<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>naxalism in karnataka &#8211; Peepal Media</title>
	<atom:link href="https://peepalmedia.com/tag/naxalism-in-karnataka/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 08 Jan 2025 08:15:22 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>naxalism in karnataka &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಬೆಂಗಳೂರಿಗೆ ಬರುತ್ತಿರುವ ನಕ್ಸಲ್‌ ಹೋರಾಟಗಾರರು</title>
		<link>https://peepalmedia.com/cm-to-meet-6-naxal-fighters-in-person/</link>
		
		<dc:creator><![CDATA[Murali Maluru]]></dc:creator>
		<pubDate>Wed, 08 Jan 2025 07:00:44 +0000</pubDate>
				<category><![CDATA[ರಾಜ್ಯ]]></category>
		<category><![CDATA[cm Siddaramaiah meets naxalits]]></category>
		<category><![CDATA[CM to meet 6 Naxal fighters in person]]></category>
		<category><![CDATA[naxal]]></category>
		<category><![CDATA[naxalism]]></category>
		<category><![CDATA[naxalism in karnataka]]></category>
		<guid isPermaLink="false">https://peepalmedia.com/?p=51880</guid>

					<description><![CDATA[ಚಿಕ್ಕಮಗಳೂರು ಜ,08: ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಯಾಗಲು ಒಪ್ಪಿದ್ದ 6 ಮಂದಿ ನಕ್ಸಲ್ ಹೋರಾಟಗಾರರನ್ನು ನೇರವಾಗಿ ಭೇಟಿಯಾಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಪೇಕ್ಷೆ ಪಟ್ಟಿದ್ದಾರೆ. ಮಾವೋವಾದಿ ಚಳವಳಿಯ ಕೊನೆಯ ನಕ್ಸಲ್ ಹೋರಾಟಗಾರರಾಗಿದ್ದ ಈ 6 ಮಂದಿ ಹೋರಾಟಗಾರರು ಇಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯ ಮೂಲಕ ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಯಾಗಬೇಕಿತ್ತು. ಆದರೆ ಮುಖ್ಯಮಂತ್ರಿಗಳು ನೇರವಾಗಿ ತಾವೇ ಅವರನ್ನು ಮುಖ್ಯವಾಹಿನಿಗೆ ಕರೆತರಲು ಅಪೇಕ್ಷಿಸಿರುವುದರಿಂದ ನಕ್ಸಲ್ ಹೋರಾಟಗಾರರು ಇಂದು ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಗೆ ಭೇಟಿನೀಡಲಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯು ರಾಜ್ಯ [&#8230;]]]></description>
										<content:encoded><![CDATA[
<p>ಚಿಕ್ಕಮಗಳೂರು ಜ,08: ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಯಾಗಲು ಒಪ್ಪಿದ್ದ 6 ಮಂದಿ ನಕ್ಸಲ್ ಹೋರಾಟಗಾರರನ್ನು ನೇರವಾಗಿ ಭೇಟಿಯಾಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಪೇಕ್ಷೆ ಪಟ್ಟಿದ್ದಾರೆ. ಮಾವೋವಾದಿ ಚಳವಳಿಯ ಕೊನೆಯ ನಕ್ಸಲ್ ಹೋರಾಟಗಾರರಾಗಿದ್ದ ಈ 6 ಮಂದಿ ಹೋರಾಟಗಾರರು ಇಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯ ಮೂಲಕ ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಯಾಗಬೇಕಿತ್ತು. ಆದರೆ ಮುಖ್ಯಮಂತ್ರಿಗಳು ನೇರವಾಗಿ ತಾವೇ ಅವರನ್ನು ಮುಖ್ಯವಾಹಿನಿಗೆ ಕರೆತರಲು ಅಪೇಕ್ಷಿಸಿರುವುದರಿಂದ ನಕ್ಸಲ್ ಹೋರಾಟಗಾರರು ಇಂದು ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಗೆ ಭೇಟಿನೀಡಲಿದ್ದಾರೆ.</p>



<p>ಶಾಂತಿಗಾಗಿ ನಾಗರಿಕ ವೇದಿಕೆಯು ರಾಜ್ಯ ಸರ್ಕಾರದೊಂದಿಗೆ ನಡೆಸಿದ ಸುದೀರ್ಘ ಮಾತುಕತೆ ಫಲವಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಸಿದ್ಧತೆ ನಡೆಸಿದ್ದ ನಕ್ಸಲ್ ಹೋರಾಟಗಾರರಾದ ಮುಂಡಗಾರು ಲತಾ, ಸುಂದರಿ ಕುಟ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ, ಕೆ ವಸಂತ, ಟಿ ಎನ್ ಜೀಶ್ ಅವರು ಬುಧವಾರ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಯಾಗಲು ಮಾತುಕತೆ ನಡೆಸಲಾಗಿತ್ತು. ಈ ಬಗ್ಗೆ ಶಾಂತಿಗಾಗಿ ನಾಗರಿಕ ವೇದಿಕೆಯ ಪ್ರಮುಖ ಮುಖಂಡ ಕೆ.ಎಲ್. ಅಶೋಕ್ ಮಾಹಿತಿ ನೀಡಿದ್ದರು.</p>



<p>ಇನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನವರಿ 08, 2025 ಬುಧವಾರದಂದು ನಕ್ಸಲರು ಶರಣಾಗತಿಯಾಗಲು ಬಯಸ್ಸಿದ್ದರಿಂದಾಗಿ ಕಚೇರಿಯ ಸುತ್ತಲು ಮಾಧ್ಯಮಗಳು, ಜನಪರ ಸಂಘಟನೆಗಳ ನಾಯಕರು ಬೆಳಗಿನಿಂದಲೂ ಕಾಯುತ್ತಿದ್ದರು. ಕೊನೆಯ ಕ್ಷಣದಲ್ಲಿ ಮುಖ್ಯಮಂತ್ರಿಗಳೇ ಖುದ್ದು ಭೇಟಿಯಾಗುವುದಾಗಿ ತಿಳಿಸಿದ್ದರಿಂದ ನಕ್ಸಲ್ ಹೋರಾಟಗಾರರು ನೇರವಾಗಿ ಬೆಂಗಳೂರಿಗೆ ಬರುತ್ತಿದ್ದಾರೆ ಎಂಬ ಮಾಹಿತಿ ಸುದ್ದಿ ಮೂಲಗಳಿಂದ&nbsp;ತಿಳಿದುಬಂದಿದೆ</p>
]]></content:encoded>
					
		
		
			</item>
		<item>
		<title>&#8216;ವಿಕ್ರಂ ಗೌಡ ಹತ್ಯೆಯ ಕುರಿತು ನ್ಯಾಯಾಂಗ ತನಿಖೆಯಾಗಲಿ&#8217;: ಮುಖ್ಯವಾಹಿನಿಗೆ ಬರಲಿರುವ ಆರು ಮಂದಿ ನಕ್ಸಲರ ಒತ್ತಾಯ</title>
		<link>https://peepalmedia.com/judicial-inquiry-in-vikram-gowdas-murder-six-naxalites-who-came-to-the-mainstream-demand/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 08 Jan 2025 05:55:25 +0000</pubDate>
				<category><![CDATA[ರಾಜ್ಯ]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[kananda]]></category>
		<category><![CDATA[karnataka]]></category>
		<category><![CDATA[naxal]]></category>
		<category><![CDATA[naxalism]]></category>
		<category><![CDATA[naxalism in karnataka]]></category>
		<guid isPermaLink="false">https://peepalmedia.com/?p=51875</guid>

					<description><![CDATA[ಚಿಕ್ಕಮಗಳೂರು: ಕಳೆದ ಇಪ್ಪತ್ತೈದು ವರ್ಷಗಳಿಂದ ಮಾವೋವಾದಿ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಆರು ಮಂದಿ ನಕ್ಸಲರು ಜನವರಿ, 8 ರಂದು ಚಿಕ್ಕಮಗಳೂರಿನಲ್ಲಿ ಮುಖ್ಯವಾಹಿನಿಗೆ ಬರಲಿದ್ದಾರೆ.  ಲತಾ ಮುಂಡಗಾರು, ವನಜಾಕ್ಷಿ, ಎಂ., ಜಯಣ್ಣ ಆರೋಲಿ, ಸುಂದರಿ, ವಸಂತ್‌.ಕೆ, ಜಿಷ. ಎ.ಡಿ ಎಂಬ ಆರು ಮಂದಿ ಮಾವೋವಾದಿ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ನಕ್ಸಲರು ಮುಖ್ಯವಾಹಿನಿಗೆ ಬರುವುದಾಗಿ ಒಪ್ಪಿಕೊಂಡಿದ್ದಾರೆ.  “ನಾವು ಆರು ಜನರು ಕಳೆದ 25 ವರ್ಷಗಳಿಂದ ಜನರ ಪರವಾಗಿ ಹೋರಾಡುತ್ತಾ ಬಂದಿದ್ದು, ಈಗ ಮುಖ್ಯ ವಾಹಿನಿಗೆ ಬಂದು ಸಂವಿಧನಾತ್ಮಕ, ಪ್ರಜಾಸತಾತ್ಮಕ ಹೋರಾಟಗಳಲ್ಲಿ ತೊಡಗಿಸಿಕೊಳ್ಳಲು ಸ್ವ [&#8230;]]]></description>
										<content:encoded><![CDATA[
<p><strong>ಚಿಕ್ಕಮಗಳೂರು:</strong> ಕಳೆದ ಇಪ್ಪತ್ತೈದು ವರ್ಷಗಳಿಂದ ಮಾವೋವಾದಿ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಆರು ಮಂದಿ ನಕ್ಸಲರು ಜನವರಿ, 8 ರಂದು ಚಿಕ್ಕಮಗಳೂರಿನಲ್ಲಿ ಮುಖ್ಯವಾಹಿನಿಗೆ ಬರಲಿದ್ದಾರೆ. </p>



<p>ಲತಾ ಮುಂಡಗಾರು, ವನಜಾಕ್ಷಿ, ಎಂ., ಜಯಣ್ಣ ಆರೋಲಿ, ಸುಂದರಿ, ವಸಂತ್‌.ಕೆ, ಜಿಷ. ಎ.ಡಿ ಎಂಬ ಆರು ಮಂದಿ ಮಾವೋವಾದಿ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ನಕ್ಸಲರು ಮುಖ್ಯವಾಹಿನಿಗೆ ಬರುವುದಾಗಿ ಒಪ್ಪಿಕೊಂಡಿದ್ದಾರೆ. </p>



<p>“ನಾವು ಆರು ಜನರು ಕಳೆದ 25 ವರ್ಷಗಳಿಂದ ಜನರ ಪರವಾಗಿ ಹೋರಾಡುತ್ತಾ ಬಂದಿದ್ದು, ಈಗ ಮುಖ್ಯ ವಾಹಿನಿಗೆ ಬಂದು ಸಂವಿಧನಾತ್ಮಕ, ಪ್ರಜಾಸತಾತ್ಮಕ ಹೋರಾಟಗಳಲ್ಲಿ ತೊಡಗಿಸಿಕೊಳ್ಳಲು ಸ್ವ ಇಚ್ಛೆಯಿಂದ ಬಯಸಿದ್ದೇವೆ. ಈಗಿನ ಬದಲಾದ ಪರಿಸ್ಥಿತಿಯಲ್ಲಿ ಅದೇ ಸರಿ ಎಂದು ತೀರ್ಮಾನಿಸಿದ್ದೇವೆ. ಮುಂದೆಯೂ ಜನರ ಪರವಾಗಿ ಕೊನೆ ಉಸಿರಿನ ತನಕ ಹೊರಡಲು ಬಯಸಿದ್ದೇವೆ,” ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>



<p>“ಅಲ್ಲದೆ, ನಮಗೆ ಮುಖ್ಯವಾಹಿನಿಗೆ ಬರಲು ಕರೆಕೊಟ್ಟು ಜನರ ಪರವಾಗಿ ಮುಂದೆಯೂ ಪ್ರಜಾತಾಂತ್ರಿಕ ಹೋರಾಟಗಳಲ್ಲಿ ತೊಡಗಳು ಯಾವುದೇ ತಡೆ ಇಲ್ಲದಂತೆ ಮತ್ತು ಜನರ ಹಕ್ಕುಗಳಿಗಾಗಿ ನಾವಿಟ್ಟ ಹಕ್ಕೊತ್ತಾಯಗಳನ್ನು ಈಡೇರಿಸುವ ಭರವಸೆ ನೀಡಿದ ಮಾನ್ಯ ಮುಖ್ಯಮಂತ್ರಿಯವರಿಗೂ ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇವೆ,” ಎಂದು ಹೇಳಿದ್ದಾರೆ.</p>



<p>“ಮೂರೂ ರಾಜ್ಯಗಳ ಪಶ್ಚಿಮ ಘಟ್ಟದಲ್ಲಿ ವಾಸಿಸುತ್ತಿರುವ ಆದಿವಾಸಿ, ದಲಿತ, ರೈತ, ಕೂಲಿ ಜನರ ಬದುಕಿಗೆ ಸಂಬಂಧಿಸಿದ ಮತ್ತು ಇಲ್ಲಿನ ಪರಿಸರಕ್ಕೆ ಸಂಬಂಧಿಸಿದ ಗಂಭೀರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಖಚಿತ ಹೆಜ್ಜೆಗಳನ್ನು ಇಡಬೇಕು ಎಂದು ನಾವು ಬಯಸುತ್ತೇವೆ. ಮೂರೂ ರಾಜ್ಯಗಳ ಸರ್ಕಾರಗಳಿಗೆ ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತಿದ್ದೇವೆ. ಮೂರು ರಾಜ್ಯ ಜೈಲುಗಳಲ್ಲಿರುವ ನಮ್ಮ ಎಲ್ಲಾ ಕಾಡ್ಸ್ ರ್ ಕೇಸುಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಿ ಬಿಡುಗಡೆಗೊಳಿಸಲು ಮೃದು ಧೋರಣೆ ತೋರಬೇಕೆಂದು ಸರ್ಕಾರಗಳಲ್ಲಿ ಮನವಿ ಮಾಡುತ್ತೇವೆ. ವಿಕ್ರಂ ಗೌಡರ ಹತ್ಯೆಯ ಕುರಿತು ನ್ಯಾಯಾಂಗ ತನಿಖೆಗೆ ತನಿಖಾ ತಂಡವನ್ನು ರಚಿಸಬೇಕೆಂದು ಒತ್ತಾಯಿಸುತ್ತೇವೆ,” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಮುಖ್ಯವಾಹಿನಿಗೆ ಬರಲು ನಕ್ಸಲ್ ಹೋರಾಟಗಾರರ ಗ್ರೀನ್ ಸಿಗ್ನಲ್!</title>
		<link>https://peepalmedia.com/green-signal-from-naxal-fighters-to-enter-the-mainstream/</link>
		
		<dc:creator><![CDATA[Murali Maluru]]></dc:creator>
		<pubDate>Tue, 07 Jan 2025 15:18:05 +0000</pubDate>
				<category><![CDATA[ರಾಜ್ಯ]]></category>
		<category><![CDATA[Green signal from Naxal fighters to enter the mainstream!]]></category>
		<category><![CDATA[naxal]]></category>
		<category><![CDATA[naxalism]]></category>
		<category><![CDATA[naxalism in karnataka]]></category>
		<category><![CDATA[noor sridhar]]></category>
		<guid isPermaLink="false">https://peepalmedia.com/?p=51848</guid>

					<description><![CDATA[ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧಾರಿಸಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯೊಂದಿಗೆ ಚರ್ಚೆ ನಡೆಸಿರುವ ನಕ್ಸಲ್ ಹೋರಾಟಗಾರರು, ಸರ್ಕಾರದ ಕರೆಯನ್ನು ಒಪ್ಪಿಕೊಂಡಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯ ಮುಖಂಡರು ಮತ್ತು ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾವೋವಾದಿ ಹೋರಾಟಗಾರರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ತಮ್ಮ ಶರತ್ತುಗಳನ್ನು ಸರ್ಕಾರದ ಮುಂದಿರುವ ನಕ್ಸಲ್‌ ಹೋರಾಟಗಾರರು ಮುಖ್ಯವಾಹಿನಿ ಬರಲು ಸಮ್ಮತಿ ಸೂಚಿಸಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮಾಹಿತಿ ನೀಡಿದ್ದಾರೆ. “ಚಿಕ್ಕಮಗಳೂರಿನ ಮುಂಡಗಾರು [&#8230;]]]></description>
										<content:encoded><![CDATA[
<p>ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧಾರಿಸಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯೊಂದಿಗೆ ಚರ್ಚೆ ನಡೆಸಿರುವ ನಕ್ಸಲ್ ಹೋರಾಟಗಾರರು, ಸರ್ಕಾರದ ಕರೆಯನ್ನು ಒಪ್ಪಿಕೊಂಡಿದ್ದಾರೆ.</p>



<p>ಶಾಂತಿಗಾಗಿ ನಾಗರಿಕ ವೇದಿಕೆಯ ಮುಖಂಡರು ಮತ್ತು ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾವೋವಾದಿ ಹೋರಾಟಗಾರರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ತಮ್ಮ ಶರತ್ತುಗಳನ್ನು ಸರ್ಕಾರದ ಮುಂದಿರುವ ನಕ್ಸಲ್‌ ಹೋರಾಟಗಾರರು ಮುಖ್ಯವಾಹಿನಿ ಬರಲು ಸಮ್ಮತಿ ಸೂಚಿಸಿದ್ದಾರೆ.</p>



<p>ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮಾಹಿತಿ ನೀಡಿದ್ದಾರೆ. “ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ ಮತ್ತು ಆಂದ್ರಪ್ರದೇಶದ ಮಾರೆಪ್ಪ ಅರೋಲಿ ಅವರು ಸರ್ಕಾರದ ಮುಂದೆ ಶರಣಾಗುವುದಾಗಿ ಒಪ್ಪಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.</p>



<p>“ಆರು ಮಂದಿ ನಕ್ಸಲ್ ಹೋರಾಟಗಾರರು ಬುಧವಾರ ಸರ್ಕಾರದ ಎದುರು ಶರಣಾಗಲಿದ್ದಾರೆ. ಅವರಿಗೆ ಸರ್ಕಾರವು ಶರಣಾಗತಿ ಮತ್ತು ಪುನರ್ವಸತಿಯ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಸೌಲಭ್ಯಗಳನ್ನು ಒದಗಿಸಲಿದೆ” ಎಂದು ಸರ್ಕಾರ ತಿಳಿಸಿದೆ. <br><br>ನಾಳೆ ಇನ್ನಷ್ಟು ವಿಚಾರಗಳು ಹೊರಬರಲಿದ್ದು ಈ ಆರು ಮಂದಿಯ ಬಗ್ಗೆ ಹೆಚ್ಚು ವಿಚಾರಗಳನ್ನು ತಿಳಿಯಬಹುದಾಗಿದೆ.</p>
]]></content:encoded>
					
		
		
			</item>
	</channel>
</rss>
