<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>nejaru &#8211; Peepal Media</title>
	<atom:link href="https://peepalmedia.com/tag/nejaru/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 15 Nov 2023 15:35:26 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>nejaru &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ನೇಜಾರು ಬರ್ಬರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ 14 ದಿನಗಳ ಪೊಲೀಸ್ ಕಸ್ಟಡಿಗೆ</title>
		<link>https://peepalmedia.com/praveen-arun-chowgule-14-days-of-police-custody/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 15 Nov 2023 15:35:25 +0000</pubDate>
				<category><![CDATA[ಉಡುಪಿ]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[nejaru]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=32277</guid>

					<description><![CDATA[ಉಡುಪಿ: ನೇಜಾರು ಎನ್ನುವಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಪ್ರವೀಣ್‌ ಅರುಣ್‌ ಚೌಗುಲೆ (39) ಎನ್ನುವವನನ್ನು ಜಿಲ್ಲಾ ಒಂದನೇ ಹೆಚ್ಚುವರಿ ನ್ಯಾಯಾಲಯ 14 ದಿನಗಳ ಪೊಲೀಸ್‌ ಕಸ್ಟಡಿಗೆ ನೀಡಿದೆ. ಆರೋಪಿ ಪ್ರವೀಣ್‌ನ ಆರೋಗ್ಯ ತಪಾಸಣೆಯನ್ನು ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಸಲಾಗಿದ್ದು, ಬಿಗಿ ಭದ್ರತೆಯಲ್ಲಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ತನಿಖಾಧಿಕಾರಿಯೂ ಆದ ಮಲ್ಪೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಮಂಜುನಾಥ ಗೌಡ ನೇತೃತ್ವದಲ್ಲಿ ಆರೋಪಿಯನ್ನು ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು [&#8230;]]]></description>
										<content:encoded><![CDATA[
<p>ಉಡುಪಿ: ನೇಜಾರು ಎನ್ನುವಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಪ್ರವೀಣ್‌ ಅರುಣ್‌ ಚೌಗುಲೆ (39) ಎನ್ನುವವನನ್ನು ಜಿಲ್ಲಾ ಒಂದನೇ ಹೆಚ್ಚುವರಿ ನ್ಯಾಯಾಲಯ 14 ದಿನಗಳ ಪೊಲೀಸ್‌ ಕಸ್ಟಡಿಗೆ ನೀಡಿದೆ.</p>



<p>ಆರೋಪಿ ಪ್ರವೀಣ್‌ನ ಆರೋಗ್ಯ ತಪಾಸಣೆಯನ್ನು ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಸಲಾಗಿದ್ದು, ಬಿಗಿ ಭದ್ರತೆಯಲ್ಲಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ತನಿಖಾಧಿಕಾರಿಯೂ ಆದ ಮಲ್ಪೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಮಂಜುನಾಥ ಗೌಡ ನೇತೃತ್ವದಲ್ಲಿ ಆರೋಪಿಯನ್ನು ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.</p>



<p>ಪೊಲೀಸರ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ.ನದಾಫ್ ಆರೋಪಿಯನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಕೋರಿದರು. ನ್ಯಾಯಾಧೀಶ ಶ್ಯಾಮ್ ಪ್ರಸಾದ್ ಆರೋಪಿಗೆ ನವೆಂಬರ್ 28ರವರೆಗೆ 14 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು. ಈ ಸಂದರ್ಭದಲ್ಲಿ ಆರೋಪಿಗಳ ಪರ ಸರಕಾರ ನೇಮಿಸಿದ ವಕೀಲ ಪೂಜಾರಿ ಉಪಸ್ಥಿತರಿದ್ದರು.</p>



<p>ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ಧಲಿಂಗಪ್ಪ, ಡಿವೈಎಸ್ಪಿಗಳಾದ ಬೆಳ್ಳಿಯಪ್ಪ ಕೆ.ಯು., ದಿನಕರ ಕೆ.ಪಿ., ಅರವಿಂದ ಕಲಗುಜ್ಜಿ, ಮತ್ತು ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಮಂಜಪ್ಪ, ಮತ್ತು ದೇವರಾಜ್ ಸ್ಥಳದಲ್ಲಿ ಹಾಜರಿದ್ದರು. ನ್ಯಾಯಾಲಯದ ಆವರಣದಲ್ಲಿ ನೂರಾರು ಪೊಲೀಸರನ್ನು ನಿಯೋಜಿಸಲಾಗಿತ್ತು. ಆರೋಪಿಯನ್ನು ನೋಡಲು ನ್ಯಾಯಾಲಯದ ಸುತ್ತ ಜನ ಜಮಾಯಿಸಿದ್ದರು.</p>
]]></content:encoded>
					
		
		
			</item>
		<item>
		<title>ಆರೋಪಿ ಪ್ರವೀಣ್ ಅರುಣ್ ಚೌಗಲೆಯ ವಿಚಾರಣೆ ನಡೆಸುತ್ತಿದ್ದೇವೆ &#8211; ಎಸ್ಪಿ ಡಾ. ಅರುಣ್</title>
		<link>https://peepalmedia.com/we-are-interrogating-praveen-arun-chowgale/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 15 Nov 2023 06:26:34 +0000</pubDate>
				<category><![CDATA[ಉಡುಪಿ]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[nejaru]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[udupi]]></category>
		<guid isPermaLink="false">https://peepalmedia.com/?p=32189</guid>

					<description><![CDATA[ಉಡುಪಿ: “ಉಡುಪಿ ಜಿಲ್ಲೆಯ ನೇಜಾರು ಎಂಬಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ (39) ಎಂಬಾತನನ್ನು ಜಿಲ್ಲಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ” ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ಅರುಣ್ ತಿಳಿಸಿದ್ದಾರೆ. 15ರಂದು ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೊಲೆ ಪ್ರಕರಣದಲ್ಲಿ ಆತನ ಪಾತ್ರ ಸಾಬೀತಾದರೆ ಕಾನೂನು ಪ್ರಕಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದರು. ಪ್ರಕರಣಕ್ಕೆ ಸಂಬಂಧಿಸಿದಂತೆ [&#8230;]]]></description>
										<content:encoded><![CDATA[
<p>ಉಡುಪಿ: “ಉಡುಪಿ ಜಿಲ್ಲೆಯ ನೇಜಾರು ಎಂಬಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ (39) ಎಂಬಾತನನ್ನು ಜಿಲ್ಲಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ” ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ಅರುಣ್ ತಿಳಿಸಿದ್ದಾರೆ.</p>



<p>15ರಂದು ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೊಲೆ ಪ್ರಕರಣದಲ್ಲಿ ಆತನ ಪಾತ್ರ ಸಾಬೀತಾದರೆ ಕಾನೂನು ಪ್ರಕಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದರು.</p>



<p>ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ತಂಡಗಳನ್ನು ರಚಿಸಿ ತನಿಖೆ ನಡೆಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕುಡುಚಿ ಪೊಲೀಸ್ ಠಾಣೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಉಡುಪಿಗೆ ಕರೆತರಲಾಗಿದೆ. ಇದೀಗ ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿದ್ದು, ಹೆಚ್ಚಿನ ಮಾಹಿತಿ ಪಡೆಯಲಾಗುವುದು ಎಂದರು.</p>



<p>ಕೆಲವು ತಾಂತ್ರಿಕ ಮತ್ತು ಗುಪ್ತಚರ ಮಾಹಿತಿಯ ಪ್ರಕಾರ ಪ್ರವೀಣನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಿಚಾರಣೆ ಬಳಿಕ ಕೊಲೆಗೆ ಕಾರಣ ಸೇರಿದಂತೆ ಹಲವು ಮಾಹಿತಿ ಹೊರಬೀಳಲಿದೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.</p>



<p>ಸಮಗ್ರ ತನಿಖೆಯ ನಂತರ ಮಾಧ್ಯಮಗಳಿಗೆ ಹೆಚ್ಚಿನ ಮಾಹಿತಿ ನೀಡಲಾಗುವುದು. ಪ್ರಸ್ತುತ, ಆತ ಸಿಐಎಸ್‌ಎಫ್ ಅಥವಾ ಸಿಆರ್‌ಪಿಎಫ್‌ನಲ್ಲಿ ಕೆಲಸ ಮಾಡುತ್ತಿದ್ದಾನೆಯೇ ಎನ್ನುವುದನ್ನು ನಾವು ಖಚಿತಪಡಿಸಲು ಸಾಧ್ಯವಿಲ್ಲ. ಅವರು ಸಿವಿಲ್ ಪೊಲೀಸ್ ಆಗಿ ಕೆಲಸ ಮಾಡಿರಬಹುದು ಆದರೆ ಇನ್ನೂ ದೃಢಪಟ್ಟಿಲ್ಲ ಎಂದು ಅವರು ಹೇಳಿದರು.</p>



<p>ಈ ವೇಳೆ 15-20 ಮಂದಿ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ. ಅದೇ ರೀತಿ ಪ್ರವೀಣ್ ಅವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸ್ಪಿ ಡಾ.ಅರುಣ್ ಮಾಹಿತಿ ನೀಡಿದ್ದಾರೆ.</p>
]]></content:encoded>
					
		
		
			</item>
	</channel>
</rss>
