<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>karave president narayanagowda &#8211; Peepal Media</title>
	<atom:link href="https://peepalmedia.com/tag/karave-president-narayanagowda/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 29 Dec 2023 13:59:33 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>karave president narayanagowda &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಕನ್ನಡ ನಾಮಫಲಕ : ಎರಡು ಪ್ರಮುಖ ನಿರ್ಣಯಕ್ಕೆ ಬಂದ ಕನ್ನಡಪರ ಸಂಘಟನೆಗಳು, ನಿರ್ಣಯಗಳೇನು?</title>
		<link>https://peepalmedia.com/pro-kannada-organizations-came-to-two-major-resolutions/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 29 Dec 2023 13:55:03 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ನಾಡು-ನುಡಿ]]></category>
		<category><![CDATA[bengalure]]></category>
		<category><![CDATA[kannada]]></category>
		<category><![CDATA[kannada board]]></category>
		<category><![CDATA[karave]]></category>
		<category><![CDATA[karave president narayanagowda]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=34211</guid>

					<description><![CDATA[ಹಲವು ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳನ್ನು ಒಳಗೊಂಡಂತೆ ಇಂದು ಬೆಂಗಳೂರಿನಲ್ಲಿ ಸಭೆ ಕರೆಯಲಾಗಿತ್ತು. ಅದರಂತೆ ರಾಜ್ಯ ಸರ್ಕಾರ ಬಂಧಿಸಿದ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಕರವೇ ಕಾರ್ಯಕರ್ತರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಒತ್ತಾಯಿಸಲು ವಿವಿಧ ಸಂಘಟನೆಗಳು ತಮ್ಮ ಒಗ್ಗಟ್ಟು ಪ್ರದರ್ಶಿಸಿದರು. ಕನ್ನಡ ನಾಮಫಲಕ ಕಡ್ಡಾಯಗೊಳಿಸುವ ಮತ್ತು ಅಗತ್ಯಕ್ಕಿಂತ ಹೆಚ್ಚು ಅನ್ಯಭಾಷೆ ಬಳಸಿದ ನಾಮಫಲಕ ತೆರವಿಗೆ ಸಂಬಂಧಿಸಿದಂತೆ ಹೋರಾಟ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಹಾಗೂ ಕಾರ್ಯಕರ್ತರನ್ನು ಗುರುವಾರ ನಡೆದ ಪ್ರತಿಭಟನೆ [&#8230;]]]></description>
										<content:encoded><![CDATA[
<p>ಹಲವು ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳನ್ನು ಒಳಗೊಂಡಂತೆ ಇಂದು ಬೆಂಗಳೂರಿನಲ್ಲಿ ಸಭೆ ಕರೆಯಲಾಗಿತ್ತು. ಅದರಂತೆ ರಾಜ್ಯ ಸರ್ಕಾರ ಬಂಧಿಸಿದ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಕರವೇ ಕಾರ್ಯಕರ್ತರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಒತ್ತಾಯಿಸಲು ವಿವಿಧ ಸಂಘಟನೆಗಳು ತಮ್ಮ ಒಗ್ಗಟ್ಟು ಪ್ರದರ್ಶಿಸಿದರು.</p>



<p>ಕನ್ನಡ ನಾಮಫಲಕ ಕಡ್ಡಾಯಗೊಳಿಸುವ ಮತ್ತು ಅಗತ್ಯಕ್ಕಿಂತ ಹೆಚ್ಚು ಅನ್ಯಭಾಷೆ ಬಳಸಿದ ನಾಮಫಲಕ ತೆರವಿಗೆ ಸಂಬಂಧಿಸಿದಂತೆ ಹೋರಾಟ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಹಾಗೂ ಕಾರ್ಯಕರ್ತರನ್ನು ಗುರುವಾರ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಬಂಧಿಸಲಾಗಿತ್ತು. ನಂತರ ನಾರಾಯಣ ಗೌಡ ಸೇರಿದಂತೆ 53 ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿಗೆ ರವಾನೆ ಮಾಡಲಾಗಿದೆ</p>



<p>ಈ ಸಂಬಂಧ ಎಲ್ಲಾ ಸಂಘಟನೆಗಳನ್ನು ಒಳಗೊಂಡಂತೆ ಕರವೇ ನಾರಾಯಣ ಗೌಡ ಹಾಗೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸುವಂತೆ ಎಲ್ಲಾ ಕನ್ನಡಪರ ಸಂಘಟನೆಗಳು ಇಂದು ಸರ್ಕಾರಕ್ಕೆ ಮತ್ತಷ್ಟು ಒತ್ತಡ ತರಲು ತೀರ್ಮಾನಿಸಿವೆ. ಇಂದು ನಡೆದ ಸಭೆಯಲ್ಲಿ ಎಲ್ಲಾ ಕನ್ನಡಪರ ಸಂಘಟನೆಗಳು ಸೇರಿದ ಸಭೆಯಲ್ಲಿ ಪ್ರಮುಖವಾಗಿ ಎರಡು ನಿರ್ಣಯಗಳನ್ನು ತಗೆದುಕೊಳ್ಳಲಾಗಿದ್ದು, ಇದರಲ್ಲಿ ಪ್ರಮುಖವಾಗಿ ಬೆಂಗಳೂರು ಬಂದ್​ ಮಾಡುವ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ.</p>



<p>ಬಂಧನದಲ್ಲಿರುವ ಕನ್ನಡಿಗರನ್ನು ಬೇಷರತ್​ ಆಗಿ ಬಿಡುಗಡೆ ಮಾಡಬೇಕು. ಹೋರಾಟಗಾರರ ಮೇಲಿನ ಕೇಸ್​ ಹಿಂಪಡೆಯಬೇಕು ಎಂದು ಖಂಡನಾ ಸಭೆಯಲ್ಲಿ ಪ್ರಮುಖ ಎರಡು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.</p>



<p>ಇದಿಷ್ಟೇ ಅಲ್ಲದೆ ಕನ್ನಡ ನಾಮಫಲಕದಲ್ಲಿ ಶೇ 60% ರಷ್ಟು ಕನ್ನಡ ಬಳಕೆ ಕಡ್ಡಾಯದ ವಿಚಾರದಲ್ಲಿ ನಾವುಗಳು (ಎಲ್ಲಾ ಕನ್ನಡಪರ ಸಂಘಟನೆಗಳು) ಒಗ್ಗಟ್ಟಿನಿಂದ ಇರುವ ಬಗ್ಗೆ ಕರೆ ನೀಡಿವೆ. ಫೆ.28ಕ್ಕೆ ಕನ್ನಡ ನಾಮಫಲಕ ಕಡ್ಡಾಯ ಆಗಬೇಕು. ಇಲ್ಲದಿದ್ರೆ ಮತ್ತೆ ನಾಮಫಲಕಗಳ ವಿಚಾರದಲ್ಲಿ ಹೋರಾಟ ಮಾಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಕರೆ ನೀಡಿದ್ದಾರೆ.</p>



<p>ಇತ್ತ ಬೋರ್ಡ್​ಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ. ಜಾಹಿರಾತು ಫಲಕಗಳಲ್ಲೂ ಇದು ಜಾರಿಗೆ ಬರಬೇಕು. ಈ ಬಗ್ಗೆ ಶಾಂತಿಯುತ ಹೋರಾಟ ಮಾಡಿದರೆ ನಮ್ಮ ಅಭ್ಯಂತರವಿಲ್ಲ. ಕಾನೂನು ಕೈಗೆತ್ತಿಕೊಂಡರೆ ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುರುವಾರ ಎಚ್ಚರಿಕೆ ನೀಡಿದ್ದಾರೆ.</p>
]]></content:encoded>
					
		
		
			</item>
		<item>
		<title>&#8220;ಫಲಕಗಳಲ್ಲಿ ಕನ್ನಡ ಬಳಸದಿದ್ದರೆ ಕರ್ನಾಟಕದಿಂದ ಹೊರಡಿ..&#8221; : ಟಿ.ಎ.ನಾರಾಯಣ ಗೌಡ ಎಚ್ಚರಿಕೆ</title>
		<link>https://peepalmedia.com/if-you-dont-use-kannada-on-the-plates-get-out-of-karnataka/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 28 Dec 2023 04:06:31 +0000</pubDate>
				<category><![CDATA[ನಾಡು-ನುಡಿ]]></category>
		<category><![CDATA[bengalure]]></category>
		<category><![CDATA[karave]]></category>
		<category><![CDATA[karave president narayanagowda]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=34125</guid>

					<description><![CDATA[ವ್ಯಾಪಾರಿ ಕೇಂದ್ರಗಳು, ಕಂಪನಿಗಳು ಹಾಗೂ ಇನ್ನಾವುದೇ ಸಂಸ್ಥೆಗಳು ಅಳವಡಿಸಿರುವ ಬೋರ್ಡ್ ಗಳಲ್ಲಿ ಶೇ 60% ರಷ್ಟು ಕನ್ನಡ ಭಾಷೆಯ ಬಳಕೆ ಮಾಡುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರಿನ ಹಲವು ಕಡೆಗಳಲ್ಲಿ ಕನ್ನಡ ಬಳಸದ ನಾಮಫಲಕಗಳ ತೆರವು ಕಾರ್ಯ ನಡೆಸಿದೆ. ಬುಧವಾರ ಬೆಂಗಳೂರಿನ ಹಲವು ವ್ಯಾಪಾರೀ ಕೇಂದ್ರಗಳ ಪ್ರದೇಶಗಳಲ್ಲಿ ಹೋರಾಟ ಹಮ್ಮಿಕೊಂಡಿದ್ದ ನಾರಾಯಣ ಗೌಡರ ಬಣದ ಕರ್ನಾಟಕ ರಕ್ಷಣಾ ವೇದಿಕೆ ತಂಡ, ನಗರದ ವಿವಿಧೆಡೆ ವಿಶೇಷವಾಗಿ ವ್ಯಾಪಾರ ಕೇಂದ್ರಗಳಾದ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ, ಲ್ಯಾವೆಲ್ಲೆ ರಸ್ತೆ, ಯುಬಿ [&#8230;]]]></description>
										<content:encoded><![CDATA[
<p>ವ್ಯಾಪಾರಿ ಕೇಂದ್ರಗಳು, ಕಂಪನಿಗಳು ಹಾಗೂ ಇನ್ನಾವುದೇ ಸಂಸ್ಥೆಗಳು ಅಳವಡಿಸಿರುವ ಬೋರ್ಡ್ ಗಳಲ್ಲಿ ಶೇ 60% ರಷ್ಟು ಕನ್ನಡ ಭಾಷೆಯ ಬಳಕೆ ಮಾಡುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರಿನ ಹಲವು ಕಡೆಗಳಲ್ಲಿ ಕನ್ನಡ ಬಳಸದ ನಾಮಫಲಕಗಳ ತೆರವು ಕಾರ್ಯ ನಡೆಸಿದೆ.</p>



<p>ಬುಧವಾರ ಬೆಂಗಳೂರಿನ ಹಲವು ವ್ಯಾಪಾರೀ ಕೇಂದ್ರಗಳ ಪ್ರದೇಶಗಳಲ್ಲಿ ಹೋರಾಟ ಹಮ್ಮಿಕೊಂಡಿದ್ದ ನಾರಾಯಣ ಗೌಡರ ಬಣದ ಕರ್ನಾಟಕ ರಕ್ಷಣಾ ವೇದಿಕೆ ತಂಡ, ನಗರದ ವಿವಿಧೆಡೆ ವಿಶೇಷವಾಗಿ ವ್ಯಾಪಾರ ಕೇಂದ್ರಗಳಾದ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ, ಲ್ಯಾವೆಲ್ಲೆ ರಸ್ತೆ, ಯುಬಿ ಸಿಟಿ, ಚಾಮರಾಜಪೇಟೆ, ಚಿಕ್ಕಪೇಟೆ, ಕೆಂಪೇಗೌಡ ರಸ್ತೆ, ಗಾಂಧಿ ನಗರ, ಸೇಂಟ್‌ ಮಾರ್ಕ್ಸ್‌ ರಸ್ತೆ, ಕನ್ನಿಂಗ್ ಹ್ಯಾಮ್ ರಸ್ತೆ, ರೆಸಿಡೆನ್ಸಿ ರಸ್ತೆ ಮತ್ತು ದೇವನಹಳ್ಳಿ ಬಳಿ ಸಾದಹಳ್ಳಿ ಗೇಟ್ಗಳಲ್ಲಿ ರ್ಯಾಲಿ ನಡೆಸಿದರು.</p>



<p>ವ್ಯಾಪಾರ ಸಂಸ್ಥೆಗಳು &#8220;ಕರ್ನಾಟಕದ ಅಧಿಕೃತ ಭಾಷೆಯಾದ ಕನ್ನಡವನ್ನು ದುರ್ಬಲಗೊಳಿಸುತ್ತಿವೆ&#8221; ಎಂದು ಕಾರ್ಯಕರ್ತರು ಪ್ರತಿಪಾದಿಸಿದರು. ಅನೇಕ ಮಾಲ್‌ಗಳು, ಅಂಗಡಿಗಳು, ವಾಣಿಜ್ಯ ಕಟ್ಟಡಗಳು, ಕಂಪನಿಗಳು ಮತ್ತು ಕಾರ್ಖಾನೆಗಳು, ವಿಶೇಷವಾಗಿ ಬಹುರಾಷ್ಟ್ರೀಯ ಕಂಪನಿಗಳು, ಕನ್ನಡದಲ್ಲಿಲ್ಲದ ಸೈನ್‌ಬೋರ್ಡ್‌ಗಳು ಮತ್ತು ನಾಮಫಲಕಗಳನ್ನು ಹಾನಿಗೊಳಿಸಿದ ಮತ್ತು ವಿರೂಪಗೊಳಿಸಿದ ಕ.ರಾ.ವೇ ಕಾರ್ಯಕರ್ತರ ಆಕ್ರೋಶವನ್ನು ಎದುರಿಸಬೇಕಾಯಿತು.</p>



<p>ನಂತರ ಕ.ರ.ವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿದಂತೆ ಧರಣಿ ನಿರತ ಸದಸ್ಯರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಟಿ.ಎ.ನಾರಾಯಣ ಗೌಡ, ಕರ್ನಾಟಕದಲ್ಲಿ ನಾಮಫಲಕಗಳು ಮತ್ತು ಫಲಕಗಳು ಕನ್ನಡದಲ್ಲಿರಬೇಕು. ಬಿಬಿಎಂಪಿ ನಿಯಮಗಳನ್ನು ಉಲ್ಲೇಖಿಸಿದ ಅವರು, “ಅರವತ್ತು ಪ್ರತಿಶತದಷ್ಟು (ಸ್ಪೇಸ್‌ನಲ್ಲಿ) ಸೈನ್‌ಬೋರ್ಡ್‌ಗಳು ಮತ್ತು ನಾಮ ಫಲಕಗಳು ಕನ್ನಡದಲ್ಲಿರಬೇಕು.&nbsp;ನಿಮ್ಮ ವ್ಯವಹಾರಕ್ಕೆ ನಾವು ವಿರೋಧವಿಲ್ಲ ಆದರೆ ನೀವು ಕರ್ನಾಟಕದಲ್ಲಿ ವ್ಯಾಪಾರ ಮಾಡುತ್ತಿದ್ದರೆ ನೀವು ನಮ್ಮ ಭಾಷೆಯನ್ನು ಗೌರವಿಸಬೇಕು.&nbsp;ನೀವು ಕನ್ನಡವನ್ನು ನಿರ್ಲಕ್ಷಿಸಿದರೆ ಅಥವಾ ಕನ್ನಡ ಅಕ್ಷರಗಳನ್ನು ಚಿಕ್ಕದಾಗಿ ಹಾಕಿದರೆ, ನಾವು ನಿಮಗೆ ಇಲ್ಲಿ ಕಾರ್ಯನಿರ್ವಹಿಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.</p>



<p>ವಿಮಾನ ನಿಲ್ದಾಣ ಹಾಗೂ ಇತರೆಡೆಗೆ ತೆರಳುವ ಬಳ್ಳಾರಿ ರಸ್ತೆಯಲ್ಲಿ ಕಾರ್ಯಕರ್ತರಿಂದ ಸಂಚಾರ ದಟ್ಟಣೆ ಉಂಟಾಗಿದ್ದರಿಂದ ವಾಹನಗಳು ಬಸವನ ಗತಿಯಲ್ಲಿ ಸಾಗಿದವು.&nbsp;ಮೊರೆ ಹೋದ ಜನಸಮೂಹದ ಮುಂದೆ ಪೊಲೀಸರೂ ಅಸಹಾಯಕರಾದರು.</p>
]]></content:encoded>
					
		
		
			</item>
		<item>
		<title>ವಿಮಾನ ನಿಲ್ದಾಣಗಳಿಗೆ ಸಾಧಕ ಕನ್ನಡಿಗರ ಹೆಸರು: ಕರವೇ ಅಭಿನಂದನೆ</title>
		<link>https://peepalmedia.com/karave-thanked-government-for-naming-airports/</link>
		
		<dc:creator><![CDATA[Charan Aivarnad]]></dc:creator>
		<pubDate>Fri, 15 Dec 2023 10:26:42 +0000</pubDate>
				<category><![CDATA[ರಾಜ್ಯ]]></category>
		<category><![CDATA[aiport]]></category>
		<category><![CDATA[bengalure]]></category>
		<category><![CDATA[breaking]]></category>
		<category><![CDATA[breaking news]]></category>
		<category><![CDATA[hubballi]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karave]]></category>
		<category><![CDATA[karave president narayanagowda]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[shimogga]]></category>
		<category><![CDATA[siddaramaih]]></category>
		<category><![CDATA[state politics]]></category>
		<category><![CDATA[trend]]></category>
		<category><![CDATA[Trending]]></category>
		<category><![CDATA[trending news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=33722</guid>

					<description><![CDATA[ಬೆಂಗಳೂರು: ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ ಮತ್ತು ವಿಜಯಪುರ ವಿಮಾನ ನಿಲ್ದಾಣಗಳಿಗೆ ಕರ್ನಾಟಕದ ನಾಲ್ವರು ಮಹಾಸಾಧಕರ ಹೆಸರನ್ನು ಇಡುವ ಪ್ರಸ್ತಾಪವನ್ನು ಕರ್ನಾಟಕ ವಿಧಾನಸಭೆ ಸರ್ವಾನುಮತದಿಂದ ಅನುಮೋದಿಸಿರುವುದು ಅತ್ಯಂತ ಸಂತಸದ ವಿಷಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು,ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಹತ್ತು ವರ್ಷಗಳಿಂದ ಈ ಬೇಡಿಕೆ ಇಟ್ಟು ಹೋರಾಟ ನಡೆಸಿತ್ತು, ಆದರೆ ಈಗ, ಶಿವಮೊಗ್ಗ ವಿಮಾನ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ ಮತ್ತು ವಿಜಯಪುರ ವಿಮಾನ ನಿಲ್ದಾಣಗಳಿಗೆ ಕರ್ನಾಟಕದ ನಾಲ್ವರು ಮಹಾಸಾಧಕರ ಹೆಸರನ್ನು ಇಡುವ ಪ್ರಸ್ತಾಪವನ್ನು ಕರ್ನಾಟಕ ವಿಧಾನಸಭೆ ಸರ್ವಾನುಮತದಿಂದ ಅನುಮೋದಿಸಿರುವುದು ಅತ್ಯಂತ ಸಂತಸದ ವಿಷಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ.</p>



<p>ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು,ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಹತ್ತು ವರ್ಷಗಳಿಂದ ಈ ಬೇಡಿಕೆ ಇಟ್ಟು ಹೋರಾಟ ನಡೆಸಿತ್ತು, ಆದರೆ ಈಗ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯುಗದ ಕವಿ, ಜಗದ ಕವಿ ಕುವೆಂಪು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ವಿಜಯಪುರ ವಿಮಾನ ನಿಲ್ದಾಣಕ್ಕೆ ಕ್ರಾಂತಿಯೋಗಿ ಬಸವಣ್ಣನವರ ಹೆಸರು ಇಡುವ ಪ್ರಸ್ತಾಪವನ್ನು ಅಂಗೀಕರಿಸಿರುವುದು ಹೆಮ್ಮೆ ತಂದಿದೆ ಎಂದಿದ್ದಾರೆ.</p>



<p>ಭಾರತ ಒಕ್ಕೂಟ ಸರ್ಕಾರವು ಆದಷ್ಟು ಶೀಘ್ರದಲ್ಲೇ ಈ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿ ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸುತ್ತದೆ‌. ಈ ವಿಷಯದಲ್ಲಿ ಪಕ್ಷಬೇಧ ಮರೆತು ಒಂದಾಗಿ ಸರ್ವಾನುಮತದಿಂದ ಪ್ರಸ್ತಾಪ ಅನುಮೋದಿಸಿದ ಎಲ್ಲ ಜನಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.</p>



<p>ಈ ಐತಿಹಾಸಿಕ ನಿರ್ಣಯಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಎಲ್ಲ ಶಾಸಕರನ್ನು ಅಭಿನಂದಿಸಿರುವ ಅವರು<br>ಕನ್ನಡಿಗರ ಬೇಡಿಕೆ ಈಡೇರಿಸಿದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳನ್ನು ತಿಳಿಸಿದ್ದಾರೆ.</p>



<p>ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರು ಇಡಬೇಕೆಂದು ನಾವು ಹೋರಾಟ ನಡೆಸಿ ಯಶಸ್ವಿಯಾಗಿದ್ದೆವು. ಅದೇ ರೀತಿ ಈಗ ನಾಲ್ಕು ವಿಮಾನ ನಿಲ್ದಾಣಗಳಿಗೆ ಕರ್ನಾಟಕದ ನಾಲ್ವರು ಮೇರುಸಾಧಕರ ಹೆಸರು ಇಡಬೇಕೆಂಬ ನಮ್ಮ ಹೋರಾಟದ ಬೇಡಿಕೆಯೂ ಈಗ ಈಡೇರಿದಂತಾಗಿದೆ ಎಂದು ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ಬೆಳಗಾವಿಯಲ್ಲಿ ತಗ್ಗಿದ ಉದ್ವಿಗ್ನತೆ : ಶಾಂತಿ ಕದಡಲು &#8216;ಮಹಾಮೇಳ&#8217;ವನ್ನು ಯೋಜಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ</title>
		<link>https://peepalmedia.com/tension-eases-in-belgaum-maharashtra-unification-committee-plans-mahamela-to-disrupt-peace/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 08 Dec 2022 08:17:43 +0000</pubDate>
				<category><![CDATA[ಬೆಳಗಾವಿ]]></category>
		<category><![CDATA[ರಾಜ್ಯ]]></category>
		<category><![CDATA[Ashok Chandragi]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karave]]></category>
		<category><![CDATA[karave president narayanagowda]]></category>
		<category><![CDATA[karnataka]]></category>
		<category><![CDATA[Karnataka-Maharashtra border dispute]]></category>
		<category><![CDATA[Maharashtra Integration Committee]]></category>
		<category><![CDATA[Manohar Kinekar]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=17929</guid>

					<description><![CDATA[ಬೆಳಗಾವಿ: ಡಿಸೆಂಬರ್ 19 ರಿಂದ 30 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಭುಗಿಲೇಳುವ ಸೂಚನೆಗಳಿದ್ದರೂ ಬೆಳಗಾವಿಯ ಕೆಲವು ಭಾಗಗಳಲ್ಲಿ ಬುಧವಾರದಿಂದ ಉದ್ವಿಗ್ನತೆ ತಗ್ಗಿತ್ತು. ಆದರೆ ಬೆಳಗಾವಿ ಮತ್ತು ಇತರ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಬಗ್ಗೆ ಧ್ವನಿ ಎತ್ತುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಗಡಿ ನಗರದಲ್ಲಿ ನಡೆಯುವ ಅಧಿವೇಶನದಲ್ಲಿ ಪ್ರತಿಭಟಿಸಲು ತನ್ನ ಯೋಜಿತ &#8216;ಮಹಾಮೇಳ&#8217;ದೊಂದಿಗೆ ಮುಂದುವರಿಯುವುದಾಗಿ ತಿಳಿಸಿದೆ. [&#8230;]]]></description>
										<content:encoded><![CDATA[
<p><strong>ಬೆಳಗಾವಿ:</strong> ಡಿಸೆಂಬರ್ 19 ರಿಂದ 30 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಭುಗಿಲೇಳುವ ಸೂಚನೆಗಳಿದ್ದರೂ ಬೆಳಗಾವಿಯ ಕೆಲವು ಭಾಗಗಳಲ್ಲಿ ಬುಧವಾರದಿಂದ ಉದ್ವಿಗ್ನತೆ ತಗ್ಗಿತ್ತು. ಆದರೆ ಬೆಳಗಾವಿ ಮತ್ತು ಇತರ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಬಗ್ಗೆ ಧ್ವನಿ ಎತ್ತುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಗಡಿ ನಗರದಲ್ಲಿ ನಡೆಯುವ ಅಧಿವೇಶನದಲ್ಲಿ ಪ್ರತಿಭಟಿಸಲು ತನ್ನ ಯೋಜಿತ &#8216;ಮಹಾಮೇಳ&#8217;ದೊಂದಿಗೆ ಮುಂದುವರಿಯುವುದಾಗಿ ತಿಳಿಸಿದೆ.</p>



<p>ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಎಂಇಎಸ್ ಮಾಜಿ ಶಾಸಕ ಮನೋಹರ್ ಕಿನೇಕರ್ ಅವರು, ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಅಧಿವೇಶನವನ್ನು ವಿರೋಧಿಸಿ ತಮ್ಮ ವಾರ್ಷಿಕ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.</p>



<p>ಪ್ರಸ್ತುತವಾಗಿ ಕರ್ನಾಟಕ ರಾಜ್ಯದ ಗಡಿ ಭಾಗವಾಗಿರುವ ಬೆಳಗಾವಿಯಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ. ಆದರೆ ಹಿರೇಬಾಗೇವಾಡಿ ಬಳಿ ಮಹಾರಾಷ್ಟ್ರ ನಂಬರ್ ಪ್ಲೇಟ್ ಗಳನ್ನು ಹೊಂದಿದ್ದ ವಾಹನಗಳನ್ನು ಧ್ವಂಸಗೊಳಿಸಿರುವುದಕ್ಕೆ, ಎಂಇಎಸ್ ನ ಯಾವುದೇ ಕ್ರಮವು ಕನ್ನಡ ಸಂಘಟನೆಗಳ ಕ್ರಮಕ್ಕೆ ಪ್ರತಿಕ್ರಿಯೆಯಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.</p>



<p>ಮನೋಹರ್ ಕಿನೇಕರ್ ಹೇಳಿಕೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ʼಬೆಳಗಾವಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಗಡಿ ವಿವಾದದ ಬಗ್ಗೆ ಮೌನವಾಗಿದ್ದಾರೆ. ಏಕೆಂದರೆ ಅದು ತಮ್ಮ ವೋಟ್ ಬ್ಯಾಂಕ್ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೆದರುತ್ತಾರೆʼ ಎಂದು ಟೀಕಿಸಿದ್ದಾರೆ.</p>



<p>ಈ ಕುರಿತು ಕನ್ನಡ ಹೋರಾಟಗಾರ ಅಶೋಕ್ ಚಂದರಗಿ ಸುದ್ದಿಗಾರರೊಂದಿಗೆ ಮಾತನಾಡಿ, ʼಈ ವಿವಾದವು ಮಹಾರಾಷ್ಟ್ರರಾಜಕೀಯ ಬೆಳವಣಿಗೆಗಳೊಂದಿಗೆ ಸಂಬಂಧ ಹೊಂದಿದೆ. ರಾಜಕೀಯ ಲಾಭಕ್ಕಾಗಿ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ (NCP) ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿದೆ. ಹೀಗಾಗಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗಳು ಮುಗಿಯುವವರೆಗೆ ವಿವಾದವು ಮುಂದುವರಿಯುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.</p>
]]></content:encoded>
					
		
		
			</item>
	</channel>
</rss>
