<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>kumaraswami &#8211; Peepal Media</title>
	<atom:link href="https://peepalmedia.com/tag/kumaraswami/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 09 Aug 2024 10:40:19 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>kumaraswami &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಬಂಡೆ ಅಂದ್ರೆ ಪ್ರಕೃತಿ, ಪೂಜಿಸಿದರೆ ಸಂಸ್ಕೃತಿ, ವಿರುದ್ದ ನಿಂತುಕೊಂಡರೆ ನಾಶ: ಕನಪುರ ಬಂಡೆ ಡಿಕೆಶಿ ಡೈಲಾಗ್‌</title>
		<link>https://peepalmedia.com/bande-is-nature-culture-if-worshiped-destroyed-if-opposed-kanpura-bande-dkeshi-dialogue/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 09 Aug 2024 10:40:18 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[#Kumaraswamy #JDS #ramanagara #mysore #kodagu #kannadaexpress9 #prathapsimha #Simha #SaRaMahesh #GTDevegowda #DeveGowda #HDK H D Kumaraswamy]]></category>
		<category><![CDATA[bengalure]]></category>
		<category><![CDATA[congress]]></category>
		<category><![CDATA[dkshí]]></category>
		<category><![CDATA[dkshi]]></category>
		<category><![CDATA[dkshivakumar]]></category>
		<category><![CDATA[dkshivkumar]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[kumaraswami]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rashok]]></category>
		<category><![CDATA[Siddaramaiah]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=43616</guid>

					<description><![CDATA[ಮೈಸೂರು: ನನ್ನನ್ನು ಕನಕಪುರ ಬಂಡೆ ಅಂತಾರೆ. ಈ ಬಂಡೆ ಯಾವಾಗಲೂ ಸಿದ್ದರಾಮಯ್ಯನವರಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮುಂದುವರೆದು ಕಲ್ಲುಬಂಡೆ ಅಂದ್ರೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ, ವಿರುದ್ದ ನಿಂತುಕೊಂಡರೆ ನಾಶ” ಎಂದು ತಮ್ಮ ವಿರೋಧಿಗಳನ್ನು ಕುರಿತು ಮಾರ್ಮಿಕವಾಗಿ ನುಡಿದರು. ಶುಕ್ರವಾರ ಮೈಸೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು “ಹಿಂದುಳಿದ ಸಮುದಾಯದ ಸಿದ್ದರಾಮಯ್ಯನವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿರುವುದು ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಸಹಿಸಲಾಗುತ್ತಿಲ್ಲ. ಅದಕ್ಕೆ ಅವರನ್ನು [&#8230;]]]></description>
										<content:encoded><![CDATA[
<p>ಮೈಸೂರು: ನನ್ನನ್ನು ಕನಕಪುರ ಬಂಡೆ ಅಂತಾರೆ. ಈ ಬಂಡೆ ಯಾವಾಗಲೂ ಸಿದ್ದರಾಮಯ್ಯನವರಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮುಂದುವರೆದು ಕಲ್ಲುಬಂಡೆ ಅಂದ್ರೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ, ವಿರುದ್ದ ನಿಂತುಕೊಂಡರೆ ನಾಶ” ಎಂದು ತಮ್ಮ ವಿರೋಧಿಗಳನ್ನು ಕುರಿತು ಮಾರ್ಮಿಕವಾಗಿ ನುಡಿದರು.</p>



<p>ಶುಕ್ರವಾರ ಮೈಸೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು “ಹಿಂದುಳಿದ ಸಮುದಾಯದ ಸಿದ್ದರಾಮಯ್ಯನವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿರುವುದು ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಸಹಿಸಲಾಗುತ್ತಿಲ್ಲ. ಅದಕ್ಕೆ ಅವರನ್ನು ಮುಡಾ ಹಗರಣದಲ್ಲಿ ಸಿಕ್ಕಿ ಹಾಕಿಸಿ ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ಮಾಡಿದ್ದಾರೆ. ಈ ಕನಕಪುರದ ಬಂಡೆ ಸಿಎಂ ಜೊತೆ ಸದಾ ಇರಲಿದೆ ಎಂಬುದನ್ನು ಮರೆಯದಿರಿ ಎಂದು ಎಚ್ಚರಿಕೆ ನೀಡಿದರು. </p>



<p>“ಮಾತಿಗಿಂತ ಕೃತಿ ಮೇಲು ಎಂದು ನಂಬಿದವರು ನಾವು. ನುಡಿದಂತೆ ನಡೆದಿದ್ದೇವೆ. ಬಡ ಜನರಿಗಾಗಿ ಶ್ರಮಿಸಿದ್ದೇವೆ. ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದನ್ನು ಸಹಿಸಲಾಗದೆ ಸಿದ್ದರಾಮವ್ಯಕ್ಯ್ಯ ಅವರನ್ನು ಮುಡಾ ಪ್ರಕರಣದಲ್ಲಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಮುಡಾ ಸೈಟ್ ಯಾರ ಆಡಳಿತಾವಧಿಯಲ್ಲಿ ನೀಡಲಾಗಿದೆ? ಬಿಜೆಪಿ ಅವಧಿಯಲ್ಲೇ ಆಗಿದೆ. ಆಗ ಎಲ್ಲಿಗೆ ಹೋಗಿತ್ತು ಹಗರಣ ವಿಚಾರ?” ಎಂದು ಡಿಸಿಎಂ ಪ್ರಶ್ನಿಸಿದರು.</p>



<p><strong>ವಿಜಯೇಂದ್ರ ಅಂದ್ರೆ ಭ್ರಷ್ಟಾಚಾರ: </strong>“ಕುಮಾರಸ್ವಾಮಿ ನಂಬಿದವರನ್ನು ಮುಗಿಸುತ್ತಾರೆ. ಅವರು ಮಾಡಿರುವ ಹಗರಣಗಳನ್ನು ಬಯಲು ಮಾಡಿದ್ದೇನೆ, ಮುಂದೆ ಮಾಡುತ್ತೇನೆ. ವಿಜಯೇಂದ್ರ ಕೊರೋನಾ ಸಮಯದಲ್ಲಿ ಬಡವರ ಹಣ ತಿಂದಿದ್ದಾರೆ. ಇಂತಹ ಭ್ರಷ್ಟರನ್ನು ಬಿಜೆಪಿ ಅಧ್ಯಕ್ಷರಾಗಿ ಮುಂದುವರೆಸಬೇಕಾ? ವಿಜಯೇಂದ್ರ ಅಂದ್ರೆ ಭ್ರಷ್ಟಾಚಾರ” ಎಂದು ಆರೋಪಿಸಿದರು. </p>



<p>ನಮ್ಮ ಸರ್ಕಾರವನ್ನು ಉರುಳಿಸುವ, ನಾವು ಜನರಿಗೆ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳ ರಕ್ಷಣೆಗೋಸ್ಕರ ಈ ಜನಾಂದೋಲನ ಆಯೋಜಿಸಿದ್ದೇವೆ” ಎಂದು ಹೇಳಿದರು.</p>



<p>“ಮಿಸ್ಟರ್ ಕುಮಾರಸ್ವಾಮಿ..ಮಿಸ್ಟರ್ ಆಶೋಕಾ..ಮಿಸ್ಟರ್ ವಿಜಯೇಂದ್ರ..ನೀವು ಆಪರೇಶನ್ ಮಾಡಿ ಅನೇಕ ಸರ್ಕಾರಗಳನ್ನು ತೆಗೆದು ಹಾಕಿದ್ದೀರಿ. ಕುಮಾರಸ್ವಾಮಿ ನಿಮ್ಮ ಮುಖಂಡತ್ವದಲ್ಲಿ 19 ಸೀಟ್ ಮಾತ್ರ ಗೆಲ್ಲಲು ಸಾಧ್ಯವಾಗಿದೆ.  ಈ ಡಿ.ಕೆ ಶಿವಕುಮಾರ್ ಮುಖಂಡತ್ವದಲ್ಲಿ 136 ಸೀಟ್ ಗೆದ್ದಿದೆ. ಬ್ರಿಟಿಷರು 200 ವರ್ಷ ಆಳಿದ್ರೂ ಕೂಡ ಕಾಂಗ್ರೆಸ್ ತೆಗೆದು ಹಾಕಲು ಆಗಿಲ್ಲ. ನಿಮ್ಮಿಂದ ರಾಜಿನಾಮೆ ಪಡೆಯಲು ಸಾಧ್ಯವೇ ಎಂದು ಆಕ್ರೋಶವ್ಯಕ್ತಪಡಿಸಿದರು. </p>
]]></content:encoded>
					
		
		
			</item>
		<item>
		<title>ಚುನಾವಣೆ ನಂತರ ಬಿಜೆಪಿ ಜೆಡಿಎಸ್ ಮೈತ್ರಿ ಖತಂ!</title>
		<link>https://peepalmedia.com/bjp-jds-alliance-break-after-election/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 19 Apr 2024 06:49:11 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[ಲೋಕಸಭೆ ಚುನಾವಣೆ -2024]]></category>
		<category><![CDATA[bjp]]></category>
		<category><![CDATA[bjp dirty politics]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[Jds BJP alliance]]></category>
		<category><![CDATA[karnataka]]></category>
		<category><![CDATA[kumaraswami]]></category>
		<category><![CDATA[modi]]></category>
		<category><![CDATA[narendra modi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=38492</guid>

					<description><![CDATA[ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮೈತ್ರಿ ಮುರಿದು ಬೀಳುವ ಬಗ್ಗೆ ಮುನ್ಸೂಚನೆ ಸಿಕ್ಕಿದೆ. ಜೆಡಿಎಸ್ ಮತ್ತು ಬಿಜೆಪಿ ಎರಡೂ ಮೂಲಗಳಿಂದ ಸಿಕ್ಕ ಮಾಹಿತಿಯಂತೆ ಕಾಂಗ್ರೆಸ್ ಪಕ್ಷ ಸೋಲಿಸುವ ಏಕೈಕ ಉದ್ದೇಶದಿಂದ ಈ ಎರಡೂ ಪಕ್ಷಗಳು ಒಟ್ಟಾಗಿವೆಯೇ ಹೊರತು ಈ ಮೈತ್ರಿ ಮುಂದುವರಿಯಲು ಸಾಧ್ಯವೇ ಇಲ್ಲ ಎಂಬ ಮಾತುಗಳು ಕೇಳಿ ಬಂದಿವೆ. ಸಧ್ಯ ಜೆಡಿಎಸ್ ಕಡೆಯಿಂದ ಕೇಳಿ ಬಂದ ಅಪಸ್ವರ ಏನೆಂದರೆ, ರಾಜ್ಯದಲ್ಲಿ ಜೆಡಿಎಸ್ ಅಳಿವು ಉಳಿವಿನ ದಾರಿಯಲ್ಲಿ ನಡೆಯುತ್ತಿದೆ‌. ಶತಾಯಗತಾಯ ತನ್ನ [&#8230;]]]></description>
										<content:encoded><![CDATA[
<p>ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮೈತ್ರಿ ಮುರಿದು ಬೀಳುವ ಬಗ್ಗೆ ಮುನ್ಸೂಚನೆ ಸಿಕ್ಕಿದೆ. ಜೆಡಿಎಸ್ ಮತ್ತು ಬಿಜೆಪಿ ಎರಡೂ ಮೂಲಗಳಿಂದ ಸಿಕ್ಕ ಮಾಹಿತಿಯಂತೆ ಕಾಂಗ್ರೆಸ್ ಪಕ್ಷ ಸೋಲಿಸುವ ಏಕೈಕ ಉದ್ದೇಶದಿಂದ ಈ ಎರಡೂ ಪಕ್ಷಗಳು ಒಟ್ಟಾಗಿವೆಯೇ ಹೊರತು ಈ ಮೈತ್ರಿ ಮುಂದುವರಿಯಲು ಸಾಧ್ಯವೇ ಇಲ್ಲ ಎಂಬ ಮಾತುಗಳು ಕೇಳಿ ಬಂದಿವೆ.</p>



<p>ಸಧ್ಯ ಜೆಡಿಎಸ್ ಕಡೆಯಿಂದ ಕೇಳಿ ಬಂದ ಅಪಸ್ವರ ಏನೆಂದರೆ, ರಾಜ್ಯದಲ್ಲಿ ಜೆಡಿಎಸ್ ಅಳಿವು ಉಳಿವಿನ ದಾರಿಯಲ್ಲಿ ನಡೆಯುತ್ತಿದೆ‌. ಶತಾಯಗತಾಯ ತನ್ನ ಅಸ್ತಿತ್ವ ಕಾಪಾಡಿಕೊಳ್ಳಲೇ ಬೇಕಾದ ಅನಿವಾರ್ಯತೆ ಜೆಡಿಎಸ್ ಗೆ ಎದುರಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಬಲಿಷ್ಠ ಪಕ್ಷವಾಗಿರುವಾಗ ಆ ಪಕ್ಷದ ಜೊತೆಗೆ ಮೈತ್ರಿ ಅಸಾಧ್ಯ. ಸೀಟು ಹಂಚಿಕೆ ವಿಚಾರವಂತೂ ದೂರದ ಮಾತು. ಹೀಗಿರುವಾಗ ಕಳೆದ ಬಾರಿಯ ಒಂದೂ ಸೀಟು ಕೈ ತಪ್ಪಿ ಹೋದರೆ ಸಂಸತ್ತಿನಲ್ಲಿ ಜೆಡಿಎಸ್ ಗೆ ಒಂದು ಸ್ಥಾನವೂ ಇಲ್ಲದಂತಾಗಲಿದೆ. ಹೀಗಾಗಿ ಈ ಮೈತ್ರಿ ಅನಿವಾರ್ಯವೇ ಹೊರತು ಅವಶ್ಯಕ ಆಗಿರಲಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ.</p>



<p>ಇನ್ನು ರಾಜಕೀಯವಾಗಿ ಬಿಜೆಪಿ ಜೊತೆಗಿನ ಮೈತ್ರಿ ದೂರವಾಗಲು ಇನ್ನೊಂದು ಕಾರಣ ಏನೆಂದರೆ ಮಹಾರಾಷ್ಟ್ರದಲ್ಲಿ ಶಿವಸೇನೆ ಪಕ್ಷ ಹೊರತುಪಡಿಸಿ ಈವರೆಗೆ ಬಿಜೆಪಿ ಜೊತೆಗೆ ಗುರುತಿಸಿಕೊಂಡ ಯಾವೊಂದು ಪ್ರಾದೇಶಿಕ ಪಕ್ಷಗಳೂ ಜೀವಂತವಾಗಿಲ್ಲ. ಇದ್ದರೂ ಸಹ ಬಿಜೆಪಿ ಪಕ್ಷ ಕೊಟ್ಟ ಭಿಕ್ಷೆಯಂತಹ ಸ್ಥಾನಮಾನಕ್ಕೆ ತೃಪ್ತಿ ಪಟ್ಟು ಇದ್ದಾರೆ. ಕಾಂಗ್ರೆಸ್ ಜೊತೆಗೆ INDIA ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಡಿಎಂಕೆ, ತೃಣಮೂಲ ಕಾಂಗ್ರೆಸ್, ಕೇರಳದ ಪ್ರಾದೇಶಿಕ ಪಕ್ಷಗಳು, ಆಮ್ ಆದ್ಮಿ ಪಕ್ಷ, ಶಿವಸೇನೆ, ಕಮ್ಯುನಿಸ್ಟ್ ಪಾರ್ಟಿ, RJD, NCP, ಸಮಾಜವಾದಿ ಪಾರ್ಟಿ ಸೇರಿದಂತೆ ಮೈತ್ರಿಕೂಟದ ಎಲ್ಲಾ 24 ಪಕ್ಷಗಳು ಘಟಾನುಘಟಿ ಪಕ್ಷಗಳೇ.. ಹಾಗೆಯೇ ತಮ್ಮ ತಮ್ಮ ರಾಜ್ಯಗಳಲ್ಲಿ ತಮ್ಮ ಅಸ್ತಿತ್ವ ಉಳಿಸಿಕೊಂಡಿವೆ. ಹೀಗಿರುವಾಗ, ಬಿಜೆಪಿ ಪಕ್ಷದ ಸಖ್ಯದಿಂದ ಎಷ್ಟು ಬೇಗ ಹೊರಬರುವುದೋ ಅಷ್ಟು ಬೇಗ ಜೆಡಿಎಸ್ ಗೆ ಉಳಿಗಾಲ ಎಂಬುದು ಜೆಡಿಎಸ್ ಪಕ್ಷದ ಮೂಲದಿಂದ ತಿಳಿದು ಬಂದಿದೆ.</p>



<p>ಅಷ್ಟೇ ಅಲ್ಲದೆ ಜಾತ್ಯಾತೀತ ಎಂಬ ಹಣೆಪಟ್ಟಿ ಹೊಂದಿರುವ ಪಕ್ಷ ಕೋಮುವಾದಿ ಎಂದೇ ಗುರುತಿಸಿಕೊಂಡ ಪಕ್ಷದ ಜೊತೆಗೆ ಎಲ್ಲಿಯವರೆಗೆ ಇರುವುದೋ ಅಲ್ಲಿಯವರೆಗೆ ತಮಗೆ ಅಪವಾದ ತಪ್ಪಿದ್ದಲ್ಲ. ಈಗಾಗಲೇ ಆದಷ್ಟು ತಮ್ಮ ಪಕ್ಷದ ವರ್ಚಸ್ಸು ಕುಂದಿರುವ ಹೊತ್ತಲ್ಲಿ ಜೆಡಿಎಸ್ ಇನ್ನೂ ಬಿಜೆಪಿ ಜೊತೆಯಲ್ಲಿ ಗುರುತಿಸಿಕೊಂಡರೆ ತನ್ನ ಅಸ್ತಿತ್ವಕ್ಕೆ ಕುಂದು ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜೆಡಿಎಸ್ ಮೂಲಗಳಿಂದ ಬಂದ ಅಭಿಪ್ರಾಯವಾಗಿದೆ.</p>



<p>ಬೆಂಗಳೂರು ಗ್ರಾಮಾಂತರದಲ್ಲೂ ಸಹ ಇದರ ಛಾಯೆ ದಟ್ಟವಾಗಿದ್ದು ದೇವೇಗೌಡರ ಅಳಿಯ ಸಿಎನ್ ಮಂಜುನಾಥ್ ಗೆಲುವು ಸಹ ಅನುಮಾನ ಎನ್ನುವಂತಾಗಿದೆ. ಹೀಗಿರುವಾಗ ಚುನಾವಣೆ ಸಮಯದಲ್ಲಷ್ಟೆ ಬಿಜೆಪಿ ಸೇರ್ಪಡೆಯಾಗಿ, ಚುನಾವಣೆ ನಂತರ ಜೆಡಿಎಸ್ ಸೇರ್ಪಡೆ ಅಥವಾ ರಾಜಕೀಯದಿಂದ ದೂರ ಸರಿಯುವ ಬಗ್ಗೆಯೂ ಸಿಎನ್ ಮಂಜುನಾಥ್ ತನ್ನ ಆಪ್ತರಲ್ಲಿ ಹೇಳಿಕೊಂಡ ಬಗ್ಗೆ ಮಾಹಿತಿ ಲಭ್ಯವಾಗಿದೆ.</p>



<p>ಅಭ್ಯರ್ಥಿಗಳ ಆಯ್ಕೆ ಗೊಂದಲದಲ್ಲಿದ್ದ ಸಂದರ್ಭದಲ್ಲಿಯೂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ಧ ಸಣ್ಣಗೆ ಮುನಿಸಿಕೊಂಡಿದ್ದು ಇನ್ನೂ ಸಹ ಜೆಡಿಎಸ್ ಪಾಳಯದಲ್ಲಿ ಮರೆತಿಲ್ಲ. ಕೇವಲ 2 ಸೀಟಿಗೆ ತೃಪ್ತಿ ಪಡುವಂತಾದರೆ ಈ ಮೈತ್ರಿಯ ಅಗತ್ಯ ಇರಲಿಲ್ಲ ಎಂದೇ ಜೆಡಿಎಸ್ ನಾಯಕ ತನ್ನ ಅಸಮಾಧಾನ ಹೊರಹಾಕಿದ್ದರು.</p>



<p>ಇನ್ನು ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ ಸಹ ಒಂದು ಸ್ಪಷ್ಟ ಸಿದ್ಧಾಂತ ಮತ್ತು ನಿಲುವಿಗೆ ನಿಲ್ಲದೇ ಇರುವುದು ಜೆಡಿಎಸ್ ಕಾರ್ಯಕರ್ತರಲ್ಲೇ ಗೊಂದಲ ಮತ್ತು ಅಸಮಾಧಾನ ಏರ್ಪಟ್ಟಿದೆ. ಈಗಾಗಲೇ ಜೆಡಿಎಸ್ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ಜೊತೆಗೆ ಎರಡೆರಡು ಬಾರಿ ಮೈತ್ರಿ ಮಾಡಿ ಮುರಿದು ಬಿದ್ದಿರುವಾಗ ವಿರೋಧಿಗಳಿಗೆ ಉತ್ತರ ಕೊಡುವಲ್ಲಿಯೂ ಸಹ ತೀವ್ರ ಗೊಂದಲಕ್ಕೆ ಒಳಗಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೋದಿ ಮತ್ತು ಬಿಜೆಪಿಗೆ ಬೈದು ವಿರೋಧಿಸಿಕೊಂಡು ಬಂದಿದ್ದ ಸಿದ್ಧಾಂತವನ್ನೇ ಏಕಾಏಕಿ ಅಪ್ಪಿಕೊಂಡಿರುವುದು ಸಹ ಕಾರ್ಯಕರ್ತರಲ್ಲಿ ತೀವ್ರ ಗೊಂದಲ ಉಂಟುಮಾಡಿದೆ‌.</p>



<p>ಅಷ್ಟೆ ಅಲ್ಲದೆ ಪಕ್ಷದ ಯಾವೊಬ್ಬ ಮುಖಂಡ, ಶಾಸಕರೊಂದಿಗೂ ಚರ್ಚಿಸದೇ, ರಾಜ್ಯ ಬಿಜೆಪಿ ನಾಯಕರೊಂದಿಗೂ ಸಮಾಲೋಚಿಸದೇ ನೇರವಾಗಿ ಬಿಜೆಪಿ ಹೈಕಮಾಂಡ್ ಕದ ತಟ್ಟಿದ ನಂತರ ನಿರ್ಮಾಣಗೊಂಡ ಮೈತ್ರಿಯನ್ನು ಕಾರ್ಯಕರ್ತರು, ಮುಖಂಡರು ಮತ್ತು ಪಕ್ಷದ ಉನ್ನತ ಮಟ್ಟದ ನಾಯಕರು ಅನಿವಾರ್ಯವಾಗಿ ಒಪ್ಪಬೇಕಾದ ಸ್ಥಿತಿ, ಜೆಡಿಎಸ್ ಪಕ್ಷದೊಳಗೇ ಆಂತರಿಕ ಸರ್ವಾಧಿಕಾರವನ್ನು ಅನಿವಾರ್ಯವಾಗಿ ಒಪ್ಪುವ ಹಂತಕ್ಕೆ ಜೆಡಿಎಸ್ ತಲುಪಿರುವುದು, ಈ ಬಗ್ಗೆ ಕುಮಾರಸ್ವಾಮಿ ಮೇಲೆ ಕೆಲವು ನಾಯಕರು ಸಣ್ಣ ಅಸಮಾಧಾನ ಹೊಂದಿರುವ ಹಿನ್ನೆಲೆಯಲ್ಲಿ ಚುನಾವಣೆ ನಂತರ ಬಿಜೆಪಿ ಸಖ್ಯ ತೊರೆಯುವ ಬಗ್ಗೆ ಎಲ್ಲಾ ಮುನ್ಸೂಚನೆಗಳು ಹಾಗೂ ಸಾಧ್ಯತೆಗಳು ಜೆಡಿಎಸ್ ಮೂಲಗಳಿಂದ ತಿಳಿದು ಬಂದಿದೆ.</p>
]]></content:encoded>
					
		
		
			</item>
		<item>
		<title>ಸುಮಲತಾ ಅಂಬರೀಶ್ ಕಣಕ್ಕೆ! ; ಮತ್ತೊಮ್ಮೆ ಹೈವೋಲ್ಟೇಜ್ ಕ್ಷೇತ್ರವಾಗುವತ್ತ ಮಂಡ್ಯ</title>
		<link>https://peepalmedia.com/mandya-to-become-a-high-voltage-field-again/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 31 Mar 2024 15:31:55 +0000</pubDate>
				<category><![CDATA[ಮಂಡ್ಯ]]></category>
		<category><![CDATA[ರಾಜಕೀಯ]]></category>
		<category><![CDATA[ಲೋಕಸಭೆ ಚುನಾವಣೆ -2024]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[kumaraswami]]></category>
		<category><![CDATA[mandya]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[Sumalatha ambarish]]></category>
		<guid isPermaLink="false">https://peepalmedia.com/?p=37802</guid>

					<description><![CDATA[ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಮತ್ತೆ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಜನಪ್ರತಿನಿಧಿಯಾಗಿ ಇನ್ನೂ ಸಹ ತನ್ನ ಚಾರ್ಮ್ ಉಳಿಸಿಕೊಂಡಿರುವ ಸುಮಲತಾ ಅಂಬರೀಶ್ ತಮಗಿರುವ ಜನಪ್ರಿಯತೆ ಮತ್ತೊಬ್ಬರಿಗೆ ಯಾಕೆ ಧಾರೆ ಎರೆಯಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ತಮ್ಮ ಬೆಂಬಲಿಗರ ಕಡೆಯಿಂದ ಮತ್ತೊಮ್ಮೆ ಕಣಕ್ಕಿಳಿಯುವ ಬಗ್ಗೆಯೂ ಸುಮಲತಾ ಅಂಬರೀಶ್ ಅವರಿಗೆ ಒತ್ತಡ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ. ಮೇಲಾಗಿ ಕಳೆದ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲೇ ಏಕೈಕ ಹೈವೋಲ್ಟೇಜ್ ಕಣವಾಗಿ ರೂಪುಗೊಂಡು, [&#8230;]]]></description>
										<content:encoded><![CDATA[
<p>ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಮತ್ತೆ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಜನಪ್ರತಿನಿಧಿಯಾಗಿ ಇನ್ನೂ ಸಹ ತನ್ನ ಚಾರ್ಮ್ ಉಳಿಸಿಕೊಂಡಿರುವ ಸುಮಲತಾ ಅಂಬರೀಶ್ ತಮಗಿರುವ ಜನಪ್ರಿಯತೆ ಮತ್ತೊಬ್ಬರಿಗೆ ಯಾಕೆ ಧಾರೆ ಎರೆಯಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.</p>



<p>ಎಲ್ಲಕ್ಕಿಂತ ಹೆಚ್ಚಾಗಿ ತಮ್ಮ ಬೆಂಬಲಿಗರ ಕಡೆಯಿಂದ ಮತ್ತೊಮ್ಮೆ ಕಣಕ್ಕಿಳಿಯುವ ಬಗ್ಗೆಯೂ ಸುಮಲತಾ ಅಂಬರೀಶ್ ಅವರಿಗೆ ಒತ್ತಡ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.</p>



<p>ಮೇಲಾಗಿ ಕಳೆದ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲೇ ಏಕೈಕ ಹೈವೋಲ್ಟೇಜ್ ಕಣವಾಗಿ ರೂಪುಗೊಂಡು, ತನ್ನ ಪತಿ ಅಂಬರೀಶ್ ಅವರ ಜನಪ್ರಿಯತೆಯನ್ನು ಸಮರ್ಥವಾಗಿ ಬಳಸಿಕೊಂಡ ಸುಮಲತಾ ನಿರಾಯಾಸವಾಗಿ ಮಂಡ್ಯ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಒಬ್ಬ ಮಹಿಳೆಯಾಗಿ ಮಾಜಿ ಪ್ರಧಾನಿ ಮೊಮ್ಮಗನನ್ನು  ಎದುರಿಸಿ ಗೆದ್ದದ್ದು ರಾಜ್ಯದ ಜನತೆ ಇನ್ನೂ ಮರೆತಿಲ್ಲ.</p>



<p>ಈಗಾಗಲೇ ಸುಮಲತಾ ಅವರನ್ನು ಲೋಕಸಭಾ ಕಣದಿಂದ ದೂರವಿಡಲು ಜೆಡಿಎಸ್ ಮತ್ತು ಬಿಜೆಪಿ ನಾಯಕರು ದಂಡು ದಂಡಾಗಿ ಭೇಟಿ ಮಾಡಿ ಮನವೊಲಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಇಂದೂ ಕೂಡಾ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸುಮಲತಾ ಮನೆಗೆ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಸತತ ಮೂವತ್ತು ನಿಮಿಷಗಳ ಚರ್ಚೆ ಬಳಿಕ ಕುಮಾರಸ್ವಾಮಿ ಇದೊಂದು ಸೌಹಾರ್ದ ಭೇಟಿ ಎಂದು ಕೈ ತೊಳೆದುಕೊಂಡಿದ್ದಾರೆ.</p>



<p>ಆದರೆ ಸುಮಲತಾ ಅಂಬರೀಶ್ ಈವರೆಗೆ ಯಾರಿಗೂ ಸ್ಪಷ್ಟ ಅಭಿಪ್ರಾಯ ತಿಳಿಸದೇ ಹಾಗೇ ಕಳಿಸಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ನಾಯಕರು ಸುಮಲತಾ ಇನ್ನು ಕಣಕ್ಕೆ ಇಳಿಯುವುದಿಲ್ಲ ಎಂಬುದನ್ನೇ ಬಿಂಬಿಸಿದರೂ ಈ ಬಗ್ಗೆ ಸುಮಲತಾ ಅಂಬರೀಶ್ ಏಪ್ರಿಲ್ 3 ರ ವರೆಗೂ ಕಾಯುವಂತೆ ತಿಳಿಸಿದ್ದಾರೆ.</p>



<p>ಆ ಮೂಲಕ ಏಪ್ರಿಲ್ 3 ರ ನಂತರ ಮಂಡ್ಯದ ರಣಕಣ ಯಾವ ರೀತಿಯಾಗಿ ರೂಪುಗೊಳ್ಳಬಹುದು ಎಂಬ ಕುತೂಹಲ ಕೂಡಾ ಮನೆ ಮಾಡಿದೆ. ಈಗಾಗಲೇ ಜಿಲ್ಲೆಯಾದ್ಯಂತ ತನ್ನ ಬೆಂಬಲಿಗರು ಹಾಗೂ ಅಂಬರೀಶ್ ಅಭಿಮಾನಿಗಳನ್ನು ಹೊಂದಿರುವ ಸುಮಲತಾ ಅವರಿಗೆ ಚುನಾವಣೆ ನಿಲ್ಲಲು ಒತ್ತಡ ಕೂಡಾ ಹೆಚ್ಚಿದೆ ಎನ್ನಲಾಗಿದೆ. ರಾಜಕೀಯದಲ್ಲಿ ಕಾಯಂ ಶತ್ರು ಹಾಗೂ ಮಿತ್ರ ಇಲ್ಲದೇ ಇದ್ದರೂ ಕಳೆದ ಚುನಾವಣೆಯಲ್ಲಿ ಸುಮಲತಾ ವಿರುದ್ಧ ಮಾತನಾಡಿದ ಅನೇಕ ಜೆಡಿಎಸ್ ನಾಯಕರಿಗೆ ಸರಿಯಾದ ಉತ್ತರ ಈ ಚುನಾವಣೆಯಲ್ಲಿ ಕೊಡಬೇಕು ಎಂಬುದು ಅಂಬರೀಶ್ ಅಭಿಮಾನಿಗಳ ಒತ್ತಾಯವಾಗಿದೆ.</p>



<p>ಸಧ್ಯಕ್ಕೆ ಸಿಕ್ಕ ಮಾಹಿತಿಯಂತೆ ಈ ಬಾರಿ ಮಂಡ್ಯ ಸುಮಲತಾ ಅಂಬರೀಶ್ ಅವರ ಸ್ಪರ್ಧೆಯಿಂದ ತ್ರಿಕೋನ ಸ್ಪರ್ಧೆಯ ಮುನ್ಸೂಚನೆ ಹುಟ್ಟು ಹಾಕಿದೆ. ಸಧ್ಯ ಮೂರೂ ಪಕ್ಷಗಳಲ್ಲೂ ಸಮಾನ ಅಂತರ ಕಾಯ್ದುಕೊಂಡು ಬಂದಿರುವ ಸುಮಲತಾ ಕಣಕ್ಕಿಳಿಯುವುದೇ ಹೌದಾದರೆ ಮತ್ತೊಮ್ಮೆ ಚಿತ್ರರಂಗದ ದಂಡು ಮಂಡ್ಯ ಕ್ಷೇತ್ರವನ್ನು ಆವರಿಸಲಿದೆ.</p>



<p>ಸಧ್ಯದ ಸ್ಥಿತಿಯಲ್ಲಿ ಮೂರೂ ಪಕ್ಷಗಳಲ್ಲೂ ತನ್ನ ಅಭಿಮಾನ ಉಳಿಸಿಕೊಂಡಿರುವ ಸುಮಲತಾ, ತನ್ನ ಸ್ಪರ್ಧೆ ಹೌದೇ ಆದರೆ ಅದರ ಹೆಚ್ಚಿನ ಲಾಭ ಕಾಂಗ್ರೆಸ್ ಪಕ್ಷ ಪಡೆದುಕೊಳ್ಳಲಿದೆ ಎಂಬುದು ಸ್ಪಷ್ಟ.</p>
]]></content:encoded>
					
		
		
			</item>
		<item>
		<title>ಚುನಾವಣೆ ಬಂದಾಗಲೆಲ್ಲ ಕುಮಾರಸ್ವಾಮಿಗೆ ಹಾರ್ಟ್‌ ಪ್ರಾಬ್ಲಮ್‌ ಬರುತ್ತೆ &#8211; ಶಾಸಕ ರಮೇಶ್ ಬಂಡಿಸಿದ್ದೇಗೌಡ ವ್ಯಂಗ್ಯ</title>
		<link>https://peepalmedia.com/kumaraswamy-always-gets-hospitalised-just-ahead-of-polls-taunts-karnataka-congress-mla/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 30 Mar 2024 08:09:14 +0000</pubDate>
				<category><![CDATA[ಮಂಡ್ಯ]]></category>
		<category><![CDATA[congress adhyaksha]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[kumaraswami]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37727</guid>

					<description><![CDATA[ಮಂಡ್ಯ, ಮಾರ್ಚ್ 30: ಕರ್ನಾಟಕದ ಕಾಂಗ್ರೆಸ್ ಶಾಸಕ ರಮೇಶ್ ಶನಿವಾರ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರನ್ನು ಲೇವಡಿ ಮಾಡಿದ್ದಾರೆ. ಚುನಾವಣೆಗೂ ಮುನ್ನ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗುತ್ತಾರೆ ಎಂದು ಅವರು ಸಭೆಯೊಂದರಲ್ಲಿ ಕುಮಾರಸ್ವಾಮಿಯವರ ಕಾಲೆಳೆದಿದ್ದಾರೆ. ಮಳವಳ್ಳಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ, &#8221;ಚುನಾವಣೆ ಹತ್ತಿರ ಬಂದಾಗಲೆಲ್ಲಾ ಕುಮಾರಸ್ವಾಮಿ ಅವರು ಹೃದಯ ಸಮಸ್ಯೆಯ ನೆಪದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಾರೆ&#8221; ಎಂದು ಹೇಳಿದರು ‘ಈ ಬಾರಿ ಕುಮಾರಸ್ವಾಮಿ ಅವರು ಹೃದಯ [&#8230;]]]></description>
										<content:encoded><![CDATA[
<p><br>ಮಂಡ್ಯ, ಮಾರ್ಚ್ 30: ಕರ್ನಾಟಕದ ಕಾಂಗ್ರೆಸ್ ಶಾಸಕ ರಮೇಶ್ ಶನಿವಾರ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರನ್ನು ಲೇವಡಿ ಮಾಡಿದ್ದಾರೆ. ಚುನಾವಣೆಗೂ ಮುನ್ನ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗುತ್ತಾರೆ ಎಂದು ಅವರು ಸಭೆಯೊಂದರಲ್ಲಿ ಕುಮಾರಸ್ವಾಮಿಯವರ ಕಾಲೆಳೆದಿದ್ದಾರೆ.</p>



<p>ಮಳವಳ್ಳಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ, &#8221;ಚುನಾವಣೆ ಹತ್ತಿರ ಬಂದಾಗಲೆಲ್ಲಾ ಕುಮಾರಸ್ವಾಮಿ ಅವರು ಹೃದಯ ಸಮಸ್ಯೆಯ ನೆಪದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಾರೆ&#8221; ಎಂದು ಹೇಳಿದರು</p>



<p>‘ಈ ಬಾರಿ ಕುಮಾರಸ್ವಾಮಿ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮೂರು ದಿನ ಆಸ್ಪತ್ರೆಯಲ್ಲಿದ್ದರು, ಇದಾದ ನಂತರ ಮರುದಿನವೇ ಪ್ರವಾಸಕ್ಕೆ ತೆರಳಿದರು. ಇದು ಹೇಗೆ ಸಾಧ್ಯ?’ ಎಂದು ಶಾಸಕ ರಮೇಶ್ ಪ್ರಶ್ನಿಸಿದರು.</p>



<p>&#8221;ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರಿಗೂ ಕುಮಾರಸ್ವಾಮಿಯಂತೆ ಹೃದಯ ಸಂಬಂಧಿ ಕಾಯಿಲೆ ಇದೆ. ಆದರೆ, ಚೆಲುವರಾಯಸ್ವಾಮಿ ಕಾಯಿಲೆಗೆ ಚಿಕಿತ್ಸೆ ಪಡೆದಾಗ ತಿಂಗಳುಗಟ್ಟಲೆ ಆಸ್ಪತ್ರೆಯಲ್ಲಿರಬೇಕಾಗುತ್ತದೆ.</p>



<p>ಅಷ್ಟಕ್ಕೂ ಎರಡು-ಮೂರು ದಿನದೊಳಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡು ಡಿಸ್ಚಾರ್ಜ್ ಆಗುವುದು ಸಾಧ್ಯವಾದರೆ ಅದರ ಬಗ್ಗೆ ತಿಳಿದುಕೊಳ್ಳಬೇಕು ಎಂದು ರಮೇಶ್ ಮತ್ತಷ್ಟು ವ್ಯಂಗ್ಯವಾಡಿದರು.</p>



<p>ಸಮಸ್ಯೆಗಳನ್ನು ಸೃಷ್ಟಿಸುವ ಜನರ ಮಾತಿಗೆ ಕಿವಿಗೊಡಬೇಡಿ, ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಗಮನಾರ್ಹ ಅಂತರದಿಂದ ಗೆಲ್ಲಿಸಿ ಎಂದು ಅವರು ಮನವಿ ಮಾಡಿದರು.</p>



<p>ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಾರ್ಚ್ 21ರಂದು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದು ಅವರ ಮೂರನೇ ಶಸ್ತ್ರಚಿಕಿತ್ಸೆಯಾಗಿತ್ತು.</p>
]]></content:encoded>
					
		
		
			</item>
		<item>
		<title>Big Breaking : ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಕಣಕ್ಕೆ</title>
		<link>https://peepalmedia.com/hd-kumaraswamy-as-jds-candidate-for-mandya-constituency/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 26 Mar 2024 12:56:15 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಮಂಡ್ಯ]]></category>
		<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[kumaraswami]]></category>
		<category><![CDATA[mandya]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37531</guid>

					<description><![CDATA[ಹಾಸನ ಹೊರತುಪಡಿಸಿ ಜೆಡಿಎಸ್ ಪಕ್ಷದ ಮೂರು ಲೋಕಸಭಾ ಅಭ್ಯರ್ಥಿಗಳ ಸ್ಥಾನದ ಬಗ್ಗೆ ಈಗ ಜೆಡಿಎಸ್ ಪಕ್ಷದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಅದರಂತೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ. ಇಂದು ಮಂಗಳವಾರ, ಬೆಂಗಳೂರಿನಲ್ಲಿರುವ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷ ಹೆಸರಿಸಿದೆ. ಆ [&#8230;]]]></description>
										<content:encoded><![CDATA[
<p>ಹಾಸನ ಹೊರತುಪಡಿಸಿ ಜೆಡಿಎಸ್ ಪಕ್ಷದ ಮೂರು ಲೋಕಸಭಾ ಅಭ್ಯರ್ಥಿಗಳ ಸ್ಥಾನದ ಬಗ್ಗೆ ಈಗ ಜೆಡಿಎಸ್ ಪಕ್ಷದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಅದರಂತೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ.</p>



<p>ಇಂದು ಮಂಗಳವಾರ, ಬೆಂಗಳೂರಿನಲ್ಲಿರುವ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷ ಹೆಸರಿಸಿದೆ. ಆ ಮೂಲಕ ಕಳೆದ ಬಾರಿಯಂತೆ ಮಂಡ್ಯದಲ್ಲಿ ಹೈವೋಲ್ಟೇಜ್ ಚುನಾವಣಾ ಕದನ ನಿರೀಕ್ಷಿಸಲಾಗಿದೆ. ಅಲ್ಲದೇ ಹಾಸನ ಕ್ಷೇತ್ರಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕಿಳಿಸಿದೆ.</p>



<p>ಕೋಲಾರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಬಿಜೆಪಿಯೊಂದಿಗೆ ತೀವ್ರ ಚೌಕಾಸಿ ನಡೆಸಿದ್ದ ಪಕ್ಷವು ಇನ್ನೂ ಅಭ್ಯರ್ಥಿಯನ್ನು ಹೆಸರಿಸಿಲ್ಲ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಂಗಾರಪೇಟೆ ಕ್ಷೇತ್ರದಲ್ಲಿ ಪರಾಜಿತ ಅಭ್ಯರ್ಥಿ ಮಲ್ಲೇಶ್ ಬಾಬು ಅವರೇ ಮುಂಚೂಣಿಯಲ್ಲಿದ್ದರೂ, ಇನ್ನೂ ಚರ್ಚೆ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>



<p>ಇನ್ನು ಕೋಲಾರಕ್ಕೆ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಹಾಗೂ ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಹೆಸರನ್ನು ಪರಿಗಣಿಸಲಾಗುತ್ತಿದೆ. ಕೋಲಾರದಿಂದ ಸ್ಪರ್ಧಿಸುವ ಅಭ್ಯರ್ಥಿಯನ್ನೂ ಮಂಗಳವಾರ ಪ್ರಕಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ.</p>
]]></content:encoded>
					
		
		
			</item>
		<item>
		<title>ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ವಜಾ</title>
		<link>https://peepalmedia.com/deve-gowda-ousts-c-m-ibrahim-from-jds-state-president-post/</link>
		
		<dc:creator><![CDATA[Charan Aivarnad]]></dc:creator>
		<pubDate>Fri, 17 Nov 2023 13:24:44 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[#Kumaraswamy]]></category>
		<category><![CDATA[bengalure]]></category>
		<category><![CDATA[breaking news]]></category>
		<category><![CDATA[cm ibrahim]]></category>
		<category><![CDATA[devegowda]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Kumara]]></category>
		<category><![CDATA[kumaraswami]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=32499</guid>

					<description><![CDATA[ಬೆಂಗಳೂರು: ಬಿಜೆಪಿ ಜೊತೆಗಿನ ಜೆಡಿಎಸ್‌ ಮೈತ್ರಿಯ ಬಗ್ಗೆ ಸತತ ಅಸಮಧಾನ ವ್ಯಕ್ತಪಡಿಸುತ್ತಾ ಬಂದಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ಬೆಂಗಳೂರಿನಲ್ಲಿ ಚಿಂತನ ಮಂಥನ ಎಂಬ ಸಭೆಯನ್ನು ಅಕ್ಟೋಬರ್‌ 16ರಂದು ಕರೆದು ಜೆಡಿಎಸ್‌ ಹಾಗೂ ಬಿಜೆಪಿ ಹೊಂದಾಣಿಕೆಯ ಬಗ್ಗೆ ಮತ್ತು ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯ ಶಾಸಕಾಂಗ ಪಕ್ಷದ ನಾಯಕರ ವಿರುದ್ದ ಬೇಜಾವಬ್ದಾರಿಯುತ ಹೇಳಿಕೆಗಳನ್ನು ಸಿಎಂ ಇಬ್ರಾಹಿಂ ಅವರು ನೀಡಿರುವುದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಹಾಗಾಗಿ, ಪಕ್ಷದ ಹಿತದೃಷ್ಟಿಯಿಂದ ಇವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಬಿಜೆಪಿ ಜೊತೆಗಿನ ಜೆಡಿಎಸ್‌ ಮೈತ್ರಿಯ ಬಗ್ಗೆ ಸತತ ಅಸಮಧಾನ ವ್ಯಕ್ತಪಡಿಸುತ್ತಾ ಬಂದಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. </p>



<p>ಬೆಂಗಳೂರಿನಲ್ಲಿ ಚಿಂತನ ಮಂಥನ ಎಂಬ ಸಭೆಯನ್ನು ಅಕ್ಟೋಬರ್‌ 16ರಂದು ಕರೆದು ಜೆಡಿಎಸ್‌ ಹಾಗೂ ಬಿಜೆಪಿ ಹೊಂದಾಣಿಕೆಯ ಬಗ್ಗೆ ಮತ್ತು ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯ ಶಾಸಕಾಂಗ ಪಕ್ಷದ ನಾಯಕರ ವಿರುದ್ದ ಬೇಜಾವಬ್ದಾರಿಯುತ ಹೇಳಿಕೆಗಳನ್ನು ಸಿಎಂ ಇಬ್ರಾಹಿಂ ಅವರು ನೀಡಿರುವುದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಹಾಗಾಗಿ, ಪಕ್ಷದ ಹಿತದೃಷ್ಟಿಯಿಂದ ಇವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹೆಚ್‌ ಡಿ ದೇವೇಗೌಡರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>



<p>“ಜೆಡಿಎಸ್‌ನ ಹಿಂದಿನ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಶಾಸಕರಾದ ಎಸ್.ಎಲ್. ಬೋಜೇಗೌಡ ಅಕ್ಟೋಬರ್‌ 19 ರಂದು ನೀಡಿದ ವರದಿಯಲ್ಲಿ &nbsp;ಪಕ್ಷದ ಸಂಘಟನೆ ಮತ್ತು ಬಲವರ್ಧಗೆ ಯಾವುದೇ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸಿಲ್ಲ, ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯಾಧ್ಯಕ್ಷರು ಒಳಗೊಂಡಂತೆ ರಾಜ್ಯ ಪರಿಷತ್‌ನ ಕಾರ್ಯಕಾರಿ ಸಮಿತಿ ನಿಷ್ಕ್ರಿಯವಾಗಿರುವುದು ವರದಿಯಲ್ಲಿ ಕಂಡುಬಂದಿದೆ,” ಎಂದು ದೇವೇಗೌಡರು ತಿಳಿಸಿದ್ದಾರೆ.</p>



<p>&#8220;ಸಪ್ಟೆಂಬರ್‌ 6 ಮತ್ತು 10 ಹಾಗೂ ಅಕ್ಟೋಬರ್‌ 1ರಂದು ನಡೆದ ಪಕ್ಷದ ಸಭೆಯಲ್ಲಿ&nbsp; ಬಿಜೆಪಿ-ಜೆಡಿಎಸ್‌ ಮೈತ್ರಿಯ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿತ್ತು. ಈ ಸಭೆಗಳಲ್ಲಿ ಸಿಎಂ ಇಬ್ರಾಹಿಂ ರವರು ಉಪಸ್ಥಿತರಿದ್ದರು. ನಂತರ ಸಭೆಯ ತೀರ್ಮಾನಗಳ ವಿರುದ್ಧ ವಿರೋಧಭಾಸ ಹೇಳಿಕೆ ನೀಡುತ್ತಿರುವುದಾಗಿ ವರದಿಯಾಗಿದೆ.&#8221;</p>



<p>ಸಿಎಂ ಇಬ್ರಾಹಿಂ ಅವರ ಪಕ್ಷವಿರೋಧಿ ನಡವಳಿಕೆಗಳ ಹಿನ್ನಲೆಯಲ್ಲಿ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರನ್ನೊಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನದ(Article XX -10) ಅನ್ವಯ ಅಮಾನತ್ತು ಮಾಡಲಾಗಿದೆ ಎಂದು ಹೆಚ್‌ಡಿ ದೇವೇಗೌಡರು ತಿಳಿಸಿದ್ದಾರೆ.</p>



<p>ನವೆಂಬರ್‌ 7ರಂದು ನೀಡಿದ ಹೇಳಿಕೆಯಲ್ಲಿ ಸಿಎಂ ಇಬ್ರಾಹಿಂ, ನಾನಿನ್ನೂ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಮುಂದುವರಿದಿದ್ದೇನೆ ಎಂದು ತಿಳಿಸಿ, ಬಿಜೆಪಿ ಜತೆ ಮೈತ್ರಿಗೆ ಒಲವು ಇರುವವರೆಲ್ಲರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಪಕ್ಷ ವಿರೋಧಿ ಹೇಳಿಕೆಯನ್ನೂ ನೀಡಿರುತ್ತಾರೆ.</p>



<p>ನವೆಂಬರ್‌ 15ರಂದು ಕೇರಳದ ತಿರುವನಂತಪುರದಲ್ಲಿ ಸಿ.ಕೆ.ನಾನು ಅವರ ನೇತೃತ್ವದಲ್ಲಿ ಪಕ್ಷ ವಿರೋಧಿ ಸಭೆಯನ್ನು ನಡೆಸಿ, ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುತ್ತಾರೆ. ಇವೆಲ್ಲಾ ನಡವಳಿಕೆ, ಹೇಳಿಕೆಗಳ ಹಿನ್ನೆಲೆಯಲ್ಲಿ ಸಿಎಂ ಇಬ್ರಾಹಿಂ ಅವರು ಪಕ್ಷದ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷರು ತಿಳಿಸಿದ್ದಾರೆ.</p>


<div class="wp-block-image">
<figure class="aligncenter size-full is-resized"><img fetchpriority="high" decoding="async" width="659" height="898" src="https://peepalmedia.com/wp-content/uploads/2023/11/image-60.png" alt="" class="wp-image-32507" style="width:312px;height:auto" srcset="https://peepalmedia.com/wp-content/uploads/2023/11/image-60.png 659w, https://peepalmedia.com/wp-content/uploads/2023/11/image-60-220x300.png 220w, https://peepalmedia.com/wp-content/uploads/2023/11/image-60-150x204.png 150w, https://peepalmedia.com/wp-content/uploads/2023/11/image-60-300x409.png 300w" sizes="(max-width: 659px) 100vw, 659px" /></figure></div>

<div class="wp-block-image">
<figure class="aligncenter size-full is-resized"><img decoding="async" width="652" height="915" src="https://peepalmedia.com/wp-content/uploads/2023/11/image-61.png" alt="" class="wp-image-32509" style="width:283px;height:auto" srcset="https://peepalmedia.com/wp-content/uploads/2023/11/image-61.png 652w, https://peepalmedia.com/wp-content/uploads/2023/11/image-61-214x300.png 214w, https://peepalmedia.com/wp-content/uploads/2023/11/image-61-150x211.png 150w, https://peepalmedia.com/wp-content/uploads/2023/11/image-61-300x421.png 300w" sizes="(max-width: 652px) 100vw, 652px" /></figure></div>

<div class="wp-block-image">
<figure class="aligncenter size-full is-resized"><img decoding="async" width="647" height="677" src="https://peepalmedia.com/wp-content/uploads/2023/11/image-62.png" alt="" class="wp-image-32511" style="width:300px;height:auto" srcset="https://peepalmedia.com/wp-content/uploads/2023/11/image-62.png 647w, https://peepalmedia.com/wp-content/uploads/2023/11/image-62-287x300.png 287w, https://peepalmedia.com/wp-content/uploads/2023/11/image-62-150x157.png 150w, https://peepalmedia.com/wp-content/uploads/2023/11/image-62-300x314.png 300w" sizes="(max-width: 647px) 100vw, 647px" /></figure></div>]]></content:encoded>
					
		
		
			</item>
		<item>
		<title>ವಿದ್ಯುತ್ ಕಳ್ಳತನ ಒಪ್ಪಿಕೊಂಡ ಕುಮಾರಸ್ವಾಮಿಗೆ ಅಭಿನಂದನೆ: ಡಿಸಿಎಂ ಡಿ.ಕೆ.ಶಿವಕುಮಾರ್</title>
		<link>https://peepalmedia.com/congratulations-to-kumaraswamy-for-admitting-electricity-theft/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 14 Nov 2023 12:11:12 +0000</pubDate>
				<category><![CDATA[ರಾಜಕೀಯ]]></category>
		<category><![CDATA[dkshivkumar]]></category>
		<category><![CDATA[karnataka]]></category>
		<category><![CDATA[kumaraswami]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=32086</guid>

					<description><![CDATA[“ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಅವರು ಒಪ್ಪಿಕೊಂಡು, ದಂಡ ಕಟ್ಟುತ್ತೇನೆ ಎಂದು ಹೇಳಿರುವುದು ಅಭಿನಂದನೀಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. &#8220;ಕುಮಾರಸ್ವಾಮಿ ಅವರು ಮನೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಮಾಡಿಕೊಂಡಿದ್ದಾರೆ&#8221; ಎಂಬ ಬಗ್ಗೆ ಮಾಧ್ಯಮಗಳ ವರದಿ ಹಾಗೂ ಕಾಂಗ್ರೆಸ್ ಪಕ್ಷದ &#8216;ಎಕ್ಸ್&#8217; ಖಾತೆಯಲ್ಲಿ ಮಾಡಿರುವ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ವಿಧಾನಸೌಧ ಹಾಗೂ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಡಿಸಿಎಂ ಡಿ‌.ಕೆ.ಶಿವಕುಮಾರ್ ಅವರು ಮಂಗಳವಾರ ಈ ರೀತಿ ಉತ್ತರಿಸಿದರು. [&#8230;]]]></description>
										<content:encoded><![CDATA[
<p>“ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಅವರು ಒಪ್ಪಿಕೊಂಡು, ದಂಡ ಕಟ್ಟುತ್ತೇನೆ ಎಂದು ಹೇಳಿರುವುದು ಅಭಿನಂದನೀಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.</p>



<p>&#8220;ಕುಮಾರಸ್ವಾಮಿ ಅವರು ಮನೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಮಾಡಿಕೊಂಡಿದ್ದಾರೆ&#8221; ಎಂಬ ಬಗ್ಗೆ ಮಾಧ್ಯಮಗಳ ವರದಿ ಹಾಗೂ ಕಾಂಗ್ರೆಸ್ ಪಕ್ಷದ &#8216;ಎಕ್ಸ್&#8217; ಖಾತೆಯಲ್ಲಿ ಮಾಡಿರುವ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ವಿಧಾನಸೌಧ ಹಾಗೂ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಡಿಸಿಎಂ ಡಿ‌.ಕೆ.ಶಿವಕುಮಾರ್ ಅವರು ಮಂಗಳವಾರ ಈ ರೀತಿ ಉತ್ತರಿಸಿದರು.</p>



<p>&#8220;ಕುಮಾರಸ್ವಾಮಿ ಮನೆಗೆ ವಿದ್ಯುತ್ ಕಳವು ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅವರ ನೆರೆಹೊರೆಯವರೇ ಅಕ್ರಮ ವಿದ್ಯುತ್ ಸಂಪರ್ಕದ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ. ಆನಂತರ ನಮ್ಮ ಪಕ್ಷದ ಸಾಮಾಜಿಕ ಜಾಲತಾಣ ಘಟಕ ಏನು ಕೆಲಸ ಮಾಡಬೇಕೊ ಅದನ್ನು ಮಾಡಿದೆ. ಅವರ ಪಕ್ಷದ ಸೋಶಿಯಲ್ ಮೀಡಿಯಾದಲ್ಲಿ ಬೇಕಾದಷ್ಟು ಬರೆದಂತೆ, ನಮ್ಮ ಪಕ್ಷದವರು ಏನು ಕೆಲಸ ಮಾಡಬೇಕೋ ಅದನ್ನು ಮಾಡಿದ್ದಾರೆ. ಅವರು ಮಾಡೋದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳಲು ಆಗುತ್ತದೆಯೇ?” ಎಂದು ಮರುಪ್ರಶ್ನಿಸಿದರು.</p>



<p><em><strong>ಸರ್ಕಾರ ಮಧ್ಯೆ ಪ್ರವೇಶ ಮಾಡುವುದಿಲ್ಲ</strong></em></p>



<p>ಕುಮಾರಸ್ವಾಮಿ ಅವರು ಈ ರೀತಿಯ ಕೆಲಸ ಮಾಡಿರುವುದು ತಪ್ಪಲ್ಲವೇ ಎಂದು ಕೇಳಿದಾಗ, &#8220;ವಿದ್ಯುತ್ ಕಳ್ಳತನ ಮಾಡಬಾರದು, ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ನಮ್ಮಂತವವರೇ ಹೀಗೆ ಕಳವು ಮಾಡಿದರೆ ತಪ್ಪಲ್ಲವೇ? ಸಂಬಂಧಿಸಿದ ಇಲಾಖೆಯವರು ಏನು ಕ್ರಮ ತೆಗೆದುಕೊಳ್ಳುತ್ತಾರೋ ನೋಡೋಣ. ಈ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ, ನಮಗೆ ಅದರ ಅವಶ್ಯಕತೆಯೂ ಇಲ್ಲ ಮತ್ತು ಸಮಯವೂ ಇಲ್ಲ. ಬೆಸ್ಕಾಂನವರು ಕ್ರಮ ತೆಗೆದುಕೊಳ್ಳುತ್ತಾರೆ&#8221; ಎಂದರು.</p>



<p>ಕುಮಾರಸ್ವಾಮಿ ಅವರು ಸತ್ಯವನ್ನು ಒಪ್ಪಿಕೊಂಡಿರುವುದಕ್ಕೆ ಶುಭವಾಗಲಿ, ಸತ್ಯಮೇವ ಜಯತೇ ಎನ್ನುವ ಮಾತಿನಂತೆ ಸತ್ಯವನ್ನ ಎತ್ತಿ ಹಿಡಿದಿರುವುದಕ್ಕೆ ಸಂತೋಷ ಎಂದು ಹೇಳಿದರು.</p>



<p><em><strong>ದೇವೇಗೌಡರ ಮೌಲ್ಯ, ಜಾತಿ ಕೆಡಿಸಿದ ಕುಮಾರಸ್ವಾಮಿ</strong></em></p>



<p>&#8220;ಕುಮಾರಸ್ವಾಮಿ ಅವರು ದೇವೇಗೌಡರ ಕೊನೆಗಾಲದಲ್ಲಿ ಅವರ ಜಾತಿ ಕೆಡಿಸಿದ್ದಾರೆ. ದೇವೇಗೌಡರು ಜೀವನದ ಉದ್ದಕ್ಕೂ ಕಾಪಾಡಿಕೊಂಡು ಬಂದಿದ್ದ ಮೌಲ್ಯಗಳನ್ನ ಅವರ ಕೊನೆಗಾಲದಲ್ಲಿ ಕುಮಾರಸ್ವಾಮಿ ನಾಶ ಮಾಡಿದ್ದಾರೆ” ಎಂದು ಛೇಡಿಸಿದರು.</p>



<p>“ಹಿರಿಯರಾದ ದೇವೇಗೌಡರಿಗೆ ವಿಧಿಯೇ ಇಲ್ಲದಂತೆ ಕುಮಾರಸ್ವಾಮಿ ಮಾಡಿದ್ದು ನೋಡಿದರೆ, ನನಗೆ ಮಾತುಗಳೇ ಹೊರಡುತ್ತಿಲ್ಲ, ನನಗೇ ಅಯ್ಯೋ ಅನಿಸುತ್ತದೆ. I feel very sorry. ಎನ್‌ಡಿಎ ಸರ್ಕಾರದ ಜೊತೆ ಕೈ ಜೋಡಿಸಿರುವ ಕುಮಾರಸ್ವಾಮಿ ಅವರಿಗೆ ಒಳ್ಳೆಯದಾಗಲಿ” ಎಂದು ಹೇಳಿದರು.</p>



<p><em><strong>ಕುಮಾರಸ್ವಾಮಿ ಅಸೂಯೆಗೆ ಮದ್ದಿಲ್ಲ:</strong></em></p>



<p>ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ, ಈ ವಿಚಾರವಾಗಿ ಚರ್ಚೆಗೆ ಸಿದ್ಧ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ, &#8220;ಪಾಪ, ಕುಮಾರಸ್ವಾಮಿ ಅವರಿಗೆ ಅಸೂಯೆ, ಈ ಅಸೂಯೆಗೆ ಯಾವುದೇ ಮದ್ದಿಲ್ಲ. ನನಗೆ ಈ ಅವಕಾಶ ಸಿಕ್ಕಿಲ್ಲವಲ್ಲ ಎಂದು ಕೈ, ಕೈ ಹಿಸುಕಿಕೊಳ್ಳುತ್ತಿದ್ದಾರೆ&#8221; ಎಂದರು.</p>



<p>“ಶಕ್ತಿ ಯೋಜನೆಯಿಂದ ಈವರೆಗೂ ರಾಜ್ಯದ ಮಹಿಳೆಯರು 100 ಕೋಟಿ ರೂಪಾಯಿ ಮೌಲ್ಯದ ಬಸ್ ಟ್ರಿಪ್ ಗಳಲ್ಲಿ ಉಚಿತವಾಗಿ ಓಡಾಡಿದ್ದಾರೆ‌. ಪ್ರತಿ ತಿಂಗಳು 1 ಕೋಟಿಗೂ ಹೆಚ್ಚಿನ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ತಲುಪುತ್ತಿದೆ. ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣದ ಜನತೆ ಸೇರಿದಂತೆ ಅವರ ಪಕ್ಷದ ಕಾರ್ಯಕರ್ತರ ಬಳಿ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿದೆಯೋ ಅಥವಾ ಅವರ ಸ್ವಂತ ದುಡ್ಡು ಹೋಗುತ್ತಿದೆಯೋ ಎನ್ನುವ ಬಗ್ಗೆ ಮಾಹಿತಿ ಕೇಳಲಿ” ಎಂದು ಸವಾಲು ಹಾಕಿದರು.</p>



<p>ನನ್ನ ಆಡಳಿತಾವಧಿಯಲ್ಲಿ ನಾನು ಸಾಲಮನ್ನಾ ಮಾಡಿದ್ದೇನೆ, ಸರ್ಕಾರ ಈಗ ಸಾಲಮನ್ನಾ ಮಾಡಿ ತೋರಿಸಲಿ ಎಂಬ ಕುಮಾರಸ್ವಾಮಿ ಮಾತಿನ ಬಗ್ಗೆ ಕೇಳಿದಾಗ, &#8220;ಅವರ ಸವಾಲನ್ನು ಅತ್ಯಂತ ಸಂತೋಷ, ಗೌರವದಿಂದ ಸ್ವೀಕರಿಸುತ್ತೇವೆ. ಡಿ. 4 ನೇ ತಾರೀಖಿನ ನಂತರ ಅವರ ಎಲ್ಲಾ ಕಡತಗಳು, ಲೆಕ್ಕಾಚಾರಗಳು, ಗ್ಯಾರಂಟಿಗಳು, ಸವಾಲುಗಳನ್ನು ತೆಗೆದುಕೊಂಡು ವಿಧಾನಸಭೆ ಅಧಿವೇಶನಕ್ಕೆ ಬರಲಿ. ಅವರ ಭರವಸೆ, ಆಡಿದ ಮಾತುಗಳು, ಪಂಚರತ್ನಗಳು ಮತ್ತು ಈ ಹಿಂದೆ ಏನೇನೆಲ್ಲಾ ಹೇಳಿದ್ದರು ಅದನ್ನೆಲ್ಲಾ ತೆಗೆದುಕೊಂಡು ವಿಧಾನಸಭೆಗೆ ಬರಲಿ. ಅಲ್ಲಿ ಅವರ ನುಡಿಮುತ್ತುಗಳನ್ನು ಕೇಳೋಣ. ಅವರ ಸವಾಲು, ಪಂಚರತ್ನಗಳಿಗೆ ಕರ್ನಾಟಕ ಜನ ಈಗಾಗಲೇ ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ. ಅದೇ ರೀತಿ ನಮ್ಮ ಗ್ಯಾರಂಟಿಗಳಿಗೂ ಉತ್ತರ ಕೊಟ್ಟಿದ್ದಾರೆ” ಎಂದರು.</p>
]]></content:encoded>
					
		
		
			</item>
		<item>
		<title>ವಿದ್ಯುತ್ ಕಳ್ಳತನದ ಆರೋಪ : ಹೆಚ್ಡಿಕೆ ಮನೆಗೆ ಭೇಟಿ ನೀಡಿದ ಬೆಸ್ಕಾಂ ಅಧಿಕಾರಿಗಳು ; ದಂಡ ಪಾವತಿಗೆ ಸಿದ್ಧ ಎಂದ ಕುಮಾರಸ್ವಾಮಿ</title>
		<link>https://peepalmedia.com/kumaraswamy-said-he-is-ready-to-pay-the-fine/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 14 Nov 2023 08:58:33 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[bescom]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[kumaraswami]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=32044</guid>

					<description><![CDATA[ಮನೆಯ ವಿದ್ಯುತ್ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ತಗೆದುಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯವಾಡಿದೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದಲ್ಲಿ &#8220;ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ. ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ&#8221; ವ್ಯಂಗ್ಯವಾಡಿದೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಎಕ್ಸ್‌ನಲ್ಲಿ ಕಾಂಗ್ರೆಸ್‌ ಪೋಸ್ಟ್‌ ಮಾಡಿ ಕಿಡಿಕಾರಿದೆ. ಇದಕ್ಕೆ [&#8230;]]]></description>
										<content:encoded><![CDATA[
<p>ಮನೆಯ ವಿದ್ಯುತ್ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ತಗೆದುಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯವಾಡಿದೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದಲ್ಲಿ &#8220;ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ. ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ&#8221; ವ್ಯಂಗ್ಯವಾಡಿದೆ.</p>



<p>ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಎಕ್ಸ್‌ನಲ್ಲಿ ಕಾಂಗ್ರೆಸ್‌ ಪೋಸ್ಟ್‌ ಮಾಡಿ ಕಿಡಿಕಾರಿದೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ.<br><br>ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!<a href="https://twitter.com/hd_kumaraswamy?ref_src=twsrc%5Etfw">@hd_kumaraswamy</a> ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್… <a href="https://t.co/7GKHeRyQuS">pic.twitter.com/7GKHeRyQuS</a></p>&mdash; Karnataka Congress (@INCKarnataka) <a href="https://twitter.com/INCKarnataka/status/1724299863586963705?ref_src=twsrc%5Etfw">November 14, 2023</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ಇದಕ್ಕೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ&#8221; ಎಂದು ಅವರು ಟ್ವೀಟ್ ಮಾಡಿದ್ದಾರೆ.</p>



<p>&#8220;ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ.&#8221; ಎಂದು ಟ್ವಿಟ್ ಮಾಡಿದ್ದಾರೆ.</p>



<p>ಈಗಾಗಲೇ ಬೆಸ್ಕಾಂ ಅಧಿಕಾರಿಗಳು ಕುಮಾರಸ್ವಾಮಿ ಮನೆಗೆ ಭೇಟಿ ನೀಡಿ ಎಷ್ಟು ವಿದ್ಯುತ್ ಸೋರಿಕೆಯಾಗಿದೆ ಎಂದು ಪರಿಶೀಲಿಸುತ್ತಿದ್ದಾರೆ. ಮಾಹಿತಿಯ ಪ್ರಕಾರ ಇಂತಹ ಪ್ರಕರಣಗಳಲ್ಲಿ 50,000 ಸಾವಿರದ ವರೆಗೂ ದಂಡ ವಿಧಿಸಬಹುದು ಎಂದು ತಿಳಿದು ಬಂದಿದೆ.</p>
]]></content:encoded>
					
		
		
			</item>
		<item>
		<title>ಪಂಚರತ್ನ ರಥಯಾತ್ರೆಯು ಯಾವ ಜಾತಿಗೂ ಸೀಮಿತ ಅಲ್ಲ: ಹೆಚ್.ಡಿ ದೇವೇಗೌಡ</title>
		<link>https://peepalmedia.com/pancharatna-rath-yatra-is-not-limited-to-any-caste-hd-deve-gowda/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 19 Nov 2022 06:24:14 +0000</pubDate>
				<category><![CDATA[ಕೋಲಾರ]]></category>
		<category><![CDATA[bengalure]]></category>
		<category><![CDATA[devegbowda]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[kolara]]></category>
		<category><![CDATA[kumaraswami]]></category>
		<category><![CDATA[mulabagal]]></category>
		<category><![CDATA[news]]></category>
		<category><![CDATA[pancharathna rathayathre]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=15880</guid>

					<description><![CDATA[ಕೋಲಾರ : ಜೆಡಿಎಸ್‌ ನ ಮೊದಲನೆ ದಿನದ ಪಂಚರತ್ನ ರಥಯಾತ್ರೆ ಯಶಸ್ವಿಯಾಗಿ ಪೂರೈಸಿದ್ದು, ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಶುಕ್ರವಾರದಂದು ಯೋಜನೆಗೆ ಚಾಲನೆ ನೀಡಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶುಕ್ರವಾರದಂದು ಬೃಹತ್‌ ಸಮಾವೇಶ ನಡೆಸುವುದರ ಮೂಲಕ ಜೆಡಿಎಸ್‌ನ ಪಕ್ಷದ ಮಹಾತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಪಂಚರತ್ನ ಯೋಜನೆಗೆ ರಾಜ್ಯದ&#160; ವಿವಿಧೆಡೆಯಿಂದ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದು, ಈಗಾಗಲೇ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಿಗೆ ಬಸ್‌ ಚಾಲನೆ ನೀಡಲಾಗಿದೆ. ಮತ್ತಷ್ಟು [&#8230;]]]></description>
										<content:encoded><![CDATA[
<p><strong>ಕೋಲಾರ </strong>: ಜೆಡಿಎಸ್‌ ನ ಮೊದಲನೆ ದಿನದ ಪಂಚರತ್ನ ರಥಯಾತ್ರೆ ಯಶಸ್ವಿಯಾಗಿ ಪೂರೈಸಿದ್ದು, ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಶುಕ್ರವಾರದಂದು ಯೋಜನೆಗೆ ಚಾಲನೆ ನೀಡಿದ್ದಾರೆ.</p>



<p>ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶುಕ್ರವಾರದಂದು ಬೃಹತ್‌ ಸಮಾವೇಶ ನಡೆಸುವುದರ ಮೂಲಕ ಜೆಡಿಎಸ್‌ನ ಪಕ್ಷದ ಮಹಾತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಪಂಚರತ್ನ ಯೋಜನೆಗೆ ರಾಜ್ಯದ&nbsp; ವಿವಿಧೆಡೆಯಿಂದ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದು, ಈಗಾಗಲೇ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಿಗೆ ಬಸ್‌ ಚಾಲನೆ ನೀಡಲಾಗಿದೆ. ಮತ್ತಷ್ಟು ಮಂದಿ ರಥಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.</p>



<figure class="wp-block-image size-full"><img loading="lazy" decoding="async" width="768" height="512" src="https://peepalmedia.com/wp-content/uploads/2022/11/ಯಾತ್ರೆ.jpg" alt="" class="wp-image-15882" srcset="https://peepalmedia.com/wp-content/uploads/2022/11/ಯಾತ್ರೆ.jpg 768w, https://peepalmedia.com/wp-content/uploads/2022/11/ಯಾತ್ರೆ-300x200.jpg 300w, https://peepalmedia.com/wp-content/uploads/2022/11/ಯಾತ್ರೆ-150x100.jpg 150w, https://peepalmedia.com/wp-content/uploads/2022/11/ಯಾತ್ರೆ-696x464.jpg 696w" sizes="auto, (max-width: 768px) 100vw, 768px" /></figure>



<p>ಪಂಚರತ್ನ ಯೋಜನೆಯ ಮೊದಲನೇ ದಿನದ ಚಾಲನೆಯ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಜಿ.ಡಿ ದೇವೇಗೌಡರು, ಪಕ್ಷದ ಅಧ್ಯಕ್ಷರಾದ ಸಿ.ಎಂ ಇಬ್ರಾಹಿಂ ಸೇರಿದಂತೆ ಹಲವು ಜೆಡಿಎಸ್‌ ಮುಖಂಡರು ಭಾಗವಗಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ.</p>


<p><span style="font-family: 'Tunga',sans-serif;">ಕಾರ್ಯಕ್ರಮವನ್ನು ಉದ್ಧೇಶಿಸಿಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, </span><span style="font-family: 'Arial',sans-serif;">ʼ</span><span style="font-family: 'Tunga',sans-serif;">ಪಂಚರತ್ನ ರಥಯಾತ್ರೆ ಅನ್ನೋದು ಯಾವ ಜಾತಿಗೂಸೀಮಿತ ಅಲ್ಲ. ನಾಡಿನ ಸಮಸ್ತ ಜನರಿಗೆ ಜಾತಿ ಬೇಧ ಇಲ್ಲ</span><span style="font-family: 'Arial',sans-serif;">ʼ </span><span style="font-family: 'Tunga',sans-serif;">ಎಂದು<br />ಮಾತನಾಡಿದ್ದಾರೆ. </span></p>
<p><!-- /wp:post-content --><!-- wp:paragraph --></p>

<!-- wp:paragraph -->
<p>ಈ ಕುರಿತು ಜೆಡಿಎಸ್‌ ಪರ್ವ ಫೇಸ್‌ಬುಕ್‌ ಖಾತೆಯಲ್ಲಿ ವಿಷಯ ಹಂಚಿಕೊಂಡಿದ್ದು, ʼಮೂಡಲಬಾಗಿಲು ದ್ವಾಪರಯುಗದಲ್ಲಿ ಶ್ರೀಕೃಷ್ಣ ನ ಆಜ್ಞೆಯ ಮೇರೆಗೆ ಅರ್ಜುನನಿಂದ ಪ್ರತಿಷ್ಟಾಪಿಸಲಾದ ಪುರಾಣ ಪ್ರಸಿದ್ಧ ಆಂಜನೇಯ ದೇವಸ್ಥಾನ ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರವಾಗಿದೆ&#8230; ಮಣ್ಣಿನ ಮಗನ ದೇವೇಗೌಡರ ಪೂಜಾಫಲ ಹಾಗೂ ದೇವರ ಅನುಗ್ರಹದಿಂದ ನೆನ್ನೆ ಮಳೆಯ ತೊಂದರೆಯಿಲ್ಲದೆ ಪಂಚರತ್ನ ಯೋಜನೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಜಿ ಸಚಿವರಾದ ಜಿ.ಟಿ ದೇವೇಗೌಡರು ಪಕ್ಷದ ಅಧ್ಯಕ್ಷರಾದ ಸಿ.ಎಂ ಇಬ್ರಾಹಿಂ ರವರು ಸೇರಿದಂತೆ ಅನೇಕ ಹಿರಿಯ ಹಾಗೂ ಯುವ ಮುಖಂಡರು ಹಾಗೂ ಲಕ್ಷಾಂತರ ಕಾರ್ಯಕರ್ತರು ಈ ಅದ್ದೂರಿ ಕಾರ್ಯಕ್ರಮದಲ್ಲಿ ಸಾಕ್ಷಿಯಾದರು&#8230; ʼ ಎಂದು ಹೇಳಿದ್ದಾರೆ</p>
<!-- /wp:paragraph -->]]></content:encoded>
					
		
		
			</item>
	</channel>
</rss>
