<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>HC &#8211; Peepal Media</title>
	<atom:link href="https://peepalmedia.com/tag/hc/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 02 Oct 2024 10:26:19 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>HC &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಓಲಾ ಚಾಲಕನಿಂದ ಲೈಂಗಿಕ ಕಿರುಕುಳ- ಕಂಪನಿಯೇ ಪರಿಹಾರ ನೀಡಬೇಕು ಎಂದ ಕರ್ನಾಟಕ ಹೈಕೋರ್ಟ್</title>
		<link>https://peepalmedia.com/karnataka-hc-asks-company-to-pay-damages-in-sexual-harassment-case-by-driver/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 02 Oct 2024 10:26:19 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[Bangalore]]></category>
		<category><![CDATA[driver]]></category>
		<category><![CDATA[HC]]></category>
		<category><![CDATA[karnataka]]></category>
		<category><![CDATA[Karnataka High Court]]></category>
		<category><![CDATA[Ola]]></category>
		<category><![CDATA[Sexual Harassment]]></category>
		<guid isPermaLink="false">https://peepalmedia.com/?p=46595</guid>

					<description><![CDATA[ಬೆಂಗಳೂರು: ಚಾಲಕನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಮಹಿಳೆಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಆತ ಕೆಲಸ ಮಾಡುವ ಎಎನ್‌ಐ ಟೆಕ್ನಾಲಜೀಸ್, ಕ್ಯಾಬ್ ಅಗ್ರಿಗೇಟರ್ ಓಲಾ ಮಾಲೀಕರು ಮತ್ತು ನಿರ್ವಾಹಕರಿಗೆ ಆದೇಶಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ, 2013, ಅಥವಾ POSH ಕಾಯಿದೆಯ ಅಡಿಯಲ್ಲಿ ಚಾಲಕನನ್ನು ಓಲಾ ಉದ್ಯೋಗಿ ಎಂದು ಪರಿಗಣಿಸಲಾಗುವುದು ಎಂದು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಚಾಲಕನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಮಹಿಳೆಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಆತ ಕೆಲಸ ಮಾಡುವ ಎಎನ್‌ಐ ಟೆಕ್ನಾಲಜೀಸ್, ಕ್ಯಾಬ್ ಅಗ್ರಿಗೇಟರ್ ಓಲಾ ಮಾಲೀಕರು ಮತ್ತು ನಿರ್ವಾಹಕರಿಗೆ ಆದೇಶಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.</p>



<p>ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ, 2013, ಅಥವಾ POSH ಕಾಯಿದೆಯ ಅಡಿಯಲ್ಲಿ ಚಾಲಕನನ್ನು ಓಲಾ ಉದ್ಯೋಗಿ ಎಂದು ಪರಿಗಣಿಸಲಾಗುವುದು ಎಂದು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ಏಕಸದಸ್ಯ ಪೀಠವು ತಿಳಿಸಿದೆ.</p>



<p>ಆಗಸ್ಟ್ 2018 ರಲ್ಲಿ ಬೆಂಗಳೂರಿನಲ್ಲಿರುವ ತನ್ನ ಕಚೇರಿಗೆ ಓಲಾ ಕ್ಯಾಬ್ ಬಳಸಿ ಹೋಗಿದ್ದೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.</p>



<p>ಚಾಲಕನು ತನ್ನನ್ನು ಕನ್ನಡಿಯ ಮೂಲಕ ನೋಡುತ್ತಿದ್ದನು ಮತ್ತು ಕಾರಿನಲ್ಲಿ ಹೋಗುವ ಸಮಯದಲ್ಲಿ ತನ್ನ ಫೋನ್‌ನಲ್ಲಿ ಅಶ್ಲೀಲ ವೀಡಿಯೊವನ್ನು ವೀಕ್ಷಿಸಿದನು ಎಂದು ಅವರು ಆರೋಪಿಸಿದ್ದರು. ಫೋನ್ ಮಹಿಳೆಗೆ ಕಾಣುವಂತೆ ಇಟ್ಟಿದ್ದಾಗಿ ಅವರು ತಿಳಿಸಿದ್ದಾರೆ.&nbsp;</p>



<p>ನಂತರ, ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಎನ್‌ಐ ಟೆಕ್ನಾಲಜೀಸ್‌ಗೆ ದೂರು ನೀಡಿದ್ದರು ಎಂದು ಲೈವ್ ಲಾ ವರದಿ ಮಾಡಿದೆ. ಆದರೆ, ಆಕೆಯ ದೂರನ್ನು ಪರಿಗಣಿಸಲಾಗಿಲ್ಲ, ಕಂಪನಿಯ ಆಂತರಿಕ ದೂರುಗಳ ಸಮಿತಿಯು ವಿಚಾರಣೆ ನಡೆಸಲು ನಿರಾಕರಿಸಿದೆ ಎಂದು ಮಹಿಳೆ ಹೇಳಿದ್ದರು.</p>



<p>ನಂತರ ಮಹಿಳೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ದೂರನ್ನು ಪರಿಶೀಲಿಸಲು ಎಎನ್‌ಐ ಟೆಕ್ನಾಲಜೀಸ್‌ಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ. ಕಂಪನಿಯು ಕಾಯಿದೆಗೆ ಬದ್ಧವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಅವರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ನಿರ್ದೇಶನಗಳನ್ನು ಕೋರಿದರು. ಆಗಸ್ಟ್ 20ರಂದು ಈ ಅರ್ಜಿಯ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು.</p>



<p>ವಿಚಾರಣೆಯ ಸಂದರ್ಭದಲ್ಲಿ, ಮಹಿಳೆಯ ಪರ ವಕೀಲರು ನ್ಯಾಯಾಲಯಕ್ಕೆ ಓಲಾ ಕೇವಲ ಪ್ಲಾಟ್‌ಫಾರ್ಮ್‌ ಅಲ್ಲ, ಸಾರಿಗೆ ಕಂಪನಿಯಂತೆ ವರ್ತಿಸಿದೆ ಎಂದು ಹೇಳಿದರು ಎಂದು ಲೈವ್ ಲಾ ವರದಿ ಮಾಡಿದೆ. &#8220;ಕಂಪನಿ ಮತ್ತು ಚಾಲಕನ ನಡುವೆ ಯಾವುದೇ ಒಪ್ಪಂದದ ಗೌಪ್ಯತೆಯಿಲ್ಲ ಹಾಗೂ ನನ್ನ ಮತ್ತು ಚಾಲಕನ ನಡುವೆಯೂ ಇಲ್ಲ&#8221; ಎಂದು ವಕೀಲರು ಹೇಳಿದರು.</p>



<p>ಚಾಲಕನ ಕೃತ್ಯಗಳಿಗೆ ಕಂಪನಿಯೇ ಹೊಣೆ ಎಂದು ಅರ್ಜಿದಾರರು ತಿಳಿಸಿದ್ದಾರೆ. &#8220;ನಾವು ನಿಮ್ಮ ಸುರಕ್ಷತೆಗೆ ಜವಾಬ್ದಾರರಲ್ಲ ಎಂದು OLA ಹೇಳಿದ್ದರೆ, ನಾನು [ಅರ್ಜಿದಾರ] ಕ್ಯಾಬ್ ಅನ್ನು ತೆಗೆದುಕೊಳ್ಳುತ್ತಿರಲಿಲ್ಲ&#8221; ಎಂದು ಆಕೆಯ ವಕೀಲರು ಹೇಳಿದ್ದಾರೆ.</p>



<p>POSH ಕಾಯಿದೆಯು ಕಂಪನಿಗೂ ಅನ್ವಯಿಸುತ್ತದೆ, ಆಂತರಿಕ ದೂರುಗಳ ಸಮಿತಿಯು ತನ್ನ ದೂರನ್ನು ತಳ್ಳಿಹಾಕಬಾರದು ಎಂದು ಅರ್ಜಿದಾರರು ವಾದಿಸಿದರು.</p>



<p>ಹಾಘಿದ್ದು, ಲೈವ್ ಲಾ ಪ್ರಕಾರ ಚಾಲಕರು ಸ್ವತಂತ್ರ ಗುತ್ತಿಗೆದಾರರಾಗಿರುವ ಸಂದರ್ಭಗಳಲ್ಲಿ ಕಾರ್ಮಿಕ ಕಾನೂನುಗಳನ್ನು ಅನ್ವಯಿಸಲಾಗುವುದಿಲ್ಲ ಎಂದು ಓಲಾ ಪರ ವಕೀಲರು ಹೇಳಿದರು . ಆದ್ದರಿಂದ ಓಲಾ ಚಾಲಕನ ಉದ್ಯೋಗದಾತನಲ್ಲ ಎಂದು ವಕೀಲರು ಹೇಳಿದರು. ಓಲಾ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಮತ್ತು ಅರ್ಜಿಯನ್ನು ವಜಾಗೊಳಿಸುವಂತೆ ನ್ಯಾಯಾಲಯಕ್ಕೆ ತಿಳಿಸಿದರು.</p>



<p>ಸೋಮವಾರದ ತನ್ನ ಆದೇಶದಲ್ಲಿ, ಪೀಠವು OLA ಮತ್ತು ಚಾಲಕರ ನಡುವಿನ ಚಂದಾದಾರಿಕೆ ಒಪ್ಪಂದದ ನಿಯಮಗಳ ವಿಶ್ಲೇಷಣೆಯಿಂದ, “PoSH ಕಾಯಿದೆ, 2013 ರ ಸೆಕ್ಷನ್ 2 (ಎಫ್) ಅಡಿಯಲ್ಲಿ ಒದಗಿಸಲಾದ &#8216;ಉದ್ಯೋಗಿ&#8217; ಎಂಬ ಪದದ ವ್ಯಾಖ್ಯಾನವು ಸ್ಪಷ್ಟವಾಗಿದೆ. ಉದ್ಯೋಗದಾತನು ಉದ್ಯೋಗಿಯೊಂದಿಗೆ ಹೊಂದಬಹುದಾದ ಎಲ್ಲಾ ಸಂಭಾವ್ಯ ಸಂಬಂಧಕ್ಕೆ ಅನುಗುಣವಾಗಿದೆ,” ಎಂದು ಹೇಳಿದೆ</p>



<p>ಕಾಯಿದೆಯ ಸೆಕ್ಷನ್ 2(ಎಫ್) ನೌಕರನನ್ನು ಕೆಲಸದ ಸ್ಥಳದಲ್ಲಿ ಕೆಲಸ ಮಾಡುವ ನಿಯಮಿತ, ತಾತ್ಕಾಲಿಕ ಅಥವಾ ad hoc ಆಧಾರದ ಮೇಲೆ ಕೆಲಸ ಮಾಡುವ ವ್ಯಕ್ತಿ ಎಂದು ವ್ಯಾಖ್ಯಾನಿಸುತ್ತದೆ.</p>



<p>ಕಾಯ್ದೆಯ ನಿಬಂಧನೆಗಳಿಗೆ ಅನುಗುಣವಾಗಿ ದೂರಿನ ವಿಚಾರಣೆ ನಡೆಸುವಂತೆ ಓಲಾ ಆಂತರಿಕ ದೂರುಗಳ ಸಮಿತಿಗೆ ಪೀಠ ಸೂಚಿಸಿದೆ. 90 ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ.</p>
]]></content:encoded>
					
		
		
			</item>
		<item>
		<title>ಹರ್ಷ ಕೊಲೆ ತನಿಖೆ ಎನ್‌ಐಎಗೆ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಜಾ ಮಾಡಿದ ಹೈಕೋರ್ಟ್</title>
		<link>https://peepalmedia.com/harsha-murder-case-to-nia-hc-dismissed-plea-of-accuse/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 01 Oct 2024 12:05:59 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[harsha]]></category>
		<category><![CDATA[harsha murder case]]></category>
		<category><![CDATA[HC]]></category>
		<category><![CDATA[high court]]></category>
		<category><![CDATA[hindutva]]></category>
		<category><![CDATA[karnataka]]></category>
		<category><![CDATA[shiamogga]]></category>
		<category><![CDATA[shimogga]]></category>
		<guid isPermaLink="false">https://peepalmedia.com/?p=46500</guid>

					<description><![CDATA[ಬೆಂಗಳೂರು: ರಾಜ್ಯದಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಿದ್ದ ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಕ್ಕೆ ವಹಿಸಿದ್ದನ್ನು ಪ್ರಶ್ನಿಸಿ ಹಾಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಶಿವಮೊಗ್ಗದ ಹೊಸಬೀದಿಯ ನಿವಾಸಿ ಎ.ರೋಷನ್ ಸಲ್ಲಿಸಿದ್ದ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ಜೆ ಎಂ ಖಾಜಿ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಪ್ರಕರಣವನ್ನು ಎನ್‍ಐಎಗೆ ವಹಿಸಲು ಅನುಮತಿ ಪಡೆದಿಲ್ಲ ಎಂಬ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ರಾಜ್ಯದಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಿದ್ದ ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಕ್ಕೆ ವಹಿಸಿದ್ದನ್ನು ಪ್ರಶ್ನಿಸಿ ಹಾಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>



<p>ಶಿವಮೊಗ್ಗದ ಹೊಸಬೀದಿಯ ನಿವಾಸಿ ಎ.ರೋಷನ್ ಸಲ್ಲಿಸಿದ್ದ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ಜೆ ಎಂ ಖಾಜಿ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ.</p>



<p>ಪ್ರಕರಣವನ್ನು ಎನ್‍ಐಎಗೆ ವಹಿಸಲು ಅನುಮತಿ ಪಡೆದಿಲ್ಲ ಎಂಬ ಅರ್ಜಿದಾರರ ಪರ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ. ಈ ಪ್ರಕರಣದ ಎಲ್ಲಾ ಅಂಶಗಳನ್ನು ಪರಿಶೀಲಿಸಿದ ನಂತರವಷ್ಟೇ ತನಿಖೆಯ ಹೊಣೆಯನ್ನು ಎನ್‍ಐಎಗೆ ವಹಿಸಲಾಗಿದೆ. ಏನೂ ಆಧಾರವಿಲ್ಲದೆ ತನಿಖೆ ವರ್ಗಾವಣೆ ಮಾಡಲಾಗಿದೆ ಎಂಬ ವಾದವನ್ನು ಒಪ್ಪಲಾಗದು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಈ ಮೂಲಕ ತನಿಖೆಯನ್ನು ಎನ್‍ಐಎಗೆ ವಹಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿದೆ.</p>



<p>2022ರ ಮಾರ್ಚ್‌ ತಿಂಗಳ 20ರಂದು ರಾತ್ರಿ ಶಿವಮೊಗ್ಗದಲ್ಲಿ ಹರ್ಷ ಎಂಬ ಹಿಂದುತ್ವ ಸಂಘಟನೆಯ ಯುವಕನ ಕೊಲೆ ನಡೆದಿತ್ತು. ಮೊದಲು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಐಪಿಸಿ ಸೆಕ್ಷನ್ 302 ಮತ್ತು ಸೆಕ್ಷನ್ 34ರಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ ಕೆಲವರನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಿದ್ದರು. ಕೊಲೆಯಾದ ಮಾರನೇ ದಿನವೇ ಕೇಂದ್ರ ಸರ್ಕಾರ ತನಿಖೆಯನ್ನು ಎನ್‍ಐಎಗೆ ವಹಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದರು.</p>



<p>ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಮೊದಲಿಗೆ ಸ್ಥಳೀಯ ಪೊಲೀಸ್ ಸ್ಟೇಷನ್‌ನಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು, ಆಮೇಲೆ ಪ್ರಕರಣ ಎನ್‍ಐಎಗೆ ವಹಿಸಿದಾಗ ಯುಎಪಿಎ ಕಲಂಗಳನ್ನು ಸೇರಿಸಲಾಗಿದೆ. ಆದರೆ, ಅದಕ್ಕೆ ಕೋರ್ಟ್ ಅನುಮತಿ ಪಡೆದಿಲ್ಲ. ಪ್ರಕರಣದಲ್ಲಿ ಯುಎಪಿಎ ರೀತಿಯ ಗಂಭೀರ ಕಾಯಿದೆ ಹೇರಲು ಯಾವುದೇ ಆಧಾರವಿಲ್ಲ. ಕೇವಲ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಯುಎಪಿಎ ಹೇರಲಾಗಿದೆ. ಜೊತೆಗೆ, ಪ್ರಕರಣದ ತನಿಖೆಯನ್ನು ಎನ್‍ಐಎಗೆ ವಹಿಸುವ ಮುನ್ನ ವಿವೇಚನೆ ಬಳಸಿಲ್ಲ. ಹಾಗಾಗಿ ಎನ್‍ಐಎ ದಾಖಲಿಸಿರುವ ಎಫ್‍ಐಆರ್ ಅಕ್ರಮವಾಗಿದೆ. ದೇಶಾದ್ಯಂತ ಇಂತಹ ಹಲವು ಕೊಲೆಗಳು ನಡೆಯುತ್ತಿರುತ್ತವೆ. ಒಂದು ಸಮುದಾಯಕ್ಕೆ ಕಿರುಕುಳ ನೀಡುವ ಉದ್ದೇಶದಿಂದಲೇ ತನಿಖೆ ಎನ್‍ಐಎಗೆ ವಹಿಸಲಾಗಿದೆ ಎಂದು ಆರೋಪಿಸಿ ವಾದಿಸಿದರು.</p>



<p>ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದ ಅಡಿಷನಲ್ ಸಾಲಿಸಿಟರ್ ಜನರಲ್ ಎಸ್.ವಿ.ರಾಜು, ಹರ್ಷ ಕೊಲೆ ಪ್ರಕರಣ ಭಯೋತ್ಪಾದಕರ ಒಂದು ಕೃತ್ಯ. ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಕೊಲೆ ಮಾಡಲಾಗಿದೆ. ಹರ್ಷ ಬಜರಂಗದಳ ಹಾಗೂ ಹಿಂದೂ ಸಂಘಟನೆಯ ಸಕ್ರೀಯ ಕಾರ್ಯಕರ್ತ. ಎಲ್ಲಾ ಸಾಕ್ಷಿಗಳ ಆಧರಿಸಿಯೇ ಪ್ರಕರಣದ ತನಿಖೆಯನ್ನು ಎನ್‍ಐಎಗೆ ಕೊಡಲಾಗಿದೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ.</p>
]]></content:encoded>
					
		
		
			</item>
	</channel>
</rss>
