<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>madhu bangarappa &#8211; Peepal Media</title>
	<atom:link href="https://peepalmedia.com/tag/madhu-bangarappa/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 17 Aug 2024 02:11:32 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>madhu bangarappa &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ರಾಜ್ಯದ ಸರ್ಕಾರಿ ಶಾಲೆಗಳಿಗೆ ಮುಂದಿನ ಒಂದು ವರ್ಷದ ಅವಧಿ ಒಳಗಾಗಿ ಒಂದು ಸಾವಿರ ಕೋಟಿ ಆರ್ಥಿಕ ನೆರವು ಸಮುದಾಯದಿಂದ ಬರುವ ನಿರೀಕ್ಷೆ: ಸಚಿವ ಮಧು ಎಸ್ ಬಂಗಾರಪ್ಪ</title>
		<link>https://peepalmedia.com/expecting-thousand-crores-by-next-year-madhu-bangarappa/</link>
		
		<dc:creator><![CDATA[Peepal Media]]></dc:creator>
		<pubDate>Sat, 17 Aug 2024 02:11:32 +0000</pubDate>
				<category><![CDATA[ಶಿವಮೊಗ್ಗ]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[madhu bangarappa]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[shimoga]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=43959</guid>

					<description><![CDATA[ಶಿವಮೊಗ್ಗ, ಆಗಸ್ಟ್ 16: ವರ್ಷದ ಅವಧಿ ಒಳಗಾಗಿ ಸಮುದಾಯದಿಂದ ಒಂದು ಸಾವಿರ ಕೋಟಿ ಆರ್ಥಿಕ ನೆರವು ಒದಗಿ ಬರುವ ನಿರೀಕ್ಷೆ ಇದೆ ಎಂದು ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.ಅವರು ಇಂದು ಸೊರಬ ತಾಲ್ಲೂಕು ಕುಬಟೂರಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಹತ್ತು ಲಕ್ಷ ರೂಪಾಯಿಗಳ ಪಾಠೋಪಕರಣ ಮತ್ತು ಪೀಠೋಪಕರಣಗಳನ್ನು ಕೊಡುಗೆಯಾಗಿ ನೀಡಿದ ನಂತರ ಏರ್ಪಡಿಸಲಾಗಿದ್ದ ಸರಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ರಾಜ್ಯದ ಎಲ್ಲಾ [&#8230;]]]></description>
										<content:encoded><![CDATA[
<p>ಶಿವಮೊಗ್ಗ, ಆಗಸ್ಟ್ 16: ವರ್ಷದ ಅವಧಿ ಒಳಗಾಗಿ ಸಮುದಾಯದಿಂದ ಒಂದು ಸಾವಿರ ಕೋಟಿ ಆರ್ಥಿಕ ನೆರವು ಒದಗಿ ಬರುವ ನಿರೀಕ್ಷೆ ಇದೆ ಎಂದು ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.<br>ಅವರು ಇಂದು ಸೊರಬ ತಾಲ್ಲೂಕು ಕುಬಟೂರಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಹತ್ತು ಲಕ್ಷ ರೂಪಾಯಿಗಳ ಪಾಠೋಪಕರಣ ಮತ್ತು ಪೀಠೋಪಕರಣಗಳನ್ನು ಕೊಡುಗೆಯಾಗಿ ನೀಡಿದ ನಂತರ ಏರ್ಪಡಿಸಲಾಗಿದ್ದ ಸರಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.<br>ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲದಂತೆ ಎಲ್ಲಾ ರೀತಿಯ ಅಗತ್ಯ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಮಾದರಿ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ದೆಸೆಯಲ್ಲಿ ಸುಮಾರು 10 ಲಕ್ಷ ರೂಪಾಯಿಗಳ ಮೌಲ್ಯದ ವಸ್ತುಗಳನ್ನು ನೀಡಿ ತಾವು ಓದಿದ ಶಾಲೆಯನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಸ್ವತಹ ತಾವುಗಳು ಕೂಡ ಅವರ ಹಾದಿಯಲ್ಲಿಯೇ ಮುನ್ನಡೆದು ಮಾನ್ಯ ಮುಖ್ಯಮಂತ್ರಿಗಳಾಗಿದ್ದ ದಿವಂಗತ ಎಸ್ ಬಂಗಾರಪ್ಪನವರು ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ ಶಾಲೆಯ ಸರ್ವಾಂಗಿಣ ವಿಕಾಸಕ್ಕೆ ತಾವು ಬದ್ಧರಿರುವುದಾಗಿ ತಿಳಿಸಿದರು.</p>



<p>ರಾಜ್ಯದಲ್ಲಿ ಸುಮಾರು 46000 ಸರ್ಕಾರಿ ಶಾಲೆಗಳಿದ್ದು, ಆ ಎಲ್ಲಾ ಶಾಲೆಗಳನ್ನು ಸರ್ಕಾರದ ಅನುದಾನದಿಂದಲೇ ಅಭಿವೃದ್ಧಿಪಡಿಸಲು ಸಾಧ್ಯವಾಗದು. ಈ ಹಿಂದೆ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ, ಇಂದು ಸಮಾಜದಲ್ಲಿ ಉನ್ನತ ಸ್ಥಾನಮಾನ ಹೊಂದಿದ್ದು, ಉತ್ತಮ ಜೀವನ ನಿರ್ವಹಣೆ ಮಾಡುತ್ತಿರುವ ಅನೇಕ ಜನರು ತಾವು ಓದಿದ ಹಾಗೂ ಇಂದು ತಮ್ಮ ಮಕ್ಕಳು ಮತ್ತು ತಮ್ಮ ಊರಿನ ಮಕ್ಕಳು ಓದುತ್ತಿರುವ ಶಾಲೆಗೆ ಋಣ ತೀರಿಸುವ ಭಾಗವಾಗಿ ಯಾವುದೇ ವಿಧದಲ್ಲಾದರೂ ನೆರವಾಗುವಂತೆ ಹಾಗೂ ಅಲ್ಲಿನ ಮಕ್ಕಳು ಜಗವಿಖ್ಯಾತರಾಗುವಂತೆ ಶ್ರಮಿಸಲು ಮನವಿ ಮಾಡಿದರು.<br>ಹಲವು ದಶಕಗಳ ಹಿಂದಿನ ಸರ್ಕಾರಿ ಶಾಲೆಗಳ ಸ್ಥಿತಿಗತಿಗಳು ಹಾಗೂ ಅವುಗಳ ಭೌತಿಕ ಸ್ವರೂಪ ಸಮಗ್ರವಾಗಿ ಬದಲಾವಣೆಗೊಂಡಿದೆ. ಪ್ರತಿಭಾವಂತ ಶಿಕ್ಷಕರುಗಳ ನೇಮಕವಾಗಿದೆ. ಮಧ್ಯಾಹ್ನದ ಬಿಸಿ ಊಟ, ಪೌಷ್ಟಿಕ ಆಹಾರ, ಮೊಟ್ಟೆ, ಹಾಲು, ರಾಗಿ ಮಾಲ್ಟ್, ಸಮವಸ್ತ್ರ ಮತ್ತು ಪಠ್ಯಪುಸ್ತಕ ಒದಗಿಸಲಾಗುತ್ತಿದೆ. ಪ್ರಸಕ್ತ ಸಾಲಿನಿಂದ ಅನ್ವಯವಾಗುವಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಪ್ರತಿಭಾವಂತ ಶಿಕ್ಷಕರೇ ಹೊಂದಿರುವ ಸರ್ಕಾರಿ ಶಾಲೆಗಳಿಗೆ ದಾಖಲಿಸಲು ಮುಂದಾಗುವAತೆ ಮನವಿ ಮಾಡಿದ ಅವರು, ಸರ್ಕಾರಿ ಶಾಲೆಯ ಸೊಗಡು ಮತ್ತು ಮಹತ್ವವನ್ನು ಅರಿಯುವಂತೆ ಅವರು ಮನವಿ ಮಾಡಿದರು.<br>ಉತ್ತರ ಕರ್ನಾಟಕದ ಏಳು ಜಿಲ್ಲೆಗಳ 1700 ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಸುಮಾರು 38,000 ವಿದ್ಯಾರ್ಥಿಗಳು ದಾಖಲಾಗಿರುವುದು ವಿಶೇಷ ಎನಿಸಿದೆ ಎಂದವರು ನುಡಿದರು.<br>ರಾಜ್ಯದ 46,000 ಶಾಲೆಗಳಿಗೆ ಸರ್ಕಾರ ಪ್ರತಿ ವರ್ಷ 44,000 ಕೋಟಿ ರೂಪಾಯಿಗಳ ಹಣ ವೆಚ್ಚ ಮಾಡುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಯ ಸುಮಾರು 56 ಲಕ್ಷ ಮಕ್ಕಳು ಹಾಗೂ ಪಿಯುಸಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದರು.<br>ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಲ್ಲೇಶಪ್ಪ ನೆರಕೇರ, ಶ್ರೀಮತಿ ಅನಿತಾ ಮಧು ಬಂಗಾರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಪುಷ್ಪ, ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ. ಡಿ. ಶೇಖರ್ ನಾಗರಾಜ್ ಗೌಡ ಮುಂತಾದವರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಪಠ್ಯಕ್ರಮದಲ್ಲಿ ಸಂಸ್ಕೃತ-ಅರೇಬಿಕ್: ಬಹಿರಂಗ ಪತ್ರದಲ್ಲಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ಕಳವಳ</title>
		<link>https://peepalmedia.com/sanskrit-arabic-in-the-syllabus/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 22 Jul 2023 11:47:51 +0000</pubDate>
				<category><![CDATA[ಸತ್ಯ ಶೋಧ]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[madhu bangarappa]]></category>
		<category><![CDATA[Niranjanaradhya.V.P.]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=24195</guid>

					<description><![CDATA[&#8220;ಜಾತ್ಯತೀತ ಮತ್ತು ಧರ್ಮನಿರಪೇಕ್ಷ ಕೇಂದ್ರಗಳಾದ ಸರ್ಕಾರಿ ಶಾಲೆಗಳಲ್ಲಿ ಧಾರ್ಮಿಕ ಪಠಣದ ಅವಶ್ಯಕತೆ ಮತ್ತು ಔಚಿತ್ಯವಾದರೂ ಏನು!&#8221; ಎನ್ನುವ ಮೂಲಕ ಶಿಕ್ಷಣ ತಜ್ಞರಾದ ನಿರಂಜನಾರಾಧ್ಯ ಅವರು ಪ್ರಸ್ತುತ ಕರ್ನಾಟಕದ ಶೈಕ್ಷಣಿಕ ವ್ಯವಸ್ಥೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ನಿರಂಜನಾರಾಧ್ಯ ಅವರು ಸರ್ಕಾರಿ ಶಾಲೆಗಳ ಶಾಲಾ ಪಠ್ಯಕ್ರಮ ಮತ್ತು ಶಾಲೆಗಳಲ್ಲಿನ ವ್ಯವಸ್ಥೆ ಬಗ್ಗೆ ಪ್ರಸ್ತಾಪಿಸಿ, ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರಿಗೆ ಬರೆದ ಬಹಿರಂಗ ಪತ್ರದಲ್ಲಿ ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿದ್ದಾರೆ. [&#8230;]]]></description>
										<content:encoded><![CDATA[
<p>&#8220;ಜಾತ್ಯತೀತ ಮತ್ತು ಧರ್ಮನಿರಪೇಕ್ಷ ಕೇಂದ್ರಗಳಾದ ಸರ್ಕಾರಿ ಶಾಲೆಗಳಲ್ಲಿ ಧಾರ್ಮಿಕ ಪಠಣದ ಅವಶ್ಯಕತೆ ಮತ್ತು ಔಚಿತ್ಯವಾದರೂ ಏನು!&#8221; ಎನ್ನುವ ಮೂಲಕ ಶಿಕ್ಷಣ ತಜ್ಞರಾದ ನಿರಂಜನಾರಾಧ್ಯ ಅವರು ಪ್ರಸ್ತುತ ಕರ್ನಾಟಕದ ಶೈಕ್ಷಣಿಕ ವ್ಯವಸ್ಥೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ನಿರಂಜನಾರಾಧ್ಯ ಅವರು ಸರ್ಕಾರಿ ಶಾಲೆಗಳ ಶಾಲಾ ಪಠ್ಯಕ್ರಮ ಮತ್ತು ಶಾಲೆಗಳಲ್ಲಿನ ವ್ಯವಸ್ಥೆ ಬಗ್ಗೆ ಪ್ರಸ್ತಾಪಿಸಿ, ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರಿಗೆ ಬರೆದ ಬಹಿರಂಗ ಪತ್ರದಲ್ಲಿ ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿದ್ದಾರೆ.</p>



<figure class="wp-block-image size-full"><img fetchpriority="high" decoding="async" width="700" height="394" src="https://peepalmedia.com/wp-content/uploads/2023/07/images-2023-07-22T171505.217.jpeg" alt="" class="wp-image-24197" srcset="https://peepalmedia.com/wp-content/uploads/2023/07/images-2023-07-22T171505.217.jpeg 700w, https://peepalmedia.com/wp-content/uploads/2023/07/images-2023-07-22T171505.217-300x169.jpeg 300w, https://peepalmedia.com/wp-content/uploads/2023/07/images-2023-07-22T171505.217-150x84.jpeg 150w, https://peepalmedia.com/wp-content/uploads/2023/07/images-2023-07-22T171505.217-696x392.jpeg 696w" sizes="(max-width: 700px) 100vw, 700px" /></figure>



<p>&#8220;ಅವೈಜ್ಞಾನಿಕ ನೆಲೆಯಲ್ಲಿ ಧರ್ಮ ಹಾಗು ಕೋಮುವಾದದ ಮೂಲಕ ಜಾತ್ಯತೀತ ಸಂಸ್ಥೆಗಳಾದ ಸರಕಾರಿ ಶಾಲೆಗಳನ್ನು ಧಾರ್ಮಿಕ ಪಠಣ ಕೇಂದ್ರಗಳನ್ನಾಗಿಸಲು ಪ್ರಯತ್ನಿಸಿದ್ದ ಕೋಮುವಾದಿ ಸರ್ಕಾರವನ್ನು ಕರ್ನಾಟಕದ ಜನತೆ ತಿರಸ್ಕರಿಸಿ ಒಂದು ಜಾತ್ಯತೀತ ಪ್ರಜಾಪ್ರಭುತ್ವ ಸಂವಿಧಾನಬದ್ಧ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದರೆ, ತಮ್ಮ ಸಾರಥ್ಯದ ಶಿಕ್ಷಣ ಇಲಾಖೆ, ಹಿಂದಿನ ಕೋಮುವಾದಿ ಸರಕಾರ ರೂಪಿಸಿದ್ದ ಅವೈಜ್ಞಾನಿಕ ಕೋಮುವಾದಿ ನೀತಿಗಳನ್ನೇ ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಮುಂದುವರಿಸು ತ್ತಿರುವುದು ಆತಂಕ ಹುಟ್ಟಿಸುತ್ತದೆ&#8221; ಎಂದಿದ್ದಾರೆ.</p>



<p>ಅಷ್ಟೆ ಅಲ್ಲದೆ ಅಲ್ಪಸಂಖ್ಯಾತ ಇಲಾಖೆಯ ನಿರ್ದೇಶಕರು ರಾಜ್ಯ ಮಟ್ಟದಲ್ಲಿ ಜೂನ್ 19 ರಲ್ಲಿ ಹೊರಡಿಸಿದ ಆದೇಶದ ಬಗ್ಗೆ ಪ್ರಸ್ತಾಪಿಸಿ, ದಿನಾಂಕ ೧೭.೦೭.೨೦೨೩ ರಂದು ಹೊರಡಿಸಿರುವ ಜ್ಞಾಪನ ಪತ್ರದಲ್ಲಿ ಧಾರ್ಮಿಕ ಪಠಣಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಆಯೋಜಿಸಿದ ಬಗ್ಗೆ ಮತ್ತು ಸರ್ಕಾರಿ ಶಾಲೆಗಳಲ್ಲಿ ಧಾರ್ಮಿಕ ಪಠಣದ ಅಗತ್ಯತೆ ಇದೆಯೇ ಎಂಬುದನ್ನು ಪ್ರಸ್ತಾಪಿಸಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>



<p>ಹಾಗೆಯೇ &#8220;ಸಂಸ್ಕೃತ ಅಥವಾ ಅರೇಬಿಕ್ ಭಾಷೆಯನ್ನೇ ತಿಳಿಯದ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ, ಸಂಸ್ಕೃತ ಅಥವಾ ಅರೇಬಿಕ್ ಭಾಷೆಗಳಲ್ಲಿ ಭಗವದ್ಗೀತೆ ಹಾಗು ಸೂರ್ -ಎ- ಫತೇಹನ್ನು ಮಕ್ಕಳು ಏಕೆ ಪಠಣ ಮಾಡಬೇಕು? ಹಾಗೂ ಒಂದರಿಂದ ಐದನೇ ತರಗತಿ ಜೊತೆಗೆ ಆರರಿಂದ ಏಳನೆ ತರಗತಿ ಮಕ್ಕಳಿಗೆ ಭಗವದ್ಗೀತೆಯ ನಿಗದಿತ ಅಧ್ಯಾಯವನ್ನ ಸಂಸ್ಕೃತದಲ್ಲಿ ಹಾಗೂ ಸೂರ್ ಎ ಪಾತೆಹವನ್ನು ಅರೇಬಿಕ್ ಭಾಷೆಯಲ್ಲಿ ಸ್ಪರ್ಧಿಸಲು ಸೂಚಿಸಿರುವುದು, ಸಂಸ್ಕೃತ ಭಾಷೆಯನ್ನು ಮತ್ತು ಧಾರ್ಮಿಕ ಬೋಧನೆಯನ್ನು ಹಿಂಬಾಗಿಲಿನಿಂದ ಜಾರಿಗೊಳಿಸುವ ಕೋಮುವಾದಿ ನೀತಿಯಲ್ಲವೇ! ಎಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ.</p>



<p>ಹಾಗೆಯೇ ಮುಂದುವರಿದು, &#8220;ಕನ್ನಡ ಮಾಧ್ಯಮದ ಗ್ರಾಮೀಣ ಪ್ರಾಥಮಿಕ ಹಾಗೂ ಆಡಳಿತ ಕನ್ನಡ ಜಾರಿ ಇರುವ ನಮ್ಮ ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭೆಯನ್ನು ಪರೀಕ್ಷಿಸಲು ಸಂಸ್ಕೃತ ಹಾಗೂ ಅರೇಬಿಕ್ ಭಾಷೆಯಲ್ಲಿ ಧಾರ್ಮಿಕ ಪಠಣ ಸ್ಪರ್ಧೆ ಏರ್ಪಡಿಸುವ ಉದ್ದೇಶವಾದರೂ ಏನು! ಶಾಲಾ ಹಂತದಲ್ಲಿ ಮಕ್ಕಳ ಧಾರ್ಮಿಕ ಪಠಣ ಸಾಮರ್ಥ್ಯವನ್ನು ಬೆಳೆಸುವ ಪಠ್ಯವಸ್ತುವಿಗೆ ಅವಕಾಶ ಇರದಿದ್ದರೂ ಪಠ್ಯ ಮತ್ತು ಪಠ್ಯೇತರ ಪ್ರತಿಭೆಯ ಸಂಕೇತವಾದ ಪ್ರತಿಭಾಕಾರಂಜಿಯಂತಹ ಸಂದರ್ಭದಲ್ಲಿ ಏಕೆ ಇದನ್ನು ಅಳವಡಿಸಲಾಗಿದೆ. ನಮ್ಮ ಅಧಿಕಾರಿಗಳಿಗೆ ವೈಜ್ಞಾನಿಕ ಹಾಗು ಜಾತ್ಯತೀತ ಶಿಕ್ಷಣ ವ್ಯವಸ್ಥೆಯ ಮೂಲ ತತ್ವಗಳ ಪರಿಚಯವಿದೆಯೇ ಅಥವಾ ಕುರುಡಾಗಿ ನೀತಿಗಳನ್ನು ಮಕ್ಕಳ ಮೇಲೆ ಹೇರುತ್ತಾರೆಯೇ!&#8221; ಎನ್ನುವ ಮೂಲಕ ಶಿಕ್ಷಣ ಇಲಾಖೆಯಲ್ಲಿ ವೈಜ್ಞಾನಿಕ ಮತ್ತು ಜಾತ್ಯತೀತ ಮೌಲ್ಯ ಅರಿಯದ ಅಧಿಕಾರಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.</p>



<p>&#8220;ಪ್ರತಿಭಾ ಕಾರಂಜಿಯಲ್ಲಿ ಸಂಸ್ಕೃತ ಮತ್ತು ಅರೇಬಿಕ್ ಧಾರ್ಮಿಕ ಪಠಣ ಸ್ಪರ್ಧೆಯಿಂದ ಕನ್ನಡ ಮಾಧ್ಯಮದ ಕನ್ನಡದ ಮಕ್ಕಳಿಗೆ ಅದರಲ್ಲೂ ವಿಶೇಷವಾಗಿ ಸಂಸ್ಕೃತದ ಗಂಧಗಾಳಿ ಇಲ್ಲದ ಕೆಳಸ್ತರದ ವರ್ಗದ ಮಕ್ಕಳು ಪ್ರತಿಭಾಕಾರಂಜಿಯಲ್ಲಿ ಭಾಗವಹಿಸುವ ಹಕ್ಕಿನ ಅವಕಾಶ ವಂಚನೆಯಲ್ಲವೇ!?&#8221; ಎಂದು ಸಚಿವರ ಗಮನ ಸೆಳೆದಿದ್ದಾರೆ.</p>



<p>&#8220;ಎಲ್ಲ ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಸಮಾನವಾಗಿ ಸ್ಪರ್ಧಿಸಲು ಅವಕಾಶ ಒದಗಿಸಬೇಕು. ಶಾಲಾ ಹಂತದ ಈ ಚಟುವಟಿಕೆಗಳಲ್ಲಿ, ಪರೋಕ್ಷವಾಗಿ ಧಾರ್ಮಿಕ ಅಜಂಡಗಳನ್ನ ಹೇರುವುದಕ್ಕಿಂತ ವೈಚಾರಿಕ ನಿಲುವು ಮತ್ತು ಜಾತ್ಯತೀತ ಮೌಲ್ಯಗಳತ್ತ ಸಾಗುವಂತೆ ಪ್ರತಿಭಾ ಕಾರಂಜಿಯಲ್ಲಿ ಹೆಚ್ಚೆಹೆಚ್ಚು ಸ್ಪರ್ಧೆಗಳನ್ನು ಆಯೋಜಿಸುವುದು ಇಂದಿನ ತುರ್ತು ಅಗತ್ಯವಲ್ಲವೇ? ಅತ್ಯಂತ ದುರದೃಷ್ಟವೆಂದರೆ, ಅಂತಹ ಮೌಲ್ಯಗಳಿರುವ ದಾಸರ ಮತ್ತು ಶರಣರ ಕೃತಿಗಳಿಂದ ಹಾಡುವುದನ್ನು ಜ್ಞಾಪನ ಹೊರತುಪಡಿಸಿದೆ. ಇದರ ಉದ್ದೇಶವೇನು&#8221; ಎಂದು ಶಿಕ್ಷಣ ಸಚಿವರಿಗೆ ಪ್ರಶ್ನೆ ಹಾಕಿದ್ದಾರೆ.</p>



<p>ಕೊನೆಯದಾಗಿ &#8220;ತಾವು,(ಮಧು ಬಂಗಾರಪ್ಪ) ದಯವಿಟ್ಟು ಇದನ್ನು ಪರಿಶೀಲಿಸಿ ತಕ್ಷಣ ಅಗತ್ಯ ಕ್ರಮ ವಹಿಸಬೇಕೆಂದು ಒತ್ತಾಯಿಸುತ್ತೇನೆ.&#8221; ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.</p>



<p>ಬಿಜೆಪಿ ಸರ್ಕಾರದ ಅವಧಿಯಲ್ಲಿ ತಂದ ಅನೇಕ ನಿಯಮಗಳು ಇಂದಿಗೂ ಸಹ ಮುಂದುವರೆಯುತ್ತಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳೂ ಇಂತಹವುಗಳನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಜಾತ್ಯತೀತ ನೆಲೆಗಟ್ಟಿನಲ್ಲಿ ರೂಪುಗೊಳ್ಳಬೇಕಾದ ಶಿಕ್ಷಣ ವ್ಯವಸ್ಥೆ ಕೋಮುಕೇಂದ್ರಿತ ವ್ಯವಸ್ಥೆ ಆಗಿರುವ ಬಗ್ಗೆ ಹೊಸ ಸರ್ಕಾರ ರಚನೆ ಆದ ದಿನದಿಂದಲೂ ಅನೇಕ ಶಿಕ್ಷಣ ತಜ್ಞರು ಸರ್ಕಾರವನ್ನು ಎಚ್ಚರಿಸಿಕೊಂಡು ಬಂದಿದ್ದಾರೆ. ಅನೇಕ ಸಂದರ್ಭದಲ್ಲಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ಅವರೂ ಸಹ ಪಠ್ಯಕ್ರಮ ಬದಲಾವಣೆಯ ತುರ್ತಿನ ಬಗ್ಗೆಯೂ ನಿರಂತರವಾಗಿ ಪ್ರಸ್ತಾಪಿಸುತ್ತಲಿದ್ದು, ಸರ್ಕಾರ ಮತ್ತು ಶಿಕ್ಷಣ ಸಚಿವರು ಈ ಬಗ್ಗೆ ಎಷ್ಟರಮಟ್ಟಿಗೆ ಕಾರ್ಯಗತಗೊಳಿಸಲಿದ್ದಾರೆ ಎಂಬುದು ಕುತೂಹಲಕಾರಿ ವಿಚಾರವಾಗಿದೆ.</p>
]]></content:encoded>
					
		
		
			</item>
		<item>
		<title>ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ SFI ಶಂಘಟನೆಯಿಂದ ಮನವಿ</title>
		<link>https://peepalmedia.com/sfi-appeal-to-ejucation-minister/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 22 Jun 2023 11:50:12 +0000</pubDate>
				<category><![CDATA[Uncategorized]]></category>
		<category><![CDATA[education]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[madhu bangarappa]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sfi]]></category>
		<guid isPermaLink="false">https://peepalmedia.com/?p=22624</guid>

					<description><![CDATA[ವಿದ್ಯಾರ್ಥಿ ಹಕ್ಕುಗಳ ಹೋರಾಟದ ಸಂಘಟನೆಯಾದ ಸ್ಟೂಡೆಂಟ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ (SFI) ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ತನ್ನ ಹಲವು ಮನವಿಗಳನ್ನು ಈಡೇರಿಸುವಂತೆ ಕೋರಿತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕೇಸರೀಕರಣ ಮಾಡಿದ ಪಾಠಗಳನ್ನು ಕೈ ಬಿಟ್ಟು ವಿದ್ಯಾರ್ಥಿಗಳಿಗೆ ಬೇಕಾಗುವ ಹಾಗೂ ನಾಡಿನ ಸೌಹಾರ್ದತೆ ಹಾಗೂ ಸಹೋದರತ್ವವನ್ನು ಬೆಳೆಸುವಂತಹ ಪಾಠಗಳನ್ನು ಸೇರ್ಪಡೆ ಮಾಡಿರುವುದನ್ನು ಭಾರತ ವಿದ್ಯಾರ್ಥಿ ಫೆಡೆರೇಷನ್ (ಎಸ್.ಎಫ್.ಐ) ಕರ್ನಾಟಕ ರಾಜ್ಯ ಸಮಿತಿ ಸ್ವಾಗತ ಮಾಡುತ್ತದೆ‌ ಎಂದು ನಿಯೋಗ ತನ್ನ ಮನವಿಯ ಪತ್ರದಲ್ಲಿ [&#8230;]]]></description>
										<content:encoded><![CDATA[
<p>ವಿದ್ಯಾರ್ಥಿ ಹಕ್ಕುಗಳ ಹೋರಾಟದ ಸಂಘಟನೆಯಾದ ಸ್ಟೂಡೆಂಟ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ (SFI) ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ತನ್ನ ಹಲವು ಮನವಿಗಳನ್ನು ಈಡೇರಿಸುವಂತೆ ಕೋರಿತು. </p>



<p>ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕೇಸರೀಕರಣ ಮಾಡಿದ ಪಾಠಗಳನ್ನು ಕೈ ಬಿಟ್ಟು ವಿದ್ಯಾರ್ಥಿಗಳಿಗೆ ಬೇಕಾಗುವ ಹಾಗೂ ನಾಡಿನ ಸೌಹಾರ್ದತೆ ಹಾಗೂ ಸಹೋದರತ್ವವನ್ನು ಬೆಳೆಸುವಂತಹ ಪಾಠಗಳನ್ನು ಸೇರ್ಪಡೆ ಮಾಡಿರುವುದನ್ನು ಭಾರತ ವಿದ್ಯಾರ್ಥಿ ಫೆಡೆರೇಷನ್ (ಎಸ್.ಎಫ್.ಐ) ಕರ್ನಾಟಕ ರಾಜ್ಯ ಸಮಿತಿ ಸ್ವಾಗತ ಮಾಡುತ್ತದೆ‌ ಎಂದು ನಿಯೋಗ ತನ್ನ ಮನವಿಯ ಪತ್ರದಲ್ಲಿ ಹೇಳಿದೆ.</p>



<p><strong>ನಿಯೋಗದ ಮನವಿ ಪತ್ರ:</strong></p>



<p>&#8220;ಭಾರತ ವಿದ್ಯಾರ್ಥಿ ಫೆಡೆರೇಷನ್ (ಎಸ್.ಎಫ್.ಐ) ಸಂಘಟನೆಯು ವಿದ್ಯಾರ್ಥಿಗಳ ಮದ್ಯೆ ಸಂವಿಧಾನಬದ್ಧವಾಗಿ ರಾಜ್ಯದಲ್ಲಿ ಐಕ್ಯತೆ ಮೂಡಿಸುವ, ಸಹೋದರತ್ವ ಬೆಳೆಸುವ, ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ನಿರಂತರವಾಗಿ ಹಲವಾರು ಕಾರಕ್ರಮ ಹಾಗೂ ಚಟುವಟಿಕೆಗಳನ್ನು ಮಾಡುತ್ತಾ ಜೊತೆಯಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟಗಳನ್ನು ರೂಪಿಸುತ್ತಾ ಬಂದಿದೆ.</p>



<p>ರಾಜ್ಯದಲ್ಲಿ ಅನೇಕ ಸರಕಾರಿ ಶಾಲಾ ಕಾಲೇಜುಗಳಲ್ಲಿ ಈಗಲೂ ಅನೇಕ ಮೂಲಭೂತ ಸೌಲಭ್ಯಗಳ ಕೊರತೆ ಇರುತ್ತದೆ. ಸರ್ಕಾರಿ ಶಾಲಾ-ಕಾಲೇಜುಗಳ ಸುಧಾರಣೆಗಾಗಿ ಕೋಠಾರಿ ಆಯೋಗ ಸೇರಿದಂತೆ ಅನೇಕ ಶಿಕ್ಷಣ ತಜ್ಞರು, ಶಿಕ್ಷಕರು, ಉಪನ್ಯಾಸಕರು, ಸಾಹಿತಿಗಳು, ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಮುತ್ಸದ್ಧಿಗಳು, ಪ್ರಗತಿಪರರು ಶ್ರಮಿಸಿದ್ದಾರೆ. ಆದರೂ ಸಹ ನಮಗೆ ಸ್ವಾತಂತ್ರ ಸಿಕ್ಕು 75 ವರ್ಷಗಳು ಕಳೆದರು ನಮ್ಮ ರಾಜ್ಯದ ಗ್ರಾಮೀಣ ಪ್ರದೇಶ, ಕೊಳಚೆ ಪ್ರದೇಶಗಳು, ಹಾಗೂ ಬುಡಕಟ್ಟು ಪ್ರದೇಶಗಳಲ್ಲಿ ಇರುವಂತಹ ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗದೇ ಇರುವುದು ಒಂದು ಕಡೆಯಾದರೆ, ಕೊರೋನ ಮತ್ತು ಕೊರೋನ ನಂತರದಲ್ಲಿ ಶೈಕ್ಷಣಿಕ ರಂಗದಲ್ಲಿ ಸಾಕಷ್ಟು ಸಮಸ್ಯೆಗಳನ್ನು ವಿದ್ಯಾರ್ಥಿಗಳು ದಿನನಿತ್ಯ ಅನುಭವಿಸುತ್ತಿದ್ದಾರೆ.&#8221; ಎಂದು ಮನವಿ ಪತ್ರದಲ್ಲಿ ಸಂಘಟನೆ ಹೇಳಿದೆ.</p>



<p>ಸಂಘಟನೆಯು ಕೆಲವು ಬೇಡಿಕೆಗಳನ್ನು ಮಂತ್ರಿಗಳ ಮುಂದಿಟ್ಟಿದ್ದ ಅವು ಇಂತಿವೆ:</p>



<ol class="wp-block-list">
<li>ಕಳೆದ 4 ವರ್ಷಗಳಿಂದ 8 ನೇಯ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸದೇ ಹಿಂದಿನ ಭಾ.ಜ.ಪ ಸರ್ಕಾರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದ್ದು ಈ ವರ್ಷದಿಂದ ಸೈಕಲ್‌ ವಿತರಿಸಲು ಸರ್ಕಾರ ಕ್ರಮವಹಿಸಬೇಕು.</li>



<li>ಡೊನೇಶನ್ ಹಾವಳಿ ನಿಯಂತ್ರಣ ಮಾಡಲು ಜಿಲ್ಲಾಧಿಕಾರಿಗಳ ಅದ್ಯಕ್ಷತೆಯಲ್ಲಿರುವ ಡೇರಾ ಸಮಿತಿಯನ್ನು ಸಕ್ರಿಯಗೊಳಿಸಿ ಎಲ್ಲಾ ಜಿಲ್ಲೆಗಳಲ್ಲಿ ಸಭೆ ಮಾಡಲು ಸೂಚನೆ ನೀಡಿ ಡೊನೇಶನ್ ಹಾವಳಿಯನ್ನು ನಿಲ್ಲಿಸಬೇಕು.</li>



<li>ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಮೂಲಭೂತ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು, ಶೌಚಾಲಯಗಳು, ವಿದ್ಯಾರ್ಥಿಗಳ ಡೆಸ್ಕ್ ಗಳು ಒದಗಿಸಬೇಕು.</li>



<li>ಸ್ವಂತ ಕಟ್ಟಡಗಳು, ಈಗಾಗಲೇ ಇರುವ ಕಟ್ಟಡಗಳ ಇರುವ ಕಟ್ಟಡಗಳ ದುರಸ್ತಿ, ಗ್ರಂಥಾಲಯ ಕೊಠಡಿ, ಭೋಜನಾಲಯ ಕೊಠಡಿ ಹಾಗೂ ಎಲ್ಲಾ ಶಾಲಾ-ಕಾಲೇಜುಗಳಿಗೆ ಕಂಪೌಂಡ್ ವ್ಯವಸ್ಥೆಯನ್ನು ಖಾತ್ರಿ ಪಡಿಸಬೇಕು.</li>



<li>ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಹಂತದ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಹುದ್ದೆಗಳು<br>ಖಾಲಿ ಇವೆ ಅವುಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಬೇಕು.</li>



<li>ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ &#8216;ಡಿ&#8217; ಗ್ರೂಪ್ ಹುದ್ದೆಗಳು ಹಾಗೂ ರಂಗ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡಬೇಕು.</li>



<li>ಕೊರೋನ ಸಮಯದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ಶಾಲೆಗೆ ಕರೆದುಕೊಂಡು ಬರುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಜಾರಿ ಮಾಡಬೇಕು.</li>



<li>ಸರ್ಕಾರಿ ಶಾಲೆಗಳನ್ನು ಕಿರಿಯ ಪ್ರಾಥಮಿಕದಿಂದ ಹಿರಿಯ ಪ್ರಾಥಮಿಕಕ್ಕೆ ಮೇಲ್ದರ್ಜೆಗೆ ಏರಿಸಲು ಇರುವ ಸಮಸ್ಯೆಗಳನ್ನು ಪರಿಹರಿಸಬೇಕು.</li>



<li>ಆರ್.ಟಿ.ಇ ನಿಯಮಗಳನ್ನು ಎಲ್ಲಾ ಶಾಲೆಗಳಲ್ಲಿ ಸಮರ್ಪಕವಾಗಿ ಜಾರಿಗೊಳಿಸಲು ಆದೇಶ ಮಾಡಬೇಕು.</li>



<li>ಸರ್ಕಾರಿ ನಿಯಮಗಳನ್ನು ಉಲ್ಲಂಘನೆ ಮಾಡಿ ಬಹುತೇಕ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ನೋಟ್ ಬುಕ್ ಬಟ್ಟೆ ಮಾರಾಟ ಮಾಡುವಂತಹ ಶಾಲೆಗಳ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು.</li>



<li>ರಾಜ್ಯದಲ್ಲಿ ಅನಧೀಕೃತವಾಗಿವಾಗಿರುವ ಐಸಿಎಸ್‌ಇ ಹಾಗೂ ಸಿಬಿಎಸ್‌ಇ ಶಾಲೆಗಳ ಮೇಲೆ<br>ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.</li>
</ol>



<p>ಮನವಿಗೆ ಸ್ಪಂದಿಸಿದ ಸಚಿವರು ಸಮಸ್ಯೆಗಳ ಕುರಿತು ಚರ್ಚಿಸಲು ಅಧಿಕಾರಿಗಳನ್ನು ಕರೆದು ನಿಮ್ಮೊಂದಿಗೆ ಸಭೆ ಮಾಡುವುದಾಗಿ ತಿಳಿಸಿದರು.</p>



<p>ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಅಮರೇಶ ಕಡಗದ, ರಾಜ್ಯ ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಹಾಳ, ರಾಜ್ಯ ಪಧಾದಿಕಾರಿಗಳಾದ ಗಣೇಶ ರಾಠೋಡ್, ಬಸವರಾಜ ಬೋವಿ, ವಿಜಯ ಕುಮಾರ ಹಾಗೂ ವಿಶ್ವನಾಥ ಹಾಜರಿದ್ದರು.</p>



<p> </p>
]]></content:encoded>
					
		
		
			</item>
		<item>
		<title>ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪಾದಯಾತ್ರೆ</title>
		<link>https://peepalmedia.com/congress-march-to-demand-the-solution-of-the-problem-of-sharavati-victims/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 28 Nov 2022 07:56:21 +0000</pubDate>
				<category><![CDATA[ರಾಜ್ಯ]]></category>
		<category><![CDATA[ಶಿವಮೊಗ್ಗ]]></category>
		<category><![CDATA[congrees]]></category>
		<category><![CDATA[Gopalakrishna Belur]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[madhu bangarappa]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Rajnandini Kagodu]]></category>
		<category><![CDATA[shivamogga]]></category>
		<category><![CDATA[The problem of Sharavati victims]]></category>
		<guid isPermaLink="false">https://peepalmedia.com/?p=16784</guid>

					<description><![CDATA[ಸಾಗರ/ಶಿವಮೊಗ್ಗ: ಶರಾವತಿ ಸಂತ್ರಸ್ತರ ಜೀವನ ಅತಂತ್ರವಾಗಿದ್ದು, ಈ ಕೂಡಲೇ ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿ, ಕಾಂಗ್ರೆಸ್‌ ಯುವ ಮುಖಂಡ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ, ಗೋಪಾಲಕೃಷ್ಣ ಬೇಳೂರು, ಮತ್ತು ರಾಜನಂದಿನಿ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಇಂದು ಪಾದಯಾತ್ರೆ ನಡೆಯುತ್ತಿದೆ. ಶಿವಮೊಗ್ಗ ತಾಲ್ಲೂಕಿನ ಆಯನೂರಿನಿಂದ ಪಾದಯಾತ್ರೆ ಪ್ರಾರಂಭಗೊಂಡಿದ್ದು, ಸಂಜೆ 4ಗಂಟೆಗೆ ಶಿವಮೊಗ್ಗದ NES ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ  ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್‌ [&#8230;]]]></description>
										<content:encoded><![CDATA[
<p><strong>ಸಾಗರ/ಶಿವಮೊಗ್ಗ:</strong> ಶರಾವತಿ ಸಂತ್ರಸ್ತರ ಜೀವನ ಅತಂತ್ರವಾಗಿದ್ದು, ಈ ಕೂಡಲೇ ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿ, ಕಾಂಗ್ರೆಸ್‌ ಯುವ ಮುಖಂಡ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ, ಗೋಪಾಲಕೃಷ್ಣ ಬೇಳೂರು, ಮತ್ತು ರಾಜನಂದಿನಿ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಇಂದು ಪಾದಯಾತ್ರೆ ನಡೆಯುತ್ತಿದೆ. ಶಿವಮೊಗ್ಗ ತಾಲ್ಲೂಕಿನ ಆಯನೂರಿನಿಂದ ಪಾದಯಾತ್ರೆ ಪ್ರಾರಂಭಗೊಂಡಿದ್ದು, ಸಂಜೆ 4ಗಂಟೆಗೆ ಶಿವಮೊಗ್ಗದ NES ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ  ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್‌ ಪಕ್ಷದ ನಾಯಕರಾದ ಬಿ.ಕೆ. ಹರಿಪ್ರಸಾದ್‌, ಧ್ರುವನಾರಯಣ್‌ ಸೇರಿ ಹಲವರು ಭಾಗಿಯಾಗುವ ನಿರೀಕ್ಷೆಯಿದೆ.</p>



<p>1960ರ ದಶಕದಿಂದ ಶರಾವತಿ ಸಂತ್ರಸ್ಥರು ಸಮಸ್ಯೆ ಅನುಭವಿಸುತ್ತಿದ್ದು, ಸಾಗರ ತಾಕ್ಕೂಕಿನ ಲಿಂಗನಮಕ್ಕಿ ಡ್ಯಾಂ ನಿರ್ಮಾಣದ ವೇಳೆ, ಒಂದು ಲಕ್ಷಕ್ಕೂ ಅಧಿಕ ಎಕರೆ ಭೂಮಿ ಅರಣ್ಯ ಮುಳುಗಡೆಯಾಗಿದ್ದು, ಅಲ್ಲಿನ ಜನರು ಮನೆ-ಜಮೀನು ಕಳೆದುಕೊಂಡಿದ್ದರು. ಹೀಗಾಗಿ ಜಲಾಶಯ ನಿರ್ಮಾಣಕ್ಕೆ ಸರ್ಕಾರ ಹತ್ತು ಸಾವಿರ ಕುಟುಂಬಗಳನ್ನು ಒಕ್ಕಲೆಬ್ಬಿಸಿತ್ತು. ಆದರೆ ಸಂತ್ರಸ್ಥರಿಗೆ ಈವರೆಗೂ ಸೂಕ್ತ ಪರಿಹಾರ ನೀಡಿಲ್ಲ.</p>



<p>1959 ರಿಂದ 1969ರವರೆಗೆ ಶಿವಮೊಗ್ಗ ತಾಲ್ಲೂಕು, ಭದ್ರಾವತಿ ತಾಲ್ಲೂಕುಗಳ ಕೆಲವೆಡೆ 9,934 ಎಕರೆ ಬಿಡುಗಡೆ ಜಮೀನನ್ನು ಅಂದಿನ ಸರ್ಕಾರ ಒದಗಿಸಿದ್ದರೂ ಅರಣ್ಯ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಿರಲಿಲ್ಲ. ಹೀಗಾಗಿ ಇನ್ನೂ ಕೂಡ ಸಂತ್ರಸ್ತರಿಗೆ ಭೂಮಿ ಸಿಕ್ಕಿಲ್ಲ. ಇದರ ಜೊತೆ ರಾಜ್ಯ ಸರ್ಕಾರ ಶರಾವತಿ ಸಂತ್ರಸ್ತರಿಗೆ ನೀಡಿದ್ದ ಹಕ್ಕುಪತ್ರವನ್ನು ವಜಾ ಮಾಡಿದೆ.</p>



<p>ಕೆಲವು ದಿನಗಳ ಹಿಂದೆ ಸಾಗರದ ಶಾಸಕರಾದ ಹರತಾಳು ಹಾಲಪ್ಪ ಈ ಸಂಬಂಧ ಸಂತ್ರಸ್ತರ ಸಭೆಯನ್ನು ಕರೆದು ಚರ್ಚಿಸಿದ್ದರು. ಆದರೆ ಸಂತ್ರಸ್ತರಿಗೆ ನೆರವು ನೀಡುವಲ್ಲಿ ಈಗಿನ ಬಿಜೆಪಿಯೂ ಸೇರಿದಂತೆ ಇದುವರೆಗಿನ ಎಲ್ಲಾ ಸರ್ಕಾರಗಳು ವಿಫಲವಾಗಿವೆ ಎಂಬುದು ಸಂತ್ರಸ್ತರ ಆರೋಪವಾಗಿದೆ. ಈ ಹಿಂದೆ ಕಾಂಗ್ರೆಸ್‌ ಪಕ್ಷದ ಮುಖಂಡರೂ ಮಾಜಿ ಸ್ಪೀಕರ್‌ ಕಾಗೋಡು ತಿಮ್ಮಪ್ಪನವರು ಸಹ ಸಂತ್ರಸ್ತರ ಪರ ದನಿ ಎತ್ತಿದ್ದರು. ಈಗ ರಾಜ್ಯ ಕಾಂಗ್ರೆಸ್‌ ಪಾದಯಾತ್ರೆ ಹಮ್ಮಿಕೊಳ್ಳುತ್ತಿದ್ದಂತೆ ರಾಜಕೀಯ ಪಕ್ಷಗಳ ಚುನಾವಣಾ ಲೆಕ್ಕಾಚಾರಗಳ ಕುರಿತೂ ಚರ್ಚೆ ನಡೆಯುತ್ತಿದೆ.</p>



<p>ಶರಾವತಿ ಮುಳುಗಡೆ ಸಂತ್ರಸ್ತರ ಶಾಶ್ವತ ಪರಿಹಾರಕ್ಕಾಗಿ ಮಾಜಿ ಶಾಸಕ ಮಧು ಬಂಗಾರಪ್ಪನವರು, ಶಿವಮೊಗ್ಗ. ಸಾಗರ, ತೀರ್ಥಹಳ್ಳಿ, ಶಿಕಾರಿಪುರ, ಶಿರಾಳಕೊಪ್ಪ, ಸೊರಬ, ಕುಂಸಿ ಸೇರಿದಂತೆ ಹಲವು ಸ್ಥಳಗಳಲ್ಲಿ ಅಲ್ಲಿನ ಗ್ರಾಮಸ್ಥರು ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ಜೊತೆ ಸೇರಿ ಪೂರ್ವಭಾವಿ ಸಭೆಯನ್ನು ನಡೆಸಿ ಹೋರಾಟದ ರೂಪರೇಷೆಗಳ ಬಗ್ಗೆ ಚರ್ಚಿಸಿದ್ದರು.</p>
]]></content:encoded>
					
		
		
			</item>
		<item>
		<title>ರಾಹುಲ್ ಯಾತ್ರೆಯಲ್ಲಿ ಅತಿಹಿಂದುಳಿದ ಸಮುದಾಯಗಳಿಗೆ ಅಪಮಾನ: ಸಿದ್ಧರಾಮಯ್ಯನವರೇ ಹೀಗೇಕೆ ಮಾಡಿದಿರಿ?</title>
		<link>https://peepalmedia.com/insult-to-backward-communities-in-rahul-yatra/</link>
		
		<dc:creator><![CDATA[Peepal Media]]></dc:creator>
		<pubDate>Mon, 24 Oct 2022 06:07:05 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[karnataka]]></category>
		<category><![CDATA[kpcc]]></category>
		<category><![CDATA[madhu bangarappa]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Rahul Gandhi]]></category>
		<category><![CDATA[siddaramayya]]></category>
		<guid isPermaLink="false">https://peepalmedia.com/?p=12762</guid>

					<description><![CDATA[ಬೆಂಗಳೂರು: ಭಾರತ ಐಕ್ಯತಾ ಯಾತ್ರೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಕಾಡುಗೊಲ್ಲ, ಕೋಲೆಬಸವ, ಕೋಲಿ, ಕಬ್ಬಲಿಗ, ಹಕ್ಕಿಪಿಕ್ಕಿ, ದೊಂಬಿದಾಸ ಸಮುದಾಯದ ನಾಯಕರಿಗೆ ಅಪಮಾನ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯಾತ್ರೆ ಕರ್ನಾಟಕ ಪ್ರವೇಶಿಸಿದ ಸಂದರ್ಭದಲ್ಲಿ ಕನ್ನಡಪರ ಚಿಂತಕ ಅರುಣ್ ಜಾವಗಲ್ ಅವರನ್ನು ಆಹ್ವಾನಿಸಿ, ರಾಹುಲ್ ಜೊತೆಗಿನ ಸಂವಾದದಲ್ಲಿ ಮಾತನಾಡಲು ಅವಕಾಶ ನೀಡದೇ ಇದ್ದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅಂಥದ್ದೇ ಘಟನೆ ರಾಯಚೂರಿನಲ್ಲೂ ನಡೆದಿದ್ದು, ಹಿಂದುಳಿದ ಸಮುದಾಯದ ಮುಖಂಡರಿಗೆ ಆಹ್ವಾನ ನೀಡಿ, [&#8230;]]]></description>
										<content:encoded><![CDATA[
<p>ಬೆಂಗಳೂರು: ಭಾರತ ಐಕ್ಯತಾ ಯಾತ್ರೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಕಾಡುಗೊಲ್ಲ, ಕೋಲೆಬಸವ, ಕೋಲಿ, ಕಬ್ಬಲಿಗ, ಹಕ್ಕಿಪಿಕ್ಕಿ, ದೊಂಬಿದಾಸ ಸಮುದಾಯದ ನಾಯಕರಿಗೆ ಅಪಮಾನ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.</p>



<p>ಯಾತ್ರೆ ಕರ್ನಾಟಕ ಪ್ರವೇಶಿಸಿದ ಸಂದರ್ಭದಲ್ಲಿ ಕನ್ನಡಪರ ಚಿಂತಕ ಅರುಣ್ ಜಾವಗಲ್ ಅವರನ್ನು ಆಹ್ವಾನಿಸಿ, ರಾಹುಲ್ ಜೊತೆಗಿನ ಸಂವಾದದಲ್ಲಿ ಮಾತನಾಡಲು ಅವಕಾಶ ನೀಡದೇ ಇದ್ದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅಂಥದ್ದೇ ಘಟನೆ ರಾಯಚೂರಿನಲ್ಲೂ ನಡೆದಿದ್ದು, ಹಿಂದುಳಿದ ಸಮುದಾಯದ ಮುಖಂಡರಿಗೆ ಆಹ್ವಾನ ನೀಡಿ, ವಿಶೇಷ ಪಾಸ್ ಕೊಟ್ಟು ಕರೆಯಿಸಿಕೊಂಡು ಅಪಮಾನವೆಸಗಿ ಹಿಂದಕ್ಕೆ ಕಳುಹಿಸಲಾಗಿದೆ.</p>



<p>ಈ ಸಂಬಂಧ &#8216;ಪೀಪಲ್ ಮೀಡಿಯಾ&#8217; ಜೊತೆ ಕಾಡುಗೊಲ್ಲ ಸಮುದಾಯದ ಮುಖಂಡರಾದ ನಾಗಣ್ಣ ಮಾತನಾಡಿದ್ದು, ಅವರ ಹೇಳಿಕೆಯ ಪೂರ್ಣಪಾಠ ಹೀಗಿದೆ:</p>



<p>ಈ ಘಟನೆ ನಡೆದು ಸುಮಾರು ಮೂರು ದಿನ ಆಯಿತು, ಸಿದ್ದರಾಮಯ್ಯನವರ ಉಗ್ರ ಅಭಿಮಾನಿಯಾದ ನನಗೆ ಇದನ್ನು ಹೇಳಲು ಮನಸ್ಸಿಲ್ಲ, ಹೇಳದಿದ್ದರೆ, ಹಿಂದುಳಿದ ವರ್ಗಗಳಲ್ಲಿನ ಅತಿ ಸಣ್ಣ ಮತ್ತು ಸೂಕ್ಷ್ಮ ಸಮುದಾಯಗಳು ತಮಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಎಚ್ಚೆತ್ತುಕೊಳ್ಳಲಾರವು ಮತ್ತು ಸತ್ಯ ಹೇಳದಿದ್ದರೆ ನನಗೆ ಆತ್ಮವಂಚನೆ ಎನಿಸುತ್ತದೆ. ಆದ್ದರಿಂದ ಹೇಳುತ್ತಿದ್ದೇನೆ.</p>


<div class="wp-block-image">
<figure class="aligncenter size-large"><img decoding="async" width="978" height="1024" src="https://peepalmedia.com/wp-content/uploads/2022/10/kanayya-978x1024.jpg" alt="" class="wp-image-12768" srcset="https://peepalmedia.com/wp-content/uploads/2022/10/kanayya-978x1024.jpg 978w, https://peepalmedia.com/wp-content/uploads/2022/10/kanayya-286x300.jpg 286w, https://peepalmedia.com/wp-content/uploads/2022/10/kanayya-768x804.jpg 768w, https://peepalmedia.com/wp-content/uploads/2022/10/kanayya-150x157.jpg 150w, https://peepalmedia.com/wp-content/uploads/2022/10/kanayya-300x314.jpg 300w, https://peepalmedia.com/wp-content/uploads/2022/10/kanayya-696x729.jpg 696w, https://peepalmedia.com/wp-content/uploads/2022/10/kanayya-1068x1119.jpg 1068w, https://peepalmedia.com/wp-content/uploads/2022/10/kanayya-24x24.jpg 24w, https://peepalmedia.com/wp-content/uploads/2022/10/kanayya.jpg 1222w" sizes="(max-width: 978px) 100vw, 978px" /></figure></div>


<p>ಧರ್ಮ-ಜಾತಿ ದ್ವೇಷ, ಅಸಹನೆ, ಹಿಂಸೆ, ಸರ್ಕಾರದ ದಬ್ಬಾಳಿಕೆ, ಭ್ರಷ್ಟಾಚಾರದಿಂದ ಬಾಧಿತವಾಗಿರುವ ಭಾರತವನ್ನು ರಕ್ಷಣೆ ಮಾಡಿ ಇಂಡಿಯಾದ ಜನರನ್ನು ಬೆಸೆಯುವ  ಮಹತ್ವಾಕಾಂಕ್ಷೆ ಯಿಂದ  &#8216;ಭಾರತ್ ಜೋಡೋ  ಯಾತ್ರೆ&#8217; ಎಂಬ ಹೆಸರಿನಲ್ಲಿ  ಪ್ರಿಯ ರಾಹುಲ್ ಗಾಂಧಿಯವರು ಪ್ರಾರಂಭಿಸಿರುವ ಕಾಲ್ನಡಿಗೆ ಜಾತಕ್ಕೆ ಅಭೂತಪೂರ್ವ ಜನ ಸ್ಪಂದನೆ ಸಿಗುತ್ತಿದೆ. ಈ ಜಾತಾದಲ್ಲಿ ಸಮಾಜದ ರೈತಾಪಿ ವರ್ಗ, ಮಹಿಳೆಯರು, ದಲಿತರು, ನಿರುದ್ಯೋಗಿಗಳು, ಕಾರ್ಮಿಕರು, ವಿದ್ಯಾರ್ಥಿಗಳು, ಆದಿವಾಸಿಗಳು ,ಅಲೆಮಾರಿಗಳು, ಬುಡಕಟ್ಟಿನ ಜನರು ಅಲ್ಪಸಂಖ್ಯಾತರು, ವಿಕಲ ಚೇತನರು, ಯುವಕ ಯವತಿಯರು  ವಯೋವೃದ್ದರು  ರಾಹುಲ್ ಗಾಂಧಿ ಅವರನ್ನು ಭೇಟಿಮಾಡಿ  ತಬ್ಬಿ  ಆಲಂಗಿಸಿಕೊಂಡು  ತಮ್ಮ ದುಃಖ  ದುಮ್ಮಾನಗಳನ್ನು  ಹೇಳಿಕೊಳ್ಳುತ್ತಿದ್ದಾರೆ.</p>



<p>ಇಂತಹ ದುರಿತ ಕಾಲದಲ್ಲಿ  ನೊಂದ ಜನರನ್ನು ಅಪ್ಪಿಕೊಂಡು ಸಾಂತ್ವನ ಹೇಳುವ ರಾಹುಲ್ ಅವರ ವ್ಯಕ್ತಿತ್ವ  ಅತೀ ಭಾವುಕನಾದ ನನಗೆ ತುಂಬಾ ಇಷ್ಟವಾಯಿತು.  ಕಷ್ಟದಲ್ಲಿರುವ ಜನರನ್ನು ರಾಹುಲ್ ಅಪ್ಪಿಕೊಂಡ ಫೋಟೋಗಳನ್ನು ನಾನು ನೋಡಿದಾಗ  ಎಷ್ಟೋ ಬಾರಿ ನನ್ನ ಹೃದಯ ಮತ್ತು ಕಣ್ಣುಗಳು ನನ್ನ ನಿಯಂತ್ರಣ ಕಳೆದುಕೊಂಡು ಕಣ್ಣೀರು ಸುರಿಸಿದ್ದು ಉಂಟು.  ನಾನು ಕೂಡ ರಾಹುಲ್ ಗಾಂಧಿ ಅವರನ್ನು ನೋಡಿ  ನನ್ನ ತಬ್ಬಲಿ ಸಮುದಾಯವಾದ ಕಾಡುಗೊಲ್ಲ ಜನಾಂಗದ  ನೋವುಗಳನ್ನು ಮತ್ತು ನಮಗೆ ಆಗುತ್ತಿರುವ ಅನ್ಯಾಯಗಳನ್ನು  ಅವರಿಗೆ ತಿಳಿಸಬೇಕು ಅನ್ನಿಸುತ್ತಿತ್ತು.</p>


<div class="wp-block-image">
<figure class="aligncenter size-large"><img decoding="async" width="1024" height="768" src="https://peepalmedia.com/wp-content/uploads/2022/10/bharath-jodo1-1024x768.jpg" alt="" class="wp-image-12769" srcset="https://peepalmedia.com/wp-content/uploads/2022/10/bharath-jodo1-1024x768.jpg 1024w, https://peepalmedia.com/wp-content/uploads/2022/10/bharath-jodo1-300x225.jpg 300w, https://peepalmedia.com/wp-content/uploads/2022/10/bharath-jodo1-768x576.jpg 768w, https://peepalmedia.com/wp-content/uploads/2022/10/bharath-jodo1-1536x1152.jpg 1536w, https://peepalmedia.com/wp-content/uploads/2022/10/bharath-jodo1-150x113.jpg 150w, https://peepalmedia.com/wp-content/uploads/2022/10/bharath-jodo1-696x522.jpg 696w, https://peepalmedia.com/wp-content/uploads/2022/10/bharath-jodo1-1068x801.jpg 1068w, https://peepalmedia.com/wp-content/uploads/2022/10/bharath-jodo1.jpg 1600w" sizes="(max-width: 1024px) 100vw, 1024px" /></figure></div>


<p>ಆದರೆ ನಮ್ಮಂತ ಸಣ್ಣ ಬುಡಕಟ್ಟು ಸಮುದಾಯದವರಿಗೆ ಅದು ಸಾಧ್ಯವಿಲ್ಲ. ಏಕೆಂದರೆ ನಮ್ಮ ಜಾತಿಯಲ್ಲಿ ಅಷ್ಟು ಎತ್ತರಕ್ಕೆ ಬೆಳೆದಿರುವ ಯಾವ ನಾಯಕರೂ ಇಲ್ಲ‌. ಇಂತಹ ವ್ಯಥೆಪಟ್ಟುಕೊಳ್ಳುತ್ತಿದ್ದ ಸಂದರ್ಭದಲ್ಲಿ  ಇದ್ದಕ್ಕಿದ್ದಂತೆ ಡಾ.ಸಿ.ಎಸ್. ದ್ವಾರಕಾನಾಥ್ ಅವರು ದಿನಾಂಕ 20/10/2022 ರಂದು ಪೋನ್ ಮಾಡಿ  &#8220;ನಾಳೆ ರಾಯಚೂರು ಜಿಲ್ಲೆಯ ಗಿಲ್ಲೆಸೆಗೂರು ಪಿ.ಯು ಕಾಲೇಜಿನಲ್ಲಿ  ನಿಮ್ಮ ಕಾಡುಗೊಲ್ಲ ಸಮುದಾಯವನ್ನು ಪ್ರತಿನಿಧಿಸಿ ರಾಹುಲ್ ಗಾಂಧಿ ಅವರ ಜೊತೆಗೆ ಸಂವಾದ ಮಾಡುವ ಸಮಯ ನಿಗದಿ ಆಗಿದೆ ನೀವು ಕೂಡಲೇ ರಾಯಚೂರಿಗೆ ಹೊರಡಿ, ನಿಮ್ಮ ಜೊತೆಗೆ  ಕೊಲೇಬಸವ ಸಮುದಾಯದ ಶ್ರೀನಿವಾಸ, ಹಕ್ಕಿ- ಪಿಕ್ಕಿ ಸಮುದಾಯದ ಪುನೀತ್, ಕೊಲಿ  ಮತ್ತು ಕಬ್ಬಲಿಗ ಸಮುದಾಯದ ಶಿವಪುತ್ರಪ್ಪ, ದೊಂಬಿದಾಸ ಸಮುದಾಯದ ರಂಗಮುನಿದಾಸ್ ಸೇರಿಕೊಳ್ಳುತ್ತಾರೆ&#8221; ಎಂದರು.</p>



<p>ನಾನು ತುಂಬಾ ಸಂತೋಷದಿಂದ ರಾಯಚೂರು ತಲುಪಿದೆ. ನಿಗದಿಯಂತೆ ರಾಹುಲ್ ಗಾಂಧಿ ಜೊತೆಗಿನ ಸಂವಾದ ಕಾರ್ಯಕ್ರಮದ ವ್ಯವಸ್ಥೆ ಆಗಿತ್ತು. ನಮ್ಮ ಐದು ಸಮುದಾಯಗಳ ಪ್ರತಿನಿಧಿಗಳ ತಂಡಕ್ಕೆ  ಪ್ರವೇಶಕ್ಕೆ ವಿಶೇಷ ಪಾಸ್ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಪಾಸ್ ಪಡೆದು ರಾಹುಲ್ ಗಾಂಧಿ ಅವರು ತಂಗಿದ್ದ ಗಿಲ್ಲೆಸೆಗೂರು ಪಿ.ಯು ಕಾಲೇಜಿನ ಒಳಕ್ಕೆ ಹೋದೆವು  ಅಲ್ಲಿ ಮಾಜಿ  I A S ಅಧಿಕಾರಿ ಸೆಂಥಿಲ್ ಅವರು ನಮ್ಮನ್ನು ಆತ್ಮೀಯವಾಗಿ ಬರಮಾಡಿಕೊಂಡು ಮಾತನಾಡಿಸಿದರು. ಎರಡು ಗಂಟೆಗೆ ರಾಹುಲ್ ಗಾಂಧಿ ಅವರ ಜೊತೆಗೆ ನಿಮ್ಮ ಸಂವಾದ ಕಾರ್ಯಕ್ರಮ ಇದೆ ನೀವು ಕನ್ನಡದಲ್ಲಿಯೇ ನಿಮ್ಮ ಸಮುದಾಯ ಸಮಸ್ಯೆಗಳನ್ನು ಹೇಳಿಕೊಳ್ಳಿ ನಾನು ಇಂಗ್ಲಿಷ್ ಗೆ ಭಾಷಾಂತರ ಮಾಡುತ್ತೇನೆ&#8221; ಎಂದರು.</p>



<p>ತುಂಬಾ ಜವಾಬ್ದಾರಿಯಿಂದ ನಾವು ನಮ್ಮ ಸಮುದಾಯಗಳ ಸ್ಥಿತಿ ಗತಿಗಳ ಬಗ್ಗೆ ಮಾತನಾಡಲು ಟಿಪ್ಪಣಿ ಮಾಡಿಕೊಂಡು  ಕಾಯುತ್ತಿದೆವು. ರೈತ ಮುಖಂಡರ ಸಂವಾದ ಮುಗಿದ ನಂತರ ನಮ್ಮನ್ನು ಕರೆದರು  ನಾವು ಸಂವಾದ ನಡೆಯುವ ಕಾರ್ಯಕ್ರಮದ ಕೊಠಡಿಗೆ ಹೋಗುವ ಸಂದರ್ಭದಲ್ಲಿ  ರವಿವರ್ಮ ಕುಮಾರ್  ಅವರ ನೇತೃತ್ವದಲ್ಲಿ ಬಂದಿದ್ದ  &#8220;ಹಿಂದುಳಿದ ವರ್ಗಗಳ ಒಕ್ಕೂಟ&#8221;ದ  ರಾಮಚಂದ್ರ, ಎಚ್.ಎಂ. ರೇವಣ್ಣ, ಬೈರತಿ ಸುರೇಶ್ ಮತ್ತು ಅವರ ಬಳಗ ನಮ್ಮನ್ನು ಒಳಗಡೆ ಹೋಗಲು ಬಿಡಲಿಲ್ಲ . &#8220;ಹಿಂದುಳಿದ ವರ್ಗಗಳ ವತಿಯಿಂದ  ಒಕ್ಕೂಟದ ಸದಸ್ಯರು ಮಾತ್ರ ಒಳಕ್ಕೆ ಹೊಗಬೇಕು ನೀವು ಯಾರು?&#8221; ಎಂದು ಎಚ್.ಎಂ.ರೇವಣ್ಣ ಅವರು ನನ್ನ ಕತ್ತಿನ ಪಟ್ಟಿಹಿಡಿದು ನೂಕಿದರು.  ಆಗ ನಾನು &#8220;ಸರ್ ನಾನು ಅತ್ಯಂತ ಹಿಂದುಳಿದ  ಕಾಡುಗೊಲ್ಲ ಸಮುದಾಯದ ಪ್ರತಿನಿಧಿ. ನಮಗೆ ರಾಹುಲ್ ಗಾಂಧಿ ಅವರ ಜೊತೆಗೆ ಮಾತನಾಡಲು ಸಮಯ ನಿಗದಿಯಾಗಿದೆ ನಿಮಗೆ ಅನುಮಾನವಿದ್ದರೆ ಆಯೋಜಕರ ಹತ್ತಿರ ಕೇಳಿ  ಪಟ್ಟಿಯಲ್ಲಿ ನಮ್ಮ ಹೆಸರಿದೆ. ನಮಗೆ ವಿಶೇಷ ಪಾಸ್ ಕೊಟ್ಟಿದ್ದಾರೆ ನೋಡಿ,  ನಿಮ್ಮಂತ ದೊಡ್ಡವರು ನಮ್ಮಂತಹ ತಬ್ಬಲಿ ಸಮುದಾಯದವರನ್ನು ಈ ರೀತಿಯಲ್ಲಿ ದೌರ್ಜನ್ಯ ಮಾಡಬಾರದು ನಮ್ಮನ್ನು ಒಳಗಡೆ ಬಿಡಿ ಸಾರ್&#8221; ಎಂದೆ.</p>



<p>ಅದಕ್ಕೆ  ಮಾಜಿ ಸಚಿವ ರೇವಣ್ಣ ಮತ್ತು ಕುರುಬ ಸಮುದಾಯದ  ರಾಮಚಂದ್ರ ನಮ್ಮ ಮೇಲೆ ವ್ಯಗ್ರರಾದರು.  ನಮ್ಮ ತಂಡದಲ್ಲಿದ್ದ  ಮೂರು ಜನರನ್ನು ಒಳಗೆ ಬಿಡದೆ ನೂಕಿದರು.  ನಾನು ಮತ್ತು ಕೊಲೇಬಸವ ಸಮುದಾಯದ ಶ್ರೀನಿವಾಸ ಅವರು ಕಷ್ಟಪಟ್ಟು ಒಳ ಹೋದೆವು. ನಾವು ಒಳ ಹೋಗುತ್ತಿದ್ದಂತೆ  ಅಲ್ಲಿ ಕುಳಿತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು &#8220;ನೀವು ಯಾಕೆ?&#8221; ಎಂದು ಪ್ರಶ್ನೆ ಮಾಡಿದರು. ಆಗ ನಮ್ಮ ಪಾಸ್ ತೋರಿಸಿ &#8220;ರಾಹುಲ್ ಸರ್ ಜೊತೆಗೆ ಸಂವಾದಕ್ಕೆ ಆಹ್ವಾನಿತರಾಗಿ ಬಂದಿದ್ದೇವೆ&#8221; ಎಂದಾಗ ಒಳಗೊಳಗೆ ಗೊಣಗಿಕೊಂಡು ಅಸಹನೆಯಿಂದ ನಮ್ಮನ್ನು ನೋಡಿದರು.  ನನ್ನ ಪಕ್ಕದಲ್ಲಿ ಕುಳಿತಿದ್ದ ಕೊಲೇ ಬಸವ ಸಮುದಾಯದ ಶ್ರೀನಿವಾಸ್ &#8220;ಸರ್ ನಾವು M B C ಗಳು&#8221; ಅಂದಾಗ ಕೊಪಗೊಂಡ ಕುರುಬ ಸಮುದಾಯದ ಮುಖಂಡರು ಶ್ರೀನಿವಾಸ ಅವರನ್ನು ಹಿಡಿದು ಹಿಂದಕ್ಕೆ ತಳ್ಳಿದರು.  ಇಷ್ಟೆಲ್ಲಾ   ದೌರ್ಜನ್ಯದ ನಡುವೆ ನಾವು ರಾಹುಲ್ ಗಾಂಧಿ ಅವರ ಬಳಿಗೆ ಹೋಗಿ ಮನವಿ ಕೊಡಲು ಪ್ರಯತ್ನ ಮಾಡಿದಾಗ ಸಿದ್ದರಾಮಯ್ಯ ಅವರು ನನ್ನನ್ನು ಹಿಂದಕ್ಕೆ ನೂಕಿದರು.</p>



<p>ಇಷ್ಟೆಲ್ಲಾ ಸನ್ನಿವೇಶವನ್ನು ನೋಡುತ್ತಿದ್ದ ಮಧು ಬಂಗಾರಪ್ಪ ಅವರ ಬಳಿ ನಾನು ಹೋಗಿ &#8220;ಏನ್ ಸರ್ ನಮ್ಮಂತಹ ತಬ್ಬಲಿ ಸಮುದಾಯಗಳಿಗೆ  ಇವರು ಹೇಗೆ ಮಾಡುತ್ತಿದ್ದಾರೆ ನೋಡಿ&#8221; ಎಂದಾಗ  &#8220;ನಾನು ಮೂಕ ಪ್ರೇಕ್ಷಕ  ನೋ ಕಾಮೆಂಟ್ಸ್&#8221; ಎಂದು ಬಿಟ್ಟರು. ಅತೀ ಉತ್ಸಾಹದಿಂದ ನಮ್ಮ ಸಮುದಾಯಗಳ ಸಮಸ್ಯೆ ಹೇಳಿಕೊಳ್ಳಲು ಹೋಗಿದ್ದ ನಾವು ಹತಾಶೆಯಿಂದ ಹೊರಬಂದೆವು.</p>



<p>ಮಾಜಿ ಸಚಿವ ರೇವಣ್ಣ  ಅವರು ವೇದಿಕೆಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಾಕಷ್ಟು ಭಾಷಣ ಮಾಡುತ್ತಾರೆ  ಅತ್ಯಂತ ಹಿಂದುಳಿದ ಅಲಕ್ಷಿತ ಸಮುದಾಯಗಳ ಬಗ್ಗೆ ತೋರುವ ಕಾಳಜಿ ಇದೆನಾ..? ಇಂತವರ ನಾಯಕತ್ವದಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಸಿಗುತ್ತದೆಯೆ? ನಮ್ಮಂತಹ ದಿಕ್ಕಿಲ್ಲದ ಸಮುದಾಯಗಳ ಬೇರುಗಳನ್ನು ಕತ್ತರಿಸುವ ಕ್ರೌರ್ಯ ನಮ್ಮ ಅರಿವಿಗೆ ಬಂದಿದ್ದರೂ ನಾವು ಏನನ್ನೂ ಮಾತನಾಡದೇ &#8220;ಜೈ  ಹುಲಿಯಾ&#8221; &#8220;ಜೈ ಸಿದ್ದರಾಮಯ್ಯ&#8221; ಎಂದು ಜೈ ಕಾರ ಕೂಗುವುದಷ್ಟೇ ನಮ್ಮ ಯೋಗ್ಯತೇನಾ..?</p>



<p>ಇದು ನಾಗಣ್ಣ ಅವರ ನೊಂದ ನುಡಿಗಳು. ಕಾಂಗ್ರೆಸ್ ಮುಖಂಡರು ಹೀಗೇಕೆ ಮಾಡಿದರು? ಹೀಗೆ ಕರೆದು ಅಪಮಾನಿಸುವ ಅಗತ್ಯವೇನಿತ್ತು? ಬೇರೆಯವರ ವಿಷಯ ಹಾಗಿರಲಿ, ಸಿದ್ಧರಾಮಯ್ಯ ಅವರೇಕೆ ಹೀಗೆ ಮಾಡಿದರು?</p>
]]></content:encoded>
					
		
		
			</item>
		<item>
		<title>ಕೆಪಿಸಿಸಿಯ ಹಿಂದುಳಿದ ಜಾತಿಗಳ ವಿಭಾಗದ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ</title>
		<link>https://peepalmedia.com/madhu-bangarappa-elected-as-kpcc-backward-castes-section-working-president/</link>
		
		<dc:creator><![CDATA[Peepal Media]]></dc:creator>
		<pubDate>Wed, 14 Sep 2022 10:10:12 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[AICC]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[kpcc]]></category>
		<category><![CDATA[madhu bangarappa]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[siddaramayya]]></category>
		<guid isPermaLink="false">https://peepalmedia.com/?p=5368</guid>

					<description><![CDATA[ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಹಿಂದುಳಿದ ಜಾತಿಗಳ ವಿಭಾಗದ ಕಾರ್ಯಾಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಆಯ್ಕೆಮಾಡಲಾಗಿದೆ ಎಂದು &#160;ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಟ್ವೀಟ್‌ ಮಾಡುವ ಮೂಲಕ ಅಭಿನಂದಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿಯ ಹಿಂದುಳಿದ ಜಾತಿಗಳ ವಿಭಾಗದ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಮಾಜಿ ಶಾಸಕ ಮಧು ಬಂಗಾರಪ್ಪನವರಿಗೆ ಅಭಿನಂದನೆಗಳು. ಜನಜಾಗೃತಿ, ಸಂಘಟನೆ ಮತ್ತು ಹೋರಾಟದ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕೆಲಸ ನಿಮ್ಮಿಂದಾಗಲಿ ಎಂದು [&#8230;]]]></description>
										<content:encoded><![CDATA[
<pre class="wp-block-preformatted has-medium-font-size"><strong>ಬೆಂಗಳೂರು: </strong>ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಹಿಂದುಳಿದ ಜಾತಿಗಳ ವಿಭಾಗದ ಕಾರ್ಯಾಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಆಯ್ಕೆಮಾಡಲಾಗಿದೆ ಎಂದು &nbsp;ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
</pre>


<div class="wp-block-image">
<figure class="aligncenter size-full is-resized"><img loading="lazy" decoding="async" src="https://peepalmedia.com/wp-content/uploads/2022/09/aicc.jpg" alt="" class="wp-image-5371" width="569" height="785" srcset="https://peepalmedia.com/wp-content/uploads/2022/09/aicc.jpg 653w, https://peepalmedia.com/wp-content/uploads/2022/09/aicc-218x300.jpg 218w" sizes="auto, (max-width: 569px) 100vw, 569px" /><figcaption><strong>ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಕಟಣೆ</strong></figcaption></figure></div>


<p class="has-medium-font-size">ಈ ಕುರಿತು ಟ್ವೀಟ್‌ ಮಾಡುವ ಮೂಲಕ ಅಭಿನಂದಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿಯ ಹಿಂದುಳಿದ ಜಾತಿಗಳ ವಿಭಾಗದ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಮಾಜಿ ಶಾಸಕ ಮಧು ಬಂಗಾರಪ್ಪನವರಿಗೆ ಅಭಿನಂದನೆಗಳು. ಜನಜಾಗೃತಿ, ಸಂಘಟನೆ ಮತ್ತು ಹೋರಾಟದ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕೆಲಸ ನಿಮ್ಮಿಂದಾಗಲಿ ಎಂದು ಶುಭ ಹಾರೈಸಿದ್ದಾರೆ.</p>
]]></content:encoded>
					
		
		
			</item>
	</channel>
</rss>
