<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>pruthvi reddy &#8211; Peepal Media</title>
	<atom:link href="https://peepalmedia.com/tag/pruthvi-reddy/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 04 Jan 2024 13:31:50 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>pruthvi reddy &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಪಂಜಾಬ್‌ನಂತೆ ರಾಜ್ಯದಲ್ಲೂ ಅತಿಥಿ ಉಪನ್ಯಾಸಕರ ಕೆಲಸ ಕಾಯಂ ಮಾಡಿ: ಪೃಥ್ವಿ ರೆಡ್ಡಿ ಆಗ್ರಹ</title>
		<link>https://peepalmedia.com/keep-working-as-a-guest-lecturer/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 04 Jan 2024 13:31:14 +0000</pubDate>
				<category><![CDATA[ರಾಜ್ಯ]]></category>
		<category><![CDATA[AAP]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[pruthvi reddy]]></category>
		<guid isPermaLink="false">https://peepalmedia.com/?p=34502</guid>

					<description><![CDATA[ಬೆಂಗಳೂರು: ಆಮ್ ಆದ್ಮಿ ಪಕ್ಷದ ಯೋಜನೆಗಳನ್ನು ಕಾಪಿ ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯನವರೇ, ಪಂಜಾಬ್‌ನಲ್ಲಿ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿರುವ ಯೋಜನೆಯನ್ನು ಕೂಡ ಕಾಪಿ ಮಾಡಿ ರಾಜ್ಯದ ಅತಿಥಿ ಉಪನ್ಯಾಸಕರ ಕೆಲಸವನ್ನು ಕಾಯಂಗೊಳಿಸಿ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಒತ್ತಾಯಿಸಿದರು. 12 ತಿಂಗಳ ವೇತನ, ಸೇವಾಭದ್ರತೆ, ಉಪನ್ಯಾಸಕರಿಗೆ ವೇತನ ಸಹಿತ ಹೆರಿಗೆ ರಜೆ, ಖಾಸಗಿ ನೌಕರರ ರೀತಿ ಗ್ಯಾಚ್ಯುಟಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ [&#8230;]]]></description>
										<content:encoded><![CDATA[
<p><em>ಬೆಂಗಳೂರು:</em> ಆಮ್ ಆದ್ಮಿ ಪಕ್ಷದ ಯೋಜನೆಗಳನ್ನು ಕಾಪಿ ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯನವರೇ, ಪಂಜಾಬ್‌ನಲ್ಲಿ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿರುವ ಯೋಜನೆಯನ್ನು ಕೂಡ ಕಾಪಿ ಮಾಡಿ ರಾಜ್ಯದ ಅತಿಥಿ ಉಪನ್ಯಾಸಕರ ಕೆಲಸವನ್ನು ಕಾಯಂಗೊಳಿಸಿ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಒತ್ತಾಯಿಸಿದರು.</p>



<p>12 ತಿಂಗಳ ವೇತನ, ಸೇವಾಭದ್ರತೆ, ಉಪನ್ಯಾಸಕರಿಗೆ ವೇತನ ಸಹಿತ ಹೆರಿಗೆ ರಜೆ, ಖಾಸಗಿ ನೌಕರರ ರೀತಿ ಗ್ಯಾಚ್ಯುಟಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.</p>



<p>ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿದ ಉದಾಹರಣೆ ಇಲ್ಲ ಎಂದಿರುವ ಉನ್ನತ ಶಿಕ್ಷಣ ಸಚಿವ ಡಾ. ಎ.ಸಿ. ಸುಧಾಕರ್ ಅವರನ್ನು ತರಾಟೆಗೆ ತೆಗೆದುಕೊಂಡ ಪೃಥ್ವಿ ರೆಡ್ಡಿ ಅವರು ದೆಹಲಿ, ಪಂಜಾಬ್ ಸರ್ಕಾರಗಳು ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿರುವ ದಾಖಲೆಗಳನ್ನು ಮುಂದಿಟ್ಟು ಸೇವಾ ಭದ್ರತೆ ಒದಗಿಸುವಂತೆ ಸವಾಲು ಒಡ್ಡಿದರು.</p>



<p>2023ರ ಜುಲೈನಲ್ಲಿ ಪಂಜಾಬ್‌ನಲ್ಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸಲಾಗಿದೆ. ಮಾತ್ರವಲ್ಲದೆ 9,500 ರೂ. ಇದ್ದ ಸಂಬಳವನ್ನು 20,500 ರೂ.ಗೆ ಹೆಚ್ಚಿಸಲಾಗಿದೆ. ಆದರೆ, ಕರ್ನಾಟದಲ್ಲಿ 10,500 ರೂ. ಇದ್ದ ಸಂಬಳವನ್ನು 12,000 ರೂ.ಗೆ ಹೆಚ್ಚಿಸಿ ಕೈತೊಳೆದುಕೊಂಡಿದ್ದಾರೆ ಎಂದರು.</p>



<p>12th ಫೇಲ್ ಎನ್ನುವ ಸಿನಿಮಾದಲ್ಲಿ ಚಂಬಲ್ ಎನ್ನುವ ಪ್ರಾಂತ್ಯದ ಸಣ್ಣ ಹಳ್ಳಿಯ ಹುಡುಗನೊಬ್ಬ 12ನೇ ತರಗತಿ ಫೇಲಾದರೂ ಛಲ ಬಿಡದೆ ಐಎಎಸ್ ಓದಿ ಪಾಸು ಮಾಡಿದ್ದಾನೆ. ಅದು ನೈಜ ಘಟನೆ ಆಧರಿತ ಸಿನಿಮಾ. ಅಂತಹ ಹುಡುಗರ ಕನಸು ನನಸಾಗಿಸುವಲ್ಲಿ ಉಪನ್ಯಾಸಕರ ಪಾತ್ರ ಬಹಳ ಮುಖ್ಯ. ಆ ಸಿನಿಮಾದ ಕೊನೆಯಲ್ಲಿ ಒಂದು ಸಂಭಾಷಣೆ ಇದೆ. ಜನರನ್ನು ಅವಿದ್ಯಾವಂತರನ್ನಾಗಿ ಇಟ್ಟುಕೊಂಡಿರುವುದಕ್ಕೆ ರಾಜಕೀಯ ನಾಯಕರು ಕಾರಣ. ಸುಳ್ಳು ಭರವಸೆ ನೀಡಿ ಮತ ಪಡೆಯಬಹುದು ಎನ್ನುವ ಒಂದು ಕಾರಣಕ್ಕಾಗಿ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಎನ್ನುವ ಸಂದೇಶವಿದೆ ಎಂದರು.</p>



<p>ಬಹುತೇಕ ಶಾಸಕರು, ಸಚಿವರು ಖಾಸಗಿ ಶಾಲಾ-ಕಾಲೇಜುಗಳನ್ನು ನಡೆಸುತ್ತಿದ್ದಾರೆ. ನಮ್ಮ ದಂಧೆ ಬಂದ್ ಆಗುತ್ತೆ ಎಂದೇ ಸರ್ಕಾರಿ ಶಾಲೆ-ಕಾಲೇಜುಗಳನ್ನು ಕಡೆಗಣಿಸುತ್ತಿದ್ದಾರೆ. ಕಾಪಿ ಮಾಡಲಾದ ಆಮ್ ಆದ್ಮಿ ಪಕ್ಷದ ಯೋಜನೆಗಳನ್ನು ಜಾರಿಗೆ ತರಲು 50,000 ಕೋಟಿ ರೂ. ಹಣ ವ್ಯಯಿಸುತ್ತಿದ್ದೀರಿ, ಆದರೆ, ಅತಿಥಿ ಉಪನ್ಯಾಸಕರ ನೇಮಕ ಮಾಡಲು 100 ಕೋಟಿ ರೂ. ಹಣಕ್ಕೆ ಕೊರತೆಯುಂಟಾಗಿದೆಯೇ?. ಬೇರೆ ಯೋಜನೆಗಳಿಗೆ ಖರ್ಚು ಮಾಡಿದ್ರೆ ಕಮಿಷನ್ ಸಿಗುತ್ತೆ. ಆದರೆ, ಅತಿಥಿ ಉಪನ್ಯಾಸಕರ ಸಂಬಳದಲ್ಲಿ ಕಮಿಷನ್ ಕೇಳಲು ಆಗಲ್ಲ. ಇದೇ ಕಾರಣಕ್ಕೆ ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂದು ಆರೋಪಿಸಿದರು.</p>



<p>ಅತಿಥಿ ಉಪನ್ಯಾಸಕರ ಪ್ರತಿಭಟನೆಗೆ ಆಮ್ ಆದ್ಮಿ ಪಕ್ಷ ಸಂಪೂರ್ಣ ಬೆಂಬಲ ನೀಡಿದೆ. ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ಮಾಧ್ಯಮ ಉಸ್ತುವಾರಿ ಜಗದೀಶ್ ವಿ. ಸದಂ, ಸೋಷಿಯಲ್ ಮೀಡಿಯಾ ಮುಖ್ಯಸ್ಥ ದರ್ಶನ್ ಜೈನ್, ಮುಖಂಡರಾದ ಉಷಾ ಮೋಹನ್, ಅನಿಲ್ ನಾಚಪ್ಪ, ವಿಶ್ವನಾಥ್ ಸೇರಿದಂತೆ ಹಲವರು ಪಾಲ್ಗೊಂಡು, ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ಸೂಚಿಸಿದರು.</p>
]]></content:encoded>
					
		
		
			</item>
		<item>
		<title>ವರ್ಗಾವಣೆಯಲ್ಲಿ ರಾಜ್ಯ ಸರ್ಕಾರದ ಕುತಂತ್ರಕ್ಕೆ ಬ್ರೇಕ್‌ ಹಾಕಲು ಚುನಾವಣಾ ಆಯೋಗಕ್ಕೆ ಎಎಪಿ ಮನವಿ</title>
		<link>https://peepalmedia.com/app-appeals-to-the-election-commission-to-put-a-stop-to-the-machinations-of-the-state-government-in-transfers/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 13 Dec 2022 11:44:42 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[Aam Aadmi Party]]></category>
		<category><![CDATA[bengalure]]></category>
		<category><![CDATA[Election Commission]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[pruthvi reddy]]></category>
		<guid isPermaLink="false">https://peepalmedia.com/?p=18399</guid>

					<description><![CDATA[ಬೆಂಗಳೂರು: ಅಧಿಕಾರಿಗಳನ್ನು ತಾತ್ಕಾಲಿಕವಾಗಿ ವರ್ಗಾವಣೆ, ಮರುವರ್ಗಾವಣೆ ಮಾಡುವ ಮೂಲಕ ಚುನಾವಣಾ ಆಯೋಗ ಹೊರಡಿಸಿರುವ ವರ್ಗಾವಣೆ ನೀತಿಯ ಆಶಯಕ್ಕೆ ಧಕ್ಕೆಯಾಗುವಂತೆ ರಾಜ್ಯ ಸರ್ಕಾರದ ಕುತಂತ್ರ ಮಾರ್ಗ ಅನುಸರಿಸುತ್ತಿದ್ದು, ಇದಕ್ಕೆ ಅವಕಾಶ ನೀಡಬಾರದು ಎಂದು ಚುನಾವಣಾ ಆಯೋಗಕ್ಕೆ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮನವಿ ಸಲ್ಲಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿ ರೆಡ್ಡಿಯವರು, ʼಅಕ್ರಮಗಳನ್ನು ತಡಯುವ ಉದ್ದೇಶದಿಂದ ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗಷ್ಟೇ ವರ್ಗಾವಣೆ ನೀತಿಯನ್ನು ಪ್ರಕಟಿಸಿದೆ. ಇದರ ಅನ್ವಯ ಒಂದೇ ಜಿಲ್ಲೆಯಲ್ಲಿ ಮೂರು ವರ್ಷಗಳಿಗಿಂತ ಹೆಚ್ಚು [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಅಧಿಕಾರಿಗಳನ್ನು ತಾತ್ಕಾಲಿಕವಾಗಿ ವರ್ಗಾವಣೆ, ಮರುವರ್ಗಾವಣೆ ಮಾಡುವ ಮೂಲಕ ಚುನಾವಣಾ ಆಯೋಗ ಹೊರಡಿಸಿರುವ ವರ್ಗಾವಣೆ ನೀತಿಯ ಆಶಯಕ್ಕೆ ಧಕ್ಕೆಯಾಗುವಂತೆ ರಾಜ್ಯ ಸರ್ಕಾರದ ಕುತಂತ್ರ ಮಾರ್ಗ ಅನುಸರಿಸುತ್ತಿದ್ದು, ಇದಕ್ಕೆ ಅವಕಾಶ ನೀಡಬಾರದು ಎಂದು ಚುನಾವಣಾ ಆಯೋಗಕ್ಕೆ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮನವಿ ಸಲ್ಲಿಸಿದರು.</p>



<p>ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿ ರೆಡ್ಡಿಯವರು, ʼಅಕ್ರಮಗಳನ್ನು ತಡಯುವ ಉದ್ದೇಶದಿಂದ ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗಷ್ಟೇ ವರ್ಗಾವಣೆ ನೀತಿಯನ್ನು ಪ್ರಕಟಿಸಿದೆ. ಇದರ ಅನ್ವಯ ಒಂದೇ ಜಿಲ್ಲೆಯಲ್ಲಿ ಮೂರು ವರ್ಷಗಳಿಗಿಂತ ಹೆಚ್ಚು ಕಾಲದಿಂದ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಚುನಾವಣೆಯೊಂದಿಗೆ ನೇರ ಸಂಪರ್ಕ ಹೊಂದಿರುವ ಅಧಿಕಾರಿಗಳು ಬೇರೆ ಜಿಲ್ಲೆಗೆ ವರ್ಗಾವಣೆ ಆಗಬೇಕಿರುತ್ತದೆ. ಆದರೆ ರಾಜ್ಯ ಸರ್ಕಾರವು ಕುತಂತ್ರ ಮಾರ್ಗ ಅನುಸರಿಸಿ, ವರ್ಗಾವಣೆ ನೀತಿಯ ಆಶಯವನ್ನೇ ಬುಡಮೇಲೆ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆʼ ಎಂದು ಹೇಳಿದರು.</p>



<p>ʼರಾಜ್ಯ ಬಿಜೆಪಿ ಸರ್ಕಾರವು ಅಧಿಕಾರಿಗಳನ್ನು ಬೇರೆ ಜಿಲ್ಲೆಗೆ ತಾತ್ಕಾಲಿಕವಾಗಿ ವರ್ಗಾಯಿಸಿ, ಮತ್ತೆ ಮೊದಲಿದ್ದ ಜಿಲ್ಲೆಗೆ ಮರುವರ್ಗಾವಣೆ ಮಾಡುತ್ತಿರುವುದು ಕಂಡುಬರುತ್ತಿದೆ. ಈ ಮೂಲಕ ಅವರು ಮೂರು ವರ್ಷದಿಂದ ಒಂದೇ ಕಡೆ ಇಲ್ಲವೆಂದು ಸಾಬೀತುಪಡಿಸಿ, ಅವರನ್ನು ಮೊದಲಿದ್ದ ಜಿಲ್ಲೆಯಲ್ಲೇ ಉಳಿಸಿಕೊಳ್ಳಲು ಸರ್ಕಾರ ಮುಂದಾಗುತ್ತಿದೆ. ಸರ್ಕಾರದ ಇಂತಹ ಕುತಂತ್ರ ಮಾರ್ಗದ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗಿದೆʼ ಎಂದು ಪೃಥ್ವಿ ರೆಡ್ಡಿ ತಿಳಿಸಿದರು.</p>



<p>ಆಮ್‌ ಆದ್ಮಿ ಪಾರ್ಟಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಮಾತನಾಡಿ, ʼಚಿಲುಮೆ ಸಂಸ್ಥೆಯ ಮೂಲಕ ಮತದಾರರ ಪಟ್ಟಿಗೆ ಸಂಬಂಧಿಸಿ ಬಿಜೆಪಿಯು ಅಕ್ರಮ ನಡೆಸಿರುವುದು ತನಿಖೆಯಿಂದ ಸಾಬೀತಾಗುವ ಹಂತದಲ್ಲಿದೆ. ಹಣಬಲ, ತೋಳ್ಬಲ, ಅಧಿಕಾರಬಲ ಬಳಸಿಕೊಂಡು ಕೂಡ ಬಿಜೆಪಿ ಹಲವು ರೀತಿಯ ಅಕ್ರಮ ನಡೆಸುತ್ತದೆ. ಇಷ್ಟೆಲ್ಲ ಮಾಡಿಯೂ ಚುನಾವಣೆಯಲ್ಲಿ ಸೋತರೆ, ಆಪರೇಷನ್‌ ಕಮಲವೆಂದು ಮತ್ತೊಂದು ಅಕ್ರಮವನ್ನು ಬಿಜೆಪಿ ಮಾಡುತ್ತದೆ. ಈಗ ಇವುಗಳಿಗೆ ಮತ್ತೊಂದು ಸೇರ್ಪಡೆ ಎಂಬಂತೆ, ಬಿಜೆಪಿ ಸರ್ಕಾರವು ವರ್ಗಾವಣೆಯಲ್ಲಿ ಅಕ್ರಮ ಮಾಡುತ್ತಿದೆʼ ಎಂದು ಹೇಳಿದರು.</p>



<p>ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಬ್ರಿಜೇಶ್‌ ಕಾಳಪ್ಪ, ಜಗದೀಶ್‌ ವಿ ಸದಂ, ಬಿ.ಟಿ.ನಾಗಣ್ಣ, ಚನ್ನಪ್ಪಗೌಡ ನೆಲ್ಲೂರು, ಸುರೇಶ್‌ ರಾಥೋಡ್‌ ಮತ್ತಿತರರು ಭಾಗವಹಿಸಿದ್ದರು.</p>
]]></content:encoded>
					
		
		
			</item>
		<item>
		<title>ಗುಜರಾತ್‌ನಲ್ಲಿ ಮಾತ್ರ ಮೋದಿ ಪ್ರಭಾವವೆಂದು ಫಲಿತಾಂಶದಿಂದ ಸಾಬೀತು: ಪೃಥ್ವಿ ರೆಡ್ಡಿ</title>
		<link>https://peepalmedia.com/results-prove-modi-influence-only-in-gujarat-prithvi-reddy/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 09 Dec 2022 11:35:04 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[AAP]]></category>
		<category><![CDATA[bengalure]]></category>
		<category><![CDATA[gujarath election]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[pruthvi reddy]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=18044</guid>

					<description><![CDATA[ಬೆಂಗಳೂರು: ಕೇವಲ ಹತ್ತು ವರ್ಷಗಳಲ್ಲಿ ಆಮ್‌ ಆದ್ಮಿ ಪಾರ್ಟಿಯು ದೇಶದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲು ಕರ್ನಾಟಕ ಜನತೆ ಚುನಾವಣೆಗಾಗಿ ಕಾಯುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. ಆಮ್‌ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಸ್ಥಾನಮಾನ ಸಿಗುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೃಥ್ವಿ ರೆಡ್ಡಿ, “ಎಂಸಿಡಿ, ಗುಜರಾತ್‌ ಹಾಗೂ ಹಿಮಾಚಲ ಪ್ರದೇಶದ ಚುನಾವಣೆಗಳ ಫಲಿತಾಂಶವು ಮೂರು ಸಂದೇಶಗಳು ನೀಡಿದೆ. ಮೊದಲನೆಯದು, ಬಿಜೆಪಿಯನ್ನು ಸೋಲಿಸಲು ಆಮ್‌ ಆದ್ಮಿ ಪಾರ್ಟಿಗೆ ಸಾಧ್ಯವಿದೆ. [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಕೇವಲ ಹತ್ತು ವರ್ಷಗಳಲ್ಲಿ ಆಮ್‌ ಆದ್ಮಿ ಪಾರ್ಟಿಯು ದೇಶದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲು ಕರ್ನಾಟಕ ಜನತೆ ಚುನಾವಣೆಗಾಗಿ ಕಾಯುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.</p>



<p>ಆಮ್‌ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಸ್ಥಾನಮಾನ ಸಿಗುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೃಥ್ವಿ ರೆಡ್ಡಿ, “ಎಂಸಿಡಿ, ಗುಜರಾತ್‌ ಹಾಗೂ ಹಿಮಾಚಲ ಪ್ರದೇಶದ ಚುನಾವಣೆಗಳ ಫಲಿತಾಂಶವು ಮೂರು ಸಂದೇಶಗಳು ನೀಡಿದೆ. ಮೊದಲನೆಯದು, ಬಿಜೆಪಿಯನ್ನು ಸೋಲಿಸಲು ಆಮ್‌ ಆದ್ಮಿ ಪಾರ್ಟಿಗೆ ಸಾಧ್ಯವಿದೆ. ಎರಡನೆಯದು, ಕೇವಲ ಗುಜರಾತ್‌ನಲ್ಲಿ ಮಾತ್ರ ಪ್ರಧಾನಿ ಮೋದಿಯವರ ಪ್ರಭಾವವಿದೆ. ಮೂರನೆಯದು, ದೆಹಲಿ ಹಾಗೂ ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲೂ ಮೋದಿಯವರು ಬಿಜೆಪಿಯನ್ನು ಗೆಲ್ಲಿಸಲು ಸಾಧ್ಯವಿಲ್ಲ. ಬಿಜೆಪಿಯ ಭದ್ರಕೋಟೆ ಎಂದು ಕರೆಯಲ್ಪಡುವ ಗುಜರಾತ್‌ನಲ್ಲೂ 12% ಮತಗಳನ್ನು ಪಡೆಯುವುದರಲ್ಲಿ ಎಎಪಿ ಯಶಸ್ವಿಯಾಗಿದೆ” ಎಂದು ಹೇಳಿದರು.</p>



<p>“2012ರಲ್ಲಿ ʻಭ್ರಷ್ಟಾಚಾರ ವಿರೋಧಿ ಭಾರತʼ ಹೋರಾಟದ ಮುಂದಿನ ಭಾಗವಾಗಿ ಆಮ್‌ ಆದ್ಮಿ ಪಾರ್ಟಿ ಹುಟ್ಟಿಕೊಂಡಿತು. ಅಂದು ಸುಮಾರು ಹತ್ತು ಕಾರ್ಯಕರ್ತರಿಂದ ಆರಂಭವಾದ ಪಕ್ಷವು ದೆಹಲಿಯಲ್ಲಿ ಭದ್ರವಾಗಿ ಬೇರೂರಿ, ಈಗ ದೇಶದೆಲ್ಲೆಡೆ ಹೆಮ್ಮರವಾಗಿ ಬೆಳೆಯುತ್ತಿದೆ. ಚುನಾವಣಾ ಆಯೋಗದ ಮಾನದಂಡಕ್ಕೆ ಅನುಗುಣವಾಗಿ ನಾಲ್ಕು ರಾಜ್ಯಗಳಲ್ಲಿ ಸಾಧನೆ ತೋರುವ ಮೂಲಕ ರಾಷ್ಟ್ರೀಯ ಪಕ್ಷ ಎಂಬ ಮಾನ್ಯತೆ ಪಡೆಯಲು ಅರ್ಹವಾಗಿದೆ. ಎಎಪಿಗೆ ದೇಶಾದ್ಯಂತ ಸಿಗುತ್ತಿರುವ ಯಶಸ್ಸಿಗೆ ನಮ್ಮ ನಾಯಕರು ಮತ್ತು ಕಾರ್ಯಕರ್ತರ ಅವಿರತ ಪರಿಶ್ರಮ ಹಾಗೂ ಪಕ್ಷದ ತತ್ತ್ವ ಸಿದ್ಧಾಂತಗಳು ಕಾರಣ” ಎಂದು ಪೃಥ್ವಿ ರೆಡ್ಡಿ ಹೇಳಿದರು.</p>



<p>ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಮಾತನಾಡಿ, “ಕರ್ನಾಟಕದ ರಾಜಕೀಯದಲ್ಲಿ ಪರ್ಯಾಯ ಶಕ್ತಿಯಾಗಿ ಆಮ್‌ ಆದ್ಮಿ ಪಾರ್ಟಿ ಎದ್ದು ನಿಲ್ಲಲಿದೆ. ರಾಜ್ಯದ ವಿವಿಧ ಭಾಗಗಳಿಗೆ ಪ್ರವಾಸ ಹೋದ ಸಂದರ್ಭದಲ್ಲಿ ಜನಸಾಮಾನ್ಯರ ನಾಡಿಮಿಡಿತ ತಿಳಿಯಲು ನಾನು ಪ್ರಯತ್ನಿಸಿದ್ದು, ಆಗ ಈ ಅಂಶ ಸ್ಪಷ್ಟವಾಗಿ ಗಮನಕ್ಕೆ ಬಂದಿದೆ. ಮುಂಬರುವ ಬಿಬಿಎಂಪಿ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಾರ್ಟಿ ಪಕ್ಷವು ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯು ಇನ್ನಷ್ಟು ಬಲಗೊಳ್ಳಲಿದೆ” ಎಂದು ಹೇಳಿದರು.</p>



<p>ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, “ಕಾಂಗ್ರೆಸ್‌ ಪಕ್ಷವನ್ನು ಹತ್ತಿಕ್ಕಲು ಬಿಜೆಪಿಯು ಎಎಪಿಯನ್ನು ಬಳಸಿಕೊಳ್ಳುತ್ತಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ಮೂರ್ಖತನದಿಂದ ಕೂಡಿದೆ. ಚುನಾವಣೆ ಎಂಬ ಯುದ್ಧಕ್ಕೂ ಮುನ್ನವೇ ಶಸ್ತ್ರತ್ಯಾಗ ಮಾಡಿ ಸೋಲೊಪ್ಪಿಕೊಳ್ಳುವ ಕಾಂಗ್ರೆಸ್‌ಗೆ ಎಎಪಿ ಬಗ್ಗೆ ಮಾತಾಡುವ ನೈತಿಕತೆಯಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಅತ್ಯಂತ ಭ್ರಷ್ಟ ಪಕ್ಷಗಳಾಗಿದ್ದು, ಇವೆರಡರ ದುರಾಡಳಿತದಿಂದ ಬೇಸತ್ತಿರುವವರು ಹಾಗೂ ದೇಶದ ರಾಜಕೀಯದಲ್ಲಿ ಬದಲಾವಣೆ ತರಬೇಕೆಂದು ಬಯಸುತ್ತಿರುವವರು ಆಮ್‌ ಆದ್ಮಿ ಪಾರ್ಟಿಯನ್ನು ಬೆಂಬಲಿಸುತ್ತಿದ್ದಾರೆ. ಎಲ್ಲ ಭ್ರಷ್ಟ ಪಕ್ಷಗಳಿಂದ ಆಮ್‌ ಆದ್ಮಿ ಪಾರ್ಟಿ ಅಂತರ ಕಾಯ್ದುಕೊಂಡು ಮುನ್ನಡೆಯುತ್ತಿದೆ” ಎಂದು ಹೇಳಿದರು.</p>



<p>ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, ಪಕ್ಷದ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ, ಹಿರಿಯ ವಕೀಲರಾದ ಕೆ.ದಿವಾಕರ್ ಭಾಗವಹಿಸಿದ್ದರು.</p>
]]></content:encoded>
					
		
		
			</item>
		<item>
		<title>ಬೆಳಗಾವಿ ಗಡಿ ವಿವಾದ: ಸರ್ವಪಕ್ಷ ಸಭೆಗೆ ಆಮ್‌ ಆದ್ಮಿ ಪಾರ್ಟಿ ಆಗ್ರಹ, ಭಾಗವಹಿಸಲು ಅವಕಾಶಕ್ಕೆ ಮನವಿ</title>
		<link>https://peepalmedia.com/belgaum-border-dispute-aam-aadmi-party-demands-an-all-party-meeting-appeals-for-an-opportunity-to-participate/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 23 Nov 2022 04:36:16 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[Aam Aadmi Party]]></category>
		<category><![CDATA[bengalure]]></category>
		<category><![CDATA[brijesh kalappa]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mohan dasari]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[pruthvi reddy]]></category>
		<guid isPermaLink="false">https://peepalmedia.com/?p=16249</guid>

					<description><![CDATA[ಬೆಂಗಳೂರು: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕ ಕೂಡ ಸರ್ವಪಕ್ಷಗಳ ಸಭೆ ನಡೆಸಿ ದಿಟ್ಟ ನೆಲುವು ತೆಗೆದುಕೊಳ್ಳಬೇಕೆಂದು ಆಮ್‌ ಆದ್ಮಿ ಪಾರ್ಟಿ ಆಗ್ರಹಿಸಿದ್ದು, ಸಭೆಯಲ್ಲಿ ಭಾಗವಹಿಸಲು ಆಮ್‌ ಆದ್ಮಿ ಪಾರ್ಟಿ ಪ್ರತಿನಿಧಿಗೂ ಅವಕಾಶ ನೀಡಬೇಕೆಂದು ಕೋರಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದ ಹಿತಾಸಕ್ತಿ ಕಾಪಾಡಲು ಆಮ್‌ ಆದ್ಮಿ ಪಾರ್ಟಿ ಬದ್ಧವಾಗಿದೆ ಎಂದು ತಿಳಿಸಿರುವ ಪೃಥ್ವಿ ರೆಡ್ಡಿಯವರು, ʼನಮ್ಮ ರಾಜ್ಯದ ಹಿತಾಸಕ್ತಿಗೆ ಧಕ್ಕೆ ಉಂಟುಮಾಡುವ ಪ್ರಯತ್ನಗಳ ವಿರುದ್ಧ ಎಲ್ಲ ಪಕ್ಷಗಳೂ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕ ಕೂಡ ಸರ್ವಪಕ್ಷಗಳ ಸಭೆ ನಡೆಸಿ ದಿಟ್ಟ ನೆಲುವು ತೆಗೆದುಕೊಳ್ಳಬೇಕೆಂದು ಆಮ್‌ ಆದ್ಮಿ ಪಾರ್ಟಿ ಆಗ್ರಹಿಸಿದ್ದು, ಸಭೆಯಲ್ಲಿ ಭಾಗವಹಿಸಲು ಆಮ್‌ ಆದ್ಮಿ ಪಾರ್ಟಿ ಪ್ರತಿನಿಧಿಗೂ ಅವಕಾಶ ನೀಡಬೇಕೆಂದು ಕೋರಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.</p>



<p>ಕರ್ನಾಟಕದ ಹಿತಾಸಕ್ತಿ ಕಾಪಾಡಲು ಆಮ್‌ ಆದ್ಮಿ ಪಾರ್ಟಿ ಬದ್ಧವಾಗಿದೆ ಎಂದು ತಿಳಿಸಿರುವ ಪೃಥ್ವಿ ರೆಡ್ಡಿಯವರು, ʼನಮ್ಮ ರಾಜ್ಯದ ಹಿತಾಸಕ್ತಿಗೆ ಧಕ್ಕೆ ಉಂಟುಮಾಡುವ ಪ್ರಯತ್ನಗಳ ವಿರುದ್ಧ ಎಲ್ಲ ಪಕ್ಷಗಳೂ ಒಗ್ಗೂಡಿ ಹೋರಾಡಬೇಕಾದ ಸಮಯ ಬಂದಿದೆ. ಈ ವಿಷಯದಲ್ಲಿ ನಮ್ಮ ಆಮ್‌ ಆದ್ಮಿ ಪಾರ್ಟಿಯು ರಾಜ್ಯದ ಹಿತಾಸಕ್ತಿ ಕಾಪಾಡಲು ಬದ್ಧವಾಗಿದ್ದು, ಸರ್ವಪಕ್ಷ ಸಭೆಗೆ ರಾಜ್ಯ ಸರ್ಕಾರವು ಆಮ್‌ ಆದ್ಮಿ ಪಾರ್ಟಿಯನ್ನೂ ಆಹ್ವಾನಿಸಬೇಕು. ಭಾರತದ ಚುನಾವಣಾ ಆಯೋಗದ ಕಾನೂನಿನ ಪ್ರಕಾರ ಆಮ್‌ ಆದ್ಮಿ ಪಾರ್ಟಿಗೆ ಇನ್ನೂ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಸಿಗದಿದ್ದರೂ, ಪ್ರಸ್ತುತ ವಸ್ತುಸ್ಥಿತಿಯ ಪ್ರಕಾರ ಆಮ್‌ ಆದ್ಮಿ ಪಾರ್ಟಿಯನ್ನು ರಾಷ್ಟ್ರೀಯ ಪಕ್ಷವೆಂದು ಪರಿಗಣಿಸಿ ಸಭೆಗೆ ಕರೆಯಬಹುದುʼ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>



<p>ʼನಮ್ಮ ರಾಜ್ಯದ ಹಿತಾಸಕ್ತಿ ಕಾಪಾಡಲು ಸದಾ ಬದ್ಧವಾಗಿರುವ ಅನುಭವಿ ಹಾಗೂ ಜ್ಞಾನವುಳ್ಳ ವ್ಯಕ್ತಿಗಳು ಆಮ್‌ ಆದ್ಮಿ ಪಾರ್ಟಿಯಲ್ಲಿ ಇದ್ದಾರೆ. ಉದಾಹರಣೆಗೆ, ಕಳೆದ ಒಂದು ದಶಕದಿಂದ ನೀರುಹಂಚಿಕೆ ವಿವಾದ ಹಾಗೂ ಗಡಿ ವಿವಾದಕ್ಕೆ ಸಂಬಂಧಿಸಿದ ಸರ್ವಪಕ್ಷ ಸಭೆಗಳಲ್ಲಿ ಭಾಗವಹಿಸಿರುವ ಬ್ರಿಜೇಶ್‌ ಕಾಳಪ್ಪರವರು ಇದ್ದಾರೆ. ಆದ್ದರಿಂದ ಸರ್ವಪಕ್ಷ ಸಭೆಗೆ ನಮ್ಮ ಪಕ್ಷದ ಕೊಡುಗೆಯು ಸತ್ವಯುತವಾಗಿ, ಹೊಸತನವಾಗಿ ಹಾಗೂ ಯೋಗ್ಯವಾಗಿ ಇರುತ್ತದೆ ಎಂದು ಭರವಸೆ ನೀಡುತ್ತಿದ್ದೇನೆ. ರಾಜ್ಯದ ಹಿತಾಸಕ್ತಿಗಾಗಿ ಮುಖ್ಯಮಂತ್ರಿಯವರು ಪರಿಪೂರ್ಣವಾದ ಪ್ರಯತ್ನಗಳನ್ನು ಮಾಡಬೇಕುʼ ಎಂದು ಪೃಥ್ವಿ ರೆಡ್ಡಿ ಪತ್ರದಲ್ಲಿ ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವಕ್ಕಾಗಿ ಆಮ್ ಆದ್ಮಿ ಪಕ್ಷ ಒಂದೇ ಆಯ್ಕೆ : ಪೃಥ್ವಿರೆಡ್ಡಿ</title>
		<link>https://peepalmedia.com/aam-aadmi-party-is-the-only-option-for-democracy-from-monarchy-prithvireddy/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 14 Nov 2022 06:22:29 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[bbmp election]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[jana jagruthi event]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mohan dasari]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[pruthvi reddy]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=15423</guid>

					<description><![CDATA[ಬೆಂಗಳೂರು: ಬೆಂಗಳೂರಿನ ವಿಜಯನಗರ ವಿಧಾನಸಭಾ ಕ್ಷೇತ್ರದ ಬಾಪೂಜಿನಗರ ವಾರ್ಡ್ ನಲ್ಲಿ ನಿನ್ನೆ ಆಮ್ ಆದ್ಮಿ ಪಕ್ಷದ ವತಿಯಿಂದ ಬೃಹತ್ ಪಾದಯಾತ್ರೆ ಹಾಗೂ ಜನಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು . ಸುದ್ದಿಗಾರರೊಂದಿಗೆ ಮಾತನಾಡುತ್ತ ಪೃಥ್ವಿ ರೆಡ್ಡಿಯವರು ರಾಜಪ್ರಭುತ್ವದಿಂದ ಸ್ವತಂತ್ರಗೊಂಡು 75 ವರ್ಷಗಳಾದರೂ ಸಹ ನಮ್ಮನ್ನಾಳುತ್ತಿರುವ ಜನಪ್ರತಿನಿಧಿಗಳು ಅದೇ ರಾಜಪ್ರಭುತ್ವ ವನ್ನು ಉಳಿಸಿಕೊಂಡು ಪ್ರಜಾಪ್ರಭುತ್ವವನ್ನು ದಮನ ಮಾಡುತ್ತಿರುವುದು ಅತ್ಯಂತ ಕಳವಳಕಾರಿಯಾದ ಸಂಗತಿ. ಕೂಡಲೇ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಆಮ್ ಆದ್ಮಿ ಪಕ್ಷದ ಜನಸಾಮಾನ್ಯನನ್ನು ಗೆಲ್ಲಿಸುವುದೊಂದೇ [&#8230;]]]></description>
										<content:encoded><![CDATA[
<p><strong>ಬೆಂಗಳೂರು</strong>: ಬೆಂಗಳೂರಿನ ವಿಜಯನಗರ ವಿಧಾನಸಭಾ ಕ್ಷೇತ್ರದ ಬಾಪೂಜಿನಗರ ವಾರ್ಡ್ ನಲ್ಲಿ ನಿನ್ನೆ ಆಮ್ ಆದ್ಮಿ ಪಕ್ಷದ ವತಿಯಿಂದ ಬೃಹತ್ ಪಾದಯಾತ್ರೆ ಹಾಗೂ ಜನಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು .</p>



<p>ಸುದ್ದಿಗಾರರೊಂದಿಗೆ ಮಾತನಾಡುತ್ತ ಪೃಥ್ವಿ ರೆಡ್ಡಿಯವರು ರಾಜಪ್ರಭುತ್ವದಿಂದ ಸ್ವತಂತ್ರಗೊಂಡು 75 ವರ್ಷಗಳಾದರೂ ಸಹ ನಮ್ಮನ್ನಾಳುತ್ತಿರುವ ಜನಪ್ರತಿನಿಧಿಗಳು ಅದೇ ರಾಜಪ್ರಭುತ್ವ ವನ್ನು ಉಳಿಸಿಕೊಂಡು ಪ್ರಜಾಪ್ರಭುತ್ವವನ್ನು ದಮನ ಮಾಡುತ್ತಿರುವುದು ಅತ್ಯಂತ ಕಳವಳಕಾರಿಯಾದ ಸಂಗತಿ. ಕೂಡಲೇ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಆಮ್ ಆದ್ಮಿ ಪಕ್ಷದ ಜನಸಾಮಾನ್ಯನನ್ನು ಗೆಲ್ಲಿಸುವುದೊಂದೇ ನಮ್ಮ ಮುಂದಿರುವ ಏಕೈಕ ಮಾರ್ಗ ಎಂದು ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಮೂಲಕ ರಾಜಕೀಯ ಕಲುಷಿತ ತ್ವಚೆಯನ್ನು ಹೋಗಲಾಡಿಸಿ ಜನಸಾಮಾನ್ಯನ ಅಳಲನ್ನು, ನೋವು &#8211; ದುಮ್ಮಾನ ಗಳ ಪರಿಹಾರಕ್ಕಾಗಿ&nbsp; ಆಮ್ ಆದ್ಮಿ ಪಕ್ಷವನ್ನು ಅಪ್ಪಿಕೊಳ್ಳುವುದು ಈಗ ಇರುವ ಏಕೈಕ ದಾರಿ ಎಂದು ತಿಳಿಸಿದರು.</p>



<figure class="wp-block-image size-large"><img fetchpriority="high" decoding="async" width="1024" height="603" src="https://peepalmedia.com/wp-content/uploads/2022/11/Screenshot-2022-11-14-115016-1024x603.jpg" alt="" class="wp-image-15425" srcset="https://peepalmedia.com/wp-content/uploads/2022/11/Screenshot-2022-11-14-115016-1024x603.jpg 1024w, https://peepalmedia.com/wp-content/uploads/2022/11/Screenshot-2022-11-14-115016-300x177.jpg 300w, https://peepalmedia.com/wp-content/uploads/2022/11/Screenshot-2022-11-14-115016-768x453.jpg 768w, https://peepalmedia.com/wp-content/uploads/2022/11/Screenshot-2022-11-14-115016-150x88.jpg 150w, https://peepalmedia.com/wp-content/uploads/2022/11/Screenshot-2022-11-14-115016-696x410.jpg 696w, https://peepalmedia.com/wp-content/uploads/2022/11/Screenshot-2022-11-14-115016-1068x629.jpg 1068w, https://peepalmedia.com/wp-content/uploads/2022/11/Screenshot-2022-11-14-115016.jpg 1098w" sizes="(max-width: 1024px) 100vw, 1024px" /></figure>



<p>ಮುಂಬರುವ&nbsp; ಬೆಂಗಳೂರು ಬೃಹತ್&nbsp; ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಬೃಹತ್ ಬಹುಮತದಿಂದ ಪಾಲಿಕೆಯ ಕೈ ಹಿಡಿಯಲಿದೆ ಎಂದು ತಿಳಿಸಿದರು.</p>



<p>ಪಾದಯಾತ್ರೆ ಸ್ಥಳೀಯ ಬೃಹತ್ ಜನಸ್ತೋಮದೊಂದಿಗೆ ಯಶಸ್ವಿಯಾಯಿತು. ಪಾದಯಾತ್ರೆಯಲ್ಲಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಸೇರಿದಂತೆ ಡಾ. ರಮೇಶ್&nbsp; ಬೆಲ್ಲಮಕೊಂಡ, ರಹೀಂಖಾನ್, ಅರ್ಚನಾ ಹಾಗೂ ಇನ್ನಿತರ ಸ್ಥಳೀಯ ಮುಖಂಡರುಗಳು ಹಾಗೂ ಪಕ್ಷದ ಕಾರ್ಯಕರ್ತರುಗಳು ಭಾಗವಹಿಸಿದ್ದರು.</p>
]]></content:encoded>
					
		
		
			</item>
		<item>
		<title>ಮುಂದಿನ ಬಾರಿ ಪೀಣ್ಯ ಕೈಗಾರಿಕಾ ಪ್ರದೇಶಕ್ಕೂ ಭೇಟಿ ನೀಡಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಆಗ್ರಹ</title>
		<link>https://peepalmedia.com/next-time-visit-peenya-industrial-area-too-prithvi-reddy-urges-pm-modi/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 11 Nov 2022 14:01:18 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[Aam Aadmi Party]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[PEENYA INDUSTRIAL AREA]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[pruthvi reddy]]></category>
		<guid isPermaLink="false">https://peepalmedia.com/?p=15339</guid>

					<description><![CDATA[ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ ಬಾರಿ ಬೆಂಗಳೂರಿಗೆ ಬಂದಾಗ ಪೀಣ್ಯ ಕೈಗಾರಿಕಾ ಪ್ರದೇಶಕ್ಕೂ ಆಗಮಿಸಿ ಅಲ್ಲಿನ ಮೂಲ ಸೌಕರ್ಯವನ್ನು ವೀಕ್ಷಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಟ್ವೀಟ್‌ ಮಾಡುವ ಮೂಲಕ ಆಗ್ರಹಿಸಿದ್ದಾರೆ. ʼಒಂದು ಕಾಲದಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶವು ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶವೆಂಬ ಖ್ಯಾತಿಗೆ ಪಾತ್ರವಾಗಿತ್ತು. ಆದರೆ ಇಂದು ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಅಲ್ಲಿನ ರಸ್ತೆಗಳಲ್ಲಿ ಗುಂಡಿಗಳು ಮಾತ್ರವಲ್ಲದೇ ಮೃತ್ಯಕೂಪಗಳೇ ಸೃಷ್ಟಿಯಾಗಿವೆ. ಮೂಲಸೌಕರ್ಯಗಳಿಲ್ಲದೇ ಹಾಳುಕೊಂಪೆಯಾಗಿದೆ. ಆದ್ದರಿಂದ ಮೋದಿಯವರು ಇಲ್ಲಿಗೆ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ ಬಾರಿ ಬೆಂಗಳೂರಿಗೆ ಬಂದಾಗ ಪೀಣ್ಯ ಕೈಗಾರಿಕಾ ಪ್ರದೇಶಕ್ಕೂ ಆಗಮಿಸಿ ಅಲ್ಲಿನ ಮೂಲ ಸೌಕರ್ಯವನ್ನು ವೀಕ್ಷಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಟ್ವೀಟ್‌ ಮಾಡುವ ಮೂಲಕ ಆಗ್ರಹಿಸಿದ್ದಾರೆ.</p>



<p>ʼಒಂದು ಕಾಲದಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶವು ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶವೆಂಬ ಖ್ಯಾತಿಗೆ ಪಾತ್ರವಾಗಿತ್ತು. ಆದರೆ ಇಂದು ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಅಲ್ಲಿನ ರಸ್ತೆಗಳಲ್ಲಿ ಗುಂಡಿಗಳು ಮಾತ್ರವಲ್ಲದೇ ಮೃತ್ಯಕೂಪಗಳೇ ಸೃಷ್ಟಿಯಾಗಿವೆ. ಮೂಲಸೌಕರ್ಯಗಳಿಲ್ಲದೇ ಹಾಳುಕೊಂಪೆಯಾಗಿದೆ. ಆದ್ದರಿಂದ ಮೋದಿಯವರು ಇಲ್ಲಿಗೆ ಭೇಟಿ ನೀಡಬೇಕು. ಮೋದಿಯವರು ಭೇಟಿ ನೀಡುವ ಸ್ಥಳಗಳಲ್ಲಿ ಮಾತ್ರ ಸರ್ಕಾರ ದುರಸ್ತಿ ಕಾಮಗಾರಿ ಕೈಗೊಳ್ಳುವುದರಿಂದ, ಮೋದಿಯವರು ಇಲ್ಲಿಗೆ ಭೇಟಿ ನೀಡಿದರೆ ಸಮಸ್ಯೆಗಳು ಬಗೆಹರಿಯಬಹುದುʼ ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.</p>



<p>ʼಭಾರೀ ಪ್ರಮಾಣದ ತೆರಿಗೆ ಸಂಗ್ರಹವಾಗುವ ಪೀಣ್ಯ ಕೈಗಾರಿಕಾ ಪ್ರದೇಶವು ರಾಜ್ಯ ಹಾಗೂ ದೇಶದ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಆದರೆ ಇದಕ್ಕೆ ಪ್ರತಿಯಾಗಿ ಸರ್ಕಾರದ ಸಹಾಯ ಸಿಗುತ್ತಿಲ್ಲ. ವಿಶೇಷ ಪ್ಯಾಕೇಜ್‌ ಘೋಷಿಸಿ ಪ್ರದೇಶವನ್ನು ಅಭಿವೃದ್ಧಿ ಪಡಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಇತ್ತೀಚಿಗೆ ಅಕ್ಟೋಬರ್‌ನಲ್ಲಿ ಬಿಬಿಎಂಪಿ ನಡೆಸಿದ ಸಮೀಕ್ಷೆಯಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶದಲ್ಲೇ 499 ರಸ್ತೆ ಗುಂಡಿಗಳು ಪತ್ತೆಯಾಗಿದ್ದವು. ಇದರಲ್ಲಿ ಬೆರಳೆಣಿಕೆಯ ಗುಂಡಿಗಳನ್ನು ಮಾತ್ರ ಮುಚ್ಚಲಾಗಿದ್ದು, ರಸ್ತೆಗಳು ತೀರಾ ದುಸ್ಥಿತಿಯಲ್ಲಿವೆʼ ಎಂದು ಪೃಥ್ವಿ ರೆಡ್ಡಿ ಅಸಮಧಾನ ವ್ಯಕ್ತಪಡಿಸಿದ್ದಾರೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="en" dir="ltr">Request Prime Minister Modi to visit Peenya Industrail Area, in Bengaluru during his next visit.<br>The area which was at one time Asia&#39;s largest Industrial area today has been completely neglected and has hopeless infrastructure, not potholes but death traps in the roads ! <a href="https://t.co/wxTAn4DrBs">pic.twitter.com/wxTAn4DrBs</a></p>&mdash; Prithvi Reddy (@aapkaprithvi) <a href="https://twitter.com/aapkaprithvi/status/1591029335833849856?ref_src=twsrc%5Etfw">November 11, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
		<item>
		<title>ಮೋದಿಯವರು ವಾರಕ್ಕೊಮ್ಮೆ ಬರುತ್ತಿರಲಿ: ಶಾಸಕರ ಕಾರ್ಯವೈಖರಿಗೆ ಪೃಥ್ವಿ ರೆಡ್ಡಿ ವ್ಯಂಗ್ಯ</title>
		<link>https://peepalmedia.com/let-modi-come-once-a-week-prithvi-reddy-sneers-at-mlas-behavior/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 09 Nov 2022 06:14:14 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[Aam Aadmi Party]]></category>
		<category><![CDATA[bbmp]]></category>
		<category><![CDATA[bjp]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mohan dasari]]></category>
		<category><![CDATA[narendramodi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[pruthvi reddy]]></category>
		<guid isPermaLink="false">https://peepalmedia.com/?p=14926</guid>

					<description><![CDATA[ಬೆಂಗಳೂರು: ಶಾಸಕರು ನಿರಂತರವಾಗಿ ಕೆಲಸ ಮಾಡುತ್ತಿರಬೇಕೆಂದರೆ ಪ್ರಧಾನಿ ನರೇಂದ್ರ ಮೋದಿಯವರು ವಾರಕ್ಕೊಮ್ಮೆ ಬರುತ್ತಿರಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ವ್ಯಂಗಿಸಿದ್ದಾರೆ . ನವೆಂಬರ್‌ 11ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬರುವ ಹಿನ್ನೆಲೆಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚುತ್ತಿರುವುದರ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಪೃಥ್ವಿ ರೆಡ್ಡಿ ಅವರು, “ನರೇಂದ್ರ ಮೋದಿಯವರು ಬೆಂಗಳೂರಿಗೆ ಬರುತ್ತಾರೆಂದರೆ ಖುಷಿಯಾಗುತ್ತದೆ. ಸದಾ ಗೊರಕೆ ಹೊಡೆಯುವ ಇಲ್ಲಿನ ಬಿಜೆಪಿ ಶಾಸಕರು ರಸ್ತೆಗುಂಡಿ ಮುಚ್ಚಿಸುತ್ತಾರೆ. ಸುಣ್ಣಬಣ್ಣ ಹೊಡೆಯುತ್ತಾರೆ. ಹೀಗಾಗಿ ನನ್ನ ಒಂದೇ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಶಾಸಕರು ನಿರಂತರವಾಗಿ ಕೆಲಸ ಮಾಡುತ್ತಿರಬೇಕೆಂದರೆ ಪ್ರಧಾನಿ ನರೇಂದ್ರ ಮೋದಿಯವರು ವಾರಕ್ಕೊಮ್ಮೆ ಬರುತ್ತಿರಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ವ್ಯಂಗಿಸಿದ್ದಾರೆ .</p>



<p>ನವೆಂಬರ್‌ 11ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬರುವ ಹಿನ್ನೆಲೆಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚುತ್ತಿರುವುದರ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಪೃಥ್ವಿ ರೆಡ್ಡಿ ಅವರು, “ನರೇಂದ್ರ ಮೋದಿಯವರು ಬೆಂಗಳೂರಿಗೆ ಬರುತ್ತಾರೆಂದರೆ ಖುಷಿಯಾಗುತ್ತದೆ. ಸದಾ ಗೊರಕೆ ಹೊಡೆಯುವ ಇಲ್ಲಿನ ಬಿಜೆಪಿ ಶಾಸಕರು ರಸ್ತೆಗುಂಡಿ ಮುಚ್ಚಿಸುತ್ತಾರೆ. ಸುಣ್ಣಬಣ್ಣ ಹೊಡೆಯುತ್ತಾರೆ. ಹೀಗಾಗಿ ನನ್ನ ಒಂದೇ ಮನವಿ ಮೋದಿಯವರೇ, ನೀವು ಆಗಾಗ ವಾರಕ್ಕೊಮ್ಮೆ ಬರುತ್ತಿರಿ. ನಿಮ್ಮ ಶಾಸಕರು ಆಗಲಾದರೂ ಕೆಲಸ ಮಾಡುತ್ತಾರೋ ನೋಡೋಣʼ ಎಂದು ಟೀಕಿಸಿದ್ದಾರೆ.</p>



<p><strong>ಎಎಪಿಯಿಂದ ʻ</strong><strong>ನಮ್ಮಲ್ಲಿಗೂ </strong><strong>ಬನ್ನಿ </strong><strong>ಮೋದಿʼ </strong><strong>ಅಭಿಯಾನ</strong></p>



<p>ಪ್ರಧಾನಿ ನರೇಂದ್ರ ಮೋದಿಯವರು ಸಂಚರಿಸುವ ರಸ್ತೆಗಳ ಗುಂಡಿಗಳನ್ನು ಮಾತ್ರ ಬಿಬಿಎಂಪಿ ಮುಚ್ಚುತ್ತಿರುವ ಹಿನ್ನೆಲೆಯಲ್ಲಿ, ಆಮ್‌ ಆದ್ಮಿ ಪಾರ್ಟಿಯು&nbsp; ಬುಧವಾರದಿಂದ “ನಮ್ಮಲ್ಲಿಗೂ ಬನ್ನಿ ಮೋದಿ” ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿಯವರು, ʼಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ಯಮಸ್ವರೂಪಿ ಗುಂಡಿಗಳಿವೆ. ಜನಸಾಮಾನ್ಯರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯು ಪ್ರಧಾನಿ ಮೋದಿ ಬರುತ್ತಾರೆಂದರೆ ಮಾತ್ರ ಇವುಗಳನ್ನು ಮುಚ್ಚುತ್ತದೆ. ಆದ್ದರಿಂದ ಮೋದಿಯವರು ಎಲ್ಲ ರಸ್ತೆಗಳಲ್ಲೂ ಸಂಚರಿಸಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು ವಿನೂತನ ಚಳವಳಿ ಆರಂಭಿಸಿದೆʼಎಂದು ತಿಳಿಸಿದರು.</p>
]]></content:encoded>
					
		
		
			</item>
		<item>
		<title>ಅಡಿಕೆ ಆಮದು ವಿವಾದ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಎಎಪಿ ಆಗ್ರಹ</title>
		<link>https://peepalmedia.com/nut-import-dispute-aap-demands-governors-intervention/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 28 Oct 2022 13:18:19 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[Aam Aadmi Party]]></category>
		<category><![CDATA[Advocate K. Diwakar]]></category>
		<category><![CDATA[bengalure]]></category>
		<category><![CDATA[Governor]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[narendramodi]]></category>
		<category><![CDATA[news]]></category>
		<category><![CDATA[Nut import dispute]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[pruthvi reddy]]></category>
		<guid isPermaLink="false">https://peepalmedia.com/?p=13349</guid>

					<description><![CDATA[ಬೆಂಗಳೂರು: ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳುವ ವಿಚಾರದಲ್ಲಿ ಮಧ್ಯಪ್ರವೇಶಿಸಿ ಅಡಿಕೆ ಬೆಳೆಗಾರರಿಗೆ ನೆರವಾಗಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿ ರೆಡ್ಡಿ ಅವರು, ಭಾರತಕ್ಕೆ 15,000 ಕ್ವಿಂಟಾಲ್‌ ಅಡಿಕೆಯನ್ನು ಆಮದು ಮಾಡಿಕೊಳ್ಳುವ ನಿರ್ಧಾರವು ಕರ್ನಾಟಕದ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಹಾಸನ ಜಿಲ್ಲೆಗಳ ಅಡಿಕೆ ಬೆಳಗಾರರನ್ನು ಚಿಂತೆಗೀಡುಮಾಡಿದೆ. ಕಾಳಮೆಣಸು ಬೆಳಗಾರರಿಗೆ ಆದ ಅನ್ಯಾಯವು ಅಡಿಕೆ [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು:</strong> ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳುವ ವಿಚಾರದಲ್ಲಿ ಮಧ್ಯಪ್ರವೇಶಿಸಿ ಅಡಿಕೆ ಬೆಳೆಗಾರರಿಗೆ ನೆರವಾಗಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. </p>



<p style="font-size:20px">ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿ ರೆಡ್ಡಿ ಅವರು, ಭಾರತಕ್ಕೆ 15,000 ಕ್ವಿಂಟಾಲ್‌ ಅಡಿಕೆಯನ್ನು ಆಮದು ಮಾಡಿಕೊಳ್ಳುವ ನಿರ್ಧಾರವು ಕರ್ನಾಟಕದ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಹಾಸನ ಜಿಲ್ಲೆಗಳ ಅಡಿಕೆ ಬೆಳಗಾರರನ್ನು ಚಿಂತೆಗೀಡುಮಾಡಿದೆ. ಕಾಳಮೆಣಸು ಬೆಳಗಾರರಿಗೆ ಆದ ಅನ್ಯಾಯವು ಅಡಿಕೆ ಬೆಳಗಾರರಿಗೂ ಆಗಲಿದೆ ಎಂದು ತಿಳಿದ ನಂತರ ನಮ್ಮ ಪಕ್ಷವು ಇದನ್ನು ಗಂಭೀರವಾಗಿ ಪರಿಗಣಿಸಿದೆ. ಆದರೆ ಕೇಂದ್ರ ಸರ್ಕಾರದ ಗಮನವನ್ನು, ಈ ಸಮಸ್ಯೆಯತ್ತ ಸೆಳೆಯುವ ನಮ್ಮ ಪ್ರಯತ್ನವು ಯಶಸ್ವಿಯಾಗಲಿಲ್ಲ. ಆದ್ದರಿಂದ ಸಮಸ್ಯೆಯ ಗಂಭೀರತೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ನೀವು ಮಧ್ಯಪ್ರವೇಶಿಸಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.</p>



<p style="font-size:20px">ಮೇಕ್‌ ಇನ್‌ ಇಂಡಿಯಾ ಎಂದು ಹೇಳುವ ಪ್ರಧಾನಿ ನರೇಂದ್ರ ಮೋದಿಯವರು ಅದಕ್ಕೆ ವಿರುದ್ಧವಾಗಿ ವಿದೇಶದಲ್ಲಿ ಬೆಳೆದ ಅಡಿಕೆ, ಕಾಳುಮೆಣಸನ್ನು ಭಾರತಕ್ಕೆ ತರಿಸಿ, ʻಎಲ್ಲಾದರೂ ಬೆಳೆಯಿರಿ, ಭಾರತಕ್ಕೆ ತನ್ನಿʼ ಎಂಬ ನೀತಿಯನ್ನು ಅನುಸರಿಸುತ್ತಿರುವುದೇಕೆ? ರಾಜಕೀಯ ಪ್ರಭಾವಿಗಳು ಇದರಲ್ಲಿ ಭಾಗಿಯಾಗಿ ಸಫೆಮಾ, ಫೆರಾ ಮುಂತಾದ ನಿಯಮಗಳು ಉಲ್ಲಂಘನೆಯಾಗಿರುವುದು ಕಂಡುಬರುತ್ತಿದ್ದು, ಜಾರಿ ನಿರ್ದೇಶನಾಲಯದಿಂದ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಪೃಥ್ವಿ ರೆಡ್ಡಿ ಆಗ್ರಹಿಸಿದರು.</p>



<p style="font-size:20px">ಎಎಪಿ ಮುಖಂಡರು ಹಾಗೂ ಹಿರಿಯ ವಕೀಲರಾದ ಬ್ರಿಜೇಶ್‌ ಕಾಳಪ್ಪ ಮಾತನಾಡಿ, “ನಮ್ಮಲ್ಲಿ ಬೆಳೆಯುವ ಅಡಿಕೆಗೆ ಹೋಲಿಕೆ ಮಾಡಿದರೆ ಭೂತಾನ್‌ನಿಂದ ಆಮದು ಮಾಡಿಕೊಳ್ಳುವ ಅಡಿಕೆಯು ಕಳಪೆ ಗುಣಮಟ್ಟದ್ದಾಗಿರಲಿದೆ. ಅದೇ ರೀತಿ, ವಿಯೆಟ್ನಾಂನಿಂದ ಶ್ರೀಲಂಕಾ ಮೂಲಕ ಆಮದು ಮಾಡಿಕೊಳ್ಳುವ ಕಾಳುಮೆಣಸು ನಮ್ಮಲ್ಲಿ ಬೆಳೆಯುವ ಕಾಳುಮೆಣಸಿಗಿಂತ ಕಳಪೆ ಗುಣಮಟ್ಟದ್ದಾಗಿದೆ. ಇಲ್ಲಿನ ಉತ್ತಮ ಗುಣಮಟ್ಟದ ಬೆಳೆಗಳೊಂದಿಗೆ ಆಮದು ಮಾಡಿಕೊಂಡ ಅವುಗಳು ಮಿಶ್ರವಾಗುವುದರಿಂದ ಭಾರತದ ಅಡಿಕೆ ಹಾಗೂ ಕಾಳುಮೆಣಸು ಕಳಪೆ ಗುಣಮಟ್ಟದ್ದೆಂಬ ತಪ್ಪು ಕಲ್ಪನೆ ಗ್ರಾಹಕರಲ್ಲಿ ಮೂಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>



<p style="font-size:20px">ಕರ್ನಾಟಕದಲ್ಲಿ ವಾರ್ಷಿಕ 36,000 ಮೆಟ್ರಿಕ್‌ ಟನ್‌ ಕಾಳುಮೆಣಸು ಬೆಳೆಯಲಾಗುತ್ತಿದೆ. ಆಮದಿಗೂ ಮೊದಲು 850 ರೂಪಾಯಿಯಿದ್ದ ಬೆಲೆಯು 500 ರೂಪಾಯಿಗೆ ಕುಸಿದಿರುವುದರಿಂದ ಬೆಳೆಗಾರರಿಗೆ ಕೆಜಿಗೆ 350 ರೂಪಾಯಿ ನಷ್ಟವಾಗುತ್ತಿದೆ. ಅಂದರೆ ರೈತರಿಗೆ ಒಟ್ಟು 1.26 ಲಕ್ಷ ಕೋಟಿ ರೂಪಾಯಿ ನಷ್ಟವಾಗುತ್ತಿದೆ. ಕಾಳುಮೆಣಸಿನ ಹಿಂದಿನ ಬೆಲೆಗೂ ಆಮದಿಗೆ ಅವಕಾಶ ನೀಡಿದ ನಂತರದ ಬೆಲೆಗೂ ಹೋಲಿಕೆ ಮಾಡಿದರೆ, ಗುತ್ತಿಗೆದಾರರು ಆರೋಪಿಸಿರುವಂತೆ 40% ಕಡಿಮೆಯಾಗಿರುವುದು ಗಮನಕ್ಕೆ ಬರುತ್ತದೆ ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.</p>



<p style="font-size:20px">ಎಎಪಿ ಮುಖಂಡರು ಹಾಗೂ ಹಿರಿಯ ವಕೀಲರಾದ ಕೆ.ದಿವಾಕರ್‌ ಮಾತನಾಡಿ, &nbsp;ದೇಶಕ್ಕೆ ಅಗತ್ಯವಿರುವಷ್ಟು ಅಡಿಕೆ ಹಾಗೂ ಕಾಳುಮೆಣಸು ನಮ್ಮಲ್ಲೇ ಉತ್ಪಾದನೆಯಾಗುತ್ತಿದ್ದರೂ ವಿದೇಶಗಳಿಂದ ಆಮದಿಗೆ ಮುಂದಾಗಿರುವುದು ಅವುಗಳ ಬೆಳೆಗಾರರನ್ನು ಸಹಜವಾಗಿಯೇ ಚಿಂತೆಗೀಡುಮಾಡಿದೆ. ಒಂದುವೇಳೆ ಅಡಿಕೆ ಹಾಗೂ ಕಾಳುಮೆಣಸನ್ನು ಸರ್ಕಾರ ಆಮದು ಮಾಡಿಕೊಳ್ಳುವುದಾದರೆ, ಭಾರೀ ಮೊತ್ತದ ಆಮದು ಸುಂಕವನ್ನು ಇವುಗಳಿಗೆ ವಿಧಿಸಬೇಕು. ಭಾರತೀಯ ರೈತರನ್ನು ರಕ್ಷಿಸಲು ಪರಿಣಾಮಕಾರಿಯಾದ ಆಮದು ಸುಂಕ ನೀತಿ ಇಲ್ಲದಿರುವ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳಲು ಆಮದುದಾರರಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.</p>
]]></content:encoded>
					
		
		
			</item>
		<item>
		<title>ಆಮ್‌ ಆದ್ಮಿ ಪಕ್ಷದ ಪ್ರಣಾಳಿಕೆ ಬಿಡುಗಡೆ : ಅಭಿವೃದ್ಧಿ ಮಾರ್ಗದಲ್ಲಿ ಪೃಥ್ವಿ ರೆಡ್ಡಿ  </title>
		<link>https://peepalmedia.com/aam-admi-pakshada-pranalike-bidugade-abhivriddi-margadalliu-pruthvi-reddy/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 22 Oct 2022 10:58:02 +0000</pubDate>
				<category><![CDATA[ವಿಜಯಪುರ]]></category>
		<category><![CDATA[AAP]]></category>
		<category><![CDATA[bengalure]]></category>
		<category><![CDATA[election]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[pranalike]]></category>
		<category><![CDATA[pruthvi reddy]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=12570</guid>

					<description><![CDATA[ವಿಜಯಪುರ : ಇಂದು ವಿಜಯಪುರ ಆಮ್‌ ಆದ್ಮಿ ಪಕ್ಷದವರು ಚುನಾವಣೆಯ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, 25 ವರ್ಷಗಳಿಂದ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕಕ್ಷಗಳಿಗೆ ಅವಕಾಶ ಕೊಟ್ಟಿದ್ದೀರ ಈಗ ಆಮ್‌ ಆದ್ಮಿ ಪಕ್ಷಕ್ಕ ಒಂದು ಅವಕಾಶ ಕೊಡಿ ಎಂದು ಎಎಪಿ ಅಧ್ಯಕ್ಷ ಪೃಥ್ವಿ ರೆಡ್ಡಿ &#160;ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಪ್ರಧಾನಿ ಮಂತ್ರಿ ಮೋದಿ ಮತ್ತು ಬಿಜೆಪಿ&#160; ನಾಯಕರು ಇಡೀ ದೇಶದಲ್ಲಿ ಓಡಾಡಿ ಕಾಂಗ್ರೆಸ್‌ ಮುಕ್ತ ಭಾರತ&#160; ಮಾಡುತ್ತೇವೆ ಅಂತಿದ್ದಾರೆ. ನೀವು ನಿಜವಾದ ರಾಜಕೀಯ ನೋಡಬೇಕು ಅಂದರೆ ವಿಜಯಪುರಕ್ಕೆ [&#8230;]]]></description>
										<content:encoded><![CDATA[
<p><strong>ವಿಜಯಪುರ</strong> : ಇಂದು ವಿಜಯಪುರ ಆಮ್‌ ಆದ್ಮಿ ಪಕ್ಷದವರು ಚುನಾವಣೆಯ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, 25 ವರ್ಷಗಳಿಂದ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕಕ್ಷಗಳಿಗೆ ಅವಕಾಶ ಕೊಟ್ಟಿದ್ದೀರ ಈಗ ಆಮ್‌ ಆದ್ಮಿ ಪಕ್ಷಕ್ಕ ಒಂದು ಅವಕಾಶ ಕೊಡಿ ಎಂದು ಎಎಪಿ ಅಧ್ಯಕ್ಷ ಪೃಥ್ವಿ ರೆಡ್ಡಿ &nbsp;ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.</p>



<p>ಪ್ರಧಾನಿ ಮಂತ್ರಿ ಮೋದಿ ಮತ್ತು ಬಿಜೆಪಿ&nbsp; ನಾಯಕರು ಇಡೀ ದೇಶದಲ್ಲಿ ಓಡಾಡಿ ಕಾಂಗ್ರೆಸ್‌ ಮುಕ್ತ ಭಾರತ&nbsp; ಮಾಡುತ್ತೇವೆ ಅಂತಿದ್ದಾರೆ. ನೀವು ನಿಜವಾದ ರಾಜಕೀಯ ನೋಡಬೇಕು ಅಂದರೆ ವಿಜಯಪುರಕ್ಕೆ ಬರಬೇಕು. ಚುನಾವಣೆ ಅನ್ನೊದು ಒಂದು ನೆಪ ಅಷ್ಟೇ. ಇಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಶಾಸಕರು ಬಸನಗೌಡ ಪಾಟೀಲ್‌ ಯತ್ನಾಳ್‌ ಆಗಲಿ, ಎಂ.ಬಿ.ಪಾಟೀಲ್‌ ಆಗಿರಲಿ ಅವರ ಹೊಂದಾಣಿಕೆ ನೋಡಿದರೆ ಎಲ್ಲರಿಗೂ ಆಶ್ಚರ್ಯ ಆಗುತ್ತೆ. 35 ವಾರ್ಡ್‌ ಗಳನ್ನು ಹಂಚಿಕೊಂಡು ಎಲ್ಲಿ ಕಾಂಗ್ರೆಸ್‌ ಕ್ಯಾಂಡಿಡೇಟ್ಸ್‌ ಪ್ರಬಲವಾಗಿದ್ದಾರೆ ಅಲ್ಲಿ ಕಾಂಗ್ರೆಸ್‌ ಗೆದ್ದು ಬರಲಿ ಅಂತ ಬಿಜೆಪಿ ವೀಕ್‌ ಕ್ಯಾಂಡಿಡೇಟ್‌ ಅನ್ನು ಹಾಕಿದ್ದಾರೆ. ಬಿಜೆಪಿ ಪ್ರಬಲವಾಗಿ ಇರುವ ಕಡೆ ಕಾಂಗ್ರೆಸ್‌ ವೀಕ್‌ ಕ್ಯಾಂಡಿಡೇಟ್‌ ಅನ್ನು ಹಾಕಿದ್ದಾರೆ. ಇದರಿಂದ ಒಂದೇ ವಿಷಯ ತಿಳಿಯುತ್ತೆ. ನೀವು ಬಿಜೆಪಿ, ಕಾಂಗ್ರೆಸ್‌ ಯಾವುದಕ್ಕಾದರೂ ವೋಟ್‌ ಮಾಡಿ ಕೊನೆಯಲ್ಲಿ ನಿಮಗೆ ಸಿಗುವುದು ಕೆಟ್ಟ ಆಸ್ಪತ್ರೆ, ಕೆಟ್ಟ ಚರಂಡಿ, ಕೆಟ್ಟ ಸರ್ಕಾರಿ ಶಾಲೆ ಅಷ್ಟೇ ಎಂದು ಹೇಳಿದ್ದಾರೆ.</p>



<p>ನಾವು ಇವತ್ತು ಒಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಆಮ್‌ ಆದ್ಮಿ ಪಕ್ಷಕ್ಕೆ ನೀವು ವೋಟ್‌ ಹಾಕಿದರೆ ನಿಮ್ಮ ಜೀವನ ಎಷ್ಟರ ಮಟ್ಟಿಗೆ ಬದಲಾಗುತ್ತದೆ ಎಂದು ಪ್ರಣಾಳಿಕೆಯ ಬಗ್ಗೆ ಮಾತನಾಡಿ,</p>



<p>1.ಪ್ರತೀ ಮೂರು ವಾರ್ಡ್‌ಗೆ ದೆಹಲಿ ಮಾದರಿಯಲ್ಲಿ ಒಂದು ಮೊಹಲ್ಲಾ ಕ್ಮಿನಿಕ್‌ ಮಾಡುತ್ತೇವೆ. ಅಲ್ಲಿ ಪ್ರತಿಯೊಬ್ಬರೂ ಉಚಿತವಾಗಿ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಬಹುದು.</p>



<p>2.ಪ್ರತೀ 5 ವಾರ್ಡ್‌ ಗೆ ಉತ್ತಮ ಗುಣಮಟ್ಟದ ಸರ್ಕಾರಿ ಶಾಲೆ</p>



<p>3.ಪ್ರತೀ 5 ವಾರ್ಡ್‌ಗೆ ಒಂದು ಸಮುದಾಯ ಭವನ</p>



<p>4.ಪಾರ್ಕ್‌ಗಳು, ರಸ್ತೆಗಳು, ಕಸ ಮುಕ್ತ ಹಸಿರು ವಿಜಯಪುರ ಮಾಡಬೇಕು ಎಂದುಕೊಂಡಿದ್ದೇವೆ ಎಂದು ಪೃಥ್ವಿ ರೆಡ್ಡಿ ತಿಳಿಸಿದರು.</p>



<p>ಹಾಗಯೇ 25 ವರ್ಷಗಳಿಂದ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕಕ್ಷಗಳಿಗೆ ಅವಕಾಶ ಕೊಟ್ಟಿದ್ದೀರ ಈಗ ಆಮ್‌ ಆದ್ಮಿ ಪಕ್ಷಕ್ಕ ಒಂದು ಅವಕಾಶ ಕೊಡಿ ಎಂದು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.</p>



<figure class="wp-block-embed is-type-video is-provider-youtube wp-block-embed-youtube wp-embed-aspect-16-9 wp-has-aspect-ratio"><div class="wp-block-embed__wrapper">
<iframe title="LIVE GG - Gandhada Gudi | &#039;ಪುನೀತ ಪರ್ವ&#039; ಮರುಪ್ರಸಾರ - Pre Release Event | Dr. Puneeth Rajkumar |" width="696" height="392" src="https://www.youtube.com/embed/IOoHwC_-6qM?feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture" allowfullscreen></iframe>
</div></figure>
]]></content:encoded>
					
		
		
			</item>
	</channel>
</rss>
