<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Intellectual &#8211; Peepal Media</title>
	<atom:link href="https://peepalmedia.com/tag/intellectual/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 30 May 2023 05:44:11 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Intellectual &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ರಾಜ್ಯದ ಸಾಹಿತಿಗಳು ಸಿದ್ದರಾಮಯ್ಯ ಅವರಿಗೆ ಹೇಳಿದ್ದೇನು?</title>
		<link>https://peepalmedia.com/thinkers-appeal-to-siddaramaiah-for-various-demands-what-are-the-demands/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 30 May 2023 04:13:04 +0000</pubDate>
				<category><![CDATA[ರಾಜ್ಯ]]></category>
		<category><![CDATA[Intellectual]]></category>
		<category><![CDATA[kannada]]></category>
		<category><![CDATA[Kannada textbook]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=22021</guid>

					<description><![CDATA[ವಿವಿಧ ಬೇಡಿಕೆಗಳ ಅಡಿಯಲ್ಲಿ ಸೋಮವಾರದ ವಿಚಾರವಾದಿಗಳು, ಸಾಹಿತಿಗಳು ಹಾಗೂ ಪ್ರಮುಖ ಜನಪರ ಸಂಘಟನೆಗಳ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ವಿಚಾರವಾದಿಗಳು ಸಾಕಷ್ಟು ನಿರೀಕ್ಷೆಗಳನ್ನು ಈ ಸರ್ಕಾರದ ಮೇಲೆ ಇಟ್ಟಿದ್ದು, ಅವರು ತುರ್ತುಗತಿಯಲ್ಲಿ ತೋರಿಸಲು ಮನವಿ ಮಾಡಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದಂತಹ ಪ್ರಮುಖ ಜನವಿರೋಧಿ ನಿಲುವುಗಳನ್ನು ತಗೆದು ಹಾಕಿ, ಜನಪರವಾದ, ವೈಚಾರಿಕ ಹಿನ್ನೆಲೆಯ ನಡೆಯಲ್ಲಿ ಸರ್ಕಾರ ಮುನ್ನಡೆಯಬೇಕು ಎಂಬುದಾಗಿ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ. ವಿಶೇಷವಾಗಿ ಬಿಜೆಪಿ ಸರ್ಕಾರದ [&#8230;]]]></description>
										<content:encoded><![CDATA[
<p><font style="vertical-align: inherit;"><font style="vertical-align: inherit;">ವಿವಿಧ ಬೇಡಿಕೆಗಳ ಅಡಿಯಲ್ಲಿ ಸೋಮವಾರದ ವಿಚಾರವಾದಿಗಳು, ಸಾಹಿತಿಗಳು ಹಾಗೂ ಪ್ರಮುಖ ಜನಪರ ಸಂಘಟನೆಗಳ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. </font><font style="vertical-align: inherit;">ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ವಿಚಾರವಾದಿಗಳು ಸಾಕಷ್ಟು ನಿರೀಕ್ಷೆಗಳನ್ನು ಈ ಸರ್ಕಾರದ ಮೇಲೆ ಇಟ್ಟಿದ್ದು, ಅವರು ತುರ್ತುಗತಿಯಲ್ಲಿ ತೋರಿಸಲು ಮನವಿ ಮಾಡಿದರು.</font></font></p>



<p>ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದಂತಹ ಪ್ರಮುಖ ಜನವಿರೋಧಿ ನಿಲುವುಗಳನ್ನು ತಗೆದು ಹಾಕಿ, ಜನಪರವಾದ, ವೈಚಾರಿಕ ಹಿನ್ನೆಲೆಯ ನಡೆಯಲ್ಲಿ ಸರ್ಕಾರ ಮುನ್ನಡೆಯಬೇಕು ಎಂಬುದಾಗಿ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ. ವಿಶೇಷವಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ತಂದಂತಹ ಅಪಾಯಕಾರಿ ಯೋಜನೆಗಳು, ಬದಲಾವಣೆಗಳನ್ನು ಈ ಶೈಕ್ಷಣಿಕ ವರ್ಷದಲ್ಲೇ ಬದಲಾವಣೆ ತರಬೇಕು. ಇದು ಬೆಳೆಯುವ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಆಗಿರುವ ದೊಡ್ಡ ಅನ್ಯಾಯ ಎಂಬುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>



<p><strong>ಮುಖ್ಯಮಂತ್ರಿಗಳನ್ನು ಭೇಟಿಯಾದ ಚಿಂತಕರು ವ್ಯಕ್ತಪಡಿಸಿದ ಅಭಿಪ್ರಾಯ ಈ ಕೆಳಗಿನಂತಿದೆ.</strong><br>* ಹಿಂದಿನ ಸರ್ಕಾರ ಕೋಮುವಾದವನ್ನು ನಿರ್ಲಜ್ಜ ರೀತಿಯಲ್ಲಿ ಜಾರಿಗೆ ತರಲು ಮುಂದಾಗಿದ್ದು ನಿಜಕ್ಕೂ ಭಯ ಹುಟ್ಟಿಸುವಂತಿತ್ತು. ಆದರೆ ಇವರ ಪ್ರೊಪಗಾಂಡಾ ಅಜೆಂಡಾದಿಂದ ರೋಸಿ ಹೋದ ಜನರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದರು.<br>* ಈ ನಿಟ್ಟಿನಲ್ಲಿ ಸಂವಿಧಾನ ವಿರೋಧಿ, ಕೋಮುವಾದಿ ಪಠ್ಯಪುಸ್ತಕಕ್ಕೆ ಕೂಡಲೇ ತಿದ್ದುಪಡಿ ಮಾಡಿ, ಮಕ್ಕಳ ಮನಸಿನ ಮೇಲೆ ಬೀರುವ ದುಷ್ಪರಿಣಾಮವನ್ನು ತಡೆಯಬೇಕು. ಮುಂದಿನ ವರ್ಷದ ವೇಳೆಗೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಬೇಕು.<br>* ಶಿಕ್ಷಣ ಇಲಾಖೆಯ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಬೇಕು.<br>* ಪ್ರೌಢಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ ವಿತರಣೆಯನ್ನು ಮುಂದುವರೆಸಬೇಕು. ಬೈಸಿಕಲ್‌ ವಿತರಣೆ ಯೋಜನೆಯನ್ನು ಮುಂದುವರೆಸಬೇಕು.<br>* ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಯಂತ್ರಣ ಪ್ರಾಧಿಕಾರ ರಚನೆ ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ DERA ವನ್ನು ಸಕ್ರಿಯಗೊಳಿಸಬೇಕು.<br>* ರದ್ದಾಗಿರುವ ವಿದ್ಯಾರ್ಥಿವೇತನ ಯೋಜನೆ ಮರುಜಾರಿಯಾಗಬೇಕು.<br>* UUCMS ವ್ಯವಸ್ಥೆಯ ಮರುಪರಿಶೀಲನೆ ಮಾಡಬೇಕು.<br>* ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಬೇಕು. ಸಮ ಸಮಾಜಕ್ಕಾಗಿ ಸಮಾನ ಶಿಕ್ಷಣ ಆಶಯವನ್ನು ಸಾಕಾರಗೊಳಿಸಬೇಕು.<br>* ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ NEET ವ್ಯವಸ್ಥೆಯಿಂದ ಹೊರ ಬರುವ ಅಗತ್ಯವಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿ ಅನುಷ್ಠಾನ ಸಮರ್ಪಕವಾಗಿ ಆಗಬೇಕು.<br>* ವಿವಿಧ ಸಾಂಸ್ಕೃತಿಕ ಪ್ರತಿಷ್ಠಾನಗಳಲ್ಲಿ ಹೊಸ ಪ್ರತಿಭಾವಂತರಿಗೆ ಅವಕಾಶ ನೀಡಬೇಕು.<br>* ಗ್ರಂಥಾಲಯ ಇಲಾಖೆಯಲ್ಲಿ ಕಳೆದ ಮೂರು ವರ್ಷಗಳಿಂದ ಪುಸ್ತಕ ಖರೀದಿ ಆಗಿಲ್ಲ. ಪುಸ್ತಕ ಖರೀದಿಗೆ ಅವಕಾಶ ಕಲ್ಪಿಸಬೇಕು.<br>* ಹೆಣ್ಣುಮಕ್ಕಳ ದೌರ್ಜನ್ಯ ಅಧ್ಯಯನ ಸಮಿತಿಯ ವರದಿಯ ಶಿಫಾರಸುಗಳ ಜಾರಿಗೆ ಕ್ರಮ ಕೈಗೊಳ್ಳಬೇಕು.<br>* ಕನ್ನಡ ಸಾಹಿತ್ಯ ಪರಿಷತ್ತಿನ ಸ್ವಾಯತ್ತತೆ ರಕ್ಷಣೆ ಮಾಡಲು ಮಸೂದೆ ಮಂಡಿಸಬೇಕು.<br>* ಹಿಜಾಬ್‌ ವಿವಾದದಿಂದಾಗಿ ಸಾವಿರಾರು ಹೆಣ್ಣುಮಕ್ಕಳು ಶಿಕ್ಷಣ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಮವಸ್ತ್ರ ಕುರಿತ ಸರ್ಕಾರಿ ಆದೇಶವನ್ನು ಪರಿಷ್ಕರಿಸಬೇಕು.<br>* ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವ ಕುರಿತ ಸರ್ಕಾರಿ ಆದೇಶವನ್ನು ಹಿಂಪಡೆಯಬೇಕು.<br>* ಎಸ್‌.ಸಿ.ಎಸ್‌.ಪಿ/ ಟಿ.ಎಸ್.ಪಿ. ಮೇಲ್ವಿಚಾರಣಾ ಸಮಿತಿ ಪ್ರತಿ ತಿಂಗಳೂ ಈ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಸಮರ್ಪಕ ಅನುಷ್ಠಾನ ಖಾತರಿಪಡಿಸಬೇಕು.</p>



<ul class="wp-block-list">
<li>* ಹಲವಾರು ಸಾಹಿತಿ, ಚಿಂತಕರಿಗೆ ನಿರಂತರವಾಗಿ ಬೆದರಿಕೆ ಪತ್ರಗಳು ಬರುತ್ತಿದ್ದು, ಭಯದ ವಾತಾವರಣ ನಿರ್ಮಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.</li>
</ul>



<ul class="wp-block-list">
<li>* ವಿಶ್ವವಿದ್ಯಾಲಯಗಳ  ಸಿಂಡಿಕೇಟ್‌ ಹಾಗೂ ಅಕಾಡೆಮಿಕ್‌ ಕೌನ್ಸಿಲ್‌ ಗಳಲ್ಲಿ ನಿರ್ದಿಷ್ಟ ಸಮುದಾಯದ ಜನರೇ ನೇಮಕಗೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು.</li>
</ul>



<ul class="wp-block-list">
<li>* ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಲ್ಲಿ ವಿದ್ಯಾರ್ಥಿಗಳ ಪಠ್ಯಕ್ರಮಕ್ಕೆ ಪೂರಕವಾದ ಪುಸ್ತಕಗಳನ್ನಷ್ಟೇ ಖರೀದಿಸಲು ಕ್ರಮ ವಹಿಸಬೇಕು. ಕೆಲವೆಡೆ ಅಪ್ರಸ್ತುತ ಪುಸ್ತಕಗಳನ್ನು ಖರೀದಿಸಲಾಗುತ್ತಿದೆ.</li>
</ul>



<p>* ಗ್ರಾಮೀಣ ಪ್ರದೇಶದ ಸಮುದಾಯ ಭವನಗಳಲ್ಲಿ ಸಂವಿಧಾನದ ಬಗ್ಗೆ, ಸಾಮರಸ್ಯದ ಬಗ್ಗೆ ಅರಿವು ಮೂಡಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು.</p>
]]></content:encoded>
					
		
		
			</item>
	</channel>
</rss>
