<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Kasturi Rangan Report &#8211; Peepal Media</title>
	<atom:link href="https://peepalmedia.com/tag/kasturi-rangan-report/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 02 Aug 2023 14:28:48 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Kasturi Rangan Report &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಕಸ್ತೂರಿ ರಂಗನ್ ವರದಿಗೆ ಪಟ್ಟು ಹಿಡಿದಿರುವುದು ಕೇಂದ್ರವೇ ಹೊರತು, ರಾಜ್ಯ ಸರ್ಕಾರವಲ್ಲ : ಅರಣ್ಯ ಸಚಿವ ಈಶ್ವರ್ ಖಂಡ್ರೆ</title>
		<link>https://peepalmedia.com/central-government-insists-on-kasturi-rangan-report/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 02 Aug 2023 14:27:26 +0000</pubDate>
				<category><![CDATA[ರಾಜಕೀಯ]]></category>
		<category><![CDATA[araga jnanendhra]]></category>
		<category><![CDATA[Eshwar Khandre]]></category>
		<category><![CDATA[Kasturi Rangan Report]]></category>
		<category><![CDATA[Mallikarjun Kharge]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=24822</guid>

					<description><![CDATA[ಕಸ್ತೂರಿ ರಂಗನ್ ವರದಿ ಜಾರಿಯ ಕಾರಣಕ್ಕೆ ಬಿಜೆಪಿ ಪಕ್ಷ ಮಲೆನಾಡು ಭಾಗದಲ್ಲಿ ನಡೆಸಿದ ಪ್ರತಿಭಟನೆ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಅಷ್ಟೆ ಅಲ್ಲದೆ ಯಾವ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂಬ ಹೇಳಿಕೆ ಕೊಟ್ಟೇ ಇಲ್ಲ ಎಂದೂ ಹೇಳಿದ್ದಾರೆ. ಅದೂ ಅಲ್ಲದೇ ಪಶ್ಚಿಮ ಘಟ್ಟಗಳ ಅಧ್ಯಯನಕ್ಕೆ ನಿವೃತ್ತ ಐಎಫ್ಎಸ್ ಅಧಿಕಾರಿಯನ್ನು ನೇಮಿಸಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರ ಅಲ್ಲ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ. &#8220;ಬೆಂಗಳೂರಿನಲ್ಲಿ [&#8230;]]]></description>
										<content:encoded><![CDATA[
<p>ಕಸ್ತೂರಿ ರಂಗನ್ ವರದಿ ಜಾರಿಯ ಕಾರಣಕ್ಕೆ ಬಿಜೆಪಿ ಪಕ್ಷ ಮಲೆನಾಡು ಭಾಗದಲ್ಲಿ ನಡೆಸಿದ ಪ್ರತಿಭಟನೆ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಅಷ್ಟೆ ಅಲ್ಲದೆ ಯಾವ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂಬ ಹೇಳಿಕೆ ಕೊಟ್ಟೇ ಇಲ್ಲ ಎಂದೂ ಹೇಳಿದ್ದಾರೆ. ಅದೂ ಅಲ್ಲದೇ ಪಶ್ಚಿಮ ಘಟ್ಟಗಳ ಅಧ್ಯಯನಕ್ಕೆ ನಿವೃತ್ತ ಐಎಫ್ಎಸ್ ಅಧಿಕಾರಿಯನ್ನು ನೇಮಿಸಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರ ಅಲ್ಲ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.</p>



<p>&#8220;ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಒಂದರ ಸಂವಾದದ ವೇಳೆ ಕೆಲವರು ಕಸ್ತೂರಿರಂಗನ್ ವರದಿ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ತಾವು ಯಾವುದೇ ಹಂತದಲ್ಲೂ “ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ’’ ಎಂದು ತಿಳಿಸಿರುವುದಿಲ್ಲ. ಇದು ತಿರುಚಿದ ಹೇಳಿಕೆ.&nbsp;ಬಿಜೆಪಿ ಇದನ್ನು ತಿರುಚಿ ರಾಜಕೀಯಕ್ಕೆ ಬಳಸಿಕೊಂಡಿದೆ&#8221; ಎಂದು ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.</p>



<p>ಅಷ್ಟೆ ಅಲ್ಲದೆ &#8220;ಈ ಬಗ್ಗೆ ಭಾನುವಾರವೇ ಬೀದರ್ ನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ನಾನು ಸ್ಪಷ್ಟೀಕರಣ ನೀಡಿದ್ದೇನೆ. ಸೋಮವಾರ ಮತ್ತೊಮ್ಮೆ ಕೂಡಾ ಸ್ಪಷ್ಟೀಕರಣ ಹೇಳಿಕೆ ಬಿಡುಗಡೆ ಮಾಡಿದ್ದು, ಇದು ಎಲ್ಲ ಮಾಧ್ಯಮದಲ್ಲೂ ಪ್ರಕಟವಾಗಿದೆ. ಹೀಗಿದ್ದೂ, ಬಿಜೆಪಿ ರಾಜಕೀಯ ದುರ್ಲಾಭಕ್ಕಾಗಿ ಮಂಗಳವಾರ ಪ್ರತಿಭಟನೆ ನಡೆಸಿರುವುದು ಅರ್ಥಹೀನ&#8221; ಎಂದು ಹೇಳಿದರು.</p>



<p>ಇನ್ನು ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಭಟನೆ ಮಾಡೋ ನೆಪದಲ್ಲಿ ಆರಗ ಜ್ಞಾನೇಂದ್ರ ಅನವಶ್ಯಕವಾಗಿ ಮಲ್ಲಿಕಾರ್ಜುನ ಖರ್ಗೆಯವರ ಮೈಬಣ್ಣದ ಬಗ್ಗೆ ಪ್ರಸ್ತಾಪಿಸಿದ್ದು ಬಿಜೆಪಿ ಪಕ್ಷದ ನಿಲುವನ್ನು ಹೊರಹಾಕಿದಂತಿದೆ. ಆರಗ ಜ್ಞಾನೇಂದ್ರ ಅವರು ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಮರಗಳಿಲ್ಲ ನೆರಳಿಲ್ಲ ನಮ್ಮ ತಲೆಕೂದಲೇ ನೆರಳು ಎಂದೆಲ್ಲಾ ತುಚ್ಛವಾಗಿ ಮಾತನಾಡಿರುವುದು ಅವರ ಕೀಳು ಅಭಿರುಚಿಗೆ ಹಿಡಿದ ಕನ್ನಡಿಯಾಗಿದೆ. ಗೃಹ ಮಂತ್ರಿಯಾಗಿ ಸೇವೆ ಸಲ್ಲಿಸಿದ ವ್ಯಕ್ತಿ ಮನುಷ್ಯರ ಬಣ್ಣದ ಮೇಲೆ ಟೀಕೆ ಮಾಡಿ, ಈ ರೀತಿ ನಾಡಿನ ಒಂದು ಕಾಲು ಕೋಟಿ ಜನತೆಗೆ ಅವಮಾನ ಮಾಡಿರುವುದು ನಿಜಕ್ಕೂ ದುರ್ದೈವ ಎಂದು ತಿಳಿಸಿದ್ದಾರೆ.</p>



<p>ತಾವು ಅರಣ್ಯ ಇಲ್ಲದ ಪ್ರದೇಶದಿಂದ ಬಂದಿರಬಹುದು. ಆದರೆ ಹಸಿರಿನ ಮಹತ್ವ ತಮಗೆ ತಿಳಿದಿದೆ. ಅರಣ್ಯ ಸಚಿವನಾಗಿ ರಾಜ್ಯದ ಹಸಿರು ವ್ಯಾಪ್ತಿಯನ್ನು ಹೆಚ್ಚಿಸಲು ಶಕ್ತಿಮೀರಿ ಶ್ರಮಿಸುತ್ತಿದ್ದು, ಕಲ್ಯಾಣ ಕರ್ನಾಟಕವನ್ನು ಹಸಿರುಮಯಗೊಳಿಸಲು ಮುಂದಾಗಿದ್ದೇನೆ. ಈ ಕಾರ್ಯವನ್ನು ಬಿಜೆಪಿ ಸರ್ಕಾರ ಮಾಡಿರಲಿಲ್ಲ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.</p>



<p>ಹಾಗೆಯೇ ಕೇಂದ್ರ ಸರ್ಕಾರವೇ ನಿವೃತ್ತ ಐಎಫ್ಎಸ್ ಅಧಿಕಾರಿ ಸಂಜಯ್ ಕುಮಾರ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಎಲ್ಲ ಪಶ್ಚಿಮ ಘಟ್ಟದ ರಾಜ್ಯಗಳಿಗೆ ಅಧ್ಯಯನಕ್ಕೆ ಕಳಿಸಿದೆ, ವರದಿ ಜಾರಿಗೆ ಪಟ್ಟು ಹಿಡಿದಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>
]]></content:encoded>
					
		
		
			</item>
	</channel>
</rss>
