<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>HD Devegowda &#8211; Peepal Media</title>
	<atom:link href="https://peepalmedia.com/tag/hd-devegowda/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 23 Dec 2024 19:00:27 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>HD Devegowda &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಸಕಲೇಶಪುರ ಜನರು ಕಾಡಾನೆ ಸಮಸ್ಯೆ ಎದುರಿಸುತ್ತಿದ್ದಾರೆ, ಈ ಬಗ್ಗೆ ದೆಹಲಿ ಮಟ್ಟದಲ್ಲಿ ಚರ್ಚೆಗಳು ನಡೆದಿವೆ &#8211; ಕೇಂದ್ರ ಸಚಿವ H D ಕುಮಾರಸ್ವಾಮಿ</title>
		<link>https://peepalmedia.com/people-of-sakaleshpur-are-facing-afforestation-problem-discussions-on-this-at-delhi-level-union-minister-h-d-kumaraswamy/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 23 Dec 2024 19:00:26 +0000</pubDate>
				<category><![CDATA[Featured]]></category>
		<category><![CDATA[ದೇಶ]]></category>
		<category><![CDATA[ರಾಜ್ಯ]]></category>
		<category><![CDATA[ಹಾಸನ]]></category>
		<category><![CDATA[coffee estate]]></category>
		<category><![CDATA[HD Devegowda]]></category>
		<category><![CDATA[HDK]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=51110</guid>

					<description><![CDATA[ಕಾಫಿ ಬೆಳೆಗಾರರಿಗೆ ಕೇಂದ್ರ ಸಚಿವರ ಅಭಯ ಪ್ರಾಕೃತಿಕ ಕಾರಣ ಹಾಗೂ ಪ್ರತಿಕೂಲಕರ ಹವಾಮಾನದಿಂದ ಕಾಫಿ ಬೆಳೆಗಾರರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜಾಗತಿಕ ಮಾರುಕಟ್ಟೆ ತಲ್ಲಣಗಳಿಂದ ಬೆಳೆಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. 1991ರಲ್ಲಿ ದೇವೇಗೌಡರು ಸಂಸದರಾಗಿದ್ದರು. ಸಕಲೇಶಪುರದಲ್ಲಿ ನಡೆದ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಅಂದಿನ ಕೇಂದ್ರ ಸಚಿವರಾಗಿದ್ದ ಐ.ಕೆ.ಗುಜ್ರಾಲ್ ಅವರು ಭಾಗವಹಿಸಿದ್ದರು. ಅಂದು ಗುಜ್ರಾಲ್ ಅವರಿಗೆ ದೇವೇಗೌಡರು ಕಾಫಿ ಬೆಳೆಗಾರರ ಸಮಸ್ಯೆ ವಿವರಿಸಿದ್ದರು. ಅವರನ್ನು ಬಿಟ್ಟರೆ ನಲವತ್ತು ವರ್ಷಗಳ ನಂತರ ಸಕಲೇಶಪುರಕ್ಕೆ ಬಂದಿರುವ ಕೇಂದ್ರ ಸಚಿವರು ಅಂದರೆ ಫಿಯುಷ್ ಗೋಯೆಲ್ ಅವರು [&#8230;]]]></description>
										<content:encoded><![CDATA[
<p><strong>ಕಾಫಿ ಬೆಳೆಗಾರರಿಗೆ ಕೇಂದ್ರ ಸಚಿವರ ಅಭಯ</strong></p>



<p>ಪ್ರಾಕೃತಿಕ ಕಾರಣ ಹಾಗೂ ಪ್ರತಿಕೂಲಕರ ಹವಾಮಾನದಿಂದ ಕಾಫಿ ಬೆಳೆಗಾರರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜಾಗತಿಕ ಮಾರುಕಟ್ಟೆ ತಲ್ಲಣಗಳಿಂದ ಬೆಳೆಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. 1991ರಲ್ಲಿ ದೇವೇಗೌಡರು ಸಂಸದರಾಗಿದ್ದರು. ಸಕಲೇಶಪುರದಲ್ಲಿ ನಡೆದ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಅಂದಿನ ಕೇಂದ್ರ ಸಚಿವರಾಗಿದ್ದ ಐ.ಕೆ.ಗುಜ್ರಾಲ್ ಅವರು ಭಾಗವಹಿಸಿದ್ದರು. ಅಂದು ಗುಜ್ರಾಲ್ ಅವರಿಗೆ ದೇವೇಗೌಡರು ಕಾಫಿ ಬೆಳೆಗಾರರ ಸಮಸ್ಯೆ ವಿವರಿಸಿದ್ದರು. ಅವರನ್ನು ಬಿಟ್ಟರೆ ನಲವತ್ತು ವರ್ಷಗಳ ನಂತರ ಸಕಲೇಶಪುರಕ್ಕೆ ಬಂದಿರುವ ಕೇಂದ್ರ ಸಚಿವರು ಅಂದರೆ ಫಿಯುಷ್ ಗೋಯೆಲ್ ಅವರು ಮಾತ್ರ. ಅದಕ್ಕಾಗಿ ನಾನು ಗೋಯಲ್ ಅವರಿಗೆ ಆಭಾರಿ ಆಗಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.</p>



<p>ಪಿಯೂಷ್ ಗೋಯಲ್ ಅವರು ಸಕಲೇಶಪುರಕ್ಕೆ ಬಂದಿರುವ ಕಾರಣಕ್ಕೆ ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಖಂಡಿತವಾಗಿಯೂ ಪರಿಹಾರ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಕೇಂದ್ರ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.</p>



<p>ಸಕಲೇಶಪುರ ಜನರು ಆನೆ ಹಾವಳಿಗೆ ತುತ್ತಾಗಿ ಬಹಳಷ್ಟು ಕಷ್ಟ ಎದುರಿಸುತ್ತಿದ್ದಾರೆ. ಈ ಬಗ್ಗೆ ದೆಹಲಿ ಮಟ್ಟದಲ್ಲಿ ಚರ್ಚೆಗಳು ನಡೆದಿವೆ. ನಾನೂ ಮನವಿ ಮಾಡಿದ್ದೇನೆ. ಕೇಂದ್ರದಲ್ಲಿ ಪರಿಸರ ಇಲಾಖೆ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅವರ ಗಮನಕ್ಕೆ ಮತ್ತೊಮ್ಮೆ ಈ ವಿಷಯ ತರುತ್ತೇನೆ. ಪಿಯೂಷ್ ಗೋಯಲ್ ಮತ್ತು ನಾನು ಭೇಟಿ ಮಾಡಿ ಮನವಿ ಮಾಡುತ್ತೇವೆ. ಆನೆ ಕಾರಿಡಾರ್ ನಿರ್ಮಾಣ ಮಾಡಲು ಅರಣ್ಯ ಇಲಾಖೆ ಹದಿನೈದು ಸಾವಿರ ಎಕರೆ ಗುರುತಿಸಿದೆ. ರೈತರು ಮೂರು ಸಾವಿರ ಎಕರೆ ಬಿಟ್ಟುಕೊಡಲು ಸಿದ್ದರಿದ್ದಾರೆ. ಆದರೆ ಆ ಯೋಜನೆ ನೆನೆಗುದಿಗೆ ಬಿದ್ದಿದೆ. ನಾನು ಮುಖ್ಯಮಂತ್ರಿಯಾದಾಗ ತಡೆಗೋಡೆ ನಿರ್ಮಾಣ ಮಾಡಲು ನೂರು ಕೋಟಿ ಬಿಡುಗಡೆ ಮಾಡಿದ್ದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.</p>



<figure class="wp-block-image size-large"><img fetchpriority="high" decoding="async" width="1024" height="683" src="https://peepalmedia.com/wp-content/uploads/2024/12/919b9019-929b-4402-b196-fa7ccad893a6-1024x683.jpg" alt="" class="wp-image-51112" srcset="https://peepalmedia.com/wp-content/uploads/2024/12/919b9019-929b-4402-b196-fa7ccad893a6-1024x683.jpg 1024w, https://peepalmedia.com/wp-content/uploads/2024/12/919b9019-929b-4402-b196-fa7ccad893a6-300x200.jpg 300w, https://peepalmedia.com/wp-content/uploads/2024/12/919b9019-929b-4402-b196-fa7ccad893a6-768x512.jpg 768w, https://peepalmedia.com/wp-content/uploads/2024/12/919b9019-929b-4402-b196-fa7ccad893a6-150x100.jpg 150w, https://peepalmedia.com/wp-content/uploads/2024/12/919b9019-929b-4402-b196-fa7ccad893a6-696x464.jpg 696w, https://peepalmedia.com/wp-content/uploads/2024/12/919b9019-929b-4402-b196-fa7ccad893a6-1068x712.jpg 1068w, https://peepalmedia.com/wp-content/uploads/2024/12/919b9019-929b-4402-b196-fa7ccad893a6.jpg 1080w" sizes="(max-width: 1024px) 100vw, 1024px" /></figure>



<p>ಕಸ್ತೂರಿ ರಂಗನ್ ವರದಿ ಬಗ್ಗೆ ಎಲ್ಲರಲ್ಲೂ ಆತಂಕ ಇದೆ. ಹೇಮಾವತಿ ನದಿಯ ನೀರು ಮಲೆನಾಡು ಭಾಗದ ಜನರ ತ್ಯಾಗದ ಫಲ. ಎತ್ತಿನಹೊಳೆ ಯೋಜನೆ ಹೆಸರಿನಲ್ಲಿ ರಸ್ತೆ ಅಭಿವೃದ್ಧಿ ಮಾಡಲು ಅನುಕೂಲವಾಗಿದೆ ಎಂದು ಅವರು ಹೇಳಿದರು.</p>



<p>ದೇವೇಗೌಡರ ಮೇಲೆ ಅಪಾರ ಗೌರವ ಇಟ್ಟಿರುವ ನರೇಂದ್ರಮೋದಿ ಅವರು ತಮ್ಮ ಸಂಪುಟದಲ್ಲಿ ನನಗೊಂದು ಅವಕಾಶ ಮಾಡಿಕೊಟ್ಟಿದ್ದಾರೆ. ಅವರ ಕನಸಿನ ವಿಕಸಿತ ಭಾರತ್ ಸೇರಿದಂತೆ ಅನೇಕ ಯೋಜನೆಗಳನ್ನು ಸಾಕಾರಗೊಳಿಸಬೇಕು. ಆ ನಿಟ್ಟಿನಲ್ಲಿ ನಾವು ವೇಗವಾಗಿ ಕೆಲಸ ಮಾಡುತ್ತಿದ್ದೇವೆ ಎಂದರು ಸಚಿವರು.</p>



<p>ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರು ಕಾಫಿ ಬೆಳೆಗಾರರನ್ನು ಉದ್ದೇಶಿಸಿ ಮಾತನಾಡಿದರು.</p>



<p>ಮಾಜಿ ಸಚಿವರಾದ ಹೆಚ್.ಕೆ.ಕುಮಾರಸ್ವಾಮಿ, ಮೋಟಮ್ಮ, ಕರ್ನಾಟಕ ಗ್ರೋವರ್ಸ್ ಫೆಡರೇಶನ್ ಅಧ್ಯಕ್ಷ ಡಾ.ಹೆಚ್.ಟಿ. ಮೋಹನ್ ಕುಮಾರ್, ಸಂಸದರಾದ ತೇಜಸ್ವಿ ಸೂರ್ಯ, ಶ್ರೇಯಸ್ ಪಟೇಲ್, ಶಾಸಕರಾದ ಎಸ್.ಮಂಜುನಾಥ್, ಹೆಚ್.ಕೆ. ಸುರೇಶ್, ಮಂಥರ್ ಗೌಡ, ಸ್ವರೂಪ್ ಪ್ರಕಾಶ್, ಕಾಫಿ ಮಂಡಳಿ ಅಧ್ಯಕ್ಷ ಡಿ.ಜೆ.ದಿನೇಶ್ ಸೇರಿದಂತೆ ಅನೇಕ ಗಣ್ಯರು, ಕಾಫಿ ಬೆಳೆಗಾರರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.</p>
]]></content:encoded>
					
		
		
			</item>
		<item>
		<title>ಈ ರೀತಿ ಹತ್ತು ಸಮಾವೇಶ ಮಾಡಿದ್ರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ: ಕಾಂಗ್ರೇಸ್‌ಗೆ ರೇವಣ್ಣ ತಿರುಗೇಟು</title>
		<link>https://peepalmedia.com/even-if-you-hold-tens-conventions-like-this-i-wont-be-bothered-revanna/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 09 Dec 2024 13:35:47 +0000</pubDate>
				<category><![CDATA[ರಾಜಕೀಯ]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[Hasana]]></category>
		<category><![CDATA[HD Devegowda]]></category>
		<category><![CDATA[hd kumaraswami]]></category>
		<category><![CDATA[HD Revanna]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<guid isPermaLink="false">https://peepalmedia.com/?p=50469</guid>

					<description><![CDATA[ಹಾಸನ: ಈತರ ಹತ್ತು ಸಮಾವೇಶ ಮಾಡಿ ಹೇಳಿಕೆ ನೀಡಿದರೂ ಏನು ಆಗಲ್ಲ. ನಾನು ತಲೆ ಕೆಡಿಸಿಕೊಳ್ಳಲ್ಲ. ಕೇಳಿದ ಸಾಕ್ಷಿಗುಡ್ಡೆ ಬಗ್ಗೆ ಪ್ರಸ್ತಾಪಿಸಿದಲ್ಲದೇ ಈಗ ಕಾಂಗ್ರೆಸ್ ಪಕ್ಷ ಇಲ್ಲಾ. ಇರೋದು ನಕಲಿ ಕಾಂಗ್ರೆಸ್ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿರುಗೇಟು ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೇವಣ್ಣ, &#8220;ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ 28 ಸಾವಿರ ಕೋಟಿ ಸಾಲಾಮನ್ನಾ ಮಾಡಿದ್ರು. ಯಾವ ಆಂದೋಲನ ಇದು? ಈಗ ಜನರು ಸಂಕಷ್ಟದಲ್ಲಿ ಇದಾಗೆ ಒಮ್ಮೆ ರೈತರ ಸಾಲಾ [&#8230;]]]></description>
										<content:encoded><![CDATA[
<pre class="wp-block-code"><code><strong>ಈ ರೀತಿ ಹತ್ತು ಸಮಾವೇಶ ಮಾಡಿದ್ರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ಈಗ ಇರುವುದು ನಕಲಿ ಕಾಂಗ್ರೆಸ್ ಎಂದು ಕಾಂಗ್ರೇಸ್‌ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಹೆಚ್.ಡಿ. ರೇವಣ್ಣ</strong></code></pre>



<p><strong>ಹಾಸನ: </strong>ಈತರ ಹತ್ತು ಸಮಾವೇಶ ಮಾಡಿ ಹೇಳಿಕೆ ನೀಡಿದರೂ ಏನು ಆಗಲ್ಲ. ನಾನು ತಲೆ ಕೆಡಿಸಿಕೊಳ್ಳಲ್ಲ. ಕೇಳಿದ ಸಾಕ್ಷಿಗುಡ್ಡೆ ಬಗ್ಗೆ ಪ್ರಸ್ತಾಪಿಸಿದಲ್ಲದೇ ಈಗ ಕಾಂಗ್ರೆಸ್ ಪಕ್ಷ ಇಲ್ಲಾ. ಇರೋದು ನಕಲಿ ಕಾಂಗ್ರೆಸ್ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿರುಗೇಟು ನೀಡಿದರು.</p>



<p>ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೇವಣ್ಣ, &#8220;ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ 28 ಸಾವಿರ ಕೋಟಿ ಸಾಲಾಮನ್ನಾ ಮಾಡಿದ್ರು. ಯಾವ ಆಂದೋಲನ ಇದು? ಈಗ ಜನರು ಸಂಕಷ್ಟದಲ್ಲಿ ಇದಾಗೆ ಒಮ್ಮೆ ರೈತರ ಸಾಲಾ ಮನ್ನಾ ಮಾಡಲಿ! ಐದು ಗ್ಯಾರಂಟಿ ಕೊಟ್ಟಿದಾರೆ ಇನ್ನೊಂದು ಗ್ಯಾರಂಟಿ ಕೊಡಿ. ಹಾಸನದಲ್ಲಿ ಆರು ಜಿಲ್ಲೆ ಜನ ಕರೆತಂದು ಸಮಾವೇಶ ಮಾಡಿದ್ದಾರೆ. ಜಿಲ್ಲೆಗೆ ಇವರ ಕೊಡುಗೆ ಏನಿದೆ? ಸ್ವಾಭಿಮಾನಿ ಅಂತೆ, ಜನ ಕಲ್ಯಾಣ ಅಂತೆ. ದೇವೇಗೌಡರು ಪ್ರಧಾನಮಂತ್ರಿ ಇದ್ದಾಗ ಕೇಂದ್ರ ಸರ್ಕಾರದ ನಬಾರ್ಡ್‌ನಿಂದ ರೈತರಿಗೆ ಕಾರ್ಯಕ್ರಮ ರೂಪದಲ್ಲಿ ಸಾಲ ಕೊಡುವಂತೆ ಮಾಡಿದ್ರು. ನಬಾರ್ಡ್ ಮೂಲಕ ರೈತರಿಗೆ ಲೋನ್ ಕೊಡುವುದು, ರಸ್ತೆಗೆ ಹಣ ಕೊಡುವುದು ಮಾಡಿದ್ದು, ದೇವೇಗೌಡರು ಏನು ಪ್ರಸ್ತಾವನೆ ಮಾಡಲ್ಲ ಅಂತ ಇವತ್ತು ರಾಜ್ಯ ಸರ್ಕಾರದವರು ಹೇಳುತ್ತಿದ್ದಾರೆ. ನಬಾರ್ಡ್‌ನಿಂದ ಅಪೆಕ್ಸ್ ಬ್ಯಾಂಕ್‌ಗೆ 70% ಹಣ ಕೊಡುತ್ತಿದ್ದರು. ಕೇಂದ್ರದಿಂದ ಸಿಗುವ ಸೌಲಭ್ಯವನ್ನು ರಾಜ್ಯಕ್ಕೆ ದೊರಕುವಂತೆ ಮಾಡಿದ್ದೇ ದೇವೇಗೌಡರು. ಕುಮಾರಸ್ವಾಮಿ ಸಾಲಮನ್ನಾ ಮಾಡದಿದ್ದರೆ 21 ಬ್ಯಾಂಕ್‌ಗಳು ಮುಳುಗಿ ಹೋಗುತ್ತಿದ್ದವು. ದೇವೇಗೌಡರನ್ನ ಸಾಕ್ಷಿ ಗುಡ್ಡೆ ಕೇಳ್ತಾರೆ. ಅಪೆಕ್ಸ್ ಬ್ಯಾಂಕ್‌ಗೆ 9162 ಕೋಟಿ ಕೊಡಿ ಎಂದು ಕೇಂದ್ರ, ಆರ್‌ಬಿಐ, ನಬಾರ್ಡ್‌ಗೆ ದೇವೇಗೌಡರು ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರವನ್ನು ವಿಶ್ವಾಸಕ್ಕೆ ಇಟ್ಟುಕೊಳ್ಳಬೇಕು. ಆದರೇ ಬೆಳಿಗ್ಗೆ ಎದ್ದರೆ ಪ್ರಧಾನಮಂತ್ರಿಯನ್ನು ಬೈತಾರೆ. ವಿಶ್ವಾಸ ಇಟ್ಟುಕೊಂಡರೆ ಮಾತ್ರ ಏನಾದರೂ ಕೊಡ್ತಾರೆ ಎಂದು ಟಾಂಗ್ ನೀಡಿದರು. ಕುಮಾರಸ್ವಾಮಿ ಹಾಸನ ಜಿಲ್ಲೆಯಲ್ಲಿ ಸಹಕಾರ ಬ್ಯಾಂಕ್‌ಗಳ 531 ಕೋಟಿ ಸಾಲಮನ್ನ ಮಾಡಿದ್ದು, 9600 ಕೋಟಿ ರಾಷ್ಟ್ರೀಯ ಬ್ಯಾಂಕ್‌ಗಳ ಸಾಲಮನ್ನ ಆಗಿದೆ. ಕಾಂಗ್ರೆಸ್‌ನವರೇ ರೈತರ ಬಗ್ಗೆ ಮಾತನಾಡುತ್ತಿರಲ್ಲಾ ಮೊದಲು ರೈತರ ಸಾಲಮನ್ನ ಮಾಡಿ. ದೇವೇಗೌಡರ ರಾಜಕೀಯ ಮುಗಿದು ಹೋಯ್ತು ಅಂತ ಬಾಷಣ ಮಾಡ್ತಾರೆ. ಈ ಜಿಲ್ಲೆಗೆ ಕಾಂಗ್ರೆಸ್ ಪಕ್ಷ ಏನು ಕೊಡುಗೆ ಕೊಟ್ಟಿದೆ ಎಂಬುದನ್ನು ಹೇಳಲಿ. ಬ್ರಿಟಿಷರ ಕಾಲದಲ್ಲಿ ಆಗಿದ್ದ ರೈಲ್ವೆ ಮಾರ್ಗ ಕಿತ್ತುಕೊಂಡು ಹೋದರವರು ಕಾಂಗ್ರೆಸ್‌ನವರು,&#8221; ಎಂದು ಕಾಂಗ್ರೇಸಿನ ಮೇಲೆ ಹರಿಹಾಯ್ದರು.</p>



<p>&#8220;ದೇವೇಗೌಡರು ಪ್ರಧಾನಮಂತ್ರಿಯಾಗಿ ಹತ್ತುವರೆ ತಿಂಗಳಿನಲ್ಲಿ ರೈಲ್ವೆ ಮಾರ್ಗ ಮಾಡಿದ್ರು. ಡಿಸಿಎಂ ಈ ಜಿಲ್ಲೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು. ರೈಲ್ವೆ ಮಾರ್ಗ, ಕೋರ್ಟ್, ಬಸ್ಟಾಂಡ್ ಕಟ್ಟಿದ್ದು ಯಾರು? ಇವೆಲ್ಲಾ ಸಾಕ್ಷಿ ಗುಡ್ಡೆಗಳಲ್ಲವಾ! ಗಿರಾಕಿಗಳೇ ಆಸ್ಪತ್ರೆ, ಇಂಜಿನಿಯರ್, ಮೆಡಿಕಲ್ ಕಾಲೇಜು, ಪಶುವೈದ್ಯಕೀಯ ಕಾಲೇಜು, ನರ್ಸಿಂಗ್ ಕಾಲೇಜುಗಳನ್ನು ನೋಡಿ.&#8221;</p>



<p>&#8220;ಈ ಜಿಲ್ಲೆಯ ಜನ ದೇವೇಗೌಡರಿಗೆ, ನಮ್ಮ ಕುಟುಂಬಕ್ಕೆ ರಾಜಕೀಯ ಶಕ್ತಿ ಕೊಟ್ಟಿದ್ದಾರೆ. ಅವರ ಋಣ ನಮ್ಮ ಮೇಲೆ ಇದೆ, ಅದನ್ನು ತೀರಿಸುತ್ತೇವೆ. ನನ್ನ ಕೈಲಾದ ಕೆಲಸವನ್ನು ಈ ಜಿಲ್ಲೆಗೆ ಮಾಡುತ್ತೇನೆ. ಇಂತಹ ಹತ್ತು ಸಮಾವೇಶ ಮಾಡಿದ್ರೆ ನಾನೇನು ತಲೆ ಕೆಡಿಸಿಕೊಡಲ್ಲ. ಇವರಿಗೆ ತಾಕತ್ ಇದ್ದರೆ ಕಾಂಗ್ರೆಸ್ ಬಿಟ್ಟು ಬಂದು ನಮ್ಮ ರೀತಿ ಪಕ್ಷ ಕಟ್ಟಲಿ,&#8221; ಎಂದು ಸವಾಲು ಎಸೆದರು.</p>



<p>&#8220;ಹಿಂದಿನ ಕಾಂಗ್ರೆಸ್ ಈಗ ಇಲ್ಲ, ಈಗ ಇರುವುದು ನಕಲಿ ಕಾಂಗ್ರೆಸ್. ಒಕ್ಕಲಿಗ ನಾಯಕರನ್ನು ಬೆಳೆಸಿಲ್ಲ ಅಂತಾರೆ, ಇವರು ಬಿಎಲ್ ಶಂಕರ್ ಕರೆದೊಯ್ದು ಏನು ಮಾಡಿದ್ರು. ನಮ್ಮಿಂದ ವಲಸೆ ಹೋದವರು ಅಲ್ಲಿ ಇರುವವರು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ವಾಗ್ದಾಳಿ ನಡೆಸಿದರು. ಜೇನುಕಲ್ಲು ಸಿದ್ದೇಶ್ವರನೇ ಇದಕ್ಕೆ ಸಾಕ್ಷಿ ಎಂದರು. ಮೂರು ಚುನಾವಣೆಯಲ್ಲಿ ಒಂದು ರೂಪಾಯಿ ಖರ್ಚು ಮಾಡಿಸದೆ ಎಲೆಕ್ಷನ್ ಮಾಡಿ ಗೆಲ್ಲಿಸಿಕೊಂಡು ಬಂದಿದ್ದೇನೆ. ಇವರೆಲ್ಲ ಜೆಡಿಎಸ್ ಮುಗಿದುಹೋಯ್ತು ಅಂತಾರೆ. ೨೦೨೮ ಕ್ಕೆ ಜೆಡಿಎಸ್ ಏನು ಎಂದು ಗೊತ್ತಾಗುತ್ತದೆ ಎಂದು ಪಕ್ಷ ಬಿಟ್ಟವರಿಗೆ ಬಿಸಿ ಮುಟ್ಟಿಸಿದರು. ಹಾಸನದಲ್ಲಿ ಯಾವಾಗ ಸಮಾವೇಶ ಮಾಡಬೇಕು ಎಲ್ಲರೂ ಕೂತು ಚರ್ಚೆ ಮಾಡುತ್ತೇವೆ. ದೇವೇಗೌಡರು ಮೇಕೆದಾಟು ಬಗ್ಗೆ ಪಾರ್ಲಿಮೆಂಟ್ ನಲ್ಲಿ ಮಾತನಾಡಿದ್ದಾರೆ. ಹಾಸನದ ಔಟರ್ ರಿಂಗ್ ರೋಡ್ ಗೆ ೭೫೦ ಕೋಟಿ ಅನುದಾನಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ,&#8221; ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>



<p>ಈ ಸಂದರ್ಭದಲ್ಲಿ ಹೆಚ್.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜು, ಜೆಡಿಎಸ್ ಮುಖಂಡರಾದ ಗಿರೀಶ್ ಚನ್ನವೀರಪ್ಪ, ಬಿದರಿಕೆರೆ ಜಯರಾಂ, ಜಗದೀಶ್, ನಾಗರಾಜು ಇತರರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಮುಖ್ಯಮಂತ್ರಿ ಚಂದ್ರು ನೇತೃತ್ವದ ರಾಜ್ಯ ಎಎಪಿ ಮುಖಂಡರಿಂದ ದೇವೇಗೌಡರ ಭೇಟಿ</title>
		<link>https://peepalmedia.com/deve-gowda-visited-by-state-aap-leaders/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 26 Jul 2023 12:56:28 +0000</pubDate>
				<category><![CDATA[ರಾಜಕೀಯ]]></category>
		<category><![CDATA[AAP]]></category>
		<category><![CDATA[HD Devegowda]]></category>
		<category><![CDATA[mukyamantri chandru]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=24401</guid>

					<description><![CDATA[ದೆಹಲಿ ಸರ್ಕಾರದ ಮೇಲಿನ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ವಿರುದ್ಧ ದನಿಗೂಡಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ‌ ದೇವೇಗೌಡರಿಗೆ ರಾಜ್ಯ ಎಎಪಿ ಮುಖಂಡರು ಮನವಿ ಮಾಡಿದರು. ಜುಲೈ 26 ರ ಸಂಜೆ ದೇವೇಗೌಡರ ಮನೆಗೆ ತೆರಳಿದ ಮುಖ್ಯಮಂತ್ರಿ ಚಂದ್ರು ನೇತೃತ್ವದ ಆಮ್ ಆದ್ಮಿ ಪಕ್ಷದ ಮುಖಂಡರು ದೆಹಲಿ ಸರ್ಕಾರದ ಪರ ನಿಲ್ಲಲು ಕೋರಿಕೊಂಡರು. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ರವರನ್ನು ಅವರ ಮನೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೌಹಾರ್ದ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು. [&#8230;]]]></description>
										<content:encoded><![CDATA[
<p>ದೆಹಲಿ ಸರ್ಕಾರದ ಮೇಲಿನ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ವಿರುದ್ಧ ದನಿಗೂಡಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ‌ ದೇವೇಗೌಡರಿಗೆ ರಾಜ್ಯ ಎಎಪಿ ಮುಖಂಡರು ಮನವಿ ಮಾಡಿದರು. ಜುಲೈ 26 ರ ಸಂಜೆ ದೇವೇಗೌಡರ ಮನೆಗೆ ತೆರಳಿದ ಮುಖ್ಯಮಂತ್ರಿ ಚಂದ್ರು ನೇತೃತ್ವದ ಆಮ್ ಆದ್ಮಿ ಪಕ್ಷದ ಮುಖಂಡರು ದೆಹಲಿ ಸರ್ಕಾರದ ಪರ ನಿಲ್ಲಲು ಕೋರಿಕೊಂಡರು.</p>



<p>ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ರವರನ್ನು ಅವರ ಮನೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೌಹಾರ್ದ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು. ನಂತರ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಹಾಗೂ ದೇಶದ ಒಕ್ಕೂಟ ವ್ಯವಸ್ಥೆಯನ್ನು ಉಳಿಸಲು ನೀವು ದನಿಗೂಡಿಸಬೇಕೆಂದು ಮನವಿ ಮಾಡಿದರು.</p>



<p>ಹಾಗೆಯೇ ದೆಹಲಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಬೇಕೆಂದು ಮುಖ್ಯಮಂತ್ರಿ ಚಂದ್ರು ಮನವಿ ಮಾಡಿಕೊಂಡರು.</p>



<p>ಇದೇ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ, ಸಂವಹನ ಉಸ್ತುವಾರಿ ಬ್ರಿಜೇಶ್ ಕಾಳಪ್ಪ, ಜಗದೀಶ್ ವಿ ಸದಂ, ದರ್ಶನ್ ಜೈನ್, ಬಸವರಾಜ್ ಸೇರಿದಂತೆ ಪಕ್ಷದ ಅನೇಕ ಮುಖಂಡರುಗಳು ಭಾಗವಹಿಸಿದ್ದರು.</p>
]]></content:encoded>
					
		
		
			</item>
	</channel>
</rss>
