<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>prathap simha &#8211; Peepal Media</title>
	<atom:link href="https://peepalmedia.com/tag/prathap-simha/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 16 Nov 2022 11:34:07 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>prathap simha &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಹೂಡಿಕೆ, ಅಭಿವೃದ್ಧಿ ಹೆಸರಲ್ಲಿ ಸರ್ಕಾರದಿಂದ ಕೋಟಿ ಕೋಟಿ ಲೂಟಿ: ಎಂ. ಲಕ್ಷ್ಮಣ್‌ ಗಂಭೀರ ಆರೋಪ</title>
		<link>https://peepalmedia.com/crores-looted-by-the-government-in-the-name-of-investment-and-development-m-laxman-is-a-serious-charge/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 16 Nov 2022 11:34:05 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[D K shivakumar]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[KPCC spokesperson]]></category>
		<category><![CDATA[M. Laxman]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[prathap simha]]></category>
		<category><![CDATA[siddaramayya]]></category>
		<category><![CDATA[sriramulu]]></category>
		<guid isPermaLink="false">https://peepalmedia.com/?p=15674</guid>

					<description><![CDATA[ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆ ಮತ್ತು ಅಭಿವೃದ್ಧಿ ಕಾಮಗಾರಿ ಹೆಸರಲ್ಲಿ ರಾಜ್ಯ ಸರ್ಕಾರವು ಕೋಟಿ, ಕೋಟಿ ಹಣ ಲೂಟಿ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ಈ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರ್ಕಾರ ವಾರದ ಹಿಂದೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 10 ಲಕ್ಷ ಕೋಟಿ ಹೂಡಿಕೆ ಒಪ್ಪಂದ ಮಾಡಿಕೊಂಡಿದ್ದು 7 ಲಕ್ಷ ಉದ್ಯೋಗ ಸೃಷ್ಟಿ ಎಂದು ಹೇಳಿದ್ದಾರೆ. ಮುರುಗೇಶ್ ನಿರಾಣಿ ಅವರು [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಜಾಗತಿಕ ಬಂಡವಾಳ ಹೂಡಿಕೆ ಮತ್ತು ಅಭಿವೃದ್ಧಿ ಕಾಮಗಾರಿ ಹೆಸರಲ್ಲಿ ರಾಜ್ಯ ಸರ್ಕಾರವು ಕೋಟಿ, ಕೋಟಿ ಹಣ ಲೂಟಿ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.</p>



<p>ಈ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರ್ಕಾರ ವಾರದ ಹಿಂದೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 10 ಲಕ್ಷ ಕೋಟಿ ಹೂಡಿಕೆ ಒಪ್ಪಂದ ಮಾಡಿಕೊಂಡಿದ್ದು 7 ಲಕ್ಷ ಉದ್ಯೋಗ ಸೃಷ್ಟಿ ಎಂದು ಹೇಳಿದ್ದಾರೆ. ಮುರುಗೇಶ್ ನಿರಾಣಿ ಅವರು 2010 ಹಾಗೂ 2012ರಲ್ಲೂ ಕೈಗಾರಿಕಾ ಸಚಿವರಾಗಿದ್ದರು. ಆಗಲೂ ಇದೇ ರೀತಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿದ್ದರು. 2010ರಲ್ಲಿ 3 ಲಕ್ಷ ಕೋಟಿ ಹೂಡಿಕೆ ಎಂದು ಘೋಷಣೆ ಮಾಡಿದ್ದರು. ಇಲ್ಲಿವರೆಗೂ ಅದರಲ್ಲಿ ಜಾರಿ ಆಗಿದ್ದು ಶೇ.14ರಷ್ಟು ಮಾತ್ರ. 3 ಲಕ್ಷ ಉದ್ಯೋಗ ಸೃಷ್ಟಿ ಎಂದಿದ್ದರು ಆದರೆ ಇಲ್ಲಿಯವರೆಗೂ ಸಿಕ್ಕಿರುವ ಕೆಲಸ 4 ಸಾವಿರ ಮಾತ್ರ. ಇನ್ನು 2012ರಲ್ಲಿ ಘೋಷಣೆ ಆಗಿದ್ದು 6.77 ಲಕ್ಷ ಕೋಟಿ, ಹೂಡಿಕೆ ಆಗಿದ್ದು ಶೇ.8ರಷ್ಟು ಅಂದರೆ 54 ಸಾವಿರ ಕೋಟಿ. ಅಂದು 4.5 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದಿದ್ದರು. ಆದರೆ ಸಿಕ್ಕಿದ ಉದ್ಯೋಗ ಕೇವಲ 3500 ಮಾತ್ರ ಎಂದು ಮಾಹಿತಿ ನೀಡಿದರು.</p>



<p>ಈಗ 2022ರಲ್ಲಿ ಘೋಷಣೆ ಆಗಿರುವುದು 9.89 ಲಕ್ಷ ಕೋಟಿ ಅದರಲ್ಲಿ ಮಾಡಿಕೊಂಡಿರುವ ಒಪ್ಪಂದ 2.83 ಲಕ್ಷ ಕೋಟಿ ಎಂದು ಹೇಳುತ್ತಿದ್ದು, 7 ಲಕ್ಷ ಮಂದಿಗೆ ಉದ್ಯೋಗ ಸಿಗಲಿದೆ ಎಂದು ಸರ್ಕಾರ ಹೇಳುತ್ತಿದೆ. ಇದೆಲ್ಲವೂ ರಾಜಕೀಯ ಗಿಮಿಕ್ ಆಗಿದೆ ಎಂದು ಲಕ್ಷ್ಮಣ್ ಅವರು ದೂರಿದ್ದಾರೆ.</p>



<p>ಈ ಬಂಡವಾಳ ಹೂಡಿಕೆದಾರರ ಕಾರ್ಯಕ್ರಮಕ್ಕಾಗಿ ಪ್ರಪಂಚದಾದ್ಯಂತ ಇವರು ಪ್ರಚಾರಕ್ಕಾಗಿ ಖರ್ಚು ಮಾಡಿರುವ ಹಣ 300 ಕೋಟಿ. ಭೂ ಬ್ಯಾಂಕ್ ಮೂಲಕ 1.5 ಲಕ್ಷ ಎಕರೆ ಮೀಸಲಿಟ್ಟಿರುವುದಾಗಿ ಹೇಳಿದ್ದಾರೆ. ಈ ಹಿಂದೆಯೂ ಭೂ ಬ್ಯಾಂಕ್ ಎಂದು ಮಾಡಿ ಕೈಗಾರಿಕೆಗೂ ನೀಡಲಿಲ್ಲ, ಎಲ್ಲವೂ ರಿಯಲ್ ಎಸ್ಟೇಟ್ ಪಾಲಾಯಿತು. ಈಗ ದೇವನಹಳ್ಳಿ ಸುತ್ತಮುತ್ತ ಸಾವಿರಾರು ಎಕರೆಯನ್ನು ರೈತರಿಂದ ಕಸಿದು ರಿಯಲ್ ಎಸ್ಟೇಟ್ ನವರಿಗೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>



<p>ಸಚಿವ ಮುರುಗೇಶ್ ನಿರಾಣಿ ಅವರ ಪುತ್ರ ಈ ಕಾರ್ಯಕ್ರಮದಲ್ಲಿ ದೊಡ್ಡ ಪಾತ್ರ ವಹಿಸಿದ್ದರು. ಆ ಸಮಿತಿಯಲ್ಲಿ ಅವರು ಇದ್ದು, ಕಾರ್ಯಕ್ರಮದ ಆಯೋಜನೆಯಲ್ಲೂ ಅವರ ಪಾತ್ರವಿತ್ತು. ಸಚಿವರ ಪುತ್ರ ಎನ್ನುವುದು ಹೊರತಾಗಿ ಉಳಿದ ಯಾವುದೇ ಅರ್ಹತೆ ಅವರಿಗೆ ಇಲ್ಲವಾಗಿದೆ. ಅವರನ್ನು ಯಾಕೆ ಇದರಲ್ಲಿ ಭಾಗವಹಿಸಲು ಅವಕಾಸ ನೀಡಿ ಅವರ ಮೂಲಕ ಯಾರಿಗೆ ಎಷ್ಟು ಎಕರೆ ಜಮೀನು ಕೊಡಿಸಿದ್ದೀರಿ ಎಂದು ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.</p>



<p>ಈ ಕಾರ್ಯಕ್ರಮದಲ್ಲಿ ಅತಿಥಿಗಳ ವಾಸ್ತವ್ಯಕ್ಕೆ ಸ್ಟಾರ್ ಹೋಟೇಲ್ ಗಳಿಗಾಗಿ 85 ಕೋಟಿಯಷ್ಟು ಖರ್ಚು ಮಾಡಿದ್ದಾರೆ. ಮೊನ್ನೆ ಪ್ರಧಾನಿ ಅವರು 4 ಗಂಟೆ ಆಗಮಿಸಿದ್ದಕ್ಕೆ ಜಾಹೀರಾತು ಹೊರತುಪಡಿಸಿ 48 ಕೋಟಿ ಖರ್ಚು ಮಾಡಲಾಗಿದೆ. ಇದು ಜನಸಾಮಾನ್ಯರ ಹಣವಾಗಿದೆ. ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ ಸರ್ಕಾರ ಎಂದು ಟೀಕಿಸಿದರು.</p>



<p>ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 144ಪೊಲೀಸ್ ಠಾಣೆಗಳಿವೆ. 44 ಟ್ರಾಫಿಕ್ ಪೊಲೀಸ್ ಠಾಣೆಗಳಿವೆ. ಒಟ್ಟು 188 ಠಾಣೆಗಳಿವೆ. ಇವುಗಳಿಂದ ಭ್ರಷ್ಟಾಚಾರದ ಮೂಲಕ ಬರುತ್ತಿರುವ ಆದಾಯ ವಾರ್ಷಿಕವಾಗಿ 250 ಕೋಟಿ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಹುದ್ದೆಗೆ 1.50 ಕೋಟಿ. ಉಪ್ಪಾರಪೇಟೆ ಠಾಣೆಯಲ್ಲಿ 1.25 ಕೋಟಿ, ಬಸವೇಶ್ವರ ನಗರ 1 ಕೋಟಿ. ಕೇವಲ ವರ್ಗಾವಣೆ ಧಂದೆಯಲ್ಲಿ 188 ಪೊಲೀಸ್ ಠಾಣೆಗಳ ಮೂಲಕ 250 ಕೋಟಿ ವಸೂಲಿ ಮಾಡಲಾಗಿದೆ. ಈ ವಿಚಾರವನ್ನು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಹಸ್ಯವಾಗಿ ನೀಡಿರುವ ಮಾಹಿತಿ. ಈ ವಿಚಾರ ತನಿಖೆ ಮೂಲಕ ಬಹಿರಂಗವಾಗಬೇಕು ಎಂದು ಒತ್ತಾಯಿಸಿದರು.</p>



<p>ಪೊಲೀಸ್ ಠಾಣೆಗಳಿಂದ ಪ್ರತಿನಿತ್ಯ ಆಗುತ್ತಿರುವ ವಸೂಲಿ 5 ಕೋಟಿ. ತಿಂಗಳಿಗೆ 150 ಕೋಟಿ ವಸೂಲಿ ಆಗುತ್ತಿದೆ. ಕಳೆದ ಮೂರುವರೆ ವರ್ಷಗಳಿಂದ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾದ ನಂತರ ಸುಮಾರು 1 ಲಕ್ಷ ಕೋಟಿ ವಸೂಲಿ ಮಾಡಲಾಗಿದೆ. ಇದು ಹಾಲಿ 6 ಸಚಿವರು ಇಬ್ಬರು ಆಪ್ತರ ಬಳಿ ಈ ಹಣವಿದೆ. ಈ ವಿಚಾರವಾಗಿ ಹೈಕೋರ್ಟ್ ಹಾಗು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ, ಇಡಿ ಅಥವಾ ಸಿಬಿಐ ಮೂಲಕ ತನಿಖೆ ಆದರೆ 8 ಜನರ ಹೆಸರನ್ನು ನಾವು ನೀಡುತ್ತೇವೆ ಎಂದು ತಿಳಿಸಿದರು.</p>



<p>ಇಡಿ ಅವರು ಸಣ್ಣ ಪುಟ್ಟ ಪ್ರಕರಣ ಇಟ್ಟುಕೊಂಡು ಅವರು ಸಾಯುವ ವರೆಗೂ ಬಿಡುವುದಿಲ್ಲ. ನೀವು ಈ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಿ. ಬೊಮ್ಮಾಯಿ ಅವರೇ ನೀವು ನಿಮ್ಮ ಮೂಗಿನ ನೇರಕ್ಕೆ ಎಲ್ಲವೂ ನಡೆಯುತ್ತಿದೆ. ನಿಮ್ಮ ಸುತ್ತಮುತ್ತಲಿನವರೇ ಈ 1 ಲಕ್ಷ ಕೋಟಿ ಒಡೆಯರು ಎಂದು ಹೇಳಿದರು.</p>



<p>ಬಿಬಿಎಂಪಿ ವ್ಯಾಪ್ತಿಯಲ್ಲಿ 15 ಸಾವಿರ ಕಿ.ಮೀ ರಸ್ತೆಗಳಿದ್ದು, 32 ಸಾವಿರ ರಸ್ತೆಗುಂಡಿಗಳಿವೆ ಎಂದು ಸರ್ಕಾರ ಹೈಕೋರ್ಟ್ ಗೆ ನೀಡಿರುವ ವರದಿಯಲ್ಲಿ ತಿಳಿಸಲಾಗಿದೆ. ಈ ಪೈಕಿ 10 ಸಾವಿರ ರಸ್ತೆಗುಂಡಿ ಮುಚ್ಚಲಾಗಿದೆ ಎಂದು ಹೇಳಿದ್ದಾರೆ. ಅದಕ್ಕೆ ಖರ್ಚಾಗಿರುವ ಹಣ 790 ಕೋಟಿ. ಇನ್ನು ಉಳಿದ 22 ಸಾವಿರ ಕೋಟಿ ರಸ್ತೆಗುಂಡಿ ಮುಚ್ಚಲು 1500 ಕೋಟಿ ಬೇಕಾಗುತ್ತದೆ. ಒಟ್ಟಾರೆ 2200 ಕೋಟಿ ಯನ್ನು ರಸ್ತೆ ಗುಂಡಿ ಮುಚ್ಚಲು ಬೇಕಾಗಿದೆ ಎಂದು ತಿಳಿಸಿದರು.</p>



<p>ಕೇಂದ್ರದ ಇಂಡಿಯನ್ ರೋಡ್ ಕಾಂಗ್ರೆಸ್ ಸಂಸ್ಥೆ ಪ್ರಕಾರ 1 ಕಿ.ಮೀ ರಸ್ತೆಯ ಡಾಂಬರೀಕರಣಕ್ಕೆ 1.5 ಕೋಟಿ ವೆಚ್ಚ ಬೀಳುತ್ತದೆ. ಇವರು 1 ಕಿ.ಮೀ ರಸ್ತೆಯ ರಸ್ತೆಗುಂಡಿ ಮುಚ್ಚಲು 2.25 ಕೋಟಿ ವೆಚ್ಚ ಮಾಡಿದ್ದಾರೆ. ಈ ಸರ್ಕಾರದಲ್ಲಿ ಯಾವ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದರು.</p>



<p>ಬೊಮ್ಮಾಯಿ ಅವರೇ ನೀವು ಸಂಕಲ್ಪ ಯಾತ್ರೆ ಮಾಡಲು ಹೊರಟಿದ್ದೀರಿ. ನಿಮ್ಮ ಸಂಕಲ್ಪ ಯಾತ್ರೆಯಲ್ಲಿ 3 ಗಂಟೆ ಭಾಷಣದಲ್ಲಿ ಎರಡೂವರೆ ಗಂಟೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಬೈಯ್ಯಲು ಮೀಸಲಿಡುತ್ತೀರಿ. ಈಗ ನೀವು ಇದಕ್ಕೆ ಉತ್ತರ ನೀಡಬೇಕು ಎಂದರು.</p>



<p>ಮೈಸೂರಿನಲ್ಲಿ ಕಿಡಿ ಹೊತ್ತಿಸಲು ಪ್ರತಾಪ್ ಸಿಂಹ ಎಂಬ ಸಂಸದರಾಗಿದ್ದಾರೆ. ಈ ಹಿಂದಿನ ಸರ್ಕಾರಗಳು ಮೈಸೂರು ಸಿಟಿಯನ್ನು ಪಾರಂಪರಿಕ ನಗರಿ ಎಂದು ಪರಿಗಣಿಸಬೇಕು ಎಂದು ಆರ್ಕಿಯಾಲಜಿ ಇಲಾಖೆಗೆ ಪ್ರಸ್ತಾವನೆ ನೀಡಲಾಗಿತ್ತು. ಈ ಪರ್ಸ್ತಾವನೆಯಲ್ಲಿ 350 ಕಟ್ಟಡಗಳನ್ನು ಪಾರಂಪರಿಕ ಕಟ್ಟಡ ಎಂದು ಗುರುತಿಸಿದ್ದು, ಇದರಲ್ಲಿ ಅರಮನೆ ಸೇರಿದಂತೆ 180 ಕಟ್ಟಡಗಳು ಸರ್ಕಾರಿ ಕಟ್ಟಡಗಳಾಗಿವೆ ಎಂದು ಮಾಹಿತಿ ನೀಡಿದರು.</p>



<p>ಇಡೀ ಪ್ರಪಂಚದಲ್ಲಿ 8 ಬಗೆಯ ಆರ್ಕಿಟೆಕ್ಚರ್ ಗಳನ್ನು ಬಳಸಲಾಗುತ್ತಿದೆ. ಮೈಸೂರು ಅರಮನೆಯ ಮೇಲ್ಬಾಗದ ಗೋಪುರವನ್ನು ಮೋಘಲರ ಆರ್ಕಿಟೆಕ್ಚರ್ ಎಂದು ಕರೆಯುತ್ತೇವೆ. ಬ್ರಿಟನ್ ಸೇರಿದಂತೆ ಪ್ರಪಂಚದಾದ್ಯಂತ ಈ ವಿನ್ಯಾಸ ಬಳಸಲಾಗಿದೆ. ಮೈಸೂರು ಅರಮನೆ ವಿನ್ಯಾಸ ಆಧಾರದ ಮೇಲೆ ಅಲ್ಲಿನ ಪಾಲಿಕೆ, ಶಾಸಕರು ಸೇರಿ ಅರಮನೆಯ ಮೂರು ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ&nbsp; ನಿರ್ಮಾಣ ಮಾಡಬೇಕಾದರೂ ಅದು ಅರಮನೆಯ ಪಾರಂಪರಿಕ ವಿನ್ಯಾಸವನ್ನೇ ಹೊಂದಿರ ಬೇಕು ಎಂದು ತೀರ್ಮಾನಿಸಲಾಗಿದೆ. ಇದು ಮೈಸೂರು ಪಾಲಿಕೆಯ ಬೈಲಾದಲ್ಲೂ ಇದೆ. ಒಂದು ಶೌಚಾಲಯ ಕಟ್ಟಿದರೂ ಅದರ ವಿನ್ಯಾಸ ಈ ರೀತಿ ಇರಬೇಕು ಎಂದು ಕಾನೂನು ಇದೆ ಎಂದು ಹೇಳಿದರು.</p>



<p>ಈ ಭಾಗದ ಮೂವರು ಶಾಸಕರ ಪೈಕಿ ಬಿಜೆಪಿ ಶಾಸಕ ರಾಮದಾಸ್ ಅವರು 18 ಬಸ್ ಶೆಲ್ಟರ್ ಗಳನ್ನು ತಮ್ಮ ಅನುದಾನದಲ್ಲಿ ಹಣ ನೀಡಿದ್ದು, 12 ಬಸ್ ಶೆಲ್ಟರ್ ನಿರ್ಮಾಣವಾಗಿವೆ. ಇವುಗಳ ಡೂಮ್ ಸ್ಟಕ್ಚರ್ ಏನು ಎಂದು ಅರ್ಥ ಮಾಡಿಕೊಳ್ಲುವ ಯೋಗ್ಯತೆ ಇಲ್ಲದ ವ್ಯಕ್ತಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೇಲೆ ಒತ್ತಡ ತಂದು ಪಾಲಿಕೆ ಹಾಗೂ ರಾಜ್ಯ ರಸ್ತೆ ಸಂಸ್ಥೆಗೆ ಪತ್ರ ಬರೆದು ಅದರಲ್ಲಿ ಇದು ಧರ್ಮವನ್ನು ಬಿಂಬಿಸುವ ವಿನ್ಯಾಸವಾಗಿದೆ. ಹೀಗಾಗಿ ಇದನ್ನು ತೆರವುಗೊಳಿಸಬೇಕು ಎಂದು ಅಧಿಕಾರಿ ಕೈಯಲ್ಲಿ ಸಂಸದರು ಪತ್ರ ಬರೆಸುತ್ತಾರೆ ಎಂದು ಹೇಳಿದರು.</p>



<p>ಇದಕ್ಕೆ ರಾಮದಾಸ್ ಅವರು ಸ್ಪಷ್ಟೀಕರಣ ನೀಡಿದ್ದು, ಇದು ಯಾವುದೇ ಧರ್ಮದ ಪ್ರತೀಕವಾಗಿಲ್ಲ. ಇದಕ್ಕೂ ಮಸೀದಿಗೆ ಸಂಬಂಧವಿಲ್ಲ ಹಾಗಾಗಿ ಇದನ್ನು ಒಡೆಯುವ ಪ್ರಶ್ನೆಯೇ ಇಲ್ಲ. ಪ್ರತಾಪ್ ಸಿಂಹ ಅವರು ರಾಜಕೀಯ ಮಾಡುವ ನಿಟ್ಟಿನಲ್ಲಿ ಹೇಳಿಕೆ ನೀಡುತ್ತಿದ್ದಾರೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ ಎಂದರು.</p>



<p>ಪ್ರತಾಪ್ ಸಿಂಹ ಕಳೆದ ಎಂಟು ವರ್ಷಗಳಿಂದ ಕೊಡಗನ್ನು ಸಂಪೂರ್ಣವಾಗಿ 25 ವರ್ಷ ಹಿಂದಕ್ಕೆ ತೆಗೆದುಕೊಂಡಿದ್ದು, ಮೈಸೂರನ್ನು ಸುಮಾರು 10 ವರ್ಷ ಹಿಂದಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಉಳಿದಿರುವ ಎರಡು ವರ್ಷಗಳಲ್ಲಿ ಇನ್ನು 10 ವರ್ಷ ಹಿಂದಕ್ಕೆ ತೆಗೆದುಕೊಂಡು ಹೋಗುತ್ತಾರೆ. ಇವರ ಯೋಗ್ಯತೆಗೆ ಕೇಂದ್ರದಿಂದ ನಯಾ ಪೈಸೆ ತರಲಿಲ್ಲ. ಆದರೆ ರಾಜ್ಯದಲ್ಲಿ ಕಿಡಿ ಹೊತ್ತಿಸಲು ನಾಲ್ಕೈದು ಜನರಿದ್ದು ಇವರು ಮೊದಲ ಎರಡು ಸ್ಥಾನಗಳಲ್ಲಿ ಬರುತ್ತಾರೆ. ಪ್ರಪ್ಲಾದ್ ಜೋಷಿ, ಸಿ.ಟಿ ರವಿ, ರವಿ ಕುಮಾರ್ ಇವರೆಲ್ಲರೂ ಸುಳ್ಲು ಹೇಳುವುದರಲ್ಲೇ ಪಿಹೆಚ್ಡಿ ಮಾಡಿಕೊಂಡಿದ್ದರೆ ಎಂದು ಕಾರವಾಗಿ ಟೀಕಿಸಿದರು.</p>



<p>ಪ್ರತಾಪ್‌ ಸಿಂಹ ಅವರು ಸತ್ಯಹರಿಶ್ಚಂದ್ರರ ಕುಟುಂಬಕ್ಕೆ ಸೇರಿದ್ದರೆ ನಾನು ಮೈಸೂರು ಡಿಸಿಗೆ ನೀಡಿರುವ ದೂರಿನಲ್ಲಿ ಸಂಸದರ ನಿಧಿಯ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದೇನೆ. ಇವರು ದಕ್ಷಿಣ ಕನ್ನಡದ ಕಿಕ್ಕಂಜೆ ಊರಿನಲ್ಲಿ ಡಾ.ಮುರಳಿಕೃಷ್ಣ ಎಂಬ ಇವರ ಸ್ನೇಹಿತರ ಆಸ್ಪತ್ರೆ ಇದೆ. ಅದಕ್ಕೆ ಇವರು 18 ಲಕ್ಷ ರೂಪಾಯಿಯ ಆಂಬುಲೆನ್ಸ್ ಅನ್ನು ದೇಣಿಗೆ ನೀಡುತ್ತಾರೆ. ಮುರಳಿಕೃಷ್ಣ ಅವರ ಮತ್ತೊಂದು ಕ್ಲೀನಿಕ್ ಹೊಯ್ಸಳ ಕ್ಲೀನಿಕ್ ಗೆ ನಿರ್ದೇಶಕರನ್ನಾಗಿ ಪ್ರತಾಪ್ ಸಿಂಹ ಅವರ ಪತ್ನಿ ಅರ್ಪಿತಾ ಸಿಂಹ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.</p>



<p>ಸಂಸದರ ನಿಧಿಯಿಂದ ಬೇರೆ ಜಿಲ್ಲೆ ಕ್ಷೇತ್ರಗಳಿಗೇ ದೇಣಿಗೆ ರೂಪದಲ್ಲಿ ನೀಡಲು ಅವಕಾಶವಿದೆ. ಆದರೆ ಅದಕ್ಕೆ ಒಂದು ಷರತ್ತು ಇದ್ದು, ನೀವು ಯಾವುದೇ ಟ್ರಸ್ಟ್, ಸೊಸೈಟಿ ಅಥವಾ ಸಹಕಾರಿ ಸೊಸೈಟಿ ಆಗಿರಬಾರದು. ಆದರೆ ಪ್ರತಾಪ್ ಸಿಂಹ ಅವರು ನೀಡಿರುವ ಹಣ ವೆಂಕಟಕೃಷ್ಣ ಯೂರತ್ರೇಯ ಮೆಮೋರಿಯಲ್ ಟ್ರಸ್ಟ್ ಗೆ ನೀಡಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ? ಇನ್ನು ಮೈಸೂರಿನಲ್ಲಿ ಒಂದು ಟ್ರಸ್ಟ್ ಗೆ ಹಣ ನೀಡಿದ್ದು, ಎಂ.ಗೋಪಿನಾಥ್ ಶೆಣೈ ಚಾರಿಟಬಲ್ ಟ್ರಸ್ಟ್ ಗೆ ನೀಡಿದ್ದಾರೆ. ಈ ಟ್ರಸ್ಟ್ ನ ವಿಳಾಸ ಹುಡುಕಿಕೊಂಡು ಹೋದಾಗ ಸರಸ್ವತಿಪುರಂ ನ ವಿಶ್ವಮಾನವ ರಸ್ತೆ 12ನೇ ನಂಬರ್ ಜಾಗದಲ್ಲಿ ಈ ಟ್ರಸ್ಟ್ ನ ಕಚೇರಿ ಬದಲು ಮೆಕ್ ಡೊನಾಲ್ಡ್ ಹೊಟೇಲ್ ಇದೆ. ಇದಕ್ಕೆ ಪ್ರತಾಪ್ ಸಿಂಹ ಅವರು ಉತ್ತರಿಸಬೇಕು. ಇದುವರೆಗೂ ಈ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿ, ಎರಡು ಪತ್ರಿಕಾಗೋಷ್ಠಿ ಮಾಡಿದ್ದರೂ ಅವರು ಉತ್ತರ ನೀಡಿಲ್ಲ ಎಂದರು.</p>



<p>ಇಂತಹ ವ್ಯಕ್ತಿ ಬೆಂಗಳೂರು ಮೈಸೂರು ರಸ್ತೆಯನ್ನು ತನ್ನ ಮನೆ ಆಸ್ತಿಯಿಂದ ಮಾಡುತ್ತಿರುವಂತೆ ಮಂಡ್ಯ, ಮದ್ದೂರಿನಲ್ಲಿ ಫೇಸ್ಬುಕ್ ಲೈವ್ ಮಾಡುತ್ತಿದ್ದಾರೆ. ಈ ರೀತಿ ಮಾಡಿ ಗುತ್ತಿಗೆದಾರರಿಂದ 3 ಕೋಟಿಯಷ್ಟು ಲಂಚ ಪಡೆದಿದ್ದಾರೆ ಎಂದು ಮಂಡ್ಯದ ಜನ ಪತ್ರಿಕಾಗೋಷ್ಠಿ ಮಾಡಿ ಹೇಳುತ್ತಿದ್ದಾರೆ. ಇಂತಹ ವ್ಯಕ್ತಿ ಚುನಾವಣೆ ಸಮಯದಲ್ಲಿ ಕಿಡಿ ಹಚ್ಚಲು ಈ ರೀತಿ ಗೊಂದಲ ಸೃಷ್ಟಿಸಿ ಜನರ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಯವರ ಈ ಸುಳ್ಳು ಹೇಳಿಕೆಗಳನ್ನು ನಂಬಬಾರದು ಎಂದು ಜನರಲ್ಲಿ ಮನವಿ ಮಾಡಿಕೊಂಡರು.</p>



<p>ಅವರು ತಾವು ಇಂತಹ ಭರವಸೆ ನೀಡಿದ್ದು, ಅದರಲ್ಲಿ ಎಷ್ಟು ಭರವಸೆ ಈಡೇರಿಸಿದ್ದೇವೆ, ಇಂತಹ ಯೋಜನೆ ಮಾಡಿದ್ದೇವೆ ಎಂದು ತಮ್ಮ ಕೆಲಸದ ಪಟ್ಟಿ ನೀಡಿ ಮತ ಕೇಳಲಿ. ಅದನ್ನು ಬಿಟ್ಟು ದಿನಬೆಳಗಾದರೆ ಸಿದ್ದರಾಮಯ್ಯ ಅವರನ್ನು ನೆನೆಯುತ್ತಾರೆ. ಬಿಜೆಪಿ ನಾಯಕರು ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಹೆಸರು ಬಳಸದೇ ಯಾವುದಾದರೂ ಒಂದು ಕಾರ್ಯಕ್ರಮವನ್ನು ಮಾಡಲಿ ಎಂದು ಸವಾಲು ಹಾಕಿದ್ದಾರೆ.</p>



<p>ಶ್ರೀರಾಮುಲು ಅವರು ಅಂದರಗಾನಿ ಎಂದು ವೀರಾವೇಷದಲ್ಲಿ ಮಾತನಾಡುವುದರ ಹೊರತಾಗಿ ಬೇರೇನು ಮಾಡಿಲ್ಲ. ಆ ಪದದ ಅರ್ಥ ಹುಡುಕುತ್ತಿದ್ದು ಈವರೆಗೂ ಸಿಕ್ಕಿಲ್ಲ. ಅವರು ಸಿದ್ದರಾಮಯ್ಯನವರು ಕ್ಷೇತ್ರಕ್ಕೆ ಅನ್ಯಾಯಾ ಮಾಡಿದ್ದಾರೆ ಎಂದು ಹೇಳುತ್ತಾರೆ. ಅವರು ಯಾವ ಕ್ಷೇತ್ರದವರು ಅವರು ಏನು ಅನ್ಯಾಯಾ ಮಾಡಿದ್ದಾರೆ ಎಂದು ಅರಿಯುತ್ತಿಲ್ಲ. ಶ್ರೀರಾಮುಲು ಅವರೇ ನೀವು ಮುಂದಿನ ಚುನಾವಣೆಯಲ್ಲಿ 25 ಸಾವಿರ ಮತಗಳ ಅಂತರದಲ್ಲಿ ಸೋಲುವುದು ನಿಶ್ಚಿತ. ನಿಮ್ಮನ್ನು ಸೋಲಿಸಲು ಎಲ್ಲ ವ್ಯವಸ್ಥೆಯನ್ನು ಜನ ಮಾಡಿಕೊಂಡಿದ್ದಾರೆ ಎಂದು ಹೇಳಿದರು.</p>



<p>ರಾಮದಾಸ್ ಹಾಗೂ ಪ್ರತಾಪ್ ಸಿಂಹ ಅವರ ನಡುವಣ ತಿಕ್ಕಾಟ ಬಹಳ ಹಿಂದಿನಿಂದಲೂ ನಡೆಯುತ್ತಿದೆ. ಒಳಗೆ ಅವರು ಬಟ್ಟೆ ಹರಿದುಕೊಂಡು ಹೊಡೆದಾಡಿ ಹೊರಗಡೆ ಏನೂ ಆಗಿಲ್ಲ ಎಂಬಂತೆ ಬಿಂಬಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದು ಅನ್ನು ದೊಡ್ಡ ಮಟ್ಟಕ್ಕೆ ಹೋಗಲಿದ್ದು. ಜನಗಳು ಇದನ್ನು ಮನರಂಜನೆಯಾಗಿ ನೋಡಲಿದ್ದಾರೆ.</p>
]]></content:encoded>
					
		
		
			</item>
		<item>
		<title>ʼಟಿಪ್ಪು ಎಕ್ಸ್‌ಪ್ರೆಸ್‌ʼ ಹೆಸರು ಬದಲಾವಣೆ: ಎಚ್.ಸಿ.ಮಹದೇವಪ್ಪ ಕಿಡಿ</title>
		<link>https://peepalmedia.com/%ca%bctippu-express%ca%bc-name-change-hc-mahadevappa-kidi/</link>
		
		<dc:creator><![CDATA[Peepal Media]]></dc:creator>
		<pubDate>Sat, 08 Oct 2022 07:16:29 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[bengalure]]></category>
		<category><![CDATA[DR H C MAHADEVAPPA]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[prathap simha]]></category>
		<category><![CDATA[state politics]]></category>
		<category><![CDATA[Tippu Expressʼ]]></category>
		<guid isPermaLink="false">https://peepalmedia.com/?p=9341</guid>

					<description><![CDATA[ಬೆಂಗಳೂರು: ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ರೈಲಿನ ಹೆಸರನ್ನು ʼಟಿಪ್ಪು ಎಕ್ಸ್‌ಪ್ರೆಸ್‌ʼ ಬದಲು ʼಒಡೆಯರ್ ಎಕ್ಸ್ಪ್ರೆಸ್ ʼ ಎಂದು ಮರುನಾಮಕರಣ ಮಾಡಿರುವ ಕುರಿತು ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಜಿ ಸಚಿವ ಮತ್ತು ಹಿರಿಯ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ಟಿಪ್ಪು ಎಕ್ಸ್​ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ಹೆಸರಿಡಲು ಸಂಸದ ಪ್ರತಾಪ್​ ಸಿಂಹ ಅವರ ಮನವಿಯೇ ಕಾರಣವಾಗಿದೆ ಎಂದು, ರೈಲ್ವೆ ಸಚಿವಾಲಯ ಆದೇಶ ಪ್ರತಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಪ್ರತಾಪ್‌ ಸಿಂಹ ಅವರು, ಇನ್ನು ಮುಂದೆ [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು</strong>: ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ರೈಲಿನ ಹೆಸರನ್ನು ʼಟಿಪ್ಪು ಎಕ್ಸ್‌ಪ್ರೆಸ್‌ʼ ಬದಲು ʼಒಡೆಯರ್ ಎಕ್ಸ್ಪ್ರೆಸ್ ʼ ಎಂದು ಮರುನಾಮಕರಣ ಮಾಡಿರುವ ಕುರಿತು ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಜಿ ಸಚಿವ ಮತ್ತು ಹಿರಿಯ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ.</p>



<p style="font-size:20px">ಟಿಪ್ಪು ಎಕ್ಸ್​ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ಹೆಸರಿಡಲು ಸಂಸದ ಪ್ರತಾಪ್​ ಸಿಂಹ ಅವರ ಮನವಿಯೇ ಕಾರಣವಾಗಿದೆ ಎಂದು, ರೈಲ್ವೆ ಸಚಿವಾಲಯ ಆದೇಶ ಪ್ರತಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಪ್ರತಾಪ್‌ ಸಿಂಹ ಅವರು, ಇನ್ನು ಮುಂದೆ ಟಿಪ್ಪು ಎಕ್ಸ್‌ಪ್ರೆಸ್ ಬದಲು ಒಡೆಯರ್ ಎಕ್ಸ್‌ಪ್ರೆಸ್ ನಿಮಗೆ ಸೇವೆ ಒದಗಿಸಲಿದೆ ಎಂದು ಟ್ವೀಟ್‌ ಮಾಡಿದ್ದರು.</p>



<p style="font-size:20px">ಈ ಹಿನ್ನಲೆ ಟ್ವೀಟ್‌ ಮಾಡುವ ಮೂಲಕ ವಾಗ್ದಾಳಿ ನಡೆಸಿರುವ ಡಾ.ಎಚ್.ಸಿ.ಮಹದೇವಪ್ಪ ಅವರು, ಹಸುವಿಗೆ ಗುದ್ದಿದ್ದಕ್ಕೆ ವಂದೇ ಭಾರತ್ ರೈಲಿನ ಭಾಗವು ಪುಡಿಯಾಗಿ ಅದರ ಕಳಪೆ ಗುಣಮಟ್ಟದ ಬಗ್ಗೆ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಟಿಪ್ಪು ಎಕ್ಸ್‌ಪ್ರೆಸ್‌ನ ಹೆಸರನ್ನು ಬದಲಾಯಿಸಲಾಗಿದೆ. ಇನ್ನೊಂದು ಹೊಸ ರೈಲಿನ ಸೌಲಭ್ಯ ಕಲ್ಪಿಸಿ ಅದಕ್ಕೆ ಒಡೆಯರ್ ಎಂಬ ಹೆಸರನ್ನು ಇಡುವ ಕೆಲಸ ಮಾಡಿದ್ದರೆ ಇವರನ್ನು ಮೆಚ್ಚಬಹುದಿತ್ತು ಎಂದು ಟೀಕಿಸಿದ್ದಾರೆ.</p>



<p style="font-size:20px">ಒಂದಾದರೂ ಅಭಿವೃದ್ಧಿ ಕೆಲಸ ಮಾಡುವ ಯೋಗ್ಯತೆ ಇಲ್ಲದ ಇವರು ಕೋಮುದ್ವೇಷ ಹರಡಲು ಮತ್ತು ಹೊಲಸು ರಾಜಕೀಯ ಮಾಡಲು ರೈಲಿನ ಹೆಸರು ಬದಲಾಯಿಸಿರುವ ಕ್ರಮವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ! ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<p style="font-size:20px">ಸಂಸದ ಪ್ರತಾಪ್‌ ಸಿಂಹ ಅವರೇ, ನೀವು ಜನಪರವಾಗಿ ಕೆಲಸ ಮಾಡದೇ ಏನೇ ಚುನಾವಣಾ ಗಿಮಿಕ್ ಮಾಡಿದರೂ ಕೂಡಾ ಟಿಪ್ಪುವಿನಂತೆ ಮೈಸೂರಿನ ಹುಲಿ ಎಂಬ ಬಿರುದನ್ನು ಗಳಿಸಲು ನಿಮ್ಮಿಂದಾಗದು ಎಂಬುದೇ ಅಂತಿಮ ಸತ್ಯ ಎಂದು ಡಾ.ಎಚ್.ಸಿ.ಮಹದೇವಪ್ಪ ಹರಿಹಾಯ್ದಿದ್ದಾರೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಸಂಸದ <a href="https://twitter.com/mepratap?ref_src=twsrc%5Etfw">@mepratap</a> ಅವರೇ,<br><br>ನೀವು ಜನಪರವಾಗಿ ಕೆಲಸ ಮಾಡದೇ ಏನೇ ಚುನಾವಣಾ ಗಿಮಿಕ್ ಮಾಡಿದರೂ ಕೂಡಾ ಟಿಪ್ಪುವಿನಂತೆ ಮೈಸೂರಿನ ಹುಲಿ ಎಂಬ ಬಿರುದನ್ನು ಗಳಿಸಲು ನಿಮ್ಮಿಂದಾಗದು ಎಂಬುದೇ ಅಂತಿಮ ಸತ್ಯ<br><br>3/3</p>&mdash; Dr H.C.Mahadevappa (@CMahadevappa) <a href="https://twitter.com/CMahadevappa/status/1578590716103917569?ref_src=twsrc%5Etfw">October 8, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
		<item>
		<title>ಕೆಪಿಟಿಸಿಎಲ್ ನೇಮಕಾತಿ ಅಕ್ರಮ: ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆ</title>
		<link>https://peepalmedia.com/kptcl-nemakati-akrama-siddaramayya-prashnegala-surimale/</link>
		
		<dc:creator><![CDATA[Peepal Media]]></dc:creator>
		<pubDate>Fri, 26 Aug 2022 14:05:17 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[eshvarappa]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[prathap simha]]></category>
		<category><![CDATA[siddaramayya]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=3067</guid>

					<description><![CDATA[ಬೆಂಗಳೂರು: ಕೆಪಿಟಿಸಿಎಲ್ ನೇಮಕಾತಿ ಅಕ್ರಮಕ್ಕೆ ಸಂಬಂದಿಸಿ ಪ್ರಶ್ನೆಗಳ ಸುರಿಮಳೆ ಹಾಕಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಬೆವರಿಳಿಸಿದ್ದಾರೆ. ಪಿಎಸ್‌ಐ ಹಗರಣದ ತನಿಖೆಯೇ ಮುಗಿದಿಲ್ಲ, ಅಷ್ಟರಲ್ಲೇ ಕೆಪಿಟಿಸಿಎಲ್ ನೇಮಕಾತಿಯಲ್ಲಿ ಅಕ್ರಮ ನಡೆದು, ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಧಾರಾವಾಹಿಯ ಕಂತುಗಳಂತೆ ನಿತ್ಯ ಒಂದೊಂದಾಗಿ ಹೊರಬರುತ್ತಿದೆ ಎಂದು ಟೀಕಿಸಿದ್ದಾರೆ. &#8220;ಶ್ರೀಮಂತರ ಮಕ್ಕಳಿಗೆ ಸರ್ಕಾರಿ ಉದ್ಯೋಗ, ಬಡವರ ಮಕ್ಕಳಿಗೆ ತ್ರಿಶೂಲ ಧೀಕ್ಷೆ&#8221;&#8230;.. ಧರ್ಮದ ಹೆಸರಲ್ಲಿ ಹಣ, ಚುನಾವಣೆ ಗೆಲ್ಲಲು ಬೇಕಾದ ಮತ [&#8230;]]]></description>
										<content:encoded><![CDATA[
<p class="has-medium-font-size"><strong>ಬೆಂಗಳೂರು:</strong> ಕೆಪಿಟಿಸಿಎಲ್ ನೇಮಕಾತಿ ಅಕ್ರಮಕ್ಕೆ ಸಂಬಂದಿಸಿ ಪ್ರಶ್ನೆಗಳ ಸುರಿಮಳೆ ಹಾಕಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಬೆವರಿಳಿಸಿದ್ದಾರೆ.</p>



<p class="has-medium-font-size">ಪಿಎಸ್‌ಐ ಹಗರಣದ ತನಿಖೆಯೇ ಮುಗಿದಿಲ್ಲ, ಅಷ್ಟರಲ್ಲೇ ಕೆಪಿಟಿಸಿಎಲ್ ನೇಮಕಾತಿಯಲ್ಲಿ ಅಕ್ರಮ ನಡೆದು, ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಧಾರಾವಾಹಿಯ ಕಂತುಗಳಂತೆ ನಿತ್ಯ ಒಂದೊಂದಾಗಿ ಹೊರಬರುತ್ತಿದೆ ಎಂದು ಟೀಕಿಸಿದ್ದಾರೆ.</p>



<p class="has-medium-font-size">&#8220;ಶ್ರೀಮಂತರ ಮಕ್ಕಳಿಗೆ ಸರ್ಕಾರಿ ಉದ್ಯೋಗ, ಬಡವರ ಮಕ್ಕಳಿಗೆ ತ್ರಿಶೂಲ ಧೀಕ್ಷೆ&#8221;&#8230;.. ಧರ್ಮದ ಹೆಸರಲ್ಲಿ ಹಣ, ಚುನಾವಣೆ ಗೆಲ್ಲಲು ಬೇಕಾದ ಮತ ಎರಡೂ ಬಂದಂತಾಯಿತು ಅಲ್ಲವೇ ಸುನಿಲ್‌ ಕುಮಾರ್‌ ಕಾರ್ಕಾಳ್ ಅವರೇ? ಬಿಜೆಪಿ ಅವರ ಭ್ರಷ್ಟಾಚಾರದ ಸರಣಿಗೆ ಕೊನೆಯೆಂದು?. ಬೊಮ್ಮಾಯಿ ಸರ್ಕಾರದಲ್ಲಿರುವವರೆಲ್ಲರೂ ಸತ್ಯಹರಿಶ್ಚಂದ್ರರಾಗಿದ್ದರೆ ತನಿಖೆಗೆ ಯಾಕೆ ಹೆದರಿಕೊಳ್ಳುತ್ತಿದ್ದಾರೆ? ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರ ಉಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಲಿ. ಆರೋಪಗಳು ಕೇಳಿಬಂದಾಗ ತನಿಖೆ ನಡೆಸಿ ಸತ್ಯಾಸತ್ಯತೆ ಜನತೆಯ ಮುಂದಿಡುವುದು ಸರ್ಕಾರದ ಕರ್ತವ್ಯ ಎಂದು ಪ್ರಶ್ನಿಸಿದ್ದಾರೆ.</p>



<p class="has-medium-font-size">ಕಮಿಷನ್ ಹಾವಳಿಗೆ ಬೇಸತ್ತ ಗುತ್ತಿಗೆದಾರರು ಕಳೆದ ವರ್ಷವೇ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದರ ನಂತರ ಸಮಸ್ಯೆ ಬಗೆಹರಿದಿಲ್ಲ, ಕಿರುಕುಳ ಹೆಚ್ಚಾಗಿದೆಯಂತೆ. ತನಿಖೆಗೆ ಆದೇಶಿಸಿದರೆ ಎಲ್ಲ ಪುರಾವೆಗಳನ್ನು ಕೊಡಲು ಸಿದ್ಧನಿದ್ದೇನೆ ಎಂದು ಸಂಘದ ಅಧ್ಯಕ್ಷರೇ ಹೇಳಿರುವಾಗ &nbsp;ಬಿಜೆಪಿ ಸರ್ಕಾರ ಯಾಕೆ ಒಪ್ಪುತ್ತಿಲ್ಲ? ನಮ್ಮ ಕಾಲದಲ್ಲಿ ಹಗರಣಗಳು ನಡೆದಿಲ್ಲವೇ ಎಂದು ಬೊಮ್ಮಾಯಿ ಅವರು ಕೇಳಿದ್ದಾರೆ. ಮುಖ್ಯಮಂತ್ರಿಯಾಗಿ ನಾನು ಐದು ಪ್ರಕರಣಗಳನ್ನು ಧೈರ್ಯದಿಂದ ಸಿಬಿಐ ತನಿಖೆಗೆ ಒಪ್ಪಿಸಿದ್ದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಹೆದರದೆ ನಿರ್ಧಾರ ಕೈಗೊಂಡಿದ್ದೆ. ನೀವು ಯಾಕೆ ತನಿಖೆಗೆ ಹೆದರುತ್ತೀರಿ? ಎಂದು ವ್ಯಂಗ್ಯವಾಡಿದ್ದಾರೆ.</p>



<p class="has-medium-font-size">ಎಸಿಬಿ ದಾಳಿಯಲ್ಲಿ ಸಿಕ್ಕಿಬಿದ್ದು ಜೈಲುಪಾಲಾಗಿದ್ದ ಅಧಿಕಾರಿಯನ್ನು ಮತ್ತೆ ಅದೇ ಸ್ಥಳಕ್ಕೆ ನೇಮಕ ಮಾಡಲು ಶಾಸಕ ಬೋಪಯ್ಯ ಅವರು 2.5 ಕೋಟಿ ಲಂಚ ಪಡೆದಿದ್ದಾರೆ ಎಂದು ಕೊಡಗು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ರವಿ ಚೆಂಗಪ್ಪ ಆರೋಪಿಸಿದ್ದಾರೆ. ಇದಕ್ಕಿಂತ ಬೇರೆ ಸಾಕ್ಷಿ ಏನು ಬೇಕು ಎಂದು ತಿರುಗೇಟು ನೀಡಿದ್ದಾರೆ.</p>



<p class="has-medium-font-size">ಲೋಕೋಪಯೋಗಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ನೀರಾವರಿ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸೇರಿ 22,000 ಕೋಟಿ ಬಿಲ್ ಹಣ ಬಿಡುಗಡೆಗೆ ಬಾಕಿ ಇದೆ. 40% ಸರ್ಕಾರಕ್ಕೆ, 20% ಗುತ್ತಿಗೆದಾರನಿಗೆ, 15% GST ಗೆ, ಉಳಿದ 25% ನಲ್ಲಿ ಕಾಮಗಾರಿ ನಡೆಯುತ್ತಿದೆ. ಹೀಗಿದ್ದಾಗ ಗುಣಮಟ್ಟದ ಕಾಮಗಾರಿ ಹೇಗೆ ಸಾಧ್ಯ. ಸಂತೋಷ್ ಪಾಟೀಲ ಎಂಬ ಗುತ್ತಿಗೆದಾರ ಸಚಿವ ಕೆ.ಎಸ್. ಈಶ್ವರಪ್ಪ ಅವರ ಲಂಚದ ಕಿರುಕುಳಕ್ಕೆ ನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ. ಇದರಿಂದ ಕೆ ಎಸ್‌ ಈಶ್ವರಪ್ಪಅವರು ರಾಜೀನಾಮೆ ನೀಡಬೇಕಾಯಿತು. ಆದರೆ ಲಂಚ ಕೊಡುವುದಿಲ್ಲ ಎನ್ನುವವರು ಸಂತೋಷ್ ಪಾಟೀಲ್ ನಂತೆ ಸಾಯಬೇಕಾಗುತ್ತದೆ ಎಂದರು.</p>



<p class="has-medium-font-size">ಸರ್ಕಾರವೇ ಭ್ರಷ್ಟವಾಗಿದ್ದರೆ ಭ್ರಷ್ಟರ ಮೇಲೆ ಕ್ರಮ ಕೈಗೊಳ್ಳುವವರು ಯಾರು ?. ಈಶ್ವರಪ್ಪ ಅವರ ಮೇಲಿನ ಆರೋಪದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ, ಅದನ್ನು ಮೃತನ ಸಹೋದರ ಚಾಲೆಂಜ್ ಮಾಡಿದ್ದಾರೆ. ಈ ರೀತಿ ಪ್ರಕರಣವನ್ನು ಮುಚ್ಚಿಹಾಕುವ ಕೆಲಸ ನಡೆಯಬಾರದು.</p>



<p class="has-medium-font-size">ಪಿ.ಎಸ್.ಐ ನೇಮಕಾತಿಯಲ್ಲಿ ಮಾತ್ರವಲ್ಲ, ವಿಶ್ವವಿದ್ಯಾಲಯದ ನೇಮಕಾತಿಗಳಲ್ಲಿಯೂ ಭ್ರಷ್ಟಾಚಾರ ವ್ಯಾಪಕವಾಗಿದೆ. ಪಿ.ಎಸ್.ಐ ನಲ್ಲಿ 300 ಅಭ್ಯರ್ಥಿಗಳಿಂದ 30 ಲಕ್ಷ ರೂ.ಗಳಿಂದ ಒಂದು ಕೋಟಿ ರೂಪಾಯಿ ವರೆಗೆ ಲಂಚ ಪಡೆದಿದ್ದಾರೆ. ಇದರ ಹಿಂದಿರುವ ಎಲ್ಲಾ ಭ್ರಷ್ಟರ ಹೆಸರು ಹೊರಬೇಕಾದರೆ ನ್ಯಾಯಾಂಗ ತನಿಖೆಯಿಂದ ಮಾತ್ರ ಸಾಧ್ಯ ಎಂದು ಗುಡುಗಿದರು.</p>



<p class="has-medium-font-size">ವರ್ಗಾವಣೆಗೆ ಹೋಟೆಲ್ ತಿಂಡಿಯ ಹಾಗೆ ಬೆಲೆ ನಿಗದಿ ಮಾಡಿದ್ದಾರೆ. ಎಸ್.ಪಿ ಇಂದ ಹಿಡಿದು ಪೊಲೀಸ್ ಪೇದೆಗಳ ವರೆಗೆ ಒಂದೊಂದು ಬೆಲೆ ನಿಗದಿ ಮಾಡಿದ್ದಾರೆ. ವರ್ಗಾವಣೆಯಾದ ಒಂದು ವರ್ಷದಲ್ಲಿ ಎಷ್ಟಾದರೂ ಹಣ ಹೊಡೆಯಿರಿ ಎಂದು ಬಿಜೆಪಿ ಸರ್ಕಾರದವರು ಅವರಿಗೆ ಅವಕಾಶ ಕೊಟ್ಟಿದ್ದಾರೆ. ಮೂರು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ತನ್ನ ಸರ್ಕಾರದ ಸಾಧನೆ ಬಗ್ಗೆ ಮಾತನಾಡಬೇಕು. ಆದರೆ ಬಿಜೆಪಿ ನಾಯಕರು ಹಲಾಲ್, ಹಿಜಾಬ್, ಮೀನು-ಮಾಂಸ, ಸಾವರ್ಕರ್, ಜಾತಿ, ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆ. ಇದು ತಮ್ಮ ವೈಫಲ್ಯವನ್ನು ಮುಚ್ಚಿಹಾಕಿ ಜನರ ಗಮನ ಬೇರೆ ಕಡೆ ಸೆಳೆಯುವ ಕುತಂತ್ರ ಎಂದು ಹೇಳಿದರು.</p>



<p class="has-medium-font-size">ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕುಗಳಲ್ಲಿನ ರೂ.1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮತ್ತು ರೈತರ ಬೆಳೆಗೆ ಉತ್ಪಾದನಾ ವೆಚ್ಚದ ಒಂದುವರೆ ಪಟ್ಟು ಬೆಂಬಲ ಬೆಲೆ ಕೊಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಬಿಜೆಪಿ ಹೇಳಿತ್ತು. ನುಡಿದಂತೆ ನಡೆದಿದೆಯೇ? ಬಾಕಿ ಇರುವ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 5 ವರ್ಷದಲ್ಲಿ ಒಂದೂವರೆ ಲಕ್ಷ ಕೋಟಿ ಖರ್ಚು ಮಾಡುತ್ತೇವೆ ಎಂದಿದ್ದರು. 4 ವರ್ಷದಲ್ಲಿ ಖರ್ಚು ಮಾಡಿದ್ದೆಷ್ಟು? ಮುಖ್ಯಮಂತ್ರಿಗಳ ಹೆಸರಲ್ಲಿ ಪ್ರತೀ ತಾಲೂಕಿಗೆ ಒಂದರಂತೆ ಒಟ್ಟು 300 ಕ್ಯಾಂಟೀನ್ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದರು ಎಲ್ಲಿದೆ &nbsp;ಬಿಜೆಪಿ? ಎಂದು ಸರ್ಕಾರವನ್ನು ಪ್ರಶ್ನಿಸಿದರು.</p>



<p class="has-medium-font-size">2013ರಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿನ ಎಲ್ಲ 165 ಭರವಸೆಗಳನ್ನು ನಾವು ಈಡೇರಿಸಿದ್ದೆವು, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿನ 90% ಭರವಸೆಗಳನ್ನು ಈಡೇರಿಸಿಲ್ಲ. ಇದಕ್ಕೆ ದುಡ್ಡಿನ ಕೊರತೆ ಕೂಡಾ ಕಾರಣ. ಸದನದೊಳಗೆ ಈ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ಎಸಿಬಿ ದೇಶಕ್ಕೆ ಹೊಸದೇನಲ್ಲ, ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ, ಬಿಹಾರ, ಕೇರಳ, ಪಶ್ಚಿಮ ಬಂಗಾಳಗಳಲ್ಲಿಯೂ ಲೋಕಾಯುಕ್ತ ಜೊತೆ ಎಸಿಬಿ ಕಾರ್ಯನಿರ್ವಹಿಸುತ್ತಿದೆ. ಆ ಹಿನ್ನೆಲೆಯಲ್ಲಿಯೇ ನಾವು ಎಸಿಬಿ ಸ್ಥಾಪಿಸಿದ್ದೆವು. ಅದಕ್ಕೆ ಸದುದ್ದೇಶ ಇತ್ತೇ ಹೊರತು ದುರುದ್ದೇಶ ಇರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.</p>



<p class="has-medium-font-size">ಸಂಸದ ಪ್ರತಾಪ್ ಸಿಂಹ ಸುಳ್ಳು ಹೇಳುವ ಯಕಶ್ಚಿತ್ ರಾಜಕಾರಣಿ. ಅವರಿಗೆ ಧೈರ್ಯವಿದ್ದರೆ ನಮ್ಮ ಪಕ್ಷದ ವಕ್ತಾರ ಲಕ್ಷ್ಮಣ್ ಸೇರಿದಂತೆ ಅನೇಕರು ಹಾಕಿರುವ ಸವಾಲನ್ನು ಸ್ವೀಕರಿಸಿ ಚರ್ಚೆಗೆ ಬರಲಿ. ಮುಖ್ಯಮಂತ್ರಿಯಾಗಿ ನಾನು ಮೈಸೂರು ನಗರಕ್ಕೆ ಏನು ಮಾಡಿದ್ದೇನೆ? ಪ್ರತಾಪ್ ಸಿಂಹ ಏನು ಮಾಡಿದ್ದಾರೆ? ಎಂದು ಚರ್ಚೆಯಾಗಲಿ ಎಂದು ಸವಾಲ್‌ ಹಾಕಿದರು.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಪಿಎಸ್‌ಐ ಹಗರಣದ ತನಿಖೆಯೇ ಮುಗಿದಿಲ್ಲ, ಅಷ್ಟರಲ್ಲೇ ಕೆಪಿಟಿಸಿಎಲ್ ನೇಮಕಾತಿಯಲ್ಲಿ ಅಕ್ರಮ ನಡೆದು, ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿರುವುದು ಬೆಳಕಿಗೆ ಬಂದಿದೆ.<br><br>ರಾಜ್ಯ <a href="https://twitter.com/BJP4Karnataka?ref_src=twsrc%5Etfw">@BJP4Karnataka</a> ಸರ್ಕಾರದ ಭ್ರಷ್ಟಾಚಾರ ಧಾರಾವಾಹಿಯ ಕಂತುಗಳಂತೆ ನಿತ್ಯ ಒಂದೊಂದಾಗಿ ಹೊರಬರುತ್ತಿದೆ. 1/2<a href="https://twitter.com/hashtag/%E0%B2%AD%E0%B3%8D%E0%B2%B0%E0%B2%B7%E0%B3%8D%E0%B2%9F%E0%B2%AC%E0%B2%BF%E0%B2%9C%E0%B3%86%E0%B2%AA%E0%B2%BF?src=hash&amp;ref_src=twsrc%5Etfw">#ಭ್ರಷ್ಟಬಿಜೆಪಿ</a></p>&mdash; Siddaramaiah (@siddaramaiah) <a href="https://twitter.com/siddaramaiah/status/1563138933386809346?ref_src=twsrc%5Etfw">August 26, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
	</channel>
</rss>
