<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>JOS BUTTLER &#8211; Peepal Media</title>
	<atom:link href="https://peepalmedia.com/tag/jos-buttler/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 10 Nov 2022 12:06:09 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>JOS BUTTLER &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಟಿ-20 ವಿಶ್ವಕಪ್‌: ಭಾರತಕ್ಕೆ ಹೀನಾಯ ಸೋಲು</title>
		<link>https://peepalmedia.com/t-20-world-cup-colossal-defeat-for-india/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 10 Nov 2022 12:06:07 +0000</pubDate>
				<category><![CDATA[ಆಟೋಟ]]></category>
		<category><![CDATA[Alex Hales]]></category>
		<category><![CDATA[HARDHIK PANDYA]]></category>
		<category><![CDATA[IND VS ENG]]></category>
		<category><![CDATA[india]]></category>
		<category><![CDATA[JOS BUTTLER]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[ROHITH SHARMA]]></category>
		<category><![CDATA[sports news]]></category>
		<category><![CDATA[T-20 WORLD CUP]]></category>
		<category><![CDATA[Virat Kohli]]></category>
		<guid isPermaLink="false">https://peepalmedia.com/?p=15178</guid>

					<description><![CDATA[ಅಡಿಲೇಡ್‌ ಓವಲ್‌: ಇಂದು ನಡೆದ ವಿಶ್ವಕಪ್‌ ಎರಡನೇ ಸೆಮಿಪೈನಲ್‌ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್‌ ತಂಡದ ವಿರುದ್ಧ ಹೀನಾಯ ಸೋಲು ಅನುಭವಿಸಿದೆ. ಇಂಗ್ಲೆಂಡ್‌ ತಂಡವು ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಕಾರಣ, ಮೊದಲು ಬ್ಯಾಟಿಂಗ್‌ ಇಳಿದ ಭಾರತ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 168 ರನ್‌ ಕಲೆಹಾಕಿತು. ಈ ವೇಳೆ ಭಾರತ ತಂಡದ ಆರಂಭಿಕ ಆಟಗಾರ ಕೆ.ಎಲ್‌. ರಾಹುಲ್‌ ಎರಡನೇ ಓವರ್‌ನಲ್ಲಿ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು. ನಂತರ ಕಣಕ್ಕಿಳಿದ ವಿರಾಟ್‌ ಕೊಹ್ಲಿ [&#8230;]]]></description>
										<content:encoded><![CDATA[
<p><strong>ಅಡಿಲೇಡ್‌ ಓವಲ್‌:</strong> ಇಂದು ನಡೆದ ವಿಶ್ವಕಪ್‌ ಎರಡನೇ ಸೆಮಿಪೈನಲ್‌ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್‌ ತಂಡದ ವಿರುದ್ಧ ಹೀನಾಯ ಸೋಲು ಅನುಭವಿಸಿದೆ.</p>



<p>ಇಂಗ್ಲೆಂಡ್‌ ತಂಡವು ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಕಾರಣ, ಮೊದಲು ಬ್ಯಾಟಿಂಗ್‌ ಇಳಿದ ಭಾರತ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 168 ರನ್‌ ಕಲೆಹಾಕಿತು.</p>



<p>ಈ ವೇಳೆ ಭಾರತ ತಂಡದ ಆರಂಭಿಕ ಆಟಗಾರ ಕೆ.ಎಲ್‌. ರಾಹುಲ್‌ ಎರಡನೇ ಓವರ್‌ನಲ್ಲಿ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು. ನಂತರ ಕಣಕ್ಕಿಳಿದ ವಿರಾಟ್‌ ಕೊಹ್ಲಿ ತಂಡಕ್ಕೆ ಭರವಸೆಯ ಆಟವಾಡಿದರು. ಆದರೆ ಓಂಬತ್ತನೇ ಓವರ್‌ನಲ್ಲಿ ರೋಹಿತ್‌ ಶರ್ಮಾ ಅವರು ಜೊರ್ಡನ್‌ ಕೈಗೆ ವಿಕೇಟ್‌ ಒಪ್ಪಿಸಿ ಹೊರನಡೆದರು. ನಂತರ ಬಂದಂತಹ ಸೂರ್ಯಕುಮಾರ್‌ ಯಾದವ್‌ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಟವಾಡದೆ, 10 ಎಸೆತಗಳಲ್ಲಿ 14 ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರು.</p>



<p>ನಂತರ ವಿರಾಟ್‌ ಕೊಹ್ಲಿ ಮತ್ತು ಹಾರ್ದಿಕ್‌ ಪಾಂಡ್ಯಾ ಉತ್ತಮವಾಗಿ ಆಟವಾಡಿದ್ದರಿಂದ ತಂಡ ಹೆಚ್ಚು ರನ್‌ಗಳಿಸುವ ನಿಟ್ಟಿನಲ್ಲಿ ಸಾಗಿತು. ತಂಡಕ್ಕೆ ವಿರಾಟ್‌ ಕೊಹ್ಲಿ ಮತ್ತು ಹಾರ್ದಿಕ್‌ ಪಾಂಡ್ಯಾ ಅವರು ಗಳಿಸಿದ ಅರ್ಧಶತಕದಿಂದಾಗಿ ಭಾರತ ತಂಡ 168 ರನ್‌ಗಳಿಸಲು ಸಾಧ್ಯವಾಯಿತು.</p>



<p>ನಂತರ 168 ರನ್‌ ಬೆನ್ನತ್ತಿದ ಇಂಗ್ಲೆಂಡ್‌ ತಂಡ ಯಾವುದೇ ವಿಕೆಟ್‌ ಇಲ್ಲದೆ, ನಿರಾಸದಾಯಕ ಗೆಲುವು ಸಾಧಿಸಿತು.</p>



<p>ಇಂಗ್ಲೆಂಡ್‌ ತಂಡದ ಆರಂಭಿಕ ಆಟಗಾರರಾದ ಜೋಸ್ ಬಟ್ಲರ್ ಮತ್ತು ಅಲೆಕ್ಸ್ ಹೇಲ್ಸ್ ಭಾರತ ತಂಡದ ಎಲ್ಲಾ ಬೌಲರ್‌ಗಳಿಗೆ ತಮ್ಮ ಉತ್ತಮ ಪ್ರರ್ದಶನದ ಮೂಲಕ ಸರಿಯಾಗಿ ಪಾಠ ಕಲಿಸಿದರು. ಈ ಮೂಲಕ ಇಂಗ್ಲೆಂಡ್‌ ತಂಡ ಬಲಿಷ್ಠ ಭಾರತ ತಂಡವನ್ನು ಮಣಿಸಿ ಪೈನಲ್‌ ಪ್ರವೇಶಿಸಿದೆ.</p>



<p><strong>ಸ್ಕೋರ್ ಕಾರ್ಡ್‌</strong></p>



<p><strong>ಭಾರತ: 168/6(20)</strong></p>



<p><strong>ಬ್ಯಾಟಿಂಗ್</strong></p>



<p>ಕೆ.ಎಲ್.ರಾಹುಲ್ : 5(5)</p>



<p>ರೋಹಿತ್ ಶರ್ಮಾ : 27(28)</p>



<p>ವಿರಾಟ್ ಕೊಹ್ಲಿ : 50(40)</p>



<p>ಸೂರ್ಯಕುಮಾರ್ ಯಾದವ್ : 14(10)</p>



<p>ಹಾರ್ದಿಕ್ ಪಾಂಡ್ಯ : 63(33)</p>



<p>ರಿಷಬ್ ಪಂತ್ : 6(4)</p>



<p>ರವಿಚಂದ್ರನ್ ಅಶ್ವಿನ್ : 0(0)</p>



<p>ಇತರೆ : 3</p>



<p><strong>ಬೌಲಿಂಗ್</strong></p>



<p>ಬೆನ್ ಸ್ಟೊಕ್ಸ್ : 2-0-18-0</p>



<p>ಕ್ರಿಸ್ ವೂಕ್ಸ್ : 3-0-24-1</p>



<p>ಸ್ಯಾಮ್ ಕರನ್ : 4-0-42-0</p>



<p>ಆದಿಲ್ ರಶೀದ್ : 4-0-20-1</p>



<p>ಲಿಯಾಮ್ ಲಿವಿಂಗ್ಸ್ಟನ್ : 3-0-21-0</p>



<p>ಕ್ರಿಸ್ ಜೋರ್ಡನ್ : 4-0-43-3</p>



<p><strong>ಇಂಗ್ಲೆಂಡ್ : 170/0(16)</strong></p>



<p><strong>ಬ್ಯಾಟಿಂಗ್</strong></p>



<p>ಜಾಸ್ ಬಟ್ಲರ್ : 80(49)</p>



<p>ಅಲೆಕ್ಸ್ ಹೇಲ್ಸ್ : 86(47)</p>



<p>ಇತರೆ: 4</p>



<p><strong>ಬೌಲಿಂಗ್</strong></p>



<p>ಭುವನೇಶ್ವರ್ ಕುಮಾರ್ : 2-0-25-0</p>



<p>ಅರ್ಶದೀಪ್ ಸಿಂಗ್ : 2-0-15-0</p>



<p>ಅಕ್ಸರ್ ಪಟೇಲ್ : 4-0-30-0</p>



<p>ಮೊಹಮ್ಮದ್ ಶಮಿ : 3-0-39-0</p>



<p>ರವಿಚಂದ್ರನ್ ಅಶ್ವಿನ್ : 2-0-27-0</p>



<p>ಹಾರ್ದಿಕ್ ಪಾಂಡ್ಯ : 3-0-34-0</p>
]]></content:encoded>
					
		
		
			</item>
		<item>
		<title>ಟಿ-20 ವಿಶ್ವಕಪ್‌: ಭಾರತಕ್ಕೆ ಪಾಕಿಸ್ತಾನದೆದುರು ಫೈನಲ್‌ ಆಡಲು ನಾವು ಬಿಡುವುದಿಲ್ಲ</title>
		<link>https://peepalmedia.com/t-20-world-cup-we-will-not-let-india-play-the-final-against-pakistan/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 09 Nov 2022 05:30:04 +0000</pubDate>
				<category><![CDATA[ಆಟೋಟ]]></category>
		<category><![CDATA[BHUVANESHVAR KUMAR]]></category>
		<category><![CDATA[IND VS ENG]]></category>
		<category><![CDATA[ind vs pak]]></category>
		<category><![CDATA[india]]></category>
		<category><![CDATA[JOS BUTTLER]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[ROHITH SHARMA]]></category>
		<category><![CDATA[sports news]]></category>
		<category><![CDATA[SURYA KUMAR YADAV]]></category>
		<category><![CDATA[T-20 WORLD CUP]]></category>
		<category><![CDATA[Virat Kohli]]></category>
		<guid isPermaLink="false">https://peepalmedia.com/?p=14925</guid>

					<description><![CDATA[ಅಡಿಲೇಡ್ ಓವಲ್ (ಆಸ್ಟ್ರೇಲಿಯಾ):‌ ಟಿ-20 ವಿಶ್ವಕಪ್‌ ಫೈನಲ್‌ನಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಭಾರತ ತಂಡ ಕಣಕ್ಕಿಳಿಯಲು ನಾವು ಬಿಡುವುದಿಲ್ಲ ಎಂದು ಇಂಗ್ಲೇಂಡ್‌ ತಂಡದ ನಾಯಕ ಜೋಸ್‌ ಬಟ್ಲರ್‌ ಹೇಳಿದ್ದಾರೆ. ʼಅಡಿಲೇಡ್ ಓವಲ್‌ʼನಲ್ಲಿ ಗುರುವಾರ ನಡೆಯಲಿರುವ ಟಿ 20 ವಿಶ್ವಕಪ್‌ ಎರಡನೇ ಸೆಮಿಫೈನಲ್‌ನಲ್ಲಿ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡ ಭಾರತ ತಂಡವನ್ನುಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದರವರು ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್‌ನಲ್ಲಿ ಯಾವ ತಂಡ ಜಯಗಳಿಸುವುದೊ, ಆ ತಂಡದ ವಿರುದ್ಧ ಪೈನಲ್‌ನಲ್ಲಿ ಆಡಲಿದೆ. &#160;ಭಾರತದ [&#8230;]]]></description>
										<content:encoded><![CDATA[
<p><strong>ಅಡಿಲೇಡ್ ಓವಲ್ (ಆಸ್ಟ್ರೇಲಿಯಾ):‌ </strong>ಟಿ-20 ವಿಶ್ವಕಪ್‌ ಫೈನಲ್‌ನಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಭಾರತ ತಂಡ ಕಣಕ್ಕಿಳಿಯಲು ನಾವು ಬಿಡುವುದಿಲ್ಲ ಎಂದು ಇಂಗ್ಲೇಂಡ್‌ ತಂಡದ ನಾಯಕ ಜೋಸ್‌ ಬಟ್ಲರ್‌ ಹೇಳಿದ್ದಾರೆ.</p>



<p>ʼಅಡಿಲೇಡ್ ಓವಲ್‌ʼನಲ್ಲಿ ಗುರುವಾರ ನಡೆಯಲಿರುವ ಟಿ 20 ವಿಶ್ವಕಪ್‌ ಎರಡನೇ ಸೆಮಿಫೈನಲ್‌ನಲ್ಲಿ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡ ಭಾರತ ತಂಡವನ್ನುಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದರವರು ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್‌ನಲ್ಲಿ ಯಾವ ತಂಡ ಜಯಗಳಿಸುವುದೊ, ಆ ತಂಡದ ವಿರುದ್ಧ ಪೈನಲ್‌ನಲ್ಲಿ ಆಡಲಿದೆ.</p>



<p>&nbsp;ಭಾರತದ ವಿರುದ್ಧದ ಪಂದ್ಯದ ಮೊದಲು, ನಾಯಕ ಜೋಸ್ ಬಟ್ಲರ್ ಅವರು ತಮ್ಮ ತಂಡದ ಸಿದ್ಧತೆಗಳ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಡೇವಿಡ್ ಮಲಾನ್ ಮತ್ತು ಮಾರ್ಕ್ ವುಡ್‌ಗೆ ಗಾಯದ ಭಯ ಕಾಡುತ್ತಿರುವುದಾಗಿ ತಿಳಿಸಿದರು. ನಂತರ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಹೆಚ್ಚು ರನ್‌ಗಳಿಸದಂತೆ ಕಟ್ಟಿಹಾಕುತ್ತೇವೆ ಎಂದು ಸಹ ಹೇಳಿದ್ದಾರೆ.</p>



<p>ಈ ವೇಳೆ ಟಿ-20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಸ್ಫರ್ಧಿಸಲು ನಾವು ಬಿಡುವುದಿಲ್ಲ, ಏಕೆಂದರೆ ನಮ್ಮ ತಂಡ ಭಾರತ ತಂಡವನ್ನು ಸೋಲಿಸುವ ಎಲ್ಲಾ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಿಳಿಸಿದರು.</p>



<p>ಈ ಸಂದರ್ಭದಲ್ಲಿ ಮುಂದುವರೆದು ಮಾತನಾಡಿದ ಅವರು, ʼನೋಡಿ, ನಾವು ಖಂಡಿತವಾಗಿಯೂ ಭಾರತ ಮತ್ತು ಪಾಕಿಸ್ತಾನ ತಂಡಗಳು ಫೈನಲ್‌ನಲ್ಲಿ ಆಟವಾಡುವುದನ್ನು ನಾವು ನೋಡಲು ಬಯಸುವುದಿಲ್ಲ. ಆದ್ದರಿಂದ ಈ ರೀತಿ ನಡೆಯದಂತೆ ನಾವು ನಮ್ಮಿಂದ ಸಾಧ್ಯವಿರುವ ಎಲ್ಲಾ ಪ್ರಯತ್ನವನ್ನು ನಾವು ಮಾಡುತ್ತೇವೆʼ ಎಂದು ಬಟ್ಲರ್ ಪಂದ್ಯದ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>



<p>ʼಭಾರತವು ಕ್ರಿಕೆಟ್‌ ಜಗತ್ತಿನಲ್ಲಿ ಬಹಳ ಬಲಿಷ್ಠ ತಂಡ. ಅದನ್ನ ಅವರು ಬಹಳ ವರ್ಷಗಳಿಂದ ಕಾಪಾಡಿಕೊಂಡು ಬಂದಿದ್ದಾರೆ. ಸ್ವಾಭಾವಿಕವಾಗಿ ಭಾರತ ತಂಡದ ಆಟಗಾರರು ಒಳ್ಳೆಯ ಪ್ರತಿಭೆಯುಳ್ಳಂತವರು, ಹಾಗಾಗಿಯೇ ಅವರ ತಂಡದಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರಿದ್ದಾರೆʼ ಎಂದು ಬಟ್ಲರ್ ಹೇಳಿದರು.</p>



<p>ಬಲಗೈ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಬಗ್ಗೆ ಮಾತನಾಡಿದ ಬಟ್ಲರ್, ಅವರು ಪ್ರಸಕ್ತ ಟೂರ್ನಿಯಲ್ಲಿ ಉತ್ತಮ ಫಾರ್ಮ್ನಲ್ಲಿದ್ದಾರೆ, ಏಕೆಂದರೆ ಅವರು ಉತ್ತಮ ಸ್ಟ್ರೈಕ್ ರೇಟ್‌ನಲ್ಲಿ ಮೂರು ಅರ್ಧ ಶತಕಗಳನ್ನು ದಾಖಲಿಸಿದ್ದಾರೆ. ಅವರ ಆಟ ನೋಡುವುದೆ ಒಂದು ಅದ್ಭುತ. ಅವರು ಇಲ್ಲಿಯವರಗೆ ಆಟವಾಡಿರುವ ಎಲ್ಲಾ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.</p>



<p>ಸೂರ್ಯಕುಮಾರ್‌ ಕಣಕ್ಕೆ ಇಳಿದಾಗ ಹೆಚ್ಚು ರನ್‌ಗಳಿಸಲು ನೋಡುತ್ತಾರೆ. ಅದಲ್ಲದೇ ಅವರು ಹೊಡೆಯುವ ಎಲ್ಲಾ ಹೊಡೆತಗಳನ್ನು ಅತ್ಮವಿಶ್ವಾಸದಿಂದ ಹೊಡೆಯುತ್ತಾರೆ. ಹಾಗಾಗಿಯೇ ಅವರು ಮೈದಾನದ ಎಲ್ಲಾ ಕಡೆಗೂ ಚೆಂಡನ್ನು ಕಳಿಸುತ್ತಾರೆ ಎಂದು ಹೇಳಿದರು. ಹೀಗಾಗಿ ಇಂತಹ ಒಳ್ಳೆಯ ಆಟಗಾರನ ವಿಕೆಟ್‌ ಪಡೆಯಲು ನಮ್ಮ ತಂಡದ ಬೌಲರ್‌ಗಳು ಹಲವಾರು ಸಿದ್ದತೆಗಳನ್ನು ನಡೆಸಿದ್ದಾರೆ ಎಂದರು.</p>



<p>&nbsp;ಯಜುವೇಂದ್ರ ಚಹಲ್ ವಿಶ್ವಕಪ್ನಲ್ಲಿ ಯಾವುದೇ ಪಂದ್ಯದಲ್ಲಿ ಆಡದಿರುವುದು ನಿಮಗೆ ಆಶ್ಚರ್ಯ ತಂದಿದೆಯೇ ಎಂದು ಕೇಳಿದಾಗ, ಬಟ್ಲರ್ ಪ್ರತಿಕ್ರಯಿಸಿ, ಯೂಜಿ ಒಬ್ಬ ಶ್ರೇಷ್ಠ ಬೌಲರ್, ನಾನು ʼಐಪಿಎಲ್‌ʼನಲ್ಲಿ ಅವರೊಂದಿಗೆ ಆಡುವುದನ್ನು ನಿಜವಾಗಿಯೂ ಆನಂದಿಸಿದ್ದೇನೆ. ಅವರು ಉತ್ತಮ ಬೌಲರ್, ಅವರು ಯಾವಾಗಲೂ ವಿಕೆಟ್ ಪಡೆಯಲು ತುಂಬಾ ಉತ್ಸುಕರಾಗಿರುತ್ತಾರೆ. ಹಾಗಾಗಿ ಅವರು ಶ್ರೇಷ್ಠ ಬೌಲರ್ ಎಂದು ನನಗೆ ಖಾತ್ರಿಯಿದೆ,&#8221; ಎಂದು ಹೇಳಿದರು.</p>



<p>ಮಲಾನ್ ಮತ್ತು ವುಡ್‌ಗೆ ಆದ ಗಾಯಗಳ ಬಗ್ಗೆ ಮಾತನಾಡಿದ ಬಟ್ಲರ್, ನಾವು ವೈದ್ಯಕೀಯ ತಂಡವನ್ನು ನಂಬುತ್ತೇವೆ. ಜೊತೆಗೆ ಆ ಇಬ್ಬರು ಆಟಗಾರರನ್ನು ಸಹ. ಅವರು ಸದ್ಯಕ್ಕೆ ಗಾಯದಿಂದ ಸುಧಾರಿಸಿಕೊಂಡಿದ್ದು, ಸಮಿಫೈನಲ್‌ನಲ್ಲಿ ಆಡಲಿದ್ದಾರೆ ಎಂದು ತಿಳಿಸಿದರು.</p>



<p>ಭುವನೇಶ್ವರ್ ಕುಮಾರ್ ಅವರನ್ನು ಎದುರಿಸುವ ತಮ್ಮ ಸಿದ್ಧತೆಯ ಬಗ್ಗೆ ಮಾತನಾಡಿದ ಬಟ್ಲರ್, ʼನನ್ನ ಸ್ವಂತ ಆಟದ ಬಗ್ಗೆ ನನಗೆ ಯಾವಾಗಲೂ ವಿಶ್ವಾಸವಿದೆ. ಭಾರತದಂತಹ ನಂಬರ್‌ ಒನ್‌ ತಂಡದಲ್ಲಿ, ಇತರ ತಂಡಗಳಿಗಿಂತ ಕಷ್ಟವೆನಿಸುವ ಬೌಲರ್‌ಗಳು ಇರುತ್ತಾರೆ. ಆ ಪಟ್ಟಿಯಲ್ಲಿ ಭುವನೇಶ್ವರ್‌ ಕೂಡ ಒಬ್ಬರು. ನಾನು ಯಾವಾಗಲೂ ಚೆನ್ನಾಗಿ ತಯಾರಿ ನಡೆಸುತ್ತೇನೆ, ಹಾಗಾಗಿ ನಾನು ಯಾರಿಗೂ ಹೆದರುವುದಿಲ್ಲ. ಏಕೆಂದರೆ ನಾನು ಆಟವಾಡುವ ಸಂದರ್ಭದಲ್ಲಿ ನನ್ನ ಮುಂದೆ ಬರುವ ಚೆಂಡನ್ನು ನೋಡುತ್ತೇನೆಯೇ ಹೊರತು ಎಸೆತಗಾರನನ್ನಲ್ಲ ಎಂದು ಹೇಳಿದರು.</p>
]]></content:encoded>
					
		
		
			</item>
	</channel>
</rss>
