<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Nuh Riots &#8211; Peepal Media</title>
	<atom:link href="https://peepalmedia.com/tag/nuh-riots/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 12 Aug 2023 07:45:25 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Nuh Riots &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ನೂಹ್ ಗಲಭೆ: ಸುದರ್ಶನ ಟಿವಿ ವಾಹಿನಿಯ ಸ್ಥಾನಿಕ ಸಂಪಾದಕನ ಬಂಧನ</title>
		<link>https://peepalmedia.com/police-arrested-sudarshan-tv-resident-editor/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 12 Aug 2023 07:45:24 +0000</pubDate>
				<category><![CDATA[ದೇಶ]]></category>
		<category><![CDATA[Nuh Riots]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[police]]></category>
		<guid isPermaLink="false">https://peepalmedia.com/?p=25379</guid>

					<description><![CDATA[ಚಂಡೀಗಢ: ನೂಹ್ ಗಲಭೆ ವೇಳೆ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಹಿಂದಿ ಚಾನೆಲ್ ಸುದರ್ಶನ್ ಟಿವಿಯ ಸಂಪಾದಕನನ್ನು ಪೊಲೀಸರು ಬಂಧಿಸಿದ್ದಾರೆ. ಗಲಭೆ ಹೆಚ್ಚಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಲಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ. ಸುದರ್ಶನ್ ಟಿವಿ ಚಾನೆಲ್ ರೆಸಿಡಂಟ್ ‌ಎಡಿಟರ್ ಮುಖೇಶ್ ಕುಮಾರ್ ಅವರನ್ನು ಪೊಲೀಸರು ಗುರುಗ್ರಾಮ್‌ನಲ್ಲಿ ಬಂಧಿಸಿದ್ದಾರೆ. ‌ ಆದರೆ.. &#8220;ಕೆಲ ದರೋಡೆಕೋರರು ಆತನನ್ನು ಬಂಧಿಸಿದ್ದಾರೆ&#8221; ಎಂದು ಸುದರ್ಶನ್ ವಾಹಿನಿ ಹೇಳಿತ್ತು. ಈ ಕುರಿತು ವಿವರಣೆ ನೀಡಿರುವ ಪೊಲೀಸರು, ವಾಹಿನಿಯ ಸಂಪಾದಕನನ್ನು ಸೈಬರ್ [&#8230;]]]></description>
										<content:encoded><![CDATA[
<p>ಚಂಡೀಗಢ: ನೂಹ್ ಗಲಭೆ ವೇಳೆ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಹಿಂದಿ ಚಾನೆಲ್ ಸುದರ್ಶನ್ ಟಿವಿಯ ಸಂಪಾದಕನನ್ನು ಪೊಲೀಸರು ಬಂಧಿಸಿದ್ದಾರೆ. ಗಲಭೆ ಹೆಚ್ಚಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಲಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.</p>



<p>ಸುದರ್ಶನ್ ಟಿವಿ ಚಾನೆಲ್ ರೆಸಿಡಂಟ್ ‌ಎಡಿಟರ್ ಮುಖೇಶ್ ಕುಮಾರ್ ಅವರನ್ನು ಪೊಲೀಸರು ಗುರುಗ್ರಾಮ್‌ನಲ್ಲಿ ಬಂಧಿಸಿದ್ದಾರೆ. ‌</p>



<p>ಆದರೆ.. &#8220;ಕೆಲ ದರೋಡೆಕೋರರು ಆತನನ್ನು ಬಂಧಿಸಿದ್ದಾರೆ&#8221; ಎಂದು ಸುದರ್ಶನ್ ವಾಹಿನಿ ಹೇಳಿತ್ತು. ಈ ಕುರಿತು ವಿವರಣೆ ನೀಡಿರುವ ಪೊಲೀಸರು, ವಾಹಿನಿಯ ಸಂಪಾದಕನನ್ನು ಸೈಬರ್ ಕ್ರೈಂ ವಿಭಾಗ ಬಂಧಿಸಿದೆ ಎಂದು ತಿಳಿಸಿದ್ದಾರೆ.</p>



<p>ಆಲ್ ಜಜೀರಾ ವಾಹಿನಿಯ ಒತ್ತಡದ ಮೇರೆಗೆ ಗುರುಗ್ರಾಮ ಪೊಲೀಸರು ಹಿಂದೂ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಮುಖೇಶ್ ಕುಮಾರ್ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದ. ವಿದೇಶಿ ಮಾಧ್ಯಮಗಳು ಗುರುಗ್ರಾಮ್ ಪೊಲೀಸರಿಗೆ ಕರೆ ಮಾಡಿ ಹಿಂದೂಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿ ಸಂಪಾದಕರು ಪೋಸ್ಟ್ ಮಾಡಿದ್ದನು.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="hi" dir="ltr">गुड़गांव की पुलिस कमिश्नर को <a href="https://twitter.com/AJENews?ref_src=twsrc%5Etfw">@AJENews</a>  (अल जजीरा न्यूज चैनल) से फ़ोन किया जा रहा है<br><br>हिंदुओं के खिलाफ कार्रवाई के लिए दबाव बनाया जा रहा है।<br><br>और <a href="https://twitter.com/DC_Gurugram?ref_src=twsrc%5Etfw">@DC_Gurugram</a> फोन आने के बाद इतने दबाव में आ जाती हैं कि कहीं से भी हिंदूवादी कार्यकर्ताओं को उठा ले रही है<a href="https://twitter.com/cmohry?ref_src=twsrc%5Etfw">@cmohry</a> कृपया संज्ञान लें <a href="https://t.co/bIjVYfR0Di">pic.twitter.com/bIjVYfR0Di</a></p>&mdash; Mukesh Kumar (@mukeshkrd) <a href="https://twitter.com/mukeshkrd/status/1688972970612731904?ref_src=twsrc%5Etfw">August 8, 2023</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು ಕುಮಾರ್ ಪೋಸ್ಟ್ ನಿರಾಧಾರ ಎಂದು ತಳ್ಳಿ ಹಾಕಿ, ಅವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದಿತ್ತು. ಐಟಿ ಕಾಯ್ದೆಯಡಿ ಸಂಪಾದಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಆದರೆ, ಕುಮಾರ್ ತಮ್ಮ ಕರ್ತವ್ಯದ ಭಾಗವಾಗಿ ಮೇವಾತ್ ಪ್ರದೇಶಕ್ಕೆ ತೆರಳಿದ್ದರು ಎಂದು ಸುದರ್ಶನ್ ಟಿವಿ ತಿಳಿಸಿದೆ. ಕೆಲ ಪುಂಡರು ಆತನನ್ನು ವಶಕ್ಕೆ ಪಡೆದಿರುವುದು ಬೆಳಕಿಗೆ ಬಂದಿದೆ ಎಂದು ಅದು ಹೇಳಿದೆ. ಸುದರ್ಶನ್ ಟಿವಿ ಚಾನೆಲ್ ಮುಖ್ಯ ಸಂಪಾದಕ ಸುರೇಶ್ ಚವಾಣ್ಕೆ ಪೊಲೀಸರ ಕ್ರಮವನ್ನು ಖಂಡಿಸಿ ಟ್ವೀಟ್ ಮಾಡಿದ್ದಾರೆ. ಆದರೆ, ಕೆಲವು ಗಂಟೆಗಳ ನಂತರ ಮುಖೇಶ್ ಕುಮಾರ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.</p>



<p><a href="https://twitter.com/gurgaonpolice/status/1690014743484862465?s=20">https://twitter.com/gurgaonpolice/status/1690014743484862465?s=20</a></p>



<p>ಜುಲೈ 31ರಂದು ಹರಿಯಾಣದ ನೂಹ್‌ನಲ್ಲಿ ಗಲಭೆಗಳು ಭುಗಿಲೆದ್ದಿತ್ತು. ವಿಶ್ವ ಹಿಂದೂ ಪರಿಷತ್ ರಥಯಾತ್ರೆಯ ಸಮಯದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಪ್ರಾರಂಭವಾಯಿತು ಮತ್ತು ರಾಜ್ಯದಾದ್ಯಂತ ಹರಡಿತು. ಈ ಆಂದೋಲನಗಳಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ.</p>
]]></content:encoded>
					
		
		
			</item>
		<item>
		<title>ಹರಿಯಾಣ : ಶಾಂತಿ ಕದಡುತ್ತಿರುವ ವಿಎಚ್‌ಪಿ ಹಾಗೂ ಭಜರಂಗದಳ ನಿಷೇಧಕ್ಕೆ ಕಾಫ್ ಪಂಚಾಯತ್ ಕರೆ</title>
		<link>https://peepalmedia.com/khap-panchayat-calls-for-ban-on-vhp-and-bajrang-dal/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 11 Aug 2023 00:49:32 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[Bajarangdal]]></category>
		<category><![CDATA[haryana]]></category>
		<category><![CDATA[Khap Panchayat]]></category>
		<category><![CDATA[Nuh Riots]]></category>
		<category><![CDATA[vhp]]></category>
		<guid isPermaLink="false">https://peepalmedia.com/?p=25271</guid>

					<description><![CDATA[ಹರಿಯಾಣ : ರಾಜ್ಯದ ನುಹ್ ಜಿಲ್ಲೆಯಲ್ಲಿ ನಡೆದ ಕೋಮುಗಲಭೆಗಳ ನಂತರ ಹರಿಯಾಣಾದ ಸುಮಾರು 50 ಪಂಚಾಯತ್‌ಗಳು ಮುಸ್ಲಿಮರನ್ನು ಬಹಿಷ್ಕರಿಸಲು ಕರೆ ನೀಡಿವೆ. ಆದರೆ ರಾಜ್ಯದಲ್ಲಿ ತಮ್ಮದೇ ಆದ ಬಲ ಹೊಂದಿರುವ ರೈತ ಸಂಘಟನೆಗಳು ಹಾಗೂ ಖಾಫ್ ಪಂಚಾಯತ್ ಗಳು ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಮುಸ್ಲಿಂ ಸಮುದಾಯದವರ ಬಹಿಷ್ಕಾರಕ್ಕೆ ವಿರೋಧ ವ್ಯಕ್ತಪಡಿಸಿವೆ. ರಾಜ್ಯದಲ್ಲಿ ಕೋಮು ಉದ್ವಿಗ್ನತೆಯನ್ನು ಮಟ್ಟ ಹಾಕುವ ಉದ್ದೇಶದಿಂದ ಹರಿಯಾಣದ ಹಿಸಾರ್ ಬಾಸ್ ಗ್ರಾಮದಲ್ಲಿ ಖಾಫ್ ಸಭೆಯನ್ನು ಆಯೋಜಿಸಲಾಗಿತ್ತು. ಮುಸಲ್ಮಾನರಿಗೆ ರಕ್ಷಣೆಯ ಪ್ರಮುಖ ಉದ್ದೇಶದಿಂದ ಈ ಸಭೆಯನ್ನು [&#8230;]]]></description>
										<content:encoded><![CDATA[
<p>ಹರಿಯಾಣ : ರಾಜ್ಯದ ನುಹ್ ಜಿಲ್ಲೆಯಲ್ಲಿ ನಡೆದ ಕೋಮುಗಲಭೆಗಳ ನಂತರ ಹರಿಯಾಣಾದ ಸುಮಾರು 50 ಪಂಚಾಯತ್‌ಗಳು ಮುಸ್ಲಿಮರನ್ನು ಬಹಿಷ್ಕರಿಸಲು ಕರೆ ನೀಡಿವೆ. ಆದರೆ ರಾಜ್ಯದಲ್ಲಿ ತಮ್ಮದೇ ಆದ ಬಲ ಹೊಂದಿರುವ ರೈತ ಸಂಘಟನೆಗಳು ಹಾಗೂ ಖಾಫ್ ಪಂಚಾಯತ್ ಗಳು ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಮುಸ್ಲಿಂ ಸಮುದಾಯದವರ ಬಹಿಷ್ಕಾರಕ್ಕೆ ವಿರೋಧ ವ್ಯಕ್ತಪಡಿಸಿವೆ.</p>



<p>ರಾಜ್ಯದಲ್ಲಿ ಕೋಮು ಉದ್ವಿಗ್ನತೆಯನ್ನು ಮಟ್ಟ ಹಾಕುವ ಉದ್ದೇಶದಿಂದ ಹರಿಯಾಣದ ಹಿಸಾರ್ ಬಾಸ್ ಗ್ರಾಮದಲ್ಲಿ ಖಾಫ್ ಸಭೆಯನ್ನು ಆಯೋಜಿಸಲಾಗಿತ್ತು. ಮುಸಲ್ಮಾನರಿಗೆ ರಕ್ಷಣೆಯ ಪ್ರಮುಖ ಉದ್ದೇಶದಿಂದ ಈ ಸಭೆಯನ್ನು ನಡೆಸಲಾಗಿತ್ತು. ಅಷ್ಟೆ ಅಲ್ಲದೆ ರಾಜ್ಯದಲ್ಲಿ ಶಾಂತಿ ಕದಡುತ್ತಿರುವ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳವನ್ನು ನಿಷೇಧಿಸಲು ಖಾಫ್ ಸಭೆಯಲ್ಲಿ ಕರೆ ನೀಡಿವೆ.</p>



<p>ಬುಧವಾರ ಭಾರತೀಯ ಕಿಸಾನ್ ಮಜ್ದೂರ್ ಯೂನಿಯನ್ ಬ್ಯಾನರ್‌ ಅಡಿಯಲ್ಲಿ ಹಿಸಾರ್ ಬಾಸ್ ಗ್ರಾಮದಲ್ಲಿ ಮಹಾ ಪಂಚಾಯತ್ ಅನ್ನು ಆಯೋಜಿಸಲಾಗಿತ್ತು. ಈ ಮಹಾಪಂಚಾಯತ್ ನಲ್ಲಿ ರಾಜ್ಯಾದ್ಯಂತ ಸುಮಾರು 2,000 ರೈತ ಮುಖಂಡರು ಭಾಗಿಯಾಗಿದ್ದರು. ಮಹಾಪಂಚಾಯತ್ ನಲ್ಲಿ ಕೋಮು ಸೌಹಾರ್ದತೆ ಮತ್ತು ಸಹೋದರತ್ವವನ್ನು ಬಲಪಡಿಸಲು ಕರೆ ನೀಡಲಾಗಿದೆ.</p>



<p>ಮಹಾಪಂಚಾಯತ್ ಆಯೋಜಿಸಿದ್ದ ರೈತ ನಾಯಕ ಸುರೇಶ್ ಕೋಠ್ ಮಾತನಾಡಿ, &#8220;ರಾಜ್ಯದಲ್ಲಿ ಕೋಮು ಸೌಹಾರ್ದ ಕದಡಲು ಕೆಲವರು ಯತ್ನಿಸಿದ್ದಾರೆ. ಅವರಿಗೆ ಧೈರ್ಯವಿದ್ದರೆ ಈ ಮಹಾಪಂಚಾಯತ್ ನಡೆವ ಜಾಗಕ್ಕೆ ಬಂದು ಮುಸಲ್ಮಾನರಿಗೆ ಪ್ರವೇಶ ನೀಡುವುದನ್ನು ಹೇಗೆ ತಡೆಯುವರು ನೋಡೋಣ&#8221; ಎಂದು ಆಕ್ರೋಶ ಹೊರಹಾಕಿದ್ದಾರೆ. ಹಾಗೆಯೇ ಮೇವಾತ್ ನಲ್ಲಿ ಶಾಂತಿ ನೆಲೆಸುವಂತೆ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ನುಹ್ ಸೇರಿದಂತೆ ಹರಿಯಾಣದ ವಿವಿಧ ಜಿಲ್ಲೆಗಳಲ್ಲಿ ನಡೆದ ಹಿಂಸಾಚಾರದ ಅಡಿಯಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ, ಗಲಭೆಗೆ ಪ್ರಮುಖ ಕಾರಣರಾದ ಮೋನು ಮಾನೇಸರ್ ಹಾಗೂ ಬಿಟ್ಟು ಬಜರಂಗಿ ಅವರನ್ನು ಬಂಧಿಸುವಂತೆ ಒತ್ತಾಯಿಸಲಾಗಿದೆ. ಪ್ರಚೋದನಕಾರಿ ಭಾಷಣಗಳನ್ನು ಹಾಕಿ ಘರ್ಷಣೆಗೆ ಪ್ರಚೋದನೆ ನೀಡುವ ವಿಡಿಯೋಗಳನ್ನು ಶೇರ್ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಮಹಾ ಪಂಚಾಯತ್ ನಲ್ಲಿ ಒತ್ತಾಯಿಸಲಾಯಿತು.</p>



<p>ಸಧ್ಯ ಈ ಬಗ್ಗೆ ವಿಸ್ತೃತವಾಗಿ ವರದಿ ಮಾಡಿರುವ ದಿ ನ್ಯೂ ಇಂಡಿಯನ್ ಎಕ್ಸಪ್ರೆಸ್ (The New Indian Express) ಹಿಸಾರ್ ಬಾಸ್ ಗ್ರಾಮದಲ್ಲಿ ನಡೆದ ಖಾಫ್ ಸಭೆಯ ಮಾಹಿತಿ ಹೊರಹಾಕಿದೆ. ಪತ್ರಿಕೆಗೆ ನೀಡಿರುವ ಮಾಹಿತಿ ಪ್ರಕಾರ ನುಹ್ ಜಿಲ್ಲೆಯಲ್ಲಿ ಈಗ ನಿಷೇಧಾಜ್ಞೆ ಹೇರಿರುವ ಹಿನ್ನೆಲೆಯಲ್ಲಿ ಶಾಂತಿ ನೆಲೆಸಿದ ನಂತರ ಎರಡೂ ಸಮುದಾಯಗಳ ಮುಖಂಡರೊಂದಿಗೆ ಶಾಂತಿ ಸ್ಥಾಪನೆಯ ಮಾತುಕತೆ ನಡೆಸಲಾಗುವುದು ಎಂದು ಸರ್ವಖಾಪ್ ಪಂಚಾಯತ್‌ನ ರಾಷ್ಟ್ರೀಯ ವಕ್ತಾರ ಸುಬೆ ಸಿಂಗ್ ಸ್ಮೈನ್ ಹೇಳಿದ್ದಾರೆ.</p>



<p>ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡಲು ವಿಎಚ್‌ಪಿ ಹಾಗೂ ಭಜರಂಗದಳ ಹೊಂಚು ಹಾಕಿ ಕುಳಿತಿವೆ. ಇನ್ನು ವರ್ಷದ ಒಳಗೇ ಬರುವ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸಮುದಾಯಗಳನ್ನು ವಿಭಜಿಸುವ ಹಾಗೂ ರಾಜ್ಯದ ಮತದಾರರ ಗಮನ ಬೇರೆಡೆ ಸೆಳೆಯುವ ಉದ್ದೇಶದಿಂದ ವಿಎಚ್‌ಪಿ ಹಾಗೂ ಭಜರಂಗದಳ ಪಿತೂರಿ ನಡೆಸಿವೆ. ಹೀಗಾಗಿ ವಿಎಚ್‌ಪಿ ಹಾಗೂ ಭಜರಂಗದಳದ ಸಂಪೂರ್ಣ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಕರೆ ನೀಡಿವೆ‌.</p>
]]></content:encoded>
					
		
		
			</item>
	</channel>
</rss>
