<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>internal reservation &#8211; Peepal Media</title>
	<atom:link href="https://peepalmedia.com/tag/internal-reservation/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 15 Apr 2025 06:27:56 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>internal reservation &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಒಳಮೀಸಲಾತಿ ಜಾರಿಗೊಳಿಸಿದ ಮೊದಲ ರಾಜ್ಯವಾದ ತೆಲಂಗಾಣ</title>
		<link>https://peepalmedia.com/telangana-becomes-the-first-state-to-implement-internal-reservation/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 15 Apr 2025 06:26:20 +0000</pubDate>
				<category><![CDATA[ದೇಶ]]></category>
		<category><![CDATA[internal reservation]]></category>
		<category><![CDATA[revanth reddy]]></category>
		<category><![CDATA[SC ST]]></category>
		<category><![CDATA[sub-categorisation of Scheduled Castes groups]]></category>
		<category><![CDATA[telangana]]></category>
		<category><![CDATA[Telangana government]]></category>
		<guid isPermaLink="false">https://peepalmedia.com/?p=57241</guid>

					<description><![CDATA[ತೆಲಂಗಾಣ ಸರ್ಕಾರ ಸೋಮವಾರ&#160;ರಾಜ್ಯ ಪರಿಶಿಷ್ಟ ಜಾತಿಗಳ ಮೀಸಲಾತಿ ತರ್ಕಬದ್ಧಗೊಳಿಸುವ 2025 ರ ಕಾಯ್ದೆಯನ್ನು&#160;ಅಧಿಸೂಚನೆ ಹೊರಡಿಸಿದೆ. ಈ ಮೂಲಕ ಪರಿಶಿಷ್ಟ ಜಾತಿ ಗುಂಪುಗಳ ಉಪ-ವರ್ಗೀಕರಣವನ್ನು ಜಾರಿಗೆ ತಂದ&#160;ಮೊದಲ ರಾಜ್ಯವಾಗಿದೆ. ಆಗಸ್ಟ್ 1 ರಂದು,&#160;ಸುಪ್ರೀಂ ಕೋರ್ಟ್&#160;ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಮೀಸಲಾತಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕೋಟಾಗಳ ಉಪ-ವರ್ಗೀಕರಣಕ್ಕೆ ಅನುಮತಿ ನೀಡಿತ್ತು. ಅದೇ ದಿನ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು&#160;ರಾಜ್ಯದ ಕಾಂಗ್ರೆಸ್ ಸರ್ಕಾರವು ಅಂತಹ ಉಪ-ವರ್ಗೀಕರಣದ ಕುರಿತು ಶಾಸನವನ್ನು ಜಾರಿಗೆ ತರುವುದಾಗಿ&#160;ಘೋಷಿಸಿದ್ದರು&#160;ಎಂದು ದಿ ನ್ಯೂ ಇಂಡಿಯನ್ [&#8230;]]]></description>
										<content:encoded><![CDATA[
<p>ತೆಲಂಗಾಣ ಸರ್ಕಾರ ಸೋಮವಾರ&nbsp;ರಾಜ್ಯ ಪರಿಶಿಷ್ಟ ಜಾತಿಗಳ ಮೀಸಲಾತಿ ತರ್ಕಬದ್ಧಗೊಳಿಸುವ 2025 ರ ಕಾಯ್ದೆಯನ್ನು&nbsp;<a href="https://x.com/TelanganaCMO/status/1911696213336097222" target="_blank" rel="noreferrer noopener">ಅಧಿಸೂಚನೆ ಹೊರಡಿಸಿದೆ</a>. ಈ ಮೂಲಕ ಪರಿಶಿಷ್ಟ ಜಾತಿ ಗುಂಪುಗಳ ಉಪ-ವರ್ಗೀಕರಣವನ್ನು ಜಾರಿಗೆ ತಂದ&nbsp;<a href="https://www.thehindu.com/news/national/telangana/telangana-becomes-first-state-to-notify-scheduled-castes-categorisation/article69448715.ece" target="_blank" rel="noreferrer noopener">ಮೊದಲ ರಾಜ್ಯವಾಗಿದೆ.</a></p>



<p>ಆಗಸ್ಟ್ 1 ರಂದು,&nbsp;ಸುಪ್ರೀಂ ಕೋರ್ಟ್&nbsp;ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಮೀಸಲಾತಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕೋಟಾಗಳ ಉಪ-ವರ್ಗೀಕರಣಕ್ಕೆ ಅನುಮತಿ ನೀಡಿತ್ತು.</p>



<p>ಅದೇ ದಿನ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು&nbsp;ರಾಜ್ಯದ ಕಾಂಗ್ರೆಸ್ ಸರ್ಕಾರವು ಅಂತಹ ಉಪ-ವರ್ಗೀಕರಣದ ಕುರಿತು ಶಾಸನವನ್ನು ಜಾರಿಗೆ ತರುವುದಾಗಿ&nbsp;<a href="https://www.newindianexpress.com/states/telangana/2025/Apr/14/telangana-becomes-first-state-to-implement-sc-categorisation-issues-orders" target="_blank" rel="noreferrer noopener">ಘೋಷಿಸಿದ್ದರು</a><em>&nbsp;ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್</em>&nbsp;ವರದಿ ಮಾಡಿದೆ.</p>



<figure class="wp-block-image size-large"><img fetchpriority="high" decoding="async" width="1024" height="538" src="https://peepalmedia.com/wp-content/uploads/2025/04/206783-vyvbridjpe-1744633476-1024x538.jpg" alt="" class="wp-image-57243" srcset="https://peepalmedia.com/wp-content/uploads/2025/04/206783-vyvbridjpe-1744633476-1024x538.jpg 1024w, https://peepalmedia.com/wp-content/uploads/2025/04/206783-vyvbridjpe-1744633476-300x158.jpg 300w, https://peepalmedia.com/wp-content/uploads/2025/04/206783-vyvbridjpe-1744633476-768x403.jpg 768w, https://peepalmedia.com/wp-content/uploads/2025/04/206783-vyvbridjpe-1744633476-150x79.jpg 150w, https://peepalmedia.com/wp-content/uploads/2025/04/206783-vyvbridjpe-1744633476-696x365.jpg 696w, https://peepalmedia.com/wp-content/uploads/2025/04/206783-vyvbridjpe-1744633476-1068x561.jpg 1068w, https://peepalmedia.com/wp-content/uploads/2025/04/206783-vyvbridjpe-1744633476.jpg 1200w" sizes="(max-width: 1024px) 100vw, 1024px" /><figcaption class="wp-element-caption">ಸಂಪುಟ ಉಪಸಮಿತಿಯು ಗೆಜೆಟ್ ಅಧಿಸೂಚನೆಯ ಮೊದಲ ಪ್ರತಿಯನ್ನು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಹಸ್ತಾಂತರಿಸಿತು. |&nbsp;<br><a href="https://x.com/revanth_anumula/status/1911699879304593579/photo/1" target="_blank" rel="noreferrer noopener">ರೇವಂತ್ ರೆಡ್ಡಿ,@revanth_anumula/X</a></figcaption></figure>



<p>ನಂತರ, ಒಂದು ಸಂಪುಟ ಉಪಸಮಿತಿಯನ್ನು ರಚಿಸಲಾಯಿತು, ಇದು ಪರಿಶಿಷ್ಟ ಜಾತಿಗಳ ವರ್ಗೀಕರಣವನ್ನು ಪರಿಶೀಲಿಸಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಶಮೀಮ್ ಅಖ್ತರ್ ನೇತೃತ್ವದಲ್ಲಿ ಏಕವ್ಯಕ್ತಿ ಆಯೋಗವನ್ನು ರಚಿಸಲು ಶಿಫಾರಸು ಮಾಡಿತು.</p>



<p>ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣಕ್ಕೆ ನಿಗದಿಪಡಿಸಿದ 15% ಮೀಸಲಾತಿಯೊಳಗೆ ರಾಜ್ಯದ 59 ಪರಿಶಿಷ್ಟ ಜಾತಿ ಸಮುದಾಯಗಳನ್ನು ಮೂರು ಗುಂಪುಗಳಾಗಿ ವಿಂಗಡಿಸಲು ಆಯೋಗವು ಶಿಫಾರಸು ಮಾಡಿತು.</p>



<p>ಇದರ ನಂತರ, ಇತ್ತೀಚೆಗೆ ಮುಕ್ತಾಯಗೊಂಡ ರಾಜ್ಯದಲ್ಲಿ ಬಜೆಟ್ ಅಧಿವೇಶನದಲ್ಲಿ ತೆಲಂಗಾಣ ಪರಿಶಿಷ್ಟ ಜಾತಿಗಳ ಮೀಸಲಾತಿ ತರ್ಕಬದ್ಧಗೊಳಿಸುವಿಕೆ ಕಾಯ್ದೆಯನ್ನು ಪರಿಚಯಿಸಲಾಯಿತು ಮತ್ತು ಮಾರ್ಚ್ 17 ರಂದು ಅಂಗೀಕರಿಸಲಾಯಿತು.</p>



<p>ಈ ಶಾಸನವು ಏಪ್ರಿಲ್ 8 ರಂದು ರಾಜ್ಯಪಾಲರ ಒಪ್ಪಿಗೆಯನ್ನು ಪಡೆಯಿತು.</p>



<p>ಸೋಮವಾರ ಅಧಿಸೂಚನೆಗೊಂಡ ಹೊಸ ಕಾನೂನು, ಜನಸಂಖ್ಯೆಯ ಗಾತ್ರ ಮತ್ತು ಸಾಮಾಜಿಕ-ಆರ್ಥಿಕ ಅಂಶಗಳ ಆಧಾರದ ಮೇಲೆ 15% ಮೀಸಲಾತಿಯನ್ನು ಮೂರು ವರ್ಗಗಳಾಗಿ ವಿಂಗಡಿಸುವ ಮೂಲಕ ಸಮಿತಿಯ ಶಿಫಾರಸನ್ನು ಜಾರಿಗೆ ತಂದಿದೆ.</p>



<p>ಪರಿಶಿಷ್ಟ ಜಾತಿಯೊಳಗಿನ ಹದಿನೈದು ಉಪಜಾತಿಗಳನ್ನು ಅತ್ಯಂತ ಹಿಂದುಳಿದವರು ಎಂದು&nbsp;<a href="https://www.thehindu.com/news/national/telangana/telangana-becomes-first-state-to-notify-scheduled-castes-categorisation/article69448715.ece" rel="noreferrer noopener" target="_blank">ವರ್ಗೀಕರಿಸಲಾಗಿದ್ದು</a>&nbsp;, ಅವುಗಳನ್ನು 1% ಮೀಸಲಾತಿಯೊಂದಿಗೆ ಗುಂಪು 1 ಎಂದು ವರ್ಗೀಕರಿಸಲಾಗಿದೆ ಎಂದು&nbsp;<em>ದಿ ಹಿಂದೂ</em>&nbsp;ವರದಿ ಮಾಡಿದೆ.</p>



<p>ಇದರ ಜೊತೆಗೆ, 18 ಉಪಜಾತಿಗಳನ್ನು 9% ಮೀಸಲಾತಿಯೊಂದಿಗೆ ಗುಂಪು 2 ರಲ್ಲಿ ಇರಿಸಲಾಗಿದೆ, ಆದರೆ 5% ಮೀಸಲಾತಿಯೊಂದಿಗೆ ಗುಂಪು 3 ರಲ್ಲಿ 26 ಉಪಜಾತಿಗಳನ್ನು ಅವಕಾಶಗಳ ವಿಷಯದಲ್ಲಿ ಉತ್ತಮ ಸ್ಥಾನದಲ್ಲಿ ಇರಿಸಲಾಗಿದೆ.</p>



<p>ಸೋಮವಾರ, ಸಂಪುಟ ಉಪಸಮಿತಿಯು ಗೆಜೆಟ್ ಅಧಿಸೂಚನೆಯ ಮೊದಲ ಪ್ರತಿಯನ್ನು ರೆಡ್ಡಿ ಅವರಿಗೆ ಹಸ್ತಾಂತರಿಸಿತು.</p>



<p>ಮುಖ್ಯಮಂತ್ರಿಗಳು ಕಾನೂನಿನ ಅಧಿಸೂಚನೆಯನ್ನು &#8220;<a href="https://x.com/revanth_anumula/status/1911727697748746725" target="_blank" rel="noreferrer noopener">ಕ್ರಾಂತಿಕಾರಿ ನಿರ್ಧಾರ</a>&#8221; ಎಂದು ಕರೆದರು.</p>



<p>&#8220;ದಲಿತರ ಎಲ್ಲಾ ವರ್ಗಗಳಿಗೆ ಅವಕಾಶಗಳನ್ನು ಸಬಲೀಕರಣಗೊಳಿಸುವ ಮತ್ತು ಖಾತರಿಪಡಿಸುವ ಮೂಲಕ, ರಾಜ್ಯ ಸರ್ಕಾರವು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿತು, ಅದರ ಮೊದಲ ಪ್ರತಿಯನ್ನು ಐತಿಹಾಸಿಕ ಕೆಲಸವನ್ನು ಕೈಗೊಂಡ ಸಮಿತಿಯು ಇಂದು ನನಗೆ ಹಸ್ತಾಂತರಿಸಿತು&#8221; ಎಂದು ರೆಡ್ಡಿ X ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.</p>



<p>ಫೆಬ್ರವರಿಯಲ್ಲಿ,&nbsp;ರಾಜ್ಯದಲ್ಲಿ ಕೈಗೊಂಡ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಮತ್ತು ಜಾತಿ&nbsp;ಸಮೀಕ್ಷೆಯ&nbsp;ವರದಿಯು ತೆಲಂಗಾಣದಲ್ಲಿ ಹಿಂದುಳಿದ ವರ್ಗಗಳು ಜನಸಂಖ್ಯೆಯ&nbsp;<a href="https://indianexpress.com/article/india/telangana-caste-survey-backward-classes-more-than-half-of-population-9813759/" target="_blank" rel="noreferrer noopener">ಶೇ. 56.33 ರಷ್ಟಿವೆ ಎಂದು ಬಹಿರಂಗಪಡಿಸಿದೆ.</a></p>



<p>ವರದಿಯ ಪ್ರಕಾರ, ತೆಲಂಗಾಣದಲ್ಲಿ ಸಂಪೂರ್ಣ ಸಂಖ್ಯೆಯಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ 1,99,85,767.</p>



<p><a href="https://www.thenewsminute.com/telangana/telangana-caste-survey-bcs-comprise-56-of-the-states-population" target="_blank" rel="noreferrer noopener">ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ನಡೆಸಿದ ಮನೆ- ಮನೆ ಸಮೀಕ್ಷೆಯ</a>&nbsp;ಪ್ರಕಾರ&nbsp;, ಪರಿಶಿಷ್ಟ ಜಾತಿಗಳು ಜನಸಂಖ್ಯೆಯ 17.43% ಅಥವಾ 61,84,319 ರಷ್ಟಿದ್ದರೆ, ಪರಿಶಿಷ್ಟ ಪಂಗಡಗಳು 10.45% ಅಥವಾ 37,05,929 ರಷ್ಟಿದ್ದಾರೆ. ಇತರ ಜಾತಿಗಳು ಜನಸಂಖ್ಯೆಯ 15.79% ರಷ್ಟಿವೆ.</p>



<p>ಜನಸಂಖ್ಯೆಯಲ್ಲಿ ಮುಸ್ಲಿಮರು ಸುಮಾರು 12.56% ಅಥವಾ 44,57,012 ರಷ್ಟಿದ್ದಾರೆ. ಇದರಲ್ಲಿ ಹಿಂದುಳಿದ ವರ್ಗಗಳ ಮುಸ್ಲಿಮರು 10.08% ಅಥವಾ 35,76,588 ರಷ್ಟಿದ್ದಾರೆ ಮತ್ತು ಇತರ ವರ್ಗಗಳ ಮುಸ್ಲಿಮರು 2.48% ಅಥವಾ 8,80,424 ರಷ್ಟಿದ್ದಾರೆ.</p>



<p>2023 ರ ವಿಧಾನಸಭಾ ಚುನಾವಣೆಗೆ ಮುನ್ನ ತೆಲಂಗಾಣದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಜಾತಿ ಸಮೀಕ್ಷೆಯೂ ಒಂದಾಗಿತ್ತು. ಭಾರತ ರಾಷ್ಟ್ರ ಸಮಿತಿಯನ್ನು ಸೋಲಿಸುವ ಮೂಲಕ ಪಕ್ಷವು ಚುನಾವಣೆಯಲ್ಲಿ ಗೆದ್ದಿತು.</p>



<p>ವರದಿಯ ಬಿಡುಗಡೆಯೊಂದಿಗೆ,&nbsp;ಬಿಹಾರ ಮತ್ತು ಆಂಧ್ರಪ್ರದೇಶದ ನಂತರ ಇಂತಹ ಸಮೀಕ್ಷೆಯನ್ನು ನಡೆಸಿದ&nbsp;ಮೂರನೇ ರಾಜ್ಯ ತೆಲಂಗಾಣವಾಯಿತು.</p>



<p>ಕಾಂಗ್ರೆಸ್ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ದೇಶಾದ್ಯಂತ ಜಾತಿ ಜನಗಣತಿ ನಡೆಸುವಂತೆ ಕೇಂದ್ರವನ್ನು ಒತ್ತಾಯಿಸಿವೆ. ಈ ಕಾರ್ಯವು ಸಾಮಾಜಿಕ ಸೌಲಭ್ಯಗಳು ಮತ್ತು ಕಲ್ಯಾಣ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವುದನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.</p>



<p></p>
]]></content:encoded>
					
		
		
			</item>
		<item>
		<title>ಒಳಮೀಸಲಾತಿ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಹೆಚ್.ಸಿ. ಮಹದೇವಪ್ಪ ಅವರನ್ನು ಒತ್ತಾಯಿಸಿದ ಹೋರಾಟಗಾರರು</title>
		<link>https://peepalmedia.com/activists-urged-h-c-mahadevappa-to-discuss-internal-reservation-in-the-session/</link>
		
		<dc:creator><![CDATA[Peepal Media]]></dc:creator>
		<pubDate>Thu, 06 Mar 2025 08:49:04 +0000</pubDate>
				<category><![CDATA[ರಾಜ್ಯ]]></category>
		<category><![CDATA[congrees]]></category>
		<category><![CDATA[dalit activists]]></category>
		<category><![CDATA[HC Mahadevappa]]></category>
		<category><![CDATA[internal reservation]]></category>
		<category><![CDATA[karnartaka]]></category>
		<category><![CDATA[reservation]]></category>
		<guid isPermaLink="false">https://peepalmedia.com/?p=54871</guid>

					<description><![CDATA[ಒಳಮೀಸಲಾತಿ ಕುರಿತಂತೆ ಹೋರಾಟಗಾರರು ಸಮಾಜ ಕಲ್ಯಾಣ ಇಲಾಖೆಯ ಮಂತ್ರಿಗಳಾದ ಡಾ. ಹೆಚ್. ಸಿ ಮಹದೇವಪ್ಪರನ್ನು ಭೇಟಿ‌ ಮಾಡಿ ಒಳಮೀಸಲಾತಿ ಕುರಿತು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚಿಸಲು ಒತ್ತಾಯಿಸಿದರು.&#160; ಆಗಸ್ಟ್ 1 ರಂದು ಮಾನ್ಯ ಸುಪ್ರೀಂ ಕೋರ್ಟ್ ಒಳಮೀಸಲಾತಿ ಪರವಾದ ತೀರ್ಪು ನೀಡಿ, ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿತ್ತು.&#160; ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿ‌ಮಾಡುವಂತೆ ಕರ್ನಾಟಕ ಸರ್ಕಾರವನ್ನು ಒಳಮೀಸಲಾತಿ ಹೋರಾಟಗಾರರು ನಿರಂತರವಾಗಿ ಒತ್ತಾಯಿಸಿದ ಹಿನ್ನೆಲೆಯಲ್ಲಿ ಮಾನ್ಯ ನಿವೃತ್ತ ನ್ಯಾಯಾಧೀಶರಾದ ನಾಗಮೋಹನ್ ದಾಸ್ ರವರ ಏಕ‌ ಸದಸ್ಯ ಆಯೋಗವನ್ನು [&#8230;]]]></description>
										<content:encoded><![CDATA[
<p>ಒಳಮೀಸಲಾತಿ ಕುರಿತಂತೆ ಹೋರಾಟಗಾರರು ಸಮಾಜ ಕಲ್ಯಾಣ ಇಲಾಖೆಯ ಮಂತ್ರಿಗಳಾದ ಡಾ. ಹೆಚ್. ಸಿ ಮಹದೇವಪ್ಪರನ್ನು ಭೇಟಿ‌ ಮಾಡಿ ಒಳಮೀಸಲಾತಿ ಕುರಿತು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚಿಸಲು ಒತ್ತಾಯಿಸಿದರು.&nbsp;</p>



<p>ಆಗಸ್ಟ್ 1 ರಂದು ಮಾನ್ಯ ಸುಪ್ರೀಂ ಕೋರ್ಟ್ ಒಳಮೀಸಲಾತಿ ಪರವಾದ ತೀರ್ಪು ನೀಡಿ, ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿತ್ತು.&nbsp;</p>



<p>ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿ‌ಮಾಡುವಂತೆ ಕರ್ನಾಟಕ ಸರ್ಕಾರವನ್ನು ಒಳಮೀಸಲಾತಿ ಹೋರಾಟಗಾರರು ನಿರಂತರವಾಗಿ ಒತ್ತಾಯಿಸಿದ ಹಿನ್ನೆಲೆಯಲ್ಲಿ ಮಾನ್ಯ ನಿವೃತ್ತ ನ್ಯಾಯಾಧೀಶರಾದ ನಾಗಮೋಹನ್ ದಾಸ್ ರವರ ಏಕ‌ ಸದಸ್ಯ ಆಯೋಗವನ್ನು ರಚಿಸಿ 3 ತಿಂಗಳ ಕಾಲಾವಕಾಶ ನೀಡಿತ್ತು.&nbsp;</p>



<p>ಇದೀಗ ಆಯೋಗದ ಅವಧಿ ಮುಗಿಯುತ್ತಿರುವ‌ ಹಿನ್ನೆಲೆಯಲ್ಲಿ ಆಯೋಗದಿಂದ ಮಧ್ಯಂತರ ವರದಿಯನ್ನು ಸರ್ಕಾರ ಪಡೆದುಕೊಳ್ಳಬೇಕು, ಪ್ರಸ್ತುತ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಒಳಮೀಸಲಾತಿ ವರ್ಗೀಕರಣವನ್ನು ಮಾಡಬೇಕು ಹಾಗೂ ಶಾಶ್ವತ ಜಾರಿಗಾಗಿ ಸಮೀಕ್ಷೆ ನಡೆಸಲು ಸರ್ಕಾರ ಮುಂದಾಗಬೇಕೆಂದು ಸಚಿವರನ್ನು ಒತ್ತಾಯಿಸಿದರು.&nbsp;</p>



<p>ಇದೇ ಸಂದರ್ಭದಲ್ಲಿ ಬ್ಯಾಕ್ ಲಾಗ್ ಹುದ್ದೆಗಳನ್ನು ಒಳಮೀಸಲಾತಿ ಜಾರಿಯಾಗುವವರೆಗೂ ಯಾವ ಕಾರಣಕ್ಕೂ ಭರ್ತಿ‌ಮಾಡಲು ಮುಂದಾಗಬಾರದೆಂದು ಮನವಿ ಮಾಡಿಕೊಂಡರು.&nbsp;</p>



<p>ಇದಕ್ಕೆ ಸ್ಫಂದಿಸಿದ ಸಚಿವರು ಒಳಮೀಸಲಾತಿ ಜಾರಿಯಾಗುವವರೆಗೂ ಬ್ಯಾಕ್ ಹುದ್ದೆಗಳು ಸೇರಿದಂತೆ, ನೇಮಕಾತಿಗಳನ್ನು ಮಾಡುವುದಿಲ್ಲ ಎಂದು ಭರವಸೆ ನೀಡಿದರು, ಅಲ್ಲದೆ&nbsp; ಒಳಮೀಸಲಾತಿ‌ ಕುರಿತಂತೆ ಈಗ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚಿಸುವುದಾಗಿ ತಿಳಿಸಿದರು.</p>



<p>ಈ ವೇಳೆ ಒಳಮೀಸಲಾತಿ ಪರ ಹೋರಾಟಗಾರರಾದ ಬಸವರಾಜ್ ಕೌತಾಳ್, ಚಂದ್ರು ತರಹುಣಿಸೆ, ರಘು ಕಾಮಾಕ್ಷಿಪಾಳ್ಯ, ಮಂಜುನಾಥ್ ಮತ್ತಿತರರು ಹಾಜರಿದ್ದರು.</p>
]]></content:encoded>
					
		
		
			</item>
		<item>
		<title>ಜಾತಿ ಜನಗಣತಿ, ಒಳಮೀಸಲಾತಿ: ಮುಖ್ಯಮಂತ್ರಿಗಳ ಒಳಮರ್ಮ</title>
		<link>https://peepalmedia.com/caste-census-internal-reservation-the-inner-secrets-of-the-chief-minister/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 04 Dec 2024 13:01:58 +0000</pubDate>
				<category><![CDATA[ಅಂಕಣ]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[caste census]]></category>
		<category><![CDATA[Chief Minister]]></category>
		<category><![CDATA[congress]]></category>
		<category><![CDATA[internal reservation]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Siddaramaiah]]></category>
		<category><![CDATA[siddaramaiah muda case]]></category>
		<guid isPermaLink="false">https://peepalmedia.com/?p=50171</guid>

					<description><![CDATA[ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳ ಗೆಲುವು ಕಾಂಗ್ರೆಸ್‌ ಪಕ್ಷಕ್ಕೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೊಸ ಉತ್ಸಾಹವನ್ನು ತಂದಂತೆ ಕಾಣುತ್ತಿದೆ. ಮುಡಾ, ವಾಲ್ಮೀಕಿ ಹಗರಣಗಳ ಸುಳಿಗಳಲ್ಲಿ ಸಿಲುಕಿ ಸ್ವಲ್ಪ ಆತಂಕ ಮತ್ತು ಇರಿಸು ಮುರಸಿಗೆ ಒಳಗಾದಂತೆ ಕಾಣುತ್ತಿದ್ದ ಸಿದ್ದರಾಮಯ್ಯ ಕಳೆದ ಕೆಲದಿನಗಳಿಂದ ಮತ್ತೆ ಪುಟಿದೆದ್ದಿದ್ದಾರೆ. ಅವರು ಮಾಧ್ಯಮದವರ ಮುಂದೆ ಮೇಜು ಕುಟ್ಟಿ ಮಾತನಾಡುವ ಮೂಲಕ ವಿರೋಧ ಪಕ್ಷಗಳಿಗೆ ಮತ್ತು ಪಕ್ಷದೊಳಗಿನ ಆಂತರಿಕ ವಿರೋಧಿಗಳಿಗೆ ವಿಭಿನ್ನ ಸಂದೇಶಗಳನ್ನು ನೀಡತೊಡಗಿದ್ದಾರೆ. ಇದರ ಬೆನ್ನಲ್ಲೇ ಅವರ ಅಭಿಮಾನಿಗಳು ಡಿಸೆಂಬರ್‌ 5ರಂದು ಹಾಸನದಲ್ಲಿ ಸಿದ್ದರಾಮಯ್ಯನವರಿಗೋಸ್ಕರ [&#8230;]]]></description>
										<content:encoded><![CDATA[
<pre class="wp-block-code"><code>
<strong>ಸಾಮಾಜಿಕ ನ್ಯಾಯದ ಪರ ಒಲವು ಮತ್ತು ಬಲಾಡ್ಯರ ಬ್ಲಾಕ್‌ಮೇಲ್‌ ದ್ವಂದ್ವದಲ್ಲಿ ಸಿದ್ದರಾಮಯ್ಯ</strong>

<strong>ಲೇಖನ: ರಾಜೇಶ್‌ ಮಲವಳ್ಳಿ</strong></code></pre>



<p>ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳ ಗೆಲುವು ಕಾಂಗ್ರೆಸ್‌ ಪಕ್ಷಕ್ಕೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೊಸ ಉತ್ಸಾಹವನ್ನು ತಂದಂತೆ ಕಾಣುತ್ತಿದೆ. ಮುಡಾ, ವಾಲ್ಮೀಕಿ ಹಗರಣಗಳ ಸುಳಿಗಳಲ್ಲಿ ಸಿಲುಕಿ ಸ್ವಲ್ಪ ಆತಂಕ ಮತ್ತು ಇರಿಸು ಮುರಸಿಗೆ ಒಳಗಾದಂತೆ ಕಾಣುತ್ತಿದ್ದ ಸಿದ್ದರಾಮಯ್ಯ ಕಳೆದ ಕೆಲದಿನಗಳಿಂದ ಮತ್ತೆ ಪುಟಿದೆದ್ದಿದ್ದಾರೆ. ಅವರು ಮಾಧ್ಯಮದವರ ಮುಂದೆ ಮೇಜು ಕುಟ್ಟಿ ಮಾತನಾಡುವ ಮೂಲಕ ವಿರೋಧ ಪಕ್ಷಗಳಿಗೆ ಮತ್ತು ಪಕ್ಷದೊಳಗಿನ ಆಂತರಿಕ ವಿರೋಧಿಗಳಿಗೆ ವಿಭಿನ್ನ ಸಂದೇಶಗಳನ್ನು ನೀಡತೊಡಗಿದ್ದಾರೆ. ಇದರ ಬೆನ್ನಲ್ಲೇ ಅವರ ಅಭಿಮಾನಿಗಳು ಡಿಸೆಂಬರ್‌ 5ರಂದು ಹಾಸನದಲ್ಲಿ ಸಿದ್ದರಾಮಯ್ಯನವರಿಗೋಸ್ಕರ ಬೃಹತ್‌ ಸ್ವಾಭಿಮಾನಿ ಸಮಾವೇಶವನ್ನು ಏರ್ಪಡಿಸಿದ್ದಾರೆ. ಹೆಸರಿಗೆ ಕಾಂಗ್ರೆಸ್‌ ಸಮಾವೇಶವಾದರೂ ಸ್ವರೂಪದಲ್ಲಿ ಇದು ಸಿದ್ದರಾಮಯ್ಯನವರ ಕೂರ್ಚಿಯನ್ನು ಭದ್ರಪಡಿಸಲು ಮತ್ತು ಅವರ ಹಿಂದೆ ಅಹಿಂದ ವರ್ಗದ ಅಚಲ ಬೆಂಬಲ ಹಾಗೂ ಸಿದ್ದರಾಮಯ್ಯನವರ ಜನಪ್ರೀಯತೆಯನ್ನು ಸಾಬೀತುಪಡಿಸುವುದೇ ಆಗಿದೆ.</p>



<p>ಆ ಮೂಲಕ ಕಾಂಗ್ರೆಸ್‌ ಹೈಕಮಾಂಡ್‌ಗೂ ಸಿದ್ದರಾಮಯ್ಯನವರು ನನ್ನನ್ನು ಹಗುರವಾಗಿ ಪರಿಗಣಿಸದಿರಿ ಎಂಬ ಸಂದೇಶವನ್ನು ನೀಡಲು ಬಯಸಿರುವುದು ಸ್ಪಷ್ಟ. ಮಹಾರಾಷ್ಟ್ರ, ಹರಿಯಾಣ ಚುನಾವಣಾ ಸೋಲಿನ ನಂತರ ಕಾಂಗ್ರೆಸ್‌ ಹೈಕಮಾಂಡ್‌ ತರಾತುರಿಯಲ್ಲಿ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಧೈರ್ಯ ಮಾಡಲಾರದು. ಇಡಿ ಭಾರತದಲ್ಲಿ ಕಾಂಗ್ರೆಸ್‌ ಪಕ್ಷದ ಒಬಿಸಿ ಮುಖಂಡರಲ್ಲಿ ಸಿದ್ದರಾಮಯ್ಯ ಮತ್ತು ಅಶೋಕ್‌ ಗೆಹ್ಲೋಟ್‌ ಅಗ್ರಗಣ್ಯರು. ರಾಜಸ್ಥಾನ ಚುನಾವಣೆ ಸೋಲಿನ ನಂತರ ಗೆಹ್ಲೋಟ್‌ ಕೊಂಚ ಹಿನ್ನಡೆಯನ್ನು ಅನುಭವಿಸಿದ್ದಾರೆ. ಈ ಹೊತ್ತಿನಲ್ಲಿ ಸಿದ್ದರಾಮಯ್ಯನವರ ಮುಖ್ಯಮಂತ್ರಿ ಸ್ಥಾನ ಭದ್ರವಾಗಿದೆ ಎಂದು ಹೇಳಬಹುದು.</p>



<p>ಬಣ ರಾಜಕೀಯದ ಕೆಸರೆರಚಾಟದಲ್ಲಿ ಮುಳುಗಿರುವ ಬಿಜೆಪಿ ಮತ್ತು ಚನ್ನಪಟ್ಟಣ ಸೋಲಿನಿಂದ ಕಂಗೆಟ್ಟಿರುವ ಜೆಡಿಎಸ್ ಈಗ ತಮ್ಮ ಆಂತರಿಕ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುವಲ್ಲಿ ಹೆಣಗಾಡುತ್ತಿವೆ. ಹೀಗಿರುವಾಗ ಡಿಸೆಂಬರ್‌ 9 ರಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಸರ್ಕಾರ ಉಪಚುನಾವಣೆಗಳ ಗೆಲುವು ಮತ್ತು ಒಂದು ಮುಕ್ಕಾಲು ವರ್ಷಗಳ ಅವಧಿಯಲ್ಲಿಯೇ ದುರ್ಬಲ ವಿರೋಧ ಪಕ್ಷಗಳನ್ನು ಎದುರು ಇಟ್ಟುಕೊಂಡು ಅಧಿವೇಶನಕ್ಕೆ ಅಣಿಯಾಗುತ್ತಿವೆ.</p>



<p>ಕಳೆದ ಮುಂಗಾರು ಅಧಿವೇಶನದಲ್ಲಿ ಸರ್ಕಾರವನ್ನು ಅಲ್ಲಾಡಿಸಿದ್ದ ಮುಡಾ ಹಗರಣದ ಕಾವು ಇಳಿದಿದೆ. ಮುಖ್ಯಮಂತ್ರಿ ಬದಲಾವಣೆ ಎನ್ನುವ ಚರ್ಚೆ ಕೂಡ ತಣ್ಣಗಾಗಿದೆ. ಈ ಹೊತ್ತಿಗೇ ಜಾತಿ ಗಣತಿ ವರದಿ ಚರ್ಚೆ ಮುನ್ನೆಲೆಗೆ ಬರಬೇಕಿದೆ. ಗ್ಯಾರಂಟಿಗಳ ಗೆಲುವಿನ ಕಥೆ ಈಗ ಹಳಸಲಾಗಿದೆ, ಜವಾಬ್ದಾರಿಯುತ ಸರ್ಕಾರವೊಂದು ಕೇವಲ ಆರ್ಥಿಕ ಸಬಲೀಕರಣಕ್ಕೆ ಮಾತ್ರ ಸೀಮಿತವಾಗದೇ ಸಾಮಾಜಿಕ ಬದಲಾವಣೆ ಮತ್ತು ಕ್ರಾಂತಿಗೆ ಮುನ್ನುಡಿಯನ್ನು ಬರೆಯಬೇಕು.</p>



<p>ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿಯವರ ಎನ್‌ಡಿಎ ಸರ್ಕಾರ ಏನಕೇನ ಪ್ರಕಾರೇಣ ತನ್ನ ಉದ್ಧೇಶಿತ ಮಸೂದೆಗಳನ್ನು ಜಾರಿಗೆ ತರಲು ಪ್ರತಿ ಅಧಿವೇಶನವನ್ನು ಬಳಸಿಕೊಳ್ಳುತ್ತಿದೆ. ಹೀಗಿರುವಾಗ ಸಿದ್ದರಾಮಯ್ಯನವರ ಕಾಂಗ್ರೆಸ್‌ ಸರ್ಕಾರ ತಾನು ಕಳೆದ ಚುನಾವಣೆಯಲ್ಲಿ ನೀಡಿದ ಬರವಸೆಯನ್ನು ಈಡೇರಿಸಲು ಹಿಂದೇಟು ಹಾಕುತ್ತಿದೆ.</p>



<p>ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಸರಕಾರ ಜಾತಿ ಗಣತಿಯನ್ನು ಜಾರಿಗೊಳಿಸುತ್ತೇವೆ ಎನ್ನುವ ಭರವಸೆಯನ್ನು ಜನತೆಗೆ ನೀಡಿತ್ತು. ಅಷ್ಟೇ ಅಲ್ಲ, ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ಜಾತಿ ಗಣತಿಯನ್ನು ನಡೆಸುವ ಹೇಳಿಕೆಯನ್ನು ರಾಹುಲ್‌ ಗಾಂಧಿ ಕೂಡ ನೀಡಿದ್ದರು. ರಾಜ್ಯದಲ್ಲಿ ಭರ್ಜರಿ ಬಹುಮತದ ಜೊತೆಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಆದರೆ ಈಗ ರಾಜ್ಯದ ಸರ್ವತೋಮುಖ ಅಭಿವೃದ್ಧಿಯಲ್ಲಿ ಪರಿಣಾಮಕಾರಿ ಪಾತ್ರವಹಿಸಬಹುದಾದ ಜಾತಿ ಗಣತಿಯನ್ನು ಸಂಪುಟದ ಮುಂದೆ ಮಂಡಿಸಿ, ಅದನ್ನು ಜಾರಿಗೊಳಿಸಲು ಸರಕಾರ ಅಂಜುತ್ತಿದೆ.</p>



<p>ಜಾತಿ ಗಣತಿಯನ್ನು ಜಾರಿಗೊಳಿಸಿಯೇ ಸಿದ್ಧ’’ ಎಂದು ಇತ್ತೀಚೆಗೆ ಸಿದ್ದರಾಮಯ್ಯ ಸಾರ್ವಜನಿಕ ವೇದಿಕೆಗಳಲ್ಲಿ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಕಾಂತರಾಜು ಆಯೋಗದ ವರದಿಯನ್ನು ಸರ್ಕಾರ ಸ್ವೀಕರಿಸಿ ಸುಮಾರು 8 ತಿಂಗಳು ಕಳೆದಿದೆ. ಅದರ ಬೆನ್ನಲ್ಲೇ ಸರ್ಕಾರ ಏಕಸದಸ್ಯ ಸಮಿತಿಯೊಂದನ್ನು ರಚಿಸಿ ಬೀಸೋ ದೊಣ್ಣೆಯಿಂದ ಪಾರಾಗುವ ನಾಜೂಕಿನ ನಡೆ ಅನುಸರಿಸುತ್ತಿದೆ.</p>



<p>ಜಾತಿಗಣತಿ ಮತ್ತು ಎಸ್ಸಿ ಒಳಮೀಸಲಾತಿ ಸಂಬಂಧ ಸಿದ್ದರಾಮಯ್ಯನವರ ಮುಂದೆ ಹೊರಗಿನ ಸಮಸ್ಯೆಗಳಿಗಿಂತ ಆಂತರಿಕ ಸವಾಲುಗಳೇ ಅಧಿಕಗೊಂಡಿರುವಂತೆ ಕಾಣುತ್ತಿದೆ. ಹಾಗಿದ್ದರೆ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ‌ಗಣತಿ ವಿಚಾರದಲ್ಲಿ ಗಟ್ಟಿನಿರ್ಧಾರ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದೇಕೆ ಎಂದು ಗಮನಿಸೋಣ.</p>



<p>ಅಕ್ಟೋಬರ್‌ 15 ರಂದು ಜಾತಿ ಜನಗಣತಿ ವರದಿ ಸಚಿವ ಸಂಪುಟದ ಮುಂದೆ ಚರ್ಚೆಗೆ ಬಂದ ಬೆನ್ನಿಗೇ ಕೆಲವು ಅಪಸ್ವರಗಳು ಸರಕಾರದೊಳಗಿಂದಲೇ ಎದ್ದವು. ‘‘ಜಾತಿ ಗಣತಿ ವಿಚಾರದಲ್ಲಿ ಸಿಎಂ ಎಚ್ಚರಿಕೆಯ ಹೆಜ್ಜೆ ಇಡಬೇಕು’’ ಎಂದು ಒಕ್ಕಲಿಗ ಸಮುದಾಯಕ್ಕೆ ಸೇರಿದ ಕಾಂಗ್ರೆಸ್‌ ಮುಖಂಡರು ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ಶಾಮನೂರು ಶಿವಶಂಕರಪ್ಪ ಅವರು ‘‘ನಾವು ಹಳೇ ಜಾತಿ ಗಣತಿ ಒಪ್ಪುವುದಿಲ್ಲ. ಸರಕಾರ ಹೊಸದಾಗಿ ಗಣತಿ ಮಾಡಲಿ ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ. ವೀರಶೈವ ಲಿಂಗಾಯತರ ಒಳ ಪಂಗಡಗಳನ್ನು ಬೇರೆಬೇರೆಯಾಗಿ ಗಣತಿ ಮಾಡಿ ವೀರಶೈವ ಲಿಂಗಾಯತರ ಒಟ್ಟು ಸಂಖ್ಯೆ ಕಡಿಮೆ ತೋರಿಸಲಾಗಿದೆ’’ ಎಂದು ಹೇಳಿದ್ದಾರೆ.</p>



<p>ಒಕ್ಕಲಿಗರ ಸಂಘಟನೆ ಈಗಾಗಲೇ ಜಾತಿ ಗಣತಿಯನ್ನು ವಿರೋಧಿಸಿ ಹೇಳಿಕೆಯನ್ನು ನೀಡಿದೆ. ಒಕ್ಕಲಿಗ ಸಮುದಾಯದ ಮುಖಂಡರು ಪಕ್ಷಾತೀತವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಕಾಂತರಾಜು ವರದಿಯನ್ನು ವಿರೋಧಿಸಿ ಮನವಿ ಪತ್ರವನ್ನು ನೀಡಿವೆ. ಲಿಂಗಾಯತ ಸಂಘಟನೆಗಳು ಕೂಡ ಒಳಗೊಳಗೆ ಜಾತಿ ಗಣತಿಯ ವಿರುದ್ಧ ಕತ್ತಿ ಮಸೆಯುತ್ತಿವೆ.</p>



<p>ಆರಂಭದಲ್ಲಿ ಬಿಜೆಪಿ ದೊಡ್ಡ ಮಟ್ಟದಲ್ಲಿ ಜಾತಿ ಗಣತಿ ವರದಿಯ ವಿರುದ್ಧ ತೀವ್ರ ಹೇಳಿಕೆಗಳನ್ನು ನೀಡಿತ್ತು. ‘ಜಾತಿ ಗಣತಿ ಹಿಂದೂ ಸಮಾಜವನ್ನು ಒಡೆಯುತ್ತದೆ’ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ‘ಜಾತಿ ಗಣತಿಗಾಗಿ ಅನಗತ್ಯವಾಗಿ ಸಮಯ ಮತ್ತು ಹಣವನ್ನು ಕಾಂಗ್ರೆಸ್ ಸರಕಾರ ವ್ಯಯಿಸಿದೆ’ ಎಂದು ದೂರಿದ್ದರು. ಆದರೆ, ಈಗ ಬಿಜೆಪಿ ಈ ಕುರಿತು ಮೌನವಾಗಿದೆ. ಯಾಕೆಂದರೆ, ಕೇಂದ್ರದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಜಾತಿ ಗಣತಿಯ ಕುರಿತು ಮೃದು ನಿಲುವು ತಾಳಿದ್ದಾರೆ. ಕೇಂದ್ರ ಸರಕಾರದ ಆಪ್ತ ಮಿತ್ರರಾದ ನಿತೀಶ್ ಕೂಮಾರ್ ಅವರು ಜಾತಿ ಗಣತಿಯ ಬೆಂಬಲಿಗರಾಗಿರುವುದರಿಂದ, ಅದನ್ನು ವಿರೋಧಿಸುವುದು ಕೇಂದ್ರ ಸರಕಾರಕ್ಕೆ ಕಷ್ಟಕರವಾಗಿದೆ. ಅಲ್ಲದೆ, ದೇಶಾದ್ಯಾಂತ ಜಾತಿ ಗಣತಿಗಾಗಿ ಒತ್ತಾಯಗಳು ಹೆಚ್ಚಾಗುತ್ತಿರುವುದರಿಂದ, ಜಾತಿ ಗಣತಿಯನ್ನು ಹಿಂದೂ ವಿರೋಧಿ ಗಣತಿಯೆಂದು ಕರೆದ ಮೋದಿ ಅವರೇ ತಮ್ಮ ಹೇಳಿಕೆಯಿಂದ ಹಿಂದೆ ಸರಿಯುತ್ತಿದ್ದಾರೆ. ಆರೆಸ್ಸೆಸ್ ಕೂಡ ಜಾತಿ ಗಣತಿಯ ಕುರಿತು ಸತತವಾಗಿ ಮಾರ್ಗದರ್ಶನ ನೀಡುತ್ತಿದೆ. ಈ ಕಾರಣದಿಂದಲೇ, ಜಾತಿ ಗಣತಿ ವರದಿ ಜಾರಿಯಾಗಬೇಕು ಎಂಬ ಒತ್ತಾಯಕ್ಕೆ ರಾಜ್ಯದ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಲು ಹಿಂಜರಿಯುತ್ತಿದ್ದಾರೆ.</p>



<p>ವಿಪರ್ಯಾಸವೆಂದರೆ, ಕಳೆದ ಒಂದು ವರ್ಷದಿಂದ ಜಾತಿಗಣತಿಯ ವಿರುದ್ಧ ಕಾಂಗ್ರೆಸ್ ಸರಕಾರದೊಳಗಿಂದಲೇ ಭಿನ್ನಮತಗಳು ಕೇಳಿ ಬರುತ್ತಿವೆ. ಇಂದು ಜಾತಿ ಗಣತಿ ವರದಿಗಾಗಿ ಸಿದ್ದರಾಮಯ್ಯ ಅವರಿಗೆ ಬಿಜೆಪಿಯ ಭಯವಿಲ್ಲ. ಬದಲಿಗೆ, ತನ್ನ ಸರಕಾರದೊಳಗಿರುವ ನಾಯಕರ ಕುರಿತಂತೆ ಆತಂಕವಿದೆ. ವರದಿಯ ಕಾರಣದಿಂದ ಲಿಂಗಾಯತ ಮತ್ತು ಒಕ್ಕಲಿಗ ನಾಯಕರು ಕಾಂಗ್ರೆಸ್‌ನೊಳಗೆ ಬಂಡೆದ್ದರೆ ಅದರಿಂದ ಸರಕಾರಕ್ಕೆ ಧಕ್ಕೆಯಾಗಬಹುದು ಎಂದು ಅವರು ಭಯಪಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ, ಕಾಂಗ್ರೆಸ್‌ನ ಹಿರಿಯ ನಾಯಕರಾಗಿರುವ ಬಿ. ಕೆ. ಹರಿಪ್ರಸಾದ್ ಅವರು ‘‘ಸರಕಾರ ಬಿದ್ದರೆ ಬೀಳಲಿ, ಜಾತಿ ಗಣತಿ ವರದಿ ಜಾರಿ ಮಾಡಲೇ ಬೇಕು’’ ಎಂದು ಸಾರ್ವಜನಿಕ ಸಮಾರಂಭವೊಂದರಲ್ಲಿ ಒತ್ತಾಯಿಸಿದ್ದಾರೆ.</p>



<p>ಇದೀಗ, ಕಾಂಗ್ರೆಸ್ ನಾಯಕರು ಕೆಲವು ಪ್ರಶ್ನೆಗಳಿಗೆ ಉತ್ತರಿಸಲೇಬೇಕಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಜಾತಿ ಗಣತಿಯನ್ನು ಜಾರಿಗೊಳಿಸುವುದಾಗಿ ಭರವಸೆಯೊಂದಿಗೆ ಮತ ಯಾಚನೆ ಮಾಡಿದ್ದರು. ಇದೀಗ ಜಾತಿ ಗಣತಿ ಜಾರಿಗೆ ಹಿಂದೇಟು ಹಾಕಿದರೆ ಜನಸಾಮಾನ್ಯರನ್ನು ವಂಚಿಸಿದಂತಾಗುತ್ತೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಶೋಷಿತ ಸಮುದಾಯದ ಪ್ರತಿನಿಧಿ ಎಂದು ಕರೆದುಕೊಳ್ಳುತ್ತಾರೆ. ಜಾತಿ ಗಣತಿ ಶೋಷಿತ ಸಮುದಾಯದ ಹಿತಾಸಕ್ತಿಯನ್ನು ಹೊಂದಿದೆ. ಈ ಹಿತಾಸಕ್ತಿಯನ್ನು ತಮ್ಮ ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಬಲಿಕೊಡುತ್ತಾರೆಯೆ?</p>



<p>ಎಲ್ಲಕ್ಕಿಂತ ಮುಖ್ಯವಾಗಿ, ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರು ಜಾತಿ ಗಣತಿಯನ್ನು ದೇಶಾದ್ಯಂತ ಜಾರಿಗೊಳಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ರಾಹುಲ್‌ಗಾಂಧಿ ಜಾತಿಗಣತಿಯ ಅಗತ್ಯವನ್ನು ಒತ್ತಿ ಹೇಳಿದರು. ಹೀಗಿರುವಾಗ, ‘‘ಜಾತಿ ಗಣತಿ ವರದಿ ಜಾರಿಗೊಳಿಸಿಯೇ ಸಿದ್ಧ’’ ಎಂದು ಇತ್ತೀಚಿನ ಸಮಾರಂಭವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಜಾತಿ ಗಣತಿ ವರದಿಯನ್ನು ಜಾರಿಗೊಳಿಸುವಲ್ಲಿ ಸಿದ್ದರಾಮಯ್ಯ ಅವರನ್ನು ಈವರೆಗೆ ತಡೆದವರು ಯಾರು? ಎನ್ನುವುದನ್ನು ಮಾತ್ರ ಅವರು ಸ್ಪಷ್ಟಪಡಿಸಿಲ್ಲ. ‘‘ಈ ಹಿಂದೆ ನಡೆಸಿದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷಾ ವರದಿ ನನ್ನ ಕೈ ಸೇರಿದ್ದು ಶೀಘ್ರದಲ್ಲೇ ಕ್ಯಾಬಿನೆಟ್‌ನಲ್ಲಿ ಇಟ್ಟು ಜಾರಿಗೆ ತರುತ್ತೇನೆ. ಜಾತಿ ಗಣತಿ ವರದಿ ನಮ್ಮ ಪಕ್ಷದ ಅಜೆಂಡಾ’’ ಎಂದು ಅವರು ಕೆಲ ತಿಂಗಳ ಹಿಂದೆ ಹೇಳಿದ್ದರು.</p>



<p>ಈ ರೀತಿಯ ಹೇಳಿಕೆಯನ್ನು ಅವರು ಹಿಂದೆಯೂ ಹಲವು ಬಾರಿ ನೀಡಿರುವುದರಿಂದ ಇತ್ತೀಚೆಗೆ ಅದನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ವಿಪರ್ಯಾಸವೆಂದರೆ, ದೇಶದಲ್ಲೇ ಮೊದಲಿಗೆ ಜಾತಿ ಗಣತಿಯನ್ನು ನಡೆಸಿರುವುದು ಕರ್ನಾಟಕ. ನಮ್ಮ ರಾಜ್ಯದಲ್ಲಿ ನಡೆದ ಬಳಿಕ ಬಿಹಾರದಲ್ಲಿ ಈ ಗಣತಿ ನಡೆಯಿತು. ಆದರೆ, ವರದಿ ಮೊದಲು ಮಂಡನೆಯಾದದ್ದು ಬಿಹಾರದಲ್ಲಿ. 2015ರಲ್ಲಿ ಸಿದ್ದರಾಮಯ್ಯ ಸರಕಾರವೇ ಜಾತಿ ಗಣತಿಗೆ ಆದೇಶ ನೀಡಿತ್ತು. ಆದರೆ ಈ ವರದಿಯನ್ನು ಸ್ವೀಕರಿಸಲು ಆ ಬಳಿಕದ ಸರಕಾರಗಳು ಹಿಂದೇಟು ಹಾಕಿದವು.</p>



<p>ವಿಪರ್ಯಾಸವೆಂದರೆ, ಕಾಂಗ್ರೆಸ್ ನೇತೃತ್ವದ ಮೈತ್ರಿ ಸರಕಾರದ ಅವಧಿಯಲ್ಲೂ ಜಾತಿ ಗಣತಿ ವರದಿ ನನೆಗುದಿಗೆ ಬಿತ್ತು. ಇದೇ ಸಂದರ್ಭದಲ್ಲಿ ಜಾತಿ ಗಣತಿಯ ಅಧಿಕೃತತೆಯನ್ನು ಕೆಲವರು ಪ್ರಶ್ನಿಸತೊಡಗಿದರು. ‘‘ವರದಿ ಸೋರಿಕೆಯಾಗಿದೆ’’ ಎಂದು ಕೆಲವರು ಆರೋಪಿಸಿದ್ದರೆ, ಸಮೀಕ್ಷೆಗೆ ಬಳಸಿದ ಮಾನದಂಡವೇ ಸರಿಯಿಲ್ಲ ಎಂದು ಕೆಲವರು ತಕರಾರು ತೆಗೆಯಿದ್ದರು. ಅವರಿಗೆ ಜಾತಿ ಗಣತಿ ವರದಿಯನ್ನು ಸರಕಾರ ಸ್ವೀಕರಿಸುವುದೇ ಬೇಡವಾಗಿತ್ತು.</p>



<p>ಕಾಂಗ್ರೆಸ್ ತನ್ನ ಒಳಗಿರುವ ನಾಯಕರಿಗೆ ಹೆದರಿಯೇ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಹಿಂದೇಟು ಹಾಕುತ್ತಾ ಬಂದಿದೆ ಬಿಜೆಪಿಯಂತೂ ಜಾತಿ ಗಣತಿಯ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಾ ಬಂದಿರುವುದರಿಂದ, ಅದು ವರದಿಯನ್ನು ಸ್ವೀಕರಿಸಿ ಜಾರಿಗೊಳಿಸುವ ಪ್ರಶ್ನೆಯೇ ಬರುವುದಿಲ್ಲ. ಜಾತಿ ಗಣತಿಯ ಕುರಿತಂತೆ ಕಾಂಗ್ರೆಸ್‌ನೊಳಗಿರುವ ಭಿನ್ನಾಭಿಪ್ರಾಯಗಳಿಂದ ಅರ್ಥವಾಗುವುದೇನೆಂದರೆ, ಜಾತಿಗಣತಿಯ ಅಗತ್ಯ ಮತ್ತು ಅನಿವಾರ್ಯತೆಯ ಬಗ್ಗೆ ಕಾಂಗ್ರೆಸ್‌ನೊಳಗಿರುವ ನಾಯಕರಿಗೆ ಪ್ರಾಥಮಿಕ ಅರಿವೂ ಇಲ್ಲ.</p>



<p>ಇಂದು ರಾಜ್ಯದಲ್ಲಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯ ಬಿಜೆಪಿ ಮತ್ತು ಆರೆಸ್ಸೆಸ್‌ನ ಪಿತೂರಿಯ ಪರಿಣಾಮವಾಗಿ ಜಾತಿಗಣತಿಯ ವಿರುದ್ಧ ಮಾತನಾಡುತ್ತಿದೆ. ನೇರವಾಗಿ ವಿರೋಧಿಸಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಆರೆಸ್ಸೆಸ್ ನಾಯಕರು ಬಲಾಢ್ಯ ಜಾತಿ ಸಂಘಟನೆಯೊಳಗಿರುವ ತಮ್ಮ ಪ್ರತಿನಿಧಿಗಳಿಂದ ಮಾತನಾಡಿಸುತ್ತಿದ್ದಾರೆ.</p>



<p>ಇವರಿಗೆ ಕಾಂಗ್ರೆಸ್‌ನೊಳಗಿರುವ ಆಯಾ ಜಾತಿ ಮುಖಂಡರು ಉತ್ತರ ನೀಡಬೇಕೇ ಹೊರತು, ಆ ಪ್ರತಿನಿಧಿಗಳ ಪರವಾಗಿ ಕಾಂಗ್ರೆಸ್ ಪಕ್ಷವನ್ನೇ ಬ್ಲ್ಯಾಕ್‌ಮೇಲ್ ಮಾಡುವಂತಹ ಸ್ಥಿತಿಗೆ ಇಳಿಯಬಾರದು. ಅಂತಹ ನಾಯಕರ ವಿರುದ್ಧ ಕಠಿಣ ಕ್ರಮ ಜರುಗಿಸಲು ಕಾಂಗ್ರೆಸ್ ವರಿಷ್ಠರು ಹಿಂಜರಿಯಬಾರದು.</p>



<p>ವರದಿ ಜಾರಿಗೊಳಿಸುವ ಭರವಸೆಯನ್ನು ಮುಖ್ಯಮಂತ್ರಿ ನೀಡುತ್ತಿರುವಾಗಲೇ, ಅತ್ತ ಒಕ್ಕಲಿಗರ ಸಂಘಟನೆಯೊಂದು ‘‘ಹೊಸದಾಗಿ ಸಮೀಕ್ಷೆ’’ಯನ್ನು ಮಾಡಬೇಕು ಎನ್ನುವ ಬೇಡಿಕೆಯನ್ನು ಮುಂದಿಟ್ಟಿದೆ. ವರದಿಯೊಳಗೆ ಏನಿದೆ, ಎಲ್ಲಿ ತಪ್ಪಾಗಿದೆ ಎನ್ನುವುದು ಇನ್ನೂ ಸ್ಪಷ್ಟವಿಲ್ಲದೇ ಇರುವಾಗ ಸಂಘಟನೆ, ಸಮೀಕ್ಷೆ ಸರಿಯಿಲ್ಲ ಎಂದು ತಕರಾರು ತೆಗೆಯುವುದೇ ವಿಚಿತ್ರವಾಗಿದೆ.</p>



<p>ಆಳದಲ್ಲಿ ಆ ಸಂಘಟನೆಗೆ ವರದಿಯಲ್ಲಿರುವ ಸತ್ಯಾಂಶಗಳು ಬಹಿರಂಗವಾಗುವುದು ಮತ್ತು ಜಾರಿಗೊಳ್ಳುವುದು ಬೇಡವಾಗಿದೆ. ಇಂದು ಈ ವರದಿಯನ್ನು ಕುಂಟು ನೆಪ ತೆಗೆದು ತಿರಸ್ಕರಿಸುವ ಸಂಘಟನೆಗಳು ನಾಳೆ ಹೊಸದಾಗಿ ಸಮೀಕ್ಷೆ ನಡೆದರೂ ಅದನ್ನೂ ಅದು ಬೇರೆ ಬೇರೆ ನೆಪಗಳನ್ನು ಒಡ್ಡಿ ತಿರಸ್ಕರಿಸುವುದರಲ್ಲಿ ಅನುಮಾನವಿಲ್ಲ.</p>



<p>ವಿಪರ್ಯಾಸವೆಂದರೆ, ಕಾಂಗ್ರೆಸ್‌ನೊಳಗಿರುವ ಲಿಂಗಾಯತ ಮತ್ತು ಒಕ್ಕಲಿಗ ನಾಯಕರು ಈಗಲೂ ಸಮೀಕ್ಷೆಯ ಬಗ್ಗೆ ತಮ್ಮ ತಮ್ಮ ಜಾತಿ ಸಂಘಟನೆಗಳ ಮನವೊಲಿಸುವುದರಲ್ಲಿ ವಿಫಲವಾಗಿದ್ದಾರೆ. ಜಾತಿ ಗಣತಿಯನ್ನು ಜಾರಿಗೊಳಿಸುವಲ್ಲಿ ಸಿದ್ದರಾಮಯ್ಯ ತನ್ನ ಪಕ್ಷದೊಳಗಿರುವ ಬಲಿಷ್ಟ ಜಾತಿ ಶಕ್ತಿಗಳಿಗೆ ಹೆದರುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಒಂದೆಡೆ ಕಾಂಗ್ರೆಸ್ ಪಕ್ಷ ರಾಷ್ಟ್ರಮಟ್ಟದಲ್ಲಿ ಜಾತಿ ಗಣತಿಯ ಪರವಾಗಿ ಹೇಳಿಕೆಗಳನ್ನು ನೀಡುತ್ತಾ ಬಂದಿದೆ. ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಜಾತಿಗಣತಿಯನ್ನು ನಡೆಸುವುದಾಗಿ ರಾಹುಲ್‌ಗಾಂಧಿ ಭರವಸೆಯನ್ನು ನೀಡಿದ್ದಾರೆ.</p>



<p>ಕಳೆದ ಸೆಪ್ಟಂಬರ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಕೂಡ ಜಾತಿ ಗಣತಿಯ ಬಗ್ಗೆ ಮೃದು ನಿಲುವು ತಳೆದಿದ್ದಾರೆ. ಹೀಗಿರುವಾಗ, ರಾಜ್ಯದಲ್ಲಿ ಪೂರ್ಣ ಪ್ರಮಾಣದ ಜನಬೆಂಬಲವಿರುವ ಕಾಂಗ್ರೆಸ್ ಸರಕಾರಕ್ಕೆ ಜಾತಿ ಗಣತಿಯ ಕುರಿತಂತೆ ಸ್ಪಷ್ಟ ನಿಲುವಿಗೆ ಬರಲು ಸಾಧ್ಯವಾಗದೇ ಇರುವುದು ದೊಡ್ಡ ಹಿನ್ನಡೆಯಾಗಿದೆ.</p>



<p><strong>ಒಳಮೀಸಲಾತಿ ಬಗೆಹರಿಯದ ಗೊಂದಲ</strong></p>



<p><br>ಸಾಮಾಜಿಕ ನ್ಯಾಯ ಎನ್ನುವ ಪದಗುಚ್ಛ ಕಾಂಗ್ರೆಸ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಹಳ ಆಪ್ಯಾಯಮಾನವಾದುದು. ಒಳ ಮೀಸಲು ಕೂಡ ಸಾಮಾಜಿಕ ನ್ಯಾಯದ ಭಾಗ. ಈ ಸೌಲಭ್ಯಕ್ಕಾಗಿ ಕಾಂಗ್ರೆಸ್‌ನಲ್ಲಿರುವ ಎಸ್‌ಸಿ ಎಡಗೈ ಪಂಗಡದವರು ಹಲವು ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದ್ದಾರೆ. ಆದರೆ, ಕಾಂಗ್ರೆಸ್‌ನಲ್ಲಿ ಮೊದಲಿನಿಂದಲೂ ಬಲಗೈ ಪ್ರಾಬಲ್ಯವಿರುವುದರಿಂದ ನ್ಯಾಯಯುತವಾದ ಈ ಬೇಡಿಕೆ ಸಂಬಂಧದಲ್ಲಿ ದೃಢ ನಿರ್ಧಾರ ಕೈಗೊಳ್ಳಲು ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ.</p>



<p>ಒಳಮೀಸಲಾತಿಯ ಬಗ್ಗೆಯೂ ರಾಜ್ಯ ಸರಕಾರ ಗೊಂದಲದಲ್ಲಿದೆ. ಸುಪ್ರೀಂಕೋರ್ಟ್ ಒಳ ಮೀಸಲಾತಿ ಅನುಷ್ಠಾನದ ಜವಾಬ್ದಾರಿಯನ್ನು ರಾಜ್ಯಗಳ ಮೇಲೆ ಹಾಕಿದಾಗ, ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದರು. ದಲಿತ ಸಮುದಾಯದ ಒಂದು ಗುಂಪು ಒಳ ಮೀಸಲಾತಿಯ ಬೇಡಿಕೆಯಿಟ್ಟಾಗ ರಾಜ್ಯ ಸರಕಾರಗಳು ಕೇಂದ್ರ ಮತ್ತು ಸುಪ್ರೀಂಕೋರ್ಟ್‌ನ ಕಡೆಗೆ ಕೈತೋರಿಸಿದ್ದವು.</p>



<p>ಇತ್ತೀಚೆಗೆ, ಸುಪ್ರೀಂಕೋರ್ಟ್ ಹಸಿರು ನಿಶಾನೆ ನೀಡಿದ ನಂತರ, ಸರ್ಕಾರ ಮೀನಾಮೇಷ ಎಣಿಸುತ್ತಿದೆ. ತೆಲಂಗಾಣದಲ್ಲಿ ಈಗಾಗಲೇ ಅಲ್ಲಿನ ಕಾಂಗ್ರೆಸ್ ಸರಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಸುಪ್ರೀಂಕೋರ್ಟ್ ತೀರ್ಪನ್ನು ಅಧ್ಯಯನ ಮಾಡಿ ಶಿಫಾರಸು ಮಾಡಲು ಒಂದು ಸಂಪುಟ ಉಪ ಸಮಿತಿಯನ್ನು ರಚಿಸಿದೆ. ಪರಿಶಿಷ್ಟ ಜಾತಿಗಳ ವಿವಿಧ ಸಂಘಸಂಸ್ಥೆಗಳಿಂದ ಈ ಸಮಿತಿ ಈಗಾಗಲೇ ಹೇಳಿಕೆಗಳನ್ನು ಆಹ್ವಾನಿಸಿದೆ. ಕನಿಷ್ಠ ಇಷ್ಟನ್ನಾದರೂ ಮಾಡಲು ರಾಜ್ಯ ಸರಕಾರ ಯಾಕೆ ಹಿಂದೇಟು ಹಾಕುತ್ತಿದೆ? ಎನ್ನುವ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ.</p>



<p>ದೇವರಾಜ ಅರಸು ಅವರ ಅನುಯಾಯಿ ಎಂದು ಹೇಳಿಕೊಳ್ಳುತ್ತ ಆಗಾಗಾ ರಾಮ್‌ ಮನೋಹರ್‌ ಲೋಹಿಯಾ ಅವರ ಚಿಂತನೆಗಳನ್ನು ಸದನದ ಒಳಗೆ ಮತ್ತು ಸಾರ್ವಜನಿಕ ಜೀವನದಲ್ಲಿ ವ್ಯಕ್ತಪಡಿಸುವ ಸಿದ್ದರಾಮಯ್ಯನವರು ಜಾತಿ ಜನಗಣತಿ ಮತ್ತು ಎಸ್‌ಸಿ ಎಸ್ಟಿ ಒಳಮೀಸಲಾತಿ ಕುರಿತು ಗಟ್ಟಿ ನಿರ್ಧಾರಗಳನ್ನು ಕೈಗೊಳ್ಳುವ ಸಮಯ ಬಂದಿದೆ.</p>



<p>ಸಿದ್ದರಾಮಯ್ಯನವರು ಜನರಿಗೆ ಮಾತು ನೀಡಿದಂತೆ ತಮ್ಮ ಮಾತಿಗೆ ಬದ್ಧರಾಗಿ ಐತಿಹಾಸಿಕ ನಿರ್ಣಯ ಕೈಗೊಂಡರೆ ಅವರು ಸದಾ ಪಠಿಸುವ ಸಾಮಾಜಿಕ ನ್ಯಾಯಕ್ಕೆ ಒಂದು ಅರ್ಥ ಬರಲಿದೆ. ಇಲ್ಲವಾದರೆ ತಮ್ಮ ಕುರ್ಚಿ ಕಾಪಾಡಿಕೊಳ್ಳುವ ಆತಂಕದಲ್ಲಿ ತಮ್ಮ ವಿಚಾರ ಧಾರೆ, ಜನರಿಗೆ ನೀಡಿದ ವಚನಗಳಿಂದ ಹಿಂದೆ ಸರಿದರೆ ನೂರರಲ್ಲಿ ಒಬ್ಬರಾಗಿ ಇತಿಹಾಸದಲ್ಲಿ ಕಳೆದುಹೋಗಲಿದ್ದಾರೆ.</p>



<p>ಕರ್ನಾಟಕ ಈಗಾಗಲೇ 23 ಮುಖ್ಯಮಂತ್ರಿಗಳನ್ನು ಕಂಡಿದೆ, ಇನ್ನೂ ಅನೇಕರು ಆ ಸಾಲಿಗೆ ಸೇರುತ್ತಾರೆ. ಇವರ ನಡುವೆ ವಿಶೇಷ ಎನ್ನಿಸುವ ಮತ್ತು ಇತಿಹಾಸ ತನ್ನನ್ನು ಹೇಗೆ ಗುರುತಿಸಬೇಕು ಎಂದು ನಿರ್ಧರಿಸುವ ಅವಕಾಶ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈಯಲ್ಲೇ ಇದೆ. ಜಾತಿ ಗಣತಿ, ವರದಿಯನ್ನು ಸಂಪುಟದಲ್ಲಿ ಮಂಡಿಸಿ ಅದನ್ನು ಜಾರಿಗೊಳಿಸುವ ಮತ್ತು ಒಳಮೀಸಲಾತಿ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳುವ ವಿಷಯದಲ್ಲಿ ಮುಖ್ಯಮಂತ್ರಿಯವರು ಇನ್ನಾದರೂ ಇಚ್ಛಾಶಕ್ತಿಯನ್ನು ಪ್ರಕಟಿಸಬೇಕಾಗಿದೆ.</p>



<p>ಈಗ ಮೂಡಾ, ವಾಲ್ಮೀಕಿ ಬಿಸಿ ಇಳಿದಿದೆ, ಸದ್ಯಕ್ಕೆ ಮುಖ್ಯಮಂತ್ರಿಯ ಬದಲಾವಣೆ ಚರ್ಚೆ ಹಿನ್ನೆಲೆಗೆ ಸರಿದಿದೆ. ಉಪಚುನಾವಣೆ ಸೋಲಿನ ನಂತರ ಬಿಜೆಪಿ ಮತ್ತು ಜೆಡಿಎಸ್‌ ತಮ್ಮ ಆಂತರಿಕ ಒಳಜಗಳಗಳನ್ನು ನಿವಾರಿಸುವುದರಲ್ಲಿ ಹೆಣಗುತ್ತಿವೆ. ಇದೇ ಸಮಯದಲ್ಲಿ ಸಿದ್ದರಾಮಯ್ಯನವರಿಗೆ ಜಾತಿ ಜನಗಣತಿ, ಒಳಮೀಸಲಾತಿ, ಸಾಮಾಜಿಕ ಬದಲಾವಣೆ, ಮೀಸಲಾತಿಯ ಕಾನೂನುಗಳನ್ನು ಜಾರಿಗೆ ತರಲು ಸುವರ್ಣಾವಕಾಶ. ಸಮಾಜದ ಎಲ್ಲಾ ವರ್ಗವನ್ನು ತೃಪ್ತಿಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಗಾಂಧಿ, ಅಂಬೇಡ್ಕರ್‌, ಅಬ್ರಾಹಂ ಲಿಂಕನ್‌ ವರೆಗೆ ಎಲ್ಲ ನಾಯಕರು ಪ್ರಗತಿಪರ ಮತ್ತು ಸಾಮಾಜಿಕ ಬದಲಾವಣೆಗಳನ್ನು ತರಲು ಮುಂದಾದಾಗ ಸಾಮಾಜದ ಪ್ರಿವಿಲೇಜ್ಡ್‌ ವರ್ಗಗಳಿಂದ ಕಠು ವಿಮರ್ಶೆ ಮತ್ತು ವಿರೋಧವನ್ನು ಎದುರಿಸಿದ್ದಾರೆ. ಇದರಿಂದ ಸಿದ್ದರಾಮಯ್ಯ ಏನು ಹೊರತಾಗಿಲ್ಲ. ಇದರ ಅರಿವು ಅವರಿಗಿದೆ.</p>



<p>ಆಂತರಿಕ ವಿರೋಧವನ್ನು ನಿಭಾಯಿಸಲಾಗದೇ, ವೊಕ್ಕಲಿಗ-ಲಿಂಗಾಯತ ಸಮುದಾಯದ ಕೋಪಕ್ಕೆ ಗುರಿಯಾಗುವ ಆಂತಂಕದಲ್ಲಿ ಮುಖ್ಯಮಂತ್ರಿಯವರು ದ್ವಂದ್ವದಲ್ಲಿ ಸಿಲುಕಿದಂತಿವೆ. ಈ ಸಮುದಾಯಗಳು ಕಾಂಗ್ರೆಸ್‌ ಅಥವಾ ಸಿದ್ದರಾಮಯ್ಯನವರನ್ನು ಎಂದೂ ಕೂಡ ದೊಡ್ಡ ಮಟ್ಟದಲ್ಲಿ ಬೆಂಬಲಿಸಿಲ್ಲ. ಕೆಲವು ಸ್ಥಳೀಯ ಕಾರಣದಿಂದ ಅಲ್ಲಲ್ಲಿ ಒಂದಷ್ಟು ವೊಕ್ಕಲಿಗ ಮತ್ತು ಲಿಂಗಾಯತ ಮತಗಳು ಕಾಂಗ್ರೆಸ್‌ಗೆ ಬಂದಿವೆ. ಅವು ಆಡಳಿತ ವಿರೋಧಿ ಮತಗಳೇ ಹೊರತು ಕಾಂಗ್ರೆಸ್‌ ನ ಕೋರ್‌ ವೋಟ್‌ಗಳಲ್ಲ. ಇಂದಿರಾಗಾಂಧಿಯವರ ಅವಧಿಯಿಂದ ಇತ್ತೀಚಿನ 2024 ರ ಲೋಕಸಭಾ ಚುನಾವಣೆ ವರೆಗೆ ಕಾಂಗ್ರೆಸ್‌ಗೆ ಬೆನ್ನೆಲುಬಾಗಿ ನಿಂತಿರುವುದು ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಗಳೂ. ಜೊತೆಯಲ್ಲಿ ಜಾತಿ ಗಣತಿ ಮತ್ತು ಎಸ್‌ಸಿ ಒಳ ಮೀಸಲಾತಿ ಯಾವುದೇ ಸಮುದಾಯದ ಹಕ್ಕುಗಳನ್ನು ಕಿತ್ತುಕೊಳ್ಳುವುದಿಲ್ಲ. ಹೀಗಿರುವಾಗ ಇದನ್ನು ಸರ್ಕಾರ ಜನಸಾಮಾನ್ಯರಿಗೆ ಅರ್ಥಮಾಡಿಸಬೇಕು.</p>



<p>ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್‌ ಗಾಂಧಿಯವರು ಲೋಕಸಭೆ ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಜಸಂಖ್ಯೆಗೆ ಅನುಸಾರ ಅಧಿಕಾರ ಮತ್ತು ಪ್ರಾತಿನಿಧ್ಯಕ್ಕೆ ಒತ್ತಾಯಿಸಿದ್ದರು. ಮುಖ್ಯಮಂತ್ರಿಯವರು ಈ ನಿಲುವಿಗೆ ಸಹಮತ ಹೊಂದಿದ್ದಾರೆ ಎಂಬುದನ್ನು ಕ್ರಿಯೆಯ ಮೂಲಕ ಸಾಬೀತುಪಡಿಸಬೇಕು. ಇನ್ನೂ ಕಾಲ ಮಿಂಚಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದಿವಂಗತ ದೇವರಾಜ ಅರಸು ಅವರ ದಾರಿಯಲ್ಲಿ ನಡೆಯಲು ಮುಕ್ತ ಅವಕಾಶವಿದೆ. ಇದಕ್ಕೆ ಧೃಢವಾದ ರಾಜಕೀಯ ಇಚ್ಛಾಶಕ್ತಿ ಒಂದು ಬೇಕಿದೆ.</p>



<p><strong><strong>ಲೇಖನ: ರಾಜೇಶ್‌ ಮಲವಳ್ಳಿ</strong></strong></p>
]]></content:encoded>
					
		
		
			</item>
		<item>
		<title>ಒಳಮೀಸಲಾತಿ ಜಾರಿಯ ಬಗ್ಗೆ ಬಿಜೆಪಿ ಪಕ್ಷದ ಬೂಟಾಟಿಕೆ ಬಯಲಾಗಿದೆ : ಸಿದ್ದರಾಮಯ್ಯ</title>
		<link>https://peepalmedia.com/hypocrisy-of-the-bjp-party-regarding-the-implementation-of-internal-reservation-has-been-exposed/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 28 Jul 2023 03:10:30 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[bjp]]></category>
		<category><![CDATA[internal reservation]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=24472</guid>

					<description><![CDATA[ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯಸಚಿವ ನಾರಾಯಣ ಸ್ವಾಮಿಯವರು ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶ ಇಲ್ಲ ಎಂದು ರಾಜ್ಯ ಸಭೆಗೆ ಉತ್ತರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. &#8216;ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶವಿಲ್ಲ&#8217; ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯಸಚಿವ ನಾರಾಯಣ ಸ್ವಾಮಿಯವರು ರಾಜ್ಯಸಭೆಗೆ ತಿಳಿಸಿದ್ದು ಈ ಮೂಲಕ ಒಳಮೀಸಲಾತಿಗೆ ಡಬಲ್ ಎಂಜಿನ್ ಸರ್ಕಾರ ಬದ್ಧವಾಗಿದೆ ಎಂಬ ಬಿಜೆಪಿಯ ಹಿಪಾಕ್ರಟಿಕ್ ನಡವಳಿಕೆ ಬಯಲಾಗಿದೆ&#8221; ಎಂದು ಸಿದ್ದರಾಮಯ್ಯನವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರದ ಪ್ರತಿನಿಧಿಯಾಗಿ ಸಚಿವ ನಾರಾಯಣ [&#8230;]]]></description>
										<content:encoded><![CDATA[
<p><font style="vertical-align: inherit;"><font style="vertical-align: inherit;"><strong>ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯಸಚಿವ ನಾರಾಯಣ ಸ್ವಾಮಿಯವರು ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶ ಇಲ್ಲ ಎಂದು ರಾಜ್ಯ ಸಭೆಗೆ ಉತ್ತರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.</strong></font></font></p>



<p><font style="vertical-align: inherit;"><font style="vertical-align: inherit;">&#8216;ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶವಿಲ್ಲ&#8217; ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯಸಚಿವ ನಾರಾಯಣ ಸ್ವಾಮಿಯವರು ರಾಜ್ಯಸಭೆಗೆ ತಿಳಿಸಿದ್ದು ಈ ಮೂಲಕ ಒಳಮೀಸಲಾತಿಗೆ ಡಬಲ್ ಎಂಜಿನ್ ಸರ್ಕಾರ ಬದ್ಧವಾಗಿದೆ ಎಂಬ ಬಿಜೆಪಿಯ ಹಿಪಾಕ್ರಟಿಕ್ ನಡವಳಿಕೆ ಬಯಲಾಗಿದೆ&#8221; ಎಂದು ಸಿದ್ದರಾಮಯ್ಯನವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</font></font></p>



<p>ಬಿಜೆಪಿ ಸರ್ಕಾರದ ಪ್ರತಿನಿಧಿಯಾಗಿ ಸಚಿವ ನಾರಾಯಣ ಸ್ವಾಮಿ ಅವರ ಪ್ರತಿಕ್ರಿಯೆಯನ್ನು ಉಲ್ಲೇಖಿಸಿ, &#8220;ಒಳಮೀಸಲಾತಿ ವಿಷಯದ ಕಟ್ಲೆ ಸುಪ್ರಿಂ ಕೋರ್ಟ್ ನಲ್ಲಿ ವಿಚಾರಣೆಯಲ್ಲಿದೆ. ಸುಪ್ರೀಂಕೋರ್ಟ್ ನ ಐವರು ನ್ಯಾಯಾಧೀಶರ ಪೀಠವು ಒಳಮೀಸಲಾತಿ ವಿಷಯವನ್ನು ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾವಣೆ ಮಾಡಬೇಕೆಂದು ಮುಖ್ಯನ್ಯಾಯಮೂರ್ತಿಯನ್ನು ಕೋರಿದ್ದಾರೆ. ಇದರಿಂದಾಗಿ ಇದಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ‘ಸಬ್ ಜುಡೀಸ್’ ಆಗುತ್ತದೆ ಎಂದು ಬಿಜೆಪಿ ಸದಸ್ಯ ಜಿ.ವಿ.ಎಲ್. ನರಸಿಂಹರಾವ್ ಅವರ ಪ್ರಶ್ನೆಗೆ ನೀಡಿರುವ ಉತ್ತರದಲ್ಲಿ ಸಚಿವ ನಾರಾಯಣ ಸ್ವಾಮಿ ಜಾರಿಕೊಂಡಿದ್ದಾರೆ.&#8221; ಎಂದು ಸಿದ್ದರಾಮಯ್ಯ ಒಳಮೀಸಲಾತಿ ವಿಚಾರದಲ್ಲಿ ಬಿಜೆಪಿ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.</p>



<p>ಹಾಗೆಯೇ &#8220;ಒಳಒಳಮೀಸಲಾತಿಗಾಗಿ ಸಂವಿಧಾನದ 341ನೇ ಪರಿಚ್ಚೇದಕ್ಕೆ ತಿದ್ದುಪಡಿ ಮಾಡಬೇಕಾಗುತ್ತದೆ ಎಂದು ಈ ಉದ್ದೇಶಕ್ಕಾಗಿಯೇ ರಚಿಸಲಾಗಿರುವ ರಾಷ್ಟ್ರೀಯ ಆಯೋಗ ಶಿಫಾರಸು ಮಾಡಿತ್ತು. ಈ ಬಗ್ಗೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅಭಿಪ್ರಾಯಗಳನ್ನು ನೀಡಲು ಕೋರಲಾಗಿತ್ತು. ಆದರೆ ಇಲ್ಲಿಯ ವರೆಗೆ 20 ರಾಜ್ಯ ಸರ್ಕಾರಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಮಾತ್ರ ತಮ್ಮ ಅಭಿಪ್ರಾಯವನ್ನು ತಿಳಿಸಿದೆ’’ ಎಂದು ಹೇಳಿದ್ದಾರೆ.</p>



<p>ಈ 20 ರಾಜ್ಯಗಳಲ್ಲಿ ಏಳು ರಾಜ್ಯಗಳು ಮಾತ್ರ ಒಳಮೀಸಲಾತಿಗೆ ಒಪ್ಪಿಗೆ ಸೂಚಿಸಿದ್ದು ಉಳಿದ 13 ರಾಜ್ಯಗಳು ವಿರೋಧಿಸಿವೆ ಎಂದು ಹೇಳುವ ಮೂಲಕ ಬಹುಸಂಖ್ಯಾತ ರಾಜ್ಯಗಳು ಒಳಮೀಸಲಾತಿಗೆ ವಿರುದ್ಧವಾಗಿವೆ ಎಂಬ ಸೂಚನೆಯನ್ನೂ ಸಚಿವ ನಾರಾಯಣ ಸ್ವಾಮಿ ನೀಡಿದ್ದಾರೆ.<br>ಒಳಮೀಸಲಾತಿ ಜಾರಿಗೆ ತಮ್ಮ ಪಕ್ಷ ಬದ್ಧವಾಗಿದ್ದು ನರೇಂದ್ರ ಮೋದಿ ಸರ್ಕಾರ ಶೀಘ್ರದಲ್ಲಿಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರವಸೆ ನೀಡಿದ್ದ ಬಿಜೆಪಿ ನಾಯಕರು ಯಾಕೆ ಆ ಸಮಯದಲ್ಲಿ ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದಾಗಲಿ, ಈ ಬಗ್ಗೆ ಕೈಗೊಳ್ಳುವ ನಿರ್ಧಾರ ಸಬ್ ಜುಡಿಸ್ ಆಗುತ್ತದೆ ಎಂದಾಗಲಿ ಯಾಕೆ ಹೇಳಿಲ್ಲ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p>



<p>2020ರ ಆಗಸ್ಟ್ ತಿಂಗಳಲ್ಲಿಯೇ ಐವರು ನ್ಯಾಯಾಧೀಶರ ಪೀಠವು ಏಳು ನ್ಯಾಯಾಧೀಶರ ಪೀಠ ರಚಿಸುವಂತೆ ಕೋರಿಕೆ ಸಲ್ಲಿಸಿದ್ದರೂ ಇಲ್ಲಿಯ ವರೆಗೆ ಯಾಕೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿಲ್ಲ? ಇದೇ ವಿಷಯವನ್ನು ನಾವು ಪ್ರಶ್ನಿಸಿದಾಗ ಸಂವಿಧಾನಕ್ಕೆ ತಿದ್ದುಪಡಿ ಮಾಡದೆಯೇ ಒಳಮೀಸಲಾತಿ ಜಾರಿಗೊಳಿಸುವುದಾಗಿ ಸುಳ್ಳು ಭರವಸೆ ನೀಡಿದ್ದು ಯಾಕೆ? ಎಂದು ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.</p>



<p>ಬಹಿರಂಗವಾಗಿ ದಲಿತ ಸಮುದಾಯದ ಬಗ್ಗೆ ಹುಸಿಪ್ರೀತಿ-ಕಾಳಜಿ ವ್ಯಕ್ತಪಡಿಸುವ ಬಿಜೆಪಿ ಮತ್ತು ಸಂಘ ಪರಿವಾರ, ಅಂತರಂಗದಲ್ಲಿ ಮೀಸಲಾತಿಯೂ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಉಪಕ್ರಮಗಳಿಗೆ ವಿರುದ್ಧವಾಗಿದೆ ಎನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಎಂದು ಸಿದ್ದರಾಮಯ್ಯ ಬಿಜೆಪಿ ಪಕ್ಷದ ನಿಲುವನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>



<p>ಕರ್ನಾಟಕ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ರಾಜ್ಯ ಬಿಜೆಪಿ ಸರ್ಕಾರ ತಾವು ಒಳಮೀಸಲಾತಿ ಪರವಾಗಿದ್ದೇವೆ. ಒಳಮೀಸಲಾತಿ ಅಡಿಯಲ್ಲಿ ಹಲವಷ್ಟು ಸಮುದಾಯಕ್ಕೆ ನ್ಯಾಯ ಕೊಡಿಸುವುದು ನಮ್ಮ ಧ್ಯೇಯ ಎಂಬಂತಹ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದವು. ಅಷ್ಟೆ ಅಲ್ಲ, ಎಷ್ಟೋ ಮಂದಿ ಒಳಮೀಸಲಾತಿ ಹೋರಾಟಗಾರರನ್ನೂ ಸಹ ಬಿಜೆಪಿ ಪಕ್ಷಕ್ಕೆ ತಾನು ಸೆಳೆದುಕೊಳ್ಳುವ ಪ್ರಯತ್ನವನ್ನೂ ಮಾಡಿತ್ತು. ಆದರೆ ಒಳಮೀಸಲಾತಿ ವಿಚಾರದಲ್ಲಿ ಕೇಂದ್ರ ಸಚಿವ ನಾರಾಯಣ ಸ್ವಾಮಿ ನೀಡಿರುವ ಹೇಳಿಕೆ ಸಧ್ಯ ಬಿಜೆಪಿ ಪಕ್ಷಕ್ಕೆ ಒಳಮೀಸಲಾತಿ ವಿಚಾರದಲ್ಲಿ ಇರುವ ನಿಲುವನ್ನು ಸ್ಪಷ್ಟಪಡಿಸಿದಂತಿದೆ.</p>
]]></content:encoded>
					
		
		
			</item>
		<item>
		<title>ಒಳ ಮೀಸಲಾತಿ : ಕೇಂದ್ರದ ಬಿಜೆಪಿ ಸರ್ಕಾರದ ವಂಚನೆ ಬಯಲು</title>
		<link>https://peepalmedia.com/internal-reservation-the-fraud-of-the-bjp-government-at-the-center-is-exposed/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 28 Jul 2023 02:20:16 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[bjp]]></category>
		<category><![CDATA[internal reservation]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=24468</guid>

					<description><![CDATA[ಒಳಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಹೋರಾಟಗಾರರ ತುರ್ತು ಗಮನಕ್ಕೆ &#8211; ಚಿಂತಕರಾದ ಶಿವಸುಂದರ್ ಅವರ ಬರಹದಲ್ಲಿ ಆತ್ಮೀಯರೇಇಷ್ಟು ದಿನಗಳ ಕಾಲ ತಾನು ಒಳಮೀಸಲಾತಿಯ  ಪರ ಎಂದು ಸೋಗಲಾಡಿ ನಿಲುವನ್ನು ತೋರುತ್ತಿದ್ದ ಬಿಜೆಪಿಯ ಅಸಲಿಯತ್ತು ನಿನ್ನೆ ಸಂಸತ್ತಿನಲ್ಲಿ ನಡೆದ ಪ್ರಶ್ನೋತ್ತರಗಳಲ್ಲಿ ಬಯಲಾಗಿದೆ. 26-07-2023, ರಂದು ರಾಜ್ಯಸಭೆಯಲ್ಲಿ ಬಿಜೆಪಿಯ ಸದಸ್ಯರಾದ ಜಿ.ವಿ.ಎಲ್ ನರಸಿಂಹರಾವ್ ಅವರು1.ಒಳಮೀಸಲಾತಿಯ ಬಗ್ಗೆ ಈವರೆಗೆ ಬೇರೆಬೇರೆ ರಾಜ್ಯಗಳು ನೀಡಿರುವ ಅಭಿಪ್ರಾಯಗಳ ಕುರಿತು,2. ಕೇಂದ್ರ ಸರ್ಕಾರದ ಮುಂದೆ ಸಂವಿಧಾನಕ್ಕೆ ತಿದ್ದುಪಡಿ ತಂದು ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಅಧಿಕಾರ ನೀಡುವ [&#8230;]]]></description>
										<content:encoded><![CDATA[
<p><mark style="background-color:rgba(0, 0, 0, 0)" class="has-inline-color has-vivid-red-color"><strong>ಒಳಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಹೋರಾಟಗಾರರ ತುರ್ತು ಗಮನಕ್ಕೆ </strong>&#8211; ಚಿಂತಕರಾದ ಶಿವಸುಂದರ್ ಅವರ ಬರಹದಲ್ಲಿ</mark></p>



<p>ಆತ್ಮೀಯರೇ<br>ಇಷ್ಟು ದಿನಗಳ ಕಾಲ ತಾನು ಒಳಮೀಸಲಾತಿಯ  ಪರ ಎಂದು ಸೋಗಲಾಡಿ ನಿಲುವನ್ನು ತೋರುತ್ತಿದ್ದ <strong>ಬಿಜೆಪಿಯ ಅಸಲಿಯತ್ತು ನಿನ್ನೆ ಸಂಸತ್ತಿನಲ್ಲಿ ನಡೆದ ಪ್ರಶ್ನೋತ್ತರಗಳಲ್ಲಿ ಬಯಲಾಗಿದೆ. </strong>26-07-2023, ರಂದು ರಾಜ್ಯಸಭೆಯಲ್ಲಿ ಬಿಜೆಪಿಯ ಸದಸ್ಯರಾದ ಜಿ.ವಿ.ಎಲ್ ನರಸಿಂಹರಾವ್ ಅವರು<br>1.ಒಳಮೀಸಲಾತಿಯ ಬಗ್ಗೆ ಈವರೆಗೆ ಬೇರೆಬೇರೆ ರಾಜ್ಯಗಳು ನೀಡಿರುವ ಅಭಿಪ್ರಾಯಗಳ ಕುರಿತು,<br>2. ಕೇಂದ್ರ ಸರ್ಕಾರದ ಮುಂದೆ ಸಂವಿಧಾನಕ್ಕೆ ತಿದ್ದುಪಡಿ ತಂದು ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಅಧಿಕಾರ ನೀಡುವ ಯೋಜನೆ ಇದೆಯೇ ಎಂಬುದರ ಕುರಿತು,<br>3. ಹಾಗೂ ಅಂಥ ಯೋಜನೆಯಿದ್ದಲ್ಲಿ ಎಷ್ಟು ಕಾಲಾವಧಿಯೊಳಗೆ ಅದು ಜಾರಿಯಾಗಲಿದೆ ಎಂಬುದರ ಕುರಿತು<br>ಪ್ರಶ್ನೆಗಳನ್ನು ಕೇಳಿದ್ದಾರೆ.</p>



<p>ಅದಕ್ಕೆ ಮೋದಿ ಸರ್ಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ <strong>ಮಂತ್ರಿ ನಾರಾಯಣಸ್ವಾಮಿ</strong>ಯವರು ನೀಡಿರುವ ಉತ್ತರ ಇದು:<br>&#8211; ಸಂವಿಧಾನದಲ್ಲಿ ಈಗಿರುವ ಅವಕಾಶಗಳಂತೆ ಒಳಮೀಸಲಾತಿಯನ್ನು ಕಲ್ಪಿಸಲು ಸಾಧ್ಯವಾಗದು.<br>&#8211; ಇದರ ಬಗ್ಗೆ ರಚಿಸಲಾಗಿದ್ದ ರಾಷ್ಟ್ರೀಯ ಆಯೋಗವು ಒಳಮೀಸಲಾತಿಯನ್ನು ಕಲ್ಪಿಸಿಕೊಡುವಂತೆ ಸಂವಿಧಾನದ ಆರ್ಟಿಕಲ್ 341 ಕ್ಕೆ ತಿದ್ದುಪಡಿ ತರಲು ಶಿಫಾರಸ್ಸು ಮಾಡಿತ್ತು.<br>&#8211; ಈ ಶಿಫಾರಸ್ಸಿನ ಬಗ್ಗೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅಭಿಪ್ರಾಯಗಳನ್ನು ನೀಡುವಂತೆ ಕೋರಲಾಗಿತ್ತು.<br>&#8211; ಈವರೆಗೆ 20ರಾಜ್ಯ ಸರ್ಕಾರಗಳು ಮತ್ತು 2  ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅಭಿಪ್ರಾಯಗಳನ್ನು ನೀಡಿವೆ.<br>ಅದರಲ್ಲಿ<br>&#8211; 7 ರಾಜ್ಯಗಳು ಒಳಮೀಸಲಾತಿಯ  ಪರವಾಗಿಯೂ.<br>&#8211; 13 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶವು ಒಳಮೀಸಲಾತಿಯ ವಿರುದ್ಧವಾಗಿಯೂ ಅಭಿಪ್ರಾಯಗಳನ್ನು ನೀಡಿವೆ.</p>



<figure class="wp-block-image size-large"><img decoding="async" width="723" height="1024" src="https://peepalmedia.com/wp-content/uploads/2023/07/IMG-20230728-WA0000-723x1024.jpg" alt="" class="wp-image-24469" srcset="https://peepalmedia.com/wp-content/uploads/2023/07/IMG-20230728-WA0000-723x1024.jpg 723w, https://peepalmedia.com/wp-content/uploads/2023/07/IMG-20230728-WA0000-212x300.jpg 212w, https://peepalmedia.com/wp-content/uploads/2023/07/IMG-20230728-WA0000-768x1087.jpg 768w, https://peepalmedia.com/wp-content/uploads/2023/07/IMG-20230728-WA0000-150x212.jpg 150w, https://peepalmedia.com/wp-content/uploads/2023/07/IMG-20230728-WA0000-300x425.jpg 300w, https://peepalmedia.com/wp-content/uploads/2023/07/IMG-20230728-WA0000-696x985.jpg 696w, https://peepalmedia.com/wp-content/uploads/2023/07/IMG-20230728-WA0000.jpg 904w" sizes="(max-width: 723px) 100vw, 723px" /></figure>





<p>ಎಲ್ಲಕ್ಕಿಂತ ಮುಖ್ಯವಾಗಿ..<br>&#8211; ಹಾಲಿ ಈ ವಿಷಯವು ಸಬ್ -ಜುಡೀಸ್ &#8211; ನ್ಯಾಯಾಲಯಾಧೀನವಾಗಿದೆ.<br>&#8211; ಐವರು ನ್ಯಾಯಾಧೀಶರ ಪೀಠವು ಈ ವಿಷಯವನ್ನು ಏಳು ನ್ಯಾಯಾಧೀಶರ ಅಥವಾ ಹೆಚ್ಚಿನ ಪೀಠಕ್ಕೆ ವರ್ಗಾಯಿಸಬೇಕೆಂದು ಕೋರಿದೆ ಎಂದು ಉತ್ತರವನ್ನು ಮುಗಿಸಿದ್ದಾರೆ.</p>



<p>ಆದರೆ ಕರ್ನಾಟಕದ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಘಟಾನುಘಟಿಗಳೆಲ್ಲಾ ಒಳಮೀಸಲಾತಿ ಒದಗಿಸಲು ಮೋದಿ ಸರ್ಕಾರ ಕಟಿಬದ್ಧವಾಗಿದೆ ಎಂದೆಲ್ಲಾ ಬೊಗಳೆ ಬಿಟ್ಟಿದ್ದರು.<br>ಆದರೆ ಈ ಉತ್ತರದಲ್ಲಿ ಸ್ಪಷ್ಟವಾಗಿರುವಂತೆ</p>



<p>&#8211; ಒಳಮೀಸಲಾತಿಯನ್ನು ಸಂವಿಧಾನ ತಿದ್ದುಪಡಿಯ ಮೂಲಕ ತರುವ ಉದ್ದೇಶವಿದೆಯೇ ಎಂಬ ಪ್ರಶ್ನೆಗೆ ಸರ್ಕಾರ ಉತ್ತರವನ್ನೇ ಕೊಡದೆ ಜಾರಿ ಕೊಂಡಿದೆ.</p>



<p>-ಅಷ್ಟು ಮಾತ್ರವಲ್ಲ.<br>ಈ ವಿಷಯವು ಸಬ್&nbsp; ಜುಡೀಸ್- ಅರ್ಥಾತ್ ನ್ಯಾಯಾಲಯದ ಅಧೀನದಲ್ಲಿರುವುದರಿಂದ ಸರ್ಕಾರ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗದು ಎಂದು ಸ್ಪಷ್ಟವಾಗಿ ಹೇಳಿದೆ.</p>



<p>&#8211; ಆದರೆ ಸುಪ್ರೀಂ ಕೋರ್ಟಿನ ಅಧೀನದಲ್ಲಿರುವ ಅಥವಾ ಸುಪ್ರೀಂ ಕೋರ್ಟು ಆದೇಶ ನೀಡಿದ್ದರು ಅದಕ್ಕೆ ತದ್ವಿರುದ್ಧವಾದ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿಲ್ಲವೇ? ಇತಿಹಾಸದಲ್ಲಿ ಸಂಸತ್ತು ತನ್ನ ಸಾರ್ವಭೌಮತೆಯನ್ನು ಚಲಾಯಿಸಿ ಸಂವಿಧಾನ ತಿದ್ದುಪಡಿಯ ಮೂಲಕ ಸುಪ್ರೀಂ ಕೋರ್ಟು ಆದೇಶಗಳನ್ನು ಅಮಾನ್ಯಗೊಳಿಸಿಲ್ಲವೇ?</p>



<p>ಅಷ್ಟೆಲ್ಲ ಏಕೆ? ದೆಹಲಿ ಸರ್ಕಾರಕ್ಕೆ ಅಧಿಕಾರಿಶಾಹಿಯ ಮೇಲಿನ ಅಧಿಕಾರದ ವ್ಯಾಪ್ತಿಯನ್ನು ಸುಪ್ರೀಂ ಕೋರ್ಟು ಎತ್ತಿ ಹಿಡಿದರೂ ಮೋದಿ ಸರ್ಕಾರ ಅದನ್ನು ಅಮಾನ್ಯಗೊಳಿಸಲು ಸುಗ್ರೀವಾಜ್ಞೆ ತರಲಿಲ್ಲವೇ? ಈಗ ಅದನ್ನು ಸಂಸತ್ತಿನಲ್ಲಿ ಮಸೂದೆಯಾಗಿ ಮಂಡಿಸುತ್ತಿಲ್ಲವೇ?<br><br>ಸುಪ್ರೀಂ ಕೋರ್ಟಿನ ಉನ್ನತ ಪೀಠ ಈ ವಿಷಯದಲ್ಲಿ ಇನ್ನು ರಚನೆಯೇ ಆಗಿಲ್ಲ. ಆದರೆ ಸುಪ್ರೀಂ ಪೀಠ ವಿಚಾರಣಾ ನೋಟೀಸ್ ಕೊಟ್ಟ ವಿಷಯಗಳಲ್ಲೂ ಸಂಸತ್ತು ಕಾನೂನು ಮಾಡಿಲ್ಲವೇ? ಸಂವಿಧಾನ ತಿದ್ದುಪಡಿಗಳನ್ನು ಮಾಡಿಲ್ಲವೇ?</p>



<p><strong>ಅಂದರೆ ಮೋದಿ ಸರ್ಕಾರ ಒಳಮೀಸಲಾತಿ ನಿರಾಕರಿಸಲು ಸಬ್ ಜುಡೀಸ್ ಸಬೂಬು ಹೇಳುತ್ತಿದೆಯಷ್ಟೆ.</strong><br>&#8211; ಅದರ ಜೊತೆಗೆ 20 ರಾಜ್ಯಗಳಲ್ಲಿ ಒಳಮೀಸಲಾತಿಯನ್ನು ಒಪ್ಪಿರುವುವು ಕೇವಲ 7 ರಾಜ್ಯಗಳು- ಉಳಿದ 13 ರಾಜ್ಯಗಳು ವಿರೋಧಿಸಿವೆ ಎಂಬ ನೆಪವೂ ಈಗ ಮೋದಿ ಸರ್ಕಾರ ಮುಂದಿಟ್ಟಿದೆ.<br>&#8211; ವಾಸ್ತವದಲ್ಲಿ ಸುಪ್ರೀಂ ನ ಐದು ನ್ಯಾಯಾಧೀಶರ ಪೀಠ ಮುಖ್ಯ ನ್ಯಾಯಾಧೀಶರಿಗೆ ಈ ವಿಷಯದ ಬಗ್ಗೆ..</p>



<p>ಏಳು ನ್ಯಾಯಾಧೀಶರ ಪೀಠ ರಚಿಸಲು ಸಲಹೆ ಮಾಡಿದ್ದು 2020ರ ಆಗಸ್ಟ್ 20 ರಂದು, ದವಿಂದರ್ ಸಿಂಗ್ ವರ್ಸಸ್ ಸ್ಟೇಟ್ ಆಫ್ ಪಂಜಾಬ್ ಪ್ರಕರಣದಲ್ಲಿ. ಹಾಗಿದ್ದರೂ ಕೂಡ ಕಳೆದ ಎರಡು ವರ್ಷಗಳಲ್ಲಿ ಒಳಮೀಸಲಾತಿ ವಿಷಯವು ಸಬ ಜುಡೀಸ್ ಆಗಿದೆ ಎಂದು ಒಮ್ಮೆಯೂ ಹೇಳದೆ ಕರ್ನಾಟಕದ ಬಿಜೆಪಿ , ಸಂಘಪರಿವಾರ ಮತ್ತು ಕೇಂದ್ರದ ಮೋದಿ ಸರ್ಕಾರ ಒಳಮೀಸಲಾತಿ ಕಲ್ಪಿಸುವುದಾಗಿ ಭರವಸೆ ಕೊಟ್ಟಿದ್ದೇಕೆ?</p>



<p>ಇದೆ ಪ್ರಶ್ನೆಯನ್ನು ಹೊರಟಗಾರರು ಕೇಳಿದಾಗ ಸಂವಿಧಾನ ತಿದ್ದುಪಡಿಯನ್ನು ಮಾಡದೆ, ಸುಪ್ರೀಂ ಕೋರ್ಟಿಗೂ ಹೋಗದೆ ಹೇಗೋ ಒಳಮೀಸಲಾತಿ ಕೊಟ್ಟೆ ತೀರುವುದಾಗಿ ಬಿಜೆಪಿ ಮತ್ತು ಸಂಘಪರಿವಾರದ ಮುಖಂಡರು ಸಮುದಾಯಕ್ಕೆ ಮೋಸ ಮಾಡಿದ್ದೇಕೆ?</p>



<p>ಸಂಘಪರಿವಾರ ಉತ್ತರಿಸುತ್ತದೆಯೇ? ಉತ್ತರಿಸುವಂತೆ ಸಮುದಾಯ ಪಟ್ಟುಹಿಡಿದು ಕೇಳುತ್ತದೆಯೇ ಅಥವಾ 2024ರ ಚುನಾವಣೆಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ಬಣ್ಣದ ಮಾತಾಡಿ ಸಮುದಾಯವನ್ನು ಮೋಸಗೊಳಿಸುವ ಪ್ರಯತ್ನಗಳನ್ನು ಮಾಡುತ್ತದೆಯೇ?<br>ದೇಶಮಟ್ಟದಲ್ಲಿ ಒಳಮೀಸಲಾತಿಗೆ ದೊಡ್ಡ ಹೋರಾಟ ಕಟ್ಟದೆ&#8230; ಬಿಜೆಪಿಯನ್ನೂ, ಸಂಘಪರಿವಾರವನ್ನೋ, ಇತರ ಪಕ್ಷಗಳನ್ನೂ ನಂಬಿ ಕೂತರೆ ಒಳಮೀಸಲಾತಿ ಕನ್ನಡಿಯೊಳಗಿನ ಗಂಟಾಗಿಯೇ ಉಳಿಯುವುದಿಲ್ಲವೇ?<br>ಜಸ್ಟ್ ಆಸ್ಕಿಂಗ್<br>-ಶಿವಸುಂದರ್</p>
]]></content:encoded>
					
		
		
			</item>
		<item>
		<title>ದಲಿತರೇನು ಕ್ರಿಮಿನಲ್‌ಗಳೇ?: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ</title>
		<link>https://peepalmedia.com/are-dalits-criminals-congress-attack-on-state-government/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 12 Dec 2022 07:28:10 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[Dalit fighters]]></category>
		<category><![CDATA[DSS]]></category>
		<category><![CDATA[india]]></category>
		<category><![CDATA[internal reservation]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=18284</guid>

					<description><![CDATA[ಬೆಂಗಳೂರು: ಒಳಮೀಸಲಾತಿ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ದಲಿತ ಹೋರಾಟಗಾರರ ಮೇಲೆ ಪೊಲೀಸರ ಲಾಠಿ ಚಾರ್ಜ್‌ ಮತ್ತು ಬಂಧನವನ್ನು ವಿರೋಧಿಸಿ, ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ ಘಟಕ ವಾಗ್ದಾಳಿ ನಡೆಸಿದೆ. ಈ ಕುರಿತು ರಾಜ್ಯ ಕಾಂಗ್ರೆಸ್‌ ಘಟಕ ಟ್ವಿಟ್‌ ಮಾಡಿದ್ದು, ಒಳಮೀಸಲಾತಿ ಜಾರಿಗಾಗಿ ಆಗ್ರಹಿಸಿ ಪ್ರತಿಭಟಿಸುತ್ತಿದ್ದ ದಲಿತ ಹೋರಾಟಗಾರರ ಮೇಲೆ ಲಾಠಿ ಬೀಸಿದ &#160;ರಾಜ್ಯ ಬಿಜೆಪಿ ಸರ್ಕಾರ ತನ್ನೊಳಗಿದ್ದ ದಲಿತರ ಮೇಲಿನ ದ್ವೇಷ, ಅಸಹನೆಯನ್ನು ಕಾರಿಕೊಂಡಿದೆ. ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದಿದ್ದ ಸರ್ಕಾರವೇ ಇಂದು [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಒಳಮೀಸಲಾತಿ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ದಲಿತ ಹೋರಾಟಗಾರರ ಮೇಲೆ ಪೊಲೀಸರ ಲಾಠಿ ಚಾರ್ಜ್‌ ಮತ್ತು ಬಂಧನವನ್ನು ವಿರೋಧಿಸಿ, ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ ಘಟಕ ವಾಗ್ದಾಳಿ ನಡೆಸಿದೆ.</p>



<p>ಈ ಕುರಿತು ರಾಜ್ಯ ಕಾಂಗ್ರೆಸ್‌ ಘಟಕ ಟ್ವಿಟ್‌ ಮಾಡಿದ್ದು, ಒಳಮೀಸಲಾತಿ ಜಾರಿಗಾಗಿ ಆಗ್ರಹಿಸಿ ಪ್ರತಿಭಟಿಸುತ್ತಿದ್ದ ದಲಿತ ಹೋರಾಟಗಾರರ ಮೇಲೆ ಲಾಠಿ ಬೀಸಿದ &nbsp;ರಾಜ್ಯ ಬಿಜೆಪಿ ಸರ್ಕಾರ ತನ್ನೊಳಗಿದ್ದ ದಲಿತರ ಮೇಲಿನ ದ್ವೇಷ, ಅಸಹನೆಯನ್ನು ಕಾರಿಕೊಂಡಿದೆ. ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದಿದ್ದ ಸರ್ಕಾರವೇ ಇಂದು ಲಾಠಿಚಾರ್ಜ್ ನಡೆಸಿ ಜಾರಿಯನ್ನು ನಿರಾಕರಿಸುವ ಸಂದೇಶ ನೀಡಿದೆ ಎಂದು ಕಿಡಿಕಾರಿದೆ.</p>



<p>ರಾಜ್ಯ ಬಿಜೆಪಿ ಸರ್ಕಾರದಲ್ಲಿ ಕೇಸರಿ ಶಾಲು ಹೊದ್ದು ಪುಂಡಾಟಿಕೆ ನಡೆಸುವವರಿಗೆ &#8211; ರಾಜಮರ್ಯಾದೆ ಭ್ರಷ್ಟಾಚಾರ, ಅಕ್ರಮ ನಡೆಸುವವರಿಗೆ &#8211; ರಾಜಮರ್ಯಾದೆ ರೌಡಿಗಳಿಗೆ, ಕ್ರಿಮಿನಲ್‌ಗಳಿಗೆ &#8211; ರಾಜಮರ್ಯಾದೆ ಆದರೆ ಶಾಂತಿಯಿಂದ ಪ್ರತಿಭಟಿಸುವ ದಲಿತ ಹೋರಾಟಗಾರರಿಗೆ ಮಾತ್ರ – ಲಾಠಿಏಟು. ಏಕೆ ಬಿಜೆಪಿ ದೃಷ್ಟಿಯಲ್ಲಿ ದಲಿತರು ಕ್ರಿಮಿನಲ್‌ಗಳಂತೆ ಕಾಣುವರೇ? ಎಂದು ರಾಜ್ಯ ಕಾಂಗ್ರೆಸ್‌ ಘಟಕ ಆಕ್ರೋಶ ವ್ಯಕ್ತ ಪಡಿಸಿದೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಒಳಮೀಸಲಾತಿ ಜಾರಿಗಾಗಿ ಆಗ್ರಹಿಸಿ ಪ್ರತಿಭಟಿಸುತ್ತಿದ್ದ ದಲಿತ ಹೋರಾಟಗಾರರ ಮೇಲೆ ಲಾಠಿ ಬೀಸಿದ <a href="https://twitter.com/BJP4Karnataka?ref_src=twsrc%5Etfw">@BJP4Karnataka</a> ಸರ್ಕಾರ ತನ್ನೊಳಗಿದ್ದ ದಲಿತರ ಮೇಲಿನ ದ್ವೇಷ, ಅಸಹನೆಯನ್ನು ಕಾರಿಕೊಂಡಿದೆ.<br><br>ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದಿದ್ದ ಸರ್ಕಾರವೇ ಇಂದು ಲಾಠಿಚಾರ್ಜ್ ನಡೆಸಿ ಜಾರಿಯನ್ನು ನಿರಾಕರಿಸುವ ಸಂದೇಶ ನೀಡಿದೆ.</p>&mdash; Karnataka Congress (@INCKarnataka) <a href="https://twitter.com/INCKarnataka/status/1602189905668747265?ref_src=twsrc%5Etfw">December 12, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
		<item>
		<title>ಒಳಮೀಸಲಾತಿ ಜಾರಿಗೆ ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ ಆಗ್ರಹ</title>
		<link>https://peepalmedia.com/a-joint-conference-of-dalit-organizations-demanding-implementation-of-internal-reservation/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 06 Dec 2022 11:20:10 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[Dalit organizations]]></category>
		<category><![CDATA[india]]></category>
		<category><![CDATA[internal reservation]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=17736</guid>

					<description><![CDATA[ಬೆಂಗಳೂರು: ಪರಿಶಿಷ್ಟ ಜಾತಿ/ವರ್ಗಗಳಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೆ ತರಬೇಕು. ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಟ್ಟು ಕಡ್ಡಾಯವಾಗಿ ಅನುಷ್ಟಾನಗೊಳಿಸಬೇಕು ಎಂದು ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ ಆಗ್ರಹಿಸಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನದವಾದ ಇಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ‘ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ’ ದಲ್ಲಿ ಹದಿನೈದು ಪ್ರಮುಖ ನಿರ್ಣಯಗಳನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಅಂಗೀಕರಿಸಲಾದ ನಿರ್ಣಯಗಳು ಈ ಕೆಳಕಂಡಂತಿವೆ:]]></description>
										<content:encoded><![CDATA[
<p><strong>ಬೆಂಗಳೂರು: </strong>ಪರಿಶಿಷ್ಟ ಜಾತಿ/ವರ್ಗಗಳಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೆ ತರಬೇಕು. ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಟ್ಟು ಕಡ್ಡಾಯವಾಗಿ ಅನುಷ್ಟಾನಗೊಳಿಸಬೇಕು ಎಂದು ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ ಆಗ್ರಹಿಸಿದೆ.</p>



<p>ಬಾಬಾಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನದವಾದ ಇಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ‘ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ’ ದಲ್ಲಿ ಹದಿನೈದು ಪ್ರಮುಖ ನಿರ್ಣಯಗಳನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.</p>



<p>ಅಂಗೀಕರಿಸಲಾದ ನಿರ್ಣಯಗಳು ಈ ಕೆಳಕಂಡಂತಿವೆ:</p>



<ol class="wp-block-list">
<li>ಭಾರತದ ವೈವಿದ್ಯಮಯ ಸೌಹಾರ್ಧಯುತ ಸಾಮರಸ್ಯ ಮತ್ತು ಬಹುತ್ವದ ಸಂಸೃತಿಯ ಮೇಲೆ ಮೇಲು -ಕೀಳು, ಸ್ಪೃಶ್ಯ- ಅಸ್ಪೃಶ್ಯ, ಶ್ರೇಷ್ಠತೆ &#8211; ಕನಿಷ್ಠತೆಯ ತಾರತಮ್ಯದ ವೈದಿಕಶಾಹಿಯ ಏಕ ಸಂಸ್ಕೃತಿಯನ್ನು ಹೇರುವಂತಹ ದಬ್ಬಾಳಿಕೆಯ ನೀತಿಯನ್ನು ಈ ಸಾಂಸ್ಕೃತಿಕ ಪ್ರತಿರೋಧ ಸಮಾವೇಶವು ತೀವ್ರವಾಗಿ ಖಂಡಿಸುತ್ತದೆ. ಮತ್ತು ಇಂತಹ ವೈವಿಧ್ಯಮಯ, ಸೌಹಾರ್ದಯುತ, ಸಾಮರಸ್ಯದ ಬಹುತ್ವದ ಸಾಂಸ್ಕೃತಿಕ ಅಸ್ಮಿತೆಯ ಬದುಕನ್ನು ಉಳಿಸಿಕೊಳ್ಳಲು ಈ ಪ್ರತಿರೋಧ ಸಮಾವೇಶವು ಸಂಕಲ್ಪ ಮಾಡುತ್ತದೆ.</li>



<li>ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿಯ ಸಾಧನದಂತೆ ವರ್ತಿಸುತ್ತಿರುವ ಸರ್ಕಾರದ ನಡೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ. ಇಂತಹ ಚಾತುರ್ವರ್ಣ ಮತ್ತು ಜಾತೀಯತೆ ತಾರತಮ್ಯಗಳನ್ನು ಎತ್ತಿ ಹಿಡಿಯುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸುತ್ತೇವೆ. ಭಾರತದ ಸಂವಿಧಾನ ಎತ್ತಿಹಿಡಿದಿರುವ ಮೂಲಭೂತ ಹಕ್ಕುಗಳನ್ನು ಸಮಸ್ತ ಭಾರತೀಯರೂ ಅನುಭವಿಸುವಂತಹ ವಾತಾವರಣವನ್ನು ಕೇಂದ್ರ ಸರ್ಕಾರ ಖಾತ್ರಿಗೊಳಿಸಬೇಕಿದೆ.</li>



<li>ಹಿಂದುಳಿದ ವರ್ಗಗಳಲ್ಲಿ ಇರುವಂತೆ ಪರಿಶಿಷ್ಟ ಜಾತಿ/ವರ್ಗಗಳಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೆ ತರಬೇಕು. ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಟ್ಟು ಕಡ್ಡಾಯವಾಗಿ ಅನುಷ್ಟಾನಗೊಳಿಸಬೇಕು.</li>



<li>ಪರಿಶಿಷ್ಟ ಜಾತಿ/ವರ್ಗಗಳಿಗೆ SಅSP/ಖಿSP ಕಾಯ್ದೆಯ ಅನುಗುಣವಾಗಿ ರಾಜ್ಯ ಬಜೆಟ್ಟಿನ ಶೇ. 24.10 ಯಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು. ಈ ಅನುದಾನವನ್ನು ಸಂಪೂರ್ಣವಾಗಿ ‘ಏಕಗವಾಕ್ಷಿ ಯೋಜನೆ’ ಯಲ್ಲಿ ಅನುಷ್ಟಾನಗೊಳಿಸಬೇಕು. ದಲಿತರ ಅವಶ್ಯಕತೆಗೆ ತಕ್ಕಂತೆ ಯೋಜನೆ ರೂಪಿಸುವುದರ ಮೂಲಕ ಅನುದಾನ ದುರ್ಬಳಕೆಯನ್ನು ಕೂಡಲೇ ನಿಲ್ಲಿಸಬೇಕು. ಇತರೆ ವೆಚ್ಚಕ್ಕಾಗಿ ಹಣ ಬಳಸಲು ಅವಕಾಶವಿರುವ ‘7ಡಿ ಸೆಕ್ಷನ್’ ಅನ್ನು ಕಾಯ್ದೆಯಿಂದ ತೆಗೆದುಹಾಕಬೇಕು. ಕೇಂದ್ರ ಸರ್ಕಾರವೂ ಸಹ ಇದೇ ಮಾದರಿಯ ಕಾಯ್ದೆಯನ್ನು ರೂಪಿಸಬೇಕು.</li>



<li>ಕೇವಲ ಆರ್ಥಿಕ ಮಾನದಂಡದಲ್ಲಿ ಎಸ್ಸಿ/ಎಸ್ಟಿ/ಒಬಿಸಿ ಯವರನ್ನು ಹೊರತುಪಡಿಸಿ ವಾರ್ಷಿಕ 8 ಲಕ್ಷ ವರಮಾನವಿರುವ ಮೇಲ್ಜಾತಿಯವರಿಗೆ ನೀಡಿರುವ EWS ಮೀಸಲಾತಿಯನ್ನು ಈ ವೇದಿಕೆ ಖಡಾಖಂಡಿತವಾಗಿ ವಿರೋಧಿಸುತ್ತದೆ. ಈ ಅಸಂವಿಧಾನಿಕ ತಿದ್ದುಪಡಿಯನ್ನು ರದ್ದುಗೊಳಿಸಬೇಕು. ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು.</li>



<li>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಬಹುಕಾಲದಿಂದ ಖಾಲಿಯಾಗಿಯೇ ಉಳಿದಿರುವ ಲಕ್ಷಾಂತರ ಎಸ್ಸಿ/ಎಸ್ಟಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಿಕೊಳ್ಳಬೇಕು. ಹೊರಗುತ್ತಿಗೆ ನೇಮಕಾತಿಯನ್ನು ರದ್ದುಗೊಳಿಸಬೇಕು. ಖಾಲಿ ಹುದ್ದೆಗಳನ್ನು ಕೂಡಲೇ ತುಂಬಬೇಕು.</li>



<li>‘ಪಿಟಿಸಿಎಲ್ ಕಾಯ್ದೆ’ ಯನ್ನು ಬಲಪಡಿಸಬೇಕು. ದಲಿತರ ಭೂಮಿಯು ದಲಿತರಲ್ಲಿಯೇ ಉಳಿಯುವಂತೆ ಮಾಡಬೇಕು. ಈ ಕಾಯ್ದೆಯ ಮೂಲ ಉದ್ದೇಶವಾದ ‘ದಲಿತರು ಭೂಮಿ ಹೊಂದುವ’ ಗುರಿಯನ್ನು ಸಮರ್ಥವಾಗಿ ಅನುಷ್ಟಾನಕ್ಕೆ ತರಬೇಕು.</li>



<li>ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೋಹತ್ಯಾ ನಿಷೇಧ ಕಾಯ್ದೆ’ ಮತ್ತು ‘ಮತಾಂತರ ನಿಷೇಧ ಕಾಯ್ದೆ’ ಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.</li>



<li>ಎಸ್ಸಿ/ಎಸ್ಟಿ ಅಲೆಮಾರಿ, ಅರೆ-ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಹಾಗೂ ಪ್ರತ್ಯೇಕ ಆಯೋಗವನ್ನು ರಚಿಸಿ ಕಾಲಕಾಲಕ್ಕೆ ಸಮೀಕ್ಷೆ ಮಾಡಿ ಸೌಲಭ್ಯ ಒದಗಿಸಬೇಕು. ಡಿಎನ್‌ಟಿ (ಡಿನೋಟಿಫೈ ಟ್ರೆಬ್ಸ್) ಸಮುದಾಯಗಳಿಗೆ ವಿಶೇಷ ಸೌಲಭ್ಯ ಒದಗಿಸಬೇಕು.</li>



<li>ರಾಜ್ಯ ಸರ್ಕಾರ ಜಾರಿಗೊಳಿಸಿರುವ<br>ರೈತಾಪಿ ಜನರ ವಿರೋಧಿ ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎ.ಪಿ.ಎಮ್.ಸಿ.ತಿದ್ದುಪಡಿ ಕಾಯ್ದೆ ಹಾಗೂ ವಿದ್ಯುತ್ ಖಾಸಗೀಕರಣ ಮಸೂದೆಯನ್ನು ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.</li>



<li>ಒಕ್ಕೂಟ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅನುಷ್ಟಾನಕ್ಕೆ ತಂದಿರುವ, ಅಸಮಾನತೆಯನ್ನು ಹಾಗೂ ಚಾತುರ್ವರ್ಣ ಪದ್ಧತಿಯನ್ನು ಎತ್ತಿ ಹಿಡಿಯುವ ರಾಷ್ಟ್ರೀಯ ಶಿಕ್ಷಣ ನೀತಿ – 2020 ಅನ್ನು ಈ ಕೂಡಲೇ ರದ್ದುಗೊಳಿಸಬೇಕು.</li>



<li>ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ದಲಿತ ಮಕ್ಕಳಿಗೆ ಸ್ಕಾಲರ್‌ಶಿಪ್ ನಿಲ್ಲಿಸುವ ಯೋಚನೆಯನ್ನು ಕೂಡಲೇ ಕೈ ಬಿಡಬೇಕು. ಎಸ್ಸಿ/ಎಸ್ಟಿ ಮೀಸಲಾತಿಗೆ ನಿಗದಿಪಡಿಸುರುವ ವಾರ್ಷಿಕ ಆದಾಯ ಮಿತಿಯನ್ನು 10 ಲಕ್ಷಕ್ಕೆ ಏರಿಸಬೇಕೆಂದು ಒತ್ತಾಯಿಸುತ್ತೇವೆ.</li>



<li>ಹತ್ತು ನಿಮಿಷಕ್ಕೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ನ್ಯಾಯಾಲಯಗಳಲ್ಲಿ ಶೇ.96 ರಷ್ಟು ಅಟ್ರಾಸಿಟಿ ಕಾಯ್ದೆಯಡಿಯ ಪ್ರಕರಣಗಳು ಬಾಕಿ ಉಳಿದಿವೆ. ಈ ಕಾಯ್ದೆಯಡಿ ಶಿಕ್ಷೆ ನೀಡುವ ಪ್ರಮಾಣ ತೀರ ಕಡಿಮೆ ಇದೆ. ಒಕ್ಕೂಟ ಹಾಗೂ ರಾಜ್ಯ ಸರ್ಕಾರಗಳ ಈ ಉದ್ದೇಶಪೂರ್ವಕ ನಿರ್ಲಕ್ಯವನ್ನು ಖಂಡಿಸುತ್ತೇವೆ. ಈ ಕೂಡಲೇ ದಲಿತರಿಗೆ ಭದ್ರತೆ ಹಾಗೂ ರಕ್ಷಣೆ ಒದಗಿಸಲು ಆಗ್ರಹಿಸುತ್ತೇವೆ.</li>



<li>ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು. ಈ ಎರಡೂ ವೃತ್ತಿಗಳಲ್ಲಿ ಮೀಸಲಾತಿ ನೀತಿಯನ್ನು ಅನುಷ್ಟಾನಕ್ಕೆ ತರಬೇಕು. ಮಲ ಹೊರುವ ಪದ್ಧತಿ ನಿಷೇಧಗೊಂಡಿದ್ದರೂ ಸಹ ನೂರಾರು ಸಾವುಗಳು ಇದರಿಂದ ಸಂಭವಿಸಿದೆ. ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದೆ. ಮಲ ಹೊರುವ ಪದ್ಧತಿ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಟಾನಕ್ಕೆ ತರಲು ಆಗ್ರಹಿಸುತ್ತೇವೆ.</li>



<li>ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದಿರುವ ಕೋಮುವಾದಿ ದೌರ್ಜನ್ಯಗಳನ್ನು ಖಂಡಿಸುತ್ತೇವೆ. ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕನ್ನಡ ನಾಡಿನ ಬಹುತ್ವವನ್ನು ಹಾಳುಗೆಡುವುತ್ತಿರುವ ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ.</li>
</ol>
]]></content:encoded>
					
		
		
			</item>
	</channel>
</rss>
