<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>mukhyamanthri chandru &#8211; Peepal Media</title>
	<atom:link href="https://peepalmedia.com/tag/mukhyamanthri-chandru/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 29 May 2025 11:48:00 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>mukhyamanthri chandru &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಕಮಲ ಹಾಸನ್ ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕು &#8211; ಮುಖ್ಯಮಂತ್ರಿ ಚಂದ್ರು ಆಗ್ರಹ</title>
		<link>https://peepalmedia.com/kamal-haasan-should-immediately-apologize-to-kannadigas-chief-minister-chandru-demands/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 29 May 2025 11:47:59 +0000</pubDate>
				<category><![CDATA[ರಾಜ್ಯ]]></category>
		<category><![CDATA[Aam Aadmi Party]]></category>
		<category><![CDATA[AAP]]></category>
		<category><![CDATA[Bangalore]]></category>
		<category><![CDATA[kamal hasan]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mukhyamanthri chandru]]></category>
		<category><![CDATA[tamil]]></category>
		<guid isPermaLink="false">https://peepalmedia.com/?p=59981</guid>

					<description><![CDATA[&#8220;ಒಂದು ಭಾಷೆಯ ಉಗಮದ ವಿಚಾರಗಳು ಅತ್ಯಂತ ಸೂಕ್ಷ್ಮವಾಗಿದೆ. ಯಾವುದೇ ಸಂಶೋಧನೆ, ಅಧ್ಯಯನಗಳು ಇಲ್ಲದೆ ಇಂತಹ ವಿಚಾರಗಳನ್ನು ಮಾತನಾಡಲು ಯಾರಿಗೂ ಸಾಧ್ಯವಿಲ್ಲ. ಕನ್ನಡ ಭಾಷೆಯ ಹುಟ್ಟಿನ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವ ತಮಿಳು ನಟ ಕಮಲ ಹಾಸನ್ ಕೂಡಲೇ ಕನ್ನಡಿಗರ ಕ್ಷಮೆ ಯಾಚಿಸಬೇಕು&#8221; ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಇಂದಿಲ್ಲಿ ಆಗ್ರಹಪಡಿಸಿದರು. &#8220;ಕನ್ನಡದ ಸುಪ್ರಸಿದ್ಧ ಕಲಾವಿದ ಶಿವರಾಜ್ ಕುಮಾರ್ ರವರ ಮುಂದೆಯೇ, ಅದೇ ವೇದಿಕೆಯಲ್ಲಿಯೇ ಕನ್ನಡ ಭಾಷೆಯ ಬಗ್ಗೆ ಈ ರೀತಿಯ ಹೇಳಿಕೆ ನೀಡಿರುವುದು [&#8230;]]]></description>
										<content:encoded><![CDATA[
<p>&#8220;ಒಂದು ಭಾಷೆಯ ಉಗಮದ ವಿಚಾರಗಳು ಅತ್ಯಂತ ಸೂಕ್ಷ್ಮವಾಗಿದೆ. ಯಾವುದೇ ಸಂಶೋಧನೆ, ಅಧ್ಯಯನಗಳು ಇಲ್ಲದೆ ಇಂತಹ ವಿಚಾರಗಳನ್ನು ಮಾತನಾಡಲು ಯಾರಿಗೂ ಸಾಧ್ಯವಿಲ್ಲ. ಕನ್ನಡ ಭಾಷೆಯ ಹುಟ್ಟಿನ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವ ತಮಿಳು ನಟ ಕಮಲ ಹಾಸನ್ ಕೂಡಲೇ ಕನ್ನಡಿಗರ ಕ್ಷಮೆ ಯಾಚಿಸಬೇಕು&#8221; ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಇಂದಿಲ್ಲಿ ಆಗ್ರಹಪಡಿಸಿದರು.</p>



<p>&#8220;ಕನ್ನಡದ ಸುಪ್ರಸಿದ್ಧ ಕಲಾವಿದ ಶಿವರಾಜ್ ಕುಮಾರ್ ರವರ ಮುಂದೆಯೇ, ಅದೇ ವೇದಿಕೆಯಲ್ಲಿಯೇ ಕನ್ನಡ ಭಾಷೆಯ ಬಗ್ಗೆ ಈ ರೀತಿಯ ಹೇಳಿಕೆ ನೀಡಿರುವುದು ಕನ್ನಡಿಗರಿಗೆ ಮತ್ತಷ್ಟು ನೋವನ್ನುಂಟು ಮಾಡಿದೆ. ಈಗಾಗಲೇ ಕನ್ನಡ ಮತ್ತು ತಮಿಳು ಭಾಷೆಯ ನಡುವಿನ ಸಂಘರ್ಷಗಳನ್ನು ಸಾಕಷ್ಟು ಕಂಡಿರುವ ಸಂದರ್ಭದಲ್ಲಿ ಮತ್ತಷ್ಟು ತುಪ್ಪ ಸುರಿಯುವಂತಹ ಇವರ ಹೇಳಿಕೆ ತೀರ ಖಂಡನೀಯ. ಶಿವರಾಜ್ ಕುಮಾರ್ ರವರು ಕೂಡಲೇ ಇವರ ಹೇಳಿಕೆಯನ್ನು ಪ್ರತಿಭಟಿಸಬಹುದಿತ್ತು&#8221;</p>



<p>&#8220;ಕನ್ನಡಪರ ಆಲೋಚಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಸರ್ಕಾರ ಕೂಡಲೇ ಇವರ ಹೇಳಿಕೆಯನ್ನು ಖಂಡಿಸಬೇಕು. ಇದ್ಯಾವುದೂ ಆಗದಿದ್ದ ಪಕ್ಷದಲ್ಲಿ ಇವರ ಹೇಳಿಕೆಯ ವಿರುದ್ಧದ ಕನ್ನಡಿಗರ ಕಿಚ್ಚಿಗೆ ನಾವು ಸಹ ಧ್ವನಿಗೂಡಿಸಬೇಕಾಗುತ್ತದೆ&#8221; ಎಂದು ಮುಖ್ಯಮಂತ್ರಿ ಚಂದ್ರು ಎಚ್ಚರಿಸಿದರು.</p>



<p></p>
]]></content:encoded>
					
		
		
			</item>
		<item>
		<title>ಇಡಿ, ಸಿಬಿಐ, ತೆರಿಗೆ ಇಲಾಖೆ ಎಲ್ಲವೂ ಪ್ರಧಾನಿಗಳ ಗುಲಾಮರಾಗಿ ಕೆಲಸ ಮಾಡುತ್ತಿವೆ: ಡಾ. ಮುಖ್ಯಮಂತ್ರಿ ಚಂದ್ರು</title>
		<link>https://peepalmedia.com/ed-cbi-it-every-department-is-modi-slave-now-muhkyamantri-chandru/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 31 Mar 2024 14:34:31 +0000</pubDate>
				<category><![CDATA[ರಾಜ್ಯ]]></category>
		<category><![CDATA[AAP]]></category>
		<category><![CDATA[cpim]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[mukhyamanthri chandru]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37792</guid>

					<description><![CDATA[ಬೆಂಗಳೂರು: ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರ ಅಧಿಕಾರಿಗಳಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು. ಆಮ್‌ ಆದ್ಮಿ ಪಾರ್ಟಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಅಕ್ರಮವಾಗಿ ಬಂಧಿಸಿರುವುದನ್ನು ವಿರೋಧಿಸಿ ನಗರದ ಸ್ವತಂತ್ರ ಉದ್ಯಾನವನದಲ್ಲಿ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ &#8216;ಇಂಡಿಯಾ&#8217; ಒಕ್ಕೂಟವು ಬೃಹತ್‌ ಶಾಂತಿಯುತ ಪ್ರತಿಭಟನೆಯನ್ನು [&#8230;]]]></description>
										<content:encoded><![CDATA[
<p>ಬೆಂಗಳೂರು: ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರ ಅಧಿಕಾರಿಗಳಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.</p>



<p>ಆಮ್‌ ಆದ್ಮಿ ಪಾರ್ಟಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಅಕ್ರಮವಾಗಿ ಬಂಧಿಸಿರುವುದನ್ನು ವಿರೋಧಿಸಿ ನಗರದ ಸ್ವತಂತ್ರ ಉದ್ಯಾನವನದಲ್ಲಿ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ &#8216;ಇಂಡಿಯಾ&#8217; ಒಕ್ಕೂಟವು ಬೃಹತ್‌ ಶಾಂತಿಯುತ ಪ್ರತಿಭಟನೆಯನ್ನು ನಡೆಸಿತು. ಈ ಸಂದರ್ಭ ಮುಖ್ಯಮಂತ್ರಿ ಚಂದ್ರು ಅವರು ಮಾತನಾಡುತ್ತ, ಕಳೆದ 10 ವರ್ಷಗಳಲ್ಲಿ ನಾವು ನೋಡಿದ್ದು ಪ್ರಜಾಪ್ರಭುತ್ವದ ಕಗ್ಗೋಲೆ, ವಿವಿಧತೆಯಲ್ಲಿ ಏಕತೆಯಿಂದಿರುವ ಭಾರತದ ನಾಶ, ಜನತಂತ್ರ ವ್ಯವಸ್ಥೆಯ ಸರ್ವನಾಶ, ಸಂವಿಧಾನ ಬದಲಿಸುವ ಪ್ರಯತ್ನ, ಪಾರದರ್ಶಕತೆ ಇಲ್ಲದ ಆಡಳಿತ, ಕೋಮುಗಲಭೆಗಳಾಗಿವೆ ಎಂದರು.</p>



<p>ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಮೂಲಕ ಕಡಿವಾಣ ಹಾಕುತ್ತಿದ್ದಾರೆ, ದೆಹಲಿಯಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ಮೂಲಕ ರಾಜ್ಯದ ಆಡಳಿತವನ್ನು ಹತೋಟಿಯಲ್ಲಿಡಲು ಯತ್ನಿಸುತ್ತಿದ್ದಾರೆ. ಜೈಲಿನಲ್ಲಿರಬೇಕಾದ ಕಡುಭ್ರಷ್ಟರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಮಂತ್ರಿ, ಮುಖ್ಯಮಂತ್ರಿಗಳನ್ನಾಗಿಸುತ್ತಿದ್ದಾರೆ. ರಾಜಕೀಯ ಎದುರಾಳಿಗಳನ್ನು ಇಡಿ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ತನಿಖಾ ಸಂಸ್ಥೆಗಳ ಮೂಲಕ ಸುಳ್ಳು ಪ್ರಕರಣಗಳಡಿ ಆರೋಪಿಗಳಾಗಿಸಿ ಕಿರುಕುಳಕೊಡುತ್ತಿದ್ದಾರೆ. ಈ ದೇಶ ಉಳಿಯಬೇಕೆಂದರೆ ಸರ್ವಾಧಿಕಾರಿಯ ಆಡಳಿತಕ್ಕೆ ಅಂತ್ಯಹಾಡಬೇಕು ಎಂದು ಮುಖ್ಯಮಂತ್ರಿ ಚಂದ್ರು ಕರೆ ನೀಡಿದರು.</p>



<p>ದುಡ್ಡು ಇರುವವರ ಹತ್ತಿರ ಇ.ಡಿ ಹೋಗುತ್ತೆ. ಆಮೇಲೆ ಒಳಗೆ ಹೋಗ್ತಿರಾ, ಹೊರಗೆ ಇರ್ತಿರಾ ಎಂದು ಕೇಳುತ್ತೆ. ಹೊರಗಿರಬೇಕಾದ್ರೆ ಬಿಜೆಪಿ ಹುಂಡಿಗೆ ಕಾಸು ಹಾಕಿ. ಇಲ್ದೇ ಹೋದ್ರೆ ಒಳಗೋಗಿ. ಇದು ನೂರಾರು ಉದ್ಯಮಿಗಳ ಪರಿಸ್ಥಿತಿಯಾಗಿದೆ. ಸಾವಿರಾರು ಕೋಟಿ ರೂ. ಅಕ್ರಮ ಹಣವನ್ನು ಚುನಾವಣಾ ಬಾಂಡ್‌ ಮೂಲಕ ತನ್ನ ಹುಂಡಿಗೆ ಹಾಕಿಸಿಕೊಂಡು ಸಕ್ರಮ ಮಾಡುತ್ತಿದೆ. ಸ್ವಿಸ್‌ ಬ್ಯಾಂಕಿನಲ್ಲಿರು ಎಲ್ಲ ಕಳ್ಳ ದುಡ್ಡನ್ನು ತಂದು ಭಾರತದ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದು 10 ವರ್ಷಗಳ ಹಿಂದೆ ನರೇಂದ್ರ ಮೋದಿ ಅವರು ಹೇಳಿದ್ದರು. ಆದರೆ ಅವರೇ ಚುನಾವಣೆ ಬಾಂಡ್‌ ಮೂಲಕ ಸಾವಿರಾರು ಕೋಟಿ ಅಕ್ರಮ ಹಣವನ್ನು ಗುಡ್ಡೆ ಹಾಕಿಕೊಂಡಿದ್ದಾರೆ. ಸರ್ಕಾರಿ ಆಸ್ತಿಗಳನ್ನು ಒಂದುಕಡೆಯಿಂದ ಮಾರಾಟ ಮಾಡಿಕೊಂಡು ಬಂದಿದ್ದರೆ. ದೇಶದ ಸಾಲವನ್ನು ಕೇವಲ 10 ವರ್ಷಗಳಲ್ಲಿ 200 ಪಟ್ಟು ಹೆಚ್ಚಿದ್ದಾರೆ. ಮೊದಲೆಲ್ಲ ಭಾರತದಲ್ಲಿ ಹುಟ್ಟುವ ಪ್ರತಿ ಮಗುವಿನ ಮೇಲೆ 50 ಸಾವಿರ ಸಾಲವಿತ್ತು. ಆದರೆ ಈಗ ಬರೋಬ್ಬರಿ 1.5 ಲಕ್ಷ ರೂ. ಸಾಲವಿದೆ ಎಂದು ಕಳವಳ ವ್ಯಕ್ತಪಡಿಸಿದರು.</p>



<p>ಶಾಲೆಗಳ ಅಭಿವೃದ್ಧಿಗೆ ಕೇಜ್ರಿವಾಲ್‌ ಮಾದರಿ: ರಾಮಲಿಂಗಾರೆಡ್ಡಿ</p>



<p>ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್‌ ಅವರು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಿರುವುದನ್ನು ನೋಡಿ ಸ್ಫೂರ್ತಿಗೊಂಡು ನಮ್ಮ ಕ್ಷೇತ್ರದ 22 ಶಾಲೆಗಳನ್ನು ಅಭಿವೃದ್ಧಿಪಡಿಸಿದೆವು. ಮೊದಲು 4,000 ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳು ಇದ್ದವರು 5,500 ಮಕ್ಕಳಾಗಿದ್ದಾರೆ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸಂತಸ ವ್ಯಕ್ತಪಡಿಸಿದರು.</p>



<p>&#8216;ಇಂಡಿಯಾ&#8217; ಒಕ್ಕೂಟದ ಭಾಗವಾಗಿ ಕಾಂಗ್ರೆಸ್‌ ಪ್ರತಿನಿಧಿಯಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಮಲಿಂಗಾರೆಡ್ಡಿ ಅವರು ಬಿಜೆಪಿ ವಿರುದ್ಧ ಹರಿಹಾಯ್ದರು. ಬಿಜೆಪಿಗರ ಪೂರ್ವಜರು ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್‌ನವರಾಗಿದ್ದಾರೆ. ಅವರು ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರಲ್ಲ. ಮನುವಾದಿ, ಸರ್ವಾಧಿಕಾರಿ ಧೋರಣೆಯಲ್ಲಿ ನಂಬಿಕೆ ಇಟ್ಟವರಾಗಿದ್ದಾರೆ. ಸಂವಿಧಾನ ವಿರೋಧಿಗಳಾಗಿದ್ದಾರೆ. ಭಾರತದಲ್ಲಿ ಈಗ ಸರ್ವಾಧಿಕಾರ ಚಾಲ್ತಿಯಲ್ಲಿದೆ. ಸಂವಿಧಾನ ಬದಲಾದ್ರೆ ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ದೇಶ ಹೇಗಿತ್ತೋ ಆ ಪರಿಸ್ಥಿತಿಗೆ ಕೊಂಡೊಯ್ಯುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು.</p>



<p>2ಜಿ ಹಗರಣದಲ್ಲಿ, ಕಲ್ಲಿದ್ದಲು ಹಗರಣದಲ್ಲಿ ಅಕ್ರಮ ನಡೆದಿರುವುದನ್ನು ಸಾಬೀತು ಪಡಿಸಲಾಗಲಿಲ್ಲ. ಆದರೂ ಅವುಗಳು ಭಾರತದ ಅತಿದೊಡ್ಡ ಹಗರಣಗಳೆಂದು ಸುಳ್ಳು ಬಿತ್ತಿದರು. ಅಬಕಾರಿ ನೀತಿ ಹಗರಣದಲ್ಲಿಯೂ ಎಎಪಿ ಪಾತ್ರದ ಬಗ್ಗೆ ನಿರಂತರವಾಗಿ ಸುಳ್ಳು ಹಬ್ಬಿಸಲಾಗುತ್ತಿದೆ. ಆದರೆ ಎರಡು ವರ್ಷಗಳೇ ಕಳೆದರೂ ಒಂದು ರೂಪಾಯಿ ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿಲ್ಲ. ಚುನಾವಣೆ ಬಾಂಡ್‌ ಮೂಲಕ ಸಾವಿರಾರು ಕೋಟಿ ಅಕ್ರಮ ಎಸಗಿರುವುದು ಕಣ್ಮುಂದೆ ಇದ್ದರೂ ಬಿಜೆಪಿ ವಿರುದ್ಧ ತನಿಖಾ ಸಂಸ್ಥೆಗಳು ಕ್ರಮ ಕೈಗೊಳ್ಳುತ್ತಿಲ್ಲ. ಮುಂದೆ ಒಳ್ಳೆಯ ದಿನಗಳು ಬರಲಿವೆ. ಕೇಜ್ರಿವಾಲ್‌ ಆರೋಪ ಮುಕ್ತರಾಗಲಿದ್ದಾರೆ. ಬಿಜೆಪಿಯ ಎಲ್ಲ ಭ್ರಷ್ಟರು ಜೈಲು ಸೇರಲಿದ್ದಾರೆ ಎಂದು ಆಶಾಯ ವ್ಯಕ್ತಪಡಿಸಿದರು.</p>



<p>ಸಿಪಿಐಎಂ ಮುಖಂಡ ಜಿ.ಎನ್‌.ನಾಗರಾಜ್‌ ಮಾತನಾಡುತ್ತ, ಭಾರತ ದೇಶದಲ್ಲಿ ಅಧಿಕಾರದಲ್ಲಿರುವುದು ಮೋದಿ ಎನ್ನಲಾಗುತ್ತಿದೆ. ಆದರೆ ಮೋದಿ ಹಿಂದಿರುವ ಆರ್‌ಎಸ್‌ಎಸ್‌ ಈ ದೇಶವನ್ನು ನಿಯಂತ್ರಿಸುತ್ತಿದೆ. ಮನುವಾದಿ, ಕೋಮು ದ್ವೇಷದ ಚಿಂತನೆಗಳನ್ನು ಹೊಂದಿರುವ, ಸರ್ವಾಧಿಕಾರಿ ಧೋರಣೆಯ ಆರ್‌ಎಸ್‌ಎಸ್‌ ಕಳೆದ ನೂರು ವರ್ಷಗಳಿಂದ ವ್ಯವಸ್ಥಿತವಾಗಿ ಭಾರತವನ್ನು ತನ್ನ ಕೈವಶ ಮಾಡಿಕೊಳ್ಳುತ್ತ ಬಂದಿದೆ. ಇದೀಗ ಆರ್‌ಎಸ್‌ಎಸ್‌ ಉಚ್ಛ್ರಾಯಸ್ಥಿತಿಯಲ್ಲಿರುವುದು ಆತಂಕಕಾರಿ ವಿಚಾರವಾಗಿದೆ. ಚುನಾವಣೆ ಸಂದರ್ಭ ಕೇಜ್ರಿವಾಲ್‌ ಬಂಧನ, ಕಾಂಗ್ರೆಸ್‌ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಿರುವುದು ಸಂವಿಧಾನ ವಿರೋಧಿ ನಡೆ. ಮಾಜಿ ಪ್ರಧಾನಿಯೊಬ್ಬರನ್ನು ಜೈಲಿನಲ್ಲಿಟ್ಟು ಚುನಾವಣೆಯ ಪಾಕಿಸ್ತಾನದಲ್ಲಿರುವ ಚಿಂತಕರು ಮತ್ತು ಕವಿಗಳು &#8220;ಅಯ್ಯೋ ಭಾರತವೇ ನೀನು ನಮ್ಮಂತಾದೆಯಲ್ಲಾ..&#8221; ಎಂದು ವಿಷಾಧದಿಂದ ಕವಿತೆಗಳನ್ನು ಬರೆಯುತ್ತಿದ್ದಾರೆ ಎಂದರು.</p>



<p>ಎಸ್‌ಡಿಪಿಐನ ಅಬ್ದುಲ್‌ ಮಜಿದ್‌, ಸಾಮಾಜಿಕ ಹೋರಾಟಗಾರ ನೂರ್‌ ಶ್ರೀಧರ್‌, ಸಲೀಲ್‌ ಶೆಟ್ಟಿ, ಎಎಪಿ ರಾಜ್ಯ ಉಪಾಧ್ಯಕ್ಷರಾದ ಮೋಹನ್‌ ದಾಸರಿ, ವಿಜಯ್‌ ಶರ್ಮಾ, ರಮೇಶ್‌ ಬೆಲ್ಲಂಕೊಂಡ, ಡಾ. ವೆಂಕಟೇಶ್‌, ಶಾಂತಳಾ ದಾಮ್ಲೆ, ಸಂಪತ್‌ ಶೆಟ್ಟಿ, ನಸೀಮುದ್ದಿನ್‌ ಪಟೇಲ್‌, ರುದ್ರಯ್ಯ ನವಲೀಹೀರೇಮಠ್, ಸುದೇಶ್‌ ರಾಥೋಡ್‌, ವಿವೇಕಾನಂದ ಸಾಲಿನ್ಸ್‌, ಉಮಾಶಂಕರ್‌, ರಾಜ್ಯಪ್ರಧಾನ ಕಾರ್ಯದರ್ಶಿ ಸಂಚಿತ್‌ ಸಹಾನಿ, ಪ್ರಕಾಶ್‌ ನಡುಂನುಡಿ, ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್‌ ವಿ. ಸದಂ, ರಾಜ್ಯ ಸಂಘಟನಾಧ್ಯಕ್ಷರಾದ ಅರ್ಜುನ್ ಹಲಗೀಗೌಡರ್‌, ಬಿ.ಟಿ.ನಾಗಣ್ಣ, ಕುಶಾಲಾ ಗೌಡ, ಸುಷ್ಮ ವಿ. ನವೀನ್‌ ಚಂದ್ರ ಪೂಜಾರಿ, ಲೋಹಿತ್‌ ಹನುಮಾಪುರ, ಫರೀದುದ್ದೀನ್‌ ಷರೀಫ್‌, ರಮೇಶ್‌ ಬಾಬು, ಜಿ.ಸಿ. ಭೈರೆಡ್ಡಿ, ಡಾ. ಸತೀಶ್‌ ಮತ್ತಿತರ ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು. ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ಅನೇಕ ಮಂದಿ ಪಕ್ಷಾತೀತರಾಗಿ ಪಾಲ್ಗೊಂಡಿದ್ದರು.</p>



<p>ಪ್ರತಿಭಟನೆ ವೇಳೆ ಹೆಚ್ಚಿನವರು ಕಪ್ಪು ಪಟ್ಟಿ ಧರಿಸಿದ್ದರು. ಸಂವಿಧಾನ ವಿರೋಧಿ ನರೇಂದ್ರ ಮೋದಿ, ಭ್ರಷ್ಟ ಮೋದಿ ಧಿಕ್ಕಾರ, ಬಾಂಡ್‌ ಮೋದಿಗೆ ಧಿಕ್ಕಾರ ಘೋಷಣೆಗಳು ಕೇಳಿಬಂದವು.</p>
]]></content:encoded>
					
		
		
			</item>
		<item>
		<title>ಚುನಾವಣೆಗೆ ಪ್ರಣಾಳಿಕೆ ಬದಲು ಗ್ಯಾರಂಟಿ ಕಾರ್ಡ್‌ ನೀಡಿ ಭರವಸೆ</title>
		<link>https://peepalmedia.com/guarantee-card-instead-of-manifesto-for-election/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 13 Dec 2022 08:16:02 +0000</pubDate>
				<category><![CDATA[ಉತ್ತರ ಕನ್ನಡ]]></category>
		<category><![CDATA[AAP]]></category>
		<category><![CDATA[bengalure]]></category>
		<category><![CDATA[guarantee card]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mukhyamanthri chandru]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=18385</guid>

					<description><![CDATA[ಶಿರಸಿ: ಜನರ ಮತ ಸೆಳೆಯಲು ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ಆಮ್‌ ಆದ್ಮಿ ಪಕ್ಷ ಪ್ರಣಾಳಿಕೆ ಬದಲು ಗ್ಯಾರಂಟಿ ಕಾರ್ಡ್‌ ನೀಡಿ ಮತವನ್ನು ಕೇಳಲಿದೆ ಎಂದು ಆಮ್‌ ಆದ್ಮಿ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ. ಮಂಗಳವಾರದಂದು ಮುಂದಿನ ಚುನಾವಣೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, ʼ ಈಗಾಗಲೇ ಕಾಂಗ್ರೆಸ್‌ ನಶಿಸಿದೆ. ಜೆಡಿಎಸ್‌ ಪಕ್ಷ ಕೆಲವೇ ಸೀಟುಗಳನ್ನು ಪಡೆಯಲಿವೆ. ಈಗ ಸದ್ಯಕ್ಕೆ ಬಿಜೆಪಿ ಮಾತ್ರ ಆಮ್‌ ಆದ್ಮಿ ಪಕ್ಷಕ್ಕೆ ನೇರ ಎದುರಾಳಿಯಾಗಿದೆ. ರಾಜ್ಯದಲ್ಲಿ [&#8230;]]]></description>
										<content:encoded><![CDATA[
<p><strong>ಶಿರಸಿ:</strong> ಜನರ ಮತ ಸೆಳೆಯಲು ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ಆಮ್‌ ಆದ್ಮಿ ಪಕ್ಷ ಪ್ರಣಾಳಿಕೆ ಬದಲು ಗ್ಯಾರಂಟಿ ಕಾರ್ಡ್‌ ನೀಡಿ ಮತವನ್ನು ಕೇಳಲಿದೆ ಎಂದು ಆಮ್‌ ಆದ್ಮಿ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.</p>



<p>ಮಂಗಳವಾರದಂದು ಮುಂದಿನ ಚುನಾವಣೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, ʼ ಈಗಾಗಲೇ ಕಾಂಗ್ರೆಸ್‌ ನಶಿಸಿದೆ. ಜೆಡಿಎಸ್‌ ಪಕ್ಷ ಕೆಲವೇ ಸೀಟುಗಳನ್ನು ಪಡೆಯಲಿವೆ. ಈಗ ಸದ್ಯಕ್ಕೆ ಬಿಜೆಪಿ ಮಾತ್ರ ಆಮ್‌ ಆದ್ಮಿ ಪಕ್ಷಕ್ಕೆ ನೇರ ಎದುರಾಳಿಯಾಗಿದೆ. ರಾಜ್ಯದಲ್ಲಿ ಚುನಾವಣೆ ವೇಳೆ ಆಪ್‌ನ ಅಲೆಗಳು ಅಪ್ಪಳಿಸಲಿವೆ. ಜೆಡಿಎಸ್‌, ಕಾಂಗ್ರೆಸ್‌ ಮತ್ತು ಬಿಜೆಪಿಯನ್ನು ಓಡಿಸಲು ಪೊರಕೆ ಹಿಡಿದಿದ್ದೇವೆ ಎಂದು ಹೇಳಿದ್ದಾರೆ.</p>



<p>ಪ್ರತಿ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು ಪ್ರತ್ಯೇಕ ಪ್ರಣಾಳಿಗೆಗಳನ್ನು ನೀಡಿ ಜನರನ್ನು ನಂಬಿಸಿ ತಮ್ಮಡೆಗೆ ಸೆಳೆಯುತ್ತವೆ. ಆದರೆ ಆಮ್‌ ಆದ್ಮಿ ಪಕ್ಷ ಪ್ರಣಾಳಿಕೆ ಬದಲು ಗ್ಯಾರಂಟಿ ಕಾರ್ಡ್‌ ನೀಡಿ ಮತವನ್ನು ಕೇಳಲಿದೆ ಎಂದಿದ್ದಾರೆ.</p>



<p>ಆಪ್‌ ಶುರುವಾಗಿ ಹತ್ತು ವರ್ಷಗಳಾಗಿದೆ. ಆಗಿನಿಂದಲೂ ಈ ಸಣ್ಣ ಪಕ್ಷ ಭ್ರಷ್ಟಾಚಾರ, ದುರಾಡಳಿತದ ವಿರುದ್ಧ ಹೋರಾಡುತ್ತಲೇ ಬಂದಿದೆ. ಒಂಭತ್ತು ರಾಷ್ಟ್ರೀಯ ಪಕ್ಷಗಳಲ್ಲಿ ಆಮ್‌ ಆದ್ಮಿ ಪಕ್ಷ ಹೆಚ್ಚು ಮುನ್ನೆಲೆಗೆ ಬರುತ್ತಿದೆ ಎಂದು ಮಾತನಾಡಿದ್ದಾರೆ.</p>



<p>ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಜನವರಿ ಎರಡನೇ ವಾರದಿಂದ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಆ ಬಳಿಕ 224 ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ನಿರ್ಧರಿಸಲಾಗುವುದು. ಅಪರಾಧ ಹಿನ್ನಲೆ ಉಳ್ಳವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲʼ ಎಂದು ತಿಳಿಸಿದರು.</p>
]]></content:encoded>
					
		
		
			</item>
	</channel>
</rss>
