<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Indian Citizenship &#8211; Peepal Media</title>
	<atom:link href="https://peepalmedia.com/tag/indian-citizenship/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 27 Nov 2024 05:25:13 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Indian Citizenship &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ರಾಹುಲ್‌ ಗಾಂಧಿಗೆ ಯುಕೆ ಪೌರತ್ವ ಇದೆ ಎಂಬ ದೂರಿನ ಬಗ್ಗೆ ಹೇಳಿಕೆ ನೀಡಿದ ಗೃಹ ಸಚಿವಾಲಯ</title>
		<link>https://peepalmedia.com/rahul-gandhi-uk-citizenship-what-centre-says/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 27 Nov 2024 05:23:11 +0000</pubDate>
				<category><![CDATA[ದೇಶ]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[Indian Citizenship]]></category>
		<category><![CDATA[Rahul Gandhi]]></category>
		<category><![CDATA[uk]]></category>
		<guid isPermaLink="false">https://peepalmedia.com/?p=49678</guid>

					<description><![CDATA[ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ದ್ವಿಪೌರತ್ವದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರವು ಅಲಹಾಬಾದ್ ಹೈಕೋರ್ಟ್‌ಗೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆಯಾಗಿ ತಿಳಿಸಿದೆ. ರಾಹುಲ್ ಗಾಂಧಿ ಅವರು ಯುಕೆ ಪ್ರಜೆಯೂ ಆಗಿದ್ದಾರೆ ಮತ್ತು ಅದನ್ನು ಪರಿಗಣಿಸಿ ಅವರ ಭಾರತೀಯ ಪೌರತ್ವವನ್ನು ರದ್ದು ಪಡಿಸಬೇಕು ಎಂಬ ಮನವಿಯೊಂದಿಗೆ ಸಲ್ಲಿಕೆಯಾದ ಅರ್ಜಿಯ ಕುರಿತು ನ್ಯಾಯಾಲಯವು ಕೇಂದ್ರದ ಪ್ರತಿಕ್ರಿಯೆಯನ್ನು ಕೇಳಿತ್ತು. ಕರ್ನಾಟಕದ ಎಸ್ ವಿಘ್ನೇಶ್ ಶಿಶಿರ್ ಎಂಬ ಈ ಅರ್ಜಿದಾರ ರಾಹುಲ್ ಗಾಂಧಿಯವರ ಪೌರತ್ವದ ಬಗ್ಗೆ ಸಿಬಿಐ ತನಿಖೆಯನ್ನು‌ ನಡೆಸುವಂತೆ [&#8230;]]]></description>
										<content:encoded><![CDATA[
<div class="wp-block-columns is-layout-flex wp-container-core-columns-is-layout-9d6595d7 wp-block-columns-is-layout-flex">
<div class="wp-block-column is-layout-flow wp-block-column-is-layout-flow" style="flex-basis:100%">
<pre class="wp-block-code"><code><strong>ಕರ್ನಾಟಕದ ಎಸ್ ವಿಘ್ನೇಶ್ ಶಿಶಿರ್ ಎಂಬ ಅರ್ಜಿದಾರರಿಂದ ರಾಹುಲ್ ಗಾಂಧಿಯವರ ಪೌರತ್ವದ ಬಗ್ಗೆ ಸಿಬಿಐ ತನಿಖೆಗೆ ಸಹ ಕೋರಿಕೆ</strong></code></pre>
</div>
</div>



<p><strong>ಬೆಂಗಳೂರು:</strong> ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ದ್ವಿಪೌರತ್ವದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರವು ಅಲಹಾಬಾದ್ ಹೈಕೋರ್ಟ್‌ಗೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆಯಾಗಿ ತಿಳಿಸಿದೆ. ರಾಹುಲ್ ಗಾಂಧಿ ಅವರು ಯುಕೆ ಪ್ರಜೆಯೂ ಆಗಿದ್ದಾರೆ ಮತ್ತು ಅದನ್ನು ಪರಿಗಣಿಸಿ ಅವರ ಭಾರತೀಯ ಪೌರತ್ವವನ್ನು ರದ್ದು ಪಡಿಸಬೇಕು ಎಂಬ ಮನವಿಯೊಂದಿಗೆ ಸಲ್ಲಿಕೆಯಾದ ಅರ್ಜಿಯ ಕುರಿತು ನ್ಯಾಯಾಲಯವು ಕೇಂದ್ರದ ಪ್ರತಿಕ್ರಿಯೆಯನ್ನು ಕೇಳಿತ್ತು. ಕರ್ನಾಟಕದ ಎಸ್ ವಿಘ್ನೇಶ್ ಶಿಶಿರ್ ಎಂಬ ಈ ಅರ್ಜಿದಾರ ರಾಹುಲ್ ಗಾಂಧಿಯವರ ಪೌರತ್ವದ ಬಗ್ಗೆ ಸಿಬಿಐ ತನಿಖೆಯನ್ನು‌ ನಡೆಸುವಂತೆ ಕೋರಿದ್ದಾರೆ.&nbsp;</p>



<p>ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ಬಿ.ಪಾಂಡೆ ಅವರಿಗೆ ಮೂರು ವಾರಗಳಲ್ಲಿ ಈ ಸಂಬಂಧ ಗೃಹ ಸಚಿವಾಲಯದಿಂದ ಸೂಚನೆಗಳನ್ನು ಪಡೆದುಕೊಳ್ಳುವಂತೆ ಮತ್ತು ಅದರ ಪ್ರತಿಕ್ರಿಯೆಯನ್ನು ಮುಂದಿನ ದಿನಾಂಕದಂದು ಸಲ್ಲಿಸುವಂತೆ ನ್ಯಾಯಾಲಯ ಹೇಳಿದೆ.&nbsp;</p>



<p>ಕೇಂದ್ರ ಗೃಹ ಸಚಿವಾಲಯವು, &#8220;ಅರ್ಜಿದಾರರು ಮಾಡಿದ ಮನವಿಯನ್ನು ಸಚಿವಾಲಯದಲ್ಲಿ ಸ್ವೀಕರಿಸಲಾಗಿದೆ ಮತ್ತು ಅದು ಪ್ರಕ್ರಿಯೆಯಲ್ಲಿದೆ. ಈ ವಿಚಾರವನ್ನು ಡಿಸೆಂಬರ್ 19, 2024 ಕ್ಕೆ ಪಟ್ಟಿ ಮಾಡಲಾಗಿದೆ. ಇದರ ಫಲಿತಾಂಶವನ್ನು ಪಟ್ಟಿ ಮಾಡಲಾಗುವ ಮಾರನೆ ದಿನವೇ ನ್ಯಾಯಾಲಯಕ್ಕೆ ತಿಳಿಸಲಾಗುವುದು&#8221; ಎಂದು ನ್ಯಾಯಾಲಯಕ್ಕೆ ಹೇಳಿದೆ.</p>



<p>ವಿಘ್ನೇಶ್, &#8220;ಈ ವಿಷಯದ ಬಗ್ಗೆ ಸ್ಪಷ್ಟ ಮತ್ತು ಅಂತಿಮ ನಿರ್ಧಾರವನ್ನು ಡಿಸೆಂಬರ್ 19 ರೊಳಗೆ ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯವು ಆದೇಶಿಸಿದೆ. ಗೃಹ ಸಚಿವಾಲಯವು ತನ್ನ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ತಿಳಿಸಬೇಕಾಗಿದೆ,&#8221; ಎಂದು ಹೇಳಿದ್ದಾರೆ.&nbsp;</p>



<p><a href="https://www.jiosaavn.com/" target="_blank" rel="noreferrer noopener"></a>&#8220;ಸರ್ಕಾರವು ತಕ್ಷಣವೇ ರಾಹುಲ್ ಗಾಂಧಿಯವರ ಭಾರತೀಯ ಪೌರತ್ವವನ್ನು ಹಿಂಪಡೆಯುತ್ತದೆ ಎಂದು ನಾನು ನಂಬುತ್ತೇನೆ. ಅವರ ಹೆಸರು ಯುಕೆಯ ಪೌರತ್ವ ದಾಖಲೆಗಳಲ್ಲಿದೆ ಎಂಬ ಬಗ್ಗೆ ನಾವು ಯುಕೆ ಸರ್ಕಾರದಿಂದ ನೇರ ಮಾಹಿತಿಯನ್ನು ಸ್ವೀಕರಿಸಿದ್ದೇವೆ,&#8221; ಎಂದು ಅವರು ಹೇಳಿದ್ದಾರೆ.</p>



<p>&#8220;ನಾವು ಎಲ್ಲಾ ದಾಖಲೆಗಳನ್ನು ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸಿದ್ದೇವೆ&#8230;. ಭಾರತೀಯ ಕಾನೂನುಗಳ ಅಡಿಯಲ್ಲಿ ದ್ವಿಪೌರತ್ವವನ್ನು ಅನುಮತಿಸಲಾಗುವುದಿಲ್ಲ. ಯಾರಾದರೂ ಮತ್ತೊಂದು ರಾಷ್ಟ್ರದ ಪೌರತ್ವವನ್ನು ತೆಗೆದುಕೊಂಡ ನಂತರ, ಭಾರತೀಯ ಪೌರತ್ವವು ಸ್ವಯಂಚಾಲಿತವಾಗಿ ರದ್ದಾಗುತ್ತದೆ&#8221; ಎಂದು ವಿಘ್ನೇಶ್ ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ಭಾರತೀಯ ಪೌರತ್ವ ಪಡೆದ ನಟ ಅಕ್ಷಯ್ ಕುಮಾರ್</title>
		<link>https://peepalmedia.com/actor-akshay-kumar-got-indian-citizenship/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 16 Aug 2023 10:55:39 +0000</pubDate>
				<category><![CDATA[ಸಿನಿಮಾ]]></category>
		<category><![CDATA[Akshay Kumar]]></category>
		<category><![CDATA[Indian Citizenship]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=25636</guid>

					<description><![CDATA[ಇತ್ತೀಚಿನ ದಿನಗಳಲ್ಲಿ ದೇಶಭಕ್ತಿಯ ಸಿನೆಮಾಗಳ ಮೂಲಕವೇ ಗಮನ ಸೆಳೆದಿದ್ದ ಬಾಲಿವುಡ್ &#8216;ಕಿಲಾಡಿ&#8217; ಅಕ್ಷಯ್ ಕುಮಾರ್ ಪೌರತ್ವದ ವಿಚಾರದಲ್ಲೇ ಹೆಚ್ಚು ಟೀಕೆಗೆ ಗುರಿಯಾಗಿದ್ದರು. ಇವರ ಮೂಲ ಭಾರತೀಯನಾದರೂ ಕೆನಡಾ ದೇಶದ ಪೌರತ್ವದ ಕಾರಣಕ್ಕೆ ಅಕ್ಷಯ್ ಕುಮಾರ್ ವಿರೋಧಿಗಳ ಬಾಯಿಗೆ ಹೆಚ್ಚು ಆಹಾರವಾಗಿದ್ದರು. ಆದರೆ ಅಕ್ಷಯ್ ಕುಮಾರ್ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಸಂದರ್ಭಕ್ಕೆ ಭಾರತೀಯ ಪೌರತ್ವ ಪಡೆದು ಸುದ್ದಿಯಲ್ಲಿದ್ದಾರೆ. ದೇಶದ 77 ನೇ ಸ್ವಾತಂತ್ರೋತ್ಸವದ ಈ ಸಂದರ್ಭದಲ್ಲಿ ಅಕ್ಷಯ್‌ ಕುಮಾರ್‌ ಭಾರತೀಯ ಪೌರತ್ವ ದೊರೆತಿರುವ ವಿಷಯವನ್ನು ಎಲ್ಲರೊಂದಿಗೆ ಹಂಚಿಕೊಂಡು [&#8230;]]]></description>
										<content:encoded><![CDATA[
<p>ಇತ್ತೀಚಿನ ದಿನಗಳಲ್ಲಿ ದೇಶಭಕ್ತಿಯ ಸಿನೆಮಾಗಳ ಮೂಲಕವೇ ಗಮನ ಸೆಳೆದಿದ್ದ ಬಾಲಿವುಡ್ &#8216;ಕಿಲಾಡಿ&#8217; ಅಕ್ಷಯ್ ಕುಮಾರ್ ಪೌರತ್ವದ ವಿಚಾರದಲ್ಲೇ ಹೆಚ್ಚು ಟೀಕೆಗೆ ಗುರಿಯಾಗಿದ್ದರು. ಇವರ ಮೂಲ ಭಾರತೀಯನಾದರೂ ಕೆನಡಾ ದೇಶದ ಪೌರತ್ವದ ಕಾರಣಕ್ಕೆ ಅಕ್ಷಯ್ ಕುಮಾರ್ ವಿರೋಧಿಗಳ ಬಾಯಿಗೆ ಹೆಚ್ಚು ಆಹಾರವಾಗಿದ್ದರು. ಆದರೆ ಅಕ್ಷಯ್ ಕುಮಾರ್ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಸಂದರ್ಭಕ್ಕೆ ಭಾರತೀಯ ಪೌರತ್ವ ಪಡೆದು ಸುದ್ದಿಯಲ್ಲಿದ್ದಾರೆ.</p>



<p>ದೇಶದ 77 ನೇ ಸ್ವಾತಂತ್ರೋತ್ಸವದ ಈ ಸಂದರ್ಭದಲ್ಲಿ ಅಕ್ಷಯ್‌ ಕುಮಾರ್‌ ಭಾರತೀಯ ಪೌರತ್ವ ದೊರೆತಿರುವ ವಿಷಯವನ್ನು ಎಲ್ಲರೊಂದಿಗೆ ಹಂಚಿಕೊಂಡು ಜೊತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯವನ್ನು ತಿಳಿಸಿದ್ದಾರೆ.</p>



<p>ತೊಂಬತ್ತರ ದಶಕದಲ್ಲಿ ಸತತವಾಗಿ ಫ್ಲಾಪ್ ಸಿನಿಮಾಗಳನ್ನು ನೀಡಿ ಸೋಲಿನ ಸುಳಿಗೆ ಸಿಕ್ಕ ಕಾರಣಕ್ಕೆ ಅಕ್ಷಯ್‌ ಕುಮಾರ್‌ ಅನಿವಾರ್ಯವಾಗಿ ಕೆನಡಾದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬೇಕಾಯಿತು ಎಂದು ಹೇಳಿಕೊಂಡಿದ್ದರು. ಆ ನಂತರದ ದಿನಗಳಲ್ಲಿ ಈ ನಿರ್ಧಾರ ನನ್ನ ಜೀವನದಲ್ಲಿ ತೆಗೆದುಕೊಂಡ ಅತ್ಯಂತ ದೊಡ್ಡ ಮತ್ತು ಕಠಿಣ ನಿರ್ಧಾರ ಎಂದೂ ಕೂಡಾ ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದರು.<br></p>



<p>ಇನ್ನು ನರೇಂದ್ರ ಮೋದಿ ಪ್ರಧಾನಿಯಾದ ನಂತರ ಅಕ್ಷಯ್ ಕುಮಾರ್ ಬಿಜೆಪಿ ಪಾಳಯಕ್ಕೆ ಹೆಚ್ಚು ಆಪ್ತರಾಗಿದ್ದರು. ಕಳೆದ 20 ವರ್ಷಗಳಿಂದ ಭಾರತದಲ್ಲಿ ಯಾವೊಂದು ಪತ್ರಿಕಾಗೋಷ್ಠಿಯೂ ನಡೆಸದ ನರೇಂದ್ರ ಮೋದಿ ಅಕ್ಷಯ್ ಕುಮಾರ್ ಜೊತೆಗೆ ನಡೆಸಿದ ಸಂದರ್ಶನದ ಕಾರ್ಯಕ್ರಮದಲ್ಲಿ ಭಾಗಿಯಾದದ್ದೂ ಹೆಚ್ಚು ಚರ್ಚೆ ಮತ್ತು ಟೀಕೆಗೆ ಗುರಿಯಾಗಿದ್ದರು. ಆಗಲೂ ಸಹ ಪೌರತ್ವದ ವಿಚಾರವಾಗಿಯೇ ಅಕ್ಷಯ್‌ ಕುಮಾರ್‌ ಹೆಚ್ಚು ಟೀಕೆಗೆ ಒಳಗಾದರು.</p>



<p>ಸಧ್ಯ ಈ ವರ್ಷದ ಆರಂಭದಲ್ಲೇ ಭಾರತೀಯ ಪೌರತ್ವ ಪಡೆಯುವ ಬಗ್ಗೆ ಸುಳಿವು ನೀಡಿದ್ದ ಅಕ್ಷಯ್ ಕುಮಾರ್, ಸಂದರ್ಶನವೊಂದರಲ್ಲಿ ಭಾರತವೆಂದರೇ ನನಗೆ ಸರ್ವಸ್ವ.. ಅದಕ್ಕೆ ನಾನು ಇಲ್ಲಿನ ಪೌರತ್ವ ಪಡೆಯಲು ಈಗಾಗಲೇ ಪಾಸ್‌ಪೋರ್ಟ್‌ ಬದಲಾವಣೆಗೆ ಅರ್ಜಿಯನ್ನು ಸಲ್ಲಸಿದ್ದೇನೆ ಎಂದು ಹೇಳಿದ್ದರು. ಸಧ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಕ್ಷಯ್ ಕುಮಾರ್ ಭಾರತೀಯ ಪೌರತ್ವ ಸಿಕ್ಕ ಖುಷಿಯನ್ನು ಹಂಚಿಕೊಂಡು, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯವನ್ನು ತಿಳಿಸಿದ್ದಾರೆ.</p>
]]></content:encoded>
					
		
		
			</item>
	</channel>
</rss>
