<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Morbi &#8211; Peepal Media</title>
	<atom:link href="https://peepalmedia.com/tag/morbi/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 02 Nov 2022 05:37:21 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Morbi &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಮೊರ್ಬಿ ತೂಗು ಸೇತುವೆ ಕುಸಿತಕ್ಕೆ ಕಾರಣವಾಯಿತೇ ಅನರ್ಹ ಗುತ್ತಿಗೆದಾರ ಸಂಸ್ಥೆ?</title>
		<link>https://peepalmedia.com/is-the-incompetent-contractor-responsible-for-the-morbi-suspension-bridge-collapse/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 02 Nov 2022 05:37:20 +0000</pubDate>
				<category><![CDATA[ದೇಶ]]></category>
		<category><![CDATA[forensic report]]></category>
		<category><![CDATA[gujarath]]></category>
		<category><![CDATA[HS Panchal]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[Morbi]]></category>
		<category><![CDATA[Morbi suspension bridge collapse]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=13675</guid>

					<description><![CDATA[ಮೊರ್ಬಿ: ಗುಜರಾತಿನ ಮೊರ್ಬಿಯಲ್ಲಿನ ತೂಗು ಸೇತುವೆಯ ದುರಸ್ತಿಯನ್ನು ಕೈಗೊಂಡ ಗುತ್ತಿಗೆದಾರರು ಸೇತುವೆ ಕೆಲಸಗಳನ್ನು ನಿರ್ವಹಿಸಲು ಅರ್ಹರಲ್ಲ ಎಂದು ಪ್ರಾಸಿಕ್ಯೂಷನ್ ಮಂಗಳವಾರ ನ್ಯಾಯಾಲಯಕ್ಕೆ ತಿಳಿಸಿದೆ. ಫೋರೆನ್ಸಿಕ್ ವರದಿಯನ್ನು ಉಲ್ಲೇಖದಂತೆ, ಸೇತುವೆ ದುರಸ್ತಿ ಮಾಡುವ ವೇಳೆ, ಸೇತುವೆಯ ನೆಲಹಾಸನ್ನು ಬದಲಾಯಿಸಲಾಗಿದೆ. ಆದರೆ ಅದರ ಕೇಬಲ್ ಅನ್ನು ಬದಲಾಯಿಸಿಲ್ಲ. ಹೀಗಾಗಿ ಹಳೆಯ ಕೇಬಲ್‌ಗೆ ಬದಲಾದ ನೆಲಹಾಸಿನ ತೂಕವನ್ನು ತಡೆದುಕೊಳ್ಳುವ ಸಾಮರ್ಥ್ಯವಿಲ್ಲದೆ ಕುಸಿದು ಬಿದ್ದಿದೆ ಎಂದು ಪ್ರಾಸಿಕ್ಯೂಷನ್ ತಿಳಿಸಿದೆ. ಸೇತುವೆ ಕುಸಿದು ಬಿದ್ದಿರುವ ಹಿನ್ನಲೆಯಲ್ಲಿ, ಒರೆವಾ ಗ್ರೂಪ್‌ನ ಇಬ್ಬರು ವ್ಯವಸ್ಥಾಪಕರು ಮತ್ತು ಸೇತುವೆಯನ್ನು [&#8230;]]]></description>
										<content:encoded><![CDATA[
<p><strong>ಮೊರ್ಬಿ:</strong> ಗುಜರಾತಿನ ಮೊರ್ಬಿಯಲ್ಲಿನ ತೂಗು ಸೇತುವೆಯ ದುರಸ್ತಿಯನ್ನು ಕೈಗೊಂಡ ಗುತ್ತಿಗೆದಾರರು ಸೇತುವೆ ಕೆಲಸಗಳನ್ನು ನಿರ್ವಹಿಸಲು ಅರ್ಹರಲ್ಲ ಎಂದು ಪ್ರಾಸಿಕ್ಯೂಷನ್ ಮಂಗಳವಾರ ನ್ಯಾಯಾಲಯಕ್ಕೆ ತಿಳಿಸಿದೆ.</p>



<p>ಫೋರೆನ್ಸಿಕ್ ವರದಿಯನ್ನು ಉಲ್ಲೇಖದಂತೆ, ಸೇತುವೆ ದುರಸ್ತಿ ಮಾಡುವ ವೇಳೆ, ಸೇತುವೆಯ ನೆಲಹಾಸನ್ನು ಬದಲಾಯಿಸಲಾಗಿದೆ. ಆದರೆ ಅದರ ಕೇಬಲ್ ಅನ್ನು ಬದಲಾಯಿಸಿಲ್ಲ. ಹೀಗಾಗಿ ಹಳೆಯ ಕೇಬಲ್‌ಗೆ ಬದಲಾದ ನೆಲಹಾಸಿನ ತೂಕವನ್ನು ತಡೆದುಕೊಳ್ಳುವ ಸಾಮರ್ಥ್ಯವಿಲ್ಲದೆ ಕುಸಿದು ಬಿದ್ದಿದೆ ಎಂದು ಪ್ರಾಸಿಕ್ಯೂಷನ್ ತಿಳಿಸಿದೆ.</p>



<p>ಸೇತುವೆ ಕುಸಿದು ಬಿದ್ದಿರುವ ಹಿನ್ನಲೆಯಲ್ಲಿ, ಒರೆವಾ ಗ್ರೂಪ್‌ನ ಇಬ್ಬರು ವ್ಯವಸ್ಥಾಪಕರು ಮತ್ತು ಸೇತುವೆಯನ್ನು ದುರಸ್ತಿ ಮಾಡಿದ ಇಬ್ಬರು ಉಪ ಗುತ್ತಿಗೆದಾರರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಶನಿವಾರದವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.</p>



<p>ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಂ.ಜೆ.ಖಾನ್ ಅವರು ಭದ್ರತಾ ಸಿಬ್ಬಂದಿ ಮತ್ತು ಟಿಕೆಟ್ ಬುಕಿಂಗ್ ಕ್ಲರ್ಕ್‌ಗಳು ಸೇರಿದಂತೆ ಇತರ ಐವರು ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ನಂತರ ಪೊಲೀಸರು ಸೋಮವಾರ ಒಂಬತ್ತು ಜನರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಹೀಗಾಗಿ ಪೊಲೀಸ್ ಕಸ್ಟಡಿಯಲ್ಲಿರುವ ನಾಲ್ವರು ಒರೆವಾ ಮ್ಯಾನೇಜರ್‌ಗಳಾದ ದೀಪಕ್ ಪರೇಖ್ ಮತ್ತು ದಿನೇಶ್ ದವೆ ಮತ್ತು ಒರೆವಾ ಗ್ರೂಪ್‌ನಿಂದ ನೇಮಕಗೊಂಡ ರಿಪೇರಿ ಗುತ್ತಿಗೆದಾರರಾದ ಪ್ರಕಾಶ್ ಪರ್ಮಾರ್ ಮತ್ತು ದೇವಾಂಗ್ ಪರ್ಮಾರ್ ಎಂದು ತಿಳಿದು ಬಂದಿದೆ.</p>



<p>ಫೋರೆನ್ಸಿಕ್ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿಯನ್ನು ಉಲ್ಲೇಖಿಸಿ, ಸರ್ಕಾರಿ ಅಭಿಯೋಜಕ ಎಚ್.ಎಸ್. ಪಾಂಚಾಲ್ ಅವರು ಹೊಸ ನೆಲಹಾಸಿನ ತೂಕದ ಕಾರಣ ಸೇತುವೆಯ ಮುಖ್ಯ ಕೇಬಲ್ ತುಂಡಾಗಿದೆ ಎಂದು ಫೋರೆನ್ಸಿಕ್ ತಜ್ಞರು ವರದಿಯಲ್ಲಿ ತಿಳಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.</p>



<p>ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಪಾಂಚಾಲ್‌ ಅವರು, ಎಫ್‌ಎಸ್‌ಎಲ್ ವರದಿ ಪ್ರಕಾರ, ಸೇತುವೆ ದುರಸ್ತಿ ಸಂದರ್ಭದಲ್ಲಿ ಸೇತುವೆಯ ಕೇಬಲ್‌ಗಳನ್ನು ಬದಲಾಯಿಸದೆ ಕೇವಲ ನೆಲಹಾಸನ್ನು ಮಾತ್ರ ಬದಲಾಯಿಸಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ನಾಲ್ಕು ಕಾರಣದಿಂದ ಸೇತುವೆಯ ತೂಕ ಹೆಚ್ಚಾಗಿದೆ- ನೆಲಹಾಸುವಿಗೆ ಲೇಯರ್ಡ್ ಅಲ್ಯೂಮಿನಿಯಂ ಶೀಟ್‌ಗಳನ್ನು ಬಳಸಿದ್ದು, ಆ ತೂಕದಿಂದಾಗಿ ಕೇಬಲ್ ತುಂಡಾಗಿದೆ ಎಂದು ತಿಳಿಸಿದರು.</p>



<p>ಈ ಹಿನ್ನಲೆಯಲ್ಲಿ ರಿಪೇರಿ ಗುತ್ತಿಗೆದಾರರಿಬ್ಬರೂ ಇಂತಹ ಕಾಮಗಾರಿ ನಡೆಸಲು ಅರ್ಹರಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಇದರ ಹೊರತಾಗಿಯೂ, ಈ ಗುತ್ತಿಗೆದಾರರಿಗೆ ಸೇತುವೆಯ ದುರಸ್ತಿ ಕಾರ್ಯವನ್ನು 2007 ರಲ್ಲಿ ಮತ್ತು ನಂತರ 2022 ರಲ್ಲಿ ನೀಡಲಾಯಿತು. ಆದ್ದರಿಂದ ಅವರನ್ನು ಆಯ್ಕೆ ಮಾಡಲು ಕಾರಣವೇನು ಮತ್ತು ಯಾರ ನಿದರ್ಶನದಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ಕಂಡುಹಿಡಿಯಲು ಆರೋಪಿಗಳ ಕಸ್ಟಡಿ ಅಗತ್ಯವಿದೆ ಎಂದು ಪ್ರಾಸಿಕ್ಯೂಟರ್ ನ್ಯಾಯಾಲಯಕ್ಕೆ ತಿಳಿಸಿದರು.</p>
]]></content:encoded>
					
		
		
			</item>
		<item>
		<title>ತೂಗು ಸೇತುವೆ ದುರಂತ: ನ್ಯಾಯಾಂಗ ತನಿಖೆ ವಿಚಾರಣೆಯನ್ನು ನವೆಂಬರ್‌ 14ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌</title>
		<link>https://peepalmedia.com/suspension-bridge-tragedy-supreme-court-adjourns-hearing-of-judicial-inquiry-to-november-14/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 01 Nov 2022 09:41:24 +0000</pubDate>
				<category><![CDATA[ದೇಶ]]></category>
		<category><![CDATA[gujarath]]></category>
		<category><![CDATA[india]]></category>
		<category><![CDATA[Morbi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[state goverments]]></category>
		<category><![CDATA[Supreme Court]]></category>
		<category><![CDATA[Suspension bridge tragedy]]></category>
		<guid isPermaLink="false">https://peepalmedia.com/?p=13595</guid>

					<description><![CDATA[ಗುಜರಾತ್‌: ಗುಜರಾತ್‌ನ ಮೋರ್ಬಿ ಸೇತುವೆ ಕುಸಿತಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೋರಿ, ವಕೀಲರೊಬ್ಬರು ಸೋಮವಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು, ಸುಪ್ರೀಂ ಕೋರ್ಟ್‌ ನವೆಂಬರ್‌ 14ಕ್ಕೆ ಮುಂದೂಡಿದೆ. ಪಶ್ಚಿಮ ಗುಜರಾತ್‌ನ ಮೊರ್ಬಿಯಲ್ಲಿನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ತೂಗು ಸೇತುವೆಯು ಅಕ್ಟೋಬರ್‌ 30 ಭಾನುವಾರದಂದು ಕುಸಿದಿತ್ತು. ಈ ದುರಂತದಲ್ಲಿ ಕನಿಷ್ಠ 47 ಮಕ್ಕಳು ಸೇರಿದಂತೆ, ಹಲವಾರು ಮಹಿಳೆಯರು ಮತ್ತು ವೃದ್ಧರು ಸೇರಿ ಒಟ್ಟು 135 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು [&#8230;]]]></description>
										<content:encoded><![CDATA[
<p style="font-size:20px"><strong>ಗುಜರಾತ್‌:</strong> ಗುಜರಾತ್‌ನ ಮೋರ್ಬಿ ಸೇತುವೆ ಕುಸಿತಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೋರಿ, ವಕೀಲರೊಬ್ಬರು ಸೋಮವಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು, ಸುಪ್ರೀಂ ಕೋರ್ಟ್‌ ನವೆಂಬರ್‌ 14ಕ್ಕೆ ಮುಂದೂಡಿದೆ.</p>



<p style="font-size:20px">ಪಶ್ಚಿಮ ಗುಜರಾತ್‌ನ ಮೊರ್ಬಿಯಲ್ಲಿನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ತೂಗು ಸೇತುವೆಯು ಅಕ್ಟೋಬರ್‌ 30 ಭಾನುವಾರದಂದು ಕುಸಿದಿತ್ತು. ಈ ದುರಂತದಲ್ಲಿ ಕನಿಷ್ಠ 47 ಮಕ್ಕಳು ಸೇರಿದಂತೆ, ಹಲವಾರು ಮಹಿಳೆಯರು ಮತ್ತು ವೃದ್ಧರು ಸೇರಿ ಒಟ್ಟು 135 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು ಎಂದು ಮೂಲಗಳಿಂದ ತಿಳಿದುಬಂದಿತ್ತು.</p>



<p style="font-size:20px">ಈ ಹಿನ್ನಲೆಯಲ್ಲಿ ಸೇತುವೆ ಕುಸಿತದ ಬಗ್ಗೆ ನ್ಯಾಯಾಂಗ ತನಿಖೆಯಾಗುವಂತೆ ಅರ್ಜಿ ಸಲ್ಲಿಸಲಾಗಿತ್ತು.</p>



<p style="font-size:20px">ಈ ಕುರಿತು ವಕೀಲರು ಸಲ್ಲಿಸದ ಮನವಿಯಲ್ಲಿ, ಪರಿಸರದ ಕಾರ್ಯಸಾಧ್ಯತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹಳೆಯ ಮತ್ತು ಅಪಾಯಕಾರಿ ಸ್ಮಾರಕಗಳು ಮತ್ತು ಸೇತುವೆಗಳ ಸಮೀಕ್ಷೆ ನಡೆಸಲು ಸಮಿತಿಯನ್ನು ರಚಿಸಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನಗಳನ್ನು ನೀಡುವಂತೆ ಕೂರಲಾಗಿತ್ತು.</p>



<p style="font-size:20px">ಆದರೆ ಇಂದು ಈ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಕೈಗೆತ್ತಿಕೊಂಡಿದ್ದು, ಅರ್ಜಿಯಲ್ಲಿನ ವಿಚಾರಣೆಯನ್ನು ನವೆಂಬರ್‌ 14ಕ್ಕೆ ನಡೆಸಲಾಗುವುದು ಎಂದು ತಿಳಿಸಿದೆ.</p>
]]></content:encoded>
					
		
		
			</item>
		<item>
		<title>ಗುಜರಾತ್‌ ತೂಗು ಸೇತುವೆ ದುರಂತ: ಪ್ರತಿಪಕ್ಷಗಳ ಟೀಕೆಗೆ ಗುರಿಯಾದ ಪ್ರಧಾನಿ ಭೇಟಿ</title>
		<link>https://peepalmedia.com/gujarat-suspension-bridge-tragedy-prime-ministers-visit-criticized-by-opposition/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 01 Nov 2022 07:30:52 +0000</pubDate>
				<category><![CDATA[ದೇಶ]]></category>
		<category><![CDATA[AAP]]></category>
		<category><![CDATA[congrees]]></category>
		<category><![CDATA[Gujarat Suspension Bridge]]></category>
		<category><![CDATA[gujarath]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[MACCHU RIVER]]></category>
		<category><![CDATA[Morbi]]></category>
		<category><![CDATA[narendramodi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Prime Minister&#039;s Visit]]></category>
		<guid isPermaLink="false">https://peepalmedia.com/?p=13555</guid>

					<description><![CDATA[ಮೊರ್ಬಿ, ಗುಜರಾತ್: ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಬೃಹತ್‌ ಸೇತುವೆ ಕುಸಿತದ ದುರಂತದಲ್ಲಿ ಬದುಕುಳಿದವರ ಯೋಗಕ್ಷೇಮವನನ್ನು ವಿಚಾರಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಸ್ಪತ್ರಗಳಿಗೆ ಭೇಟಿನೀಡಲಿರುವ ವಿಷಯ ತಿಳಿದು, ಗುಜರಾತ್‌ನ ಮೊರ್ಬಿಯ ಸಿವಿಲ್ ಆಸ್ಪತ್ರೆಯನ್ನು ರಾತ್ರಿಯಿಡಿ ಸ್ವಚ್ಚಗೊಳಿಸಿ, ಸುಣ್ಣ-ಬಣ್ಣ ಹಚ್ಚಿ ಅಲಂಕಿರಿಸಿರುವುದು ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದೆ. ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಕೇಬಲ್ ತೂಗು ಸೇತುವೆಯ ಭೀಕರ ಕುಸಿತದಲ್ಲಿ ಸತ್ತ 135 ಜನರಲ್ಲಿ, 47 ಮಕ್ಕಳು. 100 ಕ್ಕೂ ಹೆಚ್ಚು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಹಲವರು ಮೋರ್ಬಿ ಸಿವಿಲ್‌ [&#8230;]]]></description>
										<content:encoded><![CDATA[
<p style="font-size:20px"><strong>ಮೊರ್ಬಿ, ಗುಜರಾತ್:</strong> ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಬೃಹತ್‌ ಸೇತುವೆ ಕುಸಿತದ ದುರಂತದಲ್ಲಿ ಬದುಕುಳಿದವರ ಯೋಗಕ್ಷೇಮವನನ್ನು ವಿಚಾರಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಸ್ಪತ್ರಗಳಿಗೆ ಭೇಟಿನೀಡಲಿರುವ ವಿಷಯ ತಿಳಿದು, ಗುಜರಾತ್‌ನ ಮೊರ್ಬಿಯ ಸಿವಿಲ್ ಆಸ್ಪತ್ರೆಯನ್ನು ರಾತ್ರಿಯಿಡಿ ಸ್ವಚ್ಚಗೊಳಿಸಿ, ಸುಣ್ಣ-ಬಣ್ಣ ಹಚ್ಚಿ ಅಲಂಕಿರಿಸಿರುವುದು ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದೆ.</p>



<p style="font-size:20px">ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಕೇಬಲ್ ತೂಗು ಸೇತುವೆಯ ಭೀಕರ ಕುಸಿತದಲ್ಲಿ ಸತ್ತ 135 ಜನರಲ್ಲಿ, 47 ಮಕ್ಕಳು. 100 ಕ್ಕೂ ಹೆಚ್ಚು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಹಲವರು ಮೋರ್ಬಿ ಸಿವಿಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ, ನರೇಂದ್ರ ಮೋದಿಯವರು ಗಾಯಾಳುಗಳು ಚಿಕಿತ್ಸೆಪಡೆಯುತ್ತಿರುವ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದರು.</p>



<p style="font-size:20px">ವಿಷಯ ತಿಳಿದ ಎನ್‌ಡಿಟಿವಿ ವರದಿಗಾರರು, ರಾತ್ರಿ ವೇಳೆ ಆಸ್ಪತ್ರೆಗೆ ಭೇಟಿನೀಡಿದಾಗ, ಮೋದಿಯವರು ಆಸ್ಪತ್ರೆಗೆ ಭೇಟಿ ನೀಡುತ್ತಿರುವ ಕಾರಣ, ಮಧ್ಯರಾತ್ರಿಯಲ್ಲೇ, ಆಸ್ಪತ್ರೆಯಲ್ಲಿ ಸ್ವಚ್ಚಗೊಳಿಸುವ ಕೆಲಸ, ಕೆಲವು ಗೋಡೆಗಳು ಮತ್ತು ಚಾವಣಿಯ ಭಾಗಗಳಿಗೆ ಹೊಸದಾಗಿ ಬಣ್ಣ ಬಳಿಯುವ ಕೆಲಸ ಕಂಡುಬಂದಿದೆ ಎಂದು ವರದಿ ತಿಳಿಸಿದೆ.</p>


<div class="wp-block-image">
<figure class="aligncenter size-full is-resized"><img fetchpriority="high" decoding="async" src="https://peepalmedia.com/wp-content/uploads/2022/11/ಗುಜರಾತ್‌-1.jpg" alt="" class="wp-image-13561" width="371" height="485" /><figcaption><strong>ಗುಜರಾತ್‌ನ ಮೊರ್ಬಿಯ ಸಿವಿಲ್ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ದರಸ್ತಿ ಕೆಲಸ ನಿರ್ವಹಿಸುತ್ತಿರುವ ದೃಶ್ಯ</strong></figcaption></figure></div>


<p style="font-size:20px">ಸೇತುವೆ ದುರಂತದಲ್ಲಿ ಗಾಯಗೊಂಡ ಸುಮಾರು 13 ಮಂದಿ ದಾಖಲಾಗಿರುವ ಎರಡು ವಾರ್ಡ್‌ಗಳಲ್ಲಿ, ದುಸ್ಥಿತಿ ಹೊಂದಿರುವ ಬೆಡ್‌ಗಳನ್ನು ಸಹ ತೆಗೆದು, ಹೊಸ ಬೆಡ್‌ಗಳನ್ನು ಬದಲಾಹಿಸಿರುವ ದೃಶ್ಯಗಳನ್ನು ಎನ್‌ಡಿಟಿವಿ ಸೆರೆಹಿಡಿದಿದೆ.</p>



<p style="font-size:20px">ವರದಿ ತಿಳಿದ ಬಳಿಕ, ಈ ಸುದ್ದಿ ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದ್ದು, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು (ಎಎಪಿ), ಬಿಜೆಪಿಯು ಪ್ರಧಾನಿಯವರ ʼಫೋಟೋಶೂಟ್‌ಗೆʼ ಈ ರೀತಿಯ ಅಭಿವೃದ್ಧಿ ಕೆಲಸದಲ್ಲಿ ನಿರತವಾಗಿದೆ ಎಂದು ಆರೋಪಿಸಿವೆ.</p>



<p style="font-size:20px">ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ನಾಳೆ ಪ್ರಧಾನಿ ಮೋದಿ ಅವರು ಮೋರ್ಬಿಯ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಅದಕ್ಕೂ ಮುನ್ನ ಆಸ್ಪತ್ರೆಯಲ್ಲಿ ಬಣ್ಣ ಬಳಿಯುವ ಕೆಲಸ ನಡೆಯುತ್ತಿದೆ. ಹೊಳೆಯುವ ಟೈಲ್ಸ್ ಅಳವಡಿಸಲಾಗುತ್ತಿದೆ. ಯಾಕೆಂದರೆ, ಪ್ರಧಾನಿ ಮೋದಿ ಅವರ ಚಿತ್ರದಲ್ಲಿ ಯಾವುದೇ ಕೊರತೆ ಇರಬಾರದು, ಅದಕ್ಕಾಗಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಟೀಕಿಸಿದೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="hi" dir="ltr">त्रासदी का इवेंट<br><br>कल PM मोदी मोरबी के सिविल अस्पताल जाएंगे। उससे पहले वहां रंगाई-पुताई का काम चल रहा है। चमचमाती टाइल्स लगाई जा रही हैं।<br><br>PM मोदी की तस्वीर में कोई कमी न रहे, इसका सारा प्रबंध हो रहा है।<br><br>इन्हें शर्म नहीं आती! इतने लोग मर गए और ये इवेंटबाजी में लगे हैं। <a href="https://t.co/MHYAUsfaoC">pic.twitter.com/MHYAUsfaoC</a></p>&mdash; Congress (@INCIndia) <a href="https://twitter.com/INCIndia/status/1587136054133280768?ref_src=twsrc%5Etfw">October 31, 2022</a></blockquote><script async src="https://platform.twitter.com/widgets.js" charset="utf-8"></script>
</div></figure>



<p style="font-size:20px">ಆಮ್‌ ಆದ್ಮಿ ಪಕ್ಷವು ಕೂಡ ʼಮೋರ್ಬಿ ಸಿವಿಲ್ ಆಸ್ಪತ್ರೆಯಲ್ಲಿನ ದೃಶ್ಯಗಳ ಕುರಿತು ಟ್ವೀಟ್‌ ಮಾಡಿದ್ದು, ನಾಳೆ ಪ್ರಧಾನಿಯವರ ಫೋಟೋಶೂಟ್‌ನಲ್ಲಿ ಯಾವುದೇ ಲೋಪವಾಗದಂತೆ ದುರಸ್ತಿ ಕಾರ್ಯ ನಡೆಯುತ್ತಿದೆ. ಕಳೆದ 27 ವರ್ಷಗಳಲ್ಲಿ ಬಿಜೆಪಿ ಈ ಕೆಲಸ ಮಾಡಿದ್ದರೆ, ಮಧ್ಯರಾತ್ರಿಯಲ್ಲಿ ಆಸ್ಪತ್ರೆಯನ್ನು ಅಲಂಕರಿಸುವ ಅಗತ್ಯವಿರಲಿಲ್ಲ ಎಂದು ವ್ಯಂಗಿಸಿದೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="hi" dir="ltr">Morbi Civil Hospital का दृश्य&#8230;<br><br>कल प्रधानमंत्री के Photoshoot में कोई कमी ना रह जाए इसलिए अस्पताल की मरम्मत की जा रही है।<br><br>अगर भाजपा ने 27 वर्षों में काम किया होता तो आधी रात को अस्पताल को चमकाने की जरूरत न पड़ती।<a href="https://twitter.com/hashtag/BJPCheatsGujarat?src=hash&amp;ref_src=twsrc%5Etfw">#BJPCheatsGujarat</a> <a href="https://t.co/h83iUmPzKA">pic.twitter.com/h83iUmPzKA</a></p>&mdash; AAP (@AamAadmiParty) <a href="https://twitter.com/AamAadmiParty/status/1587146401011552256?ref_src=twsrc%5Etfw">October 31, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
	</channel>
</rss>
