<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>honnavara &#8211; Peepal Media</title>
	<atom:link href="https://peepalmedia.com/tag/honnavara/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 29 Oct 2022 06:12:35 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>honnavara &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಉತ್ತರ ಕನ್ನಡ ಜಿಲ್ಲೆ: ರಾಷ್ಟ್ರಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿಗೆ ಶಾಸಕ ಸುನೀಲ್ ನಾಯಕ್ ಚಾಲನೆ</title>
		<link>https://peepalmedia.com/uttara-kannada-district-mla-sunil-naik-drives-for-national-level-beach-volleyball-tournament/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 29 Oct 2022 06:12:33 +0000</pubDate>
				<category><![CDATA[ಉತ್ತರ ಕನ್ನಡ]]></category>
		<category><![CDATA[ರಾಜ್ಯ]]></category>
		<category><![CDATA[honnavara]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[MLA Sunil Naik]]></category>
		<category><![CDATA[national level beach volleyball tournament]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Uttara Kannada district]]></category>
		<category><![CDATA[Volleyball]]></category>
		<guid isPermaLink="false">https://peepalmedia.com/?p=13409</guid>

					<description><![CDATA[ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಇಕೋ ಬೀಚ್‌ನಲ್ಲಿ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಬೀಚ್ ವಾಲಿಬಾಲ್ ಫೆಡರೇಷನ್ ಆಫ್ ಇಂಡಿಯಾ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿಗೆ ಶಾಸಕ ಸುನೀಲ್ ನಾಯಕ್ ಚಾಲನೆ ನೀಡಿದರು. ಈ ವೇಳೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹ ನಿರ್ದೇಶಕ ಪ್ರವೀಣ್ ಕುಮಾರ್ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಬೀಚ್ ವಾಲಿಬಾಲ್ ಪಂದ್ಯಾವಳಿ ನಡೆಸುವ ಮೂಲಕ [&#8230;]]]></description>
										<content:encoded><![CDATA[
<p style="font-size:20px"><strong>ಹೊನ್ನಾವರ: </strong>ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಇಕೋ ಬೀಚ್‌ನಲ್ಲಿ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಬೀಚ್ ವಾಲಿಬಾಲ್ ಫೆಡರೇಷನ್ ಆಫ್ ಇಂಡಿಯಾ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿಗೆ ಶಾಸಕ ಸುನೀಲ್ ನಾಯಕ್ ಚಾಲನೆ ನೀಡಿದರು.</p>



<p style="font-size:20px">ಈ ವೇಳೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹ ನಿರ್ದೇಶಕ ಪ್ರವೀಣ್ ಕುಮಾರ್ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಬೀಚ್ ವಾಲಿಬಾಲ್ ಪಂದ್ಯಾವಳಿ ನಡೆಸುವ ಮೂಲಕ ಜಿಲ್ಲೆಯನ್ನು ಕ್ರೀಡಾ ಪ್ರವಾಸೋದ್ಯಮ ಪಟ್ಟಿಗೆ ಸೇರ್ಪಡೆಗೊಳಿಸಲಾಗುತ್ತಿದೆ ಎಂದು ತಿಳಿಸಿದರು.</p>


<div class="wp-block-image">
<figure class="aligncenter size-full is-resized"><img fetchpriority="high" decoding="async" src="https://peepalmedia.com/wp-content/uploads/2022/10/wallyball.jpg" alt="" class="wp-image-13413" width="396" height="195" /><figcaption>                <em><strong>ಹೊನ್ನಾವರದ ಇಕೋ ಬೀಚ್‌ನಲ್ಲಿ ವಾಲಿಬಾಲ್‌ ಪಂದ್ಯಾವಳಿ ನಡೆಯುತ್ತಿರುವ ದೃಶ್ಯ</strong></em></figcaption></figure></div>


<p style="font-size:20px">ಕೇರಳದ ವಾಲಿಬಾಲ್ ಆಟಗಾರ್ತಿ ಅಮೃತ ಮಾತನಾಡಿ, ಹೊನ್ನಾವರದ ಸುಂದರ ಕಡಲತೀರದಲ್ಲಿ ವಾಲಿಬಾನ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವುದೇ ಸಂಭ್ರಮ. ಹೀಗಾಗಿ ಇಲ್ಲಿ ಭಾಗವಹಿಸುತ್ತಿರುವ ಎಲ್ಲಾ ತಂಡಗಳು ಉತ್ತಮ ಕೌಶಲ್ಯ ಪ್ರದರ್ಶಿಸಲಿ ಎಂದು ಹಾರೈಸಿದರು.</p>



<p style="font-size:20px">ಪಂದ್ಯಾವಳಿಯಲ್ಲಿ 8 ರಾಜ್ಯಗಳ 20 ತಂಡಗಳು ಪಾಲ್ಗೊಂಡಿವೆ.</p>
]]></content:encoded>
					
		
		
			</item>
		<item>
		<title>ಪರೇಶ್ ಮೇಸ್ತ ಪ್ರಕರಣ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ</title>
		<link>https://peepalmedia.com/paresh-mesta-case-siddaramaiah-lashed-out-at-bjp/</link>
		
		<dc:creator><![CDATA[Peepal Media]]></dc:creator>
		<pubDate>Tue, 04 Oct 2022 10:07:08 +0000</pubDate>
				<category><![CDATA[ಉತ್ತರ ಕನ್ನಡ]]></category>
		<category><![CDATA[ರಾಜ್ಯ]]></category>
		<category><![CDATA[bjp]]></category>
		<category><![CDATA[honnavara]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[Paresh Mesta case]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[siddaramayya]]></category>
		<guid isPermaLink="false">https://peepalmedia.com/?p=8914</guid>

					<description><![CDATA[ಹೊನ್ನಾವರ: ಪರೇಶ್ ಮೇಸ್ತ ಅವರದ್ದು ಹತ್ಯೆ ಅಲ್ಲ, ಆಕಸ್ಮಿಕ‌ ಸಾವು ಎಂಬ ಕೇಂದ್ರೀಯ ತನಿಕಾ ದಳ(ಸಿಬಿಐ)ದ ಅಂತಿಮ ವರದಿ ಹಿನ್ನಲೆ, ಪ್ರಕರಣದ ಕುರಿತು ಕಾಂಗ್ರೆಸ್‌ ಪಕ್ಷದ ಮೇಲೆ ಸುಳ್ಳು ಆರೋಪ ಮಾಡಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ನಗರದಲ್ಲಿ ಗುಂಪು ಹಿಂಸಾಚಾರದ ಘಟನೆಯ ನಂತರ ನಾಪತ್ತೆಯಾಗಿದ್ದ ಪರೇಶ್ ಮೇಸ್ತ, ಎರೆಡು ದಿನಗಳ ಬಳಿಕ ಶವವಾಗಿ ಸರೋವರದ ಬಳಿ ಪತ್ತೆಯಾಗಿದ್ದ. ಈ ಹಿನ್ನಲೆ ಬಲಪಂಥೀಯ [&#8230;]]]></description>
										<content:encoded><![CDATA[
<p style="font-size:20px"><strong>ಹೊನ್ನಾವರ:</strong> ಪರೇಶ್ ಮೇಸ್ತ ಅವರದ್ದು ಹತ್ಯೆ ಅಲ್ಲ, ಆಕಸ್ಮಿಕ‌ ಸಾವು ಎಂಬ ಕೇಂದ್ರೀಯ ತನಿಕಾ ದಳ(ಸಿಬಿಐ)ದ ಅಂತಿಮ ವರದಿ ಹಿನ್ನಲೆ, ಪ್ರಕರಣದ ಕುರಿತು ಕಾಂಗ್ರೆಸ್‌ ಪಕ್ಷದ ಮೇಲೆ ಸುಳ್ಳು ಆರೋಪ ಮಾಡಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಮೇಲೆ ವಾಗ್ದಾಳಿ ನಡೆಸಿದ್ದಾರೆ.</p>



<p style="font-size:20px">ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ನಗರದಲ್ಲಿ ಗುಂಪು ಹಿಂಸಾಚಾರದ ಘಟನೆಯ ನಂತರ ನಾಪತ್ತೆಯಾಗಿದ್ದ ಪರೇಶ್ ಮೇಸ್ತ, ಎರೆಡು ದಿನಗಳ ಬಳಿಕ ಶವವಾಗಿ ಸರೋವರದ ಬಳಿ ಪತ್ತೆಯಾಗಿದ್ದ. ಈ ಹಿನ್ನಲೆ ಬಲಪಂಥೀಯ ಗುಂಪುಗಳು ಮತ್ತು ಆಗಿನ ವಿರೋಧ ಪಕ್ಷ ಬಿಜೆಪಿಯು ಮೇಸ್ತ ಅವರನ್ನು ಇತರ ಧರ್ಮದ ಜನರು ಚಿತ್ರಹಿಂಸೆ ನೀಡಿ ಕೊಂದಿದ್ದು, ಪ್ರಕರಣವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಚ್ಚಿಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ, ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು. ಈ ಹಿನ್ನಲೆ ಸಿದ್ದರಾಮಯ್ಯ ಅವರು ಡಿಸೆಂಬರ್‌ 13,2017 ರಂದು ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದ್ದರು.</p>



<p style="font-size:20px">ಇಂದು ಈ ಪ್ರಕರಣದ ಅಂತಿಮ ವರದಿಯನ್ನು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ವರದಿಯಲ್ಲಿ ಪರೇಶ್ ಮೇಸ್ತ ಅವರ ಸಾವು ಕೊಲೆಯಲ್ಲ, ಆಕಸ್ಮಿಕ ಎಂದು ತಿಳಿಸಿದೆ.</p>



<p style="font-size:20px">ಈ ಹಿನ್ನಲೆಯಲ್ಲಿ ಟ್ವೀಟ್‌ ಮಾಡುವ ಮೂಲಕ ಆಕ್ರೋಶ ಹೊರಹಾಕಿರುವ ಸಿದ್ದರಾಮಯ್ಯ ಅವರು, ಹೊನ್ನಾವರದ ಪರೇಶ್ ಮೇಸ್ತನದ ಹತ್ಯೆ ಅಲ್ಲ, ಆಕಸ್ಮಿಕ‌ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು ಎಂದು ಹೇಳಿದ್ದಾರೆ.</p>



<p style="font-size:20px">ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದು ಟೀಕಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>&#8216;ಆಕಸ್ಮಿಕ ಸಾವು&#8217;: ಪರೇಶ್ ಮೇಸ್ತಾ ಪ್ರಕರಣದ ಅಂತಿಮ ವರದಿ ಸಲ್ಲಿಸಿದ ಸಿಬಿಐ</title>
		<link>https://peepalmedia.com/accidental-death-cbi-submits-final-report-in-paresh-mesta-case/</link>
		
		<dc:creator><![CDATA[Peepal Media]]></dc:creator>
		<pubDate>Tue, 04 Oct 2022 07:40:30 +0000</pubDate>
				<category><![CDATA[ಉತ್ತರ ಕನ್ನಡ]]></category>
		<category><![CDATA[ರಾಜ್ಯ]]></category>
		<category><![CDATA[honnavara]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[Paresh Mesta death case]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sbi]]></category>
		<guid isPermaLink="false">https://peepalmedia.com/?p=8880</guid>

					<description><![CDATA[ಹೊನ್ನಾವರ: ಸಂಚಲನ ಮೂಡಿಸಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದ ಅಂತಿಮ ವರದಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಹೊನ್ನಾವರದ ನ್ಯಾಯಾಲಯಕ್ಕೆ ಸಲ್ಲಿಸಿದೆ. ಫೆಡರಲ್ ತನಿಖಾ ಸಂಸ್ಥೆಯು 4 ವರ್ಷಗಳಿಗೂ ಹೆಚ್ಚು ಕಾಲ ಪ್ರಕರಣವನ್ನು ತನಿಖೆ ಮಾಡಿದ ನಂತರ 1,500 ಪುಟಗಳ ಅಂತಿಮ ವರದಿಯನ್ನು ಸಲ್ಲಿಸಿದೆ. ವರದಿಯಲ್ಲಿ 19 ವರ್ಷದ ಮೆಸ್ತಾ ಸಾವು ಆಕಸ್ಮಿಕವೇ ಹೊರತು ಕೊಲೆಯಲ್ಲ ಎಂದು ಸಿಬಿಐ ತಿಳಿಸಿದೆ. &#160;ತನಿಖೆಯ ಸಮಯದಲ್ಲಿ, ಆರೋಪಿಗಳ ಪಾಲ್ಗೊಳ್ಳುವಿಕೆಯನ್ನು ತೋರಿಸುವ ಯಾವುದೇ ದೋಷಾರೋಪಣೆಯ ಪುರಾವೆಗಳು ಹೊರಹೊಮ್ಮಿಲ್ಲ ಮತ್ತು ಅನೇಕ ಸಂಸ್ಥೆಗಳಿಂದ [&#8230;]]]></description>
										<content:encoded><![CDATA[
<p style="font-size:20px"><strong>ಹೊನ್ನಾವರ:</strong> ಸಂಚಲನ ಮೂಡಿಸಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದ ಅಂತಿಮ ವರದಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಹೊನ್ನಾವರದ ನ್ಯಾಯಾಲಯಕ್ಕೆ ಸಲ್ಲಿಸಿದೆ.</p>



<p style="font-size:20px">ಫೆಡರಲ್ ತನಿಖಾ ಸಂಸ್ಥೆಯು 4 ವರ್ಷಗಳಿಗೂ ಹೆಚ್ಚು ಕಾಲ ಪ್ರಕರಣವನ್ನು ತನಿಖೆ ಮಾಡಿದ ನಂತರ 1,500 ಪುಟಗಳ ಅಂತಿಮ ವರದಿಯನ್ನು ಸಲ್ಲಿಸಿದೆ. ವರದಿಯಲ್ಲಿ 19 ವರ್ಷದ ಮೆಸ್ತಾ ಸಾವು ಆಕಸ್ಮಿಕವೇ ಹೊರತು ಕೊಲೆಯಲ್ಲ ಎಂದು ಸಿಬಿಐ ತಿಳಿಸಿದೆ.</p>



<p style="font-size:20px">&nbsp;ತನಿಖೆಯ ಸಮಯದಲ್ಲಿ, ಆರೋಪಿಗಳ ಪಾಲ್ಗೊಳ್ಳುವಿಕೆಯನ್ನು ತೋರಿಸುವ ಯಾವುದೇ ದೋಷಾರೋಪಣೆಯ ಪುರಾವೆಗಳು ಹೊರಹೊಮ್ಮಿಲ್ಲ ಮತ್ತು ಅನೇಕ ಸಂಸ್ಥೆಗಳಿಂದ ಸಂಗ್ರಹಿಸಲಾದ ವೈದ್ಯಕೀಯ-ಕಾನೂನು ಪುರಾವೆಗಳು ಸಹ ಪರೇಶ್ ಮೇಸ್ತಾ ಅವರ ಮರಣ ಆಕಸ್ಮಿಕ ಎಂದು ದೃಢಪಡಿಸಿವೆ ಎಂದು ಸಿಬಿಐ ವರದಿ ಹೇಳಿದೆ.</p>



<p style="font-size:20px">ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ನಗರದಲ್ಲಿ ಗುಂಪು ಹಿಂಸಾಚಾರದ ಘಟನೆಯ ನಂತರ ಮೀನುಗಾರ ಮೇಸ್ತಾ ಡಿಸೆಂಬರ್ 6, 2017 ರಂದು ನಾಪತ್ತೆಯಾಗಿದ್ದರು. ಎರಡು ದಿನಗಳ ನಂತರ ಆತನ ಶವ ಸರೋವರದ ಬಳಿ ಪತ್ತೆಯಾಗಿತ್ತು. ಈ ಹಿನ್ನಲೆ ಬಲಪಂಥೀಯ ಗುಂಪುಗಳು ಮತ್ತು ಆಗಿನ ವಿರೋಧ ಪಕ್ಷ ಬಿಜೆಪಿಯು ಮೇಸ್ತಾನನ್ನು ಹಿಂಸಾಚಾರದಲ್ಲಿ ಕೊಂದು ಆತನ ದೇಹವನ್ನು ಸರೋವರದ ಬಳಿ ಎಸೆಯಲಾಗಿದೆ ಎಂದು ಆರೋಪಿಸಿದ್ದರು.</p>



<p style="font-size:20px">ಪರೇಶ್ ಮೇಸ್ತಾ ಅವರ ಶವವನ್ನು ಸರೋವರಕ್ಕೆ ಬಿಸಾಡುವ ಮೊದಲು ಮೇಸ್ತಾಗೆ ಇತರ ಧರ್ಮದ ಜನರು ಚಿತ್ರಹಿಂಸೆ ನೀಡಿದ್ದಾರೆ ಎಂದು ಹಿಂದೂ ಪರ ಗುಂಪುಗಳು ಹೇಳಿಕೆ ನೀಡಿದ್ದವು. ಇದರಿಂದಾಗಿ ಹೊನ್ನಾವರ, ಕುಮಟಾ ಮತ್ತು ಶಿರಸಿಯಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕಾರಣವಾಯಿತು.</p>



<p style="font-size:20px">ಈ ಹಿನ್ನಲೆ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿತ್ತು. ಹೀಗಾಗಿ ಪ್ರತಿಪಕ್ಷಗಳ ಒತ್ತಡದ ನಂತರ ಸಿದ್ದರಾಮಯ್ಯ ಡಿಸೆಂಬರ್ 13, 2017 ರಂದು ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದರು.</p>
]]></content:encoded>
					
		
		
			</item>
	</channel>
</rss>
