<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>HC Mahadevappa &#8211; Peepal Media</title>
	<atom:link href="https://peepalmedia.com/tag/hc-mahadevappa/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 06 Mar 2025 08:49:04 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>HC Mahadevappa &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಒಳಮೀಸಲಾತಿ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಹೆಚ್.ಸಿ. ಮಹದೇವಪ್ಪ ಅವರನ್ನು ಒತ್ತಾಯಿಸಿದ ಹೋರಾಟಗಾರರು</title>
		<link>https://peepalmedia.com/activists-urged-h-c-mahadevappa-to-discuss-internal-reservation-in-the-session/</link>
		
		<dc:creator><![CDATA[Peepal Media]]></dc:creator>
		<pubDate>Thu, 06 Mar 2025 08:49:04 +0000</pubDate>
				<category><![CDATA[ರಾಜ್ಯ]]></category>
		<category><![CDATA[congrees]]></category>
		<category><![CDATA[dalit activists]]></category>
		<category><![CDATA[HC Mahadevappa]]></category>
		<category><![CDATA[internal reservation]]></category>
		<category><![CDATA[karnartaka]]></category>
		<category><![CDATA[reservation]]></category>
		<guid isPermaLink="false">https://peepalmedia.com/?p=54871</guid>

					<description><![CDATA[ಒಳಮೀಸಲಾತಿ ಕುರಿತಂತೆ ಹೋರಾಟಗಾರರು ಸಮಾಜ ಕಲ್ಯಾಣ ಇಲಾಖೆಯ ಮಂತ್ರಿಗಳಾದ ಡಾ. ಹೆಚ್. ಸಿ ಮಹದೇವಪ್ಪರನ್ನು ಭೇಟಿ‌ ಮಾಡಿ ಒಳಮೀಸಲಾತಿ ಕುರಿತು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚಿಸಲು ಒತ್ತಾಯಿಸಿದರು.&#160; ಆಗಸ್ಟ್ 1 ರಂದು ಮಾನ್ಯ ಸುಪ್ರೀಂ ಕೋರ್ಟ್ ಒಳಮೀಸಲಾತಿ ಪರವಾದ ತೀರ್ಪು ನೀಡಿ, ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿತ್ತು.&#160; ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿ‌ಮಾಡುವಂತೆ ಕರ್ನಾಟಕ ಸರ್ಕಾರವನ್ನು ಒಳಮೀಸಲಾತಿ ಹೋರಾಟಗಾರರು ನಿರಂತರವಾಗಿ ಒತ್ತಾಯಿಸಿದ ಹಿನ್ನೆಲೆಯಲ್ಲಿ ಮಾನ್ಯ ನಿವೃತ್ತ ನ್ಯಾಯಾಧೀಶರಾದ ನಾಗಮೋಹನ್ ದಾಸ್ ರವರ ಏಕ‌ ಸದಸ್ಯ ಆಯೋಗವನ್ನು [&#8230;]]]></description>
										<content:encoded><![CDATA[
<p>ಒಳಮೀಸಲಾತಿ ಕುರಿತಂತೆ ಹೋರಾಟಗಾರರು ಸಮಾಜ ಕಲ್ಯಾಣ ಇಲಾಖೆಯ ಮಂತ್ರಿಗಳಾದ ಡಾ. ಹೆಚ್. ಸಿ ಮಹದೇವಪ್ಪರನ್ನು ಭೇಟಿ‌ ಮಾಡಿ ಒಳಮೀಸಲಾತಿ ಕುರಿತು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚಿಸಲು ಒತ್ತಾಯಿಸಿದರು.&nbsp;</p>



<p>ಆಗಸ್ಟ್ 1 ರಂದು ಮಾನ್ಯ ಸುಪ್ರೀಂ ಕೋರ್ಟ್ ಒಳಮೀಸಲಾತಿ ಪರವಾದ ತೀರ್ಪು ನೀಡಿ, ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿತ್ತು.&nbsp;</p>



<p>ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿ‌ಮಾಡುವಂತೆ ಕರ್ನಾಟಕ ಸರ್ಕಾರವನ್ನು ಒಳಮೀಸಲಾತಿ ಹೋರಾಟಗಾರರು ನಿರಂತರವಾಗಿ ಒತ್ತಾಯಿಸಿದ ಹಿನ್ನೆಲೆಯಲ್ಲಿ ಮಾನ್ಯ ನಿವೃತ್ತ ನ್ಯಾಯಾಧೀಶರಾದ ನಾಗಮೋಹನ್ ದಾಸ್ ರವರ ಏಕ‌ ಸದಸ್ಯ ಆಯೋಗವನ್ನು ರಚಿಸಿ 3 ತಿಂಗಳ ಕಾಲಾವಕಾಶ ನೀಡಿತ್ತು.&nbsp;</p>



<p>ಇದೀಗ ಆಯೋಗದ ಅವಧಿ ಮುಗಿಯುತ್ತಿರುವ‌ ಹಿನ್ನೆಲೆಯಲ್ಲಿ ಆಯೋಗದಿಂದ ಮಧ್ಯಂತರ ವರದಿಯನ್ನು ಸರ್ಕಾರ ಪಡೆದುಕೊಳ್ಳಬೇಕು, ಪ್ರಸ್ತುತ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಒಳಮೀಸಲಾತಿ ವರ್ಗೀಕರಣವನ್ನು ಮಾಡಬೇಕು ಹಾಗೂ ಶಾಶ್ವತ ಜಾರಿಗಾಗಿ ಸಮೀಕ್ಷೆ ನಡೆಸಲು ಸರ್ಕಾರ ಮುಂದಾಗಬೇಕೆಂದು ಸಚಿವರನ್ನು ಒತ್ತಾಯಿಸಿದರು.&nbsp;</p>



<p>ಇದೇ ಸಂದರ್ಭದಲ್ಲಿ ಬ್ಯಾಕ್ ಲಾಗ್ ಹುದ್ದೆಗಳನ್ನು ಒಳಮೀಸಲಾತಿ ಜಾರಿಯಾಗುವವರೆಗೂ ಯಾವ ಕಾರಣಕ್ಕೂ ಭರ್ತಿ‌ಮಾಡಲು ಮುಂದಾಗಬಾರದೆಂದು ಮನವಿ ಮಾಡಿಕೊಂಡರು.&nbsp;</p>



<p>ಇದಕ್ಕೆ ಸ್ಫಂದಿಸಿದ ಸಚಿವರು ಒಳಮೀಸಲಾತಿ ಜಾರಿಯಾಗುವವರೆಗೂ ಬ್ಯಾಕ್ ಹುದ್ದೆಗಳು ಸೇರಿದಂತೆ, ನೇಮಕಾತಿಗಳನ್ನು ಮಾಡುವುದಿಲ್ಲ ಎಂದು ಭರವಸೆ ನೀಡಿದರು, ಅಲ್ಲದೆ&nbsp; ಒಳಮೀಸಲಾತಿ‌ ಕುರಿತಂತೆ ಈಗ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚಿಸುವುದಾಗಿ ತಿಳಿಸಿದರು.</p>



<p>ಈ ವೇಳೆ ಒಳಮೀಸಲಾತಿ ಪರ ಹೋರಾಟಗಾರರಾದ ಬಸವರಾಜ್ ಕೌತಾಳ್, ಚಂದ್ರು ತರಹುಣಿಸೆ, ರಘು ಕಾಮಾಕ್ಷಿಪಾಳ್ಯ, ಮಂಜುನಾಥ್ ಮತ್ತಿತರರು ಹಾಜರಿದ್ದರು.</p>
]]></content:encoded>
					
		
		
			</item>
		<item>
		<title>ಅಂಬೇಡ್ಕರ್‌ ಹೆಸರು ಹೇಳುವುದೊಂದು ಶೋಕಿ: ಅಮಿತ್‌ ಷಾ ಹೇಳಿಕೆಗೆ ಹೆಚ್‌ ಸಿ ಮಹದೇವಪ್ಪ ಖಂಡನೆ</title>
		<link>https://peepalmedia.com/mahadevappa-condemns-amit-shahs-derogatory-statement-on-ambedkar/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 18 Dec 2024 08:02:05 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[amit shah]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[bjp]]></category>
		<category><![CDATA[Dr BR Ambedkar]]></category>
		<category><![CDATA[HC Mahadevappa]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[narendra modi]]></category>
		<guid isPermaLink="false">https://peepalmedia.com/?p=50849</guid>

					<description><![CDATA[&#8220;ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಹೆಸರನ್ನು ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು ಹೊತ್ತಿಗೆ ಏಳು ಜನ್ಮದ ಪುಣ್ಯ ಬರುತ್ತಿತ್ತು,&#8221; ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯ ಸಭೆಯಲ್ಲಿ ಹೇಳಿದ್ದು ಅವರ ಈ ಅಸೂಕ್ಷ್ಮವಾದ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಭಾರತದ ಇತಿಹಾಸದಲ್ಲಿ ಅಸ್ಪೃಶ್ಯ ಸಮುದಾಯಗಳಿಗೆ ಇದ್ದ ಪರಿಸ್ಥಿತಿಯನ್ನು ನೆನಪಿಸಿಕೊಂಡರೆ ವಿಪರೀತ ಅವಮಾನ ದೌರ್ಜನ್ಯಕ್ಕೆ ಒಳಗಾಗಿದ್ದ ಅವರನ್ನು ಯಾವ ದೇವರೂ ಕೂಡಾ ರಕ್ಷಣೆ [&#8230;]]]></description>
										<content:encoded><![CDATA[
<p>&#8220;ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಹೆಸರನ್ನು ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು ಹೊತ್ತಿಗೆ ಏಳು ಜನ್ಮದ ಪುಣ್ಯ ಬರುತ್ತಿತ್ತು,&#8221; ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯ ಸಭೆಯಲ್ಲಿ ಹೇಳಿದ್ದು ಅವರ ಈ ಅಸೂಕ್ಷ್ಮವಾದ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.</p>



<p>ಭಾರತದ ಇತಿಹಾಸದಲ್ಲಿ ಅಸ್ಪೃಶ್ಯ ಸಮುದಾಯಗಳಿಗೆ ಇದ್ದ ಪರಿಸ್ಥಿತಿಯನ್ನು ನೆನಪಿಸಿಕೊಂಡರೆ ವಿಪರೀತ ಅವಮಾನ ದೌರ್ಜನ್ಯಕ್ಕೆ ಒಳಗಾಗಿದ್ದ ಅವರನ್ನು ಯಾವ ದೇವರೂ ಕೂಡಾ ರಕ್ಷಣೆ ಮಾಡಿದ ಉದಾಹರಣೆ ಇಲ್ಲ.</p>



<p>ಆದರೆ ಅಸ್ಪೃಶ್ಯರು, ಮಹಿಳೆಯರು ಮತ್ತು ಶೋಷಿತರ ಬದುಕನ್ನು ತನ್ನ ತ್ಯಾಗ, ಅಧ್ಯಯನ, ಬದ್ಧತೆ ಮತ್ತು ಮಹಾಲೋಕದೃಷ್ಟಿಯ ಮೂಲಕ ಪ್ರತಿದಿನವೂ ರಕ್ಷಣೆ ಮಾಡುತ್ತಿರುವ ನಿಜವಾದ ಶಕ್ತಿ ಯಾವುದಾದರೂ ಇದ್ದರೆ ಅದು ಬಾಬಾ ಸಾಹೇಬರು ಮತ್ತವರ ಸಂವಿಧಾನ ಎಂಬುದನ್ನು ನಾನು ಎದೆ ಕಟ್ಟಿಕೊಂಡು ಹೇಳುತ್ತೇನೆ.</p>



<p>ಭಾರತದ ಸಂದರ್ಭದಲ್ಲಿ ಅಸ್ಪೃಶ್ಯತೆ ಅನುಭವಿಸಿದ ನಮ್ಮ ಜನರು, ಇಲ್ಲಿನ ಮಹಿಳೆಯರು ಮತ್ತು ಶೋಷಿತ ವರ್ಗಗಳು ಅಂಬೇಡ್ಕರ್ ಅವರನ್ನು ಬಿಟ್ಟು ಅಮಿತ್ ಶಾ ಅವರ ದೇವರ ಹೆಸರನ್ನು ಹೇಳುತ್ತಾ ಕೂತಿದ್ದರೆ ಇಷ್ಟೊತ್ತಿಗೆ ಅವರೆಲ್ಲರೂ ದೇವರ ಪಾದ ಸೇರಬೇಕಾಗಿತ್ತು.</p>



<p>ಹೀಗಾಗಿ ಪುಣ್ಯ ಗಿಣ್ಯ ಎಂದು ಹೇಳುತ್ತಾ ಸಮಾಜಕ್ಕೆ ಕಂಟಕಪ್ರಾಯವಾದ ಮೌಢ್ಯತೆಯನ್ನು ಆಚರಿಸುವುದಕ್ಕಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಷಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಈ ಮೂಲಕ ನಾನು ಆಗ್ರಹಿಸುತ್ತೇನೆ.!</p>



<p>ಜೊತೆಗೆ &#8221; ಯಾವ ಧರ್ಮ ಅಥವಾ ದೇವರು ನಮ್ಮನ್ನು ರಕ್ಷಣೆ ಮಾಡುವುದಿಲ್ಲ, ಬದಲಿಗೆ ಶಿಕ್ಷಣ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವವೇ ನಮ್ಮ ಬದುಕನ್ನು ಬದಲಿಸುವ ಕೀಲಿಕೈ&#8221; ಎಂಬ ಬಾಬಾ ಸಾಹೇಬರ ಮಾತನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುತ್ತೇನೆ</p>



<p><strong>ಹೆಚ್‌ ಸಿ ಮಹದೇವಪ್ಪ</strong></p>



<p></p>
]]></content:encoded>
					
		
		
			</item>
		<item>
		<title>ತಳಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ : ಉಪೇಂದ್ರ ಬಗ್ಗೆ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದೇನು?</title>
		<link>https://peepalmedia.com/what-did-minister-hc-mahadevappa-say-about-upendra/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 14 Aug 2023 05:38:05 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[Atrocity]]></category>
		<category><![CDATA[HC Mahadevappa]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[upendra]]></category>
		<guid isPermaLink="false">https://peepalmedia.com/?p=25475</guid>

					<description><![CDATA[ಕನ್ನಡ ಚಿತ್ರನಟ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋ ಒಂದು ಈಗ ಹೆಚ್ಚು ಸದ್ದು ಮಾಡುತ್ತಿದೆ. ಇದೇ ಕಾರಣಕ್ಕೆ ಉಪೇಂದ್ರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಅಟ್ರಾಸಿಟಿ ದಾಖಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಉಪೇಂದ್ರ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ತಾನು ಮಾಡಿದ ವಿಡಿಯೋ ಒಂದರಲ್ಲಿ ಕೆಳವರ್ಗವನ್ನು ನಿಂದಿಸುವ ಹಿನ್ನೆಲೆಯಲ್ಲಿ ಬಳಸಿರುವ ವಾಕ್ಯದ ಬಗ್ಗೆ ಜಾಲತಾಣ ಸೇರಿದಂತೆ ಎಲ್ಲೆಡೆ ಉಪೇಂದ್ರ ವಿರುದ್ಧ ಆಕ್ಷೇಪ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ [&#8230;]]]></description>
										<content:encoded><![CDATA[
<p>ಕನ್ನಡ ಚಿತ್ರನಟ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋ ಒಂದು ಈಗ ಹೆಚ್ಚು ಸದ್ದು ಮಾಡುತ್ತಿದೆ. ಇದೇ ಕಾರಣಕ್ಕೆ ಉಪೇಂದ್ರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಅಟ್ರಾಸಿಟಿ ದಾಖಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಉಪೇಂದ್ರ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.</p>



<p>ತಾನು ಮಾಡಿದ ವಿಡಿಯೋ ಒಂದರಲ್ಲಿ ಕೆಳವರ್ಗವನ್ನು ನಿಂದಿಸುವ ಹಿನ್ನೆಲೆಯಲ್ಲಿ ಬಳಸಿರುವ ವಾಕ್ಯದ ಬಗ್ಗೆ ಜಾಲತಾಣ ಸೇರಿದಂತೆ ಎಲ್ಲೆಡೆ ಉಪೇಂದ್ರ ವಿರುದ್ಧ ಆಕ್ಷೇಪ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪನವರು &#8216;ಉಪೇಂದ್ರ ಅವರಿಗೆ ಭಾರತದ ಇತಿಹಾಸ, ಚರಿತ್ರೆ ಸಾಂಸ್ಕೃತಿಕ ಬದುಕಿನ ಅರಿವು, ಸಾಮಾಜಿಕ ಅಸಮಾನತೆಗಳ ಪ್ರಜ್ಞೆ ಅಗತ್ಯವಾಗಿ ಇದೆ ಅಂದುಕೊಂಡಿದ್ದೆ. ಆದರೆ ಸಮಾಜದ ಕೆಳವರ್ಗಗಳ ಬಗೆಗಿರುವ ಅವರ ಅಸಹನೆ ಬಗ್ಗೆ ಬಲವಾಗಿ ಖಂಡಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<figure class="wp-block-image size-large"><img fetchpriority="high" decoding="async" width="1024" height="768" src="https://peepalmedia.com/wp-content/uploads/2023/08/69399401-1024x768.webp" alt="" class="wp-image-25448" srcset="https://peepalmedia.com/wp-content/uploads/2023/08/69399401-1024x768.webp 1024w, https://peepalmedia.com/wp-content/uploads/2023/08/69399401-300x225.webp 300w, https://peepalmedia.com/wp-content/uploads/2023/08/69399401-768x576.webp 768w, https://peepalmedia.com/wp-content/uploads/2023/08/69399401-150x113.webp 150w, https://peepalmedia.com/wp-content/uploads/2023/08/69399401-696x522.webp 696w, https://peepalmedia.com/wp-content/uploads/2023/08/69399401-1068x801.webp 1068w, https://peepalmedia.com/wp-content/uploads/2023/08/69399401.webp 1200w" sizes="(max-width: 1024px) 100vw, 1024px" /></figure>



<p>&#8220;ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ. ಇಂತಹ ವ್ಯಕ್ತಿಗೆ ಭಾರತದ ಇತಿಹಾಸ, ಚರಿತ್ರೆ ಸಾಂಸ್ಕೃತಿಕ ಬದುಕಿನ ಅರಿವು, ಸಾಮಾಜಿಕ ಅಸಮಾನತೆಗಳ ಪ್ರಜ್ಞೆ ಅಗತ್ಯವಾಗಿ ಇದೆ ಅಂದುಕೊಂಡಿದ್ದೆ. ಆದರೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ&#8221; ಎಂದು ಸಚಿವರಾದ ಹೆಚ್‌.ಸಿ.ಮಹದೇವಪ್ಪ ಉಪೇಂದ್ರ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.</p>



<p>ಇದನ್ನೂ ಓದಿ : <a href="https://peepalmedia.com/atracity-case-against-upendra/" data-type="link" data-id="https://peepalmedia.com/atracity-case-against-upendra/"><strong>ಉಪೇಂದ್ರ ವಿರುದ್ದ ‘ಅಟ್ರಾಸಿಟಿ ಕೇಸ್‌’ ದಾಖಲು</strong></a></p>



<p>&#8220;ಇನ್ನು ಸೂಕ್ಷ್ಮವಾಗಿ ಗಮನಿಸುವಾಗ ಉಪೇಂದ್ರ ಅವರು ತಮ್ಮ ಮಾತುಗಳಿಗೆ ಪೂರಕವಾಗಿ ಹೊಲಗೇರಿ ಎಂಬ ಪದವನ್ನು ಬಳಸಿರುವುದೇ ಅಪ್ರಸ್ತುತ. ಜೊತೆಗೆ ಅವರು ಕ್ಷಮೆಯಾಚನೆಯಲ್ಲೂ ಸಹ ನಾನೂ ಕೂಡಾ ಬಡತನದಿಂದ ಬಂದಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ ಬಡತನವೇ ಬೇರೆ ಜಾತಿ ಆಧಾರಿತವಾದ ಸಾಮಾಜಿಕ ಅಸಮಾನತೆಯೇ ಬೇರೆ ಎಂಬ ಸಂಗತಿಯು ಉಪೇಂದ್ರ ಅವರಿಗೆ ಸಹಜವಾಗಿ ತಿಳಿದಿಲ್ಲ ಎಂದು ಕಾಣುತ್ತದೆ. ಹೀಗಾಗಿ ಸಾರ್ವಜನಿಕ ಜೀವನದಲ್ಲಿ ಇರುವ ಅವರು ಈ ದೇಶದ ಅಸಮಾನತೆ ಮತ್ತು ನೋವಿನ ಚರಿತ್ರೆಯನ್ನೇ ತಿಳಿಯದಿದ್ದ ಮೇಲೆ ಇವರ ಸಮಾಜ ಬದಲಾಯಿಸುವಂತಹ ಮಾತುಗಳಿಗೆ ಯಾವ ಅರ್ಥವಿದೆ&#8221; ಎನ್ನುವ ಮೂಲಕ ಉಪೇಂದ್ರ ಅವರಿಗೆ ಸಾಮಾಜಿಕ ಅರಿವಿನ ಅಗತ್ಯವಿದೆ ಎಂದು ಹೇಳಿದ್ದಾರೆ.</p>



<p>ತಮ್ಮ ಸಾಮಾಜಿಕ ಜಾಲತಾಣದ ಖಾತೆಯ ಮೂಲಕ ಉಪೇಂದ್ರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಸಚಿವರು &#8220;ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಮುಂದೆ ಶೋಷಿತ ಸಮುದಾಯಗಳನ್ನು Taken for granted ಆಗಿ ಉಲ್ಲೇಖಿಸುವ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಸಮಾನ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು&#8221; ಎಂದೂ ತಿಳಿಸಿದ್ದಾರೆ.</p>



<p>ಪ್ರಸ್ತುತ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಕಡೆಗಳಲ್ಲಿ ಚಿತ್ರನಟ ಉಪೇಂದ್ರ ವಿರುದ್ಧ ದೂರು ದಾಖಲಾಗಿದ್ದು, ಈ ಪ್ರಕರಣ ಯಾವ ಹಂತಕ್ಕೆ ಹೋಗಲಿದೆ ಎಂಬುದನ್ನು ಕಾದು ನೋಡಬೇಕಿದೆ.</p>
]]></content:encoded>
					
		
		
			</item>
	</channel>
</rss>
