<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Kannada Language &#8211; Peepal Media</title>
	<atom:link href="https://peepalmedia.com/tag/kannada-language/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 03 Sep 2024 11:33:47 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Kannada Language &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ದೇವ ಬಾಶೆ, ಸ್ವರ್ಗದ ಬಾಶೆ ಎಲ್ಲ ಲೊಳಲೊಟ್ಟೆ (ಡಾ.ರಂಗನಾತ ಕಂಟನಕುಂಟೆ ಬರಹ)</title>
		<link>https://peepalmedia.com/deva-bashe-swargada-bashe-ella-lolalotte-written-by-dr-ranganatha-kantanakunte/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 03 Sep 2024 11:24:45 +0000</pubDate>
				<category><![CDATA[ಅಂಕಣ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[Kannada Language]]></category>
		<category><![CDATA[karnataka]]></category>
		<category><![CDATA[language]]></category>
		<category><![CDATA[news]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[samskritha]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=44859</guid>

					<description><![CDATA[‘ಸಂಸ್ಕ್ರುತ ಬಾಶೆ&#8217; ಗೊತ್ತಿಲ್ಲದಿದ್ದರೆ ಸ್ವರ್ಗಕ್ಕೆ ಹೋಗಲು ಸಾದ್ಯವಿಲ್ಲ’ ಎಂದು ಸ್ವಾಮೀಜಿಗಳೊಬ್ಬರು ನೀಡಿರುವ ಹೇಳಿಕೆ ಚರ್ಚೆ ಹುಟ್ಟಿ ಹಾಕಿದೆ. ಅವರ ಹೇಳಿಕೆ ಅಜ್ಞಾನದಿಂದ ಕೂಡಿದೆ ಎಂಬುದು ನಿಜವಾದರೂ ಅದರ ಪರಿಣಾಮ ದೊಡ್ಡದಾಗಿರುತ್ತದೆ. ಯಾಕೆಂದರೆ ಅವರು ಸಾಮಾನ್ಯ ವ್ಯಕ್ತಿಯಲ್ಲ. ಪ್ರಬಾವಿ ಮಟದ ‘ಸ್ವಾಮೀಜಿ’. ಅವರನ್ನು ಹಿಂಬಾಲಿಸುವ ದೊಡ್ಡ ಹಿಂಡೇ ಇರುವುದು ತಿಳಿದ ವಿಚಾರ. ಅಂತಹ ಹಿಂಬಾಲಕರಿಗೆ ಅವರ ಮಾತು ಪವಿತ್ರ ಆದೇಶವೇ ಆಗಿರುತ್ತದೆ. ಅದನ್ನು ಅವರು ನಂಬುತ್ತಾರೆ. ಅಂತಹ ಸುದ್ದಿಗಳನ್ನು ಎಲ್ಲೆಡೆ ಹರಡುತ್ತಾರೆ. ಹಾಗೆ ಹರಡಿಕೊಂಡ ಸುದ್ದಿಯನ್ನು ದಿಟವೇ? ಸಟೆಯೇ? [&#8230;]]]></description>
										<content:encoded><![CDATA[
<p>‘ಸಂಸ್ಕ್ರುತ ಬಾಶೆ&#8217; ಗೊತ್ತಿಲ್ಲದಿದ್ದರೆ ಸ್ವರ್ಗಕ್ಕೆ ಹೋಗಲು ಸಾದ್ಯವಿಲ್ಲ’ ಎಂದು ಸ್ವಾಮೀಜಿಗಳೊಬ್ಬರು ನೀಡಿರುವ ಹೇಳಿಕೆ ಚರ್ಚೆ ಹುಟ್ಟಿ ಹಾಕಿದೆ. ಅವರ ಹೇಳಿಕೆ ಅಜ್ಞಾನದಿಂದ ಕೂಡಿದೆ ಎಂಬುದು ನಿಜವಾದರೂ ಅದರ ಪರಿಣಾಮ ದೊಡ್ಡದಾಗಿರುತ್ತದೆ. ಯಾಕೆಂದರೆ ಅವರು ಸಾಮಾನ್ಯ ವ್ಯಕ್ತಿಯಲ್ಲ. ಪ್ರಬಾವಿ ಮಟದ ‘ಸ್ವಾಮೀಜಿ’. ಅವರನ್ನು ಹಿಂಬಾಲಿಸುವ ದೊಡ್ಡ ಹಿಂಡೇ ಇರುವುದು ತಿಳಿದ ವಿಚಾರ. ಅಂತಹ ಹಿಂಬಾಲಕರಿಗೆ ಅವರ ಮಾತು ಪವಿತ್ರ ಆದೇಶವೇ ಆಗಿರುತ್ತದೆ. ಅದನ್ನು ಅವರು ನಂಬುತ್ತಾರೆ. ಅಂತಹ ಸುದ್ದಿಗಳನ್ನು ಎಲ್ಲೆಡೆ ಹರಡುತ್ತಾರೆ. ಹಾಗೆ ಹರಡಿಕೊಂಡ ಸುದ್ದಿಯನ್ನು ದಿಟವೇ? ಸಟೆಯೇ? ಎಂದು ಮರುಯೋಚಿಸದೆ ನಂಬುವ ಮುಗ್ದ ಜನ ಸಮಾಜದಲ್ಲಿದ್ದಾರೆ. ಅವರು ತಮ್ಮ ಮಕ್ಕಳಿಗೆ ಪರಂಪರೆಯ ಭಾಶೆ ಹೆಸರಿನಲ್ಲಿ ಸಂಸ್ಕೃತ ಕಲಿಸುವ ಆಸಕ್ತಿ ತೋರುತ್ತಾರೆ. ಜಾಗತೀಕರಣ ಕಾಲದಲ್ಲಿ ಹುಟ್ಟಿಕೊಂಡಿರುವ ನವಬ್ರಾಹ್ಮಣಶಾಹಿ ಮಧ್ಯಮ ವರ್ಗ ಇದರ ದೊಡ್ಡ ಬಲಿಪಶು. ಇದು ಲಾಬಕ್ಕಾಗಿ ಇಂಗ್ಲಿಶ್ ಅನ್ನು ತಮ್ಮ ದರ್ಮ ಪರಂಪರೆಗಳ ಹೆಸರಲ್ಲಿ ಸಂಸ್ಕೃತವನ್ನು ಕಲಿಯುವ ಸ್ವಾರ್ತದಲ್ಲಿದೆ. ನಿಡುಗಾಲದಲ್ಲಿ ಜನರ ಮೇಲೆ ಮನೋದಾಳಿ ನಡೆಯುವುದರಿಂದ ಇಂತಹ ಸಮಸ್ಯೆಗಳು ಎದುರಾಗುತ್ತವೆ. ಅಂದರೆ ಸಂಸ್ಕ್ರುತವಾದಿಗಳ ಸವಾರಿ ಜನರನ್ನು ತುಳಿಯುತ್ತಲೇ ಇರುತ್ತದೆ.</p>



<p>ಹೀಗೆ ಸಂಸ್ಕ್ರುತದ ಬಗ್ಗೆ ಹಬ್ಬಿಸಿದ ಸುಳ್ಳುಗಳ ಪರಿಣಾಮವಾಗಿಯೇ ಅದು ‘ದೇವಬಾಶೆ’ ಎಂಬ ಪದವಿಯನ್ನು ಹೊಂದಿದೆ. ಅದರ ಕನವರಿಕೆಯ ಮುಂದುವರಿಕೆಯಾಗಿಯೇ ಸಂಸ್ಕ್ರುತ ಸ್ವರ್ಗದ ಬಾಶೆ ಎಂಬ ಆದೇಶವನ್ನು ನೀಡಲಾಗಿದೆ. ಇಲ್ಲಿ ಗಮನಿಸಬೇಕಾದ ಸಂಗತಿಯೆಂದರೆ ಅದು ಅವರ ಖಾಸಗಿ ಹೇಳಿಕೆ ಅಲ್ಲ. ಅವರ ಹಿಂದಿರುವ ಬ್ರಾಹ್ಮಣ್ಯವಾದಿಗಳು, ಸನಾತನವಾದಿಗಳು ಮತೀಯವಾದಿಗಳು ಸ್ವಾಮೀಜಿಗಳ ಮೂಲಕ ಮಾತನಾಡಿದ್ದಾರೆ. ದೇವಾಲಯಗಳು ಮಟಗಳನ್ನು ಸಂಸ್ಕ್ರುತವನ್ನು ಬೆಳೆಸಲು ಬಳಸಿಕೊಂಡೇ ಬರಲಾಗುತ್ತಿದೆ. ಅದು ಈಗ ಮತ್ತೂ ಮುಂದುವರಿದಿದೆ. ಜನಬಳಕೆಯಲ್ಲಿದ್ದ ಇಲ್ಲವೇ ‘ಮೃತಭಾಶೆ’ಗೆ, ಸಂಸ್ಕ್ರತಕ್ಕೆ ಮರುಜೀವ ನೀಡುವ ಕೆಲಸವನ್ನು ಶತಮಾನಗಳಿಂದಲೂ ಮಾಡುತ್ತಲೇ ಬರಲಾಗುತ್ತಿದೆ. ಆಳುವ ವರ್ಗಗಳ ಶಕ್ತಿಗಳನ್ನು ಬೌದ್ದಿಕವಾಗಿ ಕೈವಶಮಾಡಿಕೊಂಡಿರುವ ಈ ಶಕ್ತಿಗಳು ಸಂಸ್ಕ್ರುತವನ್ನು ಬೆಳೆಸುವ ಕೆಲಸ ಮಾಡುತ್ತಿವೆ. ಅಂತಹ ಕೆಲಸಗಳಿಗೆ ಮಾನ್ಯತೆ ತಂದುಕೊಡುವ ಅಜೆಂಡಾದ ಬಾಗವಾಗಿ ಇಂತಹ ಹೇಳಿಕೆಗಳು ಹುಟ್ಟುತ್ತಿರುತ್ತವೆ. ಅದಕ್ಕೆ ಉತ್ತರ ನೀಡುವ ಕೆಲಸವನ್ನು ಕನ್ನಡಿಗರು ಮಾಡುತ್ತಿರುತ್ತಾರೆ. ಅಶ್ಟೇ.</p>



<p>ಸ್ವಾಮೀಜಿಗಳ ಮಾತನ್ನು ಅವಲೋಕಿಸಿದರೆ ಹಲವು ಸಂಗತಿಗಳು ಬಹಿರಂಗಗೊಳ್ಳುತ್ತಿವೆ. ಬ್ರಾಹ್ಮಣಶಾಹಿಗಳು ಮೊದಲಿಂದಲೂ ದೇವರು ಮತ್ತು ಸ್ವರ್ಗಗಳನ್ನು ತೋರಿಸುತ್ತಲೇ ಜನರನ್ನು ವಂಚಿಸುತ್ತ ಬರಲಾಗಿದೆ. ಜನರನ್ನು ಮೌಡ್ಯದ ಕೂಪದಲ್ಲಿ ಕೆಡವಿ ಆರ್ತಿಕವಾಗಿ ಲಾಬಮಾಡಿಕೊಳ್ಳಲಾಗಿದೆ. ಈಗ ಸಂಸ್ಕ್ರುತದ ವ್ಯಾಪ್ತಿಯನ್ನು ಹಿಗ್ಗಿಸುವ ಉದ್ದೇಶದಿಂದ ತಮ್ಮ ಹಳೆಯ ಅಜೆಂಡಾವನ್ನು ಮರುಕಳಿಸಿದೆ. ಮತ್ತೊಮ್ಮೆ ಸ್ವರ್ಗದ ಆಸೆ ತೋರಿಸಿ ಸಂಸ್ಕ್ರುತವನ್ನು ತುರುಕಿ ಕನ್ನಡ ಮತ್ತು ಇತರೆ ಜನಬಾಶೆಗಳ ಬೇರುಗಳನ್ನು ಸಡಿಲಗೊಳಿಸಲಾಗುತ್ತಿದೆ. ಇದಕ್ಕೆ ಹಿಂದಿಯನ್ನು ಊರುಗೋಲಾಗಿ ಬಳಸುವ ಕೆಲಸವನ್ನು ಶತಮಾನದಿಂದಲೂ ಮಾಡಲಾಗುತ್ತಿದೆ. ಕನ್ನಡವನ್ನು ಅದಕ್ಕೆ ಬಳಸಿಕೊಳ್ಳಲಾಗುತ್ತಿದೆ.</p>



<p>ಇಲ್ಲಿ ಒಂದು ಕುತರ್ಕದ ಪ್ರಶ್ನೆ. ಹೀಗೆ ಹೇಳಿಕೆ ನೀಡಿರುವ ಸ್ವಾಮೀಜಿಗಳು ಸ್ವರ್ಗಕ್ಕೆ ಯಾವಾಗ ಹೋಗಿ ಬಂದರು. ಅಲ್ಲಿ ಸಂಸ್ಕೃತ ಬಳಕೆಯಲ್ಲಿರುವುದನ್ನು ಕಂಡು ಕೇಳಿ ಯಾರೊಂದಿಗೆ ಸಂವಾದಿಸಿ ಬಂದರು. ಸ್ವರ್ಗ ಇರುವುದಾದರೂ ಎಲ್ಲಿ? ತಮ್ಮ ವಿಚಾರವನ್ನು ಪ್ರಚಾರ ಮಾಡಲು ಹೋಗಿ ಸಮಾಜದ ಮುಂದೆ ಅಜ್ಞಾನದ ಪ್ರದರ್ಶನ ಮಾಡುತ್ತಿದ್ದೇವೆ ಎಂಬ ಮುಜುಗರವೂ ಇಲ್ಲ.</p>



<p>ನಿಜವೆಂದರೆ, ಸ್ವಾಮೀಜಿಗಳ ಅರಿವಿನ ಸ್ಟಾಂಡರ್ಡ್ ಏನು? ಎಂಬುದನ್ನೂ ಪ್ರೂವ್ ಮಾಡಿಕೊಂಡಿದ್ದಾರೆ. ಅವರ ಇಂತಹ ಅಪ್ರಬುದ್ದ ಹೇಳಿಕೆಗಳನ್ನು ಕೇಳಿ ಅವರ ಬಕ್ತರಿಗೆ ಅಸಹ್ಯ ಹುಟ್ಟದಿರುವುದು ಸೋಜಿಗದ ಸಂಗತಿ. ಅತವಾ ಒಮ್ಮೆ ಬೌದ್ದಿಕ ದಾಸ್ಯಕ್ಕೆ ಬಿದ್ದವರಿಗೆ ಮತ್ತೆಂದೂ ನೈಜ ವಿಚಾರಗಳನ್ನು ಅರಿತುಕೊಳ್ಳುವ ಶಕ್ತಿಯೇ ಮರಳಿ ಬರುವುದಿಲ್ಲವೇ? ಎಂಬ ಪ್ರಶ್ನೆ ಮೂಡುತ್ತದೆ.</p>



<p>ಇದನ್ನು ಕಂಡೇ ವಚನಕಾರ ನಗೆಯ ಮಾರಿತಂದೆ ‘ಸಂಸ್ಕೃತವನ್ನು ಮಾತಿನ ಪಸರ’ ಎಂದಿದ್ದಾನೆ. ಅದು ಜನರನ್ನು ಬೇಟೆಯಾಡುವ ಕಲ್ಲಿಯ ಹಾಗೆ ಎಂದದ್ದು ಸುಮ್ಮನೆ ಅಲ್ಲ. ಅಂದರೆ ಶತಮಾನಗಳಿಂದಲೂ ಸಂಸ್ಕøತದ ದಾಳಿ ನಡೆದಿದೆ. ಅದನ್ನು ಕನ್ನಡಿಗರು ಎದುರಿಸುತ್ತಲೇ ಬಂದಿದ್ದಾರೆ. ಈಗಲೂ ಅದನ್ನು ವೈಚಾರಿಕವಾಗಿ ಎದುರಿಸಲೇಬೇಕಿದೆ. ಬ್ರಾಹ್ಮಣಶಾಹಿ ನಮ್ಮ ಬದುಕಿನ ವಿವಿದ ಮಗ್ಗುಲುಗಳ ಮೇಲೆ ಹೇಗೆ ದಾಳಿ ಮಾಡುತ್ತದೆ ಎಂಬುದಕ್ಕೆ ಇದು ಎತ್ತುಗೆ. ದೇವಾಲಯ, ದೇವರು, ಸ್ವರ್ಗ, ಆಹಾರ, ಭಾಶೆ ಎಲ್ಲವೂ ಅದಕ್ಕೆ ಕಪಟ ನಾಟಕದ ಆಟದ ವಸ್ತುಗಳೇ ಆಗಿರುತ್ತವೆ. ಅಂದರೆ ಪೊಳ್ಳು ಸಂಗತಿಗಳನ್ನೇ ಮುಂದುಮಾಡಿ ಜನರನ್ನು ದಿಕ್ಕುಗೆಡಿಸುವ ಕೆಲಸ ಮಾಡುತ್ತದೆ. ಇಂತಹ ನಕಲಿ ಹೇಳಿಕೆಗಳಿಂದ ಸಂಸ್ಕೃತದ ಚರ್ಚೆಯನ್ನು ಜೀವಂತವಾಗಿಡುತ್ತದೆ. ಸ್ವಾಮೀಜಿಗಳು ಇಂತಹ ಹೇಳಿಕೆ ನೀಡುವ ಕಾಲದಲ್ಲಿಯೇ ಸರ್ಕಾರಗಳು ಸಂಸ್ಕೃತದ ಸಂಗೋಪನೆಗೆ ಕೋಟ್ಯಂತರ ರೂಪಾಯಿ ತೆರಿಗೆ ಹಣ ಖರ್ಚುಮಾಡುತ್ತದೆ. ಇವುಗಳನ್ನು ಜೋಡಿಸಿಕೊಂಡೇ ಅರ್ತಮಾಡಿಕೊಳ್ಳಬೇಕಿದೆ.</p>



<p>ಇಲ್ಲಿ ಗಮನಿಸಬೇಕಾದ ಅತ್ಯಂತ ಮುಖ್ಯಸಂಗತಿಯೆಂದರೆ ಲಜ್ಜೆಯೇ ಇಲ್ಲದೇ ಬಹಿರಂಗವಾಗಿ ಸುಳ್ಳುಗಳನ್ನು ಜನರ ಮನಸ್ಸಿನಲ್ಲಿ ಬಿತ್ತುವುದು. ಇವು ಜನರ ಮನಸ್ಸಿನಲ್ಲಿ ಆಳವಾಗಿ ಬೇರೂತ್ತವೆ ಎಂಬ ನಂಬಿಕೆ ಅವರಿಗಿದೆ. ಇಂತಹ ಹೇಳಿಕೆಗಳಿಂದ ಜನರ ಮಧ್ಯೆ ಅಪಹಾಸ್ಯಕ್ಕೆ ಗುರಿಯಾಗುತ್ತೇವೆ ಎಂಬ ಬಯವಿಲ್ಲ. ಇಂತಹ ಹೇಳಿಕೆಗಳನ್ನು ಪ್ರಾಸಂಗಿಕವಾಗಿ ನೀಡುವುದಿಲ್ಲ. ಬದಲಿಗೆ ಉದ್ದೇಶಪೂರ್ವಕವಾಗಿಯೇ ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಸಂಸ್ಕøತದ ಬೇರುಗಳನ್ನು ಗಟ್ಟಿಗೊಳಿಸಲು ಯತ್ನಿಸಲಾಗುತ್ತದೆ. ಬ್ರಾಹ್ಮಣಶಾಹಿ ಇಂತಹ ಹೇಳಿಕೆಗಳನ್ನು ನೀಡುತ್ತ ನೀಡಿಸುತ್ತಲೇ ಸಂಸ್ಕøತವನ್ನು ಮಾನ್ಯ ಮಾಡುತ್ತಲೇ ಇರುತ್ತದೆ. ಇಂತಹ ಹೇಳಿಕೆಗಳಿಂದ ಪ್ರಭಾವಗೊಳ್ಳುತ್ತಿರುವ ಜನರೂ ನಮ್ಮ ಸಮಾಜದಲ್ಲಿದ್ದಾರೆ</p>



<p>ದುರಂತವೆಂದರೆ ಈ ನಾಡಿನ ಜನರು ಇಂತಹ ಅಜ್ಞಾನದ ವಿರುದ್ಧ ನಿರಂತರ ಸಂಘರ್ಶ ನಡೆಸುತ್ತಲೇ ಇರಬೇಕು. ಯಾಕೆಂದರೆ ಸನಾತನವಾದಿಗಳು ಇಂತಹ ಅಜ್ಞಾನದ ವಿಶಬೀಜಗಳನ್ನು ಬಿತ್ತುವ ಮೂಲಕವೇ ಜನರನ್ನು ಬೌದ್ದಿಕವಾಗಿ ನಿಯಂತ್ರಿಸುತ್ತದೆ. ಇದು ಬ್ರಾಹ್ಮಣ್ಯ ಇರುವವರೆಗೂ ನಡೆದೇ ಇರುತ್ತದೆ. ಹಾಗಾಗಿ ಬ್ರಾಹ್ಮಣ್ಯ ಇರುವವರೆಗೂ ಸಂಘರ್ಶ ನಡೆದೇ ಇರುತ್ತದೆ. ಬ್ರಾಹ್ಮಣಶಾಹಿ ಲೋಕದೃಶ್ಟಿಯನ್ನು ಕೊನೆಗಾಣಿಸದೇ ಇಂತಹ ಅಜ್ಞಾನ, ಅವೈಚಾರಿಕತೆ ಶ್ರೇಶ್ಟತೆಯ ವ್ಯಸನಗಳನ್ನು ಕೊನೆಗಾಣಿಸಲಾಗದು. ಆದ್ದರಿಂದ ಇದನ್ನು ವಿರೋದಿಸುವವರು ವೈಚಾರಿಕವಾಗಿ ಬಲಿಶ್ಟಗೊಳ್ಳುತ್ತ ಬೌದ್ದಿಕವಾಗಿ ಬ್ರಾಹ್ಮಣ್ಯವಾದಿಗಳ ವಿರುದ್ದ ಗುದ್ದಾಟ ಮಾಡಬೇಕಿರುತ್ತದೆ. ಎಲ್ಲಿಯವರೆಗೂ ಹೋರಾಟವಿರುತ್ತದೆಯೋ ಅಲ್ಲಿಯವರೆಗೂ ಅದು ದುರ್ಬಲವಾಗಿರುತ್ತದೆ. ಇಲ್ಲವಾದರೆ ಅದು ಮೇಲೇದ್ದು ಎಲ್ಲವನ್ನು ಆಪೋಶನ ತೆಗೆದುಕೊಳ್ಳುತ್ತದೆ. ಎತ್ತುಗೆಗೆ ವಚನ ಇಲ್ಲವೇ ಶರಣ ಚಳವಳಿಯ ವಾರಸುದಾರರು ವೈಚಾರಿಕವಾಗಿ ಗಟ್ಟಿಯಾಗಿದ್ದ ಕಾಲದಲ್ಲಿ ವಚನಗಳನ್ನು ತಿರುಚುವ ಕೆಲಸಕ್ಕೆ ಕೈಹಾಕಲಿಲ್ಲ. ಈಗ ಬಸವಣ್ಣನ ಅನುಯಾಯಿಗಳು ಮತೀಯವಾದಿಗಳ ಜೊತೆಗೆ ಹೆಜ್ಜೆ ಹಾಕತೊಡಗಿರುವ ಕಾಲದಲ್ಲಿ ವಚನಗಳ ತಿರುಳನ್ನು ತಿರುಚುವ ಅಪವ್ಯಾಖ್ಯಾನಕ್ಕೆ ಗುರಿಪಡಿಸುವ ಕೆಲಸ ಮಾಡಲಾಗುತ್ತಿದೆ.</p>



<p>ಎಲ್ಲೆಲ್ಲಿ ಸಾದ್ಯವೋ ಅಲ್ಲೆಲ್ಲ ಕೈಯಾಡಿಸಿ ಕಬಳಿಸಿಕೊಳ್ಳುವ ಮತ್ತು ಅದನ್ನು ನಾಶಪಡಿಸುವ ಕೆಲಸ ಮಾಡುತ್ತದೆ. ಆದ್ದರಿಂದಲೇ ಲೋಕ ಬದಲಾಗಿ ಎಶ್ಟೆಲ್ಲ ವಿಚಾರಗಳು ಹೊಸತನ ಪಡೆದುಕೊಂಡರೂ ಅಂತಹ ವಿಚಾರಗಳನ್ನು ಸನಾತನವಾದಿಗಳು ತಮ್ಮ ಮನದೊಳಕ್ಕೆ ಬಿಟ್ಟುಕೊಳ್ಳುವುದೇ ಇಲ್ಲ. ಬಾಶೆಯಲ್ಲಿ ದೇವಬಾಶೆ, ಸ್ವರ್ಗದ ಬಾಶೆ, ಶ್ರೇಶ್ಟಬಾಶೆ ಕನಿಶ್ಟ ಬಾಶೆ ಎಂಬುದೆಲ್ಲ ಇಲ್ಲ. ಎಲ್ಲ ಬಾಶೆಗಳೂ ಸಮಾನ. ಎಲ್ಲ ಬಾಶೆಗಳಿಗೂ ಎಲ್ಲ ಶಕ್ತಿಯಿದೆ. ಎಂದು ಸಾಬೀತುಪಡಿಸಿದರೂ ತಮ್ಮ ಅಜ್ಞಾನದ ಗುಡಾಣದೊಳಕ್ಕೆ ಆ ವಿಚಾರಗಳನ್ನು ಬಿಟ್ಟುಕೊಳ್ಳುವುದೇ ಇಲ್ಲ. ಅದೇ ತಮ್ಮ ಗಬ್ಬುನಾರುವ ವಿಚಾರಗಳನ್ನೇ ಪುನಾವರ್ತಿಸುತ್ತಿರುತ್ತದೆ. ಇದನ್ನೇ ಮತೀಯವಾದಿ ಇಲ್ಲವೇ ದಾರ್ಮಿಕ ಮೂಲಬೂತವಾದಿತನ ಎನ್ನುವುದು. ಇದು ಬದಲಾವಣೆಗೆ ಒಪ್ಪುವುದೇ ಇಲ್ಲ. ಬದಲಾದ ಕಾಲಕ್ಕೆ ದರ್ಮವನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನೂ ಮಾಡುವುದಿಲ್ಲ. ಇದನ್ನು ಗಮನಿಸಿದಾಗ ಹೊಸವಿಚಾರಗಳನ್ನು ಅರಿತುಕೊಳ್ಳದಶ್ಟು ದಡ್ಡತನವೇನು ಇರುವುದಿಲ್ಲ. ಬದಲಿಗೆ ಉದ್ದೇಶಪೂರ್ವಕವಾಗಿ ಇಂತಹ ವಿಚಾರಗಳ ಮೂಲಕವೇ ತಮ್ಮ ಯಜಮಾನಿಕೆಯನ್ನು ಅದಿಪತ್ಯವನ್ನು ಶ್ರೇಶ್ಟತೆಯನ್ನು ಉಳಿಸಿಕೊಳ್ಳುವ ದುರುದ್ದೇಶ ಅಡಗಿರುತ್ತದೆ.</p>



<p>ಇಂತಹ ದುರುದ್ದೇಶಗಳ ವಿರುದ್ದ ಹೋರಾಡುವುದರಲ್ಲಿಯೇ ಕನ್ನಡದ ಸೃಜನಶೀಲ ಸಾಮರ್ಥ್ಯ ಅಡಗಿದೆ. ಕನ್ನಡ ನುಡಿಯ ಬವಿಶ್ಯವಿದೆ.</p>



<p>(ಈ ಲೇಖನವನ್ನು ಎಲ್ಲರ ಕನ್ನಡದಲ್ಲಿ ಬರೆಯಲಾಗಿದೆ)</p>



<p><strong>-ರಂಗನಾತ ಕಂಟನಕುಂಟೆ</strong></p>
]]></content:encoded>
					
		
		
			</item>
		<item>
		<title>ರೈಲ್ವೆ ಇಲಾಖೆಯ ಎಲ್ಲ ಪರೀಕ್ಷೆಗಳನ್ನು ಕನ್ನಡದಲ್ಲೂ ನಡೆಸಲು ಎಎಪಿ ಆಗ್ರಹ</title>
		<link>https://peepalmedia.com/aap-demands-to-conduct-all-examinations-of-railway-department-in-kannada-too/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 05 Nov 2022 06:06:53 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[Aam Aadmi Party]]></category>
		<category><![CDATA[bengaluru]]></category>
		<category><![CDATA[examinations]]></category>
		<category><![CDATA[india]]></category>
		<category><![CDATA[Jagadish v. Sadam]]></category>
		<category><![CDATA[kannada]]></category>
		<category><![CDATA[Kannada Language]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[railway department]]></category>
		<guid isPermaLink="false">https://peepalmedia.com/?p=14229</guid>

					<description><![CDATA[ಬೆಂಗಳೂರು: ರೈಲ್ವೆ ಇಲಾಖೆಯ ಉನ್ನತ ದರ್ಜೆಯ ಹುದ್ದೆಗಳಿಗೆ ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿರುವುದಕ್ಕೆ ಆಮ್‌ ಆದ್ಮಿ ಪಾರ್ಟಿ ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡದಲ್ಲಿ ಕೂಡ ಪರೀಕ್ಷೆ ನಡೆಸಬೇಕು ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆಗ್ರಹಿಸಿದರು. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್‌ ವಿ ಸದಂ ಅವರು “ರೈಲ್ವೆ ಇಲಾಖೆಯ ಎಲ್ಲ ಪರೀಕ್ಷೆಗಳನ್ನು ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ನಡೆಸಲಾಗುತ್ತಿತ್ತು. ಕನ್ನಡಿಗರ ನಿರಂತರ ಹೋರಾಟದ ಫಲವಾಗಿ ಸಿ ಹಾಗೂ ಡಿ ದರ್ಜೆ [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು:</strong> ರೈಲ್ವೆ ಇಲಾಖೆಯ ಉನ್ನತ ದರ್ಜೆಯ ಹುದ್ದೆಗಳಿಗೆ ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿರುವುದಕ್ಕೆ ಆಮ್‌ ಆದ್ಮಿ ಪಾರ್ಟಿ ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡದಲ್ಲಿ ಕೂಡ ಪರೀಕ್ಷೆ ನಡೆಸಬೇಕು ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆಗ್ರಹಿಸಿದರು.</p>



<p style="font-size:20px">ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್‌ ವಿ ಸದಂ ಅವರು “ರೈಲ್ವೆ ಇಲಾಖೆಯ ಎಲ್ಲ ಪರೀಕ್ಷೆಗಳನ್ನು ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ನಡೆಸಲಾಗುತ್ತಿತ್ತು. ಕನ್ನಡಿಗರ ನಿರಂತರ ಹೋರಾಟದ ಫಲವಾಗಿ ಸಿ ಹಾಗೂ ಡಿ ದರ್ಜೆ ಹುದ್ದೆಗಳ ಪರೀಕ್ಷೆಗಳನ್ನು ಕನ್ನಡದಲ್ಲೂ ನಡೆಸಲಾಗುತ್ತಿದೆ. ಆದರೆ ಉನ್ನತ ದರ್ಜೆಗಳಾದ ಎ ಹಾಗೂ ಬಿ ದರ್ಜೆಗಳಿಗೆ ಈಗಲೂ ಕನ್ನಡದಲ್ಲಿ ಪರೀಕ್ಷೆಗಳು ನಡೆಯುತ್ತಿಲ್ಲ. ಇದಲ್ಲದೇ, ಸಿ ಹಾಗೂ ಡಿ ದರ್ಜೆಯ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕವಾಗಲೂ ಹಿಂದಿ ಬರಬೇಕೆಂಬ ನಿಯಮ ಮಾಡಲಾಗಿದೆ. ಈ ಮೂಲಕ ಕೇಂದ್ರ ಸರ್ಕಾರವು ಕನ್ನಡಿಗ ಯುವಕರಿಗೆ ಭಾರೀ ಅನ್ಯಾಯ ಮಾಡುತ್ತಿದೆ” ಎಂದು ಹೇಳಿದರು.</p>



<p style="font-size:20px">“ಸಿ ಹಾಗೂ ಡಿ ದರ್ಜೆಯ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸುತ್ತಿದ್ದರೂ, ಪ್ರಶ್ನೆಪತ್ರಿಕೆಯಲ್ಲಿ ಸಾಕಷ್ಟು ದೋಷವಿರುತ್ತದೆ. ಒಲ್ಲದ ಮನಸಿನಲ್ಲಿ ಕಾಟಾಚಾರಕ್ಕೆ ಕನ್ನಡ ಮಾಧ್ಯಮದಲ್ಲಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲಾಗುತ್ತಿದೆ. ಹಿಂದಿಯಲ್ಲಿ ತಯಾರಿಸಿದ ಪ್ರಶ್ನೆಪತ್ರಿಕೆಗಳನ್ನು ಗೂಗಲ್‌ ಟ್ಯಾನ್ಸ್‌ಲೇಟ್‌ ಬಳಸಿ ಕನ್ನಡಕ್ಕೆ ಅನುವಾದ ಮಾಡಲಾಗುತ್ತಿದೆ. ಇದರಿಂದಾಗಿ ಪ್ರಶ್ನೆಗಳು ಸರಿಯಾಗಿ ಅರ್ಥವಾಗದೇ ಕನ್ನಡದ ಯುವಕರು ರೈಲ್ವೆ ಇಲಾಖೆಯ ಹುದ್ದೆಗಳಿಗೆ ನೇಮಕವಾಗುತ್ತಿಲ್ಲ” ಎಂದು ಜಗದೀಶ್‌ ವಿ ಸದಂ ಬೇಸರ ವ್ಯಕ್ತಪಡಿಸಿದರು.</p>



<p style="font-size:20px">“ಕೇವಲ ಹಿಂದಿ ಭಾಷಿಗರಿಗೆ ಮಾತ್ರ ಹೆಚ್ಚಿನ ಉದ್ಯೋಗಗಳು ಸಿಗಬೇಕೆಂಬ ದುರುದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ಹೊಂದಿರುವ ಬಿಜೆಪಿ ಡಬಲ್‌ ಇಂಜಿನ್‌ ಸರ್ಕಾರಕ್ಕೆ ಕರ್ನಾಟಕ ಹಾಗೂ ಕನ್ನಡದ ಬಗ್ಗೆ ಸ್ವಲ್ಪವಾದರೂ ಕಾಳಜಿಯಿದ್ದರೆ, ರೈಲ್ವೆ ಇಲಾಖೆಯ ಎಲ್ಲ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಲಿ. ರಾಜ್ಯದ ಎಲ್ಲ ಬಿಜೆಪಿ ಶಾಸಕರು ಹಾಗೂ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಲಿ. ಕರ್ನಾಟಕದಲ್ಲಿನ ಎಲ್ಲ ರೈಲ್ವೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನಿಗದಿಪಡಿಸಲಿ. ಇಂತಹ ಕೆಲಸಗಳನ್ನು ಮಾಡದೇ ಕೇವಲ ಹಾಡು ಹೇಳಿಸುವ ಕಾರ್ಯಕ್ರಮ ಆಯೋಜಿಸುವುದರಿಂದ ಕನ್ನಡಿಗರಿಗೆ ಯಾವುದೇ ಲಾಭವಾಗದು” ಎಂದು ಜಗದೀಶ್‌ ವಿ ಸದಂ ಹೇಳಿದರು.</p>
]]></content:encoded>
					
		
		
			</item>
		<item>
		<title>ಮುಖ್ಯಮಂತ್ರಿಗಳಿಗೆ ನಿಜವಾಗಿಯೂ ಕನ್ನಡ, ಕರ್ನಾಟಕದ ಮೇಲೆ ಕಾಳಜಿ ಇದೆಯೇ?</title>
		<link>https://peepalmedia.com/does-the-chief-minister-really-care-about-kannada-and-karnataka/</link>
		
		<dc:creator><![CDATA[Nagarjun]]></dc:creator>
		<pubDate>Thu, 03 Nov 2022 09:30:24 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[amith shah]]></category>
		<category><![CDATA[BASAVARAJ BOMMAYI]]></category>
		<category><![CDATA[india]]></category>
		<category><![CDATA[k t rama rao]]></category>
		<category><![CDATA[kannada]]></category>
		<category><![CDATA[Kannada Language]]></category>
		<category><![CDATA[karnataka]]></category>
		<category><![CDATA[karnataka govt]]></category>
		<category><![CDATA[M K STALIN]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[pinarayi vijayan]]></category>
		<guid isPermaLink="false">https://peepalmedia.com/?p=13968</guid>

					<description><![CDATA[ಕನ್ನಡ ರಾಜ್ಯೋತ್ಸವ ಹತ್ತಿರ ಬರುತ್ತಿದ್ದಂತೆ, ಕೋಟಿ ಕಂಠಗಾಯನ ಮತ್ತಿತರ ಕನ್ನಡಪರ ಕಾರ್ಯಕ್ರಮಗಳಿಗೆ ಚಾಲನೆ, ಬೆಂಬಲ, ಪ್ರೊತ್ಸಾಹ ನೀಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕನ್ನಡ ನಾಡು ನುಡಿಗಳ ಕುರಿತು ಎಷ್ಟರ ಮಟ್ಟಿಗೆ ಕಾಳಜಿ ಅಭಿಮಾನ ಹೊಂದಿದ್ದಾರೆ ಎಂಬ ಅನುಮಾನ ಕನ್ನಡಿಗರಲ್ಲಿ ಮೂಡಿದೆ. ಕೇಂದ್ರೀಯ ಶಿಕ್ಷಣ ಸಂಸ್ಥೆಗಳಿಂದ ಹಿಡಿದು ಉನ್ನತ ತಾಂತ್ರಿಕ ಸಂಸ್ಥೆಗಳವರೆಗೂ ಇಂಗ್ಲೀಷ್‌ ಬದಲು ಹಿಂದಿ ಮಾಧ್ಯಮದಲ್ಲಿಯೇ ಪಠ್ಯಬೋಧನೆಯನ್ನು ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಧ್ಯಕ್ಷರಾಗಿರುವ ಸಂಸತ್ತಿನ ಅಧಿಕೃತ ಭಾಷಾ ಸಮಿತಿ ಶಿಫಾರಸು ಮಾಡಿದೆ. [&#8230;]]]></description>
										<content:encoded><![CDATA[
<p style="font-size:20px">ಕನ್ನಡ ರಾಜ್ಯೋತ್ಸವ ಹತ್ತಿರ ಬರುತ್ತಿದ್ದಂತೆ, ಕೋಟಿ ಕಂಠಗಾಯನ ಮತ್ತಿತರ ಕನ್ನಡಪರ ಕಾರ್ಯಕ್ರಮಗಳಿಗೆ ಚಾಲನೆ, ಬೆಂಬಲ, ಪ್ರೊತ್ಸಾಹ ನೀಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕನ್ನಡ ನಾಡು ನುಡಿಗಳ ಕುರಿತು ಎಷ್ಟರ ಮಟ್ಟಿಗೆ ಕಾಳಜಿ ಅಭಿಮಾನ ಹೊಂದಿದ್ದಾರೆ ಎಂಬ ಅನುಮಾನ ಕನ್ನಡಿಗರಲ್ಲಿ ಮೂಡಿದೆ.</p>



<p style="font-size:20px">ಕೇಂದ್ರೀಯ ಶಿಕ್ಷಣ ಸಂಸ್ಥೆಗಳಿಂದ ಹಿಡಿದು ಉನ್ನತ ತಾಂತ್ರಿಕ ಸಂಸ್ಥೆಗಳವರೆಗೂ ಇಂಗ್ಲೀಷ್‌ ಬದಲು ಹಿಂದಿ ಮಾಧ್ಯಮದಲ್ಲಿಯೇ ಪಠ್ಯಬೋಧನೆಯನ್ನು ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಧ್ಯಕ್ಷರಾಗಿರುವ ಸಂಸತ್ತಿನ ಅಧಿಕೃತ ಭಾಷಾ ಸಮಿತಿ ಶಿಫಾರಸು ಮಾಡಿದೆ. ಇಂತಹ ಒಂದು ನಡೆ ದಕ್ಷಿಣ ರಾಜ್ಯಗಳ ದೃಷ್ಟಿಯಿಂದ ಬಹಳ ಅನಾಹುತಕಾರಿಯಾದದ್ದು. ಇದಕ್ಕೆ ನಮ್ಮ ನೆರೆ ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ತೀವ್ರ ಅಸಮಧಾನ ವ್ಯಕ್ತಪಡಿಸಿ, ಕೇಂದ್ರದ ನಡೆಯನ್ನು ವಿರೋಧಿಸಿ ಶಿಫಾರಸ್ಸನ್ನು ಹಿಂಪಡೆಯುವಂತೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ಆದರೆ ನಮ್ಮ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ಬಗ್ಗೆ ತುಟಿಕ್ ಪಿಟಿಕ್‌ ಎನ್ನದೆ ಮೌನವಹಿಸಿದ್ದಾರೆ. ಈ ಹಿಂದಿ ಹೇರಿಕೆಯ ನಡೆಗೆ ಯಾವುದೇ ಪ್ರತಿರೋಧ ಕರ್ನಾಟಕದ ಮುಖ್ಯಮಂತ್ರಿಗಳಿಂದ ವ್ಯಕ್ತವಾಗಿಲ್ಲ. ಹೀಗಾಗಿ ನಿಜವಾಗಿಯೂ ಕನ್ನಡ ನಾಡು, ಕನ್ನಡ ಭಾಷೆಯ ಬಗ್ಗೆ ಇವರಿಗೆ ನಿಜವಾಗಿ ಗೌರವ ಅಭಿಮಾನಗಳು ಇವೆಯೇ ಎಂಬ ಪ್ರಶ್ನೆ ಕಾಡುತ್ತದೆ.</p>



<p style="font-size:20px"><strong>ಕನ್ನಡಿಗರ ಪ್ರಶ್ನೆಗೆ ಕಾರಣವಾಗಿರುವ ಅಮಿತ್‌ ಶಾ ಶಿಫಾರಸ್ಸಿನಲ್ಲಿ ಏನಿದೆ?</strong></p>



<p style="font-size:20px">ಅಮಿತ್‌ ಶಾ ಅವರ ಸಮಿತಿ ಶಿಫಾರಸು ನೀಡುವ ಮುಂಚೆಯೇ, ಅಧಿಕೃತ ಭಾಷಾ ಸಂಸದೀಯ ಸಮಿತಿ 37 ನೇ ಸಭೆಯಲ್ಲಿ, ಶಾ ಅವರು &#8216; ಹಿಂದಿಯನ್ನು ಇಂಗ್ಲಿಷ್‌ಗೆ ಪರ್ಯಾಯ ಭಾಷೆಯಾಗಿ ಬಳಸಬೇಕೆ ಹೊರೆತು ಸ್ಥಳೀಯ ಭಾಷೆಗಳನ್ನಲ್ಲ ಎಂದು ಹೇಳಿದ್ದರು. ಹೀಗಾಗಿ ದೇಶದಲ್ಲೆಡೆ ಸಂಪರ್ಕ ಭಾಷೆಯಾಗಿ, ದೇಶಿಯ ಭಾಷೆ ಹಿಂದಿಯನ್ನು ಬಳಸಬೇಕು ಎಂದು ಸಭೆಯಲ್ಲಿ ಘೋಷಿಸಿದ್ದರು. ಇದಲ್ಲದೆ ಅಮಿತ್ ಶಾ ಅವರ ಅಧಿಕೃತ ಭಾಷಾ ಸಮಿತಿಗೆ ತನ್ನ ವರದಿಗಳನ್ನು ಹಂತ ಹಂತವಾಗಿ ಜಾರಿಗೆ ತರುವ ಹಾಗೆ ಸಮಿತಿಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು.</p>



<p style="font-size:20px">ಈ ಸೂಚನೆ ಮೇರೆಗೆ ಸಮಿತಿ ಸಲ್ಲಿಸಿದ ಶಿಫಾರಸ್ಸಿನಲ್ಲಿ, ಕೇಂದ್ರೀಯ ಶಿಕ್ಷಣ ಸಂಸ್ಥೆಗಳಿಂದ ಹಿಡಿದು ಉನ್ನತ ತಾಂತ್ರಿಕ ಸಂಸ್ಥೆಗಳವರೆಗೂ ಇಂಗ್ಲೀಷ್‌ ಬದಲು ಹಿಂದಿ ಮಾಧ್ಯಮದಲ್ಲಿಯೇ ಪಠ್ಯಬೋಧನೆಯನ್ನು ಮಾಡಬೇಕು ಎಂದು ಒತ್ತಾಯಿಸಲಾಗಿತ್ತು. ಅದಲ್ಲದೇ ಐಐಟಿ, ಐಐಎಂ, ನವೋದಯ ಕೇಂದ್ರೀಯ ವಿವಿ ಇತ್ಯಾದಿಗಳಿಗೆ ಅನ್ವಯವಾಗುವಂತೆ ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಇಂಗ್ಲಿಷ್‌ ಬದಲು ಹಿಂದಿ ಮಾಧ್ಯಮ ಬರಬೇಕು. ಕೇಂದ್ರೀಯ ನೇಮಕಾತಿ ವೇಳೆ ಇಂಗ್ಲೀಷ್‌ ಬದಲು ಹಿಂದಿಯಲ್ಲಿ ಪ್ರಶ್ನೆಪತ್ರಿಕೆ ಇರಬೇಕು. ಕೇಂದ್ರೀಯ ಸರ್ಕಾರಿ ನೌಕರರ ನೇಮಕಾತಿ ವೇಳೆ ಹಿಂದಿ ಬಲ್ಲವರಿಗೆ ಆದ್ಯತೆ ನೀಡಬೇಕು. ಹಾಗೆಯೇ ಹಿಂದಿ ಬಳಸದ ನೌಕರರಿಗೆ ಎಚ್ಚರಿಕೆ ನೀಡಿ, ವಾರ್ಷಿಕ ವರದಿಯಲ್ಲಿ ನಮೂದಿಸಬೇಕು. ಹಿಂದಿ ಭಾಷಿಕ ರಾಜ್ಯಗಳಲ್ಲಿ ಹಿಂದಿಯಲ್ಲೇ ಹೈಕೋರ್ಟ್‌ ಕಲಾಪಗಳನ್ನು ನಡೆಸಬೇಕು. ಕೇಂದ್ರ ಸರ್ಕಾರದ ಎಲ್ಲಾ ಪತ್ರ, ಇ-ಮೇಲ್‌ ವ್ಯವಹಾರ ಹಿಂದಿಯಲ್ಲೇ ನಡೆಯಬೇಕು. ಸರ್ಕಾರದ ಜಾಹೀರಾತಿನ ಹಣದಲ್ಲಿ ಶೇ.50 ರಷ್ಟು ಹಣವನ್ನು ಹಿಂದಿ ಜಾಹೀರಾತಿಗೆ ನೀಡಬೇಕು, ವಿಶ್ವ ಸಂಸ್ಥೆಯಲ್ಲಿ ಭಾರತದ ಅಧಿಕೃತ ಭಾಷೆಯನ್ನು ಹಿಂದಿ ಎಂದು ಪರಿಗಣಿಸಬೇಕು ಎಂದು ತಿಳಿಸಲಾಗಿತ್ತು.</p>



<p style="font-size:20px"><strong>ಹೀಗಾದರೆ ಏನಾಗುತ್ತದೆ?</strong></p>



<p style="font-size:20px">ಶಿಫಾರಸ್ಸಿನಲ್ಲಿ ಇರುವಂತೆ ಆದರೆ ಪ್ರಾದೇಶಿಕ ಭಾಷೆಗಳಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ಉದ್ಯೋಗವಕಾಶಗಳನ್ನು ಕಳೆದುಕೊಳ್ಳುವಂತಾಗುತ್ತದೆ. ಹಿಂದಿ ಭಾಷೆ ಬಾರದ ಜನರು ಎರಡನೆ ದರ್ಜೆಯ ನಾಯಕರಾಗುತ್ತಾರೆ. ಪರ್ಯಾಯ ಭಾಷೆಯಾಗಿ ಹಿಂದಿ ಬಳಸುವುದರಿಂದ, ಪ್ರಾದೇಶಿಕ ಭಾಷೆಗಳಿಗೆ ಹೆಚ್ಚು ಮಾನ್ಯತೆ ಇರುವುದಿಲ್ಲ. ಇದರಿಂದ, ಪ್ರಾದೇಶಿಕ ಭಾಷೆಯನ್ನಾಡುವ ಜನಸಮೂಹಕ್ಕೆ, ಶಿಕ್ಷಣ, ಉದ್ಯೋಗ, ಮತ್ತಿತರ ವಿಷಯಗಳಿಂದ ವಂಚಿತರಾಗಬೇಕಾಗುತ್ತದೆ.</p>



<p style="font-size:20px">ಕೇಂದ್ರೀಯ ವಿಶ್ವವಿದ್ಯಾನಿಲಯಗಳು ಸೇರಿದಂತೆ ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿಯನ್ನು ಬೋಧನಾ ಮಾಧ್ಯಮವನ್ನಾಗಿಸುವ ಕ್ರಮವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಬಲವಾಗಿ ವಿರೋಧಿಸಿದ್ದು ಅಲ್ಲದೇ, ಕೇಂದ್ರದ ಶಿಫಾರಸ್ಸನ್ನು ಹಿಂಪಡೆಯುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.</p>



<p style="font-size:20px">ಅ.10ರಂದು ಸ್ಟಾಲಿನ್‌ ತಾವು ಮಾಡಿದ್ದ ಸರಣಿ ಟ್ವೀಟ್‌ ನಲ್ಲಿ ಹಿಂದಿ ಹೇರಿಕೆ ಪ್ರಯತ್ನದ ವಿರುದ್ಧ ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದರು. ಅವರು ತಮ್ಮ ಟ್ವೀಟ್‌ ನಲ್ಲಿ ʼಭಾರತದ ಭಾಷಾ ವೈವಿದ್ಯತೆಯನ್ನು ಕಡೆಗಣಿಸಿ ಹಿಂದಿ ಹೇರಿಕೆ ಮಾಡಲು ಕೇಂದ್ರದ ಬಿಜೆಪಿ ಸರ್ಕಾರ ತೀವ್ರ ರೀತಿಯಲ್ಲಿ ನಡೆಸುತ್ತಿರುವ ಪ್ರಯತ್ನ ಆತಂಕದ ಮಟ್ಟ ತಲುಪಿದೆ. ಅಧಿಕೃತ ಭಾಷೆ ಕುರಿತ ಸಂಸದೀಯ ಸಮಿತಿಯ ವರದಿಯ 11ನೆಯ ಸಂಪುಟದ ಪ್ರಸ್ತಾವಗಳು ಭಾರತದ ಆತ್ಮದ ಮೇಲೆ ನಡೆಸಿರುವ ನೇರವಾದ ಪ್ರಹಾರವಾಗಿʼ ಎಂದು ಬರೆದಿದ್ದರು. ಮುಂದುವರೆದು, ʼಹಿಂದಿ ಹೇರಿಕೆ ಮಾಡಿದ್ದೇ ಆದಲ್ಲಿ ಹಿಂದಿ ಮಾತನಾಡದ ವಿಶಾಲ ಜನಮೂಹವು ಎರಡನೆಯ ದರ್ಜೆಯ ನಾಗರಿಕರಾಗುತ್ತಾರೆ. ಹಿಂದಿ ಹೇರಿಕೆ ನಡೆಸುವುದು ಭಾರತದ ಸಮಗ್ರತೆಗೆ ವಿರುದ್ಧವಾದ ನಡೆ. ಆಳುವ ಬಿಜೆಪಿ ಸರ್ಕಾರವು ಹಿಂದೆ ನಡೆದ ಹಿಂದಿ ವಿರೋಧಿ ಚಳವಳಿಗಳಿಂದ ಪಾಠ ಕಲಿಯುವುದು ಒಳ್ಳೆಯದುʼ ಎಂದು ಸಹ ಬಿಜೆಪಿ ಸರ್ಕಾರವನ್ನು ಎಚ್ಚರಿಸಿದ್ದರು.</p>



<p style="font-size:20px">ಅದೇ ರೀತಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಹ ಅ.12ರಂದು ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಹಿಂದಿಯನ್ನು ಹೇರಲು ನಡೆಸುತ್ತಿರುವ ಪ್ರಯತ್ನಗಳನ್ನು ʼಒಪ್ಪಲಸಾಧ್ಯʼ ಎಂದಿದ್ದರು. ಕೇಂದ್ರ ಸರ್ಕಾರದ ಸೇವೆಗಳ ಪರೀಕ್ಷೆಗಳ ಮಾಧ್ಯಮವನ್ನು ಹಿಂದಿಯನ್ನಾಗಿಸುವ ಮತ್ತು ಐಐಟಿ, ಐಐಎಂಗಳಲ್ಲಿ ಅಧ್ಯಯನ ಭಾಷೆಯನ್ನು ಹಿಂದಿಯನ್ನಾಗಿಸುವ ಅಧಿಕೃತ ಭಾಷಾ ಸಂಸದೀಯ ಸಮಿತಿಯ ಪ್ರಸ್ತಾಪಗಳನ್ನು ಕೇರಳ ಸರ್ಕಾರ ಒಪ್ಪಲು ಸಾದ್ಯವೇ ಇಲ್ಲ ಎಂದು ತಿಳಿಸಿದ್ದರು.</p>



<p style="font-size:20px">ಇನ್ನೂ ತೆಲಂಗಾಣ ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಕೆ.ಟಿ.ರಾಮರಾವ್ ಅವರು ಕೂಡ ಹಿಂದಿ ಹೇರಿಕೆ ವಿರೋಧಿಸಿ ನರೇಂದ್ರ ಮೋದಿಯವರಿಗೆ ಪತ್ರ ಬೆರಿದಿದ್ದು, ಶಿಫಾರಸು ಸಂವಿಧಾನ ಬಾಹಿರವಾಗಿದ್ದು, ಕೂಡಲೇ ಹಿಂಪಡೆಯಬೇಕು ಎಂದು ರಾಮರಾವ್ ಒತ್ತಾಯಿಸಿದ್ದರು. ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ, ಪ್ರಸ್ತುತವಾಗಿ ಪರೋಕ್ಷವಾಗಿ ಹಿಂದಿ ಹೇರಿಕೆಯು ಕೋಟ್ಯಂತರ ಯುವಕರ ಜೀವನವನ್ನು ಹೇಗೆ ಹಾಳುಮಾಡುತ್ತಿದೆ ಎಂಬುದರ ಕುರಿತು ವಿವರಿಸಲಾಗಿದ್ದು, ಕೇಂದ್ರೀಯ ಉದ್ಯೋಗಗಳಿಗೆ ನೀಡುವ ಅರ್ಹತಾ ಪರೀಕ್ಷೆಗಳಲ್ಲಿ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಪ್ರಶ್ನೆಗಳು ಇರುವುದರಿಂದ ಪ್ರಾದೇಶಿಕ ಭಾಷೆಗಳಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ಉದ್ಯೋಗಾವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅಮಿತ್‌ ಶಾ ಸಮಿತಿ ನೀಡಿರುವ ಶಿಪಾರಸು ʼಪ್ರಸ್ತುತ ಮತ್ತು ಭವಿಷ್ಯದʼ ಪೀಳಿಗೆಯ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದರು.</p>



<p style="font-size:20px">ಕರ್ನಾಟಕಲ್ಲಿ ಇರುವ ಬಸವರಾಜ ಬೊಮ್ಮಾಯಿ ಸರ್ಕಾರ ಒಂದು ಜವಾಬ್ದಾರಿ ಸರ್ಕಾರವೇ ಆಗಿದ್ದಿದ್ದರೆ ಈ ವಿಷಯಗಳ ಕುರಿತು ತುಟಿ ಬಿಚ್ಚದೇ ಕುಳಿತುಕೊಳ್ಳಲು ಸಾಧ್ಯವಿತ್ತೆ? ಅಮಿತ್‌ಷಾ ನೀತಿ ಕನ್ನಡಿಗರಿಗೆ ಎಂತಹ ಮಾರಕ ನೀತಿ ಎಂಬುದು ತಿಳಿಯಲಾರದ ದಡ್ಡರೇ ನಮ್ಮ ಮುಖ್ಯಮಂತ್ರಿ?</p>



<p style="font-size:20px">ಹಿಂದಿಯ ಗುಲಾಮಗಿರಿಗೆ ತಳ್ಳುವ ಕೇಂದ್ರದ ಈ ನಡೆ ಕನ್ನಡಿಗರಿಗೆ ದೊಡ್ಡ ಅನ್ಯಾಯವಲ್ಲವೇ? ಲಕ್ಷಾಂತರ ಉದ್ಯೋಗಗಳಿಂದ ಕನ್ನಡಿಗರನ್ನು ಕೇವಲ ಭಾಷೆಯ ಕಾರಣಕ್ಕಾಗಿ ವಂಚಿಸುತ್ತಿರುವ ಇಂತಹ ಹುನ್ನಾರಗಳ ಬಗ್ಗೆ ಒಂದು ಸರ್ಕಾರವಾಗಿ ಯಾವುದೇ ನಿಲುವು ತಳೆಯದಿದ್ದರೆ ಅದಕ್ಕಿಂತ ಜನದ್ರೋಹ ಯಾವುದಿದೆ?</p>
]]></content:encoded>
					
		
		
			</item>
		<item>
		<title>ರಾಜ್ಯಗಳಿಂದಲೇ ದೇಶ</title>
		<link>https://peepalmedia.com/states-are-united-in-india-shrinivasa-karkala-artical/</link>
		
		<dc:creator><![CDATA[Shrinivas Karkala]]></dc:creator>
		<pubDate>Mon, 31 Oct 2022 11:49:34 +0000</pubDate>
				<category><![CDATA[ಅಂಕಣ]]></category>
		<category><![CDATA[ನಾಡು-ನುಡಿ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[Kannada Language]]></category>
		<category><![CDATA[Kannada Rajyotsava]]></category>
		<category><![CDATA[karnataka]]></category>
		<category><![CDATA[language]]></category>
		<category><![CDATA[news]]></category>
		<category><![CDATA[November]]></category>
		<category><![CDATA[november 1st]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[shrinivas-karkala]]></category>
		<category><![CDATA[state]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=13470</guid>

					<description><![CDATA[ಭಾಷೆ ಎನ್ನುವುದು ಭಾವನಾತ್ಮಕವಾಗಿ ತುಂಬಾ ಸಂವೇದನಾಶೀಲ ಸಂಗತಿ. ಭಾಷಾ ಅಸ್ಮಿತೆಗಳ ಮೇಲಿನ ದಾಳಿಯು ಸಮುದಾಯಗಳ ಅಸ್ಮಿತೆಯ ಮೇಲಿನ ದಾಳಿಯಾಗಿ, ಅಂತಿಮವಾಗಿ ಪ್ರತ್ಯೇಕತೆಯ ಭಾವನೆಗೆ ಇಂಬು ಕೊಡುತ್ತದೆ. ಇದಾಗ ಬಾರದು ಎನ್ನುವ ಶ್ರೀನಿವಾಸ ಕಾರ್ಕಳ ಅವರ ಕನ್ನಡ ರಾಜ್ಯೋತ್ಸವ ವಿಶೇಷ ಲೇಖನ ಶ್ರೀನಿ ಕಾಲಂ ನಲ್ಲಿ. ಇಂದಿಗೆ ಸುಮಾರು ನೂರ ಎಂಟು ವರ್ಷಗಳ ಹಿಂದೆ, ಅಂದರೆ ಆಗಸ್ಟ್ 3, 1914 ರಂದು, ಪುಣೆಯ ಡೆಕ್ಕನ್ ಕಾಲೇಜಿನ ಕನ್ನಡ ವಿದ್ಯಾರ್ಥಿಗಳ ಸಮ್ಮುಖದಲ್ಲಿ, ಧಾರವಾಡದಿಂದ ಬಂದ ಕನ್ನಡಿಗ ಆಲೂರು ಕೃಷ್ಣರಾಯರು ‘ಪಾಸ್ಟ್ [&#8230;]]]></description>
										<content:encoded><![CDATA[
<p></p>



<p><strong>ಭಾಷೆ ಎನ್ನುವುದು ಭಾವನಾತ್ಮಕವಾಗಿ ತುಂಬಾ ಸಂವೇದನಾಶೀಲ ಸಂಗತಿ. ಭಾಷಾ ಅಸ್ಮಿತೆಗಳ ಮೇಲಿನ ದಾಳಿಯು ಸಮುದಾಯಗಳ ಅಸ್ಮಿತೆಯ ಮೇಲಿನ ದಾಳಿಯಾಗಿ, ಅಂತಿಮವಾಗಿ ಪ್ರತ್ಯೇಕತೆಯ ಭಾವನೆಗೆ ಇಂಬು ಕೊಡುತ್ತದೆ. ಇದಾಗ ಬಾರದು ಎನ್ನುವ ಶ್ರೀನಿವಾಸ ಕಾರ್ಕಳ ಅವರ ಕನ್ನಡ ರಾಜ್ಯೋತ್ಸವ ವಿಶೇಷ ಲೇಖನ ಶ್ರೀನಿ ಕಾಲಂ ನಲ್ಲಿ.</strong></p>



<p>ಇಂದಿಗೆ ಸುಮಾರು ನೂರ ಎಂಟು ವರ್ಷಗಳ ಹಿಂದೆ, ಅಂದರೆ ಆಗಸ್ಟ್ 3, 1914 ರಂದು, ಪುಣೆಯ ಡೆಕ್ಕನ್ ಕಾಲೇಜಿನ ಕನ್ನಡ ವಿದ್ಯಾರ್ಥಿಗಳ ಸಮ್ಮುಖದಲ್ಲಿ, ಧಾರವಾಡದಿಂದ ಬಂದ ಕನ್ನಡಿಗ ಆಲೂರು ಕೃಷ್ಣರಾಯರು ‘ಪಾಸ್ಟ್ ಗ್ಲೋರಿ ಆಫ್ ಕರ್ನಾಟಕ’ (ಗತಕಾಲದ ಕರ್ನಾಟಕದ ವೈಭವ) ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದ್ದರು. ಈ ಭಾಷಣ ಇಂಗ್ಲಿಷ್ ನಲ್ಲಿದ್ದುದರಿಂದ ಕೆಲ ಮಹಾರಾಷ್ಟ್ರೀಯರೂ ಉಪನ್ಯಾಸ ಆಲಿಸಲು ಅಲ್ಲಿ ಸೇರಿದ್ದರು.</p>



<p>ಚಾರಿತ್ರಿಕ ಸಂಗತಿಗಳನ್ನು ಪ್ರತ್ಯಕ್ಷ ಕಂಡವರಂತೆ, ಹೃದಯಸ್ಪರ್ಶಿಯಾಗಿ ಆಡಿದ ಆಲೂರರ ಮಾತುಗಳನ್ನು ಅಲ್ಲಿನ ಮರಾಠೀ ಪ್ರಾಧ್ಯಾಪಕರು ಮೆಚ್ಚಿ, ‘ಕರ್ನಾಟಕದ ಗತಕಾಲದ ವೈಭವ ರೋಮಾಂಚಕಾರಿಯಾಗಿದೆ. ಅದು ಭಾರತದ ಚರಿತ್ರಸಾಗರದ ಒಂದು ಮುಖ್ಯ ಅಂಗ, ಅದು ಮಹಾರಾಷ್ಟ್ರದ ಇತಿಹಾಸ ಕೂಡ ಆಗಿದೆ, ಆಲೂರ ಅವರ ಇಂದಿನ ವ್ಯಾಖ್ಯಾನ ನಮ್ಮಲ್ಲಿ ನವಸ್ಫೂರ್ತಿಯನ್ನು ಉಂಟು ಮಾಡಿದೆ’ ಎಂದು ಹೇಳಿದರು.</p>



<p><strong>‘ಕರ್ನಾಟಕವು ನಮ್ಮ ಹೃದಯದಲ್ಲಿ ಇದೆ’</strong></p>



<p>ಸಭೆ ಮುಗಿಯಿತು. ವೆಂಕಟರಾಯರು ಕನ್ನಡದಲ್ಲಿ ಕೆಲವು ಮಾತು ಆಡಬೇಕೆಂಬುದು ವಿದ್ಯಾರ್ಥಿಗಳ ಆಶಯವಾಗಿತ್ತು. ವೆಂಕಟರಾಯರು ಸಮ್ಮತಿಸಿ, ಹೀಗೆ ಮಾತನಾಡಿದರು- “ಕರ್ನಾಟಕವು ಎಲ್ಲಿದೆ, ಎಂದು ಕೇಳುವ ಜನ ನಮ್ಮಲ್ಲಿ ಸಾಕಷ್ಟಿದ್ದಾರೆ. ಇದಕ್ಕೆ ನನ್ನ ಉತ್ತರ: ನಿಮ್ಮ ಹೃದಯದಲ್ಲಿ. ಇಂದಿನ ಕರ್ನಾಟಕ ಭೌಗೋಲಿಕವಾಗಿ ಮುಂಬಯಿ ಪ್ರಾಂತದ ನಾಲ್ಕು ಜಿಲ್ಲೆಗಳಲ್ಲಿ ಮತ್ತು ಬೇರೆ ಬೇರೆ ಸಂಸ್ಥಾನಗಳಲ್ಲಿ ಹರಿದು ಹಂಚಿಹೋಗಿರಬಹುದು. ಆದರೆ ಕೇವಲ ಭೂಪ್ರದೇಶ ಅಥವಾ ಜನಸಂಖ್ಯೆಯ ಮೊತ್ತದಿಂದ ಮಾತ್ರ ಕರ್ನಾಟಕವನ್ನು ನಾವು ಅರಿಯಲಾರೆವು. ಜನತೆಯ ಶಕ್ತಿ-ಸಾಹಸ, ಸಾಧನೆ-ಸಿದ್ಧಿಗಳಲ್ಲಿ ಒಂದು ದೇಶದ ಘನತೆ ಇದೆ, ಬೆಲೆ ಇದೆ. ಈ ದೃಷ್ಟಿಯಿಂದಲೇ ನಾನು ಹೇಳುವುದು ‘ಕರ್ನಾಟಕವು ನಮ್ಮ ಹೃದಯದಲ್ಲಿ ಇದೆ’ ಎಂದು; ನಾವು ಬೆಳೆದರೆ ಕರ್ನಾಟಕವು ಬೆಳೆಯುತ್ತದೆ ಎಂದು ಅರ್ಥ. ಇಂದು ಒಂದು ಘಟಕವಾಗಿ ನಮ್ಮ ಕಣ್ಣಿಗೆ ಕಾಣದಿದ್ದರೂ, ಕರ್ನಾಟಕವೂ ಒಂದು ಜೀವಂತ ರಾಷ್ಟ್ರ ಎಂಬ ನನ್ನ ಮಾತಿನಲ್ಲಿ ನೀವು ವಿಶ್ವಾಸವಿಡಿ.</p>



<p><strong>ಕರ್ನಾಟಕವೇ ಒಂದು ರಾಷ್ಟ್ರ..</strong></p>



<p>ಹೌದು- ಇದು ನನ್ನ ಉತ್ತರ. ರಾಷ್ಟ್ರೀಯತ್ವವು ಒಂದು ಕಲ್ಪನೆ. ಯಾವ ಕಲ್ಪನೆಯು ನಮ್ಮನ್ನು ಸಂಪೂರ್ಣವಾಗಿ ಆಕರ್ಷಿಸಿ, ದೇಶಸೇವೆಗೆ ಪ್ರೇರಕ ಶಕ್ತಿಯಾಗುತ್ತದೆಯೋ ಅದು ರಾಷ್ಟ್ರೀಯತ್ವ. ಈ ಕಲ್ಪನೆಯು ಇಂದು ಬಂಗಾಲ ಮತ್ತು ಮಹಾರಾಷ್ಟ್ರದಲ್ಲಿ ತೀವ್ರ ಸ್ವರೂಪದಲ್ಲಿದೆ. ಆ ಪ್ರಾಂತಗಳು ಎಚ್ಚೆತ್ತು ತಮ್ಮ ರಾಷ್ಟ್ರೀಯತೆಯ ಬಲವನ್ನು ಪ್ರಸ್ತಾಪಿಸಿವೆ. ಸ್ವಾತಂತ್ರ್ಯ ಸಮರದಲ್ಲಿ ಧೈರ್ಯದಿಂದ ಮುನ್ನಡಿ ಇಡುತ್ತಿವೆ. ಅದೇ ರೀತಿಯಲ್ಲಿ ಕರ್ನಾಟಕವು ಎಚ್ಚರಾಗಬೇಕು. ತಾನು ಶಕ್ತಿವಂತವಾಗಿ ಬೆಳೆದು, ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತನ್ನ ಕಾಣಿಕೆಯನ್ನು ಸಲ್ಲಿಸುವಂತಾದಾಗ ಮಾತ್ರ ಕರ್ನಾಟಕದ ರಾಷ್ಟ್ರೀಯತ್ವ ಆವಾಹನವಾಗುತ್ತದೆ.</p>



<p>ಚರಿತ್ರೆಯ ಅಭ್ಯಾಸ ನಮ್ಮಲ್ಲಿ ಅಭಿಮಾನ ಹುಟ್ಟಿಸುತ್ತದೆ. ಅಭಿಮಾನವೆಂದರೆ ಸಾತ್ವಿಕ ಅಹಂಕಾರ. ‘ನಾನು ನನ್ನದು’ ಎಂಬ ಭಾವ ಇಲ್ಲದ ಬದುಕು ಬದುಕಲ್ಲ. ವ್ಯಕ್ತಿ, ಸಂಸಾರ, ಸಮಾಜ – ಇವುಗಳ ಬಗ್ಗೆ ಈ ಭಾವನೆ ಬೆಳೆದು ವಿಶಾಲವಾಗುತ್ತ ಹೋಗುತ್ತದೆ. ಈ ವಿಕಾಸವು ವ್ಯಕ್ತಿಯ ಸಂಸ್ಕಾರವನ್ನವಲಂಬಿಸಿರುತ್ತದೆ. ‘ನಮ್ಮದೀ ನಮ್ಮದೀ ಕನ್ನಡನಾಡು’ ಎಂಬ ಭಾವ ಕರ್ನಾಟಕತ್ವವನ್ನು ಸೂಚಿಸಿದರೆ, ‘ನಮ್ಮದೀ ನಮ್ಮದೀ ಭರತ ಭೂಮಿ’ ಎಂಬ ಭಾವ ರಾಷ್ಟ್ರೀಯತ್ವವನ್ನು ವ್ಯಕ್ತಪಡಿಸುತ್ತದೆ. ಅವೆರಡರಲ್ಲಿ, ನನ್ನ ದೃಷ್ಟಿಯಲ್ಲಿ ಯಾವ ಅಂತರವೂ ಇಲ್ಲ.</p>



<p>ಕರ್ನಾಟಕತ್ವವನ್ನು ಪ್ರಾದೇಶಿಕ ರಾಷ್ಟ್ರೀಯತೆಯೆಂದು ಕರೆಯಬಹುದು. ಅದು ರಾಜಕೀಯವೂ ಅಲ್ಲ, ಶುದ್ಧ ಧಾರ್ಮಿಕವೂ ಅಲ್ಲ. ಅದು ಸಂಸ್ಕೃತಿ ನಿಷ್ಠವಾದುದು. ಭಾಷೆ ಅದರ ಆಧಾರ. ಭಾರತದ ಸಮಸ್ತ ಪ್ರಾದೇಶಿಕ ಸಂಸ್ಕೃತಿಗಳ ಒಟ್ಟಂದವೇ ಭಾರತದ ರಾಷ್ಟ್ರೀಯತೆ ಇದನ್ನು ಗ್ರಹಿಸಲು ನಮಗೆ ವಿಶೇಷ ಸಾಧನೆ ಬೇಕು.</p>



<p>ಕರ್ನಾಟಕತ್ವದ ಅಭಿಮಾನವಿಲ್ಲದೆ ನಾವು ರಾಷ್ಟ್ರಕಾರ್ಯ ಮಾಡಲಾರೆವೆ? – ಇನ್ನೊಂದು ಪ್ರಶ್ನೆ. ನನ್ನ ದೃಷ್ಟಿಯಲ್ಲಿ, ಅದು ಸಾಧ್ಯವಿಲ್ಲ. ಮಾತ್ರವಲ್ಲ, ಕರ್ನಾಟಕವನ್ನು ಅಲಕ್ಷಿಸುವವರು ಭಾರತದ ರಾಷ್ಟ್ರೀಯತೆಯನ್ನು ಅರ್ಥ ಮಾಡಿಕೊಳ್ಳಲಾರರು ಎಂಬುದು ನನ್ನ ಅಭಿಪ್ರಾಯ. ಅಭಿಮಾನದಿಂದ ಕಾರ್ಯಪ್ರೇರಣೆ. ಕರ್ನಾಟಕತ್ವದ ಅಭಿಮಾನ ಎಂದರೆ ಕರ್ನಾಟಕದ ಉನ್ನತಿಗಾಗಿ ಶ್ರಮಿಸುವ ಹಂಬಲ. ದೇಶಕಾರ್ಯವು ಸುತ್ತಲಿನ ಜನತೆಯೊಂದಿಗೆ ಹೆಣೆದುಕೊಂಡಿರುತ್ತದೆ &#8211; ಇವು ಆಲೂರು ಅವರ ಮಾತುಗಳು.</p>



<p></p>



<p></p>



<figure class="wp-block-image size-full"><img fetchpriority="high" decoding="async" width="705" height="628" src="https://peepalmedia.com/wp-content/uploads/2022/10/IMG-20221031-WA0015.jpg" alt="" class="wp-image-13471" srcset="https://peepalmedia.com/wp-content/uploads/2022/10/IMG-20221031-WA0015.jpg 705w, https://peepalmedia.com/wp-content/uploads/2022/10/IMG-20221031-WA0015-300x267.jpg 300w, https://peepalmedia.com/wp-content/uploads/2022/10/IMG-20221031-WA0015-150x134.jpg 150w, https://peepalmedia.com/wp-content/uploads/2022/10/IMG-20221031-WA0015-696x620.jpg 696w" sizes="(max-width: 705px) 100vw, 705px" /></figure>



<p></p>



<p>ಕನ್ನಡ ಪ್ರದೇಶಗಳ ಏಕೀಕರಣಕ್ಕೆ ದುಡಿದ ಬಹಳ ಮುಖ್ಯ ವ್ಯಕ್ತಿಗಳಲ್ಲಿ ಒಬ್ಬರಾದ ಮತ್ತು ಕನ್ನಡದ ಮೇಲಿನ ಪ್ರೀತಿ, ಬದ್ಧತೆ ಹಾಗೂ ಕನ್ನಡಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಕಾರಣಕ್ಕೆ ‘ಕನ್ನಡ ಕುಲ ಪುರೋಹಿತ’ ಎಂಬ ಹೆಸರು ಗಳಿಸಿದ ಆಲೂರು ವೆಂಕಟರಾಯರು ‘ಕರ್ನಾಟಕವೇ ಒಂದು ರಾಷ್ಟ್ರ, ಕರ್ನಾಟಕವೇ ಒಂದು ಪ್ರಾದೇಶಿಕ ರಾಷ್ಟ್ರೀಯತೆ, ಭಾರತದ ಸಮಸ್ತ ಪ್ರಾದೇಶಿಕ ಸಂಸ್ಕೃತಿಗಳ ಒಟ್ಟಂದವೇ ಭಾರತದ ರಾಷ್ಟ್ರೀಯತೆ’ ಎಂದು ಆಡಿದ ಮಾತುಗಳನ್ನು ಗಮನಿಸಿ. ಆಲೂರರು ನೂರ ಎಂಟು ವರ್ಷಗಳ ಹಿಂದೆ ಆಡಿದ ಮಾತುಗಳನ್ನು ಈಗ ನಾವು ಮತ್ತೆ ನೆನಪಿಸಿಕೊಳ್ಳುವಂತಹ ಮತ್ತು ನಮ್ಮನ್ನು ಆಳುವವರಿಗೆ ನೆನಪಿಸಿಕೊಡುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ದೌರ್ಭಾಗ್ಯವೇ ಸರಿ.</p>



<p><strong>ಚೆಲುವ ಕನ್ನಡ ನಾಡು ಉದಯವಾಗಿದೆಯೇ?</strong></p>



<p>ಕನ್ನಡದ ಅನೇಕ ಕಟ್ಟಾಳುಗಳ ತ್ಯಾಗ ಬಲಿದಾನ, ಅವಿರತ ಹೋರಾಟದಿಂದ ಬೇರೆ ಬೇರೆ ಪ್ರದೇಶಗಳಲ್ಲಿ ಹರಿದು ಹಂಚಾಗಿದ್ದ ಹೆಚ್ಚಿನ ಕನ್ನಡ ಪ್ರದೇಶಗಳು ಒಂದಾಗಿವೆ ನಿಜ. ಮಾತ್ರವಲ್ಲ, ಮೈಸೂರು ರಾಜ್ಯ ಎಂಬ ಹೆಸರು ಹೋಗಿ ಕರ್ನಾಟಕ ರಾಜ್ಯವಾಗಿದೆ, ಹುಯಿಲಗೋಳರ ‘ಉದಯವಾಗಲಿ ಚೆಲುವ ಕನ್ನಡ ನಾಡು’ ಎಂಬ ಹಾಡನ್ನು ‘ಉದಯವಾಯಿತು ಚೆಲುವ ನಾಡು’ ಎಂದು ಹಾಡಿದ್ದೂ ಇದೆ. ಆದರೆ ನಿಜವಾಗಿಯೂ ಚೆಲುವ ಕನ್ನಡ ನಾಡು ಉದಯವಾಗಿದೆಯೇ? ಕನ್ನಡ ನಾಡಿನ ಆತ್ಮ ಮತ್ತು ಅಸ್ಮಿತೆಯಾದ ಕನ್ನಡ ಸುರಕ್ಷಿತವಾಗಿದೆಯೇ?</p>



<p>ಒಂದು ಉಪಖಂಡದಂತಹ ದೇಶವಾದ ಭಾರತದ ಬುನಾದಿಯೇ ಬಹುತ್ವ. ವೈವಿಧ್ಯವೇ ಭಾರತದ ವೈಶಿಷ್ಟ್ಯ. ಇಲ್ಲಿರುವುದು ಅನೇಕತೆಯಲ್ಲಿ ಏಕತೆಯಲ್ಲ; ಅನೇಕತೆಯ ಮೂಲಕ ಏಕತೆ. ಇಲ್ಲಿ ಅನೇಕ ಮತಧರ್ಮ, ಸಂಸ್ಕೃತಿಗಳಿವೆ. ಇಲ್ಲಿರುವಷ್ಟು ಭಾಷೆಯಾದರೋ ಜಗತ್ತಿನ ಎಲ್ಲಿಯೂ ಕಾಣಸಿಗದು. ಭಾರತದಲ್ಲಿ 19,569 ಭಾಷೆಗಳಿವೆ. ಇದರಲ್ಲಿ 10 ಲಕ್ಷಕ್ಕಿಂತ ಹೆಚ್ಚು ಜನರು ಮಾತನಾಡುವ ಭಾಷೆಗಳ ಸಂಖ್ಯೆಯೇ 40. ಕರ್ನಾಟಕ ರಾಜ್ಯವೊಂದರಲ್ಲಿಯೇ 62 ಭಾಷೆಗಳಿವೆ!<br></p>



<figure class="wp-block-image size-full"><img decoding="async" width="900" height="673" src="https://peepalmedia.com/wp-content/uploads/2022/10/happy-kannada-rajyotsava-day-2017-best-quotes-sms-whatsapp-messages-status-greetings-images.jpg" alt="" class="wp-image-13478" srcset="https://peepalmedia.com/wp-content/uploads/2022/10/happy-kannada-rajyotsava-day-2017-best-quotes-sms-whatsapp-messages-status-greetings-images.jpg 900w, https://peepalmedia.com/wp-content/uploads/2022/10/happy-kannada-rajyotsava-day-2017-best-quotes-sms-whatsapp-messages-status-greetings-images-300x224.jpg 300w, https://peepalmedia.com/wp-content/uploads/2022/10/happy-kannada-rajyotsava-day-2017-best-quotes-sms-whatsapp-messages-status-greetings-images-768x574.jpg 768w, https://peepalmedia.com/wp-content/uploads/2022/10/happy-kannada-rajyotsava-day-2017-best-quotes-sms-whatsapp-messages-status-greetings-images-150x112.jpg 150w, https://peepalmedia.com/wp-content/uploads/2022/10/happy-kannada-rajyotsava-day-2017-best-quotes-sms-whatsapp-messages-status-greetings-images-696x520.jpg 696w" sizes="(max-width: 900px) 100vw, 900px" /></figure>



<p>ಒಂದು ರಾಷ್ಟ್ರವಾಗಿ ಭಾರತ ಹೇಗಿರಬೇಕು, ಅದರ ಸಂವಿಧಾನ ಹೇಗಿರಬೇಕು ಎಂಬುದನ್ನು ಪರಿಕಲ್ಪಿಸಿದ ನಮ್ಮ ಹಿರಿಯರಿಗೆ ಭಾರತದ ಬಹುತ್ವ ಸ್ವರೂಪ ಮತ್ತು ಅದರ ಧರ್ಮನಿರಪೇಕ್ಷತೆಯ ಅನಿವಾರ್ಯತೆಯ ಬಗ್ಗೆ ಸ್ಪಷ್ಟತೆ ಇತ್ತು. ಇದು ಎಲ್ಲರ ಭಾರತ ಎಂಬ ಅರಿವಿತ್ತು. ಹಾಗಾಗಿಯೇ ಭಾರತ ಸಂವಿಧಾನ ಗ್ರಂಥದಲ್ಲಿ ಅವರು ‘ವಿ ದ ಪೀಪಲ್ ಆಫ್ ಹಿಂದೂಸ್ ಅಥವಾ ಮುಸ್ಲಿಂಸ್’ ಎಂದೆಲ್ಲ ಹೇಳದೆ, ‘ವಿ ದ ಪೀಪಲ್ ಆಫ್ ಇಂಡಿಯಾ’ ಎಂದರು. ಭಾರತವನ್ನು ರಾಷ್ಟ್ರ ಎಂದು ಕರೆಯದೆ ‘ಯೂನಿಯನ್ ಆಫ್ ಸ್ಟೇಟ್ಸ್’, (ರಾಜ್ಯಗಳ ಒಕ್ಕೂಟ) ಎಂದು ಕರೆದರು. ಅದಕ್ಕೆ ಅನುಗುಣವಾಗಿ ರಾಜ್ಯಗಳಿಗೆ ಮಾನ್ಯತೆ ನೀಡಲಾಯಿತು; ಅನೇಕ ಅಧಿಕಾರಗಳೊಂದಿಗೆ ಒಂದು ರೀತಿಯ ಸ್ವಾಯತ್ತೆಯನ್ನು ನೀಡಲಾಯಿತು. ಅವರು ಯಾವ ಭಾಷೆಯನ್ನೂ ರಾಷ್ಟ್ರಭಾಷೆ ಎಂದು ಘೋಷಿಸಲಿಲ್ಲ. ದೇಶದ 22 ಮುಖ್ಯ ಭಾಷೆಗಳನ್ನು ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಿದರು.</p>



<p>ಆರಂಭದಲ್ಲಿ ದೇಶದ ಆಡಳಿತದ ಚುಕ್ಕಾಣಿ ಹಿಡಿದ ಪಂಡಿತ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಎಲ್ಲರೂ ದೇಶದ ಒಕ್ಕೂಟ ಸ್ವರೂಪಕ್ಕೆ ಮನ್ನಣೆ ನೀಡುತ್ತಾ, ಹೆಚ್ಚಿನ ಎಲ್ಲ ಭಾಷೆಗಳನ್ನು ಸಮಾನವಾಗಿ ಗೌರವಿಸುತ್ತ, ಸುಸೂತ್ರ ಆಡಳಿತ ನಡೆಸಿದರು. ದಕ್ಷಿಣದ ರಾಜ್ಯಗಳು, ಅದರಲ್ಲೂ ಮುಖ್ಯವಾಗಿ ತಮಿಳುನಾಡು ಹಿಂದಿ ಹೇರಿಕೆಯನ್ನು ಪ್ರಬಲವಾಗಿ ವಿರೋಧಿಸಿದಾಗ ಆ ವಿರೋಧವನ್ನು ಮಾನ್ಯ ಮಾಡಿ ಸಂಘರ್ಷ ರಹಿತವಾಗಿ ಆಡಳಿತ ನಡೆಸಿದರು.</p>



<p><strong>ಒಕ್ಕೂಟ ವ್ಯವಸ್ಥೆಯ ಮೇಲೆ ದಾಳಿ…</strong></p>



<p>2014ನೇ ಇಸವಿಯಿಂದ ದೇಶದ ಒಕ್ಕೂಟ ವ್ಯವಸ್ಥೆಯ ಮೇಲೆ ಕೇಂದ್ರದಲ್ಲಿರುವ ಸರಕಾರದಿಂದ ನಡೆಯುವ ದಾಳಿಯ ತೀವ್ರತೆ ಹೆಚ್ಚಾಗಿದೆ. ಇದು ಬಹುಮುಖ್ಯವಾಗಿ ಎರಡು ರೀತಿಯಲ್ಲಿ ನಡೆಯುತ್ತಿದೆ. ಸಂವಿಧಾನದ ಪ್ರಕಾರ ಇಲ್ಲಿನ ಕೆಲವು ಅಧಿಕಾರಗಳು ಕೇಂದ್ರದ ಬಳಿಯೂ, ಇನ್ನು ಕೆಲವು ಅಧಿಕಾರಗಳು ರಾಜ್ಯಗಳ ಪಟ್ಟಿಯಲ್ಲಿ ಬಂದರೆ, ಮತ್ತೆ ಕೆಲವು ಅಧಿಕಾರಗಳು ಜಂಟಿ ಪಟ್ಟಿಯಲ್ಲಿ ಬರುತ್ತದೆ. ಆದರೆ ಈಗೀಗ ಹಣಕಾಸು, ಕೃಷಿ, ಶಿಕ್ಷಣ, ಪೊಲೀಸ್ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಕೇಂದ್ರ ಕೈಯಾಡಿಸುತ್ತಾ ರಾಜ್ಯಗಳಿಗೆ ಬಹುತೇಕ ಯಾವ ಅಧಿಕಾರವೂ ಇಲ್ಲದಂತೆ ಮಾಡಲಾಗುತ್ತಿದೆ. ತೆರಿಗೆ ವಿಧಿಸುವ ಅಧಿಕಾರವೆಲ್ಲವೂ ಒಕ್ಕೂಟ ಸರಕಾರದ ಬಳಿ ಇರುವುದರಿಂದ ಹಣಕಾಸಿಗಾಗಿ ರಾಜ್ಯಗಳು ಅದರ ಮುಂದೆ ಕೈಚಾಚಿ ನಿಲ್ಲುವಂತಾಗಿದೆ.</p>



<p><strong>ಭಾಷೆಗಳ ಮೇಲೆ ದಾಳಿ..</strong></p>



<p>ಇನ್ನೊಂದೆಡೆ, ದೇಶದ ಬಹುತ್ವವನ್ನು ನಾಶಪಡಿಸುವ ಏಕರೂಪೀಕರಣ ಕಾರ್ಯತಂತ್ರದ ಭಾಗವಾಗಿ ಭಾಷೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಇಡೀ ದೇಶದ ಮೇಲೆ ಹಿಂದಿಯನ್ನು ಹೇರಲಾಗುತ್ತಿದೆ. ಬ್ಯಾಂಕ್, ಅಂಚೆ ಕಚೇರಿ, ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣ, ರಕ್ಷಣಾ ಇಲಾಖೆ.. ಹೀಗೆ ಕೇಂದ್ರ ಸರಕಾರದ ಅಡಿಯಲ್ಲಿ ಬರುವ ಎಲ್ಲ ಕಡೆಯೂ ಹಿಂದಿಯು ವ್ಯಾಪಕವಾಗಿ ಬೇರು ಬಿಟ್ಟಿದೆ. 2015 ರಿಂದ ಕೇಂದ್ರ ಸರಕಾರ ಜಾರಿಗೆ ತಂದ ಎಲ್ಲ ಯೋಜನೆಗಳ ಹೆಸರು ಹಿಂದಿಯಲ್ಲಿ ಇವೆ. ಸಂಸತ್ ಕಲಾಪ, ಮಂತ್ರಿಗಳ ಭಾಷಣ. ಅಧಿಕಾರಿಗಳ ಪತ್ರಿಕಾಗೋಷ್ಠಿ ಎಲ್ಲವೂ ಹಿಂದಿಯಲ್ಲಿ. ಹಿಂದಿ ಅನುಷ್ಠಾನಕ್ಕೆ ಕೋಟಿ ಕೋಟಿ ವ್ಯಯಿಸಲಾಗುತ್ತಿದೆ. ಹಿಂದಿ ವೈಭವೀಕರಣದ ನಡುವೆ ಇತರ ಭಾಷೆಗಳಿಗೆ ಪ್ರೋತ್ಸಾಹ ಇಲ್ಲವಾಗಿ ಈವತ್ತು ನಮ್ಮ ದೇಶದಲ್ಲಿ ಸುಮಾರು ಮೂರೂವರೆ ಕೋಟಿ ಜನಗಳ ತಾಯಿ ನುಡಿಗಳು ಪತನಮುಖಿಯಾಗಿವೆ.</p>



<p><strong>ಕನ್ನಡ ಭಾಷೆಯ ದುಸ್ಥಿತಿ…</strong></p>



<p>ಒಂದೆಡೆಯಲ್ಲಿ ಜಾಗತಿಕ ಭಾಷೆ ಇಂಗ್ಲಿಷ್, ಇನ್ನೊಂದೆಡೆಯಲ್ಲಿ ಹಿಂದಿ, ಇವುಗಳ ದಾಳಿಯಿಂದಾಗಿ ಕನ್ನಡದ ಪರಿಸ್ಥಿತಿ ಹೇಗಿದೆ? ಕರ್ನಾಟಕದ ಒಟ್ಟು ಜನಸಂಖ್ಯೆ 6,10,95,297 ಆಗಿದ್ದು, ಇದರಲ್ಲಿ 4,37,06,512 ಮಂದಿ ತಮ್ಮ ಮಾತೃಭಾಷೆಯನ್ನು ಕನ್ನಡವೆಂದು ಅಂಗೀಕರಿಸಿಕೊಂಡಿದ್ದಾರೆ. ಇದು ಒಟ್ಟು ಭಾರತೀಯ ಭಾಷೆಗಳ ಶೇಕಡಾ 3.61 ಆಗಿದ್ದು ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಉಳಿದಂತೆ, ಬಂಗಾಳಿ (ಶೇಕಡಾ 8.3), ಮರಾಠಿ (ಶೇಕಡಾ 6.86), ತೆಲುಗು (ಶೇಕಡಾ 6.70), ತಮಿಳು (ಶೇಕಡಾ 5.70), ಗುಜರಾತಿ (ಶೇಕಡಾ 4.58) ಮತ್ತು ಉರ್ದು (ಶೇಕಡಾ 4.19) ಭಾಷೆಗಳು ಸಂಖ್ಯೆಯ ದೃಷ್ಟಿಯಿಂದ ಕನ್ನಡಕ್ಕಿಂತ ಮೇಲೆ ಇವೆ. ಹಿಂದಿ ಭಾಷೆಯು ಶೇಕಡಾ 56 ರ ಬೆಳವಣಿಗೆ ತೋರಿಸುತ್ತಿರುವಾಗ ಈ ಭಾಷೆಗಳು ಕಡಿಮೆ ಬೆಳವಣಿಗೆ ತೋರಿಸುತ್ತಿರುವುದನ್ನು ನಾವು ಗಂಭೀರವಾಗಿ ಪರಿಗಣಿಸಬೇಕಿದೆ.</p>



<p>ಯೂನೆಸ್ಕೋವು ಸಿದ್ಧಪಡಿಸಿದ ‘ಭಾಷೆಗಳ ಜಾಗತಿಕ ಭೂಪಟ’ವು ಭಾರತದಲ್ಲಿನ 172 ಭಾಷೆಗಳನ್ನು ಅಪಾಯದ ಅಂಚಿನಲ್ಲಿರುವ ಭಾಷೆಗಳೆಂದೂ, ಅದರಲ್ಲಿ 101 ಭಾಷೆಗಳನ್ನು ಅತೀವ ಅಪಾಯದಲ್ಲಿರುವ ಭಾಷೆಗಳೆಂದೂ, 71 ಭಾಷೆಗಳನ್ನು ಎಲ್ಲ ಬಗೆಯ ಅಪಾಯಗಳಿಗೆ ಬಲಿಯಾಗುತ್ತಿರುವ ಭಾಷೆಗಳೆಂದೂ ಗುರುತಿಸಿದೆ. ದೇಶದ ಭಾಷೆಗಳಿಗೆ ಸಂಬಂಧಿಸಿದಂತೆ ಒಕ್ಕೂಟ ಸರಕಾರದ ತಾರತಮ್ಯ ನೀತಿಯಿಂದ ಮತ್ತು ಭಾರತಕ್ಕೊಂದು ಸ್ಪಷ್ಟ ಭಾಷಾ ನೀತಿಯೇ ಇಲ್ಲದ ಕಾರಣ ದೇಶದ ಅಮೂಲ್ಯ ಸಂಪತ್ತಾದ ನೂರಾರು ಭಾಷೆಗಳು ಅಪಾಯದಲ್ಲಿವೆ.</p>



<figure class="wp-block-image size-full"><img decoding="async" width="900" height="527" src="https://peepalmedia.com/wp-content/uploads/2022/10/happy-kannada-rajyotsava-day-2017-best-quotes-sms-whatsapp-messages-status-greetings-images-1.jpg" alt="" class="wp-image-13477" srcset="https://peepalmedia.com/wp-content/uploads/2022/10/happy-kannada-rajyotsava-day-2017-best-quotes-sms-whatsapp-messages-status-greetings-images-1.jpg 900w, https://peepalmedia.com/wp-content/uploads/2022/10/happy-kannada-rajyotsava-day-2017-best-quotes-sms-whatsapp-messages-status-greetings-images-1-300x176.jpg 300w, https://peepalmedia.com/wp-content/uploads/2022/10/happy-kannada-rajyotsava-day-2017-best-quotes-sms-whatsapp-messages-status-greetings-images-1-768x450.jpg 768w, https://peepalmedia.com/wp-content/uploads/2022/10/happy-kannada-rajyotsava-day-2017-best-quotes-sms-whatsapp-messages-status-greetings-images-1-150x88.jpg 150w, https://peepalmedia.com/wp-content/uploads/2022/10/happy-kannada-rajyotsava-day-2017-best-quotes-sms-whatsapp-messages-status-greetings-images-1-696x408.jpg 696w" sizes="(max-width: 900px) 100vw, 900px" /></figure>



<p><strong>ಅಭಿಮಾನ ಹರಿಯ ಬೇಕಾದುದೇ ಹೀಗೆ.</strong>.</p>



<p>ದೇಶದಲ್ಲಿ 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿವೆ. ಇವು ದೇಶ ಎಂಬ ಸೌಧದ ಆಧಾರ ಕಂಬಗಳಿದ್ದಂತೆ. ಯಾವ ಒಂದು ಕಂಬ ದುರ್ಬಲಗೊಂಡರೂ ಸೌಧ ಕುಸಿದು ಬೀಳುತ್ತದೆ. ಹಾಗಾಗಿ ಆ ಎಲ್ಲ ಕಂಬಗಳು ಬಲಿಷ್ಠ ಇರುವಂತೆ ನೋಡಿಕೊಳ್ಳುವುದು ಬಹಳ ಅಗತ್ಯ. ಆಲೂರು ಕೃಷ್ಣರಾಯರು ಅಂದಂತೆ “ಅಭಿಮಾನವೆಂದರೆ ಸಾತ್ವಿಕ ಅಹಂಕಾರ. ‘ನಾನು ನನ್ನದು’ ಎಂಬ ಭಾವ ಇಲ್ಲದ ಬದುಕು, ಬದುಕಲ್ಲ. ವ್ಯಕ್ತಿ, ಸಂಸಾರ, ಸಮಾಜ – ಇವುಗಳ ಬಗ್ಗೆ ಈ ಭಾವನೆyou ಬೆಳೆದು ವಿಶಾಲವಾಗುತ್ತ ಹೋಗುತ್ತದೆ”. ನಮ್ಮನ್ನು ಪ್ರೀತಿಸದೆ ನಾವು ಬೇರೆಯವರನ್ನು ಪ್ರೀತಿಸಲಾರೆವು. ಸಹಜವಾಗಿಯೇ ನಮಗೆ ನಮ್ಮ ಮನೆ ಮೊದಲು, ಆಮೇಲೆ ಊರು, ತಾಲೂಕು, ಜಿಲ್ಲೆ, ರಾಜ್ಯ, ದೇಶ ಹೀಗೆ ನಮ್ಮ ಅಭಿಮಾನ ಹರಿಯುವುದೇ ಹೀಗೆ.</p>



<p><strong>ಪ್ರಜ್ಞಾವಂತ ಪ್ರಜೆಗಳ ಜವಾಬ್ದಾರಿ…</strong></p>



<p>ಕನ್ನಡಿಗರಿಗೆ ಕರ್ನಾಟಕವೇ ಒಂದು ರಾಷ್ಟ್ರವಿದ್ದಂತೆ. ಕನ್ನಡವೇ ರಾಷ್ಟ್ರಭಾಷೆ ಇದ್ದಂತೆ. ಇಂತಹ ಅಭಿಮಾನದ ಭಾವನೆಯಿಂದ ದೇಶದ ಏಕತೆಗೇನೂ ತೊಂದರೆ ಇಲ್ಲ. ತದ್ವಿರುದ್ಧವಾಗಿ ಒಂದು ದೇಶ, ಒಂದು ಧರ್ಮ, ಒಂದು ಸಂಸ್ಕೃತಿ, ಒಂದು ಭಾಷೆ ಎಂದು ದೇಶಭಕ್ತಿ ಮತ್ತು ರಾಷ್ಟ್ರವಾದದ ಹೆಸರಿನಲ್ಲಿ ಏಕರೂಪೀಕರಣಕ್ಕೆ ಹೊರಟರೆ, ಅದು ಭಾರತ ಎಂಬ ಪರಿಕಲ್ಪನೆಗೆ ಹಾನಿ ಮಾಡುವುದಲ್ಲದೆ, ಪ್ರಾದೇಶಿಕ ಅಸಮಾಧಾನಕ್ಕೆ ಕಾರಣವಾಗುತ್ತದೆ. ಭಾಷೆ ಎನ್ನುವುದು ಭಾವನಾತ್ಮಕವಾಗಿ ತುಂಬಾ ಸಂವೇದನಾಶೀಲ ಸಂಗತಿ. ಭಾಷಾ ಅಸ್ಮಿತೆಗಳ ಮೇಲಿನ ದಾಳಿಯು ಸಮುದಾಯಗಳ ಅಸ್ಮಿತೆಯ ಮೇಲಿನ ದಾಳಿಯಾಗಿ, ಅಂತಿಮವಾಗಿ ಪ್ರತ್ಯೇಕತೆಯ ಭಾವನೆಗೆ ಇಂಬು ಕೊಡುತ್ತದೆ. ಇದಾಗಬಾರದು; ಇದಾಗದಂತೆ ನೋಡಿಕೊಳ್ಳುವುದು ನಮ್ಮನ್ನು ಆಳುವವರ ಜವಾಬ್ದಾರಿ. ನಮ್ಮನ್ನು ಆಳುವವರು ಈ ಜವಾಬ್ದಾರಿಯಿಂದ ವಿಮುಖರಾಗದಂತೆ ನೋಡಿಕೊಳ್ಳುವುದು ಪ್ರಜ್ಞಾವಂತ ಪ್ರಜೆಗಳಾದ ನಮ್ಮ ಜವಾಬ್ದಾರಿ.</p>



<p></p>



<figure class="wp-block-image size-full is-resized"><img loading="lazy" decoding="async" src="https://peepalmedia.com/wp-content/uploads/2022/10/shrinivas-karkala.jpeg" alt="" class="wp-image-8754" width="156" height="145"/><figcaption>ಶ್ರೀನಿವಾಸ ಕಾರ್ಕಳ<br>ಚಿಂತಕರು, ಸಾಮಾಜಿಕ ಕಾರ್ಯಕರ್ತರಾಗಿರುವ ಇವರು ಸಾಹಿತ್ಯ ಕೃಷಿಯಲ್ಲೂ ತೊಡಗಿಕೊಂಡವರು.</figcaption></figure>



<p></p>
]]></content:encoded>
					
		
		
			</item>
		<item>
		<title>ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಸಂಕುಚಿತವಾಗಿದೆ : ಶಿಕ್ಷಣ ತಜ್ಞ ನಿರಂಜನಾರಾಧ್ಯ ಅಸಮಾಧಾನ</title>
		<link>https://peepalmedia.com/kannada-language-comprehensive-development-bill-2022-narrowed-down-to-comprehensive-niranjanaradhya-v-p/</link>
		
		<dc:creator><![CDATA[Peepal Media]]></dc:creator>
		<pubDate>Sat, 01 Oct 2022 08:19:43 +0000</pubDate>
				<category><![CDATA[ಜನ-ಗಣ-ಮನ]]></category>
		<category><![CDATA[ನಾಡು-ನುಡಿ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[Kannada Language]]></category>
		<category><![CDATA[Kannada Language Comprehensive Development Bill 2022]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[Niranjanaradhya.V.P.]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=8346</guid>

					<description><![CDATA[ಬೆಂಗಳೂರು: ಕಳೆದ ವಾರ ವಿಧಾನ ಸಭೆಯಲ್ಲಿ ಮಂಡನೆಯಾದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ 2022 ಸಮಗ್ರ ಎನ್ನುತ್ತಲೇ ಸಂಕುಚಿತವಾಗಿದೆ ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ ಹೇಳಿದ್ದಾರೆ. ಕನ್ನಡ, ಕನ್ನಡಿಗ ಹಾಗು ಕರ್ನಾಟಕದ ಪೂರ್ಣ ಅಭಿವೃದ್ಧಿ ವಿಧೇಯಕದಲ್ಲಿ ಕಾಣುತ್ತಿಲ್ಲ. ನಿಜಕ್ಕೂ ಸಮಗ್ರವಾಗಿದ್ದರೆ , ವಿಧೇಯಕವು&#160; ಕನ್ನಡ, ಕನ್ನಡಿಗ&#160;ಹಾಗು&#160;ಕರ್ನಾಟಕದ ಸಮಗ್ರ&#160;ಅಭಿವೃದ್ಧಿಯ ವಿಧೇಯಕವಾಗಬೇಕಿತ್ತು. ವಿಧೇಯಕ, ಕರ್ನಾಟಕದಲ್ಲಿನ ಕನ್ನಡಿಗರ ಹಿತ ಕಾಪಾಡುವ ಜೊತೆಗೆ, ಹೊರನಾಡು ಮತ್ತು ಹೊರ ದೇಶದಲ್ಲಿರು&#160; ಕನ್ನಡಿಗರ ಹಿತ ಕಾಪಾಡಲು ಸಹ ಚಿಂತಿಸಬೇಕಿತ್ತು ಎಂದು ಹೇಳಿದ್ದಾರೆ. [&#8230;]]]></description>
										<content:encoded><![CDATA[
<p style="font-size:20px"><strong><u>ಬೆಂಗಳೂರು</u></strong>: ಕಳೆದ ವಾರ ವಿಧಾನ ಸಭೆಯಲ್ಲಿ ಮಂಡನೆಯಾದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ 2022 ಸಮಗ್ರ ಎನ್ನುತ್ತಲೇ ಸಂಕುಚಿತವಾಗಿದೆ ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ ಹೇಳಿದ್ದಾರೆ.</p>



<p style="font-size:20px">ಕನ್ನಡ, ಕನ್ನಡಿಗ ಹಾಗು ಕರ್ನಾಟಕದ ಪೂರ್ಣ ಅಭಿವೃದ್ಧಿ ವಿಧೇಯಕದಲ್ಲಿ ಕಾಣುತ್ತಿಲ್ಲ. ನಿಜಕ್ಕೂ ಸಮಗ್ರವಾಗಿದ್ದರೆ , ವಿಧೇಯಕವು&nbsp; ಕನ್ನಡ, ಕನ್ನಡಿಗ&nbsp;ಹಾಗು&nbsp;ಕರ್ನಾಟಕದ ಸಮಗ್ರ&nbsp;ಅಭಿವೃದ್ಧಿಯ ವಿಧೇಯಕವಾಗಬೇಕಿತ್ತು. ವಿಧೇಯಕ, ಕರ್ನಾಟಕದಲ್ಲಿನ ಕನ್ನಡಿಗರ ಹಿತ ಕಾಪಾಡುವ ಜೊತೆಗೆ, ಹೊರನಾಡು ಮತ್ತು ಹೊರ ದೇಶದಲ್ಲಿರು&nbsp; ಕನ್ನಡಿಗರ ಹಿತ ಕಾಪಾಡಲು ಸಹ ಚಿಂತಿಸಬೇಕಿತ್ತು ಎಂದು ಹೇಳಿದ್ದಾರೆ.</p>



<p style="font-size:20px">ವಿಧೇಯಕದ ಮೂಲ ಸ್ವರೂಪದಲ್ಲಿಯೇ ದೋಷವಿದ್ದಂತೆ ಕಾಣುತ್ತದೆ. ಸಮಗ್ರ ಅಭಿವೃದ್ಧಿಯನ್ನು ಎಲ್ಲಾ ಮೂರು ಮುಖ್ಯ ನೆಲೆಗಳಿಂದ, ಕನ್ನಡ, ಕನ್ನಡಿಗ ಮತ್ತು ಕರ್ನಾಟಕದ ನೆಲೆಯಿಂದ ನೋಡುವ ಸಮಗ್ರ ವಿಧೇಯಕಾವಾಗಬೇಕಿತ್ತು. ಪ್ರತಿಯೊಂದಕ್ಕು ಒಂದು ವಿಶೇಷ ಅಧ್ಯಾಯವಿರಬೇಕಿತ್ತು. ಉದಾಹರಣಗೆ, ಭಾಷೆಯನ್ನು ತೆಗೆದುಕೊಂಡರೆ, ಶಿಕ್ಷಣದಲ್ಲಿ ಮಾಧ್ಯಮ, ಶಿಕ್ಷಣದಲ್ಲಿ ಕನ್ನಡ ಭಾಷಾ ಕಲಿಕೆ, ಶಾಸಕಾಂಗ, ಕಾರ್ಯಾಂಗ ಹಾಗು ನ್ಯಾಯಾಂಗದಲ್ಲಿ ಕನ್ನಡ ಭಾಷೆಯ ಜಾರಿ ಹಾಗು ಉಪಯೋಗ, ರಾಜ್ಯದಲ್ಲಿರುವ ಕೇಂದ್ರ ಹಾಗು ರಾಜ್ಯಗಳ ಕಛೇರಿ–ಸಂಸ್ಥೆಗಳಲ್ಲಿ ಕನ್ನಡ ಬಳಕೆ ಹಾಗು ಉಪಯೋಗ, ರಾಜ್ಯದಲ್ಲಿ ನೆಲೆಸಿರುವ ಕನ್ನಡೇತರರ ಕನ್ನಡ ಕಲಿಕೆ, ಸರ್ಕಾರೇತರ ವಲಯದಲ್ಲಿ ಕನ್ನಡ ಭಾಷಾ ಬಳಕೆ, ಸಿನಿಮಾ, ಮನರಂಜನೆ, ಸಂಸ್ಕೃತಿ, ಪ್ರವಾಸೋದ್ಯಮ, ಇತ್ಯಾದಿ ನೆಲೆಯಿಂದ ಸಮಗ್ರವಾಗಿ ಜಾರಿಗೊಳಿಸುವ ಆಶಯ ವಿಧೇಯಕದಲ್ಲಿ ಇರಬೇಕಿತ್ತು ಎಂದು ತಿಳಿಸಿದ್ದಾರೆ.</p>



<p style="font-size:20px">ಇದೇ ಮಾದರಿಯಲ್ಲಿ, ಸರ್ಕಾರಿ, ಅರೆಸರ್ಕಾರಿ, ಸರಕಾರಿ ಬೆಂಬಲಿತ ಸಂಸ್ಥೆಗಳು ಮತ್ತು ಖಾಸಗಿ ವಲಯದಲ್ಲಿ ಕನ್ನಡಿಗನ ಉದ್ಯೋಗ ಅವಕಾಶಗಳ ಬಗ್ಗೆ ಮತ್ತು ಅನುಸರಿಸಬೇಕಾದ ವಿಧಾನಗಳ ಬಗ್ಗೆ ಒಂದು ಸಮಗ್ರ ಅಧ್ಯಾಯವಿರಬೇಕಿತ್ತು.&nbsp; ಇದಾವುದು ವಿಧೇಯಕದಲ್ಲಿ ಕಾಣುತ್ತಿಲ್ಲ ಎಂದು ನಿರಂಜನಾರಾಧ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>



<p style="font-size:20px">ಸಮಗ್ರ ಎನ್ನುತ್ತಲೇ ಸಂಕುಚಿತಗೊಳಿಸಿ ತಿಳಿಗೊಳಿಸುವ ಅನೇಕ ಉದಾಹರಣೆಗಳು ವಿಧೇಯಕದಲ್ಲಿ ಸಿಗುತ್ತವೆ. ಅವುಗಳಲ್ಲಿ, ಕೆಲವನ್ನು ಅವಲೋಕಿಸುವುದಾದರೆ, ಕನ್ನಡ ಭಾಷೆಯ ಬಳಕೆಗೆ ಸಂಬಂಧಿಸಿದಂತೆ ಪ್ರಕರಣ 4ರ ಅಡಿಯಲ್ಲಿ ಕಲ್ಪಿಸಿರುವ ಅವಕಾಶಗಳು, ಆಡಳಿತದಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಮಿತಿಗೊಳಿಸಿವೆ. ಉದಾಹರಣೆಗೆ, 4(ಸಿ) ಅಡಿಯಲ್ಲಿ, ವಿಧೇಯಕ ಹೇಳುವಂತೆ, ಆಡಳಿತಾತ್ಮಕ ಕಾರಣಗಳಿಗಾಗಿ ಇಂಗ್ಲಿಷ್ ಭಾಷೆಯನ್ನು ಬಳಸುವುದು ಅನಿವಾರ್ಯವಾಗಿದ್ದಲ್ಲಿ ಅಥವಾ ವೈಜ್ಞಾನಿಕ ಹಾಗು ತಾಂತ್ರಿಕ ವಿಷಯಗಳಿಗೆ ಸಂಬಂಧಿಸಿದಂತೆ ವ್ಯವಹರಿಸುವಾಗ ಆಂಗ್ಲ ಭಾಷೆಯನ್ನು ಬಳಸಬಹುದು ಎನ್ನುತ್ತದೆ. ಈ ಅವಕಾಶವು ವಿಧೇಯಕದ ಮೂಲ ಪ್ರಕರಣ 3ರ ಆಶಯವನ್ನು ತಿಳಿಗೊಳಿಸಿ ಆಡಳಿತದಲ್ಲಿ ಮತ್ತೊಮ್ಮೆ ಆಂಗ್ಲ ಭಾಷೆ ರಾರಾಜಿಸಲು ರಹದಾರಿ ನೀಡಿದಂತಾಗಿದೆ ಎಂದು ತಿಳಿಸಿದ್ದಾರೆ.</p>



<p style="font-size:20px">&nbsp;ʼಅನಿವಾರ್ಯವಾಗಿದ್ದಲ್ಲಿʼ ಎಂಬ ಸವಕಲು ಪದ ಎಲ್ಲೆಡೆ ಶಾಸಕಾಂಗ , ಕಾರ್ಯಾಂಗ ಮತ್ತು ನ್ಯಾಯಾಂದಲ್ಲಿ,&nbsp; ಆಂಗ್ಲ ಭಾಷೆಯನ್ನು ಬಳಸುವ ಅನಿವಾರ್ಯತೆ ಹಾಗು ಕಾನೂನಿನ ಅಡಿಯಲ್ಲಿಯೇ ರಕ್ಷಣೆ ಪಡೆಯಲು ಅವಕಾಶ ಕಲ್ಪಿಸುತ್ತದೆ. ಜೊತೆಗೆ, ಭಾಷೆಯೊಂದು ಬೆಳೆಯಬೇಕಾದರೆ, ವೈಜ್ಞಾನಿಕ ಹಾಗು ತಾಂತ್ರಿಕ ವಿಷಯಗಳನ್ನು ನಮ್ಮ ತಾಯ್ನುಡಿನ&nbsp; ಭಾಷೆಯಲ್ಲಿ ಬಳಸುವಂತಾಗಬೇಕು. ಸರ್ಕಾರ ಅದಕ್ಕೆ ಸೂಕ್ತ ಭೂಮಿಕೆ ಒದಗಿಸಬೇಕು. ಅದು ವೈಜ್ಞಾನಿಕ ಹಾಗು ತಾಂತ್ರಿಕ ವಿಷಯ ವಾದ ಮಾತ್ರಕ್ಕೆ ಆಂಗ್ಲ ಭಾಷೆಗೆ ಮೊರೆ ಹೋಗುವುದಾದರೆ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿಯ ಅರ್ಥವೇನು ಎಂಬ ಮೂಲ ಪ್ರಶ್ನೆ ಕನ್ನಡಿಗನಿಗೆ ಎದುರಾಗುತ್ತದೆ ಎಂದು ನಿರಂಜನಾರಾಧ್ಯ ಹೇಳಿದ್ದಾರೆ.</p>



<p style="font-size:20px">ಪ್ರಕರಣ 4ರಲ್ಲಿ ಪ್ರಸ್ತಾಪಿಸಿರುವ ರಾಜಭಾಷಾ ಆಯೋಗದ ಉದ್ದೇಶವಾದರು ಏನು ಎಂಬುದು ಯಕ್ಷ ಪ್ರಶ್ನೆಯಾಗುತ್ತದೆ. ಅಧ್ಯಕ್ಷರು ಹಾಗು ಸದಸ್ಯರ ನೇಮಕಾತಿಯ ವಿಧಾನ ನಿವೃತ್ತ ಅಧಿಕಾರಿಗಳಿಗೆ ಪುನರ್ವಸತಿ ಕಲ್ಪಿಸುವಂತಿದೆ. ಪ್ರಕರಣ ೭ ರಲ್ಲಿ ಭಾಷೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಚಿಸಲು ಪ್ರಸ್ತಾಪಿಸಿರುವ ರಾಜ್ಯಮಟ್ಟದ ಸಮಿತಿಯು ಅನುಷ್ಠಾನಕ್ಕೆ ಇರಬೇಕಾದ ಕನಿಷ್ಠ ರಾಜಕೀಯ ಇಚ್ಛಾಶಕ್ತಿಯನ್ನು ಅಭಿವ್ಯಕ್ತಗೊಳಿಸಬಹುದಾದ ಉನ್ನತ ಮಟ್ಟದ ಸಮಿತಿಯಾಗುವ ಬದಲು ಕೇವಲ ಕಾಟಾಚಾರದ ಸಮಿತಿಯಾದಂತಿದೆ ಎಂದಿದ್ದಾರೆ.</p>



<p style="font-size:20px">ಕನ್ನಡ ಅನುಷ್ಠಾನದ ರಾಜಕೀಯ ಕಾಯಕಲ್ಪ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆಯಬೇಕೆ ಹೊರತು ಅದನ್ನು ತಿಳಿಗೊಳಿಸಬಾರದು. ಕನ್ನಡ ಅನುಷ್ಠಾನಕ್ಕಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಪರಿಷತ್ತಿನ ಅಧ್ಯಕ್ಷರು ಉಪಾಧ್ಯಕ್ಷರುಗಳಾಗಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿ ಸದಸ್ಯ ಸಂಚಾಲಕರಾದಾಗ ಮಾತ್ರ ಅನುಷ್ಠಾನಕ್ಕೆ ಅಗತ್ಯವಾದ&nbsp; ರಾಜಕೀಯ ಇಚ್ಚಾಶಕ್ತಿ ಅಭಿವ್ಯಕ್ತಗೊಳ್ಳುತ್ತದೆ. ಜೊತೆಗೆ, ಸರ್ಕಾರದ ಹಂಗಿಲ್ಲದೆ ಸ್ವತಂತ್ರವಾಗಿ ಭಾಷೆಯ ಅನುಷ್ಠಾನದ ಬಗ್ಗೆ ನಿರ್ಭಯವಾಗಿ ಮಾತನಾಡಬಲ್ಲ ಸರ್ಕಾರೇತರ ತಜ್ಞ ಸದಸ್ಯರು ಇರಬೇಕಾಗುತ್ತದೆ ಹಾಗೂ ಇದೇ ಬಗೆಯ ಇಚ್ಛಾಶಕ್ತಿ ವ್ಯಕ್ತವಾಗುವ ರೀತಿಯಲ್ಲಿ ಜಿಲ್ಲಾ ಹಾಗು ತಾಲ್ಲೂಕು ಸಮಿತಿಗಳು ರಚನೆಯಾಗಬೇಕಾಗುತ್ತದೆ ಎಂದು ತಿಳಿಸಿದ್ದಾರೆ.</p>



<p style="font-size:20px">ಒಟ್ಟಾರೆ, ಸಮಗ್ರ ಎನ್ನುತ್ತಲೇ ಕನ್ನಡ, ಕನ್ನಡಿಗ ಹಾಗು ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ಸಂಕುಚಿತ ಹಾಗು ತಿಳಿಗೊಳಿಸುವ ಈ ವಿಧೇಯಕವನ್ನು ಸಮಗ್ರವಾಗಿಯೇ ಪರಾಮರ್ಶಿಸಬೇಕಿದೆ ಎಂದು ನಿರಂಜನಾರಾಧ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>
]]></content:encoded>
					
		
		
			</item>
	</channel>
</rss>
