<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>namma Clinics &#8211; Peepal Media</title>
	<atom:link href="https://peepalmedia.com/tag/namma-clinics/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 14 Dec 2022 09:10:35 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>namma Clinics &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ನಮ್ಮ ಕ್ಲಿನಿಕ್ ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ : ಸಿಎಂ ಬೊಮ್ಮಾಯಿ</title>
		<link>https://peepalmedia.com/grant-in-the-next-budget-to-upgrade-our-clinic-cm-bommai/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 14 Dec 2022 09:10:35 +0000</pubDate>
				<category><![CDATA[ಧಾರವಾಡ]]></category>
		<category><![CDATA[ರಾಜ್ಯ]]></category>
		<category><![CDATA[BASAVARAJ BOMMAYI]]></category>
		<category><![CDATA[CENTREL HOME MINISTER]]></category>
		<category><![CDATA[hubballi]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[namma Clinics]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=18492</guid>

					<description><![CDATA[ಹುಬ್ಬಳ್ಳಿ: ನಮ್ಮ್ ಕ್ಲಿನಿಕ್ ಗಳನ್ನು ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಬುಧವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡಿಸ್ಪೆನ್ಸರಿಗಳಿದ್ದವು. ವೈದ್ಯರು ನೆಗಡಿ, ಜ್ವರ ಇತ್ಯಾದಿ ಸಣ್ಣಪುಟ್ಟ ಪರೀಕ್ಷೆ ಮಾಡಿ ಚಿಕಿತ್ಸೆ ನೀಡುತ್ತಿದ್ದರು. ಬಡವರಿಗೆ ಪ್ರಾಥಮಿಕವಾಗಿ ಚಿಕಿತ್ಸೆ ನೀಡುವ ದೃಷ್ಟಿಯಿಂದ ನಮ್ಮ ಕ್ಲಿನಿಕ್ ಸ್ಥಾಪಿಸಲಾಗುತ್ತಿದೆ. 437 ಇಡೀ ರಾಜ್ಯ ದಲ್ಲಿ ಸ್ಥಾಪನೆಯಾಗುತ್ತಿದೆ. ಪ್ರಥಮ ಹಂತದಲ್ಲಿ ನೂರು [&#8230;]]]></description>
										<content:encoded><![CDATA[
<p><strong>ಹುಬ್ಬಳ್ಳಿ:</strong> ನಮ್ಮ್ ಕ್ಲಿನಿಕ್ ಗಳನ್ನು ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>



<p>ಈ ಕುರಿತು ಬುಧವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡಿಸ್ಪೆನ್ಸರಿಗಳಿದ್ದವು. ವೈದ್ಯರು ನೆಗಡಿ, ಜ್ವರ ಇತ್ಯಾದಿ ಸಣ್ಣಪುಟ್ಟ ಪರೀಕ್ಷೆ ಮಾಡಿ ಚಿಕಿತ್ಸೆ ನೀಡುತ್ತಿದ್ದರು. ಬಡವರಿಗೆ ಪ್ರಾಥಮಿಕವಾಗಿ ಚಿಕಿತ್ಸೆ ನೀಡುವ ದೃಷ್ಟಿಯಿಂದ ನಮ್ಮ ಕ್ಲಿನಿಕ್ ಸ್ಥಾಪಿಸಲಾಗುತ್ತಿದೆ. 437 ಇಡೀ ರಾಜ್ಯ ದಲ್ಲಿ ಸ್ಥಾಪನೆಯಾಗುತ್ತಿದೆ. ಪ್ರಥಮ ಹಂತದಲ್ಲಿ ನೂರು ಕ್ಲಿನಿಕ್ ಗಳು ಪ್ರಾರಂಭವಾಗುತ್ತದೆ. ನಮ್ಮ ಕ್ಲಿನಿಕ್ ಗಳ ಕಾರ್ಯವೈಖರಿ ನೋಡಿಕೊಂಡು ತಪಾಸಣೆ ಮಾಡಿ ಔಷಧ ನೀಡುವುದಲ್ಲದೆ, ರಕ್ತ ಪರೀಕ್ಷೆ ಮುಂತಾದ ಪೂರ್ವಭಾವಿ ಪರೀಕ್ಷೆಗಳನ್ನು ಕೈಗೊಳ್ಳಲು ವ್ಯವಸ್ಥೆ ಕಲ್ಪಿಸಲಾಗುವುದು. ಟೆಲಿ ಮೆಡಿಸಿನ್ ವ್ಯವಸ್ಥೆಯನ್ನೂ ಇದಕ್ಕೇ ಜೋಡಿಸಲಾಗುವುದು ಎಂದರು.</p>



<p><strong>ಕೇಂದ್ರ ಗೃಹ ಸಚಿವರೊಂದಿಗೆ ಸಭೆ</strong><br>ಕೇಂದ್ರ ಗೃಹ ಸಚಿವರು ಎರಡೂ ರಾಜ್ಯ ಗಳ ಮುಖ್ಯಮಂತ್ರಿಗಳನ್ನು ಕರೆದು ಶಾಂತಿ ಸುವ್ಯವಸ್ಥೆ ಕಾಪಾಡಲು ಇಂದಿನ ಸಭೆ ಕರೆಯಲಾಗಿದೆ. ಅಲ್ಲಿ ಕರ್ನಾಟಕದ ನಿಲುವನ್ನು ಕಾನೂನಾತ್ಮಕ, ಆಡಳಿತಾತ್ಮಕ ಹಾಗೂ ರಾಜಕೀಯವಾಗಿ ತಿಳಿಸಲಾಗುವುದು. ಕರ್ನಾಟಕದ ನಿಲುವು ಸ್ಪಷ್ಟವಿದೆ ಎಂದು ಮನವರಿಕೆ ಮಾಡಲು ಸಿದ್ದವಾಗಿ ಹೋಗುತ್ತಿರುವುದಾಗಿ ತಿಳಿಸಿದರು.</p>



<p><strong>ವ್ಯಾಖ್ಯಾನಿಸುವುದಿಲ್ಲ</strong><br>ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಗೂ ಮುನ್ನ ಹಲವಾರು ವರದಿಗಳು ಬಂದಿದೆ. ಕಾಯ್ದೆ ಆಗಿ ಅಂತಿಮಗೊಂಡಿದೆ. ಇದು ಈಗಿನ ಕಾನೂನಿನ ವಸ್ತುಸ್ಥಿತಿ. ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಯ ನಿರ್ಣಯಗಳನ್ನು ಅವರು ಪ್ರಶ್ನಿಸಿದ್ದಾರೆ. ಇದನ್ನು ನಿರ್ವಹಿಸಬೇಕೋ, ಬೇಡವೋ ಎಂದೇ ಸರ್ವೋಚ್ಚ ನ್ಯಾಯಾಲಯ ತೀರ್ಮಾನ ಮಾಡಿಲ್ಲ. ಸಂವಿಧಾನಬದ್ಧವಾಗಿ ಯೋಚನೆ ಮಾಡಿದಾಗ ಅದು ಮೆಂಟೇನಬಲ್ ಆಗೋಲ್ಲ. ಈಗಾಗಲೇ ಅದರ ಬಗ್ಗೆ ಸಾಕಷ್ಟು ವಾದಗಳಾಗಿವೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವಿರುವಾಗ ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ. ಪ್ರಕರಣದ ಮೇಲೆ ಯಾವುದೇ ಪ್ರಭಾವ ಬೀರಬಾರದು ಎನ್ನುವ ಕಾರಣದಿಂದ ನಾನು ವ್ಯಾಖ್ಯಾನ ಮಾಡುವುದಿಲ್ಲ ಎಂದರು.</p>
]]></content:encoded>
					
		
		
			</item>
		<item>
		<title>ಡಿ.14ರಂದು 114 &#8216;ನಮ್ಮ ಕ್ಲಿನಿಕ್&#8217;ಗಳು ಉದ್ಘಾಟನೆ: ಸಚಿವ ಡಾ.ಕೆ.ಸುಧಾಕರ್</title>
		<link>https://peepalmedia.com/inauguration-of-114-namma-clinic-on-december-14-minister-dr-k-sudhakar/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 13 Dec 2022 07:36:50 +0000</pubDate>
				<category><![CDATA[ಆರೋಗ್ಯ]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[dr k sudhakar]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[namma Clinics]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=18378</guid>

					<description><![CDATA[ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ನಗರಗಳಲ್ಲಿನ ಸಾವಿರಾರು ಬಡಜನರಿಗೆ ಸಹಾಯ ಮಾಡುವ ಗುರಿ ಹೊಂದಿರುವ ʼನಮ್ಮ ಕ್ಲಿನಿಕ್ʼ ಗಳನ್ನು ಉದ್ಘಾಟಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೋಮವಾರ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʼಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 14 ರಂದು ನಮ್ಮ ಕ್ಲಿನಿಕ್‌ಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹೀಗಾಗಿ ಆರಂಭಿಕ ಹಂತದಲ್ಲಿ ರಾಜ್ಯಾದ್ಯಂತ ಏಕಕಾಲದಲ್ಲಿ 114 ಕ್ಲಿನಿಕ್ ಗಳನ್ನು ಆರಂಭಿಸಲಾಗುವುದು&#8217;ಎಂದು ಹೇಳಿದ್ದಾರೆ. ರಾಜ್ಯಾದ್ಯಂತ ಎಲ್ಲಾ 438 [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ನಗರಗಳಲ್ಲಿನ ಸಾವಿರಾರು ಬಡಜನರಿಗೆ ಸಹಾಯ ಮಾಡುವ ಗುರಿ ಹೊಂದಿರುವ ʼನಮ್ಮ ಕ್ಲಿನಿಕ್ʼ ಗಳನ್ನು ಉದ್ಘಾಟಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್  ಸೋಮವಾರ ತಿಳಿಸಿದ್ದಾರೆ.</p>



<p>ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʼಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 14 ರಂದು ನಮ್ಮ ಕ್ಲಿನಿಕ್‌ಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹೀಗಾಗಿ ಆರಂಭಿಕ ಹಂತದಲ್ಲಿ ರಾಜ್ಯಾದ್ಯಂತ ಏಕಕಾಲದಲ್ಲಿ 114 ಕ್ಲಿನಿಕ್ ಗಳನ್ನು ಆರಂಭಿಸಲಾಗುವುದು&#8217;ಎಂದು ಹೇಳಿದ್ದಾರೆ.</p>



<p>ರಾಜ್ಯಾದ್ಯಂತ ಎಲ್ಲಾ 438 ನಮ್ಮ ಕ್ಲಿನಿಕ್ ಗಳನ್ನು ಶೀಘ್ರದಲ್ಲೇ ಕಾರ್ಯಾರಂಭ ಮಾಡಲು ಸರ್ಕಾರ ಕಾರ್ಯೋನ್ಮುಖವಾಗಿದೆ ಮತ್ತು ಉಳಿದ ಎಲ್ಲಾ ಕ್ಲಿನಿಕ್ ಗಳು ಜನವರಿ 2023 ರೊಳಗೆ ಕಾರ್ಯಾರಂಭ ಮಾಡಲಿವೆ ಎಂದು ಸುಧಾಕರ್‌ ತಿಳಿಸಿದ್ದಾರೆ.</p>



<p>ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 243 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸಲಿದ್ದು, ಜನವರಿ ಎರಡನೇ ವಾರದೊಳಗೆ ಅವುಗಳನ್ನು ಸಾರ್ವಜನಿಕ ಸೇವೆಗೆ ಬಳಸಿಕೊಳ್ಳುವ ಕೆಲಸ ನಡೆಯುತ್ತಿದೆ. ಕನಿಷ್ಠ 150 ಕ್ಲಿನಿಕ್ ಗಳು ಸಾರ್ವಜನಿಕ ಸೇವೆಗೆ ಖಂಡಿತವಾಗಿಯೂ ಲಭ್ಯವಾಗಲಿವೆ ಎಂದರು.</p>



<p>ಈ ಕ್ಲಿನಿಕ್‌ಗಳು ಸಮಾಜದ ದುರ್ಬಲ ವರ್ಗಗಳಿಗೆ, ವಿಶೇಷವಾಗಿ ದಿನಗೂಲಿ ಕಾರ್ಮಿಕರು ಮತ್ತು ಸಮಾಜದ ಇತರ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ಹೀಗಾಗಿ ಪ್ರತಿ ನಮ್ಮ ಚಿಕಿತ್ಸಾಲಯವು 10,000 ದಿಂದ 20,000 ಜನಸಂಖ್ಯೆಯನ್ನು ಪೂರೈಸುತ್ತದೆ ಎಂದು ಸಚಿವ ಸುಧಾಕರ್ ಹೇಳಿದರು.</p>



<p>ʼನಮ್ಮ ಕ್ಲಿನಿಕ್‌ʼಗಳಲ್ಲಿ 12 ರೀತಿಯ ಆರೋಗ್ಯ ಸೇವೆಗಳು ಲಭ್ಯವಿರುತ್ತವೆ. ಪ್ರತಿ ನಮ್ಮ ಕ್ಲಿನಿಕ್ ಒಬ್ಬ ವೈದ್ಯಾಧಿಕಾರಿ, ನರ್ಸ್, ಲ್ಯಾಬ್ ಟೆಕ್ನಿಷಿಯನ್ ಮತ್ತು ಗ್ರೂಪ್ ಡಿ ಉದ್ಯೋಗಿಯನ್ನು ಒಳಗೊಂಡಿರುತ್ತದೆ. ಗರ್ಭಧಾರಣೆ, &nbsp;ನವಜಾತ ಶಿಶುಗಳ ಆರೈಕೆ, ಬಾಲ್ಯ ಮತ್ತು ಹದಿಹರೆಯದವರ ಆರೈಕೆ, ಸಾರ್ವತ್ರಿಕ ರೋಗನಿರೋಧಕ ಸೇವೆಗಳು, ಕುಟುಂಬ ಕಲ್ಯಾಣ, ಗರ್ಭನಿರೋಧಕ, ಸಾಂಕ್ರಾಮಿಕ ರೋಗ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಕಾಯಿಲೆಗಳ ಆರೈಕೆ, ಮಧುಮೇಹ, ರಕ್ತದೊತ್ತಡ ನಿರ್ವಹಣೆ, ದೀರ್ಘಕಾಲದ ರೋಗಗಳು, ಬಾಯಿಯ ಕಾಯಿಲೆಗಳು ಇತ್ಯಾದಿಗಳು ಈ 12 ರೀತಿಯ ಸೇವೆಗಳಲ್ಲಿ ಸೇರಿವೆ. ಸ್ತನ ಮತ್ತು ಗರ್ಭಾಶಯದ ಕ್ಯಾನ್ಸರ್ ನಂತಹ ತೃತೀಯ ಹಂತದ ಆರೈಕೆ ಅಗತ್ಯವಿರುವ ಕಾಯಿಲೆಗಳಿಗೆ ಮತ್ತು ಕಣ್ಣಿನ ತಪಾಸಣೆಗಾಗಿ ಇತರ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಸೇವೆ ದೊರಕುವ ಹಾಗೆ ಮಾಡಲಾಗುವುದುʼ ಎಂದರು.</p>



<p>ವೃದ್ಧರ ಆರೈಕೆ, ತುರ್ತು ವೈದ್ಯಕೀಯ ಸೇವೆಗಳು, ಆರೋಗ್ಯ ತಪಾಸಣೆಗಳು ಮತ್ತು ಔಷಧಿಗಳು ಸಂಪೂರ್ಣವಾಗಿ ಉಚಿತವಾಗಿರುತ್ತವೆ. 14 ಲ್ಯಾಬ್ ಪರೀಕ್ಷೆಗಳು, ದೂರ ಸಂಪರ್ಕ ಸೇವೆಗಳು ಮತ್ತು ಸ್ವಾಸ್ಥ್ಯ ಚಟುವಟಿಕೆಗಳು ನಮ್ಮ ಕ್ಲಿನಿಕ್ ಗಳಲ್ಲಿ ಉಚಿತವಾಗಿ ಲಭ್ಯವಿರುತ್ತವೆ ಎಂದು ಮಾಹಿತಿ ನೀಡಿದ್ದಾರೆ.</p>



<p>ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 9 ರಿಂದ ಸಂಜೆ 4.30 ರವರೆಗೆ ಎಲ್ಲಾ ಸೇವೆಗಳು ಲಭ್ಯವಿವೆ. ಈ ಚಿಕಿತ್ಸಾಲಯಗಳನ್ನು ಹಲವಾರು ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವುದರಿಂದ ಆರೋಗ್ಯ ರಕ್ಷಣಾ ಸೇವೆಗಳು ಸುಲಭವಾಗಿ ಲಭ್ಯವಾಗುತ್ತವೆ. ಹೀಗಾಗಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ 100ಕ್ಕೂ ಹೆಚ್ಚು ಕ್ಲಿನಿಕ್ ಗಳನ್ನು ಉದ್ಘಾಟಿಸುತ್ತಿರುವುದು ಹೆಮ್ಮೆಯ ವಿಷಯ. ಇದು ಸಾರ್ವಕಾಲಿಕ ದಾಖಲೆಯಾಗಲಿದೆ&#8217; ಎಂದರು.</p>



<p>ಇದು ಒಟ್ಟು 150 ಕೋಟಿ ರೂಪಾಯಿಗಳ ವೆಚ್ಚದ ಯೋಜನೆಯಾಗಿದೆ ಮತ್ತು ಹೆಚ್ಚಿನ ಕ್ಲಿನಿಕ್ ಗಳು ಸರ್ಕಾರಿ ಕಟ್ಟಡಗಳಲ್ಲಿ ಕೆಲಸ ಮಾಡಲು ಪ್ರಾರಂಭಿಸುತ್ತವೆ. ಈಗಾಗಲೇ 300 ವೈದ್ಯರನ್ನು ನೇಮಿಸಲಾಗಿದೆ ಮತ್ತು ಕೆಲವು ಸ್ಥಳಗಳಲ್ಲಿ ವೈದ್ಯರ ಕೊರತೆ ಇದೆ. ಅಂತಹ ಸ್ಥಳಗಳಲ್ಲಿ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಮತ್ತು ಅಂತಹ ಸ್ಥಳಗಳಲ್ಲಿ ಕಡ್ಡಾಯ ಗ್ರಾಮೀಣ ಸೇವೆಯಲ್ಲಿರುವ 80-100 ವೈದ್ಯರನ್ನು ನೇಮಿಸಲಾಗುವುದು ಎಂದು ಸುಧಾಕರ್‌ ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>&#8216;ನಮ್ಮ ಕ್ಲಿನಿಕ್&#8217;ಗಳಲ್ಲಿ ಕರ್ತವ್ಯನಿರ್ವಹಿಸಲು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ</title>
		<link>https://peepalmedia.com/applications-invited-for-the-post-of-medical-officers-to-perform-duty-in-our-clinics/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 28 Nov 2022 14:38:18 +0000</pubDate>
				<category><![CDATA[ಉದ್ಯೋಗ ಮಾಹಿತಿ]]></category>
		<category><![CDATA[ರಾಜ್ಯ]]></category>
		<category><![CDATA[bbmp]]></category>
		<category><![CDATA[bengalure]]></category>
		<category><![CDATA[Dr. Balasunder]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[karnataka govt]]></category>
		<category><![CDATA[namma Clinics]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=16843</guid>

					<description><![CDATA[ಬೆಂಗಳೂರು: ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರದ ಅನುಮೋದನೆಯಂತೆ, ನೂತನವಾಗಿ ಸ್ಥಾಪಿಸಲಾಗುವ &#8216;ನಮ್ಮ ಕ್ಲಿನಿಕ್&#8217;ಗಳಲ್ಲಿ ಕರ್ತವ್ಯನಿರ್ವಹಿಸಲು ವೈದ್ಯಾಧಿಕಾರಿಗಳ ಹುದ್ದೆಗೆ 01 ವರ್ಷದ ಅವಧಿಗೆ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತಿವುಳ್ಳ ಎಂ.ಬಿ.ಬಿ.ಎಸ್ ಪದವಿ ಮತ್ತು ಕೆ.ಎಂ.ಸಿ ಕೌನ್ಸಿಲ್‌ ನೊಂದಾವಣಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮುಂದುವರಿದು, ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು ಮತ್ತು ಒಂದು ಜೆರಾಕ್ಸ್ ಪ್ರತಿ, ಭಾವಚಿತ್ರದೊಂದಿಗೆ ಮುಖ್ಯ ಆರೋಗ್ಯಾಧಿಕಾರಿ(ಸಾರ್ವಜನಿಕ ಆರೋಗ್ಯ) ರವರ ಕಛೇರಿ, ಅನೆಕ್ಸ್-2 [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರದ ಅನುಮೋದನೆಯಂತೆ, ನೂತನವಾಗಿ ಸ್ಥಾಪಿಸಲಾಗುವ &#8216;ನಮ್ಮ ಕ್ಲಿನಿಕ್&#8217;ಗಳಲ್ಲಿ ಕರ್ತವ್ಯನಿರ್ವಹಿಸಲು ವೈದ್ಯಾಧಿಕಾರಿಗಳ ಹುದ್ದೆಗೆ 01 ವರ್ಷದ ಅವಧಿಗೆ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತಿವುಳ್ಳ ಎಂ.ಬಿ.ಬಿ.ಎಸ್ ಪದವಿ ಮತ್ತು ಕೆ.ಎಂ.ಸಿ ಕೌನ್ಸಿಲ್‌ ನೊಂದಾವಣಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.</p>



<p>ಮುಂದುವರಿದು, ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು ಮತ್ತು ಒಂದು ಜೆರಾಕ್ಸ್ ಪ್ರತಿ, ಭಾವಚಿತ್ರದೊಂದಿಗೆ ಮುಖ್ಯ ಆರೋಗ್ಯಾಧಿಕಾರಿ(ಸಾರ್ವಜನಿಕ ಆರೋಗ್ಯ) ರವರ ಕಛೇರಿ, ಅನೆಕ್ಸ್-2 ಕಟ್ಟಡ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಛೇರಿ, ಎನ್.ಆರ್.ಚೌಕ, ಬೆಂಗಳೂರು-560 002 ವಿಳಾಸಕ್ಕೆ ಖುದ್ದಾಗಿ &#8211; ಅರ್ಜಿ ಸಲ್ಲಿಸಲು ಎಂದು ಮುಖ್ಯ ಆರೋಗ್ಯಾಧಿಯಾದ ಡಾ. ಬಾಲಸುಂದರ್ ರವರು ಕೋರಿರುತ್ತಾರೆ.</p>


<div class="wp-block-image">
<figure class="aligncenter size-full is-resized"><img fetchpriority="high" decoding="async" src="https://peepalmedia.com/wp-content/uploads/2022/11/press-note.jpg" alt="" class="wp-image-16844" width="263" height="362"/></figure></div>]]></content:encoded>
					
		
		
			</item>
	</channel>
</rss>
