<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>muneer katipalla &#8211; Peepal Media</title>
	<atom:link href="https://peepalmedia.com/tag/muneer-katipalla/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sun, 31 Mar 2024 14:49:02 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>muneer katipalla &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಜಿಲ್ಲೆಯ ಶಿಕ್ಷಣ, ಆರೋಗ್ಯ, ನಿರುದ್ಯೋಗದ ಸ್ಥಿತಿಗತಿಗಳ ಅರಿವಿಲ್ಲದ ಅಭ್ಯರ್ಥಿ ಬೃಜೇಶ್ ಚೌಟ: ಮುನೀರ್ ಕಾಟಿಪಳ್ಳ ಆರೋಪ</title>
		<link>https://peepalmedia.com/brijesh-chauta-knows-nothing-about-mangalore-munir-katipalla/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 31 Mar 2024 14:46:14 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[cpim]]></category>
		<category><![CDATA[DYFI]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[muneer katipalla]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37798</guid>

					<description><![CDATA[ಮೂರು ದಶಕಗಳ ಬಿಜೆಪಿ ದುರಾಡಳಿತದ ವಿರುದ್ದದ ಜನಾಕ್ರೋಶವನ್ನು ತಣಿಸಲು ಬಿಜೆಪಿ ನಳಿನ್ ಕುಮಾರ್ ಕಟೀಲ್ ರಿಗೆ ಟಿಕೇಟ್ ತಪ್ಪಿಸಿ ಬೃಜೇಶ್ ಚೌಟರನ್ನು ಕಣಕ್ಕಿಳಿಸಿದೆ. ವಿದ್ಯಾವಂತ, ಮಾಜಿ ಯೋಧ ಎಂಬ ಬಿರುದಾಂಕಿತ ಅಭ್ಯರ್ಥಿ ಮೂಲಕ ತನ್ನದು ಯೋಗ್ಯ ಅಭ್ಯರ್ಥಿ ಎಂದು ಜನರ ನಡುವೆ ಪ್ರಚಾರ ನಡೆಸುತ್ತಿದೆ. ಆ ಮೂಲಕ ಆಡಳಿತ ವಿರೋಧಿ ಅಲೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ. ಆದರೆ, ಬಿಜೆಪಿ ಹೊಸ ಮುಖ ಬೃಜೇಶ್ ಚೌಟರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಯಾವುದೇ ಸಮಸ್ಯೆಗಳ ಕುರಿತು ಅರಿವಿಲ್ಲ. ಇಲ್ಲಿನ ಜನರನ್ನು [&#8230;]]]></description>
										<content:encoded><![CDATA[
<p>ಮೂರು ದಶಕಗಳ ಬಿಜೆಪಿ ದುರಾಡಳಿತದ ವಿರುದ್ದದ ಜನಾಕ್ರೋಶವನ್ನು ತಣಿಸಲು ಬಿಜೆಪಿ ನಳಿನ್ ಕುಮಾರ್ ಕಟೀಲ್ ರಿಗೆ ಟಿಕೇಟ್ ತಪ್ಪಿಸಿ ಬೃಜೇಶ್ ಚೌಟರನ್ನು ಕಣಕ್ಕಿಳಿಸಿದೆ. ವಿದ್ಯಾವಂತ, ಮಾಜಿ ಯೋಧ ಎಂಬ ಬಿರುದಾಂಕಿತ ಅಭ್ಯರ್ಥಿ ಮೂಲಕ ತನ್ನದು ಯೋಗ್ಯ ಅಭ್ಯರ್ಥಿ ಎಂದು ಜನರ ನಡುವೆ ಪ್ರಚಾರ ನಡೆಸುತ್ತಿದೆ. ಆ ಮೂಲಕ ಆಡಳಿತ ವಿರೋಧಿ ಅಲೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ. ಆದರೆ, ಬಿಜೆಪಿ ಹೊಸ ಮುಖ ಬೃಜೇಶ್ ಚೌಟರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಯಾವುದೇ ಸಮಸ್ಯೆಗಳ ಕುರಿತು ಅರಿವಿಲ್ಲ. ಇಲ್ಲಿನ ಜನರನ್ನು ಕಿತ್ತು ತಿನ್ನುತ್ತಿರುವ ಆರೋಗ್ಯ, ಶಿಕ್ಷಣದ ವ್ಯಾಪಾರೀಕರಣದ ಸಮಸ್ಯೆಗಳು, ಉಲ್ಬಣಾವಸ್ಥೆಗೆ ತಲುಪಿರುವ ನಿರುದ್ಯೋಗ ಸ್ಥಿತಿಯ ಕುರಿತು ಚೌಟರಿಗೆ ಅರಿವೂ ಇಲ್ಲ, ಅಧ್ಯಯನವೂ ಇಲ್ಲ ಇಲ್ಲ ಎಂದು ಸಿಪಿಐ ಎಂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. </p>



<p>ಹತ್ತು ವರ್ಷಗಳ ಅವರ ಸಾರ್ವಜನಿಕ ಜೀವನದಲ್ಲಿ ಚೌಟರು ಈ ಸಮಸ್ಯೆಗಳ ಕುರಿತು ಒಂದು ಶಬ್ದ ಮಾತಾಡಿದ್ದು ಯಾರೂ ಕಂಡಿಲ್ಲ. ಇಂತಹ ಅಭ್ಯರ್ಥಿನ್ನು ಗೆಲ್ಲಿಸಿದರೆ ದ.ಕ. ಜಿಲ್ಲೆಯಲ್ಲಿ ಬಿಜೆಪಿಯ 33 ವರ್ಷಗಳ ಸತತ ಆಳ್ವಿಕೆಯ ಕರಾಳ ಅಧ್ಯಾಯಕ್ಕೆ ಮತ್ತೆ ಐದು ವರ್ಷ ಸೇರ್ಪಡೆ ಮಾತ್ರ ಆಗಲಿದೆ. ಕೋಮುವಾದಕ್ಕೆ ಮಣೆ ಹಾಕುವ ಪಕ್ಷದಿಂದ ಸಮಸ್ಯೆಗಳು ಮತ್ತಷ್ಟು ಹೆಚ್ಚಲಿದೆ. ಜಿಲ್ಲೆಯ ಯುವಜನತೆ ಈಗಲಾದರು ಎಚ್ಚೆತ್ತು ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು, ಆ ಮೂಲಕ ಜಿಲ್ಲೆಯ ಮೂರು ದಶಕಗಳ ಬಿಜೆಪಿ ದುರಾಡಳಿತಕ್ಕೆ ಅಂತ್ಯ ಹಾಡಬೇಕು ಎಂದು ಅವರು ಜನರಲ್ಲಿ ಮನವಿ ಮಾಡಿಕೊಂಡರು. </p>



<p>ಅವರು ಕುಳಾಯಿ ಮಹಿಳಾ ಮಂಡಲ ಸಭಾಂಗಣದಲ್ಲಿ ಸಿಪಿಐಎಂ ವತಿಯಿಂದ ಅಯೋಜಿಸಲಾಗಿದ್ದ ಸುರತ್ಕಲ್ ವಿಭಾಗ ಮಟ್ಟದ ರಾಜಕೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಡಾ. ಕೃಷ್ಣಪ್ಪ ಕೊಂಚಾಡಿ ಮಾತನಾಡುತ್ತಾ ಹತ್ತು ವರ್ಷಗಳ ಮೋದಿ ಸರಕಾರದ ದುರಾಡಳಿತದಿಂದ ದೇಶದ ದುರಂತದತ್ತ ಚಲಿಸುತ್ತಿದೆ. ಚುನಾವಣಾ ಬಾಂಡ್ ಪಡೆಯುವ ಮೂಲಕ ಕಪ್ಪು ಪಟ್ಟಿಗೆ ಸೇರಬೇಕಾದ ಕಾರ್ಪೊರೇಟ್ ಕಂಪೆನಿಗಳಿಗೆ ರೆಡ್ ಕಾರ್ಪೆಟ್ ಹಾಕಲಾಗುತ್ತಿದೆ. ದೇಶದ ಆದಿವಾಸಿಗಳು, ದಲಿತರು, ಹಿಂದುಳಿದವರನ್ನು ಹಸಿವೆಗೆ ತಳ್ಳಲಾಗುತ್ತಿದೆ. ಈ ಭಾರಿಯ ಚುನಾವಣೆಯಲ್ಲಿ ಮೋದಿ ಸರಕಾರ ಸೋಲಿಸಲು ಈ ಎಲ್ಲಾ ವಿಭಾಗಗಳು ಒಟ್ಟಾಗಿ ದುಡಿಯಬೇಕು ಎಂದು ಹೇಳಿದರು.</p>



<p>ಪ್ರಾಸ್ತಾವಿಕವಾಗಿ ಜಿಲ್ಲಾ ಸಮಿತಿ ಸದಸ್ಯ ಬಿ ಕೆ ಇಮ್ತಿಯಜ್ ಮಾತನಾಡಿದರು.ಮಂಗಳೂರು ನಗರ ಸಮಿತಿ ಸದಸ್ಯರಾದ ಶ್ರೀನಾಥ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು, ಚರಣ್ ಶೆಟ್ಟಿ ವಂದಿಸಿದರು. ನಗರ ಉತ್ತರ ಸಮಿತಿ ಕಾರ್ಯದರ್ಶಿ ಪ್ರಮೀಳಾ ಕೆ, ಮಾಜಿ ಕಾರ್ಪೊರೇಟರ್ ಅಯಾಝ್, ಜೋಕಟ್ಟೆ ಪಂಚಾಯತ್ ಸದಸ್ಯ ಅಬೂಬಕ್ಕರ್ ಬಾವಾ, ಕಾರ್ಮಿಕ ನಾಯಕ ರವಿಚಂದ್ರ ಕೊಂಚಾಡಿ ಸಹಿತ ಹಲವು ಮುಖಂಡರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಕೊನೆಗೂ ಸುರತ್ಕಲ್‌ ಟೋಲ್‌ ಅಧಿಕೃತವಾಗಿ ತೆರವು</title>
		<link>https://peepalmedia.com/tolgate-closed-at-nitk-suratkal/</link>
		
		<dc:creator><![CDATA[Peepal Media]]></dc:creator>
		<pubDate>Thu, 01 Dec 2022 04:24:18 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[muneer katipalla]]></category>
		<category><![CDATA[NITK]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[suratkal]]></category>
		<category><![CDATA[Suratkal illegal toll gate]]></category>
		<guid isPermaLink="false">https://peepalmedia.com/?p=17130</guid>

					<description><![CDATA[ಮಂಗಳೂರು: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಜನರ ಹೋರಾಟಕ್ಕೆ ಕೊನೆಗೂ ಜಯ ದೊರಕಿದ್ದು, ತಡರಾತ್ರಿ ಹನ್ನೆರಡು ಗಂಟೆಯಿಂದ ಸುಂಕ ವಸೂಲಿ ನಿಲ್ಲಿಸಲಾಗಿದೆ. ಕರಾವಳಿ ಜಿಲ್ಲೆಯ ಜನರ ಹಲವು ವರ್ಷಗಳ ಆಗ್ರಹವೊಂದು ಕಡೆಗೂ ಈಡೇರಿದಂತಾಗಿದೆ ಮತ್ತು ಸುಮಾರು ವರ್ಷಗಳ ಹೋರಾಟವೊಂದಕ್ಕೆ ಈ ಮೂಲಕ ಒಂದು ತಾರ್ಕಿಕ ಅಂತ್ಯ ಕಂಡಂತಾಗಿದೆ. ಈ ಮೊದಲು ಸರ್ಕಾರ ಸುರತ್ಕಲ್‌ ಟೋಲ್‌ನ ಸುಂಕವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡಲು ಯೋಜಿಸಿತ್ತಾದರೂ ಆ ರಸ್ತೆಯ ಮಾಲಕ ಸಂಸ್ಥೆ ನವಯುಗ ಅದಕ್ಕೆ ಒಪ್ಪಿಗೆ ನೀಡದ ಕಾರಣ ಸದ್ಯಕ್ಕೆ ಹೆಜಮಾಡಿಯಲ್ಲಿ [&#8230;]]]></description>
										<content:encoded><![CDATA[
<p>ಮಂಗಳೂರು: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಜನರ ಹೋರಾಟಕ್ಕೆ ಕೊನೆಗೂ ಜಯ ದೊರಕಿದ್ದು, ತಡರಾತ್ರಿ ಹನ್ನೆರಡು ಗಂಟೆಯಿಂದ ಸುಂಕ ವಸೂಲಿ ನಿಲ್ಲಿಸಲಾಗಿದೆ.</p>



<p>ಕರಾವಳಿ ಜಿಲ್ಲೆಯ ಜನರ ಹಲವು ವರ್ಷಗಳ ಆಗ್ರಹವೊಂದು ಕಡೆಗೂ ಈಡೇರಿದಂತಾಗಿದೆ ಮತ್ತು ಸುಮಾರು ವರ್ಷಗಳ ಹೋರಾಟವೊಂದಕ್ಕೆ ಈ ಮೂಲಕ ಒಂದು ತಾರ್ಕಿಕ ಅಂತ್ಯ ಕಂಡಂತಾಗಿದೆ. ಈ ಮೊದಲು ಸರ್ಕಾರ ಸುರತ್ಕಲ್‌ ಟೋಲ್‌ನ ಸುಂಕವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡಲು ಯೋಜಿಸಿತ್ತಾದರೂ ಆ ರಸ್ತೆಯ ಮಾಲಕ ಸಂಸ್ಥೆ ನವಯುಗ ಅದಕ್ಕೆ ಒಪ್ಪಿಗೆ ನೀಡದ ಕಾರಣ ಸದ್ಯಕ್ಕೆ ಹೆಜಮಾಡಿಯಲ್ಲಿ ಹೆಚ್ಚುವರಿ ಸುಂಕ ವಸೂಲಿ ಮಾಡಲಾಗುತ್ತಿಲ್ಲ.</p>



<p>ನವಯುಗ ಸಂಸ್ಥೆಯೊಡನೆ ಸರಕಾರದ ಚೌಕಾಶಿ ಮುಂದುವರೆದಿದೆಯಾದರೂ ಈಗಾಗಲೇ ಜನರ ಕಣ್ಣಲ್ಲಿ ವಿಲನ್‌ ಆಗಿರುವ ಸಂಸ್ಥೆ ಹೆಚ್ಚುವರಿ ಸುಂಕ ವಸೂಲಿ ಮಾಡುವ ಮೂಲಕ ಇನ್ನಷ್ಟು ಜನಾಕ್ರೋಶಕ್ಕೆ ಈಡಾಗಲು ಹೆದರುತ್ತಿದೆ ಎನ್ನುವುದು ಮೂಲಗಳ ಅಭಿಪ್ರಾಯ. </p>



<p>ಎನ್‌ಐಟಿಕೆ ಬಳಿಯ ಟೋಲ್ ಮುಚ್ಚುವುದರಿಂದ ಸರಕಾರಕ್ಕೆ ನಷ್ಟವಾಗಲಿದೆಯೆನ್ನುವುದು ಸದ್ಯದ ಸರಕಾರದ ದೂರು. ಇಲ್ಲಿನ ದರವನ್ನು ಹೆಜಮಾಡಿ ಟೋಲ್‌ನಲ್ಲಿ ಪಡೆಯುವುದು ಸರಕಾರದ ಉದ್ದೇಶವಾಗಿತ್ತು. ಆದರೆ ಅದರ ಬದಲಾಗಿ ಎನ್ಐ‌ಟಿಕೆ ಟೋಲ್‌ನ ಮತ್ತೊಂದು ಟೋಲ್‌ ಬಹ್ಮರಕೂಟ್ಲು, ತಲಪಾಡಿ, ಮತ್ತು ಹೆಜಮಾಡಿ ಸುಂಕದಕಟ್ಟೆಗಳಲ್ಲಿ ದರಗಳನ್ನು ವಿಭಜಿಸಿ ಪಡೆದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗಲಿದೆ. ಹೆಜಮಾಡಿ ಟೋಲ್‌ನಲ್ಲಿ ಹೆಚ್ಚುವರಿಯಾಗಿ 60 ರೂ. ಪಡೆಯುವ ಬದಲು ಈ ಮೂರು ಟೋಲ್‌ಗಳಲ್ಲಿ ತಲಾ 10 ರೂ. ಹೆಚ್ಚುವರಿಯಾಗಿ ಪಡೆದರೆ ಜನರಿಗೆ ಅನುಕೂಲವಾಗುತ್ತದೆಯೆನ್ನುವುದು ಸಾರ್ವಜನಿಕ ಅಭಿಪ್ರಾಯವಾಗಿದೆ. </p>



<p>ನಿನ್ನೆ ಟೋಲ್‌ಗೇಟ್‌ ವಿರೋಧಿ ಸಮಿತಿ ತಡರಾತ್ರಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ನೂರಾರು ಜನರು ಸ್ವಯಂಪ್ರೇರಣೆಯಿಂದ ಪಾಲ್ಗೊಂಡಿದ್ದರು. ಮೇಲಿನಿಂದ ಕೆಳಗಿನವರೆಗೂ ಆಡಳಿತ ಪಕ್ಷದವರೇ ಇದ್ದೂ ಸ್ಥಳೀಯ ರಾಜಕಾರಣಿಗಳಿಗೆ ಇದೊಂದು ಟೋಲ್‌ ತೆರೆಸಲು ಜನರು ಒತ್ತಡ ಹೇರಬೇಕಾಗಿ ಬಂದಿದ್ದು ನಿಜಕ್ಕೂ ವಿಪರ್ಯಾಸ ಎಂದು ಹಿರಿಯ ಹೋರಾಟಗಾರರೊಬ್ಬರು ಅಭಿಪ್ರಾಯಪಟ್ಟರು.</p>
]]></content:encoded>
					
		
		
			</item>
		<item>
		<title>ಸುರತ್ಕಲ್ ಸ್ಮಶಾನಕ್ಕೆ ಸೇರಿದ ಬಿಜೆಪಿ ಫ್ಲೆಕ್ಸ್ ಗಳು ; ಗೊಂದಲಕ್ಕೆ ಬಿದ್ದ ದಕ್ಷಿಣ ಕನ್ನಡ ಬಿಜೆಪಿ</title>
		<link>https://peepalmedia.com/bjp-flexes-belonging-to-suratkal-crematorium-dakshina-kannada-bjp-in-confusion/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 29 Nov 2022 03:42:03 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ದಕ್ಷಿಣ ಕನ್ನಡ]]></category>
		<category><![CDATA[Hejamadi toll]]></category>
		<category><![CDATA[karnataka]]></category>
		<category><![CDATA[muneer katipalla]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Suratkal illegal toll gate]]></category>
		<category><![CDATA[Suratkal toll]]></category>
		<guid isPermaLink="false">https://peepalmedia.com/?p=16858</guid>

					<description><![CDATA[ಸುರತ್ಕಲ್ ಅಕ್ರಮ ಟೋಲ್ ತೆರವಿನ ಆದೇಶ ಹೊರಬರುತ್ತಿದ್ದಂತೆ ಬಿಜೆಪಿ ಬೆಂಬಲಿಗರು ದಕ್ಷಿಣ ಕನ್ನಡ ಸಂಸದರು ಮತ್ತು ಶಾಸಕರಿಗೆ ಅಭಿನಂದನೆ ಸಲ್ಲಿಸುವ ನೂರಾರು ಫ್ಲೆಕ್ಸ್ ಗಳು ಸಿದ್ದಗೊಂಡಿದ್ದವು. ಆದರೆ ಅದೇ ಟೋಲನ್ನು ಹೆಜಮಾಡಿ ಟೋಲ್ ಗೆ ವಿಲೀನಗೊಳಿಸುವ ವಿಚಾರ ತಿಳಿಯುತ್ತಿದ್ದಂತೆ ಮಾಡಿಟ್ಟ ಫ್ಲೆಕ್ಸ್ ಗಳು ಸುರತ್ಕಲ್ ಸ್ಮಶಾನಕ್ಕೆ ಶಿಫ್ಟ್ ಆಗಿವೆ. ಸುರತ್ಕಲ್ ಅಕ್ರಮ ಟೋಲ್ ತೆರವಿಗಾಗಿ ನಡೆಯುತ್ತಿರುವ ಹೋರಾಟ 32 ನೇ ದಿನಕ್ಕೆ ಕಾಲಿಟ್ಟಿದೆ. ನಿರಂತರ ಅಹೋರಾತ್ರಿ ಹೋರಾಟದ ಹಿನ್ನೆಲೆಯಲ್ಲಿ ಹೋರಾಟಕ್ಕೆ ಮಣಿದ ಕೇಂದ್ರ ಹೆದ್ದಾರಿ ಪ್ರಾಧಿಕಾರ, ಟೋಲ್ [&#8230;]]]></description>
										<content:encoded><![CDATA[
<p style="font-size:20px">ಸುರತ್ಕಲ್ ಅಕ್ರಮ ಟೋಲ್ ತೆರವಿನ ಆದೇಶ ಹೊರಬರುತ್ತಿದ್ದಂತೆ ಬಿಜೆಪಿ ಬೆಂಬಲಿಗರು ದಕ್ಷಿಣ ಕನ್ನಡ ಸಂಸದರು ಮತ್ತು ಶಾಸಕರಿಗೆ ಅಭಿನಂದನೆ ಸಲ್ಲಿಸುವ ನೂರಾರು ಫ್ಲೆಕ್ಸ್ ಗಳು ಸಿದ್ದಗೊಂಡಿದ್ದವು. ಆದರೆ ಅದೇ ಟೋಲನ್ನು ಹೆಜಮಾಡಿ ಟೋಲ್ ಗೆ ವಿಲೀನಗೊಳಿಸುವ ವಿಚಾರ ತಿಳಿಯುತ್ತಿದ್ದಂತೆ ಮಾಡಿಟ್ಟ ಫ್ಲೆಕ್ಸ್ ಗಳು ಸುರತ್ಕಲ್ ಸ್ಮಶಾನಕ್ಕೆ ಶಿಫ್ಟ್ ಆಗಿವೆ.</p>



<p style="font-size:20px">ಸುರತ್ಕಲ್ ಅಕ್ರಮ ಟೋಲ್ ತೆರವಿಗಾಗಿ ನಡೆಯುತ್ತಿರುವ ಹೋರಾಟ 32 ನೇ ದಿನಕ್ಕೆ ಕಾಲಿಟ್ಟಿದೆ. ನಿರಂತರ ಅಹೋರಾತ್ರಿ ಹೋರಾಟದ ಹಿನ್ನೆಲೆಯಲ್ಲಿ ಹೋರಾಟಕ್ಕೆ ಮಣಿದ ಕೇಂದ್ರ ಹೆದ್ದಾರಿ ಪ್ರಾಧಿಕಾರ, ಟೋಲ್ ತೆರವು ಮಾಡಲು ಜಿಲ್ಲಾಧಿಕಾರಿಗಳಿಂದ ಆದೇಶ ಹೊರಡಿಸಿದೆ.</p>



<p style="font-size:20px">ಆದರೆ ಆದೇಶದ ಜೊತೆಗೆ ಸುರತ್ಕಲ್ ಟೋಲನ್ನು ಹೆಜಮಾಡಿ ಟೋಲ್ ಜೊತೆಗೆ ವಿಲೀನದ ಸುದ್ದಿ ಹೊರಬರುತ್ತಿದ್ದಂತೆ ಸ್ಥಳೀಯವಾಗಿ ಮತ್ತೆ ಆಕ್ರೋಶ ವ್ಯಕ್ತವಾಗಿದ್ದು, ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರೆ ನಗೆಪಾಟಲು ಮತ್ತು ತಪ್ಪು ಸಂದೇಶ ರವಾನೆಯಾಗುವ ಹಿನ್ನೆಲೆಯಲ್ಲಿ ಎಲ್ಲಾ ಫ್ಲೆಕ್ಸ್ ಗಳನ್ನು ಸುರತ್ಕಲ್ ಸ್ಮಶಾನದಲ್ಲಿ ಅಡಗಿಸಿ ಇಡಲಾಗಿದೆ.</p>



<p style="font-size:20px">ಈ ನಡುವೆ ಬಿಜೆಪಿ ಸಂಸದರಿಗೆ ಮತ್ತು ಸ್ಥಳೀಯ ಬಿಜೆಪಿ ಶಾಸಕರಿಗೆ ಅಭಿನಂದನೆ ಕೋರುವ ನೂರಾರು ಫ್ಲೆಕ್ಸ್ ಗಳ ಬಗ್ಗೆ ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಮುನೀರ್ ಕಾಟಿಪಳ್ಳ ಅವರನ್ನು <strong>ಪೀಪಲ್ ಮೀಡಿಯಾ </strong>ಸಂಪರ್ಕಿಸಿದಾಗ, &#8216;ಟೋಲ್ ತೆರವು ಪ್ರಕ್ರಿಯೆ ನಮ್ಮ ಹೋರಾಟ ಸಮಿತಿಯ ಯಶಸ್ಸಿಗೆ ಸಾಕ್ಷಿ. ಆದರೆ ಸುರತ್ಕಲ್ ಟೋಲನ್ನು ಹೆಜಮಾಡಿ ಟೋಲ್ ಜೊತೆಗೆ ವಿಲೀನ ಮಾಡಿ, ಅಲ್ಲಿನ ಟೋಲ್ ದರವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ನಮ್ಮ ಹೋರಾಟ ಸಮಿತಿ ಖಂಡಿಸುತ್ತದೆ. ಈ ಸಂದರ್ಭದಲ್ಲಿ ಸುರತ್ಕಲ್ ನಲ್ಲಿ ಟೋಲ್ ತೆರವುಗೊಳಿಸಿದ ನಂತರ ಡಿಸೆಂಬರ್ 1 ರಂದು ಸುರತ್ಕಲ್ ನಲ್ಲಿ ನಮ್ಮ ಚಳುವಳಿ ಅಂತ್ಯಗೊಳ್ಳಲಿದೆ. ನಂತರ ಡಿಸೆಂಬರ್ 2 ಕ್ಕೆ ಸುಂಕ ಹೆಚ್ಚಳದ ವಿರುದ್ಧವಾಗಿ ಹೆಜಮಾಡಿಯಲ್ಲಿ ಹೋರಾಟ ಚಾಲನೆ ಪಡೆಯಲಿದೆ&#8217; ಎಂದು ತಿಳಿಸಿದ್ದಾರೆ.</p>



<p style="font-size:20px">ಹಾಗೂ &#8216;ಟೋಲ್ ತೆರವು ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದ ಬಿಜೆಪಿ ಸಂಸದರು ಮತ್ತು ಶಾಸಕರು ಇಲ್ಲಿನ ಜನರನ್ನು ದಡ್ಡರು ಎಂಬುದನ್ನು ಸಾಭೀತುಗೊಳಿಸಲು ಮುಂದಾಗಿದ್ದಾರೆ. ಇದಕ್ಕೆ ಸಾಕ್ಷಿಯೇ ಈ ಅಭಿನಂದನೆ ಸಲ್ಲಿಸುವ ಫ್ಲೆಕ್ಸ್ ಗಳು. ಇಂತಹ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುವ ಫ್ಲೆಕ್ಸ್ ಗಳು ಹೊರ ಬಿದ್ದರೆ ನೇರವಾಗಿ ಜನರಿಗೆ ದ್ರೋಹ ಬಗೆದಂತೆ. ಟೋಲ್ ದರ ಏರಿಕೆ ಬಗ್ಗೆ ಬಿಜೆಪಿಯಲ್ಲೇ ಅಸಮಾಧಾನ ಇದೆ ಎಂಬುದನ್ನು ಫ್ಲೆಕ್ಸ್ ಗಳು ಸ್ಮಶಾನದಲ್ಲಿ ಸಿಕ್ಕಿದ್ದಕ್ಕೆ ಸಾಕ್ಷಿಯಂತಿದೆ. ಇಂತಹ ಅಸಮರ್ಥ ಶಾಸಕರು ಸಂಸದರು ಕರಾವಳಿ ಭಾಗಕ್ಕೆ ಸಿಕ್ಕಿದ್ದು ಇಲ್ಲಿನ ಜನರ ದೌರ್ಭಾಗ್ಯ.&#8217; ಎಂದು ಅಭಿಪ್ರಾಯ ಪಟ್ಟಿದ್ದಾರೆ.</p>



<p style="font-size:20px">ಈಗ ಹೆಜಮಾಡಿ ಟೋಲ್ ಸುಂಕ ಏರಿಕೆಯಿಂದ ಬಿಜೆಪಿ ಪಾಳಯದಲ್ಲೂ ಅಸಮಾಧಾನದ ಬೆಂಕಿ ಹತ್ತಿಕೊಂಡಿದೆ. ಇತ್ತ ಟೋಲ್ ತೆರವಿಗೆ ಅಭಿನಂದನೆಯನ್ನೂ ಸಲ್ಲಿಸಲಾಗದೆ, ಅತ್ತ ಹೆಚ್ಚಳಕ್ಕೆ ವಿರೋಧವನ್ನೂ ಮಾಡಲಾಗದ ಸ್ಥಿತಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದ ಬಿಜೆಪಿ ಮಂದಿ ಬಂದು ನಿಂತದ್ದು ಸ್ಪಷ್ಟವಾಗಿದೆ.</p>
]]></content:encoded>
					
		
		
			</item>
		<item>
		<title>ಪತ್ರಕರ್ತರಿಗೆ ದೀಪಾವಳಿ ಗಿಫ್ಟ್ ಹೆಸರಲ್ಲಿ ಹಣ ಸಂದಾಯ ಪ್ರಕರಣ : ಡಿವೈಎಫ್ಐ ಖಂಡನೆ</title>
		<link>https://peepalmedia.com/case-of-payment-of-money-to-journalists-in-the-name-of-diwali-gift-dyfi-condemns/</link>
		
		<dc:creator><![CDATA[Peepal Media]]></dc:creator>
		<pubDate>Fri, 28 Oct 2022 16:45:54 +0000</pubDate>
				<category><![CDATA[ರಾಜಕೀಯ]]></category>
		<category><![CDATA[cmofkarnataka]]></category>
		<category><![CDATA[DYFI]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[muneer katipalla]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=13395</guid>

					<description><![CDATA[ವಾಡಿಕೆಯಂತೆ ಮುಖ್ಯಮಂತ್ರಿ ಕಛೇರಿಯಿಂದ ದೀಪಾವಳಿ ಗಿಫ್ಟ್ ನಲ್ಲಿ ಆಯ್ದ ಪತ್ರಕರ್ತರಿಗೆ ಎರಡೂವರೆ ಲಕ್ಷ ರೂಪಾಯಿ ಗಿಫ್ಟ್ ಕಳುಹಿಸಿದ ಬಗ್ಗೆ ಇಂದು ಪೀಪಲ್ ಮೀಡಿಯಾ Exclusive ವರದಿ ಮಾಡಿತ್ತು. ಈ ವರದಿಯ ಬೆನ್ನಲ್ಲೇ ಕೆಲವಷ್ಟು ವೆಬ್ ಮಾದ್ಯಮಗಳೂ ಸಹ ವರದಿ ಮಾಡಿ ಸುದ್ದಿ ಎಲ್ಲೆಡೆ ವೈರಲ್ ಕೂಡಾ ಆಗಿತ್ತು. ಹಾಗೆಯೇ ಈಗ ಈ ಬಗ್ಗೆ ಸಾಮಾಜಿಕವಾಗಿ ಎಲ್ಲೆಡೆ ವ್ಯಾಪಕ ಜನಾಕ್ರೋಶ ಕೂಡಾ ವ್ಯಕ್ತವಾಗಿದೆ. ರಾಜ್ಯದ ಮುಖ್ಯಮಂತ್ರಿ ಕಛೇರಿಯಿಂದಲೇ ಭ್ರಷ್ಟಾಚಾರಕ್ಕೆ ಮುಂದಾಗಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ (ಡಿವೈಎಫ್ಐ) ರಾಜ್ಯಾಧ್ಯಕ್ಷ [&#8230;]]]></description>
										<content:encoded><![CDATA[
<p></p>



<p>ವಾಡಿಕೆಯಂತೆ ಮುಖ್ಯಮಂತ್ರಿ ಕಛೇರಿಯಿಂದ ದೀಪಾವಳಿ ಗಿಫ್ಟ್ ನಲ್ಲಿ ಆಯ್ದ ಪತ್ರಕರ್ತರಿಗೆ ಎರಡೂವರೆ ಲಕ್ಷ ರೂಪಾಯಿ ಗಿಫ್ಟ್ ಕಳುಹಿಸಿದ ಬಗ್ಗೆ ಇಂದು <strong>ಪೀಪಲ್ ಮೀಡಿಯಾ </strong>Exclusive ವರದಿ ಮಾಡಿತ್ತು. ಈ ವರದಿಯ ಬೆನ್ನಲ್ಲೇ ಕೆಲವಷ್ಟು ವೆಬ್ ಮಾದ್ಯಮಗಳೂ ಸಹ ವರದಿ ಮಾಡಿ ಸುದ್ದಿ ಎಲ್ಲೆಡೆ ವೈರಲ್ ಕೂಡಾ ಆಗಿತ್ತು. ಹಾಗೆಯೇ ಈಗ ಈ ಬಗ್ಗೆ ಸಾಮಾಜಿಕವಾಗಿ ಎಲ್ಲೆಡೆ ವ್ಯಾಪಕ ಜನಾಕ್ರೋಶ ಕೂಡಾ ವ್ಯಕ್ತವಾಗಿದೆ.</p>



<p>ರಾಜ್ಯದ ಮುಖ್ಯಮಂತ್ರಿ ಕಛೇರಿಯಿಂದಲೇ ಭ್ರಷ್ಟಾಚಾರಕ್ಕೆ ಮುಂದಾಗಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ (ಡಿವೈಎಫ್ಐ) ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮತ್ತು&nbsp; ರಾಜ್ಯ ಸಮಿತಿಯು ಖಂಡನೆ ವ್ಯಕ್ತಪಡಿಸಿ, ತನಿಖೆಗೆ ಆಗ್ರಹಿಸಿದೆ.</p>



<p>ರಾಜ್ಯದ ಜನತೆಯ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುವ ಶಕ್ತಿ ಕೇಂದ್ರವಾಗಬೇಕಾದ ಮುಖ್ಯಮಂತ್ರಿಗಳ ಕಛೇರಿ ಭ್ರಷ್ಟಾಚಾರದ ಕೇಂದ್ರವಾಗಿರುವುದು ಆತಂಕಕಾರಿಯಾಗಿದೆ. ಲೋಕಾಯುಕ್ತ ಸಂಸ್ಥೆ ಇತ್ತ ಗಮನ ಹರಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.</p>



<p>ಇಂದು ಬೆಳಗ್ಗಿನಿಂದ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಕಚೇರಿಯಿಂದ, ಸಚಿವರ ಕಚೇರಿಗಳಿಂದ ರಾಜ್ಯದ ಹಲವು ಪತ್ರಕರ್ತರಿಗೆ ದೀಪಾವಳಿ ಇನಾಮಿನ ಜೊತೆಯಲ್ಲಿ ನಗದು ಹಣವನ್ನು ನೀಡಲಾಗಿದೆ ಎಂಬುದನ್ನು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ನಿಜವಾಗಿ ಘಟಿಸಿದ್ದಲ್ಲಿ ಚುನಾವಣಾ ಪೂರ್ವ ಭ್ರಷ್ಟಾಚಾರ ಎಂದು ಇದನ್ನು ಪರಿಗಣಿಸುವುದು ಕರ್ನಾಟಕದ ಸಾರ್ವಜನಿಕ ಸ್ವಾಸ್ಥ್ಯದ ದೃಷ್ಟಿಯಿಂದ ಅತ್ಯಗತ್ಯ. ತಾವು ತಕ್ಷಣ ಈ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕು ಮತ್ತು ಭ್ರಷ್ಟಾಚಾರ ನಡೆದಿರುವುದು ಹೌದೆಂದಾದರೆ ಆ ಬಗ್ಗೆ ತಕ್ಷಣ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ. ರಾಜ್ಯದ ಆಡಳಿತ ಚುಕ್ಕಾಣಿಯ ಕೇಂದ್ರದ ಈ ನಡೆಯನ್ನು ರಾಜ್ಯದ ಜನತೆ ತೀವ್ರವಾಗಿ ಪ್ರತಿರೋಧಿಸಬೇಕು ಎಂದು ಡಿವೈಎಫ್ಐ ಕರೆ ನೀಡಿದೆ.</p>



<p>ಮುಖ್ಯಮಂತ್ರಿ ಕಛೇರಿಯ ಈ ನಡೆಯನ್ನು ವಿರೋಧಿಸಿ ಹಣ ಹಿಂದಿರುಗಿಸಿದ ಪತ್ರಕರ್ತರು ಹಾಗೂ ಮಾಧ್ಯಮ ಸಂಸ್ಥೆಗಳಿಗೆ ಅಭಿನಂದನೆ ಸಲ್ಲಿಸುತ್ತದೆ ಎಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.</p>
]]></content:encoded>
					
		
		
			</item>
		<item>
		<title>ಸುರತ್ಕಲ್ ಟೋಲ್ ತಕ್ಷಣ ತೆರವಿಗೆ ಆಗ್ರಹಿಸಿ ಅಕ್ಟೋಬರ್ 28ರಿಂದ ಅನಿರ್ಧಿಷ್ಟಕಾಲ ಧರಣಿ</title>
		<link>https://peepalmedia.com/indefinite-sit-in-from-october-28-demanding-immediate-removal-of-suratkal-toll/</link>
		
		<dc:creator><![CDATA[Peepal Media]]></dc:creator>
		<pubDate>Mon, 24 Oct 2022 13:06:00 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mangalore]]></category>
		<category><![CDATA[muneer katipalla]]></category>
		<category><![CDATA[NITK]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=12798</guid>

					<description><![CDATA[ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಬಂಧಿಸಿ ಸರಕಾರ ಪದೇ ಪದೆ ಮಾತು ತಪ್ಪುತ್ತಿದೆ‌. ತೆರವಿನ ತೀರ್ಮಾನ ಆಗಿದೆ ಎಂದು ಅಧಿಕೃತವಾಗಿ ಪ್ರಕಟಿಸುವ ಸರಕಾರ ಹಾಗೂ ಅಧೀನ ಅಧಿಕಾರಿಗಳು ಟೋಲ್ ತೆರವಿಗೆ ಸಂಬಂಧಿಸಿ ವಾರ, ತಿಂಗಳು ಎಂದು ವರ್ಷದಿಂದ ಕಾಲಹರಣ ಮಾಡುತ್ತಿರುವುದು ಜನರ ಸಹನೆಯ ಕಟ್ಟೆ ಒಡೆಯುವಂತೆ ಮಾಡಿದೆ. ಜುಲೈ ತಿಂಗಳ ಆರಂಭದಿಂದ ಇಂದು, ನಾಳೆ ಎಂದು ಜನರನ್ನು ವಂಚಿಸುತ್ತಿರುವುದು ಖಂಡನೀಯ. ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆ ಸಂದರ್ಭ ಜನಾಕ್ರೋಶ ಮುಗಿಲು ಮುಟ್ಟಿದಾಗ ಸ್ವತಹ [&#8230;]]]></description>
										<content:encoded><![CDATA[
<p>ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಬಂಧಿಸಿ ಸರಕಾರ ಪದೇ ಪದೆ ಮಾತು ತಪ್ಪುತ್ತಿದೆ‌. ತೆರವಿನ ತೀರ್ಮಾನ ಆಗಿದೆ ಎಂದು ಅಧಿಕೃತವಾಗಿ ಪ್ರಕಟಿಸುವ ಸರಕಾರ ಹಾಗೂ ಅಧೀನ ಅಧಿಕಾರಿಗಳು ಟೋಲ್ ತೆರವಿಗೆ ಸಂಬಂಧಿಸಿ ವಾರ, ತಿಂಗಳು ಎಂದು ವರ್ಷದಿಂದ ಕಾಲಹರಣ ಮಾಡುತ್ತಿರುವುದು ಜನರ ಸಹನೆಯ ಕಟ್ಟೆ ಒಡೆಯುವಂತೆ ಮಾಡಿದೆ. ಜುಲೈ ತಿಂಗಳ ಆರಂಭದಿಂದ ಇಂದು, ನಾಳೆ ಎಂದು ಜನರನ್ನು ವಂಚಿಸುತ್ತಿರುವುದು ಖಂಡನೀಯ. ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆ ಸಂದರ್ಭ ಜನಾಕ್ರೋಶ ಮುಗಿಲು ಮುಟ್ಟಿದಾಗ ಸ್ವತಹ ಸಂಸದರೇ 20 ದಿನಗಳ ಕಾಲಾವಧಿ ನೀಡುವಂತೆ ಕೋರಿದ್ದಾರೆ. ಆ ಅವಧಿ ನವಂಬರ್ 07 ಕ್ಕೆ ಕೊನೆಗೊಳ್ಳುತ್ತದೆ. ಟೋಲ್ ಮುಚ್ಚುವ ತೀರ್ಮಾನ ಜಾರಿಗೊಳಿಸುವುದು, ನೀಡಿದ ಭರವಸೆಯಂತೆ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ 28 ರಿಂದ ಸುರತ್ಕಲ್ ಟೋಲ್ ಗೇಟ್ ಸಮೀಪ ಬೇಡಿಕೆ ಈಡೇರುವವರಗೆ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ಚದಲ್ಲಿ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿ ನಡೆಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಿರ್ಧರಿಸಿದೆ.</p>



<p>ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಈಗ ಹೋರಾಟ ಸಮಿತಿಯ ಹಾಗೂ ಜೊತೆಗಿರುವ ಸಮಾನ ಮನಸ್ಕ ಸಂಘಟನೆಯ ಹೋರಾಟವಾಗಿ ಮಾತ್ರ ಉಳಿದಿಲ್ಲ. ಅಕ್ಟೋಬರ್ 18 ರಂದು ಎಲ್ಲಾ ರೀತಿಯ ದಮನಗಳ ನಡುವೆಯೂ ಟೋಲ್ ಗೇಟ್ ಮುತ್ತಿಗೆಗೆ ಅಪಾರ ಜನ ಬೆಂಬಲ ದೊರಕಿರುವುದು ಟೋಲ್ ವಿರೋಧಿ ಹೋರಾಟ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸಮಸ್ತ ಜನತೆಯ ಹೋರಾಟವಾಗಿ ಪರಿವರ್ತನೆಗೊಂಡಿರುವುದನ್ನು ಎತ್ತಿತೋರಿಸುತ್ತದೆ. ಇಷ್ಟು ದೊಡ್ಡ ಪ್ರಮಾಣದ ಜನಾಗ್ರಹದ ಹೊರತಾಗಿಯೂ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ಬಿಜೆಪಿ ಸರಕಾರ ಹಾಗೂ ಅವಿಭಜಿತ ದ‌.ಕ‌‌. ಜಿಲ್ಲೆಯ ಸಂಸದ, ಶಾಸಕರುಗಳು ಮುಂದಾಗದಿರುವುದು ಜನಸಾಮಾನ್ಯರ ಬೇಡಿಕೆಗಳ ಕುರಿತು ಅವರಿಗಿರುವ ಅನಾದಾರ, ಅಸಹ‌ನೆಯನ್ನು ಎತ್ತಿತೋರಿಸುತ್ತದೆ ಎನ್ನುವುದು ಹೋರಾಟ ಸಮಿತಿಯ ಅಭಿಪ್ರಾಯ.</p>


<div class="wp-block-image">
<figure class="alignright size-large"><img fetchpriority="high" decoding="async" width="1024" height="461" src="https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-1024x461.jpeg" alt="" class="wp-image-12808" srcset="https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-1024x461.jpeg 1024w, https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-300x135.jpeg 300w, https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-768x346.jpeg 768w, https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-1536x691.jpeg 1536w, https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-150x68.jpeg 150w, https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-696x313.jpeg 696w, https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-1068x481.jpeg 1068w, https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM.jpeg 1600w" sizes="(max-width: 1024px) 100vw, 1024px" /></figure></div>


<p>&#8220;ಇವರುಗಳ ನಡೆಯು ನವಯುಗದಂತಹ ದೈತ್ಯ ಕಂಪೆನಿಗಳ ಹಿತಾಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿರುವುದನ್ನು ಜಾಹೀರು ಪಡಿಸಿದೆ. ಇದು ಖಂಡನೀಯ. ಸಂಸದ ನಳಿನ್ ಕುಮಾರ್ ಕಟೀಲ್ 20 ದಿನಗಳ ಕಾಲಾವಧಿ ಕೋರಿರುವುದು, ಉಳಿದ ಶಾಸಕರುಗಳು ಕನಿಷ್ಟ ಪ್ರತಿಕ್ರಿಯೆಯನ್ನೂ ನೀಡದಿರುವುದು ಟೋಲ್ ಗೇಟ್ ಮುಚ್ಚುವ ತೀರ್ಮಾನ ಜಾರಿಯಾಗುವ ಕುರಿತು ನಮಗೆ ಅನುಮಾನಗಳನ್ನು‌ ಹುಟ್ಟು ಹಾಕಿದೆ. ಮುತ್ತಿಗೆ ಸಂದರ್ಭದ ಬೆಳವಣಿಗೆಗಳು ದೊಡ್ಡ ವಿವಾದವಾಗಿ ಪರಿವರ್ತನೆಗೊಂಡಾಗಲು ಬಾಯಿ ಬಿಚ್ಚದ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಈಗ ದಿಢೀರ್ ಆಗಿ ಟೋಲ್ ಗೇಟ್ ಮುಚ್ಚುವ ಅವಧಿಯನ್ನು ನವಂಬರ್ ತಿಂಗಳ ಕೊನೆಯವರಗೆ ಮುಂದೂಡಿರುವುದು, ಸಂಸದ ನಳಿನ್ ಕುಮಾರ್ ಕಟೀಲ್ ಈ ಕುರಿತು ಪ್ರತಿಕ್ರಿಯಿಸದಿರುವುದು ಸರಕಾರ ಹಾಗೂ ಸಂಸದ, ಶಾಸಕರುಗಳ ಮೇಲಿನ ಭರವಸೆಯನ್ನು ಪೂರ್ತಿ ಕಳಚಿ ಹಾಕಿದೆ. ಆದುದರಿಂದ ಸಂಸದ ನಳಿನ್ ಕೇಳಿದ ಕಾಲಾವಧಿಯಂತೆ ನವಂಬರ್ 07 ರ ಒಳಗಡೆ ಸುರತ್ಕಲ್ ಟೋಲ್ ಗೇಟ್ ಸುಲಿಗೆಗೆ ಅಂತ್ಯ ಹಾಡುವಂತೆ ಒತ್ತಾಯಿಸಿ ಹಗಲು ರಾತ್ರಿ ಧರಣಿ ಆರಂಭಿಸುತ್ತಿದ್ದೇವೆ,&#8221; ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.</p>



<p>&#8220;ಅವಿಭಜಿತ ಜಿಲ್ಲೆಯ ಸಂಸದರು, ಶಾಸಕರುಗಳು ಮನಸ್ಸು ಮಾಡಿದರೆ ಸುರತ್ಕಲ್ ಟೋಲ್ ಗೇಟ್ ತೆರವು 24 ಗಂಟೆಯ ಅವಧಿಯಲ್ಲಿ ನಿಯಮಬದ್ದವಾಗಿಯೇ ಆಗಿಹೋಗುತ್ತದೆ.‌ ಆದರೆ ವ್ಯಾಪಾರಿ ಹಿತಾಸಕ್ತಿಗಳ ಪರವಹಿಸಿ ಜನವಿರೋಧಿ ನಿಲುವುಗಳಿಗೇ ಅಂಟಿಕೊಂಡಿರುವ ಜನಪ್ರತಿನಿಧಿಗಳು ಜನಾಭಿಪ್ರಾಯವನ್ನು ತಿರಸ್ಕರಿಸುತ್ತಿದ್ದಾರೆ. ನವಯುಗ್ ಕಂಪೆನಿಯ ಬಾಹುಗಳಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಬಂಧಿಯಾಗಿದ್ದಾರೆ, ಜನತೆಗಿಂತ ಕಂಪೆನಿಗಳಿಗೆ ಪೂರ್ತಿನಿಷ್ಟರಾಗಿದ್ದಾರೆ ಎಂಬುದು ಇವರ ಈಗಿನ ನಡವಳಿಕೆಯಿಂದ ಹೆಚ್ಚು ಸ್ಪಷ್ಟವಾಗುತ್ತಿದೆ.&#8221; ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<p><strong>ಪೊಲೀಸ್ ಕೇಸು ವಾಪಸಾತಿಗೆ ಆಗ್ರಹ</strong></p>



<p>ಟೋಲ್ ಗೇಟ್ ಮುತ್ತಿಗೆ ಶಾಂತಿಯುತವಾಗಿ ನಡೆದಿದ್ದರೂ ಶಾಸಕ, ಸಂಸದರುಗಳ ಕುಮ್ಮಕ್ಕಿನಿಂದ ಟೋಲ್ ಗುತ್ತಿಗೆದಾರರ ಮೂಲಕ ಬಿಜೆಪಿ ಸಂಸದ, ಶಾಸಕರುಗಳು ಹೋರಾಟ ಸಮಿತಿಯ ಮೇಲೆ ಎರಡು ಮೊಕದ್ದಮೆಗಳನ್ನು ಹೂಡಿಸಿದ್ದಾರೆ. ಇಂತಹ ಮೊಕದ್ದಮೆ, ಪೊಲೀಸ್ ಬಲಪ್ರಯೋಗದಿಂದ ಹೋರಾಟವನ್ನು ಹಿಮ್ಮೆಟ್ಟಿಸಲು ಸಾಧ್ಯವಿಲ್ಲ. ಟೋಲ್ ಗೇಟ್ ಮುಚ್ಚುವುದು ಮಾತ್ರ ಹೋರಾಟ ಕೊನೆಗೊಳಿಸಲು ಇರುವ ದಾರಿ. ಆಧಾರರಹಿತ ಸುಳ್ಳು ಮೊಕದ್ದಮೆಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ನಾವು ಇದೇ ಸಂದರ್ಭ ಆಗ್ರಹಿಸುತ್ತಿದ್ದೇವೆ. ಬದಲಿಗೆ ಸುಳ್ಳು ಮೊಕದ್ದಮೆಯ ಆಧಾರದಲ್ಲಿ ಹೋರಾಟಗಾರರನ್ನು ಬಂಧಿಸಲು ಮುಂದಾದರೆ ನಾವು ಜೈಲು ಸೇರಲು ಸಿದ್ದರಾಗಿದ್ದೇವೆ. ಈ ಕುರಿತು ಕಾನೂನು ಹೋರಾಟಕ್ಕೆ ನಮ್ಮ ಜೊತೆಗಿರುವ ಜನಪರ ವಕೀಲರ ವೇದಿಕೆ ಸಿದ್ದತೆ ನಡೆಸುತ್ತಿದೆ.</p>



<p><strong>ಜನತೆಯಲ್ಲಿ ಮನವಿ</strong></p>



<p>&#8220;ಟೋಲ್ ಗೇಟ್ ವಿರೋಧಿ ಹೋರಾಟ ಪಕ್ಷಾತೀತವಾಗಿ ನಡೆಯುತ್ತಿದೆ.‌ ದ.ಕ. ಉಡುಪಿ ಜಿಲ್ಲೆಗಳ ಒಕ್ಕೊರಲ ಜನಾಭಿಪ್ರಾಯವನ್ನು ಈ ಹೋರಾಟದಲ್ಲಿ ಕ್ರೋಢೀಕರಿಸುವ ಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತಿದೆ. ಟೋಲ್ ಗೇಟ್ ತೆರವುಗೊಳ್ಳದೆ ನಮ್ಮ ಹೋರಾಟ ನಿಲ್ಲದು. ಜನತೆ ಇಟ್ಟಿರುವ ನಂಬಿಕೆಯನ್ನು ಹುಸಿಗೊಳಿಸದು. ಹಗಲು ರಾತ್ರಿ ಅನಿರ್ಧಿಷ್ಟಾವಧಿ ಧರಣಿಯನ್ನು ಯಶಸ್ಸುಗೊಳಿಸಲು ಜನತೆ ಒಗ್ಗಟ್ಟಿನ ಬೆಂಬಲ ನೀಡಬೇಕು ಎಂದು ವಿನೀತವಾಗಿ ಮನವಿ ಮಾಡುತ್ತಿದ್ದೇವೆ.&#8221; ಎಂದು ಸಮಿತಿ ತನ್ನ ಮನವಿಯಲ್ಲಿ ತಿಳಿಸಿದೆ.</p>



<p>ಪತ್ರಿಕಾ ಗೋಷ್ಟಿಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಇದರ ಸಂಚಾಲಕರಾದ ಮುನೀರ್‌ ಕಾಟಿಪಳ್ಳ, ವಿವಿಧ ಸಂಘಟನೆಗಳ ದಿನೇಶ್ ಹೆಗ್ಡೆ ಉಳೆಪಾಡಿ, ಪುರುಷೋತ್ತಮ ಚಿತ್ರಾಪುರ, ರಘು ಎಕ್ಕಾರು, ಶೇಖರ ಹೆಜಮಾಡಿ, ಕಿಶನ್ ಹೆಗ್ಡೆ ಕೊಲ್ಕೆಬೈಲು, ದಿನೇಶ್ ಕುಂಪಲ, ಬಿ ಕೆ ಇಮ್ತಿಯಾಜ್, ಮುಹಮ್ಮದ್ ಕುಂಜತ್ತಬೈಲ್, ಪ್ರತಿಭಾ ಕುಳಾಯಿ, ದಯಾನಂದ ಶೆಟ್ಟಿ, ಶ್ರೀನಾಥ್ ಕುಲಾಲ್, ರಮೇಶ್ ಟಿ ಎನ್. ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.</p>
]]></content:encoded>
					
		
		
			</item>
		<item>
		<title>ಸುರತ್ಕಲ್‌ ಟೋಲ್‌ ಗೇಟ್‌ ವಿರುದ್ಧದ ಹೋರಾಟ: ನೂರಾರು ಹೋರಾಟಗಾರರ ಬಂಧನ</title>
		<link>https://peepalmedia.com/nitk-suratkal-protest-leaders-arrested/</link>
		
		<dc:creator><![CDATA[Peepal Media]]></dc:creator>
		<pubDate>Tue, 18 Oct 2022 06:16:34 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mithunrail]]></category>
		<category><![CDATA[muneer katipalla]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[pratibha kulai]]></category>
		<category><![CDATA[sorake]]></category>
		<category><![CDATA[suratkal]]></category>
		<guid isPermaLink="false">https://peepalmedia.com/?p=11693</guid>

					<description><![CDATA[ಸುರತ್ಕಲ್:‌ ಇಂದು ನಡೆದ ಟೋಲ್‌ ಗೇಟ್‌ ವಿರೋಧಿ ಹೋರಾಟದ ಸಮಯದಲ್ಲಿ ಸರಕಾರವು ಮಿಥುನ್‌ ರೈ, ಮುನೀರ್‌ ಕಾಟಿಪಳ್ಳ, ಪ್ರತಿಭಾ ಕುಳಾಯಿ ಸೇರಿದಂತೆ ನೂರಾರು ಹೋರಾಟಗಾರರನ್ನು ಬಂಧಿಸಿ ವಶಕ್ಕೆ ಪಡೆದಿದೆ. ಹಲವು ದಿನಗಳಿಂದ ಜನಸಾಮಾನ್ಯರ ನಡುವೆ ಚರ್ಚೆಯಲ್ಲಿದ್ದ ಪ್ರಮುಖ ನಾಯಕರುಗಳ ಬೆಂಬಲ ಪಡೆದಿದ್ದ ಹೋರಾಟಕ್ಕೆ ನೂರಾರು ಸಂಖ್ಯೆಯಲ್ಲಿ ಜನರು ಒಗ್ಗೂಡಿದ್ದರು. ಆಡಳಿತವು ಸಹ ನಿನ್ನೆಯಿಂದಲೇ ನೂರಾರು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಹೋರಾಟವನ್ನು ಹತ್ತಿಕ್ಕಲು ಬೇಕಿದ್ದ ವ್ಯವಸ್ಥೆಯನ್ನು ಮಾಡಿಕೊಂಡಿತ್ತು. ಬಂಧನದ ಕುರಿತು ಆಕ್ರೋಶ ವ್ಯಕ್ತಪಡಿಸುತ್ತಿರುವ ಹೋರಾಟಗಾರರು, ʼಒಂದು ಟೋಲ್ಗೇಟ್‌ ಅನಧಿಕೃತವೆಂದು [&#8230;]]]></description>
										<content:encoded><![CDATA[
<p>ಸುರತ್ಕಲ್:‌ ಇಂದು ನಡೆದ ಟೋಲ್‌ ಗೇಟ್‌ ವಿರೋಧಿ ಹೋರಾಟದ ಸಮಯದಲ್ಲಿ ಸರಕಾರವು ಮಿಥುನ್‌ ರೈ, ಮುನೀರ್‌ ಕಾಟಿಪಳ್ಳ, ಪ್ರತಿಭಾ ಕುಳಾಯಿ ಸೇರಿದಂತೆ ನೂರಾರು ಹೋರಾಟಗಾರರನ್ನು ಬಂಧಿಸಿ ವಶಕ್ಕೆ ಪಡೆದಿದೆ.</p>



<p>ಹಲವು ದಿನಗಳಿಂದ ಜನಸಾಮಾನ್ಯರ ನಡುವೆ ಚರ್ಚೆಯಲ್ಲಿದ್ದ ಪ್ರಮುಖ ನಾಯಕರುಗಳ ಬೆಂಬಲ ಪಡೆದಿದ್ದ ಹೋರಾಟಕ್ಕೆ ನೂರಾರು ಸಂಖ್ಯೆಯಲ್ಲಿ ಜನರು ಒಗ್ಗೂಡಿದ್ದರು. ಆಡಳಿತವು ಸಹ ನಿನ್ನೆಯಿಂದಲೇ ನೂರಾರು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಹೋರಾಟವನ್ನು ಹತ್ತಿಕ್ಕಲು ಬೇಕಿದ್ದ ವ್ಯವಸ್ಥೆಯನ್ನು ಮಾಡಿಕೊಂಡಿತ್ತು.</p>



<p>ಬಂಧನದ ಕುರಿತು ಆಕ್ರೋಶ ವ್ಯಕ್ತಪಡಿಸುತ್ತಿರುವ ಹೋರಾಟಗಾರರು, ʼಒಂದು ಟೋಲ್ಗೇಟ್‌ ಅನಧಿಕೃತವೆಂದು ನೀವೇ ಒಪ್ಪಿಕೊಂಡೂ ಅದನ್ನು ತೆಗೆದು ಹಾಕಲಾಗದ ನಿಮ್ಮ ಅಸಹಾಯಕತೆಗೆ ನಮಗೆ ನಾಚಿಕೆಯಾಗುತ್ತಿದೆ, ಜನರು ನಿಮ್ಮನ್ನು ನಂಬಿ ಹೇಗೆ ಬದುಕುವುದು,&#8221; ಎಂದು ಪ್ರಶ್ನಿಸಿ ಆಕ್ರೋಶ ಹೊರಹಾಕುತ್ತಿದ್ದ ದೃಶ್ಯ ಸ್ಥಳದಲ್ಲಿ ಕಂಡುಬರುತ್ತಿತ್ತು.</p>



<p>ದೈತ್ಯ ಕಂಪನಿಯೊಂದರ ಎದುರು ಮಂಡಿಯೂರಿ ಜನರ ಶಾಂತಿಯುತ ಹೋರಾಟವನ್ನು ಹತ್ತಿಕ್ಕುತ್ತಿರುವುದು ನಾಚಿಕೆಗೇಡು ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹೋರಾಟ ನಿಲ್ಲುವುದಿಲ್ಲ, ಇಂದು ನೀವು ಐನೂರು ಜನರನ್ನು ಬಂಧಿಸಿರಬಹುದು ಆದರೆ ನಾಳೆ ಇಲ್ಲಿ ಸಾವಿರ ಸಂಖ್ಯೆಯಲ್ಲಿ ಜನ ಬರಲಿದ್ದಾರೆ, ಇದು ಜನರ ಹೋರಾಟ ನೀವಿದನ್ನು ತಡೆಯಲಾರಿ ಎಂದು ನಾಯಕೊರಬ್ಬರು ಕಿಡಿಕಾರಿದರು. ಸ್ಥಳದಲ್ಲಿ ಮೊಹಮದ್ದ ಬಾವಾ ವಿನಯ್‌ ಕುಮಾರ್‌ ಸೊರಕೆ ಸೇರಿದಂತೆ ಹಲವು ರಾಜಕೀಯ ಮತ್ತು ಜನಪರ ಸಂಘಟನೆಗಳಿಗೆ ಸೇರಿದ ನಾಯಕರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಅಧಿಕಾರಿಗಳು ರಾತ್ರಿ ವೇಳೆ‌ ಹೋರಾಟಗಾರರ ಮನೆಗೆ ಹೋಗಿ ನೋಟಿಸ್‌ ನೀಡಿದ್ದರೆ ಅದು ತಪ್ಪು: ಕಟೀಲ್</title>
		<link>https://peepalmedia.com/it-was-wrong-if-officials-went-to-the-house-of-the-protesters-at-night-kateel/</link>
		
		<dc:creator><![CDATA[Peepal Media]]></dc:creator>
		<pubDate>Mon, 17 Oct 2022 07:50:24 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[bjp]]></category>
		<category><![CDATA[kannada]]></category>
		<category><![CDATA[MP]]></category>
		<category><![CDATA[muneer katipalla]]></category>
		<category><![CDATA[Naleen kumar katil]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[state politics]]></category>
		<category><![CDATA[state president]]></category>
		<category><![CDATA[suratkal]]></category>
		<category><![CDATA[tollgate]]></category>
		<guid isPermaLink="false">https://peepalmedia.com/?p=11379</guid>

					<description><![CDATA[ಮಂಗಳೂರು : ಟೋಲ್‌ ಹೋರಾಟಕ್ಕೆ ಸಂಬಂಧಿಸಿದಂತೆ ಪೊಲೀಸರು ತಡ ರಾತ್ರಿ ಮನೆಗೆ ತೆರಳಿ ನೋಟಿಸ್‌ ನೀಡಿದ್ದು ನಮ್ಮ ಗಮನಕ್ಕೆ ಬಂದಿಲ್ಲ, ಹಾಗೊಂದು ವೇಳೆ ಅವರು ಆ ರೀತಿ ನೀಡಿದ್ದರೆ ಅದು ತಪ್ಪೆಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ. ನಗರದಲ್ಲಿ ಇಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಟೋಲ್ಗೇಟ್‌ ತೆರವುಗೊಳಿಸುವುದು ಕೆಲವು ತಾಂತ್ರಿಕ ಕಾರಣಗಳಿಂದ ತಡವಾಗಿದೆ. ಆದರೆ ಪ್ರಕ್ರಿಯೆ ನಡೆಯುತ್ತಿದೆ. ಅದಕ್ಕೆ ಸಂಬಂಧಪಟ್ಟವರ ಜೊತೆ ಮಾತನಾಡಲಾಗುತ್ತಿದೆ ಎಂದ ಅವರು, ಹೋರಾಟಗಾರರ ಹೋರಾಟಕ್ಕೆ ನಮ್ಮ ಯಾವುದೇ ಆಕ್ಷೇಪವಿಲ್ಲ. [&#8230;]]]></description>
										<content:encoded><![CDATA[
<p>ಮಂಗಳೂರು : ಟೋಲ್‌ ಹೋರಾಟಕ್ಕೆ ಸಂಬಂಧಿಸಿದಂತೆ ಪೊಲೀಸರು ತಡ ರಾತ್ರಿ ಮನೆಗೆ ತೆರಳಿ ನೋಟಿಸ್‌ ನೀಡಿದ್ದು ನಮ್ಮ ಗಮನಕ್ಕೆ ಬಂದಿಲ್ಲ, ಹಾಗೊಂದು ವೇಳೆ ಅವರು ಆ ರೀತಿ ನೀಡಿದ್ದರೆ ಅದು ತಪ್ಪೆಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ. </p>



<p>ನಗರದಲ್ಲಿ ಇಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಟೋಲ್ಗೇಟ್‌ ತೆರವುಗೊಳಿಸುವುದು ಕೆಲವು ತಾಂತ್ರಿಕ ಕಾರಣಗಳಿಂದ ತಡವಾಗಿದೆ. ಆದರೆ ಪ್ರಕ್ರಿಯೆ ನಡೆಯುತ್ತಿದೆ. ಅದಕ್ಕೆ ಸಂಬಂಧಪಟ್ಟವರ ಜೊತೆ ಮಾತನಾಡಲಾಗುತ್ತಿದೆ ಎಂದ ಅವರು, ಹೋರಾಟಗಾರರ ಹೋರಾಟಕ್ಕೆ ನಮ್ಮ ಯಾವುದೇ ಆಕ್ಷೇಪವಿಲ್ಲ. ನಾವು ಅವರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವನ್ನು ಮಾಡುವುದಿಲ್ಲ ಎಂದಿದ್ದಾರೆ. </p>



<p>ತಾಂತ್ರಿಕ ಕಾರಣಗಳಿಂದಾಗಿ ನಮಗೆ ಟೋಲ್‌ಗೇಟ್‌ ತೆರವುಗೊಳಿಸಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಹೋರಾಟಗಾರರು ನಮ್ಮನ್ನು ಅರ್ಥಮಾಡಿಕೊಂಡು ನಮ್ಮೊಡನೆ ಸಹಕರಿಸಬೇಕೆಂದು ಮನವಿ ಮಾಡುತ್ತೇವೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.</p>



<p>ನಳಿನ್‌ ಕುಮಾರ್‌ ಕಟೀಲ್‌ ಅವರ ಮಾತುಗಳಿಗೆ ಪ್ರತಿಕ್ರಿಯೆಯಾಗಿ, ಟೋಲ್‌ಗೇಟ್‌ ವಿರೋಧಿ ಹೋರಾಟ ಸಮಿತಿಯ ನಾಯಕರಾದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಅವರು &#8220;<strong>ಪೀಪಲ್‌ ಮೀಡಿಯಾ</strong>&#8220;ದೊಂದಿಗೆ ಮಾತನಾಡುತ್ತಾ, &#8220;ನಳಿನ್‌ ಕುಮಾರ್‌ ಅವರು ಹಿಂದೆಯೂ ತಮ್ಮ ಮಾತುಗಳನ್ನು ಉಳಿಸಿಕೊಂಡಿದ್ದಿಲ್ಲ, ಮುಂದೆಯೂ ಉಳಿಸಿಕೊಳ್ಳುತ್ತಾರೆನ್ನುವ ನಂಬಿಕೆಯೂ ನಮಗಿಲ್ಲ. ಅವರು ನಂಬಿಕೆಗೆ ಅರ್ಹರಲ್ಲ ಎಂದು ಹೇಳಿದರು. ನಿನ್ನೆ ಹದಿನೈದು ದಿನಗಳಲ್ಲಿ ತೆರವುಗೊಳಿಸುವುದಾಗಿ ಹೇಳಿದ್ದ ಅವರು, ಇವತ್ತು ಇಪ್ಪತ್ತು ದಿನ ಎನ್ನುತ್ತಿದ್ದಾರೆ. ನಾಳೆ ಅವರು ಇಪತ್ತು ವಾರ ಆಗುತ್ತದೆ ಎಂದರೂ ಅಚ್ಚರಿಯಿಲ್ಲ. ಇಂತಹ ಗಳಿಗೆಗೆ ಒಂದನ್ನು ಹೇಳುವವರ ಮಾತನ್ನು ನಂಬಲು ಸಾಧ್ಯವಿಲ್ಲ ಎಂದರು.</p>



<p>ಮುಂದುವರೆದು ಮಾತನಾಡಿದ ಅವರು, &#8220;ಬಿಜೆಪಿ ಪಕ್ಷದ ನಾಯಕ ನಮಗೆ ಶಾಂತಿಯ ಪಾಠ ಮಾಡುವುದು ಅತಿ ದೊಡ್ಡ ವ್ಯಂಗ್ಯವಾಗಿದೆ, ನಾವು ಎಂದೂ ಶಾಂತಿಗೆ ಭಂಗ ಬರುವಂತಹ ಹೋರಾಟ ಮಾಡುವವರಲ್ಲ, ಅದೇನಿದ್ದರೂ ಬಿಜೆಪಿಯ ಕೆಲಸ,&#8221; ಎಂದು ಕಟಕಿಯಾಡಿದರು.</p>



<p>ನವಯುಗ ಕಂಪನಿ ಒಪ್ಪಂದಕ್ಕಿಂತಲೂ ಹೆಚ್ಚು ಟೋಲ್ ಹಣ ವಸೂಲಿ ಮಾಡಲು ಪ್ರಯತ್ನಿಸುತ್ತಿದೆ.‌ ಈ ಟೋಲ್‌ ತೆಗೆದರೆ ಅವರಿಗೆ ಆದಾಯ ಕಡಿಮೆಯಾಗುವ ಆತಂಕವಿದೆ ಹೀಗಾಗಿ ಅವರು ಟೋಲ್‌ ತೆರವಿಗೆ ಸಹಕರಿಸುತ್ತಿಲ್ಲ. ಇಂತಹ ದೈತ್ಯ ಕಂಪನಿಯಾದ ನವಯುಗವನ್ನು ನಿಯಂತ್ರಿಸಲಾಗದ ಅಸಹಾಯಕ ನಳಿನ್‌ ಕುಮಾರ್‌ ಅವರ ಮಾತುಗಳನ್ನು ಕಟ್ಟಿಕೊಂಡು ನಾವು ಹೋರಾಟ ನಿಲ್ಲಿಸಲು ಸಾಧ್ಯವಿಲ್ಲ. ನಮ್ಮ ಹೋರಾಟ ನಡೆದೇ ನಡೆಯುತ್ತದೆ. ಟೋಲ್‌ಗೇಟ್‌ ತೆರವುಗೊಳ್ಳುವವರೆಗೂ ನಮ್ಮ ಹೋರಾಟ ನಿಲ್ಲುವ ಪ್ರಶ್ನೆಯೇ ಇಲ್ಲವೆಂದು ಅವರು ಪುನರುಚ್ಛರಿಸಿದರು. </p>
]]></content:encoded>
					
		
		
			</item>
		<item>
		<title>18ನೇ ತಾರೀಖಿನ ಟೋಲ್‌ ಮುತ್ತಿಗೆ ಪ್ರತಿಭಟನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ವಕೀಲ ದಿನೇಶ್‌ ಹೆಗ್ಡೆ ಉಳೆಪಾಡಿ</title>
		<link>https://peepalmedia.com/18th-toll-siege-protest-will-not-stop-for-any-reason-advocate-dinesh-hegde/</link>
		
		<dc:creator><![CDATA[Peepal Media]]></dc:creator>
		<pubDate>Sun, 16 Oct 2022 04:02:47 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[dinesh hegde ulepadi]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mangalore]]></category>
		<category><![CDATA[muneer katipalla]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=11029</guid>

					<description><![CDATA[ಮಂಗಳೂರು: ಸುರತ್ಕಲ್‌ ಟೋಲ್‌ ಗೇಟಿಗೆ ಸಂಬಂಧಿಸಿದ ಪ್ರತಿಭಟನೆಯು ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಅದರ ಬಿಸಿ ಆಡಳಿತಕ್ಕೆ ತಟ್ಟುತ್ತಿರುವುದರ ಸೂಚನೆಯೂ ದೊರಕಿದೆ. ನಿನ್ನೆ ತಡರಾತ್ರಿ ಪ್ರತಿಭಟನೆಯ ಮುಂಚೂಣಿಯಲ್ಲಿರುವ ನಾಯಕರ ಬಂಧನಕ್ಕೆ ಆಡಳಿತ ಪ್ರಯತ್ನಿಸಿದ್ದು ಇದರ ಒಂದು ಭಾಗ ಎನ್ನುವುದು ಎಂತಹವರಿಗೂ ಅರ್ಥವಾಗುವ ಸಂಗತಿಯಾಗಿದೆ. ನಿನ್ನೆಯ ದಾಳಿಯ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರ ಮತ್ತು ವಕೀಲರೂ ಆಗಿರುವ ದಿನೇಶ್‌ ಹೆಗ್ಡೆ ಉಳೆಪಾಡಿ ತಮ್ಮ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅವರು ತಮ್ಮ ಹೇಳಿಕೆಯಲ್ಲಿ ಆಡಳಿದ ಯಾವುದೇ ದಬ್ಬಾಳಿಕೆಗೂ ಜಗ್ಗದೆ ಹೋರಾಟವನ್ನು ನಿಗದಿತ ದಿನದಂದು [&#8230;]]]></description>
										<content:encoded><![CDATA[
<p>ಮಂಗಳೂರು: ಸುರತ್ಕಲ್‌ ಟೋಲ್‌ ಗೇಟಿಗೆ ಸಂಬಂಧಿಸಿದ ಪ್ರತಿಭಟನೆಯು ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಅದರ ಬಿಸಿ ಆಡಳಿತಕ್ಕೆ ತಟ್ಟುತ್ತಿರುವುದರ ಸೂಚನೆಯೂ ದೊರಕಿದೆ. ನಿನ್ನೆ ತಡರಾತ್ರಿ ಪ್ರತಿಭಟನೆಯ ಮುಂಚೂಣಿಯಲ್ಲಿರುವ ನಾಯಕರ ಬಂಧನಕ್ಕೆ ಆಡಳಿತ ಪ್ರಯತ್ನಿಸಿದ್ದು ಇದರ ಒಂದು ಭಾಗ ಎನ್ನುವುದು ಎಂತಹವರಿಗೂ ಅರ್ಥವಾಗುವ  ಸಂಗತಿಯಾಗಿದೆ.</p>



<p>ನಿನ್ನೆಯ ದಾಳಿಯ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರ ಮತ್ತು ವಕೀಲರೂ ಆಗಿರುವ ದಿನೇಶ್‌ ಹೆಗ್ಡೆ ಉಳೆಪಾಡಿ ತಮ್ಮ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅವರು ತಮ್ಮ ಹೇಳಿಕೆಯಲ್ಲಿ ಆಡಳಿದ ಯಾವುದೇ ದಬ್ಬಾಳಿಕೆಗೂ ಜಗ್ಗದೆ ಹೋರಾಟವನ್ನು ನಿಗದಿತ ದಿನದಂದು ನಡೆಸಿಯೇ ನಡೆಸುತ್ತೇವೆ ಎಂದಿದ್ದಾರೆ. </p>



<p>ಅವರ ಹೇಳಿಕೆ ಈ ಕೆಳಗಿನಂತಿದೆ.</p>



<p>ನಾವು ನಿರೀಕ್ಷಿಸಿದಂತೆ ಸುರತ್ಕಲ್ ನ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟವನ್ನು ನಿಲ್ಲಿಸಲು ಪೊಲೀಸರು ಶತಾಯ ಗತಾಯ ಪ್ರಯತ್ನಿಸುತ್ತಿದ್ದಾರೆ.<br>ನಾಗರಿಕರು ಹೋರಾಟ ಮಾಡುವಾಗ ಜನಪ್ರತಿನಿಧಿಗಳು ಬಂದು ಸಮಸ್ಯೆಯನ್ನು ಪರಿಹಾರಕ್ಕೆ ಪ್ರಯತ್ನಿಸ ಬೇಕಿತ್ತು.<br>ಜಿಲ್ಲೆಯ ಜನರು ಅಕ್ರಮ ಟೋಲ್ ಗೇಟ್ ತೆಗೆಯಿರಿ ಎಂದು ಪ್ರಜಾಸಾತ್ತಾತ್ಮಕ ರೀತಿಯಲ್ಲಿ ಬೇಡಿಕೆ ಇಟ್ಟರೆ, ನಮ್ಮ ಶಾಸಕರುಗಳು ಜನರ ಎದುರು ಬರಲು ಧೈರ್ಯ ಇಲ್ಲದೆ ಪೊಲೀಸರನ್ನು ಛೂ ಬಿಡುತ್ತಿದ್ದಾರೆ.<br>ಪೋಲೀಸರ ಮುಖಾಂತರ ಹೂರಾಟಗಾರರನ್ನು ಕರೆದು ರಾಜಿ ಸಂಧಾನಕ್ಕೆ ಪ್ರಯತ್ನಿಸುತ್ತಾರೆ.<br>ಪೋಲೀಸರ ಮೂಲಕ ಸಮಯವಕಾಶ ಕೋರುತ್ತಾರೆ.<br>ಅದ್ಯಾವುದಕ್ಕೂ ಬಗ್ಗದೆ ಇದ್ದಾಗ ಪೋಲೀಸರ ಮೂಲಕ ಶಾಂತಿ ಭಂಗ ಆಗುತ್ತಿದೆ ಎಂದು ನೆಪ ಒಡ್ಡಿ ಹೋರಾಟಗಾರರ ಮನೆಗೆ ರಾತ್ರಿ ಹನ್ನೆರಡು ಗಂಟೆಗೆ ಪೊಲೀಸರನ್ನು ಕಳಿಸಿ section 107 crpc ನೋಟೀಸ್ ಜ್ಯಾರಿಗೊಳಿಸುತ್ತಾರೆ.<br>ಹೋರಾಟಗಾರರು ಇಂತಹ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ.<br>ಅಕ್ರಮ ಟೋಲ್ ಗೇಟ್ ನಿಲ್ಲಲೇ ಬೇಕು.<br>ಶಾಸಕರುಗಳು ಅಕ್ರಮ ಟೋಲ್ ಗೇಟ್ ರಕ್ಷಿಸಲು ಕಟ್ಟಿಬದ್ದಾರಾಗಿ ನಿಂತಿದ್ದಾರೆ.<br>ಈ ಹೋರಾಟ ಕರಾವಳಿ ಜಿಲ್ಲೆಯ ನಾಗರಿಕರು ಮತ್ತು ಅಕ್ರಮ ದಂದೆ ನಡೆಸುವ ಶಾಸಕ, ಸಂಸದರ ಮದ್ಯೆ ಆಗಿದೆ.<br>ನ್ಯಾಯ ಅನ್ಯಾಯದ ವಿರುದ್ಧ ಆಗಿದೆ.<br>ಅಕ್ರಮ ದಂದೆಯ ವಿರುದ್ಧ ಆಗಿದೆ.<br>ಜಿಲ್ಲೆಯ ಎಲ್ಲಾ ನಾಗರಿಕರು ಈ ಪ್ರತಿಭಟನೆಯ ನಾಯಕರು.<br>ಅಕ್ಟೋಬರ್ 18ಕ್ಕೆ ನಿರ್ಧಾರವಾದ ಪ್ರತಿಭಟನೆ ಯಾವುದೇ ಬದಲಾವಣೆ ಇಲ್ಲದೆ ನಡೆಯುತ್ತದೆ.</p>



<p>ದಿನೇಶ್ ಹೆಗ್ಡೆ ಉಳೆಪಾಡಿ<br>ವಕೀಲರು</p>
]]></content:encoded>
					
		
		
			</item>
		<item>
		<title>ಮಸೂದ್ ಮನೆಗೂ ಭೇಟಿ ನೀಡಿ: ಡಿವೈಎಫ್ಐ ಆಗ್ರಹ</title>
		<link>https://peepalmedia.com/masud-manegu-beeti-needi-dyfi-agraha/</link>
		
		<dc:creator><![CDATA[Peepal Media]]></dc:creator>
		<pubDate>Thu, 28 Jul 2022 12:37:24 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[BASAVARAJ BOMMAYI]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[mangalore]]></category>
		<category><![CDATA[mohamad masud]]></category>
		<category><![CDATA[muneer katipalla]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[praveen nettaru]]></category>
		<guid isPermaLink="false">https://peepalmedia.com/?p=204</guid>

					<description><![CDATA[ಮಂಗಳೂರು: &#160;ಬೊಮ್ಮಾಯಿಯವರು ಕರ್ನಾಟಕ ರಾಜ್ಯಕ್ಕೆ ಮುಖ್ಯಮಂತ್ರಿ. ಆರು ಕೋಟಿ ಕನ್ನಡಿಗರಿಗೂ ಅವರೇ ಮುಖ್ಯಮಂತ್ರಿ. ಬಿಜೆಪಿ ಪಕ್ಷದವರಿಗೆ, ಒಂದು ಮತ ಧರ್ಮಕ್ಕೆ ಮಾತ್ರ ಮುಖ್ಯಮಂತ್ರಿ ಅಲ್ಲ. ಪ್ರವೀಣ್‌ ನೆಟ್ಟಾರು ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಕೊಲೆಗೀಡಾದ ಮಸೂದ್‌ ಮನೆಗೂ ಭೇಟಿ ನೀಡಿ ಎಂದು ಡಿವೈಎಫ್ಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ ಹೇಳಿದ್ದಾರೆ. ಈ ಕುರಿತು ಫೇಸ್‌ಬುಕ್ ನಲ್ಲಿ ಈ ಕುರಿತು ಪೋಸ್ಟ್‌ ಬರೆದಿರುವ ಮುನೀರ್‌ ಕಾಟಿಪಳ್ಳ, ಬೆಳ್ಳಾರೆಯಲ್ಲಿ ಕೊಲೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಇಂದು ನೀವು ಭೇಟಿ ನೀಡುವಾಗ, [&#8230;]]]></description>
										<content:encoded><![CDATA[
<p class="has-medium-font-size"><strong>ಮಂಗಳೂರು:</strong> &nbsp;ಬೊಮ್ಮಾಯಿಯವರು ಕರ್ನಾಟಕ ರಾಜ್ಯಕ್ಕೆ ಮುಖ್ಯಮಂತ್ರಿ. ಆರು ಕೋಟಿ ಕನ್ನಡಿಗರಿಗೂ ಅವರೇ ಮುಖ್ಯಮಂತ್ರಿ. ಬಿಜೆಪಿ ಪಕ್ಷದವರಿಗೆ, ಒಂದು ಮತ ಧರ್ಮಕ್ಕೆ ಮಾತ್ರ ಮುಖ್ಯಮಂತ್ರಿ ಅಲ್ಲ. ಪ್ರವೀಣ್‌ ನೆಟ್ಟಾರು ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಕೊಲೆಗೀಡಾದ ಮಸೂದ್‌ ಮನೆಗೂ ಭೇಟಿ ನೀಡಿ ಎಂದು ಡಿವೈಎಫ್ಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.</p>



<p class="has-medium-font-size">ಈ ಕುರಿತು ಫೇಸ್‌ಬುಕ್ ನಲ್ಲಿ ಈ ಕುರಿತು ಪೋಸ್ಟ್‌ ಬರೆದಿರುವ ಮುನೀರ್‌ ಕಾಟಿಪಳ್ಳ, ಬೆಳ್ಳಾರೆಯಲ್ಲಿ ಕೊಲೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಇಂದು ನೀವು ಭೇಟಿ ನೀಡುವಾಗ, ಅದೇ ಗ್ರಾಮದಲ್ಲಿ ವಾರದ ಹಿಂದೆ ಮತೀಯ ದ್ವೇಷಕ್ಕೆ ಬಲಿಯಾದ ಅಮಾಯಕ ಹುಡುಗ ಮಹಮ್ಮದ್ ಮಸೂದ್ ಮನೆಗೂ ಭೇಟಿ ನೀಡಬೇಕು. ಪ್ರವೀಣ್ ನ ವಿಧವೆ ಹೆಂಡತಿ, ಅನಾಥ ತಂದೆ ತಾಯಿಯರಿಗೆ ಸಾಂತ್ವನ ಹೇಳುವಾಗ, ಮಸೂದ್ ನ ವಿಧವೆ ತಾಯಿಗೂ ಸಾಂತ್ವನ ಹೇಳಬೇಕು. ಯಾವುದೇ ಕಾರಣಕ್ಕೂ ತಾರತಮ್ಯ ಎಸಗಬಾರದು ಎಂದು ಆಗ್ರಹಿಸಿದ್ದಾರೆ.</p>



<p class="has-medium-font-size">&nbsp;ಕೊಲೆಗೀಡಾದ ಎರಡೂ ಕುಟುಂಬದ ಹೆಣ್ಣು ಜೀವಗಳು ಸಮಾನವಾಗಿ ನೊಂದಿವೆ. ಮುಖ್ಯಮಂತ್ರಿಗಳೇ ರಾಜಧರ್ಮ ಪಾಲಿಸಿ.‌ ಇಲ್ಲದಿದ್ದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನೀವು ಅಯೋಗ್ಯರಾಗಿ ಬಿಡುತ್ತೀರಿ. ಕನ್ನಡ ನಾಡಿನ ಮಹಾನ್ ಪರಂಪರೆಗೆ, ಮುಖ್ಯಮಂತ್ರಿ ಸ್ಥಾನದ ಘನತೆಗೆ ಅಪಚಾರ ಎಸಗಬೇಡಿ‌ ಎಂದು &nbsp;ಅವರು ಮನವಿ ಮಾಡಿದ್ದಾರೆ.</p>
]]></content:encoded>
					
		
		
			</item>
	</channel>
</rss>
