<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>police &#8211; Peepal Media</title>
	<atom:link href="https://peepalmedia.com/tag/police/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 22 Mar 2025 09:59:39 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>police &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಗಾಂಧೀಜಿ, ಪೊಲೀಸ್ ಅಧಿಕಾರಿ ವಿರುದ್ಧ ನಿಂದನಾತ್ಮಕ ಹೇಳಿಕೆ: ಯತಿ ನರಸಿಂಹಾನಂದನ ಮೇಲೆ ಕೇಸ್ ದಾಖಲು</title>
		<link>https://peepalmedia.com/case-registered-against-yati-narasimhanand-for-making-derogatory-remarks-against-gandhiji-police-officer/</link>
		
		<dc:creator><![CDATA[ಮಂಜುಳ ಹುಲಿಕುಂಟೆ]]></dc:creator>
		<pubDate>Sat, 22 Mar 2025 09:59:38 +0000</pubDate>
				<category><![CDATA[ಕೋಮುವಾದ]]></category>
		<category><![CDATA[ದೇಶ]]></category>
		<category><![CDATA[gandhi]]></category>
		<category><![CDATA[gaziyabadh]]></category>
		<category><![CDATA[hate speech]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[police]]></category>
		<category><![CDATA[police case]]></category>
		<category><![CDATA[UP]]></category>
		<category><![CDATA[uttar pradesh]]></category>
		<category><![CDATA[Yati Narasimhanand]]></category>
		<guid isPermaLink="false">https://peepalmedia.com/?p=55590</guid>

					<description><![CDATA[ಗಾಜಿಯಾಬಾದ್: ಗಾಂಧೀಜಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದ ವಿಡಿಯೋಗಳನ್ನು ಆಧರಿಸಿ ದಾಸ್ನಾ ದೇವಾಲಯದ ಅರ್ಚಕ ಯತಿ ನರಸಿಂಹಾನಂದ ಗಿರಿ ಸ್ವಾಮೀಜಿಯ ವಿರುದ್ಧ ಮಾರ್ಚ್ 22, ಶನಿವಾರ ಅಧಿಕೃತವಾಗಿ ಪ್ರಕರಣ ದಾಖಲಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.&#160; ನರಸಿಂಹಾನಂದ ಗಿರಿ ಸ್ವಾಮೀಜಿ ವಿರುದ್ಧ ಉಪ ಪೊಲೀಸ್ ಆಯುಕ್ತ ಸುರೇಂದ್ರ ನಾಥ್ ತಿವಾರಿ ಅವರು ವೇವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ವಾಮೀಜಿ ಹೇಳಿಕೆಗಳು ಕೋಮು ಸಾಮರಸ್ಯ ಕೆರಳಿಸುವ ಉದ್ದೇಶವನ್ನು ಹೊಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅರ್ಚಕ [&#8230;]]]></description>
										<content:encoded><![CDATA[
<p><strong>ಗಾಜಿಯಾಬಾದ್: </strong>ಗಾಂಧೀಜಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದ ವಿಡಿಯೋಗಳನ್ನು ಆಧರಿಸಿ ದಾಸ್ನಾ ದೇವಾಲಯದ ಅರ್ಚಕ ಯತಿ ನರಸಿಂಹಾನಂದ ಗಿರಿ ಸ್ವಾಮೀಜಿಯ ವಿರುದ್ಧ ಮಾರ್ಚ್ 22, ಶನಿವಾರ ಅಧಿಕೃತವಾಗಿ ಪ್ರಕರಣ ದಾಖಲಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.&nbsp;</p>



<p>ನರಸಿಂಹಾನಂದ ಗಿರಿ ಸ್ವಾಮೀಜಿ ವಿರುದ್ಧ ಉಪ ಪೊಲೀಸ್ ಆಯುಕ್ತ ಸುರೇಂದ್ರ ನಾಥ್ ತಿವಾರಿ ಅವರು ವೇವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ವಾಮೀಜಿ ಹೇಳಿಕೆಗಳು ಕೋಮು ಸಾಮರಸ್ಯ ಕೆರಳಿಸುವ ಉದ್ದೇಶವನ್ನು ಹೊಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>



<p>ಅರ್ಚಕ ಯತಿ ನರಸಿಂಹಾನಂದ ಮಹಾತ್ಮ ಗಾಂಧಿಯವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ಮತ್ತು ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ಮೂಲಕ ಕ್ರಿಮಿನಲ್ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ಆಯುಕ್ತ ಸುರೇಂದ್ರನಾಥ್ ತಿವಾರಿ ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.&nbsp;</p>



<p>ಸ್ವಾಮೀಜಿ ಅವರು ಮಾತನಾಡಿರುವ ವಿಡಿಯೊದಲ್ಲಿ ಗಾಜಿಯಾಬಾದ್ ಪೊಲೀಸ್ ಆಯುಕ್ತ ಮತ್ತು ಲೋನಿಯ ಸಹಾಯಕ ಪೊಲೀಸ್ ಆಯುಕ್ತರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದೂ ಸುರೇಂದ್ರ ಆರೋಪಿಸಿದ್ದಾರೆ.</p>



<p>ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>



<p></p>
]]></content:encoded>
					
		
		
			</item>
		<item>
		<title>ಸಮೀರ್ ಗೆ ಬಿಗ್ ರಿಲೀಫ್, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರಿಗೆ ಹೈಕೋರ್ಟ್ ತರಾಟೆ</title>
		<link>https://peepalmedia.com/big-relief-for-sameer-high-court-slams-police-for-filing-suo-motu-complaint/</link>
		
		<dc:creator><![CDATA[Peepal Media]]></dc:creator>
		<pubDate>Thu, 06 Mar 2025 13:01:57 +0000</pubDate>
				<category><![CDATA[ರಾಜ್ಯ]]></category>
		<category><![CDATA[ballary]]></category>
		<category><![CDATA[karnatakahighcourt]]></category>
		<category><![CDATA[police]]></category>
		<category><![CDATA[smeer]]></category>
		<category><![CDATA[sowjanya]]></category>
		<category><![CDATA[sowjanya case]]></category>
		<guid isPermaLink="false">https://peepalmedia.com/?p=54874</guid>

					<description><![CDATA[ಬಳ್ಳಾರಿ : ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಬಿಗ್ ರಿಲೀಫ್ ಸಿಕ್ಕಿದೆ. ಅವರನ್ನು ಅರೆಸ್ಟ್ ಮಾಡುವಂತಿಲ್ಲ ಹಾಗೂ ಪೊಲೀಸ್‌ ಠಾಣೆಗೂ ಕರೆಯುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಜೊತೆಗೆ ಕಾನೂನು ಉಲ್ಲಂಘಸಿ ಪೂಲೀಸರು ನೋಟಿಸ್ ಕೊಟ್ಟಿದ್ದಾರೆ ಎಂದು ಪೊಲೀಸರಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಈ ಬಗ್ಗೆ ಮಾಜಿ ಪಿಎಸ್ಐ ಗಿರೀಶ್ ಮಟ್ಟಣ್ಣನವರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.  ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ [&#8230;]]]></description>
										<content:encoded><![CDATA[
<p><strong>ಬಳ್ಳಾರಿ :</strong> ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಬಿಗ್ ರಿಲೀಫ್ ಸಿಕ್ಕಿದೆ. ಅವರನ್ನು ಅರೆಸ್ಟ್ ಮಾಡುವಂತಿಲ್ಲ ಹಾಗೂ ಪೊಲೀಸ್‌ ಠಾಣೆಗೂ ಕರೆಯುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಜೊತೆಗೆ ಕಾನೂನು ಉಲ್ಲಂಘಸಿ ಪೂಲೀಸರು ನೋಟಿಸ್ ಕೊಟ್ಟಿದ್ದಾರೆ ಎಂದು ಪೊಲೀಸರಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. </p>



<p>ಈ ಬಗ್ಗೆ ಮಾಜಿ ಪಿಎಸ್ಐ ಗಿರೀಶ್ ಮಟ್ಟಣ್ಣನವರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. </p>



<p>ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಎಂ.ಡಿ. ವಿಡಿಯೋ ಮಾಡಿದ್ದರು, ಇದು ಸಾಮಾಜಿಕ ಜಾಣತಾಣಗಳಲ್ಲಿ ಸಕತ್ ವೈರಲ್ ಆಗುವ ಮೂಲಕ ಸೌಜನ್ಯ ಪ್ರಕರಣವನ್ನು ಮತ್ತೆ ಮುನ್ನೆಲೆಗೆ ಬರುವಂತೆ ಮಾಡಿತ್ತು. </p>



<p>ಈ ಬಗ್ಗೆ ಪರ ವಿರೋಧ ಚರ್ಚೆಗಳು ಹೆಚ್ಚಾಗಿ ಸಮೀರ್ ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. </p>



<p>ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲೆ ಧಾರ್ಮಿಕ ಭಾವನೆ ಹೊಂದಿರುವ ಸಾರ್ವಜನಿಕರ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿ ವೀಡಿಯೋ ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು.</p>



<p>ಬುಧವಾರ ರಾತ್ರಿ ಸಮೀರ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ -299 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.</p>



<p>ತಡರಾತ್ರಿ 10.45 ಗಂಟೆಗೆ ಸಮೀರ್ ಎಂಡಿ ಅವರಿಗೆ ನೋಟಿಸ್ ನೀಡಿದ್ದರು. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದ ಸಮೀರ್ ನನಗೆ ಪೊಲೀಸ್ ನೋಟಿಸ್ ಬಂದಿದೆ ಆದರೆ ಇದರ ಬಗ್ಗೆ ನನಗೆ ಯಾವುದೇ ಭಯ ಇಲ್ಲ. ಯಾಕೆಂದರೆ ನಾನು ಮಾಡಿದಂತಹ ಸೌಜನ್ಯ ಪ್ರಕರಣದ ವೀಡಿಯೋ ಸಂಬಂಧ ಎಲ್ಲ ಆಧಾರಗಳನ್ನು ಇಟ್ಟುಕೊಂಡು ಮಾತನಾಡಿದ್ದೇನೆ. </p>



<p>ಈ ವೀಡಿಯೋಗೆ ಒಂದು ಮಿಲಿಯನ್ ವ್ಯೂವ್ಸ್‌ ಬರುತ್ತಿದ್ದಂತಯೇ ಸಾಮಾಜಿಕ ಮಾಧ್ಯಮದಲ್ಲಿ ನನ್ನ ವೈಯಕ್ತಿಕ ಮಾಹಿತಿ ಮತ್ತು ನನ್ನ ವಿಳಾಸ ಲೀಕ್‌ ಆಯಿತು. ನಂತರ ನನಗೆ ಹಲವಾರು ಜೀವ ಬೆದರಿಕೆ ಕರೆಗಳ ಬರಲು ಪ್ರಾರಂಭವಾದವು. ಪೊಲೀಸರ ಬಳಿ ಹೋದರೆ ರಕ್ಷಣೆ ಸಿಗುತ್ತೆ ಎಂಬ ನಂಬಿಕೆಯೂ ನನಗಿರಲಿಲ್ಲ. ಬಳಿಕ ನಾನು ಕೂಡಲೇ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ತಂಡದ ಸದಸ್ಯರನ್ನು ಸಂಪರ್ಕಿಸಿದೆ. ಅವರು ನನಗೆ ದೈರ್ಯ ನೀಡಿ ವಕೀಲರ ಸಹಾಯವನ್ನು ನೀಡಿದ್ದಾರೆ ಎಂದು ಸಮೀರ್ ವೀಡಿಯೊದಲ್ಲಿ ತಿಳಿಸಿದ್ದರು. </p>



<p>ಇದೀಗ ಕರ್ನಾಟಕ ಹೈಕೋರ್ಟ್ ಈ ಪ್ರಕರಣದಲ್ಲಿ ಸಮೀರ್ ಅವರಿಗೆ ರಿಲೀಫ್ ನೀಡಿದ್ದು, ಅವರನ್ನು ಅರೆಸ್ಟ್ ಮಾಡುವಂತಿಲ್ಲ ಎಂದು ಪೊಲೀಸರಿಗೆ ತಾಕೀತು ಮಾಡಿದೆ. ಜೊತೆಗೆ ಕಾನೂನು ಉಲ್ಲಂಘಿಸಿ ನೋಟಿಸ್ ಕೊಟ್ಟಿರುವುದಾಗಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ.&nbsp;</p>
]]></content:encoded>
					
		
		
			</item>
		<item>
		<title>ದರೋಡೆಕೋರರ ಬಂಧನ: 1.9 ಕೋಟಿ ಮೌಲ್ಯದ ಚಿನ್ನಾಭರಣ ವಶ</title>
		<link>https://peepalmedia.com/robbers-got-arrested-in-bengaluru/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 01 Oct 2024 11:13:00 +0000</pubDate>
				<category><![CDATA[ಅಪರಾಧ]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[crime]]></category>
		<category><![CDATA[karnataka]]></category>
		<category><![CDATA[police]]></category>
		<category><![CDATA[robbery]]></category>
		<category><![CDATA[thieves]]></category>
		<guid isPermaLink="false">https://peepalmedia.com/?p=46480</guid>

					<description><![CDATA[ಬೆಂಗಳೂರು: ಹಗಲಿನ ಹೊತ್ತು ಬೀಗ ಹಾಕಿರುವ ಮನೆಗಳನ್ನು ಗುರುತಿಸಿ, ರಾತ್ರಿ ದರೋಡೆ ಮಾಡುತ್ತಿದ್ದ ಮೂವರು ಕುಖ್ಯಾತ ಕಳ್ಳರನ್ನು ಉತ್ತರ ವಿಭಾಗದ ಪೊಲೀಸರು ಬೇಟೆಯಾಡಿ ಬಂಧಿಸಿದ್ದಾರೆ. 1.9 ಕೋಟಿ ಮೌಲ್ಯದ ವಜ್ರ, ಚಿನ್ನ,ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿದ್ದಾರೆ.  ಸನ್ಯಾಸಿ ಮತ ನಂದೀಶ್(25), ನಂದೀಶ್(25) ಹಾಗೂ ಪ್ರತಾಪ್ ಕುಮಾರ್ (25) ಬಂಧಿತ ಕನ್ನಗಳ್ಳರಾಗಿದ್ದು,ಮೂವರಿಂದ 1 ಕೋಟಿ 9 ಲಕ್ಷ 20 ಸಾವಿರ ಮೌಲ್ಯದ 1 ಕೆಜಿ 802 ಗ್ರಾಂ ಚಿನ್ನಾಭರಣಗಳು, ವಜ್ರದ ಆಭರಣಗಳು, 110 ಗ್ರಾಂ ತೂಕದ ಬೆಳ್ಳಿ ಚೈನುಗಳು, [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ಹಗಲಿನ ಹೊತ್ತು ಬೀಗ ಹಾಕಿರುವ ಮನೆಗಳನ್ನು ಗುರುತಿಸಿ, ರಾತ್ರಿ ದರೋಡೆ ಮಾಡುತ್ತಿದ್ದ ಮೂವರು ಕುಖ್ಯಾತ ಕಳ್ಳರನ್ನು ಉತ್ತರ ವಿಭಾಗದ ಪೊಲೀಸರು ಬೇಟೆಯಾಡಿ ಬಂಧಿಸಿದ್ದಾರೆ. 1.9 ಕೋಟಿ ಮೌಲ್ಯದ ವಜ್ರ, ಚಿನ್ನ,ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿದ್ದಾರೆ. </p>



<p>ಸನ್ಯಾಸಿ ಮತ ನಂದೀಶ್(25), ನಂದೀಶ್(25) ಹಾಗೂ ಪ್ರತಾಪ್ ಕುಮಾರ್ (25) ಬಂಧಿತ ಕನ್ನಗಳ್ಳರಾಗಿದ್ದು,ಮೂವರಿಂದ 1 ಕೋಟಿ 9 ಲಕ್ಷ 20 ಸಾವಿರ ಮೌಲ್ಯದ 1 ಕೆಜಿ 802 ಗ್ರಾಂ ಚಿನ್ನಾಭರಣಗಳು, ವಜ್ರದ ಆಭರಣಗಳು, 110 ಗ್ರಾಂ ತೂಕದ ಬೆಳ್ಳಿ ಚೈನುಗಳು, 8 ವಾಚುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಕಬ್ಬಿಣದ ರಾಡು, ಒಂದು ಹೆಲ್ಮೆಟ್‍ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. </p>



<p>ಸುಬ್ರಮಣ್ಯನಗರ ಮಾರುತಿ ಎಕ್ಸ್ ಟೆಕ್ಷನ್‍ನ 3ನೇ ಮುಖ್ಯರಸ್ತೆಯ ಮನೆಯವರು ಬೀಗ ಹಾಕಿಕೊಂಡು ಕಳೆದ ಸೆ.21 ರಂದು ರಾತ್ರಿ ಕುಟುಂಬ ಸಮೇತ ಮಂತ್ರಾಲಯಕ್ಕೆ ಹೋಗಿದ್ದರು. ಮರುದಿನ ರಾತ್ರಿ ವಾಪಾಸು ಬರುವಷ್ಟರಲ್ಲಿ ಮನೆಯ 1ನೇ ಮಹಡಿಯ ಕಿಟಕಿಯ ಕಬ್ಬಿಣದ ಗ್ರಿಲ್‍ಗಳನ್ನು ಕತ್ತರಿಸಿ ಒಳನುಗ್ಗಿ ಕೊಠಡಿಯಲ್ಲಿದ್ದ ಕಬೋರ್ಡ್ ಬಾಗಿಲು ಮುರಿದು ವಜ್ರದ ಆಭರಣಗಳು, ಚಿನ್ನಾಭರಣಗಳು, ಬೆಳ್ಳಿಯ ವಸ್ತುಗಳು ಮತ್ತು ನಗದು ದರೋಡೆ ಮಾಡಿದ್ದರು.</p>



<p>ಮನೆಯವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿದ ಸುಬ್ರಮಣ್ಯನಗರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಒಬ್ಬನನ್ನು ಕುಟುಂಬ ಸಮೇತ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿ ವಾಪಸ್ ಬರುತ್ತಿರುವಾಗ ತುಮಕೂರು ಜಲ್ಲೆ, ಸಿರಾ ತಾಲ್ಲೂಕು, ಹುಳಿಯಾರು ಗ್ರಾಮದ ಬಳಿ ಬಂಧಿಸಿದ್ದಾರೆ. ಆತನನ್ನು ತೀವ್ರ ವಿಚಾರಣೆ ನಡೆಸಿದಾಗ ಇತರ ಆರೋಪಿಗಳ ಬಗ್ಗೆ ಬಾಯ್ಬಿಟ್ಟಿದ್ದಾನೆ. ಆ ಆಧಾರದ ಮೇಲೆ ವಿಜಯನಗರ ಜಿಲ್ಲೆಯ</p>



<p>ಹಗರಿಬೊಮ್ಮನಹಳ್ಳಿ ತಾಲ್ಲೂಕು, ಉಲುವತ್ತಿ ಗ್ರಾಮದ ಮನೆಯಲ್ಲಿದ್ದ ಇನ್ನಿಬ್ಬರನ್ನೂ ಬಂಧಿಸಿ ಓರ್ವ ಆರೋಪಿತನ ಮನೆಯಿಂದ 18 ಸಾವಿರ ನಗದನ್ನು ಜಪ್ತಿ ಮಾಡಲಾಗಿದೆ. ಮೂವರು ಬಂಧಿತರ ಪೈಕಿ ಧರ್ಮಸ್ಥಳದಿಂದ ವಾಪಸಾಗುತ್ತಿದ್ದ ಆರೋಪಿಯ ಮನೆಯಿಂದ ಕಳವು ಮಾಡಿದ್ದ 1 ಕೆ.ಜಿ 802 ಗ್ರಾಂ ತೂಕದ ಚಿನ್ನಾಭರಣಗಳು, ವಜ್ರದ ಆಭರಣಗಳು, 110 ಗ್ರಾಂ ತೂಕದ ಬೆಳ್ಳಿ ಚೈನುಗಳು, 8-ವಾಚುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಕಬ್ಬಿಣದ ರಾಡು, ಒಂದು ಹೆಲ್ಮೆಟ್‍ನ್ನು ವಶಪಡಿಸಿಕೊಳ್ಳಲಾಗಿದೆ.</p>



<p>ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯು ತಲೆ ಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಪ್ರಗತಿಯಲ್ಲಿದೆ. ಈ ಕಾರ್ಯಾಚರಣೆಯನ್ನು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸೈದುಲು ಅಡಾವತ್ ಮಾರ್ಗದರ್ಶನದಲ್ಲಿ ಸುಬ್ರಮಣ್ಯನಗರ ಪೊಲೀಸ್ ಇನ್ಸ್‍ಪೆಕ್ಟರ್ ಸುರೇಶ ಹೆಚ್.ವಿ. ಮತ್ತವರ ಅಧಿಕಾರಿಗಳ ತಂಡ ಯಶಸ್ವಿಯಾಗಿ ನಡೆಸಿದೆ.</p>
]]></content:encoded>
					
		
		
			</item>
		<item>
		<title>ಧ್ರುವ್‌ ರಾಠಿ ವಿಡಿಯೋ ಹಂಚಿಕೆ: ಸುಳ್ಳು ಬಿಂಬಿಸುವ ವಿಡಿಯೋ ಎಂದು ಕೇಸ್‌ ದಾಖಲಿಸಿದ ಪೊಲೀಸರು</title>
		<link>https://peepalmedia.com/dhruv-rathi-video-sharing-the-police-registered-a-case-as-a-fake-video/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 30 May 2024 07:34:34 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[court]]></category>
		<category><![CDATA[druva rathi]]></category>
		<category><![CDATA[fir]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[modi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[police]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=40099</guid>

					<description><![CDATA[ಮುಂಬೈ: ಖ್ಯಾತ ಯುಟ್ಯೂಬರ್‌ ದ್ರುವ್‌ ರಾಠಿಯವರು ಮೋದಿ ಬಗ್ಗೆ ತಯಾರಿಸಿದ್ದ ವಿಡಿಯೋ ಒಂದನ್ನು ವಾಟ್ಸಪ್‌ ಗುಂಪಿನಲ್ಲಿ ಹಂಚಿಕೊಂಡ ಯುವ ವಕೀಲನ ಮೇಲೆ ಮಹಾರಾಷ್ಟ್ರದ ವಸಾಯಿ ಪೊಲೀಸರು ಸ್ವಯಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಲಿಬರೇಶನ್‌ನ ಮಹಾರಾಷ್ಟ್ರ ಕಾರ್ಯದರ್ಶಿಯೂ ಆಗಿರುವ ವಕೀಲ ಆದೇಶ್ ಬನ್ಸೋಡೆ ‘ಮೈಂಡ್ ಆಫ್ ಎ ಡಿಕ್ಟೇಟರ್’ ಎಂಬ ಶೀರ್ಷಿಕೆಯ ಧ್ರುವ್‌ ರಾಥಿ ಅವರ ವೀಡಿಯೊ ಲಿಂಕ್‌ನ್ನು ವಸಾಯಿಯ ಬಾರ್ ಅಸೋಸಿಯೇಷನ್ ವಾಟ್ಸಾಪ್‌ ಗ್ರೂಪ್‌ಗೆ ಮೇ.20 ರಂದು ಹಂಚಿಕೊಂಡಿದ್ದರು. ದಯವಿಟ್ಟು ​​ಮತದಾನ ಮಾಡುವ [&#8230;]]]></description>
										<content:encoded><![CDATA[
<p><strong> ಮುಂಬೈ:</strong> ಖ್ಯಾತ ಯುಟ್ಯೂಬರ್‌ ದ್ರುವ್‌ ರಾಠಿಯವರು ಮೋದಿ ಬಗ್ಗೆ ತಯಾರಿಸಿದ್ದ ವಿಡಿಯೋ ಒಂದನ್ನು ವಾಟ್ಸಪ್‌ ಗುಂಪಿನಲ್ಲಿ ಹಂಚಿಕೊಂಡ ಯುವ ವಕೀಲನ ಮೇಲೆ ಮಹಾರಾಷ್ಟ್ರದ ವಸಾಯಿ ಪೊಲೀಸರು ಸ್ವಯಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. </p>



<p>ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಲಿಬರೇಶನ್‌ನ ಮಹಾರಾಷ್ಟ್ರ ಕಾರ್ಯದರ್ಶಿಯೂ ಆಗಿರುವ ವಕೀಲ ಆದೇಶ್ ಬನ್ಸೋಡೆ ‘ಮೈಂಡ್ ಆಫ್ ಎ ಡಿಕ್ಟೇಟರ್’ ಎಂಬ ಶೀರ್ಷಿಕೆಯ ಧ್ರುವ್‌ ರಾಥಿ ಅವರ ವೀಡಿಯೊ ಲಿಂಕ್‌ನ್ನು ವಸಾಯಿಯ ಬಾರ್ ಅಸೋಸಿಯೇಷನ್ ವಾಟ್ಸಾಪ್‌ ಗ್ರೂಪ್‌ಗೆ ಮೇ.20 ರಂದು ಹಂಚಿಕೊಂಡಿದ್ದರು. ದಯವಿಟ್ಟು ​​ಮತದಾನ ಮಾಡುವ ಮೊದಲು ವೀಡಿಯೊವನ್ನು ಸರಿಯಾಗಿ ವೀಕ್ಷಿಸಿ ನಿರ್ಧಾರ ತೆಗೆದುಕೊಳ್ಳಿ ಎಂಬ ಸಂದೇಶದೊಂದಿಗೆ ವಿಡಿಯೋವನ್ನು ಶೇರ್‌ ಮಾಡಿದ್ದರು. ಮೇ 20ರಂದು ಐದನೇ ಹಂತದ ಲೋಕಸಭೆ ಚುನಾವಣೆ ವೇಳೆ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದರಿಂದ ಗುಂಪಿನಲ್ಲಿದ್ದ ಮತ್ತೋರ್ವ ವಕೀಲರು ಪೊಲೀಸರಿಗೆ ಪತ್ರ ಬರೆದಿದ್ದರು. ಈ ಪತ್ರದ ಆಧಾರದ ಮೇಲೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. </p>



<p>ಶೇರ್ ಮಾಡಿರುವ ವಿಡಿಯೋ ಮತ್ತು ಅದರ ಸಂದೇಶವು ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಕುರಿತು ಸುಳ್ಳು ಬಿಂಬಿಸುತ್ತದೆ. ಈ ಮೂಲಕ ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ. ಎಂಬಿವಿವಿ ಪೊಲೀಸ್ ಕಮಿಷನರ್ ಮಧುಕರ್ ಪಾಂಡೆ ತಮ್ಮ ಕಮಿಷನರೇಟ್‌ಗೆ ಮೇ 18 ಮತ್ತು ಮೇ 20ರ ನಡುವೆ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆ ಇಂಥ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುವ ಕುರಿತು ನಿಷೇಧಾಜ್ಞೆ ಹೊರಡಿಸಿದ್ದರು. ವಿಡಿಯೋ ಹಂಚಿಕೆಯು ಕಮಿಷನರ್‌ ಅವರ ಆದೇಶದ ಉಲ್ಲಂಘನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>



<p><strong>ಈ FIR ಕಾನೂನು ಬಾಹೀರ</strong></p>



<p> ನಿರ್ದಿಷ್ಟ ವೀಡಿಯೋವನ್ನು ಕೋಟ್ಯಂತರ ಜನರು ವೀಕ್ಷಿಸಿದ್ದಾರೆ ಮತ್ತು ಹಂಚಿಕೊಂಡಿದ್ದಾರೆ, ಅವರೆಲ್ಲರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದೇ? ಸಿಆರ್‌ಪಿಸಿ ಸೆಕ್ಷನ್ 195ರ ಪ್ರಕಾರ, ಐಪಿಸಿಯ ಸೆಕ್ಷನ್ 188ರಡಿಯಲ್ಲಿ ಎಫ್‌ಐಆರ್ ದಾಖಲಿಸುವ ಮೊದಲು ಪೊಲೀಸರು ಸಂಬಂಧಪಟ್ಟ ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದರೆ ಅನುಮತಿ ಪಡೆದಿಲ್ಲ. ಈ ಎಫ್‌ಐಆರ್ ಕಾನೂನುಬಾಹಿರ, ಇದು ಜನರ ಧ್ವನಿಯನ್ನು ಹತ್ತಿಕ್ಕುವ ರಾಜ್ಯದ ನಡೆಯ ಭಾಗ ಎಂದು ಆರೋಪಿಸಿದ್ದಾರೆ. </p>
]]></content:encoded>
					
		
		
			</item>
		<item>
		<title>ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ: ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆದ ಪೊಲೀಸರು</title>
		<link>https://peepalmedia.com/pakistan-zindabaad-slogan-bjp-worker-arrested-in-mandya/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 05 Mar 2024 07:18:31 +0000</pubDate>
				<category><![CDATA[ರಾಜಕೀಯ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[laden]]></category>
		<category><![CDATA[mandya]]></category>
		<category><![CDATA[news]]></category>
		<category><![CDATA[Pakistan]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[police]]></category>
		<guid isPermaLink="false">https://peepalmedia.com/?p=36679</guid>

					<description><![CDATA[ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಆರೋಪದಲ್ಲಿ ಬಂಧಿತರಾದ ಮೂವರನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒದಗಿಸಲಾಗಿದ್ದು, ಈ ಕುರಿತು ತನಿಖೆ ಪ್ರಗತಿಯಲ್ಲಿದೆ. ಈ ನಡುವೆ ಮಂಡ್ಯದ ಸಂಜಯ್ ವೃತ್ತದಲ್ಲಿ 2022ರ ಡಿಸೆಂಬರ್ 17 ರಂದು ಅಂದಿನ ಪಾಕ್‌ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುವಾಗ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದ ಆರೋಪದಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆಯೆಂದು ಸುದ್ದಿ ಸಂಸ್ಥೆಯೊಂದು ವರದಿ [&#8230;]]]></description>
										<content:encoded><![CDATA[
<p>ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಆರೋಪದಲ್ಲಿ ಬಂಧಿತರಾದ ಮೂವರನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒದಗಿಸಲಾಗಿದ್ದು, ಈ ಕುರಿತು ತನಿಖೆ ಪ್ರಗತಿಯಲ್ಲಿದೆ. </p>



<p>ಈ ನಡುವೆ ಮಂಡ್ಯದ ಸಂಜಯ್ ವೃತ್ತದಲ್ಲಿ 2022ರ ಡಿಸೆಂಬರ್ 17 ರಂದು ಅಂದಿನ ಪಾಕ್‌ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುವಾಗ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದ ಆರೋಪದಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆಯೆಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.</p>



<p>ವಿವರಗಳ ಪ್ರಕಾರ ಅಂದು ನಡೆದ ಪ್ರತಿಭಟನೆ ಸಭೆಯಲ್ಲಿ “ಪಾಕಿಸ್ತಾನ್ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್” ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದರು. ಘೋಷಣೆ ಕೂಗುವ ಬರದಲ್ಲಿ ಪಾಕಿಸ್ತಾನ ಮುರ್ದಾಬಾದ್‌ ಎಂದು ಹೇಳುವ ಬದಲು ಬಿಜೆಪಿ ಕಾರ್ಯಕರ್ತ ಪಾಕಿಸ್ತಾನ ಜಿಂದಾಬಾದ್‌ (Pakistan Zindabad) ಎಂದು ಘೋಷಣೆ ಕೂಗಿದ್ದ. ಕೂಡಲೇ ಎಚ್ಚೆತ್ತ ಕಾರ್ಯಕರ್ತರೊಬ್ಬರು ಘೋಷಣೆ ಕೂಗಿದ ಕಾರ್ಯಕರ್ತನ ಬಾಯಿ ಮುಚ್ಚಿಸಿದ್ದರು.</p>



<p>ಆ ಸಂದರ್ಭದಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಈ ಘಟನೆ ಸದ್ದು ಮಾಡಿತ್ತಾದರೂ ನಂತರ ಅಲ್ಲಿಗೇ ತಣ್ಣಗಾಗಿತ್ತು.</p>



<p>ಈಗ ಬಿಜೆಪಿ ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಲಾಗಿದೆಯೆಂದು ಹೋದಲ್ಲೆಲ್ಲ ಪೀಡಿಸುತ್ತಿದ್ದು ಇದಕ್ಕೆ ಪ್ರತಿಯಾಗಿ ಹಳೆಯ ಪ್ರಕರಣಕ್ಕೆ ಮರುಜೀವ ನೀಡುವ ಮೂಲಕ ಕಾಂಗ್ರೆಸ್‌ ತನ್ನ ರಾಜಕೀಯ ದಾಳವನ್ನು ಉರುಳಿಸಿದೆ.</p>



<p>ಕನ್ನಂಬಾಡಿಯವರಾದ ಕುಮಾರ್‌ ಎನ್ನುವ ವ್ಯಕ್ತಿ ಈ ವಿಷಯವಾಗಿ ದೂರು ನೀಡಿದ್ದು ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 153 ಬಿ(ರಾಷ್ಟ್ರೀಯ ಸಮಗ್ರತೆ ಧಕ್ಕೆ ತರುವ ಹೇಳಿಕೆ) 505 (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆ) ಆರೋಪದ ಮೇರೆಗೆ ಆರಾಧ್ಯ, ರವಿ ಮತ್ತು ಇತರರನ್ನು ಆರೋಪಿಗಳನ್ನಾಗಿ ಮಾಡಿ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಪೊಲೀಸರು ಬಿಜೆಪಿ ಕಾರ್ಯಕರ್ತ ರವಿ ಎನ್ನುವನನ್ನು ವಶಕ್ಕೆ ಪಡೆದಿದ್ದಾರೆ.</p>



<p>ಇದೇ ವೇಳೆ ವಿಧಾನಸೌಧದಲ್ಲಿ ಘೋಷಣೆ ಕೂಗಿದ ವಿಷಯದಲ್ಲಿ ರಾಜ್ಯ ಸರ್ಕಾರ ಕ್ಷಮೆಯಾಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.</p>



<p>“ರಾಜ್ಯ ಸರ್ಕಾರವು ದೇಶ ವಿರೋಧಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಎನ್‌ಐಎ ವಿಷಯಕ್ಕೆ ಬಂದ ನಂತರವೇ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ರಕ್ಷಿಸಲು ಸಚಿವರು ಮುಂದಾಗಿರುವುದು ವಿಷಾದನೀಯ. ಎಫ್‌ಎಸ್‌ಎಲ್ ವರದಿಯ ಹೊರತಾಗಿಯೂ ಆರೋಪಿಗಳ ಬಂಧನಕ್ಕೆ ವಿಳಂಬ ಮಾಡಿದ್ದಕ್ಕಾಗಿ ರಾಜ್ಯ ಸರ್ಕಾರ ರಾಜ್ಯದ ಜನರ ಕ್ಷಮೆಯಾಚಿಸಬೇಕು,” ಎಂದು ಅವರು ಹೇಳಿಕೆ ನೀಡಿದ್ದಾರೆ</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿರುವುದು ಖಾಸಗಿ ಎಫ್ ಎಸ್ ಎಲ್ ವದರಿಯಲ್ಲಿ ಸಾಬೀತಾದ ತಕ್ಷಣ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದು, ರಾಜ್ಯ <a href="https://twitter.com/INCKarnataka?ref_src=twsrc%5Etfw">@INCKarnataka</a> ಸರ್ಕಾರವೂ ಪಾಕಿಸ್ತಾನ ಪರ ಘೋಷಣೆ ಕೂಗಿರುವುದನ್ನು ಒಪ್ಪಿಕೊಂಡಂತಾಗಿದೆ. <br><br>ಬಂಧಿತ ಮೂವರು ಆರೋಪಿಗಳ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸಿ… <a href="https://t.co/e4gROoWTia">pic.twitter.com/e4gROoWTia</a></p>&mdash; Basavaraj S Bommai (Modi Ka Parivar) (@BSBommai) <a href="https://twitter.com/BSBommai/status/1764678988482695568?ref_src=twsrc%5Etfw">March 4, 2024</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ಒಸಾಮಾ ಬಿನ್ ಲಾಡೆನ್ ಸತ್ತಿದ್ದಾನೆ. ಆದರೆ ಗುಜರಾತ್‌ನ ಕಟುಕ ಇನ್ನೂ ಬದುಕಿದ್ದಾನೆ ಮತ್ತು ಆತ ಭಾರತದ ಪ್ರಧಾನ ಮಂತ್ರಿ ಎಂಬ ಬಿಲಾವಲ್ ಭುಟ್ಟೋ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿತ್ತು. ಈ ಸಂದರ್ಭದಲ್ಲಿ ನಡೆದ ಘಟನೆಯ ವಿಡಿಯೋ ಎಲ್ಲೆಡೆ ಹರಿದಾಡಿ ಸದ್ದು ಮಾಡಿತ್ತು. ಈಗ ಅದು ಮತ್ತೆ ಮುನ್ನೆಲೆಗೆ ಬಂದಿದ್ದು ಪ್ರಕರಣ ದಾಖಲಾಗಿದೆ.</p>



<figure class="wp-block-embed is-type-wp-embed is-provider-peepal-media wp-block-embed-peepal-media"><div class="wp-block-embed__wrapper">
<blockquote class="wp-embedded-content" data-secret="TwA0HaAwKJ"><a href="https://peepalmedia.com/bombay-high-court-acquits-gn-saibaba-in-maoist-link-case/">ಪ್ರೊ.ಸಾಯಿಬಾಬಾ ನಿರಪರಾಧಿ, ಬಾಂಬೆ ಹೈಕೋರ್ಟ್ ತೀರ್ಪು</a></blockquote><iframe class="wp-embedded-content" sandbox="allow-scripts" security="restricted"  title="&#8220;ಪ್ರೊ.ಸಾಯಿಬಾಬಾ ನಿರಪರಾಧಿ, ಬಾಂಬೆ ಹೈಕೋರ್ಟ್ ತೀರ್ಪು&#8221; &#8212; Peepal Media" src="https://peepalmedia.com/bombay-high-court-acquits-gn-saibaba-in-maoist-link-case/embed/#?secret=dR7p07GFFf#?secret=TwA0HaAwKJ" data-secret="TwA0HaAwKJ" width="600" height="338" frameborder="0" marginwidth="0" marginheight="0" scrolling="no"></iframe>
</div></figure>
]]></content:encoded>
					
		
		
			</item>
		<item>
		<title>ಪೊಲೀಸರ ವರ್ಗಾವಣೆಗೆ ಸರ್ಕಾರದ ಮೀನಾಮೇಷ : ಯತ್ನಾಳ್</title>
		<link>https://peepalmedia.com/government-delaying-police-transfer-yatnal/</link>
		
		<dc:creator><![CDATA[Charan Aivarnad]]></dc:creator>
		<pubDate>Fri, 15 Dec 2023 07:07:43 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[Bangalore]]></category>
		<category><![CDATA[Basanagowda Patil Yatnal]]></category>
		<category><![CDATA[breakimg news]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[police]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[viral]]></category>
		<category><![CDATA[viral news]]></category>
		<category><![CDATA[viral trend]]></category>
		<category><![CDATA[yatnal]]></category>
		<guid isPermaLink="false">https://peepalmedia.com/?p=33719</guid>

					<description><![CDATA[ಬೆಂಗಳೂರು : ಕರ್ನಾಟಕ ನಾಗರಿಕ ಸೇವಾ ನಿಯಮ(KCSR)ಗಳ ಅಡಿಯಲ್ಲಿ ಪೊಲೀಸರ ವರ್ಗಾವಣೆಗೆ ಸರ್ಕಾರವು ಮೀನಾಮೇಷ ಮಾಡುತ್ತಿದ್ದು, ಪೊಲೀಸ್ ಇಲಾಖೆಯಲ್ಲಿ ಪತಿ- ಪತ್ನಿ ಹಾಗು ಸಾಮಾನ್ಯ ಅಂತರ್ ಜಿಲ್ಲಾ ವರ್ಗಾವಣೆಗಳಿಗೆ ಸರ್ಕಾರ KCSR ನಿಯಮಗಳ ಅನ್ವಯ ಸರಿಯಾದ ನಿಯಮಗಳನ್ನು ರೂಪಿಸಬೇಕು ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ. 2 ವರ್ಷ, 6 ತಿಂಗಳು ಕನಿಷ್ಠ ಸೇವೆ ಇದ್ದ ನಿಯಮಕ್ಕೆ ಈಗ 7 ವರ್ಷ ಕನಿಷ್ಠ ಸೇವೆಯಂದು ತಿದ್ದುಪಡಿ ಮಾಡಿ, ಈವರೆಗೂ ಯಾವುದೇ ವರ್ಗಾವಣೆ [&#8230;]]]></description>
										<content:encoded><![CDATA[
<p><strong>ಬೆಂಗಳೂರು :</strong> ಕರ್ನಾಟಕ ನಾಗರಿಕ ಸೇವಾ ನಿಯಮ(KCSR)ಗಳ ಅಡಿಯಲ್ಲಿ ಪೊಲೀಸರ ವರ್ಗಾವಣೆಗೆ ಸರ್ಕಾರವು ಮೀನಾಮೇಷ ಮಾಡುತ್ತಿದ್ದು, ಪೊಲೀಸ್ ಇಲಾಖೆಯಲ್ಲಿ ಪತಿ- ಪತ್ನಿ ಹಾಗು ಸಾಮಾನ್ಯ ಅಂತರ್ ಜಿಲ್ಲಾ ವರ್ಗಾವಣೆಗಳಿಗೆ ಸರ್ಕಾರ KCSR ನಿಯಮಗಳ ಅನ್ವಯ ಸರಿಯಾದ ನಿಯಮಗಳನ್ನು ರೂಪಿಸಬೇಕು ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ.</p>



<p>2 ವರ್ಷ, 6 ತಿಂಗಳು ಕನಿಷ್ಠ ಸೇವೆ ಇದ್ದ ನಿಯಮಕ್ಕೆ ಈಗ 7 ವರ್ಷ ಕನಿಷ್ಠ ಸೇವೆಯಂದು ತಿದ್ದುಪಡಿ ಮಾಡಿ, ಈವರೆಗೂ ಯಾವುದೇ ವರ್ಗಾವಣೆ ಮಾಡದೆ ಸರ್ಕಾರ ಪೋಲೀಸರ ಜೀವನದ ಜೊತೆ ಆಟವಾಡುತ್ತಿದೆ ಎಂದು ಯತ್ನಾಳ್ ದೂರಿದ್ದಾರೆ.</p>



<p>ದೂರದ ಊರಿನಲ್ಲಿ ವಯಸ್ಸಾದ ತಂದೆ ತಾಯಂದಿರನ್ನೂ ನೋಡಲು ಆಗದೆ, ದಿನಕ್ಕೆ 12-14 ಘಂಟೆ ಕೆಲಸ ಮಾಡುವ ಪೋಲೀಸರ ಗೋಳು ಈ ಸರ್ಕಾರಕ್ಕೆ ಕೇಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ.</p>



<p>ಜ್ಯೇಷ್ಠತೆಯನ್ನೂ ಬಿಟ್ಟು ಅಂತರ್ ಜಿಲ್ಲಾ ವರ್ಗಾವಣೆಗೆ ಮನವಿ ಸಲ್ಲಿಸಿರುವ ಪೊಲೀಸ್ ಸಿ ಹಾಗು ಡಿ ನೌಕರರನ್ನು ಅಲೆದಾಡಿಸಿ ಅವರಿಗೆ ಮಾನಸಿಕ ಚಿತ್ರಹಿಂಸೆ ನೀಡುತ್ತಿರುವುದು ಬಿಟ್ಟರೆ, ಸರ್ಕಾರ ಸಾಧಿಸಿದ್ದು ಏನೂ ಇಲ್ಲ. ಈ ವಿಷಯದ ಬಗ್ಗೆ ಸರ್ಕಾರ ಸೂಕ್ತವಾದ ನಿಯಮಗಳನ್ನು ರೂಪಿಸಬೇಕು, ಈಗಾಗಲೇ ಆರಂಭಿಸಿರುವ ಆನ್‌ಲೈನ್‌ ಪೋರ್ಟಲ್‌ನಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಹಾಗು ಕಾನೂನು ರೀತ್ಯಾ ವರ್ಗಾವಣೆ ಮಾಡಬೇಕು ಎಂದಿದ್ದಾರೆ.</p>



<p>ಪೊಲೀಸರೂ ಮನುಷ್ಯರು, ಅವರಿಗೂ ಸಂಸಾರ ಸಂಬಂಧಗಳು ಇರುತ್ತವೆ ಎನ್ನುವುದನ್ನು ಮನಗೊಂಡು ಸರ್ಕಾರ ಹಾಗು ಪೊಲೀಸ್ ಅಧಿಕಾರಿಗಳು ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ವಿನಂತಿಸಿಕೊಂಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಹೆಲ್ಮೆಟ್ ಹಾಕಿಲ್ಲ ಎಂಬ ಕಾರಣಕ್ಕೆ ಮಾರಣಾಂತಿಕ ಹಲ್ಲೆ : ಚಿಕ್ಕಮಗಳೂರು ಪೊಲೀಸರ ಕೃತ್ಯಕ್ಕೆ ಖಂಡನೆ</title>
		<link>https://peepalmedia.com/fatal-assault-for-not-wearing-a-helmet/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 01 Dec 2023 02:49:14 +0000</pubDate>
				<category><![CDATA[ಜನ-ಗಣ-ಮನ]]></category>
		<category><![CDATA[chikkamagalur]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[police]]></category>
		<guid isPermaLink="false">https://peepalmedia.com/?p=33306</guid>

					<description><![CDATA[ಬೈಕಿನಲ್ಲಿ ಹೋಗುವಾಗ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಚಿಕ್ಕಮಗಳೂರಿನ ವಕೀಲರೊಬ್ಬರ ಮೇಲೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಟೌನ್ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಯ ನಂತರ ಮೈಮೇಲಿನ ಗಾಯದ ಫೋಟೊ ಹಾಗೂ ಘಟನೆಯನ್ನು ವಿವರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೊಲೀಸರ ಕೃತ್ಯಕ್ಕೆ ಖಂಡನೆ ವ್ಯಕ್ತವಾಗಿದೆ. ಚಿಕ್ಕಮಗಳೂರಿನ ವಕೀಲ ಪ್ರೀತಮ್ ಎಂಬುವವರು ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸುತ್ತಿದ್ದ ವೇಳೆ ಅಲ್ಲೇ ಹತ್ತಿರದಲ್ಲಿ ತಪಾಸಣೆಗೆ ನಿಂತಿದ್ದ ಪೊಲೀಸರು ಪ್ರೀತಮ್ ಅವರನ್ನು ಅಡ್ಡಗಟ್ಟಿದ್ದಾರೆ. ಪ್ರೀತಮ್ ಬೈಕ್ ನಿಲ್ಲಿಸುತ್ತಿದ್ದಂತೆ ಪೊಲೀಸರು [&#8230;]]]></description>
										<content:encoded><![CDATA[
<p>ಬೈಕಿನಲ್ಲಿ ಹೋಗುವಾಗ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಚಿಕ್ಕಮಗಳೂರಿನ ವಕೀಲರೊಬ್ಬರ ಮೇಲೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಟೌನ್ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಯ ನಂತರ ಮೈಮೇಲಿನ ಗಾಯದ ಫೋಟೊ ಹಾಗೂ ಘಟನೆಯನ್ನು ವಿವರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೊಲೀಸರ ಕೃತ್ಯಕ್ಕೆ ಖಂಡನೆ ವ್ಯಕ್ತವಾಗಿದೆ.</p>



<p>ಚಿಕ್ಕಮಗಳೂರಿನ ವಕೀಲ ಪ್ರೀತಮ್ ಎಂಬುವವರು ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸುತ್ತಿದ್ದ ವೇಳೆ ಅಲ್ಲೇ ಹತ್ತಿರದಲ್ಲಿ ತಪಾಸಣೆಗೆ ನಿಂತಿದ್ದ ಪೊಲೀಸರು ಪ್ರೀತಮ್ ಅವರನ್ನು ಅಡ್ಡಗಟ್ಟಿದ್ದಾರೆ. ಪ್ರೀತಮ್ ಬೈಕ್ ನಿಲ್ಲಿಸುತ್ತಿದ್ದಂತೆ ಪೊಲೀಸರು ಬೈಕಿನ ಕೀ ತಗೆದುಕೊಂಡಿದ್ದಾರೆ.</p>



<p>ಪೊಲೀಸರು ಅಡ್ಡಗಟ್ಟಿ ಬೈಕ್ ನಿಲ್ಲಿಸಿದ ಮೇಲೂ ಕೀ ತಗೆದುಕೊಂಡದ್ದಕ್ಕೆ ವಕೀಲ ಪ್ರೀತಮ್ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಬೈಕ್ ಸವಾರರು ಗಾಡಿ ನಿಲ್ಲಿಸಿದ ಮೇಲೂ ಕೀ ತಗೆದುಕೊಳ್ಳಬಾರದು ಎಂಬ ನಿಯಮ ಇದ್ದರೂ ಪೊಲೀಸರ ವರ್ತನೆ ಬಗ್ಗೆ ಸ್ಥಳದಲ್ಲೇ ಖಂಡಿಸಿದ್ದಾರೆ. ನಂತರ ಪೊಲೀಸರ ಈ ವರ್ತನೆ ಸೆರೆ ಹಿಡಿಯಲು ಮೊಬೈಲ್ ಮೂಲಕ ವಿಡಿಯೋ ಮಾಡಲು ತೊಡಗಿದ ಮೇಲೆ ಪೊಲೀಸರು ಪ್ರೀತಮ್ ಮೇಲೆ ಹರಿಹಾಯ್ದಿದ್ದಾರೆ.</p>



<p>ನಂತರ ಸ್ಟೇಶನ್ ಗೆ ಬರುವಂತೆ ಪೊಲೀಸರು ಒತ್ತಾಯಿಸಿದರು ಎಂದು ಪ್ರೀತಮ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ. ನಿಂತ ಜಾಗದಲ್ಲೇ ಫೈನ್ ಕಟ್ಟಲು ತಯಾರಿದ್ದೇನೆ, ಫೈನ್ ಕಟ್ಟಿಸಿಕೊಳ್ಳಿ ಎಂದರೂ ಪೊಲೀಸರು ಒತ್ತಾಯಪೂರ್ವಕವಾಗಿ ಸ್ಟೇಶನ್ ಗೆ ಎಳೆದೊಯ್ದಿದ್ದಾರೆ ಎಂದೂ ಪ್ರೀತಮ್ ಹೇಳಿಕೊಂಡಿದ್ದಾರೆ.</p>



<p>ಸ್ಟೇಶನ್ ಗೆ ಹೋದ ನಂತರ ಒಂದಷ್ಟು ಮಂದಿ ಪೊಲೀಸರು ಸುತ್ತುವರಿದು ಮನಸೋಇಚ್ಚೆ ತಳಿಸಿದ್ದಾರೆ, ಕೆಲವು ಪೊಲೀಸರು ಹಾಕಿ ಸ್ಟಿಕ್, ಪ್ಲಂಬಿಂಗ್ ಪೈಪ್ ಹಾಗೂ ಪೊಲೀಸ್ ಲಾಟಿ ಉಪಯೋಗಿಸಿ ಹೊಡೆದಿದ್ದಾರೆ, ಹೊಡೆತದ ಪರಿಣಾಮ ಪ್ರಜ್ಞೆ ತಪ್ಪಿದರೂ ಅವರು ಹೊಡೆಯುವುದನ್ನು ನಿಲ್ಲಿಸಲಿಲ್ಲ ಎಂದು ವಿಡಿಯೋದಲ್ಲಿ ಪ್ರೀತಮ್ ಹೇಳಿಕೊಂಡಿದ್ದಾರೆ.</p>



<figure class="wp-block-image size-large"><img fetchpriority="high" decoding="async" width="576" height="1024" src="https://peepalmedia.com/wp-content/uploads/2023/12/FB_IMG_1701398306341-576x1024.jpg" alt="" class="wp-image-33307" srcset="https://peepalmedia.com/wp-content/uploads/2023/12/FB_IMG_1701398306341-576x1024.jpg 576w, https://peepalmedia.com/wp-content/uploads/2023/12/FB_IMG_1701398306341-169x300.jpg 169w, https://peepalmedia.com/wp-content/uploads/2023/12/FB_IMG_1701398306341-150x267.jpg 150w, https://peepalmedia.com/wp-content/uploads/2023/12/FB_IMG_1701398306341-300x533.jpg 300w, https://peepalmedia.com/wp-content/uploads/2023/12/FB_IMG_1701398306341-696x1237.jpg 696w, https://peepalmedia.com/wp-content/uploads/2023/12/FB_IMG_1701398306341.jpg 720w" sizes="(max-width: 576px) 100vw, 576px" /></figure>



<p><a href="https://m.facebook.com/story.php?story_fbid=pfbid02mGgbuEZw2pukmVW4FWDgaMgtrhz1Ua5NRxCn6C3Ekq25UiXfoxfVBdTMYS3Z9B6nl&amp;id=100003519555450&amp;mibextid=UyTHkb">https://m.facebook.com/story.php?story_fbid=pfbid02mGgbuEZw2pukmVW4FWDgaMgtrhz1Ua5NRxCn6C3Ekq25UiXfoxfVBdTMYS3Z9B6nl&amp;id=100003519555450&amp;mibextid=UyTHkb</a></p>



<p>ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಫೋಟೊ ಮತ್ತು ವಿಡಿಯೋದಲ್ಲಿ ಪ್ರೀತಮ್ ಬೆನ್ನು, ಎದೆ, ಕೈ ಭಾಗಗಳಲ್ಲಿ ಗಾಯಗಳಾಗಿರುವ ಗುರುತು ಇದೆ. ಸಧ್ಯ ಪೊಲೀಸರ ಈ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.</p>
]]></content:encoded>
					
		
		
			</item>
		<item>
		<title>ನಕಲಿ ಚಿನ್ನ ಅಡವಿಟ್ಟ ಪ್ರಕರಣ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡ ನಿವಾಸದ ಮೇಲೆ ಇಡಿ ದಾಳಿ</title>
		<link>https://peepalmedia.com/shivamogga-ed-raids-congress-leaders-house/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 05 Oct 2023 09:44:56 +0000</pubDate>
				<category><![CDATA[ಶಿವಮೊಗ್ಗ]]></category>
		<category><![CDATA[ED]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[police]]></category>
		<category><![CDATA[politics]]></category>
		<category><![CDATA[shivamogga]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=29188</guid>

					<description><![CDATA[ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಆರ್.ಎಂ.ಮಂಜುನಾಥ್ ಗೌಡ ಅವರ ನಿವಾಸ ಹಾಗೂ ತೋಟದ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. 2014ರಲ್ಲಿ ಬೆಳಕಿಗೆ ಬಂದ ನಕಲಿ ಚಿನ್ನಾಭರಣ ಅಡಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿರುವ ಮಂಜುನಾಥ್ ಗೌಡ ಅವರ ನಿವಾಸಗಳ ಮೇಲೆ ಬೆಳಗ್ಗೆಯಿಂದಲೇ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ತೀರ್ಥಹಳ್ಳಿಯಲ್ಲಿರುವ ಅವರ ಎರಡು ಮತ್ತು ಶಿವಮೊಗ್ಗ ನಗರದ ಶರಾವತಿ ನಗರದಲ್ಲಿನ ಒಂದು ಮನೆ ಮೇಲೆ [&#8230;]]]></description>
										<content:encoded><![CDATA[
<p>ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಆರ್.ಎಂ.ಮಂಜುನಾಥ್ ಗೌಡ ಅವರ ನಿವಾಸ ಹಾಗೂ ತೋಟದ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.</p>



<p>2014ರಲ್ಲಿ ಬೆಳಕಿಗೆ ಬಂದ ನಕಲಿ ಚಿನ್ನಾಭರಣ ಅಡಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿರುವ ಮಂಜುನಾಥ್ ಗೌಡ ಅವರ ನಿವಾಸಗಳ ಮೇಲೆ ಬೆಳಗ್ಗೆಯಿಂದಲೇ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>



<p>ತೀರ್ಥಹಳ್ಳಿಯಲ್ಲಿರುವ ಅವರ ಎರಡು ಮತ್ತು ಶಿವಮೊಗ್ಗ ನಗರದ ಶರಾವತಿ ನಗರದಲ್ಲಿನ ಒಂದು ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.</p>



<p>15 ಅಧಿಕಾರಿಗಳ ತಂಡ ದಾಳಿ ನಡೆಸುತ್ತಿದ್ದು, ಶಸ್ತ್ರಸಜ್ಜಿತ ಪೊಲೀಸರು ಆವರಣದಲ್ಲಿ ಕಾವಲು ಕಾಯುತ್ತಿದ್ದಾರೆ.</p>



<p>ಡಿಸಿಸಿ ಬ್ಯಾಂಕ್ ನ ಶಿವಮೊಗ್ಗ ನಗರ ಘಟಕದಲ್ಲಿ 2012ರಿಂದ 2014ರ ನಡುವೆ ನಕಲಿ ಚಿನ್ನಾಭರಣ ವಂಚನೆ ನಡೆದಿದೆ.</p>



<p>ಅಧಿಕಾರಿಗಳು ಅಂದಿನ ಅಧ್ಯಕ್ಷ ಮಂಜುನಾಥ ಗೌಡ, ಉಪಾಧ್ಯಕ್ಷ, ಶಾಖಾ ವ್ಯವಸ್ಥಾಪಕ ಹಾಗೂ ಪ್ರಧಾನ ವ್ಯವಸ್ಥಾಪಕರನ್ನು ಬಂಧಿಸಿದ್ದರು. 32 ಖಾತೆಗಳು, ಖಾತೆದಾರರ ವಿವರಗಳು ಮತ್ತು ಕೆವೈಸಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ತಿಳಿಸಲಾಗಿದೆ.</p>
]]></content:encoded>
					
		
		
			</item>
		<item>
		<title>ನ್ಯೂಸ್‌ಕ್ಲಿಕ್‌ ಮೇಲೆ ಮುಂದುವರೆದ ದಾಳಿ: ದೆಹಲಿ ಪೊಲೀಸರಿಂದ ಸಂಪಾದಕ ಪ್ರಬೀರ್ ಬಂಧನ</title>
		<link>https://peepalmedia.com/police-arrest-newsclick-editor/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 04 Oct 2023 02:58:29 +0000</pubDate>
				<category><![CDATA[ದೇಶ]]></category>
		<category><![CDATA[delhi police]]></category>
		<category><![CDATA[ED]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[police]]></category>
		<category><![CDATA[politics]]></category>
		<guid isPermaLink="false">https://peepalmedia.com/?p=28919</guid>

					<description><![CDATA[ನ್ಯೂಸ್‌ಕ್ಲಿಕ್ ಪೋರ್ಟಲ್ ವಿರುದ್ಧ ದೆಹಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕಂಪನಿ ಸಿಬ್ಬಂದಿ ಮತ್ತು ಕಚೇರಿಗಳ ಮೇಲೆ ದಾಳಿ ಮುಂದುವರಿದಿದೆ. ಚೀನಾದಿಂದ ಹಣ ಪಡೆದ ಆರೋಪದ ಮೇಲೆ ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಾಸ್ತಾ ಮತ್ತು ಎಚ್‌ಆರ್ ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ. ನ್ಯೂಸ್‌ಕ್ಲಿಕ್ ಭಾರತದಲ್ಲಿ ಚೀನಾ ಪರ ಮಾಹಿತಿಯನ್ನು ವ್ಯಾಪಕವಾಗಿ ಹರಡಲು ಆ ದೇಶದಿಂದ ಭಾರಿ ಹಣವನ್ನು ಪಡೆದಿದೆ ಎಂದು ಆರೋಪಿಸಲಾಗಿದೆ. ಈ ಆರೋಪಗಳ ಮೇಲೆ ದೆಹಲಿ ಪೊಲೀಸರು ನ್ಯೂಸ್‌ಕ್ಲಿಕ್‌ನ ಕಚೇರಿಗಳು ಮತ್ತು ಸಿಬ್ಬಂದಿ ಮನೆಗಳ ಮೇಲೆ ಹಠಾತ್ [&#8230;]]]></description>
										<content:encoded><![CDATA[
<p>ನ್ಯೂಸ್‌ಕ್ಲಿಕ್ ಪೋರ್ಟಲ್ ವಿರುದ್ಧ ದೆಹಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕಂಪನಿ ಸಿಬ್ಬಂದಿ ಮತ್ತು ಕಚೇರಿಗಳ ಮೇಲೆ ದಾಳಿ ಮುಂದುವರಿದಿದೆ. ಚೀನಾದಿಂದ ಹಣ ಪಡೆದ ಆರೋಪದ ಮೇಲೆ ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಾಸ್ತಾ ಮತ್ತು ಎಚ್‌ಆರ್ ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ.</p>



<p>ನ್ಯೂಸ್‌ಕ್ಲಿಕ್ ಭಾರತದಲ್ಲಿ ಚೀನಾ ಪರ ಮಾಹಿತಿಯನ್ನು ವ್ಯಾಪಕವಾಗಿ ಹರಡಲು ಆ ದೇಶದಿಂದ ಭಾರಿ ಹಣವನ್ನು ಪಡೆದಿದೆ ಎಂದು ಆರೋಪಿಸಲಾಗಿದೆ. ಈ ಆರೋಪಗಳ ಮೇಲೆ ದೆಹಲಿ ಪೊಲೀಸರು ನ್ಯೂಸ್‌ಕ್ಲಿಕ್‌ನ ಕಚೇರಿಗಳು ಮತ್ತು ಸಿಬ್ಬಂದಿ ಮನೆಗಳ ಮೇಲೆ ಹಠಾತ್ ದಾಳಿ ನಡೆಸಿದರು. 500 ಪೊಲೀಸರು ಎಲ್ಲಾ 100 ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿಗಳನ್ನು ಮುಂದುವರೆಸಿದರು. ದೆಹಲಿ, ಗುರುಗ್ರಾಮ್, ನೋಯ್ಡಾ, ಗಾಜಿಯಾಬಾದ್ ಮತ್ತು ಮುಂಬೈನಲ್ಲಿ ಶೋಧ ನಡೆಸಲಾಗಿದೆ. </p>



<p>ಈ ಹಿಂದೆ ನ್ಯೂಸ್‌ಕ್ಲಿಕ್‌ಗೆ ಹಣ ಹೇಗೆ ಬರುತ್ತಿದೆ ಎಂಬುದನ್ನೂ ಇಡಿ ತನಿಖೆ ನಡೆಸಿತ್ತು. ಆ ಸಮಯದಲ್ಲಿ ಇಡಿ ನೀಡಿದ ಮಾಹಿತಿಯ ಆಧಾರದ ಮೇಲೆ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳು ಮತ್ತು ಕ್ರಿಮಿನಲ್ ಪಿತೂರಿಯ ಸೆಕ್ಷನ್‌ಗಳ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಹಲವರಿಂದ ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್, ಹಾರ್ಡ್ ಡಿಸ್ಕ್, ಫ್ಲ್ಯಾಷ್ ಡ್ರೈವ್ ಗಳನ್ನು ವಶಪಡಿಸಿಕೊಳ್ಳಲಾಯಿತು. ನ್ಯೂಸ್‌ಕ್ಲಿಕ್ ಚೀನಾಕ್ಕೆ ಸಂಬಂಧಿಸಿದ ಕೆಲವು ಸಂಸ್ಥೆಗಳಿಂದ ಕಳೆದ ಮೂರು ವರ್ಷಗಳಲ್ಲಿ 38.05 ಕೋಟಿ ರೂಪಾಯಿಗಳನ್ನು ಪಡೆದಿದೆ ಎಂದು ಆರೋಪಿಸಲಾಗಿದೆ.</p>



<p>ಈ ವಿಚಾರವಾಗಿ ದೆಹಲಿ ಪೊಲೀಸರು ಇದೀಗ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಹಾಗೂ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಿದ್ದಾರೆ. ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.</p>



<p>ನ್ಯೂಸ್‌ಕ್ಲಿಕ್ ಮೇಲಿನ ದಾಳಿ ಮತ್ತು ಪ್ರಬೀರ್‌ನ ಬಂಧನವನ್ನು ವಿರೋಧ ಪಕ್ಷಗಳ ಒಕ್ಕೂಟದ ಭಾರತದ ನಾಯಕರು ತೀವ್ರವಾಗಿ ಖಂಡಿಸಿದರು. ಸತ್ಯ ಹೇಳುವವರನ್ನು ಹತ್ತಿಕ್ಕಲು ಕೇಂದ್ರ ಇಂತಹ ಕ್ರಮ ಕೈಗೊಳ್ಳುತ್ತಿದೆ ಎಂದು ಟೀಕಿಸಿದರು.</p>
]]></content:encoded>
					
		
		
			</item>
		<item>
		<title>ಜಾರ್ಖಂಡ್‌: ಮಾವೋವಾದಿಗಳ ದಾಳಿಗೆ ಇಬ್ಬರು ಯೋಧರು ಹುತಾತ್ಮ</title>
		<link>https://peepalmedia.com/two-jawans-dead-as-moists-attack/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 15 Aug 2023 06:18:08 +0000</pubDate>
				<category><![CDATA[ದೇಶ]]></category>
		<category><![CDATA[CRPF]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[police]]></category>
		<guid isPermaLink="false">https://peepalmedia.com/?p=25583</guid>

					<description><![CDATA[ರಾಂಚಿ: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭಾಮ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ರಾಜ್ಯ ಪೊಲೀಸ್‌ನ ಜಾರ್ಖಂಡ್ ಜಾಗ್ವಾರ್ ಫೋರ್ಸ್‌ನ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಟೊಂಟೊ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಾವೋವಾದಿಗಳ ಹೊಂಚುದಾಳಿಯಲ್ಲಿ ಇಬ್ಬರು ಯೋಧರಾದ ಅಮಿತ್ ತಿವಾರಿ ಮತ್ತು ಗೌತಮ್ ಕುಮಾರ್ ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಸಿಂಗ್‌ಭಾಮ್ ಎಸ್‌ಪಿ ಅಶುತೋಷ್ ಶೇಖರ್ ಹೇಳಿದ್ದಾರೆ. ಘಟನೆಯ ಸಂಪೂರ್ಣ ಮಾಹಿತಿ ಹೊರಬೀಳಬೇಕಿದೆ ಎಂದರು. ಕೆಲವು ದಿನಗಳ ಹಿಂದೆ ಇದೇ [&#8230;]]]></description>
										<content:encoded><![CDATA[
<p>ರಾಂಚಿ: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭಾಮ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ರಾಜ್ಯ ಪೊಲೀಸ್‌ನ ಜಾರ್ಖಂಡ್ ಜಾಗ್ವಾರ್ ಫೋರ್ಸ್‌ನ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>



<p>ಟೊಂಟೊ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಾವೋವಾದಿಗಳ ಹೊಂಚುದಾಳಿಯಲ್ಲಿ ಇಬ್ಬರು ಯೋಧರಾದ ಅಮಿತ್ ತಿವಾರಿ ಮತ್ತು ಗೌತಮ್ ಕುಮಾರ್ ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಸಿಂಗ್‌ಭಾಮ್ ಎಸ್‌ಪಿ ಅಶುತೋಷ್ ಶೇಖರ್ ಹೇಳಿದ್ದಾರೆ. ಘಟನೆಯ ಸಂಪೂರ್ಣ ಮಾಹಿತಿ ಹೊರಬೀಳಬೇಕಿದೆ ಎಂದರು. ಕೆಲವು ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದರು. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.</p>
]]></content:encoded>
					
		
		
			</item>
	</channel>
</rss>
