<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>JCTU &#8211; Peepal Media</title>
	<atom:link href="https://peepalmedia.com/tag/jctu/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sun, 27 Apr 2025 10:36:47 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>JCTU &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಕೇಂದ್ರ ಸರ್ಕಾರದ ವಿರುದ್ಧ JCTU ನೇತೃತ್ವದಲ್ಲಿ ಮೇ 20 ರಂದು ದೇಶ ಪ್ರೇಮಿ ಮುಷ್ಕರ – ಎಸ್ ವರಲಕ್ಷ್ಮೀ</title>
		<link>https://peepalmedia.com/patriotic-strike-on-may-20-led-by-jctu-against-the-central-government-s-varalakshmi/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Sun, 27 Apr 2025 10:36:47 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[JCTU]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=57983</guid>

					<description><![CDATA[ಹಾಸನ : ನಗರದ ಆರ್.ಸಿ ರಸ್ತೆಯ ಶ್ರಮ ಕಛೇರಿಯಲ್ಲಿ ಸಿಐಟಿಯು ಜಿಲ್ಲಾ ಸಮಿತಿಯ ವತಿಯಿಂದ 2025ರ ಮೇ 30 ರಂದು ಕಾರ್ಮಿಕರ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರದ ಸಿದ್ದಾತಾ ಸಭೆ ನಡೆಯಿತು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯುನ ರಾಜ್ಯಾಧ್ಯಕ್ಷರಾದ ಎಸ್. ವರಲಕ್ಷ್ಮೀ ಮೇ 20 ನೇ ತಾರೀಖು ಭಾರತದ ಕಾರ್ಮಿಕರು ಮತ್ತೊಮ್ಮೆ ಅಖಿಲ ಭಾರತ ಸಾವ್ರತ್ರಿಕ ಮುಷ್ಕರಕ್ಕೆ ತಯಾರಾಗುತ್ತಿದ್ದಾರೆ. ಈ ಮುಷ್ಕರ ಬಹಳ ಪ್ರಾಮುಖ್ಯತೆ ಪಡೆದಿದೆ. ಅವತ್ತು ಇಡೀ ದೇಶದ ಕಾರ್ಮಿಕರು ತಮ್ಮ ಕೆಲಸ ನಿಲ್ಲಿಸುತ್ತಾರೆ. ರೈತರು ಕೃಷಿ [&#8230;]]]></description>
										<content:encoded><![CDATA[
<p><strong>ಹಾಸನ :</strong> ನಗರದ ಆರ್.ಸಿ ರಸ್ತೆಯ ಶ್ರಮ ಕಛೇರಿಯಲ್ಲಿ ಸಿಐಟಿಯು ಜಿಲ್ಲಾ ಸಮಿತಿಯ ವತಿಯಿಂದ <strong>2025ರ ಮೇ 30 </strong>ರಂದು ಕಾರ್ಮಿಕರ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರದ ಸಿದ್ದಾತಾ ಸಭೆ ನಡೆಯಿತು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯುನ ರಾಜ್ಯಾಧ್ಯಕ್ಷರಾದ ಎಸ್. ವರಲಕ್ಷ್ಮೀ ಮೇ<strong> 20 ನೇ</strong> ತಾರೀಖು ಭಾರತದ ಕಾರ್ಮಿಕರು ಮತ್ತೊಮ್ಮೆ ಅಖಿಲ ಭಾರತ ಸಾವ್ರತ್ರಿಕ ಮುಷ್ಕರಕ್ಕೆ ತಯಾರಾಗುತ್ತಿದ್ದಾರೆ. ಈ ಮುಷ್ಕರ ಬಹಳ ಪ್ರಾಮುಖ್ಯತೆ ಪಡೆದಿದೆ. ಅವತ್ತು ಇಡೀ ದೇಶದ ಕಾರ್ಮಿಕರು ತಮ್ಮ ಕೆಲಸ ನಿಲ್ಲಿಸುತ್ತಾರೆ. ರೈತರು ಕೃಷಿ ಕೂಲಿ ಕಾರ್ಮಿಕರು ವಿದ್ಯಾರ್ಥಿ ಯುವಜನರು ಮಹಿಳೆಯರು ಬೀದಿಗೆ ಇಳಿಯುತ್ತಿದ್ದಾರೆ ಈ ಮುಷ್ಕರಕ್ಕೆ ಕಾರಣವೇನೆಂದರೆ ಈ ದೇಶದ ಸಂಪತ್ತನ್ನು ಸೃಷ್ಠಿ ಮಾಡುವ ಶ್ರಮಿಕರು ಅಂದರೆ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರು, ಅಸಂಘಟಿತ ಕ್ಷೇತ್ರದಲ್ಲಿ ಬರುವ ಕಾರ್ಮಿಕರು ಸ್ಕೀಮ್ ನೌಕರರು ಮಹಿಳೆಯರು ಮತ್ತು ಸ್ವಯಂ ಉದ್ಯೋಗಿಗಳು, ಮನೆಯಲ್ಲಿ ಕುಳಿತು ಬೀದಿ ಕಟ್ಟುವವರು ಮತ್ತು ತೋಟದ ಕಾರ್ಮಿಕರು, ಹಮಾಲಿ ಕಾರ್ಮಿಕರು ಹೀಗೆ ವಿವಿಧ ಸ್ಥರದಲ್ಲಿ ಕೆಲಸ ಮಾಡುವ ಎಲ್ಲಾ ಕಾರ್ಮಿಕರು ಕೂಡ ಅಂದು ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಆಕ್ರೋಶಕ್ಕೆ ಒಂದು ಪೂರಕವಾಗಿ ರೈತರು ಕೂಡ ತಮ್ಮ ಭೂಮಿಯನ್ನು ಕಳೆದುಕೊಂಡವವರು ಬೆಳೆಗಳಿಗೆ ಬೆಂಬಲ ಸಿಗದವರು, ನರೇಗ ಕೆಲಸಗಾರರು ಮುಷ್ಕರಕ್ಕೆ ಬರುತ್ತಿದ್ದಾರೆ. ಏಕೆಂದರೆ ಮೋದಿ ಸರ್ಕಾರ ಇಂದು ಹಿಂದೂ ಹಿಂದೂ ಎಂದು ಹೇಳುತ್ತಿದ್ದಾರೆ. ಬಿಂದೂಗಳೆ ಇದೆ ಶ್ರಮಿಕರು ಕಾರ್ಮಿಕರಾಗಿರುತ್ತಾರೆ ಅದೆ ಶ್ರಮಿಕರ ಪರವಾಗಿರುವ ಕಾನೂನುಗಳನ್ನು ಬಂಡವಾಳಗಾರರ ಪರವಾಗಿ ಬದಲಾಯಿಸಿ 4 ಸಂಹಿತೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಏನಿದು<strong> 4 </strong>ಸಂಹಿತೆಗಳು ನಮ್ಮ ದೇಶದ <strong>29</strong> ಕಾರ್ಮಿಕ ಕಾನೂನುಗಳನ್ನು 4 ಸಂಹಿತೆಗಳಾಗಿ ಬದಲಾಯಿಸಿದ್ದಾರೆ, ಅದರಲ್ಲಿ ವೇತನ ಸಂಹಿತೆ ಎಂದು ಕರೆಯುತ್ತಾರೆ. ನಾವು ಎಲ್ಲಾ ಕೇಂದ್ರ ಕಾರ್ಮಿಕ ಸಂಘಟೆನೆಗಳು ಸಿಐಟಿಯು ಪ್ರತಿಪಾಧನೆ ಮಾಡುತ್ತಿರುವುದು ಏನೆಂದರೆ, ನಮ್ಮ ದೇಶದಲ್ಲಿ <strong>100ಕ್ಕೆ 80ರಷ್ಟು</strong> ಜನ ಯಾವುದೆ ಕಾನೂನು ವ್ಯಾಪ್ತಿಗೆ ಬರದೆ ಇರುವರಿಗೆ ಕನಿಷ್ಠ ವೇತನ ಖಾತ್ರಿಪಡಿಸಬೇಕು, ದಿನಕ್ಕೆ 7ನೇ ವೇತನ ಆಯೋಗ ನಿಗದಿಪಡಿಸಿರುವ<strong> 600 ರೂ </strong>ವೇಜಸ್‌ ಕೊಡಬೇಕು ಎಂದು ಆಗ್ರಹಿಸುತ್ತೇವೆ. ಅದಕ್ಕೆ ಬೇಕಾದ ಕಾನೂನುಗಳನ್ನು ತರಬೇಕು ಎಂದು ಹೇಳುತಿದ್ದೇವೆ. ಆದರೆ ಈ ಕೇಂಧ್ರ ಸರ್ಕಾರ ಕನಿಷ್ಠ ವೇತನವನ್ನು ಕೂಡ ಜಾರಿ ಮಾಡದೆ ಸರ್ಕಾರ ನಿರ್ಲಕ್ಷ ಮಾಡುತ್ತಿದೆ. ಬಂಡವಾಳಶಾಹಿಗಳು ಹೇಳುವ ಹಾಗೆ ದಿನಕ್ಕೆ <strong>177 </strong>ರೂ ಕೊಡಬೇಕು ಎಂದು ಹೇಳುತ್ತಿದ್ದಾರೆ. ಈ ವೇಜ್ ಕೋಡ್ ನಲ್ಲಿ ಬೋನಸ್ ಗ್ರಾಜುಟಿ ಎಲ್ಲವನ್ನು ಸಡಿಲವಾಗುತ್ತಿದೆ, ಇದರಿಂದ ದೇಶದಲ್ಲಿ ಇನ್ನ ಮುಂದೆ ವೇತನ ಹೆಚ್ಚಾಗುವುದಿಲ್ಲ ಇದಕ್ಕೆ ದೊಡ್ಡು ಪೆಟ್ಟು ಬಿದ್ದಿದೆ ಎಂದು ಆಕರೋಶ ವ್ಯಕ್ತಪಡಿಸಿದರು.</p>



<p>ಇನ್ನೊಂದು ಗಂಭೀರ ವಿಷಯ ಏನೆಂದರೆ ಸಂಘಗಳನ್ನು ಕಟ್ಟಿಕೊಳ್ಳುವ ಹಕ್ಕಿತ್ತು <strong>1926 </strong>ಆಕ್ಟ್ ನಲ್ಲಿ ಹಲವಾರು ಬದಲಾವಣೆ ತಂದು ಮುಂದೆ ಯಾರು ಸಂಘಗಳನ್ನು ಕಟ್ಟದ ಹಾಗೆ ಕಾನೂನುಗಳನ್ನು ತಂದಿರುತ್ತಾರೆ. ಸಂಭಂಧ ಇನ್ನು ಮುಂದು ನಮ್ಮ ದೇಶದ<strong> 30 </strong>ಕೋಟಿಗು ಹೆಚ್ಚು ಕಾರ್ಮಿಕರು ಯಾವುದೆ ಸಂಘಗಳನ್ನು ಕಟ್ಟಿಕೊಳ್ಳದೆ ಪ್ರಶ್ನೆ ಮಾಡುವ ಹಕ್ಕುಗಳನ್ನು ಕೂಡ ಕೇಂದ್ರ ಸರ್ಕಾರ ಕಿತ್ತು ಹಾಕುತ್ತಿರುವುದು ದುರಂತದ ಸಂಗತಿಯಾಗಿದೆ. ಮತ್ತೊಂದು ಸಂಗತಿ ಎಂದರೆ ಕಾರ್ಮಿಕರಿಗೆ ಸಮಸ್ಯೆ ಅನ್ಯಾಯಗಳಾದರೆ ಅವರಿಗೆ ನ್ಯಾಯಾಲಯಗಳು ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿದ್ದವು ಆದರೆ ಈಗ ಅವುಗಳನ್ನು ಕೂಡ ರದ್ದು ಮಾಡಿ ಕಾರ್ಮಿಕ ನಿಗಮಗಳನ್ನು ಸ್ಥಾಪಿಸಿ ಕಾರ್ಮಿಕರ ಹಕ್ಕುಗಳನ್ನು ಕ್ತ್ತುಕೊಳುವ ಕೆಲಸ ಮಾಡುತ್ತಿದ್ದಿದೆ ಈ ಮೋದಿ ಸರ್ಕಾರ. ಈ ಎಲ್ಲಾ ಸಮಸ್ಯೆಗಳನ್ನು ನಮ್ಮ ದೇಶದ ಕಾರ್ಮಿಕರು, ರೈತರು, ದುಡಿಯುವ ಮಹಿಳೆಯರು ಎದುರಿಸುತ್ತಿದ್ದಾರೆ ಜೊತೆಗೆ ಎಲ್ಲಾ ಬಂಡವಾಳಪರವಾಗಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಈ ಎಲ್ಲಾ ನೀತಿಗಳನ್ನು ವಿರೋಧಿಸಿ ಮೇ 20 ರಂದು ದೇಶ ಪ್ರೇಮಿ ಮುಷ್ಕರವನ್ನು ಮಾಡುತ್ತಿದ್ದೇವೆ. ಈ ಮುಷ್ಕರದಲ್ಲಿ ಎಲ್ಲಾ ಕಾರ್ಮಿಕರು ಎಲ್ಲಾ ವಿಭಾಗದ ದುಡಿಯುವ ಜನರು ಪಾಲ್ಗೊಂಡು ದೇಶದ ಉತ್ಪಾದನೆಯನ್ನು ನಿಲ್ಲಿಸಿ ಸೇವೆಯನ್ನು ನಿಲ್ಲಿಸಿ ಕಾರ್ಮಿಕರ ಶಕ್ತಿಯನ್ನು ಪ್ರದರ್ಶನ ಮಾಡುತ್ತಿದ್ದಾರೆ ಈ ಮುಷ್ಕರವನ್ನು ಬೆಂಬಲಿಸಬೇಕುಎಂದು ಸಿಐಟಿಯುನ ರಾಜ್ಯಾಧ್ಯಕ್ಷರಾದ ಎಸ್. ವರಲಕ್ಷ್ಮೀ ಆಗ್ರಹಿಸಿದರು ಸಭೆಯಲ್ಲಿ ಸಿಐಟಿಯುನ ಪ್ರಧಾನ ಕಾರ್ಯದರ್ಶಿ ಎಂ.ಬಿ ಪುಷ್ಪಾ, ಜಿಲ್ಲಾದ್ಯಕ್ಷರಾದ ಧರ್ಮೇಶ್, ಅರವಿಂದ್ ಇನ್ನಿತರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
	</channel>
</rss>
