<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>pendrive &#8211; Peepal Media</title>
	<atom:link href="https://peepalmedia.com/tag/pendrive/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 24 May 2024 08:13:59 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>pendrive &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ದೊಡ್ಡಗೌಡ್ರಿಗೆ ಆತ್ಮಸಾಕ್ಷಿ ಅಂತ ಇದ್ದಿದ್ದರೆ ಅವರು ಹೀಗೆ ಪತ್ರ ಬರೆಯುತ್ತಿದ್ದರು (ಕಾಲ್ಪನಿಕ ಪತ್ರ)</title>
		<link>https://peepalmedia.com/had-dodgoudry-had-a-conscience-he-would-have-written-a-letter-like-this-fictional-letter/</link>
		
		<dc:creator><![CDATA[Hanumanth Halageri]]></dc:creator>
		<pubDate>Fri, 24 May 2024 08:13:58 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ವಿಡಂಬನೆ]]></category>
		<category><![CDATA[#Kumaraswamy #JDS #ramanagara #mysore #kodagu #kannadaexpress9 #prathapsimha #Simha #SaRaMahesh #GTDevegowda #DeveGowda #HDK H D Kumaraswamy]]></category>
		<category><![CDATA[bengalure]]></category>
		<category><![CDATA[devegowda]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[pendrive]]></category>
		<category><![CDATA[politics]]></category>
		<category><![CDATA[Prajwal Revanna]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=39855</guid>

					<description><![CDATA[ಇಂದ ದೊಡ್ಡಗೌಡರು, ಬೆಂಗಳೂರು ಇವರಿಗೆ, ರಾಜ್ಯದ ಜನತೆಗೆ &#160;ಮಹಾಜನರೇ, ನಿನ್ನೆಯಿಂದ ನಾನು ಬರೆದಿರುವೇ ಎನ್ನಲಾದ ಪತ್ರ ಒಂದು ವೈರಲ್‌ ಆಗಿದೆ. ನಿಜ ಹೇಳಬೇಕೆಂದ್ರೆ ಅದು ನಾನು ಬರೆದದ್ದಲ್ಲ, ನನ್ನ ಮಕ್ಕಳು ತಮ್ಮ ರಾಜಕೀಯ ಷಡ್ಯಂತ್ರಕ್ಕಾಗಿ &#160;ನಮ್ಮ ಪಕ್ಷದ &#160;ಒಬ್ಬ ಒಳ್ಳೆಯ ವಂದಿಮಾಗದ ಆಸ್ಥಾನ ಲೇಖಕನಿಗೆ ದೊಡ್ಡ ಸಂಬಳ ಕೊಟ್ಟು ಹೀಗ್ಹೀಗೆ ಎಂದು ಹೇಳಿ ಬರೆಸಿದ ಪತ್ರವದು. ಅದು ಪ್ರಜ್ವಲ್‌ ರೇವಣ್ಣನಿಗೆ ಎಂದು ಹೇಳಲಾಗಿದ್ದರೂ ಅದರ ಒಳ ಉದ್ದೇಶ ರಾಜ್ಯ ಜನತೆಗೆ ತಲುಪಿಸುವುದೇ ಆಗಿತ್ತು. ಆ ಉದ್ದೇಶ ಈಡೇರಿಯಾಗಿದೆ. [&#8230;]]]></description>
										<content:encoded><![CDATA[
<p><strong>ಇಂದ</strong></p>



<p><strong>ದೊಡ್ಡಗೌಡರು, ಬೆಂಗಳೂರು</strong></p>



<p><strong>ಇವರಿಗೆ</strong>,</p>



<p><strong>ರಾಜ್ಯದ ಜನತೆಗೆ</strong></p>



<p>&nbsp;ಮಹಾಜನರೇ, ನಿನ್ನೆಯಿಂದ ನಾನು ಬರೆದಿರುವೇ ಎನ್ನಲಾದ ಪತ್ರ ಒಂದು ವೈರಲ್‌ ಆಗಿದೆ. ನಿಜ ಹೇಳಬೇಕೆಂದ್ರೆ ಅದು ನಾನು ಬರೆದದ್ದಲ್ಲ, ನನ್ನ ಮಕ್ಕಳು ತಮ್ಮ ರಾಜಕೀಯ ಷಡ್ಯಂತ್ರಕ್ಕಾಗಿ &nbsp;ನಮ್ಮ ಪಕ್ಷದ &nbsp;ಒಬ್ಬ ಒಳ್ಳೆಯ ವಂದಿಮಾಗದ ಆಸ್ಥಾನ ಲೇಖಕನಿಗೆ ದೊಡ್ಡ ಸಂಬಳ ಕೊಟ್ಟು ಹೀಗ್ಹೀಗೆ ಎಂದು ಹೇಳಿ ಬರೆಸಿದ ಪತ್ರವದು. ಅದು ಪ್ರಜ್ವಲ್‌ ರೇವಣ್ಣನಿಗೆ ಎಂದು ಹೇಳಲಾಗಿದ್ದರೂ ಅದರ ಒಳ ಉದ್ದೇಶ ರಾಜ್ಯ ಜನತೆಗೆ ತಲುಪಿಸುವುದೇ ಆಗಿತ್ತು. ಆ ಉದ್ದೇಶ ಈಡೇರಿಯಾಗಿದೆ.</p>



<p>ಕಳೆದೊಂದು ತಿಂಗಳಿನಿಂದ ನಾನು ಬಳಷ್ಟು ತೊಳಲಾಡಿದ್ದೇನೆ. ನಾವು ರಾಜಕಾರಣಿಗಳು. ನಮಗೂ ಒಂದು ಮನಸ್ಸಿರುತ್ತದೆ. ಆದರೆ, ನಮ್ಮ ಮನಸ್ಸಿನಲ್ಲಿ ಮೂಡುವ ಸತ್ಯವನ್ನು ನಮಗೆ ಹೇಳಲು ಸಾಧ್ಯವಾಗುದಿಲ್ಲ. ನಾವು ಏನಾದರೂ &nbsp;ನಮ್ಮೊಳಗೆ ಇರುವ ಸತ್ಯ ಹೇಳಿದರೆ ಅದ್ರಿಂದ ಪಕ್ಷದ ಕಾರ್ಯಕರ್ತರು ಮತದಾರರು ಏನೆಂದುಕೊಳ್ಳುತ್ತಾರೋ ಎಂದು ನಾವು ಅವರಿಗೆ ಬೇಕಾದಂತೆ ಸತ್ಯಕ್ಕೆ ತರಾವರಿ ಬಣ್ಣದ ಲೇಪ ಮಾಡಿಕೊಂಡೇ ಮಾತಾಡಬೇಕಾಗುತ್ತದೆ. ಆದರೆ, ಇವತ್ತು ತಡೆದುಕೊಳ್ಳಲಿಕ್ಕಾಗದೇ ಈ ಪತ್ರವನ್ನು ಬರೆಯುತ್ತಿದ್ದೇನೆ.</p>



<p>ನಾನು ಈ ದೇಶದ ಪ್ರಧಾನಿಯಾದುದು ನನ್ನ ಅದೃಷ್ಟ. ಇದ್ರಿಂದ ನನಗೆ ಮತ್ತು ನನ್ನ ಪಕ್ಷಕ್ಕೆ ಒಳ್ಳೆಯ ಹೆಸರು ಬಂತು. ಈ ನಾಡಿನ ಸೂಕ್ಷ್ಮ ಸಂವೇದನೆಯ ರಾಜಕಾರಣಿಗಳೆಲ್ಲ ನನ್ನ ಪಕ್ಷಕ್ಕೆ ಬಂದು ಸೇರಿಕೊಂಡರು. ದಕ್ಷಿಣ ಭಾರತದ ಹಿಂದಿವಾಲಾ ಪಕ್ಷಗಳ ವಿರುದ್ಧ ನಮ್ಮದೇ ನೆಲದ ಪ್ರಾದೇಶಿಕ ಪಕ್ಷವನ್ನು ಕಟ್ಟಿ ಬೆಳೆಸೋಣ ಅವರ ಕನಸಾಗಿತ್ತು. ಆರಂಭದಲ್ಲಿಯೇ ಎಲ್ಲವೂ ಚನ್ನಾಗಿಯೇ ಇತ್ತು. ಆದರೆ, ನನ್ನ ಪುತ್ರ ವಾತ್ಸಲ್ಯ ಮತ್ತು ಕುಟುಂಬ ಪ್ರೇಮ ನನ್ನನ್ನು ಕುರುಡನ್ನಾಗಿ ಮಾಡಿತ್ತು. ಅದೇ ನಾನು ಮಾಡಿದ ದೊಡ್ಡ ತಪ್ಪು.</p>



<p>ಇವನಿಗೆ ಸೀಟು ಕೊಟ್ಟರೆ ಅವನಿಗೆ ಸಿಟ್ಟು, ಅವನಿಗೆ ಕೊಟ್ರೆ ಇವನಿಗೆ ಸಿಟ್ಟು. ಹಾಗಾಗಿ ನಾನು ಬರಬರುತ್ತಾ ನನ್ನ ಮಕ್ಕಳಿಗೆ, ಸೊಸೆಯಂದಿರಿಗೆ, ಅಳಿಯಂದಿರಿಗೆ, ಮೊಮ್ಮಕ್ಕಳಿಗೆ ಇದ್ದುಬಿದ್ದ ಸಂಬಂಧಿಕರಿಗೆಲ್ಲ ನನ್ನ ಪಕ್ಷದ ಟಿಕೇಟ್‌ಗಳನ್ನು ಹಂಚುತ್ತಾ ಹೋದೆ. ಪ್ರಾದೇಶಿಕ ಪಕ್ಷ ಅಂತ ಬಂದವರೆಲ್ಲ ಒಬ್ಬೊಬ್ಬರು ಪಕ್ಷ ಬಿಟ್ಟು ಹೋದರು. ನಮ್ಮ ಪಕ್ಷ ಅನ್ನುವುದು ನನ್ನ ಕುಟುಂಬದ ಪಕ್ಷವಾಗಿ ಮಾತ್ರ ಉಳಿಯಿತು. ಹಾಗೆ ನೋಡಿದರೆ ನಾನು ಪ್ರಜಾಪ್ರಬುತ್ವ ವ್ಯವಸ್ಥೆಯ ವಿರೋಧಿ. ಪ್ರಜೆಗಳಿಂದ ಪ್ರಜೆಗಳಿಗೋಸ್ಕರ ಇರುವ ಪ್ರಜಾ ರಾಜಕಾರಣವನ್ನು ನಮ್ಮ ಕರ್ನಾಟಕದಲ್ಲಿ ಕುಟುಂಬ ರಾಜಕಾರಣಕ್ಕೆ ಸೀಮಿತ ಮಾಡಿದ ಕುಖ್ಯಾತಿ ನನ್ನದೇ ಎನ್ನಬಹುದು. ಇದಷ್ಟೇ ಅಲ್ಲ, ನನ್ನ ಕುಟುಂಬದವರೆಲ್ಲ ಅವರವರ &nbsp;ಕ್ಷೇತ್ರಗಳಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಿದರು. ರಾಜರಂತೆ ವರ್ತಿಸುತ್ತಾ ರಾಜಸತ್ತೆ ಸ್ಥಾಪಿಸತೊಡಗಿದರು. ತಮ್ಮ ತಮ್ಮ ಕ್ಷೇತ್ರಗಳನ್ನು, ಕ್ಷೇತ್ರದ ಜನರನ್ನು, ಹೆಂಗಸರನ್ನು ಆಸ್ತಿಯಂತೆ ಬಳಸತೊಡಗಿದರು. ಇದಕ್ಕೆ ನನ್ನ ದೊಡ್ಡ ಮಗ ಒಂದು ಸಿಂಪಲ್‌ ಉದಾಹರಣೆ.</p>



<p>ಇನ್ನೊಂದು ನನ್ನ ಮುಖ್ಯವಾದ ೨ನೇ ತಪ್ಪೆಂದರೆ ಪ್ರಜ್ವಲ್‌ ರೇವಣ್ಣ ಪ್ರಕರಣ ಐದಾರು ವರ್ಷಗಳ ಹಿಂದೆಯೇ ನನ್ನ ಗಮನಕ್ಕೆ ಬಂದಿದ್ದರೂ ನಾನು ನಿರ್ಲಕ್ಷ ಮಾಡಿದ್ದು. ಆಗ ನನ್ನ ಬುದ್ಧಿಗೆ ಮಂಕು ಕವಿದಿತ್ತು. ಪ್ರಜ್ವಲನ ಭಾಷಣ ಕೇಳುತ್ತಿದ್ದರೆ. ನಿಜ ಹೇಳಬೇಕೆಂದರೆ ಅವನ ಗತ್ತು ಗೈರತ್ತು ನೋಡುತ್ತಿದ್ದರೆ, ನನಗೆ ನನ್ನ ಕುಟುಂಬದ ಜೀನ್ಸ್‌ ಬಗ್ಗೆ ಬಹಳಷ್ಟು ಹೆಮ್ಮೆಯಾಗುತ್ತಿತ್ತು. ಈ ಪಜ್ವಲ ನಮ್ಮ ಪಕ್ಷವನ್ನು ಉಜ್ವಲಗೊಳಿಸುತ್ತಾನೆ ಎಂದೇ ನಾನು ನಂಬಿದ್ದೆ.</p>



<p>ರಾಜಕಾರಣಿಗಳ ಸುತ್ತಮುತ್ತಲೆಲ್ಲ ಸ್ವಜಾತಿಯ ಹೊಗಳುಭಟ್ಟ ವಂದಿ ಮಾಗದರೇ ತುಂಬಿಕೊಂಡಿರುತ್ತಾರೆ. ಅಂತ ವಂದಿಮಾಗದರು ಐದಾರು ವರ್ಷಗಳ ಹಿಂದೆಯೇ ಪ್ರಜ್ವಲನ ಕಾಮ ಕ್ರೀಡೋತ್ಸವಗಳನ್ನು ನನಗೆ ಹೇಳಿದ್ದರು. ಹೇಳಿದ ಮರುಗಳಿಗೆಯೇ ವಯಸ್ಸಿನ ಹುಡುಗ ಗೌಡ್ರೆ, ಅದರಲ್ಲೂ ನಮ್ಮಗೌಡ್ರ ಜಾತಿ ಹುಡುಗ, ಗಂಡು ಹುಡುಗ, ಇದೆಲ್ಲ ಕಾಮನ್ನು ಎಂದು ಅವರೇ ಸಮಾಧಾನ ಮಾಡಿದ್ದರು. ಸುಳ್ಳು ಯಾಕೆ ಹೇಳಲಿ ಆಗ ನನ್ನ ಸುತ್ತಲಿದ್ದವರ ಮಾತು ಕೇಳಿ ನನ್ನೊಳಗೂ ಗರ್ವ ತುಸು ಹೆಚ್ಚೇ ಇತ್ತು. &nbsp;ಅದು ನನ್ನನ್ನು ಮರುಳನನ್ನಾಗಿಸಿತು,</p>



<p>ಅವನ ಚಿಕ್ಕಪ್ಪ ಮಾಡಿದ ಪ್ರಕರಣ ಕಣ್ಮುಂದೆ ಇತ್ತಲ್ಲ. ಅವನ ಚಿಕ್ಕಪ್ಪನೂ ಹಾಗೆ ಒಂದಿಷ್ಟು ದಿನ ಹಾರಾಡಿ, ಊರೆಲ್ಲ ಸುತ್ತಾಡಿ ಆಮೇಲೆ ಮನೆಗೆ ಹತ್ತಿದವನು. ಇವನಿಗೂ ಮದುವೆ ಅನ್ನೋದೊಂದು ಮಾಡಿದ ಮೇಲೆ ಸರಿ ಹೋಗ್ತಾನೆ. ಅಲ್ಲಿಯವರೆಗೂ ಹಾರಾಡಿಕೊಂಡಿರಲಿ ಎಂದು ನಾನು ಸುಮ್ಮನಾಗಿದ್ದೆ.</p>



<p>ಬಹುಶಃ ಯಾರಿಗೆಲ್ಲ ಹಣ, ಅಧಿಕಾರ, ಕೀರ್ತಿ ಬರುತ್ತದೆಯೋ ಅವರೆಲ್ಲ ಹೀಗೆ ದಾರಿ ತಪ್ಪುತ್ತಾರೆ ಅನಿಸುತ್ತದೆ. &nbsp;ಈ ಕಾರಣಕ್ಕಾಗಿಯೇ ರಾಜರ ಅಂತಪುರಗಳಲ್ಲೆ ಎಲ್ಲ ಕಾಲದಲ್ಲೂ ತುಂಬಿ ತುಳುಕುತ್ತಿದ್ದವು. ಸಣ್ಣ ವಯಸ್ಸಿನ ಮಕ್ಕಳಿಗೆ ಅಧಿಕಾರ, ಸ್ಥಾನಮಾನ, ಟಿಕೇಟ್‌ ಕೊಡಲೇಬಾರದು ಎಂದು ಈಗನಿಸುತ್ತದೆ. ಇದು ನನ್ನ ಮೊಮ್ಮಕ್ಕಳದ್ದೇ ತಪ್ಪಲ್ಲ. ಎಲ್ಲೆಲ್ಲಿ ಕುಟುಂಬ ರಾಜಕಾರಣ ಇದೆಯO ಅಲ್ಲೆಲ್ಲ ಹಿರಿಯ ರಾಜಕಾರಣಿಗಳ ಮಕ್ಕಳು ಮೊಮ್ಮಕ್ಕಳು &nbsp;ಹಿಂಗೆ ಮೆರಿತಿದ್ದಾರೆ. ಆದರೆ, ಗುಂಡಿ ಒಳಗೆ ಬಿದ್ದೋನಿಗೆ ಆಳಿಗೊಂದು ಕಲ್ಲು.</p>



<p>ನನ್ನ ಸುತ್ತಲಿದ್ದ ಹೊಗಳುಭಟ್ಟರೆಲ್ಲ ನಮ್ಮನ್ನು ನೀವು ದೇಶ ಆಳಕ್ಕೆ ಬಂದವರು ಎಂದೆಲ್ಲ ಯಾವಾಗಲೂ ಹೇಳುತ್ತಲೇ ಇದ್ದರು. ನಾನು ನನ್ನ ಕುಟುಂಬದವರು ಕೂಡ ಅದನ್ನೆ ನಂಬಿ ಆಳುವುದಕ್ಕಾಗಿ ಹೋರಾಡುತ್ತಲೇ ಇದ್ದೇವು. ಆದರೆ, ದೇಶ ಆಳಕ್ಕೆ ಹೋಗಿ ನಮ್ಮ ನಮ್ಮ ಮನೆಯ ಮಕ್ಕಳನ್ನು ಹೇಗೆ ಬೆಳೆಸಬೇಕು ಎಂಬುದರ ಕಡೆ ನಾವು ಗಮನ ಕೊಡಲೇ ಇಲ್ಲ. ಮಕ್ಕಳಿಗೆ ತುಸುವಾದರೂ ಸಂವೇದನೆ ಕಲಿಸಿದ್ದರೆ, ಸಮಾಜದ ಬಗ್ಗೆ ಅರ್ಥ ಮಾಡಿಸಿದ್ದರೆ ಹೀಗಾಗುತ್ತಿರಲಿಲ್ಲ.</p>



<p>&nbsp;ಅದರ ಪ್ರತಿಫಲವೇ ಈಗ ಇಷ್ಟೆಲ್ಲ ಆಗಿದೆ. &nbsp;ನನ್ನ ಎರಡನೇ ಮಗ ಎರಡು ಸಂಸಾರ ಕಟ್ಟಿಕೊಂಡಾಗ, ನನ್ನ ದೊಡ್ಡಮಗ ಕೊರೊನಾ ಕಾಲದಲ್ಲಿ ಜನರಿಗೆ ಕಿಟ್‌ ಹಂಚುವಾಗ ಬೀಕ್ಷುಕರಿಗೆ ಎಸೆಯುವಂತೆ &nbsp;ಕಿಟ್‌ ಎಸೆದಾಗ, ನನ್ನ ಸೊಸೆ ಒಂದು ಯಕಶ್ಚಿತ್‌ ಕಾರು ಡ್ಯಾಮೇಜ್‌ ಆದಾಗ ಗೌಡ್ರಾಳ್ವಿಕೆಯ ಪೊಗರಿನ ಮಾತಾಡಿದಾಗ, ಪ್ರಜ್ವಲನ ಕಾಮಕ್ರೀಡೆಗಳ ವಿಚಾರ ಕಿವಿಗೆ ಬಿದ್ದಾಗ… ಹೀಗೆ ಆಗಲೇ ಎಚೆತ್ತುಕೊಂಡು ಬುದ್ಧಿ ಹೇಳಿದ್ದರೆ ಇದೆಲ್ಲ ನಡೆಯುತ್ತಲೇ ಇರಲಿಲ್ಲ. ಈಗ ಕಾಲ ಮಿಂಚಿ ಹೋಗಿಬಿಟ್ಟಿದೆ. &nbsp;</p>



<p>ಇನ್ನು ನನ್ನ ಕಣ್ಣಾರೆ ಏನೇನೋ ನೋಡುವುದಿದೆಯೋ ಎಂದು ಅಲವತ್ತುಕೊಳ್ಳುತ್ತಾ ಕಾಲ ಕಳೆಯುವುದಷ್ಟೆ ಈಗ ನನಗೆ ಉಳಿದಿರುವುದು. ಇದನ್ನು ಕೂಡ ನೀವು ಸಹಾನುಭೂತಿ ಗಿಟ್ಟಿಸಿಕೊಳ್ಳಲು ದೊಡ್ಡಗೌಡರ ಗೋಳಾಟ ಎಂದುಕೊಂಡರೆ ನಾನೇನು ಮಾಡಲಾಗುವುದಿಲ್ಲ. &nbsp;ನಿಮಗೆ ಮನವರಿಕೆ ಮಾಡಲು ಸಾಧ್ಯವಿಲ್ಲವೆಂದು ನನಗೆ ಗೊತ್ತು. ನಾನು ನನ್ನ ಆತ್ಮಸಾಕ್ಷಿಗೆ ಹೆದರುತ್ತೇನೆ, ದೇವರಲ್ಲಿ ನನಗೆ ನಂಬಿಕೆ</p>



<p> ಇಂತಿ ನಿಮ್ಮ ದೊಡ್ಡಗೌಡ್ರು</p>



<ul class="wp-block-list">
<li><strong>ಹನುಮಂತ ಹಾಲಿಗೇರಿ </strong></li>
</ul>
]]></content:encoded>
					
		
		
			</item>
		<item>
		<title>ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ: ಎಚ್‌ಡಿ ರೇವಣ್ಣನಿಂದ ಸಂತ್ರಸ್ತೆಯ ಅಪಹರಣ</title>
		<link>https://peepalmedia.com/kidnap-by-hd-revanna/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 03 May 2024 07:18:35 +0000</pubDate>
				<category><![CDATA[ಅಪರಾಧ]]></category>
		<category><![CDATA[Bangalore]]></category>
		<category><![CDATA[HD Revanna]]></category>
		<category><![CDATA[JDS]]></category>
		<category><![CDATA[karnataka]]></category>
		<category><![CDATA[pendrive]]></category>
		<category><![CDATA[prajwal]]></category>
		<category><![CDATA[Prajwal Revanna]]></category>
		<category><![CDATA[revanna]]></category>
		<category><![CDATA[sex scandle]]></category>
		<guid isPermaLink="false">https://peepalmedia.com/?p=39085</guid>

					<description><![CDATA[ಹಾಸನ ಅಶ್ಲೀಲ ವಿಡಿಯೋ ವೈರಲ್‌ ಪ್ರಕರಣಕ್ಕೆ ಕೊನೆಗೂ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದೂರು ಕೊಟ್ಟ ಮೇಲೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಮಧ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌ ಸಿಕ್ಕಿದ್ದು, ಎಚ್‌ ಡಿ ರೇವಣ್ಣ ಹಾಗೂ ಸತೀಶ್‌ ಬಾಬಣ್ಣ ಮೇಲೆ ಸಂತ್ರಸ್ತೆಯನ್ನು ಅಪಹರಿಸಿದ ದೂರು ದಾಖಲಾಗಿದೆ. ಎಪ್ರಿಲ್‌ 29 ರಂದು ಈ ಕೃತ್ಯ ನಡೆದಿದ್ದು, ಕೆಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರಿನ [&#8230;]]]></description>
										<content:encoded><![CDATA[
<p>ಹಾಸನ ಅಶ್ಲೀಲ ವಿಡಿಯೋ ವೈರಲ್‌ ಪ್ರಕರಣಕ್ಕೆ ಕೊನೆಗೂ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದೂರು ಕೊಟ್ಟ ಮೇಲೆ ಎಸ್‌ಐಟಿ ತನಿಖೆ ನಡೆಸುತ್ತಿದೆ.</p>



<p>ಈ ಮಧ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌ ಸಿಕ್ಕಿದ್ದು, ಎಚ್‌ ಡಿ ರೇವಣ್ಣ ಹಾಗೂ ಸತೀಶ್‌ ಬಾಬಣ್ಣ ಮೇಲೆ ಸಂತ್ರಸ್ತೆಯನ್ನು ಅಪಹರಿಸಿದ ದೂರು ದಾಖಲಾಗಿದೆ. ಎಪ್ರಿಲ್‌ 29 ರಂದು ಈ ಕೃತ್ಯ ನಡೆದಿದ್ದು, ಕೆಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರಿನ ಕೆಆರ್‌ ನಗರದ ಹೆಬ್ಬಾಲುವಿನಲ್ಲಿ ಈ ಕೃತ್ಯ ನಡೆದಿದ್ದು, ರಾಜು ಎಂಬವರು ದೂರು ದಾಖಲಿಸಿದ್ದಾರೆ.</p>



<p>ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯನ್ನು ಅಪಹರಿಸಲಾಗಿದೆ. ಈ ಮೂಲಕ ಇಡೀ ಪ್ರಕರಣಕ್ಕೆ ಸಿನಿಮೀಯ ತಿರುವ ಸಿಕ್ಕಿದೆ.</p>



<figure class="wp-block-image size-full"><img fetchpriority="high" decoding="async" width="491" height="629" src="https://peepalmedia.com/wp-content/uploads/2024/05/441387353_333803866472684_1738616870453678453_n-1.jpg" alt="" class="wp-image-39087" srcset="https://peepalmedia.com/wp-content/uploads/2024/05/441387353_333803866472684_1738616870453678453_n-1.jpg 491w, https://peepalmedia.com/wp-content/uploads/2024/05/441387353_333803866472684_1738616870453678453_n-1-234x300.jpg 234w, https://peepalmedia.com/wp-content/uploads/2024/05/441387353_333803866472684_1738616870453678453_n-1-150x192.jpg 150w, https://peepalmedia.com/wp-content/uploads/2024/05/441387353_333803866472684_1738616870453678453_n-1-300x384.jpg 300w" sizes="(max-width: 491px) 100vw, 491px" /></figure>



<figure class="wp-block-image size-full"><img decoding="async" width="491" height="629" src="https://peepalmedia.com/wp-content/uploads/2024/05/441277605_333803909806013_2917589561439340021_n.jpg" alt="" class="wp-image-39088" srcset="https://peepalmedia.com/wp-content/uploads/2024/05/441277605_333803909806013_2917589561439340021_n.jpg 491w, https://peepalmedia.com/wp-content/uploads/2024/05/441277605_333803909806013_2917589561439340021_n-234x300.jpg 234w, https://peepalmedia.com/wp-content/uploads/2024/05/441277605_333803909806013_2917589561439340021_n-150x192.jpg 150w, https://peepalmedia.com/wp-content/uploads/2024/05/441277605_333803909806013_2917589561439340021_n-300x384.jpg 300w" sizes="(max-width: 491px) 100vw, 491px" /></figure>
]]></content:encoded>
					
		
		
			</item>
		<item>
		<title>ಡಿವಿಪಿನಿಂದ ಹಾಸನದ ಪೆನ್ ಡ್ರೈವ್ ಪ್ರಕರಣದ ಖಂಡನೆ: ಸಂತ್ರಸ್ತರಿಗೆ ಮಹಿಳೆಯರಿಗೆ ತುರ್ತು ರಕ್ಷಣೆಗೆ ಆಗ್ರಹ</title>
		<link>https://peepalmedia.com/dvp-condumned-hasana-pendrive-scandle/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 30 Apr 2024 10:11:04 +0000</pubDate>
				<category><![CDATA[ಅಪರಾಧ]]></category>
		<category><![CDATA[DVP]]></category>
		<category><![CDATA[Hasana]]></category>
		<category><![CDATA[JDS]]></category>
		<category><![CDATA[pendrive]]></category>
		<category><![CDATA[Prajwal Revanna]]></category>
		<category><![CDATA[revanna]]></category>
		<category><![CDATA[sex scandle]]></category>
		<guid isPermaLink="false">https://peepalmedia.com/?p=38973</guid>

					<description><![CDATA[ವಿಜಯಪುರ, ಏ.30 : ಹಾಸನದಲ್ಲಿ ಖ್ಯಾತ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯರು ಹಾಗೂ ಸಂಸದರಾದ ಪ್ರಜ್ವಲ್ ರೆವಣ್ಣ ಸಾವಿರಾರು ಹೆಣ್ಣು ಮಕ್ಕಳನ್ನು ಒತ್ತಾಯಪೂರ್ವಕ ಕಾಮಕಾಂಡದಲ್ಲಿ ಬಳಸಿಕೊಂಡಿರುವ ವಿಡಿಯೋಗಳಿರುವ ಪೆನ್ ಡ್ರೈವ್ ಗಳು ಹಾಸನದ ಹಾದಿ ಬೀದಿಗಳಲ್ಲಿ ಚೆಲ್ಲಲಾಗಿದೆ ಈ ಆಘಾತಕಾರಿ ಸಂಗತಿಯನ್ನು ಇಡೀ ರಾಜ್ಯವೇ ಖಂಡಿಸುತ್ತಿದೆ. ಈ ಘಟನೆಯ ಕುರಿತು ರಾಜ್ಯ ಸರ್ಕಾರವು ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು, ಈ ಭೀಕರ ಘಟನೆಯಲ್ಲಿ ತೊಡಗಿದ ವ್ಯಕ್ತಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಈ ಕೂಡಲೇ ಬಂಧಿಸಿ ಕಾನೂನು ಕ್ರಮ [&#8230;]]]></description>
										<content:encoded><![CDATA[
<p><strong>ವಿಜಯಪುರ, ಏ.30</strong> : ಹಾಸನದಲ್ಲಿ ಖ್ಯಾತ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯರು ಹಾಗೂ ಸಂಸದರಾದ ಪ್ರಜ್ವಲ್ ರೆವಣ್ಣ ಸಾವಿರಾರು ಹೆಣ್ಣು ಮಕ್ಕಳನ್ನು ಒತ್ತಾಯಪೂರ್ವಕ ಕಾಮಕಾಂಡದಲ್ಲಿ ಬಳಸಿಕೊಂಡಿರುವ ವಿಡಿಯೋಗಳಿರುವ ಪೆನ್ ಡ್ರೈವ್ ಗಳು ಹಾಸನದ ಹಾದಿ ಬೀದಿಗಳಲ್ಲಿ ಚೆಲ್ಲಲಾಗಿದೆ ಈ ಆಘಾತಕಾರಿ ಸಂಗತಿಯನ್ನು ಇಡೀ ರಾಜ್ಯವೇ ಖಂಡಿಸುತ್ತಿದೆ. ಈ ಘಟನೆಯ ಕುರಿತು ರಾಜ್ಯ ಸರ್ಕಾರವು ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು, ಈ ಭೀಕರ ಘಟನೆಯಲ್ಲಿ ತೊಡಗಿದ ವ್ಯಕ್ತಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಈ ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್ ಅಜಮನಿ ಹಾಗೂ (DVP) ಜಿಲ್ಲಾ ಸಮಿತಿಯು ಆಗ್ರಹಿಸಿದೆ.</p>



<p>ಇಂದು ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿ, ಈ ವೇಳೆ ಮಾತನಾಡಿದ ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್, ಅಮಾನುಷ ಲೈಂಗಿಕ ದೌರ್ಜನ್ಯಕ್ಕೆ ಬಲಿಯಾದ ಸಂತ್ರಸ್ತ ನೂರಾರು ಹೆಣ್ಣುಮಕ್ಕಳಿಗೆ ರಕ್ಷಣೆ ಹಾಗೂ ಆರೈಕೆ ಮಾಡುವುದು ಜರೂರಾಗಿದೆ ಎಂದರು. ಕೆಲವು ಹೆಣ್ಣು ಮಕ್ಕಳು ಆತ್ಮಹತ್ಯೆಯಂತಹ ಘೋರ ಮಾರ್ಗ ಹಿಡಿದಿರುವ ವರದಿಗಳು ಬಂದಿವೆ. ಸರ್ಕಾರವು ಕೂಡಲೇ ಈ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಹಾಗೂ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಹಾಗೂ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ಪರಿಷತ್ ಸರ್ಕಾರಕ್ಕೆ ಆಗ್ರಹಿಸುತ್ತದೆ ಎಂದು ಹೇಳಿದರು.</p>



<p>ಇದೇ ವೇಳೆ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ನ ರಾಜ್ಯ ಸಂಚಾಲಕರಾದ ಬಾಲಾಜಿ ಎಂ ಕಾಂಬಳೆ, ನಾಡಿನ ವಿಧ್ಯಾರ್ಥಿ ಯುವಜನರು ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಶಿಕ್ಷಣ, ಉದ್ಯೋಗವನ್ನು ಕಲ್ಪಿಸಿಕೊಡುವ ಮತ್ತು ಮಹಿಳೆಯರಿಗೆ ರಕ್ಷಣೆ ಜೊತೆಗೆ ಗೌರವದಿಂದ ಕಾಣುವ ಅಭ್ಯರ್ಥಿಗಳಿಗೆ ತಮ್ಮ ಅಮೂಲ್ಯವಾದ ಮತ ಚಲಾಯಿಸುವ ಮೂಲಕ ಸಭ್ಯ ಅಭ್ಯರ್ಥಿಗಳಿಗೆ ತಮ್ಮ ಜನಪ್ರತಿನಿಧಿಯಾಗಿ ಆಯ್ಕೆ ಮಾಡಿಕೊಳ್ಳಬೇಕೆಂದು ವಿಧ್ಯಾರ್ಥಿ ಯುವಜನರಲ್ಲಿ ಮನವಿ ಮಾಡಿದರು.</p>



<p>ಈ ವೇಳೆ ಹಲವು ಪರಿಷತ್ ಮುಖಂಡರು, ದಲಿತ ಸಂಘಟನೆ ಮುಖಂಡರು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಪ್ರಜ್ವಲ್‌ ವಿಡಿಯೋ ಕೊಟ್ಟಿದ್ದು ನಾನೇ: ಮಾಜಿ ಚಾಲಕ ಕಾರ್ತಿಕ್</title>
		<link>https://peepalmedia.com/prajwal-revannas-former-driver-gave-his-videos/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 30 Apr 2024 06:44:31 +0000</pubDate>
				<category><![CDATA[ಅಪರಾಧ]]></category>
		<category><![CDATA[bhavani revanna]]></category>
		<category><![CDATA[Hasana]]></category>
		<category><![CDATA[JDS]]></category>
		<category><![CDATA[pendrive]]></category>
		<category><![CDATA[prajwal]]></category>
		<category><![CDATA[Prajwal Revanna]]></category>
		<category><![CDATA[revanna]]></category>
		<category><![CDATA[sex scandle]]></category>
		<category><![CDATA[Sexual abuse]]></category>
		<guid isPermaLink="false">https://peepalmedia.com/?p=38951</guid>

					<description><![CDATA[ಹಾಸನ: ಪ್ರಜ್ವಲ್​​‌ ಅಶ್ಲೀಲ ವಿಡಿಯೋ ನಾನೇ ಕೊಟ್ಟಿದ್ದು ನಾನೇ ಎಂದು ಪ್ರಜ್ವಲ್‌ ಮಾಜಿ ಚಾಲಕ ಕಾರ್ತಿಕ್‌ ಬಹಿರಂಗ ಪಡಿಸಿದ್ದಾರೆ. &#8220;ನಾನು ಅವರ ಬಳಿಕ ಕೆಲಸ ಮಾಡುತ್ತಿದ್ದೆ, ಅವರಿಂದ ನನಗೆ ಅನ್ಯಾಯವಾದ ಸಲುವಾಗಿ ನಾನು ಅಲ್ಲಿ ಕೆಲಸ ಬಿಟ್ಟೆ ಅಂತ ಹೇಳಿದೆ. ಇನ್ನೂ ನನ್ನ ವಿರುದ್ದ ನ್ಯಾಯಾಲಯದಿಂದ ಮಾನ ಹಾನಿ ಪ್ರಕರಣವನ್ನು ಪ್ರಕಟ ಮಾಡದಂತೆ ಪ್ರಜ್ವಲ್‌ ಆದೇಶವನ್ನು ತಂದರು,&#8221; ಎಂದು ಕಾರ್ತಿಕ್‌ ವಿಡಿಯೋದಲ್ಲಿ ಹೇಳಿದ್ದಾರೆ. &#8220;ಇನ್ನೂ ನನ್ನ ಬಳಿ ಇರುವ ವಿಡಿಯೋ, ಪೋಟೋಗಳನ್ನು ಕೊಡುವಂತೆ ದೇವರಾಜೇಗೌಡರು ಕೇಳಿದರು. ಇದಲ್ಲದೇ [&#8230;]]]></description>
										<content:encoded><![CDATA[
<p><strong>ಹಾಸನ: </strong>ಪ್ರಜ್ವಲ್​​‌ ಅಶ್ಲೀಲ ವಿಡಿಯೋ ನಾನೇ ಕೊಟ್ಟಿದ್ದು ನಾನೇ ಎಂದು ಪ್ರಜ್ವಲ್‌ ಮಾಜಿ ಚಾಲಕ ಕಾರ್ತಿಕ್‌ ಬಹಿರಂಗ ಪಡಿಸಿದ್ದಾರೆ. </p>



<p>&#8220;ನಾನು ಅವರ ಬಳಿಕ ಕೆಲಸ ಮಾಡುತ್ತಿದ್ದೆ, ಅವರಿಂದ ನನಗೆ ಅನ್ಯಾಯವಾದ ಸಲುವಾಗಿ ನಾನು ಅಲ್ಲಿ ಕೆಲಸ ಬಿಟ್ಟೆ ಅಂತ ಹೇಳಿದೆ. ಇನ್ನೂ ನನ್ನ ವಿರುದ್ದ ನ್ಯಾಯಾಲಯದಿಂದ ಮಾನ ಹಾನಿ ಪ್ರಕರಣವನ್ನು ಪ್ರಕಟ ಮಾಡದಂತೆ ಪ್ರಜ್ವಲ್‌ ಆದೇಶವನ್ನು ತಂದರು,&#8221; ಎಂದು ಕಾರ್ತಿಕ್‌ ವಿಡಿಯೋದಲ್ಲಿ ಹೇಳಿದ್ದಾರೆ.</p>



<p>&#8220;ಇನ್ನೂ ನನ್ನ ಬಳಿ ಇರುವ ವಿಡಿಯೋ, ಪೋಟೋಗಳನ್ನು ಕೊಡುವಂತೆ ದೇವರಾಜೇಗೌಡರು ಕೇಳಿದರು. ಇದಲ್ಲದೇ ಇದು ನಾನು ಕೋರ್ಟ್‌ಗೆ ನೀಡುವುದಾಗಿ ಹೇಳಿದರು. ಕೆಲ ದಿನಗಳ ನಂತರ ಈ ಬಗ್ಗೆ ಕೇಳಿದಾಗ ʼಮುಂದೆ ಈ ಬಗ್ಗೆ ನಿರ್ಧಾರ ಮಾಡುವುದಾಗಿ ಹೇಳಿದರುʼ ಅಂತ ಹೇಳಿದರು. ಇನ್ನೂ ನಾನು ದೇವರಾಜೇಗೌಡರಿಗೆ ಬಿಟ್ಟರೆ ಬೇರೆ ಯಾರಿಗೂ ಕೂಡ ವಿಡಿಯೋವನ್ನು ನೀಡಿಲ್ಲ. ಇದು ಹೇಗೆ ಬೇರೆಯವರಿಗೆ ಹೋಗಿದೆ ಎಂಬುದು ತಿಳಿದಿಲ್ಲ. ನಾನು ಈಕೂಡಲೇ ಎಸ್‌ಐಟಿ ತನಿಖೆ ಮುಂದೆ ಹಾಜರಾಗಿ ನನಗೆ ತಿಳಿದಿರುವ ಬಗ್ಗೆ ಮಾಹಿತಿಯನ್ನು ನೀಡುವತ್ತೇನೆ,&#8221; ಎಂದು ಹೇಳಿದ್ದಾರೆ. </p>



<p> ಪ್ರಜ್ವಲ್‌ ವಿಡಿಯೋ ಬಹಿರಂಗದ ಹಿಂದೆ ಕಾಂಗ್ರೇಸ್‌ ಪಕ್ಷದ ಕೈವಾಡವಿಲ್ಲ ಎಂದು ಕಾರ್ತಿಕ್‌ ಸ್ಪಷ್ಟಪಡಿಸಿದ್ದಾರೆ. </p>



<p>ಪ್ರಜ್ವಲ್ ರೇವಣ್ಣ ಹಾಗೂ ಭವಾನಿ ರೇವಣ್ಣ ಇಬ್ಬರೂ ಹೊಳೆನರಸೀಪುರ ಠಾಣೆ ಪೊಲೀಸರ ಮೂಲಕ ಬಲವಂತವಾಗಿ ಕರೆದೊಯ್ದು, ಚಿತ್ರಹಿಂಸೆ ನೀಡಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಕಾರ್ತಿಕ್‌ ಆರೋಪ ಮಾಡಿದ್ದರು. ಹೊಳೆನರಸೀಪುರ ತಾಲ್ಲೂಕಿನಲ್ಲಿ ಇರುವ 13 ಎಕರೆ ಭೂಮಿಗಾಗಿ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. </p>



<p>ಹತ್ತು ವರ್ಷಗಳಿಗೂ ಹೆಚ್ಚು ಕಾಲ ಪ್ರಜ್ವಲ್ ರೇವಣ್ಣನ ಕಾರು ಚಾಲಕನಾಗಿದ್ದ ಕಾರ್ತಿಕ್, ಇದೀಗ ಪ್ರಜ್ವಲ್ ರೇವಣ್ಣ, ರೇವಣ್ಣ ಪತ್ನಿ ಭವಾನಿ ವಿರುದ್ಧ ದೂರು ನೀಡಿದ್ದಾರೆ. 2023ರ ಮಾರ್ಚ್ 12ರಂದು ತನ್ನನ್ನು ಕಿಡ್ನಾಪ್ ಮಾಡಿದ್ದರು ಎಂದು ಆರೋಪ ಮಾಡಿದ್ದಾರೆ.</p>



<p>ಕಾರ್ತಿಕ್ ಮತ್ತು ಅವರ ಪತ್ನಿ ಶಿಲ್ಪ ಅವರ ಮೇಲೆ 2023ರ ಮಾರ್ಚ್‌ನಲ್ಲಿ ಭವಾನಿ ರೇವಣ್ಣ ಹಲ್ಲೆ ನಡೆಸಿದ್ದು, ಇದರಿಂದಾಗಿ ಶಿಲ್ಪ ಅವರಿಗೆ ಗರ್ಭಪಾತವಾಗಿದೆ ಎಂದು ಆರೋಪಿಸಿ ಹಾಸನದಲ್ಲಿ ಮಾಜಿ ಶಾಸಕ ಎಟಿ ರಾಮಸ್ವಾಮಿ ಮತ್ತು ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಕಾರ್ತಿಕ್‌ ಅವರು ಭವಾನಿ ರೇವಣ್ಣ ವಿರುದ್ಧ ಕೇಸು ನೀಡಿದ್ದರೂ ಪೊಲೀಸರು ಪ್ರಕರಣ ದಾಖಲಿಸಿರಲಿಲ್ಲ.</p>
]]></content:encoded>
					
		
		
			</item>
	</channel>
</rss>
