<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>price increase &#8211; Peepal Media</title>
	<atom:link href="https://peepalmedia.com/tag/price-increase/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 28 Apr 2025 13:06:05 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>price increase &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನು ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ: ಸಿದ್ದರಾಮಯ್ಯ ಗುಡುಗು</title>
		<link>https://peepalmedia.com/we-will-not-bowandnotdown-to-bjp-rss-threats-we-have-the-strength-to-confront-you-publicly-siddaramaiah-thunders/</link>
		
		<dc:creator><![CDATA[ಮಂಜುಳ ಹುಲಿಕುಂಟೆ]]></dc:creator>
		<pubDate>Mon, 28 Apr 2025 10:14:39 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[BELAGAVI]]></category>
		<category><![CDATA[central gover]]></category>
		<category><![CDATA[CM siddaramaiah]]></category>
		<category><![CDATA[congrees]]></category>
		<category><![CDATA[karnartaka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[price increase]]></category>
		<category><![CDATA[RSS]]></category>
		<guid isPermaLink="false">https://peepalmedia.com/?p=58008</guid>

					<description><![CDATA[ಬೆಳಗಾವಿ: ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ  ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು.  ಏಪ್ರಿಲ್ 28ರಂದು ಬೆಳಗಾವಿಯಲ್ಲಿ AICC ಆಯೋಜಿಸಿದ್ದ, ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.&#160; ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಪಡಿಸಿದ, ಬಿಜೆಪಿ [&#8230;]]]></description>
										<content:encoded><![CDATA[
<p><strong>ಬೆಳಗಾವಿ: </strong>ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ  ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. </p>



<p>ಏಪ್ರಿಲ್ 28ರಂದು ಬೆಳಗಾವಿಯಲ್ಲಿ AICC ಆಯೋಜಿಸಿದ್ದ, ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.&nbsp;</p>



<p>ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಪಡಿಸಿದ, ಬಿಜೆಪಿ ಕಿಡಿಗೇಡಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಬಿಜೆಪಿ-RSS ಗೆ ನೇರವಾಗಿ ಸವಾಲೆಸೆದು ಸೆಡ್ಡು ಹೊಡೆದರು.&nbsp;</p>



<p>ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ, ಭಾರತೀಯರ ಬದುಕನ್ನು ಬೆಲೆ ಏರಿಕೆಯಲ್ಲಿ ಬೇಯಿಸುತ್ತಾ, ಭಾರತೀಯ ಸಮಾಜವನ್ನು ಛಿದ್ರಗೊಳಿಸುತ್ತಾ, ಬಿರುಕು ಮೂಡಿಸುತ್ತಾ ಜನದ್ರೋಹಿಯಾಗಿ ವರ್ತಿಸುತ್ತಿರುವುದು ಬಿಟ್ಟರೆ ಜನರಿಗಾಗಿ ಬೇರೆ ಏನು ಮಾಡಿದ್ದೀರಿ ತೋರಿಸಿ ಎಂದು ಸವಾಲು ಹಾಕಿದರು.&nbsp;</p>



<p>ಭಾರತೀಯರು ಬ್ರಿಟೀಷರ ವಿರುದ್ಧ ಪ್ರಾಣತ್ಯಾಗ ಮಾಡಿ ಹೋರಾಡುತ್ತಿದ್ದಾಗ ನೀವು ಸಂಘ ಪರಿವಾರದವರು ಏನು ಕಡೆದು ಕಟ್ಟೆ ಹಾಕ್ತಿದ್ರಿ ? ಸ್ವಾತಂತ್ರ್ಯ. ಹೋರಾಟಕ್ಕೆ&nbsp; ಏಕೆ ಬರಲಿಲ್ಲ ? ಏನ್ ಮಾಡ್ತಾ ಕೂತಿದ್ರಿ ಆಗ ಎಂದು ಪ್ರಶ್ನಿಸಿದರು.&nbsp;</p>



<p>ಮೊನ್ನೆ ಕಾಶ್ಮೀರದಲ್ಲಿ ಅಮಾಯಕ ಭಾರತೀಯರನ್ನು, ಕರ್ನಾಟಕದ ಮೂವರು ಅಮಾಯಕರನ್ನು ರಾಜಾರೋಷವಾಗಿ ಗನ್ ಗಳ ಸಮೇತ ಬಂದು ಅಮಾನುಷವಾಗಿ ಹತ್ಯೆ ಮಾಡಿ ಹೋದರಲ್ಲಾ ಇದು ಕೇಂದ್ರ ಸರ್ಕಾರದ ಭದ್ರತಾ ಲೋಪ ಅಲ್ಲವಾ ? ಭಾರತೀಯರಿಗೆ ರಕ್ಷಣೆ ಕೊಡುವುದರಲ್ಲಿ ವಿಫಲ ಆಗಿರುವುದನ್ನು ನಾವು ಭಾರತೀಯರು&nbsp; ಪ್ರಶ್ನಿಸಬಾರದಾ ? ಪ್ರಶ್ನಿಸಿದರೆ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸ್ತೀರಾ ಎಂದು ಪ್ರಶ್ನಿಸಿದರು.&nbsp;</p>



<p>ಭಾರತಕ್ಕೆ ಸ್ವಾತಂತ್ರ್ಯ ಬಂದು 52 ವರ್ಷಗಳ ಕಾಲ RSS ಕಚೇರಿ ಮೇಲೆ ಭಾರತದ ಬಾವುಟ ಹಾರಿಸಲೇ ಇಲ್ಲ ನೀವು. ಇದಕ್ಕೂ ನಾಚಿಕೆ ಆಗುವುದಿಲ್ಲವೇ ನಿಮಗೆ ಎಂದು ಪ್ರಶ್ನಿಸಿದರು.&nbsp;</p>



<p>ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಆಧುನಿಕ ಭಾರತ ನಿರ್ಮಾಣದವರೆಗೂ ಬಿಜೆಪಿ, ಸಂಘ ಪರಿವಾರದ ಕೊಡುಗೆ ಏನಿದೆ ? ನಾಚಿಕೆ ಇಲ್ಲದೆ ದೇಶಭಕ್ತಿ ಬಗ್ಗೆ ಮಾತಾಡ್ತೀರಾ. ಭಾರತೀಯ ಸಮಾಜವನ್ನು ಬಿರುಕು ಮೂಡಿಸಿದ್ದು ಬಿಟ್ಟರೆ ಇಷ್ಟು ವರ್ಷಗಳ ನಿಮ್ಮ ಕೊಡುಗೆ ಭಾರತಕ್ಕೆ ಏನು ಕೊಟ್ಟಿದ್ದೀರಿ ಎಂದು ದೇಶದ ಜನಕ್ಕೆ ವಿವರಿಸಿ ಎಂದು ಸವಾಲು ಹಾಕಿದರು.</p>



<p>ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಅತ್ಯಂತ ಶ್ರೀಮಂತರ ಮೇಲೆ 32% ಟ್ಯಾಕ್ಸ್ ಇತ್ತು. ಮೋದಿ ಬಂದ ಮೇಲೆ ಅತ್ಯಂತ ಶ್ರೀಮಂತರ ಮೇಲಿನ ತೆರಿಗೆಯನ್ನು ಶೇ25 ಇಳಿಸಿದಿರಿ. ಬಡವರು, ಮಧ್ಯಮ ವರ್ಗದವರ ಮೇಲಿನ ತೆರಿಗೆಯನ್ನು ಹೆಚ್ಚಿಸಿದಿರಿ. ನಾಚಿಕೆ ಆಗುತ್ತಿಲ್ಲ ನಿಮಗೆ. ಬಡವರ, ಮಧ್ಯಮ ವರ್ಗದವರ ವಿರೋಧಿ ಬಿಜೆಪಿಯ ಆಡಳಿತವನ್ನು ಪ್ರಶ್ನಿಸಬಾರದಾ ? ಭಾರತೀಯರನ್ನು ನಿರಂತರ ಸುಳ್ಳುಗಳಲ್ಲಿ ಇನ್ನೂ ಎಷ್ಟು ವರ್ಷ ಮರಳು ಮಾಡ್ತೀರಿ. ಸತ್ಯ ಹೇಳಿ ಎಂದು ಪ್ರಶ್ನಿಸಿದರು.&nbsp;</p>



<p>ಭಾರತದ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಹೋರಾಟ ಹೊಸದಲ್ಲ. ಬ್ರಿಟೀಷರನ್ನೇ ಒದ್ದೋಡಿಸಿದ ನಮಗೆ ನೀವು ಬಿಜೆಪಿ-RSS ನ್ನೂ ಎದುರಿಸಿ ನಿಲ್ಲುವ ಶಕ್ತಿ ಇದೆ ಎಂದು ಎಚ್ಚರಿಕೆ ನೀಡಿದರು.&nbsp;</p>



<p>ನಾವು ಹಾಲಿನ ದರ 4 ರೂ ಹೆಚ್ಚಿಸಿ, ಇಡೀ 4 ರೂಪಾಯಿಯನ್ನು ಪೂರ್ತಿಯಾಗಿ ರೈತರಿಗೆ, ಗೋಪಾಲಕರಿಗೆ, ಗೋ ಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೀವಿ. ಇದರಲ್ಲಿ ಒಂದು ರೂಪಾಯಿ ಕೂಡ ಸರ್ಕಾರಕ್ಕೆ ಬರಲ್ಲ. ನಾವು 4 ರೂ ಹೆಚ್ಚಿಸಿದರೂ ಹಾಲಿನ‌ ದರ ಇಡೀ ದೇಶದಲ್ಲಿ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ಬಸ್ ದರ, ನೀರಿನ ದರ,&nbsp; ವಿದ್ಯುತ್ ದರ ಅಕ್ಕ ಪಕ್ಕದ ರಾಜ್ಯಗಳಿಗಿಂತ ಅತ್ಯಂತ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ನಿಮ್ಮ ಸುಳ್ಳು, ಅಪಪ್ರಚಾರ, ಬೆದರಿಕೆಗೆ ಈ ಸಿದ್ದರಾಮಯ್ಯ ಹೆದರುವವನಲ್ಲ. ನಿಮ್ಮನ್ನು ಮೆಟ್ಟಿ ನಿಲ್ತೀವಿ. ಕಾಂಗ್ರೆಸ್ ಸರ್ಕಾರಕ್ಕೆ ಆ ಶಕ್ತಿ ಇನ್ನೂ ಇದೆ ಎಂದರು.&nbsp;</p>



<p>ಅಕ್ಕಿ, ಎಣ್ಣೆ, ಚಿನ್ನ, ಬೆಳ್ಳಿ, ಗೊಬ್ಬರ, ಕಾಳು, ಬೇಳೆ, ಡೀಸೆಲ್, ಪೆಟ್ರೋಲ್, ಸಿಲಿಂಡರ್ ಎಲ್ಲದರ ಬೆಲೆ ಏರಿಸಿದ್ದೀರಿ. ಯಾವುದನ್ನು ಬಿಟ್ಟಿದ್ದೀರಿ ಹೇಳಿ ಎಂದರು.&nbsp;</p>



<p>ಕಚ್ಛಾ ತೈಲ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್, ಡೀಸೆಲ್ ಬೆಲೆ ಮಾತ್ರ ನಿರಂತರವಾಗಿ ಏರಿಕೆ ಮಾಡುತ್ತಲೇ ಇರುವುದು ಭಾರತೀಯರಿಗೆ ಬಿಜೆಪಿ ಬಗೆಯುತ್ತಿರುವ ಮಹಾ ದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.&nbsp;</p>



<p>ಬಿಜೆಪಿ ನಿರಂತರವಾಗಿ ಭಾರತೀಯರನ್ನು ಸುಳ್ಳುಗಳ ಸರಮಾಲೆಯಲ್ಲಿ ಮುಳುಗಿಸಿ, ಸಮಾಜವನ್ನು ಬಿರುಕು ಮೂಡಿಸಿ ಕಾಲ ಕಳೆಯುತ್ತಿದೆ. ನಿಮಗೆ ತಕ್ಕ ಉತ್ತರ ಕೊಡುವ ಶಕ್ತಿ ನಮಗಿದೆ. ನಾವು ಉತ್ತರ ಕೊಡ್ತೀವಿ ಎಂದರು.</p>



<p>ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಎಚ್.ಸಿ. ಮಹದೇವಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಸತೀಶ್ ಜಾರಿಕಿಹೊಳಿ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಅನೇಕ ಸಚಿವರು, ಮುಖಂಡರು ಭಾಗಿಯಾಗಿದ್ದರು.&nbsp;</p>



<p></p>
]]></content:encoded>
					
		
		
			</item>
		<item>
		<title>ಸೈಕಲ್ ತುಳಿದು, ಸಿಲಿಂಡರ್ ಹೊತ್ತು ಬಂದು ಮತ ಚಲಾಯಿಸಿದ ಕಾಂಗ್ರೆಸ್ ಶಾಸಕ</title>
		<link>https://peepalmedia.com/congress-mla-came-to-vote-on-a-bicycle-and-carrying-a-cylinder/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 01 Dec 2022 06:44:12 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[congress]]></category>
		<category><![CDATA[gujarath election]]></category>
		<category><![CDATA[india]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Petroleum Products]]></category>
		<category><![CDATA[politics]]></category>
		<category><![CDATA[price increase]]></category>
		<guid isPermaLink="false">https://peepalmedia.com/?p=17149</guid>

					<description><![CDATA[ಗುಜರಾತ್ : ಗುಜರಾತ್ ರಾಜ್ಯದ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆದಿದ್ದು, ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರು.ಮತದಾನ ಮಾಡಲು ಸೈಕಲ್ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತು ಬಂದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಗುಜರಾತ್ ನ ಅಮ್ರೇಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರಾದ ಪರೇಶ್ ಧನಾನಿ ಅವರು ಹೆಚ್ಚಿದ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ, ಹಣದುಬ್ಬರ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ಮಾರ್ಮಿಕವಾಗಿ ಪ್ರತಿಭಟಿಸುವ ಹಿನ್ನೆಲೆಯಲ್ಲಿ ಈ ರೀತಿಯಾಗಿ ಮತಗಟ್ಟೆಗೆ ಬಂದು ಮತ ಚಲಾವಣೆ ನಡೆಸಿದರು. ಮತ [&#8230;]]]></description>
										<content:encoded><![CDATA[
<p style="font-size:20px"><strong>ಗುಜರಾತ್</strong> : ಗುಜರಾತ್ ರಾಜ್ಯದ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆದಿದ್ದು, ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರು.ಮತದಾನ ಮಾಡಲು ಸೈಕಲ್ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತು ಬಂದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.</p>



<p style="font-size:20px">ಗುಜರಾತ್ ನ ಅಮ್ರೇಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರಾದ ಪರೇಶ್ ಧನಾನಿ ಅವರು ಹೆಚ್ಚಿದ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ, ಹಣದುಬ್ಬರ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ಮಾರ್ಮಿಕವಾಗಿ ಪ್ರತಿಭಟಿಸುವ ಹಿನ್ನೆಲೆಯಲ್ಲಿ ಈ ರೀತಿಯಾಗಿ ಮತಗಟ್ಟೆಗೆ ಬಂದು ಮತ ಚಲಾವಣೆ ನಡೆಸಿದರು.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="en" dir="ltr"><a href="https://twitter.com/hashtag/WATCH?src=hash&amp;ref_src=twsrc%5Etfw">#WATCH</a> | Amreli: Congress MLA Paresh Dhanani leaves his residence, to cast his vote, with a gas cylinder on a bicycle underscoring the issue of high fuel prices.<a href="https://twitter.com/hashtag/GujaratAssemblyPolls?src=hash&amp;ref_src=twsrc%5Etfw">#GujaratAssemblyPolls</a> <a href="https://t.co/QxfYf1QgQR">pic.twitter.com/QxfYf1QgQR</a></p>&mdash; ANI (@ANI) <a href="https://twitter.com/ANI/status/1598152191914934272?ref_src=twsrc%5Etfw">December 1, 2022</a></blockquote><script async src="https://platform.twitter.com/widgets.js" charset="utf-8"></script>
</div></figure>



<p style="font-size:20px">ಮತ ಚಲಾವಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪರೇಶ್ ಧನಾನಿ ಬಿಜೆಪಿ ಸರ್ಕಾರದ ಬೆಲೆಯೇರಿಕೆ ನೀತಿ ಬಗ್ಗೆ ಮಾತನಾಡಿದರು. &#8216;ಗುಜರಾತ್ ರಾಜ್ಯವನ್ನು ಸ್ವಾರ್ಥ ಮತ್ತು ಭಯದ ಗೋಡೆಯೊಳಗೆ ಬಂಧಿಸಿ, ಭಾರತೀಯ ಜನತಾ ಪಕ್ಷ ಎಲ್ಲರನ್ನೂ ಗುಲಾಮರನ್ನಾಗಿ ಮಾಡಿಕೊಂಡಿದೆ&#8217; ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.</p>



<p style="font-size:20px">&#8220;ಸರ್ಕಾರದ ವೈಫಲ್ಯದಿಂದ ಹಣದುಬ್ಬರ ಮತ್ತು ನಿರುದ್ಯೋಗ ನಿರಂತರವಾಗಿ ಹೆಚ್ಚುತ್ತಿದೆ. ಗ್ಯಾಸ್ ಸಿಲಿಂಡರ್ ಬೆಲೆ 1100 ಕ್ಕಿಂತ ಹೆಚ್ಚುತ್ತಿದೆ. ವಿದ್ಯುತ್ ಬೆಲೆ ದುಬಾರಿ ಆಗಿದೆ. ಸಾರಿಗೆ ಬೆಲೆ ದುಪ್ಪಟ್ಟಾಗಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚಿ ಶಿಕ್ಷಣವನ್ನು ಖಾಸಗೀಕರಣಕ್ಕೆ ಸರ್ಕಾರ ಮುಂದಾಗಿದೆ. 3.5 ಲಕ್ಷ ಜನ ಕೊರೋನಾ ಕಾರಣದಿಂದ ಜೀವ ಕಳೆದುಕೊಂಡಿದ್ದಾರೆ. ಬಿಜೆಪಿ ಪಕ್ಷದ ಆಡಳಿತ ವೈಫಲ್ಯದಿಂದ ತೀವ್ರ ಸಂಕಷ್ಟ ಎದುರಾಗಿದೆ&#8221; ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>



<p style="font-size:20px">ಗುಜರಾತ್ ನ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಕಚ್, ಸೌರಾಷ್ಟ್ರ, ಮತ್ತು ದಕ್ಷಿಣ ಗುಜರಾತ್ ನ 19 ಜಿಲ್ಲೆಗಳ 89 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.</p>



<p style="font-size:20px">ಇಂದು ಸಂಜೆ 5 ಗಂಟೆಯೊಳಗೆ ರಾಜ್ಯದ ಮೊದಲ ಹಂತದ ಚುನಾವಣೆ ಮುಗಿಯಲಿದ್ದು 788 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಒಟ್ಟು 2,39,76,670 ಮಂದಿ ಮತ ಚಲಾಯಿಸಲಿದ್ದಾರೆ.<br>ಚುನಾವಣಾ ಆಯೋಗದ ಮಾಹಿತಿಯಂತೆ ಮೊದಲ ಹಂತದ ಮತದಾನದ 19 ಜಿಲ್ಲೆಗಳಲ್ಲಿ 13,065 ಮತಗಟ್ಟೆಗಳ ಲೈವ್ ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ. </p>



<p style="font-size:20px">ಮುಖ್ಯ ಚುನಾವಣಾಧಿಕಾರಿಯಿಂದ ಗಾಂಧಿನಗರದಲ್ಲಿ ರಾಜ್ಯ ಮಟ್ಟದ ಮೇಲ್ವಿಚಾರಣಾ ಘಟಕವು ಕಾರ್ಯ ನಿರ್ವಹಿಸುತ್ತಿದೆ. ಬೆಳಿಗ್ಗೆ 6.30 ರಿಂದ ಚುನಾವಣೆ ಮುಗಿಯುವ ವರೆಗೂ ನಿರಂತರ ವೀಕ್ಷಣೆ ನಡೆಯಲಾಗಿದೆ.</p>



<p style="font-size:20px">ಪ್ರಮುಖ ಅಭ್ಯರ್ಥಿಗಳ ಪೈಕಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಫಟ್ಲೋಡಿಯಾದಿಂದ ಸ್ಪರ್ಧೆಗಿಳಿದರೆ, ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಇಸುದನ್ ಗದ್ವಿ ಖಂಬಲಿಯಾದಿಂದ, ಬಿಜೆಪಿ ಅಭ್ಯರ್ಥಿ ಹಾರ್ದಿಕ್ ಪಟೇಲ್ ವಿರಾಮಗಾಮ್ ನಿಂದ ಸ್ಪರ್ಧೆಗೆ ಇಳಿದಿದ್ದಾರೆ.</p>



<p style="font-size:20px">ಡಿಸೆಂಬರ್ 8 ರಂದು ಒಟ್ಟಾರೆ ಗುಜರಾತ್ ರಾಜ್ಯದ ಚುನಾವಣಾ ಮತ ಎಣಿಕೆ ನಡೆಯಲಿದೆ. ಅದೇ ದಿನ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಕೂಡ ಹೊರಬೀಳಲಿದೆ.</p>
]]></content:encoded>
					
		
		
			</item>
		<item>
		<title>ಹಾಲಿನ ದರದಲ್ಲಿ ಮೂರು ರೂ. ಹೆಚ್ಚಳಕ್ಕೆ ಕೆಎಂಎಫ್ ನಿರ್ಧಾರ</title>
		<link>https://peepalmedia.com/the-price-of-milk-is-rs-kmf-decision-for-increase/</link>
		
		<dc:creator><![CDATA[Peepal Media]]></dc:creator>
		<pubDate>Mon, 12 Sep 2022 09:18:01 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[KMF]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[price increase]]></category>
		<guid isPermaLink="false">https://peepalmedia.com/?p=4934</guid>

					<description><![CDATA[ಬೆಂಗಳೂರು: ಕಳೆದ ಎಂಟು ತಿಂಗಳುಗಳಿಂದ ಹಾಲಿನ ದರ ಹೆಚ್ಚಿಸುವಂತೆ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌) ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು, ಆದರೆ ಸರ್ಕಾರ ಈ ವಿಷಯದ ಬಗ್ಗೆ ಯಾವುದೇ ನಿರ್ಧಾರ ತೆದುಕೊಳ್ಳದಿರುವ ಪರಿಣಾಮ ಕೆಎಂಎಫ್‌ &#160;ಸ್ವತಃ ತಾವೇ ಬೆಲೆ ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಪ್ರತಿ ಬಾರಿಯೂ ರಾಜ್ಯ ಸರ್ಕಾರದ ಅನುಮತಿ ಪಡೆದೇ ಹಾಲಿನ ದರ ಹೆಚ್ಚಳ ಮಾಡುತ್ತಿದ್ದ ಕೆಎಂಎಫ್‌, ಈ ಬಾರಿ ನಿರ್ಧಾರವನ್ನು ಬದಲಿಸಿದೆ. ಸಂಕಷ್ಟದಲ್ಲಿರುವ ರೈತರಿಗೆ ಸಹಕರಿಸುವ ನಿಟ್ಟಿನಲ್ಲಿ ಹಾಲಿನ ದರ ಹೆಚ್ಚಳದ ಕುರಿತು ಸರ್ಕಾರಕ್ಕೆ [&#8230;]]]></description>
										<content:encoded><![CDATA[
<p class="has-medium-font-size">ಬೆಂಗಳೂರು: ಕಳೆದ ಎಂಟು ತಿಂಗಳುಗಳಿಂದ ಹಾಲಿನ ದರ ಹೆಚ್ಚಿಸುವಂತೆ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌) ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು, ಆದರೆ ಸರ್ಕಾರ ಈ ವಿಷಯದ ಬಗ್ಗೆ ಯಾವುದೇ ನಿರ್ಧಾರ ತೆದುಕೊಳ್ಳದಿರುವ ಪರಿಣಾಮ ಕೆಎಂಎಫ್‌ &nbsp;ಸ್ವತಃ ತಾವೇ ಬೆಲೆ ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.</p>



<p class="has-medium-font-size">ಪ್ರತಿ ಬಾರಿಯೂ ರಾಜ್ಯ ಸರ್ಕಾರದ ಅನುಮತಿ ಪಡೆದೇ ಹಾಲಿನ ದರ ಹೆಚ್ಚಳ ಮಾಡುತ್ತಿದ್ದ ಕೆಎಂಎಫ್‌, ಈ ಬಾರಿ ನಿರ್ಧಾರವನ್ನು ಬದಲಿಸಿದೆ. ಸಂಕಷ್ಟದಲ್ಲಿರುವ ರೈತರಿಗೆ ಸಹಕರಿಸುವ ನಿಟ್ಟಿನಲ್ಲಿ ಹಾಲಿನ ದರ ಹೆಚ್ಚಳದ ಕುರಿತು ಸರ್ಕಾರಕ್ಕೆ ಕೆಎಂಎಫ್ ಹಲವಾರು ಬಾರಿ ಪ್ರಸ್ತಾವನೆ ನೀಡಿತ್ತು.‌ ಆದರೆ ಸರ್ಕಾರ ಈ ಕುರಿತು ಮೀನಾಮೇಷಾ ಎಣಿಸುತ್ತಿರುವುದು ಈ ನಿರ್ಧಾರಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.</p>



<p class="has-medium-font-size">ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಹಾಲು ಒಕ್ಕೂಟ, ಆರ್ಥಿಕವಾಗಿ ಹಾಗೂ ಹಲವು ಯೋಜನೆಗಳೊಂದಿಗೆ ಸರ್ಕಾರದ ಜತೆ ಸಹಭಾಗಿತ್ವ ಇರುವುದರಿಂದ ರಾಜ್ಯ ಸರ್ಕಾರದ ಸಮ್ಮತಿ ಇಲ್ಲದೆ ಹಾಲಿನ ದರಗಳ ಬಗ್ಗೆ ಕೆಎಂಎಫ್‌ ನಿರ್ಧಾರ ತೆಗೆದುಕೊಳ್ಳುತ್ತಿರಲಿಲ್ಲ. ಆದರೆ, ಪ್ರಸ್ತುತ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಾಲಿನ ಉತ್ಪಾದನಾ ವೆಚ್ಚ ಹೆಚ್ಚಳ, ಅತಿವೃಷ್ಟಿಯಿಂದ ರೈತರಿಗೆ ಉಂಟಾಗಿರುವ ತೀವ್ರ ಸಂಕಷ್ಟದಿಂದಾಗಿ ಹಾಲಿನ ದರ ಹೆಚ್ಚಳ ಮಾಡಬೇಕಿರುವುದು &nbsp;ಅನಿವಾರ್ಯವಾಗಿದ್ದು, ರಾಜ್ಯದಲ್ಲಿನ ಸುಮಾರು 14 ಹಾಲು ಒಕ್ಕೂಟಗಳಿಂದ ಸಭೆ ನಡೆಸಿ, ಹಾಲಿನ ದರವನ್ನು 3 ರೂಪಾಯಿ ಹೆಚ್ಚಳ ಮಾಡಬೇಕೆಂಬ ನಿರ್ಧಾರದ ಕುರಿತು ಒಕ್ಕೂಟ ಮಾಹಿತಿ ನೀಡಿದೆ.</p>
]]></content:encoded>
					
		
		
			</item>
	</channel>
</rss>
