<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>investigation &#8211; Peepal Media</title>
	<atom:link href="https://peepalmedia.com/tag/investigation/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 20 Oct 2023 14:20:28 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>investigation &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>&#8220;ಮನೆಯಿಂದಲೇ ದಿನಕ್ಕೆ 20,000 ಸಂಪಾದಿಸಿ!&#8221;: ವಂಚನೆಯ ಆಳ-ಅಗಲ</title>
		<link>https://peepalmedia.com/earn-rs-20000-daily-scam/</link>
		
		<dc:creator><![CDATA[Charan Aivarnad]]></dc:creator>
		<pubDate>Fri, 20 Oct 2023 13:56:34 +0000</pubDate>
				<category><![CDATA[ಅಂಕಣ]]></category>
		<category><![CDATA[Bangalore]]></category>
		<category><![CDATA[bank]]></category>
		<category><![CDATA[bengalure]]></category>
		<category><![CDATA[breaking news]]></category>
		<category><![CDATA[CBI]]></category>
		<category><![CDATA[charan Aivarnad]]></category>
		<category><![CDATA[cyber crime]]></category>
		<category><![CDATA[cypto]]></category>
		<category><![CDATA[fake]]></category>
		<category><![CDATA[Fake news]]></category>
		<category><![CDATA[financial crime]]></category>
		<category><![CDATA[fool]]></category>
		<category><![CDATA[fraud]]></category>
		<category><![CDATA[india]]></category>
		<category><![CDATA[investigation]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[money]]></category>
		<category><![CDATA[news]]></category>
		<category><![CDATA[news.viral news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Police Department]]></category>
		<category><![CDATA[politics]]></category>
		<category><![CDATA[Scam]]></category>
		<category><![CDATA[state politics]]></category>
		<category><![CDATA[trend]]></category>
		<category><![CDATA[Trending]]></category>
		<category><![CDATA[trending news]]></category>
		<category><![CDATA[viral]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=30265</guid>

					<description><![CDATA[ಬೆಂಗಳೂರು,ಅಕ್ಟೋಬರ್.‌20: &#8220;ಮನೆಯಲ್ಲಿಯೇ ಕೆಲಸ ಮಾಡಿ ದಿನಕ್ಕೆ 10,000 ರುಪಾಯಿ ಗಳಿಸಿ&#8221; ಎಂಬ ಮೆಸೆಜ್‌ಗಳನ್ನು ನಿಮ್ಮ ಫೋನ್‌ನಲ್ಲಿ ನೋಡಿರುತ್ತೀರಿ. ರಿಪ್ಲೈ ಮಾಡಿದ್ದೀರಾ? ಹಾಗಾದರೆ ಎಚ್ಚರವಾಗಿರಿ! ಈಗ ಸೆಂಟ್ರಲ್‌ ಬ್ಯೂರೋ ಆಫ್‌ ಇನ್ವಿಸ್ಟಿಗೇಷನ್‌ (ಸಿಬಿಐ) ಇಂತಹ ಮೋಸದ ಪ್ರಕರಣಗಳ ಬೆನ್ನ ಹಿಂದೆ ಬಿದ್ದಿದೆ. ವಂಚನೆಗಳ ಜಾಡನ್ನು ಬೇಧಿಸಲು ಹೊರಡಿದೆ. ಈ ಆಪರೇಷನ್‌ಗೆ ಸಿಬಿಐ ಇಟ್ಟ ಹೆಸರು &#8220;ಆಪರೇಷನ್ ಚಕ್ರ 2&#8221;. ಭಾರತದ ನಿರುದ್ಯೋಗಿಗಳನ್ನೇ ಬಂಡವಾಳವಾಗಿ ಮಾಡಿಕೊಂಡಿರುವ ಈ ಸ್ಕ್ಯಾಮರ್‌ಗಳು ಹಲವಾರು ವಾಟ್ಸಾಪ್ ನಂಬರ್‌ಗಳನ್ನು ಬಳಸಿಕೊಂಡು ದೇಶ-ವಿದೇಶಗಳಲ್ಲಿ ಕುಳಿತುಕೊಂಡು ಕೆಲಸದ ಆಮಿಷ [&#8230;]]]></description>
										<content:encoded><![CDATA[
<pre class="wp-block-code"><code><strong>ಮನೆಯಿಂದಲೇ ನೀವು 20,000 ರುಪಾಯಿ ಗಳಿಸಬಹುದು. ಇದು ವರ್ಕ್‌ ಫ್ರೊಂ ಹೋಮ್‌ ಉದ್ಯೋಗ..ಈ ರೀತಿಯ ಮೆಸೆಜ್‌ಗಳು ನಿಮ್ಮ ವಾಟ್ಸಾಪ್‌, ಟೆಲಿಗ್ರಾಮಿಗೆ ಬಂದಿರಬಹುದು. ಆರಂಭದಲ್ಲಿ ಚೆನ್ನಾಗಿ ಸಂವಹನ ನಡೆಸಿ ವಿಶ್ವಾಸವನ್ನು ಗಳಿಸುತ್ತಾರೆ. ಅವರು ಹೇಳಿದಂತೆ ನಡೆದುಕೊಂಡರೆ ಮೋಸ ಖಚಿತ. ಈ ವಂಚನೆಯ ಆಳ-ಅಗಲ ಇಲ್ಲಿದೆ</strong></code></pre>



<p><strong>ಬೆಂಗಳೂರು,ಅಕ್ಟೋಬರ್.‌20:</strong> &#8220;ಮನೆಯಲ್ಲಿಯೇ ಕೆಲಸ ಮಾಡಿ ದಿನಕ್ಕೆ 10,000 ರುಪಾಯಿ ಗಳಿಸಿ&#8221; ಎಂಬ ಮೆಸೆಜ್‌ಗಳನ್ನು ನಿಮ್ಮ ಫೋನ್‌ನಲ್ಲಿ  ನೋಡಿರುತ್ತೀರಿ. ರಿಪ್ಲೈ ಮಾಡಿದ್ದೀರಾ? ಹಾಗಾದರೆ ಎಚ್ಚರವಾಗಿರಿ! ಈಗ ಸೆಂಟ್ರಲ್‌ ಬ್ಯೂರೋ ಆಫ್‌ ಇನ್ವಿಸ್ಟಿಗೇಷನ್‌ (ಸಿಬಿಐ) ಇಂತಹ ಮೋಸದ ಪ್ರಕರಣಗಳ ಬೆನ್ನ ಹಿಂದೆ ಬಿದ್ದಿದೆ. ವಂಚನೆಗಳ ಜಾಡನ್ನು ಬೇಧಿಸಲು ಹೊರಡಿದೆ. ಈ ಆಪರೇಷನ್‌ಗೆ ಸಿಬಿಐ ಇಟ್ಟ ಹೆಸರು &#8220;ಆಪರೇಷನ್ ಚಕ್ರ 2&#8221;.</p>



<p>ಭಾರತದ ನಿರುದ್ಯೋಗಿಗಳನ್ನೇ ಬಂಡವಾಳವಾಗಿ ಮಾಡಿಕೊಂಡಿರುವ ಈ ಸ್ಕ್ಯಾಮರ್‌ಗಳು ಹಲವಾರು ವಾಟ್ಸಾಪ್ ನಂಬರ್‌ಗಳನ್ನು ಬಳಸಿಕೊಂಡು ದೇಶ-ವಿದೇಶಗಳಲ್ಲಿ ಕುಳಿತುಕೊಂಡು ಕೆಲಸದ ಆಮಿಷ ಒಡ್ಡಿ ಜನರಿಗೆ ಹಣದ ವಂಚನೆ ಮಾಡುತ್ತಿದ್ದಾರೆ.  ಈ ಹಣವನ್ನು ನಂತರ ಶೆಲ್ ಕಂಪನಿಗಳ ಮೂಲಕ ಕಳುಹಿಸಿ, ಲಾಂಡರಿಂಗ್ ಮಾಡಲಾಗುತ್ತಿದೆ. ಸಿಬಿಐ ಪ್ರಕಾರ, ಇದೊಂದು ದೇಶದ ಅತ್ಯಂತ ದೊಡ್ಡ ಸೈಬರ್-ಮನಿ ಲಾಂಡರಿಂಗ್‌ ವಂಚನೆಯ ಜಾಲ.</p>



<p>ಈ ವಾರ ಸಿಬಿಐ &#8220;ಆಪರೇಷನ್ ಚಕ್ರ 2&#8221; ಎಂಬ ಕಾರ್ಯಾಚರಣೆಯನ್ನು ಕೈಗೊಂಡಿದ್ದು, ಮಧ್ಯಪ್ರದೇಶ, ಉತ್ತರ ಪ್ರದೇಶ, ಕರ್ನಾಟಕ, ಹರಿಯಾಣ, ಕೇರಳ, ತಮಿಳುನಾಡು, ಪಂಜಾಬ್, ಬಿಹಾರ, ದೆಹಲಿ, ಪಶ್ಚಿಮ ಬಂಗಾಳ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಅನೇಕ ರಾಜ್ಯಗಳ 76 ಸ್ಥಳಗಳಲ್ಲಿ ಐದು ಪ್ರತ್ಯೇಕ ಪ್ರಕರಣಗಳಲ್ಲಿ ದಾಳಿಯನ್ನು ನಡೆಸಿದೆ. ಈ ಬಗ್ಗೆ <a href="https://cbi.gov.in/press-detail/NTk0MQ==" data-type="link" data-id="https://cbi.gov.in/press-detail/NTk0MQ==">ಅಕ್ಟೋಬರ್‌  19</a> ಮತ್ತು <a href="https://cbi.gov.in/press-detail/NTk0Mg==" data-type="link" data-id="https://cbi.gov.in/press-detail/NTk0Mg==">ಅಕ್ಟೋಬರ್‌ 20</a> ರ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತನಿಖೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ. ತನಿಖೆ ಇನ್ನೂ ಪ್ರಗತಿಯಲ್ಲಿದೆ.</p>



<p>ಈ ಸಂದರ್ಭದಲ್ಲಿ 32 ಮೊಬೈಲ್ ಫೋನ್‌ಗಳು, 48 ಲ್ಯಾಪ್‌ಟಾಪ್‌ಗಳು-ಹಾರ್ಡ್ ಡಿಸ್ಕ್‌ಗಳು, ಎರಡು ಸರ್ವರ್‌ಗಳ ಫೋಟೋಗಳು, 33 ಸಿಮ್ ಕಾರ್ಡ್‌ಗಳು ಮತ್ತು ಪೆನ್ ಡ್ರೈವ್‌ಗಳನ್ನು ಜಪ್ತಿ ಮಾಡಲಾಗಿದೆ. ಹಲವಾರು ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ. ಸಿಬಿಐ 15 ಇಮೇಲ್ ಖಾತೆಗಳ ಡಂಪ್‌ ಅನ್ನು ವಶಪಡಿಸಿಕೊಂಡಿದ್ದು, ಆರೋಪಿಗಳು ಹೆಣೆದಿರುವ ವಂಚನೆಯ ಸಂಕೀರ್ಣ ಜಾಲವನ್ನು ಬೆಳಕಿಗೆ ತಂದಿದೆ.</p>



<p>ಹೂಡಿಕೆ ಮತ್ತು ಉದ್ಯೋಗದ ಆಸೆ ತೋರಿಸಿ ಅಮಾಯಕರನ್ನು ವಂಚಿಸುತ್ತಿರುವ ಈ ಹಗರಣದ ವಿರುದ್ಧ ಸಿಬಿಐನಲ್ಲಿ ಕಳೆದ ವರ್ಷ ಎಫ್‌ಐಆರ್ ದಾಖಲಿಸಲಾಗಿತ್ತು. ಸತತ ಅಧ್ಯಯನಗಳ ನಂತರ ಸಿಬಿಐ ಈ ಜಾಲದ ಒಳಸುಳಿವು, ತಂತ್ರಜ್ಞಾನಗಳ ಬಳಕೆಯನ್ನು ಬೇಧಿಸಿ ದಂಧೆಯನ್ನು ಬಹಿರಂಗಪಡಿಸಿದೆ.</p>



<p>ಈ ದಂಧೆಯಲ್ಲಿ ಹಲವು ವಂಚಕರು ಬೇರೆ ಬೇರೆ ಮೊಬೈಲ್‌ ಸಂಖ್ಯೆಗಳ ಮೂಲಕ ಜನರನ್ನು ಸಂಪರ್ಕಿಸಿ ಹೂಡಿಕೆ , ಇಲ್ಲವೇ ಅರೆಕಾಲಿಕ ಉದ್ಯೋಗ ನೀಡುವುದಾಗಿ ನಂಬಿಸಿ ಹಣವನ್ನು ಸಂಗ್ರಹಿಸುತ್ತಾರೆ. ಇದಕ್ಕಾಗಿ ಬೇರೆ ಬೇರೆ ಬ್ಯಾಂಕ್ ಖಾತೆಗಳು ಮತ್ತು ಯುಪಿಐಗಳನ್ನು ಬಳಸಿದ್ದಾರೆ ಎಂದು ಸಿಬಿಐ ಮೂಲಗಳು ತಿಳಿಸಿವೆ.</p>



<p>ವಿವಿಧ ಬ್ಯಾಂಕ್ ಖಾತೆಗಳು ಮತ್ತು ವಿದೇಶಿ ಮೂಲದ ಕ್ರಿಪ್ಟೋ ವ್ಯಾಲೆಟ್‌ಗಳಲ್ಲಿನ ಹಣವನ್ನು ಡ್ರಾ ಮಾಡಲು ವಿವಿಧ ಶೆಲ್ ಕಂಪನಿಗಳನ್ನು ಬಳಸಲಾಗಿದೆ ಎಂಬುದು ಸಿಬಿಐ ತನಿಖೆಯಿಂದ ತಿಳಿದು ಬಂದಿದೆ. ಅಲ್ಲದೇ, ಈ ಹೆಚ್ಚಿನ ಶೆಲ್‌ ಕಂಪನಿಗಳು ಚೀನಾದ ಜೊತೆಗೆ ಸಂಬಂಧವನ್ನು ಹೊಂದಿದ್ದು, ತನಿಖೆ ಪ್ರಗತಿಯಲ್ಲಿದೆ. &nbsp;</p>



<p>ಸೈಬರ್ ವಂಚನಕರು &#8220;ಗೂಗಲ್ ಜಾಹೀರಾತುಗಳು, ಎಸ್‌ಎಂಎಸ್, ಸಿಮ್ ಬಾಕ್ಸ್ ಆಧಾರಿತ ಎಸ್‌ಎಂಎಸ್, ಕ್ಲೌಡ್ ಸೇವೆಗಳು, ಫಿನ್‌ಟೆಕ್ ಕಂಪನಿಗಳು, ಪಾಪ್‌ಅಪ್‌ ಮೆಸೆಜ್‌ಗಳು ಮತ್ತು ಎಪಿಐ&#8221; ಗಳನ್ನು ಬಳಸುತ್ತಾರೆ ಎಂಬುದು ತಿಳಿದುಬಂದಿದೆ. ಸಿಬಿಐ ಪ್ರಕಾರ &#8220;ಸಾಮಾಜಿಕ ಮಾಧ್ಯಮಗಳು ಮತ್ತು ಜಾಹೀರಾತು ಪೋರ್ಟಲ್‌ಗಳು, ಎನ್‌ಕ್ರಿಪ್ಟ್ ಮಾಡಿದ ಚಾಟ್ ಅಪ್ಲಿಕೇಶನ್‌ಗಳು, ಪೊಂಜಿ ಸ್ಕೀಮ್‌ಗಳು ಮತ್ತು ಮಲ್ಟಿ-ಲೆವೆಲ್ ಮಾರ್ಕೆಟಿಂಗ್ ಬಳಸಿ ಜನರ ಗಮನ ಸೆಳೆಯುತ್ತಾರೆ.&#8221; ಅಲ್ಲದೇ, ವಂಚಕರ ಸರ್ಚ್ ಇಂಜಿನ್‌ನ ಜಾಹೀರಾತು ಟೂಲ್‌ಗಳನ್ನು ಬಳಸುತ್ತಿದ್ದಾರೆ, ಜೊತೆಗೆ ಬೃಹತ್ ಗಾತ್ರದಲ್ಲಿ ಬಲ್ಕ್‌ SMS ಕಳುಹಿಸಲು ರೆಂಟೆಡ್ ಹೆಡರ್‌ಗಳನ್ನು ಬಳಸುತ್ತಿದ್ದಾರೆ.</p>



<p>ವಿದೇಶಿ ಪ್ರಜೆಗಳನ್ನು ವಂಚಿಸಲು ಮೈಕ್ರೋಸಾಫ್ಟ್ ಮತ್ತು ಅಮೆಜಾನ್‌ಗೆ ತಾಂತ್ರಿಕ ಬೆಂಬಲ ನೀಡುವವರಂತೆ‌ ತಮ್ಮನ್ನು ಬಿಂಬಿಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದ್ದು, ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬಿಐ 72 ಸ್ಥಳಗಳಲ್ಲಿ ರಾಷ್ಟ್ರವ್ಯಾಪಿ ದಾಳಿ ನಡೆಸಿದೆ. ಚೀನೀ ಲಿಂಕ್‌ಗಳನ್ನು ಹೊಂದಿರುವ ಕಂಪನಿಗಳ &#8220;ಕ್ರಿಪ್ಟೋಕರೆನ್ಸಿ ವಂಚನೆ&#8221; ಗೆ ಸಂಬಂಧಿಸಿದ ಇತರ ಮೂರು ಪ್ರಕರಣಗಳಲ್ಲಿ ಹುಡುಕಾಟಗಳನ್ನು ನಡೆಸಲಾಗಿದೆ.</p>



<p>ಫೈನಾನ್ಶಿಯಲ್ ಇಂಟೆಲಿಜೆನ್ಸ್ ಯುನಿಟ್-ಇಂಡಿಯಾ (ಎಫ್‌ಐಯು-ಇಂಡಿಯಾ)ದ ಮಾಹಿತಿಯಂತೆ ಆಪರೇಷನ್ ಚಕ್ರ-II ಕ್ರಿಪ್ಟೋ-ಕರೆನ್ಸಿ ವಂಚನೆಯನ್ನು ಭೇದಿಸಿತು. ಈ ವಂಚನೆಯನ್ನು ಭಾರತೀಯರನ್ನು ಗುರಿಯಾಗಿಸಿ ನಡೆಸಲಾಗುತ್ತಿದ್ದು, ಸುಮಾರು 100 ಕೋಟಿ ರುಪಾಯಿಗೂ ಅಧಿಕ ಹಣ ವಂಚಕರ ಪಾಲಾಗಿದೆ.</p>



<p>ವಂಚಕ ಇದಕ್ಕಾಗಿ ಫೇಕ್ ಕ್ರಿಪ್ಟೋಕರೆನ್ಸಿ ಟೋಕನ್ ಅನ್ನು ಅಭಿವೃದ್ಧಿಪಡಿಸಿದ್ದಾನೆ ಎಂದು ಸಿಬಿಐ ತಿಳಿಸಿದೆ.  ಈ ಪ್ರಕರಣದಲ್ಲಿ ಆರೋಪಿಯು ಭಾರತ ಮೂಲದ ಹೆಸರಾಂತ ಅಮೇರಿಕನ್ ಕ್ರಿಪ್ಟೋ ಟೆಕ್ನಾಲಜಿಸ್ಟ್‌ ಒಬ್ಬರ ಫೋಟೋವನ್ನು ಬಳಸಿಕೊಂಡು ವೆಬ್‌ಸೈಟ್ ಮಾಡಿದ್ದಾನೆ. ಗಣಿಗಾರಿಕೆ ಯಂತ್ರಗಳನ್ನು ಖರೀದಿಸಲು ಹೂಡಿಕೆದಾರರ ಹಣವನ್ನು ಬಳಸುತ್ತಾರೆ ಎಂಬಂತೆ ನಂಬಿಸಿ,  ಬಂದ ಲಾಭವನ್ನು ಮುದ್ರಿಸಲಾದ ಕ್ರಿಪ್ಟೋಕರೆನ್ಸಿಗಳ ಮೂಲಕ ವಿತರಿಸಲಾಗಿದೆ.</p>



<p>ಈ ಅಪ್ಲಿಕೇಷನ್‌ ಆಗಸ್ಟ್ 2021 ರವರೆಗೆ ಕಾರ್ಯನಿರ್ವಹಿಸಿತ್ತು. ಈ ಸಮಯದಲ್ಲಿ ಅನೇಕ ಭಾರತೀಯರು ವಿವಿಧ ಗೇಟ್‌ವೇಗಳ ಮೂಲಕ ಹೂಡಿಕೆ ಮಾಡಿದ್ದರು. ಆರಂಭದಲ್ಲಿ, ಹೂಡಿಕೆದಾರರ ವಿಶ್ವಾಸವನ್ನು ಗಳಿಸಲು ರಿಟರ್ನ್ಸ್ ಕೂಡ ನೀಡಲಾಯಿತು, ಆದರೆ ಆಗಸ್ಟ್ 2021ರ ನಂತರ ಎಲ್ಲಾ ಪಾವತಿಗಳು ಸ್ಥಗಿತಗೊಂಡವು.</p>



<p>Payment aggregator ಸರ್ವಿಸ್‌ಗಳನ್ನು ಬಳಸಿ ಆರೋಪಿಯು ಅಂದಾಜು 168.75 ಕೋಟಿ ರುಪಾಯಿಯ ವಂಚನೆ ನಡೆಸಿದ್ದ. ತನಿಖೆಯ ಸಮಯದಲ್ಲಿ 150 ಖಾತೆಗಳನ್ನು ಪತ್ತೆಮಾಡಲಾಗಿದ್ದು, ಇದರಲ್ಲಿ 46 ಶೆಲ್ ಕಂಪನಿಗಳು, 42 ಮಾಲೀಕತ್ವ ಸಂಸ್ಥೆಗಳು ಮತ್ತು 50 ವೈಯಕ್ತಿಕ ಖಾತೆಗಳು, ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಲು, ಸ್ವೀಕರಿಸಿದ ಹಣವನ್ನು ಲಾಂಡರಿಂಗ್ ಮಾಡಲು ಮತ್ತು ಅಂತಿಮ ಫಲಾನುಭವಿಗಳಿಗೆ ವರ್ಗಾಯಿಸಲು ಮಾರ್ಗಗಳಾಗಿ ಕಾರ್ಯನಿರ್ವಹಿಸಿರುವುದು ಕಂಡು ಬಂದಿದೆ. ಎರಡು ಖಾಸಗಿ ಕಂಪನಿಗಳು, ಅದರ ನಿರ್ದೇಶಕರು ಸೇರಿದಂತೆ ಅನೇಕರ ವಿರುದ್ಧ ಈ ಪ್ರಕರಣವನ್ನು ದಾಖಲಿಸಲಾಗಿದೆ.</p>



<p>ಯುಎಸ್ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ಸೇರಿದಂತೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಏಜೆನ್ಸಿಗಳ ಸಹಯೋಗದೊಂದಿಗೆ ಆಪರೇಷನ್ ಚಕ್ರ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಸಿಬಿಐ ತಿಳಿಸಿವೆ.</p>



<p style="font-size:20px"><strong>ಬೆಂಗಳೂರಿನಲ್ಲಿ ಕೂತು ಸಿಂಗಾಪುರದವರಿಗೆ ವಂಚನೆ!</strong></p>



<p>ಈ ವಂಚಕರ 137 ಶೆಲ್ ಕಂಪನಿಗಳನ್ನು ಸಿಬಿಐ ಗುರುತಿಸಿದ್ದು, ಹೆಚ್ಚಿನ ಸಂಖ್ಯೆಯ ಘಟಕಗಳು ಬೆಂಗಳೂರಿನ ಕಂಪನಿಗಳ ರಿಜಿಸ್ಟ್ರಾರ್‌ನಲ್ಲಿ ನೋಂದಾಯಿಸಲ್ಪಟ್ಟಿವೆ. ಸಿಬಿಐಯ ತನಿಖೆಯ ನಂತರ ಈ ಕಂಪನಿಗಳ ನಿರ್ದೇಶಕರನ್ನು ಗುರುತಿಸಲಾಗಿದ್ದು, ಹೆಚ್ಚಿನವರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಈ ಕೆಲವು ನಿರ್ದೇಶಕರು ಬೆಂಗಳೂರು ಮೂಲದ ಪಾವತಿ ವ್ಯಾಪಾರಿಯೊಂದಿಗೆ (ಪೇಮೆಂಟ್‌ ಮರ್ಚೆಂಟ್‌) ಸಂಬಂಧ ಹೊಂದಿದ್ದರು. ವಂಚನೆಯ ಕೇಂದ್ರವಾಗಿರುವ ಈ ವ್ಯಾಪಾರಿ ಸುಮಾರು 16 ವಿಭಿನ್ನ ಬ್ಯಾಂಕ್ ಖಾತೆಗಳನ್ನು ನಿಯಂತ್ರಿಸುತ್ತಿದ್ದಾನೆ, ಅಲ್ಲಿ ಬೃಹತ್ ಮೊತ್ತ ಅಂದಾಜು 357 ಕೋಟಿ ರುಪಾಯಿಯ ಹಣ ಹರಿದು ಬಂದಿದೆ. </p>



<p>ಈ ಹಣದ ಜಾಡನ್ನು ಯಾರಿಗೂ ಪತ್ತೆ ಮಾಡಲು ಸಾಧ್ಯವಾಗದಂತೆ ಉದ್ದೇಶಪೂರ್ವಕವಾಗಿ ಹಣ ಜಮೆಯಾದ ನಂತರ ನಂತರ ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ. ಬೆಂಗಳೂರು, ಕೊಚ್ಚಿನ್ ಮತ್ತು ಗುರ್‌ಗಾಂವ್‌ನಲ್ಲಿ ನಡೆಸಲಾದ ಹುಡುಕಾಟಗಳಿಂದ ಸಿಬಿಐಗೆ ಗಣನೀಯ ಸಂಖ್ಯೆಯ ಪುರಾವೆಗಳನ್ನು ಸಿಕ್ಕಿದ್ದು, ಶೆಲ್ ಕಂಪನಿಗಳ ನಿರ್ದೇಶಕರ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲಿದೆ.</p>



<p>ಈ ಆರೋಪಿಗೆ ವಿದೇಶಿ ಪ್ರಜೆಯ ಜತೆಗಿನ ಒಡನಾಟವೂ ಇದ್ದು, ಈ ವಂಚಕ ಘಟಕಗಳ ನಿರ್ದೇಶಕರು ಮತ್ತು ಸಂಪರ್ಕ ಮಾಹಿತಿಯನ್ನು ಬದಲಾಯಿಸುವಲ್ಲಿ ಬೆಂಗಳೂರಿನ ಇಬ್ಬರು ಚಾರ್ಟರ್ಡ್ ಅಕೌಂಟೆಂಟ್‌ಗಳ ಪಾತ್ರವೂ ಕಂಡುಬಂದಿದೆ. </p>



<p>ಸಿಂಗಾಪುರದ ನಾಗರಿಕರನ್ನು ಗುರಿಯಾಗಿಸಿಕೊಂಡು ಮಾಡಿರುವ ಸೈಬರ್ ಆರ್ಥಿಕ ಅಪರಾಧಗಳ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಎರಡನೇ ಪ್ರಕರಣವನ್ನು ಸಿಬಿಐ ದಾಖಲಿಸಲಾಗಿದೆ. ಹತ್ತು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 100 ಭಾರತೀಯ ಬ್ಯಾಂಕ್ ಖಾತೆಗಳನ್ನು ಒಳಗೊಂಡಿರುವ ಸಿಂಗಾಪುರ ನಾಗರಿಕರ ಮೇಲೆ ನಡೆಸಲಾದ 300 ಕ್ಕೂ ಹೆಚ್ಚು ಸೈಬರ್ ವಂಚನೆಗಳು ನಡೆದಿವೆ. ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು INTERPOL ಚಾನೆಲ್‌ಗಳ ಮೂಲಕ ಸಿಂಗಾಪುರ್ ಪೋಲೀಸ್ ಫೋರ್ಸ್‌ ನೀಡಿದೆ. </p>



<p>ಫಿಶಿಂಗ್, ವಿಶಿಂಗ್, ಸ್ಮಿಶಿಂಗ್ ಮತ್ತು ಮೋಸದ ತಂತ್ರಜ್ಞಾನ (phishing, vishing, smishing, &amp; fraudulent tech support) ದಂತಹ ಸೋಷಿಯಲ್ ಎಂಜಿನಿಯರಿಂಗ್ ವಿಧಾನಗಳನ್ನು ಬಳಸಿ ಅಪರಾಧಿಗಳು 400 ಸಿಂಗಾಪುರ್ ನಾಗರಿಕರಿಗೆ ವಂಚನೆ ಮಾಡಿದ್ದಾರೆ. ಈ ತಂತ್ರಗಾರಿಕೆಯನ್ನು ಬಳಸಿಕೊಂಡು ವಂಚಕರು ಸಿಂಗಪುರದ ಬ್ಯಾಂಕ್‌ ಖಾತೆಗಳಿಂದ ಭಾರತೀಯ ವಿವಿಧ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸಿದ್ದಾರೆ.ಇದಕ್ಕೆ ಸಂಬಂಧಿಸಿದಂತೆ 150 ಕ್ಕೂ ಅಧಿಕ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಲಾಗಿದೆ ಎಂದು ಸಿಬಿಐ ತಿಳಿಸಿದೆ.</p>



<p>ಪಾಟ್ನಾ, ಕೋಲ್ಕತ್ತಾ, ಲಕ್ನೋ, ವಾರಣಾಸಿ, ಚಂಡೀಗಢ, ಜಲಂಧರ್, ಭೋಪಾಲ್, ಚೆನ್ನೈ, ಕೊಚ್ಚಿ ಮತ್ತು ಮಧುರೈ ಸೇರಿದಂತೆ 35 ಸ್ಥಳಗಳಲ್ಲಿ ಆರೋಪಿಗಳ ಸಮ್ಮುಖದಲ್ಲೇ ಶೋಧ ನಡೆಸಿದಾಗ ಗುರುತಿನ ಪುರಾವೆಗಳಿಗೆ ಸಂಬಂಧಿಸಿದ ದೋಷಾರೋಪಣೆ ದಾಖಲೆಗಳು, ಮೋಸದ ಬ್ಯಾಂಕಿಂಗ್ ವ್ಯವಹಾರಗಳು ಮತ್ತು ಇತರ ಸಾಕ್ಷ್ಯಗಳು ಲಭ್ಯವಾಗಿವೆ. </p>



<p style="font-size:20px"><strong>ಹೇಗೆ ಮೋಸ ಮಾಡುತ್ತಾರೆ?</strong></p>



<p>ಸಿಬಿಐ ಮೂಲಗಳ ಪ್ರಕಾರ, ಸಂತ್ರಸ್ತರನ್ನು ಮೊದಲು ಗೂಗಲ್, ಫೇಸ್‌ಬುಕ್ ಜಾಹೀರಾತುಗಳು, ಟೆಲಿಗ್ರಾಮ್ ಅಪ್ಲಿಕೇಶನ್ ಮತ್ತು ಎಸ್‌ಎಂಎಸ್‌ಗಳ ಮೂಲಕ ಸಂಪರ್ಕಿಸಲಾಗುತ್ತದೆ. ಬೇಗ ಹಣ ಗಳಿಸಲು ಅವರಿಗೆ ಉದ್ಯೋಗಗಳನ್ನು ನೀಡುವ ಬರವಸೆ ನೀಡುತ್ತವೆ.</p>



<p>ಸಾಮಾನ್ಯವಾಗಿ ಈ ಮೆಸೆಜ್‌ಗಳು, </p>



<p>“ಸರ್, ಅಮೆಜಾನ್ &nbsp;ಅರೆಕಾಲಿಕ ಉದ್ಯೋಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ, ನೀವು ದಿನನಿತ್ಯ 3000-10000 ರುಪಾಯಿ ಗಳಿಸಬಹುದು”</p>



<p>“ಆತ್ಮೀಯ ನಾನು ಎಚ್‌ಆರ್‌. ನೀವು ಪಾರ್ಟ್‌ಟೈಮ್‌ ಹಾಗೂ ಫುಲ್‌ ಟೈಮ್ ಉದ್ಯೋಗಕ್ಕೆ ಆಯ್ಕೆಯಾಗಿದ್ದೀರಿ, ಈಗ ನೀವು ದಿನಕ್ಕೆ 20000 ರುಪಾಯಿ ಗಳಿಸಬಹುದು. ಅದಕ್ಕಾಗಿ, ನೀವು ಈ ಲಿಂಕ್ ಅನ್ನು ಕ್ಲಿಕ್ ಮಾಡಿ…”.</p>


<div class="wp-block-image">
<figure class="aligncenter size-large is-resized"><img fetchpriority="high" decoding="async" width="590" height="1024" src="https://peepalmedia.com/wp-content/uploads/2023/10/cab08340-da47-4818-ab51-7c02192c58d1-590x1024.jpg" alt="" class="wp-image-30268" style="aspect-ratio:0.576171875;width:246px;height:auto" srcset="https://peepalmedia.com/wp-content/uploads/2023/10/cab08340-da47-4818-ab51-7c02192c58d1-590x1024.jpg 590w, https://peepalmedia.com/wp-content/uploads/2023/10/cab08340-da47-4818-ab51-7c02192c58d1-173x300.jpg 173w, https://peepalmedia.com/wp-content/uploads/2023/10/cab08340-da47-4818-ab51-7c02192c58d1-150x260.jpg 150w, https://peepalmedia.com/wp-content/uploads/2023/10/cab08340-da47-4818-ab51-7c02192c58d1-300x520.jpg 300w, https://peepalmedia.com/wp-content/uploads/2023/10/cab08340-da47-4818-ab51-7c02192c58d1-696x1207.jpg 696w, https://peepalmedia.com/wp-content/uploads/2023/10/cab08340-da47-4818-ab51-7c02192c58d1.jpg 738w" sizes="(max-width: 590px) 100vw, 590px" /><figcaption class="wp-element-caption">ಲೇಖಕರ ವೈಯಕ್ತಿಕ ಸಂಭಾಷಣೆ</figcaption></figure></div>


<p>ಸಾಮಾನ್ಯವಾಗಿ ಇಂತಹ ಮೆಸೆಜ್‌ಗಳ ಜೊತೆಗೆ ವಾಟ್ಸಾಪ್‌ ಅಥವಾ ಟೆಲಿಗ್ರಾಮ್‌ಗಳ ಲಿಂಕ್‌ಗಳು ಇರುತ್ತವೆ. ಇದರ ಮೇಲೆ ಕ್ಲಿಕ್‌ ಮಾಡಿದರೆ, ಅದು ನೇರವಾಗಿ ಚ್ಯಾಟಿಂಗ್‌ಗೆ ಹೋಗುತ್ತದೆ. ಈ ಸಂದರ್ಭದಲ್ಲಿ ವಂಚಕ ಸಂಭಾಷಣೆಯನ್ನು ನಡೆಸಿ, ಹೂಡಿಕೆಯ ವೆಬ್‌ಸೈಟ್‌ ಲಿಂಕ್‌ ಕಳಿಸುತ್ತಾನೆ.</p>



<p>ಇಷ್ಟು ಮಾತ್ರವಲ್ಲದೇ, ಕೆಲವೊಮ್ಮೆ ಚ್ಯಾಟಿಂಗ್‌ನಲ್ಲಿ ಹಣ ಹೂಡಿಕೆ ಮಾಡಿ, ತಕ್ಷಣವೇ ಲಾಭವನ್ನು ಪಡೆಯುವ ಬಗ್ಗೆ ಜನರಿಗೆ ಹೇಳಲಾಗುತ್ತದೆ. ಜೊತೆಗೆ, ಡಾಕ್ಯುಮೆಂಟ್‌ ಟೈಪ್‌ ಮಾಡುವ, ಯೂಟ್ಯೂಬ್‌ ಚಾನೆಲ್‌ ಲೈಕ್‌ ಮಾಡುವ, ಇ-ಮೇಲ್‌ ಟೈಪ್‌ ಮಾಡುವ ಸಣ್ಣ ಸಣ್ಣ ಕೆಲಸಗಳನ್ನು ನೀಡಲಾಗುತ್ತದೆ. ಇದರಲ್ಲಿ ಕಡ್ಡಾಯದ ಷರತ್ತು ಏನೆಂದರೆ, ವ್ಯಕ್ತಿ ತನ್ನ ಕ್ರೆಡೆನ್ಷಿಯಲ್ಸ್‌ ಪ್ರೂವ್‌ (ವಿಶ್ವಾಸಾರ್ಹತೆ) ಮಾಡಲು ತನ್ನ UPI ವ್ಯಾಲೆಟ್‌ನಲ್ಲಿ ಹಣ ಹಾಕಬೇಕು. ಇದಕ್ಕಾಗಿ ವಂಚಕರ ಸೈಟ್‌ಗಳು ಅನಧಿಕೃತ ಪೇಮೆಂಟ್‌ ಗೇಟ್‌ವೇಗಳನ್ನು ನೀಡುತ್ತಾರೆ.</p>


<div class="wp-block-image">
<figure class="aligncenter size-large is-resized"><img decoding="async" width="643" height="1024" src="https://peepalmedia.com/wp-content/uploads/2023/10/27cb28cb-a716-400c-aed5-a6743f0788c4-643x1024.jpg" alt="" class="wp-image-30269" style="aspect-ratio:0.6279296875;width:269px;height:auto" srcset="https://peepalmedia.com/wp-content/uploads/2023/10/27cb28cb-a716-400c-aed5-a6743f0788c4-643x1024.jpg 643w, https://peepalmedia.com/wp-content/uploads/2023/10/27cb28cb-a716-400c-aed5-a6743f0788c4-188x300.jpg 188w, https://peepalmedia.com/wp-content/uploads/2023/10/27cb28cb-a716-400c-aed5-a6743f0788c4-768x1223.jpg 768w, https://peepalmedia.com/wp-content/uploads/2023/10/27cb28cb-a716-400c-aed5-a6743f0788c4-964x1536.jpg 964w, https://peepalmedia.com/wp-content/uploads/2023/10/27cb28cb-a716-400c-aed5-a6743f0788c4-150x239.jpg 150w, https://peepalmedia.com/wp-content/uploads/2023/10/27cb28cb-a716-400c-aed5-a6743f0788c4-300x478.jpg 300w, https://peepalmedia.com/wp-content/uploads/2023/10/27cb28cb-a716-400c-aed5-a6743f0788c4-696x1108.jpg 696w, https://peepalmedia.com/wp-content/uploads/2023/10/27cb28cb-a716-400c-aed5-a6743f0788c4-1068x1701.jpg 1068w, https://peepalmedia.com/wp-content/uploads/2023/10/27cb28cb-a716-400c-aed5-a6743f0788c4.jpg 1080w" sizes="(max-width: 643px) 100vw, 643px" /><figcaption class="wp-element-caption">ಲೇಖಕರ ವೈಯಕ್ತಿಕ ಸಂಭಾಷಣೆ</figcaption></figure></div>


<p>ಇಂತಹ &nbsp;ಗೇಟ್‌ವೇಗಳು ಭಾರತದಲ್ಲಿ ಕೆಲಸ ಮಾಡಲು ಯಾವುದೇ ಅಧಿಕಾರ ಹೊಂದಿಲ್ಲ. ಈ ಎಲ್ಲಾ ಪಾವತಿಗಳನ್ನು ಇಂಟರ್ನೆಟ್ ಲಿಂಕ್‌ಗಳನ್ನು ಬಳಸಿಕೊಂಡು UPI ಮೂಲಕ ಮಾಡಲಾಗುತ್ತದೆ.</p>



<p>ಕೆಲವು ಬಾರಿ, ಟೆಲಿಗ್ರಾಮ್‌ಗಳಲ್ಲಿ ಸಂಪರ್ಕಿಸಿ, ಉದ್ಯೋಗದ ಆಮಿಷವನ್ನು ತೋರಿಸಿ ಯೂಟ್ಯೂಬ್‌ ಚಾನೆಲ್‌ಗಳಿಗೆ ಸಬ್‌ಸ್ಕ್ರೈಬ್‌ ಮಾಡುವ ಸಣ್ಣ ಸಣ್ಣ ಟಾಸ್ಕ್‌ಗಳನ್ನು ನೀಡಲಾಗುತ್ತದೆ. ಇದರ ಸ್ಕ್ರೀನ್‌ಶಾಟ್‌ಗಳನ್ನು ಕಳಿಸಬೇಕು. ಇದಾದ ನಂತರ, ಬೋನಸ್‌ ಹಣಕ್ಕಾಗಿ ಇನ್ನೊಂದು ಟೆಲಿಗ್ರಾಮ್‌ ಲಿಂಕ್‌ ಕಳಿಸುತ್ತಾರೆ. ಆ ಲಿಂಕ್‌ ತೆರೆದು ಮೊದಲಿನ ವ್ಯಕ್ತಿ ನೀಡಿದ ಕೋಡ್‌ ಒಂದನ್ನು ನೀಡಬೇಕು… ಹೀಗೆ ವಂಚಕರು ಇ-ಮೇಲ್, UPI ಮೊದಲಾದ ಎಲ್ಲಾ ಮಾಹಿತಿಗಳನ್ನು ಪಡೆದುಕೊಳ್ಳುತ್ತಾರೆ.</p>



<p>ಈ ರೀತಿಯ ಮೆಸೆಜ್‌ಗಳನ್ನುವಾಟ್ಸಾಪ್‌, ಟೆಲಿಗ್ರಾಮ್‌ ಮೊದಲಾದ ಕಡೆ ಲಿಂಕ್‌ಗಳನ್ನು ಕಳುಹಿಸಲು ಬಳಸುವ‌ ಮೊಬೈಲ್ ಸಂಖ್ಯೆಗಳು ಬೇರೆ ಬೇರೆ ಸ್ಥಳಗಳನ್ನು ಆಧರಿಸಿರುತ್ತವೆ.‌ ಟೆಲಿಗ್ರಾಮಿನಲ್ಲಿ ಯಾವುದೇ ಮೊಬೈಲ್‌ ಸಂಖ್ಯೆ ಇರುವುದಿಲ್ಲ. ವಾಟ್ಸಾಪ್‌ನಲ್ಲಿ ಬಳಸುವ ಸಂಖ್ಯೆಗಳು ಅವುಗಳ ಮೂಲ ಬಳಕೆದಾರರಿಗೆ ತಿಳಿಯದಂತೆ ವಂಚಕರು ಬಳಸುತ್ತಿರುತ್ತಾರೆ.</p>



<p>ಈ ಜಾಲದಲ್ಲಿ ವಂಚಕರು ಕಾಲ್‌ ಸೆಂಟರ್‌ಗಳನ್ನು ಮಾಡಿಕೊಂಡು ಕೆಲಸ ಮಾಡುತ್ತಾರೆ. ಬೆಳಗ್ಗೆಯಿಂದ ಸಂಜೆಯವರೆಗೆ ಜನರೊಂದಿಗೆ ಸಂಭಾಷನೆ ನಡೆಸುವ ಇವರು, ಉಳಿದ ಸಮಯದಲ್ಲಿ ಬೇರೆ ಬೇರೆ ಸ್ಥಳಗಳಿಂದ ವಾಟ್ಸಾಪ್‌, ಟೆಲಿಗ್ರಾಮ್ ಮೂಲಕ ಚಾಟಿಂಗ್‌ ನಡೆಸುತ್ತಾರೆ. ಸಾಮಾನ್ಯವಾಗಿ ಇಂಗ್ಲೀಷಿನಲ್ಲಿ ಚಾಟಿಂಗ್‌ ನಡೆಸುವ ಇವರು, ಗೂಗಲ್‌ ಟ್ರಾನ್ಸ್‌ಲೇಷನ್‌ ಕೂಡಾ ಬಳಸುತ್ತಾರೆ.</p>



<p>ಹಣದ ವ್ಯವಹಾರಕ್ಕೆ ವಿದೇಶಿಗರು ಉಪಯೋಗಿಸುವ ಗೇಟ್‌ವೇಗಳನ್ನು ಬಳಸುತ್ತಾರೆ. ಈ ಪೇಮೆಂಟ್‌ ಗೇಟ್‌ವೇಗಳು UPI ಮೂಲಕ ಹಣವನ್ನು ಸ್ವೀಕರಿಸುತ್ತವೆ. ಯುಪಿಐಗಳನ್ನು RazorPay, BharatPe, ಇತ್ಯಾದಿಗಳ ಹಿಂದೆ ಲೇಯರಿಂಗ್ ರಚಿಸಲು ಬಳಸಿ, ದಿನದ ಕೊನೆಯಲ್ಲಿ ವ್ಯವಹಾರವನ್ನು ಮುಗಿಸುತ್ತಾರೆ. ರೇಜರ್ ಪೇ, ಈಸ್ ಬಝ್, ಪೇಟಿಎಂ, ಸ್ಪೀಡಿ ಪೇ, ಇನ್‌ಸ್ಟಂಟ್ ಪೇ, ಕ್ಯಾಶ್ ಫ್ರೀ ಮುಂತಾದ ಫಿನ್‌ಟೆಕ್ ಕಂಪನಿಗಳನ್ನು ಪಾವತಿಗಳಿಗೆ ಬಳಸಲಾಗುತ್ತದೆ.</p>



<p>ಆದರೆ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದೊಂದಿಗೆ ಶೆಲ್ ಕಂಪನಿಗಳು ಮತ್ತು ಬಾಡಿಗೆ ಕಂಪನಿಗಳು ಹೇಗೆ ವ್ಯವಹರಿಸಲು ಸಾಧ್ಯ? ಪಾವತಿಗಳಿಗೆ ಸೇವೆಗಳನ್ನು ಪಡೆಯಲು ನೋಂದಣಿ ಪ್ರಮಾಣಪತ್ರಗಳನ್ನು ಬಳಸಲಾಗುತ್ತದೆ. ಈ ಫಿನ್‌ಟೆಕ್ ಕಂಪನಿಗಳಲ್ಲಿ ಹೆಚ್ಚಿನವು ಮಾನ್ಯತೆ ಪಡೆದಿಲ್ಲ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ನೇರವಾಗಿ ನಿಯಂತ್ರಿಸಲ್ಪಡುವುದಿಲ್ಲ.</p>



<p>ನಿಮ್ಮ ಫೋನ್‌ಗೆ ಇಂತಹ ಮೆಸೆಜ್‌ಗಳು ಬಂದರೆ ಅವುಗಳನ್ನು ಬ್ಲಾಕ್‌ ಮಾಡುವುದೇ ಒಳಿತು. ಅವರ ನಿರ್ದೇಶನದಂತೆ ನಾವು ಮುಂದುವರಿಸಿ, ನಮ್ಮೆಲ್ಲಾ ಮಾಹಿತಿಗಳನ್ನು ಅವರಿಗೆ ನೀಡಿದರೆ ಅಥವಾ ಹಣದ ವ್ಯವಹಾರ ನಡೆಸಿದರೆ ಮೋಸ ಖಚಿತ. ಹಣದ ವ್ಯವಹಾರ ಮುಗಿದ ತಕ್ಷಣ ನಾವು ಹಣ ಕಳುಹಿಸಿದ ವ್ಯಕ್ತಿ ಪತ್ತಯೇ ಇರುವುದಿಲ್ಲ!</p>



<p>ಎಚ್ಚರ….</p>



<p></p>



<p><strong>ಲೇಖನ: </strong>ಚರಣ್‌ ಐವರ್ನಾಡು, ಬೆಂಗಳೂರು</p>
]]></content:encoded>
					
		
		
			</item>
		<item>
		<title>ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು ; ಶಾಲಾ ಮುಖ್ಯಸ್ಥನ ಮೇಲಿರುವ ಆರೋಪಗಳೇನು?</title>
		<link>https://peepalmedia.com/suspicious-death-of-student-what-are-the-charges-against-the-school-principal/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 10 Jun 2023 05:27:49 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[investigation]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Sagar]]></category>
		<category><![CDATA[shivamogga]]></category>
		<category><![CDATA[Student death]]></category>
		<guid isPermaLink="false">https://peepalmedia.com/?p=22258</guid>

					<description><![CDATA[ಶಿವಮೊಗ್ಗದ ಸಾಗರ ತಾಲ್ಲೂಕಿನಲ್ಲಿರುವ ವನಶ್ರೀ ವಸತಿ ಶಾಲೆಯಲ್ಲಿ 13 ವರ್ಷದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಸಾವಿನ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ಹಾಗೂ ಶಾಲಾ ಮುಖ್ಯಸ್ಥನ ನಡೆಯ ಬಗ್ಗೆ ಆರೋಪ ಹಾಗೂ ಅನುಮಾನ ವ್ಯಕ್ತವಾಗಿದೆ. ಘಟನೆಯ ವಿವರ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಶಿವಪುರ ವಾಸಿ ಚಿನ್ನಸ್ವಾಮಿ ತನ್ನ ಇಬ್ಬರು ಮಕ್ಕಳಾದ ತೇಜಸ್ವಿನಿ ಮತ್ತು ಮಾರೇಶ ಎಂಬುವವರನ್ನು ಸಾಗರದ ವರದಹಳ್ಳಿ ರಸ್ತೆಯಲ್ಲಿ ಇರುವ ವನಶ್ರೀ ವಸತಿ ಶಾಲೆಗೆ ಇತ್ತೀಚೆಗೆ ದಾಖಲು ಮಾಡಿದ್ದಾರೆ. ಇವರ ಜೊತೆಗೆ ಇವರ [&#8230;]]]></description>
										<content:encoded><![CDATA[
<p>ಶಿವಮೊಗ್ಗದ ಸಾಗರ ತಾಲ್ಲೂಕಿನಲ್ಲಿರುವ ವನಶ್ರೀ ವಸತಿ ಶಾಲೆಯಲ್ಲಿ 13 ವರ್ಷದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಸಾವಿನ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ಹಾಗೂ ಶಾಲಾ ಮುಖ್ಯಸ್ಥನ ನಡೆಯ ಬಗ್ಗೆ ಆರೋಪ ಹಾಗೂ ಅನುಮಾನ ವ್ಯಕ್ತವಾಗಿದೆ.</p>



<p>ಘಟನೆಯ ವಿವರ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಶಿವಪುರ ವಾಸಿ ಚಿನ್ನಸ್ವಾಮಿ ತನ್ನ ಇಬ್ಬರು ಮಕ್ಕಳಾದ ತೇಜಸ್ವಿನಿ ಮತ್ತು ಮಾರೇಶ ಎಂಬುವವರನ್ನು ಸಾಗರದ ವರದಹಳ್ಳಿ ರಸ್ತೆಯಲ್ಲಿ ಇರುವ ವನಶ್ರೀ ವಸತಿ ಶಾಲೆಗೆ ಇತ್ತೀಚೆಗೆ ದಾಖಲು ಮಾಡಿದ್ದಾರೆ. ಇವರ ಜೊತೆಗೆ ಇವರ ಊರಿನ ಇನ್ನೂ 5 ಮಕ್ಕಳನ್ನೂ ಇದೇ ಜೂನ್ 4 ಕ್ಕೆ ಈ ಶಾಲೆಗೆ ಸೇರಿಸಿರುತ್ತಾರೆ‌.</p>



<p>ಮಕ್ಕಳನ್ನು ದಾಖಲು ಮಾಡಿದ ಮೂರೇ ದಿನಗಳಲ್ಲಿ ಮೃತ ತೇಜಸ್ವಿನಿ ಪೋಷಕರಾದ ಚಿನ್ನಸ್ವಾಮಿಯವರಿಗೆ ಹಾಸ್ಟೆಲ್ ನಿಂದ ಮಗಳು ಅಸ್ವಸ್ಥಳಾದ ಬಗ್ಗೆ ಕರೆ ಬಂದಿದೆ. ಆದರೆ ಹಾಸ್ಟೆಲ್ ನಲ್ಲೇ ಚಿಕಿತ್ಸೆ ಕೊಡುವುದಾಗಿ ಹಾಸ್ಟೆಲ್ ಕಡೆಯಿಂದ ಮಾಹಿತಿ ನೀಡಿದ್ದಾರೆ. ನಂತರ ಮಾರನೇ ದಿನವೂ ಕರೆ ಮಾಡಿ ಮಗಳ ಆರೋಗ್ಯ ವಿಚಾರಿಸಲಾಗಿ ಅನಾರೋಗ್ಯ ಮತ್ತೆ ಉಲ್ಬಣಿಸಿದ್ದು ಆಸ್ಪತ್ರೆಗೆ ದಾಖಲು ಮಾಡಲಿದ್ದೇವೆ ಎಂದು ಮಾಹಿತಿ ಸಿಕ್ಕಿದೆ. ಯಾವುದಾದರೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಎಂದು ಪೋಷಕರು ಹೇಳಿದರೂ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನು ಪೋಷಕರು ಮಗಳನ್ನು ನೋಡಲು ಸಾಗರಕ್ಕೆ ಬರುವ ಸಂದರ್ಭದಲ್ಲಾಗಲೇ ಮಗಳು ಮೃತಪಟ್ಟ ಬಗ್ಗೆ ಆಸ್ಪತ್ರೆ ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ.</p>



<figure class="wp-block-image size-full is-resized"><img decoding="async" src="https://peepalmedia.com/wp-content/uploads/2023/06/IMG-20230610-WA0006.jpg" alt="" class="wp-image-22260" width="377" height="246" srcset="https://peepalmedia.com/wp-content/uploads/2023/06/IMG-20230610-WA0006.jpg 781w, https://peepalmedia.com/wp-content/uploads/2023/06/IMG-20230610-WA0006-300x196.jpg 300w, https://peepalmedia.com/wp-content/uploads/2023/06/IMG-20230610-WA0006-768x502.jpg 768w, https://peepalmedia.com/wp-content/uploads/2023/06/IMG-20230610-WA0006-150x98.jpg 150w, https://peepalmedia.com/wp-content/uploads/2023/06/IMG-20230610-WA0006-696x455.jpg 696w" sizes="(max-width: 377px) 100vw, 377px" /></figure>



<p>ಆರೋಗ್ಯದಲ್ಲಿ ಎಲ್ಲಾ ರೀತಿಯಲ್ಲೂ ಏನೂ ಸಮಸ್ಯೆ ಇಲ್ಲದ ಮಗಳಿಗೆ ಇದ್ದಕ್ಕಿದ್ದಂತೆ ಅನಾರೋಗ್ಯ ಕಾಡಿದ ಬಗ್ಗೆ, ಅದರಲ್ಲೂ ಸಾವಿಗೆ ಕಾರಣವಾಗುವ ಅನಾರೋಗ್ಯ ಉಲ್ಬಣಿಸಿದ ಬಗ್ಗೆ ಪೋಷಕರಿಗೆ ಅನುಮಾನ ವ್ಯಕ್ತವಾಗಿದೆ. ಈ ಕಾರಣದಿಂದ ಇದೊಂದು ಅಸಹಜ ಸಾವು. ಸಾವಿನ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ನಡೆಸಬೇಕು ಎಂಬ ಕಾರಣಕ್ಕೆ ಪೋಷಕರು ಶಾಲೆಯ ಆಡಳಿತ ಮಂಡಳಿ ಮೇಲೆ ದೂರು ದಾಖಲು ಮಾಡಿದ್ದಾರೆ. ಮೃತ ತೇಜಸ್ವಿನಿ ಮರಣೋತ್ತರ ಪರೀಕ್ಷೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮೃತದೇಹವನ್ನು ಕಳಿಸಲಾಗಿದೆ.</p>



<p>ಈ ಎಲ್ಲಾ ಹಿನ್ನೆಲೆಯಲ್ಲಿ ಮೃತ ವಿದ್ಯಾರ್ಥಿನಿ ತೇಜಸ್ವಿನಿ ಸಾವಿನ ಸುತ್ತ ನಿಗೂಢವಾಗಿ ಒಂದಷ್ಟು ಪ್ರಶ್ನೆಗಳು ಉದ್ಭವಿಸಿದೆ. ಅದರಂತೆ ಹಾಸ್ಟೆಲ್ ಮಕ್ಕಳನ್ನು ವಿಚಾರಿಸಿದರೆ ಹೆಚ್ಚಿನ ಮಾಹಿತಿ ಸಿಗುವ ಸಾಧ್ಯತೆ ಇದೆ.<br><strong>ಪೀಪಲ್ ಟಿವಿ </strong>ಗೆ ಸಿಕ್ಕ ಮಾಹಿತಿಯಂತೆ<br>* ಹಿಂದಿನ ದಿನ ಮೃತ ತೇಜಸ್ವಿನಿಯ ಕಾಲಿನ ಭಾಗಕ್ಕೆ ತುಂಬಾ ನೋವುಂಟಾದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹೆಚ್.ಪಿ.ಮಂಜಪ್ಪನೇ ಖುದ್ದು ಕಾಲಿಗೆ ನೋವಿನ ಎಣ್ಣೆ ಹಚ್ಚಿದ್ದಾರೆ.<br>* ಕಾಲಿಗೆ ನೋವಿನ ಎಣ್ಣೆ ಹಚ್ಚುವಾಗ ಬೇರೆ ಯಾವ ವಿದ್ಯಾರ್ಥಿಗಳೂ ಹಾಸ್ಟೆಲ್ ರೂಮಿನ ಬಳಿಗೆ ಬಾರದಂತೆ ತಡೆದಿದ್ದರು ಎಂದು ಶಾಲೆಯ ಮಕ್ಕಳ ಕಡೆಯಿಂದ ಬಂದ ಮಾಹಿತಿ.<br>* ಪೋಷಕರು ಆಸ್ಪತ್ರೆಗೆ ದಾಖಲು ಮಾಡಲು ತಿಳಿಸಿದರೂ ತಾವೇ ಚಿಕಿತ್ಸೆ ನೀಡಲು ಮುಂದಾಗಿದ್ದು ಮತ್ತೊಂದು ಅನುಮಾನಕ್ಕೆ ಕಾರಣವಾಗಿದೆ.<br>* ಇದಾದ ನಂತರ ಬಲ್ಲ ಮೂಲಗಳ ಮಾಹಿತಿಯಂತೆ ಸಂಸ್ಥೆಯ ಮುಖ್ಯಸ್ಥ ಹೆಚ್.ಪಿ.ಮಂಜಪ್ಪ ಮೃತ ತೇಜಸ್ವಿನಿ ಮತ್ತು ಇನ್ನೊಬ್ಬ ವಿದ್ಯಾರ್ಥಿನಿ ಮಧುಗೆ ಒಂದೂವರೆ ಬಕೆಟ್ ನೀರನ್ನು ಒತ್ತಾಯಪೂರ್ವಕವಾಗಿ ಕುಡಿಸಿದ್ದಾರೆ.</p>



<figure class="wp-block-image size-large is-resized"><img loading="lazy" decoding="async" src="https://peepalmedia.com/wp-content/uploads/2023/06/IMG_20230610_120002-1024x696.jpg" alt="" class="wp-image-22262" width="377" height="256" srcset="https://peepalmedia.com/wp-content/uploads/2023/06/IMG_20230610_120002-1024x696.jpg 1024w, https://peepalmedia.com/wp-content/uploads/2023/06/IMG_20230610_120002-300x204.jpg 300w, https://peepalmedia.com/wp-content/uploads/2023/06/IMG_20230610_120002-768x522.jpg 768w, https://peepalmedia.com/wp-content/uploads/2023/06/IMG_20230610_120002-150x102.jpg 150w, https://peepalmedia.com/wp-content/uploads/2023/06/IMG_20230610_120002-696x473.jpg 696w, https://peepalmedia.com/wp-content/uploads/2023/06/IMG_20230610_120002-1068x726.jpg 1068w, https://peepalmedia.com/wp-content/uploads/2023/06/IMG_20230610_120002.jpg 1080w" sizes="auto, (max-width: 377px) 100vw, 377px" /></figure>



<p>* ಇಷ್ಟೆಲ್ಲಾ ಆಧುನಿಕ ತಂತ್ರಜ್ಞಾನದ ಚಿಕಿತ್ಸೆ ವೈದ್ಯಕೀಯ ಲೋಕದಲ್ಲಿ ಲಭ್ಯವಿದ್ದರೂ ವಿದ್ಯಾರ್ಥಿನಿಯರಿಗೆ ಬಕೆಟ್ ಗಟ್ಟಲೆ ನೀರನ್ನು ಕುಡಿಸಿದ್ದು ಯಾಕೆ? ಇದು ಮಕ್ಕಳ ಆರೋಗ್ಯಕ್ಕೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಸಾಮಾನ್ಯ ಜ್ಞಾನ ಯಾಕೆ ಸಂಸ್ಥೆಯ ಮುಖ್ಯಸ್ಥ ಹೆಚ್.ಪಿ.ಮಂಜಪ್ಪನವರಿಗೆ ಬಂದಿಲ್ಲ ಎಂಬುದು ದೊಡ್ಡ ಪ್ರಶ್ನೆ.<br>* ಇನ್ನು ಶಾಲೆಯ ಚಟುವಟಿಕೆಗಳ ಬಗ್ಗೆ ಸ್ಥಳೀಯರಲ್ಲಿ ಹಲವಷ್ಟು ಅನುಮಾನಗಳಿದ್ದು, ಇಲ್ಲಿ ನಡೆಯುವ ಯಾವೊಂದು ಚಟುವಟಿಕೆಗಳೂ ಹೊರ ಬಾರದೇ ಇರುವಂತೆ ಹಲವಷ್ಟು ವರ್ಷಗಳಿಂದ ಗೌಪ್ಯತೆ ಕಾಪಾಡುತ್ತಾ ಬಂದಿರುವ ಬಗ್ಗೆಯೂ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.</p>



<p>ಸಧ್ಯಕ್ಕೆ ಇವೆಲ್ಲಾ ಕಾರಣಗಳಿಂದ ಅಪ್ರಾಪ್ತ ಬಾಲಕಿ ತೇಜಸ್ವಿನಿ ಸಾವಿನ ಹಿನ್ನೆಲೆಯಲ್ಲಿ ಅನುಮಾನಗಳು ವ್ಯಕ್ತವಾಗಿದ್ದು ಇತ್ತ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಹಿನ್ನೆಲೆಯಲ್ಲಿ ತೇಜಸ್ವಿನಿ ಪೋಷಕರು ನೀಡಿದ ದೂರಿನ ಅನ್ವಯ ಸಾಗರ ಗ್ರಾಮಾಂತರ ಠಾಣೆಯಲ್ಲಿ FIR ದಾಖಲಾಗಿದೆ.  </p>



<figure class="wp-block-image size-large"><img loading="lazy" decoding="async" width="819" height="1024" src="https://peepalmedia.com/wp-content/uploads/2023/06/IMG-20230610-WA0009-819x1024.jpg" alt="" class="wp-image-22266" srcset="https://peepalmedia.com/wp-content/uploads/2023/06/IMG-20230610-WA0009-819x1024.jpg 819w, https://peepalmedia.com/wp-content/uploads/2023/06/IMG-20230610-WA0009-240x300.jpg 240w, https://peepalmedia.com/wp-content/uploads/2023/06/IMG-20230610-WA0009-768x960.jpg 768w, https://peepalmedia.com/wp-content/uploads/2023/06/IMG-20230610-WA0009-1229x1536.jpg 1229w, https://peepalmedia.com/wp-content/uploads/2023/06/IMG-20230610-WA0009-150x188.jpg 150w, https://peepalmedia.com/wp-content/uploads/2023/06/IMG-20230610-WA0009-300x375.jpg 300w, https://peepalmedia.com/wp-content/uploads/2023/06/IMG-20230610-WA0009-696x870.jpg 696w, https://peepalmedia.com/wp-content/uploads/2023/06/IMG-20230610-WA0009-1068x1335.jpg 1068w, https://peepalmedia.com/wp-content/uploads/2023/06/IMG-20230610-WA0009.jpg 1280w" sizes="auto, (max-width: 819px) 100vw, 819px" /></figure>



<figure class="wp-block-image size-large"><img loading="lazy" decoding="async" width="819" height="1024" src="https://peepalmedia.com/wp-content/uploads/2023/06/IMG-20230610-WA0010-819x1024.jpg" alt="" class="wp-image-22267" srcset="https://peepalmedia.com/wp-content/uploads/2023/06/IMG-20230610-WA0010-819x1024.jpg 819w, https://peepalmedia.com/wp-content/uploads/2023/06/IMG-20230610-WA0010-240x300.jpg 240w, https://peepalmedia.com/wp-content/uploads/2023/06/IMG-20230610-WA0010-768x960.jpg 768w, https://peepalmedia.com/wp-content/uploads/2023/06/IMG-20230610-WA0010-1229x1536.jpg 1229w, https://peepalmedia.com/wp-content/uploads/2023/06/IMG-20230610-WA0010-150x188.jpg 150w, https://peepalmedia.com/wp-content/uploads/2023/06/IMG-20230610-WA0010-300x375.jpg 300w, https://peepalmedia.com/wp-content/uploads/2023/06/IMG-20230610-WA0010-696x870.jpg 696w, https://peepalmedia.com/wp-content/uploads/2023/06/IMG-20230610-WA0010-1068x1335.jpg 1068w, https://peepalmedia.com/wp-content/uploads/2023/06/IMG-20230610-WA0010.jpg 1280w" sizes="auto, (max-width: 819px) 100vw, 819px" /></figure>



<p>ಇದರ ಜೊತೆಗೆ ಸ್ಥಳೀಯರು ತೇಜಸ್ವಿನಿ ಸಾವಿಗೆ ಸೂಕ್ತ ತನಿಖೆ ನಡೆಸಬೇಕು ಹಾಗೂ ಶಾಲಾ ಮುಖ್ಯಸ್ಥ ಹೆಚ್.ಪಿ ಮಂಜಪ್ಪ ಒಬ್ಬ ಪ್ರಭಾವಿ ವ್ಯಕ್ತಿಯಾಗಿರುವ ಹಿನ್ನೆಲೆಯಲ್ಲಿ ಸಾಕ್ಷ್ಯ ನಾಶ ಮಾಡಬಹುದಾದ ಅನುಮಾನ ಕೂಡಾ ವ್ಯಕ್ತವಾಗಿದೆ. ಹಾಗಾಗಿ ಸ್ಥಳೀಯರು ಹಾಗೂ ಸಾಮಾಜಿಕ ಹೋರಾಟಗಾರರು #JustiseForTejaswini ಅಭಿಯಾನಕ್ಕೆ ಕರೆ ನೀಡಿದ್ದಾರೆ. ಸತ್ಯಾಸತ್ಯತೆ ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.</p>
]]></content:encoded>
					
		
		
			</item>
		<item>
		<title>ರೇಣುಕಾಚಾರ್ಯರವರ ಸಹೋದರ ಪುತ್ರನ ಸಾವು ತನಿಖೆಯಾಗಬೇಕು: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ</title>
		<link>https://peepalmedia.com/death-of-renukacharyas-nephew-should-be-probed-siddaramaiah-demands-govt/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 04 Nov 2022 07:02:32 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[BASAVARAJ BOMMAYI]]></category>
		<category><![CDATA[chandrashekar death]]></category>
		<category><![CDATA[india]]></category>
		<category><![CDATA[investigation]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[karnataka govt]]></category>
		<category><![CDATA[mp renukacharya]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[siddaramayya]]></category>
		<guid isPermaLink="false">https://peepalmedia.com/?p=14084</guid>

					<description><![CDATA[ಬೆಂಗಳೂರು: ಶಾಸಕ ಎಂ.ಪಿ. ರೇಣುಕಾಚಾರ್ಯರವರ ಸಹೋದರನ ಪುತ್ರ ಚಂದ್ರಶೇಖರ್ ಸಾವು ಅನುಮಾನಸ್ಪದವಾಗಿ ಕಂಡುಬರುತ್ತಿದ್ದು, ಈ ಬಗ್ಗೆ ಸರ್ಕಾರ ತನಿಖೆ ನಡೆಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯರವರು, ಶಾಸಕ ರೇಣುಕಾಚಾರ್ಯ ಅವರ ಸೋದರನ ಮಗನ ಸಾವಿನ ಸುದ್ದಿ ಕೇಳಿ ಆಘಾತವಾಯಿತು. ಮೃತ ಚಂದ್ರಶೇಖರ್ ಅವರ ತಂದೆ-ತಾಯಿ ಮತ್ತು ಸಂಬಂಧಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ತಿಳಿಸಿದ್ದಾರೆ. ಚಂದ್ರಶೇಖರ್ ಅವರ ಸಾವು ಅನುಮಾನಾಸ್ಪದವಾಗಿ ಕಾಣುತ್ತಿದ್ದು, ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು:</strong> ಶಾಸಕ ಎಂ.ಪಿ. ರೇಣುಕಾಚಾರ್ಯರವರ ಸಹೋದರನ ಪುತ್ರ ಚಂದ್ರಶೇಖರ್ ಸಾವು ಅನುಮಾನಸ್ಪದವಾಗಿ ಕಂಡುಬರುತ್ತಿದ್ದು, ಈ ಬಗ್ಗೆ ಸರ್ಕಾರ ತನಿಖೆ ನಡೆಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.</p>



<p style="font-size:20px">ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯರವರು, ಶಾಸಕ ರೇಣುಕಾಚಾರ್ಯ ಅವರ ಸೋದರನ ಮಗನ ಸಾವಿನ ಸುದ್ದಿ ಕೇಳಿ ಆಘಾತವಾಯಿತು. ಮೃತ ಚಂದ್ರಶೇಖರ್ ಅವರ ತಂದೆ-ತಾಯಿ ಮತ್ತು ಸಂಬಂಧಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ತಿಳಿಸಿದ್ದಾರೆ.</p>



<p style="font-size:20px">ಚಂದ್ರಶೇಖರ್ ಅವರ ಸಾವು ಅನುಮಾನಾಸ್ಪದವಾಗಿ ಕಾಣುತ್ತಿದ್ದು, ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಶಾಸಕ ರೇಣುಕಾಚಾರ್ಯ ಅವರ ಸೋದರನ ಮಗನ ಸಾವಿನ ಸುದ್ದಿ ಕೇಳಿ ಆಘಾತವಾಯಿತು.<br><br>ಮೃತ ಚಂದ್ರಶೇಖರ್ ಅವರ ತಂದೆ-ತಾಯಿ ಮತ್ತು ಸಂಬಂಧಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ.<br><br>ಅನುಮಾನಾಸ್ಪದವಾಗಿ ಕಾಣುತ್ತಿರುವ ಈ ಸಾವಿನ  ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು <a href="https://twitter.com/CMofKarnataka?ref_src=twsrc%5Etfw">@CMofKarnataka</a> ಅವರನ್ನು ಒತ್ತಾಯಿಸುತ್ತೇನೆ.</p>&mdash; Siddaramaiah (@siddaramaiah) <a href="https://twitter.com/siddaramaiah/status/1588393790024585216?ref_src=twsrc%5Etfw">November 4, 2022</a></blockquote><script async src="https://platform.twitter.com/widgets.js" charset="utf-8"></script>
</div></figure>



<p style="font-size:20px">ಶಾಸಕ ಎಂ.ಪಿ. ರೇಣುಕಾಚಾರ್ಯರವರ ಸಹೋದರನ ಮಗ ಚಂದ್ರಶೇಖರ್ 5 ದಿನಗಳಿಂದ ನಾಪತ್ತೆಯಾಗಿದ್ದರು. ಬಳಿಕ ಹೊನ್ನಾಳಿ ಮತ್ತು ನ್ಯಾಮತಿ ಮಾರ್ಗ ಮಧ್ಯೆ ಇರುವ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಅವರ ಕಾರು ಪತ್ತೆಯಾಗಿತ್ತು. ನಂತರ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ, ಕಾರಿನ ಹಿಂಭಾಗದಲ್ಲಿ ಶವ ಪತ್ತೆಯಾಗಿದೆ.</p>



<figure class="wp-block-image size-full"><img loading="lazy" decoding="async" width="696" height="401" src="https://peepalmedia.com/wp-content/uploads/2022/11/chandrashekar-1.jpg" alt="" class="wp-image-14088" srcset="https://peepalmedia.com/wp-content/uploads/2022/11/chandrashekar-1.jpg 696w, https://peepalmedia.com/wp-content/uploads/2022/11/chandrashekar-1-300x173.jpg 300w, https://peepalmedia.com/wp-content/uploads/2022/11/chandrashekar-1-150x86.jpg 150w" sizes="auto, (max-width: 696px) 100vw, 696px" /><figcaption class="wp-element-caption">ಚಂದ್ರಶೇಕರ್‌ ಕಾರು ಪತ್ತೆಯಾಗಿದ್ದ ದೃಶ್ಯ</figcaption></figure>



<p style="font-size:20px">ಈ ಕಾರಣ ಮೃತ ಚಂದ್ರಶೇಖರ್ ಅವರ ಸಾವು ಅನುಮಾನಸ್ಪದವಾಗಿದ್ದು, ಆಕಸ್ಮಿಕವಾಗಿರಲು ಸಾಧ್ಯವಿಲ್ಲ ಎನ್ನುವುದು ಹಲವರ ಅಭಿಪ್ರಾಯವಾಗಿದೆ.</p>
]]></content:encoded>
					
		
		
			</item>
		<item>
		<title>ಮಳವಳ್ಳಿ ಅತ್ಯಾಚಾರ ಪ್ರಕರಣ: ಮಕ್ಕಳ ಆಯೋಗಕ್ಕೆ ಎಎಪಿ ದೂರು, ಸಿಬಿಐ ತನಿಖೆಗೆ ಆಗ್ರಹ</title>
		<link>https://peepalmedia.com/malavalli-rape-aap-complains-to-child-commission-demands-cbi-probe/</link>
		
		<dc:creator><![CDATA[Peepal Media]]></dc:creator>
		<pubDate>Fri, 14 Oct 2022 09:42:40 +0000</pubDate>
				<category><![CDATA[ವಿಶೇಷ]]></category>
		<category><![CDATA[APP]]></category>
		<category><![CDATA[CBI]]></category>
		<category><![CDATA[investigation]]></category>
		<category><![CDATA[karnataka]]></category>
		<category><![CDATA[malavalli]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=10650</guid>

					<description><![CDATA[ಮಳವಳ್ಳಿಯಲ್ಲಿ 10 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಕ್ಕಳ ಹಕ್ಕು ಆಯೋಗಕ್ಕೆ ದೂರು ನೀಡಿದೆ. ಆಮ್ ಆದ್ಮಿ ಪಕ್ಷದ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಕುಶಲಸ್ವಾಮಿಯವರು ಮಾತನಾಡಿ “ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಅಕ್ಟೋಬರ್‌ 11, 2022ರಂದು ಹತ್ತು ವರ್ಷದ ಬಾಲಕಿಯನ್ನು ಅತ್ಯಾಚಾರ ಹಾಗೂ ಕೊಲೆ ಮಾಡಿರುವ ದುರ್ಘಟನೆ ನಡೆದಿದೆ. ಕೊಲೆ ಬಳಿಕ ಆಕೆಯ ಮೃತದೇಹವನ್ನು [&#8230;]]]></description>
										<content:encoded><![CDATA[
<p style="font-size:20px">ಮಳವಳ್ಳಿಯಲ್ಲಿ 10 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಕ್ಕಳ ಹಕ್ಕು ಆಯೋಗಕ್ಕೆ ದೂರು ನೀಡಿದೆ.</p>



<p style="font-size:20px">ಆಮ್ ಆದ್ಮಿ ಪಕ್ಷದ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಕುಶಲಸ್ವಾಮಿಯವರು ಮಾತನಾಡಿ “ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಅಕ್ಟೋಬರ್‌ 11, 2022ರಂದು ಹತ್ತು ವರ್ಷದ ಬಾಲಕಿಯನ್ನು ಅತ್ಯಾಚಾರ ಹಾಗೂ ಕೊಲೆ ಮಾಡಿರುವ ದುರ್ಘಟನೆ ನಡೆದಿದೆ. ಕೊಲೆ ಬಳಿಕ ಆಕೆಯ ಮೃತದೇಹವನ್ನು ನಿರ್ಮಾಣ ಹಂತದ ಕಟ್ಟಡದ ಸಂಪ್‌ ಒಳಗೆ ಎಸೆಯಲಾಗಿರುತ್ತದೆ. ಘಟನೆಗೆ ಸಂಬಂಧಿಸಿ ಕಾಂತರಾಜು ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತಾನೇ ದುಷ್ಕೃತ್ಯ ಎಸೆದಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ. ಬಂಧಿತ ಆರೋಪಿಯು ಈ ಹಿಂದೆಯೂ ಇಂತಹ ದುಷ್ಕೃತ್ಯ ಎಸಗಿದ್ದರೂ ಆತನ ವಿರುದ್ಧ ಪೊಲೀಸರು ಯಾವುದೇ ಕಠಿಣ ಕ್ರಮ ಕೈಗೊಂಡಿರುವುದಿಲ್ಲ. ಪರಿಣಾಮವಾಗಿ. ಈಗ ಮಳವಳ್ಳಿಯ ಅಮಾಯಕ ಬಾಲಕಿ ಆತನಿಂದ ಬಲಿಯಾಗಿದ್ದಾಳೆ” ಎಂದು ಹೇಳಿದರು.</p>



<p style="font-size:20px">“ಇದೊಂದು ಗಂಭೀರ ಪ್ರಕರಣವಾಗಿದ್ದು, ಪೊಲೀಸ್‌ ಇಲಾಖೆಯ ವೈಫಲ್ಯವು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆದ್ದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸುತ್ತಿದ್ದೇವೆ. ಬಾಲಕಿಯ ಅತ್ಯಾಚಾರ ಹಾಗೂ ಕೊಲೆಗೆ ಕಾರಣರಾದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು. ಆಗ ಮಾತ್ರ ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸುವುದು ಕಡಿಮೆಯಾಗುತ್ತದೆ” ಎಂದು ಕುಶಲಸ್ವಾಮಿ ಹೇಳಿದರು.</p>



<figure class="wp-block-image size-large"><img loading="lazy" decoding="async" width="1024" height="462" src="https://peepalmedia.com/wp-content/uploads/2022/10/IMG-20221014-WA0036-1024x462.jpg" alt="" class="wp-image-10654" srcset="https://peepalmedia.com/wp-content/uploads/2022/10/IMG-20221014-WA0036-1024x462.jpg 1024w, https://peepalmedia.com/wp-content/uploads/2022/10/IMG-20221014-WA0036-300x135.jpg 300w, https://peepalmedia.com/wp-content/uploads/2022/10/IMG-20221014-WA0036-768x347.jpg 768w, https://peepalmedia.com/wp-content/uploads/2022/10/IMG-20221014-WA0036-150x68.jpg 150w, https://peepalmedia.com/wp-content/uploads/2022/10/IMG-20221014-WA0036-696x314.jpg 696w, https://peepalmedia.com/wp-content/uploads/2022/10/IMG-20221014-WA0036-1068x482.jpg 1068w, https://peepalmedia.com/wp-content/uploads/2022/10/IMG-20221014-WA0036.jpg 1280w" sizes="auto, (max-width: 1024px) 100vw, 1024px" /></figure>



<p style="font-size:20px">“ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದರಲ್ಲಿ ರಾಜ್ಯ ಗೃಹ ಇಲಾಖೆ ವಿಫಲವಾಗಿದೆ. ಇದರಿಂದಾಗಿ ಕಾಮುಕರಿಗೆ ಕಾನೂನಿನ ಭಯವೇ ಇಲ್ಲವಾಗಿದೆ. ಮಾಧ್ಯಮಗಳಲ್ಲಿ ದೊಡ್ಡದಾಗಿ ವರದಿಯಾಗುವ ಪ್ರಕರಣಗಳನ್ನಷ್ಟೇ ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಕೆಲವು ತಿಂಗಳ ಹಿಂದೆ ಮೈಸೂರಿನಲ್ಲಿ ಯುವತಿ ಮೇಲೆ ಅತ್ಯಾಚಾರವಾದಾಗ, ಸಂತ್ರಸ್ತೆಯು ಆ ವೇಳೆ ಅಲ್ಲಿಗೆ ಬಂದಿದ್ದೇ ತಪ್ಪೆಂಬಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತಾನಾಡಿದ್ದರು. ಗೃಹ ಸಚಿವರ ಇಂತಹ ಮನಸ್ಥಿತಿಯಿಂದಾಗಿ ಕಾಮುಕರಿಗೆ ಹೆದರಿಕೆ ಇಲ್ಲದಂತಾಗಿದೆ” ಎಂದು ಕುಶಲಸ್ವಾಮಿ ಹೇಳಿದರು.</p>
]]></content:encoded>
					
		
		
			</item>
		<item>
		<title>ಪ್ರವೀಣ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನ</title>
		<link>https://peepalmedia.com/praveen-nettaru-hatyege-sambandisidante-ibbaru-aaropigala-bandana/</link>
		
		<dc:creator><![CDATA[Peepal Media]]></dc:creator>
		<pubDate>Thu, 28 Jul 2022 07:49:06 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[india]]></category>
		<category><![CDATA[investigation]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mangalore]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[praveen nettaru]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=267</guid>

					<description><![CDATA[ಮಂಗಳೂರು: ಮಂಗಳವಾರ ರಾತ್ರಿ ಬಿಜೆಪಿಯ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿ ಋಷಿಕೇಶ ಸೋನಾವಾಣೆ ಹೇಳಿಕೆ ನೀಡಿದ್ದಾರೆ. ಸವಣೂರು ಮೂಲದ ಝಾಕೀರ್ (29) ಮತ್ತು ಶಫೀಕ್ ಬೆಳ್ಳಾರೆ (27) ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾಗಿದ್ದು, ವಿಚಾರಣೆ ವೇಳೆ ಆರೋಪಿಗಳು ಹಲವು ಮಾಹಿತಿಗಳನ್ನು ಪೊಲೀಸರಿಗೆ ತಿಳಿಸಿದ್ದಾರೆ.   ಈ ವಿಚಾರವಾಗಿ ಪೊಲೀಸರು &#160;5 ತಂಡಗಳನ್ನು ರಚಿಸಿದ್ದು ಆರೋಪಿಗಳನ್ನು ಬಂಧಿಸಲು ತಂಡಗಳನ್ನು ಕೇರಳಕ್ಕೆ ಕಳುಹಿಸಲಾಗಿದೆ.]]></description>
										<content:encoded><![CDATA[
<p class="has-medium-font-size"><strong>ಮಂಗಳೂರು:</strong> ಮಂಗಳವಾರ ರಾತ್ರಿ ಬಿಜೆಪಿಯ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿ ಋಷಿಕೇಶ ಸೋನಾವಾಣೆ ಹೇಳಿಕೆ ನೀಡಿದ್ದಾರೆ.</p>



<p class="has-medium-font-size">ಸವಣೂರು ಮೂಲದ ಝಾಕೀರ್ (29) ಮತ್ತು ಶಫೀಕ್ ಬೆಳ್ಳಾರೆ (27) ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾಗಿದ್ದು, ವಿಚಾರಣೆ ವೇಳೆ ಆರೋಪಿಗಳು ಹಲವು ಮಾಹಿತಿಗಳನ್ನು ಪೊಲೀಸರಿಗೆ ತಿಳಿಸಿದ್ದಾರೆ.  </p>



<p class="has-medium-font-size">ಈ ವಿಚಾರವಾಗಿ ಪೊಲೀಸರು &nbsp;5 ತಂಡಗಳನ್ನು ರಚಿಸಿದ್ದು ಆರೋಪಿಗಳನ್ನು ಬಂಧಿಸಲು ತಂಡಗಳನ್ನು ಕೇರಳಕ್ಕೆ ಕಳುಹಿಸಲಾಗಿದೆ.</p>
]]></content:encoded>
					
		
		
			</item>
	</channel>
</rss>
