿಲ್ಲೆಗೆ ಇವರ ಕೊಡುಗೆ ಏನಿದೆ? ಸ್ವಾಭಿಮಾನಿ ಅಂತೆ, ಜನ ಕಲ್ಯಾಣ ಅಂತೆ. ದೇವೇಗೌಡರು ಪ್ರಧಾನಮಂತ್ರಿ ಇದ್ದಾಗ ಕೇಂದ್ರ ಸರ್ಕಾರದ ನಬಾರ್ಡ್‌ನಿಂದ ರೈತರಿಗೆ ಕಾರ್ಯಕ್ರಮ ರೂಪದಲ್ಲಿ ಸಾಲ ಕೊಡುವಂತೆ ಮಾಡಿದ್ರು. ನಬಾರ್ಡ್ ಮೂಲಕ ರೈತರಿಗೆ ಲೋನ್ ಕೊಡುವುದು, ರಸ್ತೆಗೆ ಹಣ ಕೊಡುವುದು ಮಾಡಿದ್ದು, ದೇವೇಗೌಡರು ಏನು ಪ್ರಸ್ತಾವನೆ ಮಾಡಲ್ಲ ಅಂತ ಇವತ್ತು ರಾಜ್ಯ ಸರ್ಕಾರದವರು ಹೇಳುತ್ತಿದ್ದಾರೆ. ನಬಾರ್ಡ್‌ನಿಂದ ಅಪೆಕ್ಸ್ ಬ್ಯಾಂಕ್‌ಗೆ 70% ಹಣ ಕೊಡುತ್ತಿದ್ದರು. ಕೇಂದ್ರದಿಂದ ಸಿಗುವ ಸೌಲಭ್ಯವನ್ನು ರಾಜ್ಯಕ್ಕೆ ದೊರಕುವಂತೆ ಮಾಡಿದ್ದೇ ದೇವೇಗೌಡರು. ಕುಮಾರಸ್ವಾಮಿ ಸಾಲಮನ್ನಾ ಮಾಡದಿದ್ದರೆ 21 ಬ್ಯಾಂಕ್‌ಗಳು ಮುಳುಗಿ ಹೋಗುತ್ತಿದ್ದವು. ದೇವೇಗೌಡರನ್ನ ಸಾಕ್ಷಿ ಗುಡ್ಡೆ ಕೇಳ್ತಾರೆ. ಅಪೆಕ್ಸ್ ಬ್ಯಾಂಕ್‌ಗೆ 9162 ಕೋಟಿ ಕೊಡಿ ಎಂದು ಕೇಂದ್ರ, ಆರ್‌ಬಿಐ, ನಬಾರ್ಡ್‌ಗೆ ದೇವೇಗೌಡರು ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರವನ್ನು ವಿಶ್ವಾಸಕ್ಕೆ ಇಟ್ಟುಕೊಳ್ಳಬೇಕು. ಆದರೇ ಬೆಳಿಗ್ಗೆ ಎದ್ದರೆ ಪ್ರಧಾನಮಂತ್ರಿಯನ್ನು ಬೈತಾರೆ. ವಿಶ್ವಾಸ ಇಟ್ಟುಕೊಂಡರೆ ಮಾತ್ರ ಏನಾದರೂ ಕೊಡ್ತಾರೆ ಎಂದು ಟಾಂಗ್ ನೀಡಿದರು. ಕುಮಾರಸ್ವಾಮಿ ಹಾಸನ ಜಿಲ್ಲೆಯಲ್ಲಿ ಸಹಕಾರ ಬ್ಯಾಂಕ್‌ಗಳ 531 ಕೋಟಿ ಸಾಲಮನ್ನ ಮಾಡಿದ್ದು, 9600 ಕೋಟಿ ರಾಷ್ಟ್ರೀಯ ಬ್ಯಾಂಕ್‌ಗಳ ಸಾಲಮನ್ನ ಆಗಿದೆ. ಕಾಂಗ್ರೆಸ್‌ನವರೇ ರೈತರ ಬಗ್ಗೆ ಮಾತನಾಡುತ್ತಿರಲ್ಲಾ ಮೊದಲು ರೈತರ ಸಾಲಮನ್ನ ಮಾಡಿ. ದೇವೇಗೌಡರ ರಾಜಕೀಯ ಮುಗಿದು ಹೋಯ್ತು ಅಂತ ಬಾಷಣ ಮಾಡ್ತಾರೆ. ಈ ಜಿಲ್ಲೆಗೆ ಕಾಂಗ್ರೆಸ್ ಪಕ್ಷ ಏನು ಕೊಡುಗೆ ಕೊಟ್ಟಿದೆ ಎಂಬುದನ್ನು ಹೇಳಲಿ. ಬ್ರಿಟಿಷರ ಕಾಲದಲ್ಲಿ ಆಗಿದ್ದ ರೈಲ್ವೆ ಮಾರ್ಗ ಕಿತ್ತುಕೊಂಡು ಹೋದರವರು ಕಾಂಗ್ರೆಸ್‌ನವರು,&#8221; ಎಂದು ಕಾಂಗ್ರೇಸಿನ ಮೇಲೆ ಹರಿಹಾಯ್ದರು.</p>



<p>&#8220;ದೇವೇಗೌಡರು ಪ್ರಧಾನಮಂತ್ರಿಯಾಗಿ ಹತ್ತುವರೆ ತಿಂಗಳಿನಲ್ಲಿ ರೈಲ್ವೆ ಮಾರ್ಗ ಮಾಡಿದ್ರು. ಡಿಸಿಎಂ ಈ ಜಿಲ್ಲೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು. ರೈಲ್ವೆ ಮಾರ್ಗ, ಕೋರ್ಟ್, ಬಸ್ಟಾಂಡ್ ಕಟ್ಟಿದ್ದು ಯಾರು? ಇವೆಲ್ಲಾ ಸಾಕ್ಷಿ ಗುಡ್ಡೆಗಳಲ್ಲವಾ! ಗಿರಾಕಿಗಳೇ ಆಸ್ಪತ್ರೆ, ಇಂಜಿನಿಯರ್, ಮೆಡಿಕಲ್ ಕಾಲೇಜು, ಪಶುವೈದ್ಯಕೀಯ ಕಾಲೇಜು, ನರ್ಸಿಂಗ್ ಕಾಲೇಜುಗಳನ್ನು ನೋಡಿ.&#8221;</p>



<p>&#8220;ಈ ಜಿಲ್ಲೆಯ ಜನ ದೇವೇಗೌಡರಿಗೆ, ನಮ್ಮ ಕುಟುಂಬಕ್ಕೆ ರಾಜಕೀಯ ಶಕ್ತಿ ಕೊಟ್ಟಿದ್ದಾರೆ. ಅವರ ಋಣ ನಮ್ಮ ಮೇಲೆ ಇದೆ, ಅದನ್ನು ತೀರಿಸುತ್ತೇವೆ. ನನ್ನ ಕೈಲಾದ ಕೆಲಸವನ್ನು ಈ ಜಿಲ್ಲೆಗೆ ಮಾಡುತ್ತೇನೆ. ಇಂತಹ ಹತ್ತು ಸಮಾವೇಶ ಮಾಡಿದ್ರೆ ನಾನೇನು ತಲೆ ಕೆಡಿಸಿಕೊಡಲ್ಲ. ಇವರಿಗೆ ತಾಕತ್ ಇದ್ದರೆ ಕಾಂಗ್ರೆಸ್ ಬಿಟ್ಟು ಬಂದು ನಮ್ಮ ರೀತಿ ಪಕ್ಷ ಕಟ್ಟಲಿ,&#8221; ಎಂದು ಸವಾಲು ಎಸೆದರು.</p>



<p>&#8220;ಹಿಂದಿನ ಕಾಂಗ್ರೆಸ್ ಈಗ ಇಲ್ಲ, ಈಗ ಇರುವುದು ನಕಲಿ ಕಾಂಗ್ರೆಸ್. ಒಕ್ಕಲಿಗ ನಾಯಕರನ್ನು ಬೆಳೆಸಿಲ್ಲ ಅಂತಾರೆ, ಇವರು ಬಿಎಲ್ ಶಂಕರ್ ಕರೆದೊಯ್ದು ಏನು ಮಾಡಿದ್ರು. ನಮ್ಮಿಂದ ವಲಸೆ ಹೋದವರು ಅಲ್ಲಿ ಇರುವವರು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ವಾಗ್ದಾಳಿ ನಡೆಸಿದರು. ಜೇನುಕಲ್ಲು ಸಿದ್ದೇಶ್ವರನೇ ಇದಕ್ಕೆ ಸಾಕ್ಷಿ ಎಂದರು. ಮೂರು ಚುನಾವಣೆಯಲ್ಲಿ ಒಂದು ರೂಪಾಯಿ ಖರ್ಚು ಮಾಡಿಸದೆ ಎಲೆಕ್ಷನ್ ಮಾಡಿ ಗೆಲ್ಲಿಸಿಕೊಂಡು ಬಂದಿದ್ದೇನೆ. ಇವರೆಲ್ಲ ಜೆಡಿಎಸ್ ಮುಗಿದುಹೋಯ್ತು ಅಂತಾರೆ. ೨೦೨೮ ಕ್ಕೆ ಜೆಡಿಎಸ್ ಏನು ಎಂದು ಗೊತ್ತಾಗುತ್ತದೆ ಎಂದು ಪಕ್ಷ ಬಿಟ್ಟವರಿಗೆ ಬಿಸಿ ಮುಟ್ಟಿಸಿದರು. ಹಾಸನದಲ್ಲಿ ಯಾವಾಗ ಸಮಾವೇಶ ಮಾಡಬೇಕು ಎಲ್ಲರೂ ಕೂತು ಚರ್ಚೆ ಮಾಡುತ್ತೇವೆ. ದೇವೇಗೌಡರು ಮೇಕೆದಾಟು ಬಗ್ಗೆ ಪಾರ್ಲಿಮೆಂಟ್ ನಲ್ಲಿ ಮಾತನಾಡಿದ್ದಾರೆ. ಹಾಸನದ ಔಟರ್ ರಿಂಗ್ ರೋಡ್ ಗೆ ೭೫೦ ಕೋಟಿ ಅನುದಾನಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ,&#8221; ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>



<p>ಈ ಸಂದರ್ಭದಲ್ಲಿ ಹೆಚ್.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜು, ಜೆಡಿಎಸ್ ಮುಖಂಡರಾದ ಗಿರೀಶ್ ಚನ್ನವೀರಪ್ಪ, ಬಿದರಿಕೆರೆ ಜಯರಾಂ, ಜಗದೀಶ್, ನಾಗರಾಜು ಇತರರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು: ಸಿ.ಎಂ</title>
		<link>https://peepalmedia.com/bjp-jds-are-the-ultimate-traitors-who-are-insulting-the-beneficiaries-of-five-guarantees/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 05 Dec 2024 11:03:40 +0000</pubDate>
				<category><![CDATA[ರಾಜ್ಯ]]></category>
		<category><![CDATA[ಹಾಸನ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[dks]]></category>
		<category><![CDATA[dkshivakumar]]></category>
		<category><![CDATA[H D KUMARASWAMY]]></category>
		<category><![CDATA[Hasana]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=50254</guid>

					<description><![CDATA[ಹಾಸನ ಡಿ. 5: ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಹಾಸನದಲ್ಲಿ ನಡೆದ ಬೃಹತ್ ಜನಕಲ್ಯಾಣೋತ್ಸವ ಸಮಾವೇಶವದಲ್ಲಿ ಮಾತನಾಡುತ್ತಾ, &#8220;ಡಾ.ರಾಜ್ ಅವರು ಅಭಿಮಾನಿ ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರರ ಬಂಧುಗಳೇ ದೇವರು,&#8221; ಎನ್ನುತ್ತಾ ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ʼಆಶೀರ್ವದಿಸಿದ್ದಕ್ಕೆʼ ಧನ್ಯವಾದ ಅರ್ಪಿಸಿದರು. ಹಾಸನದ ಮಹಾನ್ ನಾಯಕರ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯನ್ನು [&#8230;]]]></description>
										<content:encoded><![CDATA[
<ul class="wp-block-list">
<li>ಹಾಸನದ ಬೃಹತ್ ಜನ ಸಮಾವೇಶದ ಯಶಸ್ಸಿಗೆ ಸ್ವಾಭಿಮಾನಿ ಒಕ್ಕೂಟ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದಿಸಿದ ಸಿಎಂ</li>



<li>ಡಾ.ರಾಜ್ ಅವರಿಗೆ ಅಭಿಮಾನಿಗಳೇ ದೇವರು-ನಮಗೆ ಮತದಾರರೇ ದೇವರು: ಸಿ.ಎಂ</li>



<li>ಗ್ಯಾರಂಟಿ ಪಡೆದದ್ದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಜನದ್ರೋಹಿಗಳು: ಸಿ.ಎಂ ಆಕ್ರೋಶ</li>



<li>ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪ ಅವರ ಮಾತು ಈಗ ನಿಜವಾಗಿದೆ: ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ್ದರ ಫಲ ಈಗ ದೇವೇಗೌಡರು ನೋಡುವಂತಾಗಿದೆ: ಸಿಎಂ</li>
</ul>



<p><strong>ಹಾಸನ ಡಿ. 5: </strong>ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.</p>



<p>ಹಾಸನದಲ್ಲಿ ನಡೆದ ಬೃಹತ್ ಜನಕಲ್ಯಾಣೋತ್ಸವ ಸಮಾವೇಶವದಲ್ಲಿ ಮಾತನಾಡುತ್ತಾ, &#8220;ಡಾ.ರಾಜ್ ಅವರು ಅಭಿಮಾನಿ ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರರ ಬಂಧುಗಳೇ ದೇವರು,&#8221; ಎನ್ನುತ್ತಾ ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ʼಆಶೀರ್ವದಿಸಿದ್ದಕ್ಕೆʼ ಧನ್ಯವಾದ ಅರ್ಪಿಸಿದರು.</p>



<p>ಹಾಸನದ ಮಹಾನ್ ನಾಯಕರ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯನ್ನು ಚನ್ನಪಟ್ಟಣದಲ್ಲಿ , ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗನನ್ನು ಈಗ್ಗಾಂವಿಯಲ್ಲಿ ಜನ ಸೋಲಿಸಿ ನಮಗೆ ಆಶೀರ್ವದಿಸಿದ್ದಾರೆ ಮುಖ್ಯಮಂತ್ರಿ ಹೇಳಿದ್ದಾರೆ.</p>



<p>&#8220;ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಆಗುವಷ್ಟು ಬಹುಮತ ಈ ರಾಜ್ಯದ ಜನರೆ ಯಾವತ್ತೂ ಕೊಟ್ಟಿಲ್ಲ. ಒಮ್ಮೆ ಕಾಂಗ್ರೆಸ್ ಬೆಂಬಲದಲ್ಲಿ ಮತ್ತೊಮ್ಮೆ ಬಿಜೆಪಿ ಬೆಂಬಲದಲ್ಲಿ ಮುಖ್ಯಮಂತ್ರಿ ಆದರು. ಬಳಿಕ ಎರಡೂ ಪಕ್ಷಗಳಿಗೆ ವಂಚಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಸುಭದ್ರ ಸರ್ಕಾರ ಕೊಟ್ಟಿದೆ. ಮಾತ್ರವಲ್ಲ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. 2013 ರಲ್ಲಿ ಕೊಟ್ಟ ಮಾತಿನಂತೆ ಹಲವಾರು ಭಾಗ್ಯಗಳನ್ನು ಜಾರಿ ಮಾಡಿದೆವು‌. ಈ ಬಾರಿ ಐದಕ್ಕೆ ಐದೂ ಗ್ಯಾರಂಟಿಗಳ ಜೊತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನೂ ಈಡೇರಿಸುತ್ತಿದ್ದೇವೆ,&#8221; ಎಂದು ಸಿದ್ದರಾಮಯ್ಯ ಹೇಳಿದ್ದಾರೆ.</p>



<p>&#8220;ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಪ್ರಧಾನಿ ಮೋದಿ ಅವರ ಸರ್ಕಾರ ನಾವು ದುಡ್ಡು ಕೊಡ್ತೀವಿ ಅಂದರೂ ಅಕ್ಕಿ ಕೊಡಲಿಲ್ಲ. ಇಂಥಾ ಜನದ್ರೋಹಿ ಸರ್ಕಾರ ಬಿಜೆಪಿಯದ್ದು. ನಾವು ಐದು ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯದ ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಈ ಐದು ಗ್ಯಾರಂಟಿಗಳನ್ನು ಪಡೆಯುತ್ತಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ದೊಡ್ಡ ಜನದ್ರೋಹಿಗಳು. ಕೇಂದ್ರದಲ್ಲಿ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿಯವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಏಕೆ? ಬೆಂಗಳೂರಿನ ಜನತೆಗೆ ನೀರು ಬೇಕಾಗಿದೆ. ಕೊಡಿಸಲಿ,&#8221; ಎಂದು ಸವಾಲು ಹಾಕಿದರು.</p>



<p>&#8220;ಮಾಜಿ ಪ್ರಧಾನಿ ದೇವೇಗೌಡರು ನನಗಿಂತ 15 ವರ್ಷ ಹಿರಿಯರು. ಅವರು ಅಷ್ಟೆ ಘನತೆಯಿಂದ ಮಾತಾಡಬೇಕಿತ್ತು. ಯಾವತ್ತೂ ಗರ್ವ ತೋರಿಸದ ನನಗೆ, &#8220;ಸಿದ್ದರಾಮಯ್ಯ ಅವರ ಗರ್ವಭಂಗ ಮಾಡ್ತೀನಿ&#8221; ಎಂದರು. ಇದನ್ನು ನೀವು ಒಪ್ಪಿಕೊಳ್ಳುತ್ತೀರಾ, ಸಹಿಸುತ್ತೀರಾ? ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜನತೆ ಯಾವುದೇ ಕಾರಣಕ್ಕೂ ಸಹಿಸಲ್ಲ. ಹಾಸನದ ಹೆಣ್ಣು ಮಕ್ಕಳು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ರೈತರ ಪಾಲಿನ ಸಾಲದಲ್ಲಿ ಶೇ58 ರಷ್ಟನ್ನು ಕಡಿತಗೊಳಿಸಿದೆ. ಇದರಿಂದ ಹಾಸನದ ರೈತರು ಮತ್ತು ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಮಗ ಎಂದುಕೊಂಡಿರುವ ಕುಮಾರಸ್ವಾಮಿಯವರು ಏಕೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿಲ್ಲ. ನಬಾರ್ಡ್ ನಿಂದ ಆಗಿರುವ ಅನ್ಯಾಯವನ್ನು ಕುಮಾರಸ್ವಾಮಿ ಅವರು ಏಕೆ ಸರಿಪಡಿಸುತ್ತಿಲ್ಲ? ಕಳೆದ ಹಣಕಾಸು ವರ್ಷದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಆಗಿರುವ 11 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯಕ್ಕೆ ಕೊಡಿಸಲು ಬಿಜೆಪಿ-ಜೆಡಿಎಸ್ ಏಕೆ ಬಾಯಿ ಬಿಡುತ್ತಿಲ್ಲ?&#8221; ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.</p>



<p>&#8220;ದೇವೇಗೌಡರು ರಾಜಕೀಯವಾಗಿ ಒಕ್ಕಲಿಗ ನಾಯಕರನ್ನು ನಿರಂತರವಾಗಿ ಮುಗಿಸುತ್ತಿದ್ದಾರೆ. ಬಚ್ಚೇಗೌಡರು, ವೈ.ಕೆ.ರಾಮಯ್ಯ, ಬೈರೇಗೌಡರು, ಕೃಷ್ಣಪ್ಪ, ಚಲುವರಾಯಸ್ವಾಮಿ ಸೇರಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ದೇವೇಗೌಡರು ರಾಜಕೀಯವಾಗಿ ಮುಗಿಸಿದರು. ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪ ಅವರು ಆಗಲೇ ಈ ಪಾಪದ ಹೊರೆಯನ್ನು ಹೊರಬೇಕಾಗುತ್ತದೆ ಎಂದು ದೇವೇಗೌಡರಿಗೆ ಹೇಳಿದ್ದರು. ಈಗ ಒಕ್ಕಲಿಗ ನಾಯಕ ಕೃಷ್ಣಪ್ಪ ಅವರ ಮಾತು ನಿಜವಾಗಿದೆ. ನಾನು ಮತ್ತು ಜಾಲಪ್ಪ ಒಟ್ಟಾಗಿ ರಾಮಕೃಷ್ಣಹೆಗಡೆಯವರ ಬದಲಿಗೆ ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದೆವು. ಆಮೇಲೆ ನನ್ನನ್ನೇ ಪಕ್ಷದಿಂದ ಉಚ್ಚಾಟಿಸಿದರು,&#8221; ಎಂದು ಟೀಕಿಸಿದರು. </p>



<p><strong>ಹಾಸನ ಮತ್ತೆ ಕಾಂಗ್ರೆಸ್ ತೆಕ್ಕೆಗೆ</strong></p>



<p>&#8220;ಕಾಂಗ್ರೆಸ್ ಸರ್ಕಾರ ಮಾತ್ರ ಸುಭದ್ರ ಸರ್ಕಾರ ಕೊಡಲು ಸಾಧ್ಯ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿಗಳಿಸಲಿದೆ. ಇದು ಶತಸಿದ್ದ ಎಂದು ಭರವಸೆ. ಹಾಸನದಲ್ಲಿ ಈ ಮಟ್ಟದ ದೊಡ್ಡ ಜನ ಕಲ್ಯಾಣ ಕಾಂಗ್ರೆಸ್ ಸಮಾವೇಶ ಹಿಂದೆಂದೂ ಆಗಿರಲಿಲ್ಲ. ಇದರಲ್ಲಿ ಸ್ವಾಭಿಮಾನಿ ಒಕ್ಕೂಟಗಳು, ಕಾಂಗ್ರೆಸ್ಸೇತರ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷ ಒಟ್ಟಾಗಿ ಶ್ರಮಿಸಿದ್ದಾರೆ,&#8221; ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>



<p></p>



<p></p>



<p></p>
]]></content:encoded>
					
		
		
			</item>
		<item>
		<title>ಡಿವಿಪಿನಿಂದ ಹಾಸನದ ಪೆನ್ ಡ್ರೈವ್ ಪ್ರಕರಣದ ಖಂಡನೆ: ಸಂತ್ರಸ್ತರಿಗೆ ಮಹಿಳೆಯರಿಗೆ ತುರ್ತು ರಕ್ಷಣೆಗೆ ಆಗ್ರಹ</title>
		<link>https://peepalmedia.com/dvp-condumned-hasana-pendrive-scandle/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 30 Apr 2024 10:11:04 +0000</pubDate>
				<category><![CDATA[ಅಪರಾಧ]]></category>
		<category><![CDATA[DVP]]></category>
		<category><![CDATA[Hasana]]></category>
		<category><![CDATA[JDS]]></category>
		<category><![CDATA[pendrive]]></category>
		<category><![CDATA[Prajwal Revanna]]></category>
		<category><![CDATA[revanna]]></category>
		<category><![CDATA[sex scandle]]></category>
		<guid isPermaLink="false">https://peepalmedia.com/?p=38973</guid>

					<description><![CDATA[ವಿಜಯಪುರ, ಏ.30 : ಹಾಸನದಲ್ಲಿ ಖ್ಯಾತ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯರು ಹಾಗೂ ಸಂಸದರಾದ ಪ್ರಜ್ವಲ್ ರೆವಣ್ಣ ಸಾವಿರಾರು ಹೆಣ್ಣು ಮಕ್ಕಳನ್ನು ಒತ್ತಾಯಪೂರ್ವಕ ಕಾಮಕಾಂಡದಲ್ಲಿ ಬಳಸಿಕೊಂಡಿರುವ ವಿಡಿಯೋಗಳಿರುವ ಪೆನ್ ಡ್ರೈವ್ ಗಳು ಹಾಸನದ ಹಾದಿ ಬೀದಿಗಳಲ್ಲಿ ಚೆಲ್ಲಲಾಗಿದೆ ಈ ಆಘಾತಕಾರಿ ಸಂಗತಿಯನ್ನು ಇಡೀ ರಾಜ್ಯವೇ ಖಂಡಿಸುತ್ತಿದೆ. ಈ ಘಟನೆಯ ಕುರಿತು ರಾಜ್ಯ ಸರ್ಕಾರವು ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು, ಈ ಭೀಕರ ಘಟನೆಯಲ್ಲಿ ತೊಡಗಿದ ವ್ಯಕ್ತಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಈ ಕೂಡಲೇ ಬಂಧಿಸಿ ಕಾನೂನು ಕ್ರಮ [&#8230;]]]></description>
										<content:encoded><![CDATA[
<p><strong>ವಿಜಯಪುರ, ಏ.30</strong> : ಹಾಸನದಲ್ಲಿ ಖ್ಯಾತ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯರು ಹಾಗೂ ಸಂಸದರಾದ ಪ್ರಜ್ವಲ್ ರೆವಣ್ಣ ಸಾವಿರಾರು ಹೆಣ್ಣು ಮಕ್ಕಳನ್ನು ಒತ್ತಾಯಪೂರ್ವಕ ಕಾಮಕಾಂಡದಲ್ಲಿ ಬಳಸಿಕೊಂಡಿರುವ ವಿಡಿಯೋಗಳಿರುವ ಪೆನ್ ಡ್ರೈವ್ ಗಳು ಹಾಸನದ ಹಾದಿ ಬೀದಿಗಳಲ್ಲಿ ಚೆಲ್ಲಲಾಗಿದೆ ಈ ಆಘಾತಕಾರಿ ಸಂಗತಿಯನ್ನು ಇಡೀ ರಾಜ್ಯವೇ ಖಂಡಿಸುತ್ತಿದೆ. ಈ ಘಟನೆಯ ಕುರಿತು ರಾಜ್ಯ ಸರ್ಕಾರವು ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು, ಈ ಭೀಕರ ಘಟನೆಯಲ್ಲಿ ತೊಡಗಿದ ವ್ಯಕ್ತಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಈ ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್ ಅಜಮನಿ ಹಾಗೂ (DVP) ಜಿಲ್ಲಾ ಸಮಿತಿಯು ಆಗ್ರಹಿಸಿದೆ.</p>



<p>ಇಂದು ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿ, ಈ ವೇಳೆ ಮಾತನಾಡಿದ ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್, ಅಮಾನುಷ ಲೈಂಗಿಕ ದೌರ್ಜನ್ಯಕ್ಕೆ ಬಲಿಯಾದ ಸಂತ್ರಸ್ತ ನೂರಾರು ಹೆಣ್ಣುಮಕ್ಕಳಿಗೆ ರಕ್ಷಣೆ ಹಾಗೂ ಆರೈಕೆ ಮಾಡುವುದು ಜರೂರಾಗಿದೆ ಎಂದರು. ಕೆಲವು ಹೆಣ್ಣು ಮಕ್ಕಳು ಆತ್ಮಹತ್ಯೆಯಂತಹ ಘೋರ ಮಾರ್ಗ ಹಿಡಿದಿರುವ ವರದಿಗಳು ಬಂದಿವೆ. ಸರ್ಕಾರವು ಕೂಡಲೇ ಈ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಹಾಗೂ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಹಾಗೂ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ಪರಿಷತ್ ಸರ್ಕಾರಕ್ಕೆ ಆಗ್ರಹಿಸುತ್ತದೆ ಎಂದು ಹೇಳಿದರು.</p>



<p>ಇದೇ ವೇಳೆ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ನ ರಾಜ್ಯ ಸಂಚಾಲಕರಾದ ಬಾಲಾಜಿ ಎಂ ಕಾಂಬಳೆ, ನಾಡಿನ ವಿಧ್ಯಾರ್ಥಿ ಯುವಜನರು ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಶಿಕ್ಷಣ, ಉದ್ಯೋಗವನ್ನು ಕಲ್ಪಿಸಿಕೊಡುವ ಮತ್ತು ಮಹಿಳೆಯರಿಗೆ ರಕ್ಷಣೆ ಜೊತೆಗೆ ಗೌರವದಿಂದ ಕಾಣುವ ಅಭ್ಯರ್ಥಿಗಳಿಗೆ ತಮ್ಮ ಅಮೂಲ್ಯವಾದ ಮತ ಚಲಾಯಿಸುವ ಮೂಲಕ ಸಭ್ಯ ಅಭ್ಯರ್ಥಿಗಳಿಗೆ ತಮ್ಮ ಜನಪ್ರತಿನಿಧಿಯಾಗಿ ಆಯ್ಕೆ ಮಾಡಿಕೊಳ್ಳಬೇಕೆಂದು ವಿಧ್ಯಾರ್ಥಿ ಯುವಜನರಲ್ಲಿ ಮನವಿ ಮಾಡಿದರು.</p>



<p>ಈ ವೇಳೆ ಹಲವು ಪರಿಷತ್ ಮುಖಂಡರು, ದಲಿತ ಸಂಘಟನೆ ಮುಖಂಡರು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಪ್ರಜ್ವಲ್‌ ವಿಡಿಯೋ ಕೊಟ್ಟಿದ್ದು ನಾನೇ: ಮಾಜಿ ಚಾಲಕ ಕಾರ್ತಿಕ್</title>
		<link>https://peepalmedia.com/prajwal-revannas-former-driver-gave-his-videos/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 30 Apr 2024 06:44:31 +0000</pubDate>
				<category><![CDATA[ಅಪರಾಧ]]></category>
		<category><![CDATA[bhavani revanna]]></category>
		<category><![CDATA[Hasana]]></category>
		<category><![CDATA[JDS]]></category>
		<category><![CDATA[pendrive]]></category>
		<category><![CDATA[prajwal]]></category>
		<category><![CDATA[Prajwal Revanna]]></category>
		<category><![CDATA[revanna]]></category>
		<category><![CDATA[sex scandle]]></category>
		<category><![CDATA[Sexual abuse]]></category>
		<guid isPermaLink="false">https://peepalmedia.com/?p=38951</guid>

					<description><![CDATA[ಹಾಸನ: ಪ್ರಜ್ವಲ್​​‌ ಅಶ್ಲೀಲ ವಿಡಿಯೋ ನಾನೇ ಕೊಟ್ಟಿದ್ದು ನಾನೇ ಎಂದು ಪ್ರಜ್ವಲ್‌ ಮಾಜಿ ಚಾಲಕ ಕಾರ್ತಿಕ್‌ ಬಹಿರಂಗ ಪಡಿಸಿದ್ದಾರೆ. &#8220;ನಾನು ಅವರ ಬಳಿಕ ಕೆಲಸ ಮಾಡುತ್ತಿದ್ದೆ, ಅವರಿಂದ ನನಗೆ ಅನ್ಯಾಯವಾದ ಸಲುವಾಗಿ ನಾನು ಅಲ್ಲಿ ಕೆಲಸ ಬಿಟ್ಟೆ ಅಂತ ಹೇಳಿದೆ. ಇನ್ನೂ ನನ್ನ ವಿರುದ್ದ ನ್ಯಾಯಾಲಯದಿಂದ ಮಾನ ಹಾನಿ ಪ್ರಕರಣವನ್ನು ಪ್ರಕಟ ಮಾಡದಂತೆ ಪ್ರಜ್ವಲ್‌ ಆದೇಶವನ್ನು ತಂದರು,&#8221; ಎಂದು ಕಾರ್ತಿಕ್‌ ವಿಡಿಯೋದಲ್ಲಿ ಹೇಳಿದ್ದಾರೆ. &#8220;ಇನ್ನೂ ನನ್ನ ಬಳಿ ಇರುವ ವಿಡಿಯೋ, ಪೋಟೋಗಳನ್ನು ಕೊಡುವಂತೆ ದೇವರಾಜೇಗೌಡರು ಕೇಳಿದರು. ಇದಲ್ಲದೇ [&#8230;]]]></description>
										<content:encoded><![CDATA[
<p><strong>ಹಾಸನ: </strong>ಪ್ರಜ್ವಲ್​​‌ ಅಶ್ಲೀಲ ವಿಡಿಯೋ ನಾನೇ ಕೊಟ್ಟಿದ್ದು ನಾನೇ ಎಂದು ಪ್ರಜ್ವಲ್‌ ಮಾಜಿ ಚಾಲಕ ಕಾರ್ತಿಕ್‌ ಬಹಿರಂಗ ಪಡಿಸಿದ್ದಾರೆ. </p>



<p>&#8220;ನಾನು ಅವರ ಬಳಿಕ ಕೆಲಸ ಮಾಡುತ್ತಿದ್ದೆ, ಅವರಿಂದ ನನಗೆ ಅನ್ಯಾಯವಾದ ಸಲುವಾಗಿ ನಾನು ಅಲ್ಲಿ ಕೆಲಸ ಬಿಟ್ಟೆ ಅಂತ ಹೇಳಿದೆ. ಇನ್ನೂ ನನ್ನ ವಿರುದ್ದ ನ್ಯಾಯಾಲಯದಿಂದ ಮಾನ ಹಾನಿ ಪ್ರಕರಣವನ್ನು ಪ್ರಕಟ ಮಾಡದಂತೆ ಪ್ರಜ್ವಲ್‌ ಆದೇಶವನ್ನು ತಂದರು,&#8221; ಎಂದು ಕಾರ್ತಿಕ್‌ ವಿಡಿಯೋದಲ್ಲಿ ಹೇಳಿದ್ದಾರೆ.</p>



<p>&#8220;ಇನ್ನೂ ನನ್ನ ಬಳಿ ಇರುವ ವಿಡಿಯೋ, ಪೋಟೋಗಳನ್ನು ಕೊಡುವಂತೆ ದೇವರಾಜೇಗೌಡರು ಕೇಳಿದರು. ಇದಲ್ಲದೇ ಇದು ನಾನು ಕೋರ್ಟ್‌ಗೆ ನೀಡುವುದಾಗಿ ಹೇಳಿದರು. ಕೆಲ ದಿನಗಳ ನಂತರ ಈ ಬಗ್ಗೆ ಕೇಳಿದಾಗ ʼಮುಂದೆ ಈ ಬಗ್ಗೆ ನಿರ್ಧಾರ ಮಾಡುವುದಾಗಿ ಹೇಳಿದರುʼ ಅಂತ ಹೇಳಿದರು. ಇನ್ನೂ ನಾನು ದೇವರಾಜೇಗೌಡರಿಗೆ ಬಿಟ್ಟರೆ ಬೇರೆ ಯಾರಿಗೂ ಕೂಡ ವಿಡಿಯೋವನ್ನು ನೀಡಿಲ್ಲ. ಇದು ಹೇಗೆ ಬೇರೆಯವರಿಗೆ ಹೋಗಿದೆ ಎಂಬುದು ತಿಳಿದಿಲ್ಲ. ನಾನು ಈಕೂಡಲೇ ಎಸ್‌ಐಟಿ ತನಿಖೆ ಮುಂದೆ ಹಾಜರಾಗಿ ನನಗೆ ತಿಳಿದಿರುವ ಬಗ್ಗೆ ಮಾಹಿತಿಯನ್ನು ನೀಡುವತ್ತೇನೆ,&#8221; ಎಂದು ಹೇಳಿದ್ದಾರೆ. </p>



<p> ಪ್ರಜ್ವಲ್‌ ವಿಡಿಯೋ ಬಹಿರಂಗದ ಹಿಂದೆ ಕಾಂಗ್ರೇಸ್‌ ಪಕ್ಷದ ಕೈವಾಡವಿಲ್ಲ ಎಂದು ಕಾರ್ತಿಕ್‌ ಸ್ಪಷ್ಟಪಡಿಸಿದ್ದಾರೆ. </p>



<p>ಪ್ರಜ್ವಲ್ ರೇವಣ್ಣ ಹಾಗೂ ಭವಾನಿ ರೇವಣ್ಣ ಇಬ್ಬರೂ ಹೊಳೆನರಸೀಪುರ ಠಾಣೆ ಪೊಲೀಸರ ಮೂಲಕ ಬಲವಂತವಾಗಿ ಕರೆದೊಯ್ದು, ಚಿತ್ರಹಿಂಸೆ ನೀಡಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಕಾರ್ತಿಕ್‌ ಆರೋಪ ಮಾಡಿದ್ದರು. ಹೊಳೆನರಸೀಪುರ ತಾಲ್ಲೂಕಿನಲ್ಲಿ ಇರುವ 13 ಎಕರೆ ಭೂಮಿಗಾಗಿ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. </p>



<p>ಹತ್ತು ವರ್ಷಗಳಿಗೂ ಹೆಚ್ಚು ಕಾಲ ಪ್ರಜ್ವಲ್ ರೇವಣ್ಣನ ಕಾರು ಚಾಲಕನಾಗಿದ್ದ ಕಾರ್ತಿಕ್, ಇದೀಗ ಪ್ರಜ್ವಲ್ ರೇವಣ್ಣ, ರೇವಣ್ಣ ಪತ್ನಿ ಭವಾನಿ ವಿರುದ್ಧ ದೂರು ನೀಡಿದ್ದಾರೆ. 2023ರ ಮಾರ್ಚ್ 12ರಂದು ತನ್ನನ್ನು ಕಿಡ್ನಾಪ್ ಮಾಡಿದ್ದರು ಎಂದು ಆರೋಪ ಮಾಡಿದ್ದಾರೆ.</p>



<p>ಕಾರ್ತಿಕ್ ಮತ್ತು ಅವರ ಪತ್ನಿ ಶಿಲ್ಪ ಅವರ ಮೇಲೆ 2023ರ ಮಾರ್ಚ್‌ನಲ್ಲಿ ಭವಾನಿ ರೇವಣ್ಣ ಹಲ್ಲೆ ನಡೆಸಿದ್ದು, ಇದರಿಂದಾಗಿ ಶಿಲ್ಪ ಅವರಿಗೆ ಗರ್ಭಪಾತವಾಗಿದೆ ಎಂದು ಆರೋಪಿಸಿ ಹಾಸನದಲ್ಲಿ ಮಾಜಿ ಶಾಸಕ ಎಟಿ ರಾಮಸ್ವಾಮಿ ಮತ್ತು ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಕಾರ್ತಿಕ್‌ ಅವರು ಭವಾನಿ ರೇವಣ್ಣ ವಿರುದ್ಧ ಕೇಸು ನೀಡಿದ್ದರೂ ಪೊಲೀಸರು ಪ್ರಕರಣ ದಾಖಲಿಸಿರಲಿಲ್ಲ.</p>
]]></content:encoded>
					
		
		
			</item>
		<item>
		<title>ಹಾವಿನ ದ್ವೇಷ 12 ವರುಷ: ಆನೆಗೂ ಅಂತಹ ಸೇಡಿನ ಗುಣವಿದೆಯೇ!</title>
		<link>https://peepalmedia.com/snake-hate-12-years-does-the-elephant-have-such-revenge/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 25 Nov 2022 08:26:43 +0000</pubDate>
				<category><![CDATA[ರಾಜ್ಯ]]></category>
		<category><![CDATA[ಹಾಸನ]]></category>
		<category><![CDATA[Hasana]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Makna Kadane]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sakaleshapura]]></category>
		<category><![CDATA[Sakleshpur Forest Department]]></category>
		<guid isPermaLink="false">https://peepalmedia.com/?p=16477</guid>

					<description><![CDATA[ಸಕಲೇಶಪುರ: ಸ್ಥಳಾಂತರಕ್ಕೆ ಕೋಪಗೊಂಡಿದ್ದ ಆನೆಯೊಂದು, ಆರು ತಿಂಗಳ ಬಳಿಕ ಅದೇ ಸ್ಥಳಕ್ಕೆ ಬಂದು ದಾಂಧಲೆ ನಡೆಸಿರುವ ಘಟನೆ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ನಡೆದಿದೆ. ಕೆಸಗುಲಿ ಗ್ರಾಮದಲ್ಲಿನ ಮನೆಗಳ ಮೇಲೆ ಆನೆಯೊಂದು ಪದೇಪದೆ ಮಾಡುತ್ತಿತ್ತು. ಈ ಕಾರಣ ಬೇಸತ್ತ ಮನೆಯವರು, ಅರಣ್ಯ ಇಲಾಖೆಯವರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಆರು ತಿಂಗಳ ಹಿಂದೆ ಕೊನೆಯ ಬಾರಿಗೆ ದಾಳಿ ಮಾಡಿದ್ದ ಕಾಡಾನೆಯನ್ನು(ಮಕ್ನ ಕಾಡಾನೆ) ಸೆರೆಹಿಡಿದು ನೂರಾರು ಕಿಲೋಮೀಟರ್‌ ದೂರದ ಕಾಡಿನಲ್ಲಿ, ಅಂದರೆ ಮಲೆ ಮಹದೇಶ್ವರ ಬೆಟ್ಟಕ್ಕೆ ಬಿಟ್ಟು ಬರಲಾಗಿತ್ತು. ಅದೇ [&#8230;]]]></description>
										<content:encoded><![CDATA[
<p><strong>ಸಕಲೇಶಪುರ:</strong> ಸ್ಥಳಾಂತರಕ್ಕೆ ಕೋಪಗೊಂಡಿದ್ದ ಆನೆಯೊಂದು, ಆರು ತಿಂಗಳ ಬಳಿಕ ಅದೇ ಸ್ಥಳಕ್ಕೆ ಬಂದು ದಾಂಧಲೆ ನಡೆಸಿರುವ ಘಟನೆ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ನಡೆದಿದೆ.</p>



<figure class="wp-block-video"><video controls src="https://peepalmedia.com/wp-content/uploads/2022/11/WhatsApp-Video-2022-11-25-at-1.15.19-PM.mp4"></video><figcaption class="wp-element-caption"><strong>ಕಾಡಾನೆ(ಮಕ್ನಾ ಕಾಡಾನೆ) ಮನೆಯ ಮೇಲೆ ದಾಳಿ ನಡೆಸಿ, ಕಿಟಕಿಯ ಗಾಜುಗಳನ್ನು ಧ್ವಂಸ ಮಾಡಿರುವ ದೃಶ್ಯ</strong></figcaption></figure>



<p>ಕೆಸಗುಲಿ ಗ್ರಾಮದಲ್ಲಿನ ಮನೆಗಳ ಮೇಲೆ ಆನೆಯೊಂದು ಪದೇಪದೆ ಮಾಡುತ್ತಿತ್ತು. ಈ ಕಾರಣ ಬೇಸತ್ತ ಮನೆಯವರು, ಅರಣ್ಯ ಇಲಾಖೆಯವರಿಗೆ ದೂರು ನೀಡಿದ್ದರು. </p>



<p>ಈ ಹಿನ್ನಲೆಯಲ್ಲಿ ಆರು ತಿಂಗಳ ಹಿಂದೆ ಕೊನೆಯ ಬಾರಿಗೆ ದಾಳಿ ಮಾಡಿದ್ದ ಕಾಡಾನೆಯನ್ನು(ಮಕ್ನ ಕಾಡಾನೆ) ಸೆರೆಹಿಡಿದು ನೂರಾರು ಕಿಲೋಮೀಟರ್‌ ದೂರದ ಕಾಡಿನಲ್ಲಿ, ಅಂದರೆ ಮಲೆ ಮಹದೇಶ್ವರ ಬೆಟ್ಟಕ್ಕೆ ಬಿಟ್ಟು ಬರಲಾಗಿತ್ತು.</p>



<p>ಅದೇ ಆನೆ ಬುಧವಾರ ರಾತ್ರಿ ಕುಮಾರ್‌ ಎಂಬುವರ ಮನೆ ಮೇಲೆ ದಾಳಿ ನಡೆಸಿ, ಕಿಟಕಿಯ ಗಾಜುಗಳನ್ನು ಧ್ವಂಸ ಮಾಡಿದೆ. ಕಳೆದ 6 ತಿಂಗಳ ಹಿಂದೆ ಇದೇ ಮನೆ ಪಕ್ಕದಲ್ಲಿರುವ ಅವರ ಅಣ್ಣ ಗಿರೀಶ್ ಎಂಬುವರ ಮನೆಯ ಮೇಳೆ ದಾಳಿ ನಡೆಸಿತ್ತು. ಒಂಟಿ ಸಲಗದ ಆರ್ಭಟಕ್ಕೆ ಮನೆಯ ಬಾಗಿಲು ಕಿಟಕಿಗಳೆಲ್ಲಾ ಪುಡಿ ಪುಡಿಯಾಗಿವೆ. ಮುಂಜಾನೆ ಎರಡು ಗಂಟೆಯ ಹೊತ್ತಿಗೆ ಆನೆ ಏಕಾಏಕಿಯಾಗಿ ದಾಳಿ ಮಾಡಿದೆ. ಮನೆ ಮಂದಿಯೆಲ್ಲ ನಿದ್ರೆಯಲ್ಲಿದ್ದಾಗ ಬಂದಿದ್ದ ಆನೆ ದಾಳಿ ಮಾಡುತ್ತಿದ್ದಂತೆಯೇ ಮನೆಯವರು ಎಚ್ಚೆತ್ತು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.</p>



<p>ಬಳಿಕ ಸ್ಥಳಕ್ಕೆ ಬಂದ ಅರಣ್ಯ ಇಲಾಖೆಗೆ 6 ತಿಂಗಳ ಹಿಂದೆ ಹಿಡಿದ ಮಕ್ನ ಕಾಡಾನೆ ಎಂಬುದು ಅದಕ್ಕೆ ಹಾಕಿರುವ ರೇಡಿಯೋ ಕಾಲರ್ ನಿಂದ ಗೊತ್ತಾಗಿದೆ.</p>



<figure class="wp-block-video"><video controls src="https://peepalmedia.com/wp-content/uploads/2022/11/WhatsApp-Video-2022-11-25-at-1.16.11-PM.mp4"></video></figure>



<p>ಸಾಮಾನ್ಯವಾಗಿ ಆನೆಗಳು ಹೊಲ ಗದ್ದೆಗಳಿಗೆ ನುಗ್ಗುತ್ತವೆ. ಈ ಆನೆ ಮನೆಗಳನ್ನು ಟಾರ್ಗೆಟ್ ಮಾಡುತ್ತಿರುವುದರಿಂದ ಪರಿಸರದಲ್ಲಿ ಆತಂಕ ಸೃಷ್ಟಿಯಾಗಿದೆ.</p>



<figure class="wp-block-video"><video controls src="https://peepalmedia.com/wp-content/uploads/2022/11/WhatsApp-Video-2022-11-25-at-12.55.24-PM.mp4"></video><figcaption class="wp-element-caption"><strong>ಆರು ತಿಂಗಳ ಹಿಂದೆ ಅರಣ್ಯಾಧಿಕಾರಿಗಳು ಮಕ್ನ ಕಾಡಾನೆಯನ್ನು ಸೆರೆ ಹಡಿಯಲು ಪ್ರಯತ್ನಿಸುತ್ತಿರುವ ದೃಶ್ಯ</strong></figcaption></figure>
]]></content:encoded>
					
		
		<enclosure url="https://peepalmedia.com/wp-content/uploads/2022/11/WhatsApp-Video-2022-11-25-at-1.15.19-PM.mp4" length="6868515" type="video/mp4" />
<enclosure url="https://peepalmedia.com/wp-content/uploads/2022/11/WhatsApp-Video-2022-11-25-at-1.16.11-PM.mp4" length="6730364" type="video/mp4" />
<enclosure url="https://peepalmedia.com/wp-content/uploads/2022/11/WhatsApp-Video-2022-11-25-at-12.55.24-PM.mp4" length="7943180" type="video/mp4" />

			</item>
		<item>
		<title>ಹಾಸನ: ಕಾಡಾನೆ ದಾಳಿ, ಯುವಕ ಸಾವು</title>
		<link>https://peepalmedia.com/hassan-forestwild-attack-youth-killed/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 01 Nov 2022 05:54:11 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[forestwild]]></category>
		<category><![CDATA[h k kumaraswami]]></category>
		<category><![CDATA[Hasana]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sakaleshapura]]></category>
		<guid isPermaLink="false">https://peepalmedia.com/?p=13516</guid>

					<description><![CDATA[ಸಕಲೇಶಪುರ: ಕಾಡಾನೆಯ ದಾಳಿಗೀಡಾಗಿ ಯುವಕನೋರ್ವ ದಾರುಣವಾಗಿ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಹೆಬ್ಬನಹಳ್ಳಿ ಗ್ರಾಮದಿಂದ ವರದಿಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಘಟನೆ ನಡೆದ ಬಳಿಕ ಸ್ಥಳಕ್ಕೆ ಭೇಟಿ ನೀಡಿ, ಘಟನೆಯ ಕುರಿತಾಗಿ ಪರಿಶೀಲನೆ ನಡೆಸಿ. ಸಾವನ್ನಪ್ಪಿರುವ ವ್ಯಕ್ತಿ, ಮನು (34) ಎಂದು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಕಾಡಾನೆ ದಾಳಿಯಿಂದ ಈ ಯುವಕನೂ ಸೇರಿದಂತೆ, ಈ ಪ್ರದೇಶದಲ್ಲಿ ಇದುವರೆಗೆ ಒಟ್ಟು 76 ಜನರು ಬಲಿಯಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಅರಣ್ಯ ಇಲಾಖೆಯು [&#8230;]]]></description>
										<content:encoded><![CDATA[
<p><strong>ಸಕಲೇಶಪುರ:</strong> ಕಾಡಾನೆಯ ದಾಳಿಗೀಡಾಗಿ ಯುವಕನೋರ್ವ ದಾರುಣವಾಗಿ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಹೆಬ್ಬನಹಳ್ಳಿ ಗ್ರಾಮದಿಂದ ವರದಿಯಾಗಿದೆ.</p>



<p>ಈ ಕುರಿತು ಮಾಹಿತಿ ನೀಡಿರುವ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಘಟನೆ ನಡೆದ ಬಳಿಕ ಸ್ಥಳಕ್ಕೆ ಭೇಟಿ ನೀಡಿ, ಘಟನೆಯ ಕುರಿತಾಗಿ ಪರಿಶೀಲನೆ ನಡೆಸಿ. ಸಾವನ್ನಪ್ಪಿರುವ ವ್ಯಕ್ತಿ, ಮನು (34) ಎಂದು ತಿಳಿಸಿದ್ದಾರೆ.</p>



<p>ಮೂಲಗಳ ಪ್ರಕಾರ, ಕಾಡಾನೆ ದಾಳಿಯಿಂದ ಈ ಯುವಕನೂ ಸೇರಿದಂತೆ, ಈ ಪ್ರದೇಶದಲ್ಲಿ ಇದುವರೆಗೆ ಒಟ್ಟು 76 ಜನರು ಬಲಿಯಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಅರಣ್ಯ ಇಲಾಖೆಯು ಕುರುಡಾಗಿರುವುದರ ವಿರುದ್ಧ ಜನರು ಕೆಂಡ ಕಾರುತ್ತಿದ್ದಾರೆ. ಕಾಡಾನೆ ಸಮಸ್ಯೆಗೆ ಸರಿಯಾದ ಪರಿಹಾರ ಕಂಡುಹಿಡಿಯಬೇಕೆಂದು ಆಗ್ರಹಿಸುತ್ತಿದ್ದಾರೆ.</p>



<p>ಘಟನೆಯನ್ನು ಉಲ್ಲೇಖಿಸಿ ಸ್ಥಳೀಯ ಶಾಸಕ ಎಚ್‌. ಕೆ. ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದು, ನಮ್ಮ ತಾಲ್ಲೂಕಿನಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಇದು ದುರಾದೃಷ್ಟಕರ ಸಂಗತಿ, ನಾವು ಆನೆ ದಾಳಿ ಕುರಿತು ಬಹಳಷ್ಟು ಹೋರಾಟ ಮಾಡಿದ್ದರು ಕೂಡ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ, ಹೀಗಾಗಿ ದಾಳಿ ಮುಂದುವರೆದಿದೆ ಎಂದು ತಿಳಿಸಿದರು. ರಾಜ್ಯೋತ್ಸವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದ ಅವರು ಅಲ್ಲಿಂದಲೇ ಸುದ್ದಿ ತಿಳಿದಾಕ್ಷಣ ಪ್ರತಿಕ್ರಿಯಿಸಿದ್ದಾರೆ.</p>



<p>ಘಟನೆಯ ಕುರಿತು ಉಸ್ತುವಾರಿ ಸಚಿವರ ಬಳಿ ಈಗಾಗಲೇ ಕರೆ ಮಾಡಿ, ಹೆಬ್ಬನಹಳ್ಳಿ ಗ್ರಾಮಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದು, ಸ್ಥಳಕ್ಕೆ ಬಂದು ಪರಿಶೀಲಿಸಿ, ಕುಟುಂಬಕ್ಕೆ ಸಾಂತ್ವಾನ ಹೇಳುವುದರೊಂದಿಗೆ, ಮೃತನ ಕುಟುಂಬಕ್ಕೆ ಪರಿಹಾರವನ್ನು ಒದಗಿಸಿ ಕೊಡಬೇಕೆಂದು ಒತ್ತಾಯಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಅರಸೀಕೆರೆ ಅಪಘಾತ: ಮೃತರ ಕುಟುಂಬಕ್ಕೆ 2.ಲಕ್ಷ ರೂಗಳ ಪರಿಹಾರ ಸಿಎಂ ಬೊಮ್ಮಾಯಿ</title>
		<link>https://peepalmedia.com/araseekere-accident-rs-2-lakh-compensation-to-the-family-of-the-deceased-cm/</link>
		
		<dc:creator><![CDATA[Peepal Media]]></dc:creator>
		<pubDate>Sun, 16 Oct 2022 09:43:35 +0000</pubDate>
				<category><![CDATA[ದೇಶ]]></category>
		<category><![CDATA[Hasana]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[KR Pete]]></category>
		<category><![CDATA[mandya]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=11136</guid>

					<description><![CDATA[ಮಂಡ್ಯ (ಕೆ.ಆರ್.ಪೇಟೆ): ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಬಸ್ ಅಪಘಾತವಾಗಿದ್ದು, ದುರಂತವಾಗಿದ್ದು, ಸುಮಾರು 9 ಜನ ತೀರಿಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಕೆ.ಆರ್.ಪೇಟೆಯ ಅಂಬಿಗ್ರಾಮ ಹೆಲಿಪ್ಯಾಡ್ ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಟ್ಯಾಂಕರ್ ಮತ್ತು ಬಸ್ಸುಗಳ ನಡುವೆ ಅಪಘಾತವಾಗಿದೆ. ಅಪಘಾತದ ಸ್ಥಳಕ್ಕೆ ಕೂಡಲೇ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಮರಣಿಸಿದವರ ಮರಣೋತ್ತರ ಪರೀಕ್ಷೆ ಮಾಡಬೇಕು ಎಂದು [&#8230;]]]></description>
										<content:encoded><![CDATA[
<p><strong>ಮಂಡ್ಯ (ಕೆ.ಆರ್.ಪೇಟೆ):</strong> ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಬಸ್ ಅಪಘಾತವಾಗಿದ್ದು, ದುರಂತವಾಗಿದ್ದು, ಸುಮಾರು 9 ಜನ ತೀರಿಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.</p>



<p>ಅವರು ಇಂದು ಕೆ.ಆರ್.ಪೇಟೆಯ ಅಂಬಿಗ್ರಾಮ ಹೆಲಿಪ್ಯಾಡ್ ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.</p>



<p>ಟ್ಯಾಂಕರ್ ಮತ್ತು ಬಸ್ಸುಗಳ ನಡುವೆ ಅಪಘಾತವಾಗಿದೆ. ಅಪಘಾತದ ಸ್ಥಳಕ್ಕೆ ಕೂಡಲೇ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಮರಣಿಸಿದವರ ಮರಣೋತ್ತರ ಪರೀಕ್ಷೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದರು.</p>



<p>ಮಳೆ:ದೀರ್ಘಕಾಲಿಕ ಹಾಗೂ ತುರ್ತು ಕಾಮಗಾರಿಗಳಿಗೆ ಅನುದಾನ<br>ರಾಜ್ಯದಲ್ಲಿ ಮತ್ತೆಯಾಗುತ್ತಿದ್ದು, ದೀರ್ಘಕಾಲಿಕ ಶಾಶ್ವತ ಕಾಮಗಾರಿಗಳು ಮತ್ತು ತುರ್ತು ಕಾಮಗಾರಿಗಳನ್ನು ಕೂಡಲೇ ಕೈಗೊಳ್ಳಲು ಅಗತ್ಯ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>



<p>ಮಳೆಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರ ಕ್ರಮ ಕೈಗೊಂಡಿದೆ. ನಿರಂತರವಾಗಿ ಕೆಲಸವಾಗುವಂತೆ ಜಿಲ್ಲಾಧಿಕಾರಿ ಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಸೂಚನೆಗಳನ್ನು ನೀಡಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಹತ್ತು ಹಲವಾರು ಕೆರೆಗಳು ತುಂಬಿ ತೊಂದರೆಯಾಗಿದೆ. ತಕ್ಷಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ತಿಳಿಸಲಾಗಿದೆ. ಮೂಲಭೂತ ಸೌಕರ್ಯಕ್ಕೆ 600 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ದೀರ್ಘಕಾಲಿಕ ಪರಿಹಾರಕ್ಕೆ ಅಗತ್ಯವಿರುವ ಅನುದಾನವನ್ನೂ ಬಿಡುಗಡೆ ಮಾಡಲಾಗುವುದು ಎಂದರು.</p>



<p>ನಾಳೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಯಲಿದ್ದು, ಅಲ್ಲಿ ಈ ವಿಚಾರವನ್ನು ವ್ಯಾಪಕವಾಗಿ ಚರ್ಚಿಸಿ ಪರಿಹಾರ ಸೂಚಿಸಲಾಗುವುದು ಎಂದು ತಿಳಿಸಿದರು.</p>
]]></content:encoded>
					
		
		
			</item>
		<item>
		<title>ಬಾಣಾವರ ಬಳಿ ಭೀಕರ ಅಪಘಾತ, 9 ಮಂದಿ ಸಾವು: ಸಿದ್ದರಾಮಯ್ಯ ಸಂತಾಪ</title>
		<link>https://peepalmedia.com/terrible-accident-near-banavara-9-killed-siddaramaiah-condoles/</link>
		
		<dc:creator><![CDATA[Peepal Media]]></dc:creator>
		<pubDate>Sun, 16 Oct 2022 07:26:12 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[banavara]]></category>
		<category><![CDATA[bengalure]]></category>
		<category><![CDATA[Hasana]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[siddaramayya]]></category>
		<guid isPermaLink="false">https://peepalmedia.com/?p=11087</guid>

					<description><![CDATA[ಬೆಂಗಳೂರು: ಹಾಸನ ಜಿಲ್ಲೆಯ ಕೆರೆ ತಾಲೂಕಿನ ಬಾಣಾವರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿದ್ದಾರೆ. ಈ ಕುರಿತು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಅವರು, ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಮತ್ತು ಕುಟುಂಬ ವರ್ಗಕ್ಕೆ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಹಾಗು ರಾಜ್ಯ ಸರ್ಕಾರ ಮೃತ ದುರ್ದೈವಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಹೇಳಿದರು.]]></description>
										<content:encoded><![CDATA[
<p><strong>ಬೆಂಗಳೂರು:</strong> ಹಾಸನ ಜಿಲ್ಲೆಯ ಕೆರೆ ತಾಲೂಕಿನ ಬಾಣಾವರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿದ್ದಾರೆ.</p>



<p>ಈ ಕುರಿತು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.</p>



<p>ಅವರು, ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಮತ್ತು ಕುಟುಂಬ ವರ್ಗಕ್ಕೆ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಹಾಗು ರಾಜ್ಯ ಸರ್ಕಾರ ಮೃತ ದುರ್ದೈವಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಹೇಳಿದರು.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬಾಣಾವರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಸಂಕಟವಾಯಿತು.<br><br>ಮೃತರ ಆತ್ಮಕ್ಕೆ ಶಾಂತಿ ಮತ್ತು ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ.<br><br>ರಾಜ್ಯ ಸರ್ಕಾರ ಮೃತ ದುರ್ದೈವಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತೇನೆ.</p>&mdash; Siddaramaiah (@siddaramaiah) <a href="https://twitter.com/siddaramaiah/status/1581503218441678848?ref_src=twsrc%5Etfw">October 16, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
		<item>
		<title>ಹಾಸನದಲ್ಲಿ ಎಸ್‌ಡಿಪಿಐ ಪದಾಧಿಕಾರಿ ಬಂಧನ</title>
		<link>https://peepalmedia.com/hasanadalli-sdpi-padadikari-bandana/</link>
		
		<dc:creator><![CDATA[Peepal Media]]></dc:creator>
		<pubDate>Tue, 27 Sep 2022 07:12:09 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[bengalure]]></category>
		<category><![CDATA[breaking news]]></category>
		<category><![CDATA[Hasana]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[NAI]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[PFI]]></category>
		<guid isPermaLink="false">https://peepalmedia.com/?p=7465</guid>

					<description><![CDATA[ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಹಾಸನ ಘಟಕದ ಅಧ್ಯಕ್ಷ ಸಿದ್ದಿಕ್ ಆನೆಮಹಲ್ ಅವರನ್ನು ಸೆಪ್ಟೆಂಬರ್ 27 ರಂದು ಹಾಸನ ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಜಾನೆ ಸಕಲೇಶಪುರದ ಆಚಂಗಿ ಗ್ರಾಮದಲ್ಲಿ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಕ್ರಿಮಿನಲ್ ಪ್ರಕ್ರಿಯೆ ಮತ್ತು ಪ್ರಿವೆಂಟಿವ್ ಆಕ್ಷನ್‌ ರಿಪೋರ್ಟ್ ಅಡಿಯಲ್ಲಿ ಸಿದ್ದಿಕ್ ಆನೆಮಹಲ್ ಅವರನ್ನು ಬಂಧಿಸಿ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ ಎಂದು ಹಾಸನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. [&#8230;]]]></description>
										<content:encoded><![CDATA[
<p style="font-size:20px">ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಹಾಸನ ಘಟಕದ ಅಧ್ಯಕ್ಷ ಸಿದ್ದಿಕ್ ಆನೆಮಹಲ್ ಅವರನ್ನು ಸೆಪ್ಟೆಂಬರ್ 27 ರಂದು ಹಾಸನ ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಜಾನೆ ಸಕಲೇಶಪುರದ ಆಚಂಗಿ ಗ್ರಾಮದಲ್ಲಿ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.</p>



<p style="font-size:20px">ಕ್ರಿಮಿನಲ್ ಪ್ರಕ್ರಿಯೆ ಮತ್ತು ಪ್ರಿವೆಂಟಿವ್ ಆಕ್ಷನ್‌ ರಿಪೋರ್ಟ್ ಅಡಿಯಲ್ಲಿ ಸಿದ್ದಿಕ್ ಆನೆಮಹಲ್ ಅವರನ್ನು ಬಂಧಿಸಿ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ ಎಂದು ಹಾಸನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.</p>



<p style="font-size:20px">ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪದಾಧಿಕಾರಿಗಳ ಬಂಧನವನ್ನು ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆಗಳನ್ನು ಆಯೋಜಿಸುತ್ತಿದೆ ಎಂಬ ಮಾಹಿತಿಯ ಆಧಾರದ ಮೇಲೆ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.</p>
]]></content:encoded>
					
		
		
			</item>
	</channel>
</rss>
