<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>patya pusthaka &#8211; Peepal Media</title>
	<atom:link href="https://peepalmedia.com/tag/patya-pusthaka/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 19 Nov 2022 12:59:39 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>patya pusthaka &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಮೂತ್ರ ಚಿಕಿತ್ಸೆ: ಪಠ್ಯಪುಸ್ತಕ ಹಿಂದಕ್ಕೆ ಪಡೆಯಲು ಚಿಂತಕರು, ಗಣ್ಯರ ಆಗ್ರಹ</title>
		<link>https://peepalmedia.com/urine-therapy-thinkers-elites-demand-to-take-back-textbook/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 19 Nov 2022 12:59:38 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[moothra chikithse]]></category>
		<category><![CDATA[mu=ysuru vv]]></category>
		<category><![CDATA[NEP]]></category>
		<category><![CDATA[news]]></category>
		<category><![CDATA[patya pusthaka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=15932</guid>

					<description><![CDATA[ಬೆಂಗಳೂರು: ಪ್ರಕೃತಿ ಚಿಕಿತ್ಸೆ ಹೆಸರಿನಲ್ಲಿ ಮೂತ್ರ ಚಿಕಿತ್ಸೆ, ಗೋಮೂತ್ರ ಚಿಕಿತ್ಸೆ, ಶಂಕು ಚಿಕಿತ್ಸೆ, ಚುಟ್ಕಿ ಚಿಕಿತ್ಸೆ, ತೈಲ ಚಿಕಿತ್ಸೆ, ಸಿದ್ಧ ವೈದ್ಯ ಪದ್ಧತಿ, ಜ್ಯೂಸ್ ಚಿಕಿತ್ಸೆ&#8217; ಇತ್ಯಾದಿ ವಿಧಾನಗಳ  ಮೌಢ್ಯಾಚರಣೆಯ, ಪುರಾವೆಗಳಿಲ್ಲದ ಅಧ್ಯಾಯಗಳನ್ನು ಪಠ್ಯ ಪುಸ್ತಕದಲ್ಲಿ ಸೇರಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಚಿಂತಕರು, ಗಣ್ಯರು ಈ ಪುಸ್ತಕದ ಬೋಧನೆಯನ್ನು ತಡೆ ಹಿಡಿಯಬೇಕೆಂದು ಆಗ್ರಹಿಸಿದ್ದಾರೆ. ಪ್ರೊ.ಕೆ.ಮರುಳಸಿದ್ದಪ್ಪ, ಡಾ.ಜಿ.ರಾಮಕೃಷ್ಣ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಡಾ.ವಿಜಯಾ ಸೇರಿದಂತೆ ಹಲವರು ಸಮಾಜಶಾಸ್ತ್ರ ಪಠ್ಯ ಪುಸ್ತಕ ರಚನಾ ಮಂಡಳಿ ಅಧ್ಯಕ್ಷರಾದ ರಾಮೇಗೌಡ ಮತ್ತು ಸದಸ್ಯರಿಗೆ ಈ ಕುರಿತು ಬಹಿರಂಗ [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ಪ್ರಕೃತಿ ಚಿಕಿತ್ಸೆ ಹೆಸರಿನಲ್ಲಿ ಮೂತ್ರ ಚಿಕಿತ್ಸೆ, ಗೋಮೂತ್ರ ಚಿಕಿತ್ಸೆ, ಶಂಕು ಚಿಕಿತ್ಸೆ, ಚುಟ್ಕಿ ಚಿಕಿತ್ಸೆ, ತೈಲ ಚಿಕಿತ್ಸೆ, ಸಿದ್ಧ ವೈದ್ಯ ಪದ್ಧತಿ, ಜ್ಯೂಸ್ ಚಿಕಿತ್ಸೆ&#8217; ಇತ್ಯಾದಿ ವಿಧಾನಗಳ  ಮೌಢ್ಯಾಚರಣೆಯ, ಪುರಾವೆಗಳಿಲ್ಲದ ಅಧ್ಯಾಯಗಳನ್ನು ಪಠ್ಯ ಪುಸ್ತಕದಲ್ಲಿ ಸೇರಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಚಿಂತಕರು, ಗಣ್ಯರು ಈ ಪುಸ್ತಕದ ಬೋಧನೆಯನ್ನು ತಡೆ ಹಿಡಿಯಬೇಕೆಂದು ಆಗ್ರಹಿಸಿದ್ದಾರೆ.</p>



<p>ಪ್ರೊ.ಕೆ.ಮರುಳಸಿದ್ದಪ್ಪ, ಡಾ.ಜಿ.ರಾಮಕೃಷ್ಣ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಡಾ.ವಿಜಯಾ ಸೇರಿದಂತೆ ಹಲವರು ಸಮಾಜಶಾಸ್ತ್ರ ಪಠ್ಯ ಪುಸ್ತಕ ರಚನಾ ಮಂಡಳಿ ಅಧ್ಯಕ್ಷರಾದ ರಾಮೇಗೌಡ ಮತ್ತು ಸದಸ್ಯರಿಗೆ ಈ ಕುರಿತು ಬಹಿರಂಗ ಪತ್ರ ಬರೆದಿದ್ದು, ಪತ್ರದ ಪೂರ್ಣಪಾಠ ಈ ಕೆಳಗಿನಂತಿದೆ.</p>



<p>ಗೌರವಾನ್ವಿತ&nbsp; ಸಮಾಜಶಾಸ್ತ್ರ ಪಠ್ಯ ಪುಸ್ತಕ ರಚನಾ ಮಂಡಳಿ ಅಧ್ಯಕ್ಷರಾದ ರಾಮೇಗೌಡ ಮತ್ತು ಸದಸ್ಯರಿಗೆ</p>



<p>ಮಾನ್ಯರೇ,</p>



<p>ನಿವೃತ್ತ ಪ್ರಾಂಶುಪಾಲರಾದ ಮಾನ್ಯ ಕೆ. ಬೈರಪ್ಪನವರು ಬರೆದ &#8216;ವೈದ್ಯಕೀಯ ಸಮಾಜಶಾಸ್ತ್ರ&#8217; ಪುಸ್ತಕದ ಮುಖಪುಟದಲ್ಲಿ</p>



<p>(ಬಿ. ಎ. ಆರ್ಟ್ಸ್ ಕೋರ್ಸ್, 5ನೇ ಸೆಮಿಸ್ಟರ್ ಪಠ್ಯಪುಸ್ತಕ) ವೈದ್ಯಕೀಯ ಸಮಾಜ ಶಾಸ್ತ್ರ, ಮೈಸೂರು ವಿ.ವಿ. ನೂತನ ರಾಷ್ಟ್ರೀಯ ಪಠ್ಯಕ್ರಮದ ಅನುಸಾರ&#8221; ಎಂದು ಬರೆಯಲಾಗಿದೆ.</p>



<p>ಅದರ ಒಳ ಪುಟಗಳಲ್ಲಿ &#8216; ಪ್ರಕೃತಿ ಚಿಕಿತ್ಸೆ ಹೆಸರಿನಲ್ಲಿ ಮೂತ್ರ ಚಿಕಿತ್ಸೆ, ಗೋಮೂತ್ರ ಚಿಕಿತ್ಸೆ, ಶಂಕು ಚಿಕಿತ್ಸೆ, ಚುಟ್ಕಿ ಚಿಕಿತ್ಸೆ, ತೈಲ ಚಿಕಿತ್ಸೆ, ಸಿದ್ಧ ವೈದ್ಯ ಪದ್ಧತಿ, ಜ್ಯೂಸ್ ಚಿಕಿತ್ಸೆ&#8217; ಇತ್ಯಾದಿ ವಿಧಾನಗಳ&nbsp; ಮೌಢ್ಯಾಚರಣೆಯ, ಪುರಾವೆಗಳಿಲ್ಲದ ಅಧ್ಯಾಯಗಳಿವೆ. &nbsp;ಈ ಕುರಿತು&nbsp; ದಿನಪತ್ರಿಕೆಗಳಲ್ಲಿ ಸಹ ವರದಿಯಾಗಿದೆ. ಹತ್ತು ಅಧಿಕೃತವಲ್ಲದ, ಪರಿಶೀಲನೆ ಮಾಡದ ಅವೈಜ್ಞಾನಿಕ, ಮೌಢ್ಯಾಚರಣೆಯ ಪುಸ್ತಕವನ್ನು ನಿಮ್ಮ ಸಮಿತಿ ಪರಿಶೀಲಿಸದೆ, ಪರಿಷ್ಕರಿಸದೆ ರೆಫರೆನ್ಸ್ ಪುಸ್ತಕ ಎಂದು ಪರಿವಿಡಿಯಲ್ಲಿ ಉಲ್ಲೇಖಿಸಲಾಗಿದೆ.</p>



<p>&nbsp;ಯಾವುದನ್ನೂ ಕೂಲಂಕಶವಾಗಿ ಪರಿಶೀಲಿಸದೆ ಅಧಿಕೃತವಾಗಿ ರೆಫರೆನ್ಸ್ ಎಂದು&nbsp; ಹಾಕುವುದು ತಪ್ಪು ನಡೆಯಾಗುತ್ತದೆಯಲ್ಲವೇ? ನಿಮ್ಮ ಸಮಿತಿಯ ಉತ್ತರದಾಯಿತ್ವವೇನು?</p>



<p>ಪಠ್ಯಕ್ರಮ ರಚನಾ ಮಂಡಳಿ ಅಧ್ಯಕ್ಷ ಪ್ರೊ.ಎ.ರಾಮೇಗೌಡ, “ಎನ್‌.ಇ.ಪಿ. ಪಠ್ಯಕ್ರಮದಂತೆ ಆರೋಗ್ಯ ಸಮಾಜಶಾಸ್ತ್ರ ಪರಿಚಯಿಸಲಾಗಿದೆ. ಆದರೆ ಪೂರ್ಣ ಪಠ್ಯಕ್ರಮ ಅಂತಿಮವಾಗಿಲ್ಲ. ಲೇಖಕರು ಏಕೆ ಹಾಗೆ ಬರೆದಿದ್ದಾರೆ ಎನ್ನುವ ಮಾಹಿತಿ ಇಲ್ಲ” ಎಂದು ಹೇಳಿರುವುದು ವರದಿಯಾಗಿದೆ. ಅಂದರೆ ಮುಖ್ಯ ಪಠ್ಯಪುಸ್ತಕವೇ ಅಂತಿಮವಾಗಿಲ್ಲ, ಆದರೆ ಅದರ ರೆಫರೆನ್ಸ್ ಪುಸ್ತಕ ಪ್ರಕಟಗೊಂಡು ವಿದ್ಯಾರ್ಥಿಗಳು ಓದುತ್ತಿದ್ದಾರೆ ಎನ್ನುವ ಸಂಗತಿಯೇ ಆತಂಕಕಾರಿಯಾಗಿದೆ.</p>



<p>ಮೈಸೂರು ವಿ.ವಿ. ಕುಲ ಸಚಿವರಾದ ಪ್ರೊ. ಆರ್. ಶಿವಪ್ಪನವರು &#8216;ಪರಾಮರ್ಶನ ಪುಸ್ತಕಕ್ಕೂ ಮತ್ತು ವಿ.ವಿ. ಗೂ ಸಂಬಂಧವಿಲ್ಲ ಎಂದು ಹೇಳಿರುವುದು ವರದಿಯಾಗಿದೆ. ಈ ಹೇಳಿಕೆ ಬೇಜವಾಬ್ದಾರಿಯಿಂದ ಕೂಡಿದೆ. ಪರಾಮರ್ಶನ ಪುಸ್ತಕದ ವಿಚಾರಗಳಿಗೂ ನಮಗೂ ಸಂಬಂಧವಿಲ್ಲ ಎನ್ನುವುದು ಪಕ್ಕಾ ಹೊಣೆಗೇಡಿತನ. ಮೊದಲನೆಯದಾಗಿ ಆಯ್ಕೆ ಮಾಡಿದ್ದು ಯಾರು? ಯಾಕೆ ಆಯ್ಕೆ ಮಾಡಲಾಗಿದೆ? ಪರಾಮರ್ಶನ ಪುಸ್ತಕಗಳ ಉದ್ದೇಶವೇನು? ವೈಜ್ಞಾನಿಕ ಜ್ಞಾನಾರ್ಜನೆ, ವ್ಯಕ್ತಿತ್ವ ವಿಕಸನ ಮುಖ್ಯ ಉದ್ದೇಶ ವಾಗಿರುವ ಶಿಕ್ಷಣದಲ್ಲಿ ಪರಾಮರ್ಶನ ಪುಸ್ತಕಗಳು ಸಹ ಮೌಲ್ಯಯುತವಾಗಿರಬೇಕು. ಆದರೆ ಮೈಸೂರು ವಿವಿಯ ಈ ಹೇಳಿಕೆ ಇದನ್ನು ಉಲ್ಲಂಘಿಸುವಂತಿದೆ.</p>



<p>ಎರಡನೆಯದಾಗಿ ಲೇಖಕರು 5ನೇ ಸೆಮಿಸ್ಟರ್, ಎನ್. ಇ.ಪಿ ಪಠ್ಯ ಅಂತ ಅನಧಿಕೃತವಾಗಿ, ಕಾನೂನುಬಾಹಿರವಾಗಿ ಹೇಗೆ ಹಾಕಿಕೊಂಡರು? ಇದಕ್ಕೆ ಅನುಮತಿ ಕೊಟ್ಟವರಾರು?</p>



<p>ಮೂರನೆಯದಾಗಿ ಎನ್. ಇ. ಪಿ. ಅಡಿಯಲ್ಲಿ ಕೇವಲ ಎರಡು ಸೆಮಿಸ್ಟರ್ ಆಗಿದೆ. ಹೀಗಾಗಿ ಐದನೇ ಸೆಮಿಸ್ಟರ್ ಪುಸ್ತಕವನ್ನು ಎನ್. ಇ.ಪಿ ಎಂದು ಪ್ರಚಾರ ಮಾಡುವುದು ಕಾನೂನು&nbsp; ವಿರೋಧವಲ್ಲವೇ? ಇದು ಪೋಷಕರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳನ್ನು ತಪ್ಪು ದಾರಿಗೆಳೆಯುವುದಿಲ್ಲವೇ?</p>



<p>ಹಿರಿಯರಾದ ಪ್ರೊ. ಕೆ. ಬೈರಪ್ಪನವರು ಬರೆದ ಮೌಢ್ಯಾಚರಣೆಯ ವಿಚಾರಗಳಿಗೂ ಆರೆಸ್ಸಸ್ ಬಿಜೆಪಿ&nbsp; ಮುಖಂಡರ ಹೇಳಿಕೆಗಳಿಗೂ ಸಾಮ್ಯತೆಯಿದೆ. ಪರಾಮರ್ಶನ ಪುಸ್ತಕದ ನೆಪದಲ್ಲಿ ಶಿಕ್ಷಣದಲ್ಲಿಯೂ&nbsp; ಇದು ಸೇರಿಕೊಳ್ಳುವ ಅಪಾಯವಿದೆ. ಇದು ಸಹ ಕಳವಳಕಾರಿಯಾಗಿದೆ. ಏಕೆಂದರೆ ಇತ್ತೀಚಿನ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಇದಕ್ಕೊಂದು ಉದಾಹರಣೆ.</p>



<p>ಮುಖ್ಯವಾಗಿ ವಿದ್ಯಾರ್ಥಿಗಳು ಈ ಪುಸ್ತಕವನ್ನು ಓದುತ್ತಿದ್ದಾರೆ. ಅನೇಕ ಕಡೆ ಶಿಕ್ಷಕರು ಇದನ್ನು ಶಿಫಾರಸು ಮಾಡುತ್ತಿದ್ದಾರೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ವಿವಾದದ ಕುರಿತು ನಿಮ್ಮಿಂದ ಸ್ಪಷ್ಟೀಕರಣ ನೀಡಬೇಕೆಂದು&nbsp; ಮತ್ತು ಈ ಕೂಡಲೇ ಈ ಪುಸ್ತಕದ ಬೋಧನೆಯನ್ನು ತಡೆ ಹಿಡಿಯಬೇಕೆಂದು ಕೋರುತ್ತೇವೆ.</p>



<p>ಇಂತಿ</p>



<p>ಪ್ರೊ.ಕೆ.ಮರುಳಸಿದ್ದಪ್ಪ, ಡಾ.ಜಿ.ರಾಮಕೃಷ್ಣ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಡಾ.ವಿಜಯಾ, ಪ್ರೊ.ರಾಜೇಂದ್ರ ಚೆನ್ನಿ, ವಿಮಲಾ.ಕೆ.ಎಸ್ , ಡಾ.ಬಂಜಗೆರೆ ಜಯಪ್ರಕಾಶ್, ಶ್ರೀಪಾದ‌ ಭಟ್, ಟಿ.ಸುರೇಂದ್ರ ರಾವ್, ಡಾ.ಮೀನಾಕ್ಷಿ ಬಾಳಿ, ಕೆ.ನೀಲಾ., ಡಾ.ವಸುಂಧರಾ ಭೂಪತಿ., ಡಾ.ನಿರಂಜನಾರಾಧ್ಯ, ವಾಸುದೇವ ಉಚ್ಚಿಲ್, ಡಾ.ಲೀಲಾ ಸಂಪಿಗೆ., ಡಾ.ಎನ್.ಗಾಯತ್ರಿ, ಯೋಗಾನಂದ, ಅಮರೇಶ ಕಡಗದ.</p>



<p>(ಜಾಗೃತ ನಾಗರಿಕರು ಕರ್ನಾಟಕ)</p>
]]></content:encoded>
					
		
		
			</item>
	</channel>
</rss>
