<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>lakhimpur &#8211; Peepal Media</title>
	<atom:link href="https://peepalmedia.com/tag/lakhimpur/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 05 Dec 2022 12:38:20 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>lakhimpur &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಲಖಿಂಪುರ್ ಖೇರಿ ಹಿಂಸಾಚಾರ ; ಆಶಿಶ್ ಮಿಶ್ರಾ ಬಿಡುಗಡೆ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ</title>
		<link>https://peepalmedia.com/lakhimpur-kheri-violence-court-rejected-ashish-mishras-release-petition/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 05 Dec 2022 12:37:51 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[Ashish Mishra]]></category>
		<category><![CDATA[Farmer Protest]]></category>
		<category><![CDATA[india]]></category>
		<category><![CDATA[lakhimpur]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Supreme Court]]></category>
		<guid isPermaLink="false">https://peepalmedia.com/?p=17589</guid>

					<description><![CDATA[ದೇಶಾದ್ಯಂತ ದೊಡ್ಡ ಮಟ್ಟದ ಸುದ್ದಿಯಾಗಿದ್ದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸಲ್ಲಿಸಿದ್ದ ಬಿಡುಗಡೆ ಅರ್ಜಿಯನ್ನು ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಅಕ್ಟೋಬರ್ 3, 2021 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಪ್ರಮುಖ ಆರೋಪಿಯಾಗಿದ್ದಾರೆ. ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 9 ರಂದು ಬಂಧನಕ್ಕೊಳಗಾಗಿದ್ದ ಆಶಿಶ್ ಮಿಶ್ರಾ ಅವರಿಗೆ&#160;ಈ ವರ್ಷದ&#160;ಫೆಬ್ರವರಿಯಲ್ಲಿ ಜಾಮೀನು ನೀಡಲಾಗಿತ್ತು. ಆದರೆ, ಇದಕ್ಕೆ [&#8230;]]]></description>
										<content:encoded><![CDATA[
<p style="font-size:20px">ದೇಶಾದ್ಯಂತ ದೊಡ್ಡ ಮಟ್ಟದ ಸುದ್ದಿಯಾಗಿದ್ದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸಲ್ಲಿಸಿದ್ದ ಬಿಡುಗಡೆ ಅರ್ಜಿಯನ್ನು ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ.</p>



<p style="font-size:20px">ಅಕ್ಟೋಬರ್ 3, 2021 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಪ್ರಮುಖ ಆರೋಪಿಯಾಗಿದ್ದಾರೆ. ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 9 ರಂದು ಬಂಧನಕ್ಕೊಳಗಾಗಿದ್ದ ಆಶಿಶ್ ಮಿಶ್ರಾ ಅವರಿಗೆ&nbsp;ಈ ವರ್ಷದ&nbsp;ಫೆಬ್ರವರಿಯಲ್ಲಿ ಜಾಮೀನು ನೀಡಲಾಗಿತ್ತು.</p>



<p style="font-size:20px">ಆದರೆ, ಇದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ&nbsp;ಆಶಿಶ್ ಮಿಶ್ರಾ ಅವರ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತು. ಅಷ್ಟೆ ಅಲ್ಲದೆ ಒಂದು ವಾರದೊಳಗೆ ಶರಣಾಗುವಂತೆ ಆದೇಶಿಸಿತು.</p>



<p style="font-size:20px">ಆ ನಂತರ ಬಿಡುಗಡೆ ಕೋರಿ ಆಶಿಶ್ ಮಿಶ್ರಾ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಆಶಿಶ್ ಮಿಶ್ರಾ ಅವರ ಮೇಲ್ಮನವಿ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.&nbsp;ಇದೇ ಪ್ರಕರಣದ ಇತರ 13 ಆರೋಪಿಗಳ ಬಿಡುಗಡೆ ಅರ್ಜಿಯನ್ನೂ ಸಹ ನ್ಯಾಯಾಲಯ ತಿರಸ್ಕರಿಸಿದೆ.&nbsp;ಈ ಸಂಬಂಧ ಡಿಸೆಂಬರ್ 6 ರಂದು ಆಶಿಶ್ ಮಿಶ್ರಾ ಮತ್ತು ಇತರ ಆರೋಪಿಗಳ ವಿರುದ್ಧ ಆರೋಪ ಹೊರಿಸುವ ಸಾಧ್ಯತೆ ಇದೆ.</p>



<p style="font-size:20px">ಘಟನೆ ಹಿನ್ನೆಲೆ : ಅಕ್ಟೋಬರ್ 3ರಂದು ಮೂರು ವಾಹನಗಳ ಬೆಂಗಾವಲು ಎಸ್‌ಯುವಿ ವೇಗವಾಗಿ ಹರಿದ ಪರಿಣಾಮ ನಾಲ್ವರು ರೈತರು ಹಾಗೂ ಒಬ್ಬ ಪತ್ರಕರ್ತ ಮೃತಪಟ್ಟಿದ್ದರು. ಈ ವಾಹನಗಳಲ್ಲಿ ಒಂದು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರಿಗೆ ಸೇರಿದ್ದಾಗಿತ್ತು. ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ವಿರುದ್ಧ ಘಟನೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣ ದಾಖಲಾಗಿ ಐದು ದಿನಗಳ ಬಳಿಕ ಅಕ್ಟೋಬರ್ 9 ರಂದು ಬಂಧಿಸಲಾಗಿತ್ತು.</p>



<p style="font-size:20px">ರೈತರ ಮೇಲೆ ಹರಿದ ಎಸ್‌ಯುವಿ ಒಳಗೆ ಆಶಿಶ್ ಕುಳಿತಿದ್ದರು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಟಿಕೋನಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>



<p style="font-size:20px">ನಾಲ್ವರು ರೈತರ ಮೇಲೆ ಕಾರು ಓಡಿಸಿದ ಎಸ್‌ಯುವಿ ಒಳಗೆ ಆಶಿಶ್ ಮಿಶ್ರಾ ಇದ್ದರು ಎಂದು ರೈತ ಸಂಘಟನೆಗಳು ಆರೋಪಿಸಿದ್ದರು. ಕೇಂದ್ರ ಸಚಿವರ ಪುತ್ರ ಈ ಆರೋಪವನ್ನು&nbsp;ನಿರಾಕರಿಸಿದ್ದರು. </p>



<p style="font-size:20px">ಈ ಆರೋಪಕ್ಕೆ ಸಂಬಂಧಿಸಿದಂತೆ ನಡೆದ ತನಿಖೆಯಲ್ಲಿ ಆಶಿಶ್ ಮಿಶ್ರಾ ಸೇರಿದಂತೆ ಒಟ್ಟು 13 ಆರೋಪಿಗಳ ಮೇಲೆ ಆರೋಪಪಟ್ಟಿ ಸಿದ್ದವಾಗಿದೆ.</p>
]]></content:encoded>
					
		
		
			</item>
		<item>
		<title>ಯುಪಿ: ದಲಿತ ಸಹೋದರಿಯರ ಅತ್ಯಾಚಾರ- ಕೊಲೆ , 6 ಜನರ ಬಂಧನ</title>
		<link>https://peepalmedia.com/yupiya-dalitha-sahodariyar-athyachara-6-bandhana/</link>
		
		<dc:creator><![CDATA[Peepal Media]]></dc:creator>
		<pubDate>Thu, 15 Sep 2022 10:06:44 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[athyachara]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[lakhimpur]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rape case]]></category>
		<category><![CDATA[UP]]></category>
		<category><![CDATA[up rape case]]></category>
		<category><![CDATA[uttar pradesh]]></category>
		<guid isPermaLink="false">https://peepalmedia.com/?p=5458</guid>

					<description><![CDATA[ಉತ್ತರ ಪ್ರದೇಶ : ಯುಪಿಯ ಲಖೀಮ್‌ಪುರದಲ್ಲಿ ಇಬ್ಬರು ದಲಿತ ಸಹೋದರಿಯರ ಮೇಲೆ ಅತ್ಯಾಚಾರವನ್ನೆಸಗಿ ದಾರುಣವಾಗಿ ಹತ್ಯೆ ಮಾಡಿ ಕೊಲೆ ಮಾಡಿದ ಆರೋಪದಲ್ಲಿ 6 ಮಂದಿ ಅತ್ಯಾಚಾರಿಗಳನ್ನು ಅಲ್ಲಿನ ಪೋಲೀಸರು ಬಂಧಿಸಿದ್ದಾರೆ. ಲಖೀಮ್ ಪುರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಇಬ್ಬರು ದಲಿತ ಸಹೋದರಿಯರ ಶವ ಪತ್ತೆಯಾಗಿದ್ದು ಘಟನೆಯ ಬಗ್ಗೆ ತನಿಖೆ ಮಾಡಿದಾಗ ಚೋಟು, ಜುನಾಯಿದ್‌, ಸುಹೇಲ್‌, ರಹೀಮ್‌, ಕರೀಮುದ್ದೀನ್‌, ಆರೀಫ್‌ ಈ ಆರು ಮಂದಿ ಈ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. &#160;ಅಪ್ರಾಪ್ತ ಹುಡುಗಿಯರ ತಾಯಿ ಕೊಲೆ [&#8230;]]]></description>
										<content:encoded><![CDATA[
<p class="has-medium-font-size"><strong>ಉತ್ತರ ಪ್ರದೇಶ</strong> : ಯುಪಿಯ ಲಖೀಮ್‌ಪುರದಲ್ಲಿ ಇಬ್ಬರು ದಲಿತ ಸಹೋದರಿಯರ ಮೇಲೆ ಅತ್ಯಾಚಾರವನ್ನೆಸಗಿ ದಾರುಣವಾಗಿ ಹತ್ಯೆ ಮಾಡಿ ಕೊಲೆ ಮಾಡಿದ ಆರೋಪದಲ್ಲಿ 6 ಮಂದಿ ಅತ್ಯಾಚಾರಿಗಳನ್ನು ಅಲ್ಲಿನ ಪೋಲೀಸರು ಬಂಧಿಸಿದ್ದಾರೆ. </p>



<p class="has-medium-font-size">ಲಖೀಮ್ ಪುರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಇಬ್ಬರು ದಲಿತ ಸಹೋದರಿಯರ ಶವ ಪತ್ತೆಯಾಗಿದ್ದು ಘಟನೆಯ ಬಗ್ಗೆ ತನಿಖೆ ಮಾಡಿದಾಗ ಚೋಟು, ಜುನಾಯಿದ್‌, ಸುಹೇಲ್‌, ರಹೀಮ್‌, ಕರೀಮುದ್ದೀನ್‌, ಆರೀಫ್‌ ಈ ಆರು ಮಂದಿ ಈ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. &nbsp;ಅಪ್ರಾಪ್ತ ಹುಡುಗಿಯರ ತಾಯಿ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ದಾಖಲು ಮಾಡಿದ್ದಾರೆ. ಆದರೆ ಅಲ್ಲಿನ ಪ್ರತ್ಯಕ್ಷದರ್ಶಿಗಳು ಇದು ಬಲವಂತದ ಅಪಹರಣ ಅಲ್ಲವೆಂದು ಸಾಬೀತುಪಡಿಸಲು ಪ್ರಯತ್ನಿಸುತಿದ್ದಾರೆ ಆದ್ದರಿಂದ ಮರಣೋತ್ತರ ಪರೀಕ್ಷೆ ನಡೆದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಲಖೀಮ್‌ಪುರದ ಎಸ್ ಪಿ ಸಂಜೀವ್‌ ಸುಮನ್‌ ಮಾಹಿತಿ ನೀಡಿದ್ದಾರೆ.</p>



<p class="has-medium-font-size">ಪ್ರಕರಣದ ಹಿನ್ನಲೆ : ಶವವಾಗಿ ಪತ್ತೆಯಾದ ಇಬ್ಬರು ಹೆಣ್ಣು ಮಕ್ಕಳು ಚೋಟುವಿನ ಸ್ನೇಹಿತೆಯರಾಗಿದ್ದರು. ಚೋಟು ಇವರಿಬ್ಬರನ್ನು ಅವನ 3 ಜನ ಗೆಳೆಯರಿಗೆ ಪರಿಚಯ ಮಾಡಿಸಿದ್ದ. ನೆನ್ನೆ ಆ ಗೆಳೆಯರೇ ಮೋಟರ್‌ ಬೈಕ್‌ನಲ್ಲಿ ಇಬ್ಬರು ಹುಡುಗಿಯರನ್ನು ಬಿಟ್ಟಿದ್ದರು. ತದನಂತರ ಹುಡುಗಿಯರನ್ನು ಕಬ್ಬಿನ ಗದ್ದೆಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ಕೊಟ್ಟಿದ್ದರು. ಹುಡುಗಿಯರು ಮದುವೆ ಮಾಡಿಕೊಳ್ಳಲು ಕೇಳಿದಾಗ ಅದಕ್ಕೆ ಒಪ್ಪದ ಕೊಲೆಗಡುಕರು ಮತ್ತಿಬ್ಬರು ಸ್ನೇಹಿತರನ್ನು ಕರೆಸಿ ಅತ್ಯಾಚಾರ ಮಾಡಿ ಆ ಹುಡುಗಿಯರ ದುಪ್ಪಟ್ಟದಿಂದಲೇ ಅವರನ್ನು ಬಿಗಿದು ಮರಕ್ಕೆ ನೇಣಿಗೆ ಹಾಕಿದ್ದಾರೆ ಎಂಬುದು ತಿಳಿದು ಬಂದಿದೆ ಎಂದು ಎಸ್ಪಿ ಸಂಜಯ್‌ ಸುಮನ್‌ ಸದ್ಯದ ಮಾಹಿತಿ ನೀಡಿದ್ದಾರೆ.</p>
]]></content:encoded>
					
		
		
			</item>
	</channel>
</rss>
