<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>kannada cinema &#8211; Peepal Media</title>
	<atom:link href="https://peepalmedia.com/tag/kannada-cinema/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 08 Dec 2023 05:35:55 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>kannada cinema &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>&#8220;Toxic&#8221; : ಬಹು ನಿರೀಕ್ಷಿತ &#8216;ಯಶ್ 19&#8217; ಚಿತ್ರದಿಂದ ಬಂತು ದೊಡ್ಡ ಸುದ್ದಿ</title>
		<link>https://peepalmedia.com/big-news-came-from-the-much-awaited-film-yash-19/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 08 Dec 2023 05:34:42 +0000</pubDate>
				<category><![CDATA[ಸಿನಿಮಾ]]></category>
		<category><![CDATA[kannada]]></category>
		<category><![CDATA[kannada cinema]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Title launch]]></category>
		<category><![CDATA[Toxic]]></category>
		<category><![CDATA[Yash19]]></category>
		<guid isPermaLink="false">https://peepalmedia.com/?p=33470</guid>

					<description><![CDATA[ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ ಸಿನೆಮಾದ ಹೆಸರು ಇಂದು ಬಿಡುಗಡೆ ಆಗಿದೆ. ಚಿತ್ರಕ್ಕೆ &#8216;Toxic&#8217; ಎಂಬ ಟೈಟಲ್ ಕೊಟ್ಟಿದ್ದು, ಕನ್ನಡಿಗರದ್ದೇ ಪ್ರೊಡಕ್ಷನ್ ಹೌಸ್ KVN ಪ್ರೊಡಕ್ಷನ್ ಯಶ್ ಅವರ ಸಿನೆಮಾ ನಿರ್ಮಾಣದ ಹೊಣೆ ಹೊತ್ತಿದೆ. ಯಶ್ ನಟನೆಯ 19ನೇ ಸಿನಿಮಾದ ಶೀರ್ಷಿಕೆ ಅಭಿಮಾನಿಗಳ ಕಣ್ಣು ಕುಕ್ಕುವಂತಿದೆ. ಸಾವಿರಾರೂ ಅಭಿಮಾನಿಗಳು ಒಂದೇ ಬಾರಿಗೆ ಟೈಟಲ್ ಟೀಸರ್ ವೀಕ್ಷಣೆ ಮಾಡಿದ್ದು ಆ ಮಟ್ಟಿಗೆ &#8216;Toxic&#8217; ಟೈಟಲ್ ದಾಖಲೆ ಬರೆದಿದೆ. ಅಂದಹಾಗೆ ಯಶ್ ನಟನೆಯ 19ನೇ ಚಿತ್ರಕ್ಕೆ ಖ್ಯಾತ [&#8230;]]]></description>
										<content:encoded><![CDATA[
<p>ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ ಸಿನೆಮಾದ ಹೆಸರು ಇಂದು ಬಿಡುಗಡೆ ಆಗಿದೆ. ಚಿತ್ರಕ್ಕೆ &#8216;Toxic&#8217; ಎಂಬ ಟೈಟಲ್ ಕೊಟ್ಟಿದ್ದು, ಕನ್ನಡಿಗರದ್ದೇ ಪ್ರೊಡಕ್ಷನ್ ಹೌಸ್ KVN ಪ್ರೊಡಕ್ಷನ್ ಯಶ್ ಅವರ ಸಿನೆಮಾ ನಿರ್ಮಾಣದ ಹೊಣೆ ಹೊತ್ತಿದೆ.</p>



<p>ಯಶ್ ನಟನೆಯ 19ನೇ ಸಿನಿಮಾದ ಶೀರ್ಷಿಕೆ ಅಭಿಮಾನಿಗಳ ಕಣ್ಣು ಕುಕ್ಕುವಂತಿದೆ. ಸಾವಿರಾರೂ ಅಭಿಮಾನಿಗಳು ಒಂದೇ ಬಾರಿಗೆ ಟೈಟಲ್ ಟೀಸರ್ ವೀಕ್ಷಣೆ ಮಾಡಿದ್ದು ಆ ಮಟ್ಟಿಗೆ &#8216;Toxic&#8217; ಟೈಟಲ್ ದಾಖಲೆ ಬರೆದಿದೆ. ಅಂದಹಾಗೆ ಯಶ್ ನಟನೆಯ 19ನೇ ಚಿತ್ರಕ್ಕೆ ಖ್ಯಾತ ನಟಿ ಸಾಯಿ ಪಲ್ಲವಿ ನಾಯಕಿ ಆಗಲಿದ್ದಾರೆ ಎನ್ನುವ ಸುದ್ದಿ ಕೇರಳ ಕಡೆಯಿಂದ ಕೇಳಿ ಬರುತ್ತಿದೆ. ಈಗಾಗಲೇ ಸಾಯಿ ಪಲ್ಲವಿಗೆ ಚಿತ್ರದ ಕತೆ ವಿವರಿಸಲಾಗಿದೆ, ಹಾಗೂ ಚಿತ್ರದ ಕಥೆ ಬಗ್ಗೆ ಸಾಯಿ ಪಲ್ಲವಿ ಕೂಡಾ ಉತ್ಸುಕತೆ ತೋರಿರುವ ಬಗ್ಗೆಯೂ ಮಾತುಗಳು ಕೇಳಿ ಬಂದಿದೆ.</p>



<p>ಇನ್ನು ಮಲಯಾಳಂ ಹಾಗೂ ಬಾಲಿವುಡ್ ನಲ್ಲಿ ಚಿತ್ರ ನಿರ್ದೇಶಿಸಿ ಸೈ ಎನ್ನಿಸಿಕೊಂಡಿರುವ ದಕ್ಷಿಣದ ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರದ ನಿರ್ದೇಶಕಿಯಾಗಿದ್ದು, &#8220;ಯಶ್ 19&#8221; ಬಹು ನಿರೀಕ್ಷಿತ ಚಿತ್ರಕ್ಕೆ ಮಹಿಳೆ ನಿರ್ದೇಶನದ ಜವಾಬ್ದಾರಿ ಸಿಕ್ಕಿದ್ದು ಸಿನೆಮಾದ ಮತ್ತೊಂದು ಹೆಗ್ಗಳಿಕೆ ಎನ್ನಬಹುದು. &#8216;ಲಯರ್ಸ್ ಡೈರಿ&#8217; ಮತ್ತು &#8216;ಮೂತುನ್&#8217;ನಂತಹ ಸಿನಿಮಾಗಳಿಗೆ ಗೀತು ಮೋಹನದಾಸ್ ಪ್ರಸಿದ್ಧರಾಗಿದ್ದಾರೆ. ಲಯರ್ಸ್ ಡೈರಿ ಸಿನಿಮಾಗೆ ಎರಡು ರಾಷ್ಟ್ರ ಪ್ರಶಸ್ತಿ ಸೇರಿದಂತೆ ವಿಶ್ವದಾದ್ಯಂತ 6 ಪ್ರಮುಖ ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡದ್ದು ಗೀತು ಅವರ ಸಿನೆಮಾ ಕರಿಯರ್ ನ ದೊಡ್ಡ ಮೈಲುಗಲ್ಲು.</p>



<figure class="wp-block-image size-large"><img fetchpriority="high" decoding="async" width="1024" height="533" src="https://peepalmedia.com/wp-content/uploads/2023/12/toxic-yash-1024x533.jpg" alt="" class="wp-image-33474" srcset="https://peepalmedia.com/wp-content/uploads/2023/12/toxic-yash-1024x533.jpg 1024w, https://peepalmedia.com/wp-content/uploads/2023/12/toxic-yash-300x156.jpg 300w, https://peepalmedia.com/wp-content/uploads/2023/12/toxic-yash-768x400.jpg 768w, https://peepalmedia.com/wp-content/uploads/2023/12/toxic-yash-150x78.jpg 150w, https://peepalmedia.com/wp-content/uploads/2023/12/toxic-yash-696x363.jpg 696w, https://peepalmedia.com/wp-content/uploads/2023/12/toxic-yash-1068x556.jpg 1068w, https://peepalmedia.com/wp-content/uploads/2023/12/toxic-yash.jpg 1248w" sizes="(max-width: 1024px) 100vw, 1024px" /></figure>



<p>ಚಿತ್ರದ ಟೈಟಲ್‌ನ ಸಖತ್ ವಿಭಿನ್ನವಾಗಿ ಅನೌನ್ಸ್ ಮಾಡಿದ್ದಾರೆ. ಆರಂಭದಲ್ಲಿ ಜೋಕರ್ ಕಾರ್ಡ್‌ ಬರುತ್ತದೆ ನಂತರ ನಿರ್ಮಾಣ ಸಂಸ್ಥೆ ಹೆಸರು ಬರಲಿದೆ. ಮೋನ್‌ಸ್ಟಾರ್‌ ಮೈಂಡ್‌ ಕ್ರಿಯೆಶನ್ಸ್‌ ಬೆನ್ನಲೆ ನಿರ್ದೇಶಕಿ ಗೀತಾ ಮೋಹನದಾಸ್‌ ಎಂದು ಅನೌನ್ಸ್ ಆಗುತ್ತದೆ. ಯಶ್ ಸಂಪೂರ್ಣ ಲುಕ್ ರಿವೀಲ್ ಅಗಿಲ್ಲ ಆದರೆ ಕೈಯಲ್ಲಿ ರುದ್ರಾಕ್ಷಿ, ತಲೆಯಲ್ಲಿ ತೋಪಿ ಸ್ಪಷ್ಟವಾಗಿ ಕಾಣಿಸುತ್ತದೆ. ಟಾಕ್ಸಿಕ್‌ &#8216;A fairy tale of Grown ups&#8217; ಎಂದು ಟೈಟಲ್ ಅನೌನ್ಸ್ ಆಗುತ್ತದೆ. &#8216;Chaos is man and you want him&#8217; ಅನ್ನೋ ಧ್ವನಿ ಕೇಳಿ ಬರುತ್ತದೆ. ಚಿತ್ರದ ಟೈಟಲ್ ಅನೌನ್ಸ್ ದಿನವೇ ಸಿನಿಮಾ ಏಪ್ರಿಲ್ <a href="tel:102025">10 2025</a>ರಲ್ಲಿ ರಿಲೀಸ್‌ ಎಂದು ರಿವೀಲ್ ಮಾಡಿದ್ದಾರೆ.</p>



<p><a href="https://www.instagram.com/reel/C0k_MBiL9Fm/?igshid=ODhhZWM5NmIwOQ==">https://www.instagram.com/reel/C0k_MBiL9Fm/?igshid=ODhhZWM5NmIwOQ==</a></p>



<p>&#8216;Toxic&#8217; ಪದದಲ್ಲಿ ವಿಷಪೂರಿತ ಎಂಬ ಅರ್ಥ ಬರುವುದರಿಂದ ಮಾಸ್ ಅಭಿಮಾನಿಗಳನ್ನು ಮತ್ತೊಮ್ಮೆ ಯಶ್ ಸೆಳೆಯುವುದರಲ್ಲಿ ಅನುಮಾನವೇ ಇಲ್ಲ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಿವಿಧ ಮಾಧ್ಯಮಗಳಲ್ಲಿ ಸಿನೆಮಾದ ವಸ್ತುವಿನ ಬಗ್ಗೆ ಚರ್ಚೆಯಾಗುತ್ತಿದ್ದು, KGF ಚಿನ್ನದ ಬೇಟೆಯ ನಂತರ &#8216;Toxic&#8217; ಮೂಲಕ ಇನ್ನೇನು ಹೇಳಲು ಹೊರಟಿದ್ದಾರೆ ಎಂಬ ಬಗ್ಗೆ ಕುತೂಹಲ ಮೂಡಿದೆ.</p>
]]></content:encoded>
					
		
		
			</item>
		<item>
		<title>ರಾಕ್ ಸ್ಟಾರ್ ರೂಪೇಶ್ ಶೆಟ್ಟಿಗೆ ಜಾಹ್ನವಿ ಜೋಡಿ…ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಗಿಚ್ಚಿ ಗಿಲಿಗಿಲಿ ಜಾಹ್ನವಿ</title>
		<link>https://peepalmedia.com/gicha-gilli-jahnavi-entry/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 18 Aug 2023 10:21:41 +0000</pubDate>
				<category><![CDATA[ಸಿನಿಮಾ]]></category>
		<category><![CDATA[cinema]]></category>
		<category><![CDATA[kannada]]></category>
		<category><![CDATA[kannada cinema]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=25810</guid>

					<description><![CDATA[ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿ ಹೊಸ ಸಿನಿಮಾಗೆ ಅಧಿಪತ್ರ ಎಂಬ ಟೈಟಲ್ ಇಡಲಾಗಿದೆ.ರೂಪೇಶ್ ಜನ್ಮದಿನದ ಅಂಗವಾಗಿ ಟೈಟಲ್ ರಿವೀಲ್ ಮಾಡಲಾಗಿತ್ತು.ಟೈಟಲ್ ಮೂಲಕವೇ ಸಿನಿಮಾ ಪ್ರಿಯರಿಗೆ ಕುತೂಹಲ ಮೂಡಿಸಿದ್ದ ಚಿತ್ರ ತಂಡ,ಇದೀಗ ಅಧಿಪತ್ರ ಅಂಗಳದಿಂದ ಹೊಸ ಸಮಾಚಾರ ಹೊರಬಿದ್ದಿದೆ. ಈ ಸಿನಿಮಾ ಮೂಲಕ ಜಾಹ್ನವಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಸುದ್ದಿ ಮನೆಯಲ್ಲಿ ಬಹಳಷ್ಟು ಖ್ಯಾತಿ ಗಳಿಸಿದ್ದ ಜಾಹ್ನವಿ, ಗಿಚ್ಚಿ ಗಿಲಿಗಿಲಿ ಶೋ ನಲ್ಲಿ ತನ್ನ ಅಭಿನಯದ ಮೂಲಕ ಕನ್ನಡ ಕಿರುತೆರೆ [&#8230;]]]></description>
										<content:encoded><![CDATA[
<p>ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿ ಹೊಸ ಸಿನಿಮಾಗೆ ಅಧಿಪತ್ರ ಎಂಬ ಟೈಟಲ್ ಇಡಲಾಗಿದೆ.ರೂಪೇಶ್ ಜನ್ಮದಿನದ ಅಂಗವಾಗಿ ಟೈಟಲ್ ರಿವೀಲ್ ಮಾಡಲಾಗಿತ್ತು.ಟೈಟಲ್ ಮೂಲಕವೇ ಸಿನಿಮಾ ಪ್ರಿಯರಿಗೆ ಕುತೂಹಲ ಮೂಡಿಸಿದ್ದ ಚಿತ್ರ ತಂಡ,ಇದೀಗ ಅಧಿಪತ್ರ ಅಂಗಳದಿಂದ ಹೊಸ ಸಮಾಚಾರ ಹೊರಬಿದ್ದಿದೆ. ಈ ಸಿನಿಮಾ ಮೂಲಕ ಜಾಹ್ನವಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಸುದ್ದಿ ಮನೆಯಲ್ಲಿ ಬಹಳಷ್ಟು ಖ್ಯಾತಿ ಗಳಿಸಿದ್ದ ಜಾಹ್ನವಿ, ಗಿಚ್ಚಿ ಗಿಲಿಗಿಲಿ ಶೋ ನಲ್ಲಿ ತನ್ನ ಅಭಿನಯದ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದರು. ಈಗ ಅಧಿಪತ್ರದಲ್ಲಿ ನಾಯಕಿಯಾಗಿ ರೂಪೇಶ್ ಶೆಟ್ಟಿಗೆ ಜೋಡಿಯಾಗಿ ನಟಿಸಲಿದ್ದಾರೆ</p>



<p>ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಚಯನ್ ಶೆಟ್ಟಿ ಎಂಬುವರು ಅಧಿಪತ್ರ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ. ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್ ನಡಿಯಲ್ಲಿ ತಯಾರಾಗ್ತಿರುವ ಅಧಿಪತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ.</p>



<p>ನೈಜ ಘಟನೆಯಿಂದ ಸ್ಫೂರ್ತಿ ಪಡೆದ ಅಧಿಪತ್ರ ಸಿನಿಮಾವನ್ನು ಮಂಗಳೂರು, ಉಡುಪಿ ಸುತ್ತಮುತ್ತ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಉಳಿದ ತಾರಾಗಣ ಹಾಗೂ ತಾಂತ್ರಿಕ ಬಳಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ. ಇದೇ 23 ಅಧಿಪತ್ರ ಸಿನಿಮಾದ ಮುಹೂರ್ತ ಸಮಾರಂಭ ನಡೆಯಲಿದೆ.</p>



<p>ರೂಪೇಶ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿದ್ದ ತುಳು ಸಿನಿಮಾ ಸರ್ಕಸ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು ಇದೀಗ ರೂಪೇಶ್ ಹಾಗೂ ಜಾಹ್ನವಿ ಜೋಡಿಯಾಗಿ ಕನ್ನಡ ಸಿನಿಮಾದಲ್ಲಿ ನಟಿಸಲಿದ್ದಾರೆ.</p>
]]></content:encoded>
					
		
		
			</item>
		<item>
		<title>ಚಂದನ್ ಶೆಟ್ಟಿ ನಟನೆಯ ಹೊಸಾ ಚಿತ್ರದ ಟೈಟಲ್ ಅನಾವರಣ!</title>
		<link>https://peepalmedia.com/tltle-reveal-of-chandan-shetty-movie/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 18 Aug 2023 10:18:02 +0000</pubDate>
				<category><![CDATA[ಸಿನಿಮಾ]]></category>
		<category><![CDATA[cinema]]></category>
		<category><![CDATA[kannada]]></category>
		<category><![CDATA[kannada cinema]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=25807</guid>

					<description><![CDATA[ವರಮಹಾಲಕ್ಷ್ಮಿ ಹಬ್ಬದಂದು ಪ್ರೇಕ್ಷಕರಿಗೆ ಕಾದಿದೆ ಸರ್‍ಪ್ರೈಸ್!ರ್ಯಾಪರ್ ಆಗಿ ಪ್ರವರ್ಧಮಾನಕ್ಕೆ ಬಂದು, ಆ ವಲಯದಲ್ಲಿಯೇ ಒಂದಷ್ಟು ಖ್ಯಾತಿ ಪಡೆದಿರುವವರು ಚಂದನ್ ಶೆಟ್ಟಿ. ತಮ್ಮ ವೃತ್ತಿಯಲ್ಲಿ ಬಹು ಬೇಡಿಕೆ ಚಾಲ್ತಿಯಲ್ಲಿರುವಾಗಲೇ ಚಂದನ್ ನಟನೆಯತ್ತ ಮುಖ ಮಾಡಿದ್ದಾರೆ. ಅವರು ನಾಯಕ ನಟನಾಗಿ ನಟಿಸಿರುವ ಒಂದೆರಡು ಸಿನಿಮಾಗಳು ಅಚಿತಿಮ ಘಟ್ಟದಲ್ಲಿರುವಾಗಲೇ ಚಂದನ್ ಮತ್ತೊಂದು ಸಿನಿಮಾಕ್ಕೆ ಸಹಿ ಹಾಕಿದ್ದಾರೆ. ಯುವ ನಿರ್ದೇಶಕ ಅರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬರಲಿರೋ ಈ ಚಿತ್ರದ ಟೈಟಲ್ ಇದೇ 25ರಂದು ಅಂದರೆ, ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಅನಾವರಣಗೊಳ್ಳಲಿದೆ.ಇದೇ ಹದಿನೆಂಟನೇ [&#8230;]]]></description>
										<content:encoded><![CDATA[
<p>ವರಮಹಾಲಕ್ಷ್ಮಿ ಹಬ್ಬದಂದು ಪ್ರೇಕ್ಷಕರಿಗೆ ಕಾದಿದೆ ಸರ್‍ಪ್ರೈಸ್!<br>ರ್ಯಾಪರ್ ಆಗಿ ಪ್ರವರ್ಧಮಾನಕ್ಕೆ ಬಂದು, ಆ ವಲಯದಲ್ಲಿಯೇ ಒಂದಷ್ಟು ಖ್ಯಾತಿ ಪಡೆದಿರುವವರು ಚಂದನ್ ಶೆಟ್ಟಿ. ತಮ್ಮ ವೃತ್ತಿಯಲ್ಲಿ ಬಹು ಬೇಡಿಕೆ ಚಾಲ್ತಿಯಲ್ಲಿರುವಾಗಲೇ ಚಂದನ್ ನಟನೆಯತ್ತ ಮುಖ ಮಾಡಿದ್ದಾರೆ. ಅವರು ನಾಯಕ ನಟನಾಗಿ ನಟಿಸಿರುವ ಒಂದೆರಡು ಸಿನಿಮಾಗಳು ಅಚಿತಿಮ ಘಟ್ಟದಲ್ಲಿರುವಾಗಲೇ ಚಂದನ್ ಮತ್ತೊಂದು ಸಿನಿಮಾಕ್ಕೆ ಸಹಿ ಹಾಕಿದ್ದಾರೆ. ಯುವ ನಿರ್ದೇಶಕ ಅರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬರಲಿರೋ ಈ ಚಿತ್ರದ ಟೈಟಲ್ ಇದೇ 25ರಂದು ಅಂದರೆ, ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಅನಾವರಣಗೊಳ್ಳಲಿದೆ.<br>ಇದೇ ಹದಿನೆಂಟನೇ ತಾರೀಕಿನಂದು ಚಿತ್ರತಂಡ ಟೈಟಲ್ ಪ್ರೋಮೋ ಒಂದನ್ನು ಬಿಡುಗಡೆಗೊಳಿಸಿದೆ. ಅದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆಗಳೂ ಸಿಕ್ಕಿವೆ. ಈ ಮೂಲಕವೇ ಸದರಿ ಚಿತ್ರದ ಶೀರ್ಷಿಕೆ ಏನಿರಬಹುದೆಂಬ ಕುತೂಹಲವೂ ಮೂಡಿಕೊಂಡಿದೆ. ಒಂದು ಪ್ರತಿಭಾನ್ವಿತ ಯುವ ತಂಡ, ಒಂದೊಳ್ಳೆ ಕಥೆಯ ಮೂಲಕ ಈ ಸಿನಿಮಾದೊಂದಿಗೆ ಚಂದನ್ ಪ್ರೇಕ್ಷಕರ ಮುಂದೆ ಬರುವ ಲಕ್ಷಣಗಳೂ ದಟ್ಟವಾಗಿವೆ. ಒಟ್ಟಾರೆ ಸಿನಿಮಾ ಹೇಗಿರಬಹುದೆಂಬ ಸಣ್ಣ ಸೂಚನೆ ಈ ಟೈಟಲ್ ಜೊತೆಗೇ ಅನಾವರಣಗೊಳ್ಳುವ ನಿರೀಕ್ಷೆಗಳಿವೆ.<br>ಈ ಹಿಂದೆ ಶ್ರೀ ಮುರುಳಿ ನಾಯಕನಾಗಿ ನಟಿಸಿದ್ದ `ಲೂಸ್ ಗಳು’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದವರು ಅರುಣ್ ಅಮುಕ್ತ. ಮೂಲತಃ ಆಡ್ ಫಿಲಂ ಮೇಕರ್ ಆಗಿರುವ ಅರುಣ್, ಚಿತ್ರರಂಗದಲ್ಲಿ ಹತ್ತಾರು ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದಾರೆ. ಅಷ್ಟೆಲ್ಲ ಅನುಭವಗಳನ್ನು ಒಗ್ಗೂಡಿಸಿಕೊಂಡು ಒಂದೊಳ್ಳೆ ಕಥೆಯೊಂದಿಗೆ ಈ ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರಂತೆ. ಸದ್ಯದ ಮಟ್ಟಿಗೆ ಇದೊಂದು ಟೀನೇಜ್ ಡ್ರಾಮಾ ಆಗಿರಲಿದೆ ಎಂಬ ಏಕಮಾತ್ರ ಸುಳಿವು ಚಿತ್ರತಂಡದ ಕಡೆಯಿಂದ ಸಿಕ್ಕಿದೆಯಷ್ಟೇ.<br>ಈ ಚಿತ್ರದ ತಾರಾಗಣದಲ್ಲಿ ಚಂದನ್ ಶೆಟ್ಟಿ ಜೊತೆಗೆ ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ತಾಂತ್ರಿಕ ವರ್ಗವೂ ಸೇರಿದಂತೆ, ಬಹುಮುಖ್ಯವಾದ ಇನ್ನೊಂದಷ್ಟು ವಿಚಾರಗಳನ್ನು ಹಂತ ಹಂತವಾಗಿ ಪ್ರೇಕ್ಷಕರ ಮುಂದಿಡಲು ಚಿತ್ರತಂಡ ತೀರ್ಮಾನಿಸಿದೆ.</p>
]]></content:encoded>
					
		
		
			</item>
		<item>
		<title>ಮರ್ಡರ್ ಮಿಸ್ಟರಿ ‘ಆಪಲ್ ಕಟ್’ ಚಿತ್ರದಲ್ಲಿದೆ ಮಾನವಶಾಸ್ತ್ರದ ಕಥಾವಸ್ತು</title>
		<link>https://peepalmedia.com/apple-cut-movie-sindhu-gowda/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 15 Aug 2023 14:41:36 +0000</pubDate>
				<category><![CDATA[ಸಿನಿಮಾ]]></category>
		<category><![CDATA[cinema]]></category>
		<category><![CDATA[kannada]]></category>
		<category><![CDATA[kannada cinema]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=25611</guid>

					<description><![CDATA[ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ನಿರ್ದೇಶಕಿಯ ಆಗಮನ ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಹೆಚ್ಚುತ್ತಿದೆ. ಆ ಸಾಲಿಗೆ ಈಗ ಸಿಂಧು ಗೌಡ ಸೇರ್ಪಡೆಯಾಗಿದ್ದಾರೆ. ಸಿಂಧು ಗೌಡ &#8220;ಆಪಲ್ ಕಟ್&#8221; ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಿಂಧು ಗೌಡ ಖ್ಯಾತ ನಿರ್ದೇಶಕ ರಾಜ್ ಕಿಶೋರ್ ಅವರ ಪುತ್ರಿ. ಇತ್ತೀಚೆಗೆ ಈ ಚಿತ್ರದ ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕಿ ಸಿಂಧು ಗೌಡ, ನಾನೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ‘ನಾನು [&#8230;]]]></description>
										<content:encoded><![CDATA[
<h2 class="wp-block-heading"><strong>ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ನಿರ್ದೇಶಕಿಯ ಆಗಮನ</strong><br></h2>



<p>ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಹೆಚ್ಚುತ್ತಿದೆ. ಆ ಸಾಲಿಗೆ ಈಗ ಸಿಂಧು ಗೌಡ ಸೇರ್ಪಡೆಯಾಗಿದ್ದಾರೆ. ಸಿಂಧು ಗೌಡ &#8220;ಆಪಲ್ ಕಟ್&#8221; ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಿಂಧು ಗೌಡ ಖ್ಯಾತ ನಿರ್ದೇಶಕ ರಾಜ್ ಕಿಶೋರ್ ಅವರ ಪುತ್ರಿ. ಇತ್ತೀಚೆಗೆ ಈ ಚಿತ್ರದ ಪತ್ರಿಕಾಗೋಷ್ಠಿ ನಡೆಯಿತು.</p>



<p>ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕಿ ಸಿಂಧು ಗೌಡ, ನಾನೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ‘ನಾನು ಕಳೆದ 10ವರ್ಷದಲ್ಲಿ ಹಲವು ಜನಪ್ರಿಯ ಧಾರಾವಾಹಿಗಲ್ಲಿ ನಟನೆ ಮಾಡಿದ್ದೇನೆ. ಈ ಮೊದಲು ಒಂದು ಶಾರ್ಟ್ ಫಿಲ್ಮ ನಿರ್ದೇಶಿಸಿದ್ದು, ಹಿರಿತೆರೆಯಲ್ಲಿ ಈ ಸಿನಿಮಾ ನನ್ನ ಮೊದಲ ಪ್ರಯತ್ನ. ನಿರ್ಮಾಪಕಿ ಶಿಲ್ಪ ಪ್ರಸನ್ನ ಹಾಗೂ ನಾನು ಪಾರ್ಕ್ ನಲ್ಲಿ ಭೇಟಿಯಾದೆವು. ನಂತರ ಕಥೆ ಕೇಳಿ ಅವರು ನಿರ್ಮಾಣಕ್ಕೆ ಮುಂದಾದರು. ‘ಆಪಲ್ ಕಟ್’, ಐದು ಜನ ಗೆಳೆಯರ ಸುತ್ತ ನಡೆಯುವ ಕಥೆ. ಜೊತೆಗೆ ನಾನು ಮಾನವಶಾಸ್ತ್ರ ಓದಿದ್ದು, ಚಿತ್ರದಲ್ಲಿ ಮಾನವಶಾಸ್ತ್ರದ ಒಂದು ಅಂಶ ಸೇರಿಸಲಾಗಿದೆ. ಒಂದು ಆಸ್ಪತ್ರೆಯಲ್ಲಿ ಅನುಮತಿ ಪಡೆದು ಶವವೊಂದನ್ನು ಸಹ ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಅದು ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದೆ ಎನ್ನಬಹುದು.<br>ಮೊದಲಿನಿಂದಲೂ ನಾನು ತಂದೆ ಜೊತೆ ಶೂಟಿಂಗ್‌ಗೆ ಹೋಗುತ್ತಾ ಇದ್ದೆ. ಹಾಗಾಗಿ ಸಿನಿಮಾ ಆಸಕ್ತಿ ಬೆಳೆಯುತ್ತಾ ಬಂತು. ಸದ್ಯ ‘ಆಪಲ್ ಕಟ್’ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಇನ್ನೆರಡು ತಿಂಗಳಲ್ಲಿ ಸೆನ್ಸಾರ್ ಮುಗಿಸಿಕೊಂಡು ಸಿನಿಮಾ ರಿಲೀಸ್ ಮಾಡುವ ಯೋಜನೆ ಇದೆ. ಸಿನಿಮಾ ಚೆನ್ನಾಗಿ ಬರಲು ತಂಡದ ಸಹಕಾರ ತುಂಬಾ ಇದೆ’ ಎಂದು ಹೇಳಿದರು.</p>


<div class="wp-block-image">
<figure class="aligncenter size-large is-resized"><img decoding="async" src="https://peepalmedia.com/wp-content/uploads/2023/08/image-23-1024x682.png" alt="" class="wp-image-25613" style="width:522px;height:348px" width="522" height="348" srcset="https://peepalmedia.com/wp-content/uploads/2023/08/image-23-1024x682.png 1024w, https://peepalmedia.com/wp-content/uploads/2023/08/image-23-300x200.png 300w, https://peepalmedia.com/wp-content/uploads/2023/08/image-23-768x512.png 768w, https://peepalmedia.com/wp-content/uploads/2023/08/image-23-1536x1023.png 1536w, https://peepalmedia.com/wp-content/uploads/2023/08/image-23-150x100.png 150w, https://peepalmedia.com/wp-content/uploads/2023/08/image-23-696x464.png 696w, https://peepalmedia.com/wp-content/uploads/2023/08/image-23-1068x712.png 1068w, https://peepalmedia.com/wp-content/uploads/2023/08/image-23.png 1600w" sizes="(max-width: 522px) 100vw, 522px" /></figure></div>


<p>ನಂತರ ಮಾತನಾಡಿದ ಚಿತ್ರದ ನಾಯಕ ಸೂರ್ಯ ಗೌಡ, &#8220;ನಾನು ಈ ಚಿತ್ರದಲ್ಲಿ ಸತ್ಯ ಹೆಸರಿನ ಮಾನವಶಾಸ್ತ್ರ ಪ್ರೊಫೆಸರ್ ಪಾತ್ರ ಮಾಡಿದ್ದೇನೆ. ಹಲವಾರು ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ಮಾಡುತ್ತಾ ಬಂದಿದ್ದು ಇದೇ ಮೊದಲಬಾರಿ ಮುಖ್ಯ ಪಾತ್ರ ನಿರ್ವಹಿಸಿದ್ದೇನೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ನಟಿಸಿದ್ದೇನೆ. ಇದರಲ್ಲಿ ಕಥೆಯಷ್ಟೇ ತಾಯಿ-ಮಗನ ಬಾಂಧವ್ಯವನ್ನು ಅದ್ಭುತವಾಗಿ ತೋರಿಸಲಾಗಿದೆ&#8221; ಎಂದರು.</p>



<p>&#8220;ನಾನು ಮೂಲತಃ ಬಾಗೆಪಲ್ಲಿ ಹುಡುಗಿ. ಒಳ್ಳೆ ಕಂಟೆಂಟ್ ಇರುವ ಮರ್ಡರ್ ಮಿಸ್ಟರಿ ಸಿನಿಮಾದಲ್ಲಿ ಸೈಕಾಲಜಿ ಸ್ಟೂಡೆಂಟ್ ಆಗಿ ನಟಿಸಿದ್ದೇನೆ&#8221; ಎಂದರು ನಾಯಕಿ ಅಶ್ವಿ‌ನಿ ಪೋಲೆಪಲ್ಲಿ.</p>



<p>ವೇದಿಕೆಯಲ್ಲಿ ಹಾಸ್ಯ ನಟ ಅಪ್ಪಣ್ಣ, ಅಭಿಜಿತ್, ತಾಯಿ ಪಾತ್ರ ಮಾಡಿರುವ ಮೀನಾಕ್ಷಿ ತಮ್ಮ ಅನುಭವ ಹಂಚಿಕೊಂಡರು. ಬಾಲು ರಾಜವಾಡಿ ಸಹ ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ.</p>



<p>ಇನ್ನು ಚಿತ್ರವನ್ನು ಸಾನ್ವಿ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಮೊದಲಬಾರಿ ನಿರ್ಮಾಣ ಮಾಡಿರುವ ಶಿಲ್ಪ ಪ್ರಸನ್ನ ಮಾತನಾಡುತ್ತಾ, ಕಥೆ ಕೇಳಿದಾಗ ತುಂಬಾ ಇಷ್ಟವಾಗಿ ನಿರ್ಮಾಣ ಮಾಡಿರುವುದಾಗಿ ಹೇಳಿದರು.</p>



<p>ವೀರ್ ಸಮರ್ಥ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಯೋಗರಾಜ್ ಭಟ್, ಸತ್ಯಪ್ರಕಾಶ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ವಾಸುಕಿ ವೈಭವ್, ವಿಜಯಶ್ರೀ ಹಾಡಿದ್ದಾರೆ. ರಾಜೇಶ್ ಗೌಡ ಛಾಯಾಗ್ರಹಣ ಹಾಗೂ ಸುಚೇಂದ್ರ ಎನ್ ಮೂರ್ತಿ ಸಂಕಲನ &#8220;ಆಪಲ್ ಕಟ್&#8221; ಚಿತ್ರಕ್ಕಿದೆ.</p>
]]></content:encoded>
					
		
		
			</item>
		<item>
		<title>ಡಾಲಿ ಧನಂಜಯರ ಮೇಲಿನ ಅಭಿಮಾನ: ಟಿಕೆಟ್ ಬುಕ್ ಮಾಡಲು ಮುಂದಾದ ಫ್ಯಾನ್ಸ್</title>
		<link>https://peepalmedia.com/dali-dhananjay-melina-abhimana-tiket-buk-madalu-mundada-fans/</link>
		
		<dc:creator><![CDATA[Peepal Media]]></dc:creator>
		<pubDate>Thu, 27 Oct 2022 06:03:46 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ಸಿನಿಮಾ]]></category>
		<category><![CDATA[bengalure]]></category>
		<category><![CDATA[Dali Dhananjay]]></category>
		<category><![CDATA[hed bush]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[kannada cinema]]></category>
		<category><![CDATA[kannada movie]]></category>
		<category><![CDATA[kannada news]]></category>
		<category><![CDATA[karnataka]]></category>
		<category><![CDATA[movie]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sandalwood]]></category>
		<guid isPermaLink="false">https://peepalmedia.com/?p=13081</guid>

					<description><![CDATA[ಬೆಂಗಳೂರು: ಡಾಲಿ ಧನಂಜಯ್ ಅವರ ಹೊಸ ಚಲನಚಿತ್ರ ಹೆಡ್ ಬುಷ್ ಬಿಡುಗಡೆಯಾದ ನಂತರ, ಆ ಚಿತ್ರದಲ್ಲಿ ಧನಂಜಯ್‌ ಅವರು ವೀರಗಾಸೆ ಕಲಾವಿದರನ್ನು ಅವಮಾನ ಮಾಡಿದ್ದಾರೆ ಎನ್ನುವ ಹೊಸ ವಿವಾದ ಸೃಷ್ಟಿಯಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಧನಂಜಯ್‌ ಅವರು, ನಮಗೆ ಯಾರನ್ನೂ ನೋಯಿಸುವ ಉದ್ದೇಶವಿಲ್ಲ. ಚಿತ್ರವನ್ನು ಕೇವಲ ಚಿತ್ರವಾಗಿ ನೋಡಬೇಕು. ಹಾಗೇನಾದರು ವೀರಗಾಸೆ ಕಲಾವಿದರಿಗೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದರು. ಈ ವಿವಾದ ಕುರಿತು ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಾ ಇದ್ದಹಾಗೆ ಡಾಲಿ ಧನಂಜಯ್‌ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಡಾಲಿ ಧನಂಜಯ್ ಅವರ ಹೊಸ ಚಲನಚಿತ್ರ ಹೆಡ್ ಬುಷ್ ಬಿಡುಗಡೆಯಾದ ನಂತರ, ಆ ಚಿತ್ರದಲ್ಲಿ ಧನಂಜಯ್‌ ಅವರು ವೀರಗಾಸೆ ಕಲಾವಿದರನ್ನು ಅವಮಾನ ಮಾಡಿದ್ದಾರೆ ಎನ್ನುವ ಹೊಸ ವಿವಾದ ಸೃಷ್ಟಿಯಾಗಿತ್ತು.</p>



<p>ಈ ಕುರಿತು ಪ್ರತಿಕ್ರಿಯೆ ನೀಡಿರುವ ಧನಂಜಯ್‌ ಅವರು, ನಮಗೆ ಯಾರನ್ನೂ ನೋಯಿಸುವ ಉದ್ದೇಶವಿಲ್ಲ. ಚಿತ್ರವನ್ನು ಕೇವಲ ಚಿತ್ರವಾಗಿ ನೋಡಬೇಕು. ಹಾಗೇನಾದರು ವೀರಗಾಸೆ ಕಲಾವಿದರಿಗೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದರು.</p>



<p>ಈ ವಿವಾದ ಕುರಿತು ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಾ ಇದ್ದಹಾಗೆ ಡಾಲಿ ಧನಂಜಯ್‌ ಅವರಿಗೆ ಬೆಂಬಲವಾಗಿ ಅವರ ಅಭಿಮಾನಿಗಳು ಅವರ ಜೊತೆ ನಿಂತಿದ್ದಾರೆ.</p>



<p>ಒಬ್ಬರಿಂದ ಒಬ್ಬರು ಸ್ಫೂರ್ತಿಗೊಂಡು ಹೆಡ್ ಬುಷ್ ಚಿತ್ರಕ್ಕೆ ಟಿಕೆಟ್ ಬುಕ್ ಮಾಡ್ತಿರೋ ಅಭಿಮಾನಿಗಳು, ಸೋಷಿಯಲ್ ಮಿಡಿಯಾದಲ್ಲಿ ಹೊಸ ಅಭಿಯಾನವನ್ನು ಹುಟ್ಟುಹಾಕಿದ್ದಾರೆ.</p>



<p>&#8220;ಬಡವರ ಮಕ್ಕಳು ಬೆಳೆಯಬೇಕು ಕಣ್ರಯ್ಯ&#8221; ಎನ್ನುವ ಡಾಲಿ ಧನಂಜಯ್‌ ಅವರ ಡೈಲಾಗ್‌ ಈಗ ಎಲ್ಲೆಡೆ ವೈರಲ್‌ ಆಗಿದೆ. </p>



<p>ಈ ಅಭಿಯಾನದಿಂದ ಬುಕ್ ಮೈ ಶೋ ನಲ್ಲಿ ಹೆಡ್ ಬುಷ್ ಚಲನಚಿತ್ರದ ಟಿಕೆಟ್‌ ಬುಕ್ಕಿಂಗ್‌ ನಲ್ಲಿ 9.3/10 ರೇಟಿಂಗ್ ಏರಿಕೆ ಕಂಡಿದೆ.</p>
]]></content:encoded>
					
		
		
			</item>
		<item>
		<title>ಬಿಳಿಮಲೆ ಕಂಡ ಕಾಂತಾರ: ಎಂಚಿನಲಾ ಆವಡ್‌, ಸಿನೇಮಾ ಎಡ್ಡೆ ಉಂಡುಯೇ, ಒರೊ ತೂವೊಲಿ</title>
		<link>https://peepalmedia.com/bilimale-kandante-kantara-enchinal-adav-cinema-edde-unduye-oru-tavoli/</link>
		
		<dc:creator><![CDATA[Purushothama Bilimale]]></dc:creator>
		<pubDate>Mon, 24 Oct 2022 03:31:29 +0000</pubDate>
				<category><![CDATA[ಧರ್ಮ- ಸಂಸ್ಕೃತಿ]]></category>
		<category><![CDATA[Daivaradhane]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[kannada cinema]]></category>
		<category><![CDATA[kannada movie]]></category>
		<category><![CDATA[kannada news]]></category>
		<category><![CDATA[Kantara]]></category>
		<category><![CDATA[karavali]]></category>
		<category><![CDATA[movie]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[purushottama bilimale]]></category>
		<category><![CDATA[Rishab Shetty]]></category>
		<category><![CDATA[sandalwood]]></category>
		<category><![CDATA[writing]]></category>
		<guid isPermaLink="false">https://peepalmedia.com/?p=12741</guid>

					<description><![CDATA[ಕಾಂತಾರ ಚಿತ್ರದ ಕುರಿತ ವಿಮರ್ಶೆಗಳ ಸುರಿಮಳೆ ನಿಲ್ಲುತ್ತಿಲ್ಲ. ಕರಾವಳಿಯ ಬೂತಾರಾಧನೆಗಳ ಕುರಿತು ಅಧಿಕೃತವಾಗಿ ಮಾತನಾಡಬಲ್ಲ, ಸಾಹಿತಿ-ಸಂಶೋಧಕ ಡಾ.ಪುರುಷೋತ್ತಮ ಬಿಳಿಮಲೆ ಕಾಂತಾರ ನೋಡಿದ ನಂತರ ಬರೆದಿರುವ ಬರೆಹ ಇಲ್ಲಿದೆ. ಕೊನೆಗೂ ಕಾಂತಾರ ಸಿನೇಮಾವನ್ನು ಕನ್ನಡದಲ್ಲಿಯೇ ನೋಡಿದೆ. ನನಗೆ ಖುಷಿಯಾಯಿತು. ಕರಾವಳಿಯ ಬದುಕಿನ ಎರಡು ಕಣ್ಣುಗಳಂತಿರುವ ಭೂತಾರಾಧನೆ ಮತ್ತು ಯಕ್ಷಗಾನಗಳನ್ನು ಅತ್ಯಂತ ಸೃಜನಶೀಲವಾಗಿ ಮರು ಸೃಷ್ಟಿಸಿದವರು ಕಡಿಮೆ ಎಂದೇ ಹೇಳಬೇಕು. ಎಷ್ಟೋ ಬಾರಿ ಈ ಪ್ರಕಾರಗಳು ಎಷ್ಟು ಸಶಕ್ತವಾಗಿರುತ್ತವೆ ಎಂದರೆ ಸೃಜನಶೀಲತೆಯ ಅನೇಕ ಸಾಧ್ಯತೆಗಳನ್ನು ಅವುಗಳೇ ಸೂರೆಗೊಂಡಿರುತ್ತವೆ. ಈ ನಿಟ್ಟಿನಲ್ಲಿ [&#8230;]]]></description>
										<content:encoded><![CDATA[
<p>ಕಾಂತಾರ ಚಿತ್ರದ ಕುರಿತ ವಿಮರ್ಶೆಗಳ ಸುರಿಮಳೆ ನಿಲ್ಲುತ್ತಿಲ್ಲ. ಕರಾವಳಿಯ ಬೂತಾರಾಧನೆಗಳ ಕುರಿತು ಅಧಿಕೃತವಾಗಿ ಮಾತನಾಡಬಲ್ಲ, ಸಾಹಿತಿ-ಸಂಶೋಧಕ ಡಾ.ಪುರುಷೋತ್ತಮ ಬಿಳಿಮಲೆ ಕಾಂತಾರ ನೋಡಿದ ನಂತರ ಬರೆದಿರುವ ಬರೆಹ ಇಲ್ಲಿದೆ.</p>



<p>ಕೊನೆಗೂ ಕಾಂತಾರ ಸಿನೇಮಾವನ್ನು ಕನ್ನಡದಲ್ಲಿಯೇ ನೋಡಿದೆ. ನನಗೆ ಖುಷಿಯಾಯಿತು. ಕರಾವಳಿಯ ಬದುಕಿನ ಎರಡು ಕಣ್ಣುಗಳಂತಿರುವ ಭೂತಾರಾಧನೆ ಮತ್ತು ಯಕ್ಷಗಾನಗಳನ್ನು ಅತ್ಯಂತ ಸೃಜನಶೀಲವಾಗಿ ಮರು ಸೃಷ್ಟಿಸಿದವರು ಕಡಿಮೆ ಎಂದೇ ಹೇಳಬೇಕು. ಎಷ್ಟೋ ಬಾರಿ ಈ ಪ್ರಕಾರಗಳು ಎಷ್ಟು ಸಶಕ್ತವಾಗಿರುತ್ತವೆ ಎಂದರೆ ಸೃಜನಶೀಲತೆಯ ಅನೇಕ ಸಾಧ್ಯತೆಗಳನ್ನು ಅವುಗಳೇ ಸೂರೆಗೊಂಡಿರುತ್ತವೆ. ಈ ನಿಟ್ಟಿನಲ್ಲಿ ಕಾಂತಾರವು ಕರಾವಳಿಯ ಬದುಕಿನ ಕೆಲವು ಆಯಾಮಗಳನ್ನು ಮೊದಲಬಾರಿಗೆ ತೆರೆಯಮೇಲೆ ತಂದಿದೆ.</p>



<p>ಪಂಜುರ್ಲಿ ದೈವ, ಅದರ ಗಗ್ಗರದ ನಿಗೂಢ ದನಿ, ಸೂಟೆ ( ದೊಂದಿ), ಹಸಿರು ಕಾಡು, ಕಂಬಳ, ಹೊಡೆದಾಟ, ಬೀಡಿ, ಶರಾಬು, ಕೋಳಿಕಟ್ಟ, ಯಕ್ಷಗಾನ, ಮೀನು, ವಿಭಿನ್ನ ಕನ್ನಡ ಇತ್ಯಾದಿಗಳನ್ನು ನಿರ್ದೇಶಕ_ರಿಷಭ್ ಶೆಟ್ಟಿಯವರು ಚೆನ್ನಾಗಿ ದುಡಿಸಿಕೊಂಡಿದ್ದಾರೆ. ಕರಾವಳಿಯ ಕಡಲಿನ ಅಬ್ಬರ, ದೈವ ನರ್ತಕರೇ ಸೃಷ್ಟಿಸುವ ಸಂಗೀತ, ಕಾಡೇ ಹುಟ್ಟಿಸುವ ನಿಗೂಢ ಧ್ವನಿ ಇತ್ಯಾದಿಗಳನ್ನು ಇಲ್ಲಿ ಹೆಚ್ಚಾಗಿ ಬಳಸಿಕೊಂಡಿಲ್ಲ. ಪಾಡ್ದನದ, ಕಬಿತಗಳ ಲಯಗಾರಿಕೆಯ ಮಾಧುರ್ಯವನ್ನು ಇಲ್ಲಿ ಕೇಳಲಾರೆವು. ಮೂಲತ: ಈ ಲಯಗಳು ದೈವವೊಂದರ ದುರಂತಕ್ಕೆ ಪರಿಣಾಮಕಾರಿಯಾದ ಹಿನ್ನೆಲೆಯನ್ನು ಒದಗಿಸಿಕೊಡುತ್ತವೆ. ಬಹುಶ: ಕಮರ್ಶಿಯಲ್‌ ಸಿನೇಮಾವೊಂದು ಇವನ್ನೆಲ್ಲ ಬಳಸಿಕೊಳ್ಳುವುದೂ ಕಷ್ಟ.</p>



<p>ಈ ಚಿತ್ರವು 1870, 1970 ಮತ್ತು 1990 ರ ಮೂರು ಅವಧಿಗಳಲ್ಲಿ ಕರಾವಳಿ ಕಂಡ ಸ್ತಿತ್ಯಂತರಗಳನ್ನು ಒಂದು ಚೌಕಟ್ಟಾಗಿ ಇರಿಸಿಕೊಂಡಿದೆ. ವಸಾಹತು ಕಾಲಘಟ್ಟದಲ್ಲಿ ಥಾಮಸ್‌ ಮುನ್ರೋ ಮೊದಲ ಬಾರಿಗೆ ಕಾಡಿನ ಮೇಲೆ ಪ್ರಭುತ್ವ ಸಾಧಿಸುವಂತ ಕಾನೂನುಗಳನ್ನು ತಂದ. ಈಸ್ಟ್‌ ಇಂಡಿಯಾ ಕಂಪೆನಿಯ ಹಡಗುಗಳು ಮರಗಳನ್ನು ಹೊತ್ತು ಸಾಗಿಸಲು ಸದಾ ಸಿದ್ಧವಾಗಿರುವಾಗ ಅದಕ್ಕೆ ಬೇಕಾದ ಕಾನೂನನ್ನು ಅವರೇ ತಂದುಕೊಂಡಿರುವುದು ಆಶ್ಚರ್ಯದ ವಿಷಯವೇನೂ ಅಲ್ಲ. ಕಾಡಿನ ಒತ್ತುವರಿ, ಕಾಡಿನ ಮಕ್ಕಳು ತಮ್ಮದೇ ಕಾಡಿನಲ್ಲಿ ಅನಾಥರಾಗುವುದು ಈ ಸಿನೇಮಾದಲ್ಲಿಯೂ ಬಂದಿದೆ.</p>



<p>೧೯೭೦ರ ದಶಕದಲ್ಲಿ ಭೂಮಸೂದೆ ಜ್ಯಾರಿಗೆ ಬಂದಾಗ ಭೂ ಸಂಬಂಧಗಳಲ್ಲಿ ಅಮೂಲಾಗ್ರ ಬದಲಾವಣೆಯಾಯಿತು. ದೈವ ನರ್ತಕರೂ ಅದರಿಂದ ಕೆಲವು ತೊಂದರೆಗಳಿಗೆ ಒಳಗಾದರು. ಸಿನೇಮಾದಲ್ಲಿ ಗುರುವನ ಕೊಲೆ ಅಂಥದ್ದರ ಒಂದು ಸಂಕೇತ. ಆ ಕಾಲದಲ್ಲಿ ಸ್ವಲ್ಪ ಬಿಕ್ಕಟ್ಟನ್ನೆದುರಿಸಿದ ಭೂತಾರಾಧನೆಯು, ೧೯೯೦ರ ಆನಂತರ ಮತ್ತೆ ವೈಭವದ ದಿನಗಳನ್ನು ಕಂಡಿತು. ತುಳುನಾಡಿನ ಹೊರಗಡೆಗೆ, ಮುಖ್ಯವಾಗಿ ಮುಂಬೈಗೆ ವಲಸೆ ಹೋದ ತುಳುವರು ಕಷ್ಟ ಪಟ್ಟು ದುಡಿದು ಶ್ರೀಮಂತರಾಗಿ ಮತ್ತೆ ಹುಟ್ಟಿದೂರಿನ ಭೂತಾರಾಧನೆ ಮತ್ತು ನಾಗಾರಾಧನೆಗೆ ಹಣದ ತೊಂದರೆಯಾಗದಂತೆ ನೋಡಿಕೊಂಡರು. ಇದರಿಂದ ಅವರಿಗೆಲ್ಲ ಊರಿನಲ್ಲೊಂದು ಗುರುತು ಕೂಡಾ ಪ್ರಾಪ್ತಿಸಿತು. ಈ ಹಿನ್ನಲೆಯಲ್ಲಿ ಕಾಂತಾರವು ಆಯ್ದುಕೊಂಡ ಕಾಲದ ಚೌಕಟ್ಟು ಅರ್ಥಪೂರ್ಣವಾಗಿದೆ.</p>



<p></p>


<div class="wp-block-image">
<figure class="aligncenter size-full is-resized"><img decoding="async" src="https://peepalmedia.com/wp-content/uploads/2022/10/kantara.jpg" alt="" class="wp-image-8425" width="604" height="794"/></figure></div>


<p></p>



<p>ಸಿನೇಮಾವನ್ನು ಈಗಾಗಲೇ ಬಹುತೇಕ ಎಲ್ಲರೂ ನೋಡಿರುವುದರಿಂದ ಮತ್ತೆ ನಾನು ಕತೆ ಹೇಳುವುದಿಲ್ಲ.<br>ಚಿತ್ರದ ಕೊನೆಯಲ್ಲಿ ರಿಷಭ್ ಶೆಟ್ಟಿಯವರು ಮಾಡಿದ ಅಭಿನಯ ಅಮೋಘ. ದೈವಾರಾಧನೆಯಲ್ಲೂ ನಾಯಕರು ಅರ್ಧವಯಸ್ಸಿನಲ್ಲಿ ಸತ್ತು, ಆಮೇಲೆ ಮಾಯಕಗಳಾಗಿ ಕೊಂದವರ ಮೇಲೆ ಸೇಡು ತೀರಿಸಿಕೊಳ್ಳುತ್ತಾರೆ. ಉದಾಹರಣಗೆ ಕಲ್ಕುಡ -ಕಲ್ಲುರ್ಟಿಯವರು, ʼಜೀವ ಇರುವಾಗ ನೋಡಲಿಕ್ಕೆ ಆಗಲಿಲ್ಲ, ಸತ್ತು ನೋಡಿಕೊಳ್ಳುತ್ತೇವೆ; ಎಂದು ಹೇಳಿ ಮಾಯಕದಲ್ಲಿ ಅರಸನ ಮನೆಗೆ ಬೆಂಕಿ ಇಡುತ್ತಾರೆ, ಅರಸಿಯರಿಗೆ ಹುಚ್ಚು ಹಿಡಿಸುತ್ತಾರೆ. ಪಾಡ್ದನಗಳಲ್ಲಿ ಈ ಭಾಗ ಉಗ್ರವೇ ಆಗಿರುತ್ತದೆ. ಈ ವಿಷಯದಲ್ಲಿ ಅದು ಹಿಂದೂ ದೇವರುಗಳಿಗಿಂತ ಭಿನ್ನವೇ ಹೌದು. ನನಗೆ ಗೊತ್ತಿರುವ ಯಾವ ಹಿಂದೂ ದೇವರು ಕೂಡಾ ಅರ್ಧ ವಯಸ್ಸಿನಲ್ಲಿ ಸತ್ತು ಆನಂತರ ಮಾಯಕದಲ್ಲಿ ಸೇಡು ತೀರಿಸಿಕೊಳ್ಳುವುದನ್ನು ನಾನು ಓದಿಲ್ಲ. ದೈವವೊಂದರ ಮಾಯಕದ ಸೇಡಿನ ಭಾಗ , ಅದನ್ನು ಶೆಟ್ಟಿ ಅಭಿನಯಿಸಿದ ರೀತಿ ಕಾಂತಾರದ ಉತ್ಕೃಷ್ಟ ಭಾಗ ಎಂದು ನನ್ನ ಭಾವನೆ.</p>



<p>ಸಿನೇಮಾ ನೋಡಿ ಬಂದ ಮೇಲೆ ಈ ಸಿನೇಮಾ ಯಾಕಿಷ್ಟು ಚರ್ಚೆಗೆ ಒಳಗಾಯಿತು ಎಂಬುದು ನನಗೆ ಸ್ಪಷ್ಟವಾಗಲಿಲ್ಲ. ಪಂಜುರ್ಲಿಯನ್ನು ಕೊನೆಗೆ ವರಾಹ ರೂಪಿ ಎಂದು ಸಂಸ್ಕೃತದಲ್ಲಿ ನುತಿಸಿದ್ದು ಮತ್ತು ಅದಕ್ಕೆ ಪೂರಕವಾಗಿ ಪಾಡ್ದನಗಳಲ್ಲಿ ಇಲ್ಲದೇ ಇರುವ ಶಾಸ್ತ್ರೀಯಕ್ಕೆ ಹತ್ತಿರವಿರುವ ಸಂಗೀತ ಬಳಸಿದ್ದು ವಾಸ್ತವವಾಗಿ ಸಿನೇಮಾದ ಅತ್ಯಂತ ದುರ್ಬಲ ಭಾಗ. ಅದು ಆ ಕತೆಯ ಅಲ್ಲಿವರೆಗಣ ಬೆಳವಣಿಗೆಗೆ ಹೊಂದುವುದೇ ಇಲ್ಲ‌. ಆದರೆ ಈ ನಿಟ್ಟಿನಲ್ಲಿ ಸೃಜನಶೀಲ ಕಲಾವಿದನಿಗೆ ಇರಬೇಕಾದ ಸ್ವಾತಂತ್ರ್ಯವನ್ನು ನಾನಂತೂ ಪ್ರಶ್ನಿಸಲಾರೆ.</p>



<p>ಹೊಡೆದಾಟ, ಬಡಿದಾಟ, ಕೊಲೆ ಇತ್ಯಾದಿಗಳೆಲ್ಲ ಕರಾವಳಿಯಲ್ಲಿ ಸ್ವಲ್ಪ ಹೆಚ್ಚೇ ಇರುವುದರಿಂದಾಗಿ ರಿಷಭ ಶೆಟ್ಟಿಯವರು ಅದನ್ನು ಸ್ವಲ್ಪ ಜಾಸ್ತೀಯೇ ತೋರಿಸಿದಂತಿದೆ.<br>ಎಂಚಿನಲಾ ಆವಡ್‌, ಸಿನೇಮಾ ಎಡ್ಡೆ ಉಂಡುಯೇ, ಒರೊ ತೂವೊಲಿ</p>
]]></content:encoded>
					
		
		
			</item>
		<item>
		<title>‘ವಾಸಂತಿ ನಲಿದಾಗ’ ಬಿಡುಗಡೆ ದಿನಾಂಕ ಮುಂದೂಡಿಕೆ</title>
		<link>https://peepalmedia.com/vasanti-nalidaga-bidugade-dinak-ka-mundoodike/</link>
		
		<dc:creator><![CDATA[Peepal Media]]></dc:creator>
		<pubDate>Sun, 23 Oct 2022 12:26:43 +0000</pubDate>
				<category><![CDATA[ಸಿನಿಮಾ]]></category>
		<category><![CDATA[bengalure]]></category>
		<category><![CDATA[cinema]]></category>
		<category><![CDATA[cinema news]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[kannada cinema]]></category>
		<category><![CDATA[kannada movie]]></category>
		<category><![CDATA[kannada news]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sandalwood]]></category>
		<guid isPermaLink="false">https://peepalmedia.com/?p=12713</guid>

					<description><![CDATA[ಬೆಂಗಳೂರು: ‘ವಾಸಂತಿ ನಲಿದಾಗ’ ಎಂಬ ಕಾಲೇಜ್ ಯೂತ್ ಲವ್ ಸ್ಟೋರಿ ಒಳಗೊಂಡ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಗೆ ಸಿದ್ದವಾಗಿದೆ. ಟೈಟಲ್ ಮೂಲಕವೇ ಸಖತ್ ಸುದ್ದಿಯಲ್ಲಿರುವ ಚಿತ್ರ ಈ ಹಿಂದೆ &#8216;ಕೇಳ್ರಪ್ಪೋ ಕೇಳಿ&#8217; ವೀಡಿಯೋ ಸಾಂಗ್ ಬಿಡುಗಡೆ ಮಾಡಿ ಸೌಂಡ್ ಮಾಡಿತ್ತು. ಇದೀಗ ನಾಗೇಂದ್ರ ಪ್ರಸಾದ್ ಬರೆದ &#8216;ಕಾಲೇಜ್ ಗೆ ಕಾಲು ಇಟ್ಟರೆ ಕನಸುಗಳು ಜೋರು&#8217; ಎಂಬ ಮತ್ತೊಂದು ಯೂತ್ ಫುಲ್ ಸಾಂಗ್ ರಿಲೀಸ್ ಮಾಡಿದೆ. ಅಂದಹಾಗೆ ಈ ಚಿತ್ರ ಅಕ್ಟೋಬರ್ 14ರಂದೇ ಬಿಡುಗಡೆಯಾಗಬೇಕಿತ್ತು. ಆದ್ರೆ ಚಿತ್ರಮಂದಿರದ [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>‘ವಾಸಂತಿ ನಲಿದಾಗ’ ಎಂಬ ಕಾಲೇಜ್ ಯೂತ್ ಲವ್ ಸ್ಟೋರಿ ಒಳಗೊಂಡ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಗೆ ಸಿದ್ದವಾಗಿದೆ. ಟೈಟಲ್ ಮೂಲಕವೇ ಸಖತ್ ಸುದ್ದಿಯಲ್ಲಿರುವ ಚಿತ್ರ ಈ ಹಿಂದೆ &#8216;ಕೇಳ್ರಪ್ಪೋ ಕೇಳಿ&#8217; ವೀಡಿಯೋ ಸಾಂಗ್ ಬಿಡುಗಡೆ ಮಾಡಿ ಸೌಂಡ್ ಮಾಡಿತ್ತು. ಇದೀಗ ನಾಗೇಂದ್ರ ಪ್ರಸಾದ್ ಬರೆದ &#8216;ಕಾಲೇಜ್ ಗೆ ಕಾಲು ಇಟ್ಟರೆ ಕನಸುಗಳು ಜೋರು&#8217; ಎಂಬ ಮತ್ತೊಂದು ಯೂತ್ ಫುಲ್ ಸಾಂಗ್ ರಿಲೀಸ್ ಮಾಡಿದೆ. </p>



<p>ಅಂದಹಾಗೆ ಈ ಚಿತ್ರ ಅಕ್ಟೋಬರ್ 14ರಂದೇ ಬಿಡುಗಡೆಯಾಗಬೇಕಿತ್ತು. ಆದ್ರೆ ಚಿತ್ರಮಂದಿರದ ಸಮಸ್ಯೆಯಿಂದ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಇದೆಲ್ಲದರ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಇಂದು ಸಿನಿಮಾ ತಂಡ ಮಾಧ್ಯಮದೆದುರು ಬಂದಿತ್ತು.</p>



<p>ನಿರ್ದೇಶಕ ರವೀಂದ್ರ ವೆಂಶಿ ಮಾತನಾಡಿ ಅಕ್ಟೋಬರ್ 14ರಂದೇ ಸಿನಿಮಾ ಬಿಡುಗಡೆಯಾಗಬೇಕಿತ್ತು. ಅದಕ್ಕಾಗಿ ಪ್ರಚಾರ ಕಾರ್ಯವನ್ನು ಮಾಡಿ ಮುಗಿಸಿದ್ದೆವು. ಆದ್ರೆ ಚಿತ್ರಮಂದಿರದ ಸಮಸ್ಯೆಯಿಂದ ಅಕ್ಟೋಬರ್ 14ರಂದು ಬಿಡುಗಡೆ ಮಾಡಲಾಗಲಿಲ್ಲ. ಇದು ಸ್ಟಾರ್ ಸಿನಿಮಾ ಅಲ್ಲ ಹೊಸಬರ ಸಿನಿಮಾ ಆದ್ರಿಂದ ದೊಡ್ಡ ಸಿನಿಮಾದ ಜೊತೆ ಕಾಂಪಿಟೇಶನ್ ಬೇಡ ಎಂದು ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಡಿಸೆಂಬರ್ ನಲ್ಲಿ ಸಿನಿಮಾ ತೆರೆಗೆ ತರಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ, ಸದ್ಯದಲ್ಲೇ ಸಿನಿಮಾ ಬಿಡುಗಡೆ ದಿನಾಂಕವನ್ನು ಅನೌನ್ಸ್ ಮಾಡಲಿದ್ದೇವೆ ಎಂದು ರವೀಂದ್ರ ವೆಂಶಿ ತಿಳಿಸಿದ್ರು.</p>



<p></p>



<figure class="wp-block-image size-large"><img loading="lazy" decoding="async" width="1024" height="683" src="https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM-1-1024x683.jpeg" alt="" class="wp-image-12716" srcset="https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM-1-1024x683.jpeg 1024w, https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM-1-300x200.jpeg 300w, https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM-1-768x512.jpeg 768w, https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM-1-150x100.jpeg 150w, https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM-1-696x464.jpeg 696w, https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM-1-1068x713.jpeg 1068w, https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM-1.jpeg 1280w" sizes="auto, (max-width: 1024px) 100vw, 1024px" /></figure>



<p></p>



<p>ನಾಯಕ ರೋಹಿತ್ ಶ್ರೀಧರ್ ಮಾತನಾಡಿ ಅಕ್ಟೋಬರ್ 14ರಂದು ನಮ್ಮ ಸಿನಿಮಾ ಬಿಡುಗಡೆ ಆಗಬೇಕಿತ್ತು. ಚಿತ್ರಮಂದಿರದಲ್ಲಿ ಕಾಂತಾರ, ಗುರು ಶಿಷ್ಯರು ಸಿನಿಮಾಗಳು ಚೆನ್ನಾಗಿ ಓಡುತ್ತಿದ್ದರಿಂದ ಸಿನಿಮಾ ಬಿಡುಗಡೆಯನ್ನು ಹಿಂತೆಗೆದುಕೊಂಡ್ವಿ. ಡಿಸೆಂಬರ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಲ್ಲರೂ ಸಪೋರ್ಟ್ ಮಾಡಿ ಎಂದು ತಿಳಿಸಿದ್ದರು.</p>



<p>ಪುಟಾಣಿ ಸಫಾರಿ, ವರ್ಣಮಯ ಸಿನಿಮಾಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದ ರವೀಂದ್ರ ವೆಂಶಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಸಿನಿಮಾವಿದು. ಹೊಸ ಪ್ರತಿಭೆಗಳೊಂದಿಗೆ ಕಾಲೇಜ್ ಯೂತ್ ಲವ್ ಸ್ಟೋರಿ ಸಬ್ಜೆಕ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿ ಸಿನಿ ಪ್ರೇಕ್ಷಕರೆದುರು ಬರಲು ಸಜ್ಜಾಗಿದ್ದಾರೆ. ಮೊದಲೇ ಹೇಳಿದ ಹಾಗೆ ವಾಸಂತಿ ನಲಿದಾಗ ಚಿತ್ರ ನವ ಹಾಗೂ ಯುವ ಪ್ರತಿಭೆಗಳಿಂದ ಕೂಡಿದೆ. ರೋಹಿತ್ ಶ್ರೀಧರ್, ಭಾವನ ಶ್ರೀನಿವಾಸ್, ಜೀವಿತ ವಸಿಷ್ಠ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಕೆ. ಎನ್ ಶ್ರೀಧರ್ ಜೇನುಗೂಡು ಬ್ಯಾನರ್ ನಡಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.</p>



<p></p>



<figure class="wp-block-image size-large"><img loading="lazy" decoding="async" width="1024" height="683" src="https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM-1024x683.jpeg" alt="" class="wp-image-12715" srcset="https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM-1024x683.jpeg 1024w, https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM-300x200.jpeg 300w, https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM-768x512.jpeg 768w, https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM-150x100.jpeg 150w, https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM-696x464.jpeg 696w, https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM-1068x713.jpeg 1068w, https://peepalmedia.com/wp-content/uploads/2022/10/WhatsApp-Image-2022-10-23-at-4.26.06-PM.jpeg 1280w" sizes="auto, (max-width: 1024px) 100vw, 1024px" /></figure>



<p></p>



<p>ಶ್ರೀ ಗುರು ಸಂಗೀತ ನಿರ್ದೇಶನ, ಸಿ.ರವಿಚಂದ್ರನ್ ಸಂಕಲನ, ಪ್ರಮೋದ್ ಭಾರತೀಯ ಛಾಯಾಗ್ರಾಹಣ ಚಿತ್ರಕ್ಕಿದೆ. ಹಾಡುಗಳಿಗೆ ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್, ಗೌಸ್ ಫೀರ್ ಸಾಹಿತ್ಯವಿದೆ. ಸಾಯಿಕುಮಾರ್, ಸುಧಾರಾಣಿ, ಸಾಧುಕೋಕಿಲ, ಮಂಜು ಪಾವಗಡ, ಮಿಮಿಕ್ರಿ ಗೋಪಿ ಒಳಗೊಂಡ ಅನುಭವಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>&#8216;ಗಂಧದ ಗುಡಿ&#8217; ಮುಂದಿನ ಪೀಳಿಗೆಗೆ ದಂತಕತೆಯಾಗಲಿದೆ: ಸಿಎಂ ಬೊಮ್ಮಾಯಿ</title>
		<link>https://peepalmedia.com/gandada-gudu-mundina-piligege-dantakateyagalide-cm-bommai/</link>
		
		<dc:creator><![CDATA[Peepal Media]]></dc:creator>
		<pubDate>Sat, 22 Oct 2022 04:02:20 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[bengalure]]></category>
		<category><![CDATA[cinema]]></category>
		<category><![CDATA[cm bhommai]]></category>
		<category><![CDATA[gandada gudi]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[kannada cinema]]></category>
		<category><![CDATA[kannada news]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[punith rajkumar]]></category>
		<category><![CDATA[sandalwood]]></category>
		<guid isPermaLink="false">https://peepalmedia.com/?p=12468</guid>

					<description><![CDATA[ಬೆಂಗಳೂರು: ನಿನ್ನೆ ಪುನೀತ್ ರಾಜ್ ಕುಮಾರ್ ಅವರ &#8216;ಗಂಧದ ಗುಡಿ&#8217; ಚಿತ್ರ ಬಿಡುಗಡೆಯ ಪೂರ್ವಭಾವಿಯಾಗಿ ಆಯೋಜಿಸಲಾಗಿದ್ದ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ ಅಪ್ಪು ಅವರಂತೆ ಈ ಸಿನೆಮಾ ಮುಂದಿನ ಪೀಳಿಗೆಗೆ ಒಂದು ದಂತಕಥೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕನ್ನಡ ನಾಡು ಮತ್ತು ಗಂಧದ ಗುಡಿಯನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಅಂತಹ ವಿಚಾರದೊಂದಿಗೆ, ಕಾಡು, ನಿಸರ್ಗ, ಪ್ರಾಣಿಗಳನ್ನು ಇಟ್ಟುಕೊಂಡು ಅಪ್ಪು ಮಾಡಿದ ಈ ಸಿನೆಮಾ ಅತ್ಯಂತ ಪ್ರಸ್ತುತವಾಗಿದೆ. ನಿಸರ್ಗವನ್ನು ಮುಂದಿನ ಜನಾಂಗಕ್ಕೆ ಬಿಟ್ಟು [&#8230;]]]></description>
										<content:encoded><![CDATA[
<p><br><strong>ಬೆಂಗಳೂರು:</strong> ನಿನ್ನೆ ಪುನೀತ್ ರಾಜ್ ಕುಮಾರ್ ಅವರ &#8216;ಗಂಧದ ಗುಡಿ&#8217; ಚಿತ್ರ ಬಿಡುಗಡೆಯ ಪೂರ್ವಭಾವಿಯಾಗಿ ಆಯೋಜಿಸಲಾಗಿದ್ದ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ ಅಪ್ಪು ಅವರಂತೆ ಈ ಸಿನೆಮಾ ಮುಂದಿನ ಪೀಳಿಗೆಗೆ ಒಂದು ದಂತಕಥೆಯಾಗಲಿದೆ ಎಂದು  ವಿಶ್ವಾಸ ವ್ಯಕ್ತಪಡಿಸಿದರು.</p>



<p>ಕನ್ನಡ ನಾಡು ಮತ್ತು ಗಂಧದ ಗುಡಿಯನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಅಂತಹ ವಿಚಾರದೊಂದಿಗೆ, ಕಾಡು, ನಿಸರ್ಗ, ಪ್ರಾಣಿಗಳನ್ನು ಇಟ್ಟುಕೊಂಡು ಅಪ್ಪು ಮಾಡಿದ ಈ ಸಿನೆಮಾ ಅತ್ಯಂತ ಪ್ರಸ್ತುತವಾಗಿದೆ. ನಿಸರ್ಗವನ್ನು ಮುಂದಿನ ಜನಾಂಗಕ್ಕೆ ಬಿಟ್ಟು ಹೋಗುವ ಅವಶ್ಯಕತೆ ಇದೆ. ಇಲ್ಲವಾದರೆ ಮುಂದಿನ ಜನಾಂಗದ ಭವಿಷ್ಯದಲ್ಲಿ ಕಳ್ಳತನ ಮಾಡಿದಂತೆ ಎಂದು ಅಭಿಪ್ರಾಯ ಪಟ್ಟರು.</p>



<p>ಅಪ್ಪು ನಮ್ಮ ಜೊತೆಗೆ ಇದ್ದಾರೆ. ಪ್ರತಿ ಕ್ಷಣ ನಮ್ಮನ್ನು ನೋಡ್ತಾ ಇರ್ತಾರೆ. ಇರುವಾಗ ಹೊಗಳುವುದು ಸಹಜ. ಇಲ್ಲದೇ ಇರುವಾಗ ನೆನಪು ಮಾಡಿಕೊಳ್ಳುವುದು ದೈವದ ಆಶೀರ್ವಾದ ಇದ್ದರೆ ಮಾತ್ರ ಸಾಧ್ಯ. ಅಂತಹ ಆಶೀರ್ವಾದ ಅಪ್ಪು ಮೇಲಿತ್ತು ಎಂದು ಮುಖ್ಯಮಂತ್ರಿ ಬೊಮ್ಮಾಯಿ ನುಡಿದರು.</p>



<figure class="wp-block-image size-large"><img loading="lazy" decoding="async" width="1024" height="576" src="https://peepalmedia.com/wp-content/uploads/2022/10/image-67-1024x576.png" alt="" class="wp-image-12470" srcset="https://peepalmedia.com/wp-content/uploads/2022/10/image-67-1024x576.png 1024w, https://peepalmedia.com/wp-content/uploads/2022/10/image-67-300x169.png 300w, https://peepalmedia.com/wp-content/uploads/2022/10/image-67-768x432.png 768w, https://peepalmedia.com/wp-content/uploads/2022/10/image-67-150x84.png 150w, https://peepalmedia.com/wp-content/uploads/2022/10/image-67-696x392.png 696w, https://peepalmedia.com/wp-content/uploads/2022/10/image-67-1068x601.png 1068w, https://peepalmedia.com/wp-content/uploads/2022/10/image-67.png 1280w" sizes="auto, (max-width: 1024px) 100vw, 1024px" /></figure>



<p>ರಾಜ್ ಕುಮಾರ್ ಅವರ ಎಲ್ಲ ಗುಣಧರ್ಮಗಳನ್ನು ನೂರಕ್ಕೆ ನೂರರಷ್ಟು ಹೊಂದಿದವರು ಪುನೀತ್ ರಾಜಕುಮಾರ್, ಎಷ್ಟೇ ದೊಡ್ಡ ಸ್ಟಾರ್ ಆದರೂ ನಯ, ವಿನಯವನ್ನು ಒಂದು ಕ್ಷಣವೂ ಮರೆತಿರಲಿಲ್ಲ. ಅಪ್ಪು ಅತ್ಯಂತ ಸಣ್ಣ ವಯಸ್ಸಿನಲ್ಲೇ ಬಾಲನಟನಾಗಿ ದೊಡ್ಡ ಹೆಸರು ಮಾಡಿದಾಗ ಸಂತೋಷವಾಗಿತ್ತು. ಆದರೆ ಸಣ್ಣ ವಯಸ್ಸಿನಲ್ಲೇ ನಮ್ಮನ್ನು ಬಿಟ್ಟು ಹೋದಾಗ ದುಃಖ ತಡೆಯಲು ಆಗಲಿಲ್ಲ. ಶ್ರೇಷ್ಠ ವ್ಯಕ್ತಿಗಳು ಅಲ್ಪಾಯುಗಳು. ಅಮೂಲ್ಯವಾದುದು ಸ್ವಲ್ಪವೇ ಇರುತ್ತದೆ (Anything precious is very little) ಎಂದರು.</p>



<p>ಅಪ್ಪು ನೆನಪನ್ನು ಇಷ್ಟು ವಿಜೃಂಭಣೆಯಿಂದ ಆಯೋಜಿಸಿರುವ ಡಾ. ರಾಜ್ ಕುಮಾರ್ ಕುಟುಂಬದ ಶ್ರೀಮಂತಿಕೆಯನ್ನು ಕೊಂಡಾಡಿದ ಮುಖ್ಯಮಂತ್ರಿಗಳು ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಅವರನ್ನು ಅಭಿನಂದಿಸಿದರು.</p>



<p>ʼಇದೇ ನವೆಂಬರ್ 1 ರಂದು ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕದ ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದುʼ. ಅಭಿಮಾನಿಗಳು, ನಾಡಿನ ಜನತೆ ಕಾರ್ಯಕ್ರಮದಲ್ಲಿ ಭಾಗ ವಹಿಸುವಂತೆ ಆಹ್ವಾನ ನೀಡಿದರು.</p>



<p>ಅಪ್ಪು ಮೇಲಿನ ಅಭಿಮಾನದ ಕುರಿತು ತಮ್ಮ ಅನುಭವ ಹಂಚಿಕೊಂಡ ಮುಖ್ಯಮಂತ್ರಿಗಳು ತಮ್ಮ ಔರಾದ್ ಪ್ರವಾಸ ಸಂದರ್ಭದಲ್ಲಿ ಯುವಕರು ಅಪ್ಪು ಭಾವಚಿತ್ರದೊಂದಿಗೆ ಬಂದು ತಮ್ಮೊಡನೆ ಚಿತ್ರ ತೆಗೆಸಿಕೊಳ್ಳಲು ಮುಂದಾಗಿದ್ದನ್ನು ಸ್ಮರಿಸಿದರು.</p>



<figure class="wp-block-image size-full"><img loading="lazy" decoding="async" width="900" height="450" src="https://peepalmedia.com/wp-content/uploads/2022/10/image-68.png" alt="" class="wp-image-12471" srcset="https://peepalmedia.com/wp-content/uploads/2022/10/image-68.png 900w, https://peepalmedia.com/wp-content/uploads/2022/10/image-68-300x150.png 300w, https://peepalmedia.com/wp-content/uploads/2022/10/image-68-768x384.png 768w, https://peepalmedia.com/wp-content/uploads/2022/10/image-68-150x75.png 150w, https://peepalmedia.com/wp-content/uploads/2022/10/image-68-696x348.png 696w" sizes="auto, (max-width: 900px) 100vw, 900px" /></figure>



<p>ಈ ಸಂದರ್ಭದಲ್ಲಿ ನಟ ಶಿವರಾಜ್ ಕುಮಾರ್, ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜ್ ಕುಮಾರ್, ಸಚಿವರಾದ ಮುರುಗೇಶ್ ನಿರಾಣಿ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೆ.ಸಿ. ನಾರಾಯಣಗೌಡ, ಆನಂದ್ ಸಿಂಗ್, ಶಾಸಕ ರಾಜೂಗೌಡ ಮತ್ತು ಇತರ ಗಣ್ಯರು ಭಾಗವಹಿಸಿದ್ದರು.</p>
]]></content:encoded>
					
		
		
			</item>
		<item>
		<title>ಅಮೇಜಾನ್ ಪ್ರೈಮ್ ಗೆ ಲಗ್ಗೆ ಇಟ್ಟ ರಾಷ್ಟ್ರಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾ</title>
		<link>https://peepalmedia.com/national-award-winning-movie-dollu-has-been-added-to-amazon-prime/</link>
		
		<dc:creator><![CDATA[Peepal Media]]></dc:creator>
		<pubDate>Fri, 21 Oct 2022 06:59:59 +0000</pubDate>
				<category><![CDATA[ಸಿನಿಮಾ]]></category>
		<category><![CDATA[cinema]]></category>
		<category><![CDATA[cinema news]]></category>
		<category><![CDATA[dollu]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[kannada cinema]]></category>
		<category><![CDATA[karnataka]]></category>
		<category><![CDATA[movie]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sandalwood]]></category>
		<guid isPermaLink="false">https://peepalmedia.com/?p=12290</guid>

					<description><![CDATA[ಬೆಂಗಳೂರು: ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ಸ್ಯಾಂಡಲ್ ವುಡ್ ಅಂಗಳಕ್ಕೆ ನೀಡಿರುವ ಪ್ರತಿಭಾವಂತ ನಿರ್ದೇಶಕ ಪವನ್ ಒಡೆಯರ್, ನಿರ್ದೇಶನ, ಬರವಣಿಗೆ ಜೊತೆಗೆ ಸಿನಿಮಾ ನಿರ್ಮಾಣವನ್ನು ಆರಂಭಿಸಿರುವ ಇವರು ನಿರ್ಮಾಣ ಮಾಡಿದ ಮೊದಲ ಸಿನಿಮಾದಲ್ಲೇ ಸಂಚಲನ ಸೃಷ್ಟಿಸಿದ್ದರು. ಚೊಚ್ಚಲ ನಿರ್ಮಾಣದ ‘ಡೊಳ್ಳು’ ಸಿನಿಮಾ ರಾಷ್ಟ್ರಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದು, ಅಂತರಾಷ್ಟ್ರೀಯ ಮನ್ನಣೆಯನ್ನು ಪಡೆದುಕೊಂಡಿದೆ. ಹಲವಾರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಕನ್ನಡಿಗರ ಕೀರ್ತಿಯನ್ನು ಹೆಚ್ಚಿಸಿತ್ತು. ಹೀಗೆ ಎಲ್ಲರ ಹೆಮ್ಮೆಗೆ ಪಾತ್ರವಾದ ‘ಡೊಳ್ಳು’ ಸಿನಿಮಾ ಚಿತ್ರಮಂದಿರದಲ್ಲೂ ಸಿನಿ ಪ್ರೇಮಿಗಳ ಮನಗೆದ್ದಿತ್ತು. [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ಸ್ಯಾಂಡಲ್ ವುಡ್ ಅಂಗಳಕ್ಕೆ ನೀಡಿರುವ ಪ್ರತಿಭಾವಂತ ನಿರ್ದೇಶಕ ಪವನ್ ಒಡೆಯರ್, ನಿರ್ದೇಶನ, ಬರವಣಿಗೆ ಜೊತೆಗೆ ಸಿನಿಮಾ ನಿರ್ಮಾಣವನ್ನು ಆರಂಭಿಸಿರುವ ಇವರು ನಿರ್ಮಾಣ ಮಾಡಿದ ಮೊದಲ ಸಿನಿಮಾದಲ್ಲೇ ಸಂಚಲನ ಸೃಷ್ಟಿಸಿದ್ದರು.</p>



<p>ಚೊಚ್ಚಲ ನಿರ್ಮಾಣದ ‘ಡೊಳ್ಳು’ ಸಿನಿಮಾ ರಾಷ್ಟ್ರಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದು, ಅಂತರಾಷ್ಟ್ರೀಯ ಮನ್ನಣೆಯನ್ನು ಪಡೆದುಕೊಂಡಿದೆ. ಹಲವಾರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಕನ್ನಡಿಗರ ಕೀರ್ತಿಯನ್ನು ಹೆಚ್ಚಿಸಿತ್ತು. </p>



<p>ಹೀಗೆ ಎಲ್ಲರ ಹೆಮ್ಮೆಗೆ ಪಾತ್ರವಾದ ‘ಡೊಳ್ಳು’ ಸಿನಿಮಾ ಚಿತ್ರಮಂದಿರದಲ್ಲೂ ಸಿನಿ ಪ್ರೇಮಿಗಳ ಮನಗೆದ್ದಿತ್ತು. ಇದೀಗ ಒಟಿಟಿಗೂ ಲಗ್ಗೆ ಇಟ್ಟಿದ್ದು ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಗೊಂಡಿದೆ.</p>



<figure class="wp-block-image size-large"><img loading="lazy" decoding="async" width="819" height="1024" src="https://peepalmedia.com/wp-content/uploads/2022/10/Ratings-Post-Dollu-819x1024.png" alt="" class="wp-image-12295" srcset="https://peepalmedia.com/wp-content/uploads/2022/10/Ratings-Post-Dollu-819x1024.png 819w, https://peepalmedia.com/wp-content/uploads/2022/10/Ratings-Post-Dollu-240x300.png 240w, https://peepalmedia.com/wp-content/uploads/2022/10/Ratings-Post-Dollu-768x960.png 768w, https://peepalmedia.com/wp-content/uploads/2022/10/Ratings-Post-Dollu-150x188.png 150w, https://peepalmedia.com/wp-content/uploads/2022/10/Ratings-Post-Dollu-300x375.png 300w, https://peepalmedia.com/wp-content/uploads/2022/10/Ratings-Post-Dollu-696x870.png 696w, https://peepalmedia.com/wp-content/uploads/2022/10/Ratings-Post-Dollu-1068x1335.png 1068w, https://peepalmedia.com/wp-content/uploads/2022/10/Ratings-Post-Dollu.png 1080w" sizes="auto, (max-width: 819px) 100vw, 819px" /></figure>



<p>ಹೆಸರೇ ಹೇಳುವಂತೆ ಡೊಳ್ಳು ಕುಣಿತದ ಸುತ್ತ ನಮ್ಮ ನೆಲದ ಜಾನಪದ ಸೊಗಡನ್ನು ಮುಖ್ಯವಾಗಿಟ್ಟುಕೊಂಡು ಹೆಣೆದ ಕಥೆ ಈ ಚಿತ್ರದ ಜೀವಾಳ. ಒಡೆಯರ್ ಮೂವೀಸ್ ಬ್ಯಾನರ್ ನಲ್ಲಿ ನಿರ್ಮಾಣವಾದ ಈ ಚಿತ್ರ ರಾಷ್ಟ್ರ ಪ್ರಶಸ್ತಿ ಪಡೆಯುದರೊಂದಿಗೆ ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಮಾಮೂಲಿ ಕಮರ್ಶಿಯಲ್ ಸಿನಿಮಾಗಳ ನಡುವೆ ಜಾನಪದ ಕಲೆಯ ಕಾಳಜಿ ಕುರಿತಾದ ಈ ಚಿತ್ರ ಸಾಗರ್ ಪುರಾಣಿಕ್ ನಿರ್ದೇಶನದ ಮೊದಲ ಸಿನಿಮಾ.</p>



<p>ಚಿತ್ರದಲ್ಲಿ ಕಿರುತೆರೆ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಉಳಿದಂತೆ ಬಾಬು ಹಿರಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್ ಒಳಗೊಂಡ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಅನಂತ್ ಕಾಮತ್ ಎಂ ಸಂಗೀತ, ಅಭಿಲಾಶ್ ಕಲಥಿ ಕ್ಯಾಮೆರಾ ನಿರ್ದೇಶನ, ಬಿ ಎಸ್ ಕೆಂಪರಾಜು ಸಂಕಲನ ಡೊಳ್ಳು ಚಿತ್ರಕ್ಕಿದೆ. ಚಿತ್ರಮಂದಿರದಲ್ಲಿ ಡೊಳ್ಳು ಸಿನಿಮಾ ಮಿಸ್ ಮಾಡಿಕೊಂಡವರು ಅಮೇಜಾನ್ ಪ್ರೈಮ್ ನಲ್ಲಿ ನೋಡಬಹುದಾಗಿದೆ.</p>
]]></content:encoded>
					
		
		
			</item>
		<item>
		<title>‘ಏಕ್ ಲವ್ ಯಾ’ ಖ್ಯಾತಿಯ ನಟ ರಾಣಾನ ಎರಡನೇ ಸಿನಿಮಾ</title>
		<link>https://peepalmedia.com/ek-love-ya-cinema-kyatiya-nata-rana-eradane-ci/</link>
		
		<dc:creator><![CDATA[Peepal Media]]></dc:creator>
		<pubDate>Mon, 17 Oct 2022 12:53:22 +0000</pubDate>
				<category><![CDATA[ಸಿನಿಮಾ]]></category>
		<category><![CDATA[bengalure]]></category>
		<category><![CDATA[cinema]]></category>
		<category><![CDATA[cinema news]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[kannada cinema]]></category>
		<category><![CDATA[kannada movie]]></category>
		<category><![CDATA[kannada news]]></category>
		<category><![CDATA[karnataka]]></category>
		<category><![CDATA[movie]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sandalwood]]></category>
		<guid isPermaLink="false">https://peepalmedia.com/?p=11593</guid>

					<description><![CDATA[‘ಏಕ್ ಲವ್ ಯಾ’ ಸಿನಿಮಾ ಖ್ಯಾತಿಯ ನಟ ರಾಣಾ ಎರಡನೇ ಸಿನಿಮಾ ಯಾರ ಜೊತೆ ಮಾಡುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಅದಕ್ಕೆ ಉತ್ತರವೂ ಸಿಕ್ಕಾಗಿದೆ. ಪ್ರೇಮ್ ಶಿಷ್ಯ ವಿಜಯ್ ಈಶ್ವರ್ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದು, ಮೊದಲ ಸಿನಿಮಾವನ್ನು ರಾಣಾಗೆ ನಿರ್ದೇಶನ ಮಾಡುತ್ತಿದ್ದಾರೆ. ರಾಣಾ ಹುಟ್ಟುಹಬ್ಬದ ದಿನ ಚಿತ್ರತಂಡ ಮೊದಲ ಬಾರಿಗೆ ಚಿತ್ರದ ಥೀಮ್ ಪೋಸ್ಟರ್ ಬಿಡುಗಡೆ ಮಾಡಿ ರಾಣಾಗೆ ಶುಭ ಕೋರಿದೆ. ‘ಏಕ್ ಲವ್ ಯಾ’ ಸಿನಿಮಾ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ [&#8230;]]]></description>
										<content:encoded><![CDATA[
<p>‘ಏಕ್ ಲವ್ ಯಾ’ ಸಿನಿಮಾ ಖ್ಯಾತಿಯ ನಟ ರಾಣಾ ಎರಡನೇ ಸಿನಿಮಾ ಯಾರ ಜೊತೆ ಮಾಡುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಅದಕ್ಕೆ ಉತ್ತರವೂ ಸಿಕ್ಕಾಗಿದೆ. ಪ್ರೇಮ್ ಶಿಷ್ಯ ವಿಜಯ್ ಈಶ್ವರ್ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದು, ಮೊದಲ ಸಿನಿಮಾವನ್ನು ರಾಣಾಗೆ ನಿರ್ದೇಶನ ಮಾಡುತ್ತಿದ್ದಾರೆ. ರಾಣಾ ಹುಟ್ಟುಹಬ್ಬದ ದಿನ ಚಿತ್ರತಂಡ ಮೊದಲ ಬಾರಿಗೆ ಚಿತ್ರದ ಥೀಮ್ ಪೋಸ್ಟರ್ ಬಿಡುಗಡೆ ಮಾಡಿ ರಾಣಾಗೆ ಶುಭ ಕೋರಿದೆ.</p>



<p>‘ಏಕ್ ಲವ್ ಯಾ’ ಸಿನಿಮಾ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ರಾಣಾ ತಮ್ಮ ಎರಡನೇ ಸಿನಿಮಾ ಮೂಲಕ ಈ ಬಾರಿಯಾದರೂ ಸಿನಿರಸಿಕರ ಮನಗೆಲ್ಲಲು ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ. ಈ ಬಾರಿ ಪ್ಯಾನ್ ಇಂಡಿಯಾ ಹೀರೋ ಆಗಿ ಮಿಂಚಲಿರುವ ರಾಣಾ ಸಿನಿಮಾಗಾಗಿ ಭರ್ಜರಿ ಸಿದ್ದತೆ ನಡೆಸುತ್ತಿದ್ದಾರೆ. ಪೋಸ್ಟರ್ ಕೂಡ ಇಂಟ್ರಸ್ಟಿಂಗ್ ಆಗಿದ್ದು, ಶಾನ್ವಿ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.</p>



<p>ಪ್ರೇಮ್ ಜೊತೆ ಸಹಾಯಕ ನಿರ್ದೇಶಕನಾಗಿ, ಬರಹಗಾರನಾಗಿ ದುಡಿದ&nbsp; ಅನುಭವ ಇರುವ ವಿಜಯ್ ಈಶ್ವರ್ ಗೆ ಚಿತ್ರರಂಗದಲ್ಲಿ ಎಂಟು ವರ್ಷಗಳ ಅನುಭವವಿದೆ. ಮೊದಲ ಬಾರಿಗೆ ಕಥೆ ಬರೆದು ಸಿನಿಮಾ ನಿರ್ದೇಶನ ಸಾಹಸಕ್ಕೆ ಕೈ ಹಾಕಿರುವ ವಿಜಯ್ ಈಶ್ವರ್ ದೊಡ್ಡ ಮಟ್ಟದಲ್ಲಿ ಈ ಸಿನಿಮಾವನ್ನು ತೆರೆಗೆ ತರುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಮಾಸ್ ಸಬ್ಜೆಕ್ಟ್ ಒಳಗೊಂಡ ಚಿತ್ರದ ಟೈಟಲ್&nbsp; ಸದ್ಯದಲ್ಲೇ ರಿವೀಲ್ ಆಗಲಿದೆ.&nbsp;</p>



<figure class="wp-block-image size-large"><img loading="lazy" decoding="async" width="819" height="1024" src="https://peepalmedia.com/wp-content/uploads/2022/10/raana1-819x1024.jpg" alt="" class="wp-image-11621" srcset="https://peepalmedia.com/wp-content/uploads/2022/10/raana1-819x1024.jpg 819w, https://peepalmedia.com/wp-content/uploads/2022/10/raana1-240x300.jpg 240w, https://peepalmedia.com/wp-content/uploads/2022/10/raana1-768x960.jpg 768w, https://peepalmedia.com/wp-content/uploads/2022/10/raana1-1229x1536.jpg 1229w, https://peepalmedia.com/wp-content/uploads/2022/10/raana1-150x188.jpg 150w, https://peepalmedia.com/wp-content/uploads/2022/10/raana1-300x375.jpg 300w, https://peepalmedia.com/wp-content/uploads/2022/10/raana1-696x870.jpg 696w, https://peepalmedia.com/wp-content/uploads/2022/10/raana1-1068x1335.jpg 1068w, https://peepalmedia.com/wp-content/uploads/2022/10/raana1.jpg 1280w" sizes="auto, (max-width: 819px) 100vw, 819px" /></figure>



<p>ಚಿತ್ರದಲ್ಲಿ ರಾಣಾ ಲುಕ್ ಕಂಪ್ಲೀಟ್ ಡಿಫ್ರೆಂಟ್ ಆಗಿರಲಿದ್ದು,&nbsp; ಬಿಡುಗಡೆಯಾಗಿರುವ ಥೀಮ್ ಪೋಸ್ಟರ್ ಕೂಡ ಅದನ್ನೇ&nbsp; ಹೇಳುತ್ತಿದೆ. ಬಿಗ್ ಬಜೆಟ್ ನಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ತಮಿಳಿನ ಖ್ಯಾತ ನಟರೊಬ್ಬರು ವಿಲನ್ ಪಾತ್ರಕ್ಕೆ ಬಣ್ಣ ಹಚ್ಚಲಿದ್ದು, ಸ್ಯಾಂಡಲ್ ವುಡ್ ಸ್ಟಾರ್ ನಟರೊಬ್ಬರ ಗೆಸ್ಟ್ ಅಪಿಯರೆನ್ಸ್ ಕೂಡ ಸಿನಿಮಾದಲ್ಲಿರಲಿದೆ ಎನ್ನುತ್ತಾರೆ ನಿರ್ದೇಶಕರು. ಸಿನಿಮಾ ಟೈಟಲ್&nbsp; ತಾಂತ್ರಿಕ ವರ್ಗ,&nbsp; ಎಲ್ಲದರ ಬಗ್ಗೆ ಸದ್ಯದಲ್ಲೇ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ.</p>
]]></content:encoded>
					
		
		
			</item>
	</channel>
</rss>
