<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>police case &#8211; Peepal Media</title>
	<atom:link href="https://peepalmedia.com/tag/police-case/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 22 Mar 2025 09:59:39 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>police case &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಗಾಂಧೀಜಿ, ಪೊಲೀಸ್ ಅಧಿಕಾರಿ ವಿರುದ್ಧ ನಿಂದನಾತ್ಮಕ ಹೇಳಿಕೆ: ಯತಿ ನರಸಿಂಹಾನಂದನ ಮೇಲೆ ಕೇಸ್ ದಾಖಲು</title>
		<link>https://peepalmedia.com/case-registered-against-yati-narasimhanand-for-making-derogatory-remarks-against-gandhiji-police-officer/</link>
		
		<dc:creator><![CDATA[ಮಂಜುಳ ಹುಲಿಕುಂಟೆ]]></dc:creator>
		<pubDate>Sat, 22 Mar 2025 09:59:38 +0000</pubDate>
				<category><![CDATA[ಕೋಮುವಾದ]]></category>
		<category><![CDATA[ದೇಶ]]></category>
		<category><![CDATA[gandhi]]></category>
		<category><![CDATA[gaziyabadh]]></category>
		<category><![CDATA[hate speech]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[police]]></category>
		<category><![CDATA[police case]]></category>
		<category><![CDATA[UP]]></category>
		<category><![CDATA[uttar pradesh]]></category>
		<category><![CDATA[Yati Narasimhanand]]></category>
		<guid isPermaLink="false">https://peepalmedia.com/?p=55590</guid>

					<description><![CDATA[ಗಾಜಿಯಾಬಾದ್: ಗಾಂಧೀಜಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದ ವಿಡಿಯೋಗಳನ್ನು ಆಧರಿಸಿ ದಾಸ್ನಾ ದೇವಾಲಯದ ಅರ್ಚಕ ಯತಿ ನರಸಿಂಹಾನಂದ ಗಿರಿ ಸ್ವಾಮೀಜಿಯ ವಿರುದ್ಧ ಮಾರ್ಚ್ 22, ಶನಿವಾರ ಅಧಿಕೃತವಾಗಿ ಪ್ರಕರಣ ದಾಖಲಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.&#160; ನರಸಿಂಹಾನಂದ ಗಿರಿ ಸ್ವಾಮೀಜಿ ವಿರುದ್ಧ ಉಪ ಪೊಲೀಸ್ ಆಯುಕ್ತ ಸುರೇಂದ್ರ ನಾಥ್ ತಿವಾರಿ ಅವರು ವೇವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ವಾಮೀಜಿ ಹೇಳಿಕೆಗಳು ಕೋಮು ಸಾಮರಸ್ಯ ಕೆರಳಿಸುವ ಉದ್ದೇಶವನ್ನು ಹೊಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅರ್ಚಕ [&#8230;]]]></description>
										<content:encoded><![CDATA[
<p><strong>ಗಾಜಿಯಾಬಾದ್: </strong>ಗಾಂಧೀಜಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದ ವಿಡಿಯೋಗಳನ್ನು ಆಧರಿಸಿ ದಾಸ್ನಾ ದೇವಾಲಯದ ಅರ್ಚಕ ಯತಿ ನರಸಿಂಹಾನಂದ ಗಿರಿ ಸ್ವಾಮೀಜಿಯ ವಿರುದ್ಧ ಮಾರ್ಚ್ 22, ಶನಿವಾರ ಅಧಿಕೃತವಾಗಿ ಪ್ರಕರಣ ದಾಖಲಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.&nbsp;</p>



<p>ನರಸಿಂಹಾನಂದ ಗಿರಿ ಸ್ವಾಮೀಜಿ ವಿರುದ್ಧ ಉಪ ಪೊಲೀಸ್ ಆಯುಕ್ತ ಸುರೇಂದ್ರ ನಾಥ್ ತಿವಾರಿ ಅವರು ವೇವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ವಾಮೀಜಿ ಹೇಳಿಕೆಗಳು ಕೋಮು ಸಾಮರಸ್ಯ ಕೆರಳಿಸುವ ಉದ್ದೇಶವನ್ನು ಹೊಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>



<p>ಅರ್ಚಕ ಯತಿ ನರಸಿಂಹಾನಂದ ಮಹಾತ್ಮ ಗಾಂಧಿಯವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ಮತ್ತು ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ಮೂಲಕ ಕ್ರಿಮಿನಲ್ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ಆಯುಕ್ತ ಸುರೇಂದ್ರನಾಥ್ ತಿವಾರಿ ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.&nbsp;</p>



<p>ಸ್ವಾಮೀಜಿ ಅವರು ಮಾತನಾಡಿರುವ ವಿಡಿಯೊದಲ್ಲಿ ಗಾಜಿಯಾಬಾದ್ ಪೊಲೀಸ್ ಆಯುಕ್ತ ಮತ್ತು ಲೋನಿಯ ಸಹಾಯಕ ಪೊಲೀಸ್ ಆಯುಕ್ತರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದೂ ಸುರೇಂದ್ರ ಆರೋಪಿಸಿದ್ದಾರೆ.</p>



<p>ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>



<p></p>
]]></content:encoded>
					
		
		
			</item>
		<item>
		<title>ಸ್ವಯಂಕೃಷಿ ವೀರೇಂದ್ರ ಬಾಬು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು, ಬಂಧನ</title>
		<link>https://peepalmedia.com/case-against-swaymkrishi-v-babu/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 12 Aug 2023 09:00:21 +0000</pubDate>
				<category><![CDATA[ರಾಜ್ಯ]]></category>
		<category><![CDATA[ಸಿನಿಮಾ]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[police case]]></category>
		<guid isPermaLink="false">https://peepalmedia.com/?p=25388</guid>

					<description><![CDATA[ಬೆಂಗಳೂರು: ಕನ್ನಡ ನಟನೊಬ್ಬನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. 2011ರಲ್ಲಿ ಸ್ವಯಂ ಕೃಷಿ ಚಿತ್ರದ ಮೂಲಕ ನಟ ಮತ್ತು ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ವೀರೇಂದ್ರ ಬಾಬು ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ. ಅತ್ಯಾಚಾರ ಆರೋಪದ ಮೇಲೆ ನಟ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಜ್ಞಾಹೀನ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕನ್ನಡ ನಟ ವೀರೇಂದ್ರ ಬಾಬು ವಿರುದ್ಧ ಪ್ರಕರಣ ದಾಖಲಾಗಿದ್ದು, ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಮೂಡಿಸಿದೆ. ಅತ್ಯಾಚಾರದ ವಿಡಿಯೋ ಮಾಡುತ್ತಿದ್ದು, [&#8230;]]]></description>
										<content:encoded><![CDATA[
<p>ಬೆಂಗಳೂರು: ಕನ್ನಡ ನಟನೊಬ್ಬನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. 2011ರಲ್ಲಿ ಸ್ವಯಂ ಕೃಷಿ ಚಿತ್ರದ ಮೂಲಕ ನಟ ಮತ್ತು ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ವೀರೇಂದ್ರ ಬಾಬು ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ.</p>



<p>ಅತ್ಯಾಚಾರ ಆರೋಪದ ಮೇಲೆ ನಟ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಜ್ಞಾಹೀನ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕನ್ನಡ ನಟ ವೀರೇಂದ್ರ ಬಾಬು ವಿರುದ್ಧ ಪ್ರಕರಣ ದಾಖಲಾಗಿದ್ದು, ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಮೂಡಿಸಿದೆ.</p>



<p>ಅತ್ಯಾಚಾರದ ವಿಡಿಯೋ ಮಾಡುತ್ತಿದ್ದು, ಆಗಾಗ್ಗೆ ಬೆದರಿಕೆ ಹಾಕುತ್ತಿದ್ದ ಮತ್ತು ಆ ವಿಡಿಯೋಗಳ ಮೂಲಕ ಬ್ಲಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಇದು ಕೇವಲ ಬೆದರಿಕೆಯಲ್ಲ, ಆದರೆ ನಟ ವೀರೇಂದ್ರ ಬಾಬು ರೂ. 15 ಲಕ್ಷ ಕೊಡುವಂತೆ ನಟ ವೀರೇಂದ್ರ ಬಾಬು ಬೆದರಿಕೆ ಹಾಕಿದ್ದು, ಹಣ ನೀಡದಿದ್ದರೆ ಬೆದರಿಕೆ ಹಾಕಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.</p>



<p>2021ರಲ್ಲಿ ಈ ಘಟನೆ ನಡೆದಿದ್ದು, ಅಂದು ಮಹಿಳೆ ಚಿನ್ನಾಭರಣ ಮಾರಾಟ ಮಾಡಿ ನಟ ವೀರೇಂದ್ರ ಬಾಬುಗೆ ಹಣ ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಕಳೆದ ಜುಲೈ 30 ರಿಂದ ನಟ ವೀರೇಂದ್ರ ಬಾಬು ಮಹಿಳೆಗೆ ಮತ್ತೊಮ್ಮೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಒಮ್ಮೆ ಕಾರಿನಲ್ಲಿದ್ದ ಮಹಿಳೆಯನ್ನು ಬೆದರಿಸಿ ಚಿನ್ನಾಭರಣ ತೆಗೆದುಕೊಂಡು ಹೋಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>



<p>ನಟ ವೀರೇಂದ್ರ ಬೆದರಿಕೆ ಹಾಕಿದ್ದಲ್ಲದೆ ಪಾಯಿಂಟ್ ಬ್ಲ್ಯಾಕ್ ಗನ್ ತೋರಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಸಂತ್ರಸ್ತೆಯು ವೀರೇಂದ್ರಬಾಬು ಮತ್ತು ಆತನ ಸ್ನೇಹಿತರ ವಿರುದ್ಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.</p>



<p>ಕೆಲ ತಿಂಗಳ ಹಿಂದೆ ವೀರೇಂದ್ರ ಬಾಬು ರೂ. 1.8 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಮುಂದಿನ ಚುನಾವಣೆ ವೇಳೆಗೆ ರಾಷ್ಟ್ರೀಯ ಜನಹಿತ ಪಕ್ಷ ಸ್ಥಾಪನೆಯಾಗಲಿದೆ ಎಂದು ಬೆಂಗಳೂರಿನ ಯಲಹಂಕ ನಿವಾಸಿ ವೀರೇಂದ್ರ ಬಾಬು ಹೇಳಿದ್ದ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಸಕ, ಸಂಸದ ಸೇರಿದಂತೆ ವಿವಿಧ ಹುದ್ದೆಗಳಿಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಹಲವರನ್ನು ಆಹ್ವಾನಿಸಲಾಗಿತ್ತು. ಎಂಎಲ್‌ಎ ಟಿಕೆಟ್ ಬಯಸುವವರು ಲಕ್ಷಗಟ್ಟಲೆ ಹಣ ಕೊಡಬೇಕಾಗುತ್ತದೆ ಎಂದು ವೀರೇಂದ್ರ ಬಾಬು ಹೇಳಿದ್ದಾರೆ ಎಂಬ ಆರೋಪಗಳಿವೆ.</p>



<p>ಆ ಹಣದಲ್ಲಿ ಆರ್ಯನ್ ಇನ್ಫೋಟೆಕ್ ಅನ್ನೋ ಕಂಪನಿ ವಿಕೇರ್ ಲರ್ನಿಂಗ್ ಆ್ಯಪ್ ಮೂಲಕ ರಾಜ್ಯದಾದ್ಯಂತ ಇರುವ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಆನ್‌ಲೈನ್ ಶಿಕ್ಷಣ ನೀಡಿ ಜನರನ್ನು ತಮ್ಮ ಪಕ್ಷದತ್ತ ಸೆಳೆಯಲಾಗುತ್ತದೆ ಎಂದು ನಂಬಿಸಲಾಗಿತ್ತು. ಇದನ್ನು ನಂಬಿದ ಬಸವರಾಜ ಘೋಷಾಲ್ ಎಂಬುವವರ ಜತೆಗೆ ಹಲವರು ವೀರೇಂದ್ರ ಬಾಬು ಅವರಿಗೆ ರೂ. 1.8 ಕೋಟಿಗೂ ಹೆಚ್ಚು ನೀಡಲಾಗಿದೆ ಎಂದು ತಿಳಿದುಬಂದಿದೆ.</p>



<p>ಹಣ ಪಡೆದ ನಟ ವೀರೇಂದ್ರ ಬಾಬು ಸೇರಿದಂತೆ ಏಳು ಜನರ ವಿರುದ್ಧ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಡ ಮಕ್ಕಳಿಗೆ ಉಚಿತ ಶಿಕ್ಷಣ ಕೊಡಿಸುವ ನೆಪದಲ್ಲಿ ಜನರಿಂದ ಕೋಟಿಗಟ್ಟಲೆ ಹಣ ವಸೂಲಿ ಮಾಡಿ ಸಹಾಯ ಧನ ನೀಡದೆ ವಂಚಿಸಿದ್ದಾರೆ ಎಂದು ದೂರುದಾರ ಬಸವರಾಜ ಘೋಷಾಲ್ ಪೊಲೀಸರಿಗೆ ದೂರು ನೀಡಿದ್ದಾರೆ. ವಂಚನೆ ಪ್ರಕರಣದ ಜತೆಗೆ ನಟ ವೀರೇಂದ್ರ ಬಾಬು ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.</p>
]]></content:encoded>
					
		
		
			</item>
	</channel>
</rss>
