<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>karnataka rakshana vedhike &#8211; Peepal Media</title>
	<atom:link href="https://peepalmedia.com/tag/karnataka-rakshana-vedhike/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 01 Dec 2022 10:06:36 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>karnataka rakshana vedhike &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಕನ್ನಡ ಧ್ವಜ ಹಾರಿಸಿದ ಯುವಕನ ಮೇಲೆ ಹಲ್ಲೆ : ಕರವೇ ಪ್ರತಿಭಟನೆ</title>
		<link>https://peepalmedia.com/attack-on-youth-who-waved-kannada-flag-karaway-protest/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 01 Dec 2022 10:03:05 +0000</pubDate>
				<category><![CDATA[ಬೆಳಗಾವಿ]]></category>
		<category><![CDATA[BELAGAVI]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[karnataka rakshana vedhike]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[protest]]></category>
		<category><![CDATA[writing]]></category>
		<guid isPermaLink="false">https://peepalmedia.com/?p=17167</guid>

					<description><![CDATA[ಬೆಳಗಾವಿ: ಅಂತರ್‌ ಕಾಲೇಜು ಉತ್ಸವದಲ್ಲಿ ಕನ್ನಡ ಧ್ವಜವನ್ನು ಹಾರಿಸಿದ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದು, ಈ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಗಳು ಗುರುವಾರ ಪ್ರತಿಭಟನೆ ನಡೆಸಿದೆ. ಬೆಳಗಾವಿಯ ಗೋಗ್ಟೆ ಕಾಲೇಜ್‌ ಆಫ್‌ ಕಾಮರ್ಸ್‌ʼನ ಶ್ರೇಯಸ್‌ ಎಂಬ ವಿದ್ಯಾರ್ಥಿ ಕರ್ನಾಟಕದ ಕನ್ನಡ ಧ್ವಜವನ್ನು ಹಾರಿಸಿದ್ದು, ನಂತರ ಅಲ್ಲಿನ ಇತರೆ ವಿದ್ಯಾರ್ಥಿಗಳು ಆತನನ್ನು ಇದ್ದಕ್ಕಿದ್ದ ಹಾಗೆ ಥಳಿಸಿ ಹಲ್ಲೆ ಮಾಡಿರುವ ವಿಡಿಯೋ ವೈರಲ್‌ ಆಗುತ್ತಿದ್ದು, ಈ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಮತ್ತು ಕನ್ನಡ [&#8230;]]]></description>
										<content:encoded><![CDATA[
<p><strong>ಬೆಳಗಾವಿ: </strong>ಅಂತರ್‌ ಕಾಲೇಜು ಉತ್ಸವದಲ್ಲಿ ಕನ್ನಡ ಧ್ವಜವನ್ನು ಹಾರಿಸಿದ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದು, ಈ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಗಳು ಗುರುವಾರ ಪ್ರತಿಭಟನೆ ನಡೆಸಿದೆ.</p>



<p>ಬೆಳಗಾವಿಯ ಗೋಗ್ಟೆ ಕಾಲೇಜ್‌ ಆಫ್‌ ಕಾಮರ್ಸ್‌ʼನ ಶ್ರೇಯಸ್‌ ಎಂಬ ವಿದ್ಯಾರ್ಥಿ ಕರ್ನಾಟಕದ ಕನ್ನಡ ಧ್ವಜವನ್ನು ಹಾರಿಸಿದ್ದು, ನಂತರ ಅಲ್ಲಿನ ಇತರೆ ವಿದ್ಯಾರ್ಥಿಗಳು ಆತನನ್ನು ಇದ್ದಕ್ಕಿದ್ದ ಹಾಗೆ ಥಳಿಸಿ ಹಲ್ಲೆ ಮಾಡಿರುವ ವಿಡಿಯೋ ವೈರಲ್‌ ಆಗುತ್ತಿದ್ದು, ಈ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಮತ್ತು ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.</p>



<p>ಈ ಕುರಿತು ಮಾತನಾಡಿದ ಕರವೇ ಸದಸ್ಯ ದೀಪಕ್‌ ಗುಡಗಾ ಅವರು, ʼಕನ್ನಡ ಧ್ವಜವನ್ನು ಹಾರಿಸಿದಕ್ಕಾಗಿ ಬೇರೆ ಭಾಷಾ ವಿದ್ಯಾರ್ಥಿ ಗುಂಪುಗಳು ಶ್ರೇಯಸ್‌ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಇದಲ್ಲದೆ, ಬೆಳಗಾವಿಯ ಅನೇಕ ಕಾಲೇಜುಗಳಲ್ಲಿ ಮರಾಠಿ ಮಾತನಾಡುವ ಜನರ ಪ್ರಾಬಲ್ಯ ಹೊಂದಿದ್ದು, ಈ ಹಿಂದೆಯೂ ಕನ್ನಡ ಸಂಸ್ಕೃತಿ ಮತ್ತು ಕನ್ನಡಿಗರನ್ನು ಅವಮಾನಿಸಿರುವ ಘಟನೆಗಳು ವರದಿಯಾಗಿವೆʼ ಎಂದು ಹೇಳಿದ್ದಾರೆ. ಈ ರೀತಿ ಯುವಕನನ್ನು ಥಳಿಸಿದ ದುಷ್ಕರ್ಮಿಗಳಿಗೆ ಶಿಕ್ಷೆ ಆಗುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಗುಲಾಗ್‌ ಹೇಳಿದ್ದಾರೆ.</p>



<p>ಈ ಕುರಿತು ಕನ್ನಡ ಪರ ಸಂಘಟನೆಗಳು ದೂರು ದಾಖಲಿಸಲು ಪೊಲೀಸ್‌ ಠಾಣೆಗೆ ಹೊರಟಾಗ, ಘಟನೆಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸ್‌ ಇಲಾಖೆಯ ಮೂಲಗಳು ತಿಳಿಸುತ್ತಿದ್ದು, ಈ ಕುರಿತು ಮಾತನಾಡಿರುವ ಪೊಲೀಸ್‌ ಅಧಿಕಾರಿಯೊಬ್ಬರು, ʼಇದು ಉತ್ಸವದ ಸಮಯದಲ್ಲಿ ಸಂಗೀತದೊಂದಿಗೆ ಮುಳುಗಿರುವಾಗ ಕಾಲ್ತುಳಿತದ ಕಾರಣದಿಂದ ಉಂಟಾಗಿರುವ ಘರ್ಷಣೆ ಇರುಬಹುದು. ವಿದ್ಯಾರ್ಥಿಯ ಮೇಲೆ ಯಾತಕ್ಕಾಗಿ ಹಲ್ಲೆ ನಡೆಸಿದ್ದಾರೆ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ನಾವು ತನಿಖೆ ಶುರು ಮಾಡಿದ ನಂತರ ಸ್ಪಷ್ಟತೆ ಸಿಗುತ್ತದೆʼ ಎಂದು ತಿಳಿಸಿದ್ದಾರೆ.</p>



<p>ದಾಳಿಕೋರರಲ್ಲಿ ಒಬ್ಬರು ಕನ್ನಡಿಗ ಎಂಬ ವರದಿಗಳು ಬರುತ್ತಿವೆ ಮತ್ತು ಈ ಘಟನೆಗೆ ಸಂಬಂಧಪಟ್ಟಂತೆ ಯಾವುದೇ &nbsp;ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಸ್ಪಷ್ಟ ವರದಿಯೊಂದಿಗೆ ಬರುವವರೆಗೆ ನಾವು ಕಾಯಬೇಕಾಗಿದೆ&#8221; ಎಂದು ಬೆಳಗಾವಿ ಮೂಲದ ಸಾಮಾಜಿಕ ಕಾರ್ಯಕರ್ತ ಅಶೋಕ್ ಚಂದರಗಿಯವರು ಹೇಳಿದ್ದಾರೆ.</p>



<p>ಬೆಳಗಾವಿಯಲ್ಲಿ ಗೋಗ್ಟೆ ಕಾಲೇಜ್ ಆಫ್ ಕಾಮರ್ಸ್ ಸೇರಿದಂತೆ ಹಲವಾರು ಸಂಸ್ಥೆಗಳನ್ನು ನಡೆಸುತ್ತಿರುವ ಕರ್ನಾಟಕ ಲಾ ಸೊಸೈಟಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಲು ಗುರುವಾರ ಸಂಜೆ ಕಾಲೇಜು ಸದಸ್ಯರೊಂದಿಗೆ ಸಭೆ ನಡೆಸುವ ನಿರೀಕ್ಷೆಯಿದೆ.</p>
]]></content:encoded>
					
		
		
			</item>
		<item>
		<title>ಕರವೇ ರಾಜ್ಯೋತ್ಸವ: ಕನ್ನಡವನ್ನು ಪ್ರೀತಿಸಿ, ಬಳಸಿ</title>
		<link>https://peepalmedia.com/karave-rajyothsava-kannadavannu-preethisi-balasalu-kare/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 01 Nov 2022 07:59:23 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[kannada rajyothsava]]></category>
		<category><![CDATA[karnataka]]></category>
		<category><![CDATA[karnataka rakshana vedhike]]></category>
		<category><![CDATA[meghana]]></category>
		<category><![CDATA[news]]></category>
		<category><![CDATA[november 1st]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=13571</guid>

					<description><![CDATA[ಬೆಂಗಳೂರು: ಕರ್ನಾಟಕದ ಜನತೆಗೆ ನವೆಂಬರ್ 1 ಹೆಮ್ಮೆಯ ದಿನವಾಗಿದೆ. ಪ್ರತಿ ವರ್ಷ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಬಹಳ ಅದ್ಧೂರಿಯಿಂದ ಆಚರಣೆ ಮಾಡಲಾಗುತ್ತದೆ. ಪ್ರತಿ ವರ್ಷದಂತೆ ಇಂದು ಅಂದರೆ ನವೆಂಬರ್ 1ನೇ ತಾರೀಖು ಕೂಡ ಕರವೇ ಮುಖ್ಯ ಕಛೇರಿ ಬಳಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯ್ತು. ಗಾಂಧಿನಗರದ ಕಚೇರಿಯ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ‌ ಮಾತನಾಡಿದ ಅವರು ಕನ್ನಡವು ಪ್ರತಿಯೊಬ್ಬ ಕನ್ನಡಿಗರ ಹೃದಯದ ಭಾಷೆಯಾಗಬೇಕು ಎಂದರು. ಧ್ವಜಾರೋಹಣ [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು</strong>: ಕರ್ನಾಟಕದ ಜನತೆಗೆ ನವೆಂಬರ್ 1 ಹೆಮ್ಮೆಯ ದಿನವಾಗಿದೆ. ಪ್ರತಿ ವರ್ಷ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಬಹಳ ಅದ್ಧೂರಿಯಿಂದ ಆಚರಣೆ ಮಾಡಲಾಗುತ್ತದೆ. ಪ್ರತಿ ವರ್ಷದಂತೆ ಇಂದು ಅಂದರೆ ನವೆಂಬರ್ 1ನೇ ತಾರೀಖು ಕೂಡ ಕರವೇ ಮುಖ್ಯ ಕಛೇರಿ ಬಳಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯ್ತು.</p>



<p style="font-size:20px">ಗಾಂಧಿನಗರದ ಕಚೇರಿಯ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ‌ ಮಾತನಾಡಿದ ಅವರು ಕನ್ನಡವು ಪ್ರತಿಯೊಬ್ಬ ಕನ್ನಡಿಗರ ಹೃದಯದ ಭಾಷೆಯಾಗಬೇಕು ಎಂದರು.</p>



<p style="font-size:20px">ಧ್ವಜಾರೋಹಣ ಮಾಡಿ ಮಾತನಾಡಿದ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ‌ರಾದ ಡಾ.ಸಿ.ಎನ್.ಮಂಜುನಾಥ್ ಅವರು, ನಮ್ಮದು ವೈಭವದ ಪರಂಪರೆಯ ನಾಡು, ನಾವು ಎಷ್ಟೇ ದೊಡ್ಡವರಾದರೂ ಎಲ್ಲೇ ಇದ್ದರೂ ಕನ್ನಡವನ್ನು ಪ್ರೀತಿಸಬೇಕು, ಕನ್ನಡವನ್ನೇ ಬಳಸಬೇಕು ಎಂದು ತಿಳಿಸಿದರು.</p>



<p style="font-size:20px">ಜಯದೇವ ಆಸ್ಪತ್ರೆಯಲ್ಲಿ ರಾಜ್ಯೋತ್ಸವವನ್ನು ನಾವು ವಿಶಿಷ್ಠ ರೀತಿಯಿಂದ ಆಚರಿಸಿದೆವು. 41 ವರ್ಷದ ಕೂಲಿ ಕಾರ್ಮಿಕನೊಬ್ಬನಿಗೆ ಹೃದಯ ಕಸಿ (ಟ್ರಾನ್ಸ್ ಪ್ಲಾಂಟ್) ಮಾಡಿದೆವು. ಇಂಥ ಸಂಭ್ರಮಗಳು ನಮಗೆ ಸಾರ್ಥಕ ಭಾವ ಮೂಡಿಸುತ್ತವೆ ಎಂದು ತಿಳಿಸಿದರು.</p>



<p style="font-size:20px">ಕನ್ನಡದ ಬಳಕೆಯೇ ಕಡಿಮೆಯಾಗಿ ಇಂಗ್ಲಿಷ್ ಮೆರೆಯುತ್ತಿದ್ದಾಗ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಉಳಿಸುವ ಕೆಲಸ ಮಾಡುತ್ತಿದೆ. ಬೆಂಗಳೂರಿನಲ್ಲಿ ಇಂದು ಕನ್ನಡ ಉಳಿದಿದೆ ಎಂದರೆ ಅದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕಾರಣ ಎಂದರು. ಕರವೇ ಮುಖಂಡರು, ಕಾರ್ಯಕರ್ತರ ಹೃದಯಗಳು ಪ್ರತಿನಿತ್ಯ ಕನ್ನಡಿಗರಿಗಾಗಿ, ಕರ್ನಾಟಕಕ್ಕಾಗಿ ಮಿಡಿಯುತ್ತಿವೆ. ಅದು ಸಂತೋಷದ ವಿಷಯ ಎಂದು ತಿಳಿಸಿದರು.</p>



<p style="font-size:20px">ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಅಧ್ಯಕ್ಷತೆ ವಹಿಸಿ‌ ಮಾತನಾಡಿ‌ ಎಸ್ ಎಸ್ ಸಿ ಪರೀಕ್ಷೆಗಳು ಕನ್ನಡದಲ್ಲೇ ನಡೆಯಬೇಕು, ಕನ್ನಡಿಗರಿಗೆ ಉದ್ಯೋಗ ನಡೆಯಬೇಕು, ಇಲ್ಲವಾದಲ್ಲಿ ಸರ್ಕಾರ ತೀವ್ರ ರೂಪದ ಪ್ರತಿಭಟನೆ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದರು.</p>



<p style="font-size:20px">ದೇಶ ಒಂದೇ ನಮ್ಮದು, ಭಾಷೆಯೂ ಒಂದೇ ಎಂಬುದನ್ನು ನಾವು ಒಪ್ಪುವುದಿಲ್ಲ, ಇದು ಹಿಂದಿ ದೇಶವಲ್ಲ‌. ಬಹುಭಾಷೆಗಳ ದೇಶವಾಗಿದ್ದು,ಎಸ್ ಎಸ್ ಸಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷ್ ನಲ್ಲಿ ಮಾತ್ರ ನಡೆಸುತ್ತಿರುವುದು ಸರಿಯಲ್ಲ. ನಾವು ಈಗಾಗಲೇ ಇದರ ವಿರುದ್ಧ ಪ್ರತಿಭಟನೆ ನಡೆಸಿ ಕನ್ನಡದಲ್ಲೂ ಪರೀಕ್ಷೆ ನಡೆಸಲು ಆಗ್ರಹಿಸಿದ್ದೇವೆ ಎಂದರು.</p>



<p style="font-size:20px">ಈಗ ಕೇಂದ್ರ ಸರ್ಕಾರದ ಇಲಾಖೆಗಳ ಕಾನ್ಸ್‌ಟೇಬಲ್ ಹುದ್ದೆಗಳನ್ನೂ ಸಹ ಕೇವಲ ಹಿಂದಿ, ಇಂಗ್ಲಿಷ್ ನಲ್ಲಿ ನಡೆಸಲಾಗುತ್ತಿದೆ. ಇದನ್ನು ಒಪ್ಪುವುದು ಸಾಧ್ಯವಿಲ್ಲ.<br>ಒಡೆದು ಚೂರಾಗಿದ್ದ ಕನ್ನಡ ನಾಡು ಒಂದಾದ ದಿನವನ್ನು ನಾವು ಕನ್ನಡ ರಾಜ್ಯೋತ್ಸವವಾಗಿ ಆಚರಿಸುತ್ತೇವೆ. ಆದರೆ ಇನ್ನೂ ಕನ್ನಡಿಗರ ಸಮಸ್ಯೆಗಳು ಪರಿಹಾರವಾಗದೇ ಇರುವುದು ನೋವಿನ ವಿಷಯ ಎಂದು ಹೇಳಿದರು.</p>



<p style="font-size:20px">ಕಾರ್ಯಕ್ರಮದಲ್ಲಿ ಖ್ಯಾತ ನಟಿ‌‌ ಮೇಘನಾ ರಾಜ್ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಲಕ್ಷ್ಮಣ ನಿಂಬರ್ಗಿ ಅವರು ಭಾಗವಹಿಸಿದ್ದರು.</p>
]]></content:encoded>
					
		
		
			</item>
	</channel>
</rss>
