<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>mandya &#8211; Peepal Media</title>
	<atom:link href="https://peepalmedia.com/tag/mandya/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 03 Apr 2024 08:54:16 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>mandya &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಮಂಡ್ಯ ಲೋಕಸಭಾ ಚುನಾವಣೆಗೆ ಈ ಬಾರಿ ಸ್ಪರ್ಧಿಸುವುದಿಲ್ಲ, ಬಿಜೆಪಿ ಸೇರುತ್ತೇನೆ &#8211; ಸುಮಲತಾ ಘೋಷಣೆ</title>
		<link>https://peepalmedia.com/wont-contest-from-mandya-will-join-bjp-sumalata/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 03 Apr 2024 08:49:15 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mandya]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[sumalata]]></category>
		<guid isPermaLink="false">https://peepalmedia.com/?p=37907</guid>

					<description><![CDATA[ಮಂಡ್ಯ :- ಮಂಡ್ಯಲೋಕಸಭಾ ಚುನಾವಣೆಗೆ ಈ ಬಾರಿ ಸ್ಪರ್ಧಿಸುವುದಿಲ್ಲ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಸಂಸದೆ ಸುಮಲತಾ ಅಂಬರೀಶ್ ಘೋಷಿಸಿದರು. ನಗರದ ಕಾಳಿಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು ಕಳೆದ ಬಾರಿ ಪಕ್ಷೇತರರಾಗಿ ಗೆಲುವು ಸಾಧಿಸಿ ಸಂಸದೆಯಾಗಿದ್ದ ನಾನು ಇದೀಗ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಚುನಾವಣಾ ಕಣಕ್ಕೆ ಇಳಿಯದಿರಲು ನಿರ್ಧರಿಸಿದ್ದೇನೆ ಎಂದು ಹೇಳಿದರು,ಕಳೆದ ಬಾರಿಯ ಚುನಾವಣೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ನನಗೆ ಮತ ನೀಡುವಂತೆ ಕೋರಿದ್ದರು, ಬಿಜೆಪಿ ಪಕ್ಷ ಬಾಹ್ಯ ಬೆಂಬಲ [&#8230;]]]></description>
										<content:encoded><![CDATA[
<p>ಮಂಡ್ಯ :- ಮಂಡ್ಯಲೋಕಸಭಾ ಚುನಾವಣೆಗೆ ಈ ಬಾರಿ ಸ್ಪರ್ಧಿಸುವುದಿಲ್ಲ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಸಂಸದೆ ಸುಮಲತಾ ಅಂಬರೀಶ್ ಘೋಷಿಸಿದರು.</p>



<p>ನಗರದ ಕಾಳಿಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು ಕಳೆದ ಬಾರಿ ಪಕ್ಷೇತರರಾಗಿ ಗೆಲುವು ಸಾಧಿಸಿ ಸಂಸದೆಯಾಗಿದ್ದ ನಾನು ಇದೀಗ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಚುನಾವಣಾ ಕಣಕ್ಕೆ ಇಳಿಯದಿರಲು ನಿರ್ಧರಿಸಿದ್ದೇನೆ ಎಂದು ಹೇಳಿದರು,<br>ಕಳೆದ ಬಾರಿಯ ಚುನಾವಣೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ನನಗೆ ಮತ ನೀಡುವಂತೆ ಕೋರಿದ್ದರು, ಬಿಜೆಪಿ ಪಕ್ಷ ಬಾಹ್ಯ ಬೆಂಬಲ ನೀಡಿತ್ತು,ಅದೇ ರೀತಿ ಗೆದ್ದ ನಂತರ ಪ್ರಧಾನಿ ನನ್ನನ್ನು ಪ್ರೀತಿಯಿಂದ ಆಹ್ವಾನಿಸಿ ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದಾರೆ, ಅದೇ ರೀತಿ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಾದಾಗ ನನಗೆ ಬೆಂಗಳೂರು ಉತ್ತರ, ಮೈಸೂರು ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಎಂದು ಬಿಜೆಪಿ ಆಹ್ವಾನಿಸಿತ್ತು, ಆದರೆ ರಾಜಕಾರಣ ಮಾಡುವುದಾದರೆ ಮಂಡ್ಯ ಕ್ಷೇತ್ರದಲ್ಲಿ ಮಾತ್ರ ಎಂದು ತಿಳಿಸಿದ್ದೆ, ಸ್ವಾರ್ಥ ರಾಜಕಾರಣ ನನಗೆ ಗೊತ್ತಿಲ್ಲ, ಅಂಬರೀಶ್ ಅಧಿಕಾರಕ್ಕೆ ಆಸೆ ಪಟ್ಟವರಲ್ಲ ಅದೇ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ನಾನು ಎಂದಿಗೂ ಮಂಡ್ಯ ಬಿಟ್ಟು ರಾಜಕಾರಣ ಮಾಡಲ್ಲ ಎಂದರು.<br>ಅದೇ ರೀತಿ ಪ್ರಧಾನಿ ನರೇಂದ್ರ ಮೋದಿ ಅವರು ನನ್ನೊಂದಿಗೆ ಮಾತನಾಡಿ ನಮ್ಮೊಂದಿಗೆ ನೀವೀರಿ, ಎಲ್ಲರೂ ಒಟ್ಟಿಗೆ ಹೋಗೋಣ,ನಿಮಗೆ ಗೌರವ ಸಿಗಲಿದೆ ಎಂದು ಹೇಳಿದ ಹಿನ್ನೆಲೆಯಲ್ಲಿ ಗೌರವ ಇರುವ ಕಡೆ ನಾವು ಇರಬೇಕು ಎಂದು ಬಿಜೆಪಿ ಪಕ್ಷವನ್ನ ಸೇರ್ಪಡೆ ಯಾಗಲು ನಿರ್ಧರಿಸಿದ್ದೇನೆ ಎಂದು ಹೇಳಿದರು.<br>ಕಾಂಗ್ರೆಸ್ ನಾಯಕರೊಬ್ಬರು ಸುಮಲತಾ ಅಂಬರೀಶ್ ಪಕ್ಷಕ್ಕೆ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ ಹಾಗಾಗಿ ಗೌರವ ಇಲ್ಲದ ಕಡೆ ಹೋಗಲು ಸಾಧ್ಯವೇ,ಖಂಡಿತ ನಾನು ಅಲ್ಲಿಗೆ ಹೋಗುವುದಿಲ್ಲ, ಅಲ್ಲಿಗೆ ಹೋಗಿ ಎಂದು ಯಾರು ಒತ್ತಾಯಿಸಬೇಡಿ, ಅಂಬರೀಶ್ ಸ್ವಾಭಿಮಾನದ ಸಂಕೇತ ಅವರ ಜೊತೆ ಜೀವನ ನಡೆಸಿದ ನನಗೆ ಸ್ವಾಭಿಮಾನವೇ ಮುಖ್ಯ ಎಂದರು.<br>ಸಂಸತ್ ಸದಸ್ಯ ಸ್ಥಾನ ಹೋಗಬಹುದು, ಮತ್ತೊಂದು ಅಧಿಕಾರ ಬರಬಹುದು, ಆದರೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದ ಮಾತ್ರಕ್ಕೆ ಮಂಡ್ಯದಿಂದ ನಿರ್ಗಮಿಸುತ್ತಿದ್ದೇನೆ ಎಂದು ತಿಳಿದುಕೊಳ್ಳಬಾರದು, ಮಂಡ್ಯ ಬಿಡುವ ಪ್ರಶ್ನೆಯೇ ಇಲ್ಲ,ಇವತ್ತು ಸೋತಕ್ಷೇತ್ರವನ್ನು ಬಿಡಲು ಸಿದ್ದರಿಲ್ಲದ ಜನರೇ ಹೆಚ್ಚು ಶಾಸಕ, ಸಂಸದರ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿಲ್ಲ ಎಂದು ಪಕ್ಷಾಂತರ ಮಾಡುತ್ತಾರೆ ಆದರೆ ನಾನು ಐತಿಹಾಸಿಕ ಗೆಲುವು ತಂದುಕೊಟ್ಟ ಗೆದ್ದ ಕ್ಷೇತ್ರವನ್ನ ಬಿಟ್ಟುಕೊಡುತ್ತಿದ್ದೇನೆ, ಲೋಕಸಭೆ ಚುನಾವಣೆ ಟಿಕೆಟ್ ಬಿಟ್ಟು ಕೊಟ್ಟಿದ್ದೇನೆ, ಮಂಡ್ಯದ ಋಣ ಮತ್ತು ಜನರನ್ನ ಎಂದೆಂದಿಗೂ ಬಿಡುವುದಿಲ್ಲ ಎಂದು ಪ್ರಮಾಣ ಮಾಡುತ್ತೇನೆ ಎಂದರು.<br>ನನಗೆ ತಾಯಿ ಸ್ಥಾನ ನೀಡಿದ್ದೀರಿ, ಯಾವ ತಾಯಿ ಮಕ್ಕಳನ್ನು ಬಿಟ್ಟು ಕೊಡುವುದಿಲ್ಲ ಅದೇ ರೀತಿ ನಾನು ಸದಾ ಕಾಲ ನಿಮ್ಮೊಂದಿಗೆ ಇರುತ್ತೇನೆ,ಅಧಿಕಾರ ಇರುತ್ತದೆ ಹೋಗುತ್ತದೆ, ಮಂಡ್ಯದ ಸೊಸೆ ಎಂಬುದನ್ನು ಯಾವ ಕಾಲಕ್ಕೂ ಅಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.<br>ಹಠಕ್ಕೆ ಬಿದ್ದು,ದ್ವೇಷ ಸಾಧನೆಗಾಗಿ ಚುನಾವಣೆಗೆ ನಿಲ್ಲಬೇಕೆ, ಇದರಿಂದ ಏನು ಸಾಧಿಸಬಹುದು, ಏನು ಪ್ರಯೋಜನ ಎಂಬುದನ್ನಲ್ಲ ಯೋಚನೆ ಮಾಡಿದ್ದೇನೆ,ರಾಜಕಾರಣದಲ್ಲಿ ನಾನು ತೆಗೆದುಕೊಂಡಿರುವ ನಿರ್ಧಾರದ ಹಿಂದೆ ಸಾಕಷ್ಟು ಆಲೋಚನೆ ಇದೆ ಎಲ್ಲಕ್ಕಿಂತ ಹೆಚ್ಚಾಗಿ ಸುದೀರ್ಘ ಚರ್ಚೆ ನಂತರ ತೀರ್ಮಾನ ಕೈಗೊಂಡಿದ್ದೇನೆ ಎಂದರು.<br>ಪಕ್ಷೇತರ ಸಂಸದಯಾದರೂ ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ, ನಾನು ಸಾಕಷ್ಟು ಕೆಲಸ ಮಾಡಿದ್ದರು ಏನು ಮಾಡಿಲ್ಲ ಎಂದು ಟೀಕಾ ಕಾರರು ಸುಳ್ಳು ಹೇಳುತ್ತಿದ್ದಾರೆ, ನಾನು ಏನು ಮಾಡಿದ್ದೇನೆ ಎಂಬುದನ್ನು ನಿಮಗೆ ತೋರಿಸಿದ್ದೇನೆ, ನೀವೆಲ್ಲರೂ ಜನರ ಮುಂದೆ ಸತ್ಯ ಮುಂದಿಡಿ ಎಂದು ಮನವಿ ಮಾಡಿದರು.<br>ಸಂಸದರಾಗಿ ಮಂಡ್ಯ ಜಿಲ್ಲೆ ಘನತೆಯನ್ನು ಇಂಡಿಯಾದಲ್ಲಿ ಎತ್ತಿ ಹಿಡಿದ ಕೆಲಸ ಮಾಡಿದ್ದೇನೆ, ಅಂಬರೀಶ್ ಎಂದಿಗೂ ತಾವು ಮಾಡಿದ ಕೆಲಸವನ್ನು ಹೇಳಿಕೊಂಡವರಲ್ಲ, ಅದೇ ರೀತಿ ನಾನು ಯಾರನ್ನು ಇಂತಹ ಕೆಲಸ ಮಾಡಿದ್ದೇನೆ ಎಂದು ಹೇಳಿಕೊಂಡಿಲ್ಲ, ನಾನು ಮಾತನಾಡಬಾರದು ಸಾಧನೆಗಳೆ ಮಾತನಾಡಬೇಕು ಎಂದ ಅವರು ಕೋವಿಡ್ ನಿಂದ ಎರಡು ವರ್ಷ ಸಂಸದರ ಅನುದಾನ ಸಿಗಲಿಲ್ಲ, ಮೂರು ವರ್ಷದ ಅನುದಾನದಲ್ಲಿ ಎಷ್ಟು ಕೆಲಸ ಮಾಡಿದ್ದೇನೆ ಎಂದು ಸಾಧನೆಗಳ ವಿವರ ತಿಳಿಸಿದರು.<br>ಕಳೆದ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ ಸಮಸ್ತ ಜನತೆಗೆ ಧನ್ಯವಾದಗಳು, ಮುಂದೆಯೂ ನಾನು ಮಂಡ್ಯ ಜಿಲ್ಲೆಯ ಜನರ ಜೊತೆ ಇರುತ್ತೇನೆ, ನಿಮ್ಮಗಳ ಆಶೀರ್ವಾದ ಇರಲಿ ಎಂದು ಆಶಿಸಿದರು.<br>ಚಿತ್ರನಟ ದರ್ಶನ್, ಅಭಿಷೇಕ್ ಅಂಬರೀಶ್, ರಾಕ್ ಲೈನ್ ವೆಂಕಟೇಶ್ ಇತರರಿದ್ದರು.</p>
]]></content:encoded>
					
		
		
			</item>
		<item>
		<title>ಸುಮಲತಾ ಅಂಬರೀಶ್ ಕಣಕ್ಕೆ! ; ಮತ್ತೊಮ್ಮೆ ಹೈವೋಲ್ಟೇಜ್ ಕ್ಷೇತ್ರವಾಗುವತ್ತ ಮಂಡ್ಯ</title>
		<link>https://peepalmedia.com/mandya-to-become-a-high-voltage-field-again/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 31 Mar 2024 15:31:55 +0000</pubDate>
				<category><![CDATA[ಮಂಡ್ಯ]]></category>
		<category><![CDATA[ರಾಜಕೀಯ]]></category>
		<category><![CDATA[ಲೋಕಸಭೆ ಚುನಾವಣೆ -2024]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[kumaraswami]]></category>
		<category><![CDATA[mandya]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[Sumalatha ambarish]]></category>
		<guid isPermaLink="false">https://peepalmedia.com/?p=37802</guid>

					<description><![CDATA[ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಮತ್ತೆ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಜನಪ್ರತಿನಿಧಿಯಾಗಿ ಇನ್ನೂ ಸಹ ತನ್ನ ಚಾರ್ಮ್ ಉಳಿಸಿಕೊಂಡಿರುವ ಸುಮಲತಾ ಅಂಬರೀಶ್ ತಮಗಿರುವ ಜನಪ್ರಿಯತೆ ಮತ್ತೊಬ್ಬರಿಗೆ ಯಾಕೆ ಧಾರೆ ಎರೆಯಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ತಮ್ಮ ಬೆಂಬಲಿಗರ ಕಡೆಯಿಂದ ಮತ್ತೊಮ್ಮೆ ಕಣಕ್ಕಿಳಿಯುವ ಬಗ್ಗೆಯೂ ಸುಮಲತಾ ಅಂಬರೀಶ್ ಅವರಿಗೆ ಒತ್ತಡ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ. ಮೇಲಾಗಿ ಕಳೆದ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲೇ ಏಕೈಕ ಹೈವೋಲ್ಟೇಜ್ ಕಣವಾಗಿ ರೂಪುಗೊಂಡು, [&#8230;]]]></description>
										<content:encoded><![CDATA[
<p>ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಮತ್ತೆ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಜನಪ್ರತಿನಿಧಿಯಾಗಿ ಇನ್ನೂ ಸಹ ತನ್ನ ಚಾರ್ಮ್ ಉಳಿಸಿಕೊಂಡಿರುವ ಸುಮಲತಾ ಅಂಬರೀಶ್ ತಮಗಿರುವ ಜನಪ್ರಿಯತೆ ಮತ್ತೊಬ್ಬರಿಗೆ ಯಾಕೆ ಧಾರೆ ಎರೆಯಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.</p>



<p>ಎಲ್ಲಕ್ಕಿಂತ ಹೆಚ್ಚಾಗಿ ತಮ್ಮ ಬೆಂಬಲಿಗರ ಕಡೆಯಿಂದ ಮತ್ತೊಮ್ಮೆ ಕಣಕ್ಕಿಳಿಯುವ ಬಗ್ಗೆಯೂ ಸುಮಲತಾ ಅಂಬರೀಶ್ ಅವರಿಗೆ ಒತ್ತಡ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.</p>



<p>ಮೇಲಾಗಿ ಕಳೆದ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲೇ ಏಕೈಕ ಹೈವೋಲ್ಟೇಜ್ ಕಣವಾಗಿ ರೂಪುಗೊಂಡು, ತನ್ನ ಪತಿ ಅಂಬರೀಶ್ ಅವರ ಜನಪ್ರಿಯತೆಯನ್ನು ಸಮರ್ಥವಾಗಿ ಬಳಸಿಕೊಂಡ ಸುಮಲತಾ ನಿರಾಯಾಸವಾಗಿ ಮಂಡ್ಯ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಒಬ್ಬ ಮಹಿಳೆಯಾಗಿ ಮಾಜಿ ಪ್ರಧಾನಿ ಮೊಮ್ಮಗನನ್ನು  ಎದುರಿಸಿ ಗೆದ್ದದ್ದು ರಾಜ್ಯದ ಜನತೆ ಇನ್ನೂ ಮರೆತಿಲ್ಲ.</p>



<p>ಈಗಾಗಲೇ ಸುಮಲತಾ ಅವರನ್ನು ಲೋಕಸಭಾ ಕಣದಿಂದ ದೂರವಿಡಲು ಜೆಡಿಎಸ್ ಮತ್ತು ಬಿಜೆಪಿ ನಾಯಕರು ದಂಡು ದಂಡಾಗಿ ಭೇಟಿ ಮಾಡಿ ಮನವೊಲಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಇಂದೂ ಕೂಡಾ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸುಮಲತಾ ಮನೆಗೆ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಸತತ ಮೂವತ್ತು ನಿಮಿಷಗಳ ಚರ್ಚೆ ಬಳಿಕ ಕುಮಾರಸ್ವಾಮಿ ಇದೊಂದು ಸೌಹಾರ್ದ ಭೇಟಿ ಎಂದು ಕೈ ತೊಳೆದುಕೊಂಡಿದ್ದಾರೆ.</p>



<p>ಆದರೆ ಸುಮಲತಾ ಅಂಬರೀಶ್ ಈವರೆಗೆ ಯಾರಿಗೂ ಸ್ಪಷ್ಟ ಅಭಿಪ್ರಾಯ ತಿಳಿಸದೇ ಹಾಗೇ ಕಳಿಸಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ನಾಯಕರು ಸುಮಲತಾ ಇನ್ನು ಕಣಕ್ಕೆ ಇಳಿಯುವುದಿಲ್ಲ ಎಂಬುದನ್ನೇ ಬಿಂಬಿಸಿದರೂ ಈ ಬಗ್ಗೆ ಸುಮಲತಾ ಅಂಬರೀಶ್ ಏಪ್ರಿಲ್ 3 ರ ವರೆಗೂ ಕಾಯುವಂತೆ ತಿಳಿಸಿದ್ದಾರೆ.</p>



<p>ಆ ಮೂಲಕ ಏಪ್ರಿಲ್ 3 ರ ನಂತರ ಮಂಡ್ಯದ ರಣಕಣ ಯಾವ ರೀತಿಯಾಗಿ ರೂಪುಗೊಳ್ಳಬಹುದು ಎಂಬ ಕುತೂಹಲ ಕೂಡಾ ಮನೆ ಮಾಡಿದೆ. ಈಗಾಗಲೇ ಜಿಲ್ಲೆಯಾದ್ಯಂತ ತನ್ನ ಬೆಂಬಲಿಗರು ಹಾಗೂ ಅಂಬರೀಶ್ ಅಭಿಮಾನಿಗಳನ್ನು ಹೊಂದಿರುವ ಸುಮಲತಾ ಅವರಿಗೆ ಚುನಾವಣೆ ನಿಲ್ಲಲು ಒತ್ತಡ ಕೂಡಾ ಹೆಚ್ಚಿದೆ ಎನ್ನಲಾಗಿದೆ. ರಾಜಕೀಯದಲ್ಲಿ ಕಾಯಂ ಶತ್ರು ಹಾಗೂ ಮಿತ್ರ ಇಲ್ಲದೇ ಇದ್ದರೂ ಕಳೆದ ಚುನಾವಣೆಯಲ್ಲಿ ಸುಮಲತಾ ವಿರುದ್ಧ ಮಾತನಾಡಿದ ಅನೇಕ ಜೆಡಿಎಸ್ ನಾಯಕರಿಗೆ ಸರಿಯಾದ ಉತ್ತರ ಈ ಚುನಾವಣೆಯಲ್ಲಿ ಕೊಡಬೇಕು ಎಂಬುದು ಅಂಬರೀಶ್ ಅಭಿಮಾನಿಗಳ ಒತ್ತಾಯವಾಗಿದೆ.</p>



<p>ಸಧ್ಯಕ್ಕೆ ಸಿಕ್ಕ ಮಾಹಿತಿಯಂತೆ ಈ ಬಾರಿ ಮಂಡ್ಯ ಸುಮಲತಾ ಅಂಬರೀಶ್ ಅವರ ಸ್ಪರ್ಧೆಯಿಂದ ತ್ರಿಕೋನ ಸ್ಪರ್ಧೆಯ ಮುನ್ಸೂಚನೆ ಹುಟ್ಟು ಹಾಕಿದೆ. ಸಧ್ಯ ಮೂರೂ ಪಕ್ಷಗಳಲ್ಲೂ ಸಮಾನ ಅಂತರ ಕಾಯ್ದುಕೊಂಡು ಬಂದಿರುವ ಸುಮಲತಾ ಕಣಕ್ಕಿಳಿಯುವುದೇ ಹೌದಾದರೆ ಮತ್ತೊಮ್ಮೆ ಚಿತ್ರರಂಗದ ದಂಡು ಮಂಡ್ಯ ಕ್ಷೇತ್ರವನ್ನು ಆವರಿಸಲಿದೆ.</p>



<p>ಸಧ್ಯದ ಸ್ಥಿತಿಯಲ್ಲಿ ಮೂರೂ ಪಕ್ಷಗಳಲ್ಲೂ ತನ್ನ ಅಭಿಮಾನ ಉಳಿಸಿಕೊಂಡಿರುವ ಸುಮಲತಾ, ತನ್ನ ಸ್ಪರ್ಧೆ ಹೌದೇ ಆದರೆ ಅದರ ಹೆಚ್ಚಿನ ಲಾಭ ಕಾಂಗ್ರೆಸ್ ಪಕ್ಷ ಪಡೆದುಕೊಳ್ಳಲಿದೆ ಎಂಬುದು ಸ್ಪಷ್ಟ.</p>
]]></content:encoded>
					
		
		
			</item>
		<item>
		<title>ಯಾವುದೇ ಆಮಿಷಕ್ಕೆ ಒಳಗಾಗದೇ ತಪ್ಪದೇ ಮತದಾನ ಮಾಡಿ: ಡಾ: ಕುಮಾರ</title>
		<link>https://peepalmedia.com/vote-without-falling-to-any-bribe-dr-kumar/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 30 Mar 2024 13:52:40 +0000</pubDate>
				<category><![CDATA[ಮಂಡ್ಯ]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[mandya]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37757</guid>

					<description><![CDATA[ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಏಪ್ರಿಲ್ 26 ರಂದು ನಡೆಯಲಿದೆ. ಸಾರ್ವಜನಿಕರು ಯಾವುದೇ ಆಮಿಷಕ್ಕೆ ಒಳಗಾಗದೇ ಮತದಾನ ಮಾಡಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗವಿರುವ ಕಾವೇರಿ ಉದ್ಯಾನವನ ಹಾಗೂ ಮಂಡ್ಯ ಬಸ್ ನಿಲ್ದಾಣದಲ್ಲಿ ಮತದಾರರ ಜಾಗೃತಿ ಕುರಿತು ಸಹಿ ಅಭಿಯಾನ ನಡೆಸಿ ಮಾತನಾಡಿದರು. ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ. ಏ. 26 ರಂದು ತಪ್ಪದೇ ಮತದಾನ ಮಾಡಿ. ತಮ್ಮೊಂದಿಗೆ ತಮ್ಮ ಸುತ್ತಮುತ್ತಲಿನವರಿಗೂ ಮತದಾನ [&#8230;]]]></description>
										<content:encoded><![CDATA[
<p>ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಏಪ್ರಿಲ್ 26 ರಂದು ನಡೆಯಲಿದೆ. ಸಾರ್ವಜನಿಕರು ಯಾವುದೇ ಆಮಿಷಕ್ಕೆ ಒಳಗಾಗದೇ ಮತದಾನ ಮಾಡಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.</p>



<p>ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗವಿರುವ ಕಾವೇರಿ ಉದ್ಯಾನವನ ಹಾಗೂ ಮಂಡ್ಯ ಬಸ್ ನಿಲ್ದಾಣದಲ್ಲಿ ಮತದಾರರ ಜಾಗೃತಿ ಕುರಿತು ಸಹಿ ಅಭಿಯಾನ ನಡೆಸಿ ಮಾತನಾಡಿದರು.</p>



<p>ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ. ಏ. 26 ರಂದು ತಪ್ಪದೇ ಮತದಾನ ಮಾಡಿ. ತಮ್ಮೊಂದಿಗೆ ತಮ್ಮ ಸುತ್ತಮುತ್ತಲಿನವರಿಗೂ ಮತದಾನ ಮಾಡಲು ಪ್ರೇರೆಪಿಸಿ ಎಂದರು.</p>



<p>ಮತದಾನದ ಬಗ್ಗೆ ನಿರಾಸಕ್ತಿ ಬೇಡ, ಮತದಾನದ ಮಹತ್ವದ ಬಗ್ಗೆ ತಿಳಿದುಕೊಳ್ಳಿ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಾದ ನಾವೆಲ್ಲರೂ ಮತದಾನ ಮಾಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.</p>



<p>ಪ್ರತಿಯೊಬ್ಬ ಮತದಾರರು ಮತಗಟ್ಟೆಗೆ ಬಂದು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬೇಕು ಎಂಬುದು ಮತದಾನ ಜಾಗೃತಿ ಅಭಿಯಾನದ ಉದ್ದೇಶವಾಗಿದೆ ಎಂದರು.</p>



<p>ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಪಟ್ಟಂತೆ ಈಗಾಗಲೇ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಏಪ್ರಿಲ್ 26 ರಂದು ಜಿಲ್ಲೆಯಲ್ಲಿ ಮತದಾನ ಪ್ರಕ್ರಿಯೆ ಜರುಗಲಿದ್ದು, ಪ್ರಜಾಪ್ರಭುತ್ವದ ಬಹುದೊಡ್ಡ ಹಬ್ಬ ಎಂದು ಕರೆಯಬಹುದು ಎಂದರು.</p>



<p>ಇಂದು ವಿಶೇಷವಾಗಿ ಮತದಾನ ಜಾಗೃತಿ ಕುರಿತು ಸಹಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಂತಹ ಜಿಲ್ಲಾ ಪಂಚಾಯತ್ ನ ಸಿ.ಇ.ಓ ಅವರಿಗೆ ಅಭಿನಂದನೆಯನ್ನು ತಿಳಿಸಿದರು.</p>



<p>ಇದೇ ಸಂದರ್ಭದಲ್ಲಿ ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.</p>



<p>ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್ ಅವರು ಮಾತನಾಡಿ ಪ್ರತಿಯೊಬ್ಬರ ಮತವು ಬಹಳ ವಿಶೇಷವಾಗಿದ್ದು, ಬದಲಾವಣೆಯನ್ನು ತರುವಂತಹ ಶಕ್ತಿ ಮತದಾನಕ್ಕಿದೆ. ಜಿಲ್ಲೆಯಲ್ಲಿ ಕಡಿಮೆ ಮತದಾನವಾಗಿರುವ ಸ್ಥಳಗಳನ್ನು ಗುರುತಿಸಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.</p>



<p>ಪ್ರತಿಯೊಬ್ಬರು ವೋಟರ್ ಹೆಲ್ಪ್ ಲೈನ್ ಆಪ್ ಅನ್ನು ಬಳಸಿ ಮತದಾರರ ಚೀಟಿಯನ್ನು ಡೌನ್ಲೋಡ್ ಮಾಡಬಹುದು. ವೋಟರ್ ಲಿಸ್ಟ್ ನಲ್ಲಿ ತಮ್ಮ ಹೆಸರು ನೋಂದಣಿ ಆಗಿರುವುದನ್ನು ಹಾಗೂ ತಮ್ಮ ಮತಗಟ್ಟೆಗಳನ್ನು ನೋಡಿಕೊಂಡು, ಪ್ರತಿಯೊಬ್ಬರು ಮತ ಚಲಾಯಿಸಬೇಕು ಎಂದು ತಿಳಿಸಿದರು.</p>



<p>ಇದೇ ಸಂದರ್ಭದಲ್ಲಿ ನಮ್ಮ ಭವಿಷ್ಯವನ್ನು ಶಕ್ತಿಯುತಗೊಳಿಸಲು ಕಡ್ಡಾಯವಾಗಿ ಏಪ್ರಿಲ್ 26 ರಂದು ಮತ ಚಲಾಯಿಸುತ್ತೇನೆ ಎಂಬ ಹೇಳಿಕೆಯ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.</p>



<p>ಸಾರ್ವಜನಿಕರು ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಕಂಡು ಬಂದಲ್ಲಿ ತಕ್ಷಣ ಮೊಬೈಲ್ ನಲ್ಲಿ‌ ಲೈವ್ ಘಟನೆಗಳನ್ನು ಸೆರೆ ಹಿಡಿದು ಸಿ.ವಿಜಿಲ್ ನಲ್ಲಿ ದೂರು ಸಲ್ಲಿಸಬಹುದು ಎಂದರು.</p>



<p>ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಸಂಜೀವಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಎಸ್. ಹೆಚ್ ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಯಾವುದೇ ಕಾರಣಕ್ಕೂ ಮಂಡ್ಯ ಬಿಡುವುದಿಲ್ಲ, ಎ. 3ರಂದು ತೀರ್ಮಾನ ತಿಳಿಸುವೆ: ಸುಮಲತಾ ಅಂಬರೀಷ್</title>
		<link>https://peepalmedia.com/sumalta-ambarishsays-will-not-leave-mandya-at-any-cost/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 30 Mar 2024 11:28:22 +0000</pubDate>
				<category><![CDATA[ಮಂಡ್ಯ]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mandya]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[state politics]]></category>
		<category><![CDATA[Sumalatha ambarish]]></category>
		<guid isPermaLink="false">https://peepalmedia.com/?p=37741</guid>

					<description><![CDATA[ಮಂಡ್ಯ :- ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಬಯಸಿದ್ದ ಸಂಸದೆ ಸುಮಲತಾ ಅಂಬರೀಶ್ ತಮ್ಮ ಮುಂದಿನ ನಿಲುವಿನ ಬಗ್ಗೆ ಗುಟ್ಟು ಬಿಟ್ಟುಕೊಡದೆ ಏ.3ರಂದು ಮಂಡ್ಯದಲ್ಲಿ ಘೋಷಣೆ ಮಾಡುವುದಾಗಿ ತಿಳಿಸಿದರು.ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸ ಮಂಡ್ಯ ಜಿಲ್ಲೆಯಿಂದ ಆಗಮಿಸಿದ್ದ ಅಪಾರ ಅಭಿಮಾನಿಗಳ ಅಭಿಪ್ರಾಯ ಆಲಿಸಿದ ನಂತರ ಮಾತನಾಡಿದ ಅವರು ಮೊನ್ನೆಯವರೆಗೂ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿತ್ತು, ಆದರೆ ಮೈತ್ರಿ ಪಕ್ಷಕ್ಕೆ ಕ್ಷೇತ್ರ ಬಿಟ್ಟುಕೊಡಲಾಗಿದೆ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿರಿಸಿ ಸಾಕಷ್ಟು ಪ್ರಯತ್ನ ಮಾಡಿತು ಆದರೆ ಫಲ [&#8230;]]]></description>
										<content:encoded><![CDATA[
<p>ಮಂಡ್ಯ :- ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಬಯಸಿದ್ದ ಸಂಸದೆ ಸುಮಲತಾ ಅಂಬರೀಶ್ ತಮ್ಮ ಮುಂದಿನ ನಿಲುವಿನ ಬಗ್ಗೆ ಗುಟ್ಟು ಬಿಟ್ಟುಕೊಡದೆ ಏ.3ರಂದು ಮಂಡ್ಯದಲ್ಲಿ ಘೋಷಣೆ ಮಾಡುವುದಾಗಿ ತಿಳಿಸಿದರು.<br>ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸ ಮಂಡ್ಯ ಜಿಲ್ಲೆಯಿಂದ ಆಗಮಿಸಿದ್ದ ಅಪಾರ ಅಭಿಮಾನಿಗಳ ಅಭಿಪ್ರಾಯ ಆಲಿಸಿದ ನಂತರ ಮಾತನಾಡಿದ ಅವರು ಮೊನ್ನೆಯವರೆಗೂ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿತ್ತು, ಆದರೆ ಮೈತ್ರಿ ಪಕ್ಷಕ್ಕೆ ಕ್ಷೇತ್ರ ಬಿಟ್ಟುಕೊಡಲಾಗಿದೆ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿರಿಸಿ ಸಾಕಷ್ಟು ಪ್ರಯತ್ನ ಮಾಡಿತು ಆದರೆ ಫಲ ಸಿಗಲಿಲ್ಲ ಎಂದರು.<br>ನಾನು ಎಂದಿಗೂ ಸ್ವಾರ್ಥ ರಾಜಕಾರಣ ಮಾಡಿಲ್ಲ, ತಪ್ಪು ಹೆಜ್ಜೆ ಇರಿಸಿಲ್ಲ, ಮಂಡ್ಯ ಎಂದರೆ ನನಗೆ ಅಭಿಮಾನ, ನಿಮ್ಮನ್ನು ಬಿಟ್ಟು ನಿರ್ಧಾರ ಮಾಡುವುದಿಲ್ಲ. ಅದೇ ರೀತಿ ನಿಮ್ಮನ್ನು ನೋಯಿಸುವ ಸರದಾರ ಕೂಡ ಮಾಡಲ್ಲ, ಮಂಡ್ಯದ ಜನತೆ ನನ್ನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದೀರಿ, ನಾನು ಯಾವುದೇ ಕಾರಣಕ್ಕೂ ಮಂಡ್ಯ ಬಿಡಲ್ಲ ಎಂದು ಹೇಳಿದರು.<br>ಅಂಬರೀಶ್ ಜೊತೆಗೆ ಇದ್ದವರು ಇವತ್ತು ನನ್ನೊಂದಿಗೆ ಇದ್ದೀರಿ, ನಿಮ್ಮನ್ನು ವಿಶ್ವಾಸಕ್ಕೆ ಪಡೆಯದೆ ನಾನು ಯಾವುದೇ ನಿರ್ಧಾರ ಮಾಡುವುದಿಲ್ಲ, ನಿಮ್ಮನ್ನು ಕೇಳಿಯೇ ನಾನು ಎಲ್ಲಾ ನಿರ್ಧಾರ ಮಾಡುತ್ತೇನೆ, ಮಂಡ್ಯ ಜಿಲ್ಲೆಯಲ್ಲಿ ಮತ್ತಷ್ಟು ಲಕ್ಷಾಂತರ ಜನತೆ ನನ್ನೊಂದಿಗೆ ಇದ್ದಾರೆ, ಎಲ್ಲರ ಜೊತೆ ಚರ್ಚಿಸಿ ಮುನ್ನಡೆಯ ಬೇಕಾಗಿದೆ ಹಾಗಾಗಿ ಕಾಲಾವಕಾಶ ಬೇಕಾಗಿದ್ದು, ಏಪ್ರಿಲ್ 3 ರಂದು ಮಂಡ್ಯದಲ್ಲಿ ಎಲ್ಲರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟ ಮಾಡುತ್ತೇನೆ ಎಂದು ಘೋಷಿಸಿದರು.<br>ನನ್ನ ಭವಿಷ್ಯಕ್ಕಿಂತ ಹೆಚ್ಚಾಗಿ ನನ್ನನ್ನು ನಂಬಿರುವ ಜನರ ಭವಿಷ್ಯ ನನಗೆ ಮುಖ್ಯ, ಇದೇ ವಿಚಾರವನ್ನು ಬಿಜೆಪಿ ವರಿಷ್ಠರ ಬಳಿ ಹೇಳಿದ್ದೇನೆ, ನನ್ನನ್ನು ನಂಬಿರುವ ಜನತೆಯ ಜವಾಬ್ದಾರಿ ನನ್ನ ಮೇಲಿದೆ, ಅವರಿಗೂ ಸೂಕ್ತ ಸ್ಥಾನಮಾನ ಸಲ್ಲಬೇಕಾಗಿದೆ, ಬಿಜೆಪಿ ವರಿಷ್ಠರು ಹಾಗೂ ರಾಜ್ಯದ್ಯಕ್ಷರು ಪಕ್ಷಕ್ಕೆ ಸಹಕಾರ ನೀಡಿ, ಉಜ್ವಲ ಭವಿಷ್ಯ ನಿಮ್ಮದಾಗಲಿದ್ದು, ಉನ್ನತ ಸ್ಥಾನಮಾನದ ಭರವಸೆ ನೀಡಿದ್ದಾರೆ ಆದರೆ ನಾನು ನನ್ನ ನಂಬಿರುವ ಜನತೆಯನ್ನು ಕೈ ಬಿಡುವ ಪ್ರಶ್ನೆ ಇಲ್ಲ, ಆ ಪಕ್ಷ ಈ ಪಕ್ಷಕ್ಕೆ ಒಳ್ಳೆಯದಾಗಲಿ ಎಂಬ ನಿಲುವಿನ ಮೇಲೆ ನಿರ್ಧಾರ ಮಾಡಲ್ಲ, ನನ್ನ ನಂಬಿರುವ ಜನರ ಭವಿಷ್ಯದ ಮೇಲೆ ನನ್ನ ನಿಲುವು ಇರಲಿದೆ, ಮಂಡ್ಯದ ಋಣ ನನ್ನ ಮೇಲಿದೆ ಎಂದು ಹೇಳಿದರು.<br>ಮಂಡ್ಯ ಜಿಲ್ಲಾ ಜನರು ನನ್ನ ಮೇಲೆ ಅಭಿಮಾನ ಇಟ್ಟು ಇಲ್ಲಿಗೆ ಬಂದಿದ್ದಾರೆ,ಈಗಿನ ಬೆಳವಣಿಗೆಯನ್ನುಬಿಜೆಪಿ ವರಿಷ್ಟರಿಗೆ ತಿಳಿಸಲಾಗುವುದು, ನಿಮ್ಮನ್ನು ಬಿಟ್ಟು ಯಾವುದೇ ನಿರ್ಧಾರ ಮಾಡುವುದಿಲ್ಲ ಎಂದರು.<br>ಅಂಬರೀಷ್ ಮನೆಗೆ ಯಾರೇ ಬಂದರೂ ಅದಕ್ಕೆ ಸ್ವಾಗತ ಇದೆ, ಆಕ್ಷೇಪ ಇರುವುದಿಲ್ಲ, ಎಲ್ಲಿಗೆ ಬಂದು ನನ್ನೊಂದಿಗೆ ಮಾತುಕತೆ ಮಾಡಲು ಎಲ್ಲರಿಗೂ ಕೂಡ ಮುಕ್ತ ಅವಕಾಶವಿದೆ ಎಂದು ತಿಳಿಸಿದರು.</p>
]]></content:encoded>
					
		
		
			</item>
		<item>
		<title>ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ನಿಗಾ ವಹಿಸಿ: ರೋಹಿತ್ ಅಸುದಾನಿ ಮತ್ತು ಕುಮಾರ್ ಪ್ರಿಯತಮ್ ಅಶೋಕ್</title>
		<link>https://peepalmedia.com/monitor-expenses-of-candidates/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 29 Mar 2024 01:59:00 +0000</pubDate>
				<category><![CDATA[ಮಂಡ್ಯ]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mandya]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=37665</guid>

					<description><![CDATA[ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಚಾರಕ್ಕಾಗಿ ವೆಚ್ಚ ಮಾಡುವ ಹಣದ ಬಗ್ಗೆ ಪ್ರತಿ ದಿನ ನಿಗಾ ವಹಿಸಿ ವರದಿ ಸಲ್ಲಿಸುವಂತೆ ವೆಚ್ಚ ವೀಕ್ಷಕರುಗಳಾದ ರೋಹಿತ್ ಅಸುದಾನಿ ಮತ್ತು ಕುಮಾರ್ ಪ್ರಿಯತಮ್ ಅಶೋಕ್ ಅವರುಗಳು ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ 8 ವಿಧಾನಸಭಾ ಕ್ಷೇತ್ರಕ್ಕೆ ನೇಮಕವಾಗಿರುವ ವೆಚ್ಚ ವೀಕ್ಷಕ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಭೆ ನಡೆಸಿ ಮಾತನಾಡಿದರು. ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ, ಎಸ್.ಎಸ್.ಟಿ, [&#8230;]]]></description>
										<content:encoded><![CDATA[
<p>ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಚಾರಕ್ಕಾಗಿ ವೆಚ್ಚ ಮಾಡುವ ಹಣದ ಬಗ್ಗೆ ಪ್ರತಿ ದಿನ ನಿಗಾ ವಹಿಸಿ ವರದಿ ಸಲ್ಲಿಸುವಂತೆ ವೆಚ್ಚ ವೀಕ್ಷಕರುಗಳಾದ ರೋಹಿತ್ ಅಸುದಾನಿ ಮತ್ತು ಕುಮಾರ್ ಪ್ರಿಯತಮ್ ಅಶೋಕ್ ಅವರುಗಳು ಅಧಿಕಾರಿಗಳಿಗೆ ತಿಳಿಸಿದರು.</p>



<p>ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ 8 ವಿಧಾನಸಭಾ ಕ್ಷೇತ್ರಕ್ಕೆ ನೇಮಕವಾಗಿರುವ ವೆಚ್ಚ ವೀಕ್ಷಕ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಭೆ ನಡೆಸಿ ಮಾತನಾಡಿದರು.</p>



<p>ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ವಿ.ಟಿ ಹಾಗೂ ಇನ್ನಿತರೆ ತಂಡಗಳು ಜವಾಬ್ದಾರಿಯುತವಾಗಿ ಕೆಲಸ ನಡೆಸಿ ಅಭ್ಯರ್ಥಿಯು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಪಾಲಿಸುತ್ತಿರುವ ಬಗ್ಗೆ ನಿಗಾ ವಹಿಸಬೇಕು ಎಂದರು.</p>



<p>ಅಭ್ಯರ್ಥಿಯು ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆದಿರುವುದು. ಹಾಗೂ ಲೆಕ್ಕಾಚಾರಕ್ಕೆ ಬಾರದೇ ಇರುವ ರೀತಿ ಯಾವುದಾದರೂ ಪ್ರಚಾರ ಕೆಲಸ ಹಣ ವೆಚ್ಚ ಮಾಡುತ್ತಿದ್ದರೆ ತಕ್ಷಣ ತಮ್ಮ ಗಮನಕ್ಕೆ ತರಬೇಕು. ಯಾವುದೇ ರೀತಿಯ ಗೊಂದಲಗಳಿದ್ದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದರು.</p>



<p>ಹಣದ ಬಲದ ಮೇಲೆ ಚುನಾವಣೆ ನಡೆಯಬಾರದು. ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಬೇಕು. ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿ ದಾಖಲೆ ರಹಿತ ಹಣ ಅಥವಾ ಇನ್ನಿತರೆ ವಸ್ತುಗಳು ಸಾಗಾಣಿಕೆಯಾಗದಂತೆ ನೋಡಿಕೊಳ್ಳಿ ಎಂದರು.</p>



<p>ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿರ್ವಹಿಸಲು ನೇಮಕವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.</p>



<p>ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ಜಿಲ್ಲೆಯಲ್ಲಿ ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ವಿವಿಧ ತಂಡಗಳು, ಅಧಿಕಾರಿಗಳು, ಸ್ಥಾಪನೆಯಾಗಿರುವ ಚೆಕ್ ಪೋಸ್ಟ್ ಗಳು ಹಾಗೂ ಇನ್ನಿತರೆ ಮಾಹಿತಿಗಳನ್ನು ವಿವರಿಸಿದರು.</p>



<p>ಸಭೆಯ ನಂತರ ಚುನಾವಣಾ ವೆಚ್ಚ ವೀಕ್ಷಕರು ಜಿಲ್ಲಾ ಚುನಾವಣಾ ವೆಚ್ಚ ಮೇಲ್ವಿರಕರ ಕೋಶಕ್ಕೆ ಹಾಗೂ ವೆಚ್ಚ ವೀಕ್ಷಕರ ಕೊಠಡಿಗೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.</p>



<p>ಸಭೆಯಲ್ಲಿ‌ ಜಿಲ್ಲಾ ಪಂಚಾಯತ್ ಸಿ.ಎ.ಒ ಚಂದ್ರಶೇಖರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>Big Breaking : ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಕಣಕ್ಕೆ</title>
		<link>https://peepalmedia.com/hd-kumaraswamy-as-jds-candidate-for-mandya-constituency/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 26 Mar 2024 12:56:15 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಮಂಡ್ಯ]]></category>
		<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[kumaraswami]]></category>
		<category><![CDATA[mandya]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37531</guid>

					<description><![CDATA[ಹಾಸನ ಹೊರತುಪಡಿಸಿ ಜೆಡಿಎಸ್ ಪಕ್ಷದ ಮೂರು ಲೋಕಸಭಾ ಅಭ್ಯರ್ಥಿಗಳ ಸ್ಥಾನದ ಬಗ್ಗೆ ಈಗ ಜೆಡಿಎಸ್ ಪಕ್ಷದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಅದರಂತೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ. ಇಂದು ಮಂಗಳವಾರ, ಬೆಂಗಳೂರಿನಲ್ಲಿರುವ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷ ಹೆಸರಿಸಿದೆ. ಆ [&#8230;]]]></description>
										<content:encoded><![CDATA[
<p>ಹಾಸನ ಹೊರತುಪಡಿಸಿ ಜೆಡಿಎಸ್ ಪಕ್ಷದ ಮೂರು ಲೋಕಸಭಾ ಅಭ್ಯರ್ಥಿಗಳ ಸ್ಥಾನದ ಬಗ್ಗೆ ಈಗ ಜೆಡಿಎಸ್ ಪಕ್ಷದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಅದರಂತೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ.</p>



<p>ಇಂದು ಮಂಗಳವಾರ, ಬೆಂಗಳೂರಿನಲ್ಲಿರುವ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷ ಹೆಸರಿಸಿದೆ. ಆ ಮೂಲಕ ಕಳೆದ ಬಾರಿಯಂತೆ ಮಂಡ್ಯದಲ್ಲಿ ಹೈವೋಲ್ಟೇಜ್ ಚುನಾವಣಾ ಕದನ ನಿರೀಕ್ಷಿಸಲಾಗಿದೆ. ಅಲ್ಲದೇ ಹಾಸನ ಕ್ಷೇತ್ರಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕಿಳಿಸಿದೆ.</p>



<p>ಕೋಲಾರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಬಿಜೆಪಿಯೊಂದಿಗೆ ತೀವ್ರ ಚೌಕಾಸಿ ನಡೆಸಿದ್ದ ಪಕ್ಷವು ಇನ್ನೂ ಅಭ್ಯರ್ಥಿಯನ್ನು ಹೆಸರಿಸಿಲ್ಲ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಂಗಾರಪೇಟೆ ಕ್ಷೇತ್ರದಲ್ಲಿ ಪರಾಜಿತ ಅಭ್ಯರ್ಥಿ ಮಲ್ಲೇಶ್ ಬಾಬು ಅವರೇ ಮುಂಚೂಣಿಯಲ್ಲಿದ್ದರೂ, ಇನ್ನೂ ಚರ್ಚೆ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>



<p>ಇನ್ನು ಕೋಲಾರಕ್ಕೆ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಹಾಗೂ ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಹೆಸರನ್ನು ಪರಿಗಣಿಸಲಾಗುತ್ತಿದೆ. ಕೋಲಾರದಿಂದ ಸ್ಪರ್ಧಿಸುವ ಅಭ್ಯರ್ಥಿಯನ್ನೂ ಮಂಗಳವಾರ ಪ್ರಕಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ.</p>
]]></content:encoded>
					
		
		
			</item>
		<item>
		<title>ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ: ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆದ ಪೊಲೀಸರು</title>
		<link>https://peepalmedia.com/pakistan-zindabaad-slogan-bjp-worker-arrested-in-mandya/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 05 Mar 2024 07:18:31 +0000</pubDate>
				<category><![CDATA[ರಾಜಕೀಯ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[laden]]></category>
		<category><![CDATA[mandya]]></category>
		<category><![CDATA[news]]></category>
		<category><![CDATA[Pakistan]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[police]]></category>
		<guid isPermaLink="false">https://peepalmedia.com/?p=36679</guid>

					<description><![CDATA[ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಆರೋಪದಲ್ಲಿ ಬಂಧಿತರಾದ ಮೂವರನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒದಗಿಸಲಾಗಿದ್ದು, ಈ ಕುರಿತು ತನಿಖೆ ಪ್ರಗತಿಯಲ್ಲಿದೆ. ಈ ನಡುವೆ ಮಂಡ್ಯದ ಸಂಜಯ್ ವೃತ್ತದಲ್ಲಿ 2022ರ ಡಿಸೆಂಬರ್ 17 ರಂದು ಅಂದಿನ ಪಾಕ್‌ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುವಾಗ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದ ಆರೋಪದಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆಯೆಂದು ಸುದ್ದಿ ಸಂಸ್ಥೆಯೊಂದು ವರದಿ [&#8230;]]]></description>
										<content:encoded><![CDATA[
<p>ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಆರೋಪದಲ್ಲಿ ಬಂಧಿತರಾದ ಮೂವರನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒದಗಿಸಲಾಗಿದ್ದು, ಈ ಕುರಿತು ತನಿಖೆ ಪ್ರಗತಿಯಲ್ಲಿದೆ. </p>



<p>ಈ ನಡುವೆ ಮಂಡ್ಯದ ಸಂಜಯ್ ವೃತ್ತದಲ್ಲಿ 2022ರ ಡಿಸೆಂಬರ್ 17 ರಂದು ಅಂದಿನ ಪಾಕ್‌ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುವಾಗ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದ ಆರೋಪದಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆಯೆಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.</p>



<p>ವಿವರಗಳ ಪ್ರಕಾರ ಅಂದು ನಡೆದ ಪ್ರತಿಭಟನೆ ಸಭೆಯಲ್ಲಿ “ಪಾಕಿಸ್ತಾನ್ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್” ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದರು. ಘೋಷಣೆ ಕೂಗುವ ಬರದಲ್ಲಿ ಪಾಕಿಸ್ತಾನ ಮುರ್ದಾಬಾದ್‌ ಎಂದು ಹೇಳುವ ಬದಲು ಬಿಜೆಪಿ ಕಾರ್ಯಕರ್ತ ಪಾಕಿಸ್ತಾನ ಜಿಂದಾಬಾದ್‌ (Pakistan Zindabad) ಎಂದು ಘೋಷಣೆ ಕೂಗಿದ್ದ. ಕೂಡಲೇ ಎಚ್ಚೆತ್ತ ಕಾರ್ಯಕರ್ತರೊಬ್ಬರು ಘೋಷಣೆ ಕೂಗಿದ ಕಾರ್ಯಕರ್ತನ ಬಾಯಿ ಮುಚ್ಚಿಸಿದ್ದರು.</p>



<p>ಆ ಸಂದರ್ಭದಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಈ ಘಟನೆ ಸದ್ದು ಮಾಡಿತ್ತಾದರೂ ನಂತರ ಅಲ್ಲಿಗೇ ತಣ್ಣಗಾಗಿತ್ತು.</p>



<p>ಈಗ ಬಿಜೆಪಿ ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಲಾಗಿದೆಯೆಂದು ಹೋದಲ್ಲೆಲ್ಲ ಪೀಡಿಸುತ್ತಿದ್ದು ಇದಕ್ಕೆ ಪ್ರತಿಯಾಗಿ ಹಳೆಯ ಪ್ರಕರಣಕ್ಕೆ ಮರುಜೀವ ನೀಡುವ ಮೂಲಕ ಕಾಂಗ್ರೆಸ್‌ ತನ್ನ ರಾಜಕೀಯ ದಾಳವನ್ನು ಉರುಳಿಸಿದೆ.</p>



<p>ಕನ್ನಂಬಾಡಿಯವರಾದ ಕುಮಾರ್‌ ಎನ್ನುವ ವ್ಯಕ್ತಿ ಈ ವಿಷಯವಾಗಿ ದೂರು ನೀಡಿದ್ದು ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 153 ಬಿ(ರಾಷ್ಟ್ರೀಯ ಸಮಗ್ರತೆ ಧಕ್ಕೆ ತರುವ ಹೇಳಿಕೆ) 505 (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆ) ಆರೋಪದ ಮೇರೆಗೆ ಆರಾಧ್ಯ, ರವಿ ಮತ್ತು ಇತರರನ್ನು ಆರೋಪಿಗಳನ್ನಾಗಿ ಮಾಡಿ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಪೊಲೀಸರು ಬಿಜೆಪಿ ಕಾರ್ಯಕರ್ತ ರವಿ ಎನ್ನುವನನ್ನು ವಶಕ್ಕೆ ಪಡೆದಿದ್ದಾರೆ.</p>



<p>ಇದೇ ವೇಳೆ ವಿಧಾನಸೌಧದಲ್ಲಿ ಘೋಷಣೆ ಕೂಗಿದ ವಿಷಯದಲ್ಲಿ ರಾಜ್ಯ ಸರ್ಕಾರ ಕ್ಷಮೆಯಾಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.</p>



<p>“ರಾಜ್ಯ ಸರ್ಕಾರವು ದೇಶ ವಿರೋಧಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಎನ್‌ಐಎ ವಿಷಯಕ್ಕೆ ಬಂದ ನಂತರವೇ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ರಕ್ಷಿಸಲು ಸಚಿವರು ಮುಂದಾಗಿರುವುದು ವಿಷಾದನೀಯ. ಎಫ್‌ಎಸ್‌ಎಲ್ ವರದಿಯ ಹೊರತಾಗಿಯೂ ಆರೋಪಿಗಳ ಬಂಧನಕ್ಕೆ ವಿಳಂಬ ಮಾಡಿದ್ದಕ್ಕಾಗಿ ರಾಜ್ಯ ಸರ್ಕಾರ ರಾಜ್ಯದ ಜನರ ಕ್ಷಮೆಯಾಚಿಸಬೇಕು,” ಎಂದು ಅವರು ಹೇಳಿಕೆ ನೀಡಿದ್ದಾರೆ</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿರುವುದು ಖಾಸಗಿ ಎಫ್ ಎಸ್ ಎಲ್ ವದರಿಯಲ್ಲಿ ಸಾಬೀತಾದ ತಕ್ಷಣ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದು, ರಾಜ್ಯ <a href="https://twitter.com/INCKarnataka?ref_src=twsrc%5Etfw">@INCKarnataka</a> ಸರ್ಕಾರವೂ ಪಾಕಿಸ್ತಾನ ಪರ ಘೋಷಣೆ ಕೂಗಿರುವುದನ್ನು ಒಪ್ಪಿಕೊಂಡಂತಾಗಿದೆ. <br><br>ಬಂಧಿತ ಮೂವರು ಆರೋಪಿಗಳ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸಿ… <a href="https://t.co/e4gROoWTia">pic.twitter.com/e4gROoWTia</a></p>&mdash; Basavaraj S Bommai (Modi Ka Parivar) (@BSBommai) <a href="https://twitter.com/BSBommai/status/1764678988482695568?ref_src=twsrc%5Etfw">March 4, 2024</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ಒಸಾಮಾ ಬಿನ್ ಲಾಡೆನ್ ಸತ್ತಿದ್ದಾನೆ. ಆದರೆ ಗುಜರಾತ್‌ನ ಕಟುಕ ಇನ್ನೂ ಬದುಕಿದ್ದಾನೆ ಮತ್ತು ಆತ ಭಾರತದ ಪ್ರಧಾನ ಮಂತ್ರಿ ಎಂಬ ಬಿಲಾವಲ್ ಭುಟ್ಟೋ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿತ್ತು. ಈ ಸಂದರ್ಭದಲ್ಲಿ ನಡೆದ ಘಟನೆಯ ವಿಡಿಯೋ ಎಲ್ಲೆಡೆ ಹರಿದಾಡಿ ಸದ್ದು ಮಾಡಿತ್ತು. ಈಗ ಅದು ಮತ್ತೆ ಮುನ್ನೆಲೆಗೆ ಬಂದಿದ್ದು ಪ್ರಕರಣ ದಾಖಲಾಗಿದೆ.</p>



<figure class="wp-block-embed is-type-wp-embed is-provider-peepal-media wp-block-embed-peepal-media"><div class="wp-block-embed__wrapper">
<blockquote class="wp-embedded-content" data-secret="TwA0HaAwKJ"><a href="https://peepalmedia.com/bombay-high-court-acquits-gn-saibaba-in-maoist-link-case/">ಪ್ರೊ.ಸಾಯಿಬಾಬಾ ನಿರಪರಾಧಿ, ಬಾಂಬೆ ಹೈಕೋರ್ಟ್ ತೀರ್ಪು</a></blockquote><iframe class="wp-embedded-content" sandbox="allow-scripts" security="restricted"  title="&#8220;ಪ್ರೊ.ಸಾಯಿಬಾಬಾ ನಿರಪರಾಧಿ, ಬಾಂಬೆ ಹೈಕೋರ್ಟ್ ತೀರ್ಪು&#8221; &#8212; Peepal Media" src="https://peepalmedia.com/bombay-high-court-acquits-gn-saibaba-in-maoist-link-case/embed/#?secret=dR7p07GFFf#?secret=TwA0HaAwKJ" data-secret="TwA0HaAwKJ" width="600" height="338" frameborder="0" marginwidth="0" marginheight="0" scrolling="no"></iframe>
</div></figure>
]]></content:encoded>
					
		
		
			</item>
		<item>
		<title>ಸಕ್ಕರೆ ನಾಡಿನ ಸ್ನೇಹಿತರಿಗೊಂದು ಪತ್ರ&#8230;</title>
		<link>https://peepalmedia.com/mg-hegdes-letter-to-mandya-people/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 30 Jan 2024 07:23:45 +0000</pubDate>
				<category><![CDATA[ಅಂಕಣ]]></category>
		<category><![CDATA[Bangalore]]></category>
		<category><![CDATA[Bhajarang dal]]></category>
		<category><![CDATA[bjp]]></category>
		<category><![CDATA[breaking]]></category>
		<category><![CDATA[breaking news]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mandya]]></category>
		<category><![CDATA[mangalore]]></category>
		<category><![CDATA[MG heggade]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[RSS]]></category>
		<category><![CDATA[Sri ram sena]]></category>
		<category><![CDATA[state politics]]></category>
		<category><![CDATA[trend]]></category>
		<category><![CDATA[trending news]]></category>
		<category><![CDATA[vhp]]></category>
		<category><![CDATA[writing]]></category>
		<guid isPermaLink="false">https://peepalmedia.com/?p=35484</guid>

					<description><![CDATA[ಸಕ್ಕರೆ ನಾಡು ಎಂದು ಪ್ರಸಿದ್ಧಿಯಾದ ಮಂಡ್ಯದ ಸ್ನೇಹಿತರೇ, ನಮಸ್ಕಾರ&#8230; ನಾನು ಕರಾವಳಿಯ ಮಂಗಳೂರಿನವ. ಸರ್ವ ಜಾತಿ ಮತದ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದ ನಾಡು ಒಮ್ಮೆ ಮತೀಯ ಮತ್ತು ಭಾವನಾತ್ಮಕ ಸಂಗತಿಗಳಿಗೆ ಬಲಿಯಾದರೆ ಎನಾಗುತ್ತದೆ ಎಂಬುವುದಕ್ಕೆ ಸಾಕ್ಷಿ ನಾನು. ಒಂದು ಕಾಲದಲ್ಲಿ ಇಂತಹ ಮತೀಯ ಸಂಗತಿಗಳೇ ಶ್ರೇಷ್ಠವೆಂದು ಅದರ ಹಿಂದೆ ಹೋಗಿ ಅಲ್ಲಿನ ಸಾಮರಸ್ಯದ ಬದುಕಿಗೆ ಧಕ್ಕೆ ತಂದ ಪಾಪದಲ್ಲಿ ನನ್ನ ಪಾಲೂ ಇದೆ. ಈ ಪತ್ರ ನಾನು ಮಾಡಿದ ಪಾಪಕ್ಕೆ ಕೊಂಚ ಪ್ರಾಯಶ್ಚಿತ್ತ ಆದೀತೂ ಎಂದೂ ಭಾವಿಸುತ್ತೇನೆ. [&#8230;]]]></description>
										<content:encoded><![CDATA[
<p><strong>ಸಕ್ಕರೆ ನಾಡು ಎಂದು ಪ್ರಸಿದ್ಧಿಯಾದ ಮಂಡ್ಯದ ಸ್ನೇಹಿತರೇ, ನಮಸ್ಕಾರ&#8230;</strong></p>



<p>ನಾನು ಕರಾವಳಿಯ ಮಂಗಳೂರಿನವ. ಸರ್ವ ಜಾತಿ ಮತದ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದ ನಾಡು ಒಮ್ಮೆ ಮತೀಯ ಮತ್ತು ಭಾವನಾತ್ಮಕ ಸಂಗತಿಗಳಿಗೆ ಬಲಿಯಾದರೆ ಎನಾಗುತ್ತದೆ ಎಂಬುವುದಕ್ಕೆ ಸಾಕ್ಷಿ ನಾನು.</p>



<p>ಒಂದು ಕಾಲದಲ್ಲಿ ಇಂತಹ ಮತೀಯ ಸಂಗತಿಗಳೇ ಶ್ರೇಷ್ಠವೆಂದು ಅದರ ಹಿಂದೆ ಹೋಗಿ ಅಲ್ಲಿನ ಸಾಮರಸ್ಯದ ಬದುಕಿಗೆ ಧಕ್ಕೆ ತಂದ ಪಾಪದಲ್ಲಿ ನನ್ನ ಪಾಲೂ ಇದೆ. ಈ ಪತ್ರ ನಾನು ಮಾಡಿದ ಪಾಪಕ್ಕೆ ಕೊಂಚ ಪ್ರಾಯಶ್ಚಿತ್ತ ಆದೀತೂ ಎಂದೂ ಭಾವಿಸುತ್ತೇನೆ.</p>



<p>ಕರಾವಳಿಯಲ್ಲಿ ಪದೇ ಪದೇ ನಡೆದ ಕೋಮು ದಳ್ಳುರಿಯ ಸುದ್ದಿ ಕೇಳಿದವರೇ ನೀವು. ಇಲ್ಲಿ ಹಂತ ಹಂತವಾಗಿ ಬೆಳೆದ ಕೋಮುವಾದದಿಂದ ಅನೇಕ ಹಿಂದೂ ಮತ್ತು ಮುಸ್ಲಿಂ ಯುವಕರು ಸ್ಮಶಾನಯಾತ್ರೆ ಮಾಡಿದ್ದರೆ, ಸಾವಿರಾರು ಯುವಕರು ಕ್ರಿಮಿನಲ್ ಪ್ರಕರಣದಲ್ಲಿ ಜೈಲು ಸೇರಿದ್ದಾರೆ.</p>



<p>ಅತ್ಯಂತ ಖಚಿತವಾಗಿ ನಾನು ಕಳೆದ ೨೫ ವರ್ಷಗಳಿಂದ ಹೇಳಿಕೊಂಡು ಬಂದ ಒಂದು ವಿವರ ನಿಮಗೆ ಹೇಳಲೇ ಬೇಕಾಗಿದೆ.<br>ಹೀಗೆ ಜೈಲು ಸೇರಿದವರು ಮತ್ತು ಸ್ಮಶಾನ ಸೇರಿದವರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ವರ್ಗದ ಯುವಕರು ಮಾತ್ರ.</p>



<p>ನೀವು ಈಗ ಹನುಮ ಧ್ವಜದ ಹೋರಾಟ ಎಂದು ಭಾವನಾತ್ಮಕವಾಗಿ ಬೀದಿಗೆ ಇಳಿಯತೊಡಗಿದ್ದೀರಿ. ಮಂಡ್ಯದಲ್ಲಿ ವಿಶ್ವವಿದ್ಯಾಲಯ ಸರ್ ಎಂ. ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರ ಸಾಕಷ್ಟು ಪದವಿ ಕಾಲೇಜುಗಳು,ಇಂಜಿನಿಯರಿಂಗ್ ಕಾಲೇಜು ಗಳು, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) &#8211; ವೈದ್ಯಕೀಯ ಕಾಲೇಜು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಉನ್ನತ ಕೇಂದ್ರ, ಕೃಷಿ ವಿಶ್ವವಿದ್ಯಾಲಯದ ಕೇಂದ್ರ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹೊರ ಆವರಣ ಕೇಂದ್ರ ಶೈಕ್ಷಣಿಕ ವ್ಯವಸ್ಥೆಯಿದೆ.</p>



<p>ಶ್ರೀರಂಗಪಟ್ಟಣ ,ಟಿಪ್ಪೂ ಅರಮನೆ , ಕೋಟೆ, ಕುಂತಿ ಬೆಟ್ಟ , ರಂಗನ ತಿಟ್ಟು, ಚೆನ್ನ ಕೇಶವ ಸ್ವಾಮಿ ಗುಡಿ, ಸೇರಿದಂತೆ ಅನೇಕ ದೇವಸ್ಥಾನಗಳು, ಫಾಲ್ಸ್ ಗಳು, ಕೃಷ್ಣರಾಜ ಸಾಗರ ಆಣೆಕಟ್ಟು ಬೃಂದಾವನ ಹೀಗೆ ಬೇಕಾದಷ್ಟು ಪ್ರವಾಸಿ ತಾಣಗಳಿವೆ. ಅನೇಕ ಸಾಹಿತಿಗಳನ್ನು , ಒಳ್ಳೆಯ ರಾಜಕೀಯ ನಾಯಕರನ್ನೂ ನಿಮ್ಮ ಜಿಲ್ಲೆ ನೀಡಿದೆ.</p>



<p>ಈ ಹಿಂದೆ ನಿಮ್ಮ ಊರಿನಲ್ಲಿ ಹಿಂದೂ ದೇವಸ್ಥಾನಗಳು ಅಭಿವೃದ್ಧಿಯಾಗಿದೆಯಲ್ಲವೇ. ಬೇಕಾದಷ್ಟು ಧಾರ್ಮಿಕ ಕಾರ್ಯಕ್ರಮ ಆಗಿದೆಯಲ್ಲವೇ. ನಿಮ್ಮ ದೇವಸ್ಥಾನದ ಮೇಲೆ ದೇವರ ಧ್ವಜ ಹಾರಿಸಿದ್ದರೆ ಯಾರೂ ಬಂದು ತಡೆದದ್ದೂ ಇಲ್ಲ ಅಲ್ಲವೇ?.. ಯೋಚಿಸಿ. ಈಗ ಏಕಾಏಕಿ ಈ ಸಾರ್ವಜನಿಕ ಸ್ಥಳದಲ್ಲಿ ಅದೂ ರಾಷ್ಟ್ರ ಧ್ವಜ ಹಾರಿಸಲೆಂದು ಪರವಾನಿಗೆ ಪಡೆದು, ಹನುಮ ಧ್ವಜ ಹಾರಿಸಬೇಕೆಂಬ ಬೇಡಿಕೆಯ ಹಿಂದಿರುವ ಹುನ್ನಾರ ನೀವು ಅರ್ಥ ಮಾಡಿಕೊಳ್ಳಬೇಕಿದೆ.</p>



<p>ನೀವು ಯಾವುದೇ ರಾಜಕೀಯ ಪಕ್ಷದ ಹಿಂದೆ ಹೋಗಿ ನನ್ನ ಆಕ್ಷೇಪ ಕಿಂಚಿತ್ತೂ ಇಲ್ಲ. ಆದರೆ ಇಂತಹ ಭಾವನಾತ್ಮಕ ಸಂಗತಿಗಳನ್ನು ಮುಂದಿಟ್ಟು ಸಾರ್ವಜನಿಕವಾಗಿ ರಾಜಕೀಯ ಹೋರಾಟ ಎಂದಾದರೆ ಸಾವಿರ ಬಾರಿ ಯೋಚಿಸಬೇಕು.</p>



<p>ಬಿಜೆಪಿ ಅಂತಲ್ಲ. ನಾಳೆ ಜನತಾ ದಳ ಎಸ್ ಡಿ ಪಿ ಐ ಕಾಂಗ್ರೆಸ್ ಪಕ್ಷ ಸೇರಿದಂತೆ ಯಾವುದೇ ಪಕ್ಷವಾದರೂ ಸರಿ ಇಂತಹ ಹಿಂದೂ ಮುಸ್ಲಿಂ ಭಾವನಾತ್ಮಕ ವಿಷಯ ಇಟ್ಟು ಕೊಂಡು ಚುನಾವಣೆ ಸಮಯದಲ್ಲಿ ಗಲಭೆ ಎಬ್ಬಿಸುವ ಯಾವುದೇ ಸಂಗತಿಗಳನ್ನು ನೀವು ಈಗಲೇ ತಿರಸ್ಕರಿಸುವುದು ಒಳಿತು.</p>



<p>ಇಲ್ಲವಾದರೆ ನಿಮ್ಮ ಬಡವರ ಮನೆಯ ಮಕ್ಕಳು ಹೆಣವಾಗುವುದು, ಜೈಲು ಸೇರುವುದು ನಿಮ್ಮಲ್ಲೂ ಪ್ರಾರಂಭವಾಗುತ್ತದೆ. ಇದು ಮುಂದುವರಿದರೆ ನೆನಪಿಡಿ, ಚುನಾವಣೆ ಹತ್ತಿರ ಬಂದಂತೆ ಇನ್ನೂ ಕೆಟ್ಟ ಘಟನೆಗಳಿಗೆ ನೀವೇ ಸಾಕ್ಷಿಯಾಗುತ್ತೀರಿ.</p>



<p>೨೦೦೬ ರ ಮಂಗಳೂರು ಕೋಮು ಗಲಭೆ ವಿವರ ತೆಗೆದು ನೋಡಿ. ಸುಮಾರು ೫೦೦ ಯುವಕರು ಜೈಲಿಗೆ ಸೇರಿದ್ದು ಅವರೆಲ್ಲರೂ ರೂ ಬಡವರ ಮನೆಯ ಮಕ್ಕಳು.</p>



<p>ಈಗ ಮೊನ್ನೆ ನಡೆದ ನಿಮ್ಮ ಊರಿನ ಧ್ವಜದ ಪ್ರತಿಭಟನೆಯಲ್ಲಿ ಇದ್ದವರು ಯಾರು. ನನಗೆ ಗೊತ್ತಿಲ್ಲ. ನಿಮ್ಮ ಊರಿನ ರಾಜಕೀಯ ನಾಯಕರ ಮನೆಯ ಮಕ್ಕಳು, ಶ್ರೀಮಂತ ವರ್ಗದವರು, ಉತ್ತಮ ಉದ್ಯೋಗದಲ್ಲಿರುವವರು, ವೈಧ್ಯಕೀಯ ತಂತ್ರಜ್ಞಾನ ಇತ್ಯಾದಿ ಕಲಿಯುವ ವಿದ್ಯಾರ್ಥಿಗಳು ನಿಮ್ಮ ಜೊತೆಗಿದ್ದರೋ?<br></p>



<p>ಖಂಡಿತ ಇರಲಿಕ್ಕಿಲ್ಲ. ಮುಂದಿನ ದಿನಗಳಲ್ಲೂ ಇರುವುದಿಲ್ಲ. ಹಾಗಾದಾರೆ ಇವರಿಗಿಲ್ಲದ ಸಮಸ್ಯೆ ನಿಮಗೆ ಮಾತ್ರ ಆಗುವುದು ಹೇಗೇ? ನಿಮ್ಮನ್ನು ಪ್ರಚೋದಿಸುವವರ ಬಳಿ ನಾಳೆ ಕೇಸ್ ಆದರೆ ಜಾಮೀನಿಗೆ ಬರ್ತಿರಾ ಅಂತಾ ಒಂದು ಮಾತು ಕೇಳಿನೋಡಿ. ಸತ್ಯದ ಹುಡುಕಾಟಕ್ಕೆ ದೂರ ಹೋಗಬೇಕಿಲ್ಲ. ನಿಮಗೇ ಸಿಗುತ್ತದೆ.</p>



<p>ದೀರ್ಘ ಕಾಲದ ನಂತರ ಕರಾವಳಿಯಲ್ಲಿ ಭಾವನಾತ್ಮಕ ವಿಷಯಕ್ಕೆ ಹೊಡೆದಾಡಲು ಯುವಕರು ಕಡಿಮೆಯಾಗಿದ್ದಾರೆ. ಜನ ಬೆಂಬಲ ಕಡಿಮೆಯಾಗುತ್ತಿದೆ. ಇದಕ್ಕೆ ನಿಮ್ಮ ಊರು ಹೊಸ ಪ್ರಯೋಗ ಶಾಲೆಯಾಗಬೇಕೆ?</p>



<p>ಇಂತಹ ಕೋಮು ಗಲಭೆಯಿಂದಾಗಿ ಕಳೆದ ೩೦ ವರ್ಷಗಳಿಂದ ದ. ಕ ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಮಾಹಿತಿ ತಂತ್ರಜ್ಞಾನ ಕಂಪೆನಿಗಳು ಬರಲು ಹಿಂದೇಟು ಹಾಕುತ್ತಿವೆ. ಒಮ್ಮೆ ಕೋಮು ಗಲಭೆಯಾದರೆ ೨ ವರ್ಷ ವ್ಯಾಪಾರ ವ್ಯವಹಾರದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.</p>



<p>ನಿಮ್ಮ ಊರು ಬೆಂಗಳೂರು ಮತ್ತು ಮೈಸೂರಿಗೆ ಸಮೀಪವಿದೆ. ಅಭಿವೃದ್ಧಿಯ ಪಥದಲ್ಲಿದೆ. ನಿಮ್ಮ ಸಕ್ಕರೆ ನಾಡು ಪ್ರೀತಿ ಸಹಬಾಳ್ವೆಯ ನಾಡು. ಒಮ್ಮೆ ಮತೀಯ ಹುಚ್ಚು ಶುರುವಾದರೆ ಹಳ್ಳಿ ಹಳ್ಳಿಯಲ್ಲಿ ಮನಸ್ಸುಗಳು ಒಡೆಯುತ್ತವೆ. ಅನಗತ್ಯ ಕ್ರೋಧಗೊಳ್ಳುತ್ತವೆ.</p>



<p>ಸಂಶಯದ ಸುಳಿ ಪ್ರತಿಯೊಬ್ಬರ ಬದುಕನ್ನೂ ಸುಡುತ್ತದೆ. ವ್ಯಾಪಾರ ವಹಿವಾಟು ಪದೇ ಪದೇ ಹೊಡೆತ ತಿನ್ನುತ್ತದೆ.<br>ಬಂದ್ ಲಾಠಿ ಚಾರ್ಜ್ ನಿತ್ಯದ ಕೆಲಸವಾಗುತ್ತದೆ. ನೆಮ್ಮದಿ ಸುಡುಗಾಡಿನ ಸಮಾಧಿಯ ಮೇಲಿನ ಹೂವಾಗುತ್ತದೆ.</p>



<p>ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಗಳು ಕೇಕೆ ಹಾಕಲು ನಿಮ್ಮಲ್ಲಿ ಪ್ರಾರಂಭವಾಗಿದೆ. ಅದು ಬೆಂಕಿಗೆ ತುಪ್ಪ ಸುರಿಯುತ್ತದೆ.</p>



<p>ಇಂದು ಒಂದು ಧ್ವಜ, ನಾಳೆ ಮಂದಿರ ,ಮಸೀದಿ ಹೀಗೆ ನಿಧಾನವಾಗಿ ಕಿಚ್ಚು ಹಬ್ಬುತ್ತದೆ. ಅಮಾಯಕರ ಶವಗಳನ್ನು ಮೆಟ್ಟಿಲಾಗಿಸಿಕೊಂಡು ಶಾಸಕ , ಎಂಪಿ ಗಳಾಗುವ ರಾಜಕೀಯ ನಾಯಕರ ತಂತ್ರ ನಿಮ್ಮೆಲ್ಲರ ಬದುಕನ್ನೂ ನಾಶಮಾಡುತ್ತದೆ. ಮತ್ತೆ ಪ್ರತೀ ಚುನಾವಣೆ ಬರುವಾಗ ಒಂದು ಗಲಾಟೆ ಎರಡು ಹೆಣ, ಸಿಟ್ಟು ಉದ್ರೇಖದಿಂದ ನಮ್ಮ ಓಟಿನ ಚಲಾವಣೆ ಆಗುತ್ತದೆ ಇಷ್ಟೆ.</p>



<p>ನೀವು ನಾಡಿಗೆ ಸಕ್ಕರೆ ಹಂಚುವವರು.<br>ನೀವು ಸದಾ ಸಕ್ಜರೆಯನ್ನೇ ಹಂಚಬೇಕು.</p>



<p>ನಿಮ್ಮ ಬದುಕೂ ಸಿಹಿಯಾಗಿರಬೇಕು ಎಂಬುವುದಷ್ಟೇ ನನ್ನ ಆಸೆ. ಇಂತಹ ಸಮಸ್ಯೆ ಯುಾವುದೇ ಸಂಘ ಸಂಸ್ಥೆ ರಾಜಕೀಯ ಪಕ್ಷದವರು ಮಾಡಿದರೂ ಸರಿ. ಸಕ್ಕರೆ ಕಬ್ಬಿನ ಒಂದು ತುಂಡು ಕೊಟ್ಟು ಮರ್ಯಾದೆಯಿಂದ ಹೊರಗೆ ಕಳಿಸಿಬಿಡಿ.</p>



<p style="font-size:20px"><strong>ಎಂ ಜಿ ಹೆಗಡೆ,</strong> ಮಂಗಳೂರು </p>



<p></p>
]]></content:encoded>
					
		
		
			</item>
		<item>
		<title>ಭ್ರೂಣ ಹತ್ಯೆಯ ಜಾಲ : ತನಿಖೆಯಲ್ಲಿ ಹೊರ ಬರುತ್ತಿವೆ ಆಘಾತಕಾರಿ ಸಂಗತಿಗಳು</title>
		<link>https://peepalmedia.com/shocking-facts-are-coming-out-in-the-investigation/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 28 Nov 2023 12:37:44 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[Abortion]]></category>
		<category><![CDATA[bengalure]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mandya]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=33227</guid>

					<description><![CDATA[ಬೆಂಗಳೂರಿನಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿರುವ ಭ್ರೂಣಹತ್ಯೆ ಜಾಲವನ್ನು ಬೇಧಿಸಿದ ನಂತರ ಅತ್ಯಂತ ಆಘಾತಕಾರಿ ವಿಚಾರಗಳು ಹೊರಬರುತ್ತಿವೆ. ಅದರಂತೆ ಹಗರಣದ ತನಿಖೆಯಲ್ಲಿ ಇದುವರೆಗೆ 3,000 ಹೆಣ್ಣು ಭ್ರೂಣಗಳನ್ನು ಗರ್ಭಪಾತ ಮಾಡಿರುವುದಾಗಿ ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಭ್ರೂಣ ಹತ್ಯೆಯ ಆರೋಪಿಗಳ ಜಾಡನ್ನು ಹಿಡಿದು ಹೊರಟಾಗ 900 ಭ್ರೂಣ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಇತ್ತು. ಆದರೆ ಈಗ ಆರೋಪಿಗಳು ಬಿಚ್ಚಿಡುತ್ತಿರುವ ಮಾಹಿತಿ ತೀವ್ರ ಆಘಾತ ಉಂಟುಮಾಡುತ್ತಿದೆ ಎಂದು ತನಿಖಾಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. 5 ವರ್ಷಕ್ಕಿಂತ ಹಿಂದಿನಿಂದಲೂ ಈ ಒಂದು ದಂಧೆ [&#8230;]]]></description>
										<content:encoded><![CDATA[
<p>ಬೆಂಗಳೂರಿನಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿರುವ ಭ್ರೂಣಹತ್ಯೆ ಜಾಲವನ್ನು ಬೇಧಿಸಿದ ನಂತರ ಅತ್ಯಂತ ಆಘಾತಕಾರಿ ವಿಚಾರಗಳು ಹೊರಬರುತ್ತಿವೆ. ಅದರಂತೆ ಹಗರಣದ ತನಿಖೆಯಲ್ಲಿ ಇದುವರೆಗೆ 3,000 ಹೆಣ್ಣು ಭ್ರೂಣಗಳನ್ನು ಗರ್ಭಪಾತ ಮಾಡಿರುವುದಾಗಿ ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ.</p>



<p>ಭ್ರೂಣ ಹತ್ಯೆಯ ಆರೋಪಿಗಳ ಜಾಡನ್ನು ಹಿಡಿದು ಹೊರಟಾಗ 900 ಭ್ರೂಣ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಇತ್ತು. ಆದರೆ ಈಗ ಆರೋಪಿಗಳು ಬಿಚ್ಚಿಡುತ್ತಿರುವ ಮಾಹಿತಿ ತೀವ್ರ ಆಘಾತ ಉಂಟುಮಾಡುತ್ತಿದೆ ಎಂದು ತನಿಖಾಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.</p>



<p>5 ವರ್ಷಕ್ಕಿಂತ ಹಿಂದಿನಿಂದಲೂ ಈ ಒಂದು ದಂಧೆ ಯಾವುದೇ ಅಡ್ಡಿ ಆತಂಕ ಇಲ್ಲದೇ ನಡೆಯುತ್ತಿದ್ದರೂ ಸುತ್ತಲಿನ ಯಾರಿಗೂ ಈ ಬಗ್ಗೆ ಮಾಹಿತಿ ಇರಲಿಲ್ಲ. ಅಥವಾ ಇದ್ದರೂ ಬಹಿರಂಗಪಡಿಸದ ಬಗ್ಗೆಯೂ ಅಧಿಕಾರಿಗಳು ತನಿಖೆ ಹಂತದಲ್ಲಿ ಮಾಹಿತಿ ಕಲೆಹಾಕುತ್ತಿದ್ದಾರೆ‌.</p>



<p>ಪ್ರಾಥಮಿಕ ಹಂತದಲ್ಲಿ ಸಿಕ್ಕ ಮಾಹಿತಿಯಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆರೋಪಿಗಳು ಇದುವರೆಗೆ 3 ಸಾವಿರ ಗರ್ಭಪಾತ ಮಾಡಿಸಿಕೊಂಡಿದ್ದು, ಕಳೆದ ಮೂರು ತಿಂಗಳಲ್ಲಿ 242 ಹೆಣ್ಣು ಭ್ರೂಣಗಳನ್ನು ಹತ್ಯೆ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ. ಆರೋಪಿಗಳು ವರ್ಷಕ್ಕೆ 1,000 ಗರ್ಭಪಾತದ ಗುರಿಯನ್ನು ಹೊಂದಿದ್ದರು. ಪ್ರತಿ ಗರ್ಭಪಾತಕ್ಕೆ ಆಸ್ಪತ್ರೆ ಕಡೆಯಿಂದ 20,000 ದಿಂದ 25,000 ರೂಪಾಯಿ ಶುಲ್ಕ ವಿಧಿಸಿದ್ದರು ಎಂಬ ಮಾಹಿತಿ ಕೂಡಾ ತಿಳಿದು ಬಂದಿದೆ.</p>



<p>ಅಕ್ಟೋಬರ್ 15 ರಂದು ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಅನುಮಾನಾಸ್ಪದವಾಗಿ ಚಲಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿದ ಪೊಲೀಸರಿಗೆ ವಾಹನ ನಿಲ್ಲಿಸದ ಹಿನ್ನೆಲೆಯಲ್ಲಿ ಅನುಮಾನ ಸೃಷ್ಟಿಯಾಗಿದೆ. ನಂತರ ವಾಹನವನ್ನು ಬೆನ್ನಟ್ಟಿದ ಪೊಲೀಸರಿಗೆ ಈ ದಂಧೆಗೆ ಈ ವಾಹನ ಬಳಸುತ್ತಿದ್ದ ಬಗ್ಗೆ ಸಣ್ಣ ಮಾಹಿತಿ ಹೊರಬಿದ್ದಿದೆ.</p>



<p>ವಿಚಾರಣೆ ವೇಳೆ ಆರೋಪಿಗಳು ಗರ್ಭಪಾತದ ದಂಧೆಯ ಬಗ್ಗೆ ಮಾಹಿತಿ ಹೊರ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಇಬ್ಬರು ವೈದ್ಯರು ಮತ್ತು ಮೂವರು ಲ್ಯಾಬ್ ಟೆಕ್ನಿಷಿಯನ್‌ಗಳು ಸೇರಿದಂತೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.</p>



<p>ಬಂಧಿತರಲ್ಲಿ ಇಬ್ಬರು ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ ಎಂದು ಕಮಿಷನರ್ ದಯಾನಂದ ತಿಳಿಸಿದ್ದಾರೆ. ಪ್ರಕರಣದ ತನಿಖೆಯನ್ನು ಶೀಘ್ರ ಪೂರ್ಣಗೊಳಿಸಿ ಎಲ್ಲವೂ ಬಯಲಿಗೆ ಬರಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.</p>



<p>ಆರೋಪಿಗಳು ಲ್ಯಾಬ್ ಮತ್ತು ಅದಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ಮಂಡ್ಯ ಜಿಲ್ಲೆಯ ಬೆಲ್ಲ ಉತ್ಪಾದನಾ ಘಟಕದಲ್ಲಿ (ಆಲೆಮನೆ) ಗರ್ಭಪಾತ ನಡೆಸಿರುವುದು ತನಿಖೆಯಿಂದ ತಿಳಿದುಬಂದಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ಬೆಲ್ಲ ಉತ್ಪಾದನಾ ಘಟಕವನ್ನು ಜಪ್ತಿ ಮಾಡಲಾಗಿದೆ ಎಂದು ಮಂಡ್ಯ ಸಹಾಯಕ ಆಯುಕ್ತ ಶಿವಮೂರ್ತಿ ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಮಂಡ್ಯ &#124; ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ, ವಿಡಿಯೋ ಮೂಲಕ ಬ್ಲಾಕ್ ಮೇಲ್</title>
		<link>https://peepalmedia.com/mandya-gang-rape-on-minor-girl/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 10 Nov 2023 08:35:04 +0000</pubDate>
				<category><![CDATA[Uncategorized]]></category>
		<category><![CDATA[india]]></category>
		<category><![CDATA[mandya]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=31794</guid>

					<description><![CDATA[ಮಂಡ್ಯ: ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ವಿಡಿಯೋ ಮೂಲಕ ಅಪ್ರಾಪ್ತ ಬಾಲಕಿಯನ್ನು ಬ್ಲಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಶುಕ್ರವಾರ ನಡೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ದೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಂಧಿತರನ್ನು ಪುನೀತ್, ಮಂಜುನಾಥ್ ಮತ್ತು ಸಿದ್ದರಾಜು ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕಳೆದ ತಿಂಗಳು ಮೈಸೂರಿನಲ್ಲಿ ನಡೆದ ದಸರಾ ಆಚರಣೆಯ ವೇಳೆ ಪುನೀತ್ ಸಂತ್ರಸ್ತೆಯ ಜೊತೆ ಸ್ನೇಹ ಬೆಳೆಸಿದ್ದ ಮತ್ತು ನಂತರ ಪರಸ್ಪರ ಅನ್ಯೋನ್ಯವಾಗಿದ್ದರು. ನವೆಂಬರ್ [&#8230;]]]></description>
										<content:encoded><![CDATA[
<p>ಮಂಡ್ಯ: ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ವಿಡಿಯೋ ಮೂಲಕ ಅಪ್ರಾಪ್ತ ಬಾಲಕಿಯನ್ನು ಬ್ಲಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಶುಕ್ರವಾರ ನಡೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>



<p>ಮದ್ದೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಂಧಿತರನ್ನು ಪುನೀತ್, ಮಂಜುನಾಥ್ ಮತ್ತು ಸಿದ್ದರಾಜು ಎಂದು ಗುರುತಿಸಲಾಗಿದೆ.</p>



<p>ಪೊಲೀಸರ ಪ್ರಕಾರ, ಕಳೆದ ತಿಂಗಳು ಮೈಸೂರಿನಲ್ಲಿ ನಡೆದ ದಸರಾ ಆಚರಣೆಯ ವೇಳೆ ಪುನೀತ್ ಸಂತ್ರಸ್ತೆಯ ಜೊತೆ ಸ್ನೇಹ ಬೆಳೆಸಿದ್ದ ಮತ್ತು ನಂತರ ಪರಸ್ಪರ ಅನ್ಯೋನ್ಯವಾಗಿದ್ದರು.</p>



<p>ನವೆಂಬರ್ 4ರಂದು ಆಕೆಯನ್ನು ಮದ್ದೂರಿನ ಲಾಡ್ಜ್‌ಗೆ ಕರೆದೊಯ್ದು ತನ್ನ ಸ್ನೇಹಿತರಾದ ಇನ್ನಿಬ್ಬರು ಆರೋಪಿಗಳ ಜೊತೆ ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>



<p>ಅಪರಾಧ ಎಸಗಿದ ಬಳಿಕ ಆಕೆಗೆ ಕೃತ್ಯದ ವೀಡಿಯೋ ಕಳುಹಿಸಿ ನಾವು ಕರೆದಾಗಲೆಲ್ಲ ಬರಬೇಕು ಎಂದು ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಇದರಿಂದ ಮನನೊಂದ ಸಂತ್ರಸ್ತೆ ತನ್ನ ಪೋಷಕರೊಂದಿಗೆ ಈ ಘಟನೆಯನ್ನು ಹಂಚಿಕೊಂಡಿದ್ದು, ಬಳಿಕ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.</p>



<p>ಪೊಲೀಸರು ಪೋಕ್ಸೋ ಕಾಯ್ದೆ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.</p>
]]></content:encoded>
					
		
		
			</item>
	</channel>
</rss>
