<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>hubli &#8211; dharawad &#8211; Peepal Media</title>
	<atom:link href="https://peepalmedia.com/tag/hubli-dharawad/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 28 Mar 2024 06:48:44 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>hubli &#8211; dharawad &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title> ಶ್ರೀಪಾದಭಟ್‌ ಅವರಿಗೆ ರಂಗಭೂಪತಿ ಪ್ರಶಸ್ತಿ: ಗೋಪಾಲ ವಾಜಪೇಯಿಯವರ ರಂಗಗೀತೆಗಳ ರಂಗಸಂಜೆ</title>
		<link>https://peepalmedia.com/rangabhupati-award-to-sripadabhat-an-evening-of-gopal-vajpayees-ranga-songs/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 28 Mar 2024 06:47:21 +0000</pubDate>
				<category><![CDATA[ಕಲೆ – ಸಾಹಿತ್ಯ]]></category>
		<category><![CDATA[ಧಾರವಾಡ]]></category>
		<category><![CDATA[ಸಿನಿಮಾ]]></category>
		<category><![CDATA[dharawad]]></category>
		<category><![CDATA[hubli - dharawad]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rangabhoomi]]></category>
		<category><![CDATA[sahitya]]></category>
		<category><![CDATA[theater]]></category>
		<guid isPermaLink="false">https://peepalmedia.com/?p=37637</guid>

					<description><![CDATA[ಧಾರವಾಡ: ಗೋವಾ ರಂಗ-ಸಂಗ ತಂಡ, ಆಟ-ಮಾಟ ಧಾರವಾಡ ಮತ್ತು ಬಹುರೂಪಿ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ಹಿರಿಯ ರಂಗ ನಿರ್ದೇಶಕ ಶ್ರೀಪಾದಭಟ್‌ ಅವರಿಗೆ 2024ರ ಸಾಲಿನ ರಂಗಭೂಪತಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕವಿ ರಾಜಕುಮಾರ್‌ ಮಡಿವಾಳರ ತಿಳಿಸಿದ್ದಾರೆ. ಧಾರವಾಡ ರಂಗಾಯಣ ಆವರಣದಲ್ಲಿರುವ ಪಂ.ಬಸವರಾಜ ರಾಜಗುರು ಬಯಲುರಂಗಮಂದಿರದಲ್ಲಿ ಮಾ.30ರಂದು ಸಂಜೆ 6ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ʼಪ್ರಶಸ್ತಿ ಪ್ರಧಾನದ ಜೊತೆಗೆ ಸಾಹಿತಿ ಗೋಪಾಲ ವಾಜಪೇಯಿ ಅವರ ನೆನಪಿನ ರಂಗಗೀತೆಗಳ “ರಂಗಸಂಜೆ” ಕಾರ್ಯಕ್ರಮವು ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. [&#8230;]]]></description>
										<content:encoded><![CDATA[
<p>ಧಾರವಾಡ: ಗೋವಾ ರಂಗ-ಸಂಗ ತಂಡ, ಆಟ-ಮಾಟ ಧಾರವಾಡ ಮತ್ತು ಬಹುರೂಪಿ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ಹಿರಿಯ ರಂಗ ನಿರ್ದೇಶಕ ಶ್ರೀಪಾದಭಟ್‌ ಅವರಿಗೆ 2024ರ ಸಾಲಿನ ರಂಗಭೂಪತಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕವಿ ರಾಜಕುಮಾರ್‌ ಮಡಿವಾಳರ ತಿಳಿಸಿದ್ದಾರೆ.</p>



<p>ಧಾರವಾಡ ರಂಗಾಯಣ ಆವರಣದಲ್ಲಿರುವ ಪಂ.ಬಸವರಾಜ ರಾಜಗುರು ಬಯಲುರಂಗಮಂದಿರದಲ್ಲಿ ಮಾ.30ರಂದು ಸಂಜೆ 6ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ʼಪ್ರಶಸ್ತಿ ಪ್ರಧಾನದ ಜೊತೆಗೆ ಸಾಹಿತಿ ಗೋಪಾಲ ವಾಜಪೇಯಿ ಅವರ ನೆನಪಿನ ರಂಗಗೀತೆಗಳ “ರಂಗಸಂಜೆ” ಕಾರ್ಯಕ್ರಮವು ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>



<p>ಗೋಪಾಲ್‌ ವಾಜಪೇಯಿಯವರು ಹಲವು ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸಿದವರು. ಜೊತೆಗೆ ಜಕವಿ, ನಾಟಕಕಾರ, ನಟ, ನಿರ್ದೇಶಕರಾಗಿ, ಆಕಾಶವಾಣಿ, ರಂಗಭೂಮಿ, ಸಿನಿಮಾ, ಜನಸಮುದಾಯ ಅತಿ ಇಷ್ಟದ ಮಾಧ್ಯಮಗಳ ಮೂಲಕ &nbsp;ಮೂರು ದಶಕಗಳಿಗೂ ಹೆಚ್ಚು ಕಾಲ ಒಂದಿಡಿ ತಲೆಮಾರನ್ನು ತಮ್ಮ ಬರಹದ ಮೂಲಕ ಪ್ರಭಾವಿಸಿದವರು. ಉತ್ತರ ಕರ್ನಾಟಕದ ಗಟ್ಟಿ ಆಡುಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡಿದ ಅವರು, ರಂಗಭೂಮಿಗೆ ನೀಡಿದ ಕೊಡುಗೆ ಅಪಾರ. ಅದೇನೋ ಕಾರಣಕ್ಕೆ ಅವರು ಅಜ್ಞಾತರಾಗಿಯೇ ಉಳಿದರು. ಮುಖ್ಯವಾಹಿನಿಗೆ ಬರಲಿಲ್ಲ. ಅವರಿಗೆ ದಕ್ಕಬೇಕಾದ ಗೌರವವೂ ದೊರೆಯಲಿಲ್ಲ.</p>



<p>ಅಂಥ ಅಪರೂಪದ ಸಾಧಕನನ್ನು ನೆನಪಿಸಿಕೊಳ್ಳುವ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ, ಕೊಡುಗೆ ನೀಡಿರುವ ಪ್ರತಿಭಾವಂತರೊಬ್ಬರಿಗೆ &#8220;ರಂಗಭೂಪತಿ&#8221; ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ರಾಜಕುಮಾರ್‌ ತಿಳಿಸಿದ್ದಾರೆ,</p>



<p>ಪ್ರಸಕ್ತ ಸಾಲಿನ ಮೊದಲ ಪ್ರಶಸ್ತಿಯನ್ನು ಪ್ರತಿಭಾವಂತ ನಿರ್ದೇಶಕ ಶ್ರೀ ಶ್ರೀಪಾದ ಭಟ್ ಅವರಿಗೆ ನೀಡಲಾಗುತ್ತಿದ್ದು, ಪ್ರಶಸ್ತಿ 5 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ. ವಿಶ್ವರಂಗ ಭೂಮಿ ದಿನದ ಪ್ರಯುಕ್ತ, ಈ ಕಾರ್ಯಕ್ರಮದಲ್ಲಿ ಗೋಪಾಲ ವಾಜಪೇಯಿ ಅವರು ರಚಿಸಿದ ರಂಗಗೀತೆಗಳ ಹಬ್ಬ ಆಯೋಜಿಸಲಾಗಿದೆ.</p>



<p>&nbsp;ರಂಗಾಯಣ ಕಲಾವಿದ ರಾಘವ ಕಮ್ಮಾರ, ಹೂವಿನ ಹಡಗಲಿಯ ಶಶಿಧರ.ಕೆ.ಎಮ್, ರವಿ ಯಲ್ಲಪ್ಪನವರ್,&nbsp; ಪರಶುರಾಮ ನಾಗೋಜಿ ರಂಗಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ. ಹಿರಿಯ ಸಾಹಿತಿ, ನಾಟಕಕಾರ ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಶ್ರೀ ಗೋಪಾಲ ವಾಜಪೇಯಿ ಕುಟುಂಬಸ್ತರು, ರಂಗಕರ್ಮಿ ಧನಂಜಯ ಕುಲಕರ್ಣಿ, &#8220;ಅವಧಿ ಈ-ಮ್ಯಾಗಜಿನ್&#8221; ಸಂಪಾದಕ ಶ್ರೀ ಜಿ,ಎನ್. ಮೋಹನ, ರವಿ ಕುಲಕರ್ಣಿ ಉಪಸ್ಥಿತರಿರುತ್ತಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. &nbsp;</p>
]]></content:encoded>
					
		
		
			</item>
		<item>
		<title>ಸೆ.26ರಂದು  ಹುಬ್ಬಳ್ಳಿ – ಧಾರವಾಡಕ್ಕೆ ರಾಷ್ಟ್ರಪತಿಗಳ ಆಗಮನ</title>
		<link>https://peepalmedia.com/sep-26randu-hubli-dharawadkke-rashtrapatigala-aaagamana/</link>
		
		<dc:creator><![CDATA[Peepal Media]]></dc:creator>
		<pubDate>Sun, 18 Sep 2022 12:12:01 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bengalure]]></category>
		<category><![CDATA[droupadi murmu]]></category>
		<category><![CDATA[hubli - dharawad]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[president]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=6086</guid>

					<description><![CDATA[ಹುಬ್ಬಳ್ಳಿ – ಧಾರವಾಡ : ಸೆಪ್ಟಂಬರ್‌ 26 ರಂದು ‌ರಾಷ್ಟ್ರಪತಿ ದ್ರೌಪದಿ‌ ಮುರ್ಮು ಅವರು ಹುಬ್ಬಳ್ಳಿ ಧಾರವಾಡ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಲ್ಲಿನ ಮಹಾನಗರ ಪಾಲಿಕೆಯ ಮೇಯರ್ ಈರೇಶ್ ಅಂಚಟಗೇರಿ ರವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೇಯರ್‌ ಈರೇಶ್‌ ಅಂಚಟಗೇರಿರವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟಂಬರ್‌ 20ಕ್ಕೆ ಹುಬ್ಬಳ್ಳಿ ಧಾರವಾಡ ನಗರಕ್ಕೆ ಭೇಟಿ ನೀಡುವ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಜಿಮ್‌ಖಾನಾ ಮೈದಾನದಲ್ಲಿ‌ ಅದ್ದೂರಿ ಕಾರ್ಯಕ್ರಮ ನಡೆಯಲಿದ್ದು ದ್ರೌಪದಿ ಮುರ್ಮು [&#8230;]]]></description>
										<content:encoded><![CDATA[
<p class="has-medium-font-size"><strong>ಹುಬ್ಬಳ್ಳಿ – ಧಾರವಾಡ :</strong> ಸೆಪ್ಟಂಬರ್‌ 26 ರಂದು ‌ರಾಷ್ಟ್ರಪತಿ ದ್ರೌಪದಿ‌ ಮುರ್ಮು ಅವರು ಹುಬ್ಬಳ್ಳಿ ಧಾರವಾಡ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಲ್ಲಿನ ಮಹಾನಗರ ಪಾಲಿಕೆಯ ಮೇಯರ್ ಈರೇಶ್ ಅಂಚಟಗೇರಿ ರವರು ಹೇಳಿದ್ದಾರೆ.</p>



<p class="has-medium-font-size">ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೇಯರ್‌ ಈರೇಶ್‌ ಅಂಚಟಗೇರಿರವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟಂಬರ್‌ 20ಕ್ಕೆ ಹುಬ್ಬಳ್ಳಿ ಧಾರವಾಡ ನಗರಕ್ಕೆ ಭೇಟಿ ನೀಡುವ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಜಿಮ್‌ಖಾನಾ ಮೈದಾನದಲ್ಲಿ‌ ಅದ್ದೂರಿ ಕಾರ್ಯಕ್ರಮ ನಡೆಯಲಿದ್ದು ದ್ರೌಪದಿ ಮುರ್ಮು ಅವರು ನಮ್ಮ ಹುಬ್ಬಳ್ಳಿ ಧಾರವಾಡಕ್ಕೆ ಬರುಲಿರುವ ಮೂರನೇ ರಾಷ್ಟ್ರಪತಿಗಳಾಗಿದ್ದಾರೆ. ಈ ಹಿಂದೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಡಾ. ಎ. ಪಿಜೆ ಅಬ್ದುಲ್‌ ಕಲಾಂ ಭೇಟಿ ನೀಡಿದ್ದರುʼ ಎಂದು ಹೇಳಿದರು.</p>



<p class="has-medium-font-size">ʼರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ ಐದು  ಸಾವಿರ ಜನರು ಮತ್ತು ಐನೂರು ಪೌರ ಕಾರ್ಮಿಕರಿಗೆ ಹಾಜರಾಗಲು ಅವಕಾಶ ಮಾಡಿಕೊಡಲಾಗಿದೆ. ಸಮಾರಂಭದಲ್ಲಿ ರಾಷ್ಟ್ರಪತಿಗಳಿಗೆ ನೆನಪಿನ  ಕಾಣಿಕೆಯಾಗಿ ಸಿದ್ಧಾರೂಡರ 1.5ಕೆಜಿ ಬೆಳ್ಳಿಯ ಮೂರ್ತಿಯನ್ನು ನೀಡಲಿದ್ದು, ಧಾರವಾಡ ಮಹಾನಗರ ಪಾಲಿಕೆಯಿಂದ ಪೌರಸನ್ಮಾನವನ್ನು ಸಲ್ಲಿಸಿ ಅವರನ್ನು ಗೌರವಿಸಲಾಗುತ್ತಿದೆ. ಕಾರ್ಯಕ್ರಮ ಮುಗಿದ ನಂತರ ದ್ರೌಪದಿ ಮುರ್ಮು ಅವರು ಧಾರವಾಡದ ಐಐಟಿಗೆ ಭೇಟಿ ನೀಡಲಿದ್ದು ಸುಮಾರು 400 ವಿದ್ಯಾರ್ಥಿಗಳ ಜೊತೆಗೆ ಸಂವಹನ ನಡೆಸಲಿದ್ದಾರೆʼ ಎನ್ನುವ ಮಾಹಿತಿ ನೀಡಿದ್ದಾರೆ.</p>
]]></content:encoded>
					
		
		
			</item>
	</channel>
</rss>
