<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>increase farmers&#039; income &#8211; Peepal Media</title>
	<atom:link href="https://peepalmedia.com/tag/increase-farmers-income/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 26 Aug 2024 09:39:09 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>increase farmers&#039; income &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ರೈತರ ಪ್ರತಿಭಟನೆಯನ್ನು ಬಾಂಗ್ಲಾದೇಶಕ್ಕೆ ಹೋಲಿಸಿದ ಕಂಗನಾ ರಣಾವತ್:‌ ಬಿಜೆಪಿಯಿಂದಲೇ ವಿರೋಧ</title>
		<link>https://peepalmedia.com/kangana-ranaut-compares-the-farmers-protest-to-bangladesh-opposition-from-the-bjp-itself/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 26 Aug 2024 09:39:08 +0000</pubDate>
				<category><![CDATA[ದೇಶ]]></category>
		<category><![CDATA[ರಾಜಕೀಯ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[Farmer Problems]]></category>
		<category><![CDATA[farmers protest]]></category>
		<category><![CDATA[increase farmers&#039; income]]></category>
		<category><![CDATA[india]]></category>
		<category><![CDATA[kangana ranavat]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=44478</guid>

					<description><![CDATA[ಹೊಸದಿಲ್ಲಿ: ಮಂಡಿ ಸಂಸದೆ ಮತ್ತು ಬಿಜೆಪಿ ನಾಯಕಿ, ನಟಿ ಕಂಗನಾ ರಣಾವತ್ ರೈತರ ಪ್ರತಿಭಟನೆಯನ್ನು ಬಾಂಗ್ಲಾದೇಶದ ಅಶಾಂತಿಗೆ ಹೋಲಿಸಿ ಈಗ ಸಾಕಷ್ಟು ಚರ್ಚೆ ಕಾರಣವಾಗಿದ್ದು, ಹರಿಯಾಣದ ಬಿಜೆಪಿ ಮುಖಂಡರಿಂದ ಸಾಕಷ್ಟು ವಿರೋಧಕ್ಕೆ ಕಾರಣವಾಗಿದೆ. ಸರಕಾರ ಬಲವಾದ ಕ್ರಮಗಳನ್ನು ಕೈಗೊಳ್ಳದಿದ್ದರೆ ಈ ರೈತರಿಂದಾಗಿ ಬಾಂಗ್ಲಾದೇಶದ ಪರಿಸ್ಥಿತಿ ಭಾರತಕ್ಕೆ ಬರಬಹುದು ಎಂದು ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಕಂಗನಾ ರೈತರ ಪ್ರತಿಭಟನೆಯ ಸಂದರ್ಭದಲ್ಲಿ, ಶವಗಳನ್ನು ನೇಣು ಹಾಕುವುದು ಮತ್ತು ಅತ್ಯಾಚಾರ [&#8230;]]]></description>
										<content:encoded><![CDATA[
<p><strong>ಹೊಸದಿಲ್ಲಿ:</strong> ಮಂಡಿ ಸಂಸದೆ ಮತ್ತು ಬಿಜೆಪಿ ನಾಯಕಿ, ನಟಿ  ಕಂಗನಾ ರಣಾವತ್ ರೈತರ ಪ್ರತಿಭಟನೆಯನ್ನು ಬಾಂಗ್ಲಾದೇಶದ ಅಶಾಂತಿಗೆ ಹೋಲಿಸಿ ಈಗ ಸಾಕಷ್ಟು ಚರ್ಚೆ ಕಾರಣವಾಗಿದ್ದು, ಹರಿಯಾಣದ ಬಿಜೆಪಿ ಮುಖಂಡರಿಂದ ಸಾಕಷ್ಟು ವಿರೋಧಕ್ಕೆ ಕಾರಣವಾಗಿದೆ. </p>



<p> ಸರಕಾರ ಬಲವಾದ ಕ್ರಮಗಳನ್ನು ಕೈಗೊಳ್ಳದಿದ್ದರೆ ಈ ರೈತರಿಂದಾಗಿ ಬಾಂಗ್ಲಾದೇಶದ ಪರಿಸ್ಥಿತಿ ಭಾರತಕ್ಕೆ ಬರಬಹುದು ಎಂದು ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಕಂಗನಾ ರೈತರ ಪ್ರತಿಭಟನೆಯ ಸಂದರ್ಭದಲ್ಲಿ, ಶವಗಳನ್ನು ನೇಣು ಹಾಕುವುದು ಮತ್ತು ಅತ್ಯಾಚಾರ ಪ್ರಕರಣಗಳು ನಡೆದ ಉದಾಹರಣೆಗಳಿವೆ ಎಂದು ರಣಾವತ್ ‌ ಆರೋಪಿಸಿದ್ದಾರೆ. ರೈತರ ಪ್ರತಿಭಟನೆಗಳಿಗೆ ವಿದೇಶಿ ಶಕ್ತಿಗಳ ಉತ್ತೇಜನವಿದೆ ಎಂದು ಅವರು ಹೇಳಿರುವುದು ರೈತರನ್ನು ಕೆರಳಿಸಿದೆ.</p>



<p>ಬಿಜೆಪಿ ಮೂಲಗಳ ಪ್ರಕಾರ, ಕಂಗನಾ ಅವರ ಹೇಳಿಕೆ ಚುನಾವಣೆಯ ಹೊಸ್ತಿಲಲ್ಲಿರುವ ಹರಿಯಾಣ ಬಿಜೆಪಿಗೆ ಅರಗಿಸಿಕೊಳ್ಳಲಾಗದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿ ನಾಯಕರೊಬ್ಬರು, &#8220;ನಾವು ಈ ವಿಚಾರವನ್ನು ಉನ್ನತ ನಾಯಕರ ಗಮನಕ್ಕೆ ತಂದಿದ್ದೇವೆ&#8221; ಎಂದು ಹೇಳಿಕೆ ನೀಡಿದ್ದಾರೆ.</p>



<p> ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ರಾಜ್ಯದ ರೈತರಿಂದ ವಿರೋಧ ಎದುರಿಸಿದ್ದರು.ಕಂಗನಾ ರಣಾವತ್ ಅವರ ಹೇಳಿಕೆಗಳು ರೈತರ ಕೋಪವನ್ನು ಮತ್ತೆ ಹೆಚ್ಚಿಸಬಹುದು ಮತ್ತು ಕೆಲವು ಕ್ಷೇತ್ರಗಳಲ್ಲಿ ಬಿಜೆಪಿಗೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಬಿಜೆಪಿ ನಾಯಕರು ಆತಂಕಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. “ಆಕೆ ಹರಿಯಾಣದ ನಾಯಕಿಯೂ ಅಲ್ಲ. ಆಕೆ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಅಗತ್ಯವಿರಲಿಲ್ಲ&#8221;, ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದರು.</p>



<p>ಶಹೀದ್ ಭಗತ್ ಸಿಂಗ್ ನ ವಕ್ತಾರ ತೇಜ್ವೀರ್ ಸಿಂಗ್, ರಣಾವತ್ ಅವರಿಗೆ ಪ್ರಚಾರದ ಹುಚ್ಚು. ಅದಕ್ಕೆ ಟೀಕೆಗಳನ್ನು ಮಾಡುತ್ತಾರೆ. ಮಣಿಪುರದಂತಹ ಮಾನವ ಹಕ್ಕುಗಳ ವಿಷಯಗಳ ಬಗ್ಗೆ ಅವರು ಮೌನ ತಾಳಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಮುಖ್ಯಸ್ಥ ಮೋಹನ್ ಲಾಲ್ ಬಡೋಲಿ ಅವರು ವೀಡಿಯೊ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. </p>
]]></content:encoded>
					
		
		
			</item>
		<item>
		<title>ಸರ್ಕಾರದ ನಡೆ ರೈತರ ಆದಾಯ ಹೆಚ್ಚಿಸುವ ಕಡೆ: ಬೊಮ್ಮಾಯಿ</title>
		<link>https://peepalmedia.com/governments-move-to-increase-farmers-income-bommai/</link>
		
		<dc:creator><![CDATA[Peepal Media]]></dc:creator>
		<pubDate>Thu, 29 Sep 2022 12:29:59 +0000</pubDate>
				<category><![CDATA[ರಾಜ್ಯ]]></category>
		<category><![CDATA[ಹಾವೇರಿ]]></category>
		<category><![CDATA[cm bhommai]]></category>
		<category><![CDATA[haveri]]></category>
		<category><![CDATA[increase farmers&#039; income]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rajata mahothsava]]></category>
		<guid isPermaLink="false">https://peepalmedia.com/?p=8074</guid>

					<description><![CDATA[ಹಾವೇರಿ: ಹಾವೇರಿ ಜಿಲ್ಲೆ ರಚನೆಗೊಂಡು 25 ವರ್ಷ ಪೂರ್ಣಗೊಂಡಿರುವ ಹಿನ್ನಲೆ ವಿಜಯ ಕರ್ನಾಟಕ ದಿನಪತ್ರಿಕೆ ಹಮ್ಮಿಕೊಂಡಿದ್ದ ಹಾವೇರಿ ಜಿಲ್ಲೆ ʼರಜತ ಮಹೋತ್ಸವʼಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರ ಆದಾಯವನ್ನು ದುಪ್ಪಟ್ಟುಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು. &#160; ಸಮಾರಂಭದಲ್ಲಿ ಹಾಲು ಉತ್ಪಾದಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಧಾರವಾಡ ಹಾಲು ಮಂಡಳದಲ್ಲಿ ಹಾವೇರಿ ಜಿಲ್ಲೆ ಅತಿ ಹೆಚ್ಚು ಹಾಲು ಉತ್ಪಾದಿಸುವ ಜಿಲ್ಲೆಯಾಗಿದೆ. ಹಾಲು ಉತ್ಪಾದಕರ ಒಳಿತಿಗಾಗಿ ಹಾಗೂ ಅವರ ಮೌಲ್ಯ ವೃದ್ಧಿಸುವ ಸಲುವಾಗಿ ಹಾಗೂ ಅನೇಕ [&#8230;]]]></description>
										<content:encoded><![CDATA[
<p style="font-size:20px"><strong>ಹಾವೇರಿ:</strong> ಹಾವೇರಿ ಜಿಲ್ಲೆ ರಚನೆಗೊಂಡು 25 ವರ್ಷ ಪೂರ್ಣಗೊಂಡಿರುವ ಹಿನ್ನಲೆ ವಿಜಯ ಕರ್ನಾಟಕ ದಿನಪತ್ರಿಕೆ ಹಮ್ಮಿಕೊಂಡಿದ್ದ ಹಾವೇರಿ ಜಿಲ್ಲೆ ʼರಜತ ಮಹೋತ್ಸವʼಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರ ಆದಾಯವನ್ನು ದುಪ್ಪಟ್ಟುಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು. &nbsp;</p>



<p style="font-size:20px">ಸಮಾರಂಭದಲ್ಲಿ ಹಾಲು ಉತ್ಪಾದಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಧಾರವಾಡ ಹಾಲು ಮಂಡಳದಲ್ಲಿ ಹಾವೇರಿ ಜಿಲ್ಲೆ ಅತಿ ಹೆಚ್ಚು ಹಾಲು ಉತ್ಪಾದಿಸುವ ಜಿಲ್ಲೆಯಾಗಿದೆ. ಹಾಲು ಉತ್ಪಾದಕರ ಒಳಿತಿಗಾಗಿ ಹಾಗೂ ಅವರ ಮೌಲ್ಯ ವೃದ್ಧಿಸುವ ಸಲುವಾಗಿ ಹಾಗೂ ಅನೇಕ ಮಹನೀಯರ ನಿರಂತರ ಹೋರಾಟದಿಂದ ಹಾವೇರಿ ಜಿಲ್ಲಾ ಸಹಕಾರಿ ಒಕ್ಕೂಟ ಸ್ಥಾಪನೆಯಾಗಿದೆ. ಈ ಮೂಲಕ ರೈತರ ಆದಾಯ ದ್ವಿಗುಣಗೊಳಿಸಬೇಕು ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಶಯಕ್ಕೆ ಬಲ ಬಂದಂತಾಗಿದೆ ಎಂದು ಹೇಳಿದರು.</p>



<p style="font-size:20px">ಸರ್ಕಾರದ ಆಶಯದಂತೆ, ಹಾಲು ಉತ್ಪಾದಕರ ವರಮಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ, ಹಾಲು ಉತ್ಪಾದಕರಿಂದ ಹಾಲು ಉತ್ಪಾದಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಒಂದು ಪ್ರತ್ಯೇಕ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ ಅಂತಿಮ ಹಂತದಲ್ಲಿದೆ ಎಂದು ಬೊಮ್ಮಾಯಿ ಅವರು ತಿಳಿಸಿದರು.</p>



<p style="font-size:20px">ರೈತನ ಬದುಕಲ್ಲಿ ಹತ್ತು ಹಲವಾರು ಸಮಸ್ಯೆಗಳಿರುವುದು ನಮಗೆ ತಿಳಿದ ವಿಷಯವಾಗಿದೆ. ರೈತರಿಗೆ ಸರ್ಕಾರದ ಸವಲತ್ತುಗಳು, ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ನೆರವಾಗಿ ತಲುಪಲು ನೇರ ನಗದು ಪಾವತಿ ವ್ಯವಸ್ಥೆಯನ್ನು ಜಾರಿಗೆ ತಂದಿದ್ದೇವೆ. ಈ ಮೂಲಕ ಸೋರಿಕೆಯನ್ನು ತಡೆಗಟ್ಟುವ ಮಹತ್ತರ ಕ್ರಮವನ್ನು ರಾಜ್ಯದಲ್ಲಿ ಜಾರಿಗೆ ತಂದಿದ್ದೇವೆ ಎಂದು ಹೇಳಿದರು</p>



<p style="font-size:20px">ಮುಂದುವರೆದು ಮಾತನಾಡಿದ ಅವರು, ಹಾವೇರಿ ಹಾಗೂ ಸುತ್ತಮುತ್ತಲಿನ ಜಿಲ್ಲೆಯ ಯುವಕರಿಗೆ ಉದ್ಯೋಗವಕಾಶಗಳನ್ನು ಸೃಷ್ಟಿಸಲು ಒಂದು ಸಾವಿರ ಎಕರೆಯಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಿಸಲು ಮುಂದಾಗಿದ್ದೇವೆ. ಜಿಲ್ಲೆಯಲ್ಲಿ ಎಲ್ಲಾ ತರಹದ ಸೌಲಭ್ಯಗಳಿದ್ದು, ಜಿಲ್ಲೆಯನ್ನು ಔದ್ಯೋಗಿಕರಣಗೊಳಿಸಲು ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.</p>
]]></content:encoded>
					
		
		
			</item>
	</channel>
</rss>
