<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>pramod mutalik &#8211; Peepal Media</title>
	<atom:link href="https://peepalmedia.com/tag/pramod-mutalik/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 19 Feb 2024 06:41:17 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>pramod mutalik &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಕ್ರೈಸ್ತರು ಲಂಬಾಣಿ ತಾಂಡಾಕ್ಕೆ ಬಂದ್ರೆ ಒದ್ದು ಓಡಿಸ್ತಿವಿ: ಮುತಾಲಿಕ್ ವಿವಾದಾತ್ಮಕ ಹೇಳಿಕೆ</title>
		<link>https://peepalmedia.com/christians-kick-bandra-to-lambani-tanda-muthaliks-controversial-statement/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 19 Feb 2024 06:41:16 +0000</pubDate>
				<category><![CDATA[ರಾಜ್ಯ]]></category>
		<category><![CDATA[christian]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[lambani]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[pramod mutalik]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=36211</guid>

					<description><![CDATA[ಹೊಸಪೇಟೆ: ಕ್ರೈಸ್ತರು ಲಂಬಾಣಿ ತಾಂಡಾ ಪ್ರವೇಶಿಸಿದರೆ ಮತ್ತು ಮತಾಂತರಕ್ಕೆ ಪ್ರಯತ್ನ ಮಾಡಿದರೆ ನಮ್ಮ ಶ್ರೀರಾಮ ಸೇನೆ ಪಡೆಯ ಹುಡುಗರು ಒದ್ದು ಓಡಿಸುತ್ತಾರೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಿಮ್ಮ ರಾಜ್ಯದಲ್ಲಿ 3,600ರಷ್ಟು ಲಂಬಾಣಿ ತಾಂಡಾಗಳಿವೆ. ಶೇ 50ರಷ್ಟು ತಾಂಡಾಗಳಿಗೆ ಕ್ರೈಸ್ತರು ಪ್ರವೇಶಿಸಿ ಮತಾಂತರ ಯತ್ನದಲ್ಲಿ ತೊಡಗಿರುವುದು ನಮ್ಮ ಗಮನಕ್ಕೆ ಬಂದಿದೆ ಅಂಥವರು ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ಶ್ರೀರಾಮ ಸೇನೆ ಸಂಘಟನೆ ವಿಶೇಷ ಪಡೆ ಬುದ್ಧಿ ಕಲಿಸಲಿದೆ [&#8230;]]]></description>
										<content:encoded><![CDATA[
<p>ಹೊಸಪೇಟೆ: ಕ್ರೈಸ್ತರು ಲಂಬಾಣಿ ತಾಂಡಾ ಪ್ರವೇಶಿಸಿದರೆ ಮತ್ತು ಮತಾಂತರಕ್ಕೆ ಪ್ರಯತ್ನ ಮಾಡಿದರೆ ನಮ್ಮ ಶ್ರೀರಾಮ ಸೇನೆ ಪಡೆಯ ಹುಡುಗರು ಒದ್ದು ಓಡಿಸುತ್ತಾರೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.</p>



<p><br>ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಿಮ್ಮ ರಾಜ್ಯದಲ್ಲಿ 3,600ರಷ್ಟು ಲಂಬಾಣಿ ತಾಂಡಾಗಳಿವೆ. ಶೇ 50ರಷ್ಟು ತಾಂಡಾಗಳಿಗೆ ಕ್ರೈಸ್ತರು ಪ್ರವೇಶಿಸಿ ಮತಾಂತರ ಯತ್ನದಲ್ಲಿ ತೊಡಗಿರುವುದು ನಮ್ಮ ಗಮನಕ್ಕೆ ಬಂದಿದೆ ಅಂಥವರು ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ಶ್ರೀರಾಮ ಸೇನೆ ಸಂಘಟನೆ ವಿಶೇಷ ಪಡೆ ಬುದ್ಧಿ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದರು.</p>



<p><br>ಕ್ರೈಸ್ತರ ಯಾವುದೇ ರೀತಿಯ ಭಜನೆ, ಪ್ರಾರ್ಥನೆ ಚರ್ಚ್‌ ಒಳಗೆ ಇರಲಿ. ಹೊರಗಡೆ, ತಾಂಡಾಗಳಿಗೆ ಬಂದು ಮೋಸ ಮಾಡುವ ಕೆಲಸವನ್ನು ಏಸು ಸಹ ಒಪ್ಪುವುದಿಲ್ಲ. ತಾಂಡಾಗಳ ಬಡತನ, ಅನಕ್ಷರತೆಯನ್ನು ಬಳಸಿಕೊಂಡು, ಅವರಿಗೆ ಆಸೆ ತೋರಿಸಿ ಮಾಡುವ ಮತಾಂತರ ಯತ್ನವನ್ನು ತಕ್ಷಣ ನಿಲ್ಲಿಸಬೇಕು. ನಮ್ಮ ಧರ್ಮ, ನಮ್ಮ ದೇವರು ನಮಗೆಲ್ಲ ಶಾಂತಿ, ಸುಖ ಕೊಡುತ್ತಿದ್ದಾನೆ. ಏನೇನೋ ತಪ್ಪು ಮಾಹಿತಿ ನೀಡಿ ಈ ರೀತಿ ಮತಾಂತರ ಮಾಡುವುದನ್ನು ಸರ್ಕಾರ ಹತ್ತಿಕ್ಕಬೇಕು. ಮತಾಂತರ ನಿಷೇಧ ಕಾಯ್ದೆ ಈಗಲೂ ಜಾರಿಯಲ್ಲಿದ್ದು, ಅದನ್ನು ಪಾಲಿಸಬೇಕು’ ಎಂದು ಮುತಾಲಿಕ್ ಕರೆ ನೀಡಿದರು.</p>



<p><br><strong>2024ರ ನಂತರ ಭಾರತ ಸಂಪೂರ್ಣ ಹಿಂದೂ ರಾಷ್ಟ್ರ</strong></p>



<p><br>ಪ್ರಧಾನಿ ನರೇಂದ್ರ ಮೋದಿ ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ. 2014ರ ಹಿಂದಿನ ಪ್ರಧಾನಿಗಳು ದರ್ಗಾ, ಚರ್ಚ್‌ಗಳಿಗೆ ಹೋಗಿದ್ದರು. ಆದರೆ ಹಣೆಗೆ ವಿಭೂತಿ ಬಳಿದುಕೊಂಡು ದೇವಸ್ಥಾನಕ್ಕೆ ಹೋದವರೆಂದರೆ ನರೇಂದ್ರ ಮೋದಿ ಮಾತ್ರ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ 400ಕ್ಕಿಂತ ಅಧಿಕ ಸ್ಥಾನ ಗಳಿಸುವುದು ಶತಃಸಿದ್ಧ. 2024ರ ನಂತರ ಭಾರತ ಹಿಂದೂ ರಾಷ್ಟ್ರ ಆಗುವುದು ಸಹ ನಿಶ್ಚಿತ’ ಎಂದು ಮುತಾಲಿಕ್ ಎಂದರು.</p>



<p><br>ಹಿಂದೂ ರಾಷ್ಟ್ರ ಎಂದಾಗ ಇಲ್ಲಿನ ಮುಸ್ಲಿಮರು ಇದ್ದಾರೆ, ಕ್ರೈಸ್ತರು ಇದ್ದಾರೆ, ಅವರ ಗತಿ ಏನು ಎಂದು ಕೇಳುವವರಿದ್ದಾರೆ. ಅವರು ಇಲ್ಲೇ ಇರುತ್ತಾರೆ, ಬಹುಸಂಖ್ಯಾತರ ಆಚರಣೆ, ಸಂಸ್ಕೃತಿಯನ್ನು ಅವರು ಗೌರವಿಸಿದರೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.</p>



<p><br>‘ರಾಮಮಂದಿರದಲ್ಲಿ ಹಿನ್ನೆಲೆಯಲ್ಲಿ ರಾಜಕೀಯ ಅಧಿಕಾರ ಏಕೆ ತೆಗೆದುಕೊಳ್ಳಬಾರದು? ಇಡೀ ದೇಶದಲ್ಲಿ ರಾಮನ ಪರವಾಗಿ ನಿಂತಿದ್ದೇ ಬಿಜೆಪಿ, ಆರೆಸ್ಸೆಸ್‌, ವಿಎಚ್‌ಪಿ, ಶ್ರೀರಾಮ ಸೇನೆಯಂತಹ ಸಂಘಟನೆಗಳು. ನಾವು ತ್ಯಾಗ ಮಾಡಿದ್ದೇವೆ. ಕಾಂಗ್ರೆಸ್ ಬಾಬರನ ಪರವಾಗಿ ನಿಂತಿತ್ತು. ರಾಮನ ಹೆಸರು ಎತ್ತಲು ಸಹ ಕಾಂಗ್ರೆಸಿಗರಿಗೆ ಯೋಗ್ಯತೆ ಇಲ್ಲ. ನಾವು ರಾಮರಾಜ್ಯ ಸ್ಥಾಪಿಸುವ ಸಲುವಾಗಿಯೇ ರಾಮನ ಹೆಸರು ಹೇಳುತ್ತೇವೆಯೇ ಹೊರತು ಸ್ವಾರ್ಥಕ್ಕಾಗಿ ಅಲ್ಲ. ನಾವೂ ರಾಮಮಂದಿರ ನಿರ್ಮಿಸುತ್ತೇವೆ ಎಂದು ಕಾಂಗ್ರೆಸ್‌ನವರು ಹೇಳುವುದು ಬರೀ ಬುರುಡೆ. ಬಜೆಟ್‌ನಲ್ಲಿ ಇದಕ್ಕಾಗಿ ಒಂದು ರೂಪಾಯಿ ಸಹ ನೀಡಿಲ್ಲ. ಮುಸ್ಲಿಮರಿಗೆ, ಕ್ರೈಸ್ತರಿಗೆ ಹಣ ಇಡಲು ನಿಮಗೆ ಸಾಧ್ಯವಿದೆ. ರಾಮನ ದೇವಸ್ಥಾನಕ್ಕೆ ಏಕೆ ಹಣವಿಲ್ಲ ಎಂದು ಅವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.</p>
]]></content:encoded>
					
		
		
			</item>
		<item>
		<title>ಸೌಜನ್ಯ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ : ಪ್ರಮೋದ್ ಮುತಾಲಿಕ್</title>
		<link>https://peepalmedia.com/attempts-are-being-made-to-close-the-courtesy-case/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 17 Aug 2023 10:26:34 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[pramod mutalik]]></category>
		<category><![CDATA[Soujanya murder case]]></category>
		<guid isPermaLink="false">https://peepalmedia.com/?p=25724</guid>

					<description><![CDATA[ಪ್ರಕರಣದ ತನಿಖೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣ ಅತ್ಯಂತ ಸೂಕ್ಷ್ಮ ಪ್ರಕರಣವಾಗಿದ್ದು, ಮೇಲ್ನೋಟಕ್ಕೇ ತನಿಖೆಯಲ್ಲಿ ಲೋಪ ಮತ್ತು ವ್ಯವಸ್ಥಿತ ಪಿತೂರಿ ಕಂಡುಬರುತ್ತಿದೆ. ಆ ಮೂಲಕ ಈ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕುವ ಯತ್ನಗಳು ಈವರೆಗೆ ಸಾಕಷ್ಟು ನಡೆದಿವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅನುಮಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸುಮಾರು 40,000 ಮಹಿಳೆಯರು ಕಾಣೆಯಾಗಿದ್ದು 45,000 [&#8230;]]]></description>
										<content:encoded><![CDATA[
<p><strong>ಪ್ರಕರಣದ ತನಿಖೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್</strong></p>



<p>ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣ ಅತ್ಯಂತ ಸೂಕ್ಷ್ಮ ಪ್ರಕರಣವಾಗಿದ್ದು, ಮೇಲ್ನೋಟಕ್ಕೇ ತನಿಖೆಯಲ್ಲಿ ಲೋಪ ಮತ್ತು ವ್ಯವಸ್ಥಿತ ಪಿತೂರಿ ಕಂಡುಬರುತ್ತಿದೆ. ಆ ಮೂಲಕ ಈ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕುವ ಯತ್ನಗಳು ಈವರೆಗೆ ಸಾಕಷ್ಟು ನಡೆದಿವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅನುಮಾನ ವ್ಯಕ್ತಪಡಿಸಿದ್ದಾರೆ.</p>



<p>ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸುಮಾರು 40,000 ಮಹಿಳೆಯರು ಕಾಣೆಯಾಗಿದ್ದು 45,000 ಅಪ್ರಾಪ್ತರು ಗರ್ಭಿಣಿಯಾಗಿದ್ದಾರೆ. ಇದೊಂದು ಭಯಾನಕ ಸ್ಥಿತಿಯಾಗಿದ್ದು ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸೂಕ್ತ ತನಿಖೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.</p>



<p>ಇದೇ ವೇಳೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಮೋದ್ ಮುತಾಲಿಕ್ &#8220;ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಒಂದರಲ್ಲೇ ಕಳೆದ 11 ವರ್ಷಗಳಲ್ಲಿ 434 ಮಹಿಳೆಯರು ಕಾಣೆಯಾಗಿದ್ದು ಸುಮಾರು 452 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಕೃತ್ಯಗಳ ಬಗ್ಗೆ ಲಘುವಾಗಿ ಪರಿಗಣಿಸುವುದು ಯಾವುದೇ ಪಕ್ಷದ ಸರ್ಕಾರಕ್ಕೂ ಒಳ್ಳೆಯದಲ್ಲ&#8221; ಎಂದಿದ್ದಾರೆ.</p>



<p>ಸೌಜನ್ಯ ಪ್ರಕರಣದಲ್ಲಿ 11 ವರ್ಷ ಜೈಲು ಶಿಕ್ಷೆ ಅನುಭವಿಸಿದ ಸಂತೋಷ್ ರಾವ್ ನಿರಪರಾಧಿ ಎಂದು ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಸೌಜನ್ಯ ಪ್ರಕರಣದಲ್ಲಿ ಅಮಾಯಕ ಸಂತೋಷ್ ನನ್ನು ಅರೆಸ್ಟ್ ಮಾಡಿ, ನಂತರ ಬಿಡುಗಡೆ ಮಾಡಿದ್ದಾರೆ. ನಿರ್ಲಜ್ಜ ಪೊಲೀಸ್ ವ್ಯವಸ್ಥೆ ಇದಕ್ಕೆ ಕಾರಣ. ಪೊಲೀಸರ ಭ್ರಷ್ಟಾಚಾರಕ್ಕೆ ಸಂತೋಷ್‌ ರಾವ್ ಬಲಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.</p>



<p>ಸೌಜನ್ಯ ಪ್ರಕರಣ ಸಂಪೂರ್ಣ ತನಿಖೆಯಾಗಬೇಕು ಎಂದು ಆಗ್ರಹಿಸಿದ ಅವರು, ಈ ಪ್ರಕರಣದಲ್ಲಿ ರಾಜಕಾರಣಿಗಳು, ಪೊಲೀಸರು ಪಾಪಿಷ್ಠರು. ಈ ಎಲ್ಲ ವ್ಯವಸ್ಥೆಗೆ ಪೊಲೀಸರು ಹಾಗೂ ಸರ್ಕಾರವೇ ಕಾರಣ. ಪೊಲೀಸರ ಮನೆ ಹೆಣ್ಣು ಮಕ್ಕಳ ಮೇಲೆ ಏನಾದರೂ ಆದರೆ ಸುಮ್ಮನೆ ಇರ್ತಿರಾ ಎಂದು ಮುತಾಲಿಕ್ ಪ್ರಶ್ನೆ ಮಾಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಟಿಪ್ಪು ಸುಲ್ತಾನ್ ಪ್ರತಿಮೆಯನ್ನು ಸ್ಥಾಪಿಸಿದರೆ ನಾವು ಬುಡಸಮೇತ ಕಿತ್ತುಹಾಕುತ್ತೇವೆ : ಪ್ರಮೋದ್ ಮುತಾಲಿಕ್</title>
		<link>https://peepalmedia.com/if-tipu-sultans-statue-is-erected-we-will-pull-it-down-pramod-muthalik/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 15 Nov 2022 10:44:32 +0000</pubDate>
				<category><![CDATA[ಧಾರವಾಡ]]></category>
		<category><![CDATA[ರಾಜ್ಯ]]></category>
		<category><![CDATA[hubballi]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[pramod mutalik]]></category>
		<category><![CDATA[Tanveer Seth]]></category>
		<category><![CDATA[TIPPU SULTHAN]]></category>
		<category><![CDATA[Tipu Sultan&#039;s statue]]></category>
		<guid isPermaLink="false">https://peepalmedia.com/?p=15611</guid>

					<description><![CDATA[ಹುಬ್ಬಳ್ಳಿ: ಮೈಸೂರಿನಲ್ಲಾಗಲಿ ಅಥವಾ ಶ್ರೀರಂಗಪಟ್ಟಣದಲ್ಲಾಗಲಿ ಟಿಪ್ಪು ಸುಲ್ತಾನ್‌ ಪ್ರತಿಮೆಯನ್ನು ಸ್ಥಾಪಿಸುವುದು ಖಚಿತ ಎಂದು ಶಾಸಕ ತನ್ವೀರ್‌ ಸೇಠ್‌ ನೀಡಿದ ಹೇಳಿಕೆಯ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಮೈಸೂರಿನಲ್ಲಾಗಲಿ ಅಥವಾ ಶ್ರೀರಂಗಪಟ್ಟಣದಲ್ಲಾಗಲಿ ಟಿಪ್ಪು ಸುಲ್ತಾನ್ ಅವರ 100 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ತನ್ವೀರ್ ಸೇಠ್ ಆಗ್ರಹಿಸಿದ್ದರು. ಇದನ್ನು ವಿರೋಧಿಸಿರುವ ಪ್ರಮೋದ್ ಮುತಾಲಿಕ್, ಒಂದು ವೇಳೆ ಟಿಪ್ಪು ಸುಲ್ತಾನ್‌ ಪ್ರತಿಮೆಯನ್ನು ಸ್ಥಾಪಿಸಿದ್ದೆಯಾದರೆ, ಬಾಬರಿ ಮಸೀದಿಯನ್ನು ಬೇರುಸಹಿತ ಕಿತ್ತುಹಾಕಿದಂತೆಯೇ, ಟಿಪ್ಪು ಸುಲ್ತಾನ್‌ ಪ್ರತಿಮೆಯನ್ನು ಕಿತ್ತುಹಾಕುತ್ತೇವೆ ಎಂದು [&#8230;]]]></description>
										<content:encoded><![CDATA[
<p><strong>ಹುಬ್ಬಳ್ಳಿ:</strong> ಮೈಸೂರಿನಲ್ಲಾಗಲಿ ಅಥವಾ ಶ್ರೀರಂಗಪಟ್ಟಣದಲ್ಲಾಗಲಿ ಟಿಪ್ಪು ಸುಲ್ತಾನ್‌ ಪ್ರತಿಮೆಯನ್ನು ಸ್ಥಾಪಿಸುವುದು ಖಚಿತ ಎಂದು ಶಾಸಕ ತನ್ವೀರ್‌ ಸೇಠ್‌ ನೀಡಿದ ಹೇಳಿಕೆಯ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.</p>



<p>ಮೈಸೂರಿನಲ್ಲಾಗಲಿ ಅಥವಾ ಶ್ರೀರಂಗಪಟ್ಟಣದಲ್ಲಾಗಲಿ ಟಿಪ್ಪು ಸುಲ್ತಾನ್ ಅವರ 100 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ತನ್ವೀರ್ ಸೇಠ್ ಆಗ್ರಹಿಸಿದ್ದರು. ಇದನ್ನು ವಿರೋಧಿಸಿರುವ ಪ್ರಮೋದ್ ಮುತಾಲಿಕ್, ಒಂದು ವೇಳೆ ಟಿಪ್ಪು ಸುಲ್ತಾನ್‌ ಪ್ರತಿಮೆಯನ್ನು ಸ್ಥಾಪಿಸಿದ್ದೆಯಾದರೆ, ಬಾಬರಿ ಮಸೀದಿಯನ್ನು ಬೇರುಸಹಿತ ಕಿತ್ತುಹಾಕಿದಂತೆಯೇ, ಟಿಪ್ಪು ಸುಲ್ತಾನ್‌ ಪ್ರತಿಮೆಯನ್ನು ಕಿತ್ತುಹಾಕುತ್ತೇವೆ ಎಂದು ಮುತಾಲಿಕ್‌ ವಾಗ್ದಾಳಿ ನಡೆಸಿದ್ದಾರೆ.</p>



<p>ಟಿಪ್ಪು ಧಾರ್ಮಿಕ ಮತಾಂಧರಾಗಿದ್ದರು, ಸಾವಿರಾರು ಹಿಂದೂ ದೇವಾಲಯಗಳನ್ನು ನೆಲಸಮ ಮಾಡಿದ್ದರು, ಈ ಕಾರಣ ಟಿಪ್ಪು ಅವರು ಕರ್ನಾಟಕಕ್ಕೆ ಕಳಂಕವಾಗಿದ್ದರು ಎಂದು ಮುತಾಲೀಕ್‌ ದೂರಿದ್ದಾರೆ.</p>



<p>ಈ ಹಿನ್ನಲೆಯಲ್ಲಿ ಮೈಸೂರು ಅರಸರನ್ನು ಅವಮಾನಿಸುವ ಪ್ರತಿಮೆಯನ್ನು ನಗರದಲ್ಲಿ ಸ್ಥಾಪಿಸಬಾರದು. ಬದಲಿಗೆ ಭಾರತೀಯ ದಾರ್ಶನಿಕ ಶಿಶುನಾಳ್ ಶರೀಫ್ ಮತ್ತು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಪ್ರತಿಮೆಗಳನ್ನು ಸ್ಥಾಪಿಸಿ ಎಂದು ಮುತಾಲಿಕ್‌ ತಿಳಿಸಿದರು.</p>
]]></content:encoded>
					
		
		
			</item>
		<item>
		<title>ಬ್ರಾಹ್ಮಣ ಸಮಾಜ ಮೂರ್ಖ ಸಮಾಜ: ಪ್ರಮೋದ್ ಮುತಾಲಿಕ್</title>
		<link>https://peepalmedia.com/bramhana-samaja-murkha-samaja-pramod-mutalik/</link>
		
		<dc:creator><![CDATA[Peepal Media]]></dc:creator>
		<pubDate>Mon, 17 Oct 2022 10:44:51 +0000</pubDate>
				<category><![CDATA[ಧಾರವಾಡ]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[hubballi]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[pramod mutalik]]></category>
		<guid isPermaLink="false">https://peepalmedia.com/?p=11453</guid>

					<description><![CDATA[ಹುಬ್ಬಳ್ಳಿ: ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ  ಪ್ರಮೋದ್ ಮುತಾಲಿಕ್ ಅವರು ಮುಸ್ಲಿಮರನ್ನು ವಿರೋಧಿಸುವ ಭರದಲ್ಲಿ ಬ್ರಾಹ್ಮಣ ಸಮಾಜವನ್ನು ಮೂರ್ಖ ಸಮಾಜ ಎನ್ನುವ ಮೂಲಕ ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ. ಮುಸ್ಲಿಮರ ವಿರುದ್ಧ ಅಸಹನೆ ಮುಂದುವರೆಸುತ್ತಿರುವ ಪ್ರಮೋದ್ ಮುತಾಲಿಕ್ ಈ ಸಂಬಂಧವಾಗಿ ಬ್ರಾಹ್ಮಣರ ವಿರುದ್ಧ ಕಿಡಿ ಕಾರಿದ್ದಾರೆ. ಬ್ರಾಹ್ಮಣ ಸಮಾಜ ಮೂರ್ಖ ಸಮಾಜ. ರಾಮ್ ರಹೀಮ್ ಮಿಲ್ಕ್ ಡೈರಿಯಲ್ಲಿ‌ ಹಾಲು ತುಪ್ಪ ಖರೀದಿ ಮಾಡುತ್ತಾರೆ. ಮುಸ್ಲಿಮರ ಹತ್ತಿರ ಎಲೆ, ಹೂ ಖರೀದಿ ಮಾಡಿದರೆ ಅಶಾಸ್ತ್ರ ಆಗುತ್ತದೆ. ಶಾಸ್ತ್ರ ಇದನ್ನ ಒಪ್ಪಲ್ಲ. [&#8230;]]]></description>
										<content:encoded><![CDATA[
<p><strong>ಹುಬ್ಬಳ್ಳಿ:</strong> ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ  ಪ್ರಮೋದ್ ಮುತಾಲಿಕ್ ಅವರು ಮುಸ್ಲಿಮರನ್ನು ವಿರೋಧಿಸುವ ಭರದಲ್ಲಿ ಬ್ರಾಹ್ಮಣ ಸಮಾಜವನ್ನು ಮೂರ್ಖ ಸಮಾಜ ಎನ್ನುವ ಮೂಲಕ ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ.</p>



<p>ಮುಸ್ಲಿಮರ ವಿರುದ್ಧ ಅಸಹನೆ ಮುಂದುವರೆಸುತ್ತಿರುವ ಪ್ರಮೋದ್ ಮುತಾಲಿಕ್ ಈ ಸಂಬಂಧವಾಗಿ ಬ್ರಾಹ್ಮಣರ ವಿರುದ್ಧ ಕಿಡಿ ಕಾರಿದ್ದಾರೆ.</p>



<p>ಬ್ರಾಹ್ಮಣ ಸಮಾಜ ಮೂರ್ಖ ಸಮಾಜ. ರಾಮ್ ರಹೀಮ್ ಮಿಲ್ಕ್ ಡೈರಿಯಲ್ಲಿ‌ ಹಾಲು ತುಪ್ಪ ಖರೀದಿ ಮಾಡುತ್ತಾರೆ. ಮುಸ್ಲಿಮರ ಹತ್ತಿರ ಎಲೆ, ಹೂ ಖರೀದಿ ಮಾಡಿದರೆ ಅಶಾಸ್ತ್ರ ಆಗುತ್ತದೆ. ಶಾಸ್ತ್ರ ಇದನ್ನ ಒಪ್ಪಲ್ಲ. ದೇವರು ಶಾಪ ಕೊಡುತ್ತಾನೆ ಎಂದು ಮುಸ್ಲಿಮರನ್ನು ವಿರೋಧಿಸುವ ಭರದಲ್ಲಿ ಬ್ರಾಹ್ಮಣ ಸಮಾಜವನ್ನು ಅವಹೇಳನ ಮಾಡಿದ್ದಾರೆ. </p>
]]></content:encoded>
					
		
		
			</item>
	</channel>
</rss>
