<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>peepalmedia &#8211; Peepal Media</title>
	<atom:link href="https://peepalmedia.com/tag/peepalmedia/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 02 Feb 2026 10:31:11 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.9</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>peepalmedia &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಶರಣರ ಚಿಂತನೆ ವಿಶ್ವಮಾನವತೆಯ &#8211; ಹೆಚ್.ಎಲ್. ಮಲ್ಲೇಶ್ ಗೌಡ</title>
		<link>https://peepalmedia.com/sharans-thoughts-on-universal-humanity-h-l-mallesh-gowda/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 02 Feb 2026 10:31:10 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[news]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=73455</guid>

					<description><![CDATA[ಹಾಸನ : ಅರಸ ಎಂದರೆ ಮೇಲಲ್ಲ, ಅಗಸ ಎಂದರೆ ಕೀಳಲ್ಲ. ವ್ಯಕ್ತಿಯ ಘನತೆ ಅವನ ವೃತ್ತಿಯಲ್ಲಿ ಅಲ್ಲ, ಅವನ ಮೌಲ್ಯಗಳಲ್ಲಿ ಅಡಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹೆಚ್.ಎಲ್. ಮಲ್ಲೇಶ್ ಗೌಡ ತಿಳಿಸಿದರು. ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಬ್ಬ ಶಿಕ್ಷಕ ತರಗತಿಯಲ್ಲಿ ಇರುವ ವಿದ್ಯಾರ್ಥಿಗಳನ್ನು ರೂಪಿಸುತ್ತಾರೆ ಎಂಬುದು ಜಗತ್ತಿನ ಸಾಮಾನ್ಯ ಸತ್ಯ. ಆದರೆ ನಿಜವಾದ ಸತ್ಯವೆಂದರೆ, [&#8230;]]]></description>
										<content:encoded><![CDATA[
<p><strong>ಹಾಸನ :</strong> ಅರಸ ಎಂದರೆ ಮೇಲಲ್ಲ, ಅಗಸ ಎಂದರೆ ಕೀಳಲ್ಲ. ವ್ಯಕ್ತಿಯ ಘನತೆ ಅವನ ವೃತ್ತಿಯಲ್ಲಿ ಅಲ್ಲ, ಅವನ ಮೌಲ್ಯಗಳಲ್ಲಿ ಅಡಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹೆಚ್.ಎಲ್. ಮಲ್ಲೇಶ್ ಗೌಡ ತಿಳಿಸಿದರು.</p>



<p>ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಬ್ಬ ಶಿಕ್ಷಕ ತರಗತಿಯಲ್ಲಿ ಇರುವ ವಿದ್ಯಾರ್ಥಿಗಳನ್ನು ರೂಪಿಸುತ್ತಾರೆ ಎಂಬುದು ಜಗತ್ತಿನ ಸಾಮಾನ್ಯ ಸತ್ಯ. ಆದರೆ ನಿಜವಾದ ಸತ್ಯವೆಂದರೆ, ಒಂದು ತರಗತಿಯಲ್ಲಿ ಇರುವ ಅಷ್ಟು ವಿದ್ಯಾರ್ಥಿಗಳು ಸೇರಿ ಒಬ್ಬ ಶಿಕ್ಷಕರನ್ನೇ ರೂಪಿಸುತ್ತಾರೆ ಎಂಬುದು. ಈ ಪರಸ್ಪರ ಸಂಬಂಧವೇ ಶಿಕ್ಷಣದ ನಿಜವಾದ ಶಕ್ತಿ ಎಂದು ಅವರು ಅಭಿಪ್ರಾಯಪಟ್ಟರು. ವಿಶ್ವಕ್ಕೆ ಸಾಮಾಜಿಕ ರೂಪುರೇಷೆ ನೀಡಿದವರು ಶರಣರು. ಒಂದು ಸಾಮಾನ್ಯ ಶಿಕ್ಷಕ ಪ್ರಬುದ್ಧ ತರಗತಿಗೆ ಹೋದರೆ ಎರಡು ವರ್ಷಗಳಲ್ಲಿ ಆತ ಸಹ ಪ್ರಬುದ್ಧನಾಗುತ್ತಾನೆ. ಅದೇ ರೀತಿ, ಬಸವಣ್ಣನವರನ್ನು ಪ್ರಬುದ್ಧವಾಗಿ ರೂಪಿಸುವಲ್ಲಿ ಮಡಿವಾಳ ಮಚಿದೇವ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.</p>



<p>ಬಸವಣ್ಣನ ಕಾಲಘಟ್ಟದಲ್ಲಿ ಅಲ್ಲಮಪ್ರಭುವಿನ ನೇತೃತ್ವದಲ್ಲಿ ನಡೆದ ವಿಚಾರಗೋಷ್ಠಿಯ ವೇದಿಕೆಯನ್ನು ವಿಶ್ವದ ಮೊದಲ ಪ್ರಜಾಪ್ರಭುತ್ವದ ವೇದಿಕೆ ಎಂದು ಇತಿಹಾಸ ಗುರುತಿಸಿದೆ. ಶರಣರು ತಮ್ಮ ವೃತ್ತಿಯನ್ನು ಶ್ರದ್ಧೆಯಿಂದ ನಡೆಸುತ್ತಾ, ವೃತ್ತಿಯ ಮೂಲಕ ಘನತೆ ಮತ್ತು ಮಾನವೀಯತೆಯನ್ನು ಸಾಧಿಸಬಹುದು ಎಂಬ ಸಂದೇಶವನ್ನು 12ನೇ ಶತಮಾನದಲ್ಲೇ ಜಗತ್ತಿಗೆ ನೀಡಿದರು. 12ನೇ ಶತಮಾನದಲ್ಲಿ ಹುಟ್ಟಿದ ನೂರಾರು ಶರಣರು ಪ್ರತ್ಯೇಕ ಯುಗಗಳಲ್ಲಿ ಹುಟ್ಟಿದ್ದರೆ ಯುಗಪ್ರವರ್ತಕರಾಗುವ ಶಕ್ತಿ ಹೊಂದಿದ್ದವರು. ಆದರೆ, ಒಂದೇ ಕಾಲಘಟ್ಟದಲ್ಲಿ ಒಟ್ಟಾಗಿ ಹುಟ್ಟಿ ಸಮಾಜ ಪರಿವರ್ತನೆಗೆ ಕಾರಣವಾದುದು ಅಚ್ಚರಿಯ ಸಂಗತಿ. ಬಸವಣ್ಣನವರ ಮಾರ್ಗದರ್ಶನದಲ್ಲಿ ಅನೇಕ ಶರಣರು ರೂಪುಗೊಂಡರು ಎಂಬುದು ಅವರ ಚಿಂತನೆಯ ಆಳವನ್ನು ತೋರಿಸುತ್ತದೆ ಎಂದು ಹೇಳಿದರು. ಮಡಿವಾಳ ಮಾಚಿದೇವರು ಗುರು ಬಸವೇಶ್ವರರ ಸಮಕಾಲೀನ ಶರಣರು . ಕಲ್ಯಾಣ ಕ್ರಾಂತಿಯ ಸಂದರ್ಭದಲ್ಲಿ ವಚನ ಸಾಹಿತ್ಯವನ್ನು ನಾಶಪಡಿಸಲು ಉದ್ದೇಶಿಸಿರುವ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡಿದರು. ಅವರು ಕಲ್ಯಾಣ್‌ನಲ್ಲಿ ಧೋಬಿಯಾಗಿದ್ದರು ಎಂದು ಹಿಂದಿನ ಅವರ ಜೀವನವನ್ನು&nbsp; &nbsp;ತಿಳಿಸಿದರು.</p>



<p>ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ತಾರನಾಥ್, ಸಾಹಿತಿಗಳು, ಅಧಿಕಾರಿಗಳು, ಕನ್ನಡ ಪರ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.</p>
]]></content:encoded>
					
		
		
			</item>
		<item>
		<title>ಜಾಗದ ವಿಚಾರ ಯಶ್ ತಾಯಿ ಪುಷ್ಪಾ ಗರಂ, ತಾರಕಕ್ಕೇರಿದ ಬೀದಿ ಜಗಳ</title>
		<link>https://peepalmedia.com/yashs-mother-pushpa-garam-gets-into-a-street-fight-over-land-issue/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Sun, 01 Feb 2026 15:51:22 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[news]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=73394</guid>

					<description><![CDATA[ಹಾಸನ:&#160;ಖ್ಯಾತ ಚಿತ್ರ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅವರು ವಾಸಿಸುವ ನಗರದ ವಿದ್ಯಾನಗರ ಬಡಾವಣೆಯಲ್ಲಿರುವ ಮನೆ ಸಮೀಪದ ನಿವೇಶನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಶನಿವಾರ ಮತ್ತೊಮ್ಮೆ ತೀವ್ರ ಜಟಾಪಟಿ ನಡೆದಿದೆ. ವಿದ್ಯಾನಗರ ಬಡಾವಣೆಯಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದೆ. ನಿವೇಶನದ ಬಳಿ ಪುಷ್ಪಾ ಅವರು ಆಗಮಿಸಿದ ವೇಳೆ, ಆ ನಿವೇಶನದ ಜಿಪಿಎ (GPA) ಹೋಲ್ಡರ್ ದೇವರಾಜು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನಿವೇಶನದ ಮಾಲೀಕತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೋರಿಸುವಂತೆ [&#8230;]]]></description>
										<content:encoded><![CDATA[
<p><strong><br>ಹಾಸನ:</strong>&nbsp;ಖ್ಯಾತ ಚಿತ್ರ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅವರು ವಾಸಿಸುವ ನಗರದ ವಿದ್ಯಾನಗರ ಬಡಾವಣೆಯಲ್ಲಿರುವ ಮನೆ ಸಮೀಪದ ನಿವೇಶನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಶನಿವಾರ ಮತ್ತೊಮ್ಮೆ ತೀವ್ರ ಜಟಾಪಟಿ ನಡೆದಿದೆ. ವಿದ್ಯಾನಗರ ಬಡಾವಣೆಯಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದೆ.</p>



<p>ನಿವೇಶನದ ಬಳಿ ಪುಷ್ಪಾ ಅವರು ಆಗಮಿಸಿದ ವೇಳೆ, ಆ ನಿವೇಶನದ ಜಿಪಿಎ (GPA) ಹೋಲ್ಡರ್ ದೇವರಾಜು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನಿವೇಶನದ ಮಾಲೀಕತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೋರಿಸುವಂತೆ ಪುಷ್ಪಾ ಅವರು ದೇವರಾಜು ಅವರನ್ನು ಪ್ರಶ್ನಿಸಿದರು. ಮೊದಲು ದಾಖಲೆಗಳನ್ನು ತೋರಿಸುವಂತೆ ಪುಷ್ಪಾ ಅವರು ಒತ್ತಾಯಿಸಿದಾಗ, ಇಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಯಿತು. “ನಾನು ಸೆಲೆಬ್ರಿಟಿ ತಾಯಿ ಅಂತ ಇಲ್ಲಿ ಬಂದಿಲ್ಲ. ನಾನು ಇಲ್ಲಿ ಹುಟ್ಟಿ ಬೆಳೆದವಳು” ಎಂದು ಹೇಳಿದ ಪುಷ್ಪಾ, ಇನ್ನು ಮುಂದೆ ನಿವೇಶನದೊಳಗೆ ಕಾಲಿಡಬಾರದು ಎಂದು ದೇವರಾಜು ಅವರಿಗೆ ಎಚ್ಚರಿಕೆ ನೀಡಿದರು.</p>



<p>ಇದಕ್ಕೆ ಪ್ರತಿಕ್ರಿಯಿಸಿದ ದೇವರಾಜು, “ಈ ರೀತಿ ಮಾತನಾಡುವುದು ಸರಿಯಲ್ಲ” ಎಂದು ಹೇಳಿದರು. ಇದರಿಂದ ಆಕ್ರೋಶಗೊಂಡ ಪುಷ್ಪಾ ಅವರು ಕಠಿಣವಾಗಿ ಪ್ರತಿಕ್ರಿಯಿಸಿ, “ರೌಡಿಗಳನ್ನು ಕರೆದುಕೊಂಡು ರೌಡಿಸಂ ಮಾಡ್ತಿಯಾ? ಇದರ ಬಗ್ಗೆ ನಾನು ಎಸ್‌ಪಿ ಅವರಿಗೆ ದೂರು ನೀಡುತ್ತೇನೆ. ಇನ್ನು ಮುಂದೆ ಇಲ್ಲಿಗೆ ಕಾಲಿಟ್ಟರೆ ಸುಮ್ಮನಿರಲ್ಲ” ಎಂದು ಎಚ್ಚರಿಕೆ ನೀಡಿದರು. ನಿವೇಶನದ ಮಾಲೀಕತ್ವಕ್ಕೆ ಸಂಬಂಧಿಸಿದ ವಿವಾದ ಮುಂದುವರಿದಿರುವ ಹಿನ್ನೆಲೆಯಲ್ಲಿ, ಪ್ರಕರಣ ಇನ್ನಷ್ಟು ತೀವ್ರತೆ ಪಡೆಯುವ ಸಾಧ್ಯತೆ ಇದೆ.</p>
]]></content:encoded>
					
		
		
			</item>
		<item>
		<title>ಹಾಸನ MLA ಟಿಕೆಟ್ ನನಗೆ ಸಿಗುವ ವಿಶ್ವಾಸವಿದೆ &#8211; ಪ್ರೀತಂಗೌಡ</title>
		<link>https://peepalmedia.com/i-am-confident-of-getting-hassan-mla-ticket-preetha-gowda/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Sat, 31 Jan 2026 06:39:31 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[ಹಾಸನ]]></category>
		<category><![CDATA[news]]></category>
		<category><![CDATA[peepalmedia]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=73352</guid>

					<description><![CDATA[ಕೊಡಗು :&#160;ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದ ವಿಬಿ ಜಿ ರಾಮ್ ಜಿ ಯೋಜನೆ ಜಿಲ್ಲಾ ಸಮಾವೇಶದಲ್ಲಿ ಭಾಗವಹಿಸಿದ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಅವರು ಬಿಜೆಪಿ–ಜೆಡಿಎಸ್ ಹೊಂದಾಣಿಕೆ ಕುರಿತು ಮಹತ್ವದ ಹೇಳಿಕೆ ನೀಡಿದರು. ಎಲ್ಲಾ ಹಂತದ ಚುನಾವಣೆಗಳಲ್ಲಿಯೂ ಎರಡೂ ಪಕ್ಷಗಳ ನಡುವೆ ಹೊಂದಾಣಿಕೆ ಸಾಧ್ಯತೆ ಇದೆ ಎಂದು ಹೇಳಿದ ಅವರು, ಹಾಸನ ಕ್ಷೇತ್ರದಲ್ಲಿ ಮತ್ತೆ ತಮಗೆ ಟಿಕೆಟ್ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸಮ್ಮಿಶ್ರ ರಾಜಕಾರಣದಲ್ಲಿ ವಿಭಿನ್ನ ಅಭಿಪ್ರಾಯಗಳು ಸಹಜವಾಗಿದ್ದು, ಅವನ್ನೆಲ್ಲಾ ಸಮಾಲೋಚನೆ ಮೂಲಕ ಸರಿಹೊಂದಿಸುವ [&#8230;]]]></description>
										<content:encoded><![CDATA[
<p><strong>ಕೊಡಗು :</strong>&nbsp;ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದ ವಿಬಿ ಜಿ ರಾಮ್ ಜಿ ಯೋಜನೆ ಜಿಲ್ಲಾ ಸಮಾವೇಶದಲ್ಲಿ ಭಾಗವಹಿಸಿದ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಅವರು ಬಿಜೆಪಿ–ಜೆಡಿಎಸ್ ಹೊಂದಾಣಿಕೆ ಕುರಿತು ಮಹತ್ವದ ಹೇಳಿಕೆ ನೀಡಿದರು.</p>



<p>ಎಲ್ಲಾ ಹಂತದ ಚುನಾವಣೆಗಳಲ್ಲಿಯೂ ಎರಡೂ ಪಕ್ಷಗಳ ನಡುವೆ ಹೊಂದಾಣಿಕೆ ಸಾಧ್ಯತೆ ಇದೆ ಎಂದು ಹೇಳಿದ ಅವರು, ಹಾಸನ ಕ್ಷೇತ್ರದಲ್ಲಿ ಮತ್ತೆ ತಮಗೆ ಟಿಕೆಟ್ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸಮ್ಮಿಶ್ರ ರಾಜಕಾರಣದಲ್ಲಿ ವಿಭಿನ್ನ ಅಭಿಪ್ರಾಯಗಳು ಸಹಜವಾಗಿದ್ದು, ಅವನ್ನೆಲ್ಲಾ ಸಮಾಲೋಚನೆ ಮೂಲಕ ಸರಿಹೊಂದಿಸುವ ಜವಾಬ್ದಾರಿ ನಾಯಕತ್ವದದ್ದೇ ಎಂದು ಹೇಳಿದರು.</p>



<p>ನಮ್ಮ ಪಕ್ಷದಲ್ಲೇ ಅನೇಕ ಭಿನ್ನಾಭಿಪ್ರಾಯಗಳಿರುವಾಗ ಮೈತ್ರಿ ಪಕ್ಷದಲ್ಲೂ ಬೇರೆಬೇರೆ ಅಭಿಪ್ರಾಯಗಳು ಇರುವುದು ಅಚ್ಚರಿಯ ವಿಷಯವಲ್ಲ ಎಂದು ಪ್ರೀತಂ ಗೌಡ ಅಭಿಪ್ರಾಯಪಟ್ಟರು. ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಕೂತು ಚರ್ಚಿಸಿ, ಕಾರ್ಯಕರ್ತರಿಗೆ ಯಾವುದೇ ರೀತಿಯ ನೋವಾಗದಂತೆ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು. ಅಂತಿಮವಾಗಿ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಸಮತೋಲನದ ನಿರ್ಧಾರವೇ ಹೊರಬರುತ್ತದೆ ಎಂದು ಹೇಳಿದರು.</p>



<p>ಇದೇ ವೇಳೆ ವಿಬಿ ಜಿ ರಾಮ್ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ನೀಡಿರುವ ಜಾಹೀರಾತು ಹಾಗೂ ಟೀಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ನ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಈ ಯೋಜನೆ ಬಗ್ಗೆ ಸಮಗ್ರ ಮಾಹಿತಿ ಇಲ್ಲ ಅಥವಾ ಜಾಣ್ಮೆಯ ಮರೆವು ಹಿಡಿದಿದೆ ಎಂದು ಆರೋಪಿಸಿದರು. ಲೋಕಸಭೆಯಲ್ಲಿ ಉತ್ತರ ನೀಡುವ ವೇಳೆ ಅದನ್ನು ಕೇಳಿಸಿಕೊಳ್ಳುವ ಸಹನೆ ಕಾಂಗ್ರೆಸ್‌ಗೆ ಇರಲಿಲ್ಲ ಎಂದೂ ಟೀಕಿಸಿದರು.</p>



<p>ಕಾಂಗ್ರೆಸ್ ಸರ್ಕಾರದ ಸಚಿವರಿಗೂ ಈ ಯೋಜನೆಯ ಮೂಲಭೂತ ತಿಳುವಳಿಕೆ ಇಲ್ಲದಿರುವುದರಿಂದಲೇ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ಹೇಳಿದ ಅವರು, ಜಾಬ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಯೋಜನೆಯ ನಿಜವಾದ ಮಾಹಿತಿ ನೇರವಾಗಿ ತಲುಪಿಸುವ ಕಾರ್ಯವನ್ನು ಕೈಗೊಳ್ಳುವುದಾಗಿ ಹೇಳಿದರು. ಜನರಿಗೆ ವಾಸ್ತವ ಅರ್ಥವಾದ ಬಳಿಕ ಕಾಂಗ್ರೆಸ್ ಆರೋಪಗಳಿಗೆ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.</p>



<p>ಈ ಯೋಜನೆ ಗ್ರಾಮೀಣ ಭಾರತಕ್ಕೆ ಹೊಸ ಕಾಯಕಲ್ಪ ನೀಡುವ ಪ್ರಧಾನಿಯವರ ದೂರದೃಷ್ಟಿಯ ಭಾಗವಾಗಿದ್ದು, ಗ್ರಾಮಾಭಿವೃದ್ಧಿಗೆ ಹೊಸ ದಿಕ್ಕು ನೀಡಲಿದೆ ಎಂದು ಪ್ರೀತಂ ಗೌಡ ಹೇಳಿದರು. ಮುಂದಿನ ದಿನಗಳಲ್ಲಿ ಇದರ ಮಹತ್ವ ಕಾಂಗ್ರೆಸ್‌ಗೂ ಮನವರಿಕೆ ಆಗಿ, ಈಗ ಹೇಳುತ್ತಿರುವ ಟೀಕೆಗಳನ್ನು ತಾವೇ ಹಿಂತೆಗೆದುಕೊಳ್ಳುವ ಸ್ಥಿತಿ ಬರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.</p>
]]></content:encoded>
					
		
		
			</item>
		<item>
		<title>ಲ್ಯಾಂಡ್ ಲಾರ್ಡ್ ತಳ ಸಮುದಾಯಗಳ ನೋವು, ಸಂಕಟ ಹಾಗೂ ಪ್ರತಿರೋಧ &#8211; ಕೃಷ್ಣದಾಸ್ </title>
		<link>https://peepalmedia.com/the-pain-suffering-and-resistance-of-the-land-lord-based-communities-krishnadas/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Sat, 31 Jan 2026 04:41:58 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[news]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=73338</guid>

					<description><![CDATA[ಹಾಸನ:&#160;ಇತ್ತೀಚೆಗೆ ಬಿಡುಗಡೆಯಾಗಿರುವ ಕನ್ನಡ ಚಲನಚಿತ್ರ “ಲ್ಯಾಂಡ್ ಲಾರ್ಡ್” ತಳ ಸಮುದಾಯಗಳ ನೋವು, ಸಂಕಟ ಹಾಗೂ ಪ್ರತಿರೋಧವನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸಿರುವ ಸಾಮಾಜಿಕ ಬದ್ಧತೆಯ ಚಲನಚಿತ್ರವಾಗಿದ್ದು, ಇಂತಹ ಕಥಾವಸ್ತುವನ್ನು ಆಯ್ಕೆ ಮಾಡಿಕೊಂಡು ಸಿನಿಮಾ ನಿರ್ಮಿಸಿರುವ ತಂಡದ ಧೈರ್ಯವನ್ನು ಮೆಚ್ಚಬೇಕಾಗಿದೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಅಧ್ಯಕ್ಷರಾದ ಕೃಷ್ಣದಾಸ್ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚಿತ್ರವನ್ನು ಯಾವುದೋ ಒಂದು ಜಾತಿಗೆ ಸೀಮಿತಗೊಳಿಸದೆ, ಶೋಷಿತ ವರ್ಗಗಳ ಒಟ್ಟಾರೆ ಬದುಕನ್ನು ಕಥೆಯಾಗಿ ನಿರೂಪಿಸಿರುವುದು ವಿಶೇಷವಾಗಿದೆ ಎಂದರು. ಸ್ವಾತಂತ್ರ್ಯ ಲಭಿಸಿ 79 [&#8230;]]]></description>
										<content:encoded><![CDATA[
<p><strong>ಹಾಸನ:</strong>&nbsp;ಇತ್ತೀಚೆಗೆ ಬಿಡುಗಡೆಯಾಗಿರುವ ಕನ್ನಡ ಚಲನಚಿತ್ರ “ಲ್ಯಾಂಡ್ ಲಾರ್ಡ್” ತಳ ಸಮುದಾಯಗಳ ನೋವು, ಸಂಕಟ ಹಾಗೂ ಪ್ರತಿರೋಧವನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸಿರುವ ಸಾಮಾಜಿಕ ಬದ್ಧತೆಯ ಚಲನಚಿತ್ರವಾಗಿದ್ದು, ಇಂತಹ ಕಥಾವಸ್ತುವನ್ನು ಆಯ್ಕೆ ಮಾಡಿಕೊಂಡು ಸಿನಿಮಾ ನಿರ್ಮಿಸಿರುವ ತಂಡದ ಧೈರ್ಯವನ್ನು ಮೆಚ್ಚಬೇಕಾಗಿದೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಅಧ್ಯಕ್ಷರಾದ ಕೃಷ್ಣದಾಸ್ ಅವರು ತಿಳಿಸಿದರು.</p>



<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚಿತ್ರವನ್ನು ಯಾವುದೋ ಒಂದು ಜಾತಿಗೆ ಸೀಮಿತಗೊಳಿಸದೆ, ಶೋಷಿತ ವರ್ಗಗಳ ಒಟ್ಟಾರೆ ಬದುಕನ್ನು ಕಥೆಯಾಗಿ ನಿರೂಪಿಸಿರುವುದು ವಿಶೇಷವಾಗಿದೆ ಎಂದರು. ಸ್ವಾತಂತ್ರ್ಯ ಲಭಿಸಿ 79 ವರ್ಷಗಳು, ಸಂವಿಧಾನ ಜಾರಿಯಾಗಿ 76 ವರ್ಷಗಳು ಕಳೆದರೂ ತಳ ಸಮುದಾಯಗಳ ಬದುಕಿನಲ್ಲಿ ದೌರ್ಜನ್ಯ, ಹಲ್ಲೆ, ಕೊಲೆಗಳು ಮುಂದುವರಿಯುತ್ತಲೇ ಇರುವುದನ್ನು ಚಿತ್ರ ಸ್ಪಷ್ಟವಾಗಿ ತೋರಿಸುತ್ತದೆ. ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆ ಘಟನೆ ಜಾತಿಯ ಕ್ರೌರ್ಯಕ್ಕೆ ನಿದರ್ಶನವಾಗಿದೆ ಎಂದು ಹೇಳಿದರು. ಚಲನಚಿತ್ರವು ಹಿಂಸೆಯಿಂದ ಅಹಿಂಸೆ ಕಡೆಗೆ ಸಮಾಜವನ್ನು ಕರೆದೊಯ್ಯುವ ಸಂದೇಶವನ್ನು ನೀಡುತ್ತದೆ. ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನ ಒದಗಿಸಿರುವ ಸಮಾನ ಹಕ್ಕುಗಳು ಹಾಗೂ ಅವಕಾಶಗಳು ಎಲ್ಲರಿಗೂ ದೊರಕಬೇಕು ಎಂಬ ಆಶಯವನ್ನು ಈ ಚಿತ್ರ ಬಲವಾಗಿ ಪ್ರತಿಪಾದಿಸುತ್ತದೆ. ಜೊತೆಗೆ ಜನಸಂಖ್ಯೆಯ ಅರ್ಧದಷ್ಟು ಇರುವ ಮಹಿಳೆಯರಿಗೆ ಇನ್ನೂ ಸಮಾನ ಹಕ್ಕುಗಳು ದೊರಕದಿರುವ ವಾಸ್ತವವನ್ನು ಚಿತ್ರಣಗೊಳಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ “ಶಿಕ್ಷಣವೇ ಶೋಷಿತ ವರ್ಗ ಹಾಗೂ ಮಹಿಳೆಯರ ವಿಮೋಚನೆಗೆ ಏಕೈಕ ದಾರಿ” ಎಂಬ ತತ್ವವನ್ನು ವಿಭಿನ್ನವಾಗಿ ನಿರೂಪಿಸಲಾಗಿದೆ ಎಂದು ಹೇಳಿದರು.</p>



<p>ರಾಚಯ್ಯನ ಪಾತ್ರದಲ್ಲಿ ನಾಯಕ ನಟ ದುನಿಯಾ ವಿಜಯ್ ಅವರ ಮನೋಜ್ಞ ಅಭಿನಯ, ಖಳನಟನಾಗಿ ರಾಜ್ ಬಿ. ಶೆಟ್ಟಿ ಅವರ ಪ್ರತಿಭೆ, ಉಮಾಶ್ರೀ ಅವರ ಮಾಂತ್ರಿಕ ಅಭಿನಯ, ನಿರ್ದೇಶಕ ಜಡೇಶ್ ಕೆ. ಹಂಪಿ ಅವರ ಸೂಕ್ಷ್ಮ ನಿರ್ದೇಶನ ಹಾಗೂ ಚಿತ್ರದಲ್ಲಿನ ಎಲ್ಲಾ ಪಾತ್ರಧಾರಿಗಳ ಅಭಿನಯವನ್ನು ಸಂಘಟನೆ ಶ್ಲಾಘಿಸಿದೆ ಎಂದರು.</p>



<p>ಜನಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರು ಈ ಚಲನಚಿತ್ರವನ್ನು ವೀಕ್ಷಿಸಬೇಕೆಂದು ಮನವಿ ಮಾಡಿದರು. ಜೊತೆಗೆ “ಲ್ಯಾಂಡ್ ಲಾರ್ಡ್” ಚಿತ್ರಕ್ಕೆ ಶೇ.100 ರಷ್ಟು ತೆರಿಗೆ ವಿನಾಯಿತಿ ನೀಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಇದಲ್ಲದೆ, ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ವತಿಯಿಂದ ಜಿಲ್ಲಾದ್ಯಂತ ಶೀಘ್ರದಲ್ಲೇ ಜನಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.</p>



<p>ಸುದ್ದಿಗೋಷ್ಠಿಯಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ ಹಾಸನ ಜಿಲ್ಲೆ ಅಧ್ಯಕ್ಷ ಸಣ್ಣೇಗೌಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಸನದ ರಾಜ್ಯ ಸಂಘಟನಾ ಸಂಚಾಲಕ ಈರೇಶ್ ಹಿರೇಹಳ್ಳಿ, ದಲಿತ ಸಂಘಟನೆಗಳ ಸಮನ್ವಯ ಸಮಿತಿ ಅಧ್ಯಕ್ಷ ಕೃಷ್ಣ ಹಾಸ್, ಜಾಗೃತ ಅಲೆಮಾರಿ ಸಮುದಾಯಗಳ ರಾಜ್ಯ ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ವಿ. ಗೋವಿಂದರಾಜು, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಗುದ್ದೇನಹಳ್ಳಿ ರಂಗಸ್ವಾಮಿ, ನಲ್ಲಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಹಿರಿಯ ನಾಗರಿಕರಿಗೆ ವಿಶೇಷ ಬಜೆಟ್‌ &#8211; ಕೇರಳದಲ್ಲಿ ಹೊಸ ಕ್ರಾಂತಿ</title>
		<link>https://peepalmedia.com/special-budget-for-senior-citizens-a-new-revolution-in-kerala/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Fri, 30 Jan 2026 05:06:41 +0000</pubDate>
				<category><![CDATA[Uncategorized]]></category>
		<category><![CDATA[news]]></category>
		<category><![CDATA[peepalmedia]]></category>
		<category><![CDATA[Special Budget for Senior Citizens - A New Revolution in Kerala]]></category>
		<guid isPermaLink="false">https://peepalmedia.com/?p=73281</guid>

					<description><![CDATA[ತಿರುವನಂತಪುರಂ : ಹಿರಿಯ ನಾಗರಿಕರ ಕಲ್ಯಾಣಕ್ಕೆ ಒತ್ತು ನೀಡುವ (Good News) ಉದ್ದೇಶದಿಂದ ಕೇರಳ ಸರ್ಕಾರ (Kerala Govt) ಪ್ರತ್ಯೇಕ ಬಜೆಟ್‌ (Budget) ಘೋಷಿಸಿದೆ. ಈ ಮೂಲಕ ಹಿರಿಯ ನಾಗರಿಕರಿಗಾಗಿ ವಿಶೇಷ ಬಜೆಟ್‌ ಮಂಡಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕೇರಳ ಪಾತ್ರವಾಗಿದೆ. ಕೇರಳ ಸರ್ಕಾರವು 2026–27ನೇ ಸಾಲಿನ ಬಜೆಟ್ ಅನ್ನು ವಿಧಾನಸಭೆಯಲ್ಲಿ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರು ಮಂಡಿಸಿದರು. ಇದು ಸಿಪಿಐಎಂ ನೇತೃತ್ವದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸರ್ಕಾರದ ಕೊನೆಯ ಬಜೆಟ್ [&#8230;]]]></description>
										<content:encoded><![CDATA[
<p><strong>ತಿರುವನಂತಪುರಂ :</strong> ಹಿರಿಯ ನಾಗರಿಕರ ಕಲ್ಯಾಣಕ್ಕೆ ಒತ್ತು ನೀಡುವ (Good News) ಉದ್ದೇಶದಿಂದ ಕೇರಳ ಸರ್ಕಾರ (Kerala Govt) ಪ್ರತ್ಯೇಕ ಬಜೆಟ್‌ (Budget) ಘೋಷಿಸಿದೆ. ಈ ಮೂಲಕ ಹಿರಿಯ ನಾಗರಿಕರಿಗಾಗಿ ವಿಶೇಷ ಬಜೆಟ್‌ ಮಂಡಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕೇರಳ ಪಾತ್ರವಾಗಿದೆ.</p>



<p>ಕೇರಳ ಸರ್ಕಾರವು 2026–27ನೇ ಸಾಲಿನ ಬಜೆಟ್ ಅನ್ನು ವಿಧಾನಸಭೆಯಲ್ಲಿ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರು ಮಂಡಿಸಿದರು. ಇದು ಸಿಪಿಐಎಂ ನೇತೃತ್ವದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸರ್ಕಾರದ ಕೊನೆಯ ಬಜೆಟ್ ಆಗಿದೆ. ಮೇ ತಿಂಗಳಲ್ಲಿ ಕೇರಳ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬಜೆಟ್‌ಗೆ ವಿಶೇಷ ಮಹತ್ವ ದೊರೆತಿದೆ. ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಸಂಖ್ಯೆ ವೇಗವಾಗಿ ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಕೇರಳ ಸರ್ಕಾರ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಬಜೆಟ್ ಅನ್ನು ಮಂಡಿಸಿದೆ. ಈ ಬಜೆಟ್‌ನಲ್ಲಿ ಹಿರಿಯ ನಾಗರಿಕರಿಗೆ ಅಗತ್ಯವಾದ ವಿಶೇಷ ಗಮನ ನೀಡಬೇಕಾದ ಸಮಯ ಬಂದಿದೆ ಎಂದು ಸರ್ಕಾರ ಸ್ಪಷ್ಟವಾಗಿ ಉಲ್ಲೇಖಿಸಿದೆ.</p>



<p>ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ರಾಜ್ಯದಲ್ಲಿ ಹಿರಿಯ ನಾಗರಿಕರ ಆಯೋಗ ಸ್ಥಾಪಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಅದಕ್ಕಾಗಿ ವರ್ಷಕ್ಕೆ 30 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ. ಅಲ್ಲದೆ, ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸ್ವಯಂಸೇವಕ ಪಡೆಗಳನ್ನು ರಚಿಸಿ, ಅವರ ಮೂಲಕ ಹಿರಿಯ ನಾಗರಿಕರಿಗೆ 24×7 ಸಹಾಯ ಸೇವೆ ಒದಗಿಸಲಾಗುತ್ತದೆ ಎಂದು ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ತಿಳಿಸಿದ್ದಾರೆ.</p>



<p>ಹಿರಿಯ ನಾಗರಿಕರಿಗಾಗಿ ವಿಶೇಷ ಡಿಜಿಟಲ್ ಪೋರ್ಟಲ್ ಸ್ಥಾಪಿಸಲಾಗುತ್ತಿದ್ದು, ಇದರ ಮೂಲಕ ಕಲ್ಯಾಣ ಯೋಜನೆಗಳ ಮಾಹಿತಿ, ಕುಂದುಕೊರತೆಗಳ ಪರಿಹಾರ, ವೈದ್ಯಕೀಯ ನೆರವು, ಕಾನೂನು ಸೇವೆಗಳು ಹಾಗೂ ಭದ್ರತೆ ಕುರಿತ ನಿಗಾವನ್ನು ವಹಿಸಲಾಗುತ್ತದೆ. ಈ ಉದ್ದೇಶಕ್ಕಾಗಿ ಸ್ವಯಂಸೇವಕ ಪಡೆಗಳಿಗೆ ಸುಮಾರು ₹10 ಕೋಟಿ ಅನುದಾನ ನೀಡಲಾಗುವುದು ಎಂದು ಅವರು ಹೇಳಿದರು.</p>



<p>ಕೇರಳದ ಒಟ್ಟು ಜನಸಂಖ್ಯೆ (ಸುಮಾರು 3.5 ಕೋಟಿ)ಯಲ್ಲಿ ಶೇ.18.7ರಷ್ಟು ಜನರು ಹಿರಿಯ ನಾಗರಿಕರಾಗಿದ್ದು, ಈ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಆರ್ಥಿಕತೆಯ ದೃಷ್ಟಿಯಿಂದಲೂ ಹಿರಿಯ ನಾಗರಿಕರು ರಾಜ್ಯಕ್ಕೆ ಅತ್ಯಂತ ಮಹತ್ವದ್ದಾಗಿದ್ದಾರೆ. ಅವರನ್ನು ಕೇಂದ್ರವಾಗಿಸಿಕೊಂಡು ಪ್ರತ್ಯೇಕ ಬಜೆಟ್ ಮಂಡಿಸುವುದು, ಆ ಕ್ಷೇತ್ರದ ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲಿದೆ ಎಂದು ಬಾಲಗೋಪಾಲ್ ಸ್ಪಷ್ಟಪಡಿಸಿದರು. ಈ ವಿಶೇಷ ಬಜೆಟ್‌ನಲ್ಲಿ ಹಿರಿಯ ನಾಗರಿಕರ ಆರೋಗ್ಯ, ಸಾಮಾಜಿಕ ಭದ್ರತೆ, ಆರ್ಥಿಕ ಸಹಾಯ, ವಸತಿ ಮತ್ತು ಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ವೃದ್ಧಾಪ್ಯ ಪಿಂಚಣಿ, ಆರೋಗ್ಯ ಸೇವೆಗಳ ಸುಧಾರಣೆ ಮತ್ತು ಸಾಮಾಜಿಕ ರಕ್ಷಣಾ ಯೋಜನೆಗಳನ್ನು ಇನ್ನಷ್ಟು ಬಲಪಡಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.</p>
]]></content:encoded>
					
		
		
			</item>
		<item>
		<title>ರೈತರಿಗೆ ಮೋಸವಾಗದಂತೆ ತ್ತನೆ ಆಲೂಗೆಡ್ಡೆ ವಿತರಣೆ ಮಾಡಿ &#8211; ಕಣಗಾಲ್ ಮೂರ್ತಿ</title>
		<link>https://peepalmedia.com/distribute-potatoes-promptly-so-that-farmers-are-not-cheated-kanagal-murthy/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Thu, 29 Jan 2026 10:46:06 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[news]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=73224</guid>

					<description><![CDATA[ಹಾಸನ:&#160;ಬಿತ್ತನೆ ಆಲೂಗೆಡ್ಡೆಯನ್ನು ಇಲಾಖೆವತಿಯಿಂದ ರೈತರಿಗೆ ಮೋಸವಾಗದಂತೆ ದೃಡೀಕರಣ ಮಾಡಿ ವಿತರಣೆ ಮಾಡಬೇಕೆಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕಣಗಾಲ್ ಮೂರ್ತಿ ಆಗ್ರಹಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ಇವರು ಆಲೂಗೆಡ್ಡೆ ಬಿತ್ತನೆ ಬೀಜದ ಮೇಳ ಮಾಡಲಿಲ್ಲ. ಈ ಬಗ್ಗೆ ಹೆಚ್ಚಿನ ವಿಚಾರ ಹೇಳುತ್ತಾರೆ ಕೇಳೋನಾ ಎಂದು ರೈತರುಗಳು ಕಾರ್ಯಕ್ರಮಕ್ಕೆ ಆಗಮಿಸಿದ್ದು, ನಾವು ಬೀಜ ಎಂದು ಕೊಡ ಬರುವುದಿಲ್ಲ ಎಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆಯವರು ಸರ್ಟಿಫಿಕೇಟ್ [&#8230;]]]></description>
										<content:encoded><![CDATA[
<p><strong>ಹಾಸನ:</strong>&nbsp;ಬಿತ್ತನೆ ಆಲೂಗೆಡ್ಡೆಯನ್ನು ಇಲಾಖೆವತಿಯಿಂದ ರೈತರಿಗೆ ಮೋಸವಾಗದಂತೆ ದೃಡೀಕರಣ ಮಾಡಿ ವಿತರಣೆ ಮಾಡಬೇಕೆಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕಣಗಾಲ್ ಮೂರ್ತಿ ಆಗ್ರಹಿಸಿದರು.</p>



<p>ನಗರದ ಪತ್ರಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ಇವರು ಆಲೂಗೆಡ್ಡೆ ಬಿತ್ತನೆ ಬೀಜದ ಮೇಳ ಮಾಡಲಿಲ್ಲ. ಈ ಬಗ್ಗೆ ಹೆಚ್ಚಿನ ವಿಚಾರ ಹೇಳುತ್ತಾರೆ ಕೇಳೋನಾ ಎಂದು ರೈತರುಗಳು ಕಾರ್ಯಕ್ರಮಕ್ಕೆ ಆಗಮಿಸಿದ್ದು, ನಾವು ಬೀಜ ಎಂದು ಕೊಡ ಬರುವುದಿಲ್ಲ ಎಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆಯವರು ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಬೀಜದ ಮೇಳೆ ಎಂದು ಏಕೆ ಹೇಳಬೇಕು, ರೈತರ ದಿಕ್ಕು ಏಕೆ ತಪ್ಪಿಸಬೇಕು ಎಂದು ಪ್ರಶ್ನಿಸಿದರು. ಇದನ್ನು ಚರ್ಚೆ ಮಾಡಲೆಂದು ನಾವು ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಬಂದು ದಡದಡನೆ ವಾಪಸ್ ಹೋದರೆ ನಮಗೆ ಏನು ಅರ್ಥವೇ ಆಗಲಿಲ್ಲ . ಆಲೂಗೆಡ್ಡೆ ಮೇಳದಿಂದ ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ. ಆಲೂಗೆಡ್ಡೆ ಬೆಳೆಗೆ ಉತ್ತೇಜನ ನೀಡುವಂತಹ ಯಾವುದೇ ತಾಂತ್ರಿಕ ಸಲಹೆ, ಸೂಚನೆಗಳು ಮೇಳದಲ್ಲಿ ದೊರಕಿಲ್ಲ. ಉಸ್ತುವಾರಿ ಸಚಿವರು ಕೆಲ ಹೊತ್ತು ಮಾತನಾಡುವುದಕ್ಕೂ ಸಮಯ ನೀಡದೇ ನೇರವಾಗಿ ಮಾತನಾಡಿ ಹೊರಟು ಹೋದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>



<p>ರೈತರು ಹಾಗೂ ರೈತ ಮುಖಂಡರಿಗೆ ತಮ್ಮ ಸಮಸ್ಯೆ ಹೇಳಿಕೊಳ್ಳುವ ಅವಕಾಶವೇ ಸಿಗಲಿಲ್ಲ. ಇಂತಹ ಮೇಳಗಳಿಂದ ರೈತರಿಗೆ ಲಾಭವೇನು ಎಂದು ಪ್ರಶ್ನಿಸಿದರು. ಹಿಂದೆ ಜಿಲ್ಲೆಯಲ್ಲಿ ಲಕ್ಷಾಂತರ ಹೆಕ್ಟೇರ್‌ಗಳಲ್ಲಿ ಆಲೂಗೆಡ್ಡೆ ಬೆಳೆ ಬೆಳೆಯಲಾಗುತ್ತಿತ್ತು. ಆದರೆ ಅಂಗಮಾರಿ ರೋಗ ಸೇರಿದಂತೆ ಹಲವಾರು ಕಾರಣಗಳಿಂದಾಗಿ ಇಂದು ಆಲೂಗೆಡ್ಡೆ ಬೆಳೆಯುವ ಪ್ರದೇಶಗಳು ಬಹಳಷ್ಟು ಕುಂಠಿತಗೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ ರೈತರಿಗೆ ಭರವಸೆ ನೀಡುವ ಬದಲು ಕೇವಲ ಮೇಳ ಆಯೋಜನೆ ಮಾಡಿ ಕೈತೊಳೆದುಕೊಳ್ಳುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.</p>



<p>ಆದರೆ, ಮೊನ್ನೆ ನಡೆದ ಆಲೂಗೆಡ್ಡೆ ಮೇಳದ ನಂತರ ಕೆಲ ರೈತರಲ್ಲಿ ಮತ್ತೆ ಆಲೂಗೆಡ್ಡೆ ಬೆಳೆಯುವ ಆಸಕ್ತಿ ಮೂಡಿದೆ. ಈ ಉತ್ಸಾಹವನ್ನು ಉಳಿಸಬೇಕಾದರೆ ಮುಂದಿನ ದಿನಗಳಲ್ಲಿ ತೋಟಗಾರಿಕೆ ಇಲಾಖೆ ಮೂಲಕವೇ ದೃಢೀಕೃತ, ಗುಣಮಟ್ಟದ ಬಿತ್ತನೆ ಆಲೂಗೆಡ್ಡೆಗಳನ್ನು ರೈತರಿಗೆ ವಿತರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಕಳಪೆ ಬಿತ್ತನೆ ವಸ್ತು ವಿತರಣೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>
]]></content:encoded>
					
		
		
			</item>
		<item>
		<title>ಉಡುಪಿ ಬೋಟ್ ದುರಂತ ಜಿಲ್ಲಾಡಳಿತದಿಂದ ಖಡಕ್ ಮಾರ್ಗಸೂಚಿ ಪ್ರಕಟ</title>
		<link>https://peepalmedia.com/udupi-boat-tragedy-district-administration-announces-khadak-guidelines/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 28 Jan 2026 10:54:59 +0000</pubDate>
				<category><![CDATA[ಉಡುಪಿ]]></category>
		<category><![CDATA[ರಾಜ್ಯ]]></category>
		<category><![CDATA[news]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=73177</guid>

					<description><![CDATA[ಉಡುಪಿ : ಕೃಷ್ಣ ನಗರಿ ಉಡುಪಿಯ (Udupi) ಡೆಲ್ಟಾ ಬೀಚ್ (Delta Beach) ಬಳಿ ಸಂಭವಿಸಿದ ಪ್ರವಾಸಿ ಬೋಟ್ ದುರಂತದಲ್ಲಿ (Boat Tragedy) ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಈ ದುರಂತದ ಬೆನ್ನಲ್ಲೇ ಉಡುಪಿ ಜಿಲ್ಲಾಡಳಿತವು ಬೋಟ್‌ಗಳಿಗೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮತ್ತು ಎಸ್ಸಿ ಹರಿರಾಮ್ ಶಂಕರ್ ಸಭೆ ನಡೆಸಿದ ಬಳಿಕ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಕಡಲ ತೀರಗಳು ಸೇರಿದಂತೆ ಮತ್ತಿತರ ಪ್ರವಾಸಿ ತಾಣಗಳ ಸೌಂದರ್ಯ ಸವಿಯಲು ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ [&#8230;]]]></description>
										<content:encoded><![CDATA[
<p><strong>ಉಡುಪಿ :</strong> ಕೃಷ್ಣ ನಗರಿ ಉಡುಪಿಯ (Udupi) ಡೆಲ್ಟಾ ಬೀಚ್ (Delta Beach) ಬಳಿ ಸಂಭವಿಸಿದ ಪ್ರವಾಸಿ ಬೋಟ್ ದುರಂತದಲ್ಲಿ (Boat Tragedy) ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಈ ದುರಂತದ ಬೆನ್ನಲ್ಲೇ ಉಡುಪಿ ಜಿಲ್ಲಾಡಳಿತವು ಬೋಟ್‌ಗಳಿಗೆ ಮಾರ್ಗಸೂಚಿಯನ್ನು ಪ್ರಕಟಿಸಿದೆ.</p>



<p>ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮತ್ತು ಎಸ್ಸಿ ಹರಿರಾಮ್ ಶಂಕರ್ ಸಭೆ ನಡೆಸಿದ ಬಳಿಕ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಕಡಲ ತೀರಗಳು ಸೇರಿದಂತೆ ಮತ್ತಿತರ ಪ್ರವಾಸಿ ತಾಣಗಳ ಸೌಂದರ್ಯ ಸವಿಯಲು ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಯಾವುದೇ ಪ್ರಾಣಾಪಾಯಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಭೆಯಲ್ಲಿ ಚರ್ಚಿಸಲಾಗಿದೆ.ಇನ್ನು ಜಿಲ್ಲೆಯ ಎಲ್ಲಾ ಪ್ರವಾಸಿ ಬೋಟ್‌ಗಳು ಬಂದರು, ಪೊಲೀಸ್, ಕರಾವಳಿ ಕಾವಲು ಪಡೆ, ಸ್ಥಳೀಯ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿಯನ್ನು ಪಡೆಯದೇ ಕಡಲಿಗೆ ಇಳಿಯಬೇಕಿದ್ದು, ಈ ಸಂಬಂಧ ಜಿಲ್ಲೆಯಲ್ಲಿರುವ ಎಲ್ಲಾ ಪ್ರವಾಸಿ ಬೋಟುಗಳು 45 ದಿನಗಳ ಒಳಗಾಗಿ ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಿಂದ ನೋಂದಣಿ ಮಾಡಿಕೊಂಡು ಅನುಮತಿಯನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ.‌</p>



<p><strong>ಮಾರ್ಗಸೂಚಿ ಇಂತಿವೆ:</strong><br>* ಅನುಮತಿಯನ್ನು ಪಡೆಯದೇ ಇರುವ ಪ್ರವಾಸಿ ಬೋಟ್‌ಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಹಾಗೂ ಅನುಮತಿ ಪಡೆದ ಪ್ರವಾಸಿ ಬೋಟ್‌ಗಳು ಪ್ರತೀ ವರ್ಷ ತಮ್ಮ ಪರವಾನಿಗೆಯನ್ನು ನವೀಕರಿಸಿಕೊಳ್ಳಬೇಕಾಗಿರುತ್ತದೆ.<br>* ಪ್ರವಾಸಿ ಬೋಟ್‌ಗಳಲ್ಲಿ ಪ್ರವಾಸಿಗರ ಹಿತದೃಷ್ಟಿಯಿಂದ ಲೈಫ್ ಜಾಕೆಟ್ ಧರಿಸುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿಯೊಬ್ಬ ಪ್ರವಾಸಿಗರು ಕಡಲಿಗೆ ಇಳಿಯುವ ಮುನ್ನ ಲೈಫ್ ಜಾಕೆಟ್ ಧರಿಸುವಂತೆ ನೋಡಿಕೊಳ್ಳಬೇಕು.<br>* ಪ್ರವಾಸಿ ಬೋಟ್‌ಗಳಲ್ಲಿ ಎಲ್ಲರೂ ಲೈಫ್ ಜಾಕೆಟ್ ಧರಿಸಿದ್ದಲ್ಲಿ ಮಾತ್ರ ಬೋಟ್ ಮುಂದೆ ಸಾಗಲಿದೆ ಎಂಬ ಪ್ರೀ-ರೆಕಾರ್ಡೆಡ್ ಆಡಿಯೋವನ್ನು ಬೋಟ್‌ಗಳಲ್ಲಿ ಹೊರಡಿಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ.</p>



<p>* ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಉದ್ದೇಶಕ್ಕೆ ಬಳಸುವ ಪ್ರವಾಸಿ ಬೋಟ್ ಮಾಲೀಕರುಗಳ ಸಭೆಯನ್ನು ಶೀಘ್ರದಲ್ಲಿ ಕರೆದು ಪ್ರವಾಸಿ ಬೋಟ್‌ಗಳ ಸಂಚಾರಕ್ಕೆ ಪರವಾನಿಗೆಯನ್ನು ಪಡೆಯುವಂತೆ, ಪ್ರವಾಸಿ ಬೋಟ್‌ ಗಳ ಮಾಲೀಕರುಗಳು ಹಾಗೂ ಅದನ್ನು ಚಲಾಯಿಸುವವರಿಗೆ ಕಾರ್ಯಾಗಾರ ಆಯೋಜಿಸಲಾಗುತ್ತದೆ.<br>* ಸುರಕ್ಷತಾ ವಿಧಾನ ಅನುಸರಿಸುವ ಬಗ್ಗೆ, ವಿಮೆ ಸೌಲಭ್ಯ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡುವ ಬಗ್ಗೆ, ಲೈಫ್ ಜಾಕೆಟ್ ಬಳಸುವ ಕುರಿತು ಕರಪತ್ರಗಳನ್ನು ಸಮುದ್ರ ತೀರ ಸೇರಿದಂತೆ ಪ್ರವಾಸಿಗರು ಹೆಚ್ಚಾಗಿ ಸೇರುವಲ್ಲಿ ಪ್ರದರ್ಶಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ.</p>
]]></content:encoded>
					
		
		
			</item>
		<item>
		<title>ಸಾಲಗಾರರ ಕಿರುಕುಳ ಸೆಲ್ಫಿ ವೀಡಿಯೋ ಜೊತೆಗೆ ವಿಷ ಸೇವಿಸಿ ವ್ಯಕ್ತಿ ಸಾ*ವು</title>
		<link>https://peepalmedia.com/consuming-poison-while-harassing-creditors-with-selfie-video/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Wed, 28 Jan 2026 05:40:14 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಹಾಸನ]]></category>
		<category><![CDATA[karnataka]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=73160</guid>

					<description><![CDATA[ಹಾಸನ : ಸಾಲದ ಒತ್ತಡ ಮತ್ತು ಸಾಲಗಾರರ ಕಿರುಕುಳ ಆರೋಪದ ನಡುವೆ ವ್ಯಕ್ತಿಯೊಬ್ಬರು ಸೆಲ್ಫಿ ವೀಡಿಯೋ ಮೂಲಕ ತಮ್ಮ ನೋವನ್ನು ವ್ಯಕ್ತಪಡಿಸಿ ಜೀವನವನ್ನೇ ಅಂತ್ಯಗೊಳಿಸಿಕೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಹೃದಯ ವಿದ್ರಾವಕವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ನೆಲಮಂಗಲ ಮೂಲದ ಕೃಷ್ಣಪ್ಪ (47) ಕಳೆದ ಕೆಲವು ವರ್ಷಗಳಿಂದ ಪತ್ನಿ ಹಾಗೂ ಮಕ್ಕಳೊಂದಿಗೆ ಹಾಸನ ನಗರದಲ್ಲಿ ನೆಲೆಸಿದ್ದರು. ಸಾಲದ ವಿಚಾರವಾಗಿ ನಿರಂತರ ಕಿರುಕುಳ ಅನುಭವಿಸುತ್ತಿದ್ದೇನೆ ಎಂಬ ಆರೋಪದೊಂದಿಗೆ ಅವರು ಮೊಬೈಲ್‌ನಲ್ಲಿ ಸೆಲ್ಫಿ ವೀಡಿಯೋ ದಾಖಲಿಸಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ವೀಡಿಯೋದಲ್ಲಿ ಕೃಷ್ಣಪ್ಪ, [&#8230;]]]></description>
										<content:encoded><![CDATA[
<p><strong>ಹಾಸನ :</strong> ಸಾಲದ ಒತ್ತಡ ಮತ್ತು ಸಾಲಗಾರರ ಕಿರುಕುಳ ಆರೋಪದ ನಡುವೆ ವ್ಯಕ್ತಿಯೊಬ್ಬರು ಸೆಲ್ಫಿ ವೀಡಿಯೋ ಮೂಲಕ ತಮ್ಮ ನೋವನ್ನು ವ್ಯಕ್ತಪಡಿಸಿ ಜೀವನವನ್ನೇ ಅಂತ್ಯಗೊಳಿಸಿಕೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಹೃದಯ ವಿದ್ರಾವಕವಾಗಿ ಬೆಳಕಿಗೆ ಬಂದಿದೆ.</p>



<p>ಬೆಂಗಳೂರಿನ ನೆಲಮಂಗಲ ಮೂಲದ ಕೃಷ್ಣಪ್ಪ (47) ಕಳೆದ ಕೆಲವು ವರ್ಷಗಳಿಂದ ಪತ್ನಿ ಹಾಗೂ ಮಕ್ಕಳೊಂದಿಗೆ ಹಾಸನ ನಗರದಲ್ಲಿ ನೆಲೆಸಿದ್ದರು. ಸಾಲದ ವಿಚಾರವಾಗಿ ನಿರಂತರ ಕಿರುಕುಳ ಅನುಭವಿಸುತ್ತಿದ್ದೇನೆ ಎಂಬ ಆರೋಪದೊಂದಿಗೆ ಅವರು ಮೊಬೈಲ್‌ನಲ್ಲಿ ಸೆಲ್ಫಿ ವೀಡಿಯೋ ದಾಖಲಿಸಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ವೀಡಿಯೋದಲ್ಲಿ ಕೃಷ್ಣಪ್ಪ, ನೆಲಮಂಗಲದ ರಮೇಶ್ ಮತ್ತು ಮಂಜು ಎಂಬವರಿಂದ ತಾನು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ. “ನಾನು ಪಡೆದಿದ್ದು ಕೇವಲ 1 ಲಕ್ಷ ರೂ. ಸಾಲ. ಆದರೆ ನನ್ನ ಮೇಲೆ 40 ಲಕ್ಷ ರೂ. ಮೊತ್ತದ ಚೆಕ್ ಕೇಸ್ ಹಾಕಲಾಗಿದೆ. ಜಾಮೀನು ಪಡೆಯಲು ಬೇಕಾದ ಹಣ ನನ್ನಿಂದ ಸಾಧ್ಯವಿಲ್ಲ. ಈ ಕಿರುಕುಳವನ್ನು ಇನ್ನೆಷ್ಟು ದಿನ ಸಹಿಸಬೇಕು?” ಎಂದು ಅವರು ವೀಡಿಯೋದಲ್ಲಿ ನೋವಿನಿಂದ ಪ್ರಶ್ನಿಸುತ್ತಾರೆ.</p>



<p>ಪತ್ನಿಯನ್ನು ಉದ್ದೇಶಿಸಿ ಮಾತನಾಡಿರುವ ಕೃಷ್ಣಪ್ಪ, “ಕಾಂಚನ, ನನ್ನನ್ನು ಕ್ಷಮಿಸಿ. ನಾನು ಸೋತಿದ್ದೇನೆ” ಎಂದು ಹೇಳುತ್ತಾ, ತಮ್ಮ ಸಾವಿಗೆ ನೇರ ಕಾರಣ ಸಾಲದ ವಿಚಾರದಲ್ಲಿ ಕಿರುಕುಳ ನೀಡಿದವರೇ ಎಂದು ಆರೋಪಿಸಿದ್ದಾರೆ. ಅಲ್ಲದೆ, ತಮ್ಮ ಸಾವಿಗೆ ನ್ಯಾಯ ಸಿಗಬೇಕು ಹಾಗೂ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂಬ ಮನವಿಯನ್ನೂ ವೀಡಿಯೋದಲ್ಲಿ ದಾಖಲಿಸಿದ್ದಾರೆ. ವೀಡಿಯೋ ಮಾಡುತ್ತಲೇ ವಿಷ ಸೇವಿಸಿದ ಕೃಷ್ಣಪ್ಪ, ಹಾಸನ ಹೊರವಲಯದ ದೊಡ್ಡಪುರ ಬಳಿ ಅಸ್ವಸ್ಥಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.</p>



<p>ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ. ವೀಡಿಯೋ ಹೇಳಿಕೆ, ಕುಟುಂಬದ ಮಾಹಿತಿ ಹಾಗೂ ಇತರ ದಾಖಲೆಗಳ ಆಧಾರದಲ್ಲಿ ತನಿಖೆ ಮುಂದುವರಿದಿದೆ.</p>
]]></content:encoded>
					
		
		
			</item>
		<item>
		<title>ಅನಿಮಿಯಾ (ರಕ್ತಹೀನತೆ) ತಡೆಗಟ್ಟುವ ಮಾತ್ರೆ ಸೇವನೆ ಸರ್ಕಾರಿ ಶಾಲೆಯ 59 ಮಕ್ಕಳು ಅಸ್ವಸ್ಥ</title>
		<link>https://peepalmedia.com/59-children-of-government-school-fall-ill-after-taking-pills-to-prevent-anemia/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Tue, 27 Jan 2026 16:10:17 +0000</pubDate>
				<category><![CDATA[ರಾಜ್ಯ]]></category>
		<category><![CDATA[ಶಿವಮೊಗ್ಗ]]></category>
		<category><![CDATA[news]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=73133</guid>

					<description><![CDATA[ಶಿವಮೊಗ್ಗ : ಶಿವಮೊಗ್ಗ (shivamogga) ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾದ ಮಾತ್ರೆ ಸೇವನೆಯ ಬಳಿಕ 59 ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಈ ಘಟನೆ ಶಾಲೆ ಹಾಗೂ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ. ಅನಿಮಿಯಾ (ರಕ್ತಹೀನತೆ) ತಡೆಗಟ್ಟುವ ಉದ್ದೇಶದಿಂದ ಸರ್ಕಾರದ ಆರೋಗ್ಯ ಇಲಾಖೆ ವಾರಕ್ಕೆ ಒಮ್ಮೆ ಖನಿಜಾಂಶಗಳಿರುವ ಮಾತ್ರೆಗಳನ್ನು ಶಾಲಾ ಮಕ್ಕಳಿಗೆ ವಿತರಿಸುತ್ತದೆ. ಅದೇ ಕ್ರಮದಂತೆ, ಇಂದು ಮಧ್ಯಾಹ್ನ ಅರಳಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ [&#8230;]]]></description>
										<content:encoded><![CDATA[
<p><strong>ಶಿವಮೊಗ್ಗ :</strong> ಶಿವಮೊಗ್ಗ (shivamogga) ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾದ ಮಾತ್ರೆ ಸೇವನೆಯ ಬಳಿಕ 59 ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಈ ಘಟನೆ ಶಾಲೆ ಹಾಗೂ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ.</p>



<p>ಅನಿಮಿಯಾ (ರಕ್ತಹೀನತೆ) ತಡೆಗಟ್ಟುವ ಉದ್ದೇಶದಿಂದ ಸರ್ಕಾರದ ಆರೋಗ್ಯ ಇಲಾಖೆ ವಾರಕ್ಕೆ ಒಮ್ಮೆ ಖನಿಜಾಂಶಗಳಿರುವ ಮಾತ್ರೆಗಳನ್ನು ಶಾಲಾ ಮಕ್ಕಳಿಗೆ ವಿತರಿಸುತ್ತದೆ. ಅದೇ ಕ್ರಮದಂತೆ, ಇಂದು ಮಧ್ಯಾಹ್ನ ಅರಳಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಾತ್ರೆ ನೀಡಲಾಗಿತ್ತು. ಈ ಶಾಲೆಯಲ್ಲಿ ಒಟ್ಟು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಮಾತ್ರೆ ಸೇವನೆಯ ಕೆಲವೇ ಸಮಯದಲ್ಲಿ ಸುಮಾರು 59 ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ವಾಂತಿ ಭಾವನೆ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳ ಅಸ್ವಸ್ಥತೆಯನ್ನು ಗಮನಿಸಿದ ಶಿಕ್ಷಕರು ತಕ್ಷಣವೇ ಶಾಲಾ ಆಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ಅಸ್ವಸ್ಥ ವಿದ್ಯಾರ್ಥಿಗಳನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವೈದ್ಯರು ವಿದ್ಯಾರ್ಥಿಗಳಿಗೆ ಅಗತ್ಯ ಚಿಕಿತ್ಸೆಯನ್ನು ನೀಡಿದ್ದು, ಅವರ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.</p>



<p>ಈ ಕುರಿತು ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ (ಟಿಹೆಚ್‌ಓ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ನಾಗೇಂದ್ರಪ್ಪ, ಘಟನೆ ಕುರಿತು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾವುದೇ ವಿದ್ಯಾರ್ಥಿಗಳಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಹೆಚ್ಚಿನ ವಿದ್ಯಾರ್ಥಿಗಳು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದು, ಉಳಿದವರು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.</p>



<p>ಮಾತ್ರೆಗಳ ಗುಣಮಟ್ಟ, ಸಂಗ್ರಹಣೆ ಹಾಗೂ ವಿತರಣೆ ಪ್ರಕ್ರಿಯೆ ಕುರಿತು ಪರಿಶೀಲನೆ ನಡೆಸಲಾಗುತ್ತಿದ್ದು, ಘಟನೆಯ ನಿಖರ ಕಾರಣ ಪತ್ತೆಹಚ್ಚಲು ಆರೋಗ್ಯ ಇಲಾಖೆ ತನಿಖೆ ಆರಂಭಿಸಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಪೋಷಕರು ಆಸ್ಪತ್ರೆಗೆ ಧಾವಿಸಿ ಮಕ್ಕಳ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದ್ದಾರೆ. ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಸುದ್ದಿ ಗ್ರಾಮದಲ್ಲಿ ಹರಡುತ್ತಿದ್ದಂತೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು.</p>
]]></content:encoded>
					
		
		
			</item>
		<item>
		<title>ಬೈಕ್ ಟ್ಯಾಕ್ಸಿ ಗೆ ಗ್ರೀನ್‌ ಸಿಗ್ನಲ್, ಸುಪ್ರೀಂ ಕೋರ್ಟ್‌ ನತ್ತ ಮುಖ ಮಾಡಿದ ಆಟೋ ಚಾಲಕರು</title>
		<link>https://peepalmedia.com/green-signal-for-bike-taxis-auto-drivers-turn-to-supreme-court/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Tue, 27 Jan 2026 15:40:51 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಮೀಡಿಯ]]></category>
		<category><![CDATA[ರಾಜ್ಯ]]></category>
		<category><![CDATA[news]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=73124</guid>

					<description><![CDATA[ಬೆಂಗಳೂರು : ಕರ್ನಾಟಕ ಹೈಕೋರ್ಟ್ (Karnataka High Court) ಬೈಕ್‌ಗಳನ್ನು ಟ್ಯಾಕ್ಸಿಗಳಾಗಿ (Bike Taxi) ಬಳಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದರೆ ಈ ನಿರ್ಧಾರದಿಂದ ಆಟೋ ಚಾಲಕರು (Auto Drivers) ಅಸಮಾದಾನ ಹೊರ ಹಾಕಿದ್ದಾರೆ. ತಮ್ಮ ನ್ಯಾಯಕ್ಕಾಗಿ ಆಟೋ ಚಾಲಕರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಮುಂದಾಗಿದ್ದಾರೆ. ಹೌದು, ಹೈಕೋರ್ಟ್ ‌ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಏಕಸದಸ್ಯ ಪೀಠದ ಆದೇಶವನ್ನು ವಜಾಗೊಳಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಹಸಿರು ನಿಶಾನೆ ದೊರೆತಿದೆ. [&#8230;]]]></description>
										<content:encoded><![CDATA[
<p><strong>ಬೆಂಗಳೂರು :</strong> ಕರ್ನಾಟಕ ಹೈಕೋರ್ಟ್ (Karnataka High Court) ಬೈಕ್‌ಗಳನ್ನು ಟ್ಯಾಕ್ಸಿಗಳಾಗಿ (Bike Taxi) ಬಳಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದರೆ ಈ ನಿರ್ಧಾರದಿಂದ ಆಟೋ ಚಾಲಕರು (Auto Drivers) ಅಸಮಾದಾನ ಹೊರ ಹಾಕಿದ್ದಾರೆ. ತಮ್ಮ ನ್ಯಾಯಕ್ಕಾಗಿ ಆಟೋ ಚಾಲಕರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಮುಂದಾಗಿದ್ದಾರೆ.</p>



<p>ಹೌದು, ಹೈಕೋರ್ಟ್ ‌ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಏಕಸದಸ್ಯ ಪೀಠದ ಆದೇಶವನ್ನು ವಜಾಗೊಳಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಹಸಿರು ನಿಶಾನೆ ದೊರೆತಿದೆ. ಆದರೆ ಇದರಿಂದ ಆಟೋ ಚಾಲಕರಿಗೆ ಕಂಟಕವಾಗಿವ ಸಾಧ್ಯತೆ ಇದೆ. ಸಾರಿಗೆ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಇಚ್ಛಾಶಕ್ತಿಯ ಕೊರತೆಯಿಂದ ಕೋರ್ಟ್‌ನಲ್ಲಿ ಈ ಆದೇಶ ಬಂದಿದೆ ಎಂದು ಆಟೋ ಚಾಲಕರ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ.ಇದೀಗ ಆಟೋ ಚಾಲಕರು ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾಗಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು, ಸುಪ್ರೀಂ ಕೋರ್ಟ್ ಕದ ತಟ್ಟಲು ಆಟೋ ಚಾಲಕರ ಸಂಘಟನೆಗಳು ಚಿಂತನೆ ಮಾಡುತ್ತಿವೆ. ಆದರೂ ಕೆಲ ಆಟೋ ಚಾಲಕರು ಸಾರಿಗೆ ಇಲಾಖೆಯ ಮೂಲಕವೇ ಸುಪ್ರೀಂಗೆ ಅರ್ಜಿ ಹಾಕಬೇಕೆಂದು ಒತ್ತಾಯಿಸುತ್ತಿದ್ದಾರೆ.</p>



<p>ಈ ಹಿಂದೆ ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ಸಮಿತಿ 2025ರ ನವೆಂಬರ್ 26ರಂದು ಬೈಕ್ ಟ್ಯಾಕ್ಸಿಗಳು ಅಸುರಕ್ಷಿತ ಮತ್ತು ಕಾನೂನು ಬಾಹಿರ ಎಂದು ವರದಿ ನೀಡಿತ್ತು. ಈ ಬಗ್ಗೆ ಓಲಾ, ಊಬರ್ ಸೇರಿ ಹಲವು ಕಂಪನಿಗಳು ನ್ಯಾಯಾಲಯದ ಮೊರೆ ಹೋಗಿದ್ದವು. ಆದರೆ ಇದೀಗ ಹೈಕೋರ್ಟ್ ಬೈಕ್ ಟ್ಯಾಕ್ಸಿ ಸಂಸ್ಥೆಗಳ ಮೇಲ್ಮನವಿಯನ್ನು ಪುರಸ್ಕರಿಸಿದೆ. ಅವುಗಳ ಸೇವೆ ಪುನರಾರಂಭಕ್ಕೆ ಅವಕಾಶ ಕಲ್ಪಿಸಿದೆ. ಈ ತೀರ್ಪಿನಿಂದಾಗಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಅಧಿಕೃತವಾಗಿ ಮುಂದುವರೆಯಲಿದೆ.</p>



<p></p>
]]></content:encoded>
					
		
		
			</item>
	</channel>
</rss>
