<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>hd kumaraswami &#8211; Peepal Media</title>
	<atom:link href="https://peepalmedia.com/tag/hd-kumaraswami/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 09 Dec 2024 13:38:13 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>hd kumaraswami &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಈ ರೀತಿ ಹತ್ತು ಸಮಾವೇಶ ಮಾಡಿದ್ರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ: ಕಾಂಗ್ರೇಸ್‌ಗೆ ರೇವಣ್ಣ ತಿರುಗೇಟು</title>
		<link>https://peepalmedia.com/even-if-you-hold-tens-conventions-like-this-i-wont-be-bothered-revanna/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 09 Dec 2024 13:35:47 +0000</pubDate>
				<category><![CDATA[ರಾಜಕೀಯ]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[Hasana]]></category>
		<category><![CDATA[HD Devegowda]]></category>
		<category><![CDATA[hd kumaraswami]]></category>
		<category><![CDATA[HD Revanna]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<guid isPermaLink="false">https://peepalmedia.com/?p=50469</guid>

					<description><![CDATA[ಹಾಸನ: ಈತರ ಹತ್ತು ಸಮಾವೇಶ ಮಾಡಿ ಹೇಳಿಕೆ ನೀಡಿದರೂ ಏನು ಆಗಲ್ಲ. ನಾನು ತಲೆ ಕೆಡಿಸಿಕೊಳ್ಳಲ್ಲ. ಕೇಳಿದ ಸಾಕ್ಷಿಗುಡ್ಡೆ ಬಗ್ಗೆ ಪ್ರಸ್ತಾಪಿಸಿದಲ್ಲದೇ ಈಗ ಕಾಂಗ್ರೆಸ್ ಪಕ್ಷ ಇಲ್ಲಾ. ಇರೋದು ನಕಲಿ ಕಾಂಗ್ರೆಸ್ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿರುಗೇಟು ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೇವಣ್ಣ, &#8220;ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ 28 ಸಾವಿರ ಕೋಟಿ ಸಾಲಾಮನ್ನಾ ಮಾಡಿದ್ರು. ಯಾವ ಆಂದೋಲನ ಇದು? ಈಗ ಜನರು ಸಂಕಷ್ಟದಲ್ಲಿ ಇದಾಗೆ ಒಮ್ಮೆ ರೈತರ ಸಾಲಾ [&#8230;]]]></description>
										<content:encoded><![CDATA[
<pre class="wp-block-code"><code><strong>ಈ ರೀತಿ ಹತ್ತು ಸಮಾವೇಶ ಮಾಡಿದ್ರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ಈಗ ಇರುವುದು ನಕಲಿ ಕಾಂಗ್ರೆಸ್ ಎಂದು ಕಾಂಗ್ರೇಸ್‌ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಹೆಚ್.ಡಿ. ರೇವಣ್ಣ</strong></code></pre>



<p><strong>ಹಾಸನ: </strong>ಈತರ ಹತ್ತು ಸಮಾವೇಶ ಮಾಡಿ ಹೇಳಿಕೆ ನೀಡಿದರೂ ಏನು ಆಗಲ್ಲ. ನಾನು ತಲೆ ಕೆಡಿಸಿಕೊಳ್ಳಲ್ಲ. ಕೇಳಿದ ಸಾಕ್ಷಿಗುಡ್ಡೆ ಬಗ್ಗೆ ಪ್ರಸ್ತಾಪಿಸಿದಲ್ಲದೇ ಈಗ ಕಾಂಗ್ರೆಸ್ ಪಕ್ಷ ಇಲ್ಲಾ. ಇರೋದು ನಕಲಿ ಕಾಂಗ್ರೆಸ್ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿರುಗೇಟು ನೀಡಿದರು.</p>



<p>ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೇವಣ್ಣ, &#8220;ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ 28 ಸಾವಿರ ಕೋಟಿ ಸಾಲಾಮನ್ನಾ ಮಾಡಿದ್ರು. ಯಾವ ಆಂದೋಲನ ಇದು? ಈಗ ಜನರು ಸಂಕಷ್ಟದಲ್ಲಿ ಇದಾಗೆ ಒಮ್ಮೆ ರೈತರ ಸಾಲಾ ಮನ್ನಾ ಮಾಡಲಿ! ಐದು ಗ್ಯಾರಂಟಿ ಕೊಟ್ಟಿದಾರೆ ಇನ್ನೊಂದು ಗ್ಯಾರಂಟಿ ಕೊಡಿ. ಹಾಸನದಲ್ಲಿ ಆರು ಜಿಲ್ಲೆ ಜನ ಕರೆತಂದು ಸಮಾವೇಶ ಮಾಡಿದ್ದಾರೆ. ಜಿಲ್ಲೆಗೆ ಇವರ ಕೊಡುಗೆ ಏನಿದೆ? ಸ್ವಾಭಿಮಾನಿ ಅಂತೆ, ಜನ ಕಲ್ಯಾಣ ಅಂತೆ. ದೇವೇಗೌಡರು ಪ್ರಧಾನಮಂತ್ರಿ ಇದ್ದಾಗ ಕೇಂದ್ರ ಸರ್ಕಾರದ ನಬಾರ್ಡ್‌ನಿಂದ ರೈತರಿಗೆ ಕಾರ್ಯಕ್ರಮ ರೂಪದಲ್ಲಿ ಸಾಲ ಕೊಡುವಂತೆ ಮಾಡಿದ್ರು. ನಬಾರ್ಡ್ ಮೂಲಕ ರೈತರಿಗೆ ಲೋನ್ ಕೊಡುವುದು, ರಸ್ತೆಗೆ ಹಣ ಕೊಡುವುದು ಮಾಡಿದ್ದು, ದೇವೇಗೌಡರು ಏನು ಪ್ರಸ್ತಾವನೆ ಮಾಡಲ್ಲ ಅಂತ ಇವತ್ತು ರಾಜ್ಯ ಸರ್ಕಾರದವರು ಹೇಳುತ್ತಿದ್ದಾರೆ. ನಬಾರ್ಡ್‌ನಿಂದ ಅಪೆಕ್ಸ್ ಬ್ಯಾಂಕ್‌ಗೆ 70% ಹಣ ಕೊಡುತ್ತಿದ್ದರು. ಕೇಂದ್ರದಿಂದ ಸಿಗುವ ಸೌಲಭ್ಯವನ್ನು ರಾಜ್ಯಕ್ಕೆ ದೊರಕುವಂತೆ ಮಾಡಿದ್ದೇ ದೇವೇಗೌಡರು. ಕುಮಾರಸ್ವಾಮಿ ಸಾಲಮನ್ನಾ ಮಾಡದಿದ್ದರೆ 21 ಬ್ಯಾಂಕ್‌ಗಳು ಮುಳುಗಿ ಹೋಗುತ್ತಿದ್ದವು. ದೇವೇಗೌಡರನ್ನ ಸಾಕ್ಷಿ ಗುಡ್ಡೆ ಕೇಳ್ತಾರೆ. ಅಪೆಕ್ಸ್ ಬ್ಯಾಂಕ್‌ಗೆ 9162 ಕೋಟಿ ಕೊಡಿ ಎಂದು ಕೇಂದ್ರ, ಆರ್‌ಬಿಐ, ನಬಾರ್ಡ್‌ಗೆ ದೇವೇಗೌಡರು ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರವನ್ನು ವಿಶ್ವಾಸಕ್ಕೆ ಇಟ್ಟುಕೊಳ್ಳಬೇಕು. ಆದರೇ ಬೆಳಿಗ್ಗೆ ಎದ್ದರೆ ಪ್ರಧಾನಮಂತ್ರಿಯನ್ನು ಬೈತಾರೆ. ವಿಶ್ವಾಸ ಇಟ್ಟುಕೊಂಡರೆ ಮಾತ್ರ ಏನಾದರೂ ಕೊಡ್ತಾರೆ ಎಂದು ಟಾಂಗ್ ನೀಡಿದರು. ಕುಮಾರಸ್ವಾಮಿ ಹಾಸನ ಜಿಲ್ಲೆಯಲ್ಲಿ ಸಹಕಾರ ಬ್ಯಾಂಕ್‌ಗಳ 531 ಕೋಟಿ ಸಾಲಮನ್ನ ಮಾಡಿದ್ದು, 9600 ಕೋಟಿ ರಾಷ್ಟ್ರೀಯ ಬ್ಯಾಂಕ್‌ಗಳ ಸಾಲಮನ್ನ ಆಗಿದೆ. ಕಾಂಗ್ರೆಸ್‌ನವರೇ ರೈತರ ಬಗ್ಗೆ ಮಾತನಾಡುತ್ತಿರಲ್ಲಾ ಮೊದಲು ರೈತರ ಸಾಲಮನ್ನ ಮಾಡಿ. ದೇವೇಗೌಡರ ರಾಜಕೀಯ ಮುಗಿದು ಹೋಯ್ತು ಅಂತ ಬಾಷಣ ಮಾಡ್ತಾರೆ. ಈ ಜಿಲ್ಲೆಗೆ ಕಾಂಗ್ರೆಸ್ ಪಕ್ಷ ಏನು ಕೊಡುಗೆ ಕೊಟ್ಟಿದೆ ಎಂಬುದನ್ನು ಹೇಳಲಿ. ಬ್ರಿಟಿಷರ ಕಾಲದಲ್ಲಿ ಆಗಿದ್ದ ರೈಲ್ವೆ ಮಾರ್ಗ ಕಿತ್ತುಕೊಂಡು ಹೋದರವರು ಕಾಂಗ್ರೆಸ್‌ನವರು,&#8221; ಎಂದು ಕಾಂಗ್ರೇಸಿನ ಮೇಲೆ ಹರಿಹಾಯ್ದರು.</p>



<p>&#8220;ದೇವೇಗೌಡರು ಪ್ರಧಾನಮಂತ್ರಿಯಾಗಿ ಹತ್ತುವರೆ ತಿಂಗಳಿನಲ್ಲಿ ರೈಲ್ವೆ ಮಾರ್ಗ ಮಾಡಿದ್ರು. ಡಿಸಿಎಂ ಈ ಜಿಲ್ಲೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು. ರೈಲ್ವೆ ಮಾರ್ಗ, ಕೋರ್ಟ್, ಬಸ್ಟಾಂಡ್ ಕಟ್ಟಿದ್ದು ಯಾರು? ಇವೆಲ್ಲಾ ಸಾಕ್ಷಿ ಗುಡ್ಡೆಗಳಲ್ಲವಾ! ಗಿರಾಕಿಗಳೇ ಆಸ್ಪತ್ರೆ, ಇಂಜಿನಿಯರ್, ಮೆಡಿಕಲ್ ಕಾಲೇಜು, ಪಶುವೈದ್ಯಕೀಯ ಕಾಲೇಜು, ನರ್ಸಿಂಗ್ ಕಾಲೇಜುಗಳನ್ನು ನೋಡಿ.&#8221;</p>



<p>&#8220;ಈ ಜಿಲ್ಲೆಯ ಜನ ದೇವೇಗೌಡರಿಗೆ, ನಮ್ಮ ಕುಟುಂಬಕ್ಕೆ ರಾಜಕೀಯ ಶಕ್ತಿ ಕೊಟ್ಟಿದ್ದಾರೆ. ಅವರ ಋಣ ನಮ್ಮ ಮೇಲೆ ಇದೆ, ಅದನ್ನು ತೀರಿಸುತ್ತೇವೆ. ನನ್ನ ಕೈಲಾದ ಕೆಲಸವನ್ನು ಈ ಜಿಲ್ಲೆಗೆ ಮಾಡುತ್ತೇನೆ. ಇಂತಹ ಹತ್ತು ಸಮಾವೇಶ ಮಾಡಿದ್ರೆ ನಾನೇನು ತಲೆ ಕೆಡಿಸಿಕೊಡಲ್ಲ. ಇವರಿಗೆ ತಾಕತ್ ಇದ್ದರೆ ಕಾಂಗ್ರೆಸ್ ಬಿಟ್ಟು ಬಂದು ನಮ್ಮ ರೀತಿ ಪಕ್ಷ ಕಟ್ಟಲಿ,&#8221; ಎಂದು ಸವಾಲು ಎಸೆದರು.</p>



<p>&#8220;ಹಿಂದಿನ ಕಾಂಗ್ರೆಸ್ ಈಗ ಇಲ್ಲ, ಈಗ ಇರುವುದು ನಕಲಿ ಕಾಂಗ್ರೆಸ್. ಒಕ್ಕಲಿಗ ನಾಯಕರನ್ನು ಬೆಳೆಸಿಲ್ಲ ಅಂತಾರೆ, ಇವರು ಬಿಎಲ್ ಶಂಕರ್ ಕರೆದೊಯ್ದು ಏನು ಮಾಡಿದ್ರು. ನಮ್ಮಿಂದ ವಲಸೆ ಹೋದವರು ಅಲ್ಲಿ ಇರುವವರು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ವಾಗ್ದಾಳಿ ನಡೆಸಿದರು. ಜೇನುಕಲ್ಲು ಸಿದ್ದೇಶ್ವರನೇ ಇದಕ್ಕೆ ಸಾಕ್ಷಿ ಎಂದರು. ಮೂರು ಚುನಾವಣೆಯಲ್ಲಿ ಒಂದು ರೂಪಾಯಿ ಖರ್ಚು ಮಾಡಿಸದೆ ಎಲೆಕ್ಷನ್ ಮಾಡಿ ಗೆಲ್ಲಿಸಿಕೊಂಡು ಬಂದಿದ್ದೇನೆ. ಇವರೆಲ್ಲ ಜೆಡಿಎಸ್ ಮುಗಿದುಹೋಯ್ತು ಅಂತಾರೆ. ೨೦೨೮ ಕ್ಕೆ ಜೆಡಿಎಸ್ ಏನು ಎಂದು ಗೊತ್ತಾಗುತ್ತದೆ ಎಂದು ಪಕ್ಷ ಬಿಟ್ಟವರಿಗೆ ಬಿಸಿ ಮುಟ್ಟಿಸಿದರು. ಹಾಸನದಲ್ಲಿ ಯಾವಾಗ ಸಮಾವೇಶ ಮಾಡಬೇಕು ಎಲ್ಲರೂ ಕೂತು ಚರ್ಚೆ ಮಾಡುತ್ತೇವೆ. ದೇವೇಗೌಡರು ಮೇಕೆದಾಟು ಬಗ್ಗೆ ಪಾರ್ಲಿಮೆಂಟ್ ನಲ್ಲಿ ಮಾತನಾಡಿದ್ದಾರೆ. ಹಾಸನದ ಔಟರ್ ರಿಂಗ್ ರೋಡ್ ಗೆ ೭೫೦ ಕೋಟಿ ಅನುದಾನಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ,&#8221; ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>



<p>ಈ ಸಂದರ್ಭದಲ್ಲಿ ಹೆಚ್.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜು, ಜೆಡಿಎಸ್ ಮುಖಂಡರಾದ ಗಿರೀಶ್ ಚನ್ನವೀರಪ್ಪ, ಬಿದರಿಕೆರೆ ಜಯರಾಂ, ಜಗದೀಶ್, ನಾಗರಾಜು ಇತರರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಹಿಂದೆ ದೇವೇಗೌಡರು 3 ರೂಪಾಯಿಗೆ ಅಕ್ಕಿ ಕೊಟ್ಟಿದ್ದರು: ಕುಮಾರಸ್ವಾಮಿ</title>
		<link>https://peepalmedia.com/deve-gowda-had-given-rice-for-3-rupees-kumaraswamy/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 23 Jun 2023 03:01:45 +0000</pubDate>
				<category><![CDATA[Uncategorized]]></category>
		<category><![CDATA[hd kumaraswami]]></category>
		<category><![CDATA[hddevegowda]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Siddaramaiah]]></category>
		<category><![CDATA[siddaramayya]]></category>
		<guid isPermaLink="false">https://peepalmedia.com/?p=22638</guid>

					<description><![CDATA[ಬೆಂಗಳೂರು: ಬಡವರಿಗೆ, ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಸವಿರುವ ಆರ್ಥಿಕ ದುರ್ಬಲರಿಗೆ ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗಲೇ ಅಗ್ಗದ ದರದಲ್ಲಿ ಅಕ್ಕಿ ನೀಡಿದ್ದರು. ಅವರ ಸಂಪುಟದಲ್ಲಿ ಸಚಿವರಾಗಿದ್ದ ಇಂದಿನ ಮುಖ್ಯಮಂತ್ರಿಗಳಿಗೆ ಈ ವಿಷಯ ಮರೆತು ಹೋಗಿದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದರು. ಅಕ್ಕಿ ಗ್ಯಾರಂಟಿ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇವರು ಇವತ್ತು ಅಕ್ಕಿ ಗ್ಯಾರಂಟಿ, ಅಕ್ಕಿ ಭಾಗ್ಯ ಎಂದು ಹೇಳುತ್ತಿದ್ದಾರೆ. ಆದರೆ, ದೇವೇಗೌಡರು ಹಿಂದೆಯೇ ಕಡಿಮೆ ದರದಲ್ಲಿ ಅಕ್ಕಿ ನೀಡುವ ಮೂಲಕ ಬಡಜನರ [&#8230;]]]></description>
										<content:encoded><![CDATA[
<p>ಬೆಂಗಳೂರು: ಬಡವರಿಗೆ, ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಸವಿರುವ ಆರ್ಥಿಕ ದುರ್ಬಲರಿಗೆ ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗಲೇ ಅಗ್ಗದ ದರದಲ್ಲಿ ಅಕ್ಕಿ ನೀಡಿದ್ದರು. ಅವರ ಸಂಪುಟದಲ್ಲಿ ಸಚಿವರಾಗಿದ್ದ ಇಂದಿನ ಮುಖ್ಯಮಂತ್ರಿಗಳಿಗೆ ಈ ವಿಷಯ ಮರೆತು ಹೋಗಿದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದರು.</p>



<p>ಅಕ್ಕಿ ಗ್ಯಾರಂಟಿ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇವರು ಇವತ್ತು ಅಕ್ಕಿ ಗ್ಯಾರಂಟಿ, ಅಕ್ಕಿ ಭಾಗ್ಯ ಎಂದು ಹೇಳುತ್ತಿದ್ದಾರೆ. ಆದರೆ, ದೇವೇಗೌಡರು ಹಿಂದೆಯೇ ಕಡಿಮೆ ದರದಲ್ಲಿ ಅಕ್ಕಿ ನೀಡುವ ಮೂಲಕ ಬಡಜನರ ನೆರವಿಗೆ ಧಾವಿಸಿದ್ದರು ಎಂದರು.</p>



<p>1995ರಲ್ಲಿ ಸಿದ್ದರಾಮಯ್ಯ ಅವರು ಮೊದಲ ಬಜೆಟ್ ಮಂಡಿಸುತ್ತಾರೆ. ಆಗ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಕೆಜಿಗೆ 4.54 ರೂ. ಇದ್ದ ಅಕ್ಕಿ ದರವನ್ನ ಕೇಂದ್ರ ಸರ್ಕಾರ ಏಕಾಏಕಿ 7.49 ರೂ.ಗಳಿಗೆ ಹೆಚ್ಚಳ ಮಾಡಿತು. ಆಗ ಮುಖ್ಯಮಂತ್ರಿ ಆಗಿದ್ದ ದೇವೇಗೌಡರು ಧೈರ್ಯ ಮಾಡಿ 30 ರೂಪಾಯಿಗೆ ಕೆಜಿ ಅಕ್ಕಿ ಕೊಡುವಂತೆ ಆದೇಶ ಹೊರಡಿಸಿದರು. ಬಹುಶಃ ಅವರಿಂದಲೇ ರಾಜಕೀಯವಾಗಿ ಬೆಳೆದವರಿಗೆ ಇದು ನೆನಪಿರಲಿಕ್ಕಿಲ್ಲ. ಈಗ ಆಪರೇಶನ್ ಹಸ್ತ ಮಾಡುತ್ತೇವೆ ಎಂದು ಮೀಸೆ ತಿರುವುತ್ತಿದ್ದಾರೆ. ಜನತಾದಳ ಪಕ್ಷವನ್ನು ಮುಗಿಸೋದು ಅಷ್ಟು ಸುಲಭ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು ಕುಮಾರಸ್ವಾಮಿ ಅವರು.</p>



<p>ಮತಕ್ಕಾಗಿ, ಅಧಿಕಾರಕ್ಕಾಗಿ ಅಕ್ಕಿ ಫ್ರೀ ಎಂದವರು ಈಗ ಅಕ್ಕಿ ಕೊಡುವ ಮತುಕೊಟ್ಟಿದ್ದ ಇವರು ದೇವೇಗೌಡರ ಬದ್ಧತೆಯನ್ನು ಒಮ್ಮೆ ನೆನಪು ಮಾಡಿಕೊಳ್ಳಬೇಕು. ಕೈಲಾಗದವನು ಮೈ ಪರಚಿಕೊಂಡ ಎನ್ನುವಂತೆ ಇವರು ಕೊಟ್ಟ ಭರವಸೆ ಈಡೇರಿಸಲಾಗದೆ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಟೀಕಿಸಿದರು.</p>



<p>ಇದು ಪರ್ಸೆಂಟೇಜ್ ಸರ್ಕಾರ:</p>



<p>ಇದು ಕೂಡ ಪರ್ಸೆಂಟೆಜ್ ಸರ್ಕಾರ. ನಿಮಾಗೆ ಅನುಮಾನ ಇದೆಯಾ? ಎಂದು ಮಾಧ್ಯಮಗಳನ್ನು ಪ್ರಶ್ನೆ ಮಾಡಿದ ಕುಮಾರಸ್ವಾಮಿ ಅವರು, ಇದಕ್ಕಾಗಿಯೇ ಎಲ್ಲ ಇಲಾಖೆಗಳಲ್ಲಿ ಸಲಹೆಗಾರರು ಬಂದು ತುಂಬಿಕೊಂಡಿದ್ದಾರೆ. ಇದೆಲ್ಲಾ ಪರ್ಸೆಂಟೆಜ್ ವ್ಯವಸ್ಥೆಗೆ ಮಾಡಿಕೊಂಡಿರುವ ವ್ಯವಸ್ಥೆ ಎಂದು ಕುಟುಕಿದರು.</p>



<p>ನಮ್ಮದು ಸಂಪತ್ಪಭರಿದ ರಾಜ್ಯ. ಹಣಕ್ಕೆ ಕೊರತೆ ಇಲ್ಲ. ನಿರೀಕ್ಷೆಗೂ ಮೀರಿದ ತೆರಿಗೆ ಸಂಗ್ರಹ ಆಗುತ್ತಿದೆ. ಘೋಷಣೆ ಮಾಡಿಕೊಂಡು ಒದ್ದಾಡ್ತಾ ಇದ್ದಾರೆ ಇವರು. ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ ಇವರು ಈಗ ಪರ್ಸೆಂಟೇಜ್ ಬಗ್ಗೆ ತಲೆಕೆಡಿಸಿಕೊಂಡು ಕೂತಿದ್ದಾರೆ. ಇದು ಕೂಡ ಪರ್ಸೆಂಟೇಜ್ ಸರಕಾರವೇ ಆಗಿದೆ ಎಂದು ಅವರು ದೂರಿದರು.</p>



<p>ಅಕ್ಕಿ ತರಲು ರೇಟ್ ಜಾಸ್ತಿ ಮಾಡೋದು ಇವರೇ. ಕಮೀಷನ್ ಗಾಗಿ ರೇಟ್ ಜಾಸ್ತಿ ಮಾಡ್ತಾರೆ. ಕಮಿಷನ್ ಕಡಿಮೆ ಮಾಡಿದರೆ ಅಕ್ಕಿ ದರ ಕಡಿಮೆ ಆಗತ್ತದೆ. ಇವರ ಯೋಜನೆಗೆ ಕೇಂದ್ರದ ಮುಂದೆ ಕೈಚಾಚೋದು ಏಕೆ? ನಾನು ಸಾಲಮನ್ನಾ ಘೋಷಣೆ ಮಾಡಿದಾಗ ಕೇಂದ್ರದ ಬಳಿ ಹಣ ಕೇಳಲಿಲ್ಲ ಎಂದು ಅವರು ಹೇಳಿದರು.</p>



<p><strong>ಸಿಎಂ ಹಿಂದೆ ಸುತ್ತುವ ಮಂತ್ರಿಗಳು:</strong></p>



<p>ಸರಕಾರ ಬಂದು ಒಂದು ತಿಂಗಳ ಮೇಲಾಯಿತು. ಜನರು ಕಷ್ಟದಲ್ಲಿದ್ದಾರೆ. ಜನ ಆರ್ಥಿಕವಾಗಿ ಕುಗ್ಗಿ ಹೋಗಿದ್ದಾರೆ. ವಿವಿಧ ಇಲಾಖೆಗಳ ಮಂತ್ರಿಗಳು ಇನ್ನೂ ತಮ್ಮ ಇಲಾಖೆಗಳ ಸಭೆಗಳನ್ನೇ ನಡೆಸುತ್ತಿಲ್ಲ. ಮುಖ್ಯಮಂತ್ರಿ ಹಿಂದೆ ಮುಂದೆ ಓಡಾಡಿಕೊಂಡಿದ್ದಾರೆ. ದಿನದ 24 ಗಂಟೆಯೂ ಮುಖ್ಯಮಂತ್ರಿ ಜತೆ ಇವರಿಗೇನು ಕೆಲಸ. ಸಿಎಂ ಮನೆಯಲ್ಲೂ ಇವರೇ, ಸಿಎಂ ಕಚೇರಿಯಲ್ಲೂ ಇವರೇ, ಸಿಎಂ ದಿಲ್ಲಿಗೆ ಹೋದರೆ ಅಲ್ಲೂ ಇವರೇ. ಎನ್ ನಡೀತಿದೆ ಇಲ್ಲಿ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.</p>



<p>ಮುಳಬಾಗಿಲು ಕ್ಷೇತದ ಶಾಸಕ ಸಮೃದ್ಧಿ ಮಂಜುನಾಥ್ ಅವರು ಈ ಸಂದರ್ಭದಲ್ಲಿ ಉಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಪಂಚರತ್ನ ರಥಯಾತ್ರೆಯನ್ನು ನಾಲ್ಕು ದಿನ ಮುಂದೂಡಿದ ಹೆಚ್‌ಡಿಕೆ</title>
		<link>https://peepalmedia.com/hdk-postponed-the-pancharat-rath-yatra-for-four-days/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 10 Dec 2022 17:18:20 +0000</pubDate>
				<category><![CDATA[ತುಮಕೂರು]]></category>
		<category><![CDATA[bengalure]]></category>
		<category><![CDATA[hd kumaraswami]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=18166</guid>

					<description><![CDATA[ತುಮಕೂರು : ಭಾನುವಾರದಿಂದ ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಬೇಕಿದ್ದ ಪಂಚರತ್ನ ರಥಯಾತ್ರೆಯನ್ನು ನಾಲ್ಕು ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಹೆಚ್‌ಡಿ ಕುಮಾರಸ್ವಾಮಿಯವರು, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಈ ಕಾರಣಕ್ಕೆ ಪಂಚರತ್ನ ರಥಯಾತ್ರೆಯನ್ನು ಅನಿವಾರ್ಯವಾಗಿ ಮುಂದಕ್ಕೆ ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಪೂರ್ವ ನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆಯು ಚಿಕ್ಕನಾಯಕನಹಳ್ಳಿಯಿಂದ ಶುರುವಾಗಬೇಕಿತ್ತು. ತದನಂತರ [&#8230;]]]></description>
										<content:encoded><![CDATA[
<p><strong>ತುಮಕೂರು :</strong> ಭಾನುವಾರದಿಂದ ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಬೇಕಿದ್ದ ಪಂಚರತ್ನ ರಥಯಾತ್ರೆಯನ್ನು ನಾಲ್ಕು ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.</p>



<p>ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಹೆಚ್‌ಡಿ ಕುಮಾರಸ್ವಾಮಿಯವರು, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಈ ಕಾರಣಕ್ಕೆ ಪಂಚರತ್ನ ರಥಯಾತ್ರೆಯನ್ನು ಅನಿವಾರ್ಯವಾಗಿ ಮುಂದಕ್ಕೆ ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>



<p>ಪೂರ್ವ ನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆಯು ಚಿಕ್ಕನಾಯಕನಹಳ್ಳಿಯಿಂದ ಶುರುವಾಗಬೇಕಿತ್ತು. ತದನಂತರ ತುರುವೇಕೆರೆ, ತುಮಕೂರು ಗ್ರಾಮಾಂತರ, ಕುಣಿಗಲ್ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಬೇಕಿತ್ತು. ಆದರೆ, ತುಮಕೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವ ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ, ಪಂಚರತ್ನ ರಥಯಾತ್ರೆ ಮಾರ್ಗವನ್ನು ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ.</p>



<p>ಡಿಸೆಂಬರ್ 15ರಂದು ಮಾಗಡಿಯಲ್ಲಿ ರಥಯಾತ್ರೆ ನಡೆಯಲಿದ್ದು, ಡಿಸೆಂಬರ್ 27ರಂದು ಮತ್ತೆ ತುಮಕೂರು ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.</p>



<p>ಡಿಸೆಂಬರ್ 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ.</p>



<p>ಡಿಸೆಂಬರ್ 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.</p>



<p>ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದ್ದು, 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ಅಸ್ಪೃಶ್ಯತೆ ಪದ ಬಳಕೆ: ಹೆಚ್‌ಡಿಕೆ ವಿರುದ್ಧ ದೂರು</title>
		<link>https://peepalmedia.com/practice-of-untouchability-complaint-against-kumaraswamy/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 29 Nov 2022 12:10:03 +0000</pubDate>
				<category><![CDATA[ಚಿಕ್ಕಬಳ್ಳಾಪುರ]]></category>
		<category><![CDATA[bengalure]]></category>
		<category><![CDATA[dhoddaballapura]]></category>
		<category><![CDATA[hd kumaraswami]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[untouchability]]></category>
		<category><![CDATA[writing]]></category>
		<guid isPermaLink="false">https://peepalmedia.com/?p=16918</guid>

					<description><![CDATA[ದೊಡ್ಡಬಳ್ಳಾಪುರ:ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಖಾಸಗಿ ವಾಹಿನಿಗೆ ಸಂದರ್ಶನ ಕೊಡುವ ಸಮಯದಲ್ಲಿ&#160;ʼಸಿಎಂ ಇಬ್ರಾಹಿಂ&#160;ಅಸ್ಪೃಶ್ಯರಲ್ಲʼ ಎಂಬ ಸಂವಿಧಾನ ವಿರೋಧಿ ಪದ ಬಳಕೆ ಮಾಡಿರುವುದರ ವಿರುದ್ಧ ದಲಿತ ಸಂಘಟನೆಯ ಮುಖಂಡರು ದೊಡ್ಡಬಳ್ಳಾಪುರ ಉಪವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ನವೆಂಬರ್ 27 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಖಾಸಗಿ ವಾಹಿನಿಗೆ ಚುಟುಕು ಸಂದರ್ಶನ ನೀಡಿದ್ದು, ಆ ಸಮಯದಲ್ಲಿ ಅಸ್ಪೃಶ್ಯ ಎಂಬ ಪದ ಬಳಕೆ ಮಾಡಿದ್ದು, ಈ ವಿರುದ್ಧ ದಲಿತ ಮುಖಂಡರ [&#8230;]]]></description>
										<content:encoded><![CDATA[
<p><strong>ದೊಡ್ಡಬಳ್ಳಾಪುರ</strong>:ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಖಾಸಗಿ ವಾಹಿನಿಗೆ ಸಂದರ್ಶನ ಕೊಡುವ ಸಮಯದಲ್ಲಿ&nbsp;ʼಸಿಎಂ ಇಬ್ರಾಹಿಂ&nbsp;ಅಸ್ಪೃಶ್ಯರಲ್ಲʼ ಎಂಬ ಸಂವಿಧಾನ ವಿರೋಧಿ ಪದ ಬಳಕೆ ಮಾಡಿರುವುದರ ವಿರುದ್ಧ ದಲಿತ ಸಂಘಟನೆಯ ಮುಖಂಡರು ದೊಡ್ಡಬಳ್ಳಾಪುರ ಉಪವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ದೂರು ನೀಡಿದ್ದಾರೆ.</p>



<p>ನವೆಂಬರ್ 27 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಖಾಸಗಿ ವಾಹಿನಿಗೆ ಚುಟುಕು ಸಂದರ್ಶನ ನೀಡಿದ್ದು, ಆ ಸಮಯದಲ್ಲಿ ಅಸ್ಪೃಶ್ಯ ಎಂಬ ಪದ ಬಳಕೆ ಮಾಡಿದ್ದು, ಈ ವಿರುದ್ಧ ದಲಿತ ಮುಖಂಡರ ಕೆಂಗಣ್ಣಿಗೆ ಹೆಚ್‌ಡಿಕೆ ಕಾರಣರಾಗಿದ್ದಾರೆ.&nbsp;</p>



<p>ಸಂದರ್ಶನದ ಸಮಯದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿಯವರು, ʼಪತ್ರಕರ್ತ ಸಿಎಂ ಇಬ್ರಾಹಿಂ ಮುಖ್ಯಮಂತ್ರಿಯಾಗುತ್ತಾರಾ ?&nbsp;ಎಂಬ ಪತ್ರಕರ್ತನ&nbsp; ಪ್ರಶ್ನೆಗೆ ಉತ್ತರ ನೀಡುವ ಸಮಯದಲ್ಲಿ ಕುಮಾರಸ್ವಾಮಿ ಸಿಎಂ ಇಬ್ರಾಹಿಂ ಅಸ್ಪೃಶ್ಯರಲ್ಲ ಎಂಬ ಪದ ಬಳಕೆ ಮಾಡಿದ್ದಾರೆ. ಇದು ಸಂವಿಧಾನದ ವಿರೋಧಿ ಹೇಳಿಕೆಯಾಗಿದ್ದು, ಈ ವಿರುದ್ದ ದಲಿತ ಮುಖಂಡರಾದ ರಾಜಸಣ್ಣಕ್ಕಿ ಮತ್ತು ಗೂಳ್ಯ ಹನುಮಣ್ಣ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.</p>



<p>ಹೆಚ್‌ಡಿಕೆಯವರ ಹೇಳಿಕೆಯು ಕಾನೂನು ಬಾಹಿರವಾಗಿದ್ದು, ಇದಕ್ಕೆ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಲ್ಲದೇ ಈ ವಿರುದ್ದ ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ  ದೂರು ನೀಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಬಿಜಪಿ ಸರ್ಕಾರಕ್ಕೆ ನೈತಿಕತೆ ಇದೆಯಾ?: ಹೆಚ್‌ಡಿಕೆ</title>
		<link>https://peepalmedia.com/bjp-sarkarakke-nythikathe-ideya-hdk/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 05 Nov 2022 05:48:37 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[hd kumaraswami]]></category>
		<category><![CDATA[HDK]]></category>
		<category><![CDATA[india]]></category>
		<category><![CDATA[k sudhakaŕ]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=14267</guid>

					<description><![CDATA[ತುಮಕೂರು : ನವೆಂಬರ್‌ 2ರಂದು ತುಮಕೂರಿನಲ್ಲಿ ನಡೆದ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಘಟನೆ ಕುರಿತು ಹೆಚ್‌ಡಿಕೆ ಅಂದೇ ಸುಧಾಕರ್‌ ವಿರುದ್ಧ ಕಿಡಿಕಾರಿದ್ದರು. ಇದಕ್ಕೆ ಉತ್ತರಿಸಲು ಹೊರಟ ಸುಧಾಕರ್‌ ತಮ್ಮ ಕೆಲಸಗಳನ್ನು ಸಮರ್ಥಿಸಿಕೊಳ್ಳಲು ಪ್ರಯತ್ನ ಮಾಡಿದ್ದು, ಈ ವಿರುದ್ಧ ಹೆಚ್‌ಡಿಕೆ ʼನಿಮ್ಮ ವಿಕೃತ ಮನಸ್ಸಿಗೆ ದಿಕ್ಕಾರವಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಸಚಿವರ ವಿರುದ್ಧ ಟ್ವೀಟ್‌ ಮಾಡಿರುವ&#160;&#160; ಮಾಜಿ ಮುಖ್ಯಮಂತ್ರಿ ಹೆಚ್.‌ಡಿ ಕುಮಾರಸ್ವಾಮಿಯವರು, ʼಮಾನ್ಯ ಸುಧಾಕರ್‌ ಅವರೇ ಸಾವು, ಕ್ರೌರ್ಯವನ್ನೇ ಸಂಭ್ರಮಿಸುವ ʼಸಾವುಗೇಡಿ ಸರಕಾರʼದ ಆಡಳಿತದಲ್ಲಿ [&#8230;]]]></description>
										<content:encoded><![CDATA[
<p>ತುಮಕೂರು : ನವೆಂಬರ್‌ 2ರಂದು ತುಮಕೂರಿನಲ್ಲಿ ನಡೆದ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಘಟನೆ ಕುರಿತು ಹೆಚ್‌ಡಿಕೆ ಅಂದೇ ಸುಧಾಕರ್‌ ವಿರುದ್ಧ ಕಿಡಿಕಾರಿದ್ದರು. ಇದಕ್ಕೆ ಉತ್ತರಿಸಲು ಹೊರಟ ಸುಧಾಕರ್‌ ತಮ್ಮ ಕೆಲಸಗಳನ್ನು ಸಮರ್ಥಿಸಿಕೊಳ್ಳಲು ಪ್ರಯತ್ನ ಮಾಡಿದ್ದು, ಈ ವಿರುದ್ಧ ಹೆಚ್‌ಡಿಕೆ ʼನಿಮ್ಮ ವಿಕೃತ ಮನಸ್ಸಿಗೆ ದಿಕ್ಕಾರವಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<p>ಆರೋಗ್ಯ ಸಚಿವರ ವಿರುದ್ಧ ಟ್ವೀಟ್‌ ಮಾಡಿರುವ&nbsp;&nbsp; ಮಾಜಿ ಮುಖ್ಯಮಂತ್ರಿ ಹೆಚ್.‌ಡಿ ಕುಮಾರಸ್ವಾಮಿಯವರು, ʼಮಾನ್ಯ ಸುಧಾಕರ್‌ ಅವರೇ ಸಾವು, ಕ್ರೌರ್ಯವನ್ನೇ ಸಂಭ್ರಮಿಸುವ ʼಸಾವುಗೇಡಿ ಸರಕಾರʼದ ಆಡಳಿತದಲ್ಲಿ ಸರಕಾರಿ ಆಸ್ಪತ್ರೆಗಳನ್ನು ಸಾವಿನಕೂಪಗಳನ್ನಾಗಿ ಪರಿವರ್ತನೆ ಮಾಡಿದ ಕೀರ್ತಿ ನಿಮ್ಮದು. ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಆದ 3 ಅಮಾನುಷ ಸಾವುಗಳ ಬಗ್ಗೆ ನಿಮಗೆ ಕೊನೆಪಕ್ಷ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ?ʼ ಎಂದು ಕೇಳಿದ್ದಾರೆ.</p>



<p>ʼಆರೋಗ್ಯ ಸಚಿವರು ನಾನು ಎತ್ತಿದ ಪ್ರಶ್ನೆ ಏನು? ನೀವು ಕೊಟ್ಟ ಉತ್ತರವೇನು? ಮನುಷ್ಯತ್ವ ಇದೆಯಾ ನಿಮಗೆ? ನಿಮ್ಮ ವೈಫಲ್ಯಗಳನ್ನು ಸಮರ್ಥಿಸಿಕೊಳ್ಳುತ್ತಿದ್ದೀರಿ ಎಂದರೆ &nbsp;ಆ ಬಾಣಂತಿ, ಆಕೆಯ ಎರಡು ನವಜಾತ ಶಿಶುಗಳ ಧಾರುಣ ಸಾವನ್ನೂ ಸಂಭ್ರಮಿಸುತ್ತಿದ್ದೀರಿ ಎಂದೇ ಅರ್ಥ. ನಿಮ್ಮ ವಿಕೃತ ಮನಃಸ್ಥಿತಿಗೆ ನನ್ನ ಧಿಕ್ಕಾರವಿದೆʼ ಎಂದು ಕಿಡಿಕಾರಿದ್ದಾರೆ.</p>



<p>ʼತುಮಕೂರು ಆಸ್ಪತ್ರೆಯಲ್ಲಿ ನಡೆದದ್ದೇನು? ಆ ವೈದ್ಯೆ &amp; ಸಿಬ್ಬಂದಿಯ ನಿರ್ದಯ, ಕ್ರೌರ್ಯದ ವರ್ತನೆ, ಆಕೆಯನ್ನು ಆಸ್ಪತ್ರೆಗೆ ಕರೆತಂದ ಮಹಿಳೆಗೆ ಈಗ ಪೊಲೀಸರಿಂದ ಬೆದರಿಕೆ ಹಾಕಿಸುತ್ತಿರುವ ಬಗ್ಗೆ ನನಗೆ ಮಾಹಿತಿ ಇದೆ. ಅಧಿಕಾರ ಇದೆ ಎಂದು ಏನು ಬೇಕಾದರೂ ಮಾಡಬಹುದಾ? ಇನ್ನು ಆರೇ ತಿಂಗಳು, ನಿಮ್ಮ ಅಧಿಕಾರದ ಅಮಲು ಇಳಿಯುತ್ತದೆ . ನನ್ನ ಸರಕಾರವಿದ್ದಾಗ ಚಾಮರಾಜನಗರದ ಸುಳವಾಡಿಯ ದೇಗುಲದಲ್ಲಿ ನಡೆದ ವಿಷಪ್ರಸಾದ ಪ್ರಕರಣಕ್ಕೂ ಇದಕ್ಕೂ ಸಂಬಂಧವೇನು? ಆ ಘಟನೆ ನಡೆದಾಗ ನಾನು ಚೆನ್ನೈನಲ್ಲಿ ಅಧಿಕೃತ ಪ್ರವಾಸದಲ್ಲಿದ್ದೆ. ವಿಷಯ ಗೊತ್ತಾದ ಕೂಡಲೇ ಹಿಂದಿರುಗಿ ಸ್ಥಳಕ್ಕೆ ಭೇಟಿ ನೀಡಿದ್ದೆ. ಅದಕ್ಕೂ ಇದಕ್ಕೂ ಸಂಬಂಧವೇನು? ಅಲ್ಲಿ ನಡೆದಿದ್ದು ಷಡ್ಯಂತ್ರ,ಇಲ್ಲಿ ನಡೆದದ್ದು ಕ್ರೌರ್ಯʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<p>ʼಅದೇ ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್‌ ದುರಂತದಿಂದ 36 ಜನರ ಸಾವಿಗೆ ಕಾರಣರಾಗಿದ್ದು ಯಾರು? ನಿಮ್ಮ ವೈಫಲ್ಯವಲ್ಲವೇ? ರಾಜ್ಯದ ಉದ್ದಗಲಕ್ಕೂ ನಡೆದ ಸಾವುಗಳ ರಣಕೇಕೆ ನಿಮ್ಮ ಕಿವಿಗೆ ಇಂಪಾಗಿತ್ತಾ? ಕೋವಿಡ್‌ ಹೆಸರಿನಲ್ಲಿ ನಡೆದ ಕೊಳ್ಳೆ ಬಗ್ಗೆ ನನಗಿಂತ ನಿಮ್ಮ ಪಕ್ಷದವರಿಗೇ ಚೆನ್ನಾಗಿ ಗೊತ್ತು .ಕಾಸಿಗಾಗಿ ಹುದ್ದೆ, ಇದು ನಿಮ್ಮ ಸುಲಿಗೆ ನೀತಿ. ವೈದ್ಯರು, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಬಿಕರಿಗಿಟ್ಟಿದ್ದೀರಿ. ಅವರ ಒಂದು ವರ್ಷದ ವೇತನ ನೀವು ನಿಗದಿ ಮಾಡಿರುವ ದರ. ಬೆಕ್ಕು ಕಣ್ಮುಚ್ಚಿ ಹಾಲು ಕುಡಿಯುತ್ತಿದೆ ಎಂದರೆ ಲೋಕಕ್ಕೆ ಕಾಣುವುದಿಲ್ಲವೇ? ಕಳ್ಳಬೆಕ್ಕಿನ ಆಟ ಕಾಲದುದ್ದಕ್ಕೂ ನಡೆಯುವುದಿಲ್ಲ, ನೆನಪಿರಲಿʼ ಎಂದು ಹೆಚ್‌ಡಿಕೆ ಗರಂ ಆಗಿದ್ದಾರೆ.</p>



<p>ʼತುಮಕೂರು ಘಟನೆಗೆ ನೈತಿಕ ಹೊಣೆ ಹೊತ್ತು ನೀವು ರಾಜೀನಾಮೆ ನೀಡಲೇಬೇಕು. ಆ ನೈತಿಕತೆ ನಿಮಗೆ ಇಲ್ಲದಿದ್ದರೆ, ಅದನ್ನು ಕೊನೆಪಕ್ಷ ನಿಮ್ಮ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರಾದರೂ ಪ್ರದರ್ಶಿಸಬೇಕು. ನಿಮ್ಮನ್ನು ಸಂಪುಟದಿಂದ ಕಿತ್ತೊಗೆಯಲೇಬೇಕು. ನಿಮ್ಮ ಪಕ್ಷಕ್ಕೂ ಅಂಥ ನೈತಿಕತೆ ಬಿಜೆಪಿ ಸರಕಾರಕ್ಕೆ ಇದೆಯಾ?ʼ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಅವರಿಗೆ ಪ್ರಶ್ನೆ ಮಾಡಿದ್ದಾರೆ.</p>
]]></content:encoded>
					
		
		
			</item>
	</channel>
</rss>
