<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>karnataka &#8211; Peepal Media</title>
	<atom:link href="https://peepalmedia.com/tag/karnataka/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 17 Apr 2026 11:04:02 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.9.4</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>karnataka &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಮೈತೊಳೆಯಲು ಕೆರೆಗೆ ಇಳಿದಿದ್ದ ಇಬ್ಬರು ನೀರಿನಲ್ಲಿ ಮುಳುಗಿ ದುರ್ಮರಣ</title>
		<link>https://peepalmedia.com/two-people-drowned-while-bathing-in-a-lake/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Fri, 17 Apr 2026 11:04:02 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=77285</guid>

					<description><![CDATA[ಹಾಸನ:&#160; ಜಿಲ್ಲೆಯ&#160; ಅರಸೀಕೆರೆ ತಾಲೂಕಿನ ಜಾವಗಲ್‌ನಲ್ಲಿ ಕುರಿಯನ್ನು ಮೈತೊಳೆಯಲು ಕೆರೆಗೆ ಇಳಿದಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ದುರ್ಮರಣ ಹೊಂದಿದ್ದಾರೆ. ಇಮ್ರಾನ್ (15) ಹಾಗೂ ಯಾಸಿನ್ (13) ಮೃತಪಟ್ಟ ದುರ್ದೈವಿಗಳು. ಇಮ್ರಾನ್ ಹತ್ತನೇ ತರಗತಿ, ಯಾಸಿನ್ ಎಂಟನೇ ತರಗತಿಯಲ್ಲಿ ಓದುತ್ತಿದ್ದರು. ಶಾಲೆಗೆ ರಜೆ ಇದ್ದ ಕಾರಣ ಸಾಕಿದ್ದ ಕುರಿಯನ್ನು ಮೈತೊಳೆಯಲು ಜಾವಗಲ್ ದೊಡ್ಡ ಕೆರೆಗೆ ತೆರಳಿದ್ದ ವೇಳೆ, ಆಕಸ್ಮಿಕವಾಗಿ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆಯ ಬಳಿಕ ಕುರಿಗಾಹಿಗಳ ಸಹಾಯದಿಂದ ಸ್ಥಳೀಯರು ಮೃತದೇಹಗಳನ್ನು ಕೆರೆಯಿಂದ ಹೊರತೆಗೆದರು.]]></description>
										<content:encoded><![CDATA[
<p><strong>ಹಾಸನ:</strong>&nbsp; ಜಿಲ್ಲೆಯ&nbsp; ಅರಸೀಕೆರೆ ತಾಲೂಕಿನ ಜಾವಗಲ್‌ನಲ್ಲಿ ಕುರಿಯನ್ನು ಮೈತೊಳೆಯಲು ಕೆರೆಗೆ ಇಳಿದಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ದುರ್ಮರಣ ಹೊಂದಿದ್ದಾರೆ.</p>



<p>ಇಮ್ರಾನ್ (15) ಹಾಗೂ ಯಾಸಿನ್ (13) ಮೃತಪಟ್ಟ ದುರ್ದೈವಿಗಳು. ಇಮ್ರಾನ್ ಹತ್ತನೇ ತರಗತಿ, ಯಾಸಿನ್ ಎಂಟನೇ ತರಗತಿಯಲ್ಲಿ ಓದುತ್ತಿದ್ದರು. ಶಾಲೆಗೆ ರಜೆ ಇದ್ದ ಕಾರಣ ಸಾಕಿದ್ದ ಕುರಿಯನ್ನು ಮೈತೊಳೆಯಲು ಜಾವಗಲ್ ದೊಡ್ಡ ಕೆರೆಗೆ ತೆರಳಿದ್ದ ವೇಳೆ, ಆಕಸ್ಮಿಕವಾಗಿ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.</p>



<p>ಘಟನೆಯ ಬಳಿಕ ಕುರಿಗಾಹಿಗಳ ಸಹಾಯದಿಂದ ಸ್ಥಳೀಯರು ಮೃತದೇಹಗಳನ್ನು ಕೆರೆಯಿಂದ ಹೊರತೆಗೆದರು.</p>
]]></content:encoded>
					
		
		
			</item>
		<item>
		<title>ಮೋನಿಕಾ ಅಂಗಾಂಗ ದಾನದಿಂದ ಐದು ಜೀವಗಳಿಗೆ ಮರುಜೀವ &#8211; ಅಂತಿಮ ಯಾತ್ರೆಗೆ ಜನಸಾಗರ</title>
		<link>https://peepalmedia.com/monicas-organ-donation-brings-life-to-five-lives-monica/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Fri, 17 Apr 2026 09:38:33 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=77280</guid>

					<description><![CDATA[ಅರಸೀಕೆರೆ : ನಗರದ ಕಾರೆಹಳ್ಳಿ ನಿವಾಸಿಯಾದ ಮೋನಿಕಾ ಅವರು  ರಸ್ತೆ ಅಪಘಾತದಲ್ಲಿ ಮೆದುಳು ಸಾವು ಸಂಭವಿಸಿ ನಿಧನರಾಗಿದ್ದರು.  ಸಾವಿನಲ್ಲೂ ಸಾರ್ಥಕತೆ ಮೆರೆದ ಅವರು, ಅಂಗಾಂಗ ದಾನದ ಮೂಲಕ ಐದುಕ್ಕೂ ಹೆಚ್ಚು ಜನರಿಗೆ ಮರುಜೀವ ನೀಡಿದರು. ಇಂದು ಅರಸೀಕೆರೆ ಪ್ರವಾಸಿ ಮಂದಿರದಿಂದ ಬಿಹೆಚ್ ರಸ್ತೆಯ ಮೂಲಕ ಮೆರವಣಿಗೆಯಲ್ಲಿ ಮೋನಿಕಾ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮ ಕಾರೆಹಳ್ಳಿಗೆ ಸಾವಿರಾರು ಜನರ ಸಮ್ಮುಖದಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಅರಸೀಕೆರೆ ದಂಡಾಧಿಕಾರಿ ಸಂತೋಷ್ ಕುಮಾರ್ ಹಾಗೂ ಇತರ ಅಧಿಕಾರಿಗಳು, ಸಮಾಜದ ಮುಖಂಡರು ಮತ್ತು ಗ್ರಾಮಸ್ಥರು [&#8230;]]]></description>
										<content:encoded><![CDATA[
<p><strong>ಅರಸೀಕೆರೆ :</strong> ನಗರದ ಕಾರೆಹಳ್ಳಿ ನಿವಾಸಿಯಾದ ಮೋನಿಕಾ ಅವರು  ರಸ್ತೆ ಅಪಘಾತದಲ್ಲಿ ಮೆದುಳು ಸಾವು ಸಂಭವಿಸಿ ನಿಧನರಾಗಿದ್ದರು.  ಸಾವಿನಲ್ಲೂ ಸಾರ್ಥಕತೆ ಮೆರೆದ ಅವರು, ಅಂಗಾಂಗ ದಾನದ ಮೂಲಕ ಐದುಕ್ಕೂ ಹೆಚ್ಚು ಜನರಿಗೆ ಮರುಜೀವ ನೀಡಿದರು.</p>



<p>ಇಂದು ಅರಸೀಕೆರೆ ಪ್ರವಾಸಿ ಮಂದಿರದಿಂದ ಬಿಹೆಚ್ ರಸ್ತೆಯ ಮೂಲಕ ಮೆರವಣಿಗೆಯಲ್ಲಿ ಮೋನಿಕಾ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮ ಕಾರೆಹಳ್ಳಿಗೆ ಸಾವಿರಾರು ಜನರ ಸಮ್ಮುಖದಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಅರಸೀಕೆರೆ ದಂಡಾಧಿಕಾರಿ ಸಂತೋಷ್ ಕುಮಾರ್ ಹಾಗೂ ಇತರ ಅಧಿಕಾರಿಗಳು, ಸಮಾಜದ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಮೋನಿಕಾ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಸಾವಿರಾರು ನಾಗರಿಕರು ಭಾವಪೂರ್ಣವಾಗಿ ಪ್ರಾರ್ಥಿಸಿದರು.</p>



<p><a href="https://janamitra.co/#facebook" rel="noreferrer noopener" target="_blank"></a></p>
]]></content:encoded>
					
		
		
			</item>
		<item>
		<title>ಬೇಲೂರು ಅಪಘಾತ , ಬಾಲಕಿ ಸಾ*ವು &#8211; ಮೃತರ ಸಂಖ್ಯೆ ಏಳಕ್ಕೆ ಏರಿಕೆ</title>
		<link>https://peepalmedia.com/belur-accident-girl-dies-death-toll-rises-to-seven/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Fri, 17 Apr 2026 09:33:34 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜ್ಯ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=77277</guid>

					<description><![CDATA[ಬೇಲೂರು :&#160;ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಮಂತ್ರಾಲಯದ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 16 ವರ್ಷದ ಬಾಲಕಿ ತೇಜಸ್ವಿನಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ತೇಜಸ್ವಿನಿ ಬೇಲೂರು ತಾಲ್ಲೂಕಿನ ಶೆಟ್ಟಿಗೆರೆ ಗ್ರಾಮದ ನಿವಾಸಿಯಾಗಿದ್ದು, ಲೋಲಾಕ್ಷಿ ಅವರ ಪುತ್ರಿಯಾಗಿದ್ದಾರೆ. ಈ ಘಟನೆಯಲ್ಲಿ ನಿನ್ನೆ ತೇಜಸ್ವಿನಿ ಅವರ ತಾಯಿ ಲೋಲಾಕ್ಷಿ ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದರು. ಇʼದೀಗ ತೇಜಸ್ವಿನಿಯ ಸಾವಿನಿಂದಾಗಿ ಈ ದುರ್ಘಟನೆಯಲ್ಲಿ ಮೃತಪಟ್ಟವರ [&#8230;]]]></description>
										<content:encoded><![CDATA[
<p><strong>ಬೇಲೂರು :</strong>&nbsp;ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಮಂತ್ರಾಲಯದ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.</p>



<p>ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 16 ವರ್ಷದ ಬಾಲಕಿ ತೇಜಸ್ವಿನಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ತೇಜಸ್ವಿನಿ ಬೇಲೂರು ತಾಲ್ಲೂಕಿನ ಶೆಟ್ಟಿಗೆರೆ ಗ್ರಾಮದ ನಿವಾಸಿಯಾಗಿದ್ದು, ಲೋಲಾಕ್ಷಿ ಅವರ ಪುತ್ರಿಯಾಗಿದ್ದಾರೆ. ಈ ಘಟನೆಯಲ್ಲಿ ನಿನ್ನೆ ತೇಜಸ್ವಿನಿ ಅವರ ತಾಯಿ ಲೋಲಾಕ್ಷಿ ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದರು. ಇʼದೀಗ ತೇಜಸ್ವಿನಿಯ ಸಾವಿನಿಂದಾಗಿ ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.ಈ ದಾರುಣ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.</p>
]]></content:encoded>
					
		
		
			</item>
		<item>
		<title>ಪಿಯು ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಪ‍ಠ್ಯಪುಸ್ತಕ ಉಚಿತ</title>
		<link>https://peepalmedia.com/textbooks-to-be-free-for-pu-students-from-this-year/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 15 Apr 2026 08:26:39 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=77166</guid>

					<description><![CDATA[ಬೆಂಗಳೂರು : ರಾಜ್ಯ ಸರ್ಕಾರ(Government )ಪಿಯುಸಿ ವಿದ್ಯಾರ್ಥಿಗಳಿಗೆ (puc students ) ಗುಡ್​ ನ್ಯೂಸ್​ ನೀಡಿದೆ. 2026–27ನೇ ಸಾಲಿನಿಂದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ನೀಡಲು ನಿರ್ಧಾರ ಮಾಡಿದೆ. ಉಚಿತ ಪಠ್ಯಪುಸ್ತಕ ಯೋಜನೆ 10ನೇ ತರಗತಿಯವರೆಗೆ ಮಾತ್ರ ಸೀಮಿತವಾಗಿತ್ತು. ಈಗ ಈ ಯೋಜನೆಯನ್ನು ಪಿಯು ಮಟ್ಟಕ್ಕೂ ವಿಸ್ತರಿಸಲಾಗುತ್ತಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಬಹಳ ದೊಡ್ಡ ಅನುಕೂಲವಾಗಲಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳ ಪೋಷಕರಿಗೆ ಮಕ್ಕಳ ಶಿಕ್ಷಣ ವೆಚ್ಚ ದೊಡ್ಡ ಸಮಸ್ಯೆಯಾಗಿರುತ್ತದೆ. ಹೀಗಾಗಿ ಪಿಯುಸಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡುವ ನಿರ್ಧಾರ [&#8230;]]]></description>
										<content:encoded><![CDATA[
<p><strong>ಬೆಂಗಳೂರು : </strong>ರಾಜ್ಯ ಸರ್ಕಾರ(Government )ಪಿಯುಸಿ ವಿದ್ಯಾರ್ಥಿಗಳಿಗೆ (puc students ) ಗುಡ್​ ನ್ಯೂಸ್​ ನೀಡಿದೆ. 2026–27ನೇ ಸಾಲಿನಿಂದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ನೀಡಲು ನಿರ್ಧಾರ ಮಾಡಿದೆ.</p>



<p>ಉಚಿತ ಪಠ್ಯಪುಸ್ತಕ ಯೋಜನೆ 10ನೇ ತರಗತಿಯವರೆಗೆ ಮಾತ್ರ ಸೀಮಿತವಾಗಿತ್ತು. ಈಗ ಈ ಯೋಜನೆಯನ್ನು ಪಿಯು ಮಟ್ಟಕ್ಕೂ ವಿಸ್ತರಿಸಲಾಗುತ್ತಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಬಹಳ ದೊಡ್ಡ ಅನುಕೂಲವಾಗಲಿದೆ.</p>



<p>ವಿಶೇಷವಾಗಿ ಗ್ರಾಮೀಣ ಪ್ರದೇಶಗಳ ಪೋಷಕರಿಗೆ ಮಕ್ಕಳ ಶಿಕ್ಷಣ ವೆಚ್ಚ ದೊಡ್ಡ ಸಮಸ್ಯೆಯಾಗಿರುತ್ತದೆ. ಹೀಗಾಗಿ ಪಿಯುಸಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡುವ ನಿರ್ಧಾರ ಕೈಗೊಂಡಿದೆ.</p>



<p>ಕರ್ನಾಟಕದಲ್ಲಿ ಪ್ರಸ್ತುತ 1,319 ಸರ್ಕಾರಿ ಪಿಯು ಕಾಲೇಜುಗಳು ಮತ್ತು 815 ಅನುದಾನಿತ ಪಿಯು ಕಾಲೇಜುಗಳಿವೆ. ಈ ಕಾಲೇಜುಗಳಲ್ಲಿ ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಯೋಜನೆಯಡಿ ಒಟ್ಟು 34 ವಿಷಯಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುತ್ತದೆ.</p>



<p>1ರಿಂದ 12ನೇ ತರಗತಿಯವರೆಗಿನ ಪಠ್ಯಪುಸ್ತಕಗಳು ಮತ್ತು ಕಾರ್ಯಪುಸ್ತಕಗಳ ವಿತರಣೆಗೆ ಶಿಕ್ಷಣ ಇಲಾಖೆ ಒಟ್ಟು 30.83 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಸರ್ಕಾರ ಈಗ ಈ ಮೊತ್ತವನ್ನು ಅನುಮೋದಿಸಿದ್ದು, ಯೋಜನೆ ಜಾರಿಗೆ ಬರುತ್ತಿದೆ.</p>
]]></content:encoded>
					
		
		
			</item>
		<item>
		<title>ಇಬ್ಬರು ಪಿಯು ವಿದ್ಯಾರ್ಥಿನಿಯರು ನಾಪತ್ತೆ ಬರೋಬ್ಬರಿ 75 ದಿನಗಳು ಕಳೆದರು ಸುಳಿವಿಲ್ಲ</title>
		<link>https://peepalmedia.com/two-pu-students-missing-for-75-days-no-trace-found/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 15 Apr 2026 08:21:48 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=77163</guid>

					<description><![CDATA[ಬೆಂಗಳೂರು : ಬೆಂಗಳೂರಿನ (Bengaluru) ವಿದ್ಯಾರಣ್ಯಪುರದ (Vidyaranyapura) ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು (PUC Students) ನಾಪತ್ತೆಯಾಗಿ (Missing Case) ಬರೋಬ್ಬರಿ 75 ದಿನಗಳು ಕಳೆದಿದ್ದರೂ ಅವರ ಬಗ್ಗೆ ಯಾವುದೇ ಸುಳಿವು ಸಿಗದಿರುವುದು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ ತನಿಷ್ಕಾ ಹಾಗೂ ಆಕೆಯ ಜ್ಯೂನಿಯರ್ ತೇಜಸ್ವಿನಿ ಕಳೆದ ಜನವರಿ 31 ರಂದು ಮನೆಯಿಂದ ಹೊರಟವರು ಇಂದಿಗೂ ಪತ್ತೆಯಾಗಿಲ್ಲ. ಈ ಪ್ರಕರಣ ಈಗ ಪೊಲೀಸರಿಗೂ ದೊಡ್ಡ ಸವಾಲಾಗಿ ಪರಿಣಮಿಸಿದೆ. ವಿದ್ಯಾರ್ಥಿನಿಯರ ಪತ್ತೆಗಾಗಿ ಪೊಲೀಸರು 10 ಜನರ [&#8230;]]]></description>
										<content:encoded><![CDATA[
<p><strong>ಬೆಂಗಳೂರು :</strong> ಬೆಂಗಳೂರಿನ (Bengaluru) ವಿದ್ಯಾರಣ್ಯಪುರದ (Vidyaranyapura) ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು (PUC Students) ನಾಪತ್ತೆಯಾಗಿ (Missing Case) ಬರೋಬ್ಬರಿ 75 ದಿನಗಳು ಕಳೆದಿದ್ದರೂ ಅವರ ಬಗ್ಗೆ ಯಾವುದೇ ಸುಳಿವು ಸಿಗದಿರುವುದು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ ತನಿಷ್ಕಾ ಹಾಗೂ ಆಕೆಯ ಜ್ಯೂನಿಯರ್ ತೇಜಸ್ವಿನಿ ಕಳೆದ ಜನವರಿ 31 ರಂದು ಮನೆಯಿಂದ ಹೊರಟವರು ಇಂದಿಗೂ ಪತ್ತೆಯಾಗಿಲ್ಲ. ಈ ಪ್ರಕರಣ ಈಗ ಪೊಲೀಸರಿಗೂ ದೊಡ್ಡ ಸವಾಲಾಗಿ ಪರಿಣಮಿಸಿದೆ.</p>



<p>ವಿದ್ಯಾರ್ಥಿನಿಯರ ಪತ್ತೆಗಾಗಿ ಪೊಲೀಸರು 10 ಜನರ ವಿಶೇಷ ತಂಡವನ್ನು ರಚಿಸಿ ಮುಂಬೈ, ಚೆನೈ, ದೆಹಲಿ, ಕಾಶಿ ಸೇರಿದಂತೆ ದೇಶದ 100ಕ್ಕೂ ಹೆಚ್ಚು ನಗರಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ವಿಶೇಷವೆಂದರೆ, ನಾಪತ್ತೆಯಾದ ವಿದ್ಯಾರ್ಥಿನಿಯರು ತಮ್ಮ ಮೊಬೈಲ್ ಫೋನ್ ಬಳಸುತ್ತಿಲ್ಲ ಮತ್ತು ಯಾವುದೇ ಎಟಿಎಂ ಕಾರ್ಡ್‌ಗಳನ್ನು ಉಪಯೋಗಿಸುತ್ತಿಲ್ಲ. ಕುಟುಂಬಸ್ಥರು ಅಥವಾ ಸ್ನೇಹಿತರನ್ನೂ ಅವರು ಸಂಪರ್ಕಿಸಿಲ್ಲ.</p>



<p>ಇವರು ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದವರೆಗೂ ಹೋಗಿದ್ದ ಬಗ್ಗೆ ಆರಂಭದಲ್ಲಿ ಸುಳಿವು ಸಿಕ್ಕಿತ್ತಾದರೂ, ಪೊಲೀಸರು ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಅಲ್ಲಿಂದಲೂ ನಾಪತ್ತೆಯಾಗಿದ್ದರು. ಕೈಯಲ್ಲಿ ಕೇವಲ ಮೂರು ಸಾವಿರ ರೂಪಾಯಿ ಹಿಡಿದು ಹೊರಟ ಇಬ್ಬರು ಹುಡುಗಿಯರು ಇಷ್ಟು ದಿನಗಳ ಕಾಲ ಯಾರಿಗೂ ಸಿಗದಂತೆ ಹೇಗೆ ವಾಸಿಸುತ್ತಿದ್ದಾರೆ ಎಂಬುದು ಈಗ ಯಕ್ಷಪ್ರಶ್ನೆಯಾಗಿದೆ.</p>



<p>ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯವಿರುವುದರಿಂದ, ಇವರು ಆಧಾರ್ ಕಾರ್ಡ್ ಬಳಸಿ ಬಸ್ಸುಗಳಲ್ಲಿ ಪ್ರಯಾಣಿಸುತ್ತಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಪರೀಕ್ಷೆಯ ಭಯದಿಂದ ಅಥವಾ ಬೇರೆ ಯಾವುದಾದರೂ ಕಾರಣಕ್ಕೆ ಇವರು ಮನೆ ಬಿಟ್ಟಿರಬಹುದು ಎಂದು ಊಹಿಸಲಾಗಿದೆ.</p>



<p>ಪೊಲೀಸರು ಎಷ್ಟು ಹುಡುಕಿದರೂ ಸುಳಿವು ಸಿಗದ ಕಾರಣ, ಪೋಷಕರು ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಬಾಲಕಿಯರನ್ನು ಪತ್ತೆಹಚ್ಚಲು ಕೋರ್ಟ್ ನೀಡಿದ್ದ ಗಡುವು ಮುಗಿದು ಒಂದು ತಿಂಗಳು ಕಳೆದರೂ ವಿದ್ಯಾರ್ಥಿನಿಯರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ದಿನಗಳು ಉರುಳುತ್ತಿದ್ದಂತೆ ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಕಂಗಾಲಾಗಿದ್ದು, ಈ ನಿಗೂಢ ನಾಪತ್ತೆ ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ.</p>
]]></content:encoded>
					
		
		
			</item>
		<item>
		<title>ಜೈಭೀಮ್ ಹಬ್ಬಕ್ಕೆ ಹಾಸನ ಸಜ್ಜು ಭರ್ಜರಿ ಸಿದ್ಧತೆ &#8211; ಜೈಭೀಮ್ ಬ್ರಿಗೇಡ್ ಜಿಲ್ಲಾಧ್ಯಕ್ಷ ರಾಜೇಶ್ </title>
		<link>https://peepalmedia.com/hassan-is-fully-prepared-for-the-jaibhim-festival-jaibhim-brigade-district-president-rajesh/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 15 Apr 2026 08:16:20 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=77160</guid>

					<description><![CDATA[ಹಾಸನ:&#160;ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನೋತ್ಸವದ ಅಂಗವಾಗಿ ಏಪ್ರಿಲ್ 19ರಂದು ಭಾನುವಾರ ಮಧ್ಯಾಹ್ನ 1.00 ಗಂಟೆಗೆ ನಗರದ ಮಹಾವೀರ ಸರ್ಕಲ್‌ನಲ್ಲಿ ಜೈಭೀಮ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜೈಭೀಮ್ ಬ್ರಿಗೇಡ್ ಜಿಲ್ಲಾಧ್ಯಕ್ಷ ರಾಜೇಶ್ ಅವರು ತಿಳಿಸಿದರು. ಈ ಅಂಗವಾಗಿ ಸಾರ್ವಜನಿಕರಿಗೆ ಅನ್ನಸಂತರ್ಪಣಾ ಕಾರ್ಯಕ್ರಮ, ಅರ್ಹ ವಿಕಲಚೇತನರಿಗೆ ವೀಲ್‌ಚೇರ್ ವಿತರಣೆ, ಸಮಾಜ ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಹಮ್ಮಿಕೊಳ್ಳಲಾಗಿದೆ. ಒಟ್ಟು 10 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದರು. [&#8230;]]]></description>
										<content:encoded><![CDATA[
<p><strong>ಹಾಸನ:</strong>&nbsp;ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನೋತ್ಸವದ ಅಂಗವಾಗಿ ಏಪ್ರಿಲ್ 19ರಂದು ಭಾನುವಾರ ಮಧ್ಯಾಹ್ನ 1.00 ಗಂಟೆಗೆ ನಗರದ ಮಹಾವೀರ ಸರ್ಕಲ್‌ನಲ್ಲಿ ಜೈಭೀಮ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜೈಭೀಮ್ ಬ್ರಿಗೇಡ್ ಜಿಲ್ಲಾಧ್ಯಕ್ಷ ರಾಜೇಶ್ ಅವರು ತಿಳಿಸಿದರು.</p>



<p>ಈ ಅಂಗವಾಗಿ ಸಾರ್ವಜನಿಕರಿಗೆ ಅನ್ನಸಂತರ್ಪಣಾ ಕಾರ್ಯಕ್ರಮ, ಅರ್ಹ ವಿಕಲಚೇತನರಿಗೆ ವೀಲ್‌ಚೇರ್ ವಿತರಣೆ, ಸಮಾಜ ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಹಮ್ಮಿಕೊಳ್ಳಲಾಗಿದೆ. ಒಟ್ಟು 10 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದರು. ವೀಲ್‌ಚೇರ್ ಅಗತ್ಯವಿರುವ ವಿಕಲಚೇತನರು ಮುಂಚಿತವಾಗಿ ಸಂಘಕ್ಕೆ ಅರ್ಜಿ ಸಲ್ಲಿಸಿದರೆ ಪರಿಗಣಿಸಲಾಗುವುದು ಎಂದು ತಿಳಿಸಿದರು.</p>



<p>ಜೈಭೀಮ್ ಬ್ರಿಗೇಡ್ ಕಳೆದ ಹಲವು ವರ್ಷಗಳಿಂದ ಶೋಷಿತರ, ದಮನಿತರ ಪರ ಹೋರಾಟ ನಡೆಸುತ್ತಿದ್ದು, ಅಂಬೇಡ್ಕರ್ ಜಯಂತಿಯ ಅಂಗವಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ ಎಂದು ತಿಳಿಸಿದರು. ಈ ವರ್ಷ ವೀಲ್‌ಚೇರ್ ವಿತರಣೆ ಹಾಗೂ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಧನ ನೀಡುವ ಕಾರ್ಯಕ್ರಮ ಕೂಡ ಸೇರಿಸಲಾಗಿದೆ ಎಂದರು.ಸುಮಾರು 5000 ಮಂದಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.</p>



<p>ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಅಧ್ಯಕ್ಷ ರಾಜೇಶ್, ಜಿಲ್ಲಾ ಕಾರ್ಯಾಧ್ಯಕ್ಷ ಚಂದ್ರಶೇಖರ್, ತಾಲ್ಲೂಕು ಅಧ್ಯಕ್ಷ ಶಂಕರ್, ಪ್ರಧಾನ ಕಾರ್ಯದರ್ಶಿ ಸ್ವಾಮಿ, ಉಪಾಧ್ಯಕ್ಷ ಸಚಿನ್, ಕಾರ್ಯದರ್ಶಿ ಪ್ರಸಾದ್, ದಲಿತ ಮುಖಂಡ ರಂಗಣ್ಣ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಪ್ರದೀಪ್ ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಹೆಸರಿಲ್ಲದ ಸಂಸ್ಥೆಗೆ ಬೆಂಗಳೂರಲ್ಲಿ ಸರ್ಕಾರಿ ಜಮೀನು ಮಂಜೂರು, ಸಿಬಿಐಗೆ &#8211; ಹೈಕೋರ್ಟ್ ಆದೇಶ</title>
		<link>https://peepalmedia.com/government-land-in-bengaluru-allotted-to-unnamed-organization-cbi-high-court-order/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 15 Apr 2026 07:43:36 +0000</pubDate>
				<category><![CDATA[ಅಪರಾಧ]]></category>
		<category><![CDATA[ಕೋರ್ಟು - ಕಾನೂನು]]></category>
		<category><![CDATA[ಬೆಂಗಳೂರು]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಮೀಡಿಯ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=77157</guid>

					<description><![CDATA[ಬೆಂಗಳೂರು : ನಗರದ (Bengaluru) ಆಯಕಟ್ಟಿನ ಪ್ರದೇಶವಾದ ಹೆಬ್ಬಾಳದ (Hebbal) ಸಮೀಪ ಸುಮಾರು 55 ಎಕರೆ ಬೆಲೆಬಾಳುವ ಸರ್ಕಾರಿ ಭೂಮಿಯನ್ನು (Government land) ಅಕ್ರಮವಾಗಿ ಮಂಜೂರು ಮಾಡಿರುವ ಪ್ರಕರಣ ಈಗ ದೊಡ್ಡ ತಿರುವು ಪಡೆದುಕೊಂಡಿದೆ. ವಾಸ್ತವದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಒಂದು ಕಾಲ್ಪನಿಕ ಸಂಸ್ಥೆಯ ಹೆಸರಿಗೆ ಈ ಕೋಟಿಗಟ್ಟಲೆ ಮೌಲ್ಯದ ಜಮೀನನ್ನು ಪರಭಾರೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯ ಸರ್ಕಾರದ ಈ ನಿರ್ಧಾರ ಆಡಳಿತಾತ್ಮಕ ಲೋಪದೋಷಗಳನ್ನು ಎತ್ತಿ ತೋರಿಸಿದ್ದು, ಸಾರ್ವಜನಿಕ ಆಸ್ತಿಯ ದುರುಪಯೋಗದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.ಈ [&#8230;]]]></description>
										<content:encoded><![CDATA[
<p><strong>ಬೆಂಗಳೂರು </strong>: ನಗರದ (Bengaluru) ಆಯಕಟ್ಟಿನ ಪ್ರದೇಶವಾದ ಹೆಬ್ಬಾಳದ (Hebbal) ಸಮೀಪ ಸುಮಾರು 55 ಎಕರೆ ಬೆಲೆಬಾಳುವ ಸರ್ಕಾರಿ ಭೂಮಿಯನ್ನು (Government land) ಅಕ್ರಮವಾಗಿ ಮಂಜೂರು ಮಾಡಿರುವ ಪ್ರಕರಣ ಈಗ ದೊಡ್ಡ ತಿರುವು ಪಡೆದುಕೊಂಡಿದೆ. ವಾಸ್ತವದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಒಂದು ಕಾಲ್ಪನಿಕ ಸಂಸ್ಥೆಯ ಹೆಸರಿಗೆ ಈ ಕೋಟಿಗಟ್ಟಲೆ ಮೌಲ್ಯದ ಜಮೀನನ್ನು ಪರಭಾರೆ ಮಾಡಲಾಗಿದೆ ಎಂದು ತಿಳಿದುಬಂದಿದೆ.</p>



<p>ರಾಜ್ಯ ಸರ್ಕಾರದ ಈ ನಿರ್ಧಾರ ಆಡಳಿತಾತ್ಮಕ ಲೋಪದೋಷಗಳನ್ನು ಎತ್ತಿ ತೋರಿಸಿದ್ದು, ಸಾರ್ವಜನಿಕ ಆಸ್ತಿಯ ದುರುಪಯೋಗದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.ಈ ಅಕ್ರಮ ಮಂಜೂರಾತಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಉಚ್ಚ ನ್ಯಾಯಾಲಯವು ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ದಾಖಲೆಗಳ ಪರಿಶೀಲನೆಯ ನಂತರ, ಇಲ್ಲದ ಸಂಸ್ಥೆಗೆ ಭೂಮಿ ನೀಡಿದ ಪ್ರಕ್ರಿಯೆಯ ಹಿಂದೆ ದೊಡ್ಡ ಮಟ್ಟದ ಭ್ರಷ್ಟಾಚಾರ ಅಡಗಿರುವ ಶಂಕೆಯನ್ನು ನ್ಯಾಯಾಲಯ ವ್ಯಕ್ತಪಡಿಸಿದೆ. ಈ ಹಗರಣದ ಆಳ ಮತ್ತು ವಿಸ್ತಾರವನ್ನು ಪರಿಗಣಿಸಿದ ಹೈಕೋರ್ಟ್, ತಕ್ಷಣವೇ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (CBI) ಹಸ್ತಾಂತರಿಸುವಂತೆ ಆದೇಶಿಸಿದೆ. ಜಮೀನು ಮಂಜೂರಾತಿ ಪ್ರಕ್ರಿಯೆಯಲ್ಲಿ ಭಾಗಿಯಾದ ಪ್ರಭಾವಿಗಳು ಮತ್ತು ಅಧಿಕಾರಿಗಳ ಪಾತ್ರವನ್ನು ಪತ್ತೆಹಚ್ಚಲು ಸ್ವತಂತ್ರ ತನಿಖೆ ಅಗತ್ಯವೆಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. ಈ ಆದೇಶವು ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ನಿರ್ಣಾಯಕ ಹಂತವಾಗಿದ್ದು, ಕಬಳಿಕೆಯಾದ ಸರ್ಕಾರಿ ಭೂಮಿಯನ್ನು ಮರಳಿ ಪಡೆಯುವ ಭರವಸೆ ಮೂಡಿಸಿದೆ.</p>
]]></content:encoded>
					
		
		
			</item>
		<item>
		<title>ಡಾ. ಬಿ ಆರ್.ಅಂಬೇಡ್ಕರ್ ರವರ ಆದರ್ಶಗಳೆ ಸಾಮಾಜಿಕ ಪರಿವರ್ತನೆಯ ಸಾಧನ &#8211; ಡಾ.ಹೆಚ್. ಜೆ. ಅಮರೇಂದ್ರ</title>
		<link>https://peepalmedia.com/education-is-the-tool-for-social-transformation-dr-h-j-amarendra/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Tue, 14 Apr 2026 14:58:42 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=77113</guid>

					<description><![CDATA[ಹಾಸನ : ಡಾ. ಬಿ. ಅರ್.ಅಂಬೇಡ್ಕರ್ ರವರ 135ನೇ ಜನ್ಮದಿನೋತ್ಸವದ ಅಂಗವಾಗಿ ದೇಶಾದ್ಯಂತ ಇಂದು ಸಂವಿಧಾನ ಶಿಲ್ಪಿ ಮಾನವತವಾದಿ ಡಾ. ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡುತ್ತಿದ್ದೇವೆ ನ್ಯಾಯ ಸಮಾನತೆ ಶಿಕ್ಷಣ ಮತ್ತು ಸಬಲೀಕರಣದ ಮೌಲ್ಯಗಳನ್ನು ನೆನಪಿಸುವ ಮಹತ್ವದ ದಿನವಾಗಿದೆ ಡಾ. ಬಿ ಆರ್.ಅಂಬೇಡ್ಕರ್ ಅವರು ಶಿಕ್ಷಣವೇ ಸಾಮಾಜಿಕ ಪರಿವರ್ತನೆಯ ಸಾಧನ ಎಂದು ತಿಳಿಸಿರುವುದು ನಮ್ಮೆಲ್ಲರಿಗೂ ಮಾರ್ಗದರ್ಶನವಾಗಿದೆ ಎಂದು ಹಾಸನದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್.ಜೆ ಅಮರೇಂದ್ರ ರವರು ದಿನಾಂಕ 14- 4 2026 [&#8230;]]]></description>
										<content:encoded><![CDATA[
<p><strong>ಹಾಸನ :</strong> ಡಾ. ಬಿ. ಅರ್.ಅಂಬೇಡ್ಕರ್ ರವರ 135ನೇ ಜನ್ಮದಿನೋತ್ಸವದ ಅಂಗವಾಗಿ ದೇಶಾದ್ಯಂತ ಇಂದು ಸಂವಿಧಾನ ಶಿಲ್ಪಿ ಮಾನವತವಾದಿ ಡಾ. ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡುತ್ತಿದ್ದೇವೆ ನ್ಯಾಯ ಸಮಾನತೆ ಶಿಕ್ಷಣ ಮತ್ತು ಸಬಲೀಕರಣದ ಮೌಲ್ಯಗಳನ್ನು ನೆನಪಿಸುವ ಮಹತ್ವದ ದಿನವಾಗಿದೆ ಡಾ. ಬಿ ಆರ್.ಅಂಬೇಡ್ಕರ್ ಅವರು ಶಿಕ್ಷಣವೇ ಸಾಮಾಜಿಕ ಪರಿವರ್ತನೆಯ ಸಾಧನ ಎಂದು ತಿಳಿಸಿರುವುದು ನಮ್ಮೆಲ್ಲರಿಗೂ ಮಾರ್ಗದರ್ಶನವಾಗಿದೆ ಎಂದು ಹಾಸನದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್.ಜೆ ಅಮರೇಂದ್ರ ರವರು ದಿನಾಂಕ 14- 4 2026 ರಂದು ಮಲೆನಾಡು ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿ ನಡೆದ ಡಾ. ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನೋತ್ಸವದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>



<p>ಮನಸ್ಸಿನ ಬೆಳವಣಿಗೆ ಮಾನವ ಜೀವನದ ಪ್ರಗತಿಯ ಗುರಿಯಾಗಬೇಕು,ನಾವು ಕೇವಲ ಜ್ಞಾನವನ್ನು ನಿಡುವುದರ ಜೋತೆಗೆ ಯುವ ಜನಾಂಗದವರಿಗೆ, ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಮರ್ಶಾತ್ಮಕ ಚಿಂತನೆ ಮತ್ತು ಮಾನವೀಯತೆಯನ್ನು ಬೆಳೆಸುವ ಜವಾಬ್ದಾರಿಯು ನಮ್ಮ ಶಿಕ್ಷಕರ ಪಾತ್ರವಾಗಿದೆ ಸತ್ಯ ನಿಷ್ಠೆ ಗೌರವ ಮತ್ತು ಸಾಮಾಜಿಕ ಜವಾಬ್ದಾರಿಯ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬರು ಆದ್ಯ ಕರ್ತವ್ಯವಾಗಿದೆ,ಎಲ್ಲರನ್ನೂ ಸಬಲರನ್ನಾಗಿ ಮಾಡುವ ವಾತಾವರಣವನ್ನು ನಿರ್ಮಿಸಲು ನಾವು ಪ್ರಯತ್ನಿಸಬೇಕು ಇದು ಡಾ. ಅಂಬೇಡ್ಕರ್ ಅವರ ಆದರ್ಶಗಳಿಗೆ ನಿಜವಾದ ಗೌರವ ನಿಡಿದಂತಾಗುವುದು,ಅವರ ಜೀವನದ ಹೋರಾಟ ದೃಢ ನಿಶ್ಚಯ ಮತ್ತು ದೇಶದ ಮೇಲಿನ ಅಪಾರ ಬದ್ಧತೆ ಪ್ರಮುಖವಾಗಿದೆ ಸಮಾನತೆಯ ಪ್ರೇರಣೆಯಿಂದ ನಾವು ನಮ್ಮ ಕರ್ತವ್ಯಗಳನ್ನು ಇನ್ನಷ್ಟು ನಿರ್ವಹಿಸೋಣ ಎಂದು ಡಾ ಬಿ ಅರ್ ಅಂಬೇಡ್ಕರ್ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಸುಸಂದರ್ಭದಲ್ಲಿ ತಿಳಿಸಿದರು</p>



<p>ಮುಖ್ಯ ಅತಿಥಿಗಳಾಗಿದ್ದ ಕಾಲೇಜಿನ ನಿರ್ದೇಶಕರಾದ ಡಾ. ಎಸ್. ಪ್ರದೀಪ್ ಮಾತನಾಡಿ ಡಾ. ಬಿ ಆರ್ ಅಂಬೇಡ್ಕರ್ ಅವರು ಸಮಾನತೆಯ ಮತ್ತು ಪ್ರಗತಿಯ ಸಮಾಜ ನಿರ್ಮಾಣದ ದಿಕ್ಕಿನಲ್ಲಿ ಸಂಪೂರ್ಣ ಪ್ರಯತ್ನವನ್ನ ಹಾಕಿದ್ದಾರೆ, ಮೇಲು ಕೇಳು ಎಂಬ ಭಾವನೆ ಇಲ್ಲದೆ ಎಲ್ಲರೂ ಸಮಾನಾಂತರವಾಗಿ ಬದುಕುವುದು ಅಂಬೇಡ್ಕರ್ ಅವರ ಉದ್ದೇಶವಾಗಿತ್ತು ಎಂದರು.<br>ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಹಾಗೂ ಪ್ರಾಧ್ಯಾಪಕರು ಆದ ಡಾ. ಎ. ಜೆ.ಕೃಷ್ಣಯ್ಯನವರು ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನವನ್ನು ರಚನೆ ಮಾಡಲು ಬಹಳಷ್ಟು ಹೋರಾಟ ಮಾಡಿದ್ದಾರೆ ಹಾಗೂ ಬಡತನದಲ್ಲಿರುವವರನ್ನು ಮೇಲ್ಮಟ್ಟಕ್ಕೆ ತರುವಂತಹ ಕೆಲಸ ಆಗಬೇಕೆಂದು ಅವರ ಗುರಿಯಾಗಿದ್ದು ಶೈಕ್ಷಣಿಕವಾಗಿ ಸಾಮಾಜಿಕವಾಗಿ ರಾಜಕೀಯವಾಗಿ ಆರ್ಥಿಕವಾಗಿ ಎಲ್ಲರೂ ಸಮಾನತೆಯ ದೃಷ್ಟಿಯಿಂದ ಬದುಕನ್ನು ಕಾಣಬೇಕೆಂಬುದು ಅಂಬೇಡ್ಕರ್ ಅವರ ಗುರಿಯಾಗಿತ್ತು ಎಂದರು. ಸಂವಿಧಾನ ಇರಾಲಾಗಿ ಎಲ್ಲರೂ ಸಮಾನತೆಯ ಬದುಕು ಕಾಣಲು ಸಾಧ್ಯವಾಗಿದೆ ಎಂದರು</p>



<p>ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ, ಇಂದ್ರ ಬಹದ್ದೂರ್, ಕಾಲೇಜು ಎನ್ ಎಸ್ ಎಸ್ ಅಧೀಕಾರಿಗಳಾದ ಡಾ ವೀಜಯಕುಮಾರ್ ತೀಲೆ, ಪರಿಕ್ಷಾ ವಿಭಾಗದ ಮುಖ್ಯ ಸ್ಥರಾದ ಡಾ. ಎ. ಎ. ಪ್ರಸನ್ನ, ವಿಭಾಗದ ಮುಖ್ಯ ಸ್ಥರುಗಳಾದ ಡಾ. ರಾಜಣ್ಣ, ಡಾ, ಹರೀಶ್, ಡಾ, ಸುಮನ ಜಯಪ್ರಕಾಶ್, ಕಾಲೇಜು ರಿಜಿಸ್ಟ್ರಾರ್ ಕುಮುದ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೇಯ ಮಾಧ್ಯಮ ಸಂಯೋಜಕರಾದ ಕಟ್ಟಾಯ ಶಿವಕುಮಾರ್, ಪ್ರಾದ್ಯಾಪಕರಾದ ಡಾ. ಮೂರ್ತಿ ಮಹದೇವ್ ನಾಯಕ್, ಡಾ ತ್ರೀವೇಣಿ, ಡಾ ಶಂಭುಲಿಂಗ ಮೂರ್ತಿ . ಡಾ.ವೆಂಕಟೇಶ್ ರಾವ್ ಕೋಲ್ಲಿ,<br>ಹಾಗೂ ಕಾಲೇಜಿನ ಡೀನ್ ರವರು, ಎಲ್ಲಾ ವಿಭಾಗದ ಮುಖ್ಯಸ್ಥರುಗಳು ಪ್ರಾಧ್ಯಾಪಕರು, ಸಹಪ್ರಾಧ್ಯಪಕರು,ನೌಕರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು<br>ಡಾ. ಬಿ. ಅರ್ ಅಂಬೇಡ್ಕರ್ ರವರ ಬಾವಚೀತ್ರಕ್ಕೆ ಪುಷ್ಪಾ ರ್ಚನೆಯನ್ನು ಎಲ್ಲಾರು ಸಲ್ಲಿಸಿದರು,<br>ಕಾರ್ಯಕ್ರಮದ ಕೊನೆಯಲ್ಲಿ ವಿಶ್ವ ಶಾಂತಿಗಾಗಿ ಪ್ರಾಥನೆ ಮಾಡಲಾಯಿತು.</p>
]]></content:encoded>
					
		
		
			</item>
		<item>
		<title>ಶೋಷಿತರ, ಹಿಂದುಳಿದವರ ಏಳಿಗೆಗಾಗಿ ಜೀವನವನ್ನೇ ಸಮರ್ಪಿಸಿದ್ದಾರೆ ಡಾ ಬಾಬಾ ಸಾಹೇರು &#8211; ಕೆಎಂ ಶಿವಲಿಂಗೇಗೌಡರು</title>
		<link>https://peepalmedia.com/dr-baba-saheru-dedicated-his-life-for-the-progress-of-the-exploited-and-backward/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Tue, 14 Apr 2026 14:40:12 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=77110</guid>

					<description><![CDATA[ಅರಸೀಕೆರೆ : ಡಾ. ಬಿ.ಆರ್. ಅಂಬೇಡ್ಕರ್ ಅವರು ಒಂದು ವರ್ಗಕ್ಕೆ ಸೀಮಿತವಾಗದೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಉದ್ದೇಶದಿಂದ ಸಂವಿಧಾನ ರಚಿಸಿದ್ದಾರೆ ಎಂದು ಶಾಸಕ ಕೆಎಂ ಶಿವಲಿಂಗೇಗೌಡರು ಹೇಳಿದರು. ತಾಲೂಕು ಕಂದಾಯ ಭವನದಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮತ್ತು ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾವ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಶಾಸಕ ಶಿವಲಿಂಗೇಗೌಡರು [&#8230;]]]></description>
										<content:encoded><![CDATA[
<p><strong>ಅರಸೀಕೆರೆ : </strong>ಡಾ. ಬಿ.ಆರ್. ಅಂಬೇಡ್ಕರ್ ಅವರು ಒಂದು ವರ್ಗಕ್ಕೆ ಸೀಮಿತವಾಗದೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಉದ್ದೇಶದಿಂದ ಸಂವಿಧಾನ ರಚಿಸಿದ್ದಾರೆ ಎಂದು ಶಾಸಕ ಕೆಎಂ ಶಿವಲಿಂಗೇಗೌಡರು ಹೇಳಿದರು.</p>



<p>ತಾಲೂಕು ಕಂದಾಯ ಭವನದಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮತ್ತು ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾವ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಶಾಸಕ ಶಿವಲಿಂಗೇಗೌಡರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಅಂಬೇಡ್ಕರ್ ಅವರು ದೇಶಕ್ಕೆ ಉತ್ತಮ ಸಂವಿಧಾನ ನೀಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಬಲವಾದ ಅಡಿಪಾಯ ಹಾಕಿದರು ಎಂದರು. ದೀನ ದಲಿತರ, ಶೋಷಿತರ ಹಾಗೂ ಹಿಂದುಳಿದವರ ಏಳಿಗೆಗಾಗಿ ಜೀವನವನ್ನೇ ಸಮರ್ಪಿಸಿ, ಎಲ್ಲರಿಗೂ ಸಮಾನ ಕಾನೂನು ಎಂಬ ತತ್ವವನ್ನು ಜಾರಿಗೊಳಿಸಿದರು ಎಂದು ಹೇಳಿದರು.</p>



<p>ಉದ್ಯೋಗ, ಶಿಕ್ಷಣ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಮೀಸಲಾತಿ ವ್ಯವಸ್ಥೆ ರೂಪಿಸುವಲ್ಲಿ ಅಂಬೇಡ್ಕರ್ ಮಹತ್ವದ ಪಾತ್ರ ವಹಿಸಿದ್ದು, ಕಾರ್ಮಿಕರ ಹಕ್ಕುಗಳು, ಮಹಿಳಾ ಸಮಾನತೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕೊಂಡಾಡಿದರು. ಕಾರ್ಯಕ್ರಮದಲ್ಲಿ ದಂಡಾಧಿಕಾರಿ ಸಂತೋಷ್ ಕುಮಾರ್, ನಗರಸಭೆ ಆಯುಕ್ತ ಕೃಷ್ಣಮೂರ್ತಿ, ಡಿವೈಎಸ್ಪಿ ಗೋಪಿ, ಸಮಾಜ ಕಲ್ಯಾಣ ಇಲಾಖೆಯ ಪರಮಶಿವಮೂರ್ತಿ, ವೆಂಕಟೇಶ್ ಶೆಟ್ಟಿ, ಧರ್ಮಶೇಖರ್, ಮೆಟ್ರೋ ಬಾಬು, ಗಂಗಣ್ಣ, ಮೋಹನ್ ಕುಮಾರ್, ಜಯಣ್ಣ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ವಾಹನ ಚಾಲಕರ ಬಳಿ ಸುಲಿಗೆ ಮಾಡುತ್ತಿದ್ದ ಅಧಿಕಾರಿಗಳು &#8211; ಲೋಕಾ ಬಲೆಗೆ</title>
		<link>https://peepalmedia.com/officers-catch-those-who-were-extorting-money-from-drivers-loka/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 13 Apr 2026 12:53:17 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[karnataka]]></category>
		<category><![CDATA[news]]></category>
		<guid isPermaLink="false">https://peepalmedia.com/?p=77063</guid>

					<description><![CDATA[ಬೆಂಗಳೂರು : ವಾಹನ ಚಾಲಕರಿಂದ ಅಕ್ರಮವಾಗಿ ಹಣ (Bribe) ವಸೂಲಿ (Corruption) ಮಾಡುತ್ತಿದ್ದ ಬೆಂಗಳೂರು ಹೊರವಲಯದ ನೆಲಮಂಗಲದ ಇಬ್ಬರು ಆರ್‌ಟಿಓ (RTO) ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಎಸ್ಪಿ ಡಾ. ಕೋನ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ನೆಲಮಂಗಲ ಆರ್‌ಟಿಓ ಇನ್ಸ್‌ಪೆಕ್ಟರ್‌ಗಳಾದ ದಿನೇಶ್ ಮತ್ತು ಕಿರಣ್ ಎಂಬುವವರನ್ನು ಚಾಲಕರಿಂದ ಹಣ ವಸೂಲಿ ಮಾಡುತ್ತಿರುವ ಆರೋಪದ ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಏನಿದು ಪ್ರಕರಣ? ಈ [&#8230;]]]></description>
										<content:encoded><![CDATA[
<p><strong>ಬೆಂಗಳೂರು : </strong>ವಾಹನ ಚಾಲಕರಿಂದ ಅಕ್ರಮವಾಗಿ ಹಣ (Bribe) ವಸೂಲಿ (Corruption) ಮಾಡುತ್ತಿದ್ದ ಬೆಂಗಳೂರು ಹೊರವಲಯದ ನೆಲಮಂಗಲದ ಇಬ್ಬರು ಆರ್‌ಟಿಓ (RTO) ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಎಸ್ಪಿ ಡಾ. ಕೋನ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ನೆಲಮಂಗಲ ಆರ್‌ಟಿಓ ಇನ್ಸ್‌ಪೆಕ್ಟರ್‌ಗಳಾದ ದಿನೇಶ್ ಮತ್ತು ಕಿರಣ್ ಎಂಬುವವರನ್ನು ಚಾಲಕರಿಂದ ಹಣ ವಸೂಲಿ ಮಾಡುತ್ತಿರುವ ಆರೋಪದ ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.</p>



<p><strong>ಏನಿದು ಪ್ರಕರಣ?</strong></p>



<p>ಈ ಇಬ್ಬರು ಅಧಿಕಾರಿಗಳು ಪ್ರತಿನಿತ್ಯ ರಸ್ತೆಯಲ್ಲಿ ವಾಹನಗಳ ತಪಾಸಣೆ ನಡೆಸುವ ನೆಪದಲ್ಲಿ, ಚಾಲಕರಿಂದ ಹಣಕ್ಕಾಗಿ ಪೀಡಿಸುತ್ತಿದ್ದರು ಎಂಬ ದೂರುಗಳು ಕೇಳಿಬಂದಿದ್ದವು. ದಾಖಲೆಗಳು ಸರಿಯಿದ್ದರೂ ಅಥವಾ ಸಣ್ಣಪುಟ್ಟ ಕಾರಣಗಳನ್ನು ಮುಂದಿಟ್ಟುಕೊಂಡು ಲಂಚ ಪಡೆದು ವಾಹನಗಳನ್ನು ಬಿಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಲೋಕಾಯುಕ್ತ ಪೊಲೀಸರಿಗೆ ಲಭ್ಯವಾಗಿತ್ತು.</p>



<p><strong>ಅಧಿಕಾರಿಗಳ ಮೇಲೆ ಸಾಲು ಸಾಲು ದೂರು</strong></p>



<p>ಈ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಲೋಕಾಯುಕ್ತ ತಂಡ, ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಟ್ರ್ಯಾಪ್ ಮಾಡಿದೆ. ಸದ್ಯ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಲಂಚದ ಹಾವಳಿಗೆ ಬ್ರೇಕ್ ಹಾಕಲು ಲೋಕಾಯುಕ್ತರು ನಡೆಸಿದ ಈ ದಿಢೀರ್ ಕಾರ್ಯಾಚರಣೆ ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದೆ.</p>



<p><strong>ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ – ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಲೋಕಾ&nbsp;</strong></p>



<p>ಈ-ಖಾತೆ ಮಾಡಿಕೊಡಲು ಲಂಚ (Bribe) ಪಡೆಯುತ್ತಿದ್ದ ರಾಯಚೂರು ಜಿಲ್ಲೆಯ (Raichur) ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ ಅವರು ಲೋಕಾಯುಕ್ತ (Lokayukta Raid) ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ರಾಘವೇಂದ್ರ ರೆಡ್ಡಿ ಎಂಬವರಿಂದ ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಯನ್ನು ರೆಡ್‌ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.</p>



<p>ಸಿರವಾರ ನಿವಾಸಿ ರಾಘವೇಂದ್ರ ರೆಡ್ಡಿ ಎಂಬವರು ತಮ್ಮ ಈ-ಖಾತೆ ಕೆಲಸಕ್ಕಾಗಿ ಪಟ್ಟಣ ಪಂಚಾಯತಿಗೆ ಅಲೆದಾಡುತ್ತಿದ್ದರು. ಈ ಕೆಲಸ ಮಾಡಿಕೊಡಲು ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ ಅವರು ಎರಡು ಲಕ್ಷ ರೂಪಾಯಿ ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.</p>



<p>ಈ ಬಗ್ಗೆ ರಾಘವೇಂದ್ರ ರೆಡ್ಡಿ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಯೋಜನೆಯಂತೆ ಇಂದು ಮುಂಗಡವಾಗಿ ಒಂದು ಲಕ್ಷ ರೂಪಾಯಿ ಹಣವನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.</p>



<p>ಹಣ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ಬರುತ್ತಿರುವುದನ್ನು ಗಮನಿಸಿದ ಸುರೇಶ್ ಶೆಟ್ಟಿ, ಅಲ್ಲಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾರೆ. ತಕ್ಷಣವೇ ತಮ್ಮ ಕಾರು ಹತ್ತಿದ ಅಧಿಕಾರಿ ಸಿರವಾರದಿಂದ ಕವಿತಾಳ ಪಟ್ಟಣದ ಕಡೆಗೆ ಅತಿ ವೇಗವಾಗಿ ಪರಾರಿಯಾಗಲು ನೋಡಿದ್ದಾರೆ. ಆದರೆ ಬಿಡದ ಲೋಕಾಯುಕ್ತ ತಂಡ, ಸಿನಿಮೀಯ ಮಾದರಿಯಲ್ಲಿ ಕಾರನ್ನು ಬೆನ್ನಟ್ಟಿ ಕವಿತಾಳದ ಬಳಿ ಮುಖ್ಯಾಧಿಕಾರಿಯನ್ನು ತಡೆದು ಹಿಡಿಯುವಲ್ಲಿ ಯಶಸ್ವಿಯಾಗಿದೆ.</p>
]]></content:encoded>
					
		
		
			</item>
	</channel>
</rss>
