<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>haveri &#8211; Peepal Media</title>
	<atom:link href="https://peepalmedia.com/tag/haveri/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 24 Dec 2022 12:02:27 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>haveri &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ</title>
		<link>https://peepalmedia.com/this-time-kannada-sahitya-sammelna-in-haveri/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 24 Dec 2022 12:02:27 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[dr doddarangegowda]]></category>
		<category><![CDATA[haveri]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[kannada sahithya academy]]></category>
		<category><![CDATA[kannada sahithya parishattu]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=18691</guid>

					<description><![CDATA[ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಹಾವೇರಿಯಲ್ಲಿ ನಡೆಯಲಿದೆ. ಈ ಸಾಹಿತ್ಯ ಸಮ್ಮೇಳನವು ಹಾವೇರಿಯ ಹುಬ್ಬಳ್ಳಿ ರಸ್ತೆಯಲ್ಲಿ ಇರುವ ʼಶ್ರೀ ಅಜ್ಜಯ್ಯ ದೇವಸ್ಥಾನದʼ ಎದುರು 2023 ಜನವರಿ 6, 7, 8ನೇ ತಾರೀಕಿನ ವರೆಗೆ ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾದ ಡಾ. ದೊಡ್ಡರಂಗೇಗೌಡ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಲಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ʼಕನ್ನಡಿಗರೆಲ್ಲರ ಹಬ್ಬʼ ಆಗಿರುವುದರಿಂದ, ಎಲ್ಲಾ ಕನ್ನಡಿಗರು ಸಮಾನರು ಹಾಗು ಅವರೆಲ್ಲರಿಗೂ ಸಮಾನ [&#8230;]]]></description>
										<content:encoded><![CDATA[
<p>ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಹಾವೇರಿಯಲ್ಲಿ ನಡೆಯಲಿದೆ.</p>



<p>ಈ ಸಾಹಿತ್ಯ ಸಮ್ಮೇಳನವು ಹಾವೇರಿಯ ಹುಬ್ಬಳ್ಳಿ ರಸ್ತೆಯಲ್ಲಿ ಇರುವ ʼಶ್ರೀ ಅಜ್ಜಯ್ಯ ದೇವಸ್ಥಾನದʼ ಎದುರು 2023 ಜನವರಿ 6, 7, 8ನೇ ತಾರೀಕಿನ ವರೆಗೆ ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾದ ಡಾ. ದೊಡ್ಡರಂಗೇಗೌಡ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಲಿದೆ.</p>



<p>ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ʼಕನ್ನಡಿಗರೆಲ್ಲರ ಹಬ್ಬʼ ಆಗಿರುವುದರಿಂದ, ಎಲ್ಲಾ ಕನ್ನಡಿಗರು ಸಮಾನರು ಹಾಗು ಅವರೆಲ್ಲರಿಗೂ ಸಮಾನ ಗೌರವ ಸಿಗುವುದೆಂದು ಕನ್ನಡ ಸಾಹಿತ್ಯ ಪರಿಷತ್ತು ತಿಳಿಸಿದೆ.</p>



<p>ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆದೇಶ ಹೊರಡಿಸಿದ್ದು, ಕಾರ್ಯಕ್ರಮದಲ್ಲಿ ಶಬ್ದ ಮಾಲಿನ್ಯವಾಗದಂತೆ ನೋಡಿಕೊಳ್ಳುವುದಾಗಿ ಆದೇಶಿಸಿದೆ.<br>ಸಾರ್ವಜನಿಕ ಸ್ನೇಹಿಯಾಗುವ ಉದ್ದೇಶದಿಂದ ಕಾರ್ಯಕ್ರಮವನ್ನು ರಾತ್ರಿ 10 ಗಂಟೆಯೊಳಗೆ ಮುಗಿಸಬೇಕೆಂದು ಸೂಚಿಸಿದ್ದು, ಕನ್ನಡ ಸಾಹಿತ್ಯ ಪರಿಷತ್ತು ನ್ಯಾಯಾಲಯದ ಆದೇಶಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುವುದಾಗಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಎಲ್ಲರು ಈ ಸೂಚನೆಗಳನ್ನು ಸಹಕರಿಸಿ, ಪಾಲಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು ತಿಳಿಸಿದೆ.</p>
]]></content:encoded>
					
		
		
			</item>
		<item>
		<title>ಹಾವೇರಿ ತಹಶೀಲ್ದಾರ್‌ ಗಿರೀಶ್‌ ಸ್ವಾದಿ ನಾಪತ್ತೆ!</title>
		<link>https://peepalmedia.com/haveri-tehsildar-girish-swadi-is-missing/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 03 Nov 2022 11:07:35 +0000</pubDate>
				<category><![CDATA[ರಾಜ್ಯ]]></category>
		<category><![CDATA[ಹಾವೇರಿ]]></category>
		<category><![CDATA[bengalure]]></category>
		<category><![CDATA[haveri]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[MISSING]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Tehsildar Girish Swadi]]></category>
		<guid isPermaLink="false">https://peepalmedia.com/?p=14003</guid>

					<description><![CDATA[ಹಾವೇರಿ: ಇಲ್ಲಿನ ತಹಶೀಲ್ದಾರ್‌ ಗಿರೀಶ್‌ ಸ್ವಾದಿ ಅವರು ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಹಾವೇರಿ ಶಹರ ಪೋಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾಹಿತಿ ಪ್ರಕಾರ, ಗಿರೀಶ್‌ ಸ್ವಾದಿಯವರು, ಅವರ ಪತ್ನಿಗೆ ಅಕ್ಟೋಬರ್‌ 31 ರಂದು ರಾತ್ರಿ ಪರಿಚಿತರ ಮೊಬೈಲ್‌ನಿಂದ ಕರೆ ಮಾಡಿ, ಕರ್ನಾಟಕ ರಾಜ್ಯೋತ್ಸವ ಇರುವುದರಿಂದ ಹಾವೇರಿಯ ಹಾನಗಲ್‌ ರಸ್ತೆಯಲ್ಲಿರುವ ಶಿವಾ ರೆಸಿಡೆಸ್ಸಿಯಲ್ಲಿ ಉಳಿದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ತಹಶೀಲ್ದಾರ್‌ ಗಿರೀಶ್‌ ಸ್ವಾದಿ ಅವರು 2 ದಿನಗಳವರೆಗೆ ಮನೆಗೆ ಹೋಗದ ಕಾರಣ, ಅವರ ಪತ್ನಿ ಭಾಗ್ಯಶ್ರೀಯವರು, ಗಿರೀಶ್‌ ಸ್ವಾದಿ ಅವರ [&#8230;]]]></description>
										<content:encoded><![CDATA[
<p style="font-size:20px"><strong>ಹಾವೇರಿ:</strong> ಇಲ್ಲಿನ ತಹಶೀಲ್ದಾರ್‌ ಗಿರೀಶ್‌ ಸ್ವಾದಿ ಅವರು ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಹಾವೇರಿ ಶಹರ ಪೋಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.</p>



<p style="font-size:20px">ಮಾಹಿತಿ ಪ್ರಕಾರ, ಗಿರೀಶ್‌ ಸ್ವಾದಿಯವರು, ಅವರ ಪತ್ನಿಗೆ ಅಕ್ಟೋಬರ್‌ 31 ರಂದು ರಾತ್ರಿ ಪರಿಚಿತರ ಮೊಬೈಲ್‌ನಿಂದ ಕರೆ ಮಾಡಿ, ಕರ್ನಾಟಕ ರಾಜ್ಯೋತ್ಸವ ಇರುವುದರಿಂದ ಹಾವೇರಿಯ ಹಾನಗಲ್‌ ರಸ್ತೆಯಲ್ಲಿರುವ ಶಿವಾ ರೆಸಿಡೆಸ್ಸಿಯಲ್ಲಿ ಉಳಿದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.</p>



<p style="font-size:20px">ತಹಶೀಲ್ದಾರ್‌ ಗಿರೀಶ್‌ ಸ್ವಾದಿ ಅವರು 2 ದಿನಗಳವರೆಗೆ ಮನೆಗೆ ಹೋಗದ ಕಾರಣ, ಅವರ ಪತ್ನಿ ಭಾಗ್ಯಶ್ರೀಯವರು, ಗಿರೀಶ್‌ ಸ್ವಾದಿ ಅವರ ಮೊಬೈಲ್‌ಗೆ ಕರೆ ಮಾಡಿದ್ದಾರೆ. ಆದರೆ ಮೊಬೈಲ್‌ ಸ್ವಿಚ್‌ಆಫ್‌ ಆದ ಕಾರಣ, ಗಾಬರಿಗೊಂಡ ಅವರು ಕುಟುಂಬ ಸಮೇತ ಶಿವಾ ರೆಸಿಡೆಸ್ಸಿಗೆ ಹೋಗಿ ವಿಚಾರಿಸಿದ್ದಾರೆ. ಆಗ ಹೋಟೆಲ್‌ ಸಿಬ್ಬಂದಿಯೊಬ್ಬರು, ಗಿರೀಶ್‌ ಸ್ವಾದಿಯವರು ನವೆಂಬರ್‌ 1ರಂದು ಮುಂಜಾನೆ 5 ಗಂಟೆಗೆ ತಾವು ಉಳಿದುಕೊಂಡಿದ್ದ ರೂಮ್‌ 112 ಅನ್ನು ಖಾಲಿ ಮಾಡಿ. ಏನೂ ಹೇಳದೇ ಹೋಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>



<p style="font-size:20px">ವಿಚಾರ ತಿಳಿದ ಕುಟುಂಬಸ್ಥರು ತಕ್ಷಣವೇ ಪೊಲೀಸ್‌ ಠಾಣೆಗೆ ಹೋಗಿ ದೂರು ನೀಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಸರ್ಕಾರದ ನಡೆ ರೈತರ ಆದಾಯ ಹೆಚ್ಚಿಸುವ ಕಡೆ: ಬೊಮ್ಮಾಯಿ</title>
		<link>https://peepalmedia.com/governments-move-to-increase-farmers-income-bommai/</link>
		
		<dc:creator><![CDATA[Peepal Media]]></dc:creator>
		<pubDate>Thu, 29 Sep 2022 12:29:59 +0000</pubDate>
				<category><![CDATA[ರಾಜ್ಯ]]></category>
		<category><![CDATA[ಹಾವೇರಿ]]></category>
		<category><![CDATA[cm bhommai]]></category>
		<category><![CDATA[haveri]]></category>
		<category><![CDATA[increase farmers&#039; income]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rajata mahothsava]]></category>
		<guid isPermaLink="false">https://peepalmedia.com/?p=8074</guid>

					<description><![CDATA[ಹಾವೇರಿ: ಹಾವೇರಿ ಜಿಲ್ಲೆ ರಚನೆಗೊಂಡು 25 ವರ್ಷ ಪೂರ್ಣಗೊಂಡಿರುವ ಹಿನ್ನಲೆ ವಿಜಯ ಕರ್ನಾಟಕ ದಿನಪತ್ರಿಕೆ ಹಮ್ಮಿಕೊಂಡಿದ್ದ ಹಾವೇರಿ ಜಿಲ್ಲೆ ʼರಜತ ಮಹೋತ್ಸವʼಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರ ಆದಾಯವನ್ನು ದುಪ್ಪಟ್ಟುಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು. &#160; ಸಮಾರಂಭದಲ್ಲಿ ಹಾಲು ಉತ್ಪಾದಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಧಾರವಾಡ ಹಾಲು ಮಂಡಳದಲ್ಲಿ ಹಾವೇರಿ ಜಿಲ್ಲೆ ಅತಿ ಹೆಚ್ಚು ಹಾಲು ಉತ್ಪಾದಿಸುವ ಜಿಲ್ಲೆಯಾಗಿದೆ. ಹಾಲು ಉತ್ಪಾದಕರ ಒಳಿತಿಗಾಗಿ ಹಾಗೂ ಅವರ ಮೌಲ್ಯ ವೃದ್ಧಿಸುವ ಸಲುವಾಗಿ ಹಾಗೂ ಅನೇಕ [&#8230;]]]></description>
										<content:encoded><![CDATA[
<p style="font-size:20px"><strong>ಹಾವೇರಿ:</strong> ಹಾವೇರಿ ಜಿಲ್ಲೆ ರಚನೆಗೊಂಡು 25 ವರ್ಷ ಪೂರ್ಣಗೊಂಡಿರುವ ಹಿನ್ನಲೆ ವಿಜಯ ಕರ್ನಾಟಕ ದಿನಪತ್ರಿಕೆ ಹಮ್ಮಿಕೊಂಡಿದ್ದ ಹಾವೇರಿ ಜಿಲ್ಲೆ ʼರಜತ ಮಹೋತ್ಸವʼಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರ ಆದಾಯವನ್ನು ದುಪ್ಪಟ್ಟುಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು. &nbsp;</p>



<p style="font-size:20px">ಸಮಾರಂಭದಲ್ಲಿ ಹಾಲು ಉತ್ಪಾದಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಧಾರವಾಡ ಹಾಲು ಮಂಡಳದಲ್ಲಿ ಹಾವೇರಿ ಜಿಲ್ಲೆ ಅತಿ ಹೆಚ್ಚು ಹಾಲು ಉತ್ಪಾದಿಸುವ ಜಿಲ್ಲೆಯಾಗಿದೆ. ಹಾಲು ಉತ್ಪಾದಕರ ಒಳಿತಿಗಾಗಿ ಹಾಗೂ ಅವರ ಮೌಲ್ಯ ವೃದ್ಧಿಸುವ ಸಲುವಾಗಿ ಹಾಗೂ ಅನೇಕ ಮಹನೀಯರ ನಿರಂತರ ಹೋರಾಟದಿಂದ ಹಾವೇರಿ ಜಿಲ್ಲಾ ಸಹಕಾರಿ ಒಕ್ಕೂಟ ಸ್ಥಾಪನೆಯಾಗಿದೆ. ಈ ಮೂಲಕ ರೈತರ ಆದಾಯ ದ್ವಿಗುಣಗೊಳಿಸಬೇಕು ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಶಯಕ್ಕೆ ಬಲ ಬಂದಂತಾಗಿದೆ ಎಂದು ಹೇಳಿದರು.</p>



<p style="font-size:20px">ಸರ್ಕಾರದ ಆಶಯದಂತೆ, ಹಾಲು ಉತ್ಪಾದಕರ ವರಮಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ, ಹಾಲು ಉತ್ಪಾದಕರಿಂದ ಹಾಲು ಉತ್ಪಾದಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಒಂದು ಪ್ರತ್ಯೇಕ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ ಅಂತಿಮ ಹಂತದಲ್ಲಿದೆ ಎಂದು ಬೊಮ್ಮಾಯಿ ಅವರು ತಿಳಿಸಿದರು.</p>



<p style="font-size:20px">ರೈತನ ಬದುಕಲ್ಲಿ ಹತ್ತು ಹಲವಾರು ಸಮಸ್ಯೆಗಳಿರುವುದು ನಮಗೆ ತಿಳಿದ ವಿಷಯವಾಗಿದೆ. ರೈತರಿಗೆ ಸರ್ಕಾರದ ಸವಲತ್ತುಗಳು, ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ನೆರವಾಗಿ ತಲುಪಲು ನೇರ ನಗದು ಪಾವತಿ ವ್ಯವಸ್ಥೆಯನ್ನು ಜಾರಿಗೆ ತಂದಿದ್ದೇವೆ. ಈ ಮೂಲಕ ಸೋರಿಕೆಯನ್ನು ತಡೆಗಟ್ಟುವ ಮಹತ್ತರ ಕ್ರಮವನ್ನು ರಾಜ್ಯದಲ್ಲಿ ಜಾರಿಗೆ ತಂದಿದ್ದೇವೆ ಎಂದು ಹೇಳಿದರು</p>



<p style="font-size:20px">ಮುಂದುವರೆದು ಮಾತನಾಡಿದ ಅವರು, ಹಾವೇರಿ ಹಾಗೂ ಸುತ್ತಮುತ್ತಲಿನ ಜಿಲ್ಲೆಯ ಯುವಕರಿಗೆ ಉದ್ಯೋಗವಕಾಶಗಳನ್ನು ಸೃಷ್ಟಿಸಲು ಒಂದು ಸಾವಿರ ಎಕರೆಯಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಿಸಲು ಮುಂದಾಗಿದ್ದೇವೆ. ಜಿಲ್ಲೆಯಲ್ಲಿ ಎಲ್ಲಾ ತರಹದ ಸೌಲಭ್ಯಗಳಿದ್ದು, ಜಿಲ್ಲೆಯನ್ನು ಔದ್ಯೋಗಿಕರಣಗೊಳಿಸಲು ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.</p>
]]></content:encoded>
					
		
		
			</item>
	</channel>
</rss>
