<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Hitler &#8211; Peepal Media</title>
	<atom:link href="https://peepalmedia.com/tag/hitler/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 14 Jul 2023 08:17:15 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Hitler &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು?: ವಿ.ಪರಿಷತ್ ನಲ್ಲಿ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದ ಸಿಎಂ</title>
		<link>https://peepalmedia.com/why-are-you-angry-with-hitler/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 14 Jul 2023 08:16:42 +0000</pubDate>
				<category><![CDATA[ರಾಜಕೀಯ]]></category>
		<category><![CDATA[Hitler]]></category>
		<category><![CDATA[karnataka]]></category>
		<category><![CDATA[narendramodi]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=23692</guid>

					<description><![CDATA[ಬೆಂಗಳೂರು : ದೇಶದಲ್ಲಿ ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ. ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ. ಮೋದಿಯವರು ರಾಜ್ಯದಲ್ಲಿ ಪ್ರಚಾರ ಮಾಡಿದ ಎಲ್ಲಾ ಕಡೆ ಬಿಜೆಪಿ ಹೀನಾಯವಾಗಿ ಸೋತಿರುವುದು ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬಿಜೆಪಿ ಪಕ್ಷ ಹೇಗೆ ಹಂತಹಂತದಲ್ಲೂ ಜನವಿರೋಧಿ ಆಗುತ್ತಿದೆ ಎಂಬುದನ್ನು ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ. ಬಿಜೆಪಿ ಮತ್ತು ನರೇಂದ್ರ ಮೋದಿಯವರು ಹೇಗೆ ಜನರಿಂದ ದೂರವಾಗುತ್ತಿದೆ, ನರೇಂದ್ರ ಮೋದಿಯವರ ಎಡೆಬಿಡದ [&#8230;]]]></description>
										<content:encoded><![CDATA[
<p>ಬೆಂಗಳೂರು : ದೇಶದಲ್ಲಿ ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ. ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ. ಮೋದಿಯವರು ರಾಜ್ಯದಲ್ಲಿ ಪ್ರಚಾರ ಮಾಡಿದ ಎಲ್ಲಾ ಕಡೆ ಬಿಜೆಪಿ ಹೀನಾಯವಾಗಿ ಸೋತಿರುವುದು ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.</p>



<p>ಬಿಜೆಪಿ ಪಕ್ಷ ಹೇಗೆ ಹಂತಹಂತದಲ್ಲೂ ಜನವಿರೋಧಿ ಆಗುತ್ತಿದೆ ಎಂಬುದನ್ನು ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ. ಬಿಜೆಪಿ ಮತ್ತು ನರೇಂದ್ರ ಮೋದಿಯವರು ಹೇಗೆ ಜನರಿಂದ ದೂರವಾಗುತ್ತಿದೆ, ನರೇಂದ್ರ ಮೋದಿಯವರ ಎಡೆಬಿಡದ ಪ್ರಚಾರಕ್ಕೂ ಕರ್ನಾಟಕದ ಜನ ಸೊಪ್ಪು ಹಾಕಿಲ್ಲ ಎಂಬುದನ್ನು ಎಳೆಎಳೆಯಾಗಿ ಸಿದ್ದರಾಮಯ್ಯ ವಿಧಾನ ಪರಿಷತ್ ನಲ್ಲಿ ಹೇಳಿದರು.</p>



<p>ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 28 ಬಾರಿ ಕರ್ನಾಟಕಕ್ಕೆ ಬಂದು ಚುನಾವಣಾ ಪ್ರಚಾರ, ರ್ಯಾಲಿಗಳನ್ನು ನಡೆಸಿದರು. ಹಿಂದಿನ ಯಾವ ಪ್ರಧಾನಿಗಳೂ ರಾಜ್ಯಗಳ ಚುನಾವಣೆ ವೇಳೆ ಹೀಗೆ ವರ್ತಿಸಿರಲಿಲ್ಲ. ಉಳಿದ ಪ್ರಧಾನಿಗಳಿಗೆ ದೇಶವನ್ನು ಮುನ್ನಡೆಸುವುದು ಪ್ರಥಮ ಆಧ್ಯತೆ ಆಗಿರುತ್ತಿತ್ತು. ಬರೀ ಚುನಾವಣೆಗಳನ್ನು ಮಾಡುತ್ತಾ ಓಡಾಡುತ್ತಿರಲಿಲ್ಲ ಎಂದರು.</p>



<p>ವಿಧಾನಸಭೆ ಚುನಾವಣೆಯಲ್ಲಿ ಮೋದಿ ಅವರು ರೋಡ್ ಶೋ&nbsp; ನಡೆಸಿದ, ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಮತ್ತು ಸುತ್ತ ಮುತ್ಯಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅತ್ಯಂತ ಬಹುಮತದಿಂದ ಗೆದ್ದಿದೆ. ಹೀಗಾಗಿ ಮೋದಿ ಅವರ ಪ್ರಭಾವ ಮಂಕಾಗುತ್ತಿರುವುದನ್ನು ನೀವು ಒಪ್ಪಿಕೊಳ್ಳಿ. ಇನ್ಮೇಲೆ ಮೋದಿ ಅವರ ಮೇಲೆ ಅವಲಂಬಿತರಾಗಬೇಡಿ ಎಂದು ಬಿಜೆಪಿ ಸದಸ್ಯರಿಗೆ ತಿಳಿಸಿದರು.</p>



<p>ಇದೇ ಸಂದರ್ಭದಲ್ಲಿ ಪ್ರತಿಪಕ್ಷ ಬಿಜೆಪಿಯ ಜನಪ್ರಿಯತೆ ಹೇಗೆ ಕುಸಿದಿದೆ, ಯಾಕೆ ಕುಸಿದಿದೆ ಹಾಗೂ ಕಾಂಗ್ರೆಸ್ ಪಕ್ಷ ಹೇಗೆ ಜನರಿಗೆ ಹತ್ತಿರವಾಗಿದೆ ಎಂಬುದನ್ನ ವಿವರಿಸಿದರು.</p>



<figure class="wp-block-image size-large"><img fetchpriority="high" decoding="async" width="1024" height="683" src="https://peepalmedia.com/wp-content/uploads/2023/07/IMG-20230714-WA0025-1024x683.jpg" alt="" class="wp-image-23694" srcset="https://peepalmedia.com/wp-content/uploads/2023/07/IMG-20230714-WA0025-1024x683.jpg 1024w, https://peepalmedia.com/wp-content/uploads/2023/07/IMG-20230714-WA0025-300x200.jpg 300w, https://peepalmedia.com/wp-content/uploads/2023/07/IMG-20230714-WA0025-768x512.jpg 768w, https://peepalmedia.com/wp-content/uploads/2023/07/IMG-20230714-WA0025-150x100.jpg 150w, https://peepalmedia.com/wp-content/uploads/2023/07/IMG-20230714-WA0025-696x464.jpg 696w, https://peepalmedia.com/wp-content/uploads/2023/07/IMG-20230714-WA0025.jpg 1032w" sizes="(max-width: 1024px) 100vw, 1024px" /></figure>



<p><strong>ಜನರ ಜೇಬಿನಲ್ಲಿರುವುದನ್ನು ಕಿತ್ತುಕೊಂಡಿರಿ</strong><br>ಕಾಂಗ್ರೆಸ್ ಗೆಲುವಿಗೆ ಕಾರಣವಾದ ಸಂಗತಿಗಳನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು &#8220;ಕಾಂಗ್ರೆಸ್ ಜನರ ಜೇಬಿನಲ್ಲಿ ಹಣ ಇರಬೇಕು ಎನ್ನುವ ಉದ್ದೇಶದಿಂದ ಐದು ಗ್ಯಾರಂಟಿಗಳನ್ನು ಘೋಷಿಸಿ ಜಾರಿ ಮಾಡಿತು. ಬಡವರು-ಮಧ್ಯಮ ವರ್ಗದವರ ಜೇಬಿನಲ್ಲಿ ಹಣ ಇದ್ದರೆ ನಾಡಿನ ಆರ್ಥಿಕತೆ ಬೆಳೆಯುತ್ತದೆ ಎನ್ನುವುದು ಕಾಂಗ್ರೆಸ್ ನ ಬದ್ಧತೆ ಮತ್ತು ಸಿದ್ಧಾಂತ. ಆದರೆ ಬಿಜೆಪಿ ಜನರ ಜೇಬಿನಲ್ಲಿರುವ ಹಣ ಕಿತ್ತುಕೊಳ್ಳುವ ಮನಸ್ಥಿತಿ ಹೊಂದಿರುವ ಕಾರಣದಿಂದ ಹೀನಾಯವಾಗಿ ಸೋಲು ಕಾಣಬೇಕಾಯಿತು ಎಂದರು.</p>



<p><strong>ಪಂಪ ಮತ್ತು ಹಿಟ್ಲರ್</strong><br>ಕನ್ನಡ ಮಣ್ಣಿನ ಸೌಹಾರ್ದ ಪರಂಪರೆಯ 2000 ವರ್ಷಗಳ ಮೌಲ್ಯವನ್ನು ವಿವರಿಸಿದ ಮುಖ್ಯಮಂತ್ರಿಗಳು, ಪಂಪ &#8220;ಮನುಷ್ಯ ಜಾತಿ ತಾನೊಂದೇ ವಲಂ&#8221; ಎನ್ನುವ ಮೌಲ್ಯದಿಂದ ಕನ್ನಡ ಸಂಸ್ಕೃತಿಯನ್ನು ಅರಳಿಸಿದರು. ಹೀಗೆ ಪಂಪನಿಂದ ಹಿಡಿದು ಬಸವಣ್ಣನವರನ್ನು ಪ್ರಸ್ತಾಪಿಸಿ ಇವರೆಲ್ಲರ ಆಶಯಗಳೇ ನಮ್ಮ ಸಂವಿಧಾನದಲ್ಲಿದೆ. ಆದರೆ ತಾನು ಮಾತ್ರ ಶ್ರೇಷ್ಠ ಎನ್ನುವ ಹಿಟ್ಲರ್ ಒಬ್ಬ ಮತಾಂಧ. ಆತ ಮನುಷ್ಯ ವಿರೋಧಿ ಎಂದರು.</p>



<p><strong>ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು?</strong><br>ಹಿಟ್ಲರ್ ತನ್ನ ತಿಕ್ಕಲುತನದಿಂದ ಹೇಗೆ ಮನುಷ್ಯರ ಮಾರಣ ಹೋಮಕ್ಕೆ ಕಾರಣನಾದ ಎಂದು ವಿವರಿಸುತ್ತಿದ್ದಾಗ ಬಿಜೆಪಿ ಸದಸ್ಯರು ಮುಖ್ಯಮಂತ್ರಿಗಳ ಮಾತಿಗೆ ಅಡ್ಡಿಪಡಿಸಿದರು. ಈ ವೇಳೆ ಮುಖ್ಯಮಂತ್ರಿಗಳು, &#8216;ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು?&#8221; ಎಂದು ಪ್ರಶ್ನಿಸಿದರು.</p>
]]></content:encoded>
					
		
		
			</item>
	</channel>
</rss>
