<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>KEA Exam &#8211; Peepal Media</title>
	<atom:link href="https://peepalmedia.com/tag/kea-exam/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 14 Nov 2023 15:02:14 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>KEA Exam &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಮತ್ತಷ್ಟು ಬಿಗಿಯಾಯ್ತು KEA ಪರೀಕ್ಷಾ ನಿಯಮಗಳು ; ಹಿಜಾಬ್ ಸೇರಿದಂತೆ ತಲೆಯ ಮೇಲೆ ಯಾವುದೇ ದಿರಿಸು ತೊಡುವಂತಿಲ್ಲ</title>
		<link>https://peepalmedia.com/kea-exam-norms-are-further-tightened/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 14 Nov 2023 14:41:15 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[hijab]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[KEA Exam]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=32135</guid>

					<description><![CDATA[ಪರೀಕ್ಷಾ ಅಕ್ರಮ ತಡೆಗಟ್ಟುವ ಹಿನ್ನೆಲೆಯಲ್ಲಿ ನವೆಂಬರ್ 18 ಮತ್ತು 19 ರಂದು ನಡೆಯಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಗೆ ಸರ್ಕಾರ ಮತ್ತಷ್ಟು ಬಿಗಿಯಾದ ನಿಯಮಗಳನ್ನು ಜಾರಿಗೊಳಿಸಿದೆ. ಆ ಮೂಲಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಹಿಜಾಬ್ ಸೇರಿದಂತೆ ತಲೆಯ ಮೇಲಿನ ದಿರಿಸು (ಬಟ್ಟೆ, ಕರ್ಚಿಪ್, ಟೋಪಿ) ಧರಿಸುವಂತಿಲ್ಲ ಎಂದು ಆದೇಶಿಸಿದೆ. ಪರೀಕ್ಷೆಯ ಸಮಯದಲ್ಲಿ ಅಕ್ರಮ ತಡೆಗಟ್ಟಲು ಪ್ರಾಧಿಕಾರವು ಬ್ಲೂಟೂತ್ ಇಯರ್ ಫೋನ್ ಗಳು, ಮೊಬೈಲ್ ಫೋನ್ ಗಳು ಮತ್ತು ಇತರ ಎಲೆಕ್ಟ್ರಾನಿಕ್ ಗ್ಯಾಜೆಟ್ ಗಳನ್ನು ನಿಷೇಧಿಸಿದೆ. ಪ್ರಾಧಿಕಾರ ಹೊರಡಿಸಿದ [&#8230;]]]></description>
										<content:encoded><![CDATA[
<p>ಪರೀಕ್ಷಾ ಅಕ್ರಮ ತಡೆಗಟ್ಟುವ ಹಿನ್ನೆಲೆಯಲ್ಲಿ ನವೆಂಬರ್ 18 ಮತ್ತು 19 ರಂದು ನಡೆಯಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಗೆ ಸರ್ಕಾರ ಮತ್ತಷ್ಟು ಬಿಗಿಯಾದ ನಿಯಮಗಳನ್ನು ಜಾರಿಗೊಳಿಸಿದೆ. ಆ ಮೂಲಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಹಿಜಾಬ್ ಸೇರಿದಂತೆ ತಲೆಯ ಮೇಲಿನ ದಿರಿಸು (ಬಟ್ಟೆ, ಕರ್ಚಿಪ್, ಟೋಪಿ) ಧರಿಸುವಂತಿಲ್ಲ ಎಂದು ಆದೇಶಿಸಿದೆ.</p>



<p>ಪರೀಕ್ಷೆಯ ಸಮಯದಲ್ಲಿ ಅಕ್ರಮ ತಡೆಗಟ್ಟಲು ಪ್ರಾಧಿಕಾರವು ಬ್ಲೂಟೂತ್ ಇಯರ್ ಫೋನ್ ಗಳು, ಮೊಬೈಲ್ ಫೋನ್ ಗಳು ಮತ್ತು ಇತರ ಎಲೆಕ್ಟ್ರಾನಿಕ್ ಗ್ಯಾಜೆಟ್ ಗಳನ್ನು ನಿಷೇಧಿಸಿದೆ.</p>



<p>ಪ್ರಾಧಿಕಾರ ಹೊರಡಿಸಿದ ಆದೇಶದಲ್ಲಿ ಹಿಜಾಬ್ ಹೆಸರನ್ನು ಪ್ರತ್ಯೇಕವಾಗಿ ಎಲ್ಲೂ ಬರೆಯಲಾಗಿಲ್ಲ. ಆದಾಗ್ಯೂ, ಹಿಜಾಬ್ ಸ್ವಯಂಚಾಲಿತವಾಗಿ ತಲೆಯ ಮೇಲಿನ ವಸ್ತ್ರವಾಗಿದ್ದು, ನಿಶೇಧಿತ ವಸ್ತುವಿಗೆ ಸೇರಲ್ಪಟ್ಟಿದೆ. ನವೆಂಬರ್ 18 ಮತ್ತು 19 ರಂದು ರಾಜ್ಯದಲ್ಲಿ ಹಲವಾರು ನೇಮಕಾತಿ ಪರೀಕ್ಷೆಗಳು ನಡೆಯಲಿವೆ. ಅಂತಹ ಪರಿಸ್ಥಿತಿಯಲ್ಲಿ, ಸರ್ಕಾರದ ಈ ನಿರ್ಧಾರವು ಬಹಳ ಪ್ರಾಮುಖ್ಯತೆ ಪಡೆದಿದೆ.</p>



<p>ಅಕ್ಟೋಬರ್ ನಲ್ಲಿ ನಡೆದ ಪರೀಕ್ಷೆಗಳಲ್ಲಿ ಕೆಇಎ ಹಿಜಾಬ್ ಗೆ ಅವಕಾಶ ನೀಡಿತ್ತು. ಅದೇ ಸಮಯದಲ್ಲಿ, ಅನೇಕ ಸ್ಥಳಗಳಿಂದ ಮಂಗಳಸೂತ್ರದ ಬಗ್ಗೆ ವಿವಾದವಿತ್ತು. ಆದರೆ ಪ್ರಾಧಿಕಾರ ಮಂಗಳಸೂತ್ರ ನಿಷೇಧದ ಬಗ್ಗೆ ಯಾವುದೇ ನಿರ್ಧಾರ ತಳೆದಿಲ್ಲ. ಮಾಹಿತಿಯ ಪ್ರಕಾರ, ಪರೀಕ್ಷಾ ಕೊಠಡಿಯಲ್ಲಿ ಮಂಗಳಸೂತ್ರ ಧರಿಸಲು ಅನುಮತಿಸಲಾಗುವುದು.</p>



<p><strong>ನಿಯಮಗಳೇನು?</strong><br>1) ಅಭ್ಯರ್ಥಿಗಳು ಜೇಬು ಇಲ್ಲದ ಅಥವಾ ಕಡಿಮೆ ಜೇಬು ಇರುವ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.<br>2) ಕುರ್ತಾ, ಜೀನ್ಸ್, ಪೈಜಾಮು ಧರಿಸಲು ಅವಕಾಶ ಇಲ್ಲ<br>3) ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಹಾಫ್ ಶರ್ಟ್ ಧರಿಸಬೇಕು, ಫುಲ್ ಕೈ ಶರ್ಟ್ ಧರಿಸುವಂತಿಲ್ಲ.<br>4) ಅಭ್ಯರ್ಥಿಗಳು ಶೂ ಧರಿಸುವ ಹಾಗಿಲ್ಲ, ಚಪ್ಪಲಿಗಳನ್ನು ಧರಿಸಬೇಕು.<br>5) ಧರಿಸುವ ಬಟ್ಟೆಗಳಲ್ಲಿ ಜಿಪ್ ಪಾಕೆಟ್ ಗಳು, ದೊಡ್ಡ ಬಟನ್ ಇರಬಾರದು<br>6) ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವ ಹಾಗಿಲ್ಲ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್ ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವ ಹಾಗಿಲ್ಲ.<br>7) ಇತ್ತೀಚಿನ ಎರಡು ಪಾಸ್ ಪೋರ್ಟ್ ಅಳತೆಯ ಫೋಟೋ ಹಾಗೂ ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಹೊಂದಿರುವುದು ಕಡ್ಡಾಯ.<br>8) ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರ ಧರಿಸುವಂತಿಲ್ಲ.<br>9) ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಆಭರಣ ಧರಿಸುವ ಹಾಗಿಲ್ಲ. ಕಿವಿಯೋಲೆ, ಉಂಗುರ, ಕಡಗ ಧರಿಸುವುದನ್ನು ನಿರ್ಬಂಧಿಸಲಾಗಿದೆ.</p>
]]></content:encoded>
					
		
		
			</item>
		<item>
		<title>ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಬಂಧನ</title>
		<link>https://peepalmedia.com/rd-patil-the-kingpin-of-examination-malpractice-arrested/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 10 Nov 2023 11:56:21 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[karnataka]]></category>
		<category><![CDATA[KEA Exam]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[RD Patil]]></category>
		<guid isPermaLink="false">https://peepalmedia.com/?p=31833</guid>

					<description><![CDATA[ಕೆಇಎ ಹಾಗೂ ಪಿಎಸ್ಐ ಪರೀಕ್ಷಾ ಹಗರಣದ ಕಿಂಗ್ ಪಿನ್ ಎಂದೇ ಗುರುತಿಸಿಕೊಂಡಿರುವ ಆರ್ ಡಿ ಪಾಟೀಲ್ ನನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಅಫಜಲಪುರ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಈತ ತಲೆಮರೆಸಿಕೊಂಡು ಹೋಗುವಾಗ ಪೊಲೀಸರ ಬಲೆಗೆ ಬಿದ್ದದ್ದಾಗಿ ಮಾಹಿತಿ ಲಭ್ಯವಾಗಿದೆ. ಕಲ್ಬುರ್ಗಿಯಲ್ಲಿ ಹಾಗೂ ಯಾದಗಿರಿಯಲ್ಲಿ ಪರೀಕ್ಷೆ ಬರೆಯುವಾಗ ಅಕ್ರಮ ಎಸಗಿದ್ದ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ 16 ಜನರನ್ನು ಬಂಧಿಸಲಾಗಿತ್ತು. ಪರೀಕ್ಷೆ ಬರೆಯುತ್ತಿದ್ದ ವೇಳೆ ಬ್ಲೂಟೂತ್ ಬಳಸಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಭ್ಯರ್ಥಿಗಳನ್ನು ಬಂಧಿಸಿದ್ದರು. ಅವರ ಬಂಧನದ ನಂತರ ಪ್ರಕರಣದ ಕಿಂಗ್ [&#8230;]]]></description>
										<content:encoded><![CDATA[
<p>ಕೆಇಎ ಹಾಗೂ ಪಿಎಸ್ಐ ಪರೀಕ್ಷಾ ಹಗರಣದ ಕಿಂಗ್ ಪಿನ್ ಎಂದೇ ಗುರುತಿಸಿಕೊಂಡಿರುವ ಆರ್ ಡಿ ಪಾಟೀಲ್ ನನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಅಫಜಲಪುರ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಈತ ತಲೆಮರೆಸಿಕೊಂಡು ಹೋಗುವಾಗ ಪೊಲೀಸರ ಬಲೆಗೆ ಬಿದ್ದದ್ದಾಗಿ ಮಾಹಿತಿ ಲಭ್ಯವಾಗಿದೆ.</p>



<p>ಕಲ್ಬುರ್ಗಿಯಲ್ಲಿ ಹಾಗೂ ಯಾದಗಿರಿಯಲ್ಲಿ ಪರೀಕ್ಷೆ ಬರೆಯುವಾಗ ಅಕ್ರಮ ಎಸಗಿದ್ದ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ 16 ಜನರನ್ನು ಬಂಧಿಸಲಾಗಿತ್ತು. ಪರೀಕ್ಷೆ ಬರೆಯುತ್ತಿದ್ದ ವೇಳೆ ಬ್ಲೂಟೂತ್ ಬಳಸಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಭ್ಯರ್ಥಿಗಳನ್ನು ಬಂಧಿಸಿದ್ದರು. ಅವರ ಬಂಧನದ ನಂತರ ಪ್ರಕರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಎಂದು ತಿಳಿದು ಬಂದಿತ್ತು.</p>



<p>ಖಚಿತ ಮಾಹಿತಿ ಮೇರೆಗೆ ಆರ್.ಡಿ.ಪಾಟೀಲ್ ನನ್ನು ಬಂಧಿಸಲು ತೆರಳಿದ್ದ ಪೊಲೀಸರಿಗೆ ಈತ ಚಳ್ಳೆಹಣ್ಣು ತಿನ್ನಿಸಿ ಕಾಂಪೌಂಡ್ ಹಾರಿ ತಪ್ಪಿಸಿಕೊಂಡು ಹೋಗಿದ್ದ. ಆತ ತಪ್ಪಿಸಿಕೊಳ್ಳಲು ಕಾಂಪೌಂಡ್ ಹಾರಿದ ದೃಶ್ಯಗಳು ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕಲಬುರಗಿಯ ಅಪಾರ್ಟ್ಮೆಂಟ್ನಲ್ಲಿಯೇ ಈತ ವಾಸವಿದ್ದನು ಎನ್ನಲಾಗಿದೆ.</p>



<p>ಅದಕ್ಕೂ ಹಿಂದೆ ವಿಚಾರಣೆ ಎದುರಿಸದೇ ಪೊಲೀಸರಿಗೂ ಶರಣಾಗದೆ ತಪ್ಪಿಸಿಕೊಂಡೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಡಿ ಪಾಟೀಲ್ ಜಾಮೀನು ಅರ್ಜಿ ವಿಚಾರಣೆ ನ.16 ಕ್ಕೆ ಮುಂದೂಡಿಕೆಯಾಗಿದೆ. ಸಧ್ಯ ಈತನನ್ನು ಮಹಾರಾಷ್ಟ್ರ ಗಡಿ ಭಾಗದಲ್ಲಿ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.</p>
]]></content:encoded>
					
		
		
			</item>
	</channel>
</rss>
