<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>jaggi vasudev &#8211; Peepal Media</title>
	<atom:link href="https://peepalmedia.com/tag/jaggi-vasudev/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 02 Oct 2024 08:47:19 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>jaggi vasudev &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಜಗ್ಗಿ ವಾಸುದೇವ್ ಇಶಾ ಫೌಂಡೇಶನ್ ಮೇಲೆ ಪೊಲೀಸರ ದಾಳಿ</title>
		<link>https://peepalmedia.com/police-raid-on-jaggi-vasudevs-isha-foundation/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 02 Oct 2024 08:05:40 +0000</pubDate>
				<category><![CDATA[ಅಪರಾಧ]]></category>
		<category><![CDATA[adiyogi]]></category>
		<category><![CDATA[coimbatore]]></category>
		<category><![CDATA[isha foundation]]></category>
		<category><![CDATA[jaggi vasudev]]></category>
		<category><![CDATA[madras hc]]></category>
		<category><![CDATA[madras high court]]></category>
		<category><![CDATA[tamil nadu]]></category>
		<category><![CDATA[Tamil Nadu Police]]></category>
		<category><![CDATA[Thondamuthur]]></category>
		<category><![CDATA[ಅದಿಯೊಗಿ]]></category>
		<guid isPermaLink="false">https://peepalmedia.com/?p=46559</guid>

					<description><![CDATA[ಬೆಂಗಳೂರು: ತಮಿಳುನಾಡು ಪೊಲೀಸರು ಮಂಗಳವಾರ ಕೊಯಮತ್ತೂರು ಜಿಲ್ಲೆಯ ತೊಂಡಮುತ್ತೂರಿನಲ್ಲಿರುವ ಸ್ವಯಂಘೋಷಿತ ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್‌ನಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ, ಮದ್ರಾಸ್ ಹೈಕೋರ್ಟ್ ಈ ಸಂಸ್ಥೆಯ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳ ಕುರಿತು ವರದಿಯನ್ನು ಕೋರಿದ ಒಂದು ದಿನದ ನಂತರ ಇದು ನಡೆದಿದೆ. ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ ನೇತೃತ್ವದಲ್ಲಿ ಸುಮಾರು 150 ಪೊಲೀಸ್ ಅಧಿಕಾರಿಗಳು ಮತ್ತು ಮೂವರು ಉಪ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒಳಗೊಂಡ ತಂಡ ಶೋಧಕಾರ್ಯ ಆರಂಭಿಸಿದೆ. ಇಶಾ ಫೌಂಡೇಶನ್‌ನ ಸಿಬ್ಬಂದಿಗಳ ಪರಿಶೀಲನೆ ನಡೆಸಲಾಯಿತು [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ತಮಿಳುನಾಡು <a href="https://indianexpress.com/article/india/sadhguru-isha-foundation-search-madras-high-court-order-9598107/?ref=hometop_hp">ಪೊಲೀಸರು</a> ಮಂಗಳವಾರ ಕೊಯಮತ್ತೂರು ಜಿಲ್ಲೆಯ ತೊಂಡಮುತ್ತೂರಿನಲ್ಲಿರುವ ಸ್ವಯಂಘೋಷಿತ ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್‌ನಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ, ಮದ್ರಾಸ್ ಹೈಕೋರ್ಟ್ ಈ ಸಂಸ್ಥೆಯ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳ ಕುರಿತು ವರದಿಯನ್ನು ಕೋರಿದ ಒಂದು ದಿನದ ನಂತರ ಇದು ನಡೆದಿದೆ.</p>



<p>ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ ನೇತೃತ್ವದಲ್ಲಿ ಸುಮಾರು 150 ಪೊಲೀಸ್ ಅಧಿಕಾರಿಗಳು ಮತ್ತು ಮೂವರು ಉಪ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒಳಗೊಂಡ ತಂಡ ಶೋಧಕಾರ್ಯ ಆರಂಭಿಸಿದೆ. ಇಶಾ ಫೌಂಡೇಶನ್‌ನ ಸಿಬ್ಬಂದಿಗಳ ಪರಿಶೀಲನೆ ನಡೆಸಲಾಯಿತು ಮತ್ತು ಅದರ ಭಾಗವಾಗಿ ಕೊಠಡಿಗಳನ್ನು ಶೋಧಿಸಲಾಗಿದೆ ಎಂದು ಹೆಸರು ಹೇಳಲು ಬಯಸದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ <em>ದಿ ಇಂಡಿಯನ್ ಎಕ್ಸ್‌ಪ್ರೆಸ್</em> ವರದಿ ಮಾಡಿದೆ.</p>



<p>ಸೋಮವಾರ ಎಸ್.ಎಂ.ಸುಬ್ರಮಣ್ಯಂ ಮತ್ತು ವಿ.ಶಿವಜ್ಞಾನಂ ನ್ಯಾಯಪೀಠವು ಎಸ್.ಕಾಮರಾಜ್ ಎಂಬ ನಿವೃತ್ತ ಪ್ರಾಧ್ಯಾಪಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿತು.</p>



<p>ತಮ್ಮ ಇಬ್ಬರು ಪುತ್ರಿಯರಾದ 42 ವರ್ಷದ ಗೀತಾ ಕಾಮರಾಜ್ ಮತ್ತು 39 ವರ್ಷದ ಲತಾ ಕಾಮರಾಜ್ ಅವರನ್ನು ಫೌಂಡೇಶನ್‌ನಲ್ಲಿರುವ ಯೋಗ ಕೇಂದ್ರದಲ್ಲಿ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>



<p>ಎಸ್ ಕಾಮರಾಜ್, ಈ ಸಂಸ್ಥೆಯು ವ್ಯಕ್ತಿಗಳ ಬ್ರೈನ್ ವಾಶ್ ಮಾಡುತ್ತಿದೆ, ಅವರನ್ನು ಸನ್ಯಾಸಿಗಳಾಗಿ ಪರಿವರ್ತಿಸುತ್ತಿದೆ ಮತ್ತು ಅವರ ಕುಟುಂಬಗಳೊಂದಿಗೆ ಅವರ ಸಂಪರ್ಕವನ್ನು ನಿರ್ಬಂಧಿಸುತ್ತಿದೆ ಎಂದು ಆರೋಪ ಮಾಡಿದ್ದರು.</p>



<p>ಯುನೈಟೆಡ್ ಕಿಂಗ್‌ಡಮ್‌ನ ವಿಶ್ವವಿದ್ಯಾನಿಲಯದಿಂದ ಮೆಕಾಟ್ರಾನಿಕ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದ ತಮ್ಮ ಹಿರಿಯ ಮಗಳು 2008 ರಲ್ಲಿ ತನ್ನ ಪತಿಗೆ ವಿಚ್ಛೇದನ ನೀಡುವ ಮೊದಲು ಗಣನೀಯ ಸಂಬಳವನ್ನು ಪಡೆಯುತ್ತಿದ್ದರು ಎಂದು ನಿವೃತ್ತ ಪ್ರಾಧ್ಯಾಪಕ ಕಾಮರಾಜ್ ಹೇಳಿದ್ದರು. ವಿಚ್ಛೇದನದ ನಂತರ ಅವರು ಈಶಾ ಫೌಂಡೇಶನ್‌ನಲ್ಲಿ ಯೋಗ ತರಗತಿಗಳಿಗೆ ಹಾಜರಾಗಲು ಪ್ರಾರಂಭಿಸಿದರು.</p>



<p>ಇದಾದ ಮೇಲೆ ಅಕ್ಕನಂತೆ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ತಂಗಿಯೂ ಈಶಾ ಫೌಂಡೇಶನ್‌ಗೆ ಹೋಗಲು ಆರಂಭಿಸಿದರು, ಕೊನೆಗೆ ಅಲ್ಲಿಯೇ ಶಾಶ್ವತವಾಗಿ ಉಳಿಯಲು ನಿರ್ಧರಿಸಿದರು ಎಂದು ಕಾಮರಾಜ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಫೌಂಡೇಶನ್ ಅವರ ಹೆಣ್ಣುಮಕ್ಕಳಿಗೆ‌ ನೀಡಿದ ಆಹಾರ ಮತ್ತು ಔಷಧಿಗಳನ್ನು ಅವರ ಅರಿವಿನ ಸಾಮರ್ಥ್ಯಗಳನ್ನು ಮಂದಗೊಳಿಸಿತು, ಇದು ಅವರ ಕುಟುಂಬದೊಂದಿಗೆ ಸಂಬಂಧವನ್ನು ಕಡಿತಗೊಳಿಸಲು ಕಾರಣವಾಯಿತು ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>



<p>ವಿಚಾರಣೆಯ ಸಂದರ್ಭದಲ್ಲಿ, ವಾಸುದೇವ್ ಅವರ ಸ್ವಂತ ಮಗಳನ್ನು ಮದುವೆಯಾಗಿ &#8220;ಚೆನ್ನಾಗಿ ನೆಲೆಸಿದ್ದಾಳೆ&#8221; ಎಂಬುದು ತಿಳಿದ ನಂತರ, ಇತರ <a href="https://peepalmedia.com/why-is-sadhguru-encouraging-women-to-live-like-hermits/">ಯುವತಿಯರ ತಲೆ ಕೆಡಿಸಿ ಸನ್ಯಾಸಿಗಳಂತೆ</a> ಬದುಕಲು ಏಕೆ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಪೀಠವು ಕೇಳಿತ್ತು.&nbsp;&nbsp;</p>



<figure class="wp-block-embed is-type-wp-embed is-provider-peepal-media wp-block-embed-peepal-media"><div class="wp-block-embed__wrapper">
<blockquote class="wp-embedded-content" data-secret="QyGq0OafEP"><a href="https://peepalmedia.com/why-is-sadhguru-encouraging-women-to-live-like-hermits/">ʼನಿಮ್ಮ ಮಗಳಿಗೆ ಮದುವೆ ಮಾಡಿಸಿ, ಬೇರೆಯವರ ಹೆಣ್ಣು ಮಕ್ಕಳನ್ನು ಏಕೆ ಸನ್ಯಾಸಿನಿಯರನ್ನಾಗಿ ಮಾಡುತ್ತಿದ್ದೀರಿ?ʼ ಸದ್ಗುರು ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ಪ್ರಶ್ನೆ</a></blockquote><iframe class="wp-embedded-content" sandbox="allow-scripts" security="restricted"  title="&#8220;ʼನಿಮ್ಮ ಮಗಳಿಗೆ ಮದುವೆ ಮಾಡಿಸಿ, ಬೇರೆಯವರ ಹೆಣ್ಣು ಮಕ್ಕಳನ್ನು ಏಕೆ ಸನ್ಯಾಸಿನಿಯರನ್ನಾಗಿ ಮಾಡುತ್ತಿದ್ದೀರಿ?ʼ ಸದ್ಗುರು ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ಪ್ರಶ್ನೆ&#8221; &#8212; Peepal Media" src="https://peepalmedia.com/why-is-sadhguru-encouraging-women-to-live-like-hermits/embed/#?secret=rxy4c4RlgX#?secret=QyGq0OafEP" data-secret="QyGq0OafEP" width="600" height="338" frameborder="0" marginwidth="0" marginheight="0" scrolling="no"></iframe>
</div></figure>



<p>ಆದರೆ ನ್ಯಾಯಾಲಯದಲ್ಲಿ ಹಾಜರಾಗಿದ್ದ ಅರ್ಜಿದಾರರ ಪುತ್ರಿಯರು, ತಮ್ಮ ಸ್ವ ಇಚ್ಛೆಯಿಂದ ಯೋಗ ಕೇಂದ್ರದಲ್ಲಿ ವಾಸವಿದ್ದು, ಯಾರೂ ತಮ್ಮ ಇಚ್ಛೆಗೆ ವಿರುದ್ಧವಾಗಿ ಬಂಧಿಸಿಲ್ಲ ಎಂದು ಹೇಳಿದ್ದಾರೆ..</p>



<p>ಈಶಾ ಫೌಂಡೇಶನ್‌ನ ವಕೀಲ ಕೆ ರಾಜೇಂದ್ರ ಕುಮಾರ್, ವಯಸ್ಕರು ತಮ್ಮ ಜೀವನದಲ್ಲಿ ತಮ್ಮದೇ ಆದ ಮಾರ್ಗವನ್ನು ಆರಿಸಿಕೊಳ್ಳಲು ಸ್ವತಂತ್ರರು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಮಹಿಳೆಯರು ತಮ್ಮ ಸ್ವಂತ ಇಚ್ಛೆಯ ಮೇರೆಗೆ ಕೆಲಸ ಮಾಡುತ್ತಿರುವುದರಿಂದ ಅಂತಹ ವೈಯಕ್ತಿಕ ನಿರ್ಧಾರಗಳ ಬಗ್ಗೆ ವಿಚಾರಣೆ ಅನಗತ್ಯ ಎಂದು ಅವರು ಹೇಳಿದರು.</p>



<p>ಇದಕ್ಕೆ &#8220;ನೀವು ಒಂದು ನಿರ್ದಿಷ್ಟ ಪಾರ್ಟಿಗಾಗಿ ಇಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರಣ ನಿಮಗೆ ಇದು ಅರ್ಥವಾಗುವುದಿಲ್ಲ&#8221; ಎಂದು ನ್ಯಾಯಮೂರ್ತಿ ಸುಬ್ರಮಣ್ಯಂ ಪ್ರತಿಕ್ರಿಯಿಸಿದರು. ಆದರೆ ಈ ನ್ಯಾಯಾಲಯ ಯಾರ ಪರವೂ ಅಲ್ಲ, ವಿರುದ್ಧವೂ ಅಲ್ಲ. ನಮ್ಮ ಮುಂದಿರುವ ದಾವೆದಾರರಿಗೆ ನ್ಯಾಯವನ್ನು ನೀಡುವುದನ್ನು ಮಾತ್ರ ನಾವು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ.</p>



<p>ಹೆಣ್ಣುಮಕ್ಕಳು ಮತ್ತು ಅವರ ಹೆತ್ತವರ ನಡುವಿನ ಸ್ಪಷ್ಟವಾದ ಹಗೆತನವನ್ನು ಗಮನಿಸಿದ ಸುಬ್ರಮಣಿಯಂ: “ನೀವು [ಅರ್ಜಿದಾರರ ಹೆಣ್ಣುಮಕ್ಕಳು] ಆಧ್ಯಾತ್ಮಿಕತೆಯ ಹಾದಿಯಲ್ಲಿದ್ದೀರಿ ಎಂದು ಹೇಳಿಕೊಳ್ಳುತ್ತೀರಿ. ನಿಮ್ಮ ತಂದೆ ತಾಯಿಯರನ್ನು ನಿರ್ಲಕ್ಷಿಸುವುದು ಪಾಪ ಎಂದು ನಿಮಗೆ ಅನಿಸುವುದಿಲ್ಲವೇ? &#8216;ಎಲ್ಲರನ್ನು ಪ್ರೀತಿಸಿ ಮತ್ತು ಯಾರನ್ನೂ ದ್ವೇಷಿಸಬೇಡಿ&#8217; ಎಂಬುದು ಭಕ್ತಿಯ ತತ್ವವಾಗಿದೆ ಆದರೆ ನಿಮ್ಮಲ್ಲಿ ನಿಮ್ಮ ಹೆತ್ತವರ ಬಗ್ಗೆ ತುಂಬಾ ದ್ವೇಷವನ್ನು ನಾವು ನೋಡಬಹುದು. ನೀವು ಅವರನ್ನು ಗೌರವಯುತವಾಗಿ ಸಂಬೋಧಿಸುತ್ತಿಲ್ಲ,” ಎಂದು ಕೇಳಿದ್ದಾರೆ.</p>



<p>ಅರ್ಜಿದಾರರ ಪರ ವಕೀಲ ಎಂ ಪುರುಷೋತ್ತಮನ್ ಅವರು, ಫೌಂಡೇಶನ್‌ಗೆ ಸಂಬಂಧಿಸಿದಂತೆ ಈ ಹಿಂದೆ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿದ್ದವು, ಇದು ದುರ್ನಡತೆ ಮತ್ತು ಕಾನೂನು ಉಲ್ಲಂಘನೆಯನ್ನು ಸೂಚಿಸುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.</p>



<p>ಈಶಾ ಫೌಂಡೇಶನ್‌ ವಿರುದ್ಧ ಬಾಕಿ ಉಳಿದಿರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳ ಪಟ್ಟಿಯನ್ನು ಅಕ್ಟೋಬರ್ 4 ರೊಳಗೆ ಸಲ್ಲಿಸುವಂತೆ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಇ ರಾಜ್ ತಿಲಕ್ ಅವರಿಗೆ ನ್ಯಾಯಾಲಯ ಸೂಚಿಸಿದೆ.</p>



<p>ಇದಕ್ಕೆ ಪ್ರತಿಕ್ರಿಯಿಸುತ್ತಾ ಈಶಾ ಫೌಂಡೇಶನ್‌ &#8220;ಜನರನ್ನು ಮದುವೆಯಾಗಲು ಅಥವಾ ಸನ್ಯಾಸಿತ್ವವನ್ನು ತೆಗೆದುಕೊಳ್ಳಲು ನಾವು ಹೇಳುವುದಿಲ್ಲ; ಇವು ವೈಯಕ್ತಿಕ ಆಯ್ಕೆಗಳಾಗಿವೆ. ಯೋಗ ಕೇಂದ್ರವು ಅನೇಕ ವ್ಯಕ್ತಿಗಳಿಗೆ ಆತಿಥ್ಯ ನೀಡುತ್ತದೆ, ಕೆಲವರು ಮಾತ್ರ ಸನ್ಯಾಸಿತ್ವವನ್ನು ಆರಿಸಿಕೊಂಡಿದ್ದಾರೆ ಎಂದು ತಿಳಿಸಿದೆ.</p>



<p>&#8220;ಈ ಹಿಂದೆ ಇಶಾ ಫೌಂಡೇಶನ್ ನಿರ್ಮಿಸುತ್ತಿರುವ ಸ್ಮಶಾನದ ಸುತ್ತಲಿನ ಸಂಗತಿಗಳ ಬಗ್ಗೆ ವಿಚಾರಿಸಲು ಸತ್ಯಶೋಧನಾ ಸಮಿತಿ ಎಂಬ ಸುಳ್ಳು ನೆಪದಲ್ಲಿ ಈ ಅರ್ಜಿದಾರರು ಇತರರೊಂದಿಗೆ ನಮ್ಮ ಆವರಣಕ್ಕೆ ಅತಿಕ್ರಮ ಪ್ರವೇಶ ಮಾಡಲು ಪ್ರಯತ್ನಿಸಿದರು ಮತ್ತು ನಂತರ ಈಶಾ ಯೋಗ ಕೇಂದ್ರದ ಜನರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದರು,” ಎಂದು ಈಶಾ ಫೌಂಡೇಶನ್ ಹೇಳಿಕೆಯಲ್ಲಿ ಹೇಳಲಾಗಿದೆ.</p>



<p>&#8220;ಇದರ ವಿರುದ್ಧ ಗೌರವಾನ್ವಿತ ಮದ್ರಾಸ್ ಹೈಕೋರ್ಟ್ ಪೊಲೀಸರಿಂದ ಅಂತಿಮ ವರದಿಯನ್ನು ಸಲ್ಲಿಸಲು ತಡೆಯಾಜ್ಞೆ ನೀಡಿದೆ. ಇದನ್ನು ಹೊರತುಪಡಿಸಿ, ಪ್ರತಿಷ್ಠಾನದ ವಿರುದ್ಧ ಬೇರೆ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ,&#8221; ಎಂದು ಅದು ಹೇಳಿದೆ.</p>



<p>ಪೋಲೀಸರ ದಾಳಿಯ ಬಗ್ಗೆ ಫೌಂಡೇಶನ್ ಇದು ಕೇವಲ ತನಿಖೆ ಎಂದು ಹೇಳಿದೆ. &#8220;ಅವರು [ಪೊಲೀಸರು] ನಿವಾಸಿಗಳು ಮತ್ತು ಸ್ವಯಂಸೇವಕರನ್ನು ವಿಚಾರಿಸುತ್ತಿದ್ದಾರೆ, ಜೀವನಶೈಲಿಯನ್ನು ಅರ್ಥಮಾಡಿಕೊಳ್ಳುತ್ತಾರೆ, ಅವರು ಹೇಗೆ ಬರುತ್ತಾರೆ ಮತ್ತು ಉಳಿಯುತ್ತಾರೆ ಇತ್ಯಾದಿಗಳ ಬಗ್ಗೆ ಅರ್ಥಮಾಡಿಕೊಳ್ಳುತ್ತಿದ್ದಾರೆ,&#8221; ಎಂದು <em>ಇಂಡಿಯನ್ ಎಕ್ಸ್‌ಪ್ರೆಸ್</em> ವರದಿ ಮಾಡಿದೆ.</p>
]]></content:encoded>
					
		
		
			</item>
		<item>
		<title>2016 ರಿಂದ ಸದ್ಗುರುವಿನ ಈಶಾ ಯೋಗ ಕೇಂದ್ರದಿಂದ ಆರು ಮಂದಿ ನಾಪತ್ತೆ!</title>
		<link>https://peepalmedia.com/6-people-missing-from-sadhgurus-isha-yoga-centre-since-2016/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 23 Mar 2024 06:20:06 +0000</pubDate>
				<category><![CDATA[ಅಪರಾಧ]]></category>
		<category><![CDATA[india]]></category>
		<category><![CDATA[isha foundation]]></category>
		<category><![CDATA[jaggi vasudev]]></category>
		<category><![CDATA[karnataka]]></category>
		<category><![CDATA[medras highcourt]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=37399</guid>

					<description><![CDATA[ಜಗ್ಗಿ ವಾಸುದೇವ ಎಂಬ ಯೋಗ ಗುರುವಿನ ಈಶಾ ಫೌಂಡೇಶನ್‌ನ ಇಶಾ ಯೋಗ ಕೇಂದ್ರದಿಂದ 2016 ರಿಂದ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ತಮಿಳುನಾಡು ಪೊಲೀಸರು ಮಾರ್ಚ್‌ 22, ಗುರುವಾರ ಮದ್ರಾಸ್ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ನಾಪತ್ತೆ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಶಾ ಫೌಂಡೇಶನ್ ತಮಿಳುನಾಡಿನ ಕೊಯಮತ್ತೂರಿನ ಬಳಿ 1992 ರಲ್ಲಿ ಜಗ್ಗಿ ವಾಸುದೇವ ಸ್ಥಾಪಿಸಿದ &#8220;ಲಾಭರಹಿತ, ಆಧ್ಯಾತ್ಮಿಕ ಸಂಸ್ಥೆ&#8221;. ಈ ಪ್ರತಿಷ್ಠಾನವು ಈಶಾ ಯೋಗ ಕೇಂದ್ರವನ್ನು ನಡೆಸುತ್ತದೆ. ಇದು ಸ್ವಯಂಸೇವಕರಿಂದ &#8220;ಬಹುತೇಕ ಸಂಪೂರ್ಣವಾಗಿ&#8221; [&#8230;]]]></description>
										<content:encoded><![CDATA[
<p>ಜಗ್ಗಿ ವಾಸುದೇವ ಎಂಬ ಯೋಗ ಗುರುವಿನ ಈಶಾ ಫೌಂಡೇಶನ್‌ನ ಇಶಾ ಯೋಗ ಕೇಂದ್ರದಿಂದ 2016 ರಿಂದ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ತಮಿಳುನಾಡು ಪೊಲೀಸರು ಮಾರ್ಚ್‌ 22, ಗುರುವಾರ ಮದ್ರಾಸ್ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ನಾಪತ್ತೆ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>



<p>ಇಶಾ ಫೌಂಡೇಶನ್ ತಮಿಳುನಾಡಿನ ಕೊಯಮತ್ತೂರಿನ ಬಳಿ 1992 ರಲ್ಲಿ ಜಗ್ಗಿ ವಾಸುದೇವ ಸ್ಥಾಪಿಸಿದ &#8220;ಲಾಭರಹಿತ, ಆಧ್ಯಾತ್ಮಿಕ ಸಂಸ್ಥೆ&#8221;. ಈ ಪ್ರತಿಷ್ಠಾನವು ಈಶಾ ಯೋಗ ಕೇಂದ್ರವನ್ನು ನಡೆಸುತ್ತದೆ. ಇದು ಸ್ವಯಂಸೇವಕರಿಂದ &#8220;ಬಹುತೇಕ ಸಂಪೂರ್ಣವಾಗಿ&#8221; ನಡೆಸಲ್ಪಡುವ ಸಂಸ್ಥೆ.&nbsp;&nbsp;</p>



<p>ನ್ಯಾಯಮೂರ್ತಿ ಎಂಎಸ್ ರಮೇಶ್ ಮತ್ತು ನ್ಯಾಯಮೂರ್ತಿ ಸುಂದರ್ ಮೋಹನ್ ಅವರನ್ನೊಳಗೊಂಡ ಮದ್ರಾಸ್ ಹೈಕೋರ್ಟ್ ಪೀಠದ ಮುಂದೆ ಈ ಸಲ್ಲಿಕೆಗಳನ್ನು ಮಾಡಲಾಗಿದೆ ಎಂದು ಲೈವ್ ಲಾ ವರದಿ ಮಾಡಿದೆ. ತಿರುನಲ್ವೇಲಿ ಜಿಲ್ಲೆಯ ತಿರುಮಲೈ ಎಂಬವರು ತಮ್ಮ ಸಹೋದರ ಗಣೇಶನ್ ಅವರ ಮೃತದೇಹವನ್ನು ಹಾಜರುಪಡಿಸಲು ಸಲ್ಲಿಸಿದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸಿದೆ.</p>



<p>ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಈ ತನಿಖೆಯ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದು, ತಮಿಳುನಾಡು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ನಾಪತ್ತೆಯಾದವರಲ್ಲಿ ಕೆಲವರು ಈಗಾಗಲೇ ಹಿಂದಿರುಗಿರಬಹುದು, ಆದರೆ ನಿರ್ದಿಷ್ಟ ವಿವರಗಳು ಅಸ್ಪಷ್ಟವಾಗಿ ಉಳಿದಿವೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.</p>



<p>ಏಪ್ರಿಲ್ 8ರೊಳಗೆ ನ್ಯಾಯಾಲಯಕ್ಕೆ ಪೊಲೀಸರು ಸ್ಟೇಟಸ್‌ ರಿಪೋರ್ಟ್ ಸಲ್ಲಿಸಬೇಕಾಗಿದೆ.</p>



<p>ಮಾರ್ಚ್ 2023 ರಲ್ಲಿ ತನ್ನ ಸಹೋದರ ಗಣೇಶನ್ ಕಣ್ಮರೆಯಾದಾಗ ತಿರುಮಲೈ ಎಂಬ ರೈತರೊಬ್ಬರು ಕಾನೂನಿನ ಮೊರೆಹೋಗಿದ್ದರು. ಗಣೇಶನ್ ಅವರು ಜಗ್ಗಿಯ ಈಶ ಯೋಗ ಕೇಂದ್ರದಲ್ಲಿ ದತ್ತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ಅವರು ಬಹಿರಂಗಪಡಿಸಿದ್ದರು.</p>



<p>2 ಮಾರ್ಚ್ 2023 ರಂದು, ತಿರುಮಲೈ ತನ್ನ ಸಹೋದರನ ಬಗ್ಗೆ ವಿಚಾರಿಸಲು ಯೋಗ ಕೇಂದ್ರವನ್ನು ಸಂಪರ್ಕಿಸಿದಾಗ, ಗಣೇಶನ್ ಎರಡು ದಿನಗಳಿಂದ ಅಲ್ಲಿ ಇರಲಿಲ್ಲ ಎಂದು ತಿಳಿಯಿತು.</p>



<p>ಯೋಗ ಕೇಂದ್ರದ ಪ್ರಭಾರಿ ದಿನೇಶ್ ಅವರ ದೂರಿನ ಆಧಾರದ ಮೇಲೆ ಪೊಲೀಸ್ ದೂರು ದಾಖಲಿಸಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ತಿರುಮಲೈ ಹೇಳಿದರು. ಪೊಲೀಸರು ನಿರಾಸಕ್ತಿಯಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ಆದ್ದರಿಂದ, ತಿರುಮಲೈ ಅವರು ಹೇಬಿಯಸ್ ಕಾರ್ಪಸ್ ಮನವಿಯೊಂದಿಗೆ ಮದ್ರಾಸ್ ಹೈಕೋರ್ಟ್ ಅನ್ನು ಸಂಪರ್ಕಿಸಿದರು.</p>



<p>ಹೇಬಿಯಸ್ ಕಾರ್ಪಸ್ ಮನವಿಯು ಒಬ್ಬ ವ್ಯಕ್ತಿಯನ್ನು ಕಾನೂನುಬದ್ಧವಾಗಿ ಬಂಧಿಸಲಾಗಿದೆಯೇ ಎಂದು ನಿರ್ಧರಿಸಲು ತನಿಖೆ ನಡೆಸಲು ನೀಡುವ ಕಾನೂನು ಆದೇಶ.</p>
]]></content:encoded>
					
		
		
			</item>
		<item>
		<title>ಸಾರ್ವಜನಿಕ ಹಣ ದುರುಪಯೋಗ: ಬೊಮ್ಮಾಯಿ ವಿರುದ್ಧ ರಮೇಶ್‌ ಬಾಬು ಆರೋಪ</title>
		<link>https://peepalmedia.com/misappropriation-of-public-funds-ramesh-babu-accused-against-bommai/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 20 Oct 2022 10:56:28 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜಕೀಯ]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[jaggi vasudev]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[public funds]]></category>
		<category><![CDATA[ramesh babu]]></category>
		<guid isPermaLink="false">https://peepalmedia.com/?p=12142</guid>

					<description><![CDATA[ಬೆಂಗಳೂರು: ಇಶಾ ಫೌಂಡೇಶನ್ ಸಂಸ್ಥಾಪಕ ಜಗ್ಗಿ ವಾಸುದೇವ್ ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ಕಾರಿ ಜಮೀನು ನೀಡುವುದರ ಜೊತೆಗೆ ಮಣ್ಣು ಸಂರಕ್ಷಣೆಯ ಹೆಸರಿನಲ್ಲಿ ಒಂದು ನೂರು ಕೋಟಿ ರೂಪಾಯಿಗಳನ್ನು ನೀಡುವುದರ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಅವರ ವೈಯಕ್ತಿಕ ಚಪಲಕ್ಕೆ ಬಲಿಯಾಗಿದ್ದು, ಸಾರ್ವಜನಿಕ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್‌ ಬಾಬು ಆರೋಪಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ, ಈ ನೆಲದ ಮಣ್ಣು ಮತ್ತು ಬೆಳೆಗಳ ಕುರಿತು ಕ್ರಮ ಕೈಗೊಳ್ಳಲು, ಅದ್ಯಯನ ಮಾಡಲು ಕೃಷಿ ಇಲಾಖೆ, [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು:</strong> ಇಶಾ ಫೌಂಡೇಶನ್ ಸಂಸ್ಥಾಪಕ ಜಗ್ಗಿ ವಾಸುದೇವ್ ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ಕಾರಿ ಜಮೀನು ನೀಡುವುದರ ಜೊತೆಗೆ ಮಣ್ಣು ಸಂರಕ್ಷಣೆಯ ಹೆಸರಿನಲ್ಲಿ ಒಂದು ನೂರು ಕೋಟಿ ರೂಪಾಯಿಗಳನ್ನು ನೀಡುವುದರ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಅವರ ವೈಯಕ್ತಿಕ ಚಪಲಕ್ಕೆ ಬಲಿಯಾಗಿದ್ದು, ಸಾರ್ವಜನಿಕ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್‌ ಬಾಬು ಆರೋಪಿಸಿದ್ದಾರೆ.</p>



<p style="font-size:20px">ಕರ್ನಾಟಕ ರಾಜ್ಯದಲ್ಲಿ, ಈ ನೆಲದ ಮಣ್ಣು ಮತ್ತು ಬೆಳೆಗಳ ಕುರಿತು ಕ್ರಮ ಕೈಗೊಳ್ಳಲು, ಅದ್ಯಯನ ಮಾಡಲು ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯಗಳು, ಕೃಷಿ ತಜ್ಞರು ಮತ್ತು ಪ್ರಗತಿಶೀಲ ರೈತರು ಇರುತ್ತಾರೆ. ಜಗ್ಗಿ ವಾಸುದೇವ್ ಅವರಂತಹ ವ್ಯಾಪಾರಿ ಮನೋಭಾವದ ದೇವಮಾನವರ ಅವಶ್ಯಕತೆ ಇರುವುದಿಲ್ಲ. ಹೀಗಾಗಿ ಜನಸಾಮಾನ್ಯರ ತೆರಿಗೆ ಹಣವನ್ನು ಬೇಕಾಬಿಟ್ಟಿ ವಂಚಕರಿಗೆ ಹಂಚಲು ಬೊಮ್ಮಾಯಿಯವರಿಗೆ ಯಾವುದೇ ಅಧಿಕಾರ ನೈತಿಕತೆ ಇರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.</p>



<p style="font-size:20px">ಜಗ್ಗಿ ವಾಸುದೇವ್‌ರವರು ಈ ಹಿಂದೆಯೂ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹಣ ಮತ್ತು ಭೂಮಿ ಕೋರಿ ಮನವಿಗಳನ್ನು ಸಲ್ಲಿಸಿದ್ದರು. ಹಿಂದಿನ ಸರ್ಕಾರಗಳು ಇವರ ಮನವಿಯನ್ನು ಪರಿಗಣಿಸಿರಲಿಲ್ಲ. ಕಾವೇರಿ ಕೂಗು ಅಭಿಯಾನದಲ್ಲಿ ಸಂಗ್ರಹವಾದ ಹಣದ ಮಾಹಿತಿ ಬಹಿರಂಗಪಡಿಸದ ಆರೋಪ ಇವರ ಮೇಲಿದೆ. ತಮಿಳುನಾಡಿನ ಕೊಯಮತ್ತೂರಿನ ಭೂ ಹಗರಣ, ಸರ್ಕಾರಕ್ಕೆ ತೆರಿಗೆ ವಂಚನೆ ಆರೋಪ, ಅರಣ್ಯ ಭೂಮಿಯ ಒತ್ತುವರಿ ಮುಂತಾದ ಆರೋಪಗಳು ಇವರ ಮೇಲೆ ಮತ್ತು ಇವರ ಪೌಂಡೇಷನ್ ಮೇಲೆ ಇರುತ್ತದೆ. ರಾಜ್ಯಕ್ಕೆ ಉಪಯೋಗವಿಲ್ಲದ ನಕಲು ಮಾಡಿದ ಯೋಜನೆಗೆ ಹಣ ನೀಡುವ ಮೂಲಕ ಬೊಮ್ಮಾಯಿಯವರು ತಪ್ಪನ್ನು ಎರಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>



<p style="font-size:20px">ಒಂದು ಕಡೆ ಸರ್ಕಾರದ ಹಣವನ್ನು ಬೇಕಾಬಿಟ್ಟಿ ಹಂಚಿಕೆ ಮಾಡುವ ಮುಖ್ಯಮಂತ್ರಿಗಳು ಇನ್ನೊಂದು ಕಡೆ ಪುಣ್ಯಕೋಟಿ ಯೋಜನೆಗೆ ಭಿಕ್ಷೆ ಬೇಡುತ್ತಾರೆ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ನೌಕರರ ನ್ಯಾಯಯುತ ಬೇಡಿಕೆಗಳನ್ನು ಬಾಕಿಯಿಟ್ಟು, ಪುಣ್ಯಕೋಟಿ ಯೋಜನೆಗೆ ಹಣ ನೀಡಿದರೆ ಬೇಡಿಕೆಗಳನ್ನು ಈಡೇರಿಸುವ ಆಮಿಷ ಒಡ್ಡಿ ನೂರು ಕೋಟಿ ರೂಪಾಯಿಗಳ ಒಂದು ದಿನದ ವೇತನ ನೀಡಲು ಸಂಘದಿಂದ ಒಪ್ಪಿಗೆ ಪತ್ರ ಪಡೆಯುತ್ತಾರೆ. ಜಗ್ಗಿ ವಾಸುದೇವ್‌ ಅವರಿಗೆ ಕಾರಣವಿಲ್ಲದೆ ಜನರ ತೆರಿಗೆ ಹಣವನ್ನು ನೀಡಿ ರಾಜ್ಯವನ್ನು ವಂಚಿಸಿರುವ ಮುಖ್ಯಮಂತ್ರಿಗಳಿಗೆ ಸರ್ಕಾರಿ ನೌಕರರಿಂದ ವಂತಿಗೆ ಪಡೆಯುವ ನೈತಿಕತೆ ಇದೆಯೇ? ಎಂದು ಕಿಡಿಕಾರಿದ್ದಾರೆ.</p>



<p style="font-size:20px">ರಾಜ್ಯ ಸರ್ಕಾರ ಇದುವರೆಗೆ ಏಳನೇ ವೇತನ ಆಯೋಗವನ್ನು ರಚಿಸಿರಲ್ಲ, ನೌಕರರಿಗೆ 18 ತಿಂಗಳ ತುಟ್ಟಿಭತ್ಯೆ ನೀಡಿಲ್ಲ, ಖಾಲಿಯಿರುವ ಹುದ್ದೆಗಳನ್ನು ತುಂಬಿಕೊಂಡಿಲ್ಲ, ವರ್ಗಾವಣೆ ನೀತಿ ಭ್ರಷ್ಟಮಯವಾಗಿದೆ. ಸರ್ಕಾರ ಘೋಷಣೆ ಮಾಡಿದ ಸ್ಥಳಗಳಲ್ಲಿ ಗೋಶಾಲೆಗಳೇ ಇರುವುದಿಲ್ಲ. ರಾಜ್ಯದ ರೈತರಿಗೆ ಸ್ಪಂದಿಸದ ಸರ್ಕಾರ ಜಗ್ಗಿ ವಾಸುದೇವ್‌ಗೆ ತಲೆಬಾಗುತ್ತದೆ. ಪುಣ್ಯಕೋಟಿ ಹೆಸರಿನಲ್ಲಿ ದಂದೆ ಮಾಡುವ ಅನಿವಾರ್ಯತೆ ಸೃಷ್ಟಿ ಮಾಡುತ್ತದೆ ಎಂದು ದೂರಿದ್ದಾರೆ.</p>



<p style="font-size:20px">ಜಗ್ಗಿ ವಾಸುದೇವ್‌ರವರ ಮೇಲೆ ಆರೋಪಗಳ ಜೊತೆಗೆ ಪ್ರಕರಣಗಳೂ ನ್ಯಾಯಾಲಯದಲ್ಲಿ ಬಾಕಿಯಿರುತ್ತವೆ. ಕಳಂಕಿತರಿಗೆ ಮತ್ತು ಆರೋಪಿತರಿಗೆ ರಾಜ್ಯ ಸರ್ಕಾರದ ಹಣವನ್ನು ಹಂಚಿಕೆ ಮಾಡುವ ಪ್ರವೃತ್ತಿ ಸಾರ್ವಜನಿಕ ಹಿತದೃಷ್ಟಿಯಿಂದ ನಿಲ್ಲಬೇಕಾಗಿದೆ. ಹೀಗಾಗಿ ಬಸವರಾಜ ಬೊಮ್ಮಾಯಿಯವರು ಜಗ್ಗಿ ವಾಸುದೇವ್ ಪೌಂಡೇಷನ್ ಜೊತೆಯಲ್ಲಿ ಮಾಡಿಕೊಂಡಿರುವ ಒಪ್ಪಂದ (MOU) ರದ್ದುಪಡಿಸಿ, ಹಂಚಿಕೆಯಾದ ಜಮೀನು ವಾಪಸ್ಸು ಪಡೆದು ರಾಜ್ಯದ ಜನರ ಕ್ಷಮೆ ಕೇಳಲಿ ಎಂದಿದ್ದಾರೆ.</p>
]]></content:encoded>
					
		
		
			</item>
		<item>
		<title>ಹಾವು ಹಿಡಿದು ಪ್ರದರ್ಶನ: ಜಗ್ಗಿ ವಾಸುದೇವ್‌ ವಿರುದ್ಧ ದೂರು ದಾಖಲು</title>
		<link>https://peepalmedia.com/allegation-of-illegal-snake-catching-complaint-filed-against-sadhguru-jaggi-vasudev-2/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 16 Oct 2022 09:35:54 +0000</pubDate>
				<category><![CDATA[ಚಿಕ್ಕಬಳ್ಳಾಪುರ]]></category>
		<category><![CDATA[ರಾಜ್ಯ]]></category>
		<category><![CDATA[Allegation of illegal snake catching]]></category>
		<category><![CDATA[chikkaballapur]]></category>
		<category><![CDATA[india]]></category>
		<category><![CDATA[jaggi vasudev]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=11129</guid>

					<description><![CDATA[ಚಿಕ್ಕಬಳ್ಳಾಪುರ: ಅಕ್ರಮವಾಗಿ ಹಾವು ಹಿಡಿದು, ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ ಆರೋಪದ ಮೇಲೆ ಇಶಾ ಫೌಂಡೇಶನ್‌ ಸಂಸ್ಥಾಪಕ, ಸದ್ಗುರು ಎಂದೇ ಖ್ಯಾತರಾಗಿರುವ ಜಗ್ಗಿ ವಾಸುದೇವ್‌ ಅವರ ವಿರುದ್ಧ ದೂರು ದಾಖಲಾಗಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಜಾಲಾರಿ ನರಸಿಂಹಸ್ವಾಮಿ ಬೆಟ್ಟದ ತಪ್ಪಲಿನ ಇಶಾ ಆದಿಯೋಗಿ ಧ್ಯಾನ ಕೇಂದ್ರದಲ್ಲಿ ನಡೆದ ಇತ್ತೀಚಿಗೆ ನಡೆದ ನಾಗಮಂಟಪ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಜಗ್ಗಿ ವಾಸುದೇವ್‌ ಅವರು ಜೀವಂತ ಹಾವನ್ನು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿ ಹಿಂಸೆ ಮಾಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಚಿಕ್ಕಬಳ್ಳಾಪುರದ [&#8230;]]]></description>
										<content:encoded><![CDATA[
<p style="font-size:20px"><strong>ಚಿಕ್ಕಬಳ್ಳಾಪುರ:</strong> ಅಕ್ರಮವಾಗಿ ಹಾವು ಹಿಡಿದು, ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ ಆರೋಪದ ಮೇಲೆ ಇಶಾ ಫೌಂಡೇಶನ್‌ ಸಂಸ್ಥಾಪಕ, ಸದ್ಗುರು ಎಂದೇ ಖ್ಯಾತರಾಗಿರುವ ಜಗ್ಗಿ ವಾಸುದೇವ್‌ ಅವರ ವಿರುದ್ಧ ದೂರು ದಾಖಲಾಗಿದೆ.</p>



<p style="font-size:20px">ಚಿಕ್ಕಬಳ್ಳಾಪುರ ತಾಲ್ಲೂಕಿನ ಜಾಲಾರಿ ನರಸಿಂಹಸ್ವಾಮಿ ಬೆಟ್ಟದ ತಪ್ಪಲಿನ ಇಶಾ ಆದಿಯೋಗಿ ಧ್ಯಾನ ಕೇಂದ್ರದಲ್ಲಿ ನಡೆದ ಇತ್ತೀಚಿಗೆ ನಡೆದ ನಾಗಮಂಟಪ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಜಗ್ಗಿ ವಾಸುದೇವ್‌ ಅವರು ಜೀವಂತ ಹಾವನ್ನು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿ ಹಿಂಸೆ ಮಾಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಚಿಕ್ಕಬಳ್ಳಾಪುರದ ಉರಗತಜ್ಞ ಸಿಎನ್‌ ಪೃಥ್ವಿರಾಜ್‌ ಅವರು ಚಿಕ್ಕಬಳ್ಳಾಪುರ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.</p>



<p style="font-size:20px">ಮೂಲಗಳ ಪ್ರಕಾರ ದೂರಿನಲ್ಲಿ ಹಾವಿನ ಅಕ್ರಮ ಸಾಗಣೆ ಮಾಡಿ ಸಾರ್ವಜನಿಕವಾಗಿ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ತಿಳಿದು ಬಂದಿದೆ.</p>
]]></content:encoded>
					
		
		
			</item>
	</channel>
</rss>
