<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>NITK &#8211; Peepal Media</title>
	<atom:link href="https://peepalmedia.com/tag/nitk/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 01 Dec 2022 04:24:19 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>NITK &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಕೊನೆಗೂ ಸುರತ್ಕಲ್‌ ಟೋಲ್‌ ಅಧಿಕೃತವಾಗಿ ತೆರವು</title>
		<link>https://peepalmedia.com/tolgate-closed-at-nitk-suratkal/</link>
		
		<dc:creator><![CDATA[Peepal Media]]></dc:creator>
		<pubDate>Thu, 01 Dec 2022 04:24:18 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[muneer katipalla]]></category>
		<category><![CDATA[NITK]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[suratkal]]></category>
		<category><![CDATA[Suratkal illegal toll gate]]></category>
		<guid isPermaLink="false">https://peepalmedia.com/?p=17130</guid>

					<description><![CDATA[ಮಂಗಳೂರು: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಜನರ ಹೋರಾಟಕ್ಕೆ ಕೊನೆಗೂ ಜಯ ದೊರಕಿದ್ದು, ತಡರಾತ್ರಿ ಹನ್ನೆರಡು ಗಂಟೆಯಿಂದ ಸುಂಕ ವಸೂಲಿ ನಿಲ್ಲಿಸಲಾಗಿದೆ. ಕರಾವಳಿ ಜಿಲ್ಲೆಯ ಜನರ ಹಲವು ವರ್ಷಗಳ ಆಗ್ರಹವೊಂದು ಕಡೆಗೂ ಈಡೇರಿದಂತಾಗಿದೆ ಮತ್ತು ಸುಮಾರು ವರ್ಷಗಳ ಹೋರಾಟವೊಂದಕ್ಕೆ ಈ ಮೂಲಕ ಒಂದು ತಾರ್ಕಿಕ ಅಂತ್ಯ ಕಂಡಂತಾಗಿದೆ. ಈ ಮೊದಲು ಸರ್ಕಾರ ಸುರತ್ಕಲ್‌ ಟೋಲ್‌ನ ಸುಂಕವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡಲು ಯೋಜಿಸಿತ್ತಾದರೂ ಆ ರಸ್ತೆಯ ಮಾಲಕ ಸಂಸ್ಥೆ ನವಯುಗ ಅದಕ್ಕೆ ಒಪ್ಪಿಗೆ ನೀಡದ ಕಾರಣ ಸದ್ಯಕ್ಕೆ ಹೆಜಮಾಡಿಯಲ್ಲಿ [&#8230;]]]></description>
										<content:encoded><![CDATA[
<p>ಮಂಗಳೂರು: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಜನರ ಹೋರಾಟಕ್ಕೆ ಕೊನೆಗೂ ಜಯ ದೊರಕಿದ್ದು, ತಡರಾತ್ರಿ ಹನ್ನೆರಡು ಗಂಟೆಯಿಂದ ಸುಂಕ ವಸೂಲಿ ನಿಲ್ಲಿಸಲಾಗಿದೆ.</p>



<p>ಕರಾವಳಿ ಜಿಲ್ಲೆಯ ಜನರ ಹಲವು ವರ್ಷಗಳ ಆಗ್ರಹವೊಂದು ಕಡೆಗೂ ಈಡೇರಿದಂತಾಗಿದೆ ಮತ್ತು ಸುಮಾರು ವರ್ಷಗಳ ಹೋರಾಟವೊಂದಕ್ಕೆ ಈ ಮೂಲಕ ಒಂದು ತಾರ್ಕಿಕ ಅಂತ್ಯ ಕಂಡಂತಾಗಿದೆ. ಈ ಮೊದಲು ಸರ್ಕಾರ ಸುರತ್ಕಲ್‌ ಟೋಲ್‌ನ ಸುಂಕವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡಲು ಯೋಜಿಸಿತ್ತಾದರೂ ಆ ರಸ್ತೆಯ ಮಾಲಕ ಸಂಸ್ಥೆ ನವಯುಗ ಅದಕ್ಕೆ ಒಪ್ಪಿಗೆ ನೀಡದ ಕಾರಣ ಸದ್ಯಕ್ಕೆ ಹೆಜಮಾಡಿಯಲ್ಲಿ ಹೆಚ್ಚುವರಿ ಸುಂಕ ವಸೂಲಿ ಮಾಡಲಾಗುತ್ತಿಲ್ಲ.</p>



<p>ನವಯುಗ ಸಂಸ್ಥೆಯೊಡನೆ ಸರಕಾರದ ಚೌಕಾಶಿ ಮುಂದುವರೆದಿದೆಯಾದರೂ ಈಗಾಗಲೇ ಜನರ ಕಣ್ಣಲ್ಲಿ ವಿಲನ್‌ ಆಗಿರುವ ಸಂಸ್ಥೆ ಹೆಚ್ಚುವರಿ ಸುಂಕ ವಸೂಲಿ ಮಾಡುವ ಮೂಲಕ ಇನ್ನಷ್ಟು ಜನಾಕ್ರೋಶಕ್ಕೆ ಈಡಾಗಲು ಹೆದರುತ್ತಿದೆ ಎನ್ನುವುದು ಮೂಲಗಳ ಅಭಿಪ್ರಾಯ. </p>



<p>ಎನ್‌ಐಟಿಕೆ ಬಳಿಯ ಟೋಲ್ ಮುಚ್ಚುವುದರಿಂದ ಸರಕಾರಕ್ಕೆ ನಷ್ಟವಾಗಲಿದೆಯೆನ್ನುವುದು ಸದ್ಯದ ಸರಕಾರದ ದೂರು. ಇಲ್ಲಿನ ದರವನ್ನು ಹೆಜಮಾಡಿ ಟೋಲ್‌ನಲ್ಲಿ ಪಡೆಯುವುದು ಸರಕಾರದ ಉದ್ದೇಶವಾಗಿತ್ತು. ಆದರೆ ಅದರ ಬದಲಾಗಿ ಎನ್ಐ‌ಟಿಕೆ ಟೋಲ್‌ನ ಮತ್ತೊಂದು ಟೋಲ್‌ ಬಹ್ಮರಕೂಟ್ಲು, ತಲಪಾಡಿ, ಮತ್ತು ಹೆಜಮಾಡಿ ಸುಂಕದಕಟ್ಟೆಗಳಲ್ಲಿ ದರಗಳನ್ನು ವಿಭಜಿಸಿ ಪಡೆದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗಲಿದೆ. ಹೆಜಮಾಡಿ ಟೋಲ್‌ನಲ್ಲಿ ಹೆಚ್ಚುವರಿಯಾಗಿ 60 ರೂ. ಪಡೆಯುವ ಬದಲು ಈ ಮೂರು ಟೋಲ್‌ಗಳಲ್ಲಿ ತಲಾ 10 ರೂ. ಹೆಚ್ಚುವರಿಯಾಗಿ ಪಡೆದರೆ ಜನರಿಗೆ ಅನುಕೂಲವಾಗುತ್ತದೆಯೆನ್ನುವುದು ಸಾರ್ವಜನಿಕ ಅಭಿಪ್ರಾಯವಾಗಿದೆ. </p>



<p>ನಿನ್ನೆ ಟೋಲ್‌ಗೇಟ್‌ ವಿರೋಧಿ ಸಮಿತಿ ತಡರಾತ್ರಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ನೂರಾರು ಜನರು ಸ್ವಯಂಪ್ರೇರಣೆಯಿಂದ ಪಾಲ್ಗೊಂಡಿದ್ದರು. ಮೇಲಿನಿಂದ ಕೆಳಗಿನವರೆಗೂ ಆಡಳಿತ ಪಕ್ಷದವರೇ ಇದ್ದೂ ಸ್ಥಳೀಯ ರಾಜಕಾರಣಿಗಳಿಗೆ ಇದೊಂದು ಟೋಲ್‌ ತೆರೆಸಲು ಜನರು ಒತ್ತಡ ಹೇರಬೇಕಾಗಿ ಬಂದಿದ್ದು ನಿಜಕ್ಕೂ ವಿಪರ್ಯಾಸ ಎಂದು ಹಿರಿಯ ಹೋರಾಟಗಾರರೊಬ್ಬರು ಅಭಿಪ್ರಾಯಪಟ್ಟರು.</p>
]]></content:encoded>
					
		
		
			</item>
		<item>
		<title>ಸುರತ್ಕಲ್ ಟೋಲ್ ತಕ್ಷಣ ತೆರವಿಗೆ ಆಗ್ರಹಿಸಿ ಅಕ್ಟೋಬರ್ 28ರಿಂದ ಅನಿರ್ಧಿಷ್ಟಕಾಲ ಧರಣಿ</title>
		<link>https://peepalmedia.com/indefinite-sit-in-from-october-28-demanding-immediate-removal-of-suratkal-toll/</link>
		
		<dc:creator><![CDATA[Peepal Media]]></dc:creator>
		<pubDate>Mon, 24 Oct 2022 13:06:00 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mangalore]]></category>
		<category><![CDATA[muneer katipalla]]></category>
		<category><![CDATA[NITK]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=12798</guid>

					<description><![CDATA[ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಬಂಧಿಸಿ ಸರಕಾರ ಪದೇ ಪದೆ ಮಾತು ತಪ್ಪುತ್ತಿದೆ‌. ತೆರವಿನ ತೀರ್ಮಾನ ಆಗಿದೆ ಎಂದು ಅಧಿಕೃತವಾಗಿ ಪ್ರಕಟಿಸುವ ಸರಕಾರ ಹಾಗೂ ಅಧೀನ ಅಧಿಕಾರಿಗಳು ಟೋಲ್ ತೆರವಿಗೆ ಸಂಬಂಧಿಸಿ ವಾರ, ತಿಂಗಳು ಎಂದು ವರ್ಷದಿಂದ ಕಾಲಹರಣ ಮಾಡುತ್ತಿರುವುದು ಜನರ ಸಹನೆಯ ಕಟ್ಟೆ ಒಡೆಯುವಂತೆ ಮಾಡಿದೆ. ಜುಲೈ ತಿಂಗಳ ಆರಂಭದಿಂದ ಇಂದು, ನಾಳೆ ಎಂದು ಜನರನ್ನು ವಂಚಿಸುತ್ತಿರುವುದು ಖಂಡನೀಯ. ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆ ಸಂದರ್ಭ ಜನಾಕ್ರೋಶ ಮುಗಿಲು ಮುಟ್ಟಿದಾಗ ಸ್ವತಹ [&#8230;]]]></description>
										<content:encoded><![CDATA[
<p>ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಬಂಧಿಸಿ ಸರಕಾರ ಪದೇ ಪದೆ ಮಾತು ತಪ್ಪುತ್ತಿದೆ‌. ತೆರವಿನ ತೀರ್ಮಾನ ಆಗಿದೆ ಎಂದು ಅಧಿಕೃತವಾಗಿ ಪ್ರಕಟಿಸುವ ಸರಕಾರ ಹಾಗೂ ಅಧೀನ ಅಧಿಕಾರಿಗಳು ಟೋಲ್ ತೆರವಿಗೆ ಸಂಬಂಧಿಸಿ ವಾರ, ತಿಂಗಳು ಎಂದು ವರ್ಷದಿಂದ ಕಾಲಹರಣ ಮಾಡುತ್ತಿರುವುದು ಜನರ ಸಹನೆಯ ಕಟ್ಟೆ ಒಡೆಯುವಂತೆ ಮಾಡಿದೆ. ಜುಲೈ ತಿಂಗಳ ಆರಂಭದಿಂದ ಇಂದು, ನಾಳೆ ಎಂದು ಜನರನ್ನು ವಂಚಿಸುತ್ತಿರುವುದು ಖಂಡನೀಯ. ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆ ಸಂದರ್ಭ ಜನಾಕ್ರೋಶ ಮುಗಿಲು ಮುಟ್ಟಿದಾಗ ಸ್ವತಹ ಸಂಸದರೇ 20 ದಿನಗಳ ಕಾಲಾವಧಿ ನೀಡುವಂತೆ ಕೋರಿದ್ದಾರೆ. ಆ ಅವಧಿ ನವಂಬರ್ 07 ಕ್ಕೆ ಕೊನೆಗೊಳ್ಳುತ್ತದೆ. ಟೋಲ್ ಮುಚ್ಚುವ ತೀರ್ಮಾನ ಜಾರಿಗೊಳಿಸುವುದು, ನೀಡಿದ ಭರವಸೆಯಂತೆ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ 28 ರಿಂದ ಸುರತ್ಕಲ್ ಟೋಲ್ ಗೇಟ್ ಸಮೀಪ ಬೇಡಿಕೆ ಈಡೇರುವವರಗೆ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ಚದಲ್ಲಿ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿ ನಡೆಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಿರ್ಧರಿಸಿದೆ.</p>



<p>ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಈಗ ಹೋರಾಟ ಸಮಿತಿಯ ಹಾಗೂ ಜೊತೆಗಿರುವ ಸಮಾನ ಮನಸ್ಕ ಸಂಘಟನೆಯ ಹೋರಾಟವಾಗಿ ಮಾತ್ರ ಉಳಿದಿಲ್ಲ. ಅಕ್ಟೋಬರ್ 18 ರಂದು ಎಲ್ಲಾ ರೀತಿಯ ದಮನಗಳ ನಡುವೆಯೂ ಟೋಲ್ ಗೇಟ್ ಮುತ್ತಿಗೆಗೆ ಅಪಾರ ಜನ ಬೆಂಬಲ ದೊರಕಿರುವುದು ಟೋಲ್ ವಿರೋಧಿ ಹೋರಾಟ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸಮಸ್ತ ಜನತೆಯ ಹೋರಾಟವಾಗಿ ಪರಿವರ್ತನೆಗೊಂಡಿರುವುದನ್ನು ಎತ್ತಿತೋರಿಸುತ್ತದೆ. ಇಷ್ಟು ದೊಡ್ಡ ಪ್ರಮಾಣದ ಜನಾಗ್ರಹದ ಹೊರತಾಗಿಯೂ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ಬಿಜೆಪಿ ಸರಕಾರ ಹಾಗೂ ಅವಿಭಜಿತ ದ‌.ಕ‌‌. ಜಿಲ್ಲೆಯ ಸಂಸದ, ಶಾಸಕರುಗಳು ಮುಂದಾಗದಿರುವುದು ಜನಸಾಮಾನ್ಯರ ಬೇಡಿಕೆಗಳ ಕುರಿತು ಅವರಿಗಿರುವ ಅನಾದಾರ, ಅಸಹ‌ನೆಯನ್ನು ಎತ್ತಿತೋರಿಸುತ್ತದೆ ಎನ್ನುವುದು ಹೋರಾಟ ಸಮಿತಿಯ ಅಭಿಪ್ರಾಯ.</p>


<div class="wp-block-image">
<figure class="alignright size-large"><img fetchpriority="high" decoding="async" width="1024" height="461" src="https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-1024x461.jpeg" alt="" class="wp-image-12808" srcset="https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-1024x461.jpeg 1024w, https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-300x135.jpeg 300w, https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-768x346.jpeg 768w, https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-1536x691.jpeg 1536w, https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-150x68.jpeg 150w, https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-696x313.jpeg 696w, https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM-1068x481.jpeg 1068w, https://peepalmedia.com/wp-content/uploads/2022/10/WhatsApp-Image-2022-10-24-at-5.33.38-PM.jpeg 1600w" sizes="(max-width: 1024px) 100vw, 1024px" /></figure></div>


<p>&#8220;ಇವರುಗಳ ನಡೆಯು ನವಯುಗದಂತಹ ದೈತ್ಯ ಕಂಪೆನಿಗಳ ಹಿತಾಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿರುವುದನ್ನು ಜಾಹೀರು ಪಡಿಸಿದೆ. ಇದು ಖಂಡನೀಯ. ಸಂಸದ ನಳಿನ್ ಕುಮಾರ್ ಕಟೀಲ್ 20 ದಿನಗಳ ಕಾಲಾವಧಿ ಕೋರಿರುವುದು, ಉಳಿದ ಶಾಸಕರುಗಳು ಕನಿಷ್ಟ ಪ್ರತಿಕ್ರಿಯೆಯನ್ನೂ ನೀಡದಿರುವುದು ಟೋಲ್ ಗೇಟ್ ಮುಚ್ಚುವ ತೀರ್ಮಾನ ಜಾರಿಯಾಗುವ ಕುರಿತು ನಮಗೆ ಅನುಮಾನಗಳನ್ನು‌ ಹುಟ್ಟು ಹಾಕಿದೆ. ಮುತ್ತಿಗೆ ಸಂದರ್ಭದ ಬೆಳವಣಿಗೆಗಳು ದೊಡ್ಡ ವಿವಾದವಾಗಿ ಪರಿವರ್ತನೆಗೊಂಡಾಗಲು ಬಾಯಿ ಬಿಚ್ಚದ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಈಗ ದಿಢೀರ್ ಆಗಿ ಟೋಲ್ ಗೇಟ್ ಮುಚ್ಚುವ ಅವಧಿಯನ್ನು ನವಂಬರ್ ತಿಂಗಳ ಕೊನೆಯವರಗೆ ಮುಂದೂಡಿರುವುದು, ಸಂಸದ ನಳಿನ್ ಕುಮಾರ್ ಕಟೀಲ್ ಈ ಕುರಿತು ಪ್ರತಿಕ್ರಿಯಿಸದಿರುವುದು ಸರಕಾರ ಹಾಗೂ ಸಂಸದ, ಶಾಸಕರುಗಳ ಮೇಲಿನ ಭರವಸೆಯನ್ನು ಪೂರ್ತಿ ಕಳಚಿ ಹಾಕಿದೆ. ಆದುದರಿಂದ ಸಂಸದ ನಳಿನ್ ಕೇಳಿದ ಕಾಲಾವಧಿಯಂತೆ ನವಂಬರ್ 07 ರ ಒಳಗಡೆ ಸುರತ್ಕಲ್ ಟೋಲ್ ಗೇಟ್ ಸುಲಿಗೆಗೆ ಅಂತ್ಯ ಹಾಡುವಂತೆ ಒತ್ತಾಯಿಸಿ ಹಗಲು ರಾತ್ರಿ ಧರಣಿ ಆರಂಭಿಸುತ್ತಿದ್ದೇವೆ,&#8221; ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.</p>



<p>&#8220;ಅವಿಭಜಿತ ಜಿಲ್ಲೆಯ ಸಂಸದರು, ಶಾಸಕರುಗಳು ಮನಸ್ಸು ಮಾಡಿದರೆ ಸುರತ್ಕಲ್ ಟೋಲ್ ಗೇಟ್ ತೆರವು 24 ಗಂಟೆಯ ಅವಧಿಯಲ್ಲಿ ನಿಯಮಬದ್ದವಾಗಿಯೇ ಆಗಿಹೋಗುತ್ತದೆ.‌ ಆದರೆ ವ್ಯಾಪಾರಿ ಹಿತಾಸಕ್ತಿಗಳ ಪರವಹಿಸಿ ಜನವಿರೋಧಿ ನಿಲುವುಗಳಿಗೇ ಅಂಟಿಕೊಂಡಿರುವ ಜನಪ್ರತಿನಿಧಿಗಳು ಜನಾಭಿಪ್ರಾಯವನ್ನು ತಿರಸ್ಕರಿಸುತ್ತಿದ್ದಾರೆ. ನವಯುಗ್ ಕಂಪೆನಿಯ ಬಾಹುಗಳಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಬಂಧಿಯಾಗಿದ್ದಾರೆ, ಜನತೆಗಿಂತ ಕಂಪೆನಿಗಳಿಗೆ ಪೂರ್ತಿನಿಷ್ಟರಾಗಿದ್ದಾರೆ ಎಂಬುದು ಇವರ ಈಗಿನ ನಡವಳಿಕೆಯಿಂದ ಹೆಚ್ಚು ಸ್ಪಷ್ಟವಾಗುತ್ತಿದೆ.&#8221; ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<p><strong>ಪೊಲೀಸ್ ಕೇಸು ವಾಪಸಾತಿಗೆ ಆಗ್ರಹ</strong></p>



<p>ಟೋಲ್ ಗೇಟ್ ಮುತ್ತಿಗೆ ಶಾಂತಿಯುತವಾಗಿ ನಡೆದಿದ್ದರೂ ಶಾಸಕ, ಸಂಸದರುಗಳ ಕುಮ್ಮಕ್ಕಿನಿಂದ ಟೋಲ್ ಗುತ್ತಿಗೆದಾರರ ಮೂಲಕ ಬಿಜೆಪಿ ಸಂಸದ, ಶಾಸಕರುಗಳು ಹೋರಾಟ ಸಮಿತಿಯ ಮೇಲೆ ಎರಡು ಮೊಕದ್ದಮೆಗಳನ್ನು ಹೂಡಿಸಿದ್ದಾರೆ. ಇಂತಹ ಮೊಕದ್ದಮೆ, ಪೊಲೀಸ್ ಬಲಪ್ರಯೋಗದಿಂದ ಹೋರಾಟವನ್ನು ಹಿಮ್ಮೆಟ್ಟಿಸಲು ಸಾಧ್ಯವಿಲ್ಲ. ಟೋಲ್ ಗೇಟ್ ಮುಚ್ಚುವುದು ಮಾತ್ರ ಹೋರಾಟ ಕೊನೆಗೊಳಿಸಲು ಇರುವ ದಾರಿ. ಆಧಾರರಹಿತ ಸುಳ್ಳು ಮೊಕದ್ದಮೆಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ನಾವು ಇದೇ ಸಂದರ್ಭ ಆಗ್ರಹಿಸುತ್ತಿದ್ದೇವೆ. ಬದಲಿಗೆ ಸುಳ್ಳು ಮೊಕದ್ದಮೆಯ ಆಧಾರದಲ್ಲಿ ಹೋರಾಟಗಾರರನ್ನು ಬಂಧಿಸಲು ಮುಂದಾದರೆ ನಾವು ಜೈಲು ಸೇರಲು ಸಿದ್ದರಾಗಿದ್ದೇವೆ. ಈ ಕುರಿತು ಕಾನೂನು ಹೋರಾಟಕ್ಕೆ ನಮ್ಮ ಜೊತೆಗಿರುವ ಜನಪರ ವಕೀಲರ ವೇದಿಕೆ ಸಿದ್ದತೆ ನಡೆಸುತ್ತಿದೆ.</p>



<p><strong>ಜನತೆಯಲ್ಲಿ ಮನವಿ</strong></p>



<p>&#8220;ಟೋಲ್ ಗೇಟ್ ವಿರೋಧಿ ಹೋರಾಟ ಪಕ್ಷಾತೀತವಾಗಿ ನಡೆಯುತ್ತಿದೆ.‌ ದ.ಕ. ಉಡುಪಿ ಜಿಲ್ಲೆಗಳ ಒಕ್ಕೊರಲ ಜನಾಭಿಪ್ರಾಯವನ್ನು ಈ ಹೋರಾಟದಲ್ಲಿ ಕ್ರೋಢೀಕರಿಸುವ ಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತಿದೆ. ಟೋಲ್ ಗೇಟ್ ತೆರವುಗೊಳ್ಳದೆ ನಮ್ಮ ಹೋರಾಟ ನಿಲ್ಲದು. ಜನತೆ ಇಟ್ಟಿರುವ ನಂಬಿಕೆಯನ್ನು ಹುಸಿಗೊಳಿಸದು. ಹಗಲು ರಾತ್ರಿ ಅನಿರ್ಧಿಷ್ಟಾವಧಿ ಧರಣಿಯನ್ನು ಯಶಸ್ಸುಗೊಳಿಸಲು ಜನತೆ ಒಗ್ಗಟ್ಟಿನ ಬೆಂಬಲ ನೀಡಬೇಕು ಎಂದು ವಿನೀತವಾಗಿ ಮನವಿ ಮಾಡುತ್ತಿದ್ದೇವೆ.&#8221; ಎಂದು ಸಮಿತಿ ತನ್ನ ಮನವಿಯಲ್ಲಿ ತಿಳಿಸಿದೆ.</p>



<p>ಪತ್ರಿಕಾ ಗೋಷ್ಟಿಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಇದರ ಸಂಚಾಲಕರಾದ ಮುನೀರ್‌ ಕಾಟಿಪಳ್ಳ, ವಿವಿಧ ಸಂಘಟನೆಗಳ ದಿನೇಶ್ ಹೆಗ್ಡೆ ಉಳೆಪಾಡಿ, ಪುರುಷೋತ್ತಮ ಚಿತ್ರಾಪುರ, ರಘು ಎಕ್ಕಾರು, ಶೇಖರ ಹೆಜಮಾಡಿ, ಕಿಶನ್ ಹೆಗ್ಡೆ ಕೊಲ್ಕೆಬೈಲು, ದಿನೇಶ್ ಕುಂಪಲ, ಬಿ ಕೆ ಇಮ್ತಿಯಾಜ್, ಮುಹಮ್ಮದ್ ಕುಂಜತ್ತಬೈಲ್, ಪ್ರತಿಭಾ ಕುಳಾಯಿ, ದಯಾನಂದ ಶೆಟ್ಟಿ, ಶ್ರೀನಾಥ್ ಕುಲಾಲ್, ರಮೇಶ್ ಟಿ ಎನ್. ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.</p>
]]></content:encoded>
					
		
		
			</item>
	</channel>
</rss>
