<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>malleshwaram &#8211; Peepal Media</title>
	<atom:link href="https://peepalmedia.com/tag/malleshwaram/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 03 Aug 2023 19:27:09 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>malleshwaram &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ವರ್ಣಭೇದದ ಹೇಳಿಕೆ : ಬಾಯ್ತಪ್ಪಿನ ಮಾತು ಎಂಬುದನ್ನು ನಂಬಲಾಗದು‌, ಇದೇ ಬಿಜೆಪಿ ಸಿದ್ದಾಂತ : ಕಿಮ್ಮನೆ ರತ್ನಾಕರ್ ವಾಗ್ದಾಳಿ</title>
		<link>https://peepalmedia.com/it-is-unbelievable-that-it-is-a-false-statement-this-is-the-bjp-ideology/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 03 Aug 2023 10:22:24 +0000</pubDate>
				<category><![CDATA[ರಾಜಕೀಯ]]></category>
		<category><![CDATA[araga jnanendhra]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[karnataka]]></category>
		<category><![CDATA[Kimmane Rathnakar]]></category>
		<category><![CDATA[malleshwaram]]></category>
		<category><![CDATA[Mallikarjun Kharge]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=24854</guid>

					<description><![CDATA[ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಈಶ್ವರ್ ಖಂಡ್ರೆ ಅವರ ಮೈಬಣ್ಣದ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಆಗಿರುವ ಮಾತನ್ನು ಬಿಜೆಪಿಯ ಯಾವೊಬ್ಬ ನಾಯಕ ಕೂಡಾ ಖಂಡಿಸಿಲ್ಲ. ಇದನ್ನು ನೋಡಿದರೆ ಬಿಜೆಪಿ ಪಕ್ಷದ ನಾಯಕರ ಮೌನವೇ ಆರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಸಮರ್ಥಿಸುವಂತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಬಿಜೆಪಿ ಮತ್ತು ಆರಗ ಜ್ಞಾನೇಂದ್ರ ವಿರುದ್ಧ ಕಿಡಿಕಾರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರರಾದ ಕಿಮ್ಮನೆ ರತ್ನಾಕರ್ ಅವರು, &#8220;ಬಿಜೆಪಿಯ ಬಹುತೇಕ [&#8230;]]]></description>
										<content:encoded><![CDATA[
<p>ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಈಶ್ವರ್ ಖಂಡ್ರೆ ಅವರ ಮೈಬಣ್ಣದ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಆಗಿರುವ ಮಾತನ್ನು ಬಿಜೆಪಿಯ ಯಾವೊಬ್ಬ ನಾಯಕ ಕೂಡಾ ಖಂಡಿಸಿಲ್ಲ. ಇದನ್ನು ನೋಡಿದರೆ ಬಿಜೆಪಿ ಪಕ್ಷದ ನಾಯಕರ ಮೌನವೇ ಆರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಸಮರ್ಥಿಸುವಂತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಬಿಜೆಪಿ ಮತ್ತು ಆರಗ ಜ್ಞಾನೇಂದ್ರ ವಿರುದ್ಧ ಕಿಡಿಕಾರಿದ್ದಾರೆ.</p>



<p>ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರರಾದ ಕಿಮ್ಮನೆ ರತ್ನಾಕರ್ ಅವರು, &#8220;ಬಿಜೆಪಿಯ ಬಹುತೇಕ ನಾಯಕರು ಈ ದೇಶದ ಕಾನೂನಿನ ವಿರುದ್ಧವಾಗಿ, ಸಂವಿಧಾನದ ವಿರುದ್ಧವಾಗಿ, ಅಂಬೇಡ್ಕರ್ ವಿರುದ್ಧವಾಗಿ, ಮಹಾತ್ಮಾ ಗಾಂಧೀಜಿ ವಿರುದ್ಧವಾಗಿ ಮಾತನಾಡಿದಾಗಲೂ ಬಿಜೆಪಿ ಇದೇ ಮೌನವನ್ನು ವಹಿಸಿತ್ತು. ಈ ಮೌನ ಬಿಜೆಪಿ ನಾಯಕರ ನಡೆ ಮತ್ತು ನುಡಿಯನ್ನು ಸಮರ್ಥಿಸುವ ಮೌನವಾಗಿದೆ..&#8221; ಎಂದು ಕಿಮ್ಮನೆ ರತ್ನಾಕರ್ ಅವರು ಆರಗ ಜ್ಞಾನೇಂದ್ರ ಹೇಳಿಕೆಯನ್ನು ಖಂಡಿಸದ ಬಿಜೆಪಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<p>&#8220;ಈ ಹಿಂದೆ ಬಸನಗೌಡ ಪಾಟೀಲ್ ಯತ್ನಾಳ್, ಅನಂತಕುಮಾರ್ ಹೆಗ್ಡೆ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಿದಾಗ, ಸಂವಿಧಾನದ ವಿರುದ್ಧ ಮಾತನಾಡಿದಾಗಲೂ ಬಿಜೆಪಿಯ ಯಾವ ನಾಯಕನೂ ಅದನ್ನು ಖಂಡಿಸಿರಲಿಲ್ಲ. ಯಾಕೆಂದರೆ ಬಿಜೆಪಿ ಪಕ್ಷ ತಾನು ಪಾಲಿಸಿಕೊಂಡು ಬಂದ ಸಂಸ್ಕೃತಿಯನ್ನೇ ಅವರುಗಳು ಮಾತನಾಡಿದ್ದು. ಅದನ್ನು ಈಗ ಆರಗ ಜ್ಞಾನೇಂದ್ರ ಮುಂದುವರೆಸಿಕೊಂಡು ಬಂದಿದ್ದಾರೆ&#8221; ಎಂದು ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದ್ದಾರೆ.</p>



<p>&#8220;ನಿನ್ನೆಯ ದಿನ ಮಲ್ಲಿಕಾರ್ಜುನ ಖರ್ಗೆ ಮತ್ತು ಈಶ್ವರ್ ಖಂಡ್ರೆ ಮೈಬಣ್ಣದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರಗ ಜ್ಞಾನೇಂದ್ರ ಮಾರನೇ ದಿನ ತಾನು ಬಾಯ್ತಪ್ಪಿನಿಂದ ಈ ಮಾತನ್ನು ಆಡಿದ್ದು ಎಂದು ಹೇಳಿದ್ದಾರೆ. ಆದರೆ ಜಾತಿ, ಧರ್ಮ ಹಾಗೂ ವರ್ಣದ ಆಧಾರದಲ್ಲಿ ಸದಾ ದ್ವೇಷವನ್ನೇ ಉಗುಳುವ ಬಿಜೆಪಿ ಸಿದ್ಧಾಂತದ ಆರಗ ಜ್ಞಾನೇಂದ್ರ ಬಾಯ್ತಪ್ಪಿನಿಂದ ಆಡಿದ ಮಾತು ಎಂಬುದನ್ನು ನಂಬಲಾಗದು. ಇದೇ ಬಿಜೆಪಿ ಸಿದ್ಧಾಂತವಾಗಿದೆ. ಇದನ್ನೇ ಆರಗ ಜ್ಞಾನೇಂದ್ರ ಪ್ರತಿಪಾದಿಸಿದ್ದಾರೆ&#8221; ಎಂದು ಕಿಮ್ಮನೆ ರತ್ನಾಕರ್ ಕಿಡಿಕಾರಿದ್ದಾರೆ.</p>



<p>&#8220;ರಾಹುಲ್ ಗಾಂಧಿಯವರು ಮೋದಿ ಉಪನಾಮ ಬಳಸಿದ ಮಾತ್ರಕ್ಕೆ ಅವರನ್ನು ಅಪರಾಧಿ ಎಂದು ಬಿಂಬಿಸಿ, ಸಂಸತ್ ಸದಸ್ಯತ್ವ ರದ್ದು ಮಾಡಿದ ಬಿಜೆಪಿ, ಅದೇ ಆಧಾರದಲ್ಲಿ ಖರ್ಗೆ ಅವರ ಮೈಬಣ್ಣದ ಬಗ್ಗೆ ಆಡಿರುವ ಮಾತುಗಳು ಅಪರಾಧ ಅಲ್ಲವೇ? ಈ ಬಗ್ಗೆ ವಿಧಾನಸಭೆಯ ಸ್ಪೀಕರ್ ಅವರಿಗೂ ದೂರು ಕೊಡಲಾಗುವುದು. ನ್ಯಾಯಾಲಯದಲ್ಲೂ ಕೇಸು ದಾಖಲಿಸಲಾಗುವುದು ಎಂದ ಕಿಮ್ಮನೆ ರತ್ನಾಕರ್, ಆರಗ ಜ್ಞಾನೇಂದ್ರ ವಿರುದ್ಧ ತೀರ್ಥಹಳ್ಳಿಲ್ಲೂ ಬೃಹತ್ ಪ್ರತಿಭಟನೆ ನಡೆಸಲಾಗುವುದು&#8221; ಎಂದು ತಿಳಿಸಿದರು.</p>



<figure class="wp-block-embed is-type-wp-embed is-provider-peepal-media wp-block-embed-peepal-media"><div class="wp-block-embed__wrapper">
<blockquote class="wp-embedded-content" data-secret="IQzEQjgEw2"><a href="https://peepalmedia.com/gyanendra-made-fun-of-kharges-complexion-while-talking/">ಮಾತಾಡುವ ಭರದಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ವ್ಯಂಗ್ಯ ಮಾಡಿದ ಆರಗ ಜ್ಞಾನೇಂದ್ರ</a></blockquote><iframe class="wp-embedded-content" sandbox="allow-scripts" security="restricted"  title="&#8220;ಮಾತಾಡುವ ಭರದಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ವ್ಯಂಗ್ಯ ಮಾಡಿದ ಆರಗ ಜ್ಞಾನೇಂದ್ರ&#8221; &#8212; Peepal Media" src="https://peepalmedia.com/gyanendra-made-fun-of-kharges-complexion-while-talking/embed/#?secret=q8F515sJTa#?secret=IQzEQjgEw2" data-secret="IQzEQjgEw2" width="600" height="338" frameborder="0" marginwidth="0" marginheight="0" scrolling="no"></iframe>
</div></figure>



<p>ಇನ್ನು ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆದ ಪ್ರತಿಭಟನೆ ಬಗ್ಗೆ ಮಾತನಾಡಿದ ಕಿಮ್ಮನೆ ರತ್ನಾಕರ್, &#8220;ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಕ್ಕೆ ತರಲು ಪಟ್ಟು ಹಿಡಿದಿರೋದು ಕೇಂದ್ರ ಬಿಜೆಪಿ ಸರ್ಕಾರ. ಕಾಂಗ್ರೆಸ್ ಹಿಂದಿನಿಂದಲೂ ಆ ವರದಿಯನ್ನು ವಿರೋಧಿಸಿಕೊಂಡೇ ಬಂದಿದೆ. ಆರಗ ಜ್ಞಾನೇಂದ್ರ ಜನರ ದಾರಿ ತಪ್ಪಿಸಲು ಪ್ರತಿಭಟನೆ ಹಾದಿ ಹಿಡಿದಿದ್ದಾರೆ. ನಿಜವಾಗಿಯೂ ಇವರು ಪ್ರತಿಭಟನೆ ಮಾಡೋದೇ ಆದರೆ ಅದು ನರೇಂದ್ರ ಮೋದಿ ವಿರುದ್ಧ ಮಾಡಬೇಕು. ಬಿಜೆಪಿ ಎಲ್ಲರನ್ನೂ ಒಟ್ಟಾಗಿ ತಗೆದುಕೊಂಡು ಹೋಗುವ ಮನಸ್ಥಿತಿ ಇರದ ಕಾರಣ ಇಷ್ಟೆಲ್ಲಾ ಗೊಂದಲ ಏರ್ಪಟ್ಟಿದೆ&#8221; ಎಂದು ವಾಗ್ದಾಳಿ ನಡೆಸಿದ್ದಾರೆ</p>



<p>&#8220;ಆರಗ ಜ್ಞಾನೇಂದ್ರ 21 ವರ್ಷಗಳ ಕಾಲ ಶಾಸಕರಾಗಿ ಕೆಲಸ ಮಾಡಿದವರು. ವಿಧಾನಸಭಾ ಸಮಿತಿಗಳ ಸ್ಥಾನಮಾನದಲ್ಲಿ ಇದ್ದವರು, ಸಚಿವರಾಗಿಯೂ ಕೆಲಸ ಮಾಡಿದವರು. ಇವರಿಗೆ ಸಂವಿಧಾನಾತ್ಮಕವಾಗಿ, ಕಾನೂನಿನ ಚೌಕಟ್ಟಿನಲ್ಲಿ, ಜನಪ್ರತಿನಿಧಿ ಎಂಬ ಜವಾಬ್ದಾರಿ ಅರಿತು ಮಾತನಾಡಬೇಕು ಎಂಬುದರ ಅರಿವು ಇಲ್ಲ. ಇವರದ್ದೇನಿದ್ದರೂ RSS ಸಿದ್ಧಾಂತದ ಚಿಂತನಗಂಗಾ ಓದಿಕೊಂಡು ಬಂದವರಾದ್ದರಿಂದ ಎಲ್ಲಿ, ಹೇಗೆ ಮಾತನಾಡಬೇಕು ಎಂಬ ಕನಿಷ್ಟ ಅರಿವು ಇಲ್ಲ. ಹಾಗಾಗಿ ಆರಗ ಜ್ಞಾನೇಂದ್ರ ಅವರ ವರ್ಣಭೇದ ನೀತಿಯ ಮಾತನ್ನು, ಅವರ ಸಂವಿಧಾನ ಉಲ್ಲಂಘನೆಯನ್ನು ಪರಿಗಣಿಸಿ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಬೆಂಗಳೂರು: ಮಲ್ಲೇಶ್ವರಂನಲ್ಲಿ ಮರಗಳ ಗಣತಿ</title>
		<link>https://peepalmedia.com/bengaluru-census-of-trees-in-malleswaram/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 08 Dec 2022 11:41:22 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[Census of trees]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[malleshwaram]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=17974</guid>

					<description><![CDATA[ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ವೃಕ್ಷ ಗಣತಿ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದ ಮೂರು ವರ್ಷಗಳ ನಂತರ, ನಾಗರಿಕ ಸಂಸ್ಥೆಯ ಅರಣ್ಯ ಘಟಕವು ಅಂತಿಮವಾಗಿ ನಗರದ ಮಲ್ಲೇಶ್ವರಂ ಪ್ರದೇಶದಲ್ಲಿ ವೃಕ್ಷ ಗಣತಿ ನಡೆಸಿದೆ. ಪ್ರಾಯೋಗಿಕ ಆಧಾರದ ಮೇಲೆ ಯೋಜನೆಯನ್ನು ಪ್ರಾರಂಭಿಸಿರುವ ನಾಗರಿಕ ಸಂಸ್ಥೆಯ ಅರಣ್ಯ ಘಟಕವು, ವೃಕ್ಷ ಗಣತಿಯ ಭಾಗವಾಗಿ, ಪ್ರತಿ ಮರಕ್ಕೆ ಕ್ಯೂಆರ್ ಕೋಡ್ ಅನ್ನು ಅಂಟಿಸಲಾಗುತ್ತಿದ್ದು, ಕ್ಯೂಆರ್ ಕೋಡ್‌ ಮರದ ಹೆಸರು ಮತ್ತು &#160;ಆರೋಗ್ಯ ಸ್ಥಿತಿ, ಹೀಗೆ ಸಂಬಂಧಪಟ್ಟ ಪ್ರಮುಖ ಮಾಹಿತಿಯನ್ನು [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ವೃಕ್ಷ ಗಣತಿ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದ ಮೂರು ವರ್ಷಗಳ ನಂತರ, ನಾಗರಿಕ ಸಂಸ್ಥೆಯ ಅರಣ್ಯ ಘಟಕವು ಅಂತಿಮವಾಗಿ ನಗರದ ಮಲ್ಲೇಶ್ವರಂ ಪ್ರದೇಶದಲ್ಲಿ ವೃಕ್ಷ ಗಣತಿ ನಡೆಸಿದೆ.</p>



<p>ಪ್ರಾಯೋಗಿಕ ಆಧಾರದ ಮೇಲೆ ಯೋಜನೆಯನ್ನು ಪ್ರಾರಂಭಿಸಿರುವ ನಾಗರಿಕ ಸಂಸ್ಥೆಯ ಅರಣ್ಯ ಘಟಕವು, ವೃಕ್ಷ ಗಣತಿಯ ಭಾಗವಾಗಿ, ಪ್ರತಿ ಮರಕ್ಕೆ ಕ್ಯೂಆರ್ ಕೋಡ್ ಅನ್ನು ಅಂಟಿಸಲಾಗುತ್ತಿದ್ದು, ಕ್ಯೂಆರ್ ಕೋಡ್‌ ಮರದ ಹೆಸರು ಮತ್ತು &nbsp;ಆರೋಗ್ಯ ಸ್ಥಿತಿ, ಹೀಗೆ ಸಂಬಂಧಪಟ್ಟ ಪ್ರಮುಖ ಮಾಹಿತಿಯನ್ನು ಒದಗಿಸುತ್ತದೆ ಎಂದು ಅರಣ್ಯ ಘಟಕ ಮಾಹಿತಿ ನೀಡಿದೆ.</p>



<p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಅರಣ್ಯ ಕೋಶದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋವಿಂದರಾಜು ವಿ ಮಾತನಾಡಿ, ʼನಾವು ಕಳೆದ ವಾರ ಮಲ್ಲೇಶ್ವರಂನ ವಾರ್ಡ್ ಸಂಖ್ಯೆ 61 ರಲ್ಲಿ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಿದ್ದೇವೆ. ಪ್ರತಿಯೊಂದು ಮರವು ವಿಶಿಷ್ಟವಾದ ಕ್ಯೂಆರ್ ಕೋಡ್ ಅನ್ನು ಹೊಂದಿರುತ್ತದೆ, ಇದು ಸ್ಕ್ಯಾನಿಂಗ್ ಮಾಡಿದಾಗ ಮರದ ಹೆಸರು, ಮರದ ಸುತ್ತಳತೆ, ಅದರ ಆರೋಗ್ಯ ಸ್ಥಿತಿ ಮತ್ತು ಪ್ರಯೋಜನಗಳಂತಹ ಮಾಹಿತಿಯನ್ನು ನೀಡುತ್ತದೆ. ಇದಕ್ಕಾಗಿ ಬಿಬಿಎಂಪಿ ಆ್ಯಪ್ ಅಭಿವೃದ್ಧಿಪಡಿಸಿದೆ&#8217; ಎಂದು ಹೇಳಿದರು.</p>



<p>ʼಮರಗಳ ಗಣತಿಯು ಮುಖ್ಯವಾಗಿದೆ, ಏಕೆಂದರೆ ಇದು ಪ್ರತಿ ಮರದ ಮಹತ್ವವನ್ನು ಜನರಿಗೆ ತಿಳಿಸುತ್ತದೆ, ಹೀಗಾಗಿ ಮರಗಳ ಗಣತಿಯನ್ನು ನಗರದ ಇತರ ಪ್ರದೇಶಗಳಿಗೆ ವಿಸ್ತರಿಸಿದರೆ ಪ್ರತಿ ವಾರ್ಡ್‌ಗೆ ತಗಲುವ ವೆಚ್ಚದ ಅಂದಾಜನ್ನು ಪ್ರಾಯೋಗಿಕ ಯೋಜನೆಯು ನೀಡುತ್ತದೆʼ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>



<p>2019 ರಲ್ಲಿ, ಹೈಕೋರ್ಟ್ ಮರಗಳ ಗಣತಿಯನ್ನು ನಡೆಸುವಂತೆ ನಾಗರಿಕ ಸಂಸ್ಥೆಗೆ ನಿರ್ದೇಶನ ನೀಡಿತ್ತು. ಅದೇ ವರ್ಷ ಸಮೀಕ್ಷೆ ನಡೆಸಲು ಬಿಬಿಎಂಪಿಯು ಇನ್ ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿಯೊಂದಿಗೆ ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿತು ಆದರೆ ನಂತರ ಅದನ್ನು ರದ್ದುಗೊಳಿಸಿತು.</p>



<p>ವಿಶೇಷವೆಂದರೆ, ಪ್ರಾಜೆಕ್ಟ್ ವೃಕ್ಷ ಫೌಂಡೇಶನ್ನ ಸ್ಥಾಪಕ ವಿಜಯ್ ನಿಶಾಂತ್ ಅವರು 2019 ರಲ್ಲಿ ಪಟ್ಟಾಭಿರಾಮನಗರ ವಾರ್ಡ್‌ನಲ್ಲಿ ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ವೃಕ್ಷ ಗಣತಿಯನ್ನು ನಡೆಸಿದರು. ಅವರು ವಾರ್ಡ್ ನಲ್ಲಿ 3,700 ಮರಗಳನ್ನು ಗುರುತಿಸಿದ್ದರು.</p>
]]></content:encoded>
					
		
		
			</item>
		<item>
		<title>ಮಂತ್ರಿಸ್ಕ್ವೇರ್‌ ಮೆಟ್ರೋ ನಿಲ್ದಾಣಕ್ಕೆ ನಾರಾಯಣ ಗುರುಗಳ ಹೆಸರು : ರಾಜ್ಯ ಸರ್ಕಾರ</title>
		<link>https://peepalmedia.com/mathrisquare-metro-nildaanakke-narayana-gurugala-hesaru-rajya-sarkaara/</link>
		
		<dc:creator><![CDATA[Peepal Media]]></dc:creator>
		<pubDate>Fri, 16 Sep 2022 10:13:47 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[brahmashri narayana gurugalu]]></category>
		<category><![CDATA[cm bhommai]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[malleshwaram]]></category>
		<category><![CDATA[mantri square metro station]]></category>
		<category><![CDATA[narayana gurugalu]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=5689</guid>

					<description><![CDATA[ಬೆಂಗಳೂರು : ಮಲ್ಲೇಶ್ವರಂ ನಲ್ಲಿನ ಮಂತ್ರಿಸ್ಕ್ವೇರ್‌ ಮೆಟ್ರೋ ನಿಲ್ದಾಣಕ್ಕೆ ಬ್ರಹ್ಮಶ್ರೀ &#160;ನಾರಾಯಣ ಗುರುಗಳ ಹೆಸರಿಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ʼಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರುʼ ಎಂದು ಸಮಾಜದ ತಾರತಮ್ಯಗಳನ್ನು ನೀಗಿಸಲು ತನ್ನ ಬದುಕನ್ನೇ &#160;ಮುಡಿಪಾಗಿಟ್ಟ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಮಂತ್ರಿಸ್ವ್ಕೇರ್ ಮೆಟ್ರೋ ನಿಲ್ದಾಣಕ್ಕೆ ನಾರಾಯಣ ಗುರುಗಳ ಹೆಸರಿಡುವ ಯೋಚನೆ ಮಾಡಿದ್ದು ಜೊತೆಗೆ ಸಮುದಾಯ ಭವನವನ್ನು ನಿರ್ಮಿಸುವ ಮೂಲಕ, ಅವರ ನೆನಪನ್ನು ಶಾಶ್ವತವಾಗಿ ಉಳಿಸುವಂತೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.]]></description>
										<content:encoded><![CDATA[
<p class="has-medium-font-size"><strong>ಬೆಂಗಳೂರು</strong> : ಮಲ್ಲೇಶ್ವರಂ ನಲ್ಲಿನ ಮಂತ್ರಿಸ್ಕ್ವೇರ್‌ ಮೆಟ್ರೋ ನಿಲ್ದಾಣಕ್ಕೆ ಬ್ರಹ್ಮಶ್ರೀ &nbsp;ನಾರಾಯಣ ಗುರುಗಳ ಹೆಸರಿಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.</p>



<p class="has-medium-font-size">ʼಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರುʼ ಎಂದು ಸಮಾಜದ ತಾರತಮ್ಯಗಳನ್ನು ನೀಗಿಸಲು ತನ್ನ ಬದುಕನ್ನೇ &nbsp;ಮುಡಿಪಾಗಿಟ್ಟ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಮಂತ್ರಿಸ್ವ್ಕೇರ್ ಮೆಟ್ರೋ ನಿಲ್ದಾಣಕ್ಕೆ ನಾರಾಯಣ ಗುರುಗಳ ಹೆಸರಿಡುವ ಯೋಚನೆ ಮಾಡಿದ್ದು ಜೊತೆಗೆ ಸಮುದಾಯ ಭವನವನ್ನು ನಿರ್ಮಿಸುವ ಮೂಲಕ, ಅವರ ನೆನಪನ್ನು ಶಾಶ್ವತವಾಗಿ ಉಳಿಸುವಂತೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.</p>


<div class="wp-block-image">
<figure class="aligncenter size-full is-resized"><img fetchpriority="high" decoding="async" src="https://peepalmedia.com/wp-content/uploads/2022/09/Screenshot-2022-09-16-154135.png" alt="" class="wp-image-5693" width="696" height="441" srcset="https://peepalmedia.com/wp-content/uploads/2022/09/Screenshot-2022-09-16-154135.png 601w, https://peepalmedia.com/wp-content/uploads/2022/09/Screenshot-2022-09-16-154135-300x190.png 300w" sizes="(max-width: 696px) 100vw, 696px" /></figure></div>]]></content:encoded>
					
		
		
			</item>
	</channel>
</rss>
