<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>#Kumaraswamy &#8211; Peepal Media</title>
	<atom:link href="https://peepalmedia.com/tag/kumaraswamy/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 01 May 2024 08:25:19 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>#Kumaraswamy &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಪೆನ್ ಡ್ರೈವ್ ಪೀಕಲಾಟ : ಕುಮಾರಣ್ಣನಿಗೆ ಬಿಸಿ ತುಪ್ಪವಾಗ್ತಿರೋ ಬಿಜೆಪಿ</title>
		<link>https://peepalmedia.com/pen-drive-peekalata-kumaranna-is-hot-for-bjp/</link>
		
		<dc:creator><![CDATA[Pragath K R]]></dc:creator>
		<pubDate>Wed, 01 May 2024 08:24:45 +0000</pubDate>
				<category><![CDATA[ರಾಜಕೀಯ]]></category>
		<category><![CDATA[ವಿಶೇಷ]]></category>
		<category><![CDATA[#Kumaraswamy]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[Jds BJP alliance]]></category>
		<category><![CDATA[JDS Dirty Politics]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Prajwal Revanna]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=39001</guid>

					<description><![CDATA[ಪೆನ್ ಡ್ರೈವ್ ಪ್ರಕರಣದ ನಂತರ ಜೆಡಿಎಸ್ ಪಕ್ಷವೇನೋ ಪ್ರಜ್ವಲ್ ರೇವಣ್ಣನನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಕೈ ತೊಳೆದುಕೊಳ್ಳೋ ಕೆಲಸಕ್ಕೆ ಮುಂದಾಗಿದೆ. ಕುಮಾರಸ್ವಾಮಿ ಕೂಡ ನಮಗೂ (ಜೆಡಿಎಸ್ ಪಕ್ಷ ಅಥವಾ ದೇವೇಗೌಡರ ಕುಟುಂಬ ಅನ್ನೋದು ಬಿಡಿಸಿ ಹೇಳಿಲ್ಲ) ರೇವಣ್ಣನ ಕುಟುಂಬಕ್ಕೂ ಸಂಬಂಧ ಇಲ್ಲ. ನಮ್ಮ ಕುಟುಂಬಕ್ಕೂ ಅವರನ ತಳುಕು ಹಾಕಬೇಡಿ. ಅವರು ಅವರದೇ ಸಂಸಾರ ಅಂತ ಬೇರೆ ಇದ್ದಾರೆ ಅಂತೆಲ್ಲಾ ಹೇಳಿ ತಿಪ್ಪೆ ಸಾರಿಸೋಕೆ ನೋಡ್ತಿದ್ದಾರೆ. ಆದರೆ ರಕ್ತ ಸಂಬಂಧ ಅನ್ನೋದನ್ನ ಈ ಜನ್ಮ ಇರೋ ವರೆಗೂ ಅಳಿಸೋಕೆ [&#8230;]]]></description>
										<content:encoded><![CDATA[
<p></p>



<p>ಪೆನ್ ಡ್ರೈವ್ ಪ್ರಕರಣದ ನಂತರ ಜೆಡಿಎಸ್ ಪಕ್ಷವೇನೋ ಪ್ರಜ್ವಲ್ ರೇವಣ್ಣನನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಕೈ ತೊಳೆದುಕೊಳ್ಳೋ ಕೆಲಸಕ್ಕೆ ಮುಂದಾಗಿದೆ. ಕುಮಾರಸ್ವಾಮಿ ಕೂಡ ನಮಗೂ (ಜೆಡಿಎಸ್ ಪಕ್ಷ ಅಥವಾ ದೇವೇಗೌಡರ ಕುಟುಂಬ ಅನ್ನೋದು ಬಿಡಿಸಿ ಹೇಳಿಲ್ಲ) ರೇವಣ್ಣನ ಕುಟುಂಬಕ್ಕೂ ಸಂಬಂಧ ಇಲ್ಲ. ನಮ್ಮ ಕುಟುಂಬಕ್ಕೂ ಅವರನ ತಳುಕು ಹಾಕಬೇಡಿ. ಅವರು ಅವರದೇ ಸಂಸಾರ ಅಂತ ಬೇರೆ ಇದ್ದಾರೆ ಅಂತೆಲ್ಲಾ ಹೇಳಿ ತಿಪ್ಪೆ ಸಾರಿಸೋಕೆ ನೋಡ್ತಿದ್ದಾರೆ. ಆದರೆ ರಕ್ತ ಸಂಬಂಧ ಅನ್ನೋದನ್ನ ಈ ಜನ್ಮ ಇರೋ ವರೆಗೂ ಅಳಿಸೋಕೆ ಸಾಧ್ಯವೇ ಕುಮಾರಣ್ಣಾ?</p>



<p>ಇರಲಿ. ಈ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಲ್ಲಿಯವರೆಗೂ ಕೇವಲ ಪ್ರಜ್ವಲ್ ರೇವಣ್ಣನ ಹೆಸರು ಮಾತ್ರ ಓಡಾಡಿತ್ತು. ಫೋಟೋ ವಿಡಿಯೋ ಸಾಕ್ಷಿಗಳು ಜಗಜ್ಜಾಹೀರಾದ್ವು. ಸ್ವಪಕ್ಷದವರೇ ಛೀ ತೂ ಅಂದ್ರು. ಆದರೆ ವಿಷಯ ಗುಲ್ಲಾಗಿ, ಸಂತ್ರಸ್ತರು ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತುತಿದ್ದಂತೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮ್ಮ ಅಣ್ಣ ರೇವಣ್ಣನ ಹೆಸರೂ ಓಡಾಡ್ತಿದೆ. ದೌರ್ಜನ್ಯ ಪ್ರಕರಣವೊಂದರಲ್ಲಿ ಕುಮಾರಸ್ವಾಮಿ ಅವರ ಅಣ್ಣ ರೇವಣ್ಣ ಕೂಡ  A1 ಆರೋಪಿ. ಇಲ್ಲಿ ಪ್ರಜ್ವಲ್ ಹಾಗೂ ರೇವಣ್ಣ ಇಬ್ಬರ ಮೇಲೂ ಆರೋಪ ಸಾಭೀತಾಗಿಲ್ಲ.. ಹೀಗಿರುವಾಗ ರೇವಣ್ಣನನ್ನು ಜೆಡಿಎಸ್ ಪಕ್ಷ ಉಚ್ಛಾಟಿಸೋದು ಯಾವಾಗ ಕುಮಾರಣ್ಣ?</p>



<p>ಇದು ಪಕ್ಷದ ಆಂತರಿಕ ವಿಚಾರ. ಹೇಳಬೇಕಾದ ಪ್ರಮುಖ ವಿಚಾರ ಏನೆಂದರೆ ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣದ ಅಸಂಖ್ಯಾತ ವಿಡಿಯೋಗಳು ಇವೆ ಎಂದು ಮೊದಲು ಬಾಯ್ಬಿಟ್ಟದ್ದೇ ಹಾಸನದ ಬಿಜೆಪಿ ನಾಯಕರು. ಈ ಬಗ್ಗೆ ಅಲ್ಲಲ್ಲಿ ಗುಸುಗುಸು ಹರಿದಾಡುವಾಗಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವಾಗ ಹಾಸನದ ಬಿಜೆಪಿ ನಾಯಕ ದೇವರಾಜೇ ಗೌಡ ಒಂದು ಪ್ರೆಸ್ ಮೀಟ್ ಮಾಡುವ ಮೂಲಕ ಎಲ್ಲಾ ಹೊರಹಾಕಿದ್ರು. ಅಲ್ಲಿಂದ ಪ್ರಜ್ವಲ್ ರೇವಣ್ಣನ ಕಾಮಕಾಂಡವೊಂದು ಇದೆ ಅಂತ ಎಲ್ಲರ ಬಾಯಲ್ಲೂ ಓಡಾಡೋಕೆ ಶುರು ಆಯ್ತು. ವಿಶೇಷ ಎಂದರೆ ಈ ಇಷ್ಟೂ ಹಂತದಲ್ಲೂ ಕಾಂಗ್ರೆಸ್ ಎಲ್ಲೂ ಸಹ ತನ್ನ ಪಾತ್ರ ತೋರಿಸಿಲ್ಲ ಎಂಬುದು ಗಮನಾರ್ಹ.</p>



<p>ದೇವರಾಜೇ ಗೌಡ ಕಳೆದ ವಿಧಾನಸಭಾ ಚುನಾವಣೆಯಲ್ಲೂ ಸಹ ಈ ಬಗ್ಗೆ ಪ್ರಸ್ತಾಪಿಸಿ ಜನರ ಗಮನ ಸೆಳೆಧಿದ್ದರು. ಜೆಡಿಎಸ್ ಭದ್ರಕೋಟೆಯಂತಿದ್ದ ಹೊಳೆನರಸೀಪುರದಲ್ಲೂ <a href="http://ಹೆಚ್.ಡಿ.ರೇವಣ್ಣ">ಹೆಚ್.ಡಿ.ರೇವಣ್ಣ</a> ಸ್ವಲ್ಪ ಯಾಮಾರಿದ್ದರೂ ತನ್ನ ಕ್ಷೇತ್ರ ಕಳೆದುಕೊಳ್ಳುವ ಮಟ್ಟಕ್ಕೆ ಜೆಡಿಎಸ್ ತನ್ನ ಮತ ಕಳೆದುಕೊಂಡಿತ್ತು. ಇದಕ್ಕೆ ಪ್ರತ್ಯಕ್ಷ ಕಾರಣ ಇದೇ ಅಶ್ಲೀಲ ಪೆನ್ ಡ್ರೈವ್ ಹಗರಣವೇ ಆದರೂ ಇಲ್ಲೂ ಸಹ ತನ್ನ ಪಾತ್ರ ವಹಿಸಿದ್ದು ಬಿಜೆಪಿ ಎಂಬುದು ಮರೆಯುವಂತಿಲ್ಲ.</p>



<p>ಲೋಕಸಭಾ ಚುನಾವಣೆ ಹಂತದಲ್ಲೂ ಸಹ ಬಿಜೆಪಿ ಜೆಡಿಎಸ್ ಮೈತ್ರಿ ಸಂದರ್ಭದಲ್ಲಿ ಹಾಸನ ಬಿಜೆಪಿ ನಾಯಕರೇ ಮೈತ್ರಿ ವಿರುದ್ಧ ದೊಡ್ಡ ಮಟ್ಟದ ಅಪಸ್ವರ ಎತ್ತಿದ್ದರು. ಯಾವ ಕಾರಣಕ್ಕೂ ಈ ಮೈತ್ರಿ ಒಪ್ಪುವುದಿಲ್ಲ ಎಂದೇ ತಮ್ಮ ರಾಷ್ಟ್ರೀಯ ನಾಯಕರಿಗೆ ತಿಳಿಸುತ್ತಲೇ ಬಂದಿದ್ದರು. ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ ಸಹ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವುದಾದರೆ ನಮ್ಮ ಬೆಂಬಲ ಇರುವುದಿಲ್ಲ ಎಂದು ಬಹಿರಂಗವಾಗಿ ಹೇಳಿದ್ದರು. ಅಷ್ಟೇ ಅಲ್ಲದೇ ತಮ್ಮ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದು ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋಗಳಿವೆ, ಆ ವ್ಯಕ್ತಿಯನ್ನೇ ಮೈತ್ರಿ ಅಭ್ಯರ್ಥಿ ಎಂದು ಘೋಷಿಸಿದರೆ ಮುಂದೆ ಬಿಜೆಪಿ ಪಕ್ಷ ರಾಷ್ಟ್ರ ಮಟ್ಟದಲ್ಲಿ ತಲೆ ತಗ್ಗಿಸುವ ಸ್ಥಿತಿ ಬರುತ್ತದೆ ಎಂದು ಪತ್ರ ಮತ್ತು ಇ ಮೇಲ್ ಮೂಲಕವೂ ಎಚ್ಚರಿಸಿದ್ದು ಮರೆಯುವಂತಿಲ್ಲ.</p>



<p>ಸರಿ. ಪೆನ್ ಡ್ರೈವ್ ಅಂತೂ ರಿಲೀಸ್ ಆಯ್ತು. ಆಗ ಬಿಜೆಪಿ ಮುಖಂಡ ದೇವರಾಜೇ ಗೌಡ ಪೆನ್ ಡ್ರೈವ್ ಬಿಡುಗಡೆ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ, ಪೆನ್ ಡ್ರೈವ್ ನನಗೆ ಸಿಗುವುದಕ್ಕಿಂತ ಮೊದಲೇ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಗೆ ತಲುಪಿದೆ ಎಂಬ ಹೇಳಿಕೆ ಕೊಟ್ಟಿದ್ದರು. ಹೇಗಿದ್ದರೂ ಬಿಜೆಪಿ ಜೆಡಿಎಸ್ ಮೈತ್ರಿ ಇದೆ. ಕುಮಾರಣ್ಣ ಹೋದಲ್ಲಿ ಬಂದದ್ದೆಲ್ಲ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ತಿದ್ದಾರೆ. ಹೀಗಿರುವಾಗ ಪೆನ್ ಡ್ರೈವ್ ರಿಲೀಸ್ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ ಎನ್ನುವ ಮೂಲಕ ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆಯುವ ತಂತ್ರ ಯೋಜಿಸಿದ್ದರು. ಆದರೆ ಮೊದಲು ಪೆನ್ ಡ್ರೈವ್ ನೀಡಿದ್ದೇ ದೇವರಾಜೇ ಗೌಡರಿಗೆ, ನಾನು ಡಿಕೆಶಿ ಮತ್ತು ಡಿಕೆ ಸುರೇಶ್ ಭೇಟಿ ಮಾಡಿದ್ದು ನಿಜ, ಆದರೆ ಅವರಿಗೆ ನಾನು ಪೆನ್ ಡ್ರೈವ್ ಕೊಟ್ಟೇ ಇಲ್ಲ ಎಂದು ಎಂದು ಪ್ರಜ್ವಲ್ ರೇವಣ್ಣ ಕಾರ್ ಡ್ರೈವರ್ ಹೇಳಿಕೆ ಕೊಟ್ಟು, ಅದನ್ನು ಎಸ್ಐಟಿ ಗೂ ಹೇಳಿರುವುದಾಗಿ ಕೇಳಿ ಬಂದಿದೆ.</p>



<p>ಹೀಗೇ ಅಶ್ಲೀಲ ಪೆನ್ ಡ್ರೈವ್ ಹಗರಣದಲ್ಲಿ ಮುಂಚಿನಿಂದಲೂ ನೇರವಾಗಿ ಬಿಜೆಪಿಯೇ ಕೈವಾಡ ಮೆರೆದಿದ್ದರೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಹೋದಲ್ಲಿ ಬಂದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಮುಗಿ ಬೀಳುತ್ತಿದ್ದಾರೆ. ಅಷ್ಟಕ್ಕೂ ಕುಮಾರಸ್ವಾಮಿ ಈ ವರೆಗೆ ಹೆಚ್ಚಿನ ಪಾತ್ರ ಇರುವ ಬಿಜೆಪಿ ವಿರುದ್ದವಾಗಿ&nbsp; ಒಂದೂ ಹೇಳಿಕೆ ಕೊಟ್ಟಿಲ್ಲ. ಇದಕ್ಕೆ ಅಸಲಿ ಕಾರಣ ನೋಡ್ತಾ ಹೋದರೆ ಸಿಗೋದು, ಕುಮಾರಸ್ವಾಮಿಗೆ ಬಿಜೆಪಿ ಮೇಲಿರುವ ಭಯ ಎದ್ದು ಕಾಣುತ್ತಿದೆ.</p>



<p>ಸಧ್ಯದ ಪರಿಸ್ಥಿತಿಯಲ್ಲಿ ಜೆಡಿಎಸ್ ಪಕ್ಷ ಸುಮ್ಮನೆ ಸ್ವತಂತ್ರವಾಗಿ ಸ್ಪರ್ಧಿಸಿದ್ದರೂ ಒಂದೆರಡು ಸೀಟು ಪಡೆಯಲು ಮೋಸ ಇರಲಿಲ್ಲ. ಆದರೆ ತಾವಾಗೇ ಬಿಜೆಪಿಗೆ ಜುಟ್ಟು ಕೊಡುವ ಮೂಲಕ ದೊಡ್ಡ ಪೀಕಲಾಟ ಎದುರಿಸುವಂತಾಗಿದೆ. ಕುಮಾರಸ್ವಾಮಿಗೆ ಚುನಾವಣೆ ಫಲಿತಾಂಶ ಬರುವ ಮೋದಲೇ ಈಗ ಬಿಜೆಪಿ ಸಹವಾಸ ಬೇಡ ಎನ್ನಿಸಿದ್ದರೂ ಬಿಜೆಪಿ ವಿರುದ್ಧವಾಗಿ ಉಸಿರೆತ್ತದ ಉಸಿರುಗಟ್ಟಿಸುವ ವಾತಾವರಣದಿಂದ ಅನಿವಾರ್ಯವಾಗಿ ಡಿಕೆ ಶಿವಕುಮಾರ್ ಮೇಲೆ ಹರಿಹಾಯ್ತಿದ್ದಾರೆ. ಕುಮಾರಸ್ವಾಮಿಯವರು ಪ್ರತೀ ಬಾರಿ ಮಾಧ್ಯಮಗಳ ಪ್ರಶ್ನೆ ಎದುರಿಸುವಾಗಲೂ ಹತಾಶೆ ಎದ್ದು ಕಾಣುತ್ತಿದೆ. ಪ್ರಜ್ವಲ್ ರೇವಣ್ಣನ&nbsp; ಪೆನ್ ಡ್ರೈವ್ ಕಾಮಕಾಂಡಕ್ಕೆ ಮಂಡ್ಯದಲ್ಲೂ ತಮ್ಮ ಗೆಲುವು ಅನುಮಾನ ಎಂಬಂತಾಗಿದೆ.</p>



<p>ನೇರವಾಗಿ&nbsp; ಬಿಜೆಪಿ ನಾಯಕರಿಗೆ ಬೈದರೆ ಎಲ್ಲಿ ತಮ್ಮ ಅಸ್ತಿತ್ವ ಅಲುಗಾಡುತ್ತೋ ಎಂಬ ಭಯ ಕುಮಾರಸ್ವಾಮಿಯವರಲ್ಲಿ ಎದ್ದು ಕಾಣುತ್ತಿದೆ. ಪ್ರಜ್ವಲ್ ರೇವಣ್ಣನ ಅಶ್ಲೀಲ ಹಗರಣದ ಒಂದೇ ಒಂದು ಕಾರಣಕ್ಕೆ ಕುಮಾರಸ್ವಾಮಿಯಂತಹ ಮನುಷ್ಯ ಹೋದಲ್ಲಿ ಬಂದಲ್ಲಿ ತಲೆ ತಗ್ಗಿಸಬೇಕಾದ ಸ್ಥಿತಿ ಉದ್ಭವವಾಗಿದೆ.</p>



<p>ಒಟ್ಟಿನಲ್ಲಿ ಜೆಡಿಎಸ್ ಗೆ ಬಿಜೆಪಿ ಸಹವಾಸವೇ ಬೇಡದಿತ್ತು. ಆದರೆ ಗೊತ್ತಿದ್ದೂ ಬಿಜೆಪಿಗೆ ತನ್ನ ಜುಟ್ಟು ಕೊಡುವ ಮೂಲಕ ದಶಕಗಳಿಂದ ಕೇವಲ ಹಳೆ ಮೈಸೂರು ಭಾಗದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಂಡಿದ್ದ ಪ್ರಾದೇಶಿಕ ಪಕ್ಷ ಜೆಡಿಎಸ್ ಈಗ ಬಿಜೆಪಿ ಕಪಿಮುಷ್ಟಿಯಲ್ಲಿ ಸಿಲುಕಿಕೊಂಡಿದೆ. ಪ್ರಜ್ವಲ್ ರೇವಣ್ಣನ ಲೈಂಗಿಕ ದೌರ್ಜನ್ಯ ಪ್ರಕರಣದ ನಂತರ ಇನ್ನೆಂದೂ ತಲೆ ಎತ್ತದ ಸ್ಥಿತಿಗೆ ಜೆಡಿಎಸ್ ಬಂದು ನಿಂತದ್ದು, ಬಹುಶಃ ಜೆಡಿಎಸ್ ನ ಅಂತ್ಯಕ್ಕೆ ಬಿಜೆಪಿ ಪಕ್ಷವೇ ಕೊನೆ ಮೊಳೆ ಹೊಡೆಯಲು ಸಿದ್ಧವಾಗಿದೆ. ಈ ಸತ್ಯ ಜೆಡಿಎಸ್ ನಾಯಕರಿಗೆ ಗೊತ್ತಿದ್ದರೂ ಪ್ರತಿರೋಧಿಸುವಂತಿಲ್ಲ.</p>
]]></content:encoded>
					
		
		
			</item>
		<item>
		<title>ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಸೋಲಿನ ಸುಳಿವು ಕೊಟ್ಟ ಕುಮಾರಸ್ವಾಮಿ ; ಚುನಾವಣಾ ಆಯೋಗದ ಮೇಲೆ ಆರೋಪ</title>
		<link>https://peepalmedia.com/kumaraswamy-hints-at-bjps-defeat/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 27 Apr 2024 01:37:24 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[ಲೋಕಸಭೆ ಚುನಾವಣೆ -2024]]></category>
		<category><![CDATA[#Kumaraswamy]]></category>
		<category><![CDATA[congress]]></category>
		<category><![CDATA[JDS]]></category>
		<category><![CDATA[JDS Dirty Politics]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=38806</guid>

					<description><![CDATA[ಬೆಂಗಳೂರು ಗ್ರಾಮಾಂತರದಲ್ಲಿ ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಚುನಾವಣಾಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ, ಎಲ್ಲಾ ಕಡೆಗೂ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗುವಂತೆ ನಡೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಮೂಲಕ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯ ಪರವಾದ ಯಾವುದೇ ಅಲೆ ಇಲ್ಲ ಎಂಬುದನ್ನು ಪರೋಕ್ಷವಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಈ ರೀತಿ ಚುನಾವಣೆ ನಡೆಸುವ ಬದಲು ಹಣ ಹಂಚಿಕೊಂಡು ಚುನಾವಣೆ ನಡೆಸಲು ಅವಕಾಶ ಮಾಡಿಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. [&#8230;]]]></description>
										<content:encoded><![CDATA[
<p></p>



<p>ಬೆಂಗಳೂರು ಗ್ರಾಮಾಂತರದಲ್ಲಿ ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಚುನಾವಣಾಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ, ಎಲ್ಲಾ ಕಡೆಗೂ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗುವಂತೆ ನಡೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಮೂಲಕ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯ ಪರವಾದ ಯಾವುದೇ ಅಲೆ ಇಲ್ಲ ಎಂಬುದನ್ನು ಪರೋಕ್ಷವಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.</p>



<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಈ ರೀತಿ ಚುನಾವಣೆ ನಡೆಸುವ ಬದಲು ಹಣ ಹಂಚಿಕೊಂಡು ಚುನಾವಣೆ ನಡೆಸಲು ಅವಕಾಶ ಮಾಡಿಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>



<p>ಕಾಂಗ್ರೆಸ್ ಅಭ್ಯರ್ಥಿ <a href="http://ಡಿ‌.ಕೆ">ಡಿ‌.ಕೆ</a>. ಸುರೇಶ್ ಕಡೆಯವರು ಚುನಾವಣಾ ಅಕ್ರಮದಲ್ಲಿ ತೊಡಗಿದ್ದಾರೆ. ಈ ಮೂಲಕ ಅವರ ಪರವಾಗಿ ಚುನಾವಣಾ ಆಯೋಗ ಕೆಲಸ ಮಾಡಿದೆ. ಕೆಲವು ಕಡೆ ಮೈತ್ರಿ ಕಾರ್ಯಕರ್ತರ ಮೇಲೆ ಹಲ್ಲೆಗಳಾಗಿವೆ. ಇದೇ ರೀತಿ ಆದರೆ ಮುಕ್ತ ಮತದಾನ ಅರ್ಥ ಕಳೆದುಕೊಳ್ಳಲಿದೆ ಎಂದು ಆರೋಪಿಸಿದ್ದಾರೆ.</p>



<p>ಅಷ್ಟೇ ಅಲ್ಲದೇ&nbsp; ಶಾಸಕರಾದ <a href="http://ಡಾ.ರಂಗನಾಥ್‌">ಡಾ.ರಂಗನಾಥ್‌</a>, <a href="http://ಎಚ್‌.ಸಿ.ಬಾಲಕೃಷ್ಣ">ಎಚ್‌.ಸಿ.ಬಾಲಕೃಷ್ಣ</a>, ಇಕ್ಬಾಲ್‌ ಹುಸೇನ್‌, ಡಿಸಿಎಂ <a href="http://ಡಿ.ಕೆ.ಶಿವಕುಮಾರ್‌">ಡಿ.ಕೆ.ಶಿವಕುಮಾರ್‌</a>, ವಿಧಾನಪರಿಷತ್‌ ಸದಸ್ಯ ಪುಟ್ಟಣ್ಣ ಹಾಗೂ ಕುಸುಮ ಹನುಮಂತರಾಯಪ್ಪ ಅವರ ಹೆಸರಿನಲ್ಲಿ ಕೂಪನ್‌ ಹಂಚಲಾಗಿದೆ ಎಂದು ಆರೋಪಿಸಿಸಿ ಮೊಬೈಲ್‌ ಕೂಪನ್‌ ನೀಡಲಾಗಿದೆ ಎನ್ನಲಾದ ಚಿತ್ರಗಳನ್ನು ತೋರಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲೂ ಇದೇ ರೀತಿ ಕಾಂಗ್ರೆಸ್‌ ಕೂಪನ್‌ ಕಾರ್ಡ್‌ಗಳನ್ನು ಹಂಚಿಕೆ ಮಾಡಿತ್ತು ಎಂದು ಆಪಾದಿಸಿದರು.</p>
]]></content:encoded>
					
		
		
			</item>
		<item>
		<title>&#8220;ಸಂಘಿಗಳ ಕಣ್ಮಣಿ, ಮಿಣಿಮಿಣಿ ಕುಮಾರಣ್ಣ&#8221; : ಕಾಂಗ್ರೆಸ್ ಟೀಕೆ</title>
		<link>https://peepalmedia.com/rss-gatekeeper-hd-kumaraswamy/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 31 Jan 2024 02:01:41 +0000</pubDate>
				<category><![CDATA[ರಾಜಕೀಯ]]></category>
		<category><![CDATA[#Kumaraswamy]]></category>
		<category><![CDATA[bjp]]></category>
		<category><![CDATA[bjp dirty politics]]></category>
		<category><![CDATA[congress]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=35490</guid>

					<description><![CDATA[&#8220;ಬಿಜೆಪಿಗರ ಜೀನ್ ಪಾಕಿಸ್ತಾನದ್ದು ಎಂದು ಹೆಚ್.ಡಿ.ಕುಮಾರಸ್ವಾಮಿ ಅವರೇ ಹೇಳಿದ್ದರು, ಈಗ ಅದೇ ಪಾಕಿಸ್ತಾನದ ಜೀನ್ ನವರ ಜೊತೆ ಕೂಡಿಕೆ ಮಾಡಿಕೊಂಡಿದ್ದಾರೆ ಎಂದರೆ ಪಾಕಿಸ್ತಾನದ ಮೇಲೆ ಪ್ರೇಮ ಮೂಡಿದೆ ಎಂದರ್ಥ!&#8221; ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ. &#8220;ಸಂಘಿಗಳ ಕಣ್ಮಣಿಯಾಗಲು ಹೊರಟಿರುವ ಮಿಣಿ ಮಿಣಿ ಕುಮಾರಣ್ಣರಿಗೆ ಪಾಕಿಸ್ತಾನದ ಮೇಲೆ ಪ್ರೇಮ ಉಕ್ಕಿ ಹರಿಯುತ್ತಿದೆ! ಈ ಪಾಕ್ ಜೀನ್ ನವರೊಂದಿಗಿನ ಪ್ರೇಮ ಮೂಡಿದ್ದರಿಂದಲೇ ಕುಮಾರಸ್ವಾಮಿಯವರಿಗೆ ರಾಷ್ಟ್ರಧ್ವಜದ ಮೇಲೆ ದ್ವೇಷ ಮೂಡಿದೆ&#8221; ಎಂದು ಈ ಹಿಂದೆ ಬಿಜೆಪಿ ವಿರುದ್ಧ ಕುಮಾರಸ್ವಾಮಿ ಮಾಡಿರುವ [&#8230;]]]></description>
										<content:encoded><![CDATA[
<p>&#8220;ಬಿಜೆಪಿಗರ ಜೀನ್ ಪಾಕಿಸ್ತಾನದ್ದು ಎಂದು ಹೆಚ್.ಡಿ.ಕುಮಾರಸ್ವಾಮಿ ಅವರೇ ಹೇಳಿದ್ದರು, ಈಗ ಅದೇ ಪಾಕಿಸ್ತಾನದ ಜೀನ್ ನವರ ಜೊತೆ ಕೂಡಿಕೆ ಮಾಡಿಕೊಂಡಿದ್ದಾರೆ ಎಂದರೆ ಪಾಕಿಸ್ತಾನದ ಮೇಲೆ ಪ್ರೇಮ ಮೂಡಿದೆ ಎಂದರ್ಥ!&#8221; ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.</p>



<p>&#8220;ಸಂಘಿಗಳ ಕಣ್ಮಣಿಯಾಗಲು ಹೊರಟಿರುವ ಮಿಣಿ ಮಿಣಿ ಕುಮಾರಣ್ಣರಿಗೆ ಪಾಕಿಸ್ತಾನದ ಮೇಲೆ ಪ್ರೇಮ ಉಕ್ಕಿ ಹರಿಯುತ್ತಿದೆ! ಈ ಪಾಕ್ ಜೀನ್ ನವರೊಂದಿಗಿನ ಪ್ರೇಮ ಮೂಡಿದ್ದರಿಂದಲೇ ಕುಮಾರಸ್ವಾಮಿಯವರಿಗೆ ರಾಷ್ಟ್ರಧ್ವಜದ ಮೇಲೆ ದ್ವೇಷ ಮೂಡಿದೆ&#8221; ಎಂದು ಈ ಹಿಂದೆ ಬಿಜೆಪಿ ವಿರುದ್ಧ ಕುಮಾರಸ್ವಾಮಿ ಮಾಡಿರುವ ಟೀಕೆಯ ಟ್ವಿಟ್ ನ್ನು ಉಲ್ಲೇಖಿಸಿ ಕಾಂಗ್ರೆಸ್ ಟೀಕಿಸಿದೆ.</p>



<p>ಈ ಹಿಂದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ಪಕ್ಷದ ವಿರುದ್ಧ ಮಾಡಿದ ಟ್ವಿಟ್ ಹಾಗೂ ಫೇಸ್ಬುಕ್ ಪೋಸ್ಟ್ ಗಳ ಉತ್ಕನನ ನಡೆಸಿರುವ ಕರ್ನಾಟಕ ಕಾಂಗ್ರೆಸ್ ಈಗ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದೆ.</p>



<p>&#8220;RSS ನಿಂದ ಸ್ವಾಗತ ಪಡೆಯುವ ದುಸ್ಥಿತಿ ನನಗೆ ಬಂದಿಲ್ಲ ಎಂದಿದ್ದ ಕುಮಾರಸ್ವಾಮಿಯವರು ಈಗ ಅದೇ RSS ನ ಗೇಟ್ ಕೀಪರ್ ಆಗಿ, ವಿನಮ್ರ ಸೇವಕನಾಗಿ ಹಸಿರು ಶಾಲನ್ನು ಕಿತ್ತೆಸೆದು ಕೇಸರಿ ಶಾಲು ಹಾಕಿಕೊಂಡಿದ್ದೀರಿ. ಇದು ನಿಮಗೆ ದುಸ್ಥಿತಿ ಬಂದಿದ್ದರ ಸಂಕೇತವಲ್ಲವೇ? ವಯಸ್ಸಾದ ದೇವೇಗೌಡರನ್ನು ಕರೆದುಕೊಂಡು ಬಿಜೆಪಿ ನಾಯಕರ ಮನೆ ಬಾಗಿಲಿಗೆ ಅಲೆಯುತ್ತಿರುವುದು ನಿಮಗೊದಗಿದ ದುಸ್ಥಿತಿಯ ದ್ಯೋತಕವಲ್ಲವೇ?&#8221; ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.</p>
]]></content:encoded>
					
		
		
			</item>
		<item>
		<title>ಬ್ಲೂಫಿಲಂ ತೋರಿಸಿದ್ದು ಸಾಭೀತುಪಡಿಸಿದರೆ ರಾಜಕೀಯ ನಿವೃತ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್</title>
		<link>https://peepalmedia.com/bluefilm-showed-political-retirement-if-proved/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 21 Nov 2023 12:01:09 +0000</pubDate>
				<category><![CDATA[ರಾಜಕೀಯ]]></category>
		<category><![CDATA[#Kumaraswamy]]></category>
		<category><![CDATA[dk shivakumar]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=32828</guid>

					<description><![CDATA[ಕನಕಪುರ ಹಾಗೂ ತನ್ನ ಹುಟ್ಟೂರು ದೊಡ್ಡಾಲಹಳ್ಳಿ ಸುತ್ತಮುತ್ತ ನಾನು ಬ್ಲೂಫಿಲಂ ತೋರಿಸಿದ್ದೆ ಎಂಬುದನ್ನು ಸಾಭೀತುಪಡಿಸಿದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಕೆಲವು ಸಮಯದ ಹಿಂದೆ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣಗಳಲ್ಲಿ ಡಿ.ಕೆ.ಶಿವಕುಮಾರ್ ಅವರ ಮೇಲೆ, ಟೆಂಟ್ ನಲ್ಲಿ ಬ್ಲೂಫಿಲಂ ತೋರಿಸಿದ ಆರೋಪ ಹೊರಿಸಿತ್ತು. ಆಗೆಲ್ಲಾ ಬಿಜೆಪಿಯವರಿಗೆ ಮಾಡೋಕೆ ಬೇರೆ ಕೆಲಸ ಇಲ್ಲ ಎಂದು ಡಿ.ಕೆ.ಶಿವಕುಮಾರ್ ನಿರ್ಲಕ್ಷ್ಯದ ಧೋರಣೆ ತೋರಿದ್ದರು. ಅಷ್ಟೆ ಅಲ್ಲದೆ ಇದು ಬಿಜೆಪಿ ಪಕ್ಷದ [&#8230;]]]></description>
										<content:encoded><![CDATA[
<p>ಕನಕಪುರ ಹಾಗೂ ತನ್ನ ಹುಟ್ಟೂರು ದೊಡ್ಡಾಲಹಳ್ಳಿ ಸುತ್ತಮುತ್ತ ನಾನು ಬ್ಲೂಫಿಲಂ ತೋರಿಸಿದ್ದೆ ಎಂಬುದನ್ನು ಸಾಭೀತುಪಡಿಸಿದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಬಹಿರಂಗ ಸವಾಲು ಹಾಕಿದ್ದಾರೆ.</p>



<p>ಕೆಲವು ಸಮಯದ ಹಿಂದೆ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣಗಳಲ್ಲಿ ಡಿ.ಕೆ.ಶಿವಕುಮಾರ್ ಅವರ ಮೇಲೆ, ಟೆಂಟ್ ನಲ್ಲಿ ಬ್ಲೂಫಿಲಂ ತೋರಿಸಿದ ಆರೋಪ ಹೊರಿಸಿತ್ತು. ಆಗೆಲ್ಲಾ ಬಿಜೆಪಿಯವರಿಗೆ ಮಾಡೋಕೆ ಬೇರೆ ಕೆಲಸ ಇಲ್ಲ ಎಂದು ಡಿ.ಕೆ.ಶಿವಕುಮಾರ್ ನಿರ್ಲಕ್ಷ್ಯದ ಧೋರಣೆ ತೋರಿದ್ದರು. ಅಷ್ಟೆ ಅಲ್ಲದೆ ಇದು ಬಿಜೆಪಿ ಪಕ್ಷದ ಕೀಳು ಮಟ್ಟದ ಪ್ರಚಾರ ಎಂದು ದೂರಿದ್ದರು.</p>



<p>ಆದರೆ ಈಗ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಕೂಡಾ ಡಿ.ಕೆ.ಶಿವಕುಮಾರ್ ಮೇಲೆ ಈ ರೀತಿಯ ಮಾತನ್ನಾಡಿದ ಕಾರಣ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. &#8216;ಇವರೆಲ್ಲಾ ಬ್ಲೂಫಿಲಂ ತೋರಿಸಿ ಮೇಲೆ ಬಂದವರು&#8217; ಎಂದು ಕೆಲವೇ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.</p>



<p>ನಾನು ಬ್ಲೂಫಿಲಂ ತೋರಿಸಿದ್ದನ್ನು ಸಾಬೀತು ಮಾಡಿದರೇ ರಾಜಕೀಯದಿಂದ ನಿವೃತ್ತಿಯಾಗುವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ. ದೊಡ್ಡ ಆಲಹಳ್ಳಿ ಸುತ್ತಮುತ್ತ ಯಾವನಾದರೂ ಒಬ್ಬ ನಾನು ಬ್ಲೂ ಫಿಲಂ ತೋರಿಸಿದ್ದೀನಿ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಕುಮಾರಸ್ವಾಮಿ ಕನಕಪುರಕ್ಕೆ ಬರಲಿ, ಬ್ಲೂ ಫಿಲಂ ಬಗ್ಗೆ ಮಾತಾಡಲಿ. ಲೋಕಸಭೆ ಚುನಾವಣೆಯಲ್ಲಿ ಗೊತ್ತಾಗುತ್ತೆ. ವಿಧಾನಸಭೆ ಚುನಾವಣೆಯಲ್ಲಿ ಕನಕಪುರಕ್ಕೆ ಬಂದು ಕುಮಾರಸ್ವಾಮಿ ಪ್ರಚಾರ ಮಾಡಿಲ್ಲ‌. ಬಂದು ಬ್ಲೂ ಫಿಲಂ ಬಗ್ಗೆ ಹೇಳಬೇಕಿತ್ತು, ಆಗ ಗೊತ್ತಾಗೋದು ಎಂದು ತಿರುಗೇಟು ಕೊಟ್ಟಿದ್ದಾರೆ.</p>



<p>&#8220;ನನಗೆ ಯಾರ್ ಬ್ರೇಕ್ ಹಾಕ್ತಾರೆ ರೀ, ಪ್ರಕೃತಿ ನಿಯಮ ಇದೆ. ನನಗೆ ಯಾರು ಬ್ರೇಕ್ ಗೀಕ್ ಹಾಕಲ್ಲ. ಕೆಲವರು ಲಿಮಿಟೇಶನ್ ದಾಟುತ್ತಾರೆ ಅಷ್ಟೇ. ಕುಮಾರಸ್ವಾಮಿ ಜೊತೆ ಗುದ್ದಾಟಕ್ಕೆ ನನಗೆ ಟೈಂ ಇಲ್ಲ. ಅಯ್ಯೋ ಪಾಪ ಅವರಿಗೆ ಪ್ರಾಬ್ಲಂ ಇದೆ. ಈಗಲೂ 21 ಥಿಯೇಟರ್ ಇವೆ. ನಮ್ಮದು ಎಲ್ಲಾದ್ರೂ ಉಂಟೇನ್ರಿ..&#8221; ಎಂದು ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.</p>



<p>ದೊಡ್ಡ ಆಲಹಳ್ಳಿ, ಕೋಡಹಳ್ಳಿ, ಸಾತನೂರಿನಲ್ಲಿ ಹೋಗಿ ಜನರನ್ನ ಕೇಳಿ. ಒಬ್ಬ ಏನಾದ್ರೂ ಡಿಕೆಶಿ ಬ್ಲೂ ಫಿಲ್ಮ್ ತೋರಿಸ್ತಿದ್ದ ಅಂದ್ರೆ ನಾನು ರಾಜಕೀಯ ನಿವೃತ್ತಿ ತಗೋತೀನಿ ಎಂದು ತಿರುಗೇಟು ಕೊಟ್ಟರು</p>
]]></content:encoded>
					
		
		
			</item>
		<item>
		<title>ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ವಜಾ</title>
		<link>https://peepalmedia.com/deve-gowda-ousts-c-m-ibrahim-from-jds-state-president-post/</link>
		
		<dc:creator><![CDATA[Charan Aivarnad]]></dc:creator>
		<pubDate>Fri, 17 Nov 2023 13:24:44 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[#Kumaraswamy]]></category>
		<category><![CDATA[bengalure]]></category>
		<category><![CDATA[breaking news]]></category>
		<category><![CDATA[cm ibrahim]]></category>
		<category><![CDATA[devegowda]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Kumara]]></category>
		<category><![CDATA[kumaraswami]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=32499</guid>

					<description><![CDATA[ಬೆಂಗಳೂರು: ಬಿಜೆಪಿ ಜೊತೆಗಿನ ಜೆಡಿಎಸ್‌ ಮೈತ್ರಿಯ ಬಗ್ಗೆ ಸತತ ಅಸಮಧಾನ ವ್ಯಕ್ತಪಡಿಸುತ್ತಾ ಬಂದಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ಬೆಂಗಳೂರಿನಲ್ಲಿ ಚಿಂತನ ಮಂಥನ ಎಂಬ ಸಭೆಯನ್ನು ಅಕ್ಟೋಬರ್‌ 16ರಂದು ಕರೆದು ಜೆಡಿಎಸ್‌ ಹಾಗೂ ಬಿಜೆಪಿ ಹೊಂದಾಣಿಕೆಯ ಬಗ್ಗೆ ಮತ್ತು ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯ ಶಾಸಕಾಂಗ ಪಕ್ಷದ ನಾಯಕರ ವಿರುದ್ದ ಬೇಜಾವಬ್ದಾರಿಯುತ ಹೇಳಿಕೆಗಳನ್ನು ಸಿಎಂ ಇಬ್ರಾಹಿಂ ಅವರು ನೀಡಿರುವುದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಹಾಗಾಗಿ, ಪಕ್ಷದ ಹಿತದೃಷ್ಟಿಯಿಂದ ಇವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಬಿಜೆಪಿ ಜೊತೆಗಿನ ಜೆಡಿಎಸ್‌ ಮೈತ್ರಿಯ ಬಗ್ಗೆ ಸತತ ಅಸಮಧಾನ ವ್ಯಕ್ತಪಡಿಸುತ್ತಾ ಬಂದಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. </p>



<p>ಬೆಂಗಳೂರಿನಲ್ಲಿ ಚಿಂತನ ಮಂಥನ ಎಂಬ ಸಭೆಯನ್ನು ಅಕ್ಟೋಬರ್‌ 16ರಂದು ಕರೆದು ಜೆಡಿಎಸ್‌ ಹಾಗೂ ಬಿಜೆಪಿ ಹೊಂದಾಣಿಕೆಯ ಬಗ್ಗೆ ಮತ್ತು ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯ ಶಾಸಕಾಂಗ ಪಕ್ಷದ ನಾಯಕರ ವಿರುದ್ದ ಬೇಜಾವಬ್ದಾರಿಯುತ ಹೇಳಿಕೆಗಳನ್ನು ಸಿಎಂ ಇಬ್ರಾಹಿಂ ಅವರು ನೀಡಿರುವುದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಹಾಗಾಗಿ, ಪಕ್ಷದ ಹಿತದೃಷ್ಟಿಯಿಂದ ಇವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹೆಚ್‌ ಡಿ ದೇವೇಗೌಡರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>



<p>“ಜೆಡಿಎಸ್‌ನ ಹಿಂದಿನ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಶಾಸಕರಾದ ಎಸ್.ಎಲ್. ಬೋಜೇಗೌಡ ಅಕ್ಟೋಬರ್‌ 19 ರಂದು ನೀಡಿದ ವರದಿಯಲ್ಲಿ &nbsp;ಪಕ್ಷದ ಸಂಘಟನೆ ಮತ್ತು ಬಲವರ್ಧಗೆ ಯಾವುದೇ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸಿಲ್ಲ, ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯಾಧ್ಯಕ್ಷರು ಒಳಗೊಂಡಂತೆ ರಾಜ್ಯ ಪರಿಷತ್‌ನ ಕಾರ್ಯಕಾರಿ ಸಮಿತಿ ನಿಷ್ಕ್ರಿಯವಾಗಿರುವುದು ವರದಿಯಲ್ಲಿ ಕಂಡುಬಂದಿದೆ,” ಎಂದು ದೇವೇಗೌಡರು ತಿಳಿಸಿದ್ದಾರೆ.</p>



<p>&#8220;ಸಪ್ಟೆಂಬರ್‌ 6 ಮತ್ತು 10 ಹಾಗೂ ಅಕ್ಟೋಬರ್‌ 1ರಂದು ನಡೆದ ಪಕ್ಷದ ಸಭೆಯಲ್ಲಿ&nbsp; ಬಿಜೆಪಿ-ಜೆಡಿಎಸ್‌ ಮೈತ್ರಿಯ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿತ್ತು. ಈ ಸಭೆಗಳಲ್ಲಿ ಸಿಎಂ ಇಬ್ರಾಹಿಂ ರವರು ಉಪಸ್ಥಿತರಿದ್ದರು. ನಂತರ ಸಭೆಯ ತೀರ್ಮಾನಗಳ ವಿರುದ್ಧ ವಿರೋಧಭಾಸ ಹೇಳಿಕೆ ನೀಡುತ್ತಿರುವುದಾಗಿ ವರದಿಯಾಗಿದೆ.&#8221;</p>



<p>ಸಿಎಂ ಇಬ್ರಾಹಿಂ ಅವರ ಪಕ್ಷವಿರೋಧಿ ನಡವಳಿಕೆಗಳ ಹಿನ್ನಲೆಯಲ್ಲಿ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರನ್ನೊಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನದ(Article XX -10) ಅನ್ವಯ ಅಮಾನತ್ತು ಮಾಡಲಾಗಿದೆ ಎಂದು ಹೆಚ್‌ಡಿ ದೇವೇಗೌಡರು ತಿಳಿಸಿದ್ದಾರೆ.</p>



<p>ನವೆಂಬರ್‌ 7ರಂದು ನೀಡಿದ ಹೇಳಿಕೆಯಲ್ಲಿ ಸಿಎಂ ಇಬ್ರಾಹಿಂ, ನಾನಿನ್ನೂ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಮುಂದುವರಿದಿದ್ದೇನೆ ಎಂದು ತಿಳಿಸಿ, ಬಿಜೆಪಿ ಜತೆ ಮೈತ್ರಿಗೆ ಒಲವು ಇರುವವರೆಲ್ಲರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಪಕ್ಷ ವಿರೋಧಿ ಹೇಳಿಕೆಯನ್ನೂ ನೀಡಿರುತ್ತಾರೆ.</p>



<p>ನವೆಂಬರ್‌ 15ರಂದು ಕೇರಳದ ತಿರುವನಂತಪುರದಲ್ಲಿ ಸಿ.ಕೆ.ನಾನು ಅವರ ನೇತೃತ್ವದಲ್ಲಿ ಪಕ್ಷ ವಿರೋಧಿ ಸಭೆಯನ್ನು ನಡೆಸಿ, ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುತ್ತಾರೆ. ಇವೆಲ್ಲಾ ನಡವಳಿಕೆ, ಹೇಳಿಕೆಗಳ ಹಿನ್ನೆಲೆಯಲ್ಲಿ ಸಿಎಂ ಇಬ್ರಾಹಿಂ ಅವರು ಪಕ್ಷದ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷರು ತಿಳಿಸಿದ್ದಾರೆ.</p>


<div class="wp-block-image">
<figure class="aligncenter size-full is-resized"><img fetchpriority="high" decoding="async" width="659" height="898" src="https://peepalmedia.com/wp-content/uploads/2023/11/image-60.png" alt="" class="wp-image-32507" style="width:312px;height:auto" srcset="https://peepalmedia.com/wp-content/uploads/2023/11/image-60.png 659w, https://peepalmedia.com/wp-content/uploads/2023/11/image-60-220x300.png 220w, https://peepalmedia.com/wp-content/uploads/2023/11/image-60-150x204.png 150w, https://peepalmedia.com/wp-content/uploads/2023/11/image-60-300x409.png 300w" sizes="(max-width: 659px) 100vw, 659px" /></figure></div>

<div class="wp-block-image">
<figure class="aligncenter size-full is-resized"><img decoding="async" width="652" height="915" src="https://peepalmedia.com/wp-content/uploads/2023/11/image-61.png" alt="" class="wp-image-32509" style="width:283px;height:auto" srcset="https://peepalmedia.com/wp-content/uploads/2023/11/image-61.png 652w, https://peepalmedia.com/wp-content/uploads/2023/11/image-61-214x300.png 214w, https://peepalmedia.com/wp-content/uploads/2023/11/image-61-150x211.png 150w, https://peepalmedia.com/wp-content/uploads/2023/11/image-61-300x421.png 300w" sizes="(max-width: 652px) 100vw, 652px" /></figure></div>

<div class="wp-block-image">
<figure class="aligncenter size-full is-resized"><img decoding="async" width="647" height="677" src="https://peepalmedia.com/wp-content/uploads/2023/11/image-62.png" alt="" class="wp-image-32511" style="width:300px;height:auto" srcset="https://peepalmedia.com/wp-content/uploads/2023/11/image-62.png 647w, https://peepalmedia.com/wp-content/uploads/2023/11/image-62-287x300.png 287w, https://peepalmedia.com/wp-content/uploads/2023/11/image-62-150x157.png 150w, https://peepalmedia.com/wp-content/uploads/2023/11/image-62-300x314.png 300w" sizes="(max-width: 647px) 100vw, 647px" /></figure></div>]]></content:encoded>
					
		
		
			</item>
		<item>
		<title>ಪ್ರತಾಪ ಸಿಂಹರನ್ನು ಸಂಸದನನ್ನಾಗಿ ಮಾಡಿರುವುದು ಹೆಸರು ಬದಲಾಯಿಸುವುದಕ್ಕಲ್ಲ: HDK</title>
		<link>https://peepalmedia.com/kumar-swamy-press-meet-at-mysore/</link>
		
		<dc:creator><![CDATA[Peepal Media]]></dc:creator>
		<pubDate>Sat, 08 Oct 2022 12:02:04 +0000</pubDate>
				<category><![CDATA[ರಾಜಕೀಯ]]></category>
		<category><![CDATA[#Kumaraswamy]]></category>
		<category><![CDATA[#Kumaraswamy #JDS #ramanagara #mysore #kodagu #kannadaexpress9 #prathapsimha #Simha #SaRaMahesh #GTDevegowda #DeveGowda #HDK H D Kumaraswamy]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=9430</guid>

					<description><![CDATA[ಮೈಸೂರು: ಟಿಪ್ಪು ಹೆಸರಿನ ರೈಲನ್ನು ಒಡೆಯರ್‌ ಹೆಸರಿಗೆ ಬದಲಾಯಿಸಿರುವುದರ ಕುರಿತು ಇಂದು ನಗರದಲ್ಲಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿಯವರು, &#8220;ಸಂಸದ ಪ್ರತಾಪ ಸಿಂಹ ಅವರನ್ನ ಆಯ್ಕೆ ಮಾಡಿರುವುದು ರೈಲಿನ ಹೆಸರು ಬದಲಾಯಿಸುವುದಕ್ಕಲ್ಲ. ಅವರು ಮಾಡಬೇಕಾದ ಕೆಲಸ ಬೆಟ್ಟದಷ್ಟಿದೆ ಅದರತ್ತ ಗಮನ ಕೊಡಲಿ,&#8221; ಎಂದು ಹರಿಹಾಯ್ದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಿದ್ದ ಅವರು SC/ST ಮೀಸಲಾತಿ ಹೆಚ್ಚಳದಿಂದ ಯಾವ ಪಕ್ಷಕ್ಕೂ ಪ್ಲಸ್‌ ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟರು. ದೇವೆಗೌಡರು ಪ್ರಧಾನಿಯಾಗಿದ್ದ ಸಮಯದಲ್ಲಿಈ ವರ್ಗಕ್ಕೆ ಮೀಸಲಾತಿ ದೊರಕಿಸಿಕೊಟ್ಟರು. ಆದರೆ ಈ ಕೆಲಸದ ಕುರಿತು ಅವರನ್ನು ನೆನಪಿಸಿಕೊಳ್ಳುವ ಕೆಲಸವಾಗಿಲ್ಲವೆಂದು [&#8230;]]]></description>
										<content:encoded><![CDATA[
<p>ಮೈಸೂರು: ಟಿಪ್ಪು ಹೆಸರಿನ ರೈಲನ್ನು ಒಡೆಯರ್‌ ಹೆಸರಿಗೆ ಬದಲಾಯಿಸಿರುವುದರ ಕುರಿತು ಇಂದು ನಗರದಲ್ಲಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿಯವರು, &#8220;ಸಂಸದ ಪ್ರತಾಪ ಸಿಂಹ ಅವರನ್ನ ಆಯ್ಕೆ ಮಾಡಿರುವುದು ರೈಲಿನ ಹೆಸರು ಬದಲಾಯಿಸುವುದಕ್ಕಲ್ಲ. ಅವರು ಮಾಡಬೇಕಾದ ಕೆಲಸ ಬೆಟ್ಟದಷ್ಟಿದೆ ಅದರತ್ತ ಗಮನ ಕೊಡಲಿ,&#8221; ಎಂದು ಹರಿಹಾಯ್ದರು.</p>



<p>ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಿದ್ದ ಅವರು SC/ST ಮೀಸಲಾತಿ ಹೆಚ್ಚಳದಿಂದ ಯಾವ ಪಕ್ಷಕ್ಕೂ ಪ್ಲಸ್‌ ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟರು. ದೇವೆಗೌಡರು ಪ್ರಧಾನಿಯಾಗಿದ್ದ ಸಮಯದಲ್ಲಿಈ ವರ್ಗಕ್ಕೆ ಮೀಸಲಾತಿ ದೊರಕಿಸಿಕೊಟ್ಟರು. ಆದರೆ ಈ ಕೆಲಸದ ಕುರಿತು ಅವರನ್ನು ನೆನಪಿಸಿಕೊಳ್ಳುವ ಕೆಲಸವಾಗಿಲ್ಲವೆಂದು ಅವರು ಬೇಸರದಿಂದ ನುಡಿದರು.</p>



<p>ಭಾರತ್ ಜೋಡೋ ಯಾತ್ರೆಯ ಕುರಿತು ಪ್ರತಿಕ್ರಿಯಿಸಿದ ಅವರು, ʼಯಾತ್ರೆಯಿಂದ ನಮಗೆ ಯಾವುದೇ ನಷ್ಟವಿಲ್ಲ. ಜೆಡಿಎಸ್ ಶಕ್ತಿ ಏನೆಂದು 23ರ ಚುನಾವಣೆಯಲ್ಲಿ ತೋರಿಸುತ್ತೇವೆ ಎಂದರು. ಗುಬ್ಬಿ ಶಾಸಕ ಶ್ರೀನಿವಾಸ್ ಈಗ ನಮ್ಮ ಪಕ್ಷದಲ್ಲಿಯೇ ಇಲ್ಲ. ಅವರು ಭಾರತ್‌ ಜೋಡೋಗೆ ಬೆಂಬಲ ಕೊಟ್ಟರೆ ನಮಗೇನು? ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.</p>
]]></content:encoded>
					
		
		
			</item>
	</channel>
</rss>
